Site icon Vistara News

ಅಪ್ಪನ ದಿನವೇ ದುರಂತ; ಮಕ್ಕಳಿಬ್ಬರನ್ನು ಕೂಸುಮರಿಯಂತೆ ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿದ ತಂದೆ

childerns dead

ಕಲಬುರಗಿ: ಆರತಿಗೊಂದು ಕೀರ್ತಿಗೊಂದು ಇದ್ದ ಮಕ್ಕಳಿಬ್ಬರನ್ನು ಬೆನ್ನಿಗೆ ಕಟ್ಟಿಕೊಂಡ ತಂದೆಯೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ದಾರುಣ ಘಟನೆ ಚಿಂಚೋಳಿ ತಾಲೂಕಿನ ಕುಂಚಾವರಂ ಬಳಿಯ ಪೋಚಾವರಂನಲ್ಲಿ ನಡೆದಿದೆ.

ಮೃತ ದುರ್ದೈವಿಗಳು

ಅಪ್ಪಂದಿರ ದಿನವೇ ಈ ಮನಕಲಕುವ ಘಟನೆ ನಡೆದಿದ್ದು, ಹಣಮಂತ (36) ತನ್ನ ಓಕಾಂ (9) , ಅಕ್ಷತಾ (6) ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆನ್ನಿಗೆ ಏರಿಸಿಕೊಂಡು ಕೂಸುಮರಿ ಮಾಡುವ ಕೈಗಳೇ ಬೆನ್ನಿಗೆ ಮಕ್ಕಳನ್ನು ಹಗ್ಗದಿಂದ ಕಟ್ಟಿಕೊಂಡು ಬಾವಿಗೆ ಹಾರಿದ್ದಾರೆ.

ಪತ್ನಿ ಮಕ್ಕಳೊಂದಿಗೆ ಹೈದರಾಬಾದ್‌ನಲ್ಲಿ ವಾಸವಿದ್ದ ಹಣಮಂತ, ನಿನ್ನೆ ಶನಿವಾರ ಮಕ್ಕಳೊಂದಿಗೆ ಸ್ವಗ್ರಾಮಕ್ಕೆ ಬಂದಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂದು ತಿಳಿದುಬಂದಿಲ್ಲ. ಶನಿವಾರವೇ ಆತ್ಮಹತ್ಯೆ ಮಾಡಿಕೊಂಡಿದ್ದು, ತಂದೆ ಮತ್ತು ಮಕ್ಕಳ ಭಾನುವಾರ ಮೃತದೇಹವು ಪತ್ತೆಯಾಗಿದೆ.

ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ವಿಷಯ ತಿಳಿಯುತ್ತಿದ್ದಂತೆ ಕುಂಚಾವರಂ ಪೊಲೀಸರು ಭೇಟಿ ನೀಡಿದ್ದು ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version