Independence Day | ಕಾರವಾರದಲ್ಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಧ್ವಜಾರೋಹಣ - Vistara News

ಉತ್ತರ ಕನ್ನಡ

Independence Day | ಕಾರವಾರದಲ್ಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಧ್ವಜಾರೋಹಣ

ಭಾರತೀಯ ಸಂಸ್ಕೃತಿಯ ಪಂಚೆ ಶಲ್ಯ ಧರಿಸಿ ಆಗಮಿಸಿದ್ದ ಸಚಿವ ಕೋಟ ಶ್ರೀನಿವಾಸ್, ಭಾರತಾಂಬೆ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸಿದ ಬಳಿಕ ಧ್ವಜಾರೋಹಣ ಮಾಡಿದರು.

VISTARANEWS.COM


on

Independence Day
ಕಾರವಾರ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಗೌರವ ವಂದನೆ ಸ್ವೀಕರಿಸಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಸ್ವಾತಂತ್ರ್ಯದ ಅಮೃತ ಮಹೋತ್ಸವದ (Independence Day) ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸೋಮವಾರ ಧ್ವಜಾರೋಹಣ ನೆರವೇರಿಸಿದರು.

ಭಾರತೀಯ ಸಂಸ್ಕೃತಿಯ ಪಂಚೆ ಶಲ್ಯ ಧರಿಸಿ ಆಗಮಿಸಿದ್ದ ಸಚಿವ ಕೋಟ ಶ್ರೀನಿವಾಸ್, ಭಾರತಾಂಬೆ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸಿದ ಬಳಿಕ ಧ್ವಜಾರೋಹಣ ಮಾಡಿದರು. ಧ್ವಜಾರೋಹಣದ ಬಳಿಕ ಸಚಿವ ಪರೇಡ್ ಪರಿವೀಕ್ಷಣೆ ನಡೆಸಿದರು.

8 ಪರೇಡ್ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಸಲಾಯಿತು. ಪೊಲೀಸ್, ಅರಣ್ಯ, ಗೃಹರಕ್ಷಕದಳ, ಮಹಿಳಾ ಪೊಲೀಸ್, ಎನ್‌ಸಿಸಿ ಸೇರಿ 8 ತಂಡಗಳು ಭಾಗಿಯಾಗಿದ್ದವು. ಶಾಸಕಿ ರೂಪಾಲಿ ನಾಯ್ಕ, ಎಂಎಲ್‌ಸಿ ಗಣಪತಿ ಉಳ್ವೇಕರ್, ಡಿಸಿ ಮುಲ್ಲೈ ಮುಗಿಲನ್, ಎಸ್‌ಪಿ ಸುಮನಾ ಪೆನ್ನೇಕರ್ ಭಾಗಿಯಾಗಿದ್ದರು.

ಇದನ್ನೂ ಓದಿ | Independence Day | ಕೊರೆವ ಚಳಿಯಲ್ಲೂ ಸಿಯಾಚಿನ್‌ನಲ್ಲಿ ತಿರಂಗಾ ಹಾರಿಸಿದ ಯೋಧರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬಿರುಗಾಳಿ ಸಹಿತ ಭಾರಿ ಮಳೆ; ಸಿಡಿಲು ಬಡಿದು ಮಹಿಳೆ ಸೇರಿ ಶ್ವಾನ ಸಾವು‌, ಮತ್ತೊಬ್ಬ ಗಂಭೀರ

Karnataka Weather Forecast : ವಾರಾಂತ್ಯದಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಬೆಂಗಳೂರು ಸೇರಿ ಮುಕ್ಕಾಲು ಕರ್ನಾಟಕದಲ್ಲಿ ಮಳೆ ಬೀಳಲಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು/ಬೆಳಗಾವಿ: ಕಳೆದ ಮೂರು ದಿನಗಳಿಂದ ಹಲವೆಡೆ ಮಳೆಯು (Rain News) ಅಬ್ಬರಿಸುತ್ತಿದ್ದು, ಮೇ 15ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಶುಕ್ರವಾರದಂದು ಹಲವೆಡೆ ಸುರಿದ ಮಳೆಗೆ ಸಾವು-ನೋವು ಸಂಭವಿಸಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಹಾಗೂ ಅವರ ಶ್ವಾನಕ್ಕೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ಸಿಡಿಲು ಬಡಿದು ಮಹಿಳೆ ಸೇರಿ ಶ್ವಾನ ಸಾವು

ಸಿಡಿಲು ಬಡಿದು ಓರ್ವ ಮಹಿಳೆ ಹಾಗೂ ಶ್ವಾನವೊಂದು ಸ್ಥಳದಲ್ಲಿಯೇ ಮೃತಪಟ್ಟಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬೋನಸಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ವಪ್ನ (48) ಮೃತ ದುರ್ದೈವಿ. ಸ್ವಪ್ನ ಅವರ ಮಗ ಜ್ಞಾನೇಶ್ವರಗೆ (20) ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಮ್ಮ ಹೊಲದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಾಕು ನಾಯಿಯು ಸಿಡಿಲಿಗೆ ಬಲಿಯಾಗಿದೆ. ಕುಂಚಾವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕೋಡಿ ತಾಲೂಕಿನ‌ ವಿವಿಧೆಡೆ ತುಂತುರು ಮಳೆಯಾಗಿದೆ. ಬಿಸಿಲಿನ ಬೇಗೆಗೆ ತತ್ತರಿಸಿದ್ದ ಜನತೆಗೆ ಮಳೆಯಿಂದ ವಾತಾವರಣ ತಂಪಾಗಿತ್ತು. ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಬಿಸಿಲು ನಾಡು ಯಾದಗಿರಿಯಲ್ಲಿ ವರುಣನ ಸಿಂಚನವಾಗಿದೆ. ಕಳೆದ ಒಂದು ಗಂಟೆಯಿಂದ ಸುರಿಯುತ್ತಿರುವ ಮಳೆಗೆ ಶಹಾಪುರ ಪಟ್ಟಣ ಮಲೆನಾಡಿನಂತಾಗಿತ್ತು. ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ್ದ ಜನರು ಸಂತಸಗೊಂಡರು. ಶಹಾಪುರ ತಾಲೂಕಿನಾದ್ಯಂತ ಗಾಳಿ ಸಹಿತ ಮಳೆ ಸುರಿಯುತ್ತಿದೆ. ಯಾದಗಿರಿ ಜಿಲ್ಲೆಯಾದ್ಯಂತ ಮೋಡಕವಿದ ವಾತಾವರಣವಿದೆ.

ಕೊಪ್ಪಳದಲ್ಲಿ ಭಾರಿ ಬಿರುಗಾಳಿಗೆ ನೆಲಕ್ಕುರುಳಿದ ಬಾಳೆ

ಕೊಪ್ಪಳ ತಾಲೂಕಿನ ಡೊಂಬರಳ್ಳಿ ಗ್ರಾಮದಲ್ಲಿ ಭಾರಿ ಬಿರುಗಾಳಿ ಮಳೆಗೆ ಬಾಳೆ ಬೆಳೆಯು ಹಾಳಾಗಿದೆ. ಡೊಂಬರಹಳ್ಳಿ ಗ್ರಾಮದ ಬಸವರಡ್ಡಿ ಕರಡ್ಡಿ ಎಂಬುವವರಿಗೆ ಸೇರಿದ ಸುಮಾರು ಒಂದೂವರೆ ಎಕರೆಯಲ್ಲಿ ಬೆಳೆದಿದ್ದ ಬಾಳೆಯು ನೆಲಕ್ಕುರುಳಿದೆ. ಬಾಳೆ ಗೊನೆ ಬಿಟ್ಟು ಫಸಲು ನೀಡುವ ವೇಳೆ ಬಾಳೆ ಬೆಳೆ ನಾಶವಾಗಿದ್ದು, ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ತೋಟಗಾರಿಕೆ ಇಲಾಖೆಯವರು ಸಮಿಕ್ಷೆ ಮಾಡಿ ಪರಿಹಾರ ನೀಡುವಂತೆ ರೈತರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Road Accident : ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು; ಕರೆಂಟ್‌ ವೈರ್‌ ತಾಗಿ ವ್ಯಕ್ತಿ ಮೃತ್ಯು

ಮೇ 15ರವರೆಗೆ ಮಳೆ ಎಚ್ಚರಿಕೆ

ಮಲೆನಾರಿನ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯು ಅಬ್ಬರಿಸಲಿದೆ. ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಕಾರವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಒಳನಾಡಿನ ಜಿಲ್ಲೆಗಳಾದ ದಾವಣಗೆರೆ, ಮಂಡ್ಯ, ಮೈಸೂರು, ಚಾಮರಾಜನಗರ, ಹಾವೇರಿ, ಬೆಳಗಾವಿ, ಬಾಗಲಕೋಟೆ, ಗದಗ, ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಬಿರುಗಾಳಿ (40-50 kmph) ಬೀಸಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಚಿತ್ರದುರ್ಗದ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಜತೆಗೆ (40-50 kmph) ವ್ಯಾಪಕ ಮಳೆಯಾಗಲಿದೆ.

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಗುಡುಗು ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32°C ಮತ್ತು 21°C ಇರುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Rain Effect : ಭಾರಿ ಮಳೆ ಗಾಳಿಗೆ (Heavy Rain) ಅನಾಹುತಗಳು ಸಂಭವಿಸುತ್ತಿವೆ. ನೆಲಮಂಗಲದಲ್ಲಿ ರಭಸವಾಗಿ ಬೀಸಿದ ಬಿರುಗಾಳಿ ಮನೆಯ ಗೇಟ್‌ ಕಿತ್ತು ಬಂದು, ಅಲ್ಲೆ ಆಡವಾಡುತ್ತಿದ್ದ ಬಾಲಕಿ ಮೇಲೆ ಬಿದ್ದಿದೆ. ಪರಿಣಾಮ ಗಂಭೀರ ಗಾಯಗೊಂಡು ದಾರುಣವಾಗಿ ಮೃತಪಟ್ಟಿದ್ದಾಳೆ. ಸಿಡಿಲಿಗೆ ಎತ್ತುಗಳು ಬಲಿಯಾದರೆ, ಮರ ಬಿದ್ದರೂ ನಾಲ್ವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

VISTARANEWS.COM


on

By

Rain Effect In karnataka
ಮೃತ ಬಾಲಕಿ ಯಲ್ಲಮ್ಮ ಹಾಗೂ ಸಿಡಿಲಿಗೆ ಬಲಿಯಾದ ಎತ್ತುಗಳು
Koo

ನೆಲಮಂಗಲ: ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ (Rain Effect) ಮನೆಯ ಗೇಟ್ ಕಿತ್ತು ಬಂದಿದ್ದು,ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7 ವರ್ಷದ ಬಾಲಕಿ ಮೇಲೆ ಗೇಟ್‌ ಬಿದ್ದಿದೆ. ಪರಿಣಾಮ ಬಾಲಕಿ ಯಲ್ಲಮ್ಮ (7) ಎಂಬಾಕೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಬೆಂಗಳೂರು ಗ್ರಾಮಾಂತರದ ನೆಲಮಂಗಲ ತಾಲೂಕಿನ ವಾಜರಹಳ್ಳಿಯಲ್ಲಿ ಘಟನೆ ನಡೆದಿದೆ.

ನಿನ್ನೆ ಗುರುವಾರ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ ಗೇಟ್ ಕಟ್ ಆಗಿ ಈ ದುರ್ಘಟನೆ ಸಂಭವಿಸಿದೆ. ರಾಯಚೂರು ಜಿಲ್ಲೆಯ ದೇವದುರ್ಗದ ಮೂಲದ ಮುಕ್ಕಣ್ಣ ಹಾಗೂ ಬಾಲಮ್ಮರ ದಂಪತಿ ಕೂಲಿ ಕೆಲಸ ಮಾಡಿಕೊಂಡು ಬೆಂಗಳೂರಲ್ಲಿ ಜೀವನ ನಡೆಸುತ್ತಿದ್ದರು. ಆದರೆ ಮಳೆಯು ಮುದ್ದು ಮಗಳನ್ನು ಕಸಿದುಕೊಂಡಿದೆ.

ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಬಳ್ಳಾರಿಯಲ್ಲಿ ಸಿಡಿಲು ಬಡಿದು ಎತ್ತುಗಳು ಸಾವು

ಗುರುವಾರ ಸಂಜೆ ಸಿಡಿಲು ಬಡಿದು ಎರಡು ಎತ್ತುಗಳು ಮೃತಪಟ್ಟಿವೆ. ಬಳ್ಳಾರಿ ತಾಲೂಕಿನ ಕಪ್ಪಗಲ್ಲು ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿ ಸಂಜೆ ವೇಳೆ ಸಿಡಿಲು, ಗುಡುಗು ಸಹಿತ ಮಳೆ ಸುರಿದಿದೆ. ನಾಯಕರ ದೊಡ್ಡಬಸಪ್ಪ ಎಂಬುವವರಿಗೆ ಸೇರಿದ ಎತ್ತುಗಳು ಸಿಡಿಲಿಗೆ ಬಲಿಯಾಗಿವೆ. ತಲಾ ಒಂದು ಲಕ್ಷ ರೂ. ಮೌಲ್ಯದ ಎರಡು ಎತ್ತುಗಳು ಮೃತಪಟ್ಟಿದ್ದಕ್ಕೆ ರೈತ ಕಂಗಲಾಗಿದ್ದರು. ಪರಿಹಾರಕ್ಕೆ ಸರ್ಕಾರವನ್ನು ಒತ್ತಾಯಿಸಿದರು.

ಇದನ್ನೂ ಓದಿ: Dog Bite : ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿ ನಾಯಿಗಳು ಅಟ್ಯಾಕ್‌

ಸ್ವಲ್ಪ ಯಾಮಾರಿದರೂ ಹಾರಿಹೋಗುತ್ತಿತ್ತು ನಾಲ್ವರ ಪ್ರಾಣ ಪಕ್ಷಿ

ಬೆಂಗಳೂರಿನ ನಾಗರಭಾವಿಯ ಎನ್‌ಜಿಎಫ್‌ ಲೇಔಟ್‌ನಲ್ಲಿ ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಸ್ವಲ್ಪ ಯಾಮಾರಿದರೂ ನಾಲ್ವರ ಪ್ರಾಣ ಪಕ್ಷಿ ಹಾರಿಹೋಗುತ್ತಿತ್ತು. ಶಿವು ಎಂಬುವವರು ರಾಯಚೂರಿನಿಂದ ಕೂಲಿ ಕೆಲಸಕ್ಕೆಂದು ಬೆಂಗಳೂರಿಗೆ ಬಂದಿದ್ದರು.

ಶೆಡ್‌ವೊಂದರಲ್ಲಿ ಶಿವು ದಂಪತಿ ಮತ್ತು ಇಬ್ಬರು ಮಕ್ಕಳು ವಾಸಿಸುತ್ತಿದ್ದರು. ನಿನ್ನೆ ಬುಧವಾರ ರಾತ್ರಿ ಸುರಿದ ಭಾರಿ ಮಳೆ ಗಾಳಿಗೆ ಬೃಹತ್‌ ಮರ ಹಾಗೂ ವಿದ್ಯುತ್‌ ಕಂಬ ಧರೆಗೆ ಉರುಳಿದ್ದವು. ವಿದ್ಯುತ್ ಕಂಬದ ಮೇಲೆ ಬೃಹತ್ ಮರ ಬಿದ್ದು, ಶೆಡ್‌ಗೆ ಉರುಳಿತ್ತು. ಅದೃಷ್ಟವಶಾತ್‌ ಆ ಸಮಯದಲ್ಲಿ ಶೆಡ್‌ನಲ್ಲಿ ಯಾರು ಇರಲಿಲ್ಲ. ಹೀಗಾಗಿ ಅನಾಹುತವೊಂದು ತಪ್ಪಿತ್ತು. ಮೊನ್ನೆ ಮರ ಬಿದ್ದ ಬಗ್ಗೆ ಬಿಬಿಎಂಪಿಗೆ ದೂರು ನೀಡಿದರೂ ಪಾಲಿಕೆ ಅಧಿಕಾರಿಗಳು ಕ್ಯಾರೆ ಎಂದಿಲ್ಲ. ಯಾವುದೇ ಕ್ರಮಕ್ಕೆ ಮುಂದಾಗದ ಅಧಿಕಾರಿಗಳ ನಡೆಗೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಮನೆಗಳಿಗೆ ನುಗ್ಗಿದ ಚರಂಡಿ ಮಿಶ್ರಿತ ಮಳೆ ನೀರು

ರಾತ್ರಿ ಪೂರ್ತಿ ಸುರಿದ ಮಳೆಗೆ ಮನೆಗಳಿಗೆ ನೀರು ನುಗ್ಗಿದೆ. ಬೆಂಗಳೂರಿನ ಉಲ್ಲಾಳದಲ್ಲಿರುವ ಮನೆಗಳಿಗೆ ನೀರು ನುಗ್ಗಿತ್ತು. ಪರಿಣಾಮ ನಿವಾಸಿಗಳು ಜಾಗರಣೆ ಇದ್ದು, ರಾತ್ರಿಯಿಡೀ ನೀರು ತೆಗೆಯುವ ಕಾರ್ಯದಲ್ಲಿ ಮಗ್ನರಾಗಿದ್ದರು. ಇತ್ತ ಚಾಮರಾಜಪೇಟೆಯ ಜೆಜೆಆರ್ ನಗರದ ಮನೆಗಳಿಗೆ ಭಾರಿ ಮಳೆಗೆ ಕೊಳಚೆ ನೀರು ನುಗ್ಗಿತ್ತು ಈ ಹಿನ್ನೆಲೆಯಲ್ಲಿ ನಿವಾಸಿಗಳ ಆಕ್ರೋಶ ಹೊರಹಾಕಿದರು. ಮಳೆಗಾಲದಲ್ಲಿ ಬಿನ್ನಿ ಮಿಲ್ ಮುಖ್ಯ ರಸ್ತೆಯಲ್ಲಿರುವ ಸಲಾರ್ಪುರಿಯ ಅಪಾರ್ಟ್ಮೆಂಟ್‌ನಿಂದ ಕೊಳಚೆ ನೀರು ಮನೆಗಳಿಗೆ ನುಗ್ಗುತ್ತಿದೆ ಎಂದು ನಿವಾಸಿಗಳು ಆಕ್ರೋಶಿಸಿದರು. ನಿನ್ನೆ ಬುಧವಾರ ಸ್ಥಳೀಯರು ಅಪಾರ್ಟ್‌ಮೆಂಟ್ ಎದುರು ಪ್ರತಿಭಟನೆಯನ್ನೂ ನಡೆಸಿದ್ದರು.

ಏರ್‌ಪೋರ್ಟ್‌ಗೂ ನುಗ್ಗಿದ ನೀರು

ದೇವನಹಳ್ಳಿ ಸುತ್ತಮುತ್ತ ಕಳೆದ ರಾತ್ರಿ ಧಾರಾಕಾರ ಮಳೆಯಾಗಿದೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದೊಳಗೆ ನೀರು ನುಗ್ಗಿತ್ತು. ಮೇಲ್ಚಾವಣಿಯಿಂದ ಟರ್ಮಿನಲ್ ಒಳಗಡೆಗೆ ನೀರು ಸೋರುತ್ತಿದ್ದು, ಲಗೇಜ್ ಬೇ ಬಳಿ ನೀರು ಬಂದ ಹಿನ್ನೆಲೆಯಲ್ಲಿ ಸಿಬ್ಬಂದಿ ಪರದಾಡಬೇಕಾಯಿತು. ಇನ್ನೂ ರನ್ ವೇ ಕ್ಲಿಯರೆನ್ಸ್ ಇಲ್ಲದ ಕಾರಣ 18ಕ್ಕೂ ಅಧಿಕ ವಿಮಾನಗಳು ಬೇರೆಡೆಗೆ ಡೈವರ್ಟ್ ಮಾಡಲಾಯಿತು.

ಉದ್ಘಾಟನೆಗೂ ಮುನ್ನವೇ ಮುಳುಗಿದ ಅಂಡರ್ ಪಾಸ್

ಮೈಸೂರು ರಸ್ತೆಯ ಆರ್‌ವಿ ಕಾಲೇಜ್ ಮುಂಭಾಗದ ಅಂಡರ್ ಪಾಸ್ ಉದ್ಘಾಟನೆಗೂ ಮುನ್ನವೇ ಮುಳುಗಿತ್ತು. ರೈಲ್ವೆ ಟ್ರ್ಯಾಕ್ ಕೆಳಗೆ ನೂತನವಾಗಿ ನಿರ್ಮಾಣ ಆಗಿರುವ ಅಂಡರ್ ಪಾಸ್‌ನಲ್ಲಿ ಮಳೆ ನೀರು ನಿಲ್ಲುವಂತಾಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ; ಗುಡುಗು ಸಹಿತ ಭಾರಿ ಮಳೆಗೆ ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather Forecast : ರಾಜ್ಯಾದ್ಯಂತ ಬಿರುಗಾಳಿ ಸಹಿತ ಗುಡುಗು ಮಿಂಚಿನ ಭಾರಿ ಮಳೆಯಾಗುವ (Heavy Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಆರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಜೋರಾಗಿ ಗಾಳಿ ಬೀಸುವುದರಿಂದ ಮರದಡಿ ನಿಲ್ಲದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇನ್ನೂ ಕರಾವಳಿಐಲ್ಲಿ ಮಧ್ಯಮ ಮಳೆಯಾಗುವ (Rain News) ನಿರೀಕ್ಷೆ ಇದೆ. ಜತೆಗೆ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಿಂಚು ಮತ್ತು ಗಾಳಿಯು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಳ್ಳಾರಿ ಮತ್ತು ರಾಯಚೂರು ಹಾಗೂ ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯನಗರ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಹಗುರವಾದ ಮಳೆಯಾಗುವ ನಿರೀಕ್ಷೆ ಇದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿರಲಿದೆ.

ಇದನ್ನೂ ಓದಿ: Akshaya Tritiya Fashion: ಅಕ್ಷಯ ತೃತೀಯಕ್ಕೆ ಬಂತು ಬಂಗಾರದ ಆಕರ್ಷಕ ಮೂಗಿನ ಸ್ಟಡ್ಸ್

ಬೆಂಗಳೂರಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಭಾರೀ ಮಳೆಯೊಂದಿಗೆ ಗುಡುಗು ಸಹಿತ ಬಿರುಗಾಳಿ (ಗಂಟೆಗೆ 40-50 ಕಿ.ಮೀ) ಬೀಸಲಿದೆ. ಹೀಗಾಗಿ ಐಎಂಡಿ ಹಳದಿ ಎಚ್ಚರಿಕೆಯನ್ನು ನೀಡಿದೆ. ಮುಖ್ಯವಾಗಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾರ್ವಭೌಮ ಗುರುಕುಲಕ್ಕೆ ಶೇ.100 ಫಲಿತಾಂಶ

SSLC Result 2024: ಗೋಕರ್ಣದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲದ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸತತ ಮೂರನೇ ವರ್ಷ ಶೇಕಡಾ 100 ಫಲಿತಾಂಶ ಸಾಧಿಸಿದ್ದಾರೆ. ಸಾರ್ವಭೌಮ ಗುರುಕುಲ ಪಾರಂಪರಿಕ ಮತ್ತು ನವಯುಗದ ಸಮನ್ವಯ ಶಿಕ್ಷಣ ನೀಡುವ ದೇಶದ ಏಕೈಕ ಸಂಸ್ಥೆಯಾಗಿದ್ದು, ಪಾರಂಪರಿಕ ವಿಭಾಗದಲ್ಲಿ ಸಾಧನೆ ಮಾಡುವ ಜತೆಜತೆಗೆ ನವಯುಗ ಶಿಕ್ಷಣದಲ್ಲೂ ಯಾವುದೇ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗಿಂತ ನಾವು ಕಡಿಮೆ ಇಲ್ಲ ಎನ್ನುವುದನ್ನು ಈ ಸಾಧನೆ ತೋರಿಸಿಕೊಟ್ಟಿದೆ ಎಂದು ಮಾರ್ಗದರ್ಶಕರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿದ್ದಾರೆ.

VISTARANEWS.COM


on

Koo

ಗೋಕರ್ಣ: ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲದ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ (SSLC Result 2024) ಸತತ ಮೂರನೇ ವರ್ಷ ಶೇಕಡಾ 100 ಫಲಿತಾಂಶ ಸಾಧಿಸಿದ್ದಾರೆ.

ಸಾರ್ವಭೌಮ ಗುರುಕುಲ ಪಾರಂಪರಿಕ ಮತ್ತು ನವಯುಗದ ಸಮನ್ವಯ ಶಿಕ್ಷಣ ನೀಡುವ ದೇಶದ ಏಕೈಕ ಸಂಸ್ಥೆಯಾಗಿದ್ದು, ಪಾರಂಪರಿಕ ವಿಭಾಗದಲ್ಲಿ ಸಾಧನೆ ಮಾಡುವ ಜತೆಜತೆಗೆ ನವಯುಗ ಶಿಕ್ಷಣದಲ್ಲೂ ಯಾವುದೇ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗಿಂತ ನಾವು ಕಡಿಮೆ ಇಲ್ಲ ಎನ್ನುವುದನ್ನು ಈ ಸಾಧನೆ ತೋರಿಸಿಕೊಟ್ಟಿದೆ ಎಂದು ಮಾರ್ಗದರ್ಶಕರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ವಿದ್ಯಾರ್ಥಿಗಳ ಸಾಧನೆಯನ್ನು ಕೊಂಡಾಡಿದ್ದಾರೆ.

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಗನ ಜತೆ ತಾಯಿಯೂ ಪಾಸ್!

ವಿವಿವಿ ಅಂಕಗಳಿಕೆ ಶಿಕ್ಷಣಕ್ಕೆ ಒತ್ತು ನೀಡದೇ ವಿದ್ಯಾರ್ಥಿಗಳ ಸಮಗ್ರ ವಿಕಾಸಕ್ಕೆ ಒತ್ತು ನೀಡುತ್ತದೆ. ಆದಾಗ್ಯೂ ಅಂಕ ಗಳಿಕೆಯಲ್ಲೂ ನಮ್ಮ ವಿದ್ಯಾರ್ಥಿಗಳು ಮುಂದಿರುವುದು ಸಂಸ್ಥೆಯ ಶ್ರೇಷ್ಠತೆಗೆ ಹಿಡಿದ ಕೈಗನ್ನಡಿ. ದೇಶದ ಭಾವಿ ಪ್ರಜೆಗಳ ಭದ್ರ ಭವಿಷ್ಯದ ಅಡಿಪಾಯ ಇದಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿ ಎಂದು ಅವರು ಆಶೀರ್ವದಿಸಿದ್ದಾರೆ.

ಪರೀಕ್ಷೆ ತೆಗೆದುಕೊಂಡ 33 ವಿದ್ಯಾರ್ಥಿಗಳ ಪೈಕಿ 19 ಮಂದಿ ಅತ್ಯುನ್ನತ ದರ್ಜೆಯಲ್ಲಿ 13 ಮಂದಿ ಪ್ರಥಮ ಹಾಗೂ ಒಬ್ಬ ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಮುಖ್ಯ ಶಿಕ್ಷಕಿ ಸೌಭಾಗ್ಯ ಭಟ್ಟ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಪನ್ನಗ ಎಸ್. ಭಟ್ 613 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ ಪಡೆದಿದ್ದರೆ, 603 ಅಂಕ ಗಳಿಸಿದ ರಾಮಚಂದ್ರ ಉಪಾಧ್ಯ ಎರಡನೇ ಸ್ಥಾನ ಗಳಿಸಿದ್ದಾರೆ. ತಲಾ 600 ಅಂಕಗಳನ್ನು ಪಡೆದ ಎನ್. ತನ್ವಿ ಗೌರಿ ಮತ್ತು ಸುಮುಖ ಹೆಗಡೆ ಜಿ ಮೂರನೇ ಸ್ಥಾನ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Karnataka Weather : ಕೊಡಗು, ಕೊಪ್ಪಳ ಸೇರಿ ಹಲವೆಡೆ ಅಬ್ಬರಿಸುತ್ತಿರುವ ಗಾಳಿ- ಮಳೆ; ನಾಳೆಗೂ ವಾರ್ನಿಂಗ್‌

ಅತ್ಯುತ್ತಮ ಸಾಧನೆಗೆ ಕಾರಣವಾಗಿರುವ ವಿದ್ಯಾರ್ಥಿ ಹಾಗೂ ಶಿಕ್ಷಕರನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಅರುಣ್ ಹೆಗಡೆ, ವಿವಿವಿ ಗೌರವಾಧ್ಯಕ್ಷ ಡಿ.ಡಿ.ಶರ್ಮಾ, ಪಾರಂಪರಿಕ ವಿಭಾಗದ ವರಿಷ್ಠಾಚಾರ್ಯ ಸತ್ಯನಾರಾಯಣ ಶರ್ಮಾ ಮತ್ತಿತರರು ಅಭಿನಂದಿಸಿದ್ದಾರೆ.

Continue Reading
Advertisement
T20 world cup
ಕ್ರೀಡೆ15 seconds ago

T20 World Cup : ವಿಶ್ವ ಕಪ್​ಗೆ ಭಾರತ ತಂಡ ಪ್ರಯಾಣಿಸುವ ದಿನಾಂಕ ಪ್ರಕಟಿಸಿದ ಜಯ್​ ಶಾ

Dietary Guidelines
Latest30 mins ago

Dietary Guidelines: ಕಡಿಮೆ ದೈಹಿಕ ಚಟುವಟಿಕೆ ಇರುವವರಿಗೆ ಯಾವ ರೀತಿಯ ಆಹಾರ ಸೂಕ್ತ?

Lover refused to marriage Young woman committed suicide in kalaburagi
ಕಲಬುರಗಿ33 mins ago

Self Harming: ಪ್ರೀತಿಸಲು ಓಕೆ, ಮದುವೆಗೆ ನೋ ಎಂದ ಪ್ರಿಯಕರ; ಮನನೊಂದು ಯುವತಿ ಆತ್ಮಹತ್ಯೆ

Jay Shah
ಪ್ರಮುಖ ಸುದ್ದಿ34 mins ago

Jay Shah : ”ನಾನವನಲ್ಲ, ನಾನವನಲ್ಲ”; ಶ್ರೇಯಸ್​, ಇಶಾನ್ ವಿವಾದಕ್ಕೆ ಸ್ಪಷ್ಟನೆ ನೀಡಿದ ಜಯ್​ ಶಾ

Naxals K
ದೇಶ38 mins ago

Naxals Encounter: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 12 ನಕ್ಸಲರ ಹತ್ಯೆ

Veg v/s Non Veg Thali
ಆರೋಗ್ಯ42 mins ago

Veg v/s Non Veg Thali: ಭಾರತದಲ್ಲಿ ನಾನ್‌ವೆಜ್‌ ಊಟಕ್ಕಿಂತ ವೆಜ್ ಊಟ ದುಬಾರಿ! ಏಕೆ ಗೊತ್ತಾ?

Maruti Suzuki
ಆಟೋಮೊಬೈಲ್44 mins ago

Maruti Suzuki: ಶೀಘ್ರ ರಸ್ತೆಗಿಳಿಯಲಿದೆ ಬರೋಬ್ಬರಿ 26 ಕಿ.ಮೀ ಮೈಲೇಜ್ ಕೊಡುವ ಮಾರುತಿ ಸ್ವಿಫ್ಟ್​; ಶುರುವಾಗಿದೆ ಬುಕಿಂಗ್​

Prajwal Revanna Case
ಕರ್ನಾಟಕ52 mins ago

Prajwal Revanna Case: ರೇವಣ್ಣ ಬಸವನಗುಡಿ ನಿವಾಸದಲ್ಲಿ 2ನೇ ಬಾರಿ ಸ್ಥಳ ಮಹಜರು

Arvind Kejriwal
ದೇಶ53 mins ago

Arvind Kejriwal: ಪ್ರಜಾಪ್ರಭುತ್ವ ಉಳಿಸಲು ಹೋರಾಟ; ಜೈಲಿಂದ ಬಿಡುಗಡೆ ಬಳಿಕ ಕೇಜ್ರಿವಾಲ್‌ ಫಸ್ಟ್‌ ರಿಯಾಕ್ಷನ್!

Xiaomi Smart Phone
ಗ್ಯಾಜೆಟ್ಸ್1 hour ago

Xiaomi Smart Phone: ವರ್ಷಾಂತ್ಯಕ್ಕೆ ಬರಲಿದೆ ಶಿಯೊಮಿಯ ಫೋಲ್ಡಿಂಗ್​ ಫೋನ್​ಗಳು; ಇಲ್ಲಿದೆ ಸಂಪೂರ್ಣ ವಿವರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Physical Abuse The public prosecutor called the client woman to the lodge
ಕ್ರೈಂ6 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ7 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ8 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ15 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ22 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ23 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ24 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ1 day ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಟ್ರೆಂಡಿಂಗ್‌