ಉಡುಪಿ
Video | ಮಲ್ಪೆ ಕಡಲ ಅಲೆಗಳ ಮೇಲೆ ತೇಲುವ ಸೇತುವೆ
ಮಲ್ಪೆ ಕಡಲ ತೀರದಲ್ಲಿ ನಿರ್ಮಾಣವಾಗಿರುವ ಸಮುದ್ರದೊಳಗಿನ ತೇಲು ಸೇತುವೆ ಪ್ರವಾಸಿಗರಿಗೆ ರೋಚಕ ಅನುಭವ ನೀಡಲಿದೆ, ರಾಜ್ಯದ ಪ್ರವಾಸೋದ್ಯಮಕ್ಕೂ ಹೊಸ ಮೆರುಗು.
ಉಡುಪಿ: ನೀವು ಕಡಲಲೆಗಳಲ್ಲಿ ಕಾಲು ತೋಯಿಸಿಕೊಂಡು ಸಂಭ್ರಮಪಟ್ಟಿರಬಹುದು. ನೀರಿಗೆ ಮೈಯೊಡ್ಡಿ ಮಧುರಾನುಭವ ಪಡೆದಿರಬಹುದು, ಬೋಟಿನಲ್ಲಿ ಪ್ರಯಾಣಿಸುತ್ತಾ ಏಳುಬೀಳಿನ ಸುಖ ಅನುಭವಿಸಿರಬಹುದು. ಆದರೆ, ಎಂದಾದರೂ ನೀರಿನ ಮೇಲೆ ಸಾಗುತ್ತಾ ಜೋಕಾಲಿಯಾಡುವ ರೋಚಕತೆಯನ್ನು ಕಂಡಿದ್ದೀರಾ?
ಹಾಗಿದ್ದರೆ ಕರ್ನಾಟಕದ ಸುಂದರ ಕಡಲ ಕಿನಾರೆ ಮಲ್ಪೆಗೆ ಒಮ್ಮೆ ಬನ್ನಿ. ಇಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ತೇಲುವ ಸೇತುವೆಯೊಂದು ನಿರ್ಮಾಣವಾಗಿ ಶುಕ್ರವಾರ ಲೋಕಾರ್ಪಣೆಗೊಂಡಿದೆ. ಈಗಾಗಲೇ ಪ್ರವಾಸಿಗರಿಂದ ತುಂಬಿ ತುಳುಕುತ್ತಿರುವ ಕಡಲ ತೀರದಲ್ಲಿ ಅಲೆಗಳ ನಡುವೆ ಜೀಕುವ ಈ ಫ್ಲೋಟಿಂಗ್ ಬ್ರಿಜ್ ಎಲ್ಲರ ಗಮನವನ್ನು ಸೆಳೆದಿದೆ.
ಏನಿದು ತೇಲು ಸೇತುವೆ?
ನೀರಿನ ಮೇಲೆ ನಡೆಯುವ, ತೇಲುವ, ಜೋಕಾಲಿಯಾಡುತ್ತಾ ರುದ್ರ ಮತ್ತು ರಮಣೀಯತೆಯನ್ನು ಏಕಕಾಲದಲ್ಲಿ ಅನುಭವಿಸುವಂತೆ ಮಾಡುವ ವಿಶಿಷ್ಟ ವಿನ್ಯಾಸದ ಫ್ಲೋಟಿಂಗ್ ಬ್ರಿಜ್ ಇದು.
ಸಮುದ್ರ ತೀರದಿಂದ 100 ಮೀಟರ್ ಉದ್ದಕ್ಕೆ ಸಮುದ್ರದೊಳಗೆ ಈ ತೇಲು ಸೇತುವೆ ಹಾದು ಹೋಗುತ್ತದೆ. ತೀರದಿಂದ ನೀರಿನ ಒಳಗೆ ಸಾಗುವ ಈ ಸೇತುವೆ ಹ್ಯಾಗಿಂಗ್ ಬ್ರಿಜ್ ಮಾದರಿಯಲ್ಲಿ ನಿರ್ಮಾಣವಾಗಿದ್ದು, 3.5 ಮೀಟರ್ ಅಗಲವಿದೆ. ಫೋಂಟೋನ್ ಬ್ಲಾಕ್ಗಳಿಂದ ಮಾಡಲಾಗಿರುವ ಈ ಸೇತುವೆ ಅಲೆಗಳು ಏರಿಳಿದಂತೆ ಮೇಲೆ ಕೆಳಗೆ ಹೋಗುತ್ತದೆ. ಅಂದರೆ ಇದರ ಮೇಲೆ ನಡೆದು ಹೋಗುವಾಗ ತೆರೆಗಳು ಬಂದಾಗ ಈ ಬಾಕ್ಸ್ಗಳು ಮೇಲಕ್ಕೇಳುತ್ತವೆ. ತೆರೆ ಇಳಿದಾಗ ಕೆಳಗೆ ಇಳಿಯುತ್ತದೆ. ತೆರೆ ನಿಧಾನವಾಗಿ ಒಳಭಾಗದಿಂದ ತೀರದ ಕಡೆಗೆ ಬರುವಾಗ ಅದು ಏರಿಳಿಯುವ ಅನುಭವವನ್ನು ನೀಡುತ್ತದೆ.
ಇದರ ಮೇಲೆ ಸಾಗುವಾಗ ನಾವು ನೀರಿನ ಮೇಲೆ ಸಾಗಿದ ಅನುಭವ ಒಂದು ಕಡೆಯಾದರೆ ಇನ್ನೊಂದು ಕಡೆಯಲ್ಲಿ ನೀರಿನ ಅಲೆಗಳ ಅಬ್ಬರಕ್ಕೆ ಮೇಲಕ್ಕೆ ಹಾರಿ ಕೆಳಗೆ ಬಿದ್ದಂತೆ ಜೋಕಾಲಿಯ ಖುಷಿ.
ಸೇತುವೆಯ ಕೊನೆಯಲ್ಲಿದೆ ವೇದಿಕೆ!
ತೀರದಿಂದ ನೂರು ಮೀಟರ್ ಒಳಗಿನ ವರೆಗೆ ಈ ಸೇತುವೆ ತೊನೆದಾಡುತ್ತದೆ. ಅದರ ಅಂತ್ಯದಲ್ಲಿ 12 ಮೀಟರ್ ಉದ್ದ ಮತ್ತು 7.5 ಮೀಟರ್ ಅಗಲದ ಒಂದು ವೇದಿಕೆಯನ್ನು ನಿರ್ಮಿಸಲಾಗಿದೆ. ಇದರಲ್ಲಿ ಸುಮಾರು 15 ನಿಮಿಷ ನಿಂತು ಸಮುದ್ರದ ಸೌಂದರ್ಯವನ್ನು ಸವಿಯಲು ಅವಕಾಶವಿದೆ.
ಅಪಾಯವೇನೂ ಇಲ್ಲ…
ಈ ಆಕರ್ಷಕ ತೂಗುಮಂಚದಂಥ ಸೇತುವೆಯಲ್ಲಿ ಸಾಗಿ ನೀರಿನ ಅಲೆಗಳಲ್ಲಿ ಕುಣಿದೇಳುವುದು ಸುಂದರ ಅನುಭವವೇ ಆದರೂ ಅದರಲ್ಲಿ ಅಪಾಯವೇನೂ ಇಲ್ಲ,. ಯಾಕೆಂದರೆ ಸೇತುವೆ ಮೇಲೆ ಸಾಗುವಾಗ ಸಿಡಿಯುವ ಅಲೆಗಳ ನೀರು, ಮೇಲೆದ್ದು ಕೆಳಗೆ ಬೀಳುವ ಸೇತುವೆಯ ಓಲಾಟಗಳಿಂದ ಯಾರೂ ಸಮುದ್ರಕ್ಕೆ ಉರುಳಿ ಬೀಳದಂತೆ ಎರಡೂ ಬದಿಗಳಲ್ಲಿ ರೇಲಿಂಗ್ಸ್ ಅಳವಡಿಸಲಾಗಿದೆ. ಹಾಗಾಗಿ ನಿರ್ಭಯವಾಗಿ ಸಾಗಬಹುದು.
ಜತೆಗೆ ಸೇತುವೆಯ ಅಕ್ಕ ಪಕ್ಕದಲ್ಲಿ ರಕ್ಷಣೆಗಾಗಿ ಹತ್ತು ಮಂದಿ ಲೈಫ್ ಗಾರ್ಡ್ಗಳನ್ನು ನೇಮಿಸಲಾಗಿದೆ.
ಉದ್ಘಾಟನೆಯ ಸಂಭ್ರಮ
ಮಲ್ಪೆ ಬೀಚಿನ ಈ ಹೊಸ ಆಕರ್ಷಣೆಯನ್ನು ಉಡುಪಿ ಶಾಸಕ ರಘುಪತಿ ಭಟ್ ಉದ್ಘಾಟಿಸಿದರು. ಅವರಿಗೆ ಮಾಜಿ ಶಾಸಕ ರಘುಪತಿ ಭಟ್ ಸಾಥ್ ನೀಡಿದರು. ಇದು ಉಡುಪಿಯ ಪ್ರವಾಸೋದ್ಯಮಕ್ಕೆ ಹೊಸ ಮೆರುಗು ನೀಡಲಿದೆ ಎಂದು ಇಬ್ಬರೂ ಸಂಭ್ರಮದಿಂದ ಹೇಳಿಕೊಂಡರು.
ದೇಶದಲ್ಲಿ ಎರಡನೆಯದು
ಮಲ್ಪೆಯಲ್ಲಿ ತೆರೆದುಕೊಂಡಿರುವ ಈ ಅಪೂರ್ವ ಸಾಹಸಿಕ ಸಂಭ್ರಮ ರಾಜ್ಯಕ್ಕೆ ಹೊಸತು. ದೇಶದಲ್ಲಿ ಕೇರಳ ಬಿಟ್ಟರೆ ಬೇರೆ ಯಾವ ಭಾಗದಲ್ಲೂ ಇಂಥ ತೇಲು ಸೇತುವೆ ಇಲ್ಲ ಎನ್ನುವುದು ವಿಶೇಷ. ಕೇರಳದ ಬೇಪೋರ್ ಬೀಚ್ನಲ್ಲಿ ಮಾತ್ರ ಇದುವರೆಗೆ ಈ ರೀತಿಯ ಸೇತುವೆ ಇದೆ. ದೇಶದ ಕೆಲವು ಭಾಗದಲ್ಲಿ ಹಿನ್ನೀರಿನಲ್ಲಿ ನೀರಿನ ಮೇಲೆ ನಡಿಗೆಗೆ ಅನುಕೂಲವಾಗುವಂತೆ ಕೆಲವು ಸೇತುವೆಗಳಿವೆ. ಆದರೆ, ಸಮುದ್ರದ ನೀರಿನ ಅಬ್ಬರ, ಇಳಿತಕ್ಕೆ ಏಳುಬೀಳುವ ಇಂಥ ಅನುಭವ ಅತ್ಯಂತ ಅಪರೂಪ.
ಉಡುಪಿ
Viral News: ಶಾಲೆಗೆ ನೀರು ಪೂರೈಸಲು ಹೊರಟಿದ್ದ ಟ್ಯಾಂಕರ್ ವಾಪಸ್; ನೀರು ಕೊಡ್ಬೇಡ ಎಂದು ಗ್ರಾಪಂ ಅಧ್ಯಕ್ಷ ಅವಾಜ್
Govt School: ಶಾಲಾ ಮಕ್ಕಳಿಗೆ ಕುಡಿಯಲು ನೀರು ಕೊಡಿ (Drinking Water) ಎಂದು ಶಿಕ್ಷಕರು ಕೇಳಿದರೆ, ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರು, ಶಾಲೆಗೆ ನೀರು ಕೊಡಬೇಡ ವಾಪಸ್ಸು ಬಾ ಎಂದು ಟ್ಯಾಂಕರ್ ಚಾಲಕನನ್ನು ವಾಪಸ್ ಕರೆಸಿಕೊಂಡಿದ್ದಾರೆ. ಇದಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದ್ದು ಆಡಿಯೋ ವೈರಲ್ ಆಗಿದೆ.
ಉಡುಪಿ: ಇಲ್ಲಿನ ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷರ ವರ್ತನೆಗೆ ಪಂಚಾಯತ್ ಸದಸ್ಯರು ಕಿಡಿಕಾರಿ ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರಿ ಶಾಲಾ ಮಕ್ಕಳಿಗೆ ಕುಡಿಯಲು ನೀರಿಲ್ಲ ಎಂದು ಶಿಕ್ಷಕರು ಪತ್ರವೊಂದನ್ನು ಬರೆದಿದ್ದರು. ಹೀಗಾಗಿ ಪಂಚಾಯತ್ ಸದಸ್ಯ ಪ್ರಶಾಂತ್ ಪೂಜಾರಿ ಶಾಲೆಗೆ ನೀರಿನ ಟ್ಯಾಂಕರ್ ಅನ್ನು ಕಳಿಸಿದ್ದರು. ಆದರೆ ಪಂಚಾಯತ್ ಅಧ್ಯಕ್ಷ, ಟ್ಯಾಂಕರ್ ಚಾಲಕನಿಗೆ ಅವಾಜ್ ಹಾಕಿ ನೀರು ಕೊಡಬೇಡ ಬಾ ಎಂದು ವಾಪಸ್ ಕರೆಸಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಆಡಿಯೊವೊಂದು ಬಹಿರಂಗಗೊಂಡಿದ್ದು, ವೈರಲ್ (Viral news) ಆಗಿದೆ.
ಟ್ಯಾಂಕರ್ ಚಾಲಕನ ತರಾಟೆ ತೆಗೆದುಕೊಂಡ ಪಂಚಾಯತ್ ಸದಸ್ಯ
ಶಾಲೆಗೆ ನೀರು ತಲುಪಿಸದ ಹಿನ್ನೆಲೆಯಲ್ಲಿ ಚಾಲಕನಿಗೆ ಫೋನ್ ಮೂಲಕ ಪಂಚಾಯತ್ ಸದಸ್ಯ ಪ್ರಶಾಂತ್ ಪೂಜಾರಿ ತರಾಟೆ ತೆಗೆದುಕೊಂಡಿದ್ದಾರೆ. ಶಾಲೆಗೆ ಯಾಕೆ ನೀರು ಪೂರೈಸಿಲ್ಲ ಎಂದು ಪಂಚಾಯತ್ ಸದಸ್ಯ ಕೇಳಿದಾಗ, ಅಧ್ಯಕ್ಷರು ಶಾಲೆಗೆ ನೀರು ಬಿಟ್ಟರೆ ಬಿಲ್ ಮಾಡುವುದಿಲ್ಲ ಎಂದಿದ್ದಾರೆ. ಹೀಗಿರುವಾಗ ನಾನೇನು ಮಾಡಲಿ ಸರ್ ಎಂದು ಅಸಹಾಯಕತೆ ತೋರಿದ್ದಾನೆ. ಚಾಲಕ ಹಾಗೂ ಪಂಚಾಯತ್ ಸದಸ್ಯ ಪ್ರಶಾಂತ್ ಪೂಜಾರಿ ನಡುವಿನ ಸಂಭಾಷಣೆಯ ಆಡಿಯೊ ವೈರಲ್ ಆಗಿದೆ.
ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದ ಪಂಚಾಯತ್ ಸದಸ್ಯ
ವಂಡ್ಸೆ ವ್ಯಾಪ್ತಿಗೆ ಬರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 400ಕ್ಕೂ ಹೆಚ್ಚು ಮಕ್ಕಳು ಓದುತ್ತಿದ್ದಾರೆ. ಇತ್ತೀಚೆಗೆ ಶಾಲೆಯಲ್ಲಿ ನೀರಿನ ಅಭಾವ ಉಂಟಾಗಿದೆ. ಹೀಗಾಗಿ ಶಾಲೆಯ ಶಿಕ್ಷಕರು ಶಾಲೆಗೆ ನೀರು ಬೇಕೆಂದು ಗ್ರಾಮ ಪಂಚಾಯತ್ಗೆ ಪತ್ರವೊಂದನ್ನು ಬರೆದಿದ್ದರು.
ಶಿಕ್ಷಕರ ಲಿಖಿತ ಪತ್ರಕ್ಕೆ ಸ್ಪಂದಿಸಿದ ಪಂಚಾಯತ್ ಸದಸ್ಯ ಪ್ರಶಾಂತ್ ಪೂಜಾರಿ ಪಂಚಾಯತ್ ವತಿಯಿಂದ ಕಳೆದ ಜೂ 7ರಂದು ಮಧ್ಯಾಹ್ನ 12:30ರ ಸುಮಾರಿಗೆ ಶಾಲೆಗೆ ನೀರಿನ ಟ್ಯಾಂಕರ್ ಕಳುಹಿಸಿದ್ದರು. ಆದರೆ, ಪಂಚಾಯತ್ ಅಧ್ಯಕ್ಷ ಟ್ಯಾಂಕರ್ ಚಾಲಕನಿಗೆ ಫೋನ್ ಮಾಡಿ ʻನೀರು ಕೊಡಬೇಡ ವಾಪಸ್ ಬಾʼ ಎಂದು ತಿಳಿಸಿದ್ದರಂತೆ.
ಹೀಗಾಗಿ ಚಾಲಕ ಶಾಲಾ ಆವರಣದಲ್ಲೇ 2,750 ಲೀಟರ್ ಬ್ಯಾರಲ್ ಇರಿಸಿ ವಾಪಸ್ ಆಗಿದ್ದಾನೆ. ಬಳಿಕ ಜೂನ್ 8ರ ಬೆಳಗ್ಗೆ ಪುನಃ ಪಂಚಾಯತ್ ಅಧ್ಯಕ್ಷ, ಟ್ಯಾಂಕರ್ ಚಾಲಕನನ್ನು ಕರೆಸಿ, ಶಾಲೆಗೆ ನೀರು ಕೊಡುವುದು ಬೇಡ, ನೀರು ಕೊಟ್ಟಲ್ಲಿ ನೀರಿನ ಬಿಲ್ ಮಾಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: Road Accident: ಅಪಘಾತದಲ್ಲಿ ಮೈಸೂರು ಬಿಜೆಪಿ ಮುಖಂಡ ಮರಣ; ಶಿವಮೊಗ್ಗ, ಕೊಡಗಿನಲ್ಲೂ ಹಾರಿಹೋಯ್ತು ಪ್ರಾಣ
ಹೀಗಾಗಿ ಪಂಚಾಯತ್ ಅಧ್ಯಕ್ಷರ ಬೇಜವಾಬ್ದಾರಿಗೆ ಬೇಸತ್ತಿರುವ ಪಂಚಾಯತ್ ಸದಸ್ಯ ಪ್ರಶಾಂತ್ ಪೂಜಾರಿ ಅವರು ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾರೆ. ಪಂಚಾಯತ್ ಅಧ್ಯಕ್ಷರು ಶಾಲೆಗೆ ನೀರು ಬಿಡದಂತೆ ಪಿಡಿಒ ಮತ್ತು ನೀರಿನ ಚಾಲಕನಿಗೆ ಧ್ಕಮಿ ಹಾಕಿದ್ದಾರೆ. ಹೀಗಾಗಿ ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಜತೆಗೆ ಹರಸಾಹಸ ಪಟ್ಟು ಶಾಲೆಗೆ ನೀರಿನ ವ್ಯವಸ್ಥೆಯನ್ನು ಮಾಡಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
Rain News: ಬಿಪರ್ಜಾಯ್ ಸೈಕ್ಲೋನ್ ಎಫೆಕ್ಟ್; ಮಂಗಳೂರಲ್ಲಿ ಚಿಟಪಟ ಮಳೆ
weather Report: ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆ ಆಗದೇ ಇರುವುದು ತೀವ್ರ ನೀರಿನ ಅಭಾವಕ್ಕೆ ಕಾರಣವಾಗಿದ್ದು, ಮಂಗಳೂರು ವಿಶ್ವವಿದ್ಯಾಲಯವು (Mangalore University) ತನ್ನ ಕಾಲೇಜಿಗೆ ರಜೆಯನ್ನೇ ಘೋಷಿಸಿತ್ತು. ಇದೀಗ ಬಿಪರ್ಜಾಯ್ ಚಂಡಮಾರುತದಿಂದಾಗಿ (Cyclone Biparjoy) ಎಡಬಿಡದೆ ಮಳೆ (Rain News)ಸುರಿಯುತ್ತಿದೆ.
ಮಂಗಳೂರು/ಬೆಂಗಳೂರು: ಬಿಪರ್ಜಾಯ್ ಚಂಡಮಾರುತ ಎಫೆಕ್ಟ್ನಿಂದಾಗಿ (Cyclone Biparjoy) ಶುಕ್ರವಾರ (ಜೂ.8) ಮುಂಜಾನೆ ಮಂಗಳೂರಿನಲ್ಲಿ ಬಿಡದೆ ಮಳೆ (Rain News) ಸುರಿಯುತ್ತಿದೆ. ಮುಂಜಾನೆಯೇ ಆರಂಭಗೊಂಡ ಮಳೆಯಿಂದ ಕಛೇರಿಗೆ ತೆರಳುವವರು, ಶಾಲಾ-ಕಾಲೇಜಿಗೆ ಹೋಗುವವರು ಕೊಂಚ (Weather Report) ಪರದಾಡಿದರು.
ಜೂನ್ 8 ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ವೇಳೆ ವಿದ್ಯುತ್ ವ್ಯತ್ಯಯ ಉಂಟಾಗಬಹುದು. ಬಿರುಗಾಳಿ ಸಹಿತ ಮಳೆಯಾಗುವ ಕಾರಣದಿಂದಾಗಿ ಮರದಡಿ ನಿಲ್ಲದಂತೆ ಸೂಚನೆ ನೀಡಲಾಗಿದೆ. ಇನ್ನು ಕರ್ನಾಟಕ ಕರಾವಳಿಯ ಸಮುದ್ರ ತೀರಾದಲ್ಲಿ ಗಾಳಿ ವೇಗವು 45-55 ಕಿ.ಮೀ ತಲುಪುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಐಎಂಡಿ ಎಚ್ಚರಿಕೆ ನೀಡಿದೆ.
ಬಿಪರ್ಜಾಯ್ ಚಂಡಮಾರುತ ಎಫೆಕ್ಟ್ನಿಂದಾಗಿ ಉತ್ತರಕನ್ನಡದ ಭಟ್ಕಳ, ಹೊನ್ನಾವರ, ಅಂಕೋಲಾ ತಾಲೂಕುಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಬಿಸಿಲಿಗೆ ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಬಿಪರ್ಜಾಯ್ ಚಂಡಮಾರುತ ಹಿನ್ನೆಲೆ ಜೂ.10 ರವರೆಗೆ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಡಲತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಿದ್ದು, ಭಾರೀ ಪ್ರಮಾಣದಲ್ಲಿ ಗಾಳಿ ಬೀಸುತ್ತಿದೆ. ಹೀಗಾಗಿ ತೀರ ಪ್ರದೇಶದ ನಿವಾಸಿಗಳಿಗೆ ಎಚ್ಚರಿಕೆಯಲ್ಲಿ ಇರುವಂತೆ ಸೂಚನೆ ನೀಡಲಾಗಿದೆ. ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇತ್ತ ಕುಮಟಾ, ಕಾರವಾರ ತಾಲೂಕಿನಲ್ಲಿ ಬಿಸಿಲಿನ ವಾತಾವರಣ ಇದೆ.
ಬೆಂಗಳೂರಲ್ಲಿ ಕೆಲವೊಮ್ಮೆ ವಾತಾವರಣವು ಬಿಸಿಲಿನಿಂದ ಕೂಡಿದ್ದರೆ ಮಧ್ಯಾಹ್ನದ ವೇಳೆ ಮೋಡ ಕವಿಯಲಿದೆ. ಸಂಜೆ ಅಥವಾ ರಾತ್ರಿಯಂದು ಮಳೆಯಾಗುವ ಸಾಧ್ಯತೆ ಇದೆ. ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಮೈಸೂರು, ಮಂಡ್ಯ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಳಗಾವಿ, ಬಾಗಲಕೋಟೆ ಮತ್ತು ಧಾರವಾಡ, ಗದಗ, ಕೊಪ್ಪಳ, ರಾಯಚೂರು ಹಾಗೂ ಬಳ್ಳಾರಿ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಮಾತ್ರ ಮಳೆಯಾಗಲಿದೆ. ಮಲೆನಾಡಿನ ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಅಲ್ಲಲ್ಲಿ ವರುಣ ಅಬ್ಬರಿಸಲಿದ್ದಾನೆ.
ಇದನ್ನೂ ಓದಿ:Mother Dairy: ಬಳಕೆದಾರರ ಮೇಲೆ ‘ಮದರ್ ಡೇರಿ’ ಮಮತೆ, ಅಡುಗೆ ಎಣ್ಣೆ ದರದಲ್ಲಿ ಭಾರೀ ಇಳಿಕೆ!
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 42 ಡಿ.ಸೆ – 27 ಡಿ.ಸೆ
ಗದಗ: 37 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 23 ಡಿ.ಸೆ
ಬೆಳಗಾವಿ: 35 ಡಿ.ಸೆ – 21 ಡಿ.ಸೆ
ಕಾರವಾರ: 33 ಡಿ.ಸೆ – 27 ಡಿ.ಸೆ
ಮಂಗಳೂರು: 34 ಡಿ.ಸೆ – 25 ಡಿ.ಸೆ
ಹೊನ್ನಾವರ: 33 ಡಿ.ಸೆ- 25 ಡಿ.ಸೆ
ಬೆಂಗಳೂರು ನಗರ: 32 ಡಿ.ಸೆ – 22 ಡಿ.ಸೆ
ಉತ್ತರ ಕನ್ನಡದಲ್ಲಿ ವರುಣಾರ್ಭಟ ಇಲ್ಲಿದೆ ನೋಡಿ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
Weather Report: ಕರಾವಳಿಯಲ್ಲಿ ಗುಡುಗಲಿರುವ ಮಳೆ; ಮಲೆನಾಡು, ಒಳನಾಡಲ್ಲಿ ಹೇಗಿರಲಿದೆ ಪ್ರಭಾವಳಿ
Weather Report: ಬಿಪರ್ಜಾಯ್ ಸೈಕ್ಲೋನ್ ಎಫೆಕ್ಟ್ನಿಂದಾಗಿ ರಾಜ್ಯಾದ್ಯಂತ ಇನ್ನೂ ಎರಡು ದಿನ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ವರುಣ (Rain News) ಗುಡುಗಿದ್ದರೆ, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಕೊಂಚ ತಗ್ಗಿದ್ದಾನೆ.
ಬೆಂಗಳೂರು: ಬಿಪರ್ಜಾಯ್ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯಾದ್ಯಂತ ಇನ್ನೆರಡು ದಿನ ಮಳೆಯಾಗುವ (Rain News) ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಮೈಸೂರು, ಮಂಡ್ಯ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಳಗಾವಿ, ಬಾಗಲಕೋಟೆ ಮತ್ತು ಧಾರವಾಡ, ಗದಗ, ಕೊಪ್ಪಳ, ರಾಯಚೂರು ಹಾಗೂ ಬಳ್ಳಾರಿ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಕೆಲವು ಕಡೆ ವ್ಯಾಪಕ ಮಳೆಯಾಗಲಿದೆ. ಮಲೆನಾಡಿನ ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಅಲ್ಲಲ್ಲಿ ವರುಣ ಅಬ್ಬರಿಸಲಿದ್ದಾನೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಗುಡುಗು ಮುನ್ನೆಚ್ಚರಿಕೆ
ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು ಕೂಡ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 35-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ರಾಜ್ಯದಲ್ಲಿ ಬುಧವಾರದಂದು ಕರಾವಳಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಯಾದಗಿರಿಯ ಕವಾಡಿಮಟ್ಟಿ ಏಆರ್ಜಿ 6 ಸೆಂ.ಮೀ ಮಳೆಯಾಗಿದೆ. ಕಲಬುರಗಿಯ ಸುಲೇಪೇಟೆ 3 ಸೆಂ.ಮೀ ಹಾಗೂ ಕೋಡ್ಲಾ, ಚಿಂಚೋಳಿ, ಕುಣಿಗಲ್, ಹೆಸರಘಟ್ಟ, ತುಮಕೂರಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ, ಬೆಳ್ತಂಗಡಿ, ಕಾರವಾರ, ಕೋಟ, ಹೊನಾವರ ಹಾಗೂ ಮುಧೋಳೆ, ಅಡಕಿ, ಸೇಡಂ, ಸೈದಾಪುರ, ಬೀದರ್ ಪಿಟಿಒ, ಬೀದರ್, ಹುಮನಾಬಾದ್, ಬಾಳೆಹೊನ್ನೂರು, ಕೊಟ್ಟಿಗೆಹಾರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಗರಿಷ್ಠ ಉಷ್ಣಾಂಶ 41.5 ಡಿಗ್ರಿ ಸೆಲ್ಸಿಯಸ್ ಕಲಬುಗಿರಯಲ್ಲಿ ದಾಖಲಾಗಿದೆ.
ಬಿರುಗಾಳಿ ಮಳೆಗೆ ಕೊಪ್ಪಳ ತತ್ತರ
ಕೊಪ್ಪಳ ತಾಲೂಕಿನ ಕುಟುಗನಹಳ್ಳಿ ಗ್ರಾಮದಲ್ಲಿ ಗುರುವಾರ (ಜೂ. 8) ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಮಳೆಯಿಂದಾಗಿ ಅಸ್ತಮಾ ಕಾಯಿಲೆಗೆ ಔಷಧಿ ಪಡೆಯಲು ಬಂದಿದ್ದ ಜನರು ಪರದಾಡಿದರು. ಕುಟುಗನಹಳ್ಳಿಯಲ್ಲಿ ಅಸ್ತಮಾಕ್ಕೆ ವನಸ್ಪತಿ ಔಷಧಿ ನೀಡಲಾಗುತ್ತಿದೆ. ಔಷಧಿಗಾಗಿ ರಾಜ್ಯದ ಮೂಲೆ ಮೂಲೆಯಿಂದ ಸಾವಿರಾರು ಜನರು ಬಂದಿದ್ದಾರೆ. ಮಳೆಗೆ ಕೆಲವರು ಮರದಡಿ ಆಶ್ರಯ ಪಡೆದರೆ, ಹಲವರು ತಾವು ತಂದಿದ್ದ ಕೊಡೆಗಳ ಸಹಾಯವನ್ನು ಪಡೆದಿದ್ದರು. ಜತೆಗೆ ಅಕ್ಕಿ ಚೀಲವನ್ನು ಹಿಡಿದು ಕ್ಯೂನಲ್ಲಿ ನಿಂತಿರುವುದು ಕಂಡು ಬಂತು.
ಕಾರಿನ ಮೇಲೆ ಉರುಳಿ ಬಿದ್ದ ಮರ
ಕೊಪ್ಪಳ ನಗರ ಹೊರವಲಯದ ವಿಶ್ವತೇಜ ಮೋಟರ್ಸ್ ಬಳಿ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದಿದೆ. ಡಸ್ಟರ್ ಕಾರನ್ನು ಸರ್ವಿಸ್ಗಾಗಿ ನಿಲ್ಲಿಸಲಾಗಿತ್ತು. ಭಾರಿ ಗಾಳಿ ಮಳೆಗೆ ಮರವು ಕಾರಿನ ಮೇಲೆ ಬಿದ್ದಿದ್ದು, ಜಖಂಗೊಂಡಿದೆ.
ಇನ್ನು ಬಿಸಿಲಿನಿಂದ ಕಂಗೆಟ್ಟಿದ್ದ ಮಂಗಳೂರಿನ ಜನರಿಗೆ ವರುಣ ತಂಪೆರೆದಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆ ಮಳೆ ಸುರಿಯುತ್ತಿದೆ. ಮಳೆ ಇಲ್ಲದೆ ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿತ್ತು. ಮಳೆಯಿಂದಾಗಿ ಜನರು ಸಂತಸಗೊಂಡಿದ್ದಾರೆ.
ಇದನ್ನೂ ಓದಿ: Monsoon Precaution: ಮಳೆಗಾಲಕ್ಕೆ ಶುರುವಾಯ್ತು ಕ್ಷಣಗಣನೆ; ಈ ಆ್ಯಪ್ಗಳು ಈಗ ನಿಮಗೆ ಅತ್ಯಗತ್ಯ
ಕೋಲಾರದಲ್ಲಿ ಆಲಿಕಲ್ಲು ಮಳೆ
ಕೋಲಾರ ಹಾಗೂ ಶ್ರೀನಿವಾಸಪುರದಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಭಾರಿ ಮಳೆ ಸುರಿದಿದೆ. ಕೆಲವು ಕಡೆಗಳಲ್ಲಿ ಆಲಿಕಲ್ಲು ಸಹಿತ ಮಳೆ ಆಗುತ್ತಿದ್ದು, ತರಕಾರಿ ತೋಟಗಳಿಗೆ ಹಾನಿ ಆಗಿದೆ. ಮಾವು ಬೆಳೆಗಾರರಿಗೆ ಕಾಯಿ ಉದುರುವ ಭೀತಿ ಎದುರಾಗಿದೆ. ಇನ್ನೂ ಎರಡು ದಿನಗಳ ಕಾಲ ಕೋಲಾರ ಜಿಲ್ಲೆಯಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಇದೆ. ಹೀಗಾಗಿ ರೈತರು ಮುಂಜಾಗ್ರತಾ ಕ್ರಮವನ್ನು ತೆಗೆದು ಕೊಳ್ಳಲು ಕೃಷಿ ವಿಜ್ಞಾನ ಕೇಂದ್ರ ಸೂಚನೆ ನೀಡಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
Weather Report: ಬಿಪರ್ಜಾಯ್ ಸೈಕ್ಲೋನ್ ಎಫೆಕ್ಟ್; ರಾಜ್ಯಾದ್ಯಂತ ಇನ್ನೂ 4 ದಿನ ಜಡಿ ಮಳೆ
Weather Report: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಎದ್ದಿದ್ದು, ಇದರ ಪ್ರಭಾವದಿಂದಾಗಿ ರಾಜ್ಯಾದ್ಯಂತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಯಾವ್ಯಾವ ಜಿಲ್ಲೆಗಳಿಗೆ ಅಲರ್ಟ್ ನೀಡಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ.
ಬೆಂಗಳೂರು: ಬಿಪರ್ಜಾಯ್ ಸೈಕ್ಲೋನ್ (Cyclone Biporjoy) ಎಫೆಕ್ಟ್ನಿಂದಾಗಿ ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿ ಸೇರಿ ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮುಂದಿನ 4 ದಿನ ಮಳೆಯ ಅಬ್ಬರ (Weather Report) ಇರಲಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಗದಗ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಬಾಗಲಕೋಟೆ, ಧಾರವಾಡ, ಹಾವೇರಿಯಲ್ಲಿ ಒಣಹವೆ ಇರಲಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಲ್ಲೂ ಮಳೆಯ ಅಬ್ಬರ ಇರಲಿದೆ. ವಿಜಯನಗರ, ದಾವಣಗೆರೆಯಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ.
ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ತಾಪಮಾನ ಏರಿಕೆ ಮುನ್ಸೂಚನೆ
ಮಳೆ ಎಚ್ಚರಿಕೆಯ ನಡುವೆಯೂ ಗರಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಹೆಚ್ಚಾಗುವ ಸಾಧ್ಯತೆ ಇದೆ. ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿ.ಮೀ ಯಿಂದ 60 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣ ಇರಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಇದನ್ನೂ ಓದಿ: Cyclone Biparjoy: ಬಿಪರ್ಜಾಯ್ ಚಂಡಮಾರುತ ಭೀತಿ; ಈ ಪದದ ಅರ್ಥ ಏನು? ಮೊದಲು ಎಲ್ಲಿ ಬಳಕೆ?
ಮಂಗಳವಾರ (ಜೂ.6) ಶಿವಮೊಗ್ಗದ ಹೊಳೆಹೊನ್ನೂರು, ಹಾಸನದ ಚನ್ನರಾಯಪಟ್ಟಣದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಕಲಬುರಗಿಯ ಮಹಾಗಾವ್, ಯಾದಗಿರಿಯ ಶೋರಪುರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಗರಿಷ್ಠ ಉಷ್ಣಾಂಶ 39.9 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
-
ಸುವಚನ11 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
South Cinema23 hours ago
Priya Prakash Varrier: ಕಣ್ಣು ಹೊಡೊಯೊ ಐಡಿಯಾ ಕೊಟ್ಟಿದ್ದು ನಾನೆ ಎಂದ ಪ್ರಿಯಾ; ಆಕೆಗೆ ತೈಲ ಕೊಡ್ರಪ್ಪ ಎಂದ ನಿರ್ದೇಶಕ!
-
South Cinema22 hours ago
Kannada New Movie: ಹಿಮಾಲಯದ ಕೊರೆಯುವ ಚಳಿಯಲ್ಲಿ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಶೂಟಿಂಗ್!
-
South Cinema21 hours ago
Nandamuri Balakrishna: ‘ಐ ಡೋಂಟ್ ಕೇರ್ʼ ಎಂದು ಮಾಸ್ ಅವತಾರವೆತ್ತ ನಂದಮೂರಿ ಬಾಲಕೃಷ್ಣ; ಟೈಟಲ್ ರಿವೀಲ್!
-
ಪ್ರಮುಖ ಸುದ್ದಿ17 hours ago
ವಿಸ್ತಾರ ಸಂಪಾದಕೀಯ: ಇಂದಿರಾ ಗಾಂಧಿ ಹತ್ಯೆಯ ಸಂಭ್ರಮ; ಕೆನಡಾದಲ್ಲಿ ಖಲಿಸ್ತಾನಿಗಳ ಉದ್ಧಟತನ ಖಂಡನೀಯ
-
South Cinema24 hours ago
Sara Ali Khan: ಶುಭ್ಮನ್ ಗಿಲ್ ಜತೆ ಡೇಟಿಂಗ್, ಕೂನೆಗೂ ಉತ್ತರ ಕೊಟ್ಟರಾ ಸಾರಾ
-
ಪ್ರಮುಖ ಸುದ್ದಿ22 hours ago
ವಿಧವೆ ಅನ್ನೋದಕ್ಕೆ ರಾಷ್ಟ್ರಪತಿಯನ್ನು ಸಂಸತ್ ಭವನ ಉದ್ಘಾಟನೆಗೆ ಮೋದಿ ಆಹ್ವಾನಿಸಿಲ್ಲವೆಂದ ಕುಂ. ವೀರಭದ್ರಪ್ಪ
-
ಪ್ರಮುಖ ಸುದ್ದಿ23 hours ago
Textbook Revision: ಬುದ್ಧಿಜೀವಿ ಎಂದು ಹೇಳಿಕೊಂಡು ಕೆಲವರು ಓಡಾಡುತ್ತಿದ್ದಾರೆ!: ಸರ್ಕಾರಕ್ಕೆ ಹಿಗ್ಗಾಮುಗ್ಗಾ ಜಾಡಿಸಿದ ಮಾಜಿ ಸಚಿವ ಬಿ.ಸಿ. ನಾಗೇಶ್