ವಿಜಯನಗರ: ಇಲ್ಲಿನ ವಿಶ್ವವಿಖ್ಯಾತ ದಕ್ಷಿಣ ಕಾಶಿ ಹಂಪಿಯ (Hampi) ವಿಜಯ ವಿಠ್ಠಲ ದೇವಸ್ಥಾನದ ಸ್ಮಾರಕದ ಬಳಿ ಏಕಾಏಕಿ ಬೆಂಕಿ (Fire Accident) ಕಾಣಿಸಿಕೊಂಡು ಪ್ರವಾಸಿಗರು ಆತಂಕಕ್ಕೆ ಒಳಗಾಗಿದ್ದರು. ಸ್ಮಾರಕದ ಸುತ್ತಮುತ್ತ ಒಣಹುಲ್ಲು ಇರುವುದರಿಂದ ತಾಪಮಾನ ಹೆಚ್ಚಳವಾಗಿದೆ. ಈ ವೇಳೆ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡಿದೆಯೇ ಅಥವಾ ಯಾರಾದರೂ ಬೆಂಕಿ ಹಾಕಿದ್ದಾರೆಯೇ ಎಂಬ ಸಂಶಯ ಉಂಟಾಗಿದೆ.
ಘಟನೆಯಲ್ಲಿ ಯಾವುದೇ ಸ್ಮಾರಕಕ್ಕೆ ಹಾನಿಯಾಗಿಲ್ಲ. ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿಯುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಂಪಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.