Fire accident | ಅಗ್ನಿ ಕೊಂಡ ಹಾಯುವಾಗ ಎಡವಿ ಬಿದ್ದ ಅರ್ಚಕಿಗೆ ಗಂಭೀರ ಗಾಯ: ಕಳಸ ಹೊತ್ತು ಸಾಗುವಾಗ ದುರಂತ - Vistara News

ಕರ್ನಾಟಕ

Fire accident | ಅಗ್ನಿ ಕೊಂಡ ಹಾಯುವಾಗ ಎಡವಿ ಬಿದ್ದ ಅರ್ಚಕಿಗೆ ಗಂಭೀರ ಗಾಯ: ಕಳಸ ಹೊತ್ತು ಸಾಗುವಾಗ ದುರಂತ

ಅರ್ಚಕಿಯೊಬ್ಬರು ಕಲಶ ಹೊತ್ತು ಕೊಂಡ ಹಾಯುವ ವೇಳೆ ಕೆಂಡದಲ್ಲಿ ಬಿದ್ದು (Fire accident) ಗಾಯಗೊಂಡಿದ್ದಾರೆ. ಅವರು ಅದೃಷ್ಟವಶಾತ್‌ ಪ್ರಾಣಾಪಾಯವಿಲ್ಲದೆ ಬಚಾವಾಗಿದ್ದಾರೆ.

VISTARANEWS.COM


on

konda fire
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೊಡ್ಡಬಳ್ಳಾಪುರ: ರೇಣುಕಾ ಯಲ್ಲಮ್ಮ ದೇವಿಯ ಅಗ್ನಿ ಕೊಂಡ ಹಾಯುವ ವೇಳೆ ಅರ್ಚಕಿಯೊಬ್ಬರು ಎಡವಿ ಬೆಂಕಿಗೆ ಬಿದ್ದು ಗಾಯಗೊಂಡಿದ್ದಾರೆ (Fire accident). ದೊಡ್ಡಬಳ್ಳಾಪುರ ದೊಡ್ಡಬೆಳವಂಗಲದ ಅಜ್ಜನ ಕಟ್ಟೆ ಸಮೀಪದ ಶಾಂತಿ ನಗರದಲ್ಲಿ ಘಟನೆ ನಡೆದಿದೆ.

ಅರ್ಚಕಿ ಅನು ಜೋಗತಿ ಎಂಬವರು ಕಳಸ ಹೊತ್ತು ಕೊಂಡದಲ್ಲಿ ಹೋಗುವಾಗ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಇಲ್ಲಿ ರೇಣುಕಾ ಯಲ್ಲಮ್ಮ ದೇವಿಯ ಅಗ್ನಿ ಕೊಂಡ ಹಾಯುವ ಜಾತ್ರೆ ಇತ್ತು.

ಕೆಂಡದಲ್ಲಿ ಬಿದ್ದ ಅರ್ಚಕಿಯನ್ನು ಸ್ಥಳೀಯರು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಅರ್ಚಕಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ | Nagavara Metro Pillar | ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ ಕುಸಿತ: ಸ್ಕೂಟಿಯಲ್ಲಿ ತೆರಳುತ್ತಿದ್ದ ಅಮ್ಮ, ಮಗು ದುರ್ಮರಣ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

S M Krishna: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

S M Krishna: ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಆರೋಗ್ಯದಲ್ಲಿ ಏರುಪೇರಾದ ಕಾರಣ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗ ಅವರು ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

VISTARANEWS.COM


on

S M Krishna
Koo

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕರ್ನಾಟಕದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ (91) (S M Krishna) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಏರ್‌ಪೋರ್ಟ್‌ ರೋಡ್‌ನಲ್ಲಿರುವ (Airport Road) ಮಣಿಪಾಲ್‌ ಆಸ್ಪತ್ರೆಗೆ (Manipal Hospital) ಎಸ್‌.ಎಂ.ಕೃಷ್ಣ ಅವರನ್ನು ದಾಖಲಿಸಲಾಗಿದ್ದು, ಸದ್ಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಎಸ್.ಎಂ.ಕೃಷ್ಣ ಅವರು ಕಳೆದ 12 ದಿನಗಳ ಹಿಂದೆಯೇ ವಿಠ್ಠಲ್‌ ಮಲ್ಯ ರಸ್ತೆಯಲ್ಲಿರುವ ವೈದೇಹಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆರೋಗ್ಯದಲ್ಲಿ ತೀವ್ರ ಏರುಪೇರಾದ ಕಾರಣ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ಸಾಗಿಸಲಾಯಿತು. ಸದ್ಯ ಅವರ ಆರೋಗ್ಯ ಸ್ಥಿತಿಯು ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ವೈದೇಹಿ ಆಸ್ಪತ್ರೆಗೆ ದಾಖಲಾದಾಗ ಎರಡು ದಿನಗಳಲ್ಲೇ ಅವರನ್ನು ಡಿಸ್‌ಚಾರ್ಜ್‌ ಮಾಡಲಾಗುತ್ತದೆ ಎಂಬುದಾಗಿ ವೈದ್ಯರು ತಿಳಿಸಿದ್ದರು. ಆದರೆ, ಚೇತರಿಸಿಕೊಳ್ಳದ ಕಾರಣ ಚಿಕಿತ್ಸೆ ಮುಂದುವರಿಸಲಾಗಿತ್ತು ಎಂದು ತಿಳಿದುಬಂದಿದೆ.

Padma Vibhushan SM Krishna has converted bengaluru as IT city says Dinesh Gooligowda

91 ವರ್ಷ ವಯಸ್ಸಿನ ಎಸ್​.ಎಂ.ಕೃಷ್ಣ ಸಕ್ರಿಯ ರಾಜಕಾರಣದಿಂದ ದೂರವೇ ಉಳಿದಿದ್ದಾರೆ. ಮೊದಲು ಕಾಂಗ್ರೆಸ್​ನಲ್ಲಿದ್ದು ಕೇಂದ್ರ ಸಚಿವರು, ಕರ್ನಾಟಕ ಮುಖ್ಯಮಂತ್ರಿಯಾಗಿದ್ದ ಎಸ್​.ಎಂ.ಕೃಷ್ಣ, ನಂತರ ಪಕ್ಷ ತನ್ನನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿ 2017ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಎರಡು ವರ್ಷದ ಹಿಂದೆ ಅವರು ನಾಡಪ್ರಭು ಕೆಂಪೇಗೌಡ ಅವರ ಹೆಸರಿನಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಿರುವ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕಳೆದ ವರ್ಷ ಎಸ್.ಎಂ. ಕೃಷ್ಣ ಅವರು ಸಕ್ರಿಯ ರಾಜಕೀಯದಿಂದ ನಿವೃತ್ತಿ ಪಡೆದಿದ್ದಾರೆ. “ಸಕ್ರಿಯ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ ಎಂದ ಮಾತ್ರಕ್ಕೆ ನಾನು ಸಂಪೂರ್ಣವಾಗಿ ಸನ್ಯಾಸಿಯಾಗುತ್ತೇನೆ ಎಂದಲ್ಲ, ಪಕ್ಷ ಇಲ್ಲವೇ ನಾಯಕರು ಸಲಹೆ ಕೇಳಿದರೆ ಕೊಡುವುದಾಗಿಯೂ ಅವರು ತಿಳಿಸಿದ್ದರು. ʻʻಮೀಸಲಾತಿ ವಿಚಾರವಾಗಿ ಕೇಳಿದ್ರೆ ಸಲಹೆ ಕೊಡುತ್ತೇನೆ. ನಾನು ಮೇಲೆ ಬಿದ್ದು ಸಲಹೆ ಕೊಡುವುದಿಲ್ಲ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ವಿಚಾರದಲ್ಲಿ ಅವರು ಬಂದು ಸಲಹೆ ಕೇಳಿದರೆ ಕೊಡುತ್ತೇನೆ” ಎಂದಿದ್ದರು.

ಎಸ್.ಎಂ.ಕೃಷ್ಣ ಅವರನ್ನು ಬಿಜೆಪಿ ಕಡೆಗಣಿಸುತ್ತಿದೆ ಎಂಬ ಆರೋಪದ ವಿಚಾರವಾಗಿ ಸುದ್ದಿಗಾರರು ಪ್ರಶ್ನಿಸಿದಾಗ ʻʻನಾನೇ ರಿಟೈಡ್ ಆಗುತ್ತಿರುವಾಗ ಕಡೆಗಣಿಸುವ ಪ್ರಶ್ನೆ ಬರುವುದಿಲ್ಲ. ನಾನೇ ನಿವೃತ್ತಿ ಪಡೆಯುತ್ತಿದ್ದೇನೆʼʼ ಎಂದಿದ್ದರು. ರಾಜಕೀಯದಲ್ಲಿ ಯಾರೂ ಪೆನ್ಶನ್‌ ಕೊಡುವುದಿಲ್ಲ. ಹೀಗಾಗಿ ನನ್ನ ನಿವೃತ್ತಿ ನಿರ್ಧಾರವನ್ನು ಹೈಕಮಾಂಡ್ ಗಮನಕ್ಕೆ ತರುವ ಅವಶ್ಯಕತೆ ಇಲ್ಲ” ಎಂದಿದ್ದರು.

ಇದನ್ನೂ ಓದಿ: Srinivasa Prasada Passes Away: ಕೊನೇ ಬಾರಿಗೆ ʼCoffee’ ಎಂದು ಬರೆದಿದ್ದ ಶ್ರೀನಿವಾಸ ಪ್ರಸಾದ್;‌ ನಾಳೆ ಅಂತ್ಯಕ್ರಿಯೆ; ಗಣ್ಯರ ಸಂತಾಪ

Continue Reading

ಬೆಳಗಾವಿ

Lakshmi Hebbalkar: ಪ್ರಜ್ವಲ್ ಹಗರಣದ ಬಗ್ಗೆ ಬಿಜೆಪಿ ನಾಯಕರ ಮೌನವೇಕೆ? ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ

Lakshmi hebbalkar: ಇಡೀ ದೇಶವೇ ತಲೆ ತಗ್ಗಿಸುವಂತ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ನಾಯಕರು ಮೌನ ವಹಿಸಿರುವುದು ಏಕೆ? ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದ್ದಾರೆ.

VISTARANEWS.COM


on

Minister Lakshmi hebbalkar Latest statement in Belagavi
Koo

ಬೆಳಗಾವಿ: ಇಡೀ ದೇಶವೇ ತಲೆ ತಗ್ಗಿಸುವಂತ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ನಾಯಕರು (BJP Leaders) ಮೌನ ವಹಿಸಿರುವುದು ಏಕೆ? ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ಭಾರೀ ಆಸಕ್ತಿ ತೋರಿಸಿದ್ದ ಮಾಜಿ ಮುಖ್ಯಮಂತ್ರಿ, ಬಿಜೆಪಿ ಬೆಳಗಾವಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರೇ ಈಗಲೂ ಸಂತ್ರಸ್ತ ಮಹಿಳೆಯರ ಪರ ಧ್ವನಿ ಎತ್ತಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ.

ಗೃಹ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಎಲ್ಲೇ ಅನ್ಯಾಯವಾದರೂ ನಾವು ಖಂಡಿಸುತ್ತೇವೆ. ಅವರ ಪರವಾಗಿ ನಿಲ್ಲುತ್ತೇವೆ. ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಅದರಲ್ಲಿ ರಾಜಕೀಯ ಬೆರೆಸಲು ನಾವು ಹೋಗುವುದಿಲ್ಲ. ಆದರೆ ಹುಬ್ಬಳ್ಳಿ ಪ್ರಕರಣದಲ್ಲಿ ಅತೀವ ಆಸಕ್ತಿ ತೋರಿಸಿದ್ದ ಬಿಜೆಪಿ ನಾಯಕರು ಈಗೇಕೆ ಮೌನವಾಗಿದ್ದಾರೆ. ಇಲ್ಲೂ ನೂರಾರು ಮಹಿಳೆಯರಿಗೆ ಅನ್ಯಾಯವಾಗಿದೆಯಲ್ಲವೇ? ಈಗಲೂ ಸಂಸದೆ ಮಂಗಲಾ ಅಂಗಡಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮಾಡಲಿ. ಜಗದೀಶ ಶೆಟ್ಟರ್ ಅಷ್ಟೇ ಆಸಕ್ತಿಯಿಂದ ಹೇಳಿಕೆಗಳನ್ನು ನೀಡಲಿ ಎಂದು ಆಗ್ರಹಿಸಿದರು.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ₹330 ಇಳಿಕೆ; ಇಂದಿನ ಬಂಗಾರ- ಬೆಳ್ಳಿ ದರಗಳು ಇಲ್ಲಿವೆ

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಏನು‌ ಹೇಳ್ತೀರಾ? ನಾರಿ ಶಕ್ತಿ, ನಾರಿ‌ ಸಮ್ಮಾನ್, ಬೇಟಿ ಬಚ್ಚಾವ್, ಬೇಟಿ ಪಡಾವ್ ಅಂತ ಹೇಳುವ ಬಿಜೆಪಿಗರು, ಈಗ ಯಾಕೆ ಮೌನವಾಗಿದ್ದಾರೆ. ಮಾತು ಆಡಿದರೆ ಕರ್ನಾಟಕ ಸರ್ಕಾರವನ್ನು ಟೀಕಿಸುವ ಮೋದಿಜೀ ಅವರ ಈಗಿನ ನಿಲುವೇನು? ಇಲ್ಲಿನ ಸಂತ್ರಸ್ತ ಮಹಿಳೆಯರ ಮಾಂಗಲ್ಯದ ಕಥೆಯೇನು? ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾಗಿ ಪ್ರಶ್ನೆ ಕೇಳ್ತಾ ಇದ್ದೀನಿ ಎಂದು ಹೇಳಿದರು.

ಕಾನೂನು ಚೌಕಟ್ಟಿನಡಿ ಕ್ರಮ

ವಿದೇಶದಿಂದ, ಹೊರ ರಾಜ್ಯಗಳಿಂದ ಫೋನ್ ಕಾಲ್‌ಗಳು ಬರುತ್ತಿವೆ. ಇಂತಹ ಪ್ರಕರಣ ನಡೆದಿದ್ದು ನಿಜವೇ ಎಂದು ಪ್ರಶ್ನಿಸುತ್ತಿದ್ದಾರೆ. ಸರ್ಕಾರ ಏನು ಕ್ರಮ ಕೈಗೊಳ್ಳಲಿದೆ ಎಂದು ಪ್ರಶ್ನಿಸುತ್ತಿದ್ದಾರೆ. ಪ್ರಕರಣವನ್ನು ರಾಜ್ಯ ಸರ್ಕಾರ ಈಗಾಗಲೇ ಎಸ್‌ಐಟಿ ತನಿಖೆಗೆ ವಹಿಸಿದ್ದು, ಕಾನೂನಿನ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಬಿಜೆಪಿಯ ಮಹಿಳಾಮಣಿಗಳು ಎಲ್ಲಿದ್ದಾರೆ?

ಸಂಸದೆ ಮಂಗಲಾ ಅಂಗಡಿ ಅವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ಆಗಬೇಕು, ನೇಹಾ ಹಿರೇಮಠ ವಿಷಯದಲ್ಲಿ ಮಾತಾಡಿದಂತೆ ಜಗದೀಶ್ ಶೆಟ್ಟರ್ ಅವರು ಮಾತಾಡಬೇಕು. 16 ವರ್ಷದಿಂದ 50, 60 ವರ್ಷದ ಮಹಿಳೆಯರು ಪ್ರಜ್ವಲ್ ರೇವಣ್ಣ ಅವರಿಂದ ನೊಂದಿದ್ದಾರೆ‌ ಎಂದು ಆರೋಪಿಸಿದ ಅವರು, ಮಹಿಳೆಯರ ಪರ ಮೈತ್ರಿ ನಾಯಕರು ನಿಲ್ಲಲಿ ಎಂದು ಈ ವೇಳೆ ಒತ್ತಾಯಿಸಿದರು.

ಇದನ್ನೂ ಓದಿ: Dheeren Rajkumar: ಹೆಸರು ಬದಲಿಸಿಕೊಂಡು ಅದೃಷ್ಟ ಪರೀಕ್ಷೆಗಿಳಿದ ರಾಜ್‌ಕುಮಾರ್ ಮೊಮ್ಮಗ!

ಬಿಜೆಪಿಯ ಮಾಜಿ ಶಾಸಕ ಪ್ರೀತಂ ಗೌಡ, ಹಿರಿಯ ಮುಖಂಡ ಎ.ಟಿ. ರಾಮಸ್ವಾಮಿ, ದೇವರಾಜ್ ಗೌಡ ಎಂಬುವರು, ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಮೈಸೂರು ಪ್ರವಾಸದಲ್ಲಿದ್ದ ಅಮಿತ್ ಷಾ ಅವರ ಗಮನಕ್ಕೆ ಆಗಲೇ ತಂದಿದ್ದರು. ಇಂಥ ವಿಷಯ ಗೊತ್ತಿದ್ದರೂ ಮೈತ್ರಿ ನಾಯಕರು ಪ್ರಜ್ವಲ್ ಅವರನ್ನೇ ಅಭ್ಯರ್ಥಿಯನ್ನಾಗಿ ಮಾಡಿದ್ದು ಎಷ್ಟು ಸರಿ. ಇದಕ್ಕೆ ಬಿಜೆಪಿ ನಾಯಕರು ಉತ್ತರಿಸುವರೇ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಪ್ರಜ್ವಲ್ ರೇವಣ್ಣ ಪ್ರಕರಣದ ಕುರಿತು ಬಿಜೆಪಿ ನಾಯಕರಿಗೆ ಮೊದಲೇ ಅರಿವಿತ್ತು ಎಂದೂ ಸಚಿವರು ತಿಳಿಸಿದರು.

ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿರುವ ಬಿಜೆಪಿ ನಾಯಕರು, ಈಗ ಯಾಕೆ ಜಾಣ ಮೌನವಾಗಿದ್ದಾರೆ. ಮೊನ್ನೆ ಮಾಜಿ ಶಾಸಕರೊಬ್ಬರೂ ನನ್ನ ಬಗ್ಗೆ ತುಚ್ಛವಾಗಿ ಮಾತನಾಡುವಾಗ ವೇದಿಕೆಯಲ್ಲಿದ್ದ ಸಂಸದೆ ಮಂಗಲಾ ಅಂಗಡಿ, ಜಗದೀಶ್ ಶೆಟ್ಟರ್ ನಕ್ಕರು ಹೊರತು ಏನು ಮಾತಾಡಲಿಲ್ಲ. ಸಂಜಯ್ ಪಾಟೀ;ಗೆ ಕನಿಷ್ಠ ಬುದ್ದಿವಾದ ಹೇಳಲಿಲ್ಲ ಎಂದು ಸಚಿವರು ಆರೋಪಿಸಿದರು.

ಉಡುಪಿ ಹಾಸ್ಟೆಲ್‌ನಲ್ಲಿ ಕ್ಯಾಮೆರಾ ಇಟ್ಟ ವಿಷಯವನ್ನು ಬಿಜೆಪಿಯವರು ರಾಜಕರಣ‌ಗೊಳಿಸಿದ್ರು, ರಾಷ್ಟ್ರೀಯ ಮಹಿಳಾ ಆಯೋಗದವರು ಓಡೋಡಿ ಬಂದರು. ಈಗ ಸಾವಿರಾರು ಮಹಿಳೆಯರ ಮಾನ ಹರಾಜಾದ್ರು ಯಾರು ಏನೂ ಮಾತಾಡುತ್ತಿಲ್ಲ. ಅಶೋಕ್, ವಿಜಯೇಂದ್ರ ಅವರೇ ಈಗ ಏನು ಹೇಳ್ತೀರಾ, ಶೋಭಾ ಕರಂದ್ಲಾಜೆ, ಸ್ಮೃತಿ ಇರಾನಿ ಅವರು ಯಾಕೆ ಏನು ಹೇಳ್ತಿಲ್ಲ. ಮಂಡ್ಯ ಸೊಸೆ ಸುಮಲತಾ ಏನ್ ಮಾಡ್ತಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದರು.

ಸರ್ಕಾರ ನೊಂದ ಮಹಿಳೆಯರ ಪರವಾಗಿ ನಿಲ್ಲಲಿದೆ. ಅವರ ರಕ್ಷಣೆ ಮಾಡಲಿದೆ. ಪ್ರಕರಣದ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ. ಸಮಾಜದ ಸ್ವಾಸ್ಥ್ಯ ಕೆಡಿಸುವ ಪ್ರಜ್ವಲ್ ಪ್ರಕರಣದ ವಿಡಿಯೋಗಳನ್ನು ಯಾರೂ ಫಾರ್ವರ್ಡ್ ಮಾಡಬಾರದು ಎಂದು ಸಚಿವರು ಮನವಿ ಮಾಡಿದರು.

ಇದನ್ನೂ ಓದಿ: Viral Video: ರೈಲು ಹತ್ತುವಾಗ ಕೆಳಗೆ ಬಿದ್ದ ವ್ಯಕ್ತಿ; ಮಹಿಳಾ ಪೇದೆಯಿಂದ ರಕ್ಷಣೆ-ರೋಚಕ ವಿಡಿಯೋ ವೈರಲ್‌

ಸುದ್ದಿಗೋಷ್ಠಿಯಲ್ಲಿ ಸಚಿವ ಡಾ.ಎಂ.ಸಿ. ಸುಧಾಕರ್, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ವಿನಯ್ ನಾವಲಗಟ್ಟಿ ಉಪಸ್ಥಿತರಿದ್ದರು.

Continue Reading

ಕರ್ನಾಟಕ

Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

Hassan Pen Drive Case: ಈ ಪ್ರಕರಣದ ಬಗ್ಗೆ ಸ್ವಲ್ಪ ಸಮಯ ಕಾಯೋಣ ಎಂದು ಎಚ್.ಡಿ. ದೇವೇಗೌಡರು ಹೇಳುತ್ತಿದ್ದಾರೆ. ಆದರೆ, ತಡ ಮಾಡಿದಷ್ಟು ಪಕ್ಷಕ್ಕೆ ಮುಜುಗರ ಜಾಸ್ತಿ. ಹೀಗಾಗಿ ಇಂದೇ ಉಚ್ಚಾಟನೆ ಮಾಡಿ. ಜತೆಗೆ ಶಾಸಕರು ಬಹಿರಂಗವಾಗಿ ಧ್ವನಿ ಎತ್ತಿದ್ದಾರೆ. ಇದನ್ನು ಮುಂದುವರಿಸುವುದು ಬೇಡ ಎಂದು ಹಿರಿಯ ನಾಯಕರ ನಿಯೋಗ ದೇವೇಗೌಡರ ಬಳಿ ಹೇಳಿದೆ. ಕೊನೆಗೆ ದೇವೇಗೌಡರು ಕೋರ್ ಕಮಿಟಿಯಲ್ಲಿ ನಿರ್ಧಾರ ಮಾಡಿ ಎಂದು ಸೂಚನೆ ನೀಡಿದ್ದಾರೆ.

VISTARANEWS.COM


on

Hassan Pen Drive Case Deve Gowda refuses to expel Prajwal and What is the reason
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ವಿವಾದ ಭುಗಿಲೆದ್ದಿದೆ. ಪ್ರಜ್ವಲ್‌ ಅವರನ್ನು ಕೂಡಲೇ ಉಚ್ಚಾಟನೆ ಮಾಡುವಂತೆ ಪಕ್ಷದ ಶಾಸಕರಿಂದ ಒತ್ತಡ ಬರುತ್ತಿದ್ದರೂ, ಕ್ರಮ ಕೈಗೊಳ್ಳಲು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡರು (HD Devegowda) ಹಿಂದೇಟು ಹಾಕಿದ್ದಾರೆ.

ಈ ಪ್ರಕರಣದ ಬಗ್ಗೆ ಸ್ವಲ್ಪ ಸಮಯ ಕಾಯೋಣ ಎಂದು ಎಚ್.ಡಿ. ದೇವೇಗೌಡರು ಹೇಳುತ್ತಿದ್ದಾರೆ. ಆದರೆ, ತಡ ಮಾಡಿದಷ್ಟು ಪಕ್ಷಕ್ಕೆ ಮುಜುಗರ ಜಾಸ್ತಿ. ಹೀಗಾಗಿ ಇಂದೇ ಉಚ್ಚಾಟನೆ ಮಾಡಿ. ಜತೆಗೆ ಶಾಸಕರು ಬಹಿರಂಗವಾಗಿ ಧ್ವನಿ ಎತ್ತಿದ್ದಾರೆ. ಇದನ್ನು ಮುಂದುವರಿಸುವುದು ಬೇಡ ಎಂದು ಹಿರಿಯ ನಾಯಕರ ನಿಯೋಗ ದೇವೇಗೌಡರ ಬಳಿ ಹೇಳಿದೆ. ಕೊನೆಗೆ ದೇವೇಗೌಡರು ಕೋರ್ ಕಮಿಟಿಯಲ್ಲಿ ನಿರ್ಧಾರ ಮಾಡಿ ಎಂದು ಸೂಚನೆ ನೀಡಿದ್ದಾರೆ.

ದೇವೇಗೌಡರಿಗೆ ಕಾಡುತ್ತಿದೆಯಾ ಆ ಭಯ?

ಎಚ್.ಡಿ. ದೇವೇಗೌಡ ಅವರಿಗೆ ಉಚ್ಚಾಟನೆ ಮಾಡುವುದು ದೊಡ್ಡ ವಿಷಯ ಅಲ್ಲದಿದ್ದರೂ, ಮುಂದಿನ ಪರಿಣಾಮದ ಬಗ್ಗೆ ಭಯ ಇದೆ ಎಂದು ಹೇಳಲಾಗುತ್ತಿದೆ. ಪ್ರಜ್ವಲ್ ರೇವಣ್ಣ ಅವರನ್ನು ಉಚ್ಚಾಟನೆ ಮಾಡಿದರೆ, ಎಚ್.ಡಿ. ರೇವಣ್ಣ (HD Revanna) ಅವರೇ ಮುಂದಿನ ಟಾರ್ಗೆಟ್‌ ಆಗಲಿದ್ದಾರೆ. ಈ ಪ್ರಕರಣಗಳಲ್ಲಿ ರೇವಣ್ಣ ಹೆಸರು ಸಹ ಪ್ರಸ್ತಾಪ ಆಗಿರುವುದರಿಂದ ಕಾಂಗ್ರೆಸ್ ರೇವಣ್ಣ ವಿರುದ್ಧ ಮುಗಿಬೀಳುತ್ತದೆ. ರೇವಣ್ಣನ ವಿರುದ್ಧವೂ ಅಭಿಯಾನ ಶುರುವಾಗುತ್ತದೆ. ಆಗ ಅನಿವಾರ್ಯವಾಗಿ ರೇವಣ್ಣ ಅವರನ್ನೂ ಉಚ್ಚಾಟನೆ ಮಾಡುವ ಪರಿಸ್ಥಿತಿ ನಿರ್ಮಾಣವಾದರೆ ಎಂಬ ಆತಂಕ, ಭಯ ಎಚ್.ಡಿ. ದೇವೇಗೌಡ ಅವರದ್ದಾಗಿದೆ.

ಪಕ್ಷ ಉಳಿಯುತ್ತಾ ಎಂಬ ಆತಂಕ!

ಒಂದು ವೇಳೆ ರೇವಣ್ಣ ಹಾಗೂ ಪ್ರಜ್ವಲ್‌ ಅವರನ್ನು ಉಚ್ಚಾಟನೆ ಮಾಡಿದ್ದೇ ಆದಲ್ಲಿ ಕುಟುಂಬದಲ್ಲಿ ರಾಜಕೀಯ ಭಿನ್ನಾಭಿಪ್ರಾಯ ಹೆಚ್ಚಾಗುತ್ತದೆ. ಆ ಬಳಿಕ ಜೆಡಿಎಸ್ ಪಕ್ಷ ಉಳಿಯುವುದೇ ಅನುಮಾನ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಕಾಂಗ್ರೆಸ್‌ ಕೂಡಾ ಜೆಡಿಎಸ್‌ ಪಕ್ಷ ನಿರ್ನಾಮ ಆಗುವುದನ್ನೇ ಕಾಯುತ್ತಿದೆ. ಹೀಗಾಗಿ ಉಚ್ಚಾಟನೆ ಮಾಡಿ ಅವರ ಅಸ್ತ್ರ ಇನ್ನಷ್ಟು ಗಟ್ಟಿ ಮಾಡುವುದು ಬೇಡ ಎಂಬ ಯೋಚನೆಯಲ್ಲಿ ಎಚ್.ಡಿ. ದೇವೇಗೌಡ ಅವರು ಇದ್ದಾರೆ.

ಪಕ್ಷದ ನಾಯಕರ ವಾದ ಏನು?

ಇದು ಏನೇ ಇದ್ದರೂ ದಿಟ್ಟ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ. ಜತೆಗೆ ಪಕ್ಷದ ಕಾರ್ಯಕರ್ತರ ನೈತಿಕ ಸ್ಥೈರ್ಯ ಹೆಚ್ಚಿಸಲು ಈ ಕ್ರಮವನ್ನು ತೆಗೆದುಕೊಳ್ಳಲೇ ಬೇಕಾಗುತ್ತದೆ. ಪಕ್ಷಕ್ಕೆ ಆದ ಮುಜುಗರ ತಪ್ಪಿಸಲು ಪ್ರಜ್ವಲ್ ಉಚ್ಚಾಟನೆ ಅನಿವಾರ್ಯ ಎಂದು ಹಿರಿಯ ನಾಯಕರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

ಪ್ರಜ್ವಲ್‌ ರೇವಣ್ಣ ಜೆಡಿಎಸ್‌ನಿಂದ ನಾಳೆ ಉಚ್ಚಾಟನೆ?

ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS leader) ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಜೆಡಿಎಸ್‌ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬಕ್ಕೆ ಭಾರಿ ಮುಜುಗರವನ್ನುಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಇನ್ನೂ ಕೆಲವೇ ಕ್ಷಣದಲ್ಲಿ ಆದೇಶ ಹೊರಬೀಳಲಿದೆ ಎನ್ನಲಾಗಿದೆ.

ಪ್ರಜ್ವಲ್‌ ರೇವಣ್ಣ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ಕುರಿತು ಈಗಾಗಲೇ ಎಚ್.ಡಿ. ಕುಮಾರಸ್ವಾಮಿ ಸುಳಿವು ನೀಡಿದ್ದಾರೆ. ಪ್ರಜ್ವಲ್ ಪ್ರಕರಣದಿಂದ ಜೆಡಿಎಸ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿದೆ. ಹೀಗಾಗಿ ನಾಳೆ (ಏಪ್ರಿಲ್‌ 30) ಒಳಗೆ ಪ್ರಜ್ವಲ್ ವಿರುದ್ಧ ಶಿಸ್ತುಕ್ರಮ ಗ್ಯಾರಂಟಿ ಎಂದು ಹೇಳಲಾಗುತ್ತಿದೆ.

ಏಕೆ ಈ ಕ್ರಮ?

ಈಗಾಗಲೇ ಜೆಡಿಎಸ್‌ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದೆ. ಅಲ್ಲದೆ, ಈ ಪ್ರಕರಣ ಈಗ ದೇಶಾದ್ಯಂತ ಸಂಚಲನ ಉಂಟುಮಾಡಿದೆ. ಮೈತ್ರಿ ಪಕ್ಷ ಬಿಜೆಪಿ ಕೂಡ ಇದರಿಂದ ಮುಜುಗರ ಅನುಭವಿಸುತ್ತಿದೆ. ದೇಶದ ಹಲವು ಕಡೆ ಇನ್ನೂ ಚುನಾವಣೆ ನಡೆಯುತ್ತಿದೆ. ಈ ಹೊತ್ತಿನಲ್ಲಿ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲವೆಂದಾದರೆ ಬಿಜೆಪಿಗೆ ಇದು ತೀವ್ರ ಇರಿಸುಮುರಿಸನ್ನು ತರುತ್ತದೆ. ಅಲ್ಲದೆ, ವಿಪಕ್ಷಗಳ ಟೀಕೆಯನ್ನು ಸಮರ್ಥವಾಗಿ ಎದುರಿಸಲು ಕಷ್ಟವಾಗುತ್ತದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸದ್ಯಕ್ಕೆ ಮುಜುಗರದಿಂದ ತಪ್ಪಿಸಿಕೊಳ್ಳಲು ಪ್ರಜ್ವಲ್ ವಿರುದ್ಧ ಶಿಸ್ತು ಕ್ರಮವನ್ನು ಕೈಗೊಳ್ಳುವುದು ಅನಿವಾರ್ಯ ಎಂಬ ತೀರ್ಮಾನಕ್ಕೆ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಬಂದಿದ್ದಾರೆ ಎನ್ನಲಾಗಿದೆ.

ಪ್ರಜ್ವಲ್, ಎಚ್.ಡಿ. ರೇವಣ್ಣ ಉಚ್ಚಾಟನೆಗೆ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಒತ್ತಾಯ

ಇನ್ನು ಪ್ರಜ್ವಲ್‌ ರೇವಣ್ಣ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಿ ಎಂದು ಜೆಡಿಎಸ್‌ ಶಾಸಕ ಮಂಜುನಾಥ್ ಅವರು ತಮ್ಮ ಸೋಷಿಯಲ್‌ ಮೀಡಿಯಾ ಫೇಸ್‌ಬುಕ್‌ ಮೂಲಕ ಮಾಜಿ ಸಿಎಂ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದಾರೆ.

ಸಮೃದ್ಧಿ ಮಂಜುನಾಥ್‌ ಮನವಿಯಲ್ಲೇನಿದೆ?

“ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ. ಇತ್ತೀಚಿನ ದಿನಗಳಲ್ಲಿ ಹಾಸನದ ಲೀಲೆಗಳು ಮಾಧ್ಯಮಗಳಲ್ಲಿ ಪ್ರಜ್ವಲಿಸುತ್ತಿರುವುದು ಪಕ್ಷದ ಸಾಮಾನ್ಯ ಕಾರ್ಯಕ್ರತರಾಗಿ ರಾಜ್ಯದಲ್ಲೆಡೆ ಮುಜುಗರಕ್ಕೆ ಒಳಗಾಗಿರುವುದಲ್ಲದೆ ಪಕ್ಷದ ಹೆಸರು ಹೇಳಲು ಸಹ ಹೇಸಿಗೆ ಅನಿಸುವಂತ ಸ್ಥಿತಿಗೆ ತಲುಪಿದೆ.

ಮಾಧ್ಯಮದವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲಾಗದ ದಯನೀಯ ಪರಿಸ್ಥಿತಿ ಮೊದಲ ಬಾರಿಗೆ ಶಾಸಕನಾಗಿರುವ ನನಗೆ ಈ ಕಷ್ಟಕರ ಸನ್ನಿವೇಶಗಳು ಎದುರಾಗುತ್ತಿದ್ದರೆ, ಸಾಮಾನ್ಯ ಕಾರ್ಯಕರ್ತರ ಪರಿಸ್ಥಿತಿಯಾದರೇನು ಯೋಚಿಸಿ??

ಪಕ್ಷದ ರಾಷ್ಟ್ರಾಧ್ಯಕ್ಷರು ಎಚ್.ಡಿ. ದೇವೇಗೌಡರು, ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕಾದ ಸಮಯವಿದಾಗಿದೆ. ನಿಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ 19 ಜನ ಶಾಸಕರ ಭವಿಷ್ಯ ಬೇಕೋ ತಮ್ಮ ಕುಟುಂಬದ ರೇವಣ್ಣ, ಪ್ರಜ್ವಲ್‌ ಅವರು ಮುಖ್ಯವೋ ತೀರ್ಮಾನಿಸಬೇಕಿದೆ.

ಇದನ್ನೂ ಓದಿ: PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

24 ಗಂಟೆಗಳಲ್ಲಿ ಆರೋಪ ಹೊತ್ತಿರುವ ರೇವಣ್ಣ ಮತ್ತು ಪ್ರಜ್ವಲ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಸಿದ್ಧಾಂತಗಳನ್ನು ಉಳಿಸಿ ಕಾರ್ಯಕರ್ತರನ್ನು ನಮ್ಮನ್ನು ಮುಜುಗರದಿಂದ ಪಾರು ಮಾಡಲು ಕೋರುತ್ತೇನೆ. ನಿಮ್ಮ ತೀರ್ಮಾನದ ಮೇಲೆ ಪಕ್ಷದ ಮುಂದಿನ ಭವಿಷ್ಯವಿದೆಯೆಂಬುದು ಮತ್ತೊಮ್ಮೆ ತಿಳಿಸಲು ಬಯಸುತ್ತೇನೆ” ಎಂದು ಫೇಸ್‌ಬುಕ್‌ನಲ್ಲಿ ಸಮೃದ್ಧಿ ಮಂಜುನಾಥ್ ಬರೆದುಕೊಂಡಿದ್ದಾರೆ.

ನಾಳೆಯ ಕೋರ್‌ ಕಮಿಟಿ ಸಭೆ ಬಳಿಕ ನಿರ್ಧಾರ

ಈ ಸಂಬಂಧ ನಾಳೆ (ಏಪ್ರಿಲ್‌ 30) ಜೆಡಿಎಸ್‌ ಕೋರ್‌ ಕಮಿಟಿ ಸಭೆ ಕರೆಯಲಾಗಿದ್ದು. ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲು ನಿರ್ಧಾರ ಮಾಡಲಾಗಿದೆ. ಈ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಬಳಿಕ ಉಚ್ಚಾಟನೆ ಕ್ರಮ ಕೈಗೊಳ್ಳಲು ತೀರ್ಮಾನ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Continue Reading

Lok Sabha Election 2024

PM Narendra Modi: ಡೀಪ್‌ ಫೇಕ್‌ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು? ವಿಡಿಯೊ ಕಂಡರೆ ನೀವೇನು ಮಾಡಬೇಕು?

PM Narendra Modi: ನನ್ನ ವಿರುದ್ಧವಾಗಿ ಫೇಕ್‌ ವಿಡಿಯೊ ಸಿದ್ಧಪಡಿಸಿ ಸೋಷಿಯಲ್‌ ಮೀಡಿಯಾಗಳಲ್ಲಿ ಬಿಡುತ್ತಾರೆ. ಮಾರ್ಫ್ ಮಾಡಿ ವಿಡಿಯೊ ಬಿಡುಗಡೆ ಮಾಡುತ್ತಾರೆ ಎಂದು ಡೀಪ್ ಫೇಕ್‌ ವಿಡಿಯೊ ಪ್ರಕರಣಗಳು ಹರಿದಾಡುತ್ತಿರುವ ಬಗ್ಗೆ ಗರಂ ಆದ ಪ್ರಧಾನಿ ನರೇಂದ್ರ ಮೋದಿ, ಅಮಿತಾಬ್‌ ಬಚ್ಚನ್ ಸೇರಿ ಹಲವು ಸ್ಟಾರ್‌ಗಳ ಡೀಪ್‌ ಫೇಕ್‌ ವಿಡಿಯೊ ಮಾಡಲಾಗಿದೆ. ನನ್ನ ಧ್ವನಿ ಹೋಲುವಂತೆ ನಕಲು ಮಾಡಿ ಸಾಮಾಜಿಕ ತಾಣದಲ್ಲಿ ಬಿಡುತ್ತಾರೆ. ಈ ರೀತಿಯ ಫೇಕ್ ವಿಡಿಯೊ ಬಿಡುವ ಸಂಚುಕೋರರ ಬಗ್ಗೆ ಜಾಗ್ರತೆ ಇರಲಿ ಎಂದು ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

VISTARANEWS.COM


on

PM Narendra modi in Bagalakote and talk about DeepFake Video
Koo

ಬಾಗಲಕೋಟೆ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಸಮಾವೇಶ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಡೀಪ್‌ ಫೇಕ್‌ (Deep Fake) ಬಗ್ಗೆ ಮಾತನಾಡಿದ್ದಾರೆ. ತಮ್ಮ ಭಾಷಣದ ರೀತಿ ಮಾರ್ಫ್‌ ಮಾಡಿ ವಿಡಿಯೊವನ್ನು ಸೋಷಿಯಲ್‌ ಮೀಡಿಯಾಗಳಲ್ಲಿ ಹರಿಬಿಡುತ್ತಿರುವ ಗ್ಯಾಂಗ್‌ ಸಕ್ರಿಯವಾಗಿದೆ. ಇಂಥ ವಿಡಿಯೊ ನಿಮಗೆ ಕಂಡುಬಂದಲ್ಲಿ ಆ ವಿಡಿಯೊ ಸಹಿತ ಪೊಲೀಸರಿಗೆ ದೂರು ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಕರೆ ನೀಡಿದರು.

ಬಾಗಲಕೋಟೆಯಲ್ಲಿ ನಡೆದ ಬಿಜೆಪಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಚುನಾವಣೆಯಲ್ಲಿ ಸೋತು ಮೈದಾನ ಬಿಟ್ಟು ಹೋದವರಿಂದ ಫೇಕ್‌ ವಿಡಿಯೊ ಮಾಡಲಾಗುತ್ತಿದೆ. ಸಾಮಾಜಿಕ ತಾಣಗಳಲ್ಲಿ ಫೇಕ್ ವಿಡಿಯೋ ಬಿಡುವ ಕಾರ್ಯದಲ್ಲಿದ್ದಾರೆ ಅವರೆಲ್ಲರೂ ನಿರತರಾಗಿದ್ದಾರೆ. ಆ ರೀತಿ ಫೇಕ್ ವಿಡಿಯೊಗಳು ನಿಮ್ಮ ಗಮನಕ್ಕೆ ಬಂದರೆ ಪೊಲೀಸರಿಗೆ ಕೊಡಿ. ನಮ್ಮ ದೇಶದ ಕಾನೂನಿನಲ್ಲಿ ಫೇಕ್‌ ವಿಡಿಯೊ ಗ್ಯಾಂಗ್‌ಗೆ ಶಿಕ್ಷೆ ಮಾಡುತ್ತೇವೆ ಎಂದು ಹೇಳಿದರು.

ನನ್ನ ವಿರುದ್ಧವಾಗಿ ಫೇಕ್‌ ವಿಡಿಯೊ ಸಿದ್ಧಪಡಿಸಿ ಸೋಷಿಯಲ್‌ ಮೀಡಿಯಾಗಳಲ್ಲಿ ಬಿಡುತ್ತಾರೆ. ಮಾರ್ಫ್ ಮಾಡಿ ವಿಡಿಯೊ ಬಿಡುಗಡೆ ಮಾಡುತ್ತಾರೆ ಎಂದು ಡೀಪ್ ಫೇಕ್‌ ವಿಡಿಯೊ ಪ್ರಕರಣಗಳು ಹರಿದಾಡುತ್ತಿರುವ ಬಗ್ಗೆ ಗರಂ ಆದ ಪ್ರಧಾನಿ ನರೇಂದ್ರ ಮೋದಿ, ಅಮಿತಾಬ್‌ ಬಚ್ಚನ್ ಸೇರಿ ಹಲವು ಸ್ಟಾರ್‌ಗಳ ಡೀಪ್‌ ಫೇಕ್‌ ವಿಡಿಯೊ ಮಾಡಲಾಗಿದೆ. ನನ್ನ ಧ್ವನಿ ಹೋಲುವಂತೆ ನಕಲು ಮಾಡಿ ಸಾಮಾಜಿಕ ತಾಣದಲ್ಲಿ ಬಿಡುತ್ತಾರೆ. ಈ ರೀತಿಯ ಫೇಕ್ ವಿಡಿಯೊ ಬಿಡುವ ಸಂಚುಕೋರರ ಬಗ್ಗೆ ಜಾಗ್ರತೆ ಇರಲಿ ಎಂದು ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.

ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ

ಒಬಿಸಿ ಸಮುದಾಯಗಳ ಮೀಸಲಾತಿ ವಿಷಯದಲ್ಲಿ ಕಾಂಗ್ರೆಸ್‌ ಸರ್ಕಾರ ಷಡ್ಯಂತ್ರ ರೂಪಿಸಿದೆ. ಹಿಂದುಳಿದ ವರ್ಗಗಳು ಹಾಗೂ ಎಸ್‌ಸಿ, ಎಸ್‌ಟಿ ಮೀಸಲಾತಿಗೂ ಕುತ್ತು ತರಲು ಕಾಂಗ್ರೆಸ್‌ ಹೊರಟಿದೆ. ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ತೆಗೆದು ಮುಸ್ಲಿಮರಿಗೆ ಹಂಚಿಕೆ ಮಾಡಲು ಕಾಂಗ್ರೆಸ್‌ ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಧರ್ಮದ ರಾಜಕಾರಣ ಮಾಡಲು ಕಾಂಗ್ರೆಸ್‌ನಿಂದ ವ್ಯವಸ್ಥಿತ ಸಂಚು ರೂಪಿಸಲಾಗುತ್ತಿದೆ. ಎಸ್‌ಸಿ – ಎಸ್‌ಟಿ ಹಾಗೂ ಒಬಿಸಿ ಮೀಸಲಾತಿ ತೆಗೆದು ಮುಸ್ಲಿಮರಿಗೆ ನೀಡಲು ಸಂಚು ರೂಪಿಸಲಾಗಿದೆ. ಆದರೆ, ನಾನು ಕಾಂಗ್ರೆಸ್ ನಾಯಕರ ರಾಜಕಾರಣದ ಸಂಚು ಫಲಿಸಲು ನಾನು ಬಿಡುವುದಿಲ್ಲ. ಮುಸ್ಲಿಮರನ್ನು ಓಲೈಸುತ್ತಾ ಪರಿಶಿಷ್ಟ ಜಾತಿ, ಪಂಗಡ, ಒಬಿಸಿ ವಿರುದ್ಧ ಸಂಚು ಮಾಡುತ್ತಿದ್ದಾರೆ. ಮೀಸಲಾತಿ, ನಿಮ್ಮ ಹಕ್ಕು, ನಿಮ್ಮ ಅಧಿಕಾರವನ್ನು ಕಿತ್ತುಕೊಳ್ಳಲು ಈ ನಿಮ್ಮ ನರೇಂದ್ರ ಮೋದಿ ಬಿಡುವುದಿಲ್ಲ. ನಿಮ್ಮ ರಕ್ಷಣೆಗೋಸ್ಕರ ಮೋದಿ ಯಾವ ಹಂತಕ್ಕೆ ಬೇಕಾದರೂ ಹೋಗುತ್ತಾರೆ. ಈ ವೇಳೆ ನಾನು ನಿಮಗೆ ಮಾತು ಕೊಡುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾನ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಬಾಗಲಕೋಟೆ ಕಾರ್ಯಕ್ರಮ

ಈ ಚುನಾವಣೆಯು ವಿಕಸಿತ ಭಾರತಕ್ಕೆ ನಡೆಯುತ್ತಿದೆ. ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಭಾರತವು ವಿಶ್ವದ ಮೂರನೇ ಅತಿದೊಡ್ಡ ದೇಶ ಆಗುತ್ತದೆ. ನಿಮ್ಮ ಒಂದು ವೋಟು ನಮಗೆ ಈ ಶಕ್ತಿಯನ್ನು ತಂದು ಕೊಡಲಿದೆ.

ಮೋಜು ಮಸ್ತಿ ಮಾಡುವವರಿಂದ, ರಜೆ ಹಾಕುವವರಿಂದ ದೇಶದ ಅಭಿವೃದ್ಧಿ ಅಸಾಧ್ಯ. ದೇಶದ ಪ್ರಗತಿಗಾಗಿ ಗುರಿ ಬೇಕು. ಅದಕ್ಕಾಗಿ ಕಷ್ಟಪಟ್ಟು ದುಡಿಯಬೇಕು. ನಿಮ್ಮ ಮೋದಿ ಈ ಕೆಲಸವನ್ನು ಮಾಡಲಿದ್ದಾರೆ. 24/7 ಮಾದರಿಯಲ್ಲಿ ನಿಮ್ಮ ಸೇವೆಗಾಗಿ ನನ್ನ ಜೀವನವನ್ನು ಮುಡಿಪಾಗಿಟ್ಟಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಾಂಗ್ರೆಸ್‌ ಈಗ ಏನು ಮಾಡುತ್ತಿದೆ. ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಗಾಲು ಹಾಕುತ್ತಿರುವುದು ಮಾತ್ರವಲ್ಲದೆ, ದೇಶವನ್ನು ಲೂಟಿ ಹೊಡೆಯುವ ಕೆಲಸಕ್ಕೆ ಕೈಹಾಕಿದೆ. ಇಂಥ ಕಾಂಗ್ರೆಸ್‌ ಸರ್ಕಾರ ನಿಮಗೆ ಬೇಕಾ? ಇದಲ್ಲದೆ ಕಾಂಗ್ರೆಸ್‌ ಹೈಕಮಾಂಡ್‌ನವರು ಕರ್ನಾಟಕ ಕಾಂಗ್ರೆಸ್‌ ಸರ್ಕಾರವನ್ನು ಎಟಿಎಂ ಮಾಡಿಕೊಂಡಿದ್ದಾರೆ. ಹೀಗಾಗಿ ಕರ್ನಾಟಕ ಕಾಂಗ್ರೆಸ್‌ ನಾಯಕರು ಲೂಟಿ ಗ್ಯಾಂಗ್‌ ಅನ್ನು ಮಾಡಿಕೊಂಡಿದ್ದಾರೆ. ಭ್ರಷ್ಟಾಚಾರಕ್ಕೆ ಕಾಂಗ್ರೆಸ್‌ ಹಾಗೂ ಆ ಪಕ್ಷದ ನಾಯಕರೇ ಮೂಲ ಕಾರಣರಾಗಿದ್ದಾರೆ. ಇಂಥವರಿಗೆ ದೇಶದ ಜವಾಬ್ದಾರಿಯನ್ನು ಕೊಡುತ್ತೀರಾ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಕಟ್ಟಕಡೆಯ ಹಳ್ಳಿಗಳಿಗೆ ವಿದ್ಯುತ್‌ ಸೌಕರ್ಯವನ್ನು ಒದಗಿಸಿಲ್ಲ. ಕೋಟ್ಯಂತರ ಜನ ಮೂಲ ಸೌಕರ್ಯದಿಂದ ವಂಚಿತರಾಗಿದ್ದರು. ಆದರೆ, ಹಳ್ಳಿ ಹಳ್ಳಿಗಳಿಗೆ ವಿದ್ಯುತ್‌ ಸಂಪರ್ಕ ಕೊಡಿಸಿದ್ದು, ನಮ್ಮ ಸರ್ಕಾರದಿಂದ ಎಂಬುದು ಮುಖ್ಯ. ಇನ್ನು ನೀರಿನ ಸಮಸ್ಯೆಯನ್ನು ಬಗೆಹರಿಸಲು ಜಲಜೀವನ್‌ ಮಿಷನ್‌ ಅನ್ನು ಪ್ರಾರಂಭ ಮಾಡಿದ್ದೇವೆ. ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಶೇ. 17ರಷ್ಟು ಮಂದಿಗೆ ಮಾತ್ರ ನೀರಿನ ಸಂಪರ್ಕ ಇತ್ತು. ಇಂದು ನಮ್ಮ ಆಡಳಿತದಲ್ಲಿ ಶೇ. 75ರಷ್ಟು ನೀರಿನ ಸಂಪರ್ಕ ಇದೆ. ಇನ್ನು ಕರ್ನಾಟಕದಲ್ಲಿ ಕುಡಿಯುವ ನೀರಿಲ್ಲದೆ ಜನರು ಕಷ್ಟಪಡುತ್ತಿದ್ದಾರೆ. ಕಾಂಗ್ರೆಸ್‌ನ ಭ್ರಷ್ಟಾಚಾರದ ಪಾಪಕ್ಕೆ ಶಿಕ್ಷೆ ಕೊಡಬೇಕೇ? ಬೇಡವೇ? ಹೀಗಾಗಿ ನೀವು ಈ ಮೇ 7ರಂದು ಮತ ಚಲಾವಣೆ ಮಾಡಿ ಬಿಜೆಪಿ ಜಯಕ್ಕೆ ಕಾರಣರಾಗಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಬಾದಾಮಿ, ಐಹೊಳೆ, ಪಟ್ಟದಕಲ್ಲು ಪಾರಂಪರಿಕ ಸ್ಥಳಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ವಿಜಯಪುರದಲ್ಲೂ ಏರ್ಪೋರ್ಟ್‌ ನಿರ್ಮಾಣ ಮಾಡಲು ನಮ್ಮ ಸರ್ಕಾರ ಸಿದ್ಧವಾಗಿದೆ. ಇಳಕಲ್‌ ಸೀರೆಗಾಗಿ ಒಂದು ಗ್ರಾಮ ಒಂದು ಉತ್ಪನ್ನ ಎಂದು ಮಾಡಿದೆವು. ತಳವಾರ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಿದ್ದು ನಮ್ಮ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಾಂಗ್ರೆಸ್‌ನಿಂದ ತುಷ್ಟೀಕರಣ ರಾಜಕಾರಣ

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಏನಾಯಿತು? ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳಿಗೆ ಏನಾಯಿತು? ನೇಹಾ ಮೇಲೆ ಒಂದಾದ ಮೇಲೆ ಒಂದರಂತೆ ಚಾಕುವಿನಿಂದ ಚುಚ್ಚಿ ಚುಚ್ಚಿ ಕೊಂದಿದ್ದಾನೆ. ಆದರೆ, ಕಾಂಗ್ರೆಸ್‌ ಏನು ಕ್ರಮ ಕೈಗೊಂಡಿದೆ. ತುಷ್ಟೀಕರಣಕ್ಕಾಗಿ ಇದು ಯಾವ ಹಂತಕ್ಕೆ ಬೇಕಾದರೂ ಹೋಗಲಿದೆ. ಇನ್ನು ಬೆಂಗಳೂರಿನಲ್ಲಿ ಹನುಮಾನ್‌ ಚಾಲೀಸಾವನ್ನು ಪಠಣ ಮಾಡಿದರೆ ಗಲಾಟೆ ಮಾಡುತ್ತಾರೆ, ಹಲ್ಲೆ ನಡೆಸುತ್ತಾರೆ. ಇದರ ಬಗ್ಗೆ ಏನು ಕ್ರಮ ಕೈಗೊಂಡರು? ಅಲ್ಲದೆ, ಬೆಂಗಳೂರು ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಬಗ್ಗೆ ಕಾಂಗ್ರೆಸ್‌ ಸರ್ಕಾರ ಹೇಳಿದ್ದು ಏನು? ಸಿಲಿಂಡರ್‌ ಬ್ಲಾಸ್ಟ್‌ ಎಂದು ಹೇಳಿಬಿಟ್ಟರು. ಕೊನೆಗೆ ಬ್ಯುಸಿನೆಸ್‌ ಶತ್ರುಗಳು ಮಾಡಿದ್ದು ಎಂದು ಹೇಳಿದರು. ಇದು ಕಾಂಗ್ರೆಸ್‌ನ ಆಡಳಿತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ಶ್ರೀನಿವಾಸ್‌ ಪ್ರಸಾದ್‌ ನಿಧನಕ್ಕೆ ಕಂಬನಿ

ಇಂದು ಬೆಳಗ್ಗೆ ಬಿಜೆಪಿ ನಾಯಕ ಹಾಗೂ ಸಾಮಾಜಿಕ ನ್ಯಾಯದ ಸಿಪಾಯಿ ವಿ. ಶ್ರೀನಿವಾಸ್‌ ಪ್ರಸಾದ್ ನಿಧನ ಸುದ್ದಿ ಕೇಳಿ ನನಗೆ ನೋವಾಯಿತು. ಚಾಮರಾಜನಗರದ ಸಂಸದರಾಗಿದ್ದ ಶ್ರೀನಿವಾಸ್‌ ಪ್ರಸಾದ್‌ ಜನರ ನಾಯಕನಾಗಿ ರಾಜಕೀಯದಲ್ಲಿ ಬೆಳೆದು ಹಲವು ದಶಕಗಳಿಂದ ಸಾಮಾಜಿಕ ಜೀವನದಲ್ಲಿದ್ದರು. ಬಡವರು, ಶೋಷಿತರು ಹಾಗೂ ವಂಚಿತರ ಸೇವೆಯಲ್ಲಿ ತೊಡಗಿಕೊಂಡಿದ್ದರು. ಕೇಂದ್ರ ಹಾಗೂ ರಾಜ್ಯದಲ್ಲಿ ಮಂತ್ರಿಯೂ ಆಗಿ ಜನಸೇವೆ ಮಾಡಿದ್ದನ್ನು ಯಾವಾಗಲೂ ಮರೆಯಲ್ಲ. ಶ್ರೀನಿವಾಸ್ ಪ್ರಸಾದ್ ಆತ್ಮಕ್ಕೆ ಸದ್ಗತಿ ಸಿಗಬೇಕು, ಪ್ರಸಾದ್ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಸಿಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಾರ್ಥಿಸಿದರು.

ಇದನ್ನೂ ಓದಿ: Viral Video: ನಮಗೆ ಹಿಂದೂ ಮತಗಳ ಅಗತ್ಯವಿಲ್ಲ: ಕಾಂಗ್ರೆಸ್‌ ನಾಯಕನ ವಿಡಿಯೋ ವೈರಲ್‌

ಬಾಲಕಿಯ ಫೋಟೊ ತೆಗೆಯಲು ಹೇಳಿದ ಮೋದಿ!

ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ತಾಯಿಯ ಫೋಟೊವನ್ನು ಬಾಲಕಿಯೊಬ್ಬಳು ಪ್ರದರ್ಶನ ಮಾಡುತ್ತಿದ್ದಳು. ಇದನ್ನು ಭಾಷಣದ ಮಧ್ಯೆಯೇ ಗಮನಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎಸ್‌ಪಿಜಿ ಕಮಾಂಡೋಗಳಿಗೆ ಸೂಚಿಸಿ, ಆ ದೃಶ್ಯದ ಒಂದು ಫೋಟೊವನ್ನು ತೆಗೆದಿಟ್ಟುಕೊಳ್ಳಲು ಹೇಳಿದರು.

Continue Reading
Advertisement
T20 World Cup 2024
ಕ್ರೀಡೆ4 mins ago

T20 World Cup 2024: ವಿಶ್ವಕಪ್​ಗೆ ಪಂತ್​ ಮೊದಲ ಆಯ್ಕೆಯ ಕೀಪರ್​​ ಅಲ್ಲ; ಮತ್ಯಾರು?

S M Krishna
ಕರ್ನಾಟಕ17 mins ago

S M Krishna: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ವೈರಲ್ ನ್ಯೂಸ್22 mins ago

Viral Video: ಪಾಪಿ ಮಗನಿಂದ ತಂದೆ ಮೇಲೆ ಇದೆಂಥಾ ಕ್ರೌರ್ಯ! ವಿಡಿಯೋ ನೋಡಿ

facebook whatsapp instagram
ಪ್ರಮುಖ ಸುದ್ದಿ24 mins ago

WhatsApp Exit India: ವಾಟ್ಸ್ಯಾಪ್‌ ಜೊತೆಗೇ ಭಾರತ ತೊರೆಯಲಿವೆಯೇ ಫೇಸ್‌ಬುಕ್‌, ಇನ್‌ಸ್ಟಾಗ್ರಾಂ?

Dubai Airport
EXPLAINER34 mins ago

Dubai Airport : ದುಬೈನಲ್ಲಿ ನಿರ್ಮಾಣವಾಗುತ್ತಿದೆ ವಿಶ್ವದ ಅತಿ ದೊಡ್ಡ ಏರ್​ಪೋರ್ಟ್​​; ಏನಿದರ ವಿಶೇಷತೆ? ಎಲ್ಲ ಮಾಹಿತಿ ಇಲ್ಲಿದೆ

IPL 2024 Points Table
ಕ್ರೀಡೆ45 mins ago

IPL 2024 Points Table: ಚೆನ್ನೈ ಗೆಲುವಿನಿಂದ ಅಂಕಪಟ್ಟಿಯಲ್ಲಿ 3 ತಂಡಗಳಿಗೆ ಭಾರೀ ಹೊಡೆತ

Minister Lakshmi hebbalkar Latest statement in Belagavi
ಬೆಳಗಾವಿ1 hour ago

Lakshmi Hebbalkar: ಪ್ರಜ್ವಲ್ ಹಗರಣದ ಬಗ್ಗೆ ಬಿಜೆಪಿ ನಾಯಕರ ಮೌನವೇಕೆ? ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ

Sahil Khan Travelled 1,800 km In 4 Days To Avoid Arrest
ಬಾಲಿವುಡ್1 hour ago

Sahil Khan: ಪೊಲೀಸರಿಂದ ತಪ್ಪಿಸಿಕೊಳ್ಳಲು 1,800 ಕಿ.ಮೀ ಪ್ರಯಾಣಿಸಿದ್ದ ನಟ ಸಾಹಿಲ್ ಖಾನ್!

Hassan Pen Drive Case Deve Gowda refuses to expel Prajwal and What is the reason
ಕರ್ನಾಟಕ1 hour ago

Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

Pro-Khalistan slogan
Latest1 hour ago

Pro-Khalistan slogan : ಕೆನಡಾ ಪ್ರಧಾನಿ ಟ್ರುಡೊ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20243 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ11 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202423 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌