Miscreants set fire to stack of paddy straw stored at Koppal gaushala and Forest fire breaks out in Bidar Fire Accident: ಕೊಪ್ಪಳ ಗೋಶಾಲೆಯಲ್ಲಿದ್ದ ಹುಲ್ಲಿನ ಬಣವೆಗೆ ಬೆಂಕಿ ಹಾಕಿದ ದುಷ್ಕರ್ಮಿಗಳು; ಬೀದರ್‌ನಲ್ಲಿ ಹೊತ್ತಿ ಉರಿದ ಅರಣ್ಯ Vistara News
Connect with us

ಕರ್ನಾಟಕ

Fire Accident: ಕೊಪ್ಪಳ ಗೋಶಾಲೆಯಲ್ಲಿದ್ದ ಹುಲ್ಲಿನ ಬಣವೆಗೆ ಬೆಂಕಿ ಹಾಕಿದ ದುಷ್ಕರ್ಮಿಗಳು; ಬೀದರ್‌ನಲ್ಲಿ ಹೊತ್ತಿ ಉರಿದ ಅರಣ್ಯ

Fire Accident: ಗೋವಿಗಾಗಿ ಸಂಗ್ರಹಿಸಿದ್ದ ಭತ್ತದ ಹುಲ್ಲಿನ ಬಣವೆಗೆ ದುಷ್ಕರ್ಮಿಗಳು ಬೆಂಕಿ ಹಾಕಿರುವ ಘಟನೆ ಕೊಪ್ಪಳದಲ್ಲಿ ನಡೆದಿದ್ದರೆ, ಬೀದರ್‌ನಲ್ಲಿ ಆಕಸ್ಮಿಕ ಅಗ್ನಿ ಅವಘಡದಿಂದಾಗಿ ಕ್ಷಣಾರ್ಧದಲ್ಲೇ ಮೀಸಲು ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದೆ

VISTARANEWS.COM


on

Miscreants set fire to stack of paddy straw stored at Koppal gaushala and Forest fire breaks out in Bidar
Koo

ಬೀದರ್/ಕೊಪ್ಪಳ: ಗೋಶಾಲೆಗೆ ಸಂಗ್ರಹಿಸಿದ್ದ ಭತ್ತದ ಹುಲ್ಲಿನ ಬಣವೆಗೆ ದುಷ್ಕರ್ಮಿಗಳು ಬೆಂಕಿ (Fire Accident) ಹಾಕಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆರ್ಹಾಳ ಗ್ರಾಮದಲ್ಲಿ ನಡೆದಿದೆ. ಅಪಾರ ಪ್ರಮಾಣದ ಭತ್ತದ ಹುಲ್ಲು ಸುಟ್ಟು ಭಸ್ಮವಾಗಿದ್ದು, ಸುಮಾರು 10 ಎಕರೆಗಳಲ್ಲಿ ಬೆಳೆದಿದ್ದ ಭತ್ತದ ಹುಲ್ಲನ್ನು ಸಂಗ್ರಹಿಸಿದ್ದರು.

Miscreants set fire to stack of paddy straw stored at Koppal gaushala and Forest fire breaks out in Bidar
ಗೋಶಾಲೆಯಲ್ಲಿ ಸಂಗ್ರಹಿಸಿದ್ದ ಭತ್ತದ ಹುಲ್ಲು ಬೆಂಕಿಗಾಹುತಿ

ಭರತ ಭೂಮಿ ಸೇವಾ ಟ್ರಸ್ಟ್ ಹೇರೂರು ಇವರ ನೇತೃತ್ವದಲ್ಲಿ ಗೋಶಾಲೆ ನಡೆಯುತ್ತಿತ್ತು. ಗೋಸಂರಕ್ಷಣಾ ಕೇಂದ್ರ ಸ್ಥಾಪಿಸಿ ಸುಮಾರು 70ಕ್ಕೂ ಹೆಚ್ಚು ಆಕಳುಗಳ ರಕ್ಷಣೆ ಮಾಡಲಾಗಿತ್ತು. ಹುಲ್ಲು ಸುಟ್ಟು ಭಸ್ಮವಾಗಿದ್ದರಿಂದ ಮೇವಿಲ್ಲದೆ ಗೋವುಗಳು ಪರದಾಡಬೇಕಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಗೋಶಾಲೆ ಮಾಲೀಕರು ಆಗ್ರಹಿಸಿದ್ದಾರೆ.

ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಮೀಸಲು ಅರಣ್ಯ ಪ್ರದೇಶ

ಬೀದರ್‌ ತಾಲೂಕಿನ ಹೊನ್ನಿಕೇರಿ ಗ್ರಾಮದ ಬಳಿ ಇರುವ ಮೀಸಲು ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಏಕಾಏಕಿ‌ ಅರಣ್ಯ ಪ್ರದೇಶ ಹೊತ್ತಿ ಉರಿದಿದೆ. ಸುಮಾರು ಎರಡು ಎಕರೆಯಷ್ಟು ಪ್ರದೇಶದಲ್ಲಿ ಬೆಂಕಿ‌ ಜ್ವಾಲೆ ಹರಡಿದೆ.

Miscreants set fire to stack of paddy straw stored at Koppal gaushala and Forest fire breaks out in Bidar
ಮೀಸಲು ಅರಣ್ಯ ಪ್ರದೇಶದಲ್ಲಿ ಆಕಸ್ಮಿಕ ಬೆಂಕಿ ಅವಘಡ

ಇದನ್ನೂ ಓದಿ: kidney disease: ಕೊರೊನಾ ಕಾಣಿಸಿಕೊಂಡವರಲ್ಲಿ ಕಾಡುತ್ತಿದೆ ಕಿಡ್ನಿ ಸಮಸ್ಯೆ; ನಿರ್ಲಕ್ಷ್ಯ ಮಾಡಿದ್ರೆ ಅಪಾಯ ಗ್ಯಾರಂಟಿ

ವಿಷಯ ತಿಳಿದು ಸ್ಥಳಕ್ಕಾಗಿಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡಬೇಕಾಯಿತು. ಸೋಮವಾರ ಸಂಜೆ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕ ಬೆಂಕಿ ತಗಲಿತ್ತು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಫೇಸ್ ಬುಕ್ ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ವೈವಿಧ್ಯಮಯ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಟ್ವಿಟರ್ ಪೇಜ್ ಫಾಲೋ ಮಾಡಿ

ಕರ್ನಾಟಕ

MySugar Factory: ಮೈಶುಗರ್ ಕಾರ್ಖಾನೆಗೆ ಬಾಕಿ ಇರುವ 17.42 ಕೋಟಿ ರೂ. ಬಿಡುಗಡೆ ಮಾಡಿ: ದಿನೇಶ್‌ ಗೂಳಿಗೌಡ

Dinesh Gooligowda: ಮೈಶುಗರ್ ಕಾರ್ಖಾನೆಗೆ ಸರ್ಕಾರದಿಂದ 17.42 ಕೋಟಿ ರೂಪಾಯಿ ಬಾಕಿ ಅನುದಾನ ಬಿಡುಗಡೆಯಾಗಬೇಕಿದ್ದು, ಈ ಹಣವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ವಿಧಾನ ಪರಿಷತ್‌ ಸದಸ್ಯ ದಿನೇಶ್ ಗೂಳಿಗೌಡ ಅವರು ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.

VISTARANEWS.COM


on

Edited by

Release Rs 1742 crore dues to MySugar factory says Dinesh Gooligowda
Koo

ಬೆಂಗಳೂರು: ಮೈಸೂರು ಸಕ್ಕರೆ ಕಾರ್ಖಾನೆಯ (MySugar Factory) ಪುನಶ್ಚೇತನಕ್ಕೆ ಮಂಜೂರಾಗಿರುವ ಹಣದಲ್ಲಿ ಬಾಕಿ ಉಳಿಕೆಯಾಗಿರುವ 17.42 ಕೋಟಿ ರೂಪಾಯಿಯನ್ನು ಶೀಘ್ರವೇ ಬಿಡುಗಡೆ ಮಾಡಿ ಈ ಭಾಗದ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಅವರು ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರನ್ನು ಶುಕ್ರವಾರ (ಮಾ. 31) ಭೇಟಿ ಮಾಡಿ ಮನವಿ ಮಾಡಿದ್ದಾರೆ.

ಬರುವ ಜೂನ್‌ನಿಂದಲೇ ಮಂಡ್ಯ ಜಿಲ್ಲೆಯಲ್ಲಿ ಕಬ್ಬು ಅರೆಯುವ ಪ್ರಕ್ರಿಯೆ ಆರಂಭವಾಗಲಿದೆ. ಇದೇ ವೇಳೆ ಕಾರ್ಖಾನೆಯಲ್ಲಿ ಮುಂಚಿತವಾಗಿ ಹಣದ ಅವಶ್ಯಕತೆ ಇರುತ್ತದೆ. ರೈತರಿಗೆ ಮುಂಗಡ ಪಾವತಿ ಸೇರಿದಂತೆ ಕಬ್ಬು ಅರೆಯುವ ಸಂಬಂಧ ಅನೇಕ ಖರ್ಚು ವೆಚ್ಚಗಳು ಇರುತ್ತವೆ. ಆದರೆ, ಇಂತಹ ಸಂದರ್ಭದಲ್ಲಿ ಬರಬೇಕಾದ ಅನುದಾನವು ಬಿಡುಗಡೆಯಾಗದೇ ಹೋದರೆ ರೈತರಿಗೆ ಬಹಳವೇ ತೊಂದರೆಯಾಗಲಿದೆ. ಹೀಗಾಗಿ ಈ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ದಿನೇಶ್‌ ಗೂಳಿಗೌಡ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Karnataka Election: ಜೆಡಿಎಸ್‌, ಬಿಜೆಪಿಯ ತಲಾ ಒಂದು ವಿಕೆಟ್‌ ಪತನ: A.T. ರಾಮಸ್ವಾಮಿ, N.Y. ಗೋಪಾಲಕೃಷ್ಣ ರಾಜೀನಾಮೆ

ಅಲ್ಲದೆ, ಜಿಲ್ಲೆಯಲ್ಲಿ 6112 ಎಕರೆ ಪ್ರದೇಶದಲ್ಲಿ 305600 ಮೆಟ್ರಿಕ್ ಟನ್ ಕಬ್ಬು ಬೆಳೆದ 3395 ರೈತರು 2023 ಮತ್ತು 24ನೇ ಸಾಲಿಗೆ ಕಬ್ಬು ಸರಬರಾಜು ಮಾಡಲು ಈಗಾಗಲೇ ನೋಂದಣಿ ಮಾಡಿಸಿಕೊಂಡಿದ್ದಾರೆ. ಇವರೆಲ್ಲರೂ ಜೂನ್‌ನಿಂದಲೇ ಕಬ್ಬು ಪೂರೈಕೆಯನ್ನು ಪ್ರಾರಂಭಿಸಬಹುದಾಗಿದ್ದು, ಇವರಿಗೆ ಆ ಸಮಯದಲ್ಲಿ ಯಾವುದೇ ತೊಂದರೆಯಾಗದಂತೆ ಹಣದ ಪಾವತಿಯಾಗಬೇಕು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಬಾಕಿ ಇರುವ ಅನುದಾನ ಬಿಡುಗಡೆಯಾಗಬೇಕಿದೆ ಎಂದು ದಿನೇಶ್‌ ಗೂಳಿಗೌಡ ಅವರು ಪತ್ರದ ಮೂಲಕ ಸಮಸ್ಯೆಗಳ ಬಗ್ಗೆ ವಿವರಣೆ ನೀಡಿದ್ದಾರೆ.

Release Rs 1742 crore dues to MySugar factory says Dinesh Gooligowda
ಹಣಕಾಸು ಇಲಾಖೆಗೆ ಪತ್ರ ಬರೆದಿರುವ ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ

ಮನವಿ ಪತ್ರದಲ್ಲೇನಿದೆ?

ಮಂಡ್ಯ ಜಿಲ್ಲೆಯ ಜನತೆಯ, ರೈತರ ಜೀವನಾಡಿಯಾಗಿರುವ ಮೈಸೂರು ಸಕ್ಕರೆ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಜೂನ್‌ ತಿಂಗಳಿನಲ್ಲೀಯೇ ಕಬ್ಬು ಅರೆಯುವ ಕೆಲಸವನ್ನು ಪ್ರಾರಂಭಿಸುವ ಗುರಿ ಹೊಂದಲಾಗಿದೆ. ಈ ಸಾಲಿನಲ್ಲಿ ಒಟ್ಟಾರೆ ಸುಮಾರು 6 ಲಕ್ಷ ಮೆಟ್ರಿಕ್‌ ಟನ್‌ ಕಬ್ಬು ನುರಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಈ ಫೆಬ್ರವರಿ, ಮಾರ್ಚ್‌ ಎರಡು ತಿಂಗಳಲ್ಲಿ 3 ಲಕ್ಷ ಟನ್‌ ಕಬ್ಬು ಸರಬರಾಜು ಮಾಡುವುದಾಗಿ ರೈತರು ಈಗಾಗಲೇ ಕಾರ್ಖಾನೆಯೊಟ್ಟಿಗೆ ಒಪ್ಪಂದ ಮಾಡಿಕೊಂಡಿದ್ದಾರೆ. ಕಾರ್ಖಾನೆಯಲ್ಲಿ ಯಂತ್ರಗಳ ರಿಪೇರಿ, ಹಾಗೂ ಕಬ್ಬು ನುರಿಸುವ ತಯಾರಿ ಕಾರ್ಯಕ್ಕೆ ಹಣಕಾಸಿನ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಈಗ ಸರ್ಕಾರದ ಸಹಕಾರ ಬಹಳ ಮುಖ್ಯವಾಗುತ್ತದೆ.

ಸ್ಥಗಿತಗೊಂಡಿರುವ ಮೈಶುಗರ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಸರ್ಕಾರವು ನಿರ್ಧರಿಸಿ, ಮುಂದಿನ ಎರಡು ವರ್ಷಗಳ ಕಾಲ ಪ್ರಾಯೋಗಿಕವಾಗಿ ಸರ್ಕಾರದ ವತಿಯಿಂದಲೇ ಕಾರ್ಖಾನೆಯನ್ನು ನಡೆಸಲಾಗುವುದು. ಕಾರ್ಖಾನೆಯ ಯಂತ್ರೋಪಕರಣ ದುರಸ್ತಿಗಾಗಿ 50 ಕೋಟಿ ರೂ.ಗಳನ್ನು ಒದಗಿಸುವುದಲ್ಲದೆ, ಹಣಕಾಸು ಸಂಸ್ಥೆಗಳಿಂದ ದುಡಿಯುವ ಬಂಡವಾಳವನ್ನು ಪಡೆಯಲು ವ್ಯವಸ್ಥೆ ಮಾಡಲಾಗುವುದು ಎಂದು 2022-23ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಾಗಿತ್ತು. ಅದರಂತೆ ಯಂತ್ರೋಪಕರಣಗಳ ದುರಸ್ತಿ ಮತ್ತು ಓವ‌ರ್-ಹಾಲಿಂಗ್ ಕೆಲಸಗಳಿಗೆ, ಸಾಮಗ್ರಿ ಖರೀದಿ ಮತ್ತು ಗುತ್ತಿಗೆ ಕೆಲಸಗಳನ್ನು ಕೈಗೊಳ್ಳಲು, ಕಬ್ಬು ಕಟಾವು ಮಾಡುವ ಮೇಸ್ತ್ರಿಗಳಿಗೆ ಮುಂಗಡ ಹಣ ಪಾವತಿಸಲು, ನೌಕರರಿಗೆ ಸ್ವಯಂ ನಿವೃತ್ತಿ ಸೌಲಭ್ಯ ಪಾವತಿಸುವುದಕ್ಕಾಗಿ 32.58 ಕೋಟಿ ರೂ. ಅನುದಾನವನ್ನು ಇದುವರೆಗೆ ಬಿಡುಗಡೆಗೊಳಿಸಲಾಗಿದೆ. ಬಾಕಿ ಉಳಿದಿರುವ 17.42 ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸುವ ಕ್ರಮವಹಿಸಲಾಗುತ್ತಿದೆ ಎಂದು ಹೇಳಲಾಗಿತ್ತು.

ಇದನ್ನೂ ಓದಿ: Fire tragedy : ಹೊಸಕೋಟೆಯಲ್ಲಿ ಭೀಕರ ದುರಂತ; ಗ್ಯಾಸ್‌ ಸಿಲಿಂಡರ್‌ ಲೀಕ್‌ ಆಗಿ 7 ಕಾರ್ಮಿಕರ ದಾರುಣ ಸಾವು

ಆದ್ದರಿಂದ ಈಗಾಗಲೇ ಸರ್ಕಾರ ನೀಡಿ ಬಜೆಟ್‌ನಲ್ಲಿ ಘೋಷಿಸಿದ್ದ 50 ಕೋಟಿ ರೂಪಾಯಿಯಲ್ಲಿ ಬಾಕಿ ಇರುವ 17.42 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿಕೊಡಬೇಕು ಎಂದು ಮಂಡ್ಯ ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಅವರ ಪರವಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದು ದಿನೇಶ್ ಗೂಳಿಗೌಡ ಅವರು ಪತ್ರದ ಮೂಲಕ ಕೋರಿದ್ದಾರೆ.

Continue Reading

ಕರ್ನಾಟಕ

Mysterious death : ನಿರ್ಜನ ಪ್ರದೇಶದಲ್ಲಿ 8 ವರ್ಷದ ಬಾಲಕನ ಶವ ಪತ್ತೆ; ದುಷ್ಕರ್ಮಿಗಳು ಕೊಲೆ ಮಾಡಿ ಎಸೆದ ಶಂಕೆ

ಎಂಟು ವರ್ಷದ ಬಾಲಕನೊಬ್ಬನ ಶವ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ (Mysterious death). ಯಾರೋ ದುಷ್ಕರ್ಮಿಗಳು ಕೊಂದು ಎಸೆದಿರುವ ಶಂಕೆ ಇದೆ.

VISTARANEWS.COM


on

Edited by

Boys death
ಶವ ಪತ್ತೆಯಾಗಿರುವ ಪ್ರದೇಶ ಮತ್ತು ಮೃತ ಬಾಲಕ ನದೀಮ್
Koo

ಹುಬ್ಬಳ್ಳಿ: ಇಲ್ಲಿನ ದೊಡ್ಡ ಮನಿ ಕಾಲೊನಿಯ ಪಾಳು ಬಿದ್ದ ನಿರ್ಜನ ಜಾಗದಲ್ಲಿ ಎಂಟು ವರ್ಷದ ಬಾಲಕನೊಬ್ಬನ ಶವ ಪತ್ತೆಯಾಗಿದ್ದು, ಪರಿಸರದಲ್ಲಿ ಆತಂಕಕ್ಕೆ ಕಾರಣವಾಗಿದೆ. ಆತನನ್ನು ಕೊಲೆ ಮಾಡಿ ಎಸೆದಿರುವ (Mysterious death) ಸಂಶಯವಿದೆ.

ನದೀಮ್ ಹಸನಸಾಬ್ ಹುಬ್ಬಳ್ಳಿ (8) ಮೃತ ಬಾಲಕ. ಗುರುವಾರ ಸಂಜೆಯಿಂದ ನಾಪತ್ತೆಯಾಗಿದ್ದ ಈ ಹುಡುಗನಿಗಾಗಿ ಎಲ್ಲ ಕಡೆ ಹುಡುಕಾಟ ನಡೆದಿತ್ತು. ಪೋಷಕರು ಪೊಲೀಸರಿಗೂ ದೂರು ನೀಡಿದ್ದರು. ಆದರೆ, ಎಲ್ಲೂ ಆತ ಪತ್ತೆಯಾಗಿರಲಿಲ್ಲ.

ಶುಕ್ರವಾಗ ಕುರುಚಲು ಗಿಡಗಳಿರುವ ನಿರ್ಜನ ಪ್ರದೇಶದಲ್ಲಿ ಆತನ ಶವ ಪತ್ತೆಯಾಗಿದ್ದು, ಹಲವು ಸಂಶಯಗಳನ್ನು ಹುಟ್ಟುಹಾಕಿದೆ.

ಮೂರನೇ ತರಗತಿಯಲ್ಲಿ ಓದುತ್ತಿರುವ ಈ ಹುಡುಗನಿಗೆ ಶಾಲೆಗೆ ರಜೆ ಸಿಕ್ಕಿದೆ. ಹೀಗಾಗಿ ಆತ ಘಂಟಿಕೇರಿಯಲ್ಲಿರುವ ಅಜ್ಜಿ‌ ಮನೆಗೆ ಬಂದಿದ್ದ. ಸಂಜೆಯವರೆಗೂ ಆಟವಾಡುತ್ತಿದ್ದ ಆತ ಇದ್ದಕ್ಕಿದ್ದಂತೆಯೇ ನಾಪತ್ತೆಯಾಗಿದ್ದ. ಶುಕ್ರವಾರ ಮನೆಯಿಂದ ಸ್ವಲ್ಪ ದೂರದಲ್ಲಿರುವ ದೊಡ್ಡಮನಿ ಕಾಲನಿಯ ಪಾಳುಬಿದ್ದ ಜಾಗದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಎಸೆದಿರುವ ಶಂಕೆಯನ್ನು ವ್ಯಕ್ತಪಡಿಸಲಾಗುತ್ತಿದೆಯಾದರೂ ಇಷ್ಟು ಸಣ್ಣ ಹುಡುಗನನ್ನು ಯಾಕೆ ಕೊಲೆ ಮಾಡಿದರು ಎಂಬ ಸಂಶಯವಿದೆ. ಕುಟುಂಬದ ವಿವರಗಳು, ಈ ಭಾಗದಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದು, ಹಂತಕರನ್ನು ಪತ್ತೆ ಹಚ್ಚುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ʼಕಾಂತಾರ’ ಚಿತ್ರದ ದೃಶ್ಯ ಕಳಿಸಿ ಕೊಲೆ ಬೆದರಿಕೆ! ದೂರು ದಾಖಲು

ಬೆಂಗಳೂರು: ʼಕಾಂತಾರʼ ಚಲನಚಿತ್ರದ ದೃಶ್ಯವೊಂದು ಕೊಲೆ ಬೆದರಿಕೆಗೆ ಬಳಕೆಯಾಗಿರುವ ವಿಲಕ್ಷಣ ಘಟನೆ ನಡೆದಿದೆ. ಜಮೀನು ವ್ಯಾಜ್ಯ ಸಂಬಂಧ ಹಿರಿಯ ನಾಗರಿಕರೊಬ್ಬರಿಗೆ ಹೀಗೆ ಕೊಲೆ ಬೆದರಿಕೆ ಹಾಕಲಾಗಿದೆ.

ಕುಣಿಗಲ್‌ನಲ್ಲಿ ನರಸಿಂಹಮೂರ್ತಿ ಎಂಬ ಹಿರಿಯ ನಾಗರಿಕರಿಗೆ ಶರತ್ ಕುಮಾರ್ ಎಂಬಾತ ಹೀಗೆ ಹತ್ಯೆ ಬೆದರಿಕೆ ಒಡ್ಡಿದ್ದಾನೆ. ಕುಣಿಗಲ್‌ನಲ್ಲಿ ಪತ್ನಿ ಹೆಸರಿನಲ್ಲಿ ನರಸಿಂಹ ಮೂರ್ತಿ ಎರಡು ಎಕರೆ ಜಮೀನು ಖರೀದಿ ಮಾಡಿದ್ದರು. ಈ ಜಮೀನಿನ ಕುರಿತು ಶರತ್‌ ಕುಮಾರ್‌ ಎಂಬಾತ ತಗಾದೆ ತೆಗೆದಿದ್ದ. ಜಮೀನಿಗೆ ಈತ ಅತಿಕ್ರಮ ಪ್ರವೇಶ ಮಾಡಿದ್ದಾನೆ ಎಂದು ಈ ಹಿಂದೆ ನರಸಿಂಹಮೂರ್ತಿ ದೂರು ನೀಡಿದ್ದರು. ಸದ್ಯ ಜಮೀನು ವ್ಯಾಜ್ಯ ನ್ಯಾಯಾಲಯದಲ್ಲಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಶರತ್ ಕುಮಾರ್ ತನಗೆ ಕೊಲೆ ಬೆದರಿಕೆ ಹಾಕುತ್ತಿದ್ದಾನೆ. ವಾಟ್ಸ್ಯಾಪ್ ಮೂಲಕ ʼಕಾಂತಾರʼ ಚಿತ್ರದ ದೃಶ್ಯಗಳನ್ನು ಕಳಿಸಿ ಇದೇ ರೀತಿ ಸಾಯ್ತೀಯ ಎಂದು ಬೆದರಿಕೆ ಹಾಕಿದ್ದಾನೆ ಎಂದು ನರಸಿಂಹಮೂರ್ತಿ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ಎಫ್‌ಐಆರ್‌ನಲ್ಲಿ ಕೂಡ ಉಲ್ಲೇಖಿಸಿದ್ದಾರೆ. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಕಿರುಕುಳ, ಕೊಲೆ ಬೆದರಿಕೆ ದೂರು ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ ಮಂಗಳೂರಿನ ಲಾಡ್ಜ್‌ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಮೃತರು ಮೈಸೂರಿನವರು

Continue Reading

ಕರ್ನಾಟಕ

Fire tragedy : ಹೊಸಕೋಟೆಯಲ್ಲಿ ಭೀಕರ ದುರಂತ; ಗ್ಯಾಸ್‌ ಸಿಲಿಂಡರ್‌ ಲೀಕ್‌ ಆಗಿ 7 ಕಾರ್ಮಿಕರ ದಾರುಣ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೇಡಹಳ್ಳಿಯಲ್ಲಿ ವಾರದ ಹಿಂದೆ ಸಂಭವಿಸಿದ ಗ್ಯಾಸ್‌ ಲೀಕೇಜ್‌ ಪ್ರಕರಣದಲ್ಲಿ ಗಾಯಗೊಂಡಿದ್ದವರು ದಿನಕ್ಕೊಬ್ಬರಂತೆ ಸಾಯುತ್ತಿದ್ದು, ಈಗ ಸಾವಿನ ಸಂಖ್ಯೆ ಏಳಕ್ಕೇರಿದೆ.

VISTARANEWS.COM


on

Edited by

Gas tragedy
ಹೊಸಕೋಟೆಯ ಮೇಡಹಳ್ಳಿಯಲ್ಲಿ ಗ್ಯಾಸ್‌ ಲೀಕೇಜ್‌ ನಡೆದ ಕೊಠಡಿಯ ದೃಶ್ಯ
Koo

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಕಳೆದ ಭಾನುವಾರ ಸಂಭವಿಸಿದ ಗ್ಯಾಸ್‌ ಸಿಲಿಂಡರ್‌ ಸೋರಿಕೆ (Fire tragedy) ಪ್ರಕರಣವೊಂದು ಏಳು ಮಂದಿಯ ಪ್ರಾಣವನ್ನೇ ಕಸಿದಿದೆ. ಸಾವನ್ನಪ್ಪಿದವರೆಲ್ಲರೂ ಉತ್ತರ ಪ್ರದೇಶ ಮತ್ತು ಬಿಹಾರ ಮೂಲದ ಕಾರ್ಮಿಕರಾಗಿರುವುದರಿಂದ ಆರು ದಿನಗಳ ಕಳೆದರೂ ಇದರ ಸ್ಪಷ್ಟ ಮಾಹಿತಿ ಹೊರಬಿದ್ದಿರಲಿಲ್ಲ.

ಹೊಸಕೋಟೆ ತಾಲೂಕಿನ ಮೇಡಹಳ್ಳಿಯಲ್ಲಿ ಕಳೆದ ಭಾನುವಾರ ಶೆಡ್‌ ಒಂದರಲ್ಲಿ ರಾತ್ರಿ ಅನಿಲ ಸೋರಿಕೆ ಆಗಿದ್ದು, ರಾತ್ರಿ ಯಾರೋ ಕರೆಂಟ್‌ ಹಾಕಿದಾಗ ಬೆಂಕಿ ಹತ್ತಿಕೊಂಡು ಎಂಟು ಮಂದಿಗೆ ಬೆಂಕಿಯ ಗಾಯಗಳಾಗಿದ್ದವು. ಆರಂಭಿಕ ಹಂತದಲ್ಲಿ ಇದೇನೂ ತುಂಬ ದೊಡ್ಡ ಅವಘಡದಂತೆ ಕಾಣಿಸಿರಲಿಲ್ಲ. ಆದರೆ, ದಿನ ಕಳೆದಂತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರು ಒಬ್ಬೊಬ್ಬರಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದ ಈಗ ಎಂಟು ಮಂದಿಯಲ್ಲಿ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಉತ್ತರ ಪ್ರದೇಶ ಮತ್ತು ಬಿಹಾರ ಮೂಲದ ಕಾರ್ಮಿಕರನ್ನು ಕರೆದುಕೊಂಡು ಬಂದು ಇಲ್ಲಿ ಕಾಮಗಾರಿಗಳಲ್ಲಿ ದುಡಿಸಿಕೊಳ್ಳಲಾಗುತ್ತಿತ್ತು. ಅವರಿಗೆ ಒಂದು ಶೆಡ್‌ನಲ್ಲಿ ವಾಸವಾಗಿರಲು ವ್ಯವಸ್ಥೆ ಮಾಡಲಾಗಿತ್ತು. ಕಳೆದ ಭಾನುವಾರ ರಾತ್ರಿಯೂ ಈ ಕಾರ್ಮಿಕರು ಮೇಡಹಳ್ಳಿಯ ಅಂತಹುದೇ ಒಂದು ಶೆಡ್‌ನಲ್ಲಿ ಮಲಗಿದ್ದರು. ಹೊರಗಡೆ ಊಟ ಮಾಡಿಕೊಂಡು ಬಂದು ಅವರು ಇಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆಗ ಯಾವುದೋ ಕಾರಣದಿಂದ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿತ್ತು.

ನಡುವೆ ರಾತ್ರಿ ಯಾರೋ ಲೈಟ್‌ ಆನ್‌ ಮಾಡಿದಾಗ ಸೋರಿಕೆಯಾದ ಅನಿಲದಿಂದಾಗಿ ಬೆಂಕಿ ಹತ್ತಿಕೊಂಡಿತ್ತು. ಇದರಿಂದ ಮಲಗಿದ್ದವರಿಗೆಲ್ಲ ಸುಟ್ಟ ಗಾಯಗಳಾಗಿತ್ತು. ಅವರನ್ನು ಕೂಡಲೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರಂಭದಲ್ಲಿ ಆರೋಗ್ಯವಾಗಿದ್ದಾರೆ ಎಂಬಂತೆ ಕಂಡುಬಂದ ಇವರ ದೇಹದ ಒಳಗೆ ಬೆಂದ ಗಾಯಗಳು ಘಾಸಿಗೊಳಿಸಿತ್ತು. ಹೀಗಾಗಿ ದಿನ ಕಳೆದಂತೆ ಒಬ್ಬೊಬ್ಬರೇ ಪ್ರಾಣ ಕಳೆದುಕೊಳ್ಳಲಾರಂಭಿಸಿದ್ದಾರೆ. ಶುಕ್ರವಾರ ಏಳನೇ ಸಾವು ಸಂಭವಿಸಿದೆ.

ಅಮಿತ್, ಸನೋಜ್, ನೀರಜ್, ಸೋಮಯ್ ಗುಪ್ತಾ, ತಿಲಕ್ ರಾಮ್, ಲಕ್ಷ್ಮಣ್ ಮತ್ತು ಚಂದ್ರಭಾನ್ ಮೃತ ಕಾರ್ಮಿಕರು. ಈ ಘಟನೆಗೆ ಸಂಬಂಧಿಸಿ ಅರವಿಂದ ಗುಪ್ತಾ, ಮತ್ತು ಬಾಸ್ಕರ್ ಎಂಬುವವರ ವಿರುದ್ದ ಪ್ರಕರಣ ದಾಖಲಾಗಿದೆ. ಉತ್ತರ ಪ್ರದೇಶದಿಂದ, ಬಿಹಾರದಿಂದ ಕಾರ್ಮಿಕರನ್ನು ಕರೆತರುವ ಲೇಬರ್‌ ಕಂಟ್ರಾಕ್ಟರ್‌ಗಳು ಮತ್ತು ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಕೆಲಸಕ್ಕಾಗಿ ಕರೆತಂದು ಸೂಕ್ತ ಮೂಲ ಸೌಕರ್ಯ ನೀಡದ ಕಾರಣ ಅವಘಡ‌‌ ಸಂಭವಿಸಿದೆ. ಅನುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : Road Accident: ನೆಲಮಂಗಲದ ಬಳಿ ಲಾರಿ ಹರಿದು ಯುವತಿ ಸ್ಥಳದಲ್ಲೇ ಸಾವು

Continue Reading

ಕರ್ನಾಟಕ

Karnataka Election: ಜೆಡಿಎಸ್‌, ಬಿಜೆಪಿಯ ತಲಾ ಒಂದು ವಿಕೆಟ್‌ ಪತನ: A.T. ರಾಮಸ್ವಾಮಿ, N.Y. ಗೋಪಾಲಕೃಷ್ಣ ರಾಜೀನಾಮೆ

ಅನೇಕ ವರ್ಷ ಕಾಂಗ್ರೆಸ್‌ನಲ್ಲಿದ್ದ ಗೋಪಾಲಕೃಷ್ಣ ಮತ್ತೆ ಅದೇ ಪಕ್ಷಕ್ಕೆ ತೆರಳಬಹುದು ಎನ್ನಲಾಗಿದ್ದು, ಎ.ಟಿ. ರಾಮಸ್ವಾಮಿ ಬಿಜೆಪಿ ಸೇರುವ ಸಾಧ್ಯತೆಯಿದೆ.

VISTARANEWS.COM


on

Edited by

karnataka election AT Ramaswamy and NY Gopalakrishna resigns
Koo

ಬೆಂಗಳೂರು: ರಾಜ್ಯ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷದ ಇಬ್ಬರು ಶಾಸಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು, ಒಬ್ಬರು ಬಿಜೆಪಿಗೆ, ಮತ್ತೊಬ್ಬರು ಕಾಂಗ್ರೆಸ್‌ ಸೇರ್ಪಡೆಯಾಗುವ ಸಾಧ್ಯತೆಯಿದೆ.

ಅರಕಲಗೂಡು ಜೆಡಿಎಸ್‌ ಶಾಸಕ ಹಾಗೂ ಮಾಜಿ ಸಚಿವ ಎ.ಟಿ. ರಾಮಸ್ವಾಮಿ ಬೆಂಗಳೂರಿನಲ್ಲಿ ವಿಧಾನಸಭೆ ಕಾರ್ಯದರ್ಶಿ ಮೂಲಕ ಸ್ಪೀಕರ್‌ಗೆ ರಾಜೀನಾಮೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎ.ಟಿ. ರಾಮಸ್ವಾಮಿ, ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಸಂತೋಷದಿಂದ ರಾಜೀನಾಮೆ ನೀಡಿದ್ದೇನೆ. ಕಾರ್ಯದರ್ಶಿ ಗೆ ರಾಜೀನಾಮೆ ನೀಡಿದ್ದೇನೆ, ಸ್ಪೀಕರ್ ಬಂದ ಬಳಿಕ ಅಂಗೀಕಾರ ಮಾಡುವಂತೆ ಮನವಿ ಮಾಡುತ್ತೇನೆ ಎಂದರು.

ನಾನು ಇಂದೇ ಶಾಸಕರ ಭವನದ ಕೊಠಡಿ ಬಿಟ್ಟು ಕೊಡುತ್ತಿದ್ದೇನೆ. ಜೆಡಿಎಸ್ ನಾಯಕರು ನನಗೆ ಅವಕಾಶ ಮಾಡಿಕೊಟ್ಟಿದಕ್ಕೆ ಧನ್ಯವಾದಗಳನ್ನ ಸಲ್ಲಿಸುತ್ತೇನೆ. ನಾನು ಅಧಿಕಾರ ಆಸೆ ಪಡೆದವನಲ್ಲ. ನಾನು ವಿರೋಧ ಪಕ್ಷದವರ ಜತೆ ಸಹ ಉತ್ತಮವಾಗಿದ್ದೇನೆ. ನಾನು ರಾಜಕೀಯ ವಿರೋಧಿಗಳಿಗೂ ಒಳ್ಳೆಯದಾಗ್ಲಿ ಎಂದು ಭಾವಿಸುತ್ತೇನೆ. ಜನ ಸೇವೆಗಾಗಿ ಅವಕಾಶ ಸಿಕ್ಕಿತ್ತು.

ಮುಂದೆ ಅವಕಾಶ ಸಿಕ್ರೆ ಜನರ ಸೇವೆಗೆ ಮುಡುಪಾಗಿ ಇಡುತ್ತಿದ್ದೇನೆ. ಕರ್ನಾಟಕದ ರಾಜಕಾರಣ ಕೆಟ್ಟು ಹೋಗಿದೆ. ಒಲೈಕೆ ರಾಜಕಾರಣ ಜಾಸ್ತಿ ಆಗಿದೆ. ವಿಧಾನ ಸಭೆ ಮತ್ತು ಪರಿಷತ್ ಹಣದ ಸಭೆ ಆಗದೇ ಜನರ ಸಭೆ ಆಗಲಿ. ಜನರ ಹಿತಾಸಕ್ತಿಗೆ ಕೆಲಸ ಮಾಡಿಕೊಂಡು ಬಂದಿದ್ದೇನೆ. ನಾನು ಜೆಡಿಎಸ್ ಬಿಡಲಿಲ್ಲ. ಎಂದೂ ಸಹ ಸಹ ಜೆಡಿಎಸ್ ಬಿಡಲಿಲ್ಲ. ಎಲ್ಲ ಪಕ್ಷಗಳಲ್ಲೂ ಲೋಪದೋಷಗಳಿವೆ. ಮನಿ ಪವರ್ ಮುಂದೆ ಬಲಿಪಶು ಆದೆ. ಅಕ್ರಮಗಳನ್ನ ಎತ್ತಿ ಹಿಡಿದಿದ್ದೆ ಶಾಪ ಎನ್ನುವುದಾದರೆ ಅದನ್ನು ಚಾಲೆಂಜ್ ಆಗಿ ಸ್ವೀಕರಿಸುತ್ತೇನೆ ಎಂದರು.

ಯಾವ ಪಕ್ಷ ಸೇರುತ್ತೇನೆ ಎನ್ನುವ ಕುರಿತು ರಾಮಸ್ವಾಮಿ ಸ್ಪಷ್ಟವಾಗಿ ತಿಳಿಸಿಲ್ಲ. ಅವರು ಬಿಜೆಪಿ ಅಭ್ಯರ್ಥಿಯಾಗಿ ಅರಕಲಗೂಡಿನಿಂದ ಸ್ಪರ್ಧೆ ಮಾಡಬಹುದು ಎನ್ನಲಾಗುತ್ತಿದೆ.

ಗೋಪಾಲಕೃಷ್ಣ ರಾಜೀನಾಮೆ

ಕೂಡ್ಲಿಗಿ ಕ್ಷೇತ್ರದ ಬಿಜೆಪಿ ಶಾಸಕ ಎನ್‌.ವೈ. ಗೋಪಾಲಕೃಷ್ಣ ರಾಜೀನಾಮೆ ನೀಡಿದ್ದಾರೆ. ಶಿರಸಿಯಲ್ಲಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಮನೆಗೆ ತೆರಳಿ ರಾಜೀನಾಮೆ ನೀಡಿದ್ದಾರೆ. ವಯಸ್ಸಿನ ಕಾರಣಕ್ಕೆ ರಾಜಕೀಯ ನಿವೃತ್ತಿ ಪಡೆಯಲು ರಾಜೀನಾಮೆ ನೀಡುತ್ತೇನೆ ಎಂದು ಗೋಪಾಲಕೃಷ್ಣ ಹೇಳಿದ್ದಾರೆ.

ಆದರೆ ಅವರು ಮೊಳಕಾಲ್ಮೂರಿನಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಸಾಧ್ಯತೆಯಿದೆ. ಮೊಳಕಾಲ್ಮೂರು ಕ್ಷೇತ್ರದ ಟಿಕೆಟ್ ಕನ್ಪರ್ಮ್ ಮಾಡಿಕೊಂಡೇ ರಾಜೀನಾಮೆ ನೀಡಿದ್ದಾರೆ. ಹಿಂದಿನ ಎಲೆಕ್ಷನ್ ನಲ್ಲಿ ಟಿಕೆಟ್ ನಿಂದ ವಂಚಿತ ಆಗಿದ್ದ ಗೋಪಾಲಕೃಷ್ಣ, ಜನಾರ್ದನ ರೆಡ್ಡಿ, ಶ್ರೀರಾಮುಲು ಪ್ರಭಾವದಿಂದ ಕೂಡ್ಲಿಗಿಯಿಂದ ಸ್ಪರ್ಧಿಸಿದ್ದರು. ಮಾಜಿ ಸಚಿವ ಆರ್‌.ವಿ. ದೇಶಪಾಂಡೆ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Elections : ಕೂಡ್ಲಿಗಿ ಶಾಸಕ ಗೋಪಾಲಕೃಷ್ಣ ನಾಳೆ ಬಿಜೆಪಿಗೆ ರಾಜೀನಾಮೆ, ಕಾಂಗ್ರೆಸ್‌ಗೆ ಸೇರ್ಪಡೆ

Continue Reading
Advertisement
Navjot Sidhu to be released from Jail
ದೇಶ4 mins ago

ಏ.1ರಂದು ಜೈಲಿಂದ ಬಿಡುಗಡೆಯಾಗಲಿದ್ದಾರೆ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು; ಪತ್ನಿ ಟ್ವೀಟ್ ಬೆನ್ನಲ್ಲೇ ಸಿಧು ಟ್ವೀಟ್​

Release Rs 17.42 crore dues to MySugar factory says Dinesh Gooligowda
ಕರ್ನಾಟಕ4 mins ago

MySugar Factory: ಮೈಶುಗರ್ ಕಾರ್ಖಾನೆಗೆ ಬಾಕಿ ಇರುವ 17.42 ಕೋಟಿ ರೂ. ಬಿಡುಗಡೆ ಮಾಡಿ: ದಿನೇಶ್‌ ಗೂಳಿಗೌಡ

Modi With Kharge
ಅಂಕಣ9 mins ago

ಮೊಗಸಾಲೆ ಅಂಕಣ: ಮೋದಿ, ಖರ್ಗೆ ಹಣಾಹಣಿಗೆ ವೇದಿಕೆ ಸಜ್ಜು

ಆರೋಗ್ಯ10 mins ago

New Virus: ಕೊರೊನಾ ಬೆನ್ನಲ್ಲೇ ಪತ್ತೆಯಾಯ್ತು ಮತ್ತೊಂಡು ಡೆಡ್ಲಿ ವೈರಸ್!‌ ಭಾರತದಲ್ಲೇ ಮೊದಲ ಕೇಸ್‌!

ವೈರಲ್ ನ್ಯೂಸ್14 mins ago

Viral News : ನೂಡಲ್ಸ್‌ನಿಂದಲೇ ರಸ್ತೆ ಗುಂಡಿ ಮುಚ್ಚುವ ವ್ಯಕ್ತಿ! ವೈರಲ್‌ ಆಗ್ತಿದೆ ಈತನ ಕೆಲಸ

Boys death
ಕರ್ನಾಟಕ20 mins ago

Mysterious death : ನಿರ್ಜನ ಪ್ರದೇಶದಲ್ಲಿ 8 ವರ್ಷದ ಬಾಲಕನ ಶವ ಪತ್ತೆ; ದುಷ್ಕರ್ಮಿಗಳು ಕೊಲೆ ಮಾಡಿ ಎಸೆದ ಶಂಕೆ

6 die of suffocation in Delhi After Due to mosquito coil
ದೇಶ41 mins ago

ಒಂದೇ ಕುಟುಂಬದ 6 ಮಂದಿಯ ಪ್ರಾಣ ತೆಗೆದ ಸೊಳ್ಳೆ ಬತ್ತಿ; ಹಾಸಿಗೆ ಮೇಲೆ ಬಿದ್ದು ಭುಗಿಲೆದ್ದ ಹೊಗೆ, ಬೆಂಕಿ

Gas tragedy
ಕರ್ನಾಟಕ41 mins ago

Fire tragedy : ಹೊಸಕೋಟೆಯಲ್ಲಿ ಭೀಕರ ದುರಂತ; ಗ್ಯಾಸ್‌ ಸಿಲಿಂಡರ್‌ ಲೀಕ್‌ ಆಗಿ 7 ಕಾರ್ಮಿಕರ ದಾರುಣ ಸಾವು

Dakshina Kannada District 1st PUC result 2023 declared; here how to check
ಶಿಕ್ಷಣ1 hour ago

1st PUC Result 2023 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ

Producer K Manju from Padmanabha Nagar assembly constituency Entry into the political arena
ರಾಜಕೀಯ1 hour ago

K. Manju: ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಿಂದ ನಿರ್ಮಾಪಕ ಕೆ ಮಂಜು? ರಾಜಕೀಯ ಅಖಾಡಕ್ಕೆ ಎಂಟ್ರಿ?

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ2 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Sphoorti Salu
ಸುವಚನ10 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Village Accountant Recruitment
ಉದ್ಯೋಗ2 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್4 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ3 hours ago

SSLC Exam 2023: ಹಾಲ್ ಟಿಕೆಟ್ ಕೊಡದೆ ಕೈ ಎತ್ತಿದ ಶಾಲೆಗಳು; ವಿಸ್ತಾರ ಎಂಟ್ರಿಯಿಂದ ಪರೀಕ್ಷೆ ಬರೆದ ಮಕ್ಕಳು

ಕರ್ನಾಟಕ21 hours ago

Ram Navami 2023: ಕರುನಾಡಿನೆಲ್ಲೆಡೆ ಶ್ರೀರಾಮ ನಾಮಸ್ಮರಣೆ; ಕಲಬುರಗಿಯಲ್ಲಿ ಮಜ್ಜಿಗೆ, ಪಾನಕ ವಿತರಿಸಿದ ಮುಸ್ಲಿಮರು

Siddalinga Swamiji of Siddaganga Mutt saw a cow and came running away Video goes viral
ಕರ್ನಾಟಕ1 day ago

Sri Siddalinga Swamiji: ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಕಂಡು ಓಡೋಡಿ ಬಂದ ಹಸು; ವಿಡಿಯೊ ವೈರಲ್‌

amit shah convoy
ಕರ್ನಾಟಕ4 days ago

Amit Shah: ಬೆಂಗಳೂರಿನಲ್ಲಿ ಅಮಿತ್‌ ಶಾ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ; ಇಬ್ಬರು ವಿದ್ಯಾರ್ಥಿಗಳ ವಿಚಾರಣೆ

rapido bike vs auto-Bike taxi drivers go on strike against auto drivers harassment
ಕರ್ನಾಟಕ4 days ago

Rapido Bike Vs Auto: ಆಟೋ ಚಾಲಕರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಬೈಕ್‌ ಟ್ಯಾಕ್ಸಿ ಚಾಲಕರು; ರಕ್ಷಣೆಗಾಗಿ ಪ್ರತಿಭಟನೆ

ಕರ್ನಾಟಕ1 week ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ1 week ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ1 week ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ2 weeks ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ2 weeks ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

ಟ್ರೆಂಡಿಂಗ್‌

error: Content is protected !!