Rain News : 9 ಜಿಲ್ಲೆಗಳಲ್ಲಿ ಪ್ರವಾಹ ಆತಂಕ; ಮೂವರ ಸಾವು, 11 ಜಿಲ್ಲೆ ಶಾಲೆಗಳಿಗೆ ರಜೆ! - Vistara News

ಕರ್ನಾಟಕ

Rain News : 9 ಜಿಲ್ಲೆಗಳಲ್ಲಿ ಪ್ರವಾಹ ಆತಂಕ; ಮೂವರ ಸಾವು, 11 ಜಿಲ್ಲೆ ಶಾಲೆಗಳಿಗೆ ರಜೆ!

Rain News : ರಾಜ್ಯದಲ್ಲಿ ಮುಂಗಾರು ಮಳೆ ತೀವ್ರತೆ ಪಡೆದುಕೊಂಡಿದ್ದು, ಹಲವು ಕಡೆ ಪ್ರವಾಹದ ಆತಂಕ ಎದುರಾಗಿದೆ. ಅಲ್ಲದೆ, 11 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಕೆಲವೆಡೆ ಮಳೆ ಅನಾಹುತಗಳೂ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ.

VISTARANEWS.COM


on

Kumta Rainfall Effect captured in drone
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಂಗಾರು ಆರ್ಭಟಕ್ಕೆ (Rain News) ರಾಜ್ಯದ 9 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. 11 ಜಿಲ್ಲೆಗಳ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿಯ ಬೈಂದೂರಿನಲ್ಲಿ ಸೆಲ್ಫಿ ಗೀಳಿಗೆ ಬಿದ್ದ ಯುವಕ ಜಲಪಾತದಲ್ಲಿ ಜಲಸಮಾಧಿಯಾಗಿದ್ದರೆ, ಕಾಲೇಜಿಗೆ ರಜೆಯಿದ್ದ ಹಿನ್ನೆಲೆಯಲ್ಲಿ ಈಜಲು ಹೋಗಿದ್ದ ಯುವಕ ಸಹ ನೀರುಪಾಲಾಗಿದ್ದಾನೆ. ಇನ್ನು ಜೇವರ್ಗಿ ತಾಲೂಕಿನ ಬಿರಾಳ್ ಬಿ ಗ್ರಾಮದಲ್ಲಿ ಮನೆಯ ಮಣ್ಣಿನ ಗೋಡೆ ಕುಸಿದು ಮಹಿಳೆಯೊಬ್ಬರು ಕೊನೆಯುಸಿರೆಳೆದಿದ್ದಾರೆ.

ಈಜಲು ತೆರಳಿದ್ದ ಯುವಕ ನೀರು ಪಾಲು

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದ ರಾಮತೀರ್ಥಕ್ಕೆ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ. ಮಣಿಕಂಠ ಮಂಜುನಾಥ ನಾಯ್ಕ (17) ಮೃತಪಟ್ಟ ವಿದ್ಯಾರ್ಥಿ. ಪಟ್ಟಣದ ರಾಯಲಕೇರಿ ನಿವಾಸಿಯಾಗಿದ್ದಾನೆ. ಈತನು ಪಟ್ಟಣದ ಸರ್ಕಾರಿ ಮೋಹನ ಕೆ. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು, ಸೋಮವಾರ ಮಳೆಯ ಕಾರಣದಿಂದ ಕಾಲೇಜಿಗೆ ರಜೆ ಇರುವುದರಿಂದ ಈಜಲು ತೆರಳಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಗೋಡೆ ಕುಸಿದು ಮಹಿಳೆ ಸಾವು

ಮಳೆಗೆ ಮನೆ ಗೋಡೆ ಕುಸಿದು ಮಹಿಳೆ ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಿರಾಳ್ ಬಿ ಗ್ರಾಮದಲ್ಲಿ ನಡೆದಿದೆ. ಬಸಮ್ಮ (40) ಮೃತ ಮಹಿಳೆ. ಮಳೆಯಿಂದ ಮನೆಯ ಮಣ್ಣಿನ ಗೋಡೆ ಕುಸಿದು ಬಿದ್ದಿದ್ದರಿಂದ ಮಹಿಳೆ ಕೊನೆಯುಸಿರೆಳೆದಿದ್ದಾರೆ.

ಜಲಪಾತ ನೋಡಲು ಹೋಗಿ ಕಾಲು ಜಾರಿ ಬಿದ್ದು ಸಾವು

ಉಡುಪಿ ಜಿಲ್ಲೆಯ ಅರಶಿನಗುಂಡಿ ಜಲಪಾತ (Arashinagundi falls) ವೀಕ್ಷಣೆಗೆ ತೆರಳಿದ್ದ ಯುವಕನೊಬ್ಬ ಇದ್ದಕ್ಕಿದ್ದಂತೆ ಕಾಲು ಜಾರಿ ಬಿದ್ದು ಉಕ್ಕಿ ಹರಿಯುತ್ತಿದ್ದ ಜಲಪಾತದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಯುವಕ ಜಲಪಾತದಲ್ಲಿ ಬೀಳುತ್ತಿರುವ ದೃಶ್ಯ ಮತ್ತೊಬ್ಬ ಯುವಕನ ಮೊಬೈಲ್‌ನಲ್ಲಿ (Tragedy video) ಸೆರೆಯಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದಲ್ಲಿ ಈ ದುರ್ಘಟನೆ ನಡೆದಿದೆ.

ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ. ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಯುವಕ, ಜಲಪಾತ ವೀಕ್ಷಣೆಗೆ ತೆರಳಿದ್ದ.

ಮಲೆನಾಡು ಹಾಗೂ ಪಶ್ಚಿಮ ಘಟ್ಟಗಳ ಎಲ್ಲ ಕಡೆ ಭಾರೀ ಮಳೆಯಾಗುತ್ತಿದೆ. ಹೀಗಾಗಿ ನದಿಗಳು ಹಾಗೂ ಜಲಪಾತಗಳು ತುಂಬಿ ಹರಿಯುತ್ತಿವೆ. ಜಲಪಾತಗಳ ಬಳಿಗೆ ತೆರಳಬೇಕಿದ್ದರೆ ಎಚ್ಚರಿಕೆಯಿಂದಿರಿ. ಸೆಲ್ಫಿ ತೆಗೆದುಕೊಳ್ಳುವುದು, ಜಲಪಾತದ ತೀರ ಸಮೀಪಕ್ಕೆ ಹೋಗುವುದು, ನೀರು ಬಿದ್ದು ಜಾರುತ್ತಿರುವ ಕಡೆಗಳಲ್ಲಿ ಕಾಲಿಡುವುದು ಮುಂತಾದ ಹುಚ್ಚಾಟಗಳು ಬೇಡ ಎಂದು ಪೊಲೀಸ್‌ ಇಲಾಖೆ ಹಾಗೂ ಅರಣ್ಯ ಇಲಾಖೆ ಎಚ್ಚರಿಸುತ್ತಿದೆ. ಆದರೂ ಮೈಮರೆವಿನಿಂದ ಇಂಥ ಅನಾಹುತಗಳು ಸಂಭವಿಸುತ್ತಿವೆ.

ಇದನ್ನೂ ಓದಿ: Viral Video: ಫೋನ್‌ನಲ್ಲೇ ಮುಳುಗಿರಬೇಡ ಎಂದು ಪೋಷಕರು ಬೈದಿದ್ದಕ್ಕೆ ಜಲಪಾತಕ್ಕೆ ಜಿಗಿದ ಯುವತಿ

ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಭೂಕುಸಿತವಾಗಿ ಅಡ್ಡಲಾಗಿ ಬಿದ್ದ ಮರ

ಕೊಡಗು ಜಿಲ್ಲೆಯಲ್ಲಿಯೂ ಮಳೆಯ ಅಡ್ಡಪರಿಣಾಮ ಬೀರಿದೆ. ಮರ ಬಿದ್ದ ಪರಿಣಾಮ ಮಡಿಕೇರಿ-ಮಂಗಳೂರು ರಾಷ್ಠ್ರೀಯ ಹೆದ್ದಾರಿ 275 ಸಂಚಾರ ಬಂದ್ ಆಗಿದೆ. ಮದೆನಾಡು ಸಮೀಪ ಕರ್ತೋಜೆಯಲ್ಲಿ ಭೂ ಕುಸಿತವಾಗಿ ಮರ ಬಿದ್ದಿದ್ದರಿಂದ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆಯಾಯಿತು. ಇದರಿಂದ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ರಸ್ತೆಯ ಒಂದು ಬದಿ ಮಣ್ಣು ಕುಸಿದು ಮರ ಬಿದ್ದಿದ್ದರಿಂದ ತೆರವಿಗೆ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಹರಸಾಹಸ ಪಟ್ಟರು. ಭಾರಿ ಮಳೆಯ ನಡುವೆ ಜೆಸಿಬಿ ಬಳಸಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಹಾಸನ ಜಿಲ್ಲೆಯ ಐದು ತಾಲೂಕುಗಳಲ್ಲಿ ರಜೆ

ಭಾರಿ ಮಳೆ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಹಾಗೂ ಹಾಸನ ತಾಲೂಕಿನಲ್ಲಿ ಜುಲೈ 25ರಂದು ಅಂಗನವಾಡಿ ಸೇರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಳೆ‌ಯಿಂದ ಸೋಮವಾರವೂ ರಜೆ ನೀಡಲಾಗಿತ್ತು.

ಇದನ್ನೂ ಓದಿ | Rain News : ಮುಂಗಾರಿಗೆ ರಾಜ್ಯದಲ್ಲಿ 27 ಬಲಿ; ಹೈ ಅಲರ್ಟ್‌ ಇರಲು ಡಿಸಿಗಳಿಗೆ ಸೂಚಿಸಿದ ಕೃಷ್ಣ ಭೈರೇಗೌಡ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 25 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡದಲ್ಲಿ ಎಲ್ಲ ಅಂಗನವಾಡಿ, ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಸೋಮವಾರದಿಂದ ಧಾರಾಕಾರ ಮಳೆಗೆ ನದಿ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ರಜೆ ಘೋಷಿಸಲಾಗಿದೆ. ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ ಪದವಿ‌ ಕಾಲೇಜುಗಳವರೆಗೆ ರಜೆ ಘೋಷಿಸಿ ದ‌ಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ಕೂಡ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು ತತ್ತರ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬಾಲಕರ ವಿದ್ಯಾರ್ಥಿ ನಿಲಯದ ಕಾಂಪೌಂಡ್ ದಿಢೀರ್ ಕುಸಿದಿದೆ. ಕೊಪ್ಪ ತಾಲೂಕಿನ ಬಸರಿಕಟ್ಟೆ ಗ್ರಾಮದಲ್ಲಿರುವ ಕಾಂಪೌಂಡ್ ಕುಸಿದಿದೆ. ಈ ದೃಶ್ಯವನ್ನು ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

Rain effect in Karnataka
ಹಾಸ್ಟೆಲ್‌ ಕಾಂಪೌಂಡ್‌ ಕುಸಿತ

ಇತ್ತ ಕೊಪ್ಪ ತಾಲೂಕಿನ ಕೊಳೂರು ಬಳಿ ಶೃಂಗೇರಿ ಜಯಪುರ ರಸ್ತೆ ಕುಸಿಯುವ ಹಂತ ತಲುಪಿದೆ. ಜಯಪುರ ಶೃಂಗೇರಿ ರಸ್ತೆಯ ಕಿರು ಸೇತುವೆಗೆ ಹಾನಿ ಆಗಿದೆ. ತೀವ್ರ ಮಳೆಯಿಂದಾಗಿ ಸೇತುವೆ ಕುಸಿಯುವ ಭೀತಿ ಇದ್ದು, ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಬ್ಯಾರಿಕ್ಯಾಡ್ ಅಳವಡಿಸಿದ್ದಾರೆ.

ಗಾಳಿ-ಮಳೆಗೆ ಶಾರ್ಟ್‌ ಸರ್ಕ್ಯೂಟ್

ಕಾಫಿನಾಡು ಮಲೆನಾಡು ಭಾಗದಲ್ಲಿ ಗಾಳಿ-ಮಳೆ ಅಬ್ಬರ ಮುಂದುವರಿದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ವಿದ್ಯುತ್ ತಂತಿ ಬೆಂಕಿ ಹೊತ್ತಿದೆ. ಬೆಂಕಿ ಹತ್ತಿ ಭದ್ರಾ ನದಿಗೆ ತುಂಡಾಗಿ ವಿದ್ಯುತ್ ತಂತಿ ಬಿದ್ದಿದೆ. ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಬಳಿ ಭದ್ರಾ ನದಿಗೆ ವಿದ್ಯುತ್ ತಂತಿ ಬಿದ್ದಿದೆ. ಇದರಿಂದಾಗಿ ಹೊರನಾಡು, ಬಲಿಗೆ ಸೇರಿದಂತೆ ಹತ್ತಾರು ಹಳ್ಳಿಗಳು ಕರೆಂಟ್‌ ಇಲ್ಲದಂತಾಗಿದೆ. ಭಾರೀ ಗಾಳಿ ಮಳೆ ಮಧ್ಯೆ ದುರಸ್ತಿ ಕೂಡ ಕಷ್ಟವಾಗಿದೆ.

Rain effect in Karnataka
ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌

ಶಿವಮೊಗ್ಗದಲ್ಲಿ ಮದರಸದ ಗೋಡೆ ಕುಸಿತ

ಶಿವಮೊಗ್ಗದಲ್ಲೂ ಭಾರಿ ಮಳೆ-ಗಾಳಿಗೆ ಮದರಸದ ಗೋಡೆ ಮೇಲ್ಚಾವಣಿ ಕುಸಿದಿದೆ. ಚುಂಚನಾಲ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಗಾಳಿಬೈಲು ಗ್ರಾಮದ ಐತಿಹಾಸಿಕ ಹಿನ್ನೆಲೆ ಇರುವ ಮದರಸದ ಶಾಲೆಯ ಮೇಲ್ಚಾವಣಿ ಕಳಚಿದೆ. ಭಾನುವಾರ ಸುರಿದ ಭಾರಿ ಮಳೆಗೆ ಈ ದುರ್ಘಟನೆ ನಡೆದಿದ್ದು, ಮಕ್ಕಳಿಗೆ ರಜೆ ಕಾರಣಕ್ಕೆ ಅಪಾಯ ತಪ್ಪಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ, ಸೊರಬ ಭದ್ರಾವತಿ ತಾಲೂಕಿನ ಗ್ರಾಮಗಳಲ್ಲಿ ಮನೆಗಳು ಕುಸಿದಿದೆ. ಸಾಗರ ತಾಲೂಕಿನ ತಾಳಗುಪ್ಪ ಹೋಬಳಿಯಲ್ಲಿ ಜಮೀನು ಜಲಾವೃತಗೊಂಡಿದೆ. ಬರೂರು ಗ್ರಾಮದಲ್ಲಿ ಕಾಲುವೆ ಒಡೆದು ನೀರೆಲ್ಲವೂ ಜಮೀನುಗಳಿಗೆ ನುಗ್ಗಿದೆ. ಕೃಷಿ ಮಾಡಲಾಗದೇ ರೈತರು ಹೈರಾಣಾಗಿದ್ದಾರೆ. ಜಮೀನುಗಳು ಕೆರೆಯಂತೆ ಮಾರ್ಪಾಟಾಗಿದೆ.

ಶಿವಮೊಗ್ಗದಲ್ಲಿ ತುಂಗಾ ಜಲಾಶಯದಿಂದ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಕೋರ್ಪಲಯ್ಯ ಛತ್ರ ಮಂಟಪ ಸಂಪೂರ್ಣ ಮುಳುಗಡೆಯಾಗಿದೆ. ಶರಾವತಿ ಹಿನ್ನೀರಿನ ಕಣಿವೆ ಪ್ರದೇಶದಲ್ಲಿ ನಿರಂತರ ಮಳೆಗೆ ಹೊಲ-ಗದ್ದೆಗಳೆಲ್ಲ ಜಲಾವೃತಗೊಂಡಿದೆ. ಬಿತ್ತನೆ ಮಾಡಿದ ಸಸಿಯ ಮಡಿಗಳೆಲ್ಲ ನೀರು ಪಾಲಾಗಿದೆ. ಅಲ್ಲಲ್ಲಿ ಧರೆ ಕುಸಿತ, ವಿದ್ಯುತ್ ಕಂಬಗಳು ಉರುಳಿದೆ. ಇದರಿಂದಾಗಿ ಕರೂರು ಹೋಬಳಿಯ ಹಿನ್ನೀರು ಪ್ರದೇಶ ಕಗ್ಗತ್ತಲೆಯಲ್ಲಿದೆ.

ಚಿಕ್ಕೋಡಿಯ ಪಂಚಗಂಗಾ ನದಿಯ ರುದ್ರ ನರ್ತನ

ಅಪಾಯದ ಮಟ್ಟ ಮೀರಿ ಪಂಚಗಂಗಾ ನದಿ ಹರಿಯುತ್ತಿದೆ. ಪಂಚಗಂಗಾ ನದಿಯ ರುದ್ರ‌ನರ್ತನ ಡ್ರೋನ್ ಕಣ್ಣಲ್ಲಿ ಸೆರೆಯಾಗಿದೆ. ಕೃಷ್ಣಾ ನದಿಯ ಉಪನದಿಯಾಗಿರುವ ಪಂಚಗಂಗಾ ನದಿಯಲ್ಲಿ ನೀರು ಹೆಚ್ಚಳವಾಗುತ್ತಿರುವುದರಿಂದ ಕೊಲ್ಹಾಪುರದ 80ಕ್ಕೂ ಹೆಚ್ಚು ಸೇತುವೆಗಳು ಜಲಾವೃತಗೊಂಡಿವೆ. ಕೊಲ್ಹಾಪುರ ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ ಜಿಲ್ಲೆಯ ‌ಮೂಡಲಗಿ ತಾಲೂಕಿನ ಮತ್ತೆರಡು ಸೇತುವೆಗಳು ಮುಳುಗಡೆ ಆಗಿವೆ. ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಅವರಾದಿ ನಂದಗಾಂವ್ ಹಾಗೂ ಸುಣಧೋಳಿ ಮೂಡಲಗಿ ಸೇತುವೆಗಳು ಮುಳುಗಡೆ ಆಗಿದೆ. ಸೇತುವೆ ಮುಳುಗಡೆಯಿಂದ ನಾಲ್ಕು ಹಳ್ಳಿಗಳ ಸಂಚಾರವು ಬಂದ್‌ ಆಗಿದೆ. ಅನ್ಯ ಮಾರ್ಗವನ್ನು ಬಳಸಿ ಸವಾರರು ಪ್ರಯಾಣಿಸುತ್ತಿದ್ದಾರೆ.

ದಾವಣಗೆರೆಯಲ್ಲಿ ಅಂಗಡಿಗಳು ಮುಳುಗಡೆ

ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾದ ಹಿನ್ನೆಲೆ ತುಂಗಾ ಭದ್ರಾ ನದಿ ತುಂಬಿ ಹರಿಯುತ್ತಿದೆ. ಇತ್ತ ದಾವಣಗೆರೆಯ ಉಕ್ಕಡಗಾತ್ರಿ ದೇವಸ್ಥಾನದ ಸಮೀಪ ಹೊಳೆ ನೀರು ಬಂದಿದೆ. ಇದರಿಂದಾಗಿ ದೇವಸ್ಥಾನದ ಆವರಣದಲ್ಲಿದ್ದ 20ಕ್ಕೂ ಹೆಚ್ಚು ಅಂಗಡಿಗಳು ಮುಳುಗಡೆಯಾಗಿದೆ. ನೀರಿನ ಪ್ರಮಾಣ ಇನ್ನು ಹೆಚ್ಚಾದರೆ ಉಕ್ಕಡಗಾತ್ರಿ ಸಂಪರ್ಕ ರಸ್ತೆ ಕೂಡ ಕಡಿತವಾಗುವ ಸಾಧ್ಯತೆ ಇದೆ. ಯಾರು ಕೂಡ ಸ್ನಾನಕ್ಕೆ ನದಿಯೊಳಗೆ ಇಳಿಯದಂತೆ ದೇವಸ್ಥಾನ ಅಡಳಿತ ಮಂಡಳಿ ಸೂಚ‌ನೆಯನ್ನು ನೀಡಿದೆ.

ಸೇತುವೆ ನೀರಿನಿಂದ ಜಲಾವೃತ

ಮಹಾರಾಷ್ಟ್ರದಲ್ಲಿ ನಿರಂತರ ಮಳೆ ಹಿನ್ನೆಲೆಯಿಂದಾಗಿ ಬಾಗಲಕೋಟೆ ಜಿಲ್ಲೆಯಲ್ಲಿ ಕೃಷ್ಣೆಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಹಿಪ್ಪರಗಿ ಜಲಾಶಯದಿಂದ ಅಂದಾಜು ಒಂದು ಲಕ್ಷ ಕ್ಯೂಸೆಕ್ಸ್ ನೀರಿನ ಒಳ ಹರಿವಿದ್ದರಿಂದ ಚಿಕ್ಕಪಡಸಲಗಿ ಸೇತುವೆ ಜಲಾವೃತಗೊಂಡಿದೆ. ನದಿ ಪಾತ್ರದ ಗ್ರಾಮಗಳಲ್ಲಿ ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಬಾಗಲಕೋಟೆ ಜಿಲ್ಲಾಡಳಿತ ಡಂಗೂರ ಬಾರಿಸಿ ಸಂದೇಶ ಸಾರಿವೆ. ಬೆಳಗಾವಿಯ ವಡಗಾವಿಯ ರಾಘವೇಂದ್ರ ಕಾಲೋನಿಗೆ ಮಳೆ ನೀರು ನುಗ್ಗಿದೆ. ನೀರು ಹೊರಹಾಕಲು ಆಗದೆ 20ಕ್ಕೂ ಹೆಚ್ಚು ಮನೆಗಳ ನಿವಾಸಿಗಳು ಪರದಾಡಿದ್ದಾರೆ. ಮನೆಗೆ ನೀರು ನುಗ್ಗಿದ್ದರಿಂದ ವೃದ್ಧರು ಟೆರೆಸ್ ಮೇಲೆ ನಿಂತರೆ, ಮಕ್ಕಳನ್ನು ಕಂಕಳಲ್ಲಿ ಕಟ್ಟಿಕೊಂಡು ರಾತ್ರಿಯೆಲ್ಲ ಜಾಗರಣೆ ಮಾಡುವಂತಾಗಿದೆ.

ಧಾರವಾಡದಲ್ಲಿ ಮಳೆಗೆ 24 ಮನೆಗಳು ಕುಸಿತ

ಧಾರವಾಡದಲ್ಲಿ ನಿರಂತರ ಮಳೆಗೆ ಶಿಥಿಲಾವಸ್ಥೆಯಲ್ಲಿರುವ ಮನೆಗಳು ಕುಸಿಯುತ್ತಿವೆ. ಈವರೆಗೆ 24 ಮನೆಗಳು ಭಾಗಶಃ ಕುಸಿದು ಹೋಗಿದೆ. ಮಳೆಯಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ಮನೆ ಬಿದ್ದು ಜಾನುವಾರಗಳು ಪ್ರಾಣ ಬಿಟ್ಟಿವೆ. ಧಾರವಾಡ ಜಿಲ್ಲೆಯ ಹೊನ್ನಾಪುರ ಗ್ರಾಮದಲ್ಲಿ ದನದ ಕೊಟ್ಟಿಗೆ ಕುಸಿದು ಸಿದ್ದಪ್ಪ ಭೀಮಪ್ಪ ಎಂಬವರಿಗೆ ಸೇರಿದ ಎಮ್ಮೆ ಮೃತಪಟ್ಟಿದೆ. ನಿರಂತರ ಮಳೆಯಿಂದಾಗಿ ಮತ್ತಷ್ಟು ಮನೆಗಳು ಕುಸಿಯುವ ಹಂತದಲ್ಲಿದೆ.

ಕೊಪ್ಪಳದಲ್ಲಿ ಹೊಂಡವಾಯ್ತು ಅಂಡರ್‌ಪಾಸ್‌

ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿರುವ ರಾಷ್ಟ್ರೀಯ ಹೆದ್ದಾರಿ 50ರಲ್ಲಿರುವ ಅಂಡರ್ ಪಾಸ್ ಮಳೆ ಬಂದರೆ ಹೊಂಡದಂತಾಗುತ್ತದೆ. ಹೆದ್ದಾರಿಯ ಬೃಹತ್ ಮೇಲ್ಸೆತುವೆಯ ಕೆಳಗೆ ಇರುವ ಅಂಡರ್ ಪಾಸ್ ಹನುಮಸಾಗರ- ಟೆಂಗುಟಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಲಘು ವಾಹನ ಓಡಾಟಕ್ಕಾಗಿ ಅಂಡರ್ ಪಾಸ್ ನಿರ್ಮಿಸಿದ್ದು, ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ ಎಂದು ಜನರು ಕಿಡಿಕಾರಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಐಗೂರು ಹೊಳೆ ನೀರು ಸೇತುವೆ ಮೇಲೆ ಉಕ್ಕಿ ಹರಿಯುತ್ತಿದ್ದು, ಕುಂಭರಹಳ್ಳಿ- ಐಗೂರು-ಹೆತ್ತೂರು ರಸ್ತೆ ಸಂಪರ್ಕವು ಕಡಿತಗೊಂಡಿದೆ. ಸಕಲೇಶಪುರ, ಹೆತ್ತೂರು ಕಡೆ ಸಾಗಲು ಪರ್ಯಾಯ ಯಸಳೂರು, ಶುಕ್ರವಾರಸಂತೆ ಮಾರ್ಗದಲ್ಲಿ ಸವಾರರು ಪ್ರಯಾಣಿಸುತ್ತಿದ್ದಾರೆ.

ತ್ರಿವೇಣಿ ಸಂಗಮ ಮುಳುಗಡೆ

ಪಶ್ಚಿಮ‌ ಘಟ್ಟ ಪ್ರದೇಶದ ಬ್ರಹ್ಮಗಿರಿ ತಪ್ಪಲಿನಲ್ಲಿ ಭಾರೀ ಮಳೆ ಹಿನ್ನೆಲೆ ಕಾವೇರಿ, ಕನ್ನಿಕೆ, ಸುಜೋತಿ ನದಿಗಳು ಉಕ್ಕಿ ಹರಿಯುತ್ತಿದೆ. ಕೊಡಗಿನ ಭಾಗಮಂಡಲದ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತಗೊಂಡಿದೆ. ಭಾಗಮಂಡಲದ ತಲಕಾವೇರಿ ನಾಪೋಕ್ಲು ರಸ್ತೆ ಸಂಚಾರ ಬಂದ್ ಆಗಿದೆ. ಭಗಂಡೇಶ್ವರ ದೇವಾಲಯದ ಮೆಟ್ಟಿಲವರೆಗೆ ನೀರು ಬಂದಿದೆ. ಮುಂಜಾಗ್ರತಾ ಕ್ರಮವಾಗಿ ರಕ್ಷಣಾ ಸಿಬ್ಬಂದಿ, ಬೋಟ್ ಸನ್ನದ್ಧವಾಗಿದೆ.

ಅತಿಯಾದ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಬಿಳಗಿ ಬಳಿ ಗುಡ್ಡ ಕುಸಿದಿದೆ. ಕುಮಟಾ-ಕೊಡಮಡಗಿ ರಾಜ್ಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ. ಕಳೆದ ಎರಡು ವಾರಗಳಿಂದ ಸಿದ್ದಾಪುರ ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಭೂಮಿ ಸಂಪೂರ್ಣ ತೇವಗೊಂಡಿದೆ. ಪರಿಣಾಮ ಧರೆ ಕುಸಿದು ರಸ್ತೆಗೆ ಮಗುಚಿದ ಪರಿಣಾಮ ಸುಮಾರು ಐದು ಗಂಟೆಗಳ ಕಾಲ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಿದ್ದಾರೆ.

ನದಿ ತೀರಕ್ಕೆ ತೆರಳದಂತೆ ಎಚ್ಚರಿಕೆ

ನದಿ ತೀರಕ್ಕೆ ತೆರಳದಂತೆ ಎಸ್‌ಪಿ ಡಾ.ಸಿ.ಬಿ.ವೇದಮೂರ್ತಿ ಎಚ್ಚರಿಕೆ ನೀಡಿದ್ದಾರೆ. ಯಾದಗಿರಿಯಲ್ಲಿ ಮಳೆಯೊಂದಿಗೆ ಕೃಷ್ಣಾ ಹಾಗೂ ಭೀಮಾನದಿಗೆ ಹೆಚ್ಚಿನ ಪ್ರಮಾಣದ ನೀರು ಬರುತ್ತಿದೆ. ಭೀಮಾನದಿಗೆ ಹೆಚ್ಚಿನ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಸಾರ್ವಜನಿಕರು ಯಾರು ನದಿ ತೀರಕ್ಕೆ ತೆರಳಬಾರದು. ರೈತರು ನದಿ ತೀರದಲ್ಲಿರುವ ಪಂಪ್ ಸೆಟ್ ತೆಗೆದು ಸುರಕ್ಷಿತ ಸ್ಥಳದಲ್ಲಿ ಇಡಬೇಕು. ಯಾರು ಜಮೀನು ಕೆಲಸಕ್ಕೆಂದು ನದಿ ದಾಟುವ ಕೆಲಸ ಮಾಡಬಾರದು. ಒಂದು ವೇಳೆ ಹೆಚ್ಚು ನೀರು ಬಂದರೆ ಪ್ರವಾಹ ಪರಿಸ್ಥಿತಿ ಎದುರಾದರೆ ಅಗತ್ಯ ಮುಂಜಾಗ್ರತೆ ವಹಿಸಲಾಗುತ್ತದೆ. ಜನರು ನದಿಯಿಂದ ದೂರವಿದ್ದು ಸುರಕ್ಷಿತವಾಗಿ ಇರಲು ಎಸ್‌ಪಿ ಡಾ.ಸಿ.ಬಿ.ವೇದಮೂರ್ತಿ ಸೂಚನೆ ನೀಡಿದ್ದಾರೆ.

ಮನೆಗಳಿಗೆ ನುಗ್ಗಿದ ನೀರು

ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕುನ್ನೂರು ಗ್ರಾಮಸ್ಥರು ನಲುಗಿ ಹೋಗಿದ್ದಾರೆ. ಮನೆಗಳಿಗೆ ನೀರು ನುಗ್ಗಿದ್ದು, ರಾತ್ರಿ ಇಡೀ ನಿದ್ದೆ ಇಲ್ಲದೆ ಪರದಾಡಿದ್ದಾರೆ. ಮಳೆ ನೀರು ಹೊರಹಾಕಲು ಜನರು ಹರಸಾಹಸಪಟ್ಟಿದ್ದಾರೆ.

ಇತ್ತ ಹೇಮಾವತಿ ನದಿ ಉಕ್ಕಿ ಹರಿಯುತ್ತಿದ್ದು, ನೂರಾರು ಎಕರೆ ಭತ್ತದ ಗದ್ದೆಗಳು ನೀರು ಪಾಲಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಐಗೂರು ಸಮೀಪದಲ್ಲಿ ಬಿತ್ತನೆಗೆ ಸಿದ್ದವಿದ್ದ ಭತ್ತದ ಗದ್ದೆಗಳು ಮುಳುಗಡೆಯಾಗಿದೆ. ಮಳೆ ಮತ್ತಷ್ಟು ಹೆಚ್ಚಾದರೆ ಸಕಲೇಶಪುರ ತಾಲೂಕಿನ ಹೆತ್ತೂರು ಹಾಗು ಕೊಡ್ಲಿಪೇಟೆ ನಡುವಿನ ರಸ್ತೆ ನೀರು ಹರಿಯುವ ಆತಂಕ ಇದೆ.

ಮೈದುಂಬಿದ ಗಂಗಾವಳಿ ನದಿ

ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಧಾರಾಕಾರ ಮಳೆಯಿಂದ ಗಂಗಾವಳಿ ನದಿ ಮೈದುಂಬಿ ಹರಿಯುತ್ತಿದೆ. ಪರಿಣಾಮ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಇಲ್ಲಿನ ಬಿಳಿಹೊಂಯ್ಗಿ ಗ್ರಾಮದ 30ಕ್ಕೂ ಅಧಿಕ ಮನೆಗಳು ಜಲಾವೃತಗೊಂಡಿದೆ. ರಸ್ತೆಯ ಮೇಲೂ ನೀರು ನಿಂತು ಓಡಾಟಕ್ಕೂ ಅವ್ಯವಸ್ಥೆ ಆಗಿದೆ. ಸೊಂಟದವರೆಗೂ ನೀರು ನಿಂತಿದ್ದು, ಜನರಲ್ಲೂ ಆ ನೆರೆಯಲ್ಲೇ ನಡೆದಾಡುತ್ತಿದ್ದಾರೆ. ಮತ್ತೆ ಮಳೆ ಹೆಚ್ಚಾದಲ್ಲಿ ಮನೆಯೊಳಗೆ ನೀರು ನುಗ್ಗುವ ಆತಂಕ ಇದೆ.

Rain Effect in karnataka treefall
ಉರುಳಿ ಬಿದ್ದ ತೆಂಗಿನ ಮರ
Rain Effect in karnataka car damage
ತೆಂಗಿನ ಮರ ಬಿದ್ದು ಕಾರು ಡ್ಯಾಮೇಜ್‌

ವಿಶ್ವನಾಥ ಎಂಬುವವರ ವಾಸದ ಮನೆ ಹಿಂಭಾಗದ ಕಾರು ಶೆಡ್ ಹಾಳಾಗಿದೆ. ಅದೃಷ್ಟವಶಾತ್ ಯಾವುದೇ ಜೀವ ಹಾನಿಯಾಗಿಲ್ಲ. ವಿದ್ಯುತ್ ತಂತಿಯ ಮೇಲೂ ಮರ ಬಿದ್ದಿದ್ದು, ಆನೆ‌ಮುಡಿಕೆ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ‌ ನೀಡಿ, ಪರಿಶೀಲನೆ ನಡೆಸಿದ್ದಾರೆ.

Rain Effect in karnataka bike damage
ಸೇತುವೆ ಮೇಲೆ ಕೆಟ್ಟು ನಿಂತ ಬೈಕ್‌

ಹಾಸನದಲ್ಲಿ ಕುಸಿದು ಬಿದ್ದ ಮನೆ

ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಮನೆಯೊಂದು ಕುಸಿದು ಬಿದ್ದಿದೆ. ಬೇಲೂರು ತಾಲೂಕಿನ ಪಡುವಳಲು ಗ್ರಾಮದಲ್ಲಿ ಮಹೇಶ್ ಎಂಬುವವರಿಗೆ ಸೇರಿದ ಮನೆ ಕುಸಿದಿದೆ. ಕಳೆದ ಎರಡು ದಿನಗಳಿಂದ ಭಾರೀ ಗಾಳಿ ಮಳೆಯಿಂದ ಇಂದು (ಜು.24) ಬೆಳಗ್ಗೆ 4 ಗಂಟೆಗೆ ಕುಸಿದಿದೆ. ಮನೆಯಲ್ಲಿದ್ದ ವಸ್ತುಗಳೆಲ್ಲ ಹಾನಿಯಾಗಿದೆ. ಮನೆ ಬೀಳುವ ಭೀತಿಯಿಂದ ಕುಟುಂಬದ ಸದಸ್ಯರು ನಿನ್ನೆ ಭಾನುವಾರವೇ ಕೊಟ್ಟಿಗೆಗೆ ಶಿಫ್ಟ್ ಆಗಿದ್ದರು.ಹೀಗಾಗಿ ಸಂಭವಿಸದಬಹುದಾದ ಅನಾಹುತ ತಪ್ಪಿದೆ.

Rain Effect in karnataka house damage
ಮಳೆಗೆ ಕುಸಿದು ಬಿದ್ದ ಮನೆ

ಇದನ್ನೂ ಓದಿ: Rain News : ಮಳೆಗೆ ಮುಳುಗಿದ ಕಡಬ; ಒದ್ದೆ ಮೈಯಲ್ಲಿ ನಡುಗುತ್ತಲೇ ಪರೀಕ್ಷೆ ಬರೆದರು!

ವರದಾ ನದಿ ಅಬ್ಬರಕ್ಕೆ ನಲುಗಿದ ಹಾವೇರಿ

ಹಾವೇರಿ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದರೆ ಮತ್ತೊಂದು ಕಡೆ ವರದಾ ನದಿ ಉಕ್ಕಿ ಹರಿಯುತ್ತಿದೆ. ವರದಾ ನದಿ ಅಬ್ಬರಕ್ಕೆ ನೂರಾರು ಎಕರೆ ಬೆಳೆ ನಾಶವಾಗಿದೆ. ರೈತರು ಬೆಳೆದಿದ್ದ, ಗೋಬಿನಜೋಳ, ಹತ್ತಿ, ಶೇಂಗಾ ಬೆಳೆಯು ನೀರಿನಲ್ಲಿ ಮುಳುಗಡೆಯಾಗಿದೆ. ಮಳೆಯಿಂದ ಬೆಳೆ ಹಾನಿಯಾದರೂ ಅಧಿಕಾರಿಗಳು ಪರಿಶೀಲನೆಗೆ ಬಾರದ್ದಕ್ಕೆ ರೈತರು ಆಕ್ರೋಶ ಹೊರಹಾಕಿದ್ದಾರೆ.

Rain Effect in karnataka
ಜಮೀನಿಗೆ ನುಗ್ಗಿದ ನೀರು

ಇತ್ತ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ ಪ್ರವಾಹ ಭೀತಿ ಎದುರಾಗಿದೆ. ಬೆಡ್ತಿಹಳ್ಳ ಉಕ್ಕಿ ಹರಿಯುತ್ತಿದ್ದು, ಹೊಲಗಳಿಗೆ ನೀರು ನುಗ್ಗಿ ಬೆಳೆಗಳು ಜಲಾವೃತಗೊಂಡಿದೆ. ಮಳೆಯ ಹೊಡೆತಕ್ಕೆ ನೀರಲ್ಲಿ ಕಬ್ಬು, ಮೆಕ್ಕೆಜೋಳ ಬೆಳೆಗಳಿಗೆ ಹಾನಿಯಾಗಿದೆ.

ಹಾಸನದಲ್ಲಿ ಭೂ ಕುಸಿತ

ಹಾಸನ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿಯುವ ಆತಂಕ ಇದೆ. ಸಕಲೇಶಪುರ ಪಟ್ಟಣದ ಸಮೀಪದ ಗುಡ್ಡ ಕುಸಿಯುತ್ತಿದೆ. ಒಂದೊಂದಾಗೇ ಮರಗಳು ಉರುಳುತ್ತಿದೆ. ಮೇಲ್ಬಾಗದಲ್ಲಿರುವ ಮನೆಗಳೂ ಕೂಡಾ ಬೀಳುವ ಆತಂಕದಲ್ಲಿದ್ದು, ಹತ್ತಾರು ಕುಟುಂಬಗಳು ಭಯದಲ್ಲೇ ದಿನದೂಡುವಂತಾಗಿದೆ. ಮಂಗಳೂರು – ಬೆಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಇದಾಗಿದ್ದು, ಅವೈಜ್ಞಾನಿಕ ಕಾಮಗಾರಿಯಿಂದ ಗುಡ್ಡ ಕುಸಿಯುತ್ತಿದೆ ಎಂದು ಆರೋಪಿಸಲಾಗಿದೆ.

ಮಳೆ ಹೊಡೆತಕ್ಕೆ ಗುಡ್ಡಕುಸಿತ; ಸಕಲೇಶಪುರ, ಬಿಸಿಲೆ- ಸುಬ್ರಹ್ಮಣ್ಯ ರೋಡ್‌ ಬ್ಲಾಕ್‌

ಮಂಗಳೂರು- ಬೆಂಗಳೂರು ಹೆದ್ದಾರಿಯಲ್ಲಿ ರಸ್ತೆ ಅಪಾಯದಲ್ಲಿದೆ

ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಆತಂಕ ಎದುರಾಗಿದೆ. ಸಕಲೇಶಪುರ ಪಟ್ಟಣದ ಸಮೀಪದಲ್ಲಿ ಗುಡ್ಡದಲ್ಲಿ ಒಂದೊಂದೇ ಮರಗಳು ರಸ್ತೆಗೆ ಬೀಳುತ್ತಿದೆ. ಎತ್ತರ ಪ್ರದೇಶದಲ್ಲಿರುವ ತೆಂಗಿನಮರ, ಸಿಲ್ವರ್ ಸೇರಿ ಅನೇಕ ಮರಗಳು ರಸ್ತೆಗೆ ಉರುಳಿಬಿದ್ದಿವೆ.

Road problem near Salakeshapura
ಗುಡ್ಡ ಕುಸಿತದಿಂದ ಸಕಲೇಪುರ ಬಳಿ ರಸ್ತೆ ಸಂಚಾರಕ್ಕೆ ಅಡಚಣೆ

ಮಂಗಳೂರು – ಬೆಂಗಳೂರು ಸಂಪರ್ಕ ಕಲ್ಪಿಸೋ ರಾಷ್ಟ್ರೀಯ ಹೆದ್ದಾರಿ ಇದಾಗಿದ್ದು, ಅವೈಜ್ಞಾನಿಕ ಕಾಮಗಾರಿಯಿಂದ ಗುಡ್ಡ ಕುಸಿಯುತ್ತಿದೆ ಎಂಬ ಆರೋಪವಿದೆ. ಸಕಲೇಶಪುರ ಪಟ್ಟಣದಲ್ಲಿ ಬೈಪಾಸ್ ರಸ್ತೆ‌ಗಾಗಿ ಈ ಕಾಮಗಾರಿ ನಡೆಯುತ್ತಿದೆ. ಗುಡ್ಡದ ಮೇಲ್ಬಾಗದಲ್ಲಿ ವಾಸವಾಗಿರುವ ಹತ್ತಾರು ಕೂಲಿ ಕಾರ್ಮಿಕರು ಇದರಿಂದ ಆತಂಕಿತರಾಗಿದ್ದು ಯಾವಾಗ ತಮ್ಮ ಮನೆ ಬೀಳುತ್ತದೋ ಎಂಬ ಭಯದಲ್ಲಿದ್ದಾರೆ.

ಬಿಸಿಲೆ-ಸುಬ್ರಹ್ಮಣ್ಯ ರಸ್ತೆ ಸಂಪೂರ್ಣ ಬಂದ್‌

ಬಿಸಿಲೆ ಘಾಟಿ ರಸ್ತೆಯಲ್ಲಿ ಅಯೋಮಯ ಪರಿಸ್ಥಿತಿ

ಸಕಲೇಶಪುರ ತಾಲೂಕಿನ ಬಿಸಿಲೆ ಮಾರ್ಗದ ಮೂಲಕ ತೆರಳುವ ಸುಬ್ರಹ್ಮಣ್ಯ ರಸ್ತೆ ಸಂಪೂರ್ಣ ಬಂದ್ ಆಗಿದೆ. ಬಿಸಿಲೆ‌ ಸಮೀಪದಲ್ಲಿ ರಸ್ತೆಗೆ ಭಾರಿ ಪ್ರಮಾಣದ ಮಣ್ಣು ಕುಸಿದು ಬಿದ್ದಿದೆ. ಈ ಭಾಗದಲ್ಲಿ ಬೆಳಗ್ಗೆ ಮರ ಬಿದ್ದು ಕೆಲ ಗಂಟೆ ಸ್ಥಗಿತವಾಗಿತ್ತು. ನಂತರ ಗುಡ್ಡ ಕುಸಿದು ಮತ್ತೆ ಸಂಪರ್ಕ ಸಂಪೂರ್ಣ ಸ್ಥಗಿತವಾಗಿದೆ.

ಧಾರವಾಡ ಜಿಲ್ಲೆಯಲ್ಲಿ ವರುಣನ ಆರ್ಭಟ

Dharwad rain

ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನಲ್ಲಿ ಬೇಡ್ತಿ ಹಳ್ಳ ತುಂಬಿ ಹರಿಯುತ್ತಿದ್ದು, ಹಿರೇಹೊನ್ನಳ್ಳಿ ಮತ್ತು ಬೇಗೂರು ಮಧ್ಯದ ಸೇತುವೆ ಮುಳುಗಡೆಯಾಗಿದೆ. ರಸ್ತೆ ಸೇತುವೆ ಮೇಲೆ ಉಕ್ಕಿ ಹರಿಯುತ್ತಿರುವುದರಿಂದ ಹಿರೇಹೊನ್ನಳ್ಳಿ – ಬೇಗೂರು ಮಧ್ಯದ ಬಸ್, ವಾಹನ ಸಂಚಾರ ಸ್ಥಗಿತವಾಗಿದೆ.

ಸಿದ್ದಾಪುರ ತಾಲೂಕಿನ ಬಿಳಗಿ ಬಳಿ ಗುಡ್ಡ ಕುಸಿತ

Road block near siddapur

ಉ.ಕ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಸಿದ್ದಾಪುರ ತಾಲೂಕಿನ ಬಿಳಗಿ ಬಳಿ ಗುಡ್ಡ ಕುಸಿತವಾಗಿದೆ. ಇದರಿಂದ ಕುಮಟಾ-ಕೊಡಮಡಗಿ ರಾಜ್ಯ ಹೆದ್ದಾರಿ ಸಂಪರ್ಕ ಕಡಿತವಾಗಿದೆ.

ತಾಲೂಕಿನಲ್ಲಿ ಕಳೆದ ಎರಡು ವಾರಗಳಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಭೂಮಿ ಸಂಪೂರ್ಣ ತೇವಗೊಂಡ ಪರಿಣಾಮ ಧರೆ ಕುಸಿತವಾಗಿದೆ. ಸುಮಾರು ಐದು ಗಂಟೆಗಳ ಕಾಲ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಜೆಸಿಬಿ ಮೂಲಕ ಮಣ್ಣು ತೆರವು ಮಾಡಲಾಗಿದೆ.

ಬೆಳಗಾವಿಯಲ್ಲಿ ಎರಡು ಸೇತುವೆ ಮುಳುಗಡೆ

Bridges in Belagavi

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಸೇತುವೆಗಳು ಘಟಪ್ರಭಾ ನದಿಯ ಅಬ್ಬರಕ್ಕೆ ಮುಳುಗಿವೆ. ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಅವರಾದಿ ನಂದಗಾಂವ್ ಮತ್ತು ಸುಣಧೋಳಿ ಮೂಡಲಗಿ ಸೇತುವೆಗಳು ಮುಳುಗಿವೆ. ಸೇತುವೆ ಮುಳುಗಡೆಯಾಗಿದ್ದರಿಂದ ನಾಲ್ಕು ಹಳ್ಳಿಗಳ ಸಂಚಾರ ಸ್ಥಗಿತವಾಗಿದೆ. ಹೀಗಾಗಿ ಜನರು ಅನ್ಯ ಮಾರ್ಗವನ್ನು ಬಳಸಿ ಸುತ್ತುವರೆದು ಸಾಗುತ್ತಿದ್ದಾರೆ.

ಬೈಂದೂರಿನಲ್ಲಿ ಸಂಪರ್ಕ ರಸ್ತೆ ನೀರುಪಾಲು

Heavy rain in udupi
ಸಂಪೂರ್ಣ ಕೊಚ್ಚಿ ಹೋದ ಸಂಪರ್ಕ ರಸ್ತೆ

ಉಡುಪಿ ಜಿಲ್ಲೆಯ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ತಗ್ಗರ್ಸೆ ನಿರೋಡಿಯಲ್ಲಿ ಮಳೆಯ ಆರ್ಭಟಕ್ಕೆ ಭಾನುವಾರ ಅಪಾಯದ ಸ್ಥಿತಿಯಲ್ಲಿದ್ದ ರಸ್ತೆ ಸೋಮವಾರದ ಹೊತ್ತಿಗೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. 3 ಲಕ್ಷ ಅನುದಾನದಲ್ಲಿ ನಿರ್ಮಾಣವಾಗಿದ್ದ ಕಿರು ಸೇತುವೆ ಇದಾಗಿದ್ದು ಪೂರ್ತಿ ನಾಶವಾಗಿದೆ. ಸಂಪರ್ಕ ರಸ್ತೆಯಲ್ಲಿ ಹರಿಯುತ್ತಿದ್ದ ಕಿರು ಹೊಳೆಗೆ ಅಡ್ಡಲಾಗಿ ಮಾಡಲಾಗಿದ್ದ ಕಾಮಗಾರಿ ಇದು.

ಕೊಡಗು ಜಿಲ್ಲೆ ಭಾಗಮಂಡಲ ಸಂಪೂರ್ಣ ಜಲಾವೃತ

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ (kukke subramanya) ಮೊಣಕಾಲು ಮಟ್ಟಕ್ಕೆ ನೀರು ಬಂದು ಮೈಪೂರಾ ಒದ್ದೆಯಾದರೂ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ. ಸತತ ಒಂದು ವಾರದಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು, ರಸ್ತೆಗಳೆಲ್ಲವೂ ಜಲಾವೃತಗೊಂಡಿದೆ.

Rain Effect in mangaluru students running in rain
ನೆರೆ ನೀರಿನಲ್ಲೇ ನಡೆದುಹೋದ ವಿದ್ಯಾರ್ಥಿಗಳು

ಈ ನೆರೆ ನೀರಿನಲ್ಲೇ ವಿದ್ಯಾರ್ಥಿಗಳು ನಡೆದುಕೊಂಡು ಹೋಗಿದ್ದಾರೆ. ಅಪಾಯವನ್ನು ಲೆಕ್ಕಿಸದೇ ವಿದ್ಯಾರ್ಥಿಗಳು ಈ ರೀತಿ ಹೋಗುತ್ತಿರುವುದಕ್ಕೆ ಪೋಷಕರು ಅಸಮಾಧಾನವನ್ನು ವ್ಯಕ್ತಪಡಿಸಿದ್ದು, ಆತಂಕದಲ್ಲೇ ದಿನದೂಡುವಂತಾಗಿದೆ.

Rain Effect in mangaluru students running in rain
ಮೊಣಕಾಲಷ್ಟು ನೀರಲ್ಲೇ ವಿದ್ಯಾರ್ಥಿಗಳ ನಡಿಗೆ

ಭಾರಿ ಮಳೆಗೆ ಕುಸಿದ ಮನೆ, ಆರು ಮಂದಿ ಪವಾಡ ಸದೃಶ ಪಾರು

ಮುಲ್ಕಿಯಲ್ಲಿ ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ಮನೆಯೊಂದು ಕುಸಿದಿದೆ. ಕೆಎಸ್‌ರಾವ್ ನಗರದ ಲಿಂಗಪ್ಪಯ್ಯ ಕಾಡು ವಿಜಯಪುರ ಕಾಲೋನಿಯ ಮಲ್ಲಿಕಾರ್ಜುನ ಮಠದ ಬಳಿಯ ನಿವಾಸಿ ಲಕ್ಷ್ಮಿ ಪಕೀರಪ್ಪ ಎಂಬುವರ ಮನೆ ಸಂಪೂರ್ಣ ಕುಸಿದು ಬಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ರಾತ್ರಿ ಹೊತ್ತು ಮಳೆ ಸುರಿದಿದ್ದು, ಮನೆಯ ಮೇಲ್ಭಾಗದಲ್ಲಿ ಭಾರಿ ಶಬ್ಧ ಉಂಟಾಗಿದೆ. ಈ ವೇಳೆ ಮನೆಯೊಳಗಿದ್ದ ಲಕ್ಷ್ಮಿ ಪಕೀರಪ್ಪ ಸಹಿತ ಆರು ಮಂದಿ ಹೊರಗೆ ಓಡಿ ಬಂದಿದ್ದಾರೆ. ಕ್ಷಣಾರ್ಧದಲ್ಲಿ ಮನೆ ಪೂರಾ ಕುಸಿದು ಬಿದ್ದಿದ್ದು, ಮನೆಮಂದಿ ಪವಾಡ ಸದೃಶ ಪಾರಾಗಿದ್ದಾರೆ. ಘಟನೆಯಿಂದ ಮನೆಯೊಳಗಿನ ವಸ್ತುಗಳು ನಾಶವಾಗಿದ್ದು ಅಪಾರ ಪ್ರಮಾಣದ ನಷ್ಟ ಉಂಟಾಗಿದೆ ಎಂದು ಲಕ್ಷ್ಮಿ ಪಕೀರಪ್ಪ ತಿಳಿಸಿದ್ದಾರೆ.

Rain Effect in mulki
ಮಳೆಗೆ ಧರೆಗುರುಳಿದ ಮನೆಗಳು

ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮುಲ್ಕಿ ತಾಲೂಕು ವ್ಯಾಪ್ತಿಯ ಕಿನ್ನಿಗೋಳಿ, ಪಕ್ಷಿಕೆರೆ, ಹಳೆಯಂಗಡಿ, ಅತಿಕಾರಿ ಬೆಟ್ಟು, ಕೊಳಚಿ ಕಂಬಳ ಪರಿಸರದಲ್ಲಿ ಮಳೆಗೆ ಭಾರೀ ಹಾನಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಗೆ ಹೊಳೆಗಳು ತುಂಬಿ ಹರಿಯುತ್ತಿದೆ. ಸುಳ್ಯ, ಸುಬ್ರಹ್ಮಣ್ಯ ಭಾಗದಲ್ಲಿ ಹೊಳೆಗಳ ಹರಿವು ಹೆಚ್ಚಳವಾಗಿದೆ. ಇದರಿಂದಾಗಿ ಸುಬ್ರಹ್ಮಣ್ಯ ರಸ್ತೆಯ ಬೊಳ್ಮಲೆ, ಬಸ್ತಿಕಾಡು ಭಾಗದಲ್ಲಿ ಜನರಿಗೆ ಸಂಕಷ್ಟ ಎದುರಾಗಿದೆ. ಭಾರೀ ಮಳೆಗೆ ಬಸ್ತಿಕಾಡುವಿನ ಕಿಂಡಿ ಅಣೆಕಟ್ಟು, ಸೇತುವೆ ಮುಳುಗಡೆ ಆಗಿದೆ. ಅಣೆಕಟ್ಟು ಸೇತುವೆ ಮುಳುಗಡೆಯಿಂದ 15ಕ್ಕೂ ಅಧಿಕ ಮನೆಗಳಿಗೆ ಸಂಪರ್ಕ ಕಡಿತವಾಗಿದೆ. ವಾಹನ ಸಂಚಾರ, ಕಾಲುದಾರಿಯೂ ಮುಳುಗಡೆಯಾಗಿ ಗ್ರಾಮಸ್ಥರು ಅತಂತ್ರರಾಗಿದ್ದಾರೆ.

ಹೊಳೆಯಲ್ಲಿ ಮರದ ದಿಮ್ಮಿಗಳು ಉರುಳಿ ಬಂದು ಕಿಂಡಿ ಅಣೆಕಟ್ಟಿಗೆ ಡ್ಯಾಮೇಜ್ ಮಾಡುತ್ತಿದೆ. ಅಣೆಕಟ್ಟಿನ ಪಕ್ಕದ ತೋಟ, ಕೃಷಿ ಭೂಮಿಗೆ ನೀರು‌ ನುಗ್ಗಿದ್ದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಧಾರಾಕಾರ ಮಳೆಗೆ ಗಂಗಾವಳಿ ನದಿ ಉಕ್ಕಿ ಹರಿಯುತ್ತಿದ್ದು, ಅಂಕೋಲಾದ ಬಿಳಿಹೊಂಯ್ಗಿಯಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಉತ್ತರ ಒಳನಾಡು, ಕರಾವಳಿಯಲ್ಲಿ ವ್ಯಾಪಕ ಮಳೆ; ಶಾಲೆಗೆ ನುಗ್ಗಿದ ನೀರು, ಮಕ್ಕಳಿಗೆ ರಜೆ

Karnataka Weather Forecast : ರಾಜ್ಯಾದ್ಯಂತ ಮಳೆಯ (Rain News) ಅಬ್ಬರ ಮುಂದುವರಿದಿದೆ. ಭಾರಿ ಮಳೆಯಿಂದಾಗಿ ಉಡುಪಿಯ ಶಾಲೆಗೆ ನೀರು ನುಗ್ಗಿದ್ದರಿಂದ ಮಕ್ಕಳಿಗೆ ರಜೆ ನೀಡಲಾಗಿತ್ತು. ಕೆಲವೆಡೆ ರಸ್ತೆಗಳು ಕೆರೆಯಂತೆ ಮಾರ್ಪಾಡಾಗಿತ್ತು. ಎಲ್ಲೆಲ್ಲಿ ಏನೆಲ್ಲ ಅವಾಂತರಗಳು ಆಗಿವೆ. ಇನ್ನೂ ಎಷ್ಟು ದಿನ ಮಳೆಯಾಟ ಇರಲಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

By

Karnataka weather Forecast
Koo

ಉಡುಪಿ: ಉತ್ತರ ಒಳನಾಡು, ಕರಾವಳಿ ಸೇರಿ ಮಲೆನಾಡು ಭಾಗದ ವಿವಿಧೆಡೆ ಭಾರಿ ವರ್ಷಧಾರೆಗೆ ಜನರು ತತ್ತರಿಸಿಹೋಗಿದ್ದಾರೆ. ನಾಲ್ಕೈದು ದಿನಗಳು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ (Rain News) ಉಡುಪಿಯ ಬೈಂದೂರು ತಾಲೂಕಿನ ಯಡ್ತರೆ ಸಮೀಪ ರಾಹುತನಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೀರು ನುಗ್ಗಿದೆ. ತರಗತಿ ಕೋಣೆಗಳು ಜಲಾವೃತಗೊಂಡ ಪರಿಣಾಮ ಶಾಲಾ ಮಕ್ಕಳಿಗೆ ಶನಿವಾರ ರಜೆ ನೀಡಲಾಗಿತ್ತು. ಶಾಲೆ ಸಮೀಪ ಸಮರ್ಪಕವಾದ ಚರಂಡಿ ವ್ಯವಸ್ಥೆಯಿಲ್ಲದೇ ರಾಷ್ಟ್ರೀಯ ಹೆದ್ದಾರಿಯಿಂದ ಹರಿದ ನೀರು ನೇರ ಶಾಲೆಗೆ ನುಗ್ಗುತ್ತಿದೆ. ಕಳೆದ ಹಲವು ವರ್ಷಗಳಿಂದ ಮಳೆಗಾಲದಲ್ಲಿ ಇದೇ ಸಮಸ್ಯೆ ಆಗುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ದಾವಣಗೆರೆಯಲ್ಲಿ ಕೆರೆಯಂತಾದ ಜಮೀನುಗಳು

ದಾವಣಗೆರೆಯ ಜಗಳೂರು ತಾಲೂಕಿನಲ್ಲಿ ಶನಿವಾರ ಭರ್ಜರಿ ಮಳೆಯಾಗಿದೆ. ಹನುಮಂತಪುರ, ದಿದ್ದಗಿ , ಹುಚ್ಚವನಹಳ್ಳಿ ಪಲ್ಲಾಗಟ್ಟೆ, ಮೇದಕೇರನಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಭಾರಿ ಮಳೆಯಾಗಿದೆ. ಧಾರಾಕಾರವಾಗಿ ಸುರಿದ ಮಳೆಯಿಂದ ಜಮೀನುಗಳು ಕೆರೆಯಂತಾಗಿದೆ.

ಧಾರವಾಡದ ಆಯಟ್ಟಿ ಬ್ರಿಡ್ಜ್ ಬಂದ್‌

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಆಯಟ್ಟಿ ಬ್ರಿಡ್ಜ್ ಮಳೆಗೆ ಮುಳುಗಡೆಯಾಗಿದ್ದು, ಸಂಚಾರ ಬಂದ್‌ ಮಾಡಲಾಗಿದೆ. ಹಲವಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆಯು ಮಳೆ ಬಂದರೆ ಸಾಕು ನೀರಿನಲ್ಲಿ ಮುಳುಗಡೆಯಾಗುತ್ತದೆ. ಹೀಗಾಗಿ ಸೇತುವೆ ಮೇಲೆ ನೀರು ತಗ್ಗುವವರೆಗೂ ಜನರ ಓಡಾಟ ಸಂಪೂರ್ಣ ಬಂದ್ ಮಾಡಲಾಗಿದೆ. ಇನ್ನೂ ಸೇತುವೆ ಎತ್ತರ ಮಾಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದರೂ ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತಿಲ್ಲ. ಇತ್ತ ಹೊಸ ಬ್ರಿಡ್ಜ್ ನಿರ್ಮಾಣ ಮಾಡುವವರೆಗೂ ಜನರ ಸಮಸ್ಯೆ ತಪ್ಪಿದ್ದಲ್ಲ. ಬ್ರಿಡ್ಜ್ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಮುಗಿದರೂ ಸಹ ಕೆಲಸ ಮಾತ್ರ ಶುರುವಾಗಿಲ್ಲ.

karnataka weather Forecast

ಇದನ್ನೂ ಓದಿ: Murder Case : ತಂಗಿಗೆ ವರದಕ್ಷಿಣೆ ಟಾರ್ಚರ್‌; ಬಾಮೈದನ ಕೊಲೆ ಮಾಡಿದ ಬಾವ

ವಿಜಯಪುರದ ದೋಣಿ ನದಿ ಸೇತುವೆ ಜಲಾವೃತ

ವಿಜಯಪುರದ ಯಾಳವಾರ ಗ್ರಾಮದ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ. ಭಾರಿ ಮಳೆಗೆ ಸಂಪೂರ್ಣ ದೋಣಿ ನದಿ ಸೇತುವೆ ಜಲಾವೃತದಿಂದ ರಸ್ತೆ ಸಂಪರ್ಕ ಕಡಿತವಾಗಿದೆ. ಸೇತುವೆ ಜಲಾವೃತದಿಂದ ಹೊಲಗಳಿಗೆ ತೆರಳುವ ರೈತರಿಗೂ ಸಂಕಷ್ಟ ಎದುರಾಗಿದೆ. ಡೋಣಿ ನದಿಗೆ ಕಟ್ಟಿರುವ ಹಳೆಯ ನೆಲ ಸೇತುವೆ ಜಲಾವೃತಗೊಂಡಿದೆ. ಹೊಸ ಸೇತುವೆ ಕಳಪೆ‌ ಕಾಮಗಾರಿಯಿಂದ ಶಿಥಿಲಗೊಂಡಿದೆ. ಹೀಗಾಗಿ ಜಲಾವೃತವಾದ ಹಳೆಯ ಸೇತುವೆಯ‌ ಮೇಲೆಯೇ ವಾಹನಗಳು ಸಂಚಾರಿಸುತ್ತಿದೆ. ಹೊಸ ಸೇತುವೆ ಅಲ್ಲಲ್ಲಿ ಬಿರುಕು ಬಿಟ್ಟು ಬೀಳುವ ಹಂತ ತಲುಪಿದೆ. ಹೀಗಾಗಿ ಹೊಸ ಸೇತುವೆ ಮೇಲೆ ಕಳೆದ ಎರಡು ವರ್ಷಗಳಿಂದ ಸಂಚಾರ‌ ನಿಷೇಧಿಸಲಾಗಿದೆ. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾಗಿರುವ ನೆಲ ಮಟ್ಟದ ಸೇತುವೆ ಮೇಲೆ ಓಡಾಟ ನಡೆಸುತ್ತಿದ್ದಾರೆ.

ಗ್ರಾಮಕ್ಕೆ ನುಗ್ಗಿದ ಹಳ್ಳದ ನೀರು

ವಿಜಯನಗರ ಜಿಲ್ಲೆಯ ಗುಡೇಕೋಟೆ ಹೋಬಳಿಯ ಮಹದೇವಪುರ ಗ್ರಾಮದಲ್ಲಿ ಮಳೆಯಿಂದಾಗಿ ಭಾರಿ ಪ್ರಮಾಣದ ಹಳ್ಳದ ನೀರು ಗ್ರಾಮಕ್ಕೆ ನುಗ್ಗಿದೆ. ಗ್ರಾಮದ ಬೀದಿಗಳಲ್ಲಿ ರಭಸವಾಗಿ ಹರಿದು ಮನೆ ಒಳಗೆ ನುಗ್ಗಿದೆ. ಮಹದೇವಪುರ ಗ್ರಾಮದ ಮಾರಿಗುಡ್ಡ ಏರಿಯಾದಿಂದ ಗ್ರಾಮಕ್ಕೆ ನೀರು ನುಗ್ಗುತ್ತಿದೆ. ಮಹದೇವಪುರ ಗ್ರಾಮದಲ್ಲಿ ದಲಿತ ಕೇರಿ ತಗ್ಗು ಪ್ರದೇಶದಲ್ಲಿ ಇದೆ.

ಚಿಕ್ಕಮಗಳೂರು, ಉತ್ತರ ಕನ್ನಡದಲ್ಲಿ ಮಳೆಯ ಅಬ್ಬರ

ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿದಿದೆ. ಕರಾವಳಿಯ ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಇನ್ನೂ ಚಿಕ್ಕಮಗಳೂರಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್, ಬಾಳೂರು ಸುತ್ತಮುತ್ತ ಭಾರೀ ಮಳೆಯಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಗೆ ವಾಹನ ಸವಾರರು ಪರದಾಡಿದರು. ಮಳೆ ರಭಸಕ್ಕೆ ರಸ್ತೆ ಕಾಣದೆ ಇರುವುದರಿಂದ ಸವಾರರು ಕೊಟ್ಟಿಗೆಹಾರದಲ್ಲೇ ವಾಹನ ನಿಲ್ಲಿಸಿಕೊಂಡಿರುವುದು ಕಂಡು ಬಂತು.

ಗದಗದಲ್ಲಿ ಕೊಚ್ಚಿ ಹೋದ ಕಿರುಸೇತುವೆ

ಸತತ ಮಳೆಯಿಂದಾಗಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಧರ್ಮಾಪುರ ಗ್ರಾಮದ ಗಣಪತಿ ಕೆರೆಯ ಕಿರುಸೇತುವೆ ಕೊಚ್ಚಿ ಹೋದೆ. ಜಮೀನುಗಳಿಗೆ ಸಂಪರ್ಕ ಕಲ್ಪಿಸಲು ನಿರ್ಮಾಣ ಮಾಡಿದ್ದ ಕಿರುಸೇತುವೆ ನೀರುಪಾಲಾಗಿದೆ. ಕಳೆದ ವರ್ಷವಷ್ಟೇ ರೈತರು ತಮ್ಮ ಜಮೀನುಗಳಿಗೆ ತೆರಳಲು ನಿರ್ಮಿಸಲಾಗಿತ್ತು. ನಿರಂತರ ಮಳೆಯಿಂದಾಗಿ ಕಿರುಸೇತುವೆ ರಸ್ತೆ ಕೊಚ್ಚಿ ಹೋಗಿದ್ದು, ರೈತರು ಪರದಾಡುತ್ತಿದ್ದಾರೆ. ರಸ್ತೆ ಇಲ್ಲದ ಹಿನ್ನೆಲೆ ಇದೀಗ ರೈತರು ಕೃಷಿ ಚಟುವಟಿಕೆ ನಡೆಸಲು ಸಮಸ್ಯೆಯಾಗಿದೆ.

ಬೆಳಗಾವಿಯಲ್ಲಿ ಕೆರೆಯಂತಾದ ರಸ್ತೆಗಳು

ಮಳೆರಾಯನ ಅರ್ಭಟಕ್ಕೆ ಬೆಳಗಾವಿ ಕ್ಯಾಂಪ್‌ ಪ್ರದೇಶದ ಹತ್ತಿರ ರಸ್ತೆಗಳು ಕೆರೆಯಂತೆ ಮಾರ್ಪಾಟ್ಟಿವೆ. ಬೆಳಗಾವಿಯ ವಿವಿಧೆಡೆ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದೆ. ವಾಹನ ಸಂಚಾರಕ್ಕೆ ಅಡೆತಡೆ ಉಂಟಾಯಿತು. ಬೆಳಗಾವಿಯ ಖಾನಾಪುರ ರಸ್ತೆಯಲ್ಲಿ ಎರಡು ‌ಅಡಿ ನೀರು ನಿಂತು ಅವಾಂತರವೇ ಸೃಷ್ಟಿಯಾಗಿತ್ತು. ಬೆಳಗಾವಿಯ ಗ್ಲೋಬ್ ಥೀಯೇಟರ್‌ ಅಂಗಳಕ್ಕೆ ನೀರು ನುಗ್ಗಿತ್ತು. ಟಿಕೆಟ್ ಕೌಂಟರ್ ಸಂಪೂರ್ಣ ಜಲಾವೃತಗೊಂಡಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Wheelchair Cricket Tournament: ವಿಶೇಷಚೇತನರ ಗಾಲಿಕುರ್ಚಿಯ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿದ ರವಿಶಂಕರ್ ಗುರೂಜಿ

Wheelchair Cricket Tournament: ಜೀವನದಲ್ಲಿ ಕ್ರೀಡಾಪಟುತ್ವದ ಸ್ಫೂರ್ತಿಯನ್ನು ಹೊಂದಿರಬೇಕು. ಬಲವಾದ, ಸಂತೋಷವಾದ ಮನಸ್ಸನ್ನು ಹೊಂದುವುದು ಮುಖ್ಯ ಎಂದು ಖ್ಯಾತ ಆಧ್ಯಾತ್ಮಿಕ ಗುರು ರವಿಶಂಕರ್‌ ಗುರೂಜಿ ಅವರು ತಿಳಿಸಿದ್ದಾರೆ.

VISTARANEWS.COM


on

Koo

ಬೆಂಗಳೂರು: ಪರಿಶ್ರಮ ದಿವ್ಯಾಂಗ ಕ್ರೀಡಾ ಅಕಾಡೆಮಿಯು ಆಯೋಜಿಸಿದ್ದ ವಿಶೇಷಚೇತನರ ಗಾಲಿಕುರ್ಚಿಯ ಕ್ರಿಕೆಟ್ ಪಂದ್ಯಾವಳಿಯನ್ನು (Wheelchair Cricket Tournament) ಆರ್ಟ್ ಆಫ್ ಲಿವಿಂಗ್‌ನ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಖ್ಯಾತ ಆಧ್ಯಾತ್ಮಿಕ ಗುರುಗಳಾದ ಗುರುದೇವ್‌ ಶ್ರೀ ಶ್ರೀ ರವಿಶಂಕರ್‌ ಹಾಗೂ ಇತರ ಗಣ್ಯರು ಉದ್ಘಾಟಿಸಿದರು. ಪಂದ್ಯಾವಳಿಯಲ್ಲಿ, 35 ಪುರುಷರು, 25 ಮಹಿಳಾ ಕ್ರೀಡಾಪಟುಗಳು ಹಾಗೂ 10 ಸಹಚರರು ಭಾಗಿಯಾಗಿದ್ದರು.

ಕ್ರೀಡೆಗಳಲ್ಲಿ ನೈತಿಕತೆಯ ಬೆಂಬಲ ನೀಡಲು ದನಿಯಾಗಿರುವ ಗುರುದೇವ್ ಶ್ರೀ ಶ್ರೀ ರವಿಶಂಕರರು ಮಾತನಾಡಿ, “ಈ ಅಕಾಡೆಮಿಯು ಎಲ್ಲರಿಗೂ ಆಶಾಕಿರಣವನ್ನು ಮೂಡಿಸುತ್ತಿದೆ. ಇಂದಿನ ದಿನಗಳಲ್ಲಿ ಒತ್ತಡಕ್ಕೆ ಒಳಗಾಗುತ್ತಿರುವ ಯುವಕರಿಗೆ ಇದು ದಾರಿಯನ್ನು ತೋರಿಸುತ್ತಿದೆ. ಏನೇ ಆದರೂ ಜೀವನದಲ್ಲಿ ಕ್ರೀಡಾಪಟುತ್ವದ ಸ್ಫೂರ್ತಿಯನ್ನು ಹೊಂದಿರಬೇಕು. ಬಲವಾದ, ಸಂತೋಷವಾದ ಮನಸ್ಸನ್ನು ಹೊಂದುವುದು ಮುಖ್ಯ. ಇಂದು ಪ್ರತಿ 40 ಸೆಕೆಂಡುಗಳಿಗೊಮ್ಮೆ ಒಬ್ಬರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ನೀವು ಆಶಾಕಿರಣವನ್ನು ನೀಡಿ, ಜೀವನವನ್ನು ಸನ್ಮಾನಿಸಿ, ಕ್ರೀಡಾಪಟುತ್ವದ ಸ್ಫೂರ್ತಿಯನ್ನು ಹೊಂದುವಂತೆ ಹೇಳುತ್ತಿರುವಿರಿ. ಕ್ರೀಡೆಗಳನ್ನು ಆಡಲು ಉತ್ಸಾಹ, ಸ್ಫೂರ್ತಿ ಮತ್ತು ಧ್ಯಾನ ಬೇಕು” ಎಂದು ಸಲಹೆ ನೀಡಿದರು.

wheelchair cricket tournament

ಇದನ್ನೂ ಓದಿ | IND vs PAK: ಭಾರತ-ಪಾಕ್​ ಪಂದ್ಯಕ್ಕೆ 4 ಹಂತದ ಭದ್ರತಾ ವ್ಯವಸ್ಥೆ; ಮೈದಾನಕ್ಕೆ ನುಗ್ಗಿದರೆ ಜೈಲೂಟ ಖಚಿತ!

ಈ ಪಂದ್ಯಾವಳಿಯನ್ನು, ಜಾಗತಿಕ ಆಧ್ಯಾತ್ಮಿಕ ಗುರುಗಳಾದ ಗುರುದೇವ ಶ್ರೀ ಶ್ರೀ ರವಿಶಂಕರ್, ಪ್ಯಾರಾ ಒಲಿಂಪಿಕ್ ಕಮಿಟಿ ಆಫ್ ಇಂಡಿಯಾ ಕ್ರೀಡಾಪಟುಗಳ ವಿಭಾಗದ ಅಧ್ಯಕ್ಷರಾದ ಶ್ರೀ ಸತ್ಯನಾರಾಯಣ, ಮಾಜಿ ಯೋಧರು, ಮುಖ್ಯ ಕ್ಲಸಿಫೈಯರ್ ಹಾಗೂ ಟೋಕ್ಯೋ ಪಾರಾ ಒಲಿಂಪಿಕ್ಸ್‌ನ ವೈದ್ಯಕೀಯ ನಿರ್ದೇಶಕರು ಡಾ. ಅಮೇಯ, ಮಾಜಿ ಕೆಪಿಎಸ್‌ಇ ಸದಸ್ಯರು, ಬಿಬಿಎಂಪಿ ಕಾರ್ಪೊರೇಟರ್ ಡಾ.ಮಂಗಳಾ ಶ್ರೀಧರ್, ಸುಮಧುರ ಗ್ರೂಪ್ ಸಿಒಒ ಗಿರಿಧರ್ ಕುಮಾರ್. ಬಿ, ಸುಮಧುರ ಗ್ರೂಪ್‌ನ ಸಸ್ಟೇಪಬಿಲಿಟಿ ಮತ್ತು ಸಿಎಸ್ ಆರ್ನ ಮುಖ್ಯಸ್ಥೆ ಜೀವನ ಕಲಾಕುಂದಲ, ಟಿಸಿಎಫ್ಎಂ-ಎಂಬಸ್ಸಿ ಗ್ರೂಪ್ ಸಿಇಒ ಅಶ್ವಿನಿ ವಲಾವಲ್ಕರ್ ಉದ್ಘಾಟಿಸಿದರು.

ಪ್ಯಾರಾ ಒಲಿಂಪಿಕ್ ಕಮಿಟಿ ಆಫ್ ಇಂಡಿಯಾದ ಕ್ರೀಡಾಪಟುಗಳ ಅಧ್ಯಕ್ಷರಾದ ಸತ್ಯನಾರಾಯಣ ಅವರು ಗುರುದೇವರನ್ನು ಕುರಿತು ಮಾತನಾಡಿ, “ತಮ್ಮ ಆಶ್ರಮದಲ್ಲಿ ಅನೇಕ ವರ್ಷಗಳಿಂದಲೂ, ಗುರುದೇವ ಶ್ರೀ ಶ್ರೀ ರವಿಶಂಕರರು ಈ ಕ್ರೀಡೆಯನ್ನು ಪ್ರೋತ್ಸಾಹಿಸುತ್ತಲೇ ಬಂದಿದ್ದಾರೆ. ಇಂದು ಎಲ್ಲೆಡೆಯೂ ಪ್ಯಾರಾ ಒಲಿಂಪಿಕ್ ಕ್ರೀಡೆಗಳಿಗೆ ಬಹಳ ಪ್ರೋತ್ಸಾಹ ದೊರಕುತ್ತಿದೆ. ಹಿಂದೆ ಈ ರೀತಿಯ ಪ್ರೋತ್ಸಾಹ ಇರಲಿಲ್ಲ. ಈಗ ಸರ್ಕಾರವೂ ಸಹ ಬಹಳ ಪ್ರೋತ್ಸಾಹವನ್ನು ನೀಡುತ್ತಿದೆ. ಈಗ ಬೇಕಾಗಿರುವುದೆಂದರೆ, ದಿವ್ಯಾಂಗ ಪಟುಗಳು ಪ್ರತಿ ದಿನ ಅಭ್ಯಾಸ ಮಾಡುವುದು” ಎಂದರು.

ಇದನ್ನೂ ಓದಿ | Norway Chess: 3ನೇ ಸ್ಥಾನಕ್ಕೆ ತೃಪ್ತಿಪಟ್ಟ ಪ್ರಜ್ಞಾನಂದ; ಸಹೋದರಿ ವೈಶಾಲಿಗೆ 4ನೇ ಸ್ಥಾನ

ಜೂನ್ 8 ಮತ್ತು 9ರಂದು ಎಸ್‌ಎಸ್ಆರ್‌ವಿಎಮ್‌ ಗ್ರೌಂಡ್ಸ್‌ನಲ್ಲಿ ಪುರುಷರ ಪಂದ್ಯಾವಳಿ ನಡೆಯಲಿದ್ದು, ವಿರಾಮದ ಸಮಯದಲ್ಲಿ ಮಹಿಳೆಯರ ಟಿ20 ಪಂದ್ಯಾವಳಿಯೂ ನಡೆಯಲಿದೆ.

Continue Reading

ಕರ್ನಾಟಕ

Congress Guarantee: ʼಸ್ಯಾಡಿಸ್ಟ್‌ʼ ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟವಾಗಿಲ್ಲ, ನಿಲ್ಲಿಸೋದೇ ಒಳಿತು ಎಂದ ಲಕ್ಷ್ಮಣ್‌!

Congress Guarantee: ಮತದಾರರನ್ನು ʼಸ್ಯಾಡಿಸ್ಟ್ʼ ಮನಸ್ಥಿತಿಯವರು ಎಂದು ಕರೆದಿರುವ ಮೈಸೂರು- ಕೊಡಗು ಕ್ಷೇತ್ರದ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್, ನನ್ನನ್ನು ಸೋಲಿಸಿ ಬೇಜಾರಿಲ್ಲ. ಆದರೆ ಸಿದ್ದರಾಮಯ್ಯ ಏನು ತಪ್ಪು ಮಾಡಿದ್ದಾರೆ. ತವರು ಜಿಲ್ಲೆಯಲ್ಲೇ ಎಷ್ಟು ಬಾರಿ ಅಪಮಾನ ಮಾಡುತ್ತೀರಿ ಎಂದು ಮತದಾರರನ್ನು ಪ್ರಶ್ನಿಸಿದ್ದಾರೆ.

VISTARANEWS.COM


on

Congress Guarantee
Koo

ಮೈಸೂರು: ಗ್ಯಾರಂಟಿಗಳನ್ನು ನೀಡಿದರೂ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಕಾಂಗ್ರೆಸ್‌ಗೆ ಬೆಂಬಲ ಸೂಚಿಸದ ಹಿನ್ನೆಲೆಯಲ್ಲಿ ಮತದಾರರ ವಿರುದ್ಧ ಮೈಸೂರು-ಕೊಡಗು ಕ್ಷೇತ್ರದ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್‌ (M. Lakshman) ಅಸಮಾಧಾನ ಹೊರಹಾಕಿದ್ದಾರೆ. ಜನರಿಗೆ ಕಾಂಗ್ರೆಸ್ ಗ್ಯಾರಂಟಿ (Congress Guarantee) ಇಷ್ಟ ಆಗಿಲ್ಲ. ಅದನ್ನು ಫಲಿತಾಂಶದ ಮೂಲಕ ತೋರಿಸಿದ್ದಾರೆ. ಬಿಜೆಪಿ ನಮ್ಮ ಗ್ಯಾರಂಟಿಗಳ ವಿರುದ್ಧ ಮಾತನಾಡುತ್ತಿತ್ತು. ಆದರೂ ಅವರನ್ನು ಜನ ಬೆಂಬಲಿಸಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದೇ ಒಳಿತು ಎಂದು ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ಎಂ. ಲಕ್ಷ್ಮಣ್‌ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಜನರಿಗೆ ಗ್ಯಾರಂಟಿಗಳು ಇಷ್ಟವಿಲ್ಲ ಎಂಬುವುದು ಫಲಿತಾಂಶದ ಮೂಲಕ ತೋರಿಸಿದ್ದಾರೆ. ಹೀಗಾಗಿ ನಿಲ್ಲಿಸುವುದು ಒಳಿತು. ಗ್ಯಾರಂಟಿ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಗಳು ಮರು ಪರಿಶೀಲನೆ ಮಾಡಬೇಕು ಎಂದು ಕೋರಿದ್ದಾರೆ.

ಇದನ್ನೂ ಓದಿ | Election Results 2024: ಡಿ.ಕೆ. ಸುರೇಶ್ ಸೋಲಿಗೆ ಸಿದ್ದರಾಮಯ್ಯ ಆ್ಯಂಡ್ ಟೀಮ್ ಕಾರಣ: ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ

ಶೇ.70 ರಷ್ಟು ಮೇಲ್ವರ್ಗದವರು ಈ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಆದರೆ, ಅದನ್ನು ಜನರು ತಿರಸ್ಕಾರ ಮಾಡಿದ್ದಾರೆ. ಬೆಂಜ್ ಕಾರ್ ಹೊಂದಿರುವವನು, 25 ಸಾವಿರ ರೂ. ಸಂಬಳ ಪಡೆಯುವ ವ್ಯಕ್ತಿಗೆ ಪುಕ್ಕಟೆ ಕರೆಂಟ್ ಕೊಟ್ಟರೆ ಹೇಗೆ? ಈಗಲೂ ಗ್ಯಾರಂಟಿ ಹಣದಿಂದಲೇ ಜೀವನ ನಡೆಸುವ ಜನ ಇದ್ದಾರೆ. ಅಂತಹವರನ್ನು ನೋಡಿ ಗ್ಯಾರಂಟಿ ಮರು ಪರಿಶೀಲಿಸುವ ಮಾಡುವ ಅಗತ್ಯ ಇದೆ ಎಂದು ಹೇಳಿದ್ದಾರೆ.

ಗ್ಯಾರಂಟಿ ಅನುಕೂಲ ಪಡೆದು ವೋಟ್‌ ಹಾಕದವರಿಗೆ ಉದಾಹರಣೆ ನೀಡುತ್ತಾ, ಹುಣಸೂರಿನ ಹಲವು ಹಳ್ಳಿಗಳಲ್ಲಿ ಕೇವಲ ಒಂದೇ ಸಮುದಾಯದವರು ಇದ್ದಾರೆ. ಅಲ್ಲಿ ಬಿಜೆಪಿಗೆ 600ಕ್ಕೂ ಹೆಚ್ಚು ಮತ ನೀಡಿದ್ದಾರೆ. ನನಗೆ ಕೇವಲ ಮೂರು, ಏಳು ಮತಗಳನ್ನು ನೀಡಿದ್ದಾರೆ. ಒಕ್ಕಲಿಗರು ನನಗೆ ಮತ ಹಾಕಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಮತದಾರರು ‌ʼಸ್ಯಾಡಿಸ್ಟ್ʼ ಎಂದು ಟೀಕೆ

ಮತದಾರರನ್ನು ಸ್ಯಾಡಿಸ್ಟ್ ಎಂದು ಕರೆದಿರುವ ಎಂ.ಲಕ್ಷ್ಮಣ್, ನನ್ನನ್ನು ಸೋಲಿಸಿ ಬೇಜಾರಿಲ್ಲ. ಆದರೆ ಸಿದ್ದರಾಮಯ್ಯ ಏನು ತಪ್ಪು ಮಾಡಿದ್ದಾರೆ. ತವರು ಜಿಲ್ಲೆಯಲ್ಲೇ ಎಷ್ಟು ಬಾರಿ ಅಪಮಾನ ಮಾಡುತ್ತೀರಿ? ಇಷ್ಟರ ಮಟ್ಟಿಗೆ ಸ್ಯಾಡಿಸ್ಟಿಕ್ ನೇಚರ್ ಇದ್ದರೆ ಹೇಗೆ? ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದರು. ಐದು ರೂಪಾಯಿ ಕೊಟ್ಟಿದ್ರಾ? ಆದರೆ ಸಿದ್ದರಾಮಯ್ಯ ಎಷ್ಟು ಕೆಲಸ ಮಾಡಿದ್ದಾರೆ. ಜಯದೇವ ಆಸ್ಪತ್ರೆ ಸೇರಿ ಮೈಸೂರಿಗೆ ಎಷ್ಟು ಕೊಡುಗೆ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರಂಥ ಕ್ಲೀನ್ ಇಮೇಜ್ ಇರುವ ಸಿಎಂ ದೇಶದಲ್ಲಿ ಬೇರೆ ಎಲ್ಲಾದರೂ ಇದ್ದಾರಾ? ಸಾಹೇಬರು ಯಾವುದನ್ನೂ ಹೇಳಿಕೊಳ್ಳೋದಿಲ್ಲ. ಆದರೆ ಮೈಸೂರಿನ ಜನ ಸಿದ್ದರಾಮಯ್ಯ ಅವರಿಗೆ ಎಷ್ಟೋ ಬಾರಿ ನೋವು ಕೊಡ್ತೀರಿ? ಎಂದು ಮತದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಯದುವೀರ್ ಜನರನ್ನು ಎಷ್ಟರ ಮಟ್ಟಿಗೆ ಅರಮನೆಗೆ ಬಿಟ್ಟುಕೊಳ್ಳುತ್ತಾರೋ, ಇಲ್ಲವೋ ಗೊತ್ತಿಲ್ಲ.
ನಾಳೆಯಿಂದಲೇ ನಾನು ಜನರ ಸಮಸ್ಯೆ ಪರಿಹರಿಸಲು ಮುಂದಾಗುತ್ತೇನೆ. ನನಗೆ ಮತ ಕೊಟ್ಟವರು, ಕೊಡದೇ ಇರುವವರು ಎಲ್ಲರೂ ನನ್ನ ಸಂಪರ್ಕ ಮಾಡಬಹುದು. ನಾಳೆಯೇ ನನ್ನ ಕಚೇರಿ ಸಹ ತೆರೆಯುತ್ತೇನೆ. ಆ ಕಚೇರಿಗೆ ಎಲ್ಲರಿಗೂ ಮುಕ್ತ ಅವಕಾಶ ಇದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Kangana Ranaut: ಕಾರಣ ಇದ್ದರೆ ಕೊಲೆ, ಅತ್ಯಾಚಾರ ಮಾಡಬಹುದೆ? ; ವಿರೋಧಿಗಳ ವಿರುದ್ಧ ಗುಡುಗಿದ ಕಂಗನಾ

ಕಾಂಗ್ರೆಸ್ ಯಾವತ್ತೂ ಜಾತಿ ರಾಜಕಾರಣ ಮಾಡಿಲ್ಲ

ಕಾಂಗ್ರೆಸ್ ಯಾವತ್ತೂ ಜಾತಿ ರಾಜಕಾರಣ ಮಾಡಿಲ್ಲ. ಆದರೂ ಚುನಾವಣೆ ವೇಳೆ ನನ್ನನ್ನು ಒಕ್ಕಲಿಗನೇ ಅಲ್ಲ ಅಂದು ಪ್ರಚಾರ ಮಾಡಿದರು. ಹಳೇ ಮೈಸೂರು ಭಾಗದಲ್ಲಿ 8 ಜನ ಒಕ್ಕಲಿಗರಿಗೆ ಕಾಂಗ್ರೆಸ್ ಟಿಕೆಟ್ ನೀಡಿತು. ಒಬ್ಬ ಒಕ್ಕಲಿಗನನ್ನು ನೀವು ಆಯ್ಕೆ ಮಾಡಿಕೊಳ್ಳಲಿಲ್ಲ? ಮೈಸೂರಿನಲ್ಲಿ ಹಲವು ವರ್ಷಗಳ ನಂತರ ಒಕ್ಕಲಿಗೆ ಸಮುದಾಯಕ್ಕೆ ಟಿಕೆಟ್ ನೀಡಿದ್ದರು. ಈ ಅವಕಾಶವನ್ನೂ ನೀವು ಕೈ ಚೆಲ್ಲಿದ್ದೀರಿ ಎಂದು ಸಮುದಾಯದ ವಿರುದ್ಧ ಬೇಸರ ಹೊರಹಾಕಿದ್ದಾರೆ.

Continue Reading

ಮೈಸೂರು

Murder Case : ತಂಗಿಗೆ ವರದಕ್ಷಿಣೆ ಟಾರ್ಚರ್‌; ಬಾಮೈದನ ಕೊಲೆ ಮಾಡಿದ ಬಾವ

Murder Case : ತಂಗಿಗೆ ವರದಕ್ಷಿಣಿ ಕಿರುಕುಳ ಕೊಡುತ್ತಿದ್ದ ಕಾರಣಕ್ಕೆ ತವರು ಮನೆಗೆ ಕರೆದುಕೊಂಡು ಬರಲು ಹೋದ ಅಣ್ಣನ ಬರ್ಬರವಾಗಿ ಕೊಲೆಯಾಗಿ ಹೋಗಿದ್ದಾನೆ. ಮೈಸೂರಿನಲ್ಲಿ ಬಾವನೇ ಬಾಮೈದನನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ.

VISTARANEWS.COM


on

By

Murder case in Mysuru
ಕೊಲೆಯಾದ ಅಭಿಷೇಕ್‌ ಹಾಗೂ ಆರೋಪಿ ರವಿಕುಮಾರ್‌
Koo

ಮೈಸೂರು: ತಂಗಿ ಗಂಡನಿಂದಲೇ ಯುವಕನೊಬ್ಬ (Murder Case) ಕೊಲೆಯಾಗಿ ಹೋಗಿದ್ದಾನೆ. ಮೈಸೂರಿನ ಕುವೆಂಪು ನಗರದ ಐ ಬ್ಲಾಕ್‌ನಲ್ಲಿ ಘಟನೆ ನಡೆದಿದೆ. ಅಭಿಷೇಕ್ (27) ಮೃತ ದುರ್ದೈವಿ.

ಅಭಿಷೇಕ್‌ ತಂಗಿಗೆ ಆಕೆಯ ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ತಂಗಿಗೆ ಹೊಡೆದು ಬಡಿದು ಮಾಡುತ್ತಿದ್ದರು. ಗಂಡನ ಮನೆಯವರ ಕಾಟಕ್ಕೆ ಬೇಸತ್ತ ತಂಗಿಗೆ ಹೆತ್ತವರಿಗೆ ತನ್ನ ಸಂಕಷ್ಟವನ್ನು ಹೇಳಿಕೊಂಡಿದ್ದಳು. ಈ ವಿಷಯ ತಿಳಿದ ಅಭಿಷೇಕ್‌ ತಂಗಿಯನ್ನು ತವರು ಮನೆಗೆ ಕರೆದುಕೊಂಡು ಬರಲು ಹೋಗಿದ್ದ.

ಈ ವೇಳೆ ಬಾವ ರವಿಕುಮಾರ್‌ ಚಾಕುವಿನಿಂದ ಬಾಮೈದ ಅಭಿಷೇಕ್‌ಗೆ ಹಲ್ಲೆ ಮಾಡಿದ್ದಾನೆ. ತೀವ್ರ ರಕ್ತಸ್ರಾವವಾದ ಅಭಿಷೇಕ್‌ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಗಂಭೀರವಾಗಿ ಗಾಯಗೊಂಡ ಅಭಿ ಮೃತಪಟ್ಟಿದ್ದಾನೆ. ಸದ್ಯ ಸ್ಥಳಕ್ಕೆ ಕುವೆಂಪು ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Bengaluru Murder : ನಾಪತ್ತೆಯಾದವನು ಅಕ್ರಮ ಸಂಬಂಧಕ್ಕೆ ಬಲಿ; ಶವವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಬಿಸಾಡಿದ ಹಂತಕ!

ಮಗಳ ನಗ್ನ ಫೋಟೊ ತೋರಿಸಿ ಪ್ರಿಯಕರ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿ ವಿಷ ಸೇವಿಸಿದ ಕುಟುಂಬಸ್ಥರು

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದಲ್ಲಿ (MM Hills) ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ (Self Harming) ಯತ್ನಿಸಿದ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ಚಂದಗಾಲು ಗ್ರಾಮದ ಮಹದೇವನಾಯಕ (65) ಅವರ ಪುತ್ರಿ ರಿಷಿಕಾ ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದಳು. ಆದರೆ ಇತ್ತೀಚೆಗೆ ಆತನಿಂದ ಅಂತರ ಕಾಯ್ದುಕೊಂಡಾಗ ರಿಷಿಕಾಳ ಜತೆಗಿದ್ದ ನಗ್ನ ವಿಡಿಯೊ ಹಾಗೂ ಫೋಟೋ ಇಟ್ಟುಕೊಂಡು ಬೆದರಿಕೆ (Black mail Case) ಹಾಕುತ್ತಿದ್ದ ಎನ್ನಲಾಗಿದೆ.

ಈ ವಿಚಾರವಾಗಿ ಅನೇಕ ಬಾರಿ ಯುವಕನ ಹಾಗು ರಿಷಿಕಾ ಕುಟುಂಬದ ಜತೆ ಗಲಾಟೆ ಸಹ ಆಗಿದೆ. ಈತನ ಕಾಟಕ್ಕೆ ಬೇಸತ್ತ ಕುಟುಂಬ, ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ವಿಷ ಸೇವಿಸಿ ಅಸ್ವಸ್ಥಳಾಗಿದ್ದ ರಿಷಿಕಾಳನ್ನು ಹನೂರು ತಾಲೂಕಿನ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ತಾಯಿ ಗೌರಮ್ಮ ಹಾಗೂ ಲೀಲಾವತಿಗೆ ಹೆಚ್ಚಿನ ಚಿಕಿತ್ಸೆಗೆಂದು ಕೊಳ್ಳೇಗಾಲದಿಂದ ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆಯಲ್ಲಿ ರಿಷಿಕಾ ತಂದೆ ಮಹದೇವನಾಯಕ ಅವರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: Love‌ Torture : ಪ್ರೀತ್ಸೆ ಅಂತ ಪ್ರಾಣ ತಿಂದ; ಒಪ್ಪದೇ ಇದ್ದಾಗ ಯುವತಿಯ ಖಾಸಗಿ ಫೋಟೋ ಹರಿಬಿಟ್ಟ ಪಾಗಲ್‌ ಪ್ರೇಮಿ

MM Hills

ಮಾದಪ್ಪನ ದರ್ಶನ ಮಾಡಿ ವಿಷ ಸೇವಿಸಿದ ಕುಟುಂಬ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ (Self Harming) ಯತ್ನಿಸಿದ್ದಾರೆ. ನಾಲ್ವರು ವಿಷ ಸೇವಿಸಿದ್ದು, ವ್ಯಕ್ತಿಯೊಬ್ಬರು ಮೃತಪಟ್ಟರೆ, ಮೂವರು ತೀವ್ರ ಅಸ್ವಸ್ಥಗೊಂಡಿದ್ದಾರೆ. ಮಲೆಮಹದೇಶ್ವರ ಬೆಟ್ಟ (MM Hills) ವ್ಯಾಪ್ತಿಯ ತಾಳಬೆಟ್ಟದಲ್ಲಿ ಘಟನೆ ನಡೆದಿತ್ತು.

ಚಂದಗಾಲು ಗ್ರಾಮದ ಮಹದೇವನಾಯಕ (65) ಮೃತ ದುರ್ದೈವಿ. ಅಸ್ವಸ್ಥಗೊಂಡ ಮಹದೇವನಾಯಕನ ಪತ್ನಿ ಗೌರಮ್ಮ(60), ರಿಷಿತಾ (21), ಲೀಲಾವತಿ (45) ಎಂಬುವವರು ತೀವ್ರ ಅಸ್ವಸ್ಥಗೊಂಡಿದ್ದಾರೆ. ಮೈಸೂರಿನ ಕೆಆರ್‌ನಗರ ತಾಲೂಕಿನ ಚಂದಗಾಲು ಗ್ರಾಮಸ್ಥರು ಎಂದು ತಿಳಿದು ಬಂದಿದೆ.

ಮಹದೇಶ್ವರ ಬೆಟ್ಟಕ್ಕೆ ಬಂದು ದೇವರ ದರ್ಶನ ಪಡೆದು ವಾಪಸ್ ಬರುವಾಗ ತಾಳ ಬೆಟ್ಟದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಹದೇವನಾಯಕ ವಿಷ ಸೇವಿಸಿದ ಕೂಡಲೇ ಒದ್ದಾಡಿ ಮೃತಪಟ್ಟಿದ್ದಾರೆ. ಇತ್ತ ಗೌರಮ್ಮ, ಲೀಲಾವತಿ, ರಿಷಿತಾ ವಿಷ ಸೇವನೆ ಮಾಡಿದ್ದಾರೆ. ಆದರೆ ದೇಹದಲ್ಲಿ ಉರಿ ಕಾಣಿಸಿಕೊಂಡು ಜೋರಾಗಿ ಕೂಗಿಕೊಂಡು ನರಳಾಡಿದ್ದಾರೆ.

ಈ ವೇಳೆ ತಾಳ ಬೆಟ್ಟದಲ್ಲಿದ್ದ ಸ್ಥಳೀಯರು ಪರಿಶೀಲನೆ ನಡೆಸಿದಾಗ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವುದು ಕಂಡು ಬಂದಿದೆ. ಕೂಡಲೇ ಅಲ್ಲಿದ್ದವರು ನಾಲ್ವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಮಹದೇವನಾಯಕರಿಗೆ ವಿಷ ದೇಹದೊಳಗೆ ಸೇರಿದ್ದರಿಂದ ಅದಾಗಲೇ ಉಸಿರು ಚೆಲ್ಲಿದ್ದರು. ಸದ್ಯ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
IND vs PAK
ಕ್ರೀಡೆ6 mins ago

IND vs PAK: ಪಾಕ್​ ವಿರುದ್ಧದ ಪಂದ್ಯದಲ್ಲಿ ವಿಶ್ವ ದಾಖಲೆ ನಿರ್ಮಿಸಲು ಕೊಹ್ಲಿ ಸಜ್ಜು; ಯಾವುದು ಈ ದಾಖಲೆ?

Karnataka weather Forecast
ಮಳೆ29 mins ago

Karnataka Weather : ಉತ್ತರ ಒಳನಾಡು, ಕರಾವಳಿಯಲ್ಲಿ ವ್ಯಾಪಕ ಮಳೆ; ಶಾಲೆಗೆ ನುಗ್ಗಿದ ನೀರು, ಮಕ್ಕಳಿಗೆ ರಜೆ

ಬೆಂಗಳೂರು35 mins ago

Wheelchair Cricket Tournament: ವಿಶೇಷಚೇತನರ ಗಾಲಿಕುರ್ಚಿಯ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿದ ರವಿಶಂಕರ್ ಗುರೂಜಿ

Ambani Family Fashion
ಫ್ಯಾಷನ್49 mins ago

Ambani Family Fashion: ಅಂಬಾನಿ ಕುಟುಂಬದ ಮಹಿಳೆಯರ ಜ್ಯುವೆಲರಿ ಡಿಸೈನ್ಸ್ ಕಾಪಿ ಮಾಡಿ ಟ್ರೆಂಡಿಯಾದ ಜ್ಯುವೆಲರಿಗಳಿವು!

Narendra Modi
ದೇಶ51 mins ago

Narendra Modi: ನಾಳೆ 3ನೇ ಬಾರಿ ಮೋದಿಗೆ ಪ್ರಧಾನಿ ಗಾದಿ; ಇಲ್ಲಿದೆ ಅವರ ರಾಜಕೀಯದ ಹಾದಿ!

Norway Chess
ಕ್ರೀಡೆ60 mins ago

Norway Chess: 3ನೇ ಸ್ಥಾನಕ್ಕೆ ತೃಪ್ತಿಪಟ್ಟ ಪ್ರಜ್ಞಾನಂದ; ಸಹೋದರಿ ವೈಶಾಲಿಗೆ 4ನೇ ಸ್ಥಾನ

IND vs PAK
ಕ್ರೀಡೆ2 hours ago

IND vs PAK: ಭಾರತ-ಪಾಕ್​ ಪಂದ್ಯಕ್ಕೆ 4 ಹಂತದ ಭದ್ರತಾ ವ್ಯವಸ್ಥೆ; ಮೈದಾನಕ್ಕೆ ನುಗ್ಗಿದರೆ ಜೈಲೂಟ ಖಚಿತ!

Money Guide
ಮನಿ-ಗೈಡ್2 hours ago

Money Guide: ಈಗಿನ ಆರೋಗ್ಯ ವಿಮಾ ಪಾಲಿಸಿ ಬಗ್ಗೆ ಸಮಾಧಾನ ಇಲ್ಲವೆ? ಹೆಲ್ತ್ ಇನ್ಶೂರೆನ್ಸ್ ಪೋರ್ಟೆಬಿಲಿಟಿ ಬಳಸಿ

Niveditha Gowda chandan shetty age differance
ಸ್ಯಾಂಡಲ್ ವುಡ್2 hours ago

Niveditha Gowda: ಚಂದನ್‌ ಶೆಟ್ಟಿ-ನಿವೇದಿತಾ ನಡುವಿನ ವಯಸ್ಸಿನ ಅಂತರವೆಷ್ಟು?

Viral Video
ವೈರಲ್ ನ್ಯೂಸ್2 hours ago

Viral Video: ಹೊಟೇಲ್‌ ಮಾಲೀಕನನ್ನು ಮುಖಾಮೂತಿ ನೋಡದೆ ಚಚ್ಚಿದ ಶಾಸಕ; ವಿಡಿಯೋ ಫುಲ್‌ ವೈರಲ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ24 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ1 day ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌