Flying Squirrel | ಗಾಯಗೊಂಡ ಹಾರುವ ಅಳಿಲಿಗೆ ಚಿಕಿತ್ಸೆ ನೀಡಿ ಪುನಃ ಕಾಡಿಗೆ ಬಿಟ್ಟ ಅರಣ್ಯ ವೀಕ್ಷಕ - Vistara News

ಉತ್ತರ ಕನ್ನಡ

Flying Squirrel | ಗಾಯಗೊಂಡ ಹಾರುವ ಅಳಿಲಿಗೆ ಚಿಕಿತ್ಸೆ ನೀಡಿ ಪುನಃ ಕಾಡಿಗೆ ಬಿಟ್ಟ ಅರಣ್ಯ ವೀಕ್ಷಕ

Flying Squirrel | ಮರದಿಂದ ಮರಕ್ಕೆ ಹಾರುವ ಅಳಿಲು ಅಕಸ್ಮಿಕವಾಗಿ ಮನೆಯ ಟೆರೇಸ್ ಮೇಲೆ ಬಿದ್ದಿದ್ದು, ಅರಣ್ಯ ವೀಕ್ಷಕ ಅದಕ್ಕೆ ಸೂಕ್ತ ಚಿಕಿತ್ಸೆ ನೀಡಿ ಪುನಃ ಕಾಡಿಗೆ ಬಿಟ್ಟಿದ್ದಾರೆ.

VISTARANEWS.COM


on

Flying Squirrel Rescued karwar Forest Watcher
ಆಕಸ್ಮಿಕವಾಗಿ ಬಿದ್ದು ಗಾಯಗೊಂಡ ಹಾರುವ ಅಳಿಲಿಗೆ ಅರಣ್ಯ ವೀಕ್ಷಕ ಚಿಕಿತ್ಸೆ ನೀಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಕಾರವಾರ ತಾಲೂಕಿನ ಕದ್ರಾ ಅರಣ್ಯ ವಲಯದ ವಿರ್ಜೆ ಬೀಟ್‌ನ ಅರಣ್ಯ ವೀಕ್ಷಕ ಬಿಲಾಲ್ ಶೇಖ್ ಎಂಬುವವರು ಗಾಯಗೊಂಡಿದ್ದ ಹಾರುವ ಅಳಿಲನ್ನು (Flying Squirrel ) ರಕ್ಷಿಸಿ ಅದಕ್ಕೆ ಸೂಕ್ತ ಚಿಕಿತ್ಸೆ ನೀಡಿ ಪುನಃ ಕಾಡಿಗೆ ಬಿಟ್ಟಿದ್ದಾರೆ.

ಈ ಅಳಿಲು ಮರದಿಂದ ಮರಕ್ಕೆ ಹಾರುವ ವೇಳೆ ಆಕಸ್ಮಿಕವಾಗಿ ರೆಂಬೆಗಳಿಗೆ ತಾಗಿ ಗಾಯಗೊಂಡು ಮಲ್ಲಾಪುರ ಟೌನ್‌ಶಿಪ್‌ನ ಎನ್‌ಪಿಸಿಐಎಲ್ ಸಿಬ್ಬಂದಿಯೊಬ್ಬರ ಮನೆಯ ಟೆರೇಸ್ ಮೇಲೆ ಬಿದ್ದಿತ್ತು. ಇದರ ಬಗ್ಗೆ ಎಲ್ಲೆಡೆ ಸುದ್ದಿಯೂ ಆಗಿತ್ತು.

ಈ ಬಗ್ಗೆ ಸ್ಥಳೀಯರು ಅರಣ್ಯ ರಕ್ಷಕ ನಾಗರಾಜ್ ಅವರಿಗೆ ಕರೆ ಮಾಡಿ ತಿಳಿಸಿದ್ದರು. ನಾಗರಾಜ್ ಅವರು ಬಿಲಾಲ್ ಅವರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ತೆರಳಿದ ಬಿಲಾಲ್‌, ಹಾರುವ ಅಳಿಲಿಗೆ ಅಗತ್ಯ ಚಿಕಿತ್ಸೆ ಕೊಡಿಸಿ, ವಲಯ ಅರಣ್ಯ ಅಧಿಕಾರಿ ಲೋಕೇಶ್ ಪಾಟಣಕರ್ ಅವರ ಮಾರ್ಗದರ್ಶನದಲ್ಲಿ ಪುನಃ ಕಾಡಿಗೆ ಬಿಟ್ಟಿದ್ದಾರೆ.

ಹಾರುವ ಅಳಿಲುಗಳು ಸಂಪೂರ್ಣವಾಗಿ ನಿಶಾಚರಿಯಾಗಿದ್ದು, ಹಗಲಿನಲ್ಲಿ ಗೊಚರಿಸುವುದು ತುಂಬಾ ವಿರಳವಾಗಿದೆ. ಈ ಅಳಿಲು ಗಾಯಗೊಂಡಿದ್ದ ಪರಿಣಾಮ ಹಾರಲಾಗದೇ ಮನೆಯ ಬಳಿ ಬಿದ್ದಿರಬಹುದೆಂದು ಎಂದು ಪಶು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ | Tamanna Bhatia | ಡೇಟಿಂಗ್‌ ಸುದ್ದಿ ಬೆನ್ನಲೇ ಮಾಲಿವುಡ್‌ಗೆ ಎಂಟ್ರಿ ಕೊಟ್ಟ ಮಿಲ್ಕಿ ಬ್ಯೂಟಿ ತಮನ್ನಾ?

ಹಾರುವ ಅಳಿಲುಗಳನ್ನು ಸ್ಥಳೀಯವಾಗಿ ಹಾರುವ ಬೆಕ್ಕು ಎಂದು ಸಹ ಕರೆಯಲಾಗುತ್ತದೆ. ವೈಜ್ಞಾನಿಕವಾಗಿ ಪೆಟೌರಿಸ್ಟಾ ಫಿಲಿಪೆನ್ಸಿಸ್(Petaurista philippensis) ಎಂದು ಕರೆಯಲ್ಪಡುವ ಈ ಅಳಿಲುಗಳು ವಾಸ್ತವವಾಗಿ ಪಕ್ಷಿಗಳ ರೀತಿ ಸಂಪೂರ್ಣವಾಗಿ ಹಾರುವ ಸಾಮರ್ಥ್ಯವನ್ನು ಹೊಂದಿಲ್ಲ. ಆದರೆ ಅವುಗಳು ತಮ್ಮ ವಿಶಿಷ್ಟ ರೀತಿಯ ಚರ್ಮದ ರಚನೆಯಿಂದಾಗಿ ಅದನ್ನು ರೆಕ್ಕೆಯಂತೆ ಅಗಲವಾಗಿಸಿಕೊಂಡು ಒಂದು ಮರದಿಂದ ಇನ್ನೊಂದು ಮರಕ್ಕೆ ಜಿಗಿಯುತ್ತವೆ. ಜತೆಗೆ ಕೈ ಕಾಲು ಮತ್ತು ಬಾಲದ ಸಹಾಯದಿಂದ ಹಾರುವ ದಿಕ್ಕನ್ನು ನಿಯಂತ್ರಿಸುತ್ತವೆ. ಇದು ದೂರದಿಂದ ನೋಡಿದಾಗ ಅಳಿಲು ಹಾರುತ್ತಿರುವಂತೆ ಕಾಣುತ್ತದೆ.

ಇದನ್ನೂ ಓದಿ | Sikh Helmet | ಮಕ್ಕಳಿಗಾಗಿ ವಿಶೇಷ ಹೆಲ್ಮೆಟ್‌ ತಯಾರಿಸಿದ ತಾಯಿ! ಈ ಹೆಲ್ಮೆಟ್‌ಗೀಗ ಎಲ್ಲಿಲ್ಲದ ಬೇಡಿಕೆ

ಪಶ್ಚಿಮ ಘಟ್ಟಗಳಲ್ಲಿ ಭಾರತೀಯ ದೈತ್ಯ ಹಾರುವ ಅಳಿಲು (Indian Giant Flying Squirrel) ಎಂದು ಗುರುತಿಸಲಾಗಿರುವ ಈ ಜೀವಿಯು ಈ ಭಾಗದಲ್ಲಿ ಇರುವ ಅತ್ಯಂತ ಚಿಕ್ಕ ಹಾರುವ ಅಳಿಲುಗಳ ಪೈಕಿ ಒಂದು ಎಂದು ಹೇಳಲಾಗುತ್ತದೆ. ಈ ಅಳಿಲು 32 ಸೆಂ.ಮೀ ಉದ್ದವಿದ್ದು, ಇದು ದಕ್ಷಿಣ ಭಾರತದಲ್ಲಿ ಕಂಡುಬರುವ ವಿಶಿಷ್ಟ ಜಾತಿಯ ತಳಿಯಾಗಿದೆ. ಹಾರುವ ಅಳಿಲುಗಳ ಪೈಕಿ ಕರ್ನಾಟಕದಲ್ಲಿ ಎರಡು ವಿಧದ ತಳಿಗಳಿವೆ. ಈ ಪೈಕಿ ಒಂದು ಟ್ರಾವಂಕೂರ್ ಹಾರುವ ಅಳಿಲು (Tranvancore Flying Squirrel) ಎಂದು ಗುರುತಿಸಿಕೊಂಡಿದ್ದರೆ, ಇನ್ನೊಂದು ಭಾರತೀಯ ದೈತ್ಯ ಹಾರುವ ಅಳಿಲು (Indian Giant Flying Squirrel) ಎಂದು ಕರೆಸಿಕೊಂಡಿದೆ. ಅಳಿವಿನ ಅಂಚಿನಲ್ಲಿರುವ ಈ ಟ್ರಾವಂಕೂರ್ ಹಾರುವ ಅಳಿಲು ದಕ್ಷಿಣ ಕನ್ನಡದ ಸುಳ್ಯ ಹಾಗೂ ಕೇರಳದ ಪಶ್ಚಿಮ ಘಟ್ಟಗಳಲ್ಲಿ ಕಂಡುಬರುತ್ತವೆ.

ಇದನ್ನೂ ಓದಿ | IndiGo Flight | ಇಂಡಿಗೋ ಫ್ಲೈಟ್‌ನಲ್ಲಿ ಕುಡಿದು, ಪರಸ್ಪರ ಜಗಳವಾಡಿದ ಇಬ್ಬರು ಪ್ರಯಾಣಿಕರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Uttara Kannada News: ಭಾರತದ ಭವಿಷ್ಯ ಸಣ್ಣ ಸಣ್ಣ ಊರುಗಳಲ್ಲಿದೆ: ಹರಿಪ್ರಕಾಶ್‌ ಕೋಣೆಮನೆ

Uttara Kannada News: ಯಲ್ಲಾಪುರ ಪಟ್ಟಣದ ಗಾಂಧಿ ಕುಟೀರದಲ್ಲಿ ರಂಗಸಹ್ಯಾದ್ರಿ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಶನಿವಾರ ಸಂಜೆ ಜರುಗಿತು.

VISTARANEWS.COM


on

childrens summer camp closing ceremony at yallapur
Koo

ಯಲ್ಲಾಪುರ: ಭಾರತದ ಭವಿಷ್ಯ ಸಣ್ಣ ಸಣ್ಣ ಊರುಗಳಲ್ಲಿದೆ. ಪಟ್ಟಣದ ಸವಲತ್ತುಗಳನ್ನು ನಾವು ಇಲ್ಲಿನ ಮಕ್ಕಳಿಗೆ ನೀಡಿದಾಗ ಮಾತ್ರ ಉತ್ತಮ ಭವಿಷ್ಯ ನಿರ್ಮಿಸಲು ಸಾಧ್ಯ ಎಂದು ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ್‌ ಕೋಣೆಮನೆ (Uttara Kannada News) ಅಭಿಪ್ರಾಯಪಟ್ಟರು.

ಪಟ್ಟಣದ ಗಾಂಧಿ ಕುಟೀರದಲ್ಲಿ ಶನಿವಾರ ಸಂಜೆ ರಂಗಸಹ್ಯಾದ್ರಿ ಬಳಗದ ವತಿಯಿಂದ ಹಮ್ಮಿಕೊಂಡ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಸಕ್ತಿ, ಸಮರ್ಪಣೆ ಹಾಗೂ ಬದ್ಧತೆ ಇಲ್ಲವೆಂದರೆ 17 ವರ್ಷಗಳಿಂದ ಸತತವಾಗಿ ಬೇಸಿಗೆ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿಕೊಂಡು ಬರಲು ಸಾಧ್ಯವಾಗುತ್ತಿರಲಿಲ್ಲ. ಶಿಬಿರವನ್ನು ನಡೆಸುವುದು ಸವಾಲಿನ ಕೆಲಸ. ಮಕ್ಕಳು ಜೀವನದಲ್ಲಿ ಯಾವ ಉದ್ಯೋಗವನ್ನು ಆರಿಸುತ್ತಾರೆ ಎಂಬುದು ಮುಖ್ಯವಲ್ಲ. ಬದಲಾಗಿ ಕುಟುಂಬದ ಸಂಸ್ಕೃತಿ-ಸಂಸ್ಕಾರವನ್ನು ಉಳಿಸುವ, ಮನೆತನದ ಹಾಗೂ ಊರಿನ ಹೆಸರನ್ನು ಉಳಿಸುವ ಉತ್ತಮ ಪ್ರಜೆಯಾಗಬೇಕು. ಅಂತಹ ಅಭಿವ್ಯಕ್ತಿ ಕಲೆಗಳನ್ನು ಬೆಳೆಸುವ ಚಟುವಟಿಕೆಗಳು ನಮ್ಮ ವ್ಯಕ್ತಿತ್ವವನ್ನು ಅರಳಿಸುತ್ತವೆ. ಆ ಕೆಲಸವನ್ನು ಇಂತಹ ಶಿಬಿರಗಳು ಮಾಡುತ್ತಿವೆ ಎಂದರು.

ಇದನ್ನೂ ಓದಿ: Selco India: ಬೆಂಗಳೂರಿನಲ್ಲಿ ಮೇ 27ರಂದು ಅಂತಾರಾಷ್ಟ್ರೀಯ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ

ಮಕ್ಕಳಿಗೆ ತಿಳಿವಳಿಕೆ ಬರುವ ಮುನ್ನ ಕೇಳಿದ್ದನ್ನೆಲ್ಲ ಕೊಡಿಸುವ ಮೊದಲು ಹಲವು ಬಾರಿ ಪಾಲಕರು ಯೋಚಿಸಬೇಕು. ಮೊಬೈಲ್ ಬಳಕೆಯಿಂದ ಮನುಷ್ಯ ದೈಹಿಕವಾಗಿ ಹಾಗೂ ಮಾನಸಿಕವಾಗಿ ಅಬಲನಾಗುತ್ತಾನೆ. ತಂತ್ರಜ್ಞಾನ ನಮ್ಮೆಲ್ಲ ಪ್ರತಿಭೆಗಳನ್ನು ಹೊಸಕಿ ಹಾಕುತ್ತಿದೆ. ಭಾರತದ ಭವಿಷ್ಯ ಇಂತಹ ಸಣ್ಣ ಸಣ್ಣ ಊರುಗಳಲ್ಲಿವೆ. ಪಟ್ಟಣದ ಸವಲತ್ತುಗಳನ್ನು ನಾವು ಇಲ್ಲಿನ ಮಕ್ಕಳಿಗೆ ನೀಡಿದಾಗ ಉತ್ತಮ ಭವಿಷ್ಯವನ್ನು ನಿರ್ಮಿಸಲು ಸಾಧ್ಯ. ಯಾವುದೇ ಕೆಲಸ ಮಾಡಲು ಧೈರ್ಯ ಹೊಂದಿದವರು ಜೀವನದಲ್ಲಿ ಬೆಳೆಯುತ್ತಾರೆ. ಜೀವನ ಕೌಶಲ್ಯಗಳನ್ನು ಮಕ್ಕಳಿಗೆ ಕಲಿಸುವ ಅವಶ್ಯಕತೆ ಇದೆ ಎಂದು ಪ್ರತಿಪಾದಿಸಿದರು.

ಈ ಸಂದರ್ಭದಲಿ ಪತ್ರಕರ್ತರಾದ ಟಿ. ಶಂಕರ್ ಭಟ್, ನಾಗರಾಜ ಮದ್ಗುಣಿ, ಪ್ರಮುಖರಾದ ವೆಂಕಟ್ರಮಣ ಭಟ್ ಸಹಸ್ರಳ್ಳಿ ಉಪಸ್ಥಿತರಿದ್ದರು. ರಂಗ ಸಹ್ಯಾದ್ರಿಯ ಅಧ್ಯಕ್ಷ ಡಿ.ಎನ್. ಗಾಂವ್ಕರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಬ್ರಾಯ ಭಟ್ ಆನೆಜಡ್ಡಿ ಕಾರ್ಯಕ್ರಮ ನಿರ್ವಹಿಸಿದರು. ಸುಮಂಗಲಾ ಜೋಶಿ ವಂದಿಸಿದರು.

ಇದನ್ನೂ ಓದಿ: Uttara Kannada News: ಕಾರವಾರ ನಗರಸಭೆ ತೆರಿಗೆ ಸಂಗ್ರಹಕ್ಕೆ ವೇಗ: ಡಿಸಿ

ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಶಿಬಿರಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ನಂತರ ಮಕ್ಕಳಿಂದ ವಿವಿಧ ರೀತಿಯ ಮನರಂಜನಾ ಕಾರ್ಯಕ್ರಮಗಳು ಜರುಗಿದವು.

Continue Reading

ಉತ್ತರ ಕನ್ನಡ

Uttara Kannada News: ಕಾರವಾರ ನಗರಸಭೆ ತೆರಿಗೆ ಸಂಗ್ರಹಕ್ಕೆ ವೇಗ: ಡಿಸಿ

Uttara Kannada News: ಕಾರವಾರ ನಗರಸಭೆಯ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಜಿಲ್ಲಾಧಿಕಾರಿ ಅವರ ದಿಟ್ಟ ನಿರ್ಧಾರಗಳಿಂದ, ನಗರಸಭೆಯಲ್ಲಿ ಬಾಕಿ ಇದ್ದ ತೆರಿಗೆ ವಸೂಲಿ ಕಾರ್ಯಕ್ಕೆ ವೇಗ ದೊರೆತಿದೆ. ಪ್ರಸ್ತುತ ಸಾಲಿನಲ್ಲಿ ಇದುವರೆಗೆ 309.93 ಲಕ್ಷ ರೂ. ತೆರಿಗೆ ವಸೂಲಿಯಾಗಿದ್ದು, ಇದು ವಾರ್ಷಿಕ ಗುರಿಯ ಶೇ.53 ರಷ್ಟು ಸಾಧನೆ ಆಗಿದೆ. ಅಲ್ಲದೇ ತೆರಿಗೆ ಸಂಗ್ರಹ ಉತ್ತಮವಾದ ಹಿನ್ನಲೆಯಲ್ಲಿ ಈ ಹಿಂದೆ 2021-22 ರಿಂದ ಬಾಕಿ ಇದ್ದ ಗುತ್ತಿಗೆದಾರರ 12.51 ಕೋಟಿ ಮೊತ್ತದಲ್ಲಿ 2.55 ಕೋಟಿ ರೂ ಗಳ ಬಿಲ್ ಅನ್ನು ಪಾವತಿಸಲಾಗಿದೆ ಎಂದು ಉತ್ತರಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.

VISTARANEWS.COM


on

Uttara Kannada DC Gangubai Manakar statement
Koo

ಕಾರವಾರ: ಕಾರವಾರ ನಗರಸಭೆಯ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಜಿಲ್ಲಾಧಿಕಾರಿ ಅವರ ದಿಟ್ಟ ನಿರ್ಧಾರಗಳಿಂದ, ನಗರಸಭೆಯಲ್ಲಿ ಬಾಕಿ ಇದ್ದ ತೆರಿಗೆ ವಸೂಲಿ ಕಾರ್ಯಕ್ಕೆ ವೇಗ ದೊರೆತಿದೆ. ಪ್ರಸ್ತುತ ಸಾಲಿನಲ್ಲಿ ಇದುವರೆಗೆ 309.93 ಲಕ್ಷ ರೂ. ತೆರಿಗೆ ವಸೂಲಿಯಾಗಿದ್ದು, ಇದು ವಾರ್ಷಿಕ ಗುರಿಯ ಶೇ.53 ರಷ್ಟು ಸಾಧನೆ ಆಗಿದೆ. ಅಲ್ಲದೇ ತೆರಿಗೆ ಸಂಗ್ರಹ ಉತ್ತಮವಾದ ಹಿನ್ನಲೆಯಲ್ಲಿ ಈ ಹಿಂದೆ 2021-22 ರಿಂದ ಬಾಕಿ ಇದ್ದ ಗುತ್ತಿಗೆದಾರರ 12.51 ಕೋಟಿ ಮೊತ್ತದಲ್ಲಿ 2.55 ಕೋಟಿ ರೂ ಗಳ ಬಿಲ್ ಅನ್ನು ಪಾವತಿಸಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ (Uttara Kannada News) ತಿಳಿಸಿದ್ದಾರೆ.

ಕಾರವಾರ ನಗರಸಭೆಯಲ್ಲಿ 2021-22 ರಲ್ಲಿ ಅಧಿಕಾರಿಗಳು ತೆಗೆದುಕೊಂಡ ತಪ್ಪು ನಿರ್ಧಾರಗಳಿಂದ, ಕಾರವಾರ ನಗರ ವ್ಯಾಪ್ತಿಯಲ್ಲಿ 263 ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ನಿರ್ವಹಿಸಿದ್ದ ಗುತ್ತಿಗೆದಾರರಿಗೆ ಅವರ ವೆಚ್ಚದ ಬಿಲ್ 12.51 ಕೋಟಿ ರೂ ಮೊತ್ತವನ್ನು ಪಾವತಿಸುವಲ್ಲಿ ತೀವ್ರ ತೊಂದರೆಯಾಗಿತ್ತು. ಅಲ್ಲದೇ ಪೂರ್ಣ ಪ್ರಮಾಣದ ತೆರಿಗೆ ವಸೂಲಾತಿ ನಡೆಯದೇ ಇದ್ದುದರಿಂದ ಹೊಸ ಕಾಮಗಾರಿಗಳನ್ನು ಕೈಗೊಳ್ಳಲು ಸಹ ಅಡಚಣೆಯಾಗಿತ್ತು.

ಇದನ್ನೂ ಓದಿ: PGCET 2024: ಪಿಜಿಸಿಇಟಿ 2024ಕ್ಕೆ ಮೇ 27ರಿಂದ ಅರ್ಜಿ ಸಲ್ಲಿಕೆ ಆರಂಭ; ಪರೀಕ್ಷೆ ಯಾವಾಗ, ಇಲ್ಲಿದೆ ವೇಳಾಪಟ್ಟಿ

2023ರ ಆಗಸ್ಟ್ ತಿಂಗಳಲ್ಲಿ ನಗರಸಭೆಯ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಜಿಲ್ಲಾಧಿಕಾರಿಗಳ ಸೂಚನೆಯಂತೆ, ಶೇ.100 ರಷ್ಟು ಪೂರ್ಣ ಪ್ರಮಾಣದ ತೆರಿಗೆ ಸಂಗ್ರಹಕ್ಕೆ ಒತ್ತು ನೀಡಿದ್ದು, ನಗರಸಭೆಯ ಎಲ್ಲಾ ತೆರಿಗೆ ವಸೂಲಿಗಾರರಿಗೆ ತಮ್ಮ ವ್ಯಾಪ್ತಿಯಲ್ಲಿ ಬಾಕಿ ಇರುವ ತೆರಿಗೆಯನ್ನು ಸಂಪೂರ್ಣವಾಗಿ ವಸೂಲಿ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಮಾತ್ರವಲ್ಲದೇ, ಪ್ರತೀ ತಿಂಗಳು ತೆರಿಗೆ ವಸೂಲಿ ಮಾಡಲು ಗುರಿ ನಿಗಧಿಪಡಿಸಿದ ಕಾರಣ ತೆರಿಗೆ ಸಂಗ್ರಹದಲ್ಲಿ ಗಣನೀಯ ಪ್ರಗತಿ ಸಾಧ್ಯವಾಗಿದೆ.

ನಗರಸಭೆಯ ತೆರಿಗೆ ವಸೂಲಿ ಉತ್ತಮಗೊಂಡರೂ ಸಹ, ಗುತ್ತಿಗೆದಾರರ ಹಳೆಯ ಬಾಕಿಯ ಮೊತ್ತ ಪಾವತಿಸಲು ಸಾಧ್ಯವಾಗಿರಲಿಲ್ಲ. ತೆರಿಗೆ ವಸೂಲಿ ಮೊತ್ತದಿಂದಲೇ ನಗರಸಭೆಯ ಅಭಿವೃಧ್ದಿ ಕಾರ್ಯಗಳು, ಸಿಬ್ಬಂದಿಯ ವೇತನ ಮತ್ತಿತರ ವೆಚ್ಚಗಳನ್ನು ಪಾವತಿಸಬೇಕಾದ್ದರಿಂದ, ತೆರಿಗೆ ಸಂಗ್ರಹದ ಮೊತ್ತದಲ್ಲಿ ನಗರಸಭೆಯ ಆಡಳಿತ ವೆಚ್ಚ ಪಾವತಿ ಮತ್ತು ಹಳೆಯ ಬಾಕಿ ಬಿಲ್ ಮೊತ್ತವನ್ನು ಪಾವತಿಸಲು ಶೇಕಡಾವಾರು ಪ್ರಮಾಣವನ್ನು ನಿರ್ಣಯಿಸಿ, ಗುತ್ತಿಗೆದಾರರ ಬಾಕಿ ಇರುವ ಮೊತ್ತವನ್ನು ಹಂತ ಹಂತವಾಗಿ ಪಾವತಿ ಮಾಡಲು ಯೋಜನೆ ರೂಪಿಸಿದ್ದು, ಅದರಂತೆ 2023-24 ರಲ್ಲಿ 27 ಮಂದಿ ಗುತ್ತಿಗೆದಾರರಿಗೆ 1.8 ಕೋಟಿ ಹಾಗೂ ಪ್ರಸ್ತುತ ಸಾಲಿನಲ್ಲಿ 40 ಗುತ್ತಿಗೆದಾರರಿಗೆ 1.47 ಕೋಟಿ ರೂ ಸೇರಿದಂತೆ ಇದುವರೆಗೆ 67 ಗುತ್ತಿಗೆದಾರರಿಗೆ 2.55 ಕೋಟಿ ರೂ ಗಳನ್ನು ಪಾವತಿಸಲಾಗಿದೆ.

ನಗರಸಭೆಯಲ್ಲಿ ನಿಗದಿತ ಪ್ರಮಾಣದಲ್ಲಿ ತೆರಿಗೆ ಸಂಗ್ರಹ ನಡೆಯದ ಕಾರಣ, ಅಭಿವೃದ್ದಿ ಚಟುವಟಿಕೆಗಳನ್ನು ಕೈಗೊಳ್ಳಲು ಅಡಚಣೆಯಾಗುತ್ತಿರುವ ಬಗ್ಗೆ ತಿಳಿದುಬಂದಿತ್ತು. ಈ ಕುರಿತಂತೆ ನಗರಸಭೆಯ ಸಭೆಯಲ್ಲಿ ಎಲ್ಲಾ ಬಿಲ್ ಕಲೆಕ್ಟರ್‌ಗಳಿಗೆ, ತೆರಿಗೆ ನೀಡದೇ ಇರುವವರಿಗೆ ನೋಟಿಸ್ ನೀಡಿ, ನಿಗಧಿತ ತೆರಿಗೆ ಸಂಗ್ರಹ ಮಾಡುವಂತೆ ನಿಗಧಿತ ಗುರಿ ನೀಡಲಾಗಿದೆ. ಇದರಿಂದಾಗಿ ತೆರಿಗೆ ಸಂಗ್ರಹದಲ್ಲಿ ಗಮನಾರ್ಹ ಹೆಚ್ಚಳವಾಗಿದ್ದು, ಈ ಹಿಂದೆ ಅಭಿವೃದ್ಧಿ ಕಾಮಗಾರಿಗಳನ್ನು ನಿರ್ವಹಿಸಿದ್ದರೂ ಸಹ, ಅಧಿಕಾರಿಗಳ ತಪ್ಪು ನಿರ್ಣಯಗಳಿಂದ ವೆಚ್ಚ ಪಾವತಿಯಾಗದೇ ತೊಂದರೆಗೊಳಗಾಗಿದ್ದ ಗುತ್ತಿಗೆದಾರರಿಗೆ ಹಂತ ಹಂತವಾಗಿ ಮೊತ್ತವನ್ನು ಪಾವತಿ ಮಾಡಲಾಗುತ್ತಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

ತೆರಿಗೆ ಸಂಗ್ರಹದಲ್ಲಿ ನಿರ್ಲಕ್ಷ್ಯ ತೋರಿರುವ ಸಿಬ್ಬಂದಿ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಕಾರವಾರ ನಗರಸಭೆ ಆಡಳಿತಾಧಿಕಾರಿಯಾಗಿರುವ, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಮಳೆ

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

Karnataka Rain : ರಾಜ್ಯಾದ್ಯಂತ ಮಳೆಯು ಚುರುಕುಗೊಂಡಿದ್ದು ಸಾಕಷ್ಟು ಅವಾಂತರವನ್ನು ಸೃಷ್ಟಿಸಿದೆ. ಮಂಗಳೂರಲ್ಲಿ ಭಾರಿ ಮಳೆಗೆ ರಾಜಕಾಲುವೆ ತುಂಬಿ ಹರಿದಿದ್ದು, ರಸ್ತೆ ಕಾಣದೆ ಆಟೋ ಚಾಲಕ ಕಾಲುವೆಗೆ ಉರುಳಿ ಮೃತಪಟ್ಟಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ಮನೆಯ ಚಾವಣಿ ಕುಸಿದು ಬಿದ್ದರೆ, ನಂಜನಗೂಡಲ್ಲಿ ಮನೆಗಳು ಜಲಾವೃತಗೊಂಡಿದೆ. ತುಮಕೂರಿನಲ್ಲಿ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿವೆ.

VISTARANEWS.COM


on

By

Karnataka Rain
Koo

ಮಂಗಳೂರು: ಮಂಗಳೂರು ನಗರದ ಕೊಟ್ಟಾರ ಅಬ್ಬಕ್ಕ ನಗರದಲ್ಲಿ ಭಾರಿ ಮಳೆಗೆ (Karnataka Rain) ರಾಜಕಾಲುವೆಗೆ ಆಟೋ ಉರುಳಿದ್ದು, ಚಾಲಕ ದಾರುಣವಾಗಿ ಮೃತಪಟ್ಟಿದ್ದಾರೆ. ಚಾಲಕ ದೀಪಕ್ (40) ದುರ್ಮರಣ ಹೊಂದಿದವರು. ಶುಕ್ರವಾರ ರಾತ್ರಿ ಸುರಿದ ಮಳೆಗೆ ಕೊಟ್ಟಾರದಲ್ಲಿ ರಾಜಕಾಲುವೆ ತುಂಬಿ ಹರಿಯುತ್ತಿತ್ತು. ಕಾಲುವೆಗೆ ತಡೆಗೋಡೆ ಇಲ್ಲದ ಕಾರಣ ನೀರು ರಸ್ತೆಗೆ ಬಂದಿತ್ತು. ರಾತ್ರಿ ವೇಳೆ ಅದೇ ರಸ್ತೆಯಲ್ಲಿ ಬಂದ ಚಾಲಕ ದೀಪಕ್‌ ಆಟೋ ಸಮೇತ ರಾಜಕಾಲುವೆ ಉರುಳಿ ಬಿದ್ದಿದ್ದಾರೆ. ರಸ್ತೆ ಹಾಗೂ ರಾಜಕಾಲುವೆಗೆ ಸಮಾನವಾಗಿ ನೀರು ಹರಿಯುತ್ತಿದ್ದ ಕಾರಣ ಈ ಅವಘಡ ಸಂಭವಿಸಿದೆ. ಮಂಗಳೂರು ಮಹಾನಗರ ಪಾಲಿಕೆ ನಿರ್ಲಕ್ಷ್ಯಕ್ಕೆ ಆಟೋ ಚಾಲಕ ದೀಪಕ್‌ ಬಲಿಯಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ರಾಜಕಾಲುವೆಗೆ ತಡೆಗೋಡೆ ನಿರ್ಮಿಸದೇ ಇರುವುದೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಮಳೆಗೆ ನೆಲಕ್ಕೆ ಬಿದ್ದ ಮನೆಯ ಚಾವಣಿ

ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಸಮೀಪದ ನರಗನಹಳ್ಳಿಯಲ್ಲಿ ರಾತ್ರಿ ಸುರಿದ ಮಳೆಗೆ ಏಕಾಏಕಿ ಮನೆ ಚಾವಣಿ ನೆಲಕ್ಕೆ ಬಿದ್ದಿತ್ತು. ಅದೃಷ್ಟವಶಾತ್ ತಾಯಿ-ಮಗು ಪ್ರಾಣಾಪಾಯದಿಂದ ಪಾರಾಗಿದೆ. ಗುಡುಗು ಸಹಿತ ಮಳೆಯ ರಭಸಕ್ಕೆ ಸೀಟು ಪುಡಿ ಪುಡಿಯಾಗಿದೆ. ತಾಯಿ-ಮಗು ಮಲಗಿದ್ದ ಪಕ್ಕದಲ್ಲೇ ಮನೆ ಮೇಲಿನ ಸೀಟು ಬಿದ್ದಿದೆ. ಆನಂದಮ್ಮ ಎಂಬುವವರಿಗೆ ಸೇರಿದ ಮನೆ ಕುಸಿದು ಬಿದ್ದಿದ್ದು, ರಾತ್ರಿಯಿಡೀ ಪಕ್ಕದ ಮನೆಯಲ್ಲಿ ವಾಸ ಮಾಡುವಂತಾಯಿತು. ಮನೆ ಕಳೆದುಕೊಂಡ ಕುಟುಂಬ ಕಂಗಲಾಗಿತ್ತು. ಇತ್ತ ಮನೆ ಕುಸಿದರೂ ಸ್ಥಳಕ್ಕೆ ಬಾರದ ಪಂಚಾಯಿತಿ ಸಿಬ್ಬಂದಿ ತಾಲೂಕು ಆಡಳಿತದ ವಿರುದ್ದ ಸ್ಥಳೀಯರು ಕಿಡಿಕಾರಿದರು.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮಳೆಯ ಅವಾಂತರಕ್ಕೆ 16 ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. ತೂಬಗೆರೆ ಹೋಬಳಿಯಲ್ಲಿ ಸಾಕಷ್ಟು ಹಾನಿಯಾಗಿದೆ. ಬುಡ ಸಮೇತ ಮರಗಳು ರಸ್ತೆಗೆ ಬಿದ್ದಿವೆ. ಅಮದಾಜು 80ಕ್ಕೂ ಹೆಚ್ಚು ಮರಗಳು ಧರಗೆ ಉರುಳಿವೆ. ತೂಬಗೆರೆ ಹೋಬಳಿಯಲ್ಲಿ ವಿದ್ಯುತ್ ಕಂಬ ಬಿದ್ದ ಕಾರಣ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ಬೆಸ್ಕಾಂ ಸಿಬ್ಬಂದಿ ಬೆಳಗ್ಗೆಯಿಂದಲೂ ಕಂಬಗಳನ್ನು ಸರಿಪಡಿಸುತ್ತಿದ್ದಾರೆ. ಮಳೆಯ ಅವಾಂತರಕ್ಕೆ ವಿದ್ಯುತ್ ಇಲ್ಲದೆ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಇಷ್ಟೆಲ್ಲಾ ಆದರೂ ಕೂಡ ತಾಲೂಕು ಆಡಳಿತ ಸ್ಪಂದಿಸುತ್ತಿಲ್ಲ. ತಹಸೀಲ್ದಾರ್, ಇಓ ಯಾರೂ ಕೂಡ ಭೇಟಿ ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.

ಕಾಫಿನಾಡು ಚಿಕ್ಕಮಗಳೂರಿನಲ್ಲಿ ವ್ಯಾಪಕ ಮಳೆ

ಚಿಕ್ಕಮಗಳೂರಿನ ತರೀಕೆರೆ ತಾಲೂಕಿನಲ್ಲಿ ಧಾರಾಕಾರ ಮಳೆಯಾಗಿದ್ದು, ಕಲ್ಲತ್ತಿಗರಿ ಜಲಪಾತ ಮೈದುಂಬಿ ಹರಿಯುತ್ತಿದೆ. ಮೊನ್ನೆವರೆಗೂ ಜಲಪಾತದಲ್ಲಿ ನೀರಿನ ಪ್ರಮಾಣ ಕಡಿಮೆ ಇತ್ತು. ರಾತ್ರಿ ಸುರಿದ ಒಂದೇ ಮಳೆಗೆ ಕಲ್ಲತ್ತಿಗರಿ ಜಲಪಾತ ಧುಮ್ಮಿಕ್ಕುತ್ತಿದೆ. ಕೆಮ್ಮಣ್ಣುಗುಂಡಿ ಗುಡ್ಡಗಾಡು ತಪ್ಪಲ್ಲಿನಲ್ಲಿ ಭಾರೀ ಮಳೆ ಹಿನ್ನೆಲೆ ಜಲಪಾತ ನೋಡಲು ಪ್ರವಾಸಿಗರ ದಂಡು ಬರುತ್ತಿದೆ.

ತರೀಕೆರೆ ತಾಲೂಕಿನ ತ್ಯಾಗದಬಾಗಿ ಗ್ರಾಮದಲ್ಲಿ ಇದ್ದಕ್ಕಿದ್ದಂತೆ ಹಳ್ಳ ಬಂದಿದ್ದರಿಂದ ಇಟಾಚಿ ಮುಳುಗಿದೆ. ತ್ಯಾಗದ ಬಾಗಿ ಗ್ರಾಮದಲ್ಲಿ ಸೇತುವೆ ಇಕ್ಕೆಲಗಳನ್ನು ಕ್ಲೀನ್ ಮಾಡುವಾಗ ಈ ಘಟನೆ ನಡೆದಿದೆ. ಕೆಮ್ಮಣ್ಣುಗುಂಡಿ-ಕಲ್ಲತ್ತಿಗರಿ ಭಾಗದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಇದ್ದಕ್ಕಿದ್ದಂತೆ ಹಳ್ಳದಲ್ಲಿ ನೀರು ಹೆಚ್ಚಾಗಿ ಇಟಾಚಿ ಮುಳುಗಿದೆ. ಕಾರ್ಮಿಕರಿದ್ದರು ಇಟಾಚಿ ಮೇಲೆ ತರಲು ಸಾಧ್ಯವಾಗಿಲ್ಲ. ಇಟಾಚಿ ಬಿಟ್ಡು ಮೇಲೆ ಬಂದು ಕಾರ್ಮಿಕರು ಜೀವ ಉಳಿಸಿಕೊಂಡಿದ್ದಾರೆ. ಮಳೆ ಕಡಿಮೆ ಆಗುವವರೆಗೂ ಹಳ್ಳದಲ್ಲೇ ಇಟಾಚಿ ಲಾಕ್ ಆಗಲಿದೆ.

ಇದನ್ನೂ ಓದಿ: Fake Intelligence Officer : ಜಾಸ್ತಿ `ಇಂಟೆಲಿಜೆಂಟ್‌’ ಆಗ್ಬೇಡಿ! ಊರವರ ಮುಂದೆ ಪೊಲೀಸ್‌ ಎಂದು ಬಿಲ್ಡಪ್‌ ಕೊಟ್ಟವ ಈಗ ಲಾಕಪ್‌ ಒಳಗೆ!

ಮಳೆಗೆ ಸೋರುತಿಹುದು ಕೆಎಸ್‌ಆರ್‌ಟಿಸಿ ಬಸ್ಸಿನ ಮಾಳಿಗೆ

ಕೊಡಗು ಜಿಲ್ಲೆಯಲ್ಲೂ ಮಳೆಯಾಗುತ್ತಿದ್ದು, ಕೆಎಸ್‌ಆರ್‌ಟಿಸಿ ಬಸ್ಸಿನ ಮಾಳಿಗೆ ಸೋರುತ್ತಿದೆ. ಮಳೆಯಿಂದಾಗಿ ಬಸ್‌‌ನೊಳಗೆ ಇರುವ ಪ್ರಯಾಣಿಕರ ಮೇಲೆ ನೀರು ಬೀಳುವ ವಿಡಿಯೊ ವೈರಲ್‌ ಆಗಿದೆ. ಮೈಸೂರಿನಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಬಸ್ ಇದಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು, ಯಾವ ಡಿಪೋ ಬಸ್ ಎಂಬ ಬಗ್ಗೆ ಮಾಹಿತಿ‌ ಲಭ್ಯವಿಲ್ಲ.

ಧಾರಾಕಾರ ಮಳೆಗೆ ಜಲಾವೃತಗೊಂಡು ನಂಜನಗೂಡು ಮನೆಗಳು

ಮೈಸೂರು ಭಾಗದಲ್ಲಿ ಮಳೆ ಅಬ್ಬರ ಜೋರಾಗಿದ್ದು, ನಂಜನಗೂಡಿನಲ್ಲಿ ಮನೆಗಳು ಜಲಾವೃತಗೊಂಡಿವೆ. ಹಲವು ಮನೆಗಳಿಗೆ ಚರಂಡಿ ನೀರು ನುಗ್ಗಿದ್ದು, ದಿನಸಿ, ಗೃಹೋಪಯೋಗಿ ವಸ್ತುಗಳು ನಾಶವಾಗಿವೆ. ನಂಜನಗೂಡಿನ ಅಶೋಕಪುರಂ ಬಡಾವಣೆಯಲ್ಲಿ ಘಟನೆ ನಡೆದಿದೆ. ಬಡಾವಣೆಯಲ್ಲಿ ಚರಂಡಿ ವ್ಯವಸ್ಥೆ ಸರಿಯಿಲ್ಲದ ಕಾರಣ ಮನೆಗಳಿಗೆ ಕಲುಷಿತ ನೀರು ನುಗ್ಗಿದೆ. ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ತುಮಕೂರಿನಲ್ಲಿ ಧರೆಗುರುಳಿದ ಮರಗಳು, ವಿದ್ಯುತ್‌ ಕಂಬಗಳು

ಗಾಳಿ ಮಳೆ ಅಬ್ಬರಕ್ಕೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ನಡೆದಿದೆ. ಮಳೆ ಹಿನ್ನೆಲೆಯಲ್ಲಿ ವಿದ್ಯುತ್ ಕಡಿತಗೊಳಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಐದಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. ಇನ್ನೂ ರಸ್ತೆಗೆ ಮರ ಬಿದ್ದು ಕೆಲ ಕಾಲ ಸಂಚಾರಕ್ಕೆ ತೊಂದರೆಯಾಗಿತ್ತು. ಕೊರಟಗೆರೆ ಮುಖ್ಯರಸ್ತೆಗೆ ಮರ ಬಿದ್ದ ಹಿನ್ನೆಲೆ ಸಂಚಾರಕ್ಕೆ ತೊಂದರೆಯಾಗಿದ್ದು, ಬಳಿಕ ಜೆಸಿಬಿ ಸಹಾಯದಿಂದ ಮರವನ್ನು ತೆರವುಗೊಳಿಸಲಾಯಿತು.

ಯಾದಗಿರಿಯಲ್ಲಿ ಸಿಡಿಲು ಬಡಿದು ಹೊತ್ತಿ ಉರಿದ ಮನೆ

ತಡರಾತ್ರಿ ಬಿರುಗಾಳಿ ಸಹಿತ ಮಳೆ ಆಗಿದ್ದು, ಸಿಡಿಲು ಬಡಿದು ಮನೆಯೊಂದು ಹೊತ್ತಿ ಉರಿದಿದೆ. ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಸಿಂಗನಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪತ್ರಾಸ್ ಮನೆಗೆ ಸಿಡಿಲು ಹೊಡೆದು ಮನೆಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದರು. ಅಂದಾಜು ಐದು ಲಕ್ಷ ಮೌಲ್ಯದ ವಸ್ತುಗಳು ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಆಗಿಲ್ಲ, ಗೋಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗಾಳಿ ಮಳೆಗೆ ಎರಡು ದಿನದಿಂದ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕರೆಂಟ್ ಸಮಸ್ಯೆಯಿಂದ ನೀರಿಗಾಗಿ ಜನ ಪರದಾಡುತ್ತಿದ್ದಾರೆ. ಯಾದಗಿರಿಯ ಹೊಸಳ್ಳಿ, ಹೊಸಳ್ಳಿ ತಾಂಡಾ ಹಾಗೂ ತಡಿಬಿಡಿ ಸೇರಿದಂತೆ ಹಲವು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಕಳೆದ ಎರಡು ದಿನಗಳಿಂದ ಕರೆಂಟ್ ಸಮಸ್ಯೆಯಿಂದ ಬೋರ್‌ವೆಲ್‌ಗಳಲ್ಲಿ ನೀರು ಬಂದಿಲ್ಲ. ಇದರಿಂದಾಗಿ ಗ್ರಾಮದ ಸಮೀಪದ ಪೆಟ್ರೋಲ್ ಬಂಕ್ ಬಳಿಯ ಬೋರ್‌ವೆಲ್‌ನಿಂದ ನೀರನ್ನು ತಂದು ಬಳಸುತ್ತಿದ್ದಾರೆ. ಸರತಿ ಸಾಲಿನಲ್ಲಿ ಬಿಂದಿಗೆಯಿಟ್ಟು ನೀರಿಗಾಗಿ ಕಾದು ಕೂರುವ ಪರಿಸ್ಥಿತಿ ಎದುರಾಗಿದೆ.

ಇದನ್ನೂ ಓದಿ: Murder case : ದನ ಕಟ್ಟುವ ವಿಚಾರಕ್ಕೆ ಕಿರಿಕ್‌; ಕಾಲಿಂದ ಒದ್ದು ಕುಡುಗೋಲಿನಿಂದ ಹೊಡೆದು ದೊಡ್ಡಮ್ಮನನ್ನೇ ಕೊಂದ ದುಷ್ಟ

ಮಂಡ್ಯದಲ್ಲಿ ಧಾರಾಕಾರ ಮಳೆ ಕರೆಂಟ್‌ ಕಟ್‌

ಮಂಡ್ಯ ಜಿಲ್ಲೆ ಕೆಆರ್‌ಪೇಟೆ ತಾಲೂಕಿನ ಹೆಗ್ಗಡಹಳ್ಳಿಯಲ್ಲಿ ಧಾರಾಕಾರ ಮಳೆಯಿಂದ ಅವಾಂತರವೇ ಸೃಷ್ಟಿಯಾಗಿದೆ. ವರುಣನ ಅಬ್ಬರಕ್ಕೆ ವಿದ್ಯುತ್ ತಂತಿ ಹಾಗೂ ಮರಗಳು ಧರೆಗುರುಳಿವೆ. ಹೆಗ್ಗಡಹಳ್ಳಿ ಗ್ರಾಮದಲ್ಲಿ 5ಕ್ಕೂ ಹೆಚ್ಚು ಮನೆಗಳಲ್ಲಿ ಚಾವಣಿ ಹಾರಿಹೋಗಿವೆ. ಬಿರುಗಾಳಿಗೆ ಮನೆಗಳ ಮೇಲೆ ವಿದ್ಯುತ್ ಕಂಬ ಉರುಳಿದ್ದು, ಬೇರು ಸಮೇತ ಮರ ಧರೆಗುರುಳಿದ ಪರಿಣಾಮ ಗ್ರಾಮದ ಸಂಚಾರ ಸಂಪರ್ಕ ಕಡಿತಗೊಂಡಿದೆ. ವಿದ್ಯುತ್ ಕಂಬಗಳು ಮುರಿದು ಬಿದ್ದ ಕಾರಣ ವಿದ್ಯುತ್ ಇಲ್ಲದೆ ಜನರು ಕಂಗಾಲಾಗಿದ್ದಾರೆ. ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡುವಂತೆ ಗ್ರಾಮಸ್ಥರ ಮನವಿ ಮಾಡಿದ್ದಾರೆ.

ಕೋಡಿ ಬಿದ್ದ ಮಲ್ಲಾಪುರ ಕೆರೆ

ಚಿತ್ರದುರ್ಗದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಮಲ್ಲಾಪುರ ಕೆರೆ ಕೋಡಿ ಬಿದ್ದಿದೆ. ಕೋಡಿ ಬಿದ್ದ ಪರಿಣಾಮ ಕೆಲ ಮನೆಗಳಿಗೆ ನೀರು ನುಗ್ಗಿದೆ. ನಗರಸಭೆ ಅಧಿಕಾರಿಗಳು ಕೆರೆಯಲ್ಲಿದ್ದ ಕಸ ತೆಗೆಯುತ್ತಿದ್ದಾರೆ. ಕಸದಿಂದ ಸೇತುವೆ ಕೆಳಗೆ ಕೆರೆ ನೀರು ನಿಂತಿದೆ. ಹಂತ ಹಂತವಾಗಿ ಕಸ ತೆರವು ಮಾಡುತ್ತಿದ್ದರೆ ಇತ್ತ ಕೆರೆ ನೀರಿನಲ್ಲಿ ಮೀನು ಹಿಡಿಯಲು ಸ್ಥಳೀಯರು ಮುಂದಾದರು.

ಹಾಸನದಲ್ಲಿ ಮಳೆಗೆ ಬೆಳೆ ಹಾನಿ

ಹಾಸನ ಜಿಲ್ಲೆಯಲ್ಲಿ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಬೇಲೂರು ತಾಲೂಕಿನ ಹಳೆಬೀಡು ಹೋಬಳಿಯಲ್ಲಿ ಗಾಳಿ ಮಳೆಗೆ ಬೆಳೆಯು ನಾಶವಾಗಿದೆ. ಬಾಳೆ, ಅಡಿಕೆ, ತೆಂಗು ಬೆಳೆ ‌ಕಳೆದುಕೊಂಡು ರೈತರು ಕಂಗಾಲಾಗಿದ್ದಾರೆ. ಕ್ಯಾತಲಾಪುರ ಗ್ರಾಮದಲ್ಲಿ ಬಾಳೆ, ಅಡಿಕೆ, ತೆಂಗು ಬೆಳೆ ಧರೆಗುರುಳಿದೆ. ಫಸಲಿಗೆ ಬಂದಿದ್ದ ತೆಂಗು, ಬಾಳೆ, ಅಡಿಕೆ ಬೆಳೆ ಸಂಪೂರ್ಣ ನಾಶವಾಗಿದ್ದು, ಸೂಕ್ತ ಪರಿಹಾರಕ್ಕಾಗಿ ಗ್ರಾಮದ ರೈತ ಶಿವಮೂರ್ತಿ ಒತ್ತಾಯಿಸಿದ್ದಾರೆ.

ಇತ್ತ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೇಬೀಡು ಸಮೀಪದ ಸೂಪ್ಪನಹಳ್ಳಿ ಗ್ರಾಮದಲ್ಲಿ ಗಾಳಿ- ಮಳೆಗೆ ವಾಸದ ಮನೆಯ ಚಾವಣಿ ಕುಸಿದಿದೆ. ಸೂಪ್ಪನಹಳ್ಳಿ ಗ್ರಾಮದ ರುದ್ರೇಶ್ ಎಂಬುವವರಿಗೆ ಸೇರಿದ ಮನೆಯು ಭಾರಿ ಗಾಳಿಗೆ ಮನೆಯ ಚಾವಣಿ ಶೀಟ್‌ ಹಾರಿ ಹೋಗಿದೆ. 200 ಮೀಟರ್ ದೂರಕ್ಕೆ ಹಾರಿ ಬಿದ್ದಿದ್ದು, ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳೆಲ್ಲವೂ ನೀರುಪಾಲಾಗಿದೆ. ಸೂಕ್ತ ಪರಿಹಾರಕ್ಕೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Traffic violation : ನಗೆಪಾಟಲಾದ ಟ್ರಾಫಿಕ್‌ ಪೊಲೀಸರು; ಹೆಲ್ಮೆಟ್ ಹಾಕಿಲ್ಲವೆಂದು ಟಿಪ್ಪರ್ ಲಾರಿ ಚಾಲಕನಿಗೆ 500 ರೂ. ದಂಡ

Traffic violation : ಬೈಕ್‌ ಓಡಿಸುವಾಗ ಸವಾರರು ಹೆಲ್ಮೆಟ್‌ ಹಾಕಿಲ್ಲವೆಂದರೆ ದಂಡ ವಿಧಿಸುವುದು ಮಾಮೂಲಿ. ಆದರೆ ಹೊನ್ನಾವರದಲ್ಲಿ ಟಿಪ್ಪರ್‌ ಲಾರಿ ಚಾಲಕ ಹೆಲ್ಮೆಟ್‌ ಧರಿಸದೇ ಇರುವುದಕ್ಕೆ ದಂಡ ತೆತ್ತಿದ್ದಾನೆ. ಟ್ರಾಫಿಕ್‌ ಪೊಲೀಸರ ಈ ಎಡವಟ್ಟು ಈಗ ನಗೆಪಾಟಲಿಗೆ ಕಾರಣವಾಗಿದೆ. ಟಿಪ್ಪರ್‌ ಲಾರಿ ಚಾಲಕನಿಗೆ ನೀಡಿರುವ ರಶೀದಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

VISTARANEWS.COM


on

By

traffic violation
Koo

ಕಾರವಾರ: ಟಿಪ್ಪರ್ ಲಾರಿ ಚಾಲಕ ಹೆಲ್ಮೆಟ್ ಧರಿಸಿಲ್ಲವೆಂದು ಟ್ರಾಫಿಕ್‌ ಪೊಲೀಸರು ದಂಡ ಹಾಕಿ (Traffic violation) ರಶೀದಿ ನೀಡಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಲ್ಲಿ ಘಟನೆ ನಡೆದಿದೆ.

ಹೊನ್ನಾವರದ ಉಸುಕು ಸಾಗಾಟದ ಟಿಪ್ಪರ್ ಚಾಲಕನಿಗೆ ಹೆಲ್ಮೆಟ್ ಧರಿಸಿಲ್ಲವೆಂದು ದಂಡ ವಿಧಿಸಿದ್ದಾರೆ. ಹೊನ್ನಾವರದ ಉಪ್ಪೋಣಿಯ ವಿನುತಾ ವಿನೋದ ನಾಯ್ಕ ಮಾಲೀಕತ್ವದ ಟಿಪ್ಪರ್ ಲಾರಿಯನ್ನು ಚಾಲಕ ಚಂದ್ರಕಾಂತ ಎಂಬಾತ ಚಲಾಯಿಸುತ್ತಿದ್ದ.

ಚಂದ್ರಕಾಂತ ಸಮವಸ್ತ್ರ ಧರಿಸದೇ ವಾಹನ ಚಲಾಯಿಸಿದ್ದನ್ನು ಕಂಡು ಪೊಲೀಸರು ವಾಹನವನ್ನು ತಡೆದಿದ್ದರು. ಈ ವೇಳೆ ಹೆಲ್ಮೆಟ್ ಧರಿಸದ ಕಾರಣಕ್ಕೆ ರಶೀದಿ ನೀಡಿ 500 ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಇತ್ತ ದಂಡದ ರಶೀದಿ ಕಂಡು ಟಿಪ್ಪರ್ ಚಾಲಕ ಅವಾಕ್ಕಾಗಿದ್ದಾರೆ.

ಇನ್ನು ಟಿಪ್ಪರ್ ಲಾರಿ ಚಾಲಕನ ಹೆಲ್ಮೆಟ್ ದಂಡದ ರಶೀದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಂದಹಾಗೇ ದಂಡ ಹಾಕುವಾಗ ಸಮವಸ್ತ್ರದ ಬದಲು ಹೆಲ್ಮೆಟ್ ಆಯ್ಕೆಯಾಗಿರುವುದು ಇದಕ್ಕೆಲ್ಲ ಕಾರಣವೆಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ದಬಾಂಗ್‌ ಸ್ಟೈಲ್‌ನಲ್ಲಿ ಆಸ್ಪತ್ರೆಯೊಳಗೆ ನುಗ್ಗಿದ ಪೊಲೀಸ್‌ ಜೀಪ್‌! ವಿಡಿಯೋ ವೈರಲ್‌

ವಿವಾಹ ಮಂಟಪದಲ್ಲಿ ನಾಗವಲ್ಲಿ ಅವತಾರ ತಾಳಿದ ವಧು; ವರ ಈಗ ಕೋಮಾದಲ್ಲಿದ್ದಾನೆ ಎಂದ ನೆಟ್ಟಿಗರು

ಬೆಂಗಳೂರು: ಮದುವೆ ಎನ್ನುವುದು ಸ್ವರ್ಗದಲ್ಲೇ ನಿಶ್ಚಯವಾಗಿರುತ್ತದೆ ಎನ್ನುವ ಮಾತಿದೆ. ಜತೆಗೆ ಭಾರತೀಯ ಸಂಸ್ಕೃತಿಯಲ್ಲಿ ಮದುವೆಗೆ ಮಹತ್ವದ ಸ್ಥಾನವಿದೆ. ಶಾಸ್ತ್ರೋಕ್ತವಾಗಿ ವಧು-ವರರು ವೈವಾಹಿಕ ಜೀವನಕ್ಕೆ ಕಾಲಿಡುತ್ತಾರೆ. ಈ ಅಪರೂಪದ ಘಳಿಗೆಯನ್ನು ಸ್ಮರಣೀಯವಾಗಿಸಲು ಮೊದಲೇ ಸಾಕಷ್ಟು ಸಿದ್ಧತೆ ನಡೆಸಲಾಗುತ್ತದೆ. ಆದರೆ ಕೆಲವೊಮ್ಮೆ ಮದುವೆ ಮನೆಯಲ್ಲಿ ನಡೆಯುವ ಎಡವಟ್ಟುಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿ ವೈರಲ್‌ ಆಗುತ್ತವೆ. ಸದ್ಯ ಅಂತಹದ್ದೇ ವಿಡಿಯೊವೊಂದು ಇಂಟರ್‌ನೆಟ್‌ನಲ್ಲಿ ಸದ್ದು ಮಾಡುತ್ತಿದೆ (Viral Video).

ಅದ್ಧೂರಿ ಮದುವೆಯೊಂದನ್ನು ಆಯೋಜಿಸಲಾಗಿತ್ತು. ಎಲ್ಲವೂ ಅಂದುಕೊಂಡಂತೆ ನಡೆಯುತ್ತಿತ್ತು. ಆದರೆ ಇದ್ದಕ್ಕಿದ್ದಂತೆ ವಧು ವಿಚಿತ್ರವಾಗಿ ಆಡಲು ಶುರು ಮಾಡುತ್ತಾಳೆ. ಅದುವರೆಗೆ ಸಂತೋಷದಿಂದ ಕೂಡಿದ್ದ ಮದುವೆ ಹಾಲ್‌ ಗೊಂದಲದ ಗೂಡಾಗುತ್ತದೆ. ಈ ವಿಡಿಯೊದ ಮೂಲ ಎಲ್ಲಿ ಎನ್ನುವುದು ಪತ್ತೆಯಾಗಿಲ್ಲ. ಸದ್ಯ ವೈರಲ್‌ ಆಗಿರುವ ಈ ವಿಡಿಯೊವನ್ನು ಈಗಾಗಲೇ ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ.

ವಿಡಿಯೊದಲ್ಲಿ ಏನಿದೆ?

ಅ‍ದ್ಧೂರಿ ವಿವಾಹ ಮಂಟಪ. ಬಲ್ಪ್‌, ಹೂಗಳಿಂದ ಅಲಂಕರಿಸಿರುವ ಈ ಮಂಟಪದ ಆಸನದಲ್ಲಿ ಚೆನ್ನಾಗಿ ಮೇಕಪ್‌ ಮಾಡಿಕೊಂಡ ವಧು ಕೂತಿರುತ್ತಾಳೆ. ಆಕೆಯ ಎದುರು ವರ ನಿಂತಿದ್ದರೆ ಸುತ್ತ ನೆಂಟರಿಷ್ಟರು ನೆರೆದಿದ್ದಾರೆ. ಇದ್ದಕ್ಕಿದ್ದಂತೆ ವದು ಮೈಮೇಲೆ ದೆವ್ವ ಬಂದಂತೆ ಆಡಲು ಶುರು ಮಾಡುತ್ತಾಳೆ. ಕಣ್ಣನ್ನು ವಿಚಿತ್ರವಾಗಿ ತಿರುಗಿಸಿ ಅಕ್ಷರಶಃ ʼಆಪ್ತಮಿತ್ರʼ ಸಿನಿಮಾದಲ್ಲಿ ಬರುವ ನಾಗವಲ್ಲಿ ಅವತಾರ ತಾಳುತ್ತಾಳೆ. ಕೂದಲನ್ನು ಬಿಚ್ಚಿ ಹಾಕಿ ದೆವ್ವ ಮೈಮೇಲೆ ಬಂದವರು ಆಡುತ್ತಾರೆ ಎನ್ನುತ್ತಾರ ಹಾಗೆ ವರ್ತಿಸುತ್ತಾಳೆ. ಜತೆಗೆ ಜೋರಾಗಿ ನಗುತ್ತಾಳೆ. ಇದರಿಂದ ಬೆಚ್ಚಿಬೀಳುವ ವರ ಹಾರಿ ಬೀಳುತ್ತಾನೆ. ಸುತ್ತಲಿದ್ದವರು ಭಯ, ಗೊಂದಲದಲ್ಲಿ ಏನು ಮಾಡಬೇಕೆಂದು ತೋಚದೆ ದಿಗ್ಭ್ರಾಂತರಾಗಿ ನಿಲ್ಲುತ್ತಾರೆ. ಆಗ ಆಕೆಯ ಸಂಬಂಧಿಕರಿಬ್ಬರು ಧೈರ್ಯದಿಂದ ಮುಂದೆ ಬಂದು ಆಕೆಯನ್ನು ಹಿಡಿದುಕೊಳ್ಳುತ್ತಾರೆ. ಇವಿಷ್ಟು ವಿಡಿಯೊದಲ್ಲಿ ಕಂಡು ಬಂದಿದೆ.

ನೆಟ್ಟಿಗರು ಏನಂದ್ರು?

ಕೇವಲ 17 ಸೆಕೆಂಡ್‌ಗಳ ಈ ವಿಡಿಯೊದ ಬಗ್ಗೆಯೇ ಚರ್ಚೆ ಆರಂಭವಾಗಿದೆ. ಹಲವರು ವಿಡಿಯೊ ನೋಡಿ ಅಲ್ಲಿದ್ದವರಂತೆ ಶಾಕ್‌ಗೆ ಒಳಗಾಗಿದ್ದಾರೆ. ಪಾಪದ ವರ ಇದನ್ನು ನೋಡಿ ಕೋಮಾಕ್ಕೆ ಜಾರಿರಬೇಕು ಎನ್ನುವ ಕ್ಯಾಪ್ಶನ್‌ ನೀಡಿ ವಿಡಿಯೊ ಹಂಚಿಕೊಳ್ಳಲಾಗಿದೆ. ಕೆಲವರು ಇದನ್ನು ಪೂರ್ವ ನಿಯೋಜಿತ ಎಂದು ಕರೆದಿದ್ದಾರೆ. ಹೆಚ್ಚು ವ್ಯೂವ್ಸ್‌ ಪಡೆದುಕೊಳ್ಳಲು ಬೇಕಂತಲೇ ನಾಟಕ ಮಾಡಿದ್ದಾರೆ ಎಂದು ಹೇಳಿದ್ದಾರೆ. ವಿಡಿಯೊ ನೋಡಿದ ಕೆಲವರು ನಾಗವಲ್ಲಿ ಪಾತ್ರವನ್ನು ನೆಪಿಸಿಕೊಂಡಿದ್ದಾರೆ. ಇನ್ನು ಕೆಲವರು ಇದು ನಿಜವೆ? ಎಲ್ಲಿ ನಡೆದಿರುವುದು? ಮುಂತಾಗಿ ಪ್ರಶ್ನಿಸಿದ್ದಾರೆ.

ಇನ್ನೊಂದು ವಿಡಿಯೊ

ಇದೇ ರೀತಿಯ ಇನ್ನೊಂದು ಘಟನೆಯ ವಿಡಿಯೊ ಕೂಡ ಇದೀಗ ಸದ್ದು ಮಾಡುತ್ತಿದೆ. ಇದರಲ್ಲಿ ಈ ವಧು-ವರರಿಬ್ಬರು ವೇದಿಕೆ ಮೇಲೆ ಪರಸ್ಪರ ಹೊಡೆದಾಡಿಕೊಳ್ಳುತ್ತಿರುವುದು ಕಂಡು ಬಂದಿದೆ. ವರ ಚಪ್ಪಲಿ ಕೈಯಲ್ಲಿ ಹಿಡಿದು ಹಲ್ಲೆಗೆ ಮುಂದಾದರೆ ತಾನು ಯಾವುದರಲ್ಲಿಯೂ ಕಡಿಮೆ ಇಲ್ಲ ಎನ್ನುವಂತೆ ವಧು ಕೂಡ ಪ್ರತಿ ದಾಳಿ ನಡೆಸುತ್ತಾಳೆ. ಪಕ್ಕದಲ್ಲಿದ್ದವರು ತಡೆಯಲು ಪ್ರಯತ್ನಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
childrens summer camp closing ceremony at yallapur
ಉತ್ತರ ಕನ್ನಡ27 mins ago

Uttara Kannada News: ಭಾರತದ ಭವಿಷ್ಯ ಸಣ್ಣ ಸಣ್ಣ ಊರುಗಳಲ್ಲಿದೆ: ಹರಿಪ್ರಕಾಶ್‌ ಕೋಣೆಮನೆ

Hardik Pandya
ಪ್ರಮುಖ ಸುದ್ದಿ30 mins ago

Hardik Pandya : ಮೊದಲ ಲವ್​ ಬ್ರೇಕ್​ಅಪ್​ ಮಾಡಿಕೊಂಡಿದ್ದ ಪಾಂಡ್ಯ; ಇಲ್ಲಿದೆ ಆರಂಭದ ಪ್ರೇಮ ಕಹಾನಿ!

Siddaramaiah
ಕರ್ನಾಟಕ38 mins ago

Siddaramaiah: ನೀವು 2 ಸಾವಿರ ಕೊಟ್ಟಿದ್ದಕ್ಕೆ ದೇವರ ದರ್ಶನ; ಧರ್ಮಸ್ಥಳದಲ್ಲಿ ಸಿದ್ದರಾಮಯ್ಯಗೆ ಸ್ತ್ರೀಯರ ಮೆಚ್ಚುಗೆ

Shikhar Dhawan
ಪ್ರಮುಖ ಸುದ್ದಿ57 mins ago

Shikhar Dhawan : ಶಿಖರ್ ಧವನ್ ಮಿಥಾಲಿ ರಾಜ್ ಮದುವೆ? ಬಗ್ಗೆ ಮೌನ ಮುರಿದ ಭಾರತದ ಸ್ಟಾರ್

Union Minister Pralhad Joshi statement about Prajwal revanna case
ಕರ್ನಾಟಕ1 hour ago

Pralhad Joshi: ಸಿಎಂ ಪತ್ರ ಬರೆದು ರಾಜಕಾರಣ ಮಾಡಿದರೆ ಪ್ರಜ್ವಲ್ ಪಾಸ್‌ಪೋರ್ಟ್ ರದ್ದಾಗಲ್ಲ: ಪ್ರಲ್ಹಾದ್‌ ಜೋಶಿ

opposition of the girl friend family to the marriage Suicide of a offended lover
ಕ್ರೈಂ1 hour ago

Self Harming: ಮದುವೆಗೆ ಪ್ರೇಯಸಿ ಕುಟುಂಬಸ್ಥರ ವಿರೋಧ; ನೊಂದ ಪ್ರಿಯಕರ ಆತ್ಮಹತ್ಯೆ

International Suryamitra Annual Award Ceremony on 27th May
ಕರ್ನಾಟಕ1 hour ago

Selco India: ಬೆಂಗಳೂರಿನಲ್ಲಿ ಮೇ 27ರಂದು ಅಂತಾರಾಷ್ಟ್ರೀಯ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ

Engineers suspended
ಕರ್ನಾಟಕ1 hour ago

Engineers Suspended: ಸರ್ಕಾರಿ ಐಬಿಯಲ್ಲಿ ಕುಡಿದು ಮಜಾ ಮಾಡಿದ್ದ ಐವರು ಜಿಪಂ ಎಂಜಿನಿಯರ್‌ಗಳ ಅಮಾನತು

Lok Sabha Election
ದೇಶ2 hours ago

Lok Sabha Election: 6ನೇ ಹಂತದಲ್ಲಿ 59% ಮತದಾನ ; ಬಂಗಾಳದಲ್ಲಿ ವೋಟಿಂಗ್‌ ಹೆಚ್ಚು, ಹಿಂಸೆಯ ಕಿಚ್ಚು

Lockup Death
ಕರ್ನಾಟಕ2 hours ago

Lockup Death: ಚನ್ನಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ; 10 ಮಂದಿ ವಶಕ್ಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ7 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌