Site icon Vistara News

Fire Accident‌ | ಬಳ್ಳಾರಿಯ ಎಟಿಎಂನೊಳಗೆ ದಟ್ಟ ಹೊಗೆ; ವಿಜಯಪುರದ ಹೋಟೆಲ್‌ನಲ್ಲಿ ಆಕಸ್ಮಿಕ ಬೆಂಕಿ

ಬಳ್ಳಾರಿ/ವಿಜಯಪುರ: ಬಳ್ಳಾರಿಯ ಹಳೇ ಬಸ್‌ ನಿಲ್ದಾಣಕ್ಕೆ ಹೊಂದಿಕೊಂಡಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಆಕಸ್ಮಿಕ ಬೆಂಕಿ (Fire Accident‌) ಕಾಣಿಸಿಕೊಂಡು ಆತಂಕಕ್ಕೆ ಕಾರಣವಾಯಿತು.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ನಿಲ್ದಾಣದೊಳಗೆ ಇದ್ದ ಜನರೆಲ್ಲರೂ ಹೊರಗೆ ಓಡಿ ಬಂದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡಬೇಕಾಯಿತು. ಎಟಿಎಂಗೆ ಅಂಟಿಕೊಂಡಂತೆ ಇರುವ ಕೆನರಾ ಬ್ಯಾಂಕ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ತಿಳಿದು ಬಂದಿಲ್ಲ.

ಇತ್ತ ವಿಜಯಪುರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಕಿರಿಯಡ್ ಹೋಟೆಲ್‌ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಹೋಟೆಲ್‌ನ ಕೊನೆಯ ಮಹಡಿಯ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ‌ ನಂದಿಸಿದರು.

ಗೋಳಗುಮ್ಮಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್‌ ಸಾವು-ನೋವು ಸಂಭವಿಸಿಲ್ಲ.

ಇದನ್ನೂ ಓದಿ | 60 ಮಕ್ಕಳಾದರೂ ತೀರುತ್ತಿಲ್ಲ ಬಯಕೆ, ಬೇಕಂತೆ ಇನ್ನೊಂದು ಮದುವೆ!; ಪಾಕಿಸ್ತಾನಿ ವೈದ್ಯನ ‘ಮಕ್ಕಳ ಉತ್ಪಾದನೆ’

Exit mobile version