Food Poisoning: ಚಿತ್ರಾನ್ನ ಸೇವಿಸಿದ 9 ವಿದ್ಯಾರ್ಥಿಗಳಿಗೆ ವಾಂತಿ, ಭೇದಿ; ಅಸ್ವಸ್ಥಗೊಂಡವರು ಆಸ್ಪತ್ರೆಗೆ ದಾಖಲು - Vistara News

ಕರ್ನಾಟಕ

Food Poisoning: ಚಿತ್ರಾನ್ನ ಸೇವಿಸಿದ 9 ವಿದ್ಯಾರ್ಥಿಗಳಿಗೆ ವಾಂತಿ, ಭೇದಿ; ಅಸ್ವಸ್ಥಗೊಂಡವರು ಆಸ್ಪತ್ರೆಗೆ ದಾಖಲು

Food Poisoning: ಹಾಸ್ಟೆಲ್‌ನಲ್ಲಿ ಚಿತ್ರಾನ್ನ ಸೇವಿಸಿದ್ದ 9 ವಿದ್ಯಾರ್ಥಿಗಳಿಗೆ ಫುಡ್‌ ಪಾಯಿಸನ್‌ ಆಗಿದ್ದು, ಹೊಟ್ಟೆನೋವು ಹಾಗೂ ವಾಂತಿ-ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡವರನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

VISTARANEWS.COM


on

ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲಾರ: ಇಲ್ಲಿನ ದರ್ಗಾ ಮೊಹಲ್ಲಾ ಮೌಲನಾ ಆಜಾದ್‌ ವಸತಿ ನಿಲಯದಲ್ಲಿ ಮಧ್ಯಾಹ್ನದ ಊಟ ಸೇವಿಸಿದ ಮಕ್ಕಳು (Food Poisoning) ಅಸ್ವಸ್ಥಗೊಂಡಿದ್ದಾರೆ. ವಸತಿ ನಿಲಯದಲ್ಲಿ ಮಧ್ಯಾಹ್ನದ ಭೋಜನಕ್ಕೆ ಚಿತ್ರಾನ್ನವನ್ನು ಮಾಡಲಾಗಿತ್ತು. ಇದನ್ನು ಸೇವಿಸಿರುವ 9 ಮಕ್ಕಳಿಗೆ ವಾಂತಿ, ಭೇದಿಯಾಗಿದೆ.

1Oನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಮಧ್ಯಾಹ್ನ ಊಟ ಮಾಡುತ್ತಿದ್ದಂತೆ ಹೊಟ್ಟೆ ನೋವು ಆರಂಭವಾಗಿ, ಬಹಳವೇ ಸುಸ್ತಾಗಿದ್ದಾರೆ. ಬಳಿಕ ಒಬ್ಬೊಬ್ಬರಿಗೇ ವಾಂತಿ-ಭೇದಿ ಶುರುವಾಗಿದೆ. ಅಸ್ವಸ್ಥಗೊಂಡವರನ್ನು ಕೂಡಲೇ ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Murder Case: ಕ್ರೀಡಾಂಗಣದದಲ್ಲಿ ಕಾರು ನಿಲ್ಲಿಸಿದ್ದನ್ನು ಪ್ರಶ್ನಿಸಿದ್ದೇ ತಪ್ಪಾಯ್ತಾ?; ಯುವಕರಿಬ್ಬರಿಗೆ ಚಾಕು ಇರಿದು ಪರಾರಿ

ಸಿಬ್ಬಂದಿ ಮೊದಲು ಮಾಡಿದ್ದ ಚಿತ್ರಾನ್ನ ಖಾಲಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಚಿತ್ರಾನ್ನವನ್ನು ಮಾಡಲಾಗಿತ್ತು. ಇದನ್ನು 9 ವಿದ್ಯಾರ್ಥಿಗಳಿಗೆ ಬಡಿಸಲಾಗಿತ್ತು. ಆದರೆ, ಫುಡ್‌ ಪಾಯಿಸನ್‌ ಆಗಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Drowned In water : ರಭಸವಾಗಿ ಹರಿಯುತ್ತಿದ್ದ ನೀರಲ್ಲಿ ಈಜಲು ಹೋಗಿ ಕೊಚ್ಚಿ ಹೋದ ಮಾಜಿ ಸೈನಿಕ

Drowned In water ; ಮೊನ್ನೆ ಮೊನ್ನೆಯಷ್ಟೇ ಲೊನಾವನಾದಲ್ಲಿ ಐದು ಮಂದಿ ಕೊಚ್ಚಿ ಹೋಗಿದ್ದರು. ಈ ಘಟನೆ ಮಾಸುವ ಮುನ್ನವೇ ತಮ್ಹಿನಿ ಘಾಟ್‌ನಲ್ಲಿ ರಭಸವಾಗಿ ಹರಿಯುತ್ತಿದ್ದ ನೀರಲ್ಲಿ ಈಜಲು ಹೋಗಿ ಮಾಜಿ ಸೈನಿಕ ಕೊಚ್ಚಿ ಹೋಗಿದ್ದಾರೆ.

VISTARANEWS.COM


on

By

Drowned in water
Koo

ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ಪದೆಪದೇ ಅವಘಡಗಳು ಮರುಕಳಿಸುತ್ತಿವೆ. ತುಂಬಿ ಹರಿಯುವ ಹಳ್ಳಕ್ಕೆ ಹಾರಿದ ವ್ಯಕ್ತಿ ಶವವಾಗಿದ್ದಾರೆ. ಮಹಾರಾಷ್ಟ್ರದ ತಮ್ಹಿನಿ ಘಾಟ್‌ನಲ್ಲಿ ಈ ದುರ್ಘಟನೆ (Drowned In water ) ನಡೆದಿದೆ.

ರಭಸವಾಗಿ ಹರಿಯುತ್ತಿದ್ದ ನೀರಲ್ಲಿ ಈಜಲು ಹೋಗಿ ಮಾಜಿ ಸೈನಿಕರೊಬ್ಬರು ಕೊಚ್ಚಿ ಹೋಗಿದ್ದಾರೆ. ಈ ದೃಶ್ಯವು ಮೊಬೈಲ್‌ನಲ್ಲಿ ಸೆರೆಯಾಗಿದ್ದು, ನೋಡನೋಡುತ್ತಿದ್ದಂತೆ ವ್ಯಕ್ತಿ ಜಲಸಮಾಧಿಯಾಗಿದ್ದಾರೆ. ಸುಮಾರು 20 ಜನರ ತಂಡ ಟ್ರಕ್ಕಿಂಗ್‌ ಹೋಗಿದ್ದರು. ಈ ವೇಳೆ ತುಂಬಿ ಹರಿವ ಹಳ್ಳಕ್ಕೆ ಜಿಗಿದ ಮಾಜಿ ಸೈನಿಕ ಸಾಹಸ ತೋರಿಸಲು ಹೋಗಿ ನೀರಲ್ಲಿ ಕೊಚ್ಚಿ ಹೋಗಿದ್ದಾನೆ.

ಮಹಾರಾಷ್ಟ್ರದ ಲೊನಾವನಾ ಘಟನೆ ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ನಡೆದಿದೆ. ಈಜಿ ಬರುವ ವಿಶ್ವಾಸ ತೋರಿದು ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ಸದ್ಯ ನೀರಿನಲ್ಲಿ ಕೊಚ್ಚಿ ಹೋಗುವ ದೃಶ್ಯ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: Allahabad High Court: ಮತಾಂತರ ತಡೆಯದಿದ್ದರೆ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಹೈಕೋರ್ಟ್ ಕಳವಳ

ಕಾಳಮ್ಮವಾಡಿ ಜಲಾಶಯದಲ್ಲಿ ನಿಪ್ಪಾಣಿ ಯುವಕರು ಕಣ್ಮರೆ

ಮಹಾರಾಷ್ಟ್ರದ ಕಾಳಮ್ಮವಾಡಿ ಜಲಾಶಯದಲ್ಲಿ ನಿಪ್ಪಾಣಿ ಯುವಕರು ಕಣ್ಮರೆ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನ ಶವ ಪತ್ತೆಯಾಗಿದ್ದು, ಇನ್ನೊಬ್ಬನಿಗಾಗಿ ಹುಡುಕಾಟ ಮುಂದುವರಿದಿದೆ. ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿರುವ ಕಾಳಮ್ಮವಾಡಿ ಜಲಾಶಯಕ್ಕೆ ನಿನ್ನೆ ನಿಪ್ಪಾಣಿಯಿಂದ ಪ್ರವಾಸಕ್ಕೆಂದು 13 ಜನರ ಯುವಕರ ತಂಡ ತೆರಳಿದ್ದರು. ಈ ವೇಳೆ ಕಾಳಮ್ಮವಾಡಿ ಜಲಾಶಯದಲ್ಲಿ ಇಬ್ಬರು ನೀರಿನಲ್ಲಿ ಕಣ್ಮರೆಯಾಗಿದ್ದರು. ನಿಪ್ಪಾಣಿಯ ಗಣೇಶ ಕದಮ್ ಪ್ರತೀಕ್ ಪಾಟೀಲ್ ಇಬ್ಬರು ಕಣ್ಮರೆಯಾಗಿದ್ದರು. ಪ್ರತಿಕ ಪಾಟೀಲ್ ಶವವಾಗಿ ಪತ್ತೆಯಾದರೆ, ಗಣೇಶ್ ಕದಮ್‌ಗಾಗಿ ಶೋಧ ಕಾರ್ಯ ಮುಂದುವರಿದಿದೆ. ಸ್ಥಳದಲ್ಲಿ ಎನ್ ಡಿ ಆರ್ ಎಫ್ ಹಾಗೂ ಕೊಲ್ಹಾಪುರ ಪೊಲೀಸ್ ಸಿಬ್ಬಂದಿ ಬೀಡು ಬಿಟ್ಟಿದ್ದಾರೆ.

ನೀರಲ್ಲಿ ಕೊಚ್ಚಿ ಹೋದವರ ಶವ ಪತ್ತೆ

ಭಾನುವಾರ ಮಹಾರಾಷ್ಟ್ರದ ಲೋನಾವಲಾ ಬಳಿ ದಿಢೀರ್ ಪ್ರವಾಹಕ್ಕೆ ನೋಡನೋಡುತ್ತಿದ್ದಂತೆ ಐವರು ಕೊಚ್ಚಿ ಹೋಗಿದ್ದರು. ಪುಣೆಯ ಅನ್ಸಾರಿ ಕುಟುಂಬದ ನಾಲ್ವರು ಮಕ್ಕಳು ಸೇರಿ ಓರ್ವ ‌ಮಹಿಳೆ‌ ನೀರುಪಾಲಾಗಿದ್ದರು. ನಿರಂತರ ಕಾರ್ಯಾಚರಣೆ ನಡೆಸಿದ ಎನ್‌ಆರ್‌ಎಫ್‌ ತಂಡ ಮೂವರ ಶವ ಹೊರ ತೆಗೆದಿತ್ತು. ನೀರಲ್ಲಿ ಕಣ್ಮರೆಯಾಗಿರುವ ಇನ್ನಿಬ್ಬರಿಗಾಗಿ ನಿರಂತರ ಶೋಧ ಕಾರ್ಯ ನಡೆಸಿತ್ತ. ಅದರಲ್ಲಿ ಒಬ್ಬನ ಮೃತದೇಹವು ಮಂಗಳವಾರ ಸಿಕ್ಕಿದ್ದು, ಮತ್ತೊಬ್ಬ ಶವಕ್ಕೆ ಹುಡುಕಾಟ ನಡೆಸಿದ್ದಾರೆ. ಸ್ಥಳದಲ್ಲಿಯೇ ಪೊಲೀಸರು ಹಾಗೂ ಅಗ್ನಿಶಾಮಕ ದಳ ಬೀಡು ಬಿಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

MUDA site scandal: ಮುಡಾ ನಿವೇಶನ ಹಗರಣ; ಸಿಎಂ ಹೆಂಡತಿ ಯಾಕೆ ಅಕ್ರಮ ಮಾಡುತ್ತಾರೆ ಎಂದ ಡಿಕೆಶಿ!

MUDA site scandal: ಮೈಸೂರು ಮುಡಾದಲ್ಲಿ ಅಕ್ರಮ ಆರೋಪಗಳ ಬಗ್ಗೆ ಚನ್ನಪಟ್ಟಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಜಮೀನು ಸ್ವಾಧೀನವಾಗಿತ್ತು, ಅದಕ್ಕೆ ಪರ್ಯಾಯವಾಗಿ ಸೈಟ್‌ ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

VISTARANEWS.COM


on

MUDA site scandal
Koo

ರಾಮನಗರ: ಬಿಜೆಪಿ ಸರ್ಕಾರ ಅವಧಿಯಲ್ಲೇ ಸಿಎಂ ಹೆಂಡತಿಯವರ ಜಮೀನು ಸ್ವಾಧೀನ ಆಗಿದೆ. ಅವರು ಡಿನೋಟಿಫಿಕೇಷನ್ ಮಾಡಿಕೊಂಡಿಲ್ಲ. ಸಿಎಂ ಹೆಂಡತಿ ಯಾಕೆ ಅಕ್ರಮ (MUDA site scandal) ಮಾಡುತ್ತಾರೆ. ಅವರ ಆಸ್ತಿ ಇತ್ತು, ಅದು ಹೋಗಿದೆ. ಪರ್ಯಾಯ ಸೈಟ್ ಕೊಡಬೇಕು, ಕೊಟ್ಟಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಮೈಸೂರು ಮುಡಾದಲ್ಲಿ ಅಕ್ರಮ ಆರೋಪಗಳ ಬಗ್ಗೆ ಚನ್ನಪಟ್ಟಣದಲ್ಲಿ ಪ್ರತಿಕ್ರಿಯಿಸಿ, ಅವರ ಜಮೀನು ಪಡೆದ ಹಿನ್ನೆಲೆಯಲ್ಲಿ ಇನ್ಸೆಂಟೀವ್ ಸ್ಕೀಮ್ ಅಡಿ ಮುಡಾ ಸೈಟ್‌ ನೀಡಿದೆ. ಡಿನೋಟಿಫೈ ಮಾಡದೆ ಇನ್ಸೆಂಟಿವ್ ತಗೊಂಡಿರೊದ್ದಕ್ಕೆ ಖುಷಿ ಪಡಬೇಕು. ಅವರು ಅರ್ಹರಿದ್ದಾರೆ, ತೆಗೆದುಕೊಂಡಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ನಾಲ್ವರು ಅಧಿಕಾರಿಗಳ ಸಸ್ಪೆಂಡ್ ವಿಚಾರಕ್ಕೆ ಪ್ರತಿಕ್ರಿಯಿಸಿ, ನಮ್ಮ ಮುಖ್ಯಮಂತ್ರಿಗಳು ಭ್ರಷ್ಟಾಚಾರ ವಿರುದ್ಧವಾಗಿ ಕಠಿಣವಾಗಿ ಇರುತ್ತಾರೆ. ಯಾರೆ ತಪ್ಪು ಮಾಡಿದರೂ ಶಿಕ್ಷೆ ಆಗಬೇಕು, ತನಿಖೆ ಆಗಬೇಕು ಅಂತ ಹೇಳಿದ್ದಾರೆ. ಭ್ರಷ್ಟಾಚಾರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ. ನನಗೂ ಆ ನಾಗೇಂದ್ರ ವಿಚಾರದಲ್ಲಿ ಡೌಟ್ ಇತ್ತು. ಈ ಬಗ್ಗೆ ವಿಚಾರಿಸಿದಾಗ ನಮ್ಮ ಮಂತ್ರಿಗಳು ಅದರಲ್ಲಿ ಭಾಗಿಯಾಗಿಲ್ಲ ಎಂಬುವುದು ತಿಳಿದುಬಂದಿದೆ ಎಂದರು.

ಬೇರೆ ಯಾರೂ ಅಕ್ರಮ ಮಾಡಿಲ್ಲ ಅಂತ ಹೇಳೋದಿಲ್ಲ. ಆದರೆ ಮಿನಿಸ್ಟರ್ಸ್‌ ಯಾರೂ ಭಾಗಿಯಾಗಿಲ್ಲ. ಆ ವಿಚಾರದಲ್ಲಿ ನನಗೆ ಸಮಾಧಾನ ಇದೆ. ಅವಶ್ಯಕತೆ ಇದ್ದರೆ ಎಲ್ಲರನ್ನೂ ವಿಚಾರಣೆ ಮಾಡುತ್ತಾರೆ‌, ಎಷ್ಟೋ ಸಲ ನಮ್ಮನ್ನೇ ವಿಚಾರಿಸಿಲ್ಲವೇ ಎಂದು ಹೇಳಿದರು.

ಇದನ್ನೂ ಓದಿ | Karnataka CM: ಸಿದ್ದು- ಡಿಕೆಶಿ ಇಬ್ಬರ ಜಗಳ ಮೂರನೆಯವರಿಗೆ ಲಾಭ? ಆ ಮೂರನೆಯವರು ಇವರೇ!

ಸಿಎಂ, ಡಿಸಿಎಂ ಬದಲಾವಣೆ ಬಗ್ಗೆ ಯಾರೂ ಚರ್ಚೆ ಮಾಡದಂತೆ ಕೈ ನಾಯಕರಿಗೆ ಸೂಚನೆ ನೀಡಿದ್ದೀರಿ ಎಂಬ ಪ್ರಶ್ನೆ ಕೇಳುತ್ತಿದ್ದಂತೆ ಉತ್ತರಿಸದೆ ಡಿಸಿಎಂ ನಿರ್ಗಮಿಸಿದರು.

ಪತ್ನಿಗೆ ಕಾನೂನು ಪ್ರಕಾರವೇ ಮುಡಾ ಸೈಟ್‌; ಬಿಜೆಪಿ ಕಾಲದಲ್ಲೇ ನೀಡಲಾಗಿತ್ತು ಎಂದ ಸಿದ್ದರಾಮಯ್ಯ

MUDA site Cm Siddaramaiah says his wife was given MUDA site during BJP regimescandal

ಬೆಂಗಳೂರು: ಮೈಸೂರಿನಲ್ಲಿ ಮುಡಾ ನಿವೇಶನ ಹಂಚಿಕೆ ಹಗರಣದ ಬಗ್ಗೆ ತನಿಖೆಗೆ ರಾಜ್ಯ ಸರ್ಕಾರದ ಆದೇಶ ನೀಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೂ ಮುಡಾ ಸೈಟ್‌ (MUDA site scandal) ಹಂಚಿಕೆಯಾಗಿದೆ ಎಂಬ ವಿಷಯ ತಿಳಿದುಬಂದಿದೆ. ಪತ್ನಿಗೆ ನೀಡಿರುವ 50:50 ಅನುಪಾತದ ನಿವೇಶನಗಳ ಬಗ್ಗೆ ಅಕ್ರಮ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಸಿಎಂ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿ ಇದ್ದ ಜಾಗವನ್ನು 1997ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವಶಕ್ಕೆ ಪಡೆದು, ಆ ಭೂಮಿಗೆ 2021ರಲ್ಲಿ ಪರಿಹಾರ ಕೊಟ್ಟಿತ್ತು ಎನ್ನಲಾಗಿದೆ. ಈ ಬಗ್ಗೆ ನಗರದಲ್ಲಿ ಮಂಗಳವಾರ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ನಿವೇಶನ ಹಂಚಿಕೆ ಬಿಜೆಪಿಯವರ ಕಾಲದಲ್ಲಿ ಆಗಿದ್ದು, ನನ್ನ ಹೆಂಡತಿಗೆ ಈ ಹಿಂದೆಯೇ ಸೈಟ್ ಹಂಚಲಾಗಿತ್ತು. 3 ಎಕರೆ 16 ಗುಂಟೆ ಜಮೀನು ನನ್ನ ಹೆಂಡತಿ ಹೆಸರಲ್ಲಿತ್ತು. ನನ್ನ ಬಾಮೈದ ತೆಗೆದಕೊಂಡಿದ್ದ ಜಾಗವನ್ನು ನನ್ನ ಹೆಂಡತಿಗೆ ದಾನ ಕೊಟ್ಟಿದ್ದ. ಅದನ್ನು ನಾನು ಅಧಿಕಾರದಲ್ಲಿ ಇದ್ದಾಗ ಖರೀದಿ ಮಾಡಿರಲಿಲ್ಲ‌. ಕಾನೂನಿನ ಪ್ರಕಾರವೇ ನಮಗೆ ಸೈಟ್‌ ಹಂಚಿದ್ದಾರೆ ಎಂದು ತಿಳಿಸಿದ್ದಾರೆ.

ಕಾನೂನು ಪ್ರಕಾರವೇ ನಮಗೆ 50:50 ನಿವೇಶನ ಕೊಡುವುದಾಗಿ ಮುಡಾದವರು ಹೇಳಿದ್ದರು. ಮಲ್ಲಿಕಾರ್ಜುನ್ ಎಂಬ ನನ್ನ ಬಾಮೈದ ಹರಿಶನ ಕುಂಕುಮ ಕೊಡುವಾಗ ನನ್ನ ಪತ್ನಿಗೆ ಗಿಫ್ಟ್ ಕೊಟ್ಟಿದ್ದ. ಆದರೆ ಅದನ್ನು ಮುಡಾದವರು ಸೈಟ್ ಮಾಡಿ ಹಂಚಿಬಿಟ್ಟರು. ಬಳಿಕ ನಮಗೆ ಜಮೀನು ಇಲ್ಲದಂತಾಯಿತು. ಅದಕ್ಕೆ ಮುಡಾದವರು ಬೇರೆ ಕಡೆ 50:50 ಸೈಟ್‌ ಕೊಟ್ಟಿದ್ದಾರೆ, ಇದು ತಪ್ಪಾ ಎಂದು ಸಿಎಂ ಪ್ರಶ್ನಿಸಿದ್ದಾರೆ.

Continue Reading

ಹಾಸನ

Wild Animals Attack : ಕರೆಯದೆ ಬಂದ ಅತಿಥಿ; ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ ಕೋತಿ!ಮುಂದೇನಾಯ್ತು?

Wild Animals Attack : ಕರೆಯದೇ ಮದುವೆಗೆ ಬಂದ ಕೋತಿಯೊಂದು ರಂಪಾಟವನ್ನೇ ನಡೆಸಿದೆ. ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ್ದಲ್ಲದೇ, ಊಟ ಮಾಡಲು ಹೋದವರ ಮೇಲೂ ಎರಗಿದೆ. ಮತ್ತೊಂದು ಕಾಡಾನೆ, ಕರಡಿ ಪ್ರತ್ಯಕ್ಷಗೊಂಡು ಅವಾಂತರವನ್ನೇ ಸೃಷ್ಟಿಸಿದೆ.

VISTARANEWS.COM


on

By

wild animals Attack
Koo

ಹಾಸನ: ಮದುವೆ ಮನೆಗೆ ನುಗ್ಗಿದ ಕೋತಿಯೊಂದು ರಂಪಾಟ (Wild Animals Attack) ನಡೆಸಿದೆ. ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ್ದಲ್ಲದೇ, ಊಟ ಮಾಡಲು ಹೋದವರಿಗೂ ತೊಂದರೆ ಕೊಟ್ಟಿದೆ. ಇಷ್ಟು ಮಾತ್ರವಲ್ಲದೇ ಮದುವೆಗೆ ಬಂದವರಿಗೆ ಮಂಗ (Monkey Attack) ಕಚ್ಚಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆಯಲ್ಲಿ ಘಟನೆ ನಡೆದಿದೆ.

wild Animals Attack

ಹಿರಿಸಾವೆಯ ನುಗ್ಗೆಹಳ್ಳಿ ರಸ್ತೆಯಲ್ಲಿ ನಡೆಯುತ್ತಿದ್ದ ಮದುವೆಗೆ ಕರೆಯದೇ ಬಂದ ಕೋತಿ ಕಾಟಕ್ಕೆ ಜನರು ಹೈರಣಾದರು. ಡೈನಿಂಗ್ ಹಾಲ್‌ನಲ್ಲಿ ಊಟ ಮಾಡುತ್ತಿದ್ದವರಿಗೂ ಕಿರಿಕಿರಿ ಮಾಡಿ, ಊಟ ಕಸಿದುಕೊಂಡಿದೆ. 8-10 ಮಂದಿ ಮೇಲೆ ದಾಳಿ ಮಾಡಿ ಕಚ್ಚಿದೆ. ಸುಶೀಲಮ್ಮ, ಲೀಲಾವತಿ, ನಿಂಗೇಗೌಡ, ಗೌರಮ್ಮ, ಗಿರಿಜಮ್ಮ , ತಿಮ್ಮೇಗೌಡ, ಗಿರಿಗೌಡ ಎಂಬುವವರಿಗೆ ಕೋತಿ ಕಚ್ಚಿದ್ದು, ಗಾಯಾಳುಗಳಿಗೆ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಸುತ್ತಮುತ್ತಲಿನ ಹಳ್ಳಿಯಲ್ಲಿ ಓಡಾಡುತ್ತಿರುವ ಕೋತಿ ಹಿಡಿದು ಸ್ಥಳಾಂತರ ಮಾಡಲು ಆಗ್ರಹಿಸಿದ್ದಾರೆ.

wild animals Attack

ಇದನ್ನೂ ಓದಿ: Leopard attack : ರಸ್ತೆ ಮೇಲೆ ಸತ್ತಂತೆ ಬಿದ್ದಿದ್ದ ಚಿರತೆ; ಮುಟ್ಟಲು ಹೋದ ಬೈಕ್‌ ಸವಾರ, ಕ್ಯಾಬ್‌ ಚಾಲಕನ ಮೇಲೆ ದಾಳಿ

wild Animals Attack

ವಿಜಯನಗರದ ಎಪಿಎಂಸಿ ಆವರಣಕ್ಕೆ ಎಂಟ್ರಿ ಕೊಟ್ಟ ಕರಡಿ

ಇತ್ತೀಚೆಗೆ ಕರಡಿಗಳ ಹಾವಳಿ ಹೆಚ್ಚಾಗಿದೆ. ವಿಜಯನಗರದ ಹಗರಿಬೊಮ್ಮನ ಹಳ್ಳಿಯಲ್ಲಿರುವ ಎಪಿಎಂಸಿ (APMC) ಆವರಣದಲ್ಲಿ ಕರಡಿಯೊಂದು ಪತ್ತೆಯಾಗಿದೆ. ಮಂಗಳವಾರ ಬೆಳಗಿನ ಜಾವ ಕರಡಿ ಓಡಾಟ ಕಂಡು ರೈತರು ಹೌಹಾರಿದ್ದಾರೆ. ಕರಡಿ ಓಡಾಟವು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಈ ಹಿಂದೆಯೂ ನಾನಾ ಕಡೆ ಕರಡಿ ಪ್ರತ್ಯಕ್ಷವಾಗಿತ್ತು.

wild animals Attack

ಕೊಡಗಿನಲ್ಲಿ ಆಟೋ ಜಖಂ ಮಾಡಿದ ಕಾಡಾನೆ

ಕೊಡಗಿನಲ್ಲಿ ಆನೆ -ಮಾನವ ಸಂಘರ್ಷ ಮುಂದುವರಿದಿದೆ. ಮನೆ ಸಮೀಪ ನಿಲ್ಲಿಸಿದ್ದ ಆಟೋ ಮೇಲೆ ಕಾಡಾನೆ ದಾಳಿ ಮಾಡಿದೆ. ನಾಪೋಕ್ಲು ಸಮೀಪದ ಕಕ್ಕಬ್ಬೆಯ ಗ್ರಾಮದ ನಾಲಡಿ ವಾಟೆಕಾಡು ಎಂಬಲ್ಲಿ ಘಟನೆ ನಡೆದಿದೆ. ವಾಟೆಕಾಡು ನಿವಾಸಿ ದೇವಯ್ಯ ಎಂಬುವರ ಆಟೋವನ್ನು ಜಖಂಗೊಳಿಸಿ, ಸಮೀಪದ ತೋಟದಲ್ಲೂ ದಾಂಧಲೆ ನಡೆಸಿ ಕಾಲ್ಕಿತ್ತಿದೆ. ಆನೆ ಹಾವಳಿಯಿಂದ ಮುಕ್ತಿ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

wild Animals Attack

ಕೊಪ್ಪಳದಲ್ಲಿ ನಿಲ್ಲದ ಕರಡಿ ಆತಂಕ

ಕಳೆದ ಒಂದು ವಾರದಿಂದ ಕೊಪ್ಪಳ ಸುತ್ತಮುತ್ತ ಕರಡಿ ಪ್ರತ್ಯಕ್ಷಗೊಳ್ಳುತ್ತಿದೆ. ಇದೀಗ ಬಸ್‌ನಲ್ಲಿ ಹೋಗುತ್ತಿರುವವರಿಗೆ ಕರಡಿಯೊಂದು ದರ್ಶನ ಕೊಟ್ಟಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಿ – ಮಾಟಲದಿನ್ನಿ ಮಧ್ಯೆ ಕರಡಿ ಕಾಣಿಸಿಕೊಂಡಿದೆ. ಮಂಗಳವಾರ ಮುಂಜಾನೆ ಬಸ್‌ವೊಂದಕ್ಕೆ ಕರಡಿಯು ಅಡ್ಡಬಂದಿದೆ. ಇದನ್ನೂ ಪ್ರಯಾಣಿಕರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉದ್ಯೋಗ

Job Alert: KSRTCಯಿಂದ ಬೃಹತ್‌ ನೇಮಕಾತಿ; 13,000 ಚಾಲಕ ಹುದ್ದೆಗಳಿಗೆ 7ನೇ ತರಗತಿ ಪಾಸಾದವರು ಅಪ್ಲೈ ಮಾಡಿ

Job Alert: ಉತ್ತಮ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವವರಿಗೆ ಗುಡ್‌ನ್ಯೂಸ್‌ ಇಲ್ಲಿದೆ. ಕೆಎಸ್‌ಆರ್‌ಟಿಸಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಬರೋಬ್ಬರಿ 13,000 ಚಾಲಕ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. 7ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಲು ಅರ್ಹರು. ಚಾಮರಾಜನಗರ ಜಿಲ್ಲೆ ಕೆಎಸ್‌ಆರ್‌ಟಿಸಿ ಡಿಪೋ, ರಾಮನಗರ ಹಾಗೂ ಆನೇಕಲ್ ತಾಲೂಕು ಕೆಎಸ್‌ಆರ್‌ಟಿಸಿ ಬಸ್‌ ಡಿಪೋದಲ್ಲಿ ಈ ಹುದ್ದೆಗಳಿವೆ.

VISTARANEWS.COM


on

Job Alert
Koo

ಬೆಂಗಳೂರು: ಉತ್ತಮ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವವರಿಗೆ ಗುಡ್‌ನ್ಯೂಸ್‌ ಇಲ್ಲಿದೆ. ಕೆಎಸ್‌ಆರ್‌ಟಿಸಿ (Karnataka State Road Transport Corporation) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಬರೋಬ್ಬರಿ 13,000 ಚಾಲಕ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. 7ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಲು ಅರ್ಹರು (KSRTC Recruitment 2024). ಈ ಕುರಿತಾದ ವಿವರ ಇಲ್ಲಿದೆ (Job Alert).

ಎಲ್ಲೆಲ್ಲಿ?

ಚಾಮರಾಜನಗರ ಜಿಲ್ಲೆ ಕೆಎಸ್‌ಆರ್‌ಟಿಸಿ ಡಿಪೋ, ರಾಮನಗರ ಹಾಗೂ ಆನೇಕಲ್ ತಾಲೂಕು ಕೆಎಸ್‌ಆರ್‌ಟಿಸಿ ಬಸ್‌ ಡಿಪೋದಲ್ಲಿ ಈ ಹುದ್ದೆಗಳಿವೆ. ಆಯಾ ಬಸ್‌ ಡಿಪೋಗಳು ಹೊರ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಿವೆ.

ವಿದ್ಯಾರ್ಹತೆ ಮತ್ತು ಮಾಸಿಕ ವೇತನ

7ನೇ ತರಗತಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಜತೆಗೆ ಹೆವಿ ಮೋಟಾರ್ ವಾಹನ ಚಾಲಕರಾಗಿ 2 ವರ್ಷಗಳ ಅನುಭವ ಹೊಂದಿರಬೇಕು. ಅಲ್ಲದೆ ಕರ್ನಾಟಕದ ಮಾನ್ಯತೆ ಪಡೆದಿರುವ ಸರಕು ವಾಹನ ಬ್ಯಾಡ್ಜ್‌ ಹೊಂದಿರುವುದು ಕಡ್ಡಾಯ. ಆಯ್ಕೆಯಾದವರಿಗೆ 23,000 ರೂ. ಮಾಸಿಕ ವೇತನ ನೀಡಲಾಗುತ್ತದೆ. ಜತೆಗೆ ಇಎಸ್‌ಐ, ಇಪಿಎಫ್‌ ಸೌಲಭ್ಯ ಇರಲಿದೆ.

ಇದನ್ನು ಗಮನಿಸಿ

ಹೊರಗುತ್ತಿಗೆ ನೇಮಕಾತಿ ಇದಾಗಿರುವುದರಿಂದ ಹುದ್ದೆಗಳ ಮೇಲೆ ಅಭ್ಯರ್ಥಿಗಳಿಗೆ ಯಾವುದೇ ರೀತಿ ಹಕ್ಕು ಇರುವುದಿಲ್ಲ. ಖಾಯಂ ನೇಮಕಾತಿ ವೇಳೆ ಇವರನ್ನು ತೆರವು ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ

ಅಭ್ಯರ್ಥಿಗಳಿಗೆ ಚಾಲನೆ ತರಬೇತಿಯನ್ನು ನೀಡಿ ಪರೀಕ್ಷೆಯನ್ನು ನಡೆಸಿ ಸಂದರ್ಶನ ಹಾಗೂ ದಾಖಲೆಗಳ ಪರಿಶೀಲನೆಯ ಬಳಿಕ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಕೆಎಸ್‌ಆರ್‌ಟಿಸಿಯ ಪ್ರಕಟಣೆ ತಿಳಿಸಿದೆ.

ಹೆಚ್ಚಿನ ವಿವರಗಳಿಗೆ: ಚಾಮರಾಜನಗರ ಜಿಲ್ಲೆ ಕೆಎಸ್‌ಆರ್‌ಟಿಸಿ ಡಿಪೋ ದೂರವಾಣಿ ಸಂಖ್ಯೆಗಳು: 8050980889, 8618876846, ರಾಮನಗರ ಹಾಗೂ ಆನೇಕಲ್ ತಾಲೂಕು ಕೆಎಸ್‌ಆರ್‌ಟಿಸಿ ಬಸ್‌ ಡಿಪೋ ದೂರವಾಣಿ ಸಂಖ್ಯೆಗಳು: 8050980889, 8618876846ಕ್ಕೆ ಕರೆ ಮಾಡಿ.

ಇದನ್ನೂ ಓದಿ: Job Alert: ಬರೋಬ್ಬರಿ 17,727 ಹುದ್ದೆಗಳ ಭರ್ತಿಗೆ ಮುಂದಾದ SSC; ಇಂದೇ ಅಪ್ಲೈ ಮಾಡಿ

Continue Reading
Advertisement
Narendra Modi
ದೇಶ7 mins ago

Narendra Modi: ರಾಹುಲ್‌ ಗಾಂಧಿಯನ್ನು ‘ಬಾಲ ಬುದ್ಧಿಯವನು’‌ ಎಂದ ಮೋದಿ; ಅವರು ಹೇಳಿದ ‘ಸೈಕಲ್‌ ಕತೆ’ಯೂ ಇಲ್ಲಿದೆ!

Gold Smuggling
Latest19 mins ago

Gold Smuggling: ಏರ್‌ಪೋರ್ಟ್‌ನಲ್ಲಿ 267 ಕೆಜಿ ಚಿನ್ನ ಸಾಗಣೆ; ಯೂಟ್ಯೂಬರ್‌ ಸೇರಿ ಹಲವರ ಸೆರೆ

Narendra Modi
ದೇಶ34 mins ago

Narendra Modi: ದೇಶದ ಜನ ನಮ್ಮನ್ನು ಮೂರನೇ ಬಾರಿ ಗೆಲ್ಲಿಸಿದ್ದಾರೆ, ಕಾಂಗ್ರೆಸ್‌ಗೆ ನೂರು ಸ್ಥಾನ ಗೆಲ್ಲುವ ಯೋಗ್ಯತೆಯೂ ಇಲ್ಲ; ರಾಹುಲ್‌ಗೆ ಮೋದಿ ಗೇಲಿ

Uttar Pradesh stampede
ದೇಶ49 mins ago

Uttar Pradesh stampede : ಉತ್ತರ ಪ್ರದೇಶದ ಹತ್ರಾಸ್​​ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ; 27 ಕ್ಕೂ ಹೆಚ್ಚು ಸಾವು

Drowned in water
ದೇಶ51 mins ago

Drowned In water : ರಭಸವಾಗಿ ಹರಿಯುತ್ತಿದ್ದ ನೀರಲ್ಲಿ ಈಜಲು ಹೋಗಿ ಕೊಚ್ಚಿ ಹೋದ ಮಾಜಿ ಸೈನಿಕ

Rahul Dravid
ಕ್ರೀಡೆ52 mins ago

Rahul Dravid: ನಾನು ನಿರುದ್ಯೋಗಿ, ಎಲ್ಲಾದರೂ ಕೆಲಸ ಇದ್ದರೆ ಹೇಳಿ ಎಂದ ರಾಹುಲ್​ ದ್ರಾವಿಡ್​; ವಿಡಿಯೊ ವೈರಲ್​

Narendra Modi
ದೇಶ53 mins ago

Narendra Modi: ‘ಮನೆ’ಯೊಳಗೆ ನುಗ್ಗಿ ಹೊಡೆಯುತ್ತೇವೆ, ದೇಶದ ಸುರಕ್ಷತೆಗಾಗಿ ನಾವು ಏನು ಮಾಡಲೂ ಸಿದ್ಧ: ಸಂಸತ್ತಲ್ಲಿ ಮೋದಿ ಗುಡುಗು

Narendra Modi
ದೇಶ1 hour ago

Narendra Modi: ಪ್ರಜಾಪ್ರಭುತ್ವ, ಜಾತ್ಯತೀತತೆ, ಏಳಿಗೆಯೇ ನಮ್ಮ ಆದ್ಯತೆ; ಸಂಸತ್ತಿನಲ್ಲಿ ಮೋದಿ ಹೇಳಿಕೆ

MUDA site scandal
ಕರ್ನಾಟಕ1 hour ago

MUDA site scandal: ಮುಡಾ ನಿವೇಶನ ಹಗರಣ; ಸಿಎಂ ಹೆಂಡತಿ ಯಾಕೆ ಅಕ್ರಮ ಮಾಡುತ್ತಾರೆ ಎಂದ ಡಿಕೆಶಿ!

Rahul Dravid
ಕ್ರಿಕೆಟ್1 hour ago

Rahul Dravid : ಕ್ರಿಕೆಟ್ ಬುದ್ಧ ನಕ್ಕು ನಲಿದಾಡಿದಾಗ, ಅರಿವಿಲ್ಲದೇ ಕೆನ್ನೆಗೆ ಜಾರಿತ್ತು ಭಾವಾತಿಶಯದ ಅಶ್ರುಧಾರೆ – ಸಲಾಂ ಜಾಮಿ ಭಾಯ್!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ24 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌