Site icon Vistara News

Fire Accident: ಶಿವಮೊಗ್ಗದ ಹ್ಯುಂಡೈ ಶೋರೂಂನಲ್ಲಿ ಬೆಂಕಿ; ಸುಟ್ಟು ಕರಕಲಾದ ಕಾರುಗಳು

fire accident

ಶಿವಮೊಗ್ಗ: ಹ್ಯುಂಡೈ ಕಾರು ಶೋರೂಂನಲ್ಲಿ ಬೆಂಕಿ ಅವಘಡ ಸಂಭವಿಸಿ, ದುಬಾರಿ ಬೆಲೆಯ ಕಾರುಗಳು ಸುಟ್ಟು ಕರಕಲಾದ ಘಟನೆ ನಗರದ ಶಂಕರಮಠ ರಸ್ತೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಶೋರೂಂ ದಗದಗನೇ ಹೊತ್ತಿ ಉರಿಯುತ್ತಿದ್ದರಿಂದ ಬೆಂಕಿ ನಂದಿಸಲು ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸ ಪಟ್ಟರು. ಬೆಂಕಿ ನಂದಿಸುತ್ತಿದ್ದ ವೇಳೆ ಬೆಂಕಿಯ ಕಿಡಿ ಸಿಡಿದು ಅಗ್ನಿಶಾಮಕ ದಳದ ಪ್ರಸನ್ ಕುಮಾರ್ ಎಂಬುವರು ಗಾಯಗೊಂಡಿದ್ದಾರೆ.

ಕಡೂರಿನಲ್ಲಿ ಕತ್ತು ಸೀಳಿ ಯುವಕನ ಬರ್ಬರ ಕೊಲೆ

ಚಿಕ್ಕಮಗಳೂರು: ಕತ್ತು ಸೀಳಿ ಯುವಕನನ್ನು ಬರ್ಬರವಾಗಿ ಕೊಲೆಗೈದಿರುವ (Murder Case) ಘಟನೆ ಕಡೂರು ತಾಲೂಕಿನ ಹುಲಿಗೊಂದಿ ಹೊಸೂರು ಬಳಿ ನಡೆದಿದೆ. ಸ್ನೇಹಿತರ ಜತೆ ಮನೆಯಿಂದ ಹೊರಗೆ ಹೋಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಯಾವ ವಿಚಾರಕ್ಕೆ, ಯಾರು ಕೊಲೆ ಮಾಡಿದ್ದಾರೆ ಎಂಬುವುದು ತಿಳಿದುಬಂದಿಲ್ಲ.

ತುಮಕೂರು ಜಿಲ್ಲೆ ಮಧುಗಿರಿ ಮೂಲದ ದರ್ಶನ್ (21) ಮೃತ ದುರ್ದೈವಿ. ಈತ ಬೆಂಗಳೂರಿನಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಕೊಲೆ ಯತ್ನ ಕೇಸ್‌ನಲ್ಲಿ ಜೈಲು ಸೇರಿದ್ದ ದರ್ಶನ್ ಇತ್ತೀಚೆಗೆ ಬೇಲ್ ಪಡೆದ ಬಳಿಕ ಇಬ್ಬರು ಸ್ನೇಹಿತರ ಜತೆ ಕಡೂರು ತಾಲೂಕಿನ ಮಾಡಾಳು ಗ್ರಾಮದ ತಾತನ ಮನೆಗೆ ಬಂದಿದ್ದ. ವಾರದ ಹಿಂದೆ ಮೃತ ದರ್ಶನ್ ಸ್ನೇಹಿತರು ಬೆಂಗಳೂರಿಗೆ ವಾಪಸ್ ಹೋಗಿದ್ದರು.

ಗುರುವಾರ ರಾತ್ರಿ ಕಾರಿನಲ್ಲಿ ಬಂದ ಸ್ನೇಹಿತರ ಜತೆ ದರ್ಶನ್ ಹೋಗಿದ್ದ. ಫ್ರೆಂಡ್ಸ್ ಬಂದಿದ್ದಾರೆ, ಹೊಲದ ಶೆಡ್‌ನಲ್ಲಿ ಮಲಗುತ್ತೇನೆ ಎಂದು ತಾತನಿಗೆ ಹೇಳಿ ಹೋಗಿದ್ದ. ದರ್ಶನ್ ಕಾರಿನಲ್ಲಿ ಹೋಗಿದ್ದನ್ನು ಆತನ ತಾತ ಕೂಡ ನೋಡಿದ್ದರು. ರಾತ್ರಿ ಹೊಲಕ್ಕೆ ಹೋಗಿ ನೋಡಿದಾಗ ಶೆಡ್‌ನಲ್ಲಿ ದರ್ಶನ್ ಇರಲಿಲ್ಲ. ಸ್ನೇಹಿತರ ಜತೆ ಎಲ್ಲೋ ಹೋಗಿರಬಹುದು ಎಂದು ತಾತ ಮನೆಗೆ ಬಂದಿದ್ದರು.

ಇದನ್ನೂ ಓದಿ | Road Accident: ಕಬ್ಬಿಣ ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರ ಸಾವು, ಮತ್ತೊಬ್ಬರಿಗೆ ಗಾಯ

ಬೆಳಗ್ಗೆ ಮಾಡಾಳು ಗ್ರಾಮದ ತುಸು ದೂರದಲ್ಲಿ ದರ್ಶನ್ ಮೃತದೇಹ ಪತ್ತೆಯಾಗಿದೆ. ಕಿಡಿಗೇಡಿಗಳು ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದರು. ಯಾವ ವಿಚಾರಕ್ಕೆ, ಯಾರು ಕೊಲೆಗೈದಿದ್ದಾರೆ ಎಂಬುವುದು ನಿಗೂಢವಾಗಿದ್ದು, ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version