Complaint to CM : ಸಿಎಂಗೆ ದೂರು ನೀಡಬೇಕೇ? ಈ ನಂಬರ್‌ಗೆ ಕರೆ ಮಾಡಿ! - Vistara News

ಕರ್ನಾಟಕ

Complaint to CM : ಸಿಎಂಗೆ ದೂರು ನೀಡಬೇಕೇ? ಈ ನಂಬರ್‌ಗೆ ಕರೆ ಮಾಡಿ!

Complaint to CM : ತಮ್ಮ ಸಮಸ್ಯೆಗಳಿಗೆ ಸರ್ಕಾರಿ ವ್ಯವಸ್ಥೆಯಲ್ಲಿ ಪರಿಹಾರ ಸಿಗದೇ ಇದ್ದಾಗ ನಾಗರಿಕರು ಅನಿವಾರ್ಯವಾಗಿ ಮುಖ್ಯಮಂತ್ರಿಯತ್ತ ದೃಷ್ಟಿ ನೆಡುತ್ತಾರೆ. ಹೇಗಾದರೂ ಮಾಡಿ ಅವರಿಗೊಂದು ದೂರು ಕೊಡಬೇಕು ಎಂದು ಅಂದುಕೊಳ್ಳುತ್ತಾರೆ. ಆದರೆ, ಇದಕ್ಕೆ ಅವರಿಗೆ ಯಾವ ಮಾರ್ಗ ಎಂಬುದು ಮಾತ್ರ ತಿಳಿದಿರುವುದಿಲ್ಲ. ಇದಕ್ಕೆ ಈಗ ಎರಡು ಮಾರ್ಗಗಳು ಇವೆ. ಸಹಾಯವಾಣಿಗೆ ಕರೆ ಮಾಡಿ ದೂರು ನೀಡುವುದು ಸರಳ ಮಾರ್ಗವಾಗಿದೆ.

VISTARANEWS.COM


on

Complaint to CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ದೂರು ನೀಡಬೇಕೇ? (Complaint to CM) ಇದಕ್ಕಾಗಿ ನೀವು ಜನತಾ ದರ್ಶನಕ್ಕೆ (Janatha Darshan) ಹೋಗಬೇಕೆಂದೇನೂ ಇಲ್ಲ. ನೀವು ಕುಳಿತಲ್ಲಿಯೇ ದೂರು ದಾಖಲು ಮಾಡಬಹುದು. ಅದಕ್ಕೆ ಇದೊಂದು ನಂಬರ್‌ಗೆ ಕರೆ ಮಾಡಿದರೆ ಸಾಕು ನಿಮ್ಮ ದೂರನ್ನು ದಾಖಲಿಸಿಕೊಳ್ಳಲಾಗುತ್ತದೆ.

ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳನ್ನು ಮಾಡಿಸಿಕೊಳ್ಳಬೇಕೆಂದರೆ ತುಸು ಕಷ್ಟವನ್ನೇ ಪಡಬೇಕು. ರೈತರಿಗೆ ಒಂದು ಖಾತೆ ಮಾಡಿಸಿಕೊಳ್ಳಲೋ, ರಸ್ತೆ ಸಮಸ್ಯೆಯೋ ಅದೇ ದೊಡ್ಡದಾಗಿರುತ್ತದೆ. ಆದರೆ, ಇದಕ್ಕೆ ಅಧಿಕಾರಿಗಳು ಸೊಪ್ಪು ಹಾಕುವುದಿಲ್ಲ. ಇನ್ನು ಮಹಿಳೆಯರಿಗೆ, ವೃದ್ಧರಿಗೆ ಸೇರಿದಂತೆ ನಾಗರಿಕರಿಗೆ ಒಂದಲ್ಲ ಒಂದು ಸಮಸ್ಯೆಗಳು ಇದ್ದೇ ಇರುತ್ತವೆ. ಇದಕ್ಕೆ ಸರ್ಕಾರಿ ವ್ಯವಸ್ಥೆಯಲ್ಲಿ ಪರಿಹಾರ ಸಿಗದೇ ಇದ್ದಾಗ ಅನಿವಾರ್ಯವಾಗಿ ಮುಖ್ಯಮಂತ್ರಿಯತ್ತ ದೃಷ್ಟಿ ನೆಡುತ್ತಾರೆ. ಹೇಗಾದರೂ ಮಾಡಿ ಅವರಿಗೊಂದು ದೂರು ಕೊಡಬೇಕು ಎಂದು ಅಂದುಕೊಳ್ಳುತ್ತಾರೆ. ಆದರೆ, ಇದಕ್ಕೆ ಅವರಿಗೆ ಯಾವ ಮಾರ್ಗ ಎಂಬುದು ಮಾತ್ರ ತಿಳಿದಿರುವುದಿಲ್ಲ. ಇದಕ್ಕೆ ಈಗ ಎರಡು ಮಾರ್ಗಗಳು ಇವೆ. ಒಂದೋ ಸಿಎಂ ನಡೆಸುವ ಜನತಾ ದರ್ಶನ ಕಾರ್ಯಕ್ರಮಕ್ಕೆ ಆಗಮಿಸಿ ದೂರು ಸಲ್ಲಿಸುವುದು, ಇಲ್ಲವೇ 1902 ಸಹಾಯವಾಣಿಗೆ (Helpline Number) ಕರೆ ಮಾಡಿ ಜನತಾ ದರ್ಶನದ ಅಡಿ ದೂರನ್ನು ದಾಖಲಿಸುವುದನ್ನು ಮಾಡಬಹುದಾಗಿದೆ. ಹೀಗೆ ಮಾಡಿದರೂ ನೇರವಾಗಿಯೇ ಸಿಎಂಗೆ ದೂರು ದಾಖಲಿಸಿದಂತೆ ಆಗುತ್ತದೆ.

ಕರೆ ಮಾಡಿ ಸಿಎಂಗೆ ಹೀಗೆ ದೂರು ನೀಡಿ!

1902 ಸಹಾಯವಾಣಿಯನ್ನು ರಾಜ್ಯ ಸರ್ಕಾರ ಈಗಾಗಲೇ ತೆರೆದಿದೆ. ಜನತಾ ದರ್ಶನಕ್ಕೆ ದೂರದ ಊರಿನಿಂದ ಹೋಗಲು ಆಗದವರು, ತೀವ್ರ ಸಮಸ್ಯೆ ಎದುರಿಸುತ್ತಿರುವವರು ಯಾರಾದರೂ ಇದ್ದರೆ ಸಿಎಂ ಗಮನಕ್ಕೆ ತರುವ ಸಂಬಂಧ ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಸಾಕು. ಅಲ್ಲಿ ನಿಮ್ಮ ಸಮಸ್ಯೆಗಳನ್ನು ಹೇಳಬೇಕು. ಅವರು ನಿಮ್ಮ ಅಹವಾಲುಗಳನ್ನು ಆಧರಿಸಿ ಅದನ್ನು ಜನತಾ ದರ್ಶನ ಕೆಟಗರಿ ಅಡಿ ದೂರು ದಾಖಲು ಮಾಡಿಕೊಳ್ಳುತ್ತಾರೆ.

ಹೀಗೆ ದೂರು ದಾಖಲು ಮಾಡುವಾಗ ನಿಮ್ಮ ಸಮಸ್ಯೆ, ವಿಳಾಸ, ಮೊಬೈಲ್‌ ಸಂಖ್ಯೆಯನ್ನು ಪಡೆದು ಅದರಲ್ಲಿ ನಮೂದು ಮಾಡಲಾಗುತ್ತದೆ. ಈ ದೂರು ಸಿಎಂ ಜನತಾ ದರ್ಶನ ಕೆಟಗರಿ ಮೂಲಕ ಸಂಬಂಧಪಟ್ಟ ಇಲಾಖೆಗೆ ರವಾನೆ ಮಾಡಲಾಗುತ್ತದೆ. ಆದರೆ, ಮುಂದಿನ ಹಂತದ ಬಗ್ಗೆ ಸ್ಪಷ್ಟತೆಯನ್ನು ನೀಡಲಾಗಿಲ್ಲ.

ಮುಂದಿನ ಕ್ರಮ ಏನು?

ಒಂದು ವೇಳೆ 1092 ಸಹಾಯವಾಣಿಗೆ ಕರೆ ಮಾಡಿ ದೂರು ದಾಖಲಾದರೆ ನಿಮಗೊಂದು ಐಡಿ ಸಂಖ್ಯೆಯನ್ನು ನೀಡಲಾಗುತ್ತದೆ. ನೀವು ದಾಖಲು ಮಾಡಲಾದ ದೂರು ಸಿಎಂ ಕಾರ್ಯಾಲಯಕ್ಕೆ ಹೋಗುತ್ತದೆ. ಅಲ್ಲಿಂದ ಮುಂದಿನ ಪ್ರಕ್ರಿಯೆ ಏನು? ನಿಮ್ಮ ದೂರಿನ ಸ್ಥಿತಿ-ಗತಿ ಏನಾಯಿತು ಎಂಬ ಬಗ್ಗೆ ತಿಳಿಯಬೇಕು ಎಂದಿದ್ದರೆ, ಜನಸ್ಪಂದನ ಪೋರ್ಟಲ್‌ ಅಥವಾ ಜನಸ್ಪಂದನ ಪಿಜಿಆರ್‌ಎಸ್‌ ಪೋರ್ಟಲ್‌ಗೆ ಭೇಟಿ ನೀಡಿ ಅಲ್ಲಿ “ಸಿಪಿಗ್ರಾಮ್ಸ್‌ ಕುಂದುಕೊರತೆ ಸ್ಥಿತಿಯನ್ನು ಪರಿಶೀಲಿಸಿ ಆಯ್ಕೆ ಮೇಲೆ ಕ್ಲಿಕ್‌ ಮಾಡಬೇಕು. ಬಳಿಕ ನಿಮ್ಮ ಸಿಪಿಗ್ರಾಮ್ಸ್‌ ಗ್ರೀವಿಯನ್ಸ್‌ ನಂಬರ್‌ (CPGRAMS Grievance Number) ಅಥವಾ ನಿಮ್ಮ ನೋಂದಾಯಿತ ಮೊಬೈಲ್‌ ಸಂಖ್ಯೆಯನ್ನು ನಮೂದು ಮಾಡಿದರೆ ಅಲ್ಲಿ ಅಹವಾಲು ಯಾವ ಹಂತದಲ್ಲಿದೆ ಎಂಬುದನ್ನು ತಿಳಿಸುತ್ತದೆ. ಇಲ್ಲವೇ ನೇರವಾಗಿ 1902 ಸಂಖ್ಯೆಗೆ ಕರೆ ಮಾಡಿದರೆ ನಿಮಗೆ ಅಲ್ಲಿನ ಸಿಬ್ಬಂದಿ ಸಹ ಅಹವಾಲಿನ ಸ್ಟೇಟಸ್‌ ಬಗ್ಗೆ ತಿಳಿಸಿಕೊಡಲಿದ್ದಾರೆ.

ಪ್ರಕ್ರಿಯೆ ಹೇಗಿರಲಿದೆ?

ಸಾರ್ವಜನಿಕರಿಂದ ಮುದ್ದಾಂ/ಆನ್‌ಲೈನ್‌ನಲ್ಲಿ ಸ್ವೀಕೃತವಾಗುವ ಕುಂದುಕೊರತೆ/ಅಹವಾಲುಗಳನ್ನು ಏಕೀಕೃತ ಸಾರ್ವಜನಿಕ ಕುಂದುಕೊರತೆಗಳ ನಿವಾರಣಾ ವ್ಯವಸ್ಥೆಯಲ್ಲಿ ದಾಖಲಿಸಿ, ಸ್ವೀಕೃತಿಯನ್ನು ನೀಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ಸ್ವೀಕೃತಿ ಸಂಖ್ಯೆ ಬಳಸಿ ತಮ್ಮ ಕುಂದುಕೊರತೆ/ಅಹವಾಲಿನ ಸ್ಥಿತಿಗತಿಯನ್ನು ಏಕೀಕೃತ ಸಾರ್ವಜನಿಕ ಕುಂದುಕೊರತೆಗಳ ನಿವಾರಣಾ ವ್ಯವಸ್ಥೆಯಲ್ಲಿ ಅಥವಾ 1902 ಸಂಖ್ಯೆಗೆ ಕರೆಮಾಡಿ ತಿಳಿದುಕೊಳ್ಳಬಹುದು.

ಇದನ್ನೂ ಓದಿ: Gruha Lakshmi : ಗೃಹಲಕ್ಷ್ಮಿ ಹಣ ಇನ್ನೂ ಬಂದಿಲ್ಲವೇ? ಹಾಗಾದರೆ ದೂರು ಕೊಡೋಕೆ ರೆಡಿ ಆಗಿ!

ಎಪಿಐ ಮೂಲಕ ನಿರ್ವಹಣೆ

ಸ್ವೀಕರಿಸಲಾದ ಕುಂದುಕೊರತೆ/ಅಹವಾಲುಗಳನ್ನು ವಿಷಯದ ಆಧಾರದಲ್ಲಿ ಸಂಬಂಧಿಸಿದ ಇಲಾಖೆಗಳ/ಅಧೀನ ಸಂಸ್ಥೆಗಳ ಅಧಿಕಾರಿಗಳ ಲಾಗಿನ್‌ಗಳಿಗೆ ತಕ್ಷಣ ರವಾನಿಸಲಾಗುತ್ತದೆ. ಮುಖ್ಯಮಂತ್ರಿಗಳ ಜನತಾದರ್ಶನದಲ್ಲಿ ಸ್ವೀಕೃತವಾದ ಕುಂದುಕೊರತೆ/ಅಹವಾಲುಗಳನ್ನು ಸ್ವಯಂಚಾಲಿತವಾಗಿ ಸಂಬಂಧಪಟ್ಟ ಇಲಾಖಾ ಕಾರ್ಯದರ್ಶಿಗಳ ಇ-ಆಫೀಸ್‌ ಲಾಗಿನ್‌ಗೆ ಕಳುಹಿಸುವ ವ್ಯವಸ್ಥೆ ಅಳವಡಿಸಲಾಗಿದೆ. ಇ-ಆಫೀಸ್‌ನಲ್ಲಿ ಸದರಿ ಕಡತದ ಪ್ರತಿ ಹಂತದ ಚಲನೆಯನ್ನು API ಮೂಲಕ ಏಕೀಕೃತ ಸಾರ್ವಜನಿಕ ಕುಂದುಕೊರತೆಗಳ ನಿವಾರಣಾ ವ್ಯವಸ್ಥೆಗೆ ಒದಗಿಸಲಾಗುತ್ತದೆ. ಸ್ವೀಕೃತವಾದ ಅಹವಾಲುಗಳ ಪ್ರಗತಿ ಪರಿಶೀಲಿಸಲು ಪ್ರತ್ಯೇಕ ಡ್ಯಾಶ್‌ಬೋರ್ಡ್‌ ಅಭಿವೃದ್ಧಿಪಡಿಸಲಾಗಿದೆ. ಈ ಡ್ಯಾಶ್‌ಬೋರ್ಡ್‌ನಲ್ಲಿ ಇಲಾಖಾ/ಜಿಲ್ಲಾವಾರು ಸ್ವೀಕೃತವಾದ ಕುಂದುಕೊರತೆ ಮತ್ತು ಅಹವಾಲುಗಳ ಸಂಖ್ಯೆ, ವಿಲೇ ಮಾಡಲಾದ ಮತ್ತು ಬಾಕಿ ಉಳಿದಿರುವ ಕುಂದುಕೊರತೆ ಮತ್ತು ಅಹವಾಲುಗಳ ವಿವರ ಲಭ್ಯವಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading

Latest

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

VISTARANEWS.COM


on

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌‌ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌‌ನ ಉಮೇಶ್‌ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್‌ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್‌‌ ಮೇಟಿಯವರ ತಂದೆ ಹೆಚ್‌.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading
Advertisement
Latest3 hours ago

ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವುದಿಲ್ಲ ಎಂದಿದ್ದೇಕೆ ಮಮತಾ ಬ್ಯಾನರ್ಜಿ?

Latest7 hours ago

ಬಿಜೆಪಿ ಬಂಗಾಳ ಗೆದ್ದಾಯ್ತು, ಸಿಎಂ ರೇಸ್‌ನಲ್ಲಿ ಯಾರು?

Latest7 hours ago

ತಮಿಳುನಾಡು: ಬಹುಮತ ಪಡೆಯಲು ದಳಪತಿ ಮುಂದಿರುವ ತಂತ್ರಗಳೇನು?

Latest1 day ago

ಪಶ್ಚಿಮ ಬಂಗಾಳದಲ್ಲಿ ಕೇಸರಿ, ತಮಿಳುನಾಡಲ್ಲಿ ದಳಪತಿ, ಕೇರಳಂನಲ್ಲಿ ಕಾಂಗ್ರೆಸ್‌ ದರ್ಬಾರ್‌

Latest1 day ago

ಕೇರಳಂ: ಯುಡಿಎಫ್‌ ಗೆಲುವಿನ ಹಿಂದಿನ ಏಳು ರಣತಂತ್ರ!

Latest1 day ago

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

Latest1 day ago

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

Latest1 day ago

ದ್ರಾವಿಡ ನಾಡಲ್ಲಿ ʼದಳಪತಿʼ ಯುಗಾರಂಭ

Rakshit Shetty Richard Anthony Produce By Hombale
ಅವಿಭಾಗೀಕೃತ2 days ago

ಪಂಚರಾಜ್ಯ ವಿಧಾನಸಭಾ ಚುನಾವಣೆ , ಕರ್ನಾಟಕ ಉಪಚುನಾವಣೆ ಫಲಿತಾಂಶದ ಕ್ಷಣಕ್ಷಣದ ಅಪ್‌ಡೇಟ್‌

Latest2 days ago

‘ಟಾಕ್ಸಿಕ್’ ಸಿನಿಮಾದಲ್ಲಿ ಬೋಲ್ಡ್ ದೃಶ್ಯಕ್ಕೆ ಕತ್ತರಿ ಹಾಕಿ ಕಿಯಾರಾ ಅಡ್ವಾಣಿ ಮನವಿ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌