Lalbagh Flower Show: ಆ.4 ರಿಂದ ಲಾಲ್‌ಬಾಗ್‌ ಫ್ಲವರ್ ಶೋ; ಸಂಚಾರ ಮಾರ್ಗ, ಪಾರ್ಕಿಂಗ್‌ನಲ್ಲಿ ಬದಲಾವಣೆ - Vistara News

ಕರ್ನಾಟಕ

Lalbagh Flower Show: ಆ.4 ರಿಂದ ಲಾಲ್‌ಬಾಗ್‌ ಫ್ಲವರ್ ಶೋ; ಸಂಚಾರ ಮಾರ್ಗ, ಪಾರ್ಕಿಂಗ್‌ನಲ್ಲಿ ಬದಲಾವಣೆ

lalbagh Flower Show: ಆ.4ರಂದು ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ಲಾಲ್‌ಬಾಗ್‌ 214ನೇ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ.

VISTARANEWS.COM


on

lalbagh flower show
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಗರದ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಆಗಸ್ಟ್ 4ರಂದು ಫಲಪುಷ್ಪ ಪ್ರದರ್ಶನ-2023 (Lalbagh Flower Show) ಆರಂಭವಾಗಲಿದೆ. ಆಗಸ್ಟ್ 15ರವರೆಗೆ‌ 10 ದಿನಗಳ ಕಾಲ ಫ್ಲವರ್ ಶೋ ಇರಲಿದ್ದು, ಹೂವಿನ ಲೋಕವನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಜನರು ಬರಲಿದ್ದಾರೆ. ಇದರಿಂದ ಲಾಲ್‌ಬಾಗ್‌ ಮಾರ್ಗದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಲಿದೆ. ಹೀಗಾಗಿ ಸುಗಮ ಸಂಚಾರಕ್ಕೆ ಅನುವಾಗಲು ಸಂಚಾರ ಮಾರ್ಗ ಹಾಗೂ ವಾಹನ ನಿಲುಗಡೆಯಲ್ಲಿ ಸಂಚಾರ ಪೊಲೀಸ್‌ ವಿಭಾಗ ಕೆಲ ಬದಲಾವಣೆಗಳನ್ನು ಮಾಡಿದೆ.

ಫ್ಲವರ್‌ ಶೋಗೆ ಬರು ಸಾರ್ವಜನಿಕರು ಸಾಧ್ಯವಾದಷ್ಟು ಸಮೂಹ ಸಾರಿಗೆ ವ್ಯವಸ್ಥೆ ಬಳಸಲು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ. ಡಾ.ಮರೀಗೌಡ ರಸ್ತೆ, ಲಾಲ್‌ ಬಾಗ್ ರಸ್ತೆ, ಕೆ.ಎಚ್. ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಸಾಧ್ಯವಾದಷ್ಟು ಸಮೂಹ ಸಾರಿಗೆಗಳಾದ ಬಿಎಂಟಿಸಿ ಬಸ್‌, ಮೆಟ್ರೋ ಹಾಗೂ ಕ್ಯಾಬ್‌ಗಳನ್ನು ಬಳಸಲು ಪೊಲೀಸರು ಮನವಿ ಮಾಡಿದ್ದಾರೆ.

ಇದನ್ನೂ ಓದಿ | Lalbagh Tour : ಸಸ್ಯಕಾಶಿ ಲಾಲ್‌ಬಾಗ್‌ನೊಳಗೆ ಏನೇನಿದೆ? ಮರೆಯದೆ ನೋಡಿ…

ವಾಹನಗಳ ನಿಲುಗಡೆ ನಿಷೇಧಿಸಿರುವ ರಸ್ತೆಗಳು

  1. ಡಾ. ಮರಿಗೌಡ ರಸ್ತೆ, ಲಾಲ್ ಬಾಗ್ ಮುಖ್ಯ ದ್ವಾರದಿಂದ ನಿಮ್ಹಾನ್ಸ್‌ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ
  2. ಕೆ.ಎಚ್.ರಸ್ತೆ, ಕೆ.ಎಚ್.ವೃತ್ತದಿಂದ ಶಾಂತಿನಗರ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ
  3. ಲಾಲ್‌ ಬಾಗ್ ರಸ್ತೆ, ಸುಬ್ಬಯ್ಯ ವೃತ್ತದಿಂದ ಲಾಲ್‌ ಬಾಗ್ ಮುಖ್ಯದ್ವಾರದವರೆಗೆ
  4. ಸಿದ್ದಯ್ಯ ರಸ್ತೆ, ಊರ್ವಶಿ ಥಿಯೇಟರ್ ಜಂಕ್ಷನ್‌ನಿಂದ ವಿಲ್ಸನ್ ಗಾರ್ಡನ್ 12ನೇ ಕ್ರಾಸ್‌ವರೆಗೆ
  5. ಬಿ.ಎಂ.ಟಿ.ಸಿ ರಸ್ತೆಯಲ್ಲಿ, ರಸ್ತೆಯ ಎರಡೂ ಬದಿಗಳಲ್ಲಿ
  6. ಲಾಲ್ ಬಾಗ್ ವೆಸ್ಟ್ ಗೇಟ್‌ನಿಂದ ಆರ್.ವಿ. ಟೀಚರ್ಸ್ ಕಾಲೇಜಿನವರೆಗೆ
  7. ಆರ್ ವಿ ಟೀಚರ್ಸ್‌ ಕಾಲೇಜಿನಿಂದ ಆಶೋಕ ಪಿಲ್ಲರ್‌ವರೆಗೆ
  8. ಅಶೋಕ ಪಿಲ್ಲರ್‌ನಿಂದ ಸಿದ್ದಾಪುರ ಜಂಕ್ಷನ್‌ವರೆಗೆ

ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಿರುವ ಸ್ಥಳಗಳು

  1. ಡಾ.ಮರಿಗೌಡ ರಸ್ತೆ, ಆಲ್ ಅಮೀನ್ ಕಾಲೇಜ್ ಆವರಣದಲ್ಲಿ ದ್ವಿಚಕ್ರ ವಾಹನ ನಿಲುಗಡೆ
  2. ಕೆ.ಎಚ್.ರಸ್ತೆ, ಶಾಂತಿನಗರ ಬಿ.ಎಂ.ಟಿ.ಸಿ. ಬಸ್ ನಿಲ್ದಾಣದ ಮೇಲೆ ನಾಲ್ಕು ಚಕ್ರದ ವಾಹನ ನಿಲುಗಡೆ
  3. ಡಾ.ಮರಿಗೌಡ ರಸ್ತೆ- ಹಾಪ್ ಕಾಮ್ಸ್‌ನಲ್ಲಿ ದ್ವಿ ಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳ ನಿಲುಗಡೆ
  4. ಜೆ.ಸಿ. ರಸ್ತೆ ಕಾರ್ಪೊರೇಷನ್ ಪಾರ್ಕಿಂಗ್ ಸ್ಥಳದಲ್ಲಿ ದ್ವಿ ಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳ ನಿಲುಗಡೆ

10-12 ಲಕ್ಷ ಜನರು ಬರುವ ಸಾಧ್ಯತೆ

    ಸಿಲಿಕಾನ್ ಸಿಟಿಯ ಚಂದದ ತಾಣ ಲಾಲ್‌ಬಾಗ್‌ನಲ್ಲಿ ಶುಕ್ರವಾರ ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ 214ನೇ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದು, ಲಾಲ್‌ಬಾಗ್‌ನ ಗಾಜಿನಮನೆ ಮಧುವನಗಿತ್ತಿಯಂತೆ ಶೃಂಗಾರವಾಗಿದೆ. ಈ ಬಾರಿ ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯಗೆ ಗೌರವ ಅರ್ಪಣೆ ಮಾಡಲಾಗಿದೆ. ಬರೋಬ್ಬರಿ 2 ಕೋಟಿ ರೂ. ವೆಚ್ಚದಲ್ಲಿ 69 ಬಗೆಯ ಹೂಗಳು ಈ ಬಾರಿ ಫ್ಲವರ್ ಶೋ ಅಂದವನ್ನು ಹೆಚ್ಚಿಸಲಿವೆ. ಈ ವರ್ಷ 10 ರಿಂದ 12 ಲಕ್ಷದಷ್ಟು ಜನರು ಬರುವ ಸಾಧ್ಯತೆ ಇದ್ದು, ಫಲಪುಷ್ಪ ಪ್ರದರ್ಶನದಲ್ಲಿ ಹಲವು ಕಲೆಗಳ ಸಾರುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಒಟ್ಟು 10 ದಿನಗಳ ಕಾಲ ಫ್ಲವರ್ ಶೋ ಇರಲಿದೆ.

    ಹೂವಿನಿಂದ ಅರಳಿರುವ ವಿಧಾನಸೌಧದ ಮಾದರಿ ಈ ಬಾರಿಯ ಪ್ರಮುಖ ಆಕರ್ಷಣೆಯಾಗಿದ್ದು, ಫ್ಲವರ್ ಶೋಗೆ ಅಂದಾಜು 13 ರಿಂದ 15 ಲಕ್ಷದಷ್ಟು ಹೂಗಳು ಬೇಕಾಗಿವೆ. ಸುಮಾರು 8 ಲಕ್ಷ ಹೂಗಳನ್ನು ರಾಜ್ಯದ ನಂದಿಗಿರಿಧಾಮ, ಕೆಮ್ಮಣ್ಣುಗುಂಡಿ ಗಿರಿಧಾಮ ಸೇರಿ ತಮಿಳುನಾಡು, ಆಂಧ್ರ ಪ್ರದೇಶ, ಊಟಿಯಿಂದ ಹೂಗಳನ್ನ ತರಿಸಿಕೊಳ್ಳಲಾಗಿದೆ. ಸದ್ಯ ಸುಮಾರು 60 ಕಲಾವಿದರು ವಿಧಾನಸೌಧದ ಭವ್ಯ ಕಲಾಕೃತಿ ನಿರ್ಮಿಸಿದ್ದು, ಶುಕ್ರವಾರದಿಂದ ಜನರ ವೀಕ್ಷಣೆಗೆ ಸಿಗಲಿದೆ.

    ಇದನ್ನೂ ಓದಿ | lalbagh flower show 2023 : ಆ.4ಕ್ಕೆ ಲಾಲ್‌ಬಾಗ್‌ ಫ್ಲವರ್‌ ಶೋ; ಹೂವಲ್ಲಿ ಅರಳುವ ಕೆಂಗಲ್ ಹನುಮಂತಯ್ಯ

    ಇನ್ನು ಫ್ಲವರ್ ಶೋಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶ ಇರಲಿದ್ದು, ದೊಡ್ಡವರಿಗೆ 70 ರೂ. ಹಾಗೂ ಮಕ್ಕಳಿಗೆ 30 ರೂಪಾಯಿ ಪ್ರವೇಶ ಶುಲ್ಕ ನಿಗದಿ ಮಾಡಲಾಗಿದೆ. ಸದ್ಯ ಹೂಗಳ ಲೋಕದ ಅನಾವರಣಕ್ಕೆ ಸಕಲ ಸಿದ್ಧತೆ ನಡೆದಿದ್ದು, ನಾಳೆ ನೋಡುಗರ ಕಣ್ಣಿಗೆ ಹಬ್ಬ ನೀಡಲಿದೆ.

    ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
    ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
    Continue Reading
    Click to comment

    Leave a Reply

    Your email address will not be published. Required fields are marked *

    ಕರ್ನಾಟಕ

    Brand Bengaluru: ‘ಬ್ರ್ಯಾಂಡ್‌ ಬೆಂಗಳೂರು’ ನಿರ್ಮಾಣಕ್ಕೆ ಡಿಕೆಶಿ ಮಾಸ್ಟರ್‌ಪ್ಲಾನ್;‌ ಇಲ್ಲಿದೆ ಸಭೆಯ ವಿವರ

    Brand Bengaluru: ಗ್ರೇಟರ್ ಬೆಂಗಳೂರು ವಿಚಾರವಾಗಿ ಅಶ್ವತ್ಥ್ ನಾರಾಯಣ ಅವರು ಗಾಬರಿಯಾಗುವುದು ಬೇಡ, ವಿಧೇಯಕದ ಸಂಪೂರ್ಣ ಮಾಹಿತಿ ನಿಮ್ಮ ಕೈಯಲ್ಲಿದೆ. ಪ್ರತಿ ಪದವನ್ನೂ ಪರಿಶೀಲಿಸಿ. ಬೆಂಗಳೂರಿನ ಭವಿಷ್ಯದ ಹಿತ ಕಾಯಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಗ್ರೇಟರ್ ಬೆಂಗಳೂರಿನಲ್ಲಿ ಕೈಗೊಂಡಿದ್ದೇವೆ. ನೀವು ಚರ್ಚೆ ಮಾಡಿ, ನಿಮ್ಮ ಸಲಹೆ ಸೂಚನೆ ಪರಿಗಣಿಸುತ್ತೇವೆ ಎಂಬುದಾಗಿ ಡಿ.ಕೆ.ಶಿವಕುಮಾರ್‌ ಹೇಳಿದರು.

    VISTARANEWS.COM


    on

    DK Shivakumar
    Koo

    ಬೆಂಗಳೂರು: ಬ್ರ್ಯಾಂಡ್‌ ಬೆಂಗಳೂರು ಪರಿಕಲ್ಪನೆ ಅಡಿಯಲ್ಲಿ (Brand Bengaluru) ಬೆಂಗಳೂರು ನಗರದ ಸರ್ವತೋಮುಖ ಅಭಿವೃದ್ಧಿ ಕುರಿತಂತೆ ಬೆಂಗಳೂರು ವ್ಯಾಪ್ತಿಯ ಸಚಿವರು ಹಾಗೂ ಶಾಸಕರ ಜತೆ ವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಅವರು ಶನಿವಾರ (ಜುಲೈ 27) ‘ನಾಗರಿಕರ ಧ್ವನಿ-ಅದೇ ಸರ್ಕಾರದ ಧ್ವನಿ’ ಸಭೆ ನಡೆಸಿದರು. ಹಾಗೆಯೇ, ಬೆಂಗಳೂರು ಅಭಿವೃದ್ಧಿಗೆ ಸರ್ಕಾರ ಏನೆಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂಬುದನ್ನು ವಿವರಿಸಿದರು.

    “ಕೆಂಪೇಗೌಡರು ಬೆಂಗಳೂರನ್ನು ನಿರ್ಮಿಸಿ ನಮ್ಮೆಲ್ಲರಿಗೂ ಸುಂದರ ನಗರವನ್ನು ಉಡುಗೊರೆಯಾಗಿ ನೀಡಿದ್ದಾರೆ. ಬೆಂಗಳೂರು, ಅಪಾರ ಮಾನವ ಸಂಪನ್ಮೂಲ, ಸಂಸ್ಕೃತಿ, ಉದ್ಯೋಗ, ಹವಾಮಾನದಿಂದ ನೆರೆಹೊರೆ ರಾಜ್ಯದ ಜನರನ್ನು ಸೆಳೆಯುತ್ತಿದೆ. ಆದರೆ ಬೆಂಗಳೂರು ಕೂಡ ಸಮಸ್ಯೆಗಳಿಂದ ಹೊರತಾಗಿಲ್ಲ. ಕಾವೇರಿ ನೀರಿನ ಸಮಸ್ಯೆ, ಟ್ರಾಫಿಕ್‌, ಕಸದ ನಿರ್ವಹಣೆ, ಕೆರೆಗಳ ನಿರ್ವಹಣೆ ಇತ್ಯಾದಿಗಳನ್ನು ಕುರಿತು ಕೂಲಂಕಷವಾಗಿ ಚರ್ಚಿಸಲಾಗುತ್ತಿದೆ” ಎಂದು ತಿಳಿಸಿದರು.

    70 ಸಾವಿರ ನಾಗರಿಕರಿಂದ ಸಲಹೆ

    “ಭವಿಷ್ಯದ ದೃಷ್ಟಿಯಿಂದ, ಬೆಂಗಳೂರು ಅಭಿವೃದ್ಧಿಯನ್ನು ಪಾರದರ್ಶಕವಾಗಿ ಮಾಡಬೇಕಾಗಿದೆ. ಅತ್ಯುತ್ತಮ ಕಾರ್ಯಕ್ರಮದ ಆಯ್ಕೆಯ ಕುರಿತು ಚರ್ಚಿಸಲಾಗುತ್ತಿದೆ. 70 ಸಾವಿರ ನಾಗರಿಕರು ಈ ಕುರಿತು ಸಲಹೆಗಳನ್ನು ನೀಡಿದ್ದಾರೆ. ಉತ್ತಮ ಯೋಜನೆಗಳನ್ನು ರೂಪಿಸಿ ಜನಪರ ಆಡಳಿತ ನೀಡುವ ಉದ್ದೇಶದಿಂದ ಈ ರೀತಿಯ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ” ಎಂದು ಹೇಳಿದರು.

    “ಗ್ರೇಟರ್ ಬೆಂಗಳೂರು ವಿಚಾರವಾಗಿ ಅಶ್ವತ್ಥ್ ನಾರಾಯಣ ಅವರು ಗಾಬರಿಯಾಗುವುದು ಬೇಡ, ವಿಧೇಯಕದ ಸಂಪೂರ್ಣ ಮಾಹಿತಿ ನಿಮ್ಮ ಕೈಯಲ್ಲಿದೆ. ಪ್ರತಿ ಪದವನ್ನೂ ಪರಿಶೀಲಿಸಿ. ಬೆಂಗಳೂರಿನ ಭವಿಷ್ಯದ ಹಿತ ಕಾಯಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಗ್ರೇಟರ್ ಬೆಂಗಳೂರಿನಲ್ಲಿ ಕೈಗೊಂಡಿದ್ದೇವೆ. ನೀವು ಚರ್ಚೆ ಮಾಡಿ, ನಿಮ್ಮ ಸಲಹೆ ಸೂಚನೆ ಪರಿಗಣಿಸುತ್ತೇವೆ. ನಿಮ್ಮೆಲ್ಲರ ಒತ್ತಾಯದಂತೆ ಗ್ರೇಟರ್ ಬೆಂಗಳೂರು ವಿಚಾರವಾಗಿ ಸದನ ಸಮಿತಿ ರಚಿಸಲು ತೀರ್ಮಾನಿಸಿದ್ದೇವೆ” ಎಂದರು.

    “ವಿರೋಧ ಪಕ್ಷದ ನಾಯಕರು ಇಲ್ಲೇ ಇದ್ದು, ಅವರು ನಿಮ್ಮ ಪಕ್ಷದಿಂದ ಸಮಿತಿಗೆ ಹೆಸರು ಶಿಫಾರಸು ಮಾಡಿದರೆ ಇಂದು ಸಂಜೆಯೇ ಸಮಿತಿ ರಚಿಸಿ ಅದನ್ನು ಅಧಿಕೃತವಾಗಿ ಘೋಷಣೆ ಮಾಡಬಹುದು. ಇಂದು ಈ ಎಲ್ಲ ವಿಚಾರವಾಗಿ ಎಷ್ಟು ಹೊತ್ತು ಬೇಕಾದರೂ ಚರ್ಚೆ ಮಾಡಲು ಸಿದ್ಧ. ನಿಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ತಿಳಿಸಿ” ಎಂದು ಹೇಳಿದರು.

    “ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಬಹಳ ಸವಾಲಿನ ಇಲಾಖೆ. ಬೆಂಗಳೂರಿನ ಸಮಸ್ಯೆಗಳಿಗೆ ಹೊಸ ರೂಪ ನೀಡುವ ಪ್ರಯತ್ನ ಮಾಡುತ್ತಿದ್ದೇನೆ. ಕೇಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಕೆಂಗಲ್ ಹನುಮಂತಯ್ಯನವರು ಇಲ್ಲಿ ವಿಧಾನಸೌಧ ಕಟ್ಟಿಸಿದರು. ಎಸ್.ಎಂ ಕೃಷ್ಣ ಅವರು ಇದನ್ನು ಜಾಗತಿಕ ಮಟ್ಟಕ್ಕೆ ಕೊಂಡೋಯ್ದರು. ಬೆಂಗಳೂರು ಯೋಜಿತ ನಗರವಲ್ಲ. ನಾನು ಈ ಹಿಂದೆ ನಗರಾಭಿವೃದ್ಧಿ ಸಚಿವನಾಗಿದ್ದಾಗ ಬೆಂಗಳೂರಿನ ಜನಸಂಖ್ಯೆ 70 ಲಕ್ಷ ಇತ್ತು. ಈಗ ಅದು 1.40 ಕೋಟಿಗೆ ಏರಿಕೆಯಾಗಿದೆ. 1.04 ಕೋಟಿ ವಾಹನಗಳಿವೆ. ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ” ಎಂದು ತಿಳಿಸಿದರು.

    “ಇಲ್ಲಿರುವ ತಂತ್ರಜ್ಞಾನ, , ಮಾನವ ಸಂಪನ್ಮೂಲ, ಹವಾಮಾನ, ಸಂಸ್ಕೃತಿ ನೋಡಿ ಇಲ್ಲಿಗೆ ಬಂದವರು ಮತ್ತೆ ವಾಪಸ್ ಹೋಗುತ್ತಿಲ್ಲ. ಮಕ್ಕಳ ಶಿಕ್ಷಣ, ಉದ್ಯೋಗಕ್ಕಾಗಿ ಬಂದವರು ಕೂಡ ಇಲ್ಲೇ ಉಳಿದುಕೊಂಡಿದ್ದಾರೆ. ಹೀಗೆ ಬೆಂಗಳೂರು ಅನಿಯಂತ್ರಿತವಾಗಿ ಬೆಳೆಯುತ್ತಿದೆ. ಬಿಜೆಪಿ ಸರ್ಕಾರ 110 ಹಳ್ಳಿಗಳನ್ನು ಬೆಂಗಳೂರಿನ ವ್ಯಾಪ್ತಿಗೆ ಸೇರಿಸಿದ್ದು, ಇಲ್ಲಿಯವರೆಗೂ ಆ ಭಾಗಕ್ಕೆ ಮೂಲಸೌಕರ್ಯ ಒದಗಿಸಿಕೊಡಲು ಸಾಧ್ಯವಾಗಿಲ್ಲ. ಇದರ ಬಗ್ಗೆ ಪ್ರಯತ್ನ ಮಾಡುತ್ತಿದ್ದೇವೆ. ಕಾವೇರಿ ನೀರಿನ ಸಮಸ್ಯೆ ಒಂದೆಡೆಯಾದರೆ, ಕಳೆದ ಬೇಸಿಗೆಯಲ್ಲಿ ನಗರದ 7 ಸಾವಿರ ಕೊಳವೆಬಾವಿ ಬರಿದಾಗಿ ಸಮಸ್ಯೆ ಉದ್ಭವಿಸಿತ್ತು. ಕೆರೆಗಳನ್ನು ಉಳಿಸಿ ಜೀವಂತವಾಗಿರಿಸಿಕೊಳ್ಳಬೇಕು. ಇದಕ್ಕಾಗಿ ಏನು ಮಾಡಬೇಕು ಚರ್ಚೆ ಮಾಡಲಾಗುತ್ತಿದೆ. ಅಂತರ್ಜಲ ಹೆಚ್ಚಿಸದಿದ್ದರೆ ಪರ್ಯಾಯ ಅವಕಾಶವಿಲ್ಲ” ಎಂದು ಹೇಳಿದರು.

    “ಕಸದ ವಿಚಾರ ನಿಮಗೆಲ್ಲ ತಿಳಿದಿದೆ. ಇನ್ನು ಸಂಚಾರಿ ದಟ್ಟಣೆ ಸಮಸ್ಯೆ ಹೆಚ್ಚಾಗಿದೆ. ಅಧಿಕಾರಿಗಳು ಇದನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದು, ಆದರೆ ಅದು ಸಾಧ್ಯವಾಗುತ್ತಿಲ್ಲ. ಕಸ ಹಾಗೂ ಸಂಚಾರಿ ದಟ್ಟಣೆ ಸಮಸ್ಯೆ ವಿಚಾರವಾಗಿ ಸುಮಾರು 70 ಸಾವಿರ ಸಲಹೆಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಾಗಿದೆ. ಇವುಗಳನ್ನು ಪರಿಶೀಲಿಸಿದ್ದೇವೆ. ಬೆಂಗಳೂರಿನ ಎಲ್ಲಾ ಇಲಾಖೆಗಳಲ್ಲಿ ಪಾರದರ್ಶಕವಾಗಿ ಕೆಲಸ ಮಾಡಲಾಗುತ್ತಿದೆ. ಕಾನೂನು ಚೌಕಟ್ಟಿನ ಆಚೆಗೆ ಯಾವುದೇ ಕೆಲಸ ಮಾಡುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ಎಲ್ಲ ಪ್ರಕ್ರಿಯೆ ನಡೆಯಬೇಕು. ನಾನು ತಪ್ಪು ಮಾಡಲು ಹೋದರೂ ನನಗೆ ಎಚ್ಚರಿಕೆ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಟಿಡಿಆರ್ ವಿಚಾರವಾಗಿ ದೊಡ್ಡ ಹಗರಣವಾಗಿದೆ. ಅವುಗಳನ್ನು ಬಗೆಹರಿಸಲು ಹೊಸ ವ್ಯವಸ್ಥೆ ತರಲಾಗುತ್ತಿದೆ. ಈ ಬಗ್ಗೆಯೂ ನಿಮಗೆ ಮಾಹಿತಿ ನೀಡುತ್ತೇವೆ” ಎಂದರು.

    ಪ್ರವಾಸೋದ್ಯಮಕ್ಕೆ ಆದ್ಯತೆ

    “ಇನ್ನು ಬೆಂಗಳೂರಿನಲ್ಲಿ ವಿಧಾನಸೌಧ ಕಟ್ಟಡ ಬಿಟ್ಟರೆ ಪ್ರವಾಸಿಗರ ಆಕರ್ಷಕ ಕೇಂದ್ರಗಳು ಹೆಚ್ಚಾಗಿಲ್ಲ. ಕಬ್ಬನ್ ಪಾರ್ಕ್ ಹಾಗೂ ಲಾಲ್ ಬಾಗ್ ನೋಡುತ್ತಿದ್ದ ಕಾಲ ಮುಗಿದಿದೆ. ಸಣ್ಣ ಮಕ್ಕಳು ನೆಹರು ಪ್ಲಾನೆಟೋರಿಯಂ ನೋಡಬಹುದು. ಇದರ ಹೊರತಾಗಿ ಪ್ರಮುಖವಾಗಿ ಪ್ರವಾಸಿಗರನ್ನು ಆಕರ್ಷಿಸುವ ಕೇಂದ್ರವಿಲ್ಲ. ಹೀಗಾಗಿ ಬೆಂಗಳೂರಿನಲ್ಲಿ ಸ್ಕೈಡೆಕ್ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ವಿಚಾರವಾಗಿ ವಿವರಣೆ ನೀಡಲಾಗುವುದು” ಎಂದು ಹೇಳಿದರು..

    ಇದಕ್ಕೂ ಮುನ್ನ ಬ್ರ್ಯಾಂಡ್ ಬೆಂಗಳೂರು ಕುರಿತ ಕಿರುಹೊತ್ತಗೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಸತಿ ಸಚಿವ ಜಮೀರ್ ಅಹ್ಮದ್, ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಬಿಡುಗಡೆಗೊಳಿಸಿದರು.

    ಇದನ್ನೂ ಓದಿ: DK Shivakumar: ನಮ್ಮ ಸರ್ವನಾಶವೇ ಕುಮಾರಸ್ವಾಮಿ ಅವರ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್

    Continue Reading

    ಮಳೆ

    Karnataka Rain : ಭಾರಿ ಗಾಳಿ-ಮಳೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ; ಸವಾರ ಸ್ಥಳದಲ್ಲೆ ಸಾವು

    Karnataka Rain: ಮಳೆಯು ನಾನಾ ಅವಾಂತರವನ್ನೇ ಸೃಷ್ಟಿಸಿರುವುದು ಮಾತ್ರವಲ್ಲದೇ ಸಾವು-ನೋವಿಗೂ ಕಾರಣವಾಗಿದೆ. ಚಲಿಸುತ್ತಿದ್ದ ಬೈಕ್‌ ಮೇಲೆ ಮರ ಬಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನದಲ್ಲಿ ಕಾರೊಂದು ನೀರಿನಲ್ಲಿ ಸಿಲುಕಿ ಚಾಲಕ ಪರದಾಡುವಂತಾಯಿತು.

    VISTARANEWS.COM


    on

    By

    karnataka Rain
    Koo

    ಶಿವಮೊಗ್ಗ : ಮಲೆನಾಡು ಭಾಗದಲ್ಲಿ ಗಾಳಿ ಜತೆಗೆ ವ್ಯಾಪಕ (Karnataka Rain) ಮಳೆಯಾಗುತ್ತಿದೆ. ಶಿವಮೊಗ್ಗದಲ್ಲಿ ಭಾರಿ ಮಳೆಗೆ ಮರವೊಂದು ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೀನ್ಮನೆಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ರಾಮಪ್ಪ (26) ಮೃತ ದುರ್ದೈವಿ.

    ಚಿಕ್ಕಮಗಳೂರಲ್ಲಿ ಮೊಬೈಲ್ ಚಾರ್ಜ್ ಮಾಡಲು ಜನರೇಟರ್ ಮೊರೆ!

    ಗಾಳಿ ಮಳೆ ಅಬ್ಬರಕ್ಕೆ ಚಿಕ್ಕಮಗಳೂರಿನ ಬಹುತೇಕ ಕಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಒಂದು ವಾರದಿಂದ ವಿದ್ಯುತ್ ಇಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಕಳಸ,ಮೂಡಿಗೆರೆ, ಶೃಂಗೇರಿ, ಕೊಪ್ಪ, ಚಿಕ್ಕಮಗಳೂರು ತಾಲೂಕು ಹೊರ ಜಗತ್ತಿನೊಂದಿಗೆ ಸಂಪರ್ಕ ಕಳೆದುಕೊಂಡಿದೆ. ಮೊಬೈಲ್ ಚಾರ್ಜ್ ಮಾಡಲು ಹಾಗೂ ಮನೆ ಬಳಕೆಗೆ ಜನರೇಟರ್ ಮೊರೆ ಹೋಗಿದ್ದಾರೆ. ಡೀಸೆಲ್ ಜನರೇಟರ್ ಬಳಸಿ ಮೊಬೈಲ್ ಚಾರ್ಜಿಂಗ್ ಮಾಡಿಕೊಳ್ಳುತ್ತಿದ್ದಾರೆ.

    ಕೋಡಿ ಬಿದ್ದು ಅಚ್ಚರಿ ಮೂಡಿಸಿದ ಅಯ್ಯನಕೆರೆ

    ನಿನ್ನೆ ಶುಕ್ರವಾರ ಮದಗದ ಕೆರೆ ಕೋಡಿ ಬಿದ್ದ ಬೆನ್ನಲ್ಲೆ ಇಂದು ಶನಿವಾರ ಅಯ್ಯನಕೆರೆ ಕೋಡಿ ಬಿದ್ದಿದೆ. ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಯಪಟ್ಟಣದ ಕೆರೆಗಳು ಕೋಡಿ ಬಿದ್ದು ಜಲಪಾತದಂತೆ ಧುಮ್ಮಿಕ್ಕಿ ಹರಿಯುತ್ತಿದೆ. ಇನ್ನೂ ಶನಿವಾರವೇ ಅಯ್ಯನಕೆರೆ ಕೋಡಿ ಬೀಳುವುದು ಪ್ರತೀತಿ. ಮತ್ತೆ ಶನಿವಾರವೇ ಕೋಡಿಬಿದ್ದು ಅಚ್ಚರಿ ಮೂಡಿಸಿದೆ. ಹತ್ತಾರು ಹಳ್ಳಿ, ಸಾವಿರಾರು ಎಕರೆ ಜಮೀನು, ಜನ-ಜಾನುವರಗಳಿಗೆ ಆಶ್ರಯವಾಗಿದೆ.

    ಇನ್ನೂ ಕಡೂರು ತಾಲೂಕಿನ ಐತಿಹಾಸಿಕ ಮದಗದ ಕೆರೆ ಕೋಡಿ ಬಿದ್ದು ಭಾರೀ ಪ್ರಮಾಣದ ನೀರು ಹರಿದುಹೋಗಿದೆ. ಕೋಡಿ ಬಿದ್ದ ಕೆರೆ ನೀರಿನಿಂದ ಹೊಲಗದ್ದೆ-ತೋಟಗಳು ಜಲಾವೃತಗೊಂಡಿದೆ. ಇತ್ತ ಸೇತುವೆಗಳು ಜಲಾವೃತಗೊಂಡು ಹಳ್ಳಿಗಳ‌ ಸಂಪರ್ಕ ಕಡಿತಗೊಂಡಿದೆ. ನೀರಿನ ವೇಗಕ್ಕೆ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.

    ಇತ್ತ ಭದ್ರಾ ನದಿ ಅಬ್ಬರಕ್ಕೆ ರಾಜ್ಯ ಹೆದ್ದಾರಿ ಜಲಾವೃತಗೊಂಡಿದೆ. ಬಾಳೆಹೊನ್ನೂರು-ಕೊಟ್ಟಿಗೆಹಾರ- ಕಳಸ ಸಂಪರ್ಕಿಸುವ ಹೆದ್ದಾರಿ ರಸ್ತೆಯಲ್ಲಿ ನೀರು ಏರಿಕೆ ಆಗುತ್ತಿದೆ. ಬಾಳೆಹೊನ್ನೂರು ಕಳಸ ರಾಜ್ಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ.

    ಇದನ್ನೂ ಓದಿ:Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

    ತೆಪ್ಪದಲ್ಲಿ ತೆರಳಿದ ಲೈನ್‌ಮ್ಯಾನ್‌

    ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟಕ್ಕೆ ವಿದ್ಯುತ್ ಅಸ್ತವ್ಯಸ್ತಗೊಂಡಿದೆ. ವಿದ್ಯುತ್ ಲೈನ್ ಸರಿಪಡಿಸಲು ಮೆಸ್ಕಾಂ ಸಿಬ್ಬಂದಿ ಪ್ರಾಣ ಪಣಕಿಟ್ಟು ಕೆಲಸ ಮಾಡುತ್ತಿದ್ದಾರೆ. ಉಕ್ಕಿ ಹರಿಯುವ ನೀರಿನಲ್ಲಿ ತೆಪ್ಪದಲ್ಲಿ ತೆರಳಿ ವಿದ್ಯುತ್ ಲೈನ್ ಸರಿಪಡಿಸಿದ್ದಾರೆ. ಬಾಳೆಹೊನ್ನೂರು-ಗಡಿಗೇಶ್ವರದ ಬಳಿ ವಿದ್ಯುತ್ ತಂತಿಗಳು ಹೊಳೆಯಲ್ಲಿ ಮುಳುಗಿ ಹೋಗಿದೆ. ಜೆ.ಇ ಗಣೇಶ್, ಕಾಂತರಾಜು, ಶಿವಕುಮಾರ್ ಸರಿಪಡಿಸುತ್ತಿದ್ದಾರೆ. ಮಲೆನಾಡಲ್ಲಿ ವಿದ್ಯುತ್ ಸಂಪರ್ಕ ಸರಿಪಡಿಸುವುದೇ ದೊಡ್ಡ ಸಾಹಸವಾಗಿದೆ. ಜಿಲ್ಲೆಯಾದ್ಯಂತ 2,400ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರಾಶಾಹಿಯಾಗಿವೆ.

    ಮರ ಬಿದ್ದು ಮನೆ ಜಖಂ

    ಕೊಡಗು ಜಿಲ್ಲೆಯಲ್ಲಿ ಭಾರಿ ಗಾಳಿಗೆ ಸುಂಟಿಕೊಪ್ಪದ ಪನ್ಯ ಬಳಿ ಸಿಲ್ವರ್‌ ಮರ ಧರೆಗುರುಳಿತ್ತು. ಇದರಿಂದಾಗಿ ಸುಂಟಿಕೊಪ್ಪ ಮಾದಾಪುರ ಸೋಮವಾರಪೇಟೆ ರಸ್ತೆ ಬಂದ್ ಆಗಿತ್ತು. ಮಡಿಕೇರಿ ಹೊರವಲಯದ ಕರ್ಣಗೇರಿಯಲ್ಲಿ ಮರ ಬಿದ್ದು ಮನೆ ಸಂಪೂರ್ಣ ಹಾನಿಯಾಗಿತ್ತು. ಗ್ರಾಮದ ಹೇಮಾವತಿ ಎಂಬುವರಿಗೆ ಸೇರಿದ ವಾಸದ ಮನೆ ಜಖಂಗೊಂಡಿತ್ತು.

    ನೀರಿನಲ್ಲಿ ಸಿಲುಕಿದ ಕಾರು

    ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ತಡರಾತ್ರಿ ನೀರಿನಲ್ಲಿ ಕಾರುವೊಂದು ಸಿಲುಕಿತ್ತು. ನೀರಿನಲ್ಲಿ ಸಿಲುಕಿ ಕಾರು ಚಾಲಕ ಪರದಾಡಿದರು. ಬೇಲೂರು ತಾಲೂಕಿನ ಬಿರಡಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಕೂಡಲೇ ಸ್ಥಳೀಯರು ಸ್ಥಳಕ್ಕೆ ಬಂದು ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಮತ್ತೊಂದು ವಾಹನ ತಂದು ನೀರಿನಲ್ಲಿ ಸಿಲುಕಿದ್ದ ಕಾರನ್ನು ಹೊರಗೆ ಎಳೆದು ತಂದರು. ಬಿರಡಹಳ್ಳಿ ಬಳಿಯ ಸೇತುವೆ ಮುಳುಗಡೆಯಾಗಿ ಸುಮಾರು ಹದಿನೈದು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಸಕಲೇಶಪುರದ ತಾಲೂಕಿನ ಹಾನುಬಾಳು ಹೋಬಳಿಯಲ್ಲಿ ರಸ್ತೆ ಜಲಾವೃತಗೊಂಡು ಹಾನುಬಾಳು-ವೆಂಕಟಹಳ್ಳಿ-ರಾಗಿಗುಂಡಿ-ಅಗ್ನಿ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಇತ್ತ ಸಕಲೇಶಪುರ ಹೊಳೆಮಲ್ಲೇಶ್ವರ ದೇಗುಲ ಜಲಾವೃತಗೊಂಡಿತ್ತು. ಗರ್ಭಗುಡಿಯೊಳಗೆ ಅಪಾರ ಪ್ರಮಾಣದ ನೀರು ನುಗ್ಗಿತ್ತು.

    ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

    Continue Reading

    ಪ್ರಮುಖ ಸುದ್ದಿ

    DK Shivakumar: ನಮ್ಮ ಸರ್ವನಾಶವೇ ಕುಮಾರಸ್ವಾಮಿ ಅವರ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್

    DK Shivakumar: 2028ರ ಒಳಗೆ ನಾವು ಬಂದು ಮತ್ತೆ ರಾಮನಗರ ಎಂದು ಮರುನಾಮಕರಣ ಮಾಡುತ್ತೇವೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅದು ಅವರ ಹಣೆಯಲ್ಲಿ ಬರೆದಿಲ್ಲ. 2028ರಲ್ಲೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಬೇಕಿದ್ದರೆ ಈ ಮಾತನ್ನು ಬರೆದಿಟ್ಟುಕೊಳ್ಳಿ” ಎಂದು ಸವಾಲೆಸೆದರು.

    VISTARANEWS.COM


    on

    dk shivakumar hd kumarswamy
    Koo

    ಬೆಂಗಳೂರು: ನಮ್ಮನ್ನು ಸರ್ವನಾಶ ಮಾಡುವುದೇ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರ ನಿತ್ಯದ ಆಲೋಚನೆಯಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ವಿವಿಧ ಯೋಜನೆಗಳ ಬಗ್ಗೆ ಬೆಂಗಳೂರಿನ ಸರ್ವ ಪಕ್ಷ ಶಾಸಕರುಗಳು ಹಾಗೂ ಜನಪ್ರತಿನಿಧಿಗಳ ಸಭೆ ವಿಧಾನಸೌಧದ (Vidhana Soudha) ಸಮ್ಮೇಳನ ಸಭಾಂಗಣದಲ್ಲಿ ನಡೆದ ಬಳಿಕ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದರು.

    ರಾಮನಗರ ಹೆಸರು ಬದಲಾವಣೆ ಮಾಡಲು ಹೊರಟಿರುವವರು ಸರ್ವನಾಶವಾಗುತ್ತಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಅವರು ಪ್ರತಿಕ್ರಿಯಿಸಿ, “ಕುಮಾರಸ್ವಾಮಿ ನಮ್ಮನ್ನು ಸರ್ವನಾಶ ಮಾಡಲು ಪ್ರತಿನಿತ್ಯ ರಾಜಕಾರಣ ಮಾಡುತ್ತಿದ್ದಾರೆ. ಅವರ ನಡೆ, ಹೆಜ್ಜೆ, ಭಾವನೆ, ಚಿಂತನೆ, ಅವರ ಆಚಾರ, ವಿಚಾರ ಎಲ್ಲವೂ ನಮಗೆ ಗೊತ್ತಿದೆ. ನಾವು ರಾಮನಗರದ ಹೆಸರನ್ನು ಬದಲಿಸುತ್ತಿಲ್ಲ. ಇದು ನಮ್ಮ ಜಿಲ್ಲೆ. ಇವರು ಬಂದು ಅಕ್ರಮವಾಗಿ ಜಿಲ್ಲೆಯ ಗುರುತನ್ನು ಬದಲಿಸಿದ್ದಾರೆ. ರಾಜಕೀಯವಾಗಿ ಇದಕ್ಕೆ ಅವಕಾಶವಿದೆ ಮಾಡಿದ್ದಾರೆ. ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ ತಾಲೂಕಿನ ಜನ ನಮ್ಮವರು, ಬೆಂಗಳೂರಿನವರು” ಎಂದು ವಾಗ್ದಾಳಿ ನಡೆಸಿದರು.

    ನಾನು ಬೆಂಗಳೂರು ಜಿಲ್ಲಾ ಪಂಚಾಯ್ತಿ ಸದಸ್ಯನಾಗಿದ್ದೆ. ಕುಮಾರಸ್ವಾಮಿ ಹಾಗೂ ದೇವೇಗೌಡರು ಹಾಸನದಿಂದ ಬಂದಿದ್ದಾರೆ. ದೇವೇಗೌಡರು, ಕುಮಾರಸ್ವಾಮಿ ಇಲ್ಲಿಗೆ ಬಂದಾಗ ಇದು ಬೆಂಗಳೂರಾಗಿಯೇ ಇತ್ತು. ಅವರು ಪ್ರಧಾನಮಂತ್ರಿ, ಮುಖ್ಯಮಂತ್ರಿಯಾದಾಗಲೂ ಇದು ಬೆಂಗಳೂರಾಗಿಯೇ ಇತ್ತು. ಇದು ನಮ್ಮ ಜಿಲ್ಲೆ. ನಾವು ಭಾರತೀಯರು ಎಂದು ಹೇಗೆ ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೋ, ಅದೇ ರೀತಿ ನಾವು ಬೆಂಗಳೂರಿನವರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬಂದಾಗ ಜಿಲ್ಲೆಯನ್ನು ಒಡೆದು ಬೇರೆ ಹೆಸರು ಕೊಟ್ಟರು ಎಂದು ತಿಳಿಸಿದರು.

    ಕೆಂಗಲ್ ಹನುಮಂತಯ್ಯ ಅವರು ವಿಧಾನಸೌಧ ಕಟ್ಟಿದ್ದು ಬೆಂಗಳೂರಿನಲ್ಲಿ, ರಾಮಕೃಷ್ಣ ಹೆಗಡೆ ಅವರು ಬಂದು ನಿಂತಿದ್ದು ಬೆಂಗಳೂರಿನಲ್ಲಿ. ಈ ಬೆಂಗಳೂರು ನಾಲ್ಕೈದು ಮುಖ್ಯಮಂತ್ರಿಗಳನ್ನು ಮಾಡಿದೆ. ನಮ್ಮ ಜಿಲ್ಲೆಯನ್ನು ಪ್ರತ್ಯೇಕ ಜಿಲ್ಲೆಯಾಗಿ ಮಾಡುವಾಗ ಬೆಂಗಳೂರು ಹೆಸರು ಉಳಿಸಿಕೊಳ್ಳುವಂತೆ ನಾವು ಸಲಹೆ ನೀಡಿದ್ದೆವು. ಬೆಂಗಳೂರು ಇಂದು ವಿಶ್ವಮಟ್ಟದಲ್ಲಿ ಹೆಸರು ಮಾಡಿದೆ. ನಮ್ಮ ಪೂರ್ವಜರು ಕೊಟ್ಟಿರುವ ಈ ಹೆಸರನ್ನು ನಾವು ಯಾಕೆ ಕಳೆದುಕೊಳ್ಳಬೇಕು ಎಂದು ಪ್ರಶ್ನಿಸಿದರು.

    ಈ ಜಿಲ್ಲೆಯ ಆಡಳಿತ ಕೇಂದ್ರ ರಾಮನಗರದಲ್ಲೇ ಇರುತ್ತದೆ. ಈ ಜಿಲ್ಲೆಯ ಜನಕ್ಕೆ ಹೊಸ ದಿಕ್ಕನ್ನು ನೀಡಬೇಕು, ಹೊಸ ಆಲೋಚನೆ, ಅಭಿವೃದ್ಧಿ ನೀಡಬೇಕು, ಮುಂದಿನ ಪೀಳಿಗೆ ದೃಷ್ಟಿಯಿಂದ ನಾವು ಆಲೋಚನೆ ಮಾಡಿ ಈ ತೀರ್ಮಾನ ಮಾಡಿದ್ದೇವೆ. ನಮ್ಮ ಈ ತೀರ್ಮಾನಕ್ಕೆ ಪಕ್ಷಾತೀತವಾಗಿ ಜನರು ಸಂತೋಷವಾಗಿದ್ದಾರೆ ಎಂದು ತಿಳಿಸಿದರು.

    ಕುಮಾರಸ್ವಾಮಿ ಹಣೆಯಲ್ಲಿ ಬರೆದಿಲ್ಲ

    2028ರ ಒಳಗೆ ನಾವು ಬಂದು ಮತ್ತೆ ರಾಮನಗರ ಎಂದು ಮರುನಾಮಕರಣ ಮಾಡುತ್ತೇವೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅದು ಅವರ ಹಣೆಯಲ್ಲಿ ಬರೆದಿಲ್ಲ. 2028ರಲ್ಲೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಬೇಕಿದ್ದರೆ ಈ ಮಾತನ್ನು ಬರೆದಿಟ್ಟುಕೊಳ್ಳಿ” ಎಂದು ಸವಾಲೆಸೆದರು.

    ಬೃಂದಾವನ ಮೇಲ್ದರ್ಜೆಗೆ ಏರಿಕೆ

    ಕೆಆರ್‌ಎಸ್ ಬೃಂದಾವನ ಉದ್ಯಾನವನಕ್ಕೆ ಹೊಸ ರೂಪ ನೀಡಲು ಮುಂದಾಗಿರುವ ಯೋಜನೆಯಿಂದ ಸರ್ಕಾರದ ಹಣ ವ್ಯರ್ಥವಾಗಲಿದೆ ಎಂಬ ವಿಪಕ್ಷ ಟೀಕೆಯ ಬಗ್ಗೆ ಅವರು ಪ್ರತಿಕ್ರಿಯಿಸಿದರು. ಅವರ ಆರೋಪ ಬೋಗಸ್ ಆಗಿದೆ. ಇದು ಸಿದ್ದರಾಮಯ್ಯ ಅವರ ಈ ಹಿಂದಿನ ಸರ್ಕಾರದಲ್ಲಿ ಪ್ರಸ್ತಾವನೆಯಾದ ಯೋಜನೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದಾಗ, ನಾನು ನೀರಾವರಿ ಸಚಿವನಾಗಿದ್ದಾಗ ಈ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿತ್ತು. ಈಗ ಬೃಂದಾವನ ಉದ್ಯಾನವನವನ್ನು ವಿಶ್ವದರ್ಜೆ ಮಟ್ಟಕ್ಕೆ ಹೆಚ್ಚಿಸಲು ಮುಂದಾಗಿದ್ದೇವೆ. ಖಾಸಗಿ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಈ ಯೋಜನೆ ಕೈಗೊಳ್ಳಲಾಗಿದೆ. ಇದರಿಂದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ಸಿಗಲಿದೆ. ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಮಾಡುತ್ತಿದ್ದು, ಪ್ರವಾಸೋದ್ಯಮ ಉದ್ದೇಶದಿಂದ ಈ ಯೋಜನೆಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.

    ಗ್ರೇಟರ್ ಬೆಂಗಳೂರು

    ಗ್ರೇಟರ್ ಬೆಂಗಳೂರು ವಿಧೇಯಕದ ಬಗ್ಗೆ, ಎಲ್ಲಾ ಪಕ್ಷದ ಶಾಸಕರು ಈ ವಿಚಾರವಾಗಿ ವಿಸ್ತೃತ ಚರ್ಚೆಯಾಗಬೇಕು ಎಂದು ತಿಳಿಸಿದರು. ಇದಕ್ಕೆ ನಾನು ಮುಕ್ತವಾಗಿದ್ದೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರ ಅಭಿಪ್ರಾಯವನ್ನು ಕೇಳಬೇಕು. ಇದರಲ್ಲಿ ಯಾವುದೇ ತಪ್ಪು ಆಗಬಾರದು. ಸಂವಿಧಾನದ 73 ಹಾಗೂ 74ನೇ ತಿದ್ದುಪಡಿ ಗಮನದಲ್ಲಿಟ್ಟುಕೊಂಡು ಇದನ್ನು ಮಾಡಬೇಕು. ಬೆಂಗಳೂರಿಗೆ ಪರಿಣಾಮಕಾರಿ ಆಡಳಿತ ನೀಡಬೇಕು. ಇದಕ್ಕೆ ಸಂಬಂಧಿಸಿದಂತೆ ಇಂದು ಎಲ್ಲಾ ಪಕ್ಷಗಳ ಶಾಸಕರ ಸಭೆ ಕರೆಯಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸದನ ಸಮಿತಿಯನ್ನು ಸಧ್ಯದಲ್ಲೇ ರಚಿಸಲಾಗುವುದು. ವಿರೋಧ ಪಕ್ಷಗಳ ಸಲಹೆ, ಅಭಿಪ್ರಾಯಗಳನ್ನು ನಾವು ಸ್ವೀಕರಿಸುತ್ತೇವೆ ಎಂದು ತಿಳಿಸಿದರು.

    ಇದನ್ನೂ ಓದಿ: DK Shivakumar: `ಲೋಕಾಯುಕ್ತಕ್ಕೆ ಕೊಟ್ಟ ಮೇಲೆ ಸಿಬಿಐಗೇನು ಕೆಲಸ?’ ಅಕ್ರಮ ಆಸ್ತಿ ಕೇಸ್‌ ಬಗ್ಗೆ ಡಿಕೆ ಶಿವಕುಮಾರ್‌ ಪ್ರಶ್ನೆ

    Continue Reading

    ಪ್ರಮುಖ ಸುದ್ದಿ

    Karnataka High Court: ʼಚಿಲ್ಲರೆ ಅಂಗಡಿಯವರಲ್ಲೂ ಯುಪಿಐ ಇದೆ, ನಿಮ್ಮಲ್ಲೇಕಿಲ್ಲ?ʼ ಬೆಸ್ಕಾಂಗೆ ಹೈಕೋರ್ಟ್‌ ತರಾಟೆ

    Karnataka High Court: ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಅಥವಾ ಆನ್‌ಲೈನ್ ಪಾವತಿಯ (online payment) ಸೌಲಭ್ಯವನ್ನು ಗ್ರಾಹಕರಿಗೆ ಏಕೆ ಒದಗಿಸಿಲ್ಲ ಎಂಬ ಬಗ್ಗೆ ಆಗಸ್ಟ್ 9ರೊಳಗೆ ಅಫಿಡವಿಟ್ ಸಲ್ಲಿಸುವಂತೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ನ್ಯಾಯಮೂರ್ತಿ ಎನ್.ಎಸ್ ಸಂಜಯ್ ಗೌಡ ಅವರಿದ್ದ ಏಕಸದಸ್ಯ ಪೀಠ ಈ ನಿರ್ದೇಶನ ಜಾರಿ ಮಾಡಿದೆ.

    VISTARANEWS.COM


    on

    karnataka high court
    Koo

    ಬೆಂಗಳೂರು: ʼಇಡೀ ಜಗತ್ತು ಯುಪಿಐ (UPI) ಮೂಲಕ ಪಾವತಿಗಳನ್ನು ಸ್ವೀಕರಿಸುತ್ತಿದೆ. ದಿನಸಿ ಅಂಗಡಿಯವರಲ್ಲೂ ಅದು ಇದೆ. ಆದರೆ ನಿಮ್ಮಲ್ಲಿ ಇಲ್ಲ ಎಂಬುದು ವಿಚಿತ್ರವಾದ ಸಂಗತಿʼ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ- BESCOM) ಅನ್ನು ಕರ್ನಾಟಕ ಹೈಕೋರ್ಟ್ (Karnataka High Court) ಶುಕ್ರವಾರ ತರಾಟೆಗೆ ತೆಗೆದುಕೊಂಡಿದೆ.

    ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಅಥವಾ ಆನ್‌ಲೈನ್ ಪಾವತಿಯ (online payment) ಸೌಲಭ್ಯವನ್ನು ಗ್ರಾಹಕರಿಗೆ ಏಕೆ ಒದಗಿಸಿಲ್ಲ ಎಂಬ ಬಗ್ಗೆ ಆಗಸ್ಟ್ 9ರೊಳಗೆ ಅಫಿಡವಿಟ್ ಸಲ್ಲಿಸುವಂತೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ನ್ಯಾಯಮೂರ್ತಿ ಎನ್.ಎಸ್ ಸಂಜಯ್ ಗೌಡ ಅವರಿದ್ದ ಏಕಸದಸ್ಯ ಪೀಠ ಈ ನಿರ್ದೇಶನ ಜಾರಿ ಮಾಡಿದೆ.

    2003ರ ವಿದ್ಯುತ್ ಕಾಯ್ದೆಯ ಸೆಕ್ಷನ್ 47(5)ರ ಪ್ರಕಾರ ಪೂರ್ವಪಾವತಿ ಮೀಟರ್ ಒದಗಿಸುವಂತೆ ಮತ್ತು ಯುಪಿಐ ಮೋಡ್‌ನಲ್ಲಿ ಪಾವತಿಯನ್ನು ಸ್ವೀಕರಿಸಲು ಬೆಸ್ಕಾಂಗೆ ನಿರ್ದೇಶನ ನೀಡಬೇಕೆಂದು ಕೋರಿ ಹಿರಿಯ ನಾಗರಿಕರಾದ ಸೀತಾಲಕ್ಷ್ಮಿ ಎಂಬವರು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯ ವಿಚಾರಣೆಯ ವೇಳೆ ಈ ನಿರ್ದೇಶನ ನೀಡಲಾಗಿದೆ.

    ಇಡೀ ಜಗತ್ತು ಯುಪಿಐ ಮೂಲಕ ಪಾವತಿಗಳನ್ನು ಸ್ವೀಕರಿಸುತ್ತಿರುವ ಈ ಯುಗದಲ್ಲಿ ಬೆಸ್ಕಾಂ ಯುಪಿಐ ಮೂಲಕ ಹಣವನ್ನು ಸ್ವೀಕರಿಸಲು ನಿರಾಕರಿಸುತ್ತಿರುವುದು ವಿಚಿತ್ರವಾಗಿದೆ. ಯಾರಾದರೂ ನಿಮಗೆ ಹಣವನ್ನು ಪಾವತಿಸಲು ಬಯಸಿದರೆ, ಅದು ಈಗ ಸ್ವೀಕರಿಸಲ್ಪಟ್ಟ ವಿಧಾನವಾಗಿದ್ದರೂ, ನೀವು ಅದನ್ನು ಅಳವಡಿಸಿಕೊಳ್ಳಬೇಕಿದ್ದರೆ ಯಾರಾದರೂ ನ್ಯಾಯಾಲಯಕ್ಕೆ ಬಂದು ರಿಟ್ ಅರ್ಜಿ ಸಲ್ಲಿಸಬೇಕಾಗುತ್ತದೆ. ಯಾರೋ ನಿಮಗೆ ಹಣವನ್ನು ನೀಡಲು ಬಯಸುತ್ತಾರೆ. ಎಲ್ಲರೂ ಡಿಜಿಟಲ್‌ (Digital) ಆಗಿರಿ ಎಂದು ಸರಕಾರ ಘೋಷಿಸುತ್ತದೆ. ಆದರೆ ನೀವು ಕರೆನ್ಸಿ ನೋಟುಗಳನ್ನು ಸಂಗ್ರಹಿಸುವ ಕಾಲಕ್ಕೆ ಹಿಂತಿರುಗಲು ಬಯಸುತ್ತಿದ್ದೀರಿ ಎಂದು ಹೈಕೋರ್ಟ್‌ ಪೀಠ ಬೆಸ್ಕಾಂನ ಕಿವಿ ಹಿಂಡಿತು.

    ಪ್ರತಿಯೊಬ್ಬ ದಿನಸಿ ವ್ಯಾಪಾರಿಯೂ ಈಗ ಅವನ ಮುಂದೆ ಯುಪಿಐ ಸ್ಕ್ಯಾನರ್ ಅನ್ನು ಹೊಂದಿದ್ದಾನೆ. ಆದರೆ ನೀವು ಇನ್ನೂ ಅರ್ಜಿದಾರರಿಗೆ ಕ್ಯುಆರ್ ಕೋಡ್ (‌QR Code) ನೀಡಲು ಮೀನಮೇಷ ಎಣಿಸುತ್ತಿದ್ದೀರಿ. ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ನ್ಯಾಯಾಲಯವೇ ಅತ್ಯಂತ ನಿಧಾನವಾಗಿತ್ತು; ನೀವು ನಮಗಿಂತಲೂ ಹಿಂದುಳಿದಿದ್ದೀರಿ ಎಂದು ಕೂಡ ಪೀಠ ಹೇಳಿದೆ.

    ವಿಚಾರಣೆಯ ವೇಳೆ ಬೆಸ್ಕಾಂ ಪರ ವಕೀಲರು, ಬೆಸ್ಕಾಂ ಕೌಂಟರ್‌ಗಳಲ್ಲಿ ಯುಪಿಐ ಪಾವತಿ ಮಾಡಲು ಅವಕಾಶವಿಲ್ಲ. ನಗದು ಪಾವತಿಯನ್ನು ಮಾತ್ರ ಸ್ವೀಕರಿಸಲಾಗುತ್ತದೆ ಎಂದು ತಿಳಿಸಿದರು. ಆದರೆ ಗ್ರಾಹಕರು ಬೆಸ್ಕಾಂ ಅಪ್ಲಿಕೇಶನ್ ಮೂಲಕ ಆನ್‌ಲೈನ್/ಯುಪಿಐ ಪಾವತಿಗಳನ್ನು ಮಾಡಬಹುದು. ಹಿರಿಯ ನಾಗರಿಕರು ಮತ್ತು ವಯಸ್ಸಾದವರು ಕೌಂಟರ್‌ಗೆ ಬರುವ ಅಗತ್ಯವಿಲ್ಲದೆ ಮನೆಯಲ್ಲಿ ಕುಳಿತು ಅಪ್ಲಿಕೇಶನ್‌ನಲ್ಲಿ ಇದನ್ನು ಮಾಡಬಹುದು ಎಂದು ಹೇಳಿದರು.

    ಅಕ್ಟೋಬರ್ 25, 2023ರಂದು, ಅರ್ಜಿದಾರರು ಮನೆಬಾಡಿಗೆ ಉದ್ದೇಶಗಳಿಂದ ಉಂಟಾಗುವ ಭಾರೀ ಶುಲ್ಕವನ್ನು ಕಟ್ಟಲು ಬೆಸ್ಕಾಂ ಹೊಸಕೋಟೆ ಶಾಖೆಯ ಕ್ಯಾಶ್ ಕೌಂಟರ್‌ಗೆ ಭೇಟಿ ನೀಡಿದ್ದರು. ಯುಪಿಐ ಮೂಲಕ ಪಾವತಿ ಲಭ್ಯವಿಲ್ಲದ ಕಾರಣ ಕರ್ತವ್ಯದಲ್ಲಿದ್ದ ಅಧಿಕಾರಿಗಳು ಅರ್ಜಿದಾರರಿಗೆ ಡಿಡಿ ಮೂಲಕ ಪಾವತಿಸಲು ಸೂಚಿಸಿದ್ದರು.

    ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಶ್ರೀಧರ್ ಪ್ರಭು ಅವರು, ವಯಸ್ಸಾದ ಮಹಿಳೆ ದೈನಂದಿನ ಕೆಲಸಗಳನ್ನು ನಿರ್ವಹಿಸುವಲ್ಲಿ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಡಿಮ್ಯಾಂಡ್ ಡ್ರಾಫ್ಟ್ (ಡಿಡಿ) ಪಡೆಯಲು ಸರದಿಯಲ್ಲಿ ನಿಂತು ಕಷ್ಟಪಟ್ಟಿದ್ದಾರೆ. ನಂತರ ಪಾವತಿ ಮಾಡಿದ್ದಾರೆ. ಹೀಗಾಗಿ ಅವರು ತಮ್ಮ ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ ಐಡೆಂಟಿಟಿ (ಯುಪಿಐಡಿ) ಅನ್ನು ಒದಗಿಸುವ ಮೂಲಕ ಪ್ರಕ್ರಿಯೆಯನ್ನು ಸುಲಭಗೊಳಿಸುವಂತೆ ಮನವಿ ಮಾಡಿದ್ದಾರೆ ಎಂದರು.

    ಇದನ್ನೂ ಓದಿ: ವಿದ್ಯುತ್ ಬಿಲ್‌ನಲ್ಲಿರುವ ಹೆಚ್ಚುವರಿ ಭದ್ರತಾ ಠೇವಣಿ ಕುರಿತು ಗೊಂದಲ; ಗ್ರಾಹಕರ ಪ್ರಶ್ನೆಗಳಿಗೆ ಇಲ್ಲಿದೆ ಬೆಸ್ಕಾಂ ಉತ್ತರ

    Continue Reading
    Advertisement
    DK Shivakumar
    ಕರ್ನಾಟಕ3 mins ago

    Brand Bengaluru: ‘ಬ್ರ್ಯಾಂಡ್‌ ಬೆಂಗಳೂರು’ ನಿರ್ಮಾಣಕ್ಕೆ ಡಿಕೆಶಿ ಮಾಸ್ಟರ್‌ಪ್ಲಾನ್;‌ ಇಲ್ಲಿದೆ ಸಭೆಯ ವಿವರ

    Drone Prathap Eye surgery for an old woman with her own money
    ಬಿಗ್ ಬಾಸ್9 mins ago

    Drone Prathap: ನುಡಿದಂತೆ ನಡೆದ ‘ಬಿಗ್ ಬಾಸ್’ ಡ್ರೋನ್ ಪ್ರತಾಪ್; ಸ್ವಂತ ಹಣದಿಂದ ವೃದ್ಧೆಗೆ ಕಣ್ಣು ಆಪರೇಷನ್ !

    ದೇಶ10 mins ago

    Chandipura Virus: ಗುಜರಾತ್‌ನಲ್ಲಿ ತೀವ್ರವಾದ ಎನ್ಸೆಫಾಲಿಟಿಸ್ ಸಿಂಡ್ರೋಮ್‌ಗೆ 48 ಬಲಿ; 39 ಮಂದಿಗೆ ಚಾಂದಿಪುರ ವೈರಸ್ ದೃಢ

    Ricky Ponting
    ಕ್ರೀಡೆ13 mins ago

    Ricky Ponting : ಡೆಲ್ಲಿ ಕ್ಯಾಪಿಟಲ್ಸ್​ ಕೋಚಿಂಗ್ ಹುದ್ದೆಯಿಂದ ಪಾಂಟಿಂಗ್ ನಿರ್ಗಮಿಸಿದ್ದು ಯಾಕೆ? ಕಾರಣ ಕೊಟ್ಟ ಮಾಲೀಕ ಪಾರ್ಥ್​ ಜಿಂದಾಲ್​

    karnataka Rain
    ಮಳೆ13 mins ago

    Karnataka Rain : ಭಾರಿ ಗಾಳಿ-ಮಳೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ; ಸವಾರ ಸ್ಥಳದಲ್ಲೆ ಸಾವು

    PARIS 2024 OLYMPICS
    ಕ್ರೀಡೆ32 mins ago

    PARIS 2024 OLYMPICS: ಶೂಟಿಂಗ್​ನಲ್ಲಿ ಭಾರತಕ್ಕೆ ಮತ್ತೊಂದು ಸೋಲು

    Road Accident
    ದೇಶ38 mins ago

    Road Accident: ಕಣಿವೆಗೆ ಉರುಳಿದ ಕಾರು; ಐವರು ಮಕ್ಕಳು ಸೇರಿ 8 ಮಂದಿ ಸಾವು

    Ashwini Puneeth Rajkumar launched Appu Cup season 2
    ಕ್ರಿಕೆಟ್43 mins ago

    Ashwini Puneeth Rajkumar: ಅಪ್ಪು ಕಪ್‌ ಸೀಸನ್‌ 2ಗೆ ಚಾಲನೆ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

    Money Guide
    ಮನಿ-ಗೈಡ್1 hour ago

    Money Guide: ಐಟಿಆರ್ ಇನ್ನೂ ಸಲ್ಲಿಸಿಲ್ಲವೇ? ಕೊನೆಯ ಕ್ಷಣದ ಗೊಂದಲ ತಪ್ಪಿಸಲು ಈ ಟಿಪ್ಸ್‌ ಫಾಲೋ ಮಾಡಿ

    Womens Asia Cup Final
    ಕ್ರೀಡೆ1 hour ago

    Womens Asia Cup Final: 8ನೇ ಪ್ರಶಸ್ತಿ ನಿರೀಕ್ಷೆಯಲ್ಲಿ ಭಾರತ; ನಾಳೆ ಫೈನಲ್​

    Sharmitha Gowda in bikini
    ಕಿರುತೆರೆ10 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ10 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ9 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ8 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ10 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ7 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ8 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ11 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    ramanagara news
    ರಾಮನಗರ3 hours ago

    Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

    karnataka rain
    ಮಳೆ3 hours ago

    Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

    Ankola landslide
    ಉತ್ತರ ಕನ್ನಡ22 hours ago

    Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

    karnataka rain
    ಮಳೆ23 hours ago

    Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

    Karnataka Rain
    ಮಳೆ24 hours ago

    Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

    Karnataka rain
    ಮಳೆ1 day ago

    Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

    karnataka Rain
    ಮಳೆ2 days ago

    Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

    Actor Darshan
    ಸ್ಯಾಂಡಲ್ ವುಡ್2 days ago

    Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

    Actor Darshan
    ಸಿನಿಮಾ2 days ago

    Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

    Actor Darshan
    ಸಿನಿಮಾ2 days ago

    Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

    ಟ್ರೆಂಡಿಂಗ್‌