Forest Officers Cruelty: ರೈತರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಮಾರಣಾಂತಿಕ ಥಳಿತ, ರೈತರ ತಲೆ ಒಡೆದ ದೃಶ್ಯ ವಿಡಿಯೋದಲ್ಲಿ ದಾಖಲು - Vistara News

ಕರ್ನಾಟಕ

Forest Officers Cruelty: ರೈತರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಮಾರಣಾಂತಿಕ ಥಳಿತ, ರೈತರ ತಲೆ ಒಡೆದ ದೃಶ್ಯ ವಿಡಿಯೋದಲ್ಲಿ ದಾಖಲು

ರೈತರ ಪ್ರತಿಭಟನೆಗೆ ಬಗ್ಗದ ಅರಣ್ಯ ಅಧಿಕಾರಿಗಳು ಗುಬ್ಬಿ ಅರಣ್ಯ ವಲಯ ಅಧಿಕಾರಿ ದುಗ್ಗಪ್ಪ ನೇತೃತ್ವದಲ್ಲಿ ನಿನ್ನೆ ಸಂಜೆ ಏಕಾಏಕಿ ಬುಲ್‌ಡೋಜರ್‌ ಕೊಂಡೊಯ್ದು ರೈತರ ಜಮೀನನ್ನು ವಶಪಡಿಸಿಕೊಳ್ಳಲು ಮುಂದಾಗಿದ್ದರು. ಇದನ್ನು ತಡೆಯಲು ಹೋದ ರೈತರಿಗೆ ಲಾಠಿ ಹಿಡಿದು ಮನಸೋಇಚ್ಛೆ ಥಳಿಸಿದ್ದಾರೆ.

VISTARANEWS.COM


on

forest officers
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ರೈತರ ಮೇಲೆ ಯದ್ವಾತದ್ವಾ ಲಾಠಿ ಬೀಸಿರುವ ಅರಣ್ಯ ಇಲಾಖೆ ಸಿಬ್ಬಂದಿ, ಹತ್ತಕ್ಕೂ ಹೆಚ್ಚು ರೈತರ ತಲೆಬುರುಡೆ ಒಡೆದುಹೋಗುವಂತೆ ಥಳಿಸಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಗಂಗಯ್ಯನಪಾಳ್ಯದಲ್ಲಿ ಈ ಅಮಾನುಷ ಘಟನೆ ನಡೆದಿದೆ.

ಅರಣ್ಯ ಇಲಾಖೆ ಅಧಿಕಾರಿಗಳು ಇದ್ದಕ್ಕಿದ್ದಂತೆ ತಲೆ ಮೈಕೈ ಎನ್ನದೆ ಲಾಠಿ ಚಾರ್ಜ್‌ ನಡೆಸಿದ್ದು, 20ಕ್ಕೂ ಹೆಚ್ಚು ರೈತರಿಗೆ ಗಾಯಗಳಾಗಿವೆ. ಮೂವರು ರೈತರಿಗೆ ಗಂಭೀರ ಗಾಯವಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ರೈತರಿಗೆ ಲಾಠಿ ಹಿಡಿದು ಮನಬಂದಂತೆ ಥಳಿಸುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಬಗರ್‌ಹುಕುಂ ಗಲಾಟೆ ಈ ಗಲಭೆಗೆ ಕಾರಣವಾಗಿದೆ. ಗಂಗಯ್ಯನ ಪಾಳ್ಯದಲ್ಲಿರುವ ಬಗರ್ ಹುಕುಂ ಭೂಮಿಯನ್ನು ನೂರಾರು ರೈತರು ಕಳೆದ 40-50 ವರ್ಷದಿಂದ ಉಳುಮೆ ಮಾಡಿಕೊಂಡು ಬಂದಿದ್ದು, ಏಕಾಏಕಿ ಕಳೆದ ಮೂರು ವರ್ಷಗಳ ಹಿಂದೆ ಇದು ಅರಣ್ಯ ಇಲಾಖೆಗೆ ಸೇರಿದ್ದು ಎಂದು ಅರಣ್ಯ ಇಲಾಖೆ ವಶಪಡಿಸಿಕೊಂಡಿದೆ. ಅಂದಿನಿಂದ ಇಂದಿನವರೆಗೂ ಬಗರ ಹುಕುಂ ಭೂಮಿ ಪಡೆಯಲು ರೈತರು ಹೋರಾಟ ಮಾಡುತ್ತಿದ್ದಾರೆ. ರೈತ ಸಂಘಟನೆ ಹಾಗೂ ನೂರಾರು ರೈತರಿಂದ ನಿರಂತರ ಹೋರಾಟ ನಡೆದಿದ್ದು, ತಹಶೀಲ್ದಾರ್, ಎಸಿ, ಡಿಸಿ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಚಿವರ ಜೊತೆ ಸಭೆ ಕೂಡ ನಡೆಸಿದ್ದರು.

ತುಮಕೂರು ಜಿಲ್ಲಾಧಿಕಾರಿ ವೈಎಸ್ ಪಾಟೀಲ್ ಅವರು ಒಂದು ಸಲ ಸರ್ವೆ ಮಾಡಿ ರೈತರಿಗೆ ಭೂಮಿ ಕೊಡಿಸೋಣ ಎಂದಿದ್ದರು. ಇನ್ನೊಂದು ಸಲ ಅದನ್ನು ಸರ್ಕಾರ ತಡೆಹಿಡಿದಿದೆ ಎಂದಿದ್ದರು. ಜಂಟಿ ಸರ್ವೆ ಮಾಡಿ ನೋಡೋಣ ಎಂದು ಅರಣ್ಯಾಧಿಕಾರಿಗಳಿಗೆ ತಿಳಿಸಿದ್ದರು. ಅರಣ್ಯ ಇಲಾಖೆಯ ಅಧಿಕಾರಿಗಳು ಸರ್ವೆ ಮಾಡಿ ಪರಿಶೀಲನೆ ಮಾಡುತ್ತೇವೆ ಎಂದು ಕಾಲ ತಳ್ಳಿದ್ದರು. ಜಂಟಿ ಸರ್ವೆ ಮಾಡಲು ಹಿಂದೇಟು ಹಾಕಿದ್ದರು. ಎಷ್ಟೇ ಪ್ರತಿಭಟನೆ ಮಾಡಿದರೂ ರೈತರಿಗೆ ಜಮೀನು ಬಿಟ್ಟು ಕೊಡದ ಪರಿಣಾಮ ನಮಗೆ ಭೂಮಿ ಬೇಕೇ ಬೇಕು ಎಂದು ಪಟ್ಟು ಹಿಡಿದ ಸುಮಾರು 500ಕ್ಕೂ ಹೆಚ್ಚು ರೈತರು ಕಳೆದ ಒಂದು ತಿಂಗಳಿಂದ ಪ್ರತಿಭಟನೆ ನಡೆಸಿದ್ದರು.

ರೈತರ ಪ್ರತಿಭಟನೆಗೆ ಬಗ್ಗದ ಅರಣ್ಯ ಅಧಿಕಾರಿಗಳು ಗುಬ್ಬಿ ಅರಣ್ಯ ವಲಯ ಅಧಿಕಾರಿ ದುಗ್ಗಪ್ಪ ನೇತೃತ್ವದಲ್ಲಿ ನಿನ್ನೆ ಸಂಜೆ ಏಕಾಏಕಿ ಬುಲ್‌ಡೋಜರ್‌ ಕೊಂಡೊಯ್ದು ರೈತರ ಜಮೀನನ್ನು ವಶಪಡಿಸಿಕೊಳ್ಳಲು ಮುಂದಾಗಿದ್ದರು. ಇದನ್ನು ತಡೆಯಲು ಹೋದ ರೈತರಿಗೆ ಲಾಠಿ ಹಿಡಿದು ಮನಸೋಇಚ್ಛೆ ಥಳಿಸಿದ್ದಾರೆ. 30ಕ್ಕೂ ಹೆಚ್ಚು ರೈತರನ್ನು ಥಳಿಸಲಾಗಿದೆ. ಗಾಯಾಳುಗಳು ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಕ್ಷಸರಂತೆ ವರ್ತಿಸಿದ ಅರಣ್ಯ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ರೈತರ ಮೇಲೆ ಗೂಂಡಾ ವರ್ತನೆ ಮಾಡಿದ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದೇ ವೇಳೆ ಆಕ್ರೋಶಗೊಂಡ ರೈತರು ಕೂಡ ಅರಣ್ಯ ಇಲಾಖೆ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ಸಿಬ್ಬಂದಿಗೆ ಗಾಯವಾಗಿದೆ.

ಇದನ್ನೂ ಓದಿ: Sagara News: ರೈತರ 20 ಎಕರೆ ಜಮೀನಿಗೆ ಗುಂಡಿ ತೆಗೆದು ಒಕ್ಕಲೆಬ್ಬಿಸಲು ಮುಂದಾದ ಅರಣ್ಯ ಇಲಾಖೆ: ರೈತರ ಧರಣಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಹುಬ್ಬಳ್ಳಿ

Kidnap Case : ಅಖಂಡೇಶ್ವರ ಜಾತ್ರೆಗೆ ಹೋದ ಅತಿಥಿ ಶಿಕ್ಷಕಿಯನ್ನು ಅಪಹರಿಸಿದ ಮುಸ್ಲಿಂ ಯುವಕ

Kidnap Case : ಜಾತ್ರೆಗೆ ಹೋಗಿ ಬರುವುದಾಗಿ ಮನೆಯಿಂದ ಹೊರಹೋದ ಅತಿಥಿ ಶಿಕ್ಷಕಿಯನ್ನು ಯುವಕನೊಬ್ಬ ಕಿಡ್ನ್ಯಾಪ್‌ ಮಾಡಿದ್ದಾನೆ. ಈ ಬಗ್ಗೆ ಯುವತಿ ತಂದೆ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದು, ಮಗಳನ್ನು ಹುಡುಕಿಕೊಡಿ ಎಂದು ಮನವಿ ಮಾಡಿದ್ದಾರೆ.

VISTARANEWS.COM


on

By

Murder case in hublli
Koo

ಹುಬ್ಬಳ್ಳಿ: ಯುವಕನೊರ್ವ ಅತಿಥಿ ಶಿಕ್ಷಕಿಯನ್ನು ಅಪಹರಿಸಿದ್ದಾನೆ (Kidnap Case) ಎಂಬ ಆರೋಪವೊಂದು ಕೇಳಿ ಬಂದಿದೆ. ಮಗಳ ಅಪಹರಣವಾಗಿದೆ ಎಂದು ಶಿಕ್ಷಕಿ ತಂದೆಯಿಂದ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಗುಡಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಳಸ ಗ್ರಾಮದ ಅಕ್ಷತಾ ಕಳಸೂರು ಅಪಹರಣಕ್ಕೊಳಗಾದ ಅತಿಥಿ ಶಿಕ್ಷಕಿಯಾಗಿದ್ದಾರೆ. ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಾಮದ ಸುಬಾನಿ ದೊಡ್ಡಮನಿ ಎಂಬಾತನ ವಿರುದ್ಧ ದೂರು ಕೊಟ್ಟಿದ್ದಾರೆ. ಏಪ್ರಿಲ್ 18 ರಂದು ಯುವತಿಯನ್ನು ಯಾವುದೋ ದುರುದ್ದೇಶದಿಂದ ಅಪಹರಿಸಿದ್ದಾನೆಂದು ಅಕ್ಷತಾ ತಂದೆ ಆರೋಪಿಸಿದ್ದಾರೆ. ನಾಲ್ಕೈದು ವರ್ಷಗಳಿಂದ ಈ ಸುಬಾನಿ ಯುವತಿಯನ್ನು ಹಿಂಬಾಲಿಸುವುದು, ಪೀಡಿಸುವುದು, ದಾರಿಯಲ್ಲಿ ಬರುವಾಗ ಅಡ್ಡಗಟ್ಟುವುದು ಮಾಡುತ್ತಿದ್ದ. ಈ ಬಗ್ಗೆ ಅಕ್ಷತಾ ತನ್ನ ತಂದೆ ಬಳಿ ಹೇಳಿಕೊಂಡಿದ್ದಳು.

ಹೀಗಾಗಿ ಸುಬಾನಿ ಮತ್ತು ಕುಟುಂಬಸ್ಥರನ್ನು ಕರೆಸಿ ಬುದ್ಧಿವಾದ ಹೇಳಿ, ಮತ್ತೆ ಮಗಳಿಗೆ ತೊಂದರೆ ಕೊಡದಂತೆ ಎಚ್ಚರಿಕೆ ಕೊಟ್ಟಿದ್ದರು. ಆ ನಂತರವೂ ಈತನ ಕಾಟ ಮುಂದುವರಿದಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕಳಸ ಗ್ರಾಮದ ಅಖಂಡೇಶ್ವರ ಜಾತ್ರೆಗೆ ಹೋಗಿ ಬರುವುದಾಗಿ ಬೆಳಗ್ಗೆ 5 ಗಂಟೆಗೆ ಮನೆಯಿಂದ ಹೊರಹೋದವಳು ನಾಪತ್ತೆಯಾಗಿದ್ದಾಳೆ. ಅಕ್ಷತಾಳನ್ನು ಸುಬಾನಿ ಮಾಬುಸಾಬ್ ದೊಡ್ಡಮನಿ ಅಪಹರಿಸಿದ್ದಾನೆಂದು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

ಒಂಟಿ ಮಹಿಳೆ ಕೊಲೆ ಕೇಸ್‌; ಅತಿಯಾದ ಸೆಕ್ಸ್‌ಗೆ ಒತ್ತಾಯಿಸಿದವಳನ್ನು ಬೆಡ್‌ ರೂಂನಲ್ಲೇ ಕೊಂದ ಯುವಕ

ಬೆಂಗಳೂರು: ಕಳೆದ ಏ. 19ರಂದು ಬೆಂಗಳೂರಿನ ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್‌ನಲ್ಲಿ ಮಹಿಳೆಯೊಬ್ಬರ ಬರ್ಬರ (Murder Case) ಹತ್ಯೆಯಾಗಿತ್ತು. ಶೋಭಾ (48) ಎಂಬಾಕೆಯ ಮೃತದೇಹವು ಬೆಡ್‌ ರೂಮಿನಲ್ಲಿ ನಗ್ನವಾಗಿ ಬಿದ್ದಿತ್ತು. ಇದೀಗ ಒಂಟಿ ಮಹಿಳೆ ಕೊಲೆ ಪ್ರಕರಣವನ್ನು ಭೇದಿಸಿರುವ ಕೊಡಿಗೇಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಹೇರೋಹಳ್ಳಿ ಮೂಲದ ನವೀನ್ ಬಂಧಿತ ಆರೋಪಿಯಾಗಿದ್ದಾನೆ. ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಕೊಟ್ಟಿದ್ದ ಶೋಭಾ, ಕೊಡಿಗೆಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿ ವಾಸವಾಗಿದ್ದರು. ಈ ವೇಳೆ ಶೋಭಾಗೆ ಇನ್ಸ್ಟಾಗ್ರಾಂನಲ್ಲಿ ಆರೋಪಿ ನವೀನ್ ಪರಿಚಯವಾಗಿದ್ದ. ಪರಿಚಯವು ಸ್ನೇಹ, ಪ್ರೀತಿಗೆ ತಿರುಗಿ, ಮಗನ ವಯಸ್ಸಿನ ಯುವಕನೊಂದಿಗೆ ಶೋಭಾ ಅನೈತಿಕ ಸಂಬಂಧವನ್ನು ಹೊಂದಿದ್ದರು.

ಕೊಲೆ ನಡೆದ ದಿನವೂ ಶೋಭಾ ಮನೆಗೆ ನವೀನ್ ಬಂದಿದ್ದ. ಏ.19ರಂದು ಇಬ್ಬರು ದೈಹಿಕ ಸಂರ್ಪಕವನ್ನು ಬೆಳೆಸಿದ್ದರು. ಆ ನಂತರ ಶೋಭಾ ಮತ್ತೆ ನವೀನ್‌ಗೆ ಸೆಕ್ಸ್‌ಗೆ ಒತ್ತಾಯಿಸುತ್ತಿದ್ದಳು. ಈಕೆ ಅತಿಯಾಗಿ ಸೆಕ್ಸ್‌ಗೆ ಒತ್ತಾಯಿಸಿದ್ದಕ್ಕೆ ಬೇಸರಗೊಂಡ ನವೀನ್‌ ಬೆಡ್‌ ರೂಮಿನಲ್ಲಿ ಜತೆಯಾಗಿ ಇದ್ದಾಗಲೇ ಬರ್ಬರವಾಗಿ ಕೊಂದು ಪರಾರಿ ಆಗಿದ್ದ.

ನಂತರ ಶೋಭಾ ಮಗಳು ತಾಯಿಗೆ ಎಷ್ಟು ಬಾರಿ ಫೋನ್‌ ಮಾಡಿದರೂ ಸ್ವೀಕರಿಸಿರಲಿಲ್ಲ. ಇದರಿಂದ ಆತಂಕಗೊಂಡು, ಮನೆಗೆ ಬಂದು ನೋಡಿದಾಗ ತಾಯಿ ನಗ್ನ ಸ್ಥಿತಿಯಲ್ಲಿ ರಕ್ತಸಿಕ್ತವಾಗಿ ಬಿದ್ದಿದ್ದು ಕಣ್ಣಿಗೆ ಬಿದ್ದಿತ್ತು. ಆ ಪ್ರಕರಣವು ಬೆಳಕಿಗೆ ಬಂದಿತ್ತು. ಸದ್ಯ ಆರೋಪಿಯನ್ನು ಬಂಧಿಸಿರುವ ಕೊಡಿಗೇಹಳ್ಳಿ ಠಾಣೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Modi in Karnataka: ಏಪ್ರಿಲ್‌ 28 – 29ಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ; ಯಾವ ಯಾವ ಕ್ಷೇತ್ರದಲ್ಲಿ ಮತ ಬೇಟೆ?

Modi in Karnataka: ಏಪ್ರಿಲ್‌ 28ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಂದು ಮೂರು ಕಡೆ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ದಾವಣಗೆರೆ, ಬೆಳಗಾವಿ ಹಾಗೂ ಉತ್ತರಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ. ಈ ಮೂಲಕ ಇವುಗಳೂ ಸೇರಿದಂತೆ ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳ ಮತದಾರರನ್ನೂ ಸೆಳೆಯಲು ಬಿಜೆಪಿ ಪ್ಲ್ಯಾನ್‌ ಮಾಡಿಕೊಂಡಿದೆ.

VISTARANEWS.COM


on

Modi in Karnataka PM Narendra Modi to visit from April 28 and 29
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಈಗಾಗಲೇ ಒಂದು ಸುತ್ತಿನ ಮತ ಬೇಟೆ ಮುಗಿಸಿ ತೆರಳಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಎರಡನೇ ಹಂತದ ಚುನಾವಣೆಗೆ ರಿಎಂಟ್ರಿ ಕೊಡಲಿದ್ದಾರೆ. ಈ ವೇಳೆ ಮೋದಿ (Modi in Karnataka) ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಏಪ್ರಿಲ್‌ 28 ಹಾಗೂ 29ರಂದು ಕರ್ನಾಟಕದಲ್ಲಿ ಜನರನ್ನು ಮೋಡಿ ಮಾಡಲು ಮೋದಿ ಮುಂದಾಗಿದ್ದಾರೆ.

ಏಪ್ರಿಲ್‌ 28ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಂದು ಮೂರು ಕಡೆ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ದಾವಣಗೆರೆ, ಬೆಳಗಾವಿ ಹಾಗೂ ಉತ್ತರಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ. ಈ ಮೂಲಕ ಇವುಗಳೂ ಸೇರಿದಂತೆ ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳ ಮತದಾರರನ್ನೂ ಸೆಳೆಯಲು ಬಿಜೆಪಿ ಪ್ಲ್ಯಾನ್‌ ಮಾಡಿಕೊಂಡಿದೆ.

ಮೂರು ಕಡೆಯೂ ಬೃಹತ್‌ ಸಮಾವೇಶ

ಈ ಮೂರು ಲೋಕಸಭಾ ಕ್ಷೇತ್ರಗಳಲ್ಲಿಯೂ ಬೃಹತ್‌ ಸಮಾವೇಶ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಂದು ಬೆಳಗಾವಿಯಲ್ಲಿ 28 ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.

29ರಂದು 4 ಕಡೆ ಸಮಾವೇಶ

ಏಪ್ರಿಲ್‌ 29ರಂದು ಕಲಬುರಗಿ, ಬಳ್ಳಾರಿ, ರಾಯಚೂರು ಅಥವಾ ಕೊಪ್ಪಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಮಾವೇಶವನ್ನು ನಡೆಸಲಿದ್ದಾರೆ.

ಕರ್ನಾಟಕದಲ್ಲಿ ಇಂದು ಅಮಿತ್‌ ಶಾ, ಪ್ರಿಯಾಂಕಾ ವಾದ್ರಾ ಪ್ರಚಾರ

ಮಂಗಳವಾರ (ಏಪ್ರಿಲ್‌ 23) ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಹಾಗೂ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ (Priyanka Vadra) ಅವರು ಅಬ್ಬರದ ಪ್ರಚಾರ ಮಾಡಲಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿಯೇ ಮಂಗಳವಾರ ಅಮಿತ್‌ ಶಾ ಹಾಗೂ ಪ್ರಿಯಾಂಕಾ ವಾದ್ರಾ ಅವರು ಪ್ರಚಾರ ಮಾಡುತ್ತಿರುವುದು ವಿಶೇಷವಾಗಿದೆ. ಇಂದು ಸಂಜೆ 7.50ಕ್ಕೆ ಅಮಿತ್‌ ಶಾ ಅವರು ತೇಜಸ್ವಿ ಸೂರ್ಯ ಪರ ರೋಡ್‌ ಶೋ ನಡೆಸಲಿದ್ದಾರೆ. ಸ್ವಾಮಿ ವಿವೇಕಾನಂದ ವೃತ್ತದಿಂದ ಸೇಂಟ್‌ ಫ್ರಾನ್ಸಿಸ್‌ ಶಾಲೆವರೆಗೂ ಅಮಿತ್‌ ಶಾ ಅವರು ರೋಡ್‌ ಶೋ ನಡೆಸುವ ಮೂಲಕ ತೇಜಸ್ವಿ ಸೂರ್ಯ ಪರ ಮತಯಾಚನೆ ಮಾಡಲಿದ್ದಾರೆ. ರೋಡ್‌ ಶೋಗಾಗಿ ಬಿಜೆಪಿ ಸಕಲ ಸಿದ್ಧತೆ ಮಾಡಿಕೊಂಡಿದೆ. 8.45ರವರೆಗೆ ರೋಡ್‌ ಶೋ ನಡೆಯಲಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರು ಮಧ್ಯಾಹ್ನ 2 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸಲಿದ್ದು, ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಪ್ರಿಯಾಂಕಾ ವಾದ್ರಾ ಅವರು ಭಾಷಣ ಮಾಡಲಿದ್ದಾರೆ. ಇದಾದ ನಂತರ ಸಂಜೆ ಬೆಂಗಳೂರಿಗೆ ಆಗಮಿಸುವ ಪ್ರಿಯಾಂಕಾ ವಾದ್ರಾ, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರ ಪರವಾಗಿ ಪ್ರಚಾರ ನಡೆಸುವ ಮೂಲಕ ಹೆಣ್ಣುಮಕ್ಕಳ ಮತ ಸೆಳೆಯುವ ಪ್ರಯತ್ನ ಮಾಡಲಿದ್ದಾರೆ.

ಅಮಿತ್‌ ಶಾ ಅವರು ಬೊಮ್ಮನಹಳ್ಳಿ ವೃತ್ತದಿಂದ ಪ್ರಚಾರ ಆರಂಭಿಸಿದರೆ, ಪ್ರಿಯಾಂಕಾ ವಾದ್ರಾ ಅವರು ಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಎಚ್.ಎಸ್. ಆರ್ ಬಡಾವಣೆಯಿಂದ ಪ್ರಚಾರ ಆರಂಭಿಸಲಿದ್ದಾರೆ. ಕರ್ನಾಟಕದಲ್ಲಿ ಏಪ್ರಿಲ್‌ 26ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಏಪ್ರಿಲ್‌ 24ರಂದೇ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಇದರಿಂದಾಗಿ ಮಂಗಳವಾರದ ಪ್ರಚಾರವು ಪ್ರಾಮುಖ್ಯತೆ ಪಡೆದಿದೆ. ಕರ್ನಾಟಕದಲ್ಲಿ ಈಗಾಗಲೇ ನರೇಂದ್ರ ಮೋದಿ ಅವರು ಪ್ರಚಾರ ನಡೆಸಿದ್ದಾರೆ.

Continue Reading

ಬೆಂಗಳೂರು

Murder Case : ಒಂಟಿ ಮಹಿಳೆ ಕೊಲೆ ಕೇಸ್‌; ಅತಿಯಾದ ಸೆಕ್ಸ್‌ಗೆ ಒತ್ತಾಯಿಸಿದವಳನ್ನು ಬೆಡ್‌ ರೂಂನಲ್ಲೇ ಕೊಂದ ಯುವಕ

Murder Case : ಕೊಡಿಗೆಹಳ್ಳಿಯಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ ನಡೆದಿತ್ತು. ನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಇದೀಗ ಹಂತಕನನ್ನು ಪೊಲೀಸರು ಬಂಧಿಸಿದ್ದು, ಮಹಿಳೆ ಅತಿಯಾಗಿ ಸೆಕ್ಸ್‌ಗೆ ಒತ್ತಾಯಿಸಿದ್ದಕ್ಕೆ ಹತ್ಯೆ ಮಾಡಿದ್ದಾಗಿ ಆರೋಪಿ ಬಾಯ್ಬಿಟ್ಟಿದ್ದಾನೆ.

VISTARANEWS.COM


on

By

Murder Case In Bengaluru
ಆರೋಪಿ ನವೀನ್‌ ಕೊಲೆಯಾದ ಶೋಭಾ
Koo

ಬೆಂಗಳೂರು: ಕಳೆದ ಏ. 19ರಂದು ಬೆಂಗಳೂರಿನ ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್‌ನಲ್ಲಿ ಮಹಿಳೆಯೊಬ್ಬರ ಬರ್ಬರ (Murder Case) ಹತ್ಯೆಯಾಗಿತ್ತು. ಶೋಭಾ (48) ಎಂಬಾಕೆಯ ಮೃತದೇಹವು ಬೆಡ್‌ ರೂಮಿನಲ್ಲಿ ನಗ್ನವಾಗಿ ಬಿದ್ದಿತ್ತು. ಇದೀಗ ಒಂಟಿ ಮಹಿಳೆ ಕೊಲೆ ಪ್ರಕರಣವನ್ನು ಭೇದಿಸಿರುವ ಕೊಡಿಗೇಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಹೇರೋಹಳ್ಳಿ ಮೂಲದ ನವೀನ್ ಬಂಧಿತ ಆರೋಪಿಯಾಗಿದ್ದಾನೆ. ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಕೊಟ್ಟಿದ್ದ ಶೋಭಾ, ಕೊಡಿಗೆಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿ ವಾಸವಾಗಿದ್ದರು. ಈ ವೇಳೆ ಶೋಭಾಗೆ ಇನ್ಸ್ಟಾಗ್ರಾಂನಲ್ಲಿ ಆರೋಪಿ ನವೀನ್ ಪರಿಚಯವಾಗಿದ್ದ. ಪರಿಚಯವು ಸ್ನೇಹ, ಪ್ರೀತಿಗೆ ತಿರುಗಿ, ಮಗನ ವಯಸ್ಸಿನ ಯುವಕನೊಂದಿಗೆ ಶೋಭಾ ಅನೈತಿಕ ಸಂಬಂಧವನ್ನು ಹೊಂದಿದ್ದರು.

ಕೊಲೆ ನಡೆದ ದಿನವೂ ಶೋಭಾ ಮನೆಗೆ ನವೀನ್ ಬಂದಿದ್ದ. ಏ.19ರಂದು ಇಬ್ಬರು ದೈಹಿಕ ಸಂರ್ಪಕವನ್ನು ಬೆಳೆಸಿದ್ದರು. ಆ ನಂತರ ಶೋಭಾ ಮತ್ತೆ ನವೀನ್‌ಗೆ ಸೆಕ್ಸ್‌ಗೆ ಒತ್ತಾಯಿಸುತ್ತಿದ್ದಳು. ಈಕೆ ಅತಿಯಾಗಿ ಸೆಕ್ಸ್‌ಗೆ ಒತ್ತಾಯಿಸಿದ್ದಕ್ಕೆ ಬೇಸರಗೊಂಡ ನವೀನ್‌ ಬೆಡ್‌ ರೂಮಿನಲ್ಲಿ ಜತೆಯಾಗಿ ಇದ್ದಾಗಲೇ ಬರ್ಬರವಾಗಿ ಕೊಂದು ಪರಾರಿ ಆಗಿದ್ದ.

ನಂತರ ಶೋಭಾ ಮಗಳು ತಾಯಿಗೆ ಎಷ್ಟು ಬಾರಿ ಫೋನ್‌ ಮಾಡಿದರೂ ಸ್ವೀಕರಿಸಿರಲಿಲ್ಲ. ಇದರಿಂದ ಆತಂಕಗೊಂಡು, ಮನೆಗೆ ಬಂದು ನೋಡಿದಾಗ ತಾಯಿ ನಗ್ನ ಸ್ಥಿತಿಯಲ್ಲಿ ರಕ್ತಸಿಕ್ತವಾಗಿ ಬಿದ್ದಿದ್ದು ಕಣ್ಣಿಗೆ ಬಿದ್ದಿತ್ತು. ಆ ಪ್ರಕರಣವು ಬೆಳಕಿಗೆ ಬಂದಿತ್ತು. ಸದ್ಯ ಆರೋಪಿಯನ್ನು ಬಂಧಿಸಿರುವ ಕೊಡಿಗೇಹಳ್ಳಿ ಠಾಣೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Love Case : ಪ್ರಿಯತಮೆಯ ಮದುವೆ ದಿನವೇ ಪ್ರಿಯತಮನ ರುಂಡ-ಮುಂಡ ಕಟ್‌; ಕೊಲೆಯೋ? ಆತ್ಮಹತ್ಯೆಯೋ?

ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಮುಸ್ಲಿಂ ಯುವಕನ ಕೊಂದ ಅರ್ಚಕ

ರಾಯಚೂರು: ರಾಯಚೂರಿನಲ್ಲಿ ಮುಸ್ಲಿಂ ಯುವಕನ ಬರ್ಬರ ಹತ್ಯೆ (Murder Case) ನಡೆದಿದೆ. ರಾಯಚೂರಿನ ತುಗ್ಗಲದಿನ್ನಿ ಗ್ರಾಮದಲ್ಲಿರುವ ಆಂಜನೇಯ ಗುಡಿ ಪೂಜಾರಿಯ ಪತ್ನಿಗೆ ಮುಸ್ಲಿಂ ಯುವಕ ಮೆಸೇಜ್ ಮಾಡಿದ್ದಕ್ಕೆ ಹತ್ಯೆ ನಡೆದಿದೆ ಎನ್ನಲಾಗಿದೆ. ಖಾದರ್ ಭಾಷಾ (28) ಕೊಲೆಯಾದವನು. ಮಾರುತಿ ಆರೋಪಿಯಾಗಿದ್ದಾನೆ.

ಪತ್ನಿ‌ ಮೇಲೆ ಕಣ್ಣು ಹಾಕಿದ ಖಾದರ್‌ ಭಾಷಾನ ಕಣ್ಣು ಕಿತ್ತು ಹಾಕಿ, ಮುಖದ ಗುರುತು ಸಿಗದಂತೆ ಕೊಚ್ಚಿ ಕೊಲೆ ಮಾಡಲಾಗಿದೆ. ಹನುಮ ಜಯಂತಿ ದಿನದಂದೆ ಬರ್ಬರವಾಗಿ ಕೊಲೆಗೈಯಲಾಗಿದೆ. ಇಬ್ಬರೂ ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಮಾರುತಿ ಕೊಲೆಗೈದು ತಾನೇ ಖುದ್ದಾಗಿ ಠಾಣೆಗೆ ಬಂದು ಶರಣಾಗತಿ ಆಗಿದ್ದಾನೆ.

ಮಂಗಳವಾರ ಬೆಳಗ್ಗೆ 9 ಗಂಟೆಗೆ ಸುಮಾರಿಗೆ ತುಗ್ಗಲದಿನ್ನಿ ಗ್ರಾಮದಲ್ಲಿ ಕೃತ್ಯ ನಡೆದಿದೆ. ಕೊಲೆಯಲ್ಲಿ 6 ರಿಂದ 7 ಜನ ಭಾಗಿಯಾಗಿರುವ ಶಂಕೆ ಇದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಕ್ತಸಿಕ್ತವಾಗಿ ಬಿದ್ದಿದ್ದ ಖಾದರ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಳಗಾನೂರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು

ಯಾದಗಿರಿ ನಗರದ ಶಹಾಪೂರ ಪೇಟ್ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರಿಂದ ದಲಿತ ಹಿಂದು ಯುವಕನ‌ (Murder Case ) ಹತ್ಯೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ರಾಕೇಶ್ (22) ಮೃತ ದುರ್ದೈವಿ.

ಭಾನುವಾರ ರಾತ್ರಿ ರಾಕೇಶ್‌ ಊಟ ಮಾಡಲು ಹೊರಗೆ ಬಂದಿದ್ದ. ಅನ್ಯಕೋಮಿನವರ ಮನೆಯಲ್ಲಿ ರೊಟ್ಟಿ ಮಾರಾಟ ಮಾಡುತ್ತಿದ್ದರು. ಹೀಗಾಗಿ ಮನೆ ಸಮೀಪದಲ್ಲೇ ಇರುವ ರೊಟ್ಟಿ ಕೇಂದ್ರಕ್ಕೆ ರಾಕೇಶ್‌ ತೆರಳಿದ್ದ. ಈ ವೇಳೆ ಮನೆ ಬಾಗಿಲು ಬಡಿದು ರೊಟ್ಟಿ ಕೇಳಿದ್ದ, ಆದರೆ ರೊಟ್ಟಿ ಇಲ್ಲವೆಂದು ಕಳುಹಿಸಿದ್ದರು. ಮನೆಗೆ ವಾಪಸ್ ಬಂದ ರಾಕೇಶ್‌ ಖಾಲಿ ಹೊಟ್ಟೆಯಲ್ಲಿ ನಿದ್ರೆಗೆ ಜಾರಿದ್ದ.

ಸ್ವಲ್ಪ ಸಮಯದ ನಂತರ ರಾಕೇಶ್‌ ಮನೆಗೆ ಬಂದಿದ್ದ ಅನ್ಯಕೋಮಿನ ಯುವಕರು, ರೊಟ್ಟಿ ಕೇಳಲು ಮನೆಗೆ ಯಾಕೆ ಬಂದ್ರಿ ಎಂದು ಪ್ರಶ್ನೆ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ಪ್ರಮುಖ ಆರೋಪಿ ಫೈಯಾಜ್ ಸೇರಿ ನಾಲ್ವರು ರಾಕೇಶ್‌ನ ಗುಪ್ತಾಂಗಕ್ಕೆ ಹಲ್ಲೆ ಮಾಡಿದ್ದಾರೆ. ಮಾರಣಾಂತಿಕ ಹಲ್ಲೆಗೊಳಗಾದ ರಾಕೇಶ್‌ ಉಸಿರುಚೆಲ್ಲಿದ್ದಾನೆ ಎಂದು ರಾಕೇಶ್ ತಾಯಿ ಆರೋಪಿಸಿದ್ದಾರೆ.

ಇನ್ನು ಹಿಂದು ಯುವಕನ‌ ಹತ್ಯೆ ಮರೆಮಾಚಲು ಪೊಲೀಸ್ ಇಲಾಖೆ ಯತ್ನಿಸುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಭಾನುವಾರ ತಡರಾತ್ರಿ ಕೊಲೆ ನಡೆದಿದ್ದು, ಕೇಸ್ ದಾಖಲಿಸಿಕೊಂಡಿಲ್ಲ. ದಲಿತ ಕುಟುಂಬಕ್ಕೆ ಬಿಜೆಪಿ, ಹಿಂದು ಕಾರ್ಯಕರ್ತರು ಬೆಂಗಾವಲಾಗಿ ನಿಂತ ಕೂಡಲೇ ಎಚ್ಚೆತ್ತ ಪೊಲೀಸರು, ಕೊಲೆ ನಡೆದ 18 ಗಂಟೆಗಳ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಖುದ್ದು ಎಸ್‌ಪಿ ಜಿ.ಸಂಗೀತಾ ಅವರು ಸ್ಥಳದಲ್ಲಿ ನಿಂತು ಆಸ್ಪತ್ರೆಗೆ ರವಾನಿಸಿದ್ದರು.

ಪ್ರಕರಣ ಸಂಬಂಧ ಯಾದಗಿರಿ ಎಸ್‌ಪಿ ಜಿ.ಸಂಗೀತಾ ಪ್ರತಿಕ್ರಿಯಿಸಿ, ನಮಗೆ ಕೊಲೆ ನಡೆದಿರುವ ಬಗ್ಗೆ ಗೊತ್ತೇ ಇಲ್ಲ. ಕೊಲೆಯಾದ ಯುವಕನ ಕುಟುಂಬಸ್ಥರು ಇನ್ನೂ ಏನು ಹೇಳಿಲ್ಲ. ದೂರು ಕೊಡಿ ಎಂದರೆ ಅವರು ಬಂದಿಲ್ಲ. ಪ್ರಕರಣ ಸಂಬಂಧ ಮಾಹಿತಿ ಕೇಳಿದರೆ, ರೊಟ್ಟಿ ಕೇಂದ್ರಕ್ಕೆ ಹೋಗಿದ್ದ ಎನ್ನುತ್ತಿದ್ದಾರೆ. ಅವರ ಹಿರಿಯರ ಜತೆ ಚರ್ಚಿಸಿ ನಂತರ ಬಂದು ದೂರು ಕೊಡುತ್ತಾರೆ. ದೂರು ಕೊಟ್ಟ ನಂತರ ವಿಚಾರಣೆ ಮಾಡಿ ಆರೋಪಿಯನ್ನು ಬಂಧಿಸುತ್ತೇವೆ ಎಂದು ಹೇಳಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

Narendra Modi: ಕಾಂಗ್ರೆಸ್‌ ರಾಜ್ಯದಲ್ಲಿ ಹನುಮಾನ್‌ ಚಾಲೀಸಾ ಹೇಳುವುದೂ ಮಹಾಪರಾಧ; ರಾಜಸ್ಥಾನದಲ್ಲಿ ಮೋದಿಯಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ತರಾಟೆ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ (Lok Sabha Election 2024) ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಮೊದಲ ಆದ್ಯತೆಯಾಗಿ ಹಂಚುತ್ತದೆ ಎಂಬ ಆರೋಪವನ್ನು ಮತ್ತೊಮ್ಮೆ ಪ್ರಸ್ತಾಪ ಮಾಡಿದ ಮೋದಿ (Narendra Modi), ನಾನು ಸತ್ಯ ಹೇಳಿದರೆ ಕಾಂಗ್ರೆಸ್‌ಗೆ ಮೆಣಸಿನ ಉರಿ ಬಿದ್ದಂತಾಗುತ್ತದೆ. ಈ ದೇಶದ ಸಂಪತ್ತಿನಲ್ಲಿ ಮುಸಲ್ಮಾನರಿಗೆ ಮೊದಲ ಪಾಲು ಸಿಗಬೇಕು ಎಂದು ಮನಮೋಹನ್‌ ಸಿಂಗ್‌ ತಾವು ಪ್ರಧಾನಿಯಾಗಿದ್ದ ಹೇಳಿದ್ದನ್ನು ನೀವು ಮರೆಯಬೇಡಿ ಎಂದಿದ್ದಾರೆ.

VISTARANEWS.COM


on

Narendra Modi and Siddaramaiah
Koo

ಕಾಂಗ್ರೆಸ್‌ ಆಡಳಿತ ಇರುವ ರಾಜ್ಯಗಳಲ್ಲಿ ಹನುಮಾನ್‌ ಚಾಲೀಸಾ ಹೇಳುವುದೂ ಮಹಾ ಅಪರಾಧ. ಶೋಭಾ ಯಾತ್ರೆ ನಡೆಸಲೂ ಅಲ್ಲಿ ಅವಕಾಶ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಜಸ್ಥಾನದಲ್ಲಿ ತಮ್ಮ ಚುನಾವಣಾ ಪ್ರಚಾರದ (Lok Sabha Election 2024) ವೇಳೆ ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

Modi in Karnataka Congress snatches Rs 4000 under Kisan Samman says PM Narendra Modi

ಕಾಂಗ್ರೆಸ್‌ ಎಂದೂ ಅಭಿವೃದ್ಧಿ ರಾಜಕಾರಣವನ್ನು ಮಾಡಿಯೇ ಇಲ್ಲ. ಅದು ಮಾಡುತ್ತಿರುವುದು ವೋಟ್‌ ಬ್ಯಾಂಕ್‌ ಪಾಲಿಟಿಕ್ಸ್‌, ಒಂದು ಸಮುದಾಯದ ಓಲೈಕೆ ರಾಜಕಾರಣ ಎಂದೂ ಮೋದಿ ಟೀಕಿಸಿದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಮೊದಲ ಆದ್ಯತೆಯಾಗಿ ಹಂಚುತ್ತದೆ ಎಂಬ ಆರೋಪವನ್ನು ಮತ್ತೊಮ್ಮೆ ಪ್ರಸ್ತಾಪ ಮಾಡಿದ ಮೋದಿ, ನಾನು ಸತ್ಯ ಹೇಳಿದರೆ ಕಾಂಗ್ರೆಸ್‌ಗೆ ಮೆಣಸಿನ ಉರಿ ಬಿದ್ದಂತಾಗುತ್ತದೆ. ಈ ದೇಶದ ಸಂಪತ್ತಿನಲ್ಲಿ ಮುಸಲ್ಮಾನರಿಗೆ ಮೊದಲ ಪಾಲು ಸಿಗಬೇಕು ಎಂದು ಮನಮೋಹನ್‌ ಸಿಂಗ್‌ ತಾವು ಪ್ರಧಾನಿಯಾಗಿದ್ದ ಹೇಳಿದ್ದನ್ನು ನೀವು ಮರೆಯಬೇಡಿ. ನಿಮ್ಮ ಕೊರಳಿನ ಮಂಗಳಸೂತ್ರವನ್ನೂ ಅವರು ಬಿಡುವುದಿಲ್ಲ ಎಂದು ಎಚ್ಚರಿಸಿದರು.

Narendra Modi

ದಲಿತರ ಮೀಸಲು ಮುಸಲ್ಮಾನರಿಗೆ

ದಲಿತರು ಮತ್ತು ಆದಿವಾಸಿಗಳ ಮೀಸಲ ಪಾಲನ್ನು ಕಿತ್ತು ಕಾಂಗ್ರೆಸ್‌ ಮುಸಲ್ಮಾನರಿಗೆ ನೀಡಲು ಸದಾ ಪ್ರಯತ್ನಿಸುತ್ತಿರುತ್ತದೆ. ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ಪರಿಶಿಷ್ಟರ ಮೀಸಲಿನ ಪಾಲನ್ನು ಕಿತ್ತು ಮುಸಲ್ಮಾನರಿಗೆ ನೀಡಿತ್ತು. ಮುಂದೆ ಅಲ್ಲಿ ಬಿಜೆಪಿ ಸರ್ಕಾರ ಬಂದಾಗ ಅದನ್ನು ರದ್ದುಪಡಿಸಿ ಎಸ್‌ಸಿ, ಎಸ್‌ಟಿಯವರಿಗೆ ನ್ಯಾಯ ದೊರಕಿಸಲಾಯಿತು. ಆಂಧ್ರ ಪ್ರದೇಶದ ಕಾಂಗ್ರೆಸ್‌ ಸರ್ಕಾರ ಕೂಡ ಎಸ್‌ಸಿ, ಎಸ್‌ಟಿ ಮೀಸಲು ಕಡಿಮೆ ಮಾಡಿ ಮುಸಲ್ಮಾನರ ಮೀಸಲು ಹೆಚ್ಚಿಸಲು ನಾಲ್ಕು ಬಾರಿ ವಿಧೇಯಕ ಮಂಡಿಸಿ ಕಾಯಿದೆ ರೂಪಿಸಿತ್ತು. ಆದರೆ ಕೋರ್ಟ್‌ ಮಧ್ಯಪ್ರವೇಶದ ಕಾರಣ ಅದು ಸಾಧ್ಯವಾಗಲಿಲ್ಲ. 2012ರಲ್ಲಿ ಕೇಂದ್ರದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಹೀಗೆಯೇ ಮಾಡಲು ಹೊರಟಿತ್ತು. ಎಸ್‌ಸಿ-ಎಸ್‌ಟಿ ಮತ್ತು ಆಸಿವಾಸಿಗಳಿಗೆ ನಾನು ಯಾವ ಕಾರಣಕ್ಕೂ ಮೀಸಲಿನಲ್ಲಿ ನಷ್ಟ ಮಾಡಲು ಬಿಡುವುದಿಲ್ಲ. ಇದು ಮೋದಿ ಗ್ಯಾರಂಟಿ ಎಂದು ಮೋದಿ ಘೋಷಿಸಿದರು.

ನುಸುಳುಕೋರರಿಗೆ ಸೌಲಭ್ಯ ಕೊಡಬೇಕೆ?

ನುಸುಳುಕೋರರಿಗೆ, ದೇಶದ್ರೋಹಿಗಳಿಗೆ ಕಾಂಗ್ರೆಸ್‌ ಈ ದೇಶದ ಸಂಪತ್ತು ಹಂಚಲು ಬಯಸುತ್ತದೆ ಎಂದು ತೀವ್ರ ವಾಗ್ದಾಳಿ ನಡೆಸಿದ ಮೋದಿ, ನೆರೆಯ ದೇಶದಿಂದ ಪದೇಪದೆ ದಾಳಿಗೆ ಒಳಗಾಗುವ ನಮ್ಮ ವೀರ ಸೈನಿಕರಿಗೆ ಯಾವುದೇ ನೆರವು ನೀಡುತ್ತಿರಲಿಲ್ಲ. ಆದರೆ ನಾವು ನಮ್ಮ ಯೋಧರಿಗೆ ಎಲ್ಲ ರೀತಿಯ ನೆರವು ನೀಡುತ್ತಿದ್ದೇವೆ. ಅವರ ಆತ್ಮಸ್ಥೈರ್ಯ ಹೆಚ್ಚಿಸುತ್ತಿದ್ದೇವೆ ಎಂದರು.
ಕಾಂಗ್ರೆಸ್‌ ಪ್ರಣಾಳಿಕೆಯನ್ನು ನೀವು ಎಚ್ಚರಿಕೆಯಿಂದ ಓದಿ. ಅವರು ಅಧಿಕಾರಕ್ಕೆ ಬಂದರೆ ನಿಮ್ಮ ಸಂಪತ್ತಿನ ಸರ್ವೆ ನಡೆಸುತ್ತಾರಂತೆ. ಆ ಬಳಿಕ ಅದನ್ನು ಅಗತ್ಯ ಇದ್ದವರಿಗೆ ಹಂಚುತ್ತಾರಂತೆ. ಆ ಅಗತ್ಯ ಇದ್ದವರು ಯಾರು ಎಂಬುದು ನಿಮಗೆ ಗೊತ್ತಿರಲಿ ಎಂದು ಮೋದಿ ಹೇಳಿದರು.

ಉತ್ತರ ಪ್ರದೇಶದಲ್ಲೂ ಮೋದಿ ಗುಡುಗಿದ್ದರು

ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ನೀಡಿದ್ದ ಸಂಪತ್ತು ಮರುಹಂಚಿಕೆಯ ವಿಚಾರದ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ಉತ್ತರ ಪ್ರದೇಶದ ಅಲಗಢದಲ್ಲೂ ಗುಡುಗಿದ್ದರು. ಕಾಂಗ್ರೆಸ್‌ನವರಿಗೆ ಮಹಿಳೆಯರ ಮಂಗಳಸೂತ್ರದ ಮೇಲೂ ಕಣ್ಣು ಬಿದ್ದಿದೆ. ಮಾತೆಯರು, ಭಗಿನಿಯರ ಚಿನ್ನವನ್ನು ದೋಚುವ ದುರುದ್ದೇಶ ಇವರದ್ದು ಎಂದು ವಾಗ್ದಾಳಿ ನಡೆಸಿದ್ದರು.

“ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ನಿಮ್ಮ ಆದಾಯ ಮತ್ತು ಆಸ್ತಿಯ ಮೇಲೆ ಕಣ್ಣಿಟ್ಟಿವೆ. ಕಾಂಗ್ರೆಸ್ ತನ್ನಪ್ರಣಾಳಿಕೆಯಲ್ಲಿ ಇದನ್ನು ಉಲ್ಲೇಖಿಸಿದೆ. ಮಹಿಳೆಯರು ಚಿನ್ನವನ್ನು ಆಭರಣಗಳ ರೂಪದಲ್ಲಿ ಧರಿಸಲು ಮಾತ್ರವಲ್ಲ, ಅದನ್ನು ರಸಕ್ಷಿಸಲು ಕಾನೂನಿನಲ್ಲಿ ಅವಕಾಶವಿದೆ. ಆದರೆ ಈಗ ಅವರ ಕಣ್ಣು ಮಹಿಳೆಯರ ಮಂಗಳಸೂತ್ರದ ಮೇಲೆ ನೆಟ್ಟಿದೆ. ತಾಯಿ ಮತ್ತು ಸಹೋದರಿಯರ ಚಿನ್ನವನ್ನು ದೋಚುವುದು ಇವರ ಉದ್ದೇಶ. ಹೀಗಾಗಿ ಅವರು ಅಧಿಕಾರಕ್ಕೆ ಬಂದರೆ ನಿಮ್ಮ ಮಂಗಳಸೂತ್ರವೂ ಸುರಕ್ಷಿತವಲ್ಲʼʼ ಎಂದು ಮೋದಿ ಹೇಳಿದ್ದರು.
ʼʼಒಂದು ವೇಳೆ ನೀವು ಹಳ್ಳಿಯಲ್ಲಿ ಪಿತ್ರಾರ್ಜಿತ ಮನೆಯನ್ನು ಹೊಂದಿದ್ದು, ನಗರದಲ್ಲಿ ಮಕ್ಕಳಿಗಾಗಿ ಚಿಕ್ಕ ಫ್ಲ್ಯಾಟ್‌ ಖರೀದಿಸಿದ್ದೀರಿ ಎಂದಿಟ್ಟುಕೊಳ್ಳೋಣ. ಆಗ ಅವರು ಎರಡರ ಪೈಕಿ ಒಂದನ್ನು ತಮ್ಮ ವಶಕ್ಕೆ ಪಡೆದುಕೊಳ್ಳಲಿದ್ದಾರೆ. ಇದು ಮಾವೋವಾದಿ ಮತ್ತು ಕಮ್ಯೂನಿಷ್ಟ್‌ ಮನೋಭಾವದ ಯೋಚನಾ ಲಹರಿ. ಹೀಗೆ ಮಾಡಿಯೇ ಅವರು ಹಲವು ದೇಶಗಳನ್ನು ನಾಶಪಡಿಸಿದ್ದಾರೆ. ಈಗ ಕಾಂಗ್ರೆಸ್‌ ಮತ್ತು ಪ್ರತಿಪಕ್ಷಗಳ ʼಒಂಡಿಯಾʼ ಒಕ್ಕೂಟ ಆ ನಿಯಮವನ್ನು ಭಾರತದಲ್ಲಿ ಜಾರಿಗೊಳಿಸಲು ಮುಂದಾಗಿದೆʼʼ ಎಂದು ಪ್ರಧಾನಮಂತ್ರಿ ದೂರಿದ್ದರು. ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಇದೆ ಎಂದು ಕಾಂಗ್ರೆಸ್ ಈ ಹಿಂದೆ ಹೇಳಿತ್ತು. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ದೇಶದ ಆಸ್ತಿಯನ್ನು ವಿತರಿಸುವುದಾಗಿ ತಿಳಿಸಿತ್ತು. “”ಕಾಂಗ್ರೆಸ್ ಅಧಿಕಾರ ಬಂದರೆ, ಈ ದೇಶದಲ್ಲಿ ಯಾರು ಎಷ್ಟು ಆಸ್ತಿ ಹೊಂದಿದ್ದಾರೆ ಎಂದು ಸಮೀಕ್ಷೆ ಕೈಗೊಳ್ಳಲಾಗುವುದು. ಬಳಿಕ ಈ ಆಸ್ತಿಯನ್ನು ಮರು ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದುʼʼ ಎಂದು ರಾಹುಲ್ ಗಾಂಧಿ ಹೇಳಿದ್ದರು. ಈ ಬಗ್ಗೆ ಮೋದಿ ತಮ್ಮ ಚುನಾವಣಾ ಭಾಷಣದಲ್ಲಿ ಪ್ರಸ್ತಾಪಿಸಿ ಕಾಂಗ್ರೆಸನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Lok Sabha Election 2024: ವಿಧಾನ ಪರಿಷತ್‌ ಸ್ಥಾನಕ್ಕೆ ಕೆ.ಪಿ. ನಂಜುಂಡಿ ರಾಜೀನಾಮೆ; ಕಾಂಗ್ರೆಸ್‌ ಸೇರ್ಪಡೆ?

Continue Reading
Advertisement
Murder case in hublli
ಹುಬ್ಬಳ್ಳಿ13 seconds ago

Kidnap Case : ಅಖಂಡೇಶ್ವರ ಜಾತ್ರೆಗೆ ಹೋದ ಅತಿಥಿ ಶಿಕ್ಷಕಿಯನ್ನು ಅಪಹರಿಸಿದ ಮುಸ್ಲಿಂ ಯುವಕ

Rafael Nadal
ಕ್ರೀಡೆ14 mins ago

Rafael Nadal: ಲೇವರ್‌ ಕಪ್‌ ಬಳಿಕ 22 ಬಾರಿಯ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್​ ನಡಾಲ್‌ ನಿವೃತ್ತಿ!

Modi in Karnataka PM Narendra Modi to visit from April 28 and 29
Lok Sabha Election 202426 mins ago

Modi in Karnataka: ಏಪ್ರಿಲ್‌ 28 – 29ಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ; ಯಾವ ಯಾವ ಕ್ಷೇತ್ರದಲ್ಲಿ ಮತ ಬೇಟೆ?

Murder Case In Bengaluru
ಬೆಂಗಳೂರು31 mins ago

Murder Case : ಒಂಟಿ ಮಹಿಳೆ ಕೊಲೆ ಕೇಸ್‌; ಅತಿಯಾದ ಸೆಕ್ಸ್‌ಗೆ ಒತ್ತಾಯಿಸಿದವಳನ್ನು ಬೆಡ್‌ ರೂಂನಲ್ಲೇ ಕೊಂದ ಯುವಕ

MDH everest spices row
ದೇಶ49 mins ago

Spices Row: ಸಿಂಗಾಪುರ, ಹಾಂಕಾಂಗ್‌ ಬಳಿಕ ಭಾರತದಲ್ಲೂ ಎವರೆಸ್ಟ್, ಎಂಡಿಎಚ್‌ ಮಸಾಲೆ ಪರಿಶೀಲನೆ ಶುರು

Narendra Modi and Siddaramaiah
ರಾಜಕೀಯ59 mins ago

Narendra Modi: ಕಾಂಗ್ರೆಸ್‌ ರಾಜ್ಯದಲ್ಲಿ ಹನುಮಾನ್‌ ಚಾಲೀಸಾ ಹೇಳುವುದೂ ಮಹಾಪರಾಧ; ರಾಜಸ್ಥಾನದಲ್ಲಿ ಮೋದಿಯಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ತರಾಟೆ

Gukesh D
ಕ್ರೀಡೆ60 mins ago

Gukesh D: ಡಿ.ಗುಕೇಶ್‌ ಸಾಧನೆಗಾಗಿ ವೈದ್ಯ ವೃತ್ತಿಯನ್ನೇ ತೊರೆದಿದ್ದ ತಂದೆ

baba ramdev supreme court
ಪ್ರಮುಖ ಸುದ್ದಿ1 hour ago

Patanjali Case: ಜಾಹೀರಾತು ಗಾತ್ರದಲ್ಲೇ ಕ್ಷಮಾಪಣೆ ಕೇಳಿ: ಬಾಬಾ ರಾಮ್‌ದೇವ್‌ ಬೆವರಿಳಿಸಿದ ಸುಪ್ರೀಂ ಕೋರ್ಟ್‌

Murder Case in raichur
ರಾಯಚೂರು1 hour ago

Murder Case : ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಮುಸ್ಲಿಂ ಯುವಕನ ಕೊಂದ ಅರ್ಚಕ

Lok Sabha Election-2024
Latest1 hour ago

Voter Slip by Mobile: ಮತಪಟ್ಟಿಯಲ್ಲಿ ಹೆಸರು ಪರಿಶೀಲನೆ, ವೋಟರ್ ಸ್ಲಿಪ್ ಡೌನ್‌ಲೋಡ್‌ ಮೊಬೈಲ್‌ನಲ್ಲೇ ಮಾಡಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ9 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು20 hours ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ21 hours ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು1 day ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ1 day ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ2 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌