KPSC EXAM | 2017ರಲ್ಲೂ ನಡೆದಿತ್ತು ತಂತ್ರಜ್ಞಾನ ಬಳಸಿ ಅಕ್ರಮ - Vistara News

ಕರ್ನಾಟಕ

KPSC EXAM | 2017ರಲ್ಲೂ ನಡೆದಿತ್ತು ತಂತ್ರಜ್ಞಾನ ಬಳಸಿ ಅಕ್ರಮ

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಬಗೆದಷ್ಟು ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಇದೀಗ ಪರೀಕ್ಷೆ ಬರೆದಿದ್ದ ಇಬ್ಬರು ಆರೋಪಿಗಳ ಮೇಲೆ ಕೋಟೆ ಠಾಣೆಯಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿದೆ.

VISTARANEWS.COM


on

Kpsc exam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಕೆಪಿಎಸ್‌ಸಿ 2017ರಲ್ಲಿ ನಡೆಸಿದ್ದ ಜಲಸಂಪನ್ಮೂಲ ಇಲಾಖೆಯ ಸಹಾಯಕ/ಕಿರಿಯ ಅಭಿಯಂತರ ನೇಮಕಾತಿಯಲ್ಲೂ ಅಕ್ರಮ ನಡೆದಿದ್ದು,  ಶಿವಮೊಗ್ಗದಲ್ಲಿ ಪರೀಕ್ಷಾರ್ಥಿಗಳಿಬ್ಬರು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಪರೀಕ್ಷೆ ಬರೆದಿರುವುದು ಬೆಳಕಿಗೆ ಬಂದಿದೆ.

ಬಿ.ಎಂ.ಕೀರ್ತಿ ಮತ್ತು ಪ್ರಕಾಶ್ ಅಲಿಯಾಸ್ ಪ್ರಕಾಶ್ ನಾಯ್ಕ ಎಂಬುವವರು ಎಲೆಕ್ಟ್ರಾನಿಕ್ ಡಿವೈಸ್‌ಗಳನ್ನು ಬಳಸಿ ಪರೀಕ್ಷೆ ಬರೆದ ಆರೋಪಿಗಳಾಗಿದ್ದಾರೆ.

2017ರ ಸೆಪ್ಟಂಬರ್‌ನಲ್ಲಿ ಕೆಪಿಎಸ್‌ಸಿಯಿಂದ ನಗರದ ಬಿ.ಎಚ್.ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ(ಪ್ರೌಢಶಾಲಾ ವಿಭಾಗ) ಪರೀಕ್ಷಾ ಕೇಂದ್ರ 10ರಲ್ಲಿ ಪರೀಕ್ಷೆ ಬರೆದಿದ್ದರು. ಹೈಕೋರ್ಟ್ ಆದೇಶದ ಮೇರೆಗೆ ಕೆಪಿಎಸ್‌ಸಿ ಕಾರ್ಯದರ್ಶಿ ದೂರು ನೀಡಿದ್ದರು. ದೂರಿನ ಆಧಾರದಲ್ಲಿ ಕೋಟೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ದಾವಣಗೆರೆಯಲ್ಲಿ ಸಿಕ್ತು ಸುಳಿವು

2017ರ ಅಕ್ಟೋಬರ್‌ 16ರಂದು ದಾವಣಗೆರೆ ಭಾಷಾನಗರದ ಎಸ್‌ಕೆಎಎಚ್‌ಪಿಯು ಕಾಲೇಜಿನಲ್ಲಿ ಮೊರಾರ್ಜಿ ದೇಸಾಯಿ ಶಾಲೆಗಳ ಸಹ ಶಿಕ್ಷಕರ ವಿವಿಧ ಹುದ್ದೆಗಳಿಗೆ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಅಕ್ರಮ ನಡೆಯುತ್ತಿದ್ದ ಬಗ್ಗೆ ಉಪ ವಿಭಾಗಾಧಿಕಾರಿಗಳಿಗೆ ಮಾಹಿತಿ ಬಂದಿದ್ದ ಹಿನ್ನೆಲೆ ಕಾಲೇಜಿಗೆ ಭೇಟಿ ನೀಡಿದಾಗ ಅಭ್ಯರ್ಥಿ ತಿಪ್ಪೇಶ್ ನಾಯ್ಕ ಧರಿಸಿದ್ದ ಶರ್ಟ್‌ನ ಒಳಭಾಗದಲ್ಲಿ ಮೊಬೈಲ್ ಮದರ್ ಬೋರ್ಡ್, ಸ್ಪೀಕರ್ ಮತ್ತಿತರ ಎಲೆಕ್ಟ್ರಾನಿಕ್ ವಸ್ತುಗಳ ಬಳಕೆ ಮಾಡುತ್ತಿರುವುದು ಪತ್ತೆಯಾಗಿತ್ತು. ಅದಕ್ಕೆ ಪ್ರದೀಪ್ ಮತ್ತು ಕೃಷ್ಣನಾಯ್ಕ ಎಂಬುವರು ಸಹಕರಿಸಿದ್ದರು. ಈ ಬಗ್ಗೆ ದಾವಣಗೆರೆ ಆಜಾದ್‌ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ವೇಳೆ 2017ರ ಸೆಪ್ಟಂಬರ್‌ನಲ್ಲಿ ಜಲಸಂಪನ್ಮೂಲ ಇಲಾಖೆಯ ಹುದ್ದೆಗಳಿಗೆ ನಡೆದಿದ್ದ ಅಕ್ರಮದ ಬಗ್ಗೆಯೂ ಆರೋಪಿಗಳು ಬಾಯ್ಬಿಟ್ಟಿದ್ದರು.

ಇದನ್ನ ಓದಿ | ಪಿಎಸ್‌ಐ ನೇಮಕಾತಿ ಅಕ್ರಮ; ಮತ್ತಿಬ್ಬರು ಆರೋಪಿಗಳ ಬಂಧನ

ನ್ಯಾಯಾಲಯದ ಸೂಚನೆ

2017ರ ಸೆಪ್ಟಂಬರ್‌ನಲ್ಲಿ ಕೆಪಿಎಸ್‌ಸಿ ಜಲಸಂಪನ್ಮೂಲ ಇಲಾಖೆಯ ಸಹಾಯಕ/ಕಿರಿಯ ಅಭಿಯಂತರ ನೇಮಕಾತಿಗೆ ಪರೀಕ್ಷೆ ನಡೆಸಿತ್ತು. ದಾವಣಗೆರೆಯಲ್ಲಿ ಹನುಮಂತನಾಯ್ಕ, ಪಾಂಡುರಂಗನಾಯ್ಕ, ಬಸವರಾಜ ನಾಯಕ್, ಲೋಕೇಶ್ ನಾಯ್ಕ ಮತ್ತು ಶಿವಮೊಗ್ಗದಲ್ಲಿ ಬಿ.ಎಂ.ಕೀರ್ತಿ ಮತ್ತು ಪ್ರಕಾಶ್ ಡಿವೈಎಸ್ ಇರುವ ಬನಿಯಾನ್ ಹಾಕಿಕೊಂಡು ಪರೀಕ್ಷೆ ಬರೆದಿದ್ದರು.

ನೇಮಕಾತಿಯ ಪ್ರಾವಿಜನಲ್ ಆಯ್ಕೆ ಪಟ್ಟಿಯಲ್ಲಿ ಆರೋಪಿಗಳ ಹೆಸರಿತ್ತು. 2018ರ ಡಿಸೆಂಬರ್‌ 17ರಂದು ಆಯ್ಕೆಪಟ್ಟಿ ತಡೆ ಹಿಡಿಯುವ ಸಲುವಾಗಿ ವರದಿಯನ್ನು ಕೆಪಿಎಸ್‌ಸಿಗೆ ತನಿಖಾಧಿಕಾರಿಗಳು ಸಲ್ಲಿಸಿದ್ದರು. ಈ ನಡುವೆ ಆರೋಪಿಗಳು ಪ್ರಕರಣ ಖುಲಾಸೆಗೊಳಿಸುವಂತೆ ಹೈಕೋರ್ಟ್‌ಗೆ ರಿಟ್ ದಾವೆ ಸಲ್ಲಿಸಿದ್ದರು. ಆದರೆ ನ್ಯಾಯಾಲಯವು 2021ರ ನವೆಂಬರ್‌ 23ರಂದು ದಾವೆಯನ್ನು ವಜಾಗೊಳಿಸಿ ಆರೋಪಿಗಳ ಮೇಲೆ ಸಂಬಂಧಪಟ್ಟ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿತ್ತು.

ಅದರಂತೆ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಆರೋಪಿಗಳ ಮೇಲೆ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಈ ನಡುವೆ ಕೆಪಿಎಸ್‌ಸಿ ಕಾರ್ಯದರ್ಶಿ ಕೂಡ ದಾವಣಗೆರೆ ಮತ್ತು ಶಿವಮೊಗ್ಗ ಎಸ್ಪಿಗಳಿಗೆ ಮಂಗಳವಾರ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಹಾಗಾಗಿ ಶಿವಮೊಗ್ಗದಲ್ಲಿ ಪರೀಕ್ಷೆ ಬರೆದಿದ್ದ ಕೀರ್ತಿ ಮತ್ತು ಪ್ರಕಾಶ್ ಮೇಲೆ ಕೋಟೆ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಇದನ್ನ ಓದಿ | Job Alert| 60 ʼಸಹಾಯಕ ನಗರ ಯೋಜಕʼ ಹುದ್ದೆಗಳಿಗೆ ಕೆಪಿಎಸ್‌ಸಿ ಅರ್ಜಿ ಆಹ್ವಾನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಹಾಸನ

Prajwal Revanna Case‌: ಗನ್‌ ಪಾಯಿಂಟ್‌ನಲ್ಲಿ ಜೆಡಿಎಸ್‌ ನಾಯಕಿ ಮೇಲೆ ಪ್ರಜ್ವಲ್‌ರಿಂದ ರೇಪ್‌? ಎಫ್‌ಐಆರ್‌ನಲ್ಲಿದೆ ಇಂಚಿಂಚು ಡಿಟೇಲ್ಸ್!

Prajwal Revanna Case‌: ಜೆಡಿಎಸ್‌ ನಾಯಕಿ ತಮ್ಮ ಮೇಲೆ ಯಾವಾಗ ಅತ್ಯಾಚಾರ ನಡೆದಿದೆ ಎಂಬ ಸಂಗತಿಯನ್ನೂ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. 2021ರಲ್ಲಿ ಬಿಸಿಎಂ ಹಾಸ್ಟೆಲ್ ವಿಚಾರದ ಬಗ್ಗೆ ಸಂಸದ ಪ್ರಜ್ವಲ್‌ ರೇವಣ್ಣ ಅವರ ಬಳಿ ಮಾತನಾಡಲು ಹೋದಾಗ ತಮ್ಮ ಮೇಲೆರಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ವೇಳೆ ತಾವು ನಿರಾಕರಣೆ ಮಾಡಿದಾಗ ಗನ್‌ ಹಿಡಿದು ಹೆದರಿಸಿ ಬಲಾತ್ಕಾರ ಮಾಡಿದ್ದಾರೆ ಎಂದು ಮಹಿಳೆ ಆರೋಪ ಮಾಡಿದ್ದಾರೆ. ಹಾಸನದಲ್ಲಿರುವ ಸಂಸದರ ಬಂಗಲೆಯ ಮಹಡಿ ರೂಮ್‌ನಲ್ಲೇ ರೇಪ್ ಮಾಡಲಾಗಿದೆ ಎಂದು ಮಹಿಳೆ ಆರೋಪ ಮಾಡಿದ್ದಾರೆ.

VISTARANEWS.COM


on

Prajwal Revanna Case I was raped at gunpoint JDS women leader files complaint against Prajwal
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ದಾಖಲಾಗಿರುವ ರೇಪ್ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಈ ಕೇಸ್‌ನಲ್ಲಿ ಪ್ರಜ್ವಲ್‌ ರೇವಣ್ಣ ನೇರವಾಗಿ ಸಿಕ್ಕಿಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಕೊಟ್ಟ ದೂರಿನಲ್ಲಿ ಭಯಾನಕ ಸತ್ಯಗಳು ಹೊರಬಂದಿದ್ದು, ಗನ್‌ ಪಾಯಿಂಟ್‌ನಲ್ಲಿ ಜೆಡಿಎಸ್‌ ನಾಯಕಿ ಮೇಲೆಯೇ ಪ್ರಜ್ವಲ್ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಈಗ ಕೇಳಿಬಂದಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ಈಗ ಜೆಡಿಎಸ್‌ ನಾಯಕಿ, ಸಂತ್ರಸ್ತೆ ದೂರಿನಲ್ಲಿ ತನಗಾದ ಅನ್ಯಾಯವನ್ನು ಹಾಗೂ ಅತ್ಯಾಚಾರದ ಸಂಗತಿಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದು, ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

2021ರಲ್ಲಿ ಬಿಸಿಎಂ ಹಾಸ್ಟೆಲ್ ವಿಚಾರದ ಮಾತಿಗೆ ಹೋದಾಗ ರೇಪ್‌?

ಜೆಡಿಎಸ್‌ ನಾಯಕಿ ತಮ್ಮ ಮೇಲೆ ಯಾವಾಗ ಅತ್ಯಾಚಾರ ನಡೆದಿದೆ ಎಂಬ ಸಂಗತಿಯನ್ನೂ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. 2021ರಲ್ಲಿ ಬಿಸಿಎಂ ಹಾಸ್ಟೆಲ್ ವಿಚಾರದ ಬಗ್ಗೆ ಸಂಸದ ಪ್ರಜ್ವಲ್‌ ರೇವಣ್ಣ ಅವರ ಬಳಿ ಮಾತನಾಡಲು ಹೋದಾಗ ತಮ್ಮ ಮೇಲೆರಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ವೇಳೆ ತಾವು ನಿರಾಕರಣೆ ಮಾಡಿದಾಗ ಗನ್‌ ಹಿಡಿದು ಹೆದರಿಸಿ ಬಲಾತ್ಕಾರ ಮಾಡಿದ್ದಾರೆ ಎಂದು ಮಹಿಳೆ ಆರೋಪ ಮಾಡಿದ್ದಾರೆ. ಹಾಸನದಲ್ಲಿರುವ ಸಂಸದರ ಬಂಗಲೆಯ ಮಹಡಿ ರೂಮ್‌ನಲ್ಲೇ ರೇಪ್ ಮಾಡಲಾಗಿದೆ ಎಂದು ಮಹಿಳೆ ಆರೋಪ ಮಾಡಿದ್ದಾರೆ.

ಗಂಡನ ಬಗ್ಗೆ ಬೆದರಿಸಿ ಬಲಾತ್ಕಾರ

ದೈಹಿಕ ಸಂಪರ್ಕ ಬೆಳೆಸಲು ಪ್ರಜ್ವಲ್‌ ಮುಂದಾಗುತ್ತಿದ್ದಂತೆ ನಾನು ನಿರಾಕರಣೆ ಮಾಡಿದೆ. ಆಗ “ನಿನ್ನ ಗಂಡನನ್ನು ನಾನು ಬಿಡಲ್ಲ” ಎಂದು ಹೆದರಿಸಿ ದೌರ್ಜನ್ಯ ನಡೆಸಿದರು ಎಂದು ಎಸ್‌ಐಟಿಗೆ ಸಂತ್ರಸ್ತೆ ನೀಡಿದ್ದ ದೂರು ಆಧಾರದಲ್ಲಿ ಸಿಐಡಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಐಪಿಸಿ ಸೆಕ್ಷನ್‌ 376 (2) (ಎನ್‌) ಹಾಗೂ ಐಟಿ ಆ್ಯಕ್ಟ್‌ನಲ್ಲಿ ಎಫ್ಐಆರ್ ಅನ್ನು ದಾಖಲು ಮಾಡಲಾಗಿದೆ. ಹೇಗೆಲ್ಲ ದೌರ್ಜನ್ಯ, ದಬ್ಬಾಳಿಕೆ, ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Prajwal Revanna Case: ರೇವಣ್ಣ ಮೇಲಿನ ಮತ್ತೊಂದು ಕೇಸ್‌ ಎಸ್‌ಐಟಿಗೆ ವರ್ಗ; ಭವಾನಿಗೂ ನೋಟಿಸ್‌!

ರೇಪ್‌ ಮತ್ತು ಚಿತ್ರೀಕರಣ ಆರೋಪ

ತಮ್ಮ ಮೇಲೆ ಬಲಾತ್ಕಾರ ಮಾಡಿದ್ದಲ್ಲದೆ, ಅದನ್ನು ಚಿತ್ರೀಕರಣ ಮಾಡಿಕೊಂಡಿದ್ದಾರೆ. ಈ ವಿಚಾರದ ಬಗ್ಗೆ ಬಾಯಿ ಬಿಟ್ಟರೆ ಸೋಷಿಯಲ್‌ ಮೀಡಿಯಾದಲ್ಲಿ ನಿನ್ನ ವಿಡಿಯೊವನ್ನು ಬಿಡುತ್ತೇನೆ ಎಂಧು ಬೆದರಿಕೆ ಒಡ್ಡಿದ್ದಾರೆ. ನಾನು ಕರೆದಾಗೆಲ್ಲ ನೀನು ಬರಬೇಕು. ಇಲ್ಲದಿದ್ದರೆ ನನ್ನ ಬಳಿ ಇರುವ ವಿಡಿಯೊವನ್ನು ಹರಿಬಿಡುತ್ತೇನೆ ಎಂದು ಬೆದರಿಸಿ ಕಳುಹಿಸಿದ್ದಾರೆ. ಇಷ್ಟೇ ಅಲ್ಲದೆ, ಪದೇ ಪದೆ ವಿಡಿಯೊ ಕಾಲ್‌ ಮಾಡಿ ಬೆತ್ತಲೆಯಾಗು ತಾನು ನೋಡಬೇಕು ಎಂದು ಕಿರುಕುಳ ಕೊಟ್ಟು ನಗ್ನತೆಯನ್ನು ನೋಡುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ‌ಅಲ್ಲದೆ, ಪದೇ ಪದೆ ತಮಗೆ ಬ್ಲ್ಯಾಕ್‌ಮೇಲ್‌ ಮಾಡಿ ಬಲಾತ್ಕಾರ ಮಾಡುತ್ತಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Continue Reading

ಮಳೆ

Bengaluru Rains : ಬೆಂಗಳೂರಲ್ಲಿ ಶುರುವಾಯ್ತು ಮಳೆಗಾಲ; ಕವಿದ ಕಾರ್ಮೋಡ, ಭಯಂಕರ ವರ್ಷಧಾರೆ

Bengaluru Rains : ಮಳೆಯಿಲ್ಲದೆ ಸೊರಗಿದ್ದ ಬೆಂಗಳೂರಿಗರಿಗೆ ವರುಣ ಅಂತೂ ಪ್ರವೇಶಿಸಿದ್ದಾನೆ. ನಿನ್ನೆ ಸಂಜೆ ಗುರುವಾರದಿಂದ ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಮಳೆಯಾಗಿದ್ದು, ಶುಕ್ರವಾರ ಮಧ್ಯಾಹ್ನವೇ ಕಾರ್ಮೋಡ (Karnataka weather Forecast) ಕವಿದಿತ್ತು. ನೋಡನೋಡುತ್ತಿದ್ದಂತೆ ವರ್ಷಧಾರೆಗೆ ಸಿಟಿ ಜನರು ಖುಷ್‌ ಆದರು..

VISTARANEWS.COM


on

By

Bengaluru Rains
Koo

ಬೆಂಗಳೂರು: ಬಿಸಿಲ ಬೇಗೆಯಿಂದ ತತ್ತರಿಸಿದ್ದ ಬೆಂಗಳೂರು ಜನರಿಗೆ ಶುಕ್ರವಾರದಂದು ಮಳೆಯು (Bengaluru Rains) ಧರೆಗಿಳಿದು ಬಂದಿತ್ತು. ಶುಕ್ರವಾರ ಬೆಳಗ್ಗೆ ರಣ ಬಿಸಿಲು, ಧಗೆಯಿಂದ ಜನರು ಕಂಗಲಾಗಿದ್ದರು. ಮಧ್ಯಾಹ್ನದ ಊಟ ಮುಗಿಸಿ ಹೊರಗೆ ಬಂದವರಿಗೆ ಕಾರ್ಮೋಡ ಕವಿದಿತ್ತು. ನೋಡನೋಡುತ್ತಿದ್ದ ಗುಡುಗು, ಸಿಡಿಲು ಸಹಿತ ಭರ್ಜರಿ ಮಳೆ ಸುರಿದಿದೆ.

ಶಿವಾಜಿನಗರ, ಮಲ್ಲೇಶ್ವರಂ, ವಿಧಾನಸೌಧ, ರಾಜಾಜಿನಗರ, ರೇಸ್ ಕೋರ್ಸ್, ಮೆಜೆಸ್ಟಿಕ್, ಮಹಾರಾಣಿ ಕಾಲೇಜು, ಸಿಐಡಿ ಆಫೀಸ್, ಪ್ಯಾಲೇಸ್ ರಸ್ತೆಯಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಮಧ್ಯಾಹ್ನ ಮೂರು ಗಂಟೆ ಸಮಯವು ರಾತ್ರಿಯಂತೆ ಕತ್ತಲೆ ಆವರಿಸಿತ್ತು. ದಿಢೀರ್ ಮಳೆಗೆ ದ್ವಿಚಕ್ರ ವಾಹನ ಸವಾರರು ಸೇತುವೆ ಕೆಳಗೆ ಹಾಗೂ ಬಸ್‌ ನಿಲ್ದಾಣದಲ್ಲಿ ಆಶ್ರಯ ಪಡೆದರು.

ಆಲಿಕಲ್ಲು ಸಹಿತ ಮಳೆಯಾರ್ಭಟ

ಇನ್ನೂ ರಾಜ್ಯ ಗಡಿ ಡೆಂಕಣಿಕೋಟೆ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ತಮಿಳುನಾಡಿನ ಡೆಂಕಣಿಕೋಟೆ, ಹೊಸೂರು, ಸೂಲಗಿರಿ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಆನೇಕಲ್, ಎಲೆಕ್ಟ್ರಾನಿಕ್ ಸಿಟಿ, ಚಂದಾಪುರ, ಅತ್ತಿಬೆಲೆ, ಹೆಬ್ಬಗೋಡಿ ಸೇರಿದಂತೆ ಜೋರು ಮಳೆಯಾಗುತ್ತಿದೆ.

Bengaluru rains

ಬ್ಯಾರಿಕೇಟ್‌ ಹಾಕಿ ಅಂಡರ್‌ಪಾಸ್‌ ಕ್ಲೋಸ್‌

ಅರ್ಧ ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಯಿಂದಾಗಿ ಬೆಂಗಳೂರಿನ ರಸ್ತೆಗಳು ನದಿಯಂತಾಗಿತ್ತು. ವಿಧಾನಸೌಧ ಪಕ್ಕದಲ್ಲಿರುವ ಎಂ.ಎಸ್ ಬಿಲ್ಡಿಂಗ್ ಸುತ್ತಮುತ್ತಲಿನ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಎಂಎಸ್‌ ಬಿಲ್ಡಿಂಗ್‌ ಸಮೀಪವೇ ಇರುವ ಅಂಡರ್ ಪಾಸ್‌ಗಳಿಗೆ ಬ್ಯಾರಿಕೇಟ್ ಹಾಕಿ ಕ್ಲೋಸ್ ಮಾಡಲಾಗಿದೆ.

ಧರೆಗೆ ಬಿದ್ದ ಮರಗಳು

ಮಳೆಯಿಂದ ಬೆಂಗಳೂರು ನಗರದಲ್ಲಿ ಮೂರು ಕಡೆ ಬೃಹತ್ ಗಾತ್ರದ ಮರ ಧರೆಗೆ ಬಿದ್ದಿದೆ. ಕೆ.ಆರ್.ಪುರಂನ ಕಸ್ತೂರಿ ನಗರ, ಆರ್‌ಟಿ ನಗರದಲ್ಲಿ ಮಳೆಗೆ ಮರ ಬಿದ್ದಿದೆ. ಇನ್ನೂ ನಾರಾಯಣಪುರದಲ್ಲಿ ಮರ ಬಿದ್ದು, ಕಾರು, ಬೈಕ್ ಜಖಂಗೊಂಡಿದೆ. ಸದ್ಯ ರಸ್ತೆಗೆ ಬಿದ್ದಿದ ಮರವನ್ನು ಬಿಬಿಎಂಪಿ ಸಿಬ್ಬಂದಿ ತೆರವು ಮಾಡಿದ್ದಾರೆ. ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣದ ಎಟಿಎಂ (ATM) ಕೊಠಡಿಗೆ ನೀರು ನುಗ್ಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉದ್ಯೋಗ

Job Alert: 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳಿಗೆ ಇಂದೇ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Job Alert: ರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಜೂನ್‌ 1. ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಲೋಕಸೇವಾ ಆಯೋಗ (Karnataka Public Service Commission) ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ (Motor Vehicle Inspector)​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (KPSC Recruitment 2024). ಈ ಹಿಂದೆ ಅರ್ಜಿ ಸಲ್ಲಿಕೆಗೆ ಮೇ 21 ಕೊನೆಯ ದಿನಾಂಕ ಎಂದು ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಹೊರಡಿಸಿದೆ. ಆಸಕ್ತರು ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಜೂನ್‌ 1 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

ವಯೋಮಿತಿ ಮತ್ತು ಅರ್ಜಿ ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1ರ ಅಭ್ಯರ್ಥಿಗಳಿಗೆ 5 ವರ್ಷ, ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 3 ವರ್ಷ ಮತ್ತು ಪಿಡಬ್ಲ್ಯುಡಿ / ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1/ ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಮಾಜಿ ಯೋಧರು ಅರ್ಜಿ ಶುಲ್ಕವಾಗಿ 50 ರೂ., ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 300 ರೂ., ಸಾಮಾನ್ಯ ವಿಭಾಗದ ಅಭ್ಯರ್ಥಿಗಳು 600 ರೂ. ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 33,450 ರೂ. – 62,600 ರೂ. ಮಾಸಿಕ ವೇತನ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌: 080-30574957 / 30574901ಕ್ಕೆ ಕರೆ ಮಾಡಿ.

ಉಳಿಕೆ ವೃಂದದ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಹೈದರಾಬಾದ್‌-ಕರ್ನಾಟಕ ವೃಂದದ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ದಿನಾಂಕ ವಿಸ್ತರಣೆಯ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನಿಮ್ಮ ಮೊಬೈಲ್‌ ನಂಬರ್‌ ಮತ್ತು ಇಮೇಲ್‌ ಐಡಿ ನಮೂದಿಸಿ ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ನಂಬರ್‌ / ರಿಕ್ವೆಸ್ಟ್‌ ನಂಬರ್‌ ತೆಗೆದಿಡಿ.

ಇದನ್ನೂ ಓದಿ: Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

Continue Reading

ಕ್ರೈಂ

Prajwal Revanna Case: ರೇವಣ್ಣ ಮೇಲಿನ ಮತ್ತೊಂದು ಕೇಸ್‌ ಎಸ್‌ಐಟಿಗೆ ವರ್ಗ; ಭವಾನಿಗೂ ನೋಟಿಸ್‌!

Prajwal Revanna Case: ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧ ಕೆ.ಆರ್. ನಗರದಲ್ಲಿ ದಾಖಲಾಗಿದ್ದ ಮತ್ತೊಂದು ಪ್ರಕರಣವು ಈಗ ಎಸ್ಐಟಿಗೆ ವರ್ಗಾವಣೆ ಮಾಡಲು ಸಿದ್ಧತೆ ನಡೆದಿದೆ. ಈ ಸಂಬಂಧ ಪ್ರಕ್ರಿಯೆಗಳು ಸಾಗಿದೆ. ಇದೂ ದಾಖಲಾದರೆ ರೇವಣ್ಣ ವಿರುದ್ಧ ಒಟ್ಟು ಮೂರು ಪ್ರಕರಣಗಳಲ್ಲಿ ಎಸ್‌ಐಟಿ ತನಿಖೆಯನ್ನು ನಡೆಸಲಿದೆ. ಹೀಗಾಗಿ ರೇವಣ್ಣ ಅವರಿಗೆ ಮತ್ತೊಂದು ಟೆನ್ಶನ್‌ ಶುರುವಾದಂತೆ ಆಗಿದೆ. ಇತ್ತ ಭವಾನಿ ರೇವಣ್ಣ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Prajwal Revanna Case Another case against Revanna transferred to SIT Notice to Bhavani
Koo

ಬೆಂಗಳೂರು/ಹಾಸನ: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅವರ ಮೇಲಿನ ಕಿಡ್ನ್ಯಾಪ್‌ ಕೇಸ್‌ ಈಗ ಎಸ್‌ಐಟಿಗೆ ವರ್ಗಾವಣೆ ಆಗಿದೆ. ಇನ್ನು ಅವರ ಪತ್ನಿ ಭವಾನಿ ರೇವಣ್ಣ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್‌ ನೀಡಿದೆ ಎನ್ನಲಾಗಿದೆ.

ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧ ಕೆ.ಆರ್. ನಗರದಲ್ಲಿ ದಾಖಲಾಗಿದ್ದ ಮತ್ತೊಂದು ಪ್ರಕರಣವು ಈಗ ಎಸ್ಐಟಿಗೆ ವರ್ಗಾವಣೆ ಮಾಡಲು ಸಿದ್ಧತೆ ನಡೆದಿದೆ. ಈ ಸಂಬಂಧ ಪ್ರಕ್ರಿಯೆಗಳು ಸಾಗಿದೆ. ಇದೂ ದಾಖಲಾದರೆ ರೇವಣ್ಣ ವಿರುದ್ಧ ಒಟ್ಟು ಮೂರು ಪ್ರಕರಣಗಳಲ್ಲಿ ಎಸ್‌ಐಟಿ ತನಿಖೆಯನ್ನು ನಡೆಸಲಿದೆ. ಹೀಗಾಗಿ ರೇವಣ್ಣ ಅವರಿಗೆ ಮತ್ತೊಂದು ಟೆನ್ಶನ್‌ ಶುರುವಾದಂತೆ ಆಗಿದೆ.

ಭವಾನಿ ರೇವಣ್ಣಗೂ ನೋಟಿಸ್‌?

ಇನ್ನು ಹಾಸನದಲ್ಲಿರುವ ರೇವಣ್ಣ ನಿವಾಸಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ, ಎಸ್‌ಐಟಿಯ ನೋಟಿಸ್‌ ಅನ್ನು ನೀಡಿದ್ದಾರೆ. ಸ್ಥಳೀಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ಅಜಯ್ ಕುಮಾರ್ ಜತೆ ಮಹಿಳಾ ಸಿಬ್ಬಂದಿ, ಪೇದೆ ಹಾಜರಾಗಿದ್ದಾರೆ. ಈ ವೇಳೆ ರೇವಣ್ಣ ಪತ್ನಿ‌ ಭವಾನಿ ಇದ್ದರು. ಅವರಿಗೆ ನೋಟಿಸ್‌ ಅನ್ನು ನೀಡಲಾಗಿದೆ. ಆದರೆ, ಇದು ಭವಾನಿ ರೇವಣ್ಣ ಅವರಿಗೇ ನೀಡಿರುವ ನೋಟಿಸ್‌ ಎನ್ನಲಾಗುತ್ತಿದೆ. ಹೀಗಾಗಿ ಇಂದು ಅಥವಾ ನಾಳೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ರೇವಣ್ಣ; ವಾಪಸ್‌ ಪಡೆಯಲು ಕೋರ್ಟ್‌ ಹೇಳಿದ್ದೇಕೆ?

ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್‌ ಸೂಚನೆ ಮೇರೆಗೆ ವಾಪಸ್‌ ಪಡೆದುಕೊಂಡಿದ್ದಾರೆ. ಅವರಿಗೆ ಸದ್ಯಕ್ಕೆ ಯಾವುದೇ ರೀತಿಯಾದಂತಹ ಬಂಧನ ಭೀತಿ ಇಲ್ಲ ಎಂದು ಹೇಳಲಾಗಿದೆ.

ತಮಗೆ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಚ್.ಡಿ. ರೇವಣ್ಣ ಅವರು ಗುರುವಾರ ಅರ್ಜಿ ಸಲ್ಲಿಸಿದ್ದರು. ಎಸ್‌ಐಟಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ಶುಕ್ರವಾರಕ್ಕೆ ವಿಚಾರಣೆಯನ್ನು ಮುಂದೂಡಲಾಗಿತ್ತು. ಶುಕ್ರವಾರ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಕೋರ್ಟ್‌, ವಾದ – ಪ್ರತಿವಾದವನ್ನು ಆಲಿಸಿ, ಅರ್ಜಿಯನ್ನು ಹಿಂಪಡೆಯುವಂತೆ ರೇವಣ್ಣ ಪರ ವಕೀಲರಿಗೆ ಸೂಚಿಸಿತು. ಈ ಹಿನ್ನೆಲೆಯಲ್ಲಿ ರೇವಣ್ಣ ಪರ ವಕೀಲರು ಅರ್ಜಿಯನ್ನು ಹಿಂಪಡೆದಿದ್ದಾರೆ.

ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ರೇವಣ್ಣ ಪರ ವಕೀಲ

ಜಾಮೀನು ನೀಡಬಹುದಾದ ಸೆಕ್ಷನ್‌ಗಳು ಇದ್ದಲ್ಲಿ ಮಾತ್ರ ನಿರೀಕ್ಷಣಾ ಜಾಮೀನು ನೀಡುವ ಅವಶ್ಯಕತೆ ಇದೆ. ಆದರೆ, ಇಲ್ಲಿ ಅಂಥದ್ದೇನನ್ನೂ ಹಾಕಲಾಗಿಲ್ಲ ಎಂದು ಹೇಳಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೇವಣ್ಣ ಪರ ವಕೀಲರು, ಮುಂದೆ ಸೆಕ್ಷನ್‌ 376 ಹಾಕಲಿದ್ದಾರೆ ಎಂದು ಹೇಳಿದರು. ಅದಕ್ಕೆ ಎಸ್‌ಐಟಿ ಪರ ವಕೀಲರು, ನಾವು ಇಲ್ಲಿಯವರೆಗೂ ಹಾಕಿಲ್ಲ ಎಂದು ಕೋರ್ಟ್‌ಗೆ ಮಾಹಿತಿ ನೀಡಿದರು. ಸೆಕ್ಷನ್‌ 376 ಮಾತ್ರ ಅಲ್ಲ, ಬೇರೆ ನಾನ್ ಬೇಲಬಲ್ ಹಾಕಿದ್ದಾರಾ ಎಂಬುದನ್ನೂ ತಿಳಿಸಬೇಕು ಎಂದು ಕೋರಿದರು. ಇದಕ್ಕೆ ಎಸ್‌ಐಟಿ ಪರ ವಕೀಲರಾದ ಜಗದೀಶ್‌, ನಾವು ಇಲ್ಲಿತನಕ ಯಾವುದೇ ನಾನ್ ಬೇಲಬಲ್ ಸೆಕ್ಷನ್ ಹಾಕಿಲ್ಲ ಎಂದು ಕೋರ್ಟ್‌ಗೆ ಮಾಹಿತಿ ನೀಡಿದರು.

ಹೀಗಾಗಿ ಬೇಲ್‌ ಕೊಡುವಂತಹ ಯಾವುದೇ ಸೆಕ್ಷನ್‌ಗಳನ್ನೂ ಈ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಅವರ ಮೇಲೆ ಹಾಕಲಾಗಿಲ್ಲ. ಹೀಗಿದ್ದ ಮೇಲೆ ಅವರಿಗೆ ನಿರೀಕ್ಷಣಾ ಜಾಮೀನು ಏಕೆ ಬೇಕು? ಕೂಡಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿಯನ್ನು ಹಿಂಪಡೆಯಿರಿ ಎಂದು ರೇವಣ್ಣ ಪರ ವಕೀಲರಿಗೆ ಕೋರ್ಟ್‌ ಸೂಚನೆ ನೀಡಿದೆ. ಹೀಗಾಗಿ ರೇವಣ್ಣ ಪರ ವಕೀಲರು ಅರ್ಜಿಯನ್ನು ವಾಪಸ್‌ ಪಡೆದರು. ಸದ್ಯಕ್ಕೆ ರೇವಣ್ಣ ಅವರಿಗೆ ಬಂಧನದ ಭೀತಿ ಇಲ್ಲ ಎಂದು ಹೇಳಲಾಗುತ್ತಿದೆ.

ಪ್ರಜ್ವಲ್ ರೇವಣ್ಣ ಮೇಲೆ ಮತ್ತೊಂದು ಟೈಟ್‌ ಎಫ್‌ಐಆರ್‌, ಇದರಲ್ಲಿ ಬಂಧನ ಖಚಿತ!

ಪ್ರಜ್ವಲ್‌ ರೇವಣ್ಣ (Prajwal Revanna Case) ಅವರ ಲೈಂಗಿಕ ದೌರ್ಜನ್ಯ (Physical abuse) ಹಗರಣದಲ್ಲಿ ಮತ್ತೊಂದು ದೂರು ದಾಖಲಾಗಿದೆ. ಈ ದೂರಿನಲ್ಲಿ ಬಿಗಿಯಾದ ದಂಡ ಸಂಹಿತೆ ಸೆಕ್ಷನ್‌ಗಳನ್ನು (IPC) ದಾಖಲಿಸಲಾಗಿದ್ದು, ಇದರಡಿ ಪ್ರಜ್ವಲ್‌ ಅವರ ಬಂಧನ ಖಚಿತವಾಗಿದೆ. ಮೈಸೂರಿನಲ್ಲೂ (Mysore news) ಇನ್ನೊಂದು ಲೈಂಗಿಕ ಕಿರುಕುಳ ಹಾಗೂ ಅಪಹರಣ (kidnap) ಪ್ರಕರಣ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದೆ. ಇಲ್ಲಿಗೆ ಒಟ್ಟು ಮೂರು ದೂರುಗಳಾಗಿವೆ.

ಪ್ರಜ್ವಲ್ ರೇವಣ್ಣ ಮೇಲೆ ದಾಖಲಾಗಿರುವ ಎರಡನೇ ಎಫ್ಐಆರ್ ಸಿಐಡಿ ಸೈಬರ್ ಠಾಣೆಯಲ್ಲಿ (CID cyber station) ದಾಖಲಾಗಿದೆ. ಎರಡನೇ ಎಫ್ಐಆರ್‌ನಲ್ಲಿ ದಾಖಲಿಸಿರುವ ಸೆಕ್ಷನ್‌ಗಳು ಹೆಚ್ಚು ಬಿಗಿಯಾಗಿದ್ದು, ತನಿಖೆಗೆ ಹಾಸನ ಸಂಸದರ ಬಂಧನವನ್ನು ಅನಿವಾರ್ಯವಾಗಿಸಿವೆ.

IPC 376(2)N, 506 ,354a1, 354b, 354c ಸೆಕ್ಷನ್‌ಗಳು ಹಾಗೂ ಐಟಿ ಕಾಯ್ದೆ ಅಡಿ ಎಫ್ಐಆರ್ ದಾಖಲಿಸಲಾಗಿವೆ. 376(2)n ಸೆಕ್ಷನ್‌ ಮಹಿಳೆ ಮೇಲೆ‌ ಬೆದರಿಸಿ ನಿರಂತರ ಅತ್ಯಾಚಾರ ನಡೆಸುವುದನ್ನು ದಾಖಲಿಸುತ್ತಿದ್ದು, ಇದು ಸಾಬೀತಾದರೆ ಕನಿಷ್ಠ ಹತ್ತು ವರ್ಷ ಜೈಲು ಅಥವಾ ಗರಿಷ್ಠ ಜೀವಾವಧಿ ಶಿಕ್ಷೆಯಾಗಲಿದೆ.

ಸೆಕ್ಷನ್‌ 506 ಅಪರಾಧಿಕ ಉದ್ದೇಶದಿಂದ ಬೆದರಿಸುವುದು, 354a1 ಲೈಂಗಿಕ ಬೇಡಿಕೆಗೆ ಒತ್ತಾಯಿಸುವುದು- ಇದಕ್ಕೆ ಗರಿಷ್ಠ ಮೂರು ವರ್ಷಗಳ ಶಿಕ್ಷೆ, 354b ಅಪರಾಧಿಕ ಉದ್ದೇಶಕ್ಕೆ ಮಹಿಳೆ ಮೇಲೆ ಹಲ್ಲೆ ಮಾಡುವುದು- ಗರಿಷ್ಠ ಮೂರು ವರ್ಷ ಶಿಕ್ಷೆ, 354c ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ಆಕೆಯ ಖಾಸಗಿ ವಿಷಯವನ್ನು ರೆಕಾರ್ಡ್ ಮಾಡುವುದು ಮತ್ತು ನೋಡುವುದು- ಗರಿಷ್ಠ ಏಳು ವರ್ಷ ಶಿಕ್ಷೆ ಇವುಗಳಿವೆ.

ಎರಡನೇ ಎಫ್ಐಆರ್‌ನಲ್ಲಿ ಪ್ರಜ್ವಲ್ ರೇವಣ್ಣ ಮಾತ್ರ ಆರೋಪಿಯಾಗಿದ್ದಾರೆ. ಮೊದಲ ದೂರಿನಲ್ಲಿ ಎಚ್‌ಡಿ ರೇವಣ್ಣ ಕೂಡ ಆರೋಪಿಯಾಗಿದ್ದರು. ಎಚ್‌ಡಿ ರೇವಣ್ಣ ಜಾಮೀನಿಗಾಗಿ ಪ್ರಯತ್ನಿಸುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ಭಾರತಕ್ಕೆ ಬಂದ ಕೂಡಲೇ ಬಂಧನ ಮಾಡಲು ಎಸ್‌ಐಟಿ ಸಜ್ಜಾಗಿದೆ. ಈಗಾಗಲೇ ಆರೋಪಿಗೆ ಲುಕ್‌ಔಟ್ ನೊಟೀಸ್ ಹೊರಡಿಸಲಾಗಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಬಂಧನ ಬಹುತೇಕ ಖಚಿತವಾಗಿದೆ.

ಮೈಸೂರಿನಲ್ಲೂ ದೂರು

ಪ್ರಜ್ವಲ್‌ ರೇವಣ್ಣ (Prajwal Revanna Case) ಮೇಲೆ ಮೈಸೂರಿನಲ್ಲೂ ಒಂದು ಲೈಂಗಿಕ ಕಿರುಕುಳ ಹಾಗೂ ಅಪಹರಣ (kidnap) ಪ್ರಕರಣ ದಾಖಲಾಗಿದೆ. ತಾಯಿಯನ್ನು ಅಪಹರಣ ಮಾಡಲಾಗಿದೆ ಎಂದು ಆರೋಪಿಸಿ ಪುತ್ರ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಕೆ.ಆರ್.ನಗರ ತಾಲೂಕಿನಲ್ಲಿ ಘಟನೆ ನಡೆದಿದೆ. “ಪ್ರಜ್ವಲ್ ರೇವಣ್ಣ ಅವರಿಂದ ನನ್ನ ತಾಯಿಯೂ ಲೈಂಗಿಕ ದೌರ್ಜನ್ಯಕ್ಕೆ ಒಳಪಟ್ಟಿದ್ದರು.‌ ಈ ಸಂಬಂಧ ಫೋಟೋಗಳು ಬಹಿರಂಗ ಆಗಿದ್ದವು. ಬಳಿಕ ನನ್ನ ತಾಯಿ ನಾಪತ್ತೆ ಆಗಿದ್ದಾರೆ. ಶಾಸಕ ಎಚ್.ಡಿ.ರೇವಣ್ಣ, ಪತ್ನಿ ಭವಾನಿ ರೇವಣ್ಣ (Bhavani Revanna) ಅಪಹರಣ ಮಾಡಿಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌, ರೇವಣ್ಣಗೆ ಮತ್ತೊಂದು ನೋಟಿಸ್‌; ವಿಚಾರಣೆಗೆ ಬಾರದಿದ್ದರೆ ಅರೆಸ್ಟ್‌: ಡಾ. ಜಿ. ಪರಮೇಶ್ವರ್

ದೂರಿನ ಬಗ್ಗೆ ಪೊಲೀಸರು ಪ್ರಾಥಮಿಕ ಮಾಹಿತಿ ಕಲೆಹಾಕುತ್ತಿದ್ದಾರೆ. ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಹಾಗೂ ಎಚ್‌.ಡಿ ರೇವಣ್ಣ (HD Revanna) ವಿರುದ್ಧ ದಾಖಲಾಗಿರುವ ದೂರಿನ ತನಿಖೆಗೆ ಎಸ್‌ಐಟಿ ರಚನೆ ಮಾಡಿರುವಂತೆ ಈ ದೂರು ಕೂಡ ಹೊರಬಂದಿದೆ.

Continue Reading
Advertisement
Prajwal Revanna Case I was raped at gunpoint JDS women leader files complaint against Prajwal
ಹಾಸನ1 min ago

Prajwal Revanna Case‌: ಗನ್‌ ಪಾಯಿಂಟ್‌ನಲ್ಲಿ ಜೆಡಿಎಸ್‌ ನಾಯಕಿ ಮೇಲೆ ಪ್ರಜ್ವಲ್‌ರಿಂದ ರೇಪ್‌? ಎಫ್‌ಐಆರ್‌ನಲ್ಲಿದೆ ಇಂಚಿಂಚು ಡಿಟೇಲ್ಸ್!

icc men's test team rankings
ಕ್ರೀಡೆ16 mins ago

ICC Men’s Test Team Rankings: ಅಗ್ರಸ್ಥಾನದಿಂದ ಕುಸಿತ ಕಂಡ ಭಾರತ; ವಿಶ್ವ ಚಾಂಪಿಯನ್​ ಆಸೀಸ್​ ನಂ.1

Bengaluru Rains
ಮಳೆ19 mins ago

Bengaluru Rains : ಬೆಂಗಳೂರಲ್ಲಿ ಶುರುವಾಯ್ತು ಮಳೆಗಾಲ; ಕವಿದ ಕಾರ್ಮೋಡ, ಭಯಂಕರ ವರ್ಷಧಾರೆ

Press Freedom Day
Latest26 mins ago

Press Freedom Day: ಇಂದು ಪತ್ರಿಕಾ ಸ್ವಾತಂತ್ರ್ಯ ದಿನ; ಏನಿದರ ಮಹತ್ವ?

Job Alert
ಉದ್ಯೋಗ34 mins ago

Job Alert: 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳಿಗೆ ಇಂದೇ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Prajwal Revanna Case Another case against Revanna transferred to SIT Notice to Bhavani
ಕ್ರೈಂ1 hour ago

Prajwal Revanna Case: ರೇವಣ್ಣ ಮೇಲಿನ ಮತ್ತೊಂದು ಕೇಸ್‌ ಎಸ್‌ಐಟಿಗೆ ವರ್ಗ; ಭವಾನಿಗೂ ನೋಟಿಸ್‌!

Narendra Modi
Lok Sabha Election 20241 hour ago

Narendra Modi: ಅಮೇಥಿ ಬದಲು ರಾಯ್‌ ಬರೇಲಿಯಿಂದ ರಾಹುಲ್‌ ಗಾಂಧಿ ಸ್ಪರ್ಧೆ; ಓಡಬೇಡಿ ಎಂದು ವ್ಯಂಗ್ಯವಾಡಿದ ಮೋದಿ

Helicopter Crash
ದೇಶ2 hours ago

Helicopter Crash: ಶಿವಸೇನೆ ನಾಯಕಿ ಪ್ರಯಾಣಿಸಬೇಕಿದ್ದ ಹೆಲಿಕಾಪ್ಟರ್‌ ಪತನ;ವಿಡಿಯೋ ವೈರಲ್‌

Murder case
ಕ್ರೈಂ2 hours ago

Murder case : ಹುಬ್ಬಳ್ಳಿ, ಬೆಂಗಳೂರಲ್ಲಿ ಅಪರಿಚಿತ ಶವ ಪತ್ತೆ; ಹಂತಕರ ಬೆನ್ನಿಗೆ ಬಿದ್ದ ಖಾಕಿ ಪಡೆ

Hockey India
ಕ್ರೀಡೆ2 hours ago

Hockey India: ಭಾರತ ಮಹಿಳಾ ಹಾಕಿ ತಂಡಕ್ಕೆ 22 ವರ್ಷದ ಸಲೀಮಾ ನೂತನ ನಾಯಕಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ10 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ20 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌