Site icon Vistara News

Independence Day | ಕಾರವಾರದಲ್ಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಧ್ವಜಾರೋಹಣ

Independence Day

ಕಾರವಾರ: ಸ್ವಾತಂತ್ರ್ಯದ ಅಮೃತ ಮಹೋತ್ಸವದ (Independence Day) ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸೋಮವಾರ ಧ್ವಜಾರೋಹಣ ನೆರವೇರಿಸಿದರು.

ಭಾರತೀಯ ಸಂಸ್ಕೃತಿಯ ಪಂಚೆ ಶಲ್ಯ ಧರಿಸಿ ಆಗಮಿಸಿದ್ದ ಸಚಿವ ಕೋಟ ಶ್ರೀನಿವಾಸ್, ಭಾರತಾಂಬೆ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸಿದ ಬಳಿಕ ಧ್ವಜಾರೋಹಣ ಮಾಡಿದರು. ಧ್ವಜಾರೋಹಣದ ಬಳಿಕ ಸಚಿವ ಪರೇಡ್ ಪರಿವೀಕ್ಷಣೆ ನಡೆಸಿದರು.

8 ಪರೇಡ್ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಸಲಾಯಿತು. ಪೊಲೀಸ್, ಅರಣ್ಯ, ಗೃಹರಕ್ಷಕದಳ, ಮಹಿಳಾ ಪೊಲೀಸ್, ಎನ್‌ಸಿಸಿ ಸೇರಿ 8 ತಂಡಗಳು ಭಾಗಿಯಾಗಿದ್ದವು. ಶಾಸಕಿ ರೂಪಾಲಿ ನಾಯ್ಕ, ಎಂಎಲ್‌ಸಿ ಗಣಪತಿ ಉಳ್ವೇಕರ್, ಡಿಸಿ ಮುಲ್ಲೈ ಮುಗಿಲನ್, ಎಸ್‌ಪಿ ಸುಮನಾ ಪೆನ್ನೇಕರ್ ಭಾಗಿಯಾಗಿದ್ದರು.

ಇದನ್ನೂ ಓದಿ | Independence Day | ಕೊರೆವ ಚಳಿಯಲ್ಲೂ ಸಿಯಾಚಿನ್‌ನಲ್ಲಿ ತಿರಂಗಾ ಹಾರಿಸಿದ ಯೋಧರು

Exit mobile version