Lalbagh Flower Show: ಆ.4 ರಿಂದ ಲಾಲ್‌ಬಾಗ್‌ ಫ್ಲವರ್ ಶೋ; ಸಂಚಾರ ಮಾರ್ಗ, ಪಾರ್ಕಿಂಗ್‌ನಲ್ಲಿ ಬದಲಾವಣೆ - Vistara News

ಕರ್ನಾಟಕ

Lalbagh Flower Show: ಆ.4 ರಿಂದ ಲಾಲ್‌ಬಾಗ್‌ ಫ್ಲವರ್ ಶೋ; ಸಂಚಾರ ಮಾರ್ಗ, ಪಾರ್ಕಿಂಗ್‌ನಲ್ಲಿ ಬದಲಾವಣೆ

lalbagh Flower Show: ಆ.4ರಂದು ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ಲಾಲ್‌ಬಾಗ್‌ 214ನೇ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ.

VISTARANEWS.COM


on

lalbagh flower show
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಗರದ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಆಗಸ್ಟ್ 4ರಂದು ಫಲಪುಷ್ಪ ಪ್ರದರ್ಶನ-2023 (Lalbagh Flower Show) ಆರಂಭವಾಗಲಿದೆ. ಆಗಸ್ಟ್ 15ರವರೆಗೆ‌ 10 ದಿನಗಳ ಕಾಲ ಫ್ಲವರ್ ಶೋ ಇರಲಿದ್ದು, ಹೂವಿನ ಲೋಕವನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಜನರು ಬರಲಿದ್ದಾರೆ. ಇದರಿಂದ ಲಾಲ್‌ಬಾಗ್‌ ಮಾರ್ಗದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಲಿದೆ. ಹೀಗಾಗಿ ಸುಗಮ ಸಂಚಾರಕ್ಕೆ ಅನುವಾಗಲು ಸಂಚಾರ ಮಾರ್ಗ ಹಾಗೂ ವಾಹನ ನಿಲುಗಡೆಯಲ್ಲಿ ಸಂಚಾರ ಪೊಲೀಸ್‌ ವಿಭಾಗ ಕೆಲ ಬದಲಾವಣೆಗಳನ್ನು ಮಾಡಿದೆ.

ಫ್ಲವರ್‌ ಶೋಗೆ ಬರು ಸಾರ್ವಜನಿಕರು ಸಾಧ್ಯವಾದಷ್ಟು ಸಮೂಹ ಸಾರಿಗೆ ವ್ಯವಸ್ಥೆ ಬಳಸಲು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ. ಡಾ.ಮರೀಗೌಡ ರಸ್ತೆ, ಲಾಲ್‌ ಬಾಗ್ ರಸ್ತೆ, ಕೆ.ಎಚ್. ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಸಾಧ್ಯವಾದಷ್ಟು ಸಮೂಹ ಸಾರಿಗೆಗಳಾದ ಬಿಎಂಟಿಸಿ ಬಸ್‌, ಮೆಟ್ರೋ ಹಾಗೂ ಕ್ಯಾಬ್‌ಗಳನ್ನು ಬಳಸಲು ಪೊಲೀಸರು ಮನವಿ ಮಾಡಿದ್ದಾರೆ.

ಇದನ್ನೂ ಓದಿ | Lalbagh Tour : ಸಸ್ಯಕಾಶಿ ಲಾಲ್‌ಬಾಗ್‌ನೊಳಗೆ ಏನೇನಿದೆ? ಮರೆಯದೆ ನೋಡಿ…

ವಾಹನಗಳ ನಿಲುಗಡೆ ನಿಷೇಧಿಸಿರುವ ರಸ್ತೆಗಳು

  1. ಡಾ. ಮರಿಗೌಡ ರಸ್ತೆ, ಲಾಲ್ ಬಾಗ್ ಮುಖ್ಯ ದ್ವಾರದಿಂದ ನಿಮ್ಹಾನ್ಸ್‌ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ
  2. ಕೆ.ಎಚ್.ರಸ್ತೆ, ಕೆ.ಎಚ್.ವೃತ್ತದಿಂದ ಶಾಂತಿನಗರ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ
  3. ಲಾಲ್‌ ಬಾಗ್ ರಸ್ತೆ, ಸುಬ್ಬಯ್ಯ ವೃತ್ತದಿಂದ ಲಾಲ್‌ ಬಾಗ್ ಮುಖ್ಯದ್ವಾರದವರೆಗೆ
  4. ಸಿದ್ದಯ್ಯ ರಸ್ತೆ, ಊರ್ವಶಿ ಥಿಯೇಟರ್ ಜಂಕ್ಷನ್‌ನಿಂದ ವಿಲ್ಸನ್ ಗಾರ್ಡನ್ 12ನೇ ಕ್ರಾಸ್‌ವರೆಗೆ
  5. ಬಿ.ಎಂ.ಟಿ.ಸಿ ರಸ್ತೆಯಲ್ಲಿ, ರಸ್ತೆಯ ಎರಡೂ ಬದಿಗಳಲ್ಲಿ
  6. ಲಾಲ್ ಬಾಗ್ ವೆಸ್ಟ್ ಗೇಟ್‌ನಿಂದ ಆರ್.ವಿ. ಟೀಚರ್ಸ್ ಕಾಲೇಜಿನವರೆಗೆ
  7. ಆರ್ ವಿ ಟೀಚರ್ಸ್‌ ಕಾಲೇಜಿನಿಂದ ಆಶೋಕ ಪಿಲ್ಲರ್‌ವರೆಗೆ
  8. ಅಶೋಕ ಪಿಲ್ಲರ್‌ನಿಂದ ಸಿದ್ದಾಪುರ ಜಂಕ್ಷನ್‌ವರೆಗೆ

ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಿರುವ ಸ್ಥಳಗಳು

  1. ಡಾ.ಮರಿಗೌಡ ರಸ್ತೆ, ಆಲ್ ಅಮೀನ್ ಕಾಲೇಜ್ ಆವರಣದಲ್ಲಿ ದ್ವಿಚಕ್ರ ವಾಹನ ನಿಲುಗಡೆ
  2. ಕೆ.ಎಚ್.ರಸ್ತೆ, ಶಾಂತಿನಗರ ಬಿ.ಎಂ.ಟಿ.ಸಿ. ಬಸ್ ನಿಲ್ದಾಣದ ಮೇಲೆ ನಾಲ್ಕು ಚಕ್ರದ ವಾಹನ ನಿಲುಗಡೆ
  3. ಡಾ.ಮರಿಗೌಡ ರಸ್ತೆ- ಹಾಪ್ ಕಾಮ್ಸ್‌ನಲ್ಲಿ ದ್ವಿ ಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳ ನಿಲುಗಡೆ
  4. ಜೆ.ಸಿ. ರಸ್ತೆ ಕಾರ್ಪೊರೇಷನ್ ಪಾರ್ಕಿಂಗ್ ಸ್ಥಳದಲ್ಲಿ ದ್ವಿ ಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳ ನಿಲುಗಡೆ

10-12 ಲಕ್ಷ ಜನರು ಬರುವ ಸಾಧ್ಯತೆ

    ಸಿಲಿಕಾನ್ ಸಿಟಿಯ ಚಂದದ ತಾಣ ಲಾಲ್‌ಬಾಗ್‌ನಲ್ಲಿ ಶುಕ್ರವಾರ ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ 214ನೇ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದು, ಲಾಲ್‌ಬಾಗ್‌ನ ಗಾಜಿನಮನೆ ಮಧುವನಗಿತ್ತಿಯಂತೆ ಶೃಂಗಾರವಾಗಿದೆ. ಈ ಬಾರಿ ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯಗೆ ಗೌರವ ಅರ್ಪಣೆ ಮಾಡಲಾಗಿದೆ. ಬರೋಬ್ಬರಿ 2 ಕೋಟಿ ರೂ. ವೆಚ್ಚದಲ್ಲಿ 69 ಬಗೆಯ ಹೂಗಳು ಈ ಬಾರಿ ಫ್ಲವರ್ ಶೋ ಅಂದವನ್ನು ಹೆಚ್ಚಿಸಲಿವೆ. ಈ ವರ್ಷ 10 ರಿಂದ 12 ಲಕ್ಷದಷ್ಟು ಜನರು ಬರುವ ಸಾಧ್ಯತೆ ಇದ್ದು, ಫಲಪುಷ್ಪ ಪ್ರದರ್ಶನದಲ್ಲಿ ಹಲವು ಕಲೆಗಳ ಸಾರುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಒಟ್ಟು 10 ದಿನಗಳ ಕಾಲ ಫ್ಲವರ್ ಶೋ ಇರಲಿದೆ.

    ಹೂವಿನಿಂದ ಅರಳಿರುವ ವಿಧಾನಸೌಧದ ಮಾದರಿ ಈ ಬಾರಿಯ ಪ್ರಮುಖ ಆಕರ್ಷಣೆಯಾಗಿದ್ದು, ಫ್ಲವರ್ ಶೋಗೆ ಅಂದಾಜು 13 ರಿಂದ 15 ಲಕ್ಷದಷ್ಟು ಹೂಗಳು ಬೇಕಾಗಿವೆ. ಸುಮಾರು 8 ಲಕ್ಷ ಹೂಗಳನ್ನು ರಾಜ್ಯದ ನಂದಿಗಿರಿಧಾಮ, ಕೆಮ್ಮಣ್ಣುಗುಂಡಿ ಗಿರಿಧಾಮ ಸೇರಿ ತಮಿಳುನಾಡು, ಆಂಧ್ರ ಪ್ರದೇಶ, ಊಟಿಯಿಂದ ಹೂಗಳನ್ನ ತರಿಸಿಕೊಳ್ಳಲಾಗಿದೆ. ಸದ್ಯ ಸುಮಾರು 60 ಕಲಾವಿದರು ವಿಧಾನಸೌಧದ ಭವ್ಯ ಕಲಾಕೃತಿ ನಿರ್ಮಿಸಿದ್ದು, ಶುಕ್ರವಾರದಿಂದ ಜನರ ವೀಕ್ಷಣೆಗೆ ಸಿಗಲಿದೆ.

    ಇದನ್ನೂ ಓದಿ | lalbagh flower show 2023 : ಆ.4ಕ್ಕೆ ಲಾಲ್‌ಬಾಗ್‌ ಫ್ಲವರ್‌ ಶೋ; ಹೂವಲ್ಲಿ ಅರಳುವ ಕೆಂಗಲ್ ಹನುಮಂತಯ್ಯ

    ಇನ್ನು ಫ್ಲವರ್ ಶೋಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶ ಇರಲಿದ್ದು, ದೊಡ್ಡವರಿಗೆ 70 ರೂ. ಹಾಗೂ ಮಕ್ಕಳಿಗೆ 30 ರೂಪಾಯಿ ಪ್ರವೇಶ ಶುಲ್ಕ ನಿಗದಿ ಮಾಡಲಾಗಿದೆ. ಸದ್ಯ ಹೂಗಳ ಲೋಕದ ಅನಾವರಣಕ್ಕೆ ಸಕಲ ಸಿದ್ಧತೆ ನಡೆದಿದ್ದು, ನಾಳೆ ನೋಡುಗರ ಕಣ್ಣಿಗೆ ಹಬ್ಬ ನೀಡಲಿದೆ.

    ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
    ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
    Continue Reading
    Click to comment

    Leave a Reply

    ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

    ಬೆಂಗಳೂರು

    Namma Metro : ಸಿಟಿ ಮಂದಿಗೆ ಮತ್ತೊಂದು ಶಾಕ್‌; ಶೀಘ್ರದಲ್ಲೆ ನಮ್ಮ ಮೆಟ್ರೋ ಟಿಕೆಟ್‌ ದರ ಏರಿಕೆಯ ಬರೆ!

    Namma Metro : ಸಿಲಿಕಾನ್‌ ಸಿಟಿ ಬೆಂಗಳೂರು ಮಂದಿಗೆ ಮತ್ತೊಂದು ಶಾಕ್‌ ಕಾದಿದೆ. ಶೀಘ್ರದಲ್ಲೆ ನಮ್ಮ ಮೆಟ್ರೋ ಟಿಕೆಟ್‌ ದರ ಏರಿಕೆಯಾಗುವ ಸಾಧ್ಯತೆ ಇದೆ.

    VISTARANEWS.COM


    on

    By

    Namma metro ticket prices will be hiked soon
    ಸಾಂದರ್ಭಿಕ ಚಿತ್ರ
    Koo

    ಬೆಂಗಳೂರು: ಈಗಾಗಲೇ ಬೆಲೆ ಏರಿಕೆಯಿಂದ ಕಂಗಲಾಗಿರುವ ಸಿಟಿ ಮಂದಿಗೆ ಮತ್ತೊಂದು ಬರೆ ಬೀಳಲಿದೆ. ಬೆಂಗಳೂರಿನಲ್ಲಿ ಶೀಘ್ರದಲ್ಲೇ ನಮ್ಮ ಮೆಟ್ರೋ‌ (Namma Metro) ಟಿಕೆಟ್ ದರ ಶೇ.15-20ರಷ್ಟು ಏರಿಕೆ ಆಗುವ ಸಾಧ್ಯತೆ ಇದೆ. 2017ರ ನಂತರ ಇದೀಗ ಮೆಟ್ರೋ ದರ ಏರಿಕೆಗೆ ತೀರ್ಮಾನ ಮಾಡಲಾಗಿದೆ.

    ಎಷ್ಟು ದರ ಏರಿಕೆ ಮಾಡಬೇಕೆಂದು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಕ್ಕೆ ಸಾರ್ವಜನಿಕರನೊಳಗೊಂಡ ಕಮಿಟಿ ರಚನೆ ಮಾಡಲಾಗಿದೆ. ಅಧಿಕೃತವಾಗಿ ಬಿಎಂಆರ್‌ಸಿಎಲ್ ಜಾಹೀರಾತು ನೀಡಿದೆ. ಮೆಟ್ರೋ ಟಿಕೆಟ್ ದರ ಏರಿಕೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದೆ.

    ಹಾಲಿ ನಮ್ಮ ಮೆಟ್ರೋದ ಟಿಕೆಟ್ ದರ ಕನಿಷ್ಠ ದರ 10 ರೂ. ಆಗಿದ್ದು, ಗರಿಷ್ಠ ದರ 60 ರೂ. ಆಗಿದೆ. ಈಗ 15 ರಿಂದ 20 ರಷ್ಟು ಟಿಕೆಟ್ ದರ ಏರಿಕೆ ಆಗಿದೆ. ಮುಂದಿನ ತಿಂಗಳಿಂದ ಹೊಸ ದರ ಜಾರಿ ಆಗಲಿದೆ. ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರವಾಗಿ ಬಿಎಂಆರ್‌ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಯಶವಂತ್ ಚೌಹಾನ್ ಪ್ರತಿಕ್ರಿಯಿಸಿದ್ದಾರೆ.

    ದರ ಏರಿಕೆ ಬಗ್ಗೆ ಕಮಿಟಿ ಆಗಿದ್ದು, ಒಂದು ಸಭೆ ಕೂಡಾ ಆಗಿದೆ. ಕಮಿಟಿ ಶೀಘ್ರದಲ್ಲೇ ವರದಿ ನೀಡಲಿದ್ದು, ವರದಿ ಆಧಾರದ ಮೇಲೆ ದರ ಏರಿಕೆ ಮಾಡಲಾಗುತ್ತದೆ. ರಾಜ್ಯ ಹಾಗೂ ಕೇಂದ್ರದ ಹಿರಿಯ ಅಧಿಕಾರಿಗಳು, ನಿವೃತ್ತ ನ್ಯಾಯಾಧೀಶರನ್ನು ಒಳಗೊಂಡ ಕಮಿಟಿ ಇದಾಗಿದೆ. ಕಮಿಟಿಯು ಸಾರ್ವಜನಿಕರ ಅಭಿಪ್ರಾಯ ಸಂಗ್ರಹ ಮಾಡಿದೆ. ನಮ್ಮ ಖರ್ಚು- ವೆಚ್ಚ ನೋಡಿಕೊಂಡು ದರ ಏರಿಕೆ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

    ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

    Continue Reading

    ಬೆಂಗಳೂರು

    Murder Case : ನಿದ್ದೆಗೆ ಜಾರಿದ 13 ವರ್ಷದ ಬಾಲಕಿಯನ್ನು ಕೊಂದಿದ್ಯಾರು? ನಿಗೂಢ ಸಾವಿನ ಬೆನ್ನಟ್ಟಿದ ಪೊಲೀಸರು

    Murder Case : ನಿದ್ದೆಗೆ ಜಾರಿದ 13 ವರ್ಷದ ಬಾಲಕಿಯೊಬ್ಬಳು ನಿಗೂಢವಾಗಿ ಮೃತಪಟ್ಟಿದ್ದಾಳೆ. ಮೊದಮೊದಲು ಯುಡಿಆರ್‌ ಆಗಿದ್ದ ಪ್ರಕರಣ ಇದೀಗ ಕೊಲೆ ಕೇಸ್‌ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಗಿಳಿದಿದ್ದಾರೆ.

    VISTARANEWS.COM


    on

    By

    Murder case
    Koo

    ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಅದೊಂದು ಕೊಲೆ ಪೊಲೀಸರಿಗೆ ತಲೆನೋವಾಗಿದೆ. 13 ವರ್ಷದ ಬಾಲಕಿಯ ನಿಗೂಢ ಸಾವಿನ ಸುತ್ತ ಅನುಮಾನದ ಹುತ್ತ ಮೂಡಿದೆ. ಗರ್ಗಿ ಮುರುಳೀಧರ್ ಎಂಬಾಕೆ ನಿಗೂಢವಾಗಿ ಮೃತಪಟ್ಟವಳು. ನಿದ್ದೆಗೆ ಜಾರಿದ 13 ವರ್ಷದ ಬಾಲಕಿಯನ್ನ ಕೊಂದಿದ್ಯಾರು? ಎಂಬ ಪ್ರಶ್ನೆ ಕಾಡುತ್ತಿದೆ. ಅಸಹಜ ಸಾವು ಅಂದುಕೊಂಡಿದ್ದ ಪೊಲೀಸರಿಗೆ ಪಿಎಂ ಹಾಗೂ ಎಫ್‌ಎಸ್‌ಎಲ್ ರಿಪೋರ್ಟ್ ಅದೊಂದು ಸುಳಿವು ನೀಡಿತ್ತು. ಎರಡು ತಿಂಗಳ ಹಿಂದೆ ಯುಡಿಆರ್ ಆಗಿದ್ದ ಪ್ರಕರಣ ನಂತರ ಕೊಲೆ ಕೇಸ್ ಆಗಿ ಬದಲಾಗಿದೆ.

    ಮುರುಳೀಧರ್ ಹಾಗೂ ಶೃತಿ ದೇಶಪಾಂಡೆ ದಂಪತಿಯ ಒಬ್ಬಳೇ ಮಗಳು ಗರ್ಗಿ ಎಂಬಾಕೆ ತಿಲಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಯನಗರ ಉಷಾ ಅಪಾರ್ಟ್ಮೆಂಟ್‌ನಲ್ಲಿ ವಾಸವಿದ್ದರು. ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಗರ್ಗಿ ಮುರಳೀಧರ್, ಬೇಸಿಗೆ ರಜೆ ಹಿನ್ನೆಲೆಯಲ್ಲಿ ಎರಡು ತಿಂಗಳು ಟ್ಯೂಷನ್‌ಗೆ ತೆರಳುತ್ತಿದ್ದಳು. ಕೃಷ್ಣ ಮೂರ್ತಿ ಎಂಬುವವರ ಬಳಿ ಗಣಿತ ಟ್ಯೂಷನ್‌ಗೆ ತೆರಳುತ್ತಿದ್ದಳು. ಕಳೆದ ಮೇ 22ರಂದು ಬೆಳಗ್ಗೆ 8:45 ಗರ್ಗಿ ತನ್ನ ಅಮ್ಮನ ಜತೆ ಅಶೋಕನಗರದಲ್ಲಿರುವ ತಾತನ ಮನೆಗೆ ತೆರಳಿದ್ದಳು. ಸಂಜೆ 5:30 ಕ್ಕೆ ತಾಯಿ ಶೃತಿ ದೇಶಪಾಂಡೆ ಹಾಗೂ ಗರ್ಗಿ ಮುರುಳೀಧರ್ ವಾಪಸ್ ಆಗಿದ್ದಳು.

    ಸಂಜೆ 7ಕ್ಕೆ ಶೃತಿ ದೇಶಪಾಂಡೆ, ಮಗಳು ಗರ್ಗಿ ಹಾಗೂ ಶೃತಿ ಸಹೋದರಿ ಚಾಟ್ಸ್ ತಿನ್ನಲು ಹೊರಗೆ ಹೋಗಿದ್ದರು. ವಾಪಸ್ 8 ಗಂಟೆಗೆ ಬಂದವರೇ ಗರ್ಗಿ ರಾತ್ರಿ 10:30ಕ್ಕೆ ಮಲಗಲು ರೂಂಗೆ ತೆರಳಿದ್ದಳು. ಎಂದಿನಂತೆ ಬೆಳಗ್ಗೆ 7 ನೋಡಿದಾಗ ಗರ್ಗಿ ಮಲಗಿದ್ದಲೇ ಮೂತ್ರ ವಿಸರ್ಜನೆ ಮಾಡಿಕೊಂಡಿದ್ದಳು. ಎಷ್ಟೇ ಕೂಗಿ ಎಬ್ಬಿಸಿಲು ಪ್ರಯತ್ನಿಸಿದ್ದರು ಎದ್ದೇಳದೆ ಇದ್ದಾಗ ಪೋಷಕರು ಗಾಬರಿಗೊಂಡಿದ್ದರು. ಕೂಡಲೇ ಅಪಾರ್ಟ್‌ಮೆಂಟ್‌ನಲ್ಲಿದ್ದ ವೈದ್ಯರನ್ನು ಕರೆದು ಪರೀಕ್ಷಿಸಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಆದರೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದಾಗ ದಾರಿ ಮಧ್ಯೆ ಮೃತಪಟ್ಟಿದ್ದಾಗಿ ವೈದ್ಯರು ಖಚಿತ ಪಡಿಸಿದ್ದಾರೆ.

    ಇದನ್ನೂ ಓದಿ: Murder case : ಬೆಂಗಳೂರಲ್ಲಿ ಬಿಹಾರಿ ಮೂಲದ ವ್ಯಕ್ತಿಯನ್ನು ದೊಣ್ಣೆಯಿಂದ ಹೊಡೆದು ಭೀಕರ ಹತ್ಯೆ

    ಘಟನೆ ಸಂಬಂಧ ತಿಲಕನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿತ್ತು. ಆದರೆ ಮಗಳ ದಿಢೀರ್‌ ಸಾವಿನಿಂದ ಪೋಷಕರು ಅನುಮಾನ ವ್ಯಕ್ತಪಡಿಸಿದ್ದರು. ಆರೋಗ್ಯವಾಗಿದ್ದ ಮಗಳು ಹೀಗೆ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಮೃತಪಟ್ಟಿರುವುದರಿಂದ ಹಲವು ಅನುಮಾನಗಳು ಮೂಡುತ್ತಿವೆ. ಹೀಗಾಗಿ ತನಿಖೆಯನ್ನು ನಡೆಸುವಂತೆ ದೂರು ನೀಡಿದ್ದರು. ಗರ್ಗಿಯ ಮರಣೋತ್ತರ ಪರೀಕ್ಷೆಯನ್ನು ನಡೆಸಿದಾಗ, ಬಾಲಕಿ ಉಸಿರುಗಟ್ಟಿ ಮೃತಪಟ್ಟಿದ್ದಾಳೆ ಎಂದು ವರದಿ ಬಂದಿದೆ.

    ಹೀಗಾಗಿ ಯುಡಿಆರ್‌ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಕೊಲೆಕೇಸ್‌ ದಾಖಲಿಸಿಕೊಂಡಿದ್ದಾರೆ. ಆದರೆ ಮನೆಯೊಳಗೆ ಮಲಗಿದ್ದ ಬಾಲಕಿಯನ್ನು ಉಸಿರುಗಟ್ಟಿಸಿ ಕೊಂದವರು ಯಾರು ಎಂಬ ಪ್ರಶ್ನೆ ಹಾಗೇ ಉಳಿದಿದೆ. ಜುಲೈ 18 ರಂದು ಯುಎಇಆರ್ ಪ್ರಕರಣ 302 ಅಡಿಯಲ್ಲಿ ಎಫ್ಐಆರ್ ಆಗಿ ದಾಖಲಿಸಿಕೊಂಡಿರುವ ಪೊಲೀಸರು, ಕುಟುಂಬಸ್ಥರ ವಿಚಾರಣೆ ನಡೆಸುತ್ತಿದ್ದಾರೆ. ಪಿಎಂ ರಿಪೋರ್ಟ್‌ನಲ್ಲಿ ಬಾಲಕಿ ಕಿವಿಯನ್ನು ಬಲವಾಗಿ ಒತ್ತಿದ್ದಾರೆ. ದಿಂಬು ಅಥವಾ ಬೇರೆ ವಸ್ತುವಿನಿಂದ ಉಸಿರುಗಟ್ಟಿಸಿಕೊಂದಿದ್ದಾರೆಂಬ ಮಾಹಿತಿ ಇದೆ. ಪ್ರಕರಣ ಸೂಕ್ಷ್ಮತೆ ಅರಿತ ಡಿಸಿಪಿ ಪ್ರಕರಣವನ್ನು ಎಸಿಪಿಗೆ ರವಾನೆ ಮಾಡಿದ್ದಾರೆ. ಸದ್ಯ ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿರುವ ಪೊಲೀಸರು ಆರೋಪಿಯ ಹುಡುಕಾಟದಲ್ಲಿದ್ದಾರೆ.

    ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

    Continue Reading

    ಬೆಂಗಳೂರು

    Murder case : ಬೆಂಗಳೂರಲ್ಲಿ ಬಿಹಾರಿ ಮೂಲದ ವ್ಯಕ್ತಿಯನ್ನು ದೊಣ್ಣೆಯಿಂದ ಹೊಡೆದು ಭೀಕರ ಹತ್ಯೆ

    Murder case : ಬೆಂಗಳೂರಲ್ಲಿ ಬಿಹಾರಿ ಮೂಲದ ವ್ಯಕ್ತಿಯನ್ನು ದೊಣ್ಣೆಯಿಂದ ಹೊಡೆದು ಭೀಕರ ಹತ್ಯೆ ನಡೆಸಲಾಗಿದೆ.

    VISTARANEWS.COM


    on

    By

    murder case
    ಮೃತ ಸಜಿತ್
    Koo

    ಬೆಂಗಳೂರು: ಎಣ್ಣೆ ಮತ್ತಲ್ಲಿ ಬಿಹಾರಿ ಗೆಳೆಯರ ನಡುವೆ ಕಿರಿಕ್ ನಡೆದಿದ್ದು, ಕೊಲೆಯಲ್ಲಿ‌ (Murder case) ಅಂತ್ಯವಾಗಿದೆ. ಬೆಂಗಳೂರಲ್ಲಿ ಬಿಹಾರಿ ಮೂಲದ ವ್ಯಕ್ತಿ ಭೀಕರವಾಗಿ ಹತ್ಯೆಯಾಗಿದ್ದಾನೆ. ಸಜಿತ್ (34) ಕೊಲೆಯಾದ ದುರ್ದೈವಿ. ಬೆಂಗಳೂರಿನ ಮೈಕೋ ಲೇಔಟ್ ಬಳಿಯ ಕುಟ್ಟಪ್ಪ ಗಾರ್ಡನ್‌ನಲ್ಲಿ ಘಟನೆ ನಡೆದಿದೆ.

    ಸಜೀತ್ ಇಂಟೀರಿಯರ್ ಡಿಸೈನ್ ಗೋಡೌನ್‌ನಲ್ಲಿ ಕೆಲಸ ಮಾಡುತ್ತಿದ್ದ. ಮೂವರು ಬಿಹಾರ ಮೂಲದವರು ಸೇರಿ ನಿನ್ನೆ ರಾತ್ರಿ ಪಾರ್ಟಿ ಮಾಡಿದ್ದರು. ಈ ವೇಳೆ ಕುಡಿದ ಮತ್ತಿನಲ್ಲಿ ಮಾತಿನ ಚಕಮಕಿ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿದ್ದು ಜತೆಗೆ ಇದ್ದವರೇ ಮರದ ದೊಣ್ಣೆಗಳಿಂದ ಹಲ್ಲೆ ಮಾಡಿ ಭೀಕರವಾಗಿ ಕೊಂದು ಹಾಕಿದ್ದಾರೆ.

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸೊಕೋ ಮತ್ತು ಎಫ್.ಎಸ್.ಎಲ್ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೈಕೊಲೇಔಟ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

    ಮೈಕೋ ಲೇಔಟ್ ಕೊಲೆ ಪ್ರಕರಣ ಸಂಬಂಧ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತಿಮಾ ಮಾಹಿತಿ ನೀಡಿದ್ದಾರೆ. ಲಿಖಿತ್ ಇಂಟೀರಿಯರ್ ಡಿಸೈನ್ಸ್ ಎಂಬ ಶಾಪ್ ಬಳಿ ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಒಂದು ಗಲಾಟೆ ನಡೆದಿದೆ. ಮೂರು ಜನ ಸೇರಿ ಗಲಾಟೆ ಮಾಡಿಕೊಂಡಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧನ ಮಾಡಿದ್ದೀವಿ. ಮೂವರು ಬಿಹಾರ ಮೂಲದ ಅಕ್ಕಪಕ್ಕದ ಹಳ್ಳಿಯವರು ಎಂದು ತಿಳಿದು ಬಂದಿದೆ.

    ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

    Continue Reading

    ಬೆಂಗಳೂರು

    Wall collapse : ಕಾಂಪೌಂಡ್ ಗೋಡೆ ಕುಸಿದು ಕೂಲಿ ಕಾರ್ಮಿಕ ಸಾವು; ಮತ್ತೊಬ್ಬ ಗಂಭೀರ

    Wall collapse : ಕಾಂಪೌಂಡ್ ಗೋಡೆ ಕುಸಿದು ಕೂಲಿ ಕಾರ್ಮಿಕ ಮೃತಪಟ್ಟರೆ, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    VISTARANEWS.COM


    on

    By

    Wall Collapse
    Koo

    ಆನೇಕಲ್: ಕಾಂಪೌಂಡ್ ಗೋಡೆ ಕುಸಿದು (Wall collapse) ಬಿದ್ದು ಕೂಲಿ ಕಾರ್ಮಿಕನೊರ್ವ ಮೃತಪಟ್ಟರೆ, ಮತ್ತೋರ್ವ ಕಾರ್ಮಿಕ ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ನಿನ್ನೆ ಗುರುವಾರ ಘಟನೆ ನಡೆದಿದೆ. ರಾಯಚೂರಿನ ದೇವದುರ್ಗ ಮೂಲದ ಪರಶುರಾಮ್ (24) ಮೃತ ದುರ್ದೈವಿ.

    ಪೈಪ್ ಲೈನ್ ಹಾಕಲು ಮಣ್ಣು ತೆಗೆಯುತ್ತಿದ್ದ ವೇಳೆ ಕಾಂಪೌಂಡ್ ಗೋಡೆ ಕುಸಿದಿದೆ. ಕಾಂಪೌಂಡ್ ಗೋಡೆ ಪಕ್ಕದಲ್ಲಿಯೇ ಗುಂಡಿ ತೆಗೆಯುತ್ತಿದ್ದಾಗ ಈ ಅವಘಡ ಸಂಭವಿಸಿದೆ. ರಾಯಚೂರು ಮೂಲದ ಐದಾರು ಮಂದಿ ಮಣ್ಣು ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಕಾರ್ಮಿಕ ಮೇಲೆಯೇ ಗೋಡೆ ಕುಸಿದಿದೆ. ಹೊಟ್ಟೆಪಾಡಿಗೆ ದೂರದ ರಾಯಚೂರಿನಿಂದ ಬಂದಿದ್ದ ಪರಶುರಾಮ್‌ ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾನೆ.

    ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    ನಿವೇಶನ ಮಾಲೀಕ ಮತ್ತು ಗುತ್ತಿಗೆದಾರನ ನಿರ್ಲಕ್ಷ್ಯಕ್ಕೆ ಕಾರ್ಮಿಕ ಬಲಿಯಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
    ಈಗಾಗಲೇ ಎರಡು ಕಡೆ ಕಾಂಪೌಂಡ್ ಕುಸಿದು ಬಿದ್ದಿತ್ತು. ಆದರೂ ಶಿಥಿಲಗೊಂಡಿದ್ದ ಕಾಂಪೌಂಡ್ ತೆರವುಗೊಳಿಸದೇ ಕಾಮಗಾರಿ ನಡೆಸಿದ್ದಾರೆ. ಯಮಸ್ವರೂಪಿ ಕಾಂಪೌಂಡ್ ಪಕ್ಕದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಕಾಂಪೌಂಡ್ ಪಕ್ಕದಲ್ಲಿಯೇ ಜೆಸಿಬಿ ಮೂಲಕ ಗುಂಡಿ ತೆಗೆದಿದ್ದ. ಗುಂಡಿ ಸಮತಟ್ಟು ವೇಳೆ ಆರು ಅಡಿ ಎತ್ತರದ ಹಾಲೋಬ್ಲಾಕ್ ಕಾಂಪೌಂಡ್ ಕುಸಿದಿದೆ.

    ಈ ವೇಳೆ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರ ಮೇಲೆ ಕಾಂಪೌಂಡ್ ಗೋಡೆ ಬಿದ್ದಿದೆ. ಏಕಾಏಕಿ ಕಾಂಪೌಂಡ್ ಕುಸಿದ ಪರಿಣಾಮ ಓರ್ವ ಸ್ಥಳದಲ್ಲಿಯೇ ಮೃತಪಟ್ಟರೆ, ಓರ್ವ ಮಹಿಳೆ ಸೇರಿದಂತೆ ಇಬ್ಬರು ಕಾರ್ಮಿಕರಿಗೆ ಗಾಯವಾಗಿದೆ. ಕಾಂಪೌಂಡ್ ಕುಸಿದಾಗ ಮಾಲೀಕ‌ ಅಥವಾ ಗುತ್ತಿಗೆದಾರ ಸ್ಥಳದಲ್ಲಿ ಇರಲಿಲ್ಲ. ಕೂಡಲೇ ಸಮೀಪದ ಕಾರ್ಖಾನೆಯವರು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದಾರೆ. ಆದರೆ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಗಿ ಪ್ರತ್ಯಕ್ಷದರ್ಶಿ ಹೇಳಿದ್ದಾರೆ.

    ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

    Continue Reading
    Advertisement
    Namma metro ticket prices will be hiked soon
    ಬೆಂಗಳೂರು48 ನಿಮಿಷಗಳು ago

    Namma Metro : ಸಿಟಿ ಮಂದಿಗೆ ಮತ್ತೊಂದು ಶಾಕ್‌; ಶೀಘ್ರದಲ್ಲೆ ನಮ್ಮ ಮೆಟ್ರೋ ಟಿಕೆಟ್‌ ದರ ಏರಿಕೆಯ ಬರೆ!

    Murder case
    ಬೆಂಗಳೂರು1 ಗಂಟೆ ago

    Murder Case : ನಿದ್ದೆಗೆ ಜಾರಿದ 13 ವರ್ಷದ ಬಾಲಕಿಯನ್ನು ಕೊಂದಿದ್ಯಾರು? ನಿಗೂಢ ಸಾವಿನ ಬೆನ್ನಟ್ಟಿದ ಪೊಲೀಸರು

    murder case
    ಬೆಂಗಳೂರು2 ಗಂಟೆಗಳು ago

    Murder case : ಬೆಂಗಳೂರಲ್ಲಿ ಬಿಹಾರಿ ಮೂಲದ ವ್ಯಕ್ತಿಯನ್ನು ದೊಣ್ಣೆಯಿಂದ ಹೊಡೆದು ಭೀಕರ ಹತ್ಯೆ

    Wall Collapse
    ಬೆಂಗಳೂರು3 ಗಂಟೆಗಳು ago

    Wall collapse : ಕಾಂಪೌಂಡ್ ಗೋಡೆ ಕುಸಿದು ಕೂಲಿ ಕಾರ್ಮಿಕ ಸಾವು; ಮತ್ತೊಬ್ಬ ಗಂಭೀರ

    karnataka Weather Forecast
    ಮಳೆ9 ಗಂಟೆಗಳು ago

    Karnataka Weather : ಇಂದು ಅಬ್ಬರಿಸಲಿದೆ ಗುಡುಗು ಸಹಿತ ಭಾರಿ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

    Dina Bhavishya
    ಭವಿಷ್ಯ9 ಗಂಟೆಗಳು ago

    Dina Bhavishya : ಈ ರಾಶಿಯವರಿಗೆ ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ

    Action Prince Dhruva Sarja much awaited film Martin to hit the screens on October 11
    ಸಿನಿಮಾ19 ಗಂಟೆಗಳು ago

    Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

    Actor Darshan
    ಬೆಂಗಳೂರು20 ಗಂಟೆಗಳು ago

    Parappana Agrahara : ಜೈಲಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಕೇಸ್; ಕ್ಲೈ ಮ್ಯಾಕ್ಸ್ ಹಂತದಲ್ಲಿ ರಿವೈಲ್ ಆಯ್ತು ಜೈಲಿನೊಳಗಿನ ಅಂದರ್ ಕಿ ದರ್ಬಾರ್!

    Bengaluru News
    ಬೆಂಗಳೂರು22 ಗಂಟೆಗಳು ago

    Bengaluru News : ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ; ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಕುಟುಂಬ

    HD kumaraswamy And Vijayetata
    ಬೆಂಗಳೂರು23 ಗಂಟೆಗಳು ago

    HD Kumaraswamy : ಎಲೆಕ್ಷನ್‌ಗೆ 50 ಕೋಟಿ ರೂ.ಗೆ ಡಿಮ್ಯಾಂಡ್‌ ಮಾಡಿ ಉದ್ಯಮಿಗೆ ಬೆದರಿಕೆ; ಎಚ್‌ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

    Kannada Serials
    ಕಿರುತೆರೆ12 ತಿಂಗಳುಗಳು ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Sharmitha Gowda in bikini
    ಕಿರುತೆರೆ12 ತಿಂಗಳುಗಳು ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    galipata neetu
    ಕಿರುತೆರೆ10 ತಿಂಗಳುಗಳು ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ1 ವರ್ಷ ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Bigg Boss- Saregamapa 20 average TRP
    ಕಿರುತೆರೆ12 ತಿಂಗಳುಗಳು ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    Kannada Serials
    ಕಿರುತೆರೆ12 ತಿಂಗಳುಗಳು ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ11 ತಿಂಗಳುಗಳು ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ10 ತಿಂಗಳುಗಳು ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    Kannada Serials
    ಕಿರುತೆರೆ1 ವರ್ಷ ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    varun
    ಕಿರುತೆರೆ11 ತಿಂಗಳುಗಳು ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Action Prince Dhruva Sarja much awaited film Martin to hit the screens on October 11
    ಸಿನಿಮಾ19 ಗಂಟೆಗಳು ago

    Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

    Sudeep's birthday location shift
    ಸ್ಯಾಂಡಲ್ ವುಡ್1 ತಿಂಗಳು ago

    Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

    Actor Darshan
    ಸ್ಯಾಂಡಲ್ ವುಡ್1 ತಿಂಗಳು ago

    Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

    ಮಳೆ1 ತಿಂಗಳು ago

    Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

    karnataka Weather Forecast
    ಮಳೆ2 ತಿಂಗಳುಗಳು ago

    Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

    Bellary news
    ಬಳ್ಳಾರಿ2 ತಿಂಗಳುಗಳು ago

    Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

    Maravoor bridge in danger Vehicular traffic suspended
    ದಕ್ಷಿಣ ಕನ್ನಡ2 ತಿಂಗಳುಗಳು ago

    Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

    Wild Animals Attack
    ಚಿಕ್ಕಮಗಳೂರು2 ತಿಂಗಳುಗಳು ago

    Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

    Karnataka Weather Forecast
    ಮಳೆ2 ತಿಂಗಳುಗಳು ago

    Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

    assault case
    ಬೆಳಗಾವಿ2 ತಿಂಗಳುಗಳು ago

    Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

    ಟ್ರೆಂಡಿಂಗ್‌