ಇನ್ನೊಬ್ಬರ ಮಾತಿಗೆ ಕೊಲೆಗಡುಕರಾಗಬೇಡಿ; ಯುವಕರಿಗೆ ಪತ್ರ ಬರೆದ ಮಾಜಿ ಸಿಎಂ ಸಿದ್ದರಾಮಯ್ಯ - Vistara News

ಕರ್ನಾಟಕ

ಇನ್ನೊಬ್ಬರ ಮಾತಿಗೆ ಕೊಲೆಗಡುಕರಾಗಬೇಡಿ; ಯುವಕರಿಗೆ ಪತ್ರ ಬರೆದ ಮಾಜಿ ಸಿಎಂ ಸಿದ್ದರಾಮಯ್ಯ

ಕೆಲವರ ಖುಷಿಗೆ ನೀವು ಬಲಿಯಾಗಬೇಡಿ, ಇಂದಿನ ಮುಖ್ಯಮಂತ್ರಿ, ಬ್ಯಾಬಿಲೋನಿಯಾದ ಕ್ರೂರ ರಾಜ ಹಮ್ಮುರಾಬಿ ರೀತಿಯಲ್ಲಿ ಹೇಳಿಕೆ ಕೊಡುತ್ತಾರೆ. ಕರಾವಳಿ ಜಿಲ್ಲೆಯ ದುಡಿಯುವ ಸಮುದಾಯಗಳು ಅತಿ ಜಾಗೃತಗೊಳ್ಳಬೇಕು, ರಾಜ್ಯದಲ್ಲಿ ಶಾಂತಿಯುತ ವಾತಾವರಣ ನಿರ್ಮಾಣ ಮಾಡಬೇಕಿದೆ ಎಂದು ಸಿದ್ದರಾಮಯ್ಯ ಕರೆ ನೀಡಿದ್ದಾರೆ.

VISTARANEWS.COM


on

ಸಿದ್ದರಾಮಯ್ಯ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಸರಣಿ ಹತ್ಯೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಯುವಕರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗ ಪತ್ರ ಬರೆದಿದ್ದಾರೆ. ಆ ಪತ್ರದಲ್ಲಿ ಯುವಕರಿಗೆ ಅವರು ಏನು ಹೇಳಿದ್ದಾರೆ ಎಂಬ ಸಂಪೂರ್ಣ ವಿವರ ಇಲ್ಲಿದೆ.

ಪ್ರೀತಿಯ ಯುವ ಬಂಧುಗಳೇ, ರಾಜ್ಯದಲ್ಲಿ ಮುಖ್ಯವಾಗಿ ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ವಿದ್ಯಮಾನಗಳು ನನ್ನನ್ನು ಆತಂಕಿತಗೊಳಿಸಿವೆ, ನೋವಿನಲ್ಲಿ ಮುಳುಗಿಸಿವೆ. ಬಾಳಿ ಬದುಕಬೇಕಾದ ಯುವಕರು ಕ್ಷುಲ್ಲಕ ಕಾರಣಗಳಿಗಾಗಿ ಹತ್ಯೆಗೀಡಾಗುತ್ತಿರುವುದನ್ನು ಕನ್ನಡ ನಾಡಿನ ಆತ್ಮಸಾಕ್ಷಿ ಸಹಿಸಬಾರದು. ದುಡಿಯುವ ಜಾತಿ, ಪಂಗಡ, ಧರ್ಮಗಳ ಮಕ್ಕಳು ವಿನಾಕಾರಣ ಹತ್ಯೆಯಾಗುತ್ತಿರುವುದನ್ನು ಯಾವ ನಾಗರಿಕ ಸಮಾಜವೂ ಸಹಿಸಲಾಗದು, ಸಹಿಸಬಾರದು. ಶಾಂತಿ, ಸೌಹಾರ್ದತೆಗೆ ಹೆಸರಾದ ಕರ್ನಾಟಕವನ್ನು ವಿನಾಕಾರಣ ಅಶಾಂತಿಯ ಕಡಲಲ್ಲಿ ಮುಳುಗಿಸಲಾಗುತ್ತಿದೆ.

ನಾಡಿನ ಆತ್ಮಸಾಕ್ಷಿಯಂತಿದ್ದ ಪೂರ್ಣಚಂದ್ರ ತೇಜಸ್ವಿಯವರು ಒಮ್ಮೆ ‘ಕೊಂದು ಉಳಿಸಿಕೊಳ್ಳುವ ಧರ್ಮವಿದ್ದರೆ ಅದನ್ನು ಧರ್ಮವೆನ್ನಲಾಗುತ್ತದೆಯೇ’ ಎಂದು ಪ್ರಶ್ನಿಸಿದ್ದರು. ಬಸವಣ್ಣನವರು ‘ಕೊಂದವರುಳಿದರೆ ಕೂಡಲ ಸಂಗಮದೇವಾ’ ಎಂದು ಆರ್ತವಾಗಿ ಕೇಳಿದ್ದರು. ಧರ್ಮಕ್ಕಾಗಿ ಕೊಲೆ ಮಾಡಿದ್ದೇವೆ ಎನ್ನುವವರನ್ನು ಯಾವ ದೇವರೂ ಕ್ಷಮಿಸುವುದಿಲ್ಲ ಎಂಬ ಮಾತುಗಳನ್ನು ಗುರು ಹಿರಿಯರು ಹೇಳುತ್ತಲೇ ಬಂದಿದ್ದಾರೆ.

ಇದನ್ನೂ ಓದಿ | `ಚಪ್ಪಲಿ’ ತೆಗೆದು `ಕೊಳೆತ ಮೊಟ್ಟೆ’ ಉಳಿಸಿಕೊಂಡ ಮಾಜಿ ಸಿಎಂ ಸಿದ್ದರಾಮಯ್ಯ !

ಧರ್ಮವನ್ನು ನೀನು ರಕ್ಷಿಸಿದರೆ ಅದೇ ಧರ್ಮವು ನಿನ್ನನ್ನು ರಕ್ಷಿಸುತ್ತದೆ ಎಂಬ ಮಹಾಭಾರತದ ಮಾತುಗಳನ್ನು ಕೆಲವು ಮತಾಂಧರು ಹಾಗೂ ನಿರ್ದಿಷ್ಟ ಹಿತಾಸಕ್ತಿಯುಳ್ಳ ಜನರು ಅದರ ಅರ್ಥವನ್ನೇ ಕುಗ್ಗಿಸಿದ್ದಾರೆ. ದಯೆ, ಕರುಣೆ, ಅಸಹಾಯಕರ ರಕ್ಷಣೆ ಮುಂತಾದ ಉದಾತ್ತವಾದ ವಿಶ್ವ ಆದರ್ಶದ ಮಾತುಗಳನ್ನು ತಿರುಚಿ ಧರ್ಮಕ್ಕಾಗಿ ಕೊಲ್ಲು ಎಂಬ ದುಷ್ಟ ವ್ಯಾಖ್ಯಾನ ಮಾಡಿ ಶೂದ್ರ, ದಲಿತ ಮಕ್ಕಳನ್ನು ಹಾದಿ ತಪ್ಪಿಸಲಾಗುತ್ತಿದೆ.

ಇಸ್ಲಾಮಿನ ಉದಾತ್ತ ತತ್ವಗಳನ್ನು ಮತ್ತು ಶಾಂತಿ, ಸತ್ಯಗಳನ್ನು ಮುಂದು ಮಾಡುವ ಬದಲು ಅಪವ್ಯಾಖ್ಯಾನ ಮಾಡುವ ದುಷ್ಟರಿಂದಾಗಿ ಮುಸ್ಲಿಂ ಬಡ ಯುವಕರ ಮೆದುಳು ಹಾಳಾಗುತ್ತಿದೆ. ಹಿಂದುವಿನ ಕೊಲೆಗೆ ಪ್ರತೀಕಾರವಾಗಿ ಕೈಗೆ ಸಿಕ್ಕ ಯಾರಾದರೂ ಮುಸ್ಲಿಮನನ್ನು ಕೊಲ್ಲು, ಮುಸ್ಲಿಮನ ಕೊಲೆಗೆ ಪ್ರತೀಕಾರವಾಗಿ ಕೈಗೆ ಸಿಕ್ಕ ಯಾರಾದರೂ ಹಿಂದುವನ್ನು ಕೊಲ್ಲು ಎಂಬ ಕ್ರೌರ್ಯವನ್ನು ಈ ಮಕ್ಕಳ ತಲೆಗೆ ತುಂಬಿದವರು ಯಾರು? ಅಂತಹ ಕ್ರೌರ್ಯವನ್ನು ವ್ಯವಸ್ಥಿತವಾಗಿ ತುಂಬಿದವರನ್ನು ಅಪರಾಧಿಗಳನ್ನಾಗಿ ಮಾಡುವ ಕಾನೂನಿನ ಅವಶ್ಯಕತೆ ಎಲ್ಲಕ್ಕಿಂತ ಹೆಚ್ಚಾಗಿದೆ.

ದುಷ್ಟರ ತಾಳಕ್ಕೆ ತಕ್ಕಂತೆ ಈ ಬೇಜವಾಬ್ದಾರಿ ಸರ್ಕಾರವೂ ಕುಣಿಯುತ್ತಿದೆ ಅಥವಾ ಸರ್ಕಾರದ ಕ್ರೂರವಾದ, ಪಕ್ಷಪಾತಿಯಾದ ಕ್ರೂರ ದೊರೆ ಹಮ್ಮುರಾಬಿ ಕಾಲದ ನಿಲುವುಗಳೆ ಅಮಾಯಕ ಮಕ್ಕಳ ಕೊಲೆಗಳಿಗೆ ಕಾರಣವಾಗುತ್ತಿವೆ ಎಂಬ ಅನುಮಾನ ಕೂಡ ಬರುತ್ತಿದೆ. ಬ್ಯಾಬಿಲೋನಿಯಾದಲ್ಲಿ ಸುಮಾರು 3800 ವರ್ಷಗಳ ಹಿಂದೆ ಹಮ್ಮುರಾಬಿ ಎಂಬ ರಾಜನಿದ್ದ, ಆತ ಕಾನೂನೊಂದನ್ನು ಜಾರಿಗೆ ತಂದಿದ್ದ. ಯಾರಾದರೂ ಇನ್ನೊಬ್ಬರ ಕಣ್ಣಿಗೆ ಹಾನಿ ಮಾಡಿದರೆ ಹಾನಿ ಮಾಡಿದವನ ಕಣ್ಣುಗಳನ್ನು ಕಿತ್ತು ಹಾಕುವ, ಕೊಲೆ ಮಾಡಿದರೆ ಕೊಲೆ ಮಾಡುವ, ಕೈ ಕಾಲು ಊನವಾದರೆ, ಊನ ಮಾಡಿದವನ ಅಂಗಾಂಗಗಳನ್ನು ಊನ ಮಾಡುವ ಬರ್ಬರ ಕಾನೂನುಗಳನ್ನು ಜಾರಿಗೆ ತಂದಿದ್ದ.

ಹಮ್ಮುರಾಬಿಯನ್ನು ಜಗತ್ತಿನ ಕ್ರೂರ ದೊರೆ ಎನ್ನಲಾಗುತ್ತದೆ. ನಮ್ಮ ರಾಜ್ಯದ ಬೇಜವಾಬ್ದಾರಿಯುತ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಕರಾವಳಿಯಲ್ಲಿ ಹೇಳಿದ “ಕ್ರಿಯೆಗೆ ಪ್ರತಿಕ್ರಿಯೆ” ಎಂಬ ಮಾತುಗಳು ಥೇಟ್ ಹಮ್ಮುರಾಬಿಯ ಬರ್ಬರವಾದ, ಅನಾಗರಿಕವಾದ ಕಾನೂನನ್ನೇ ನೆನಪಿಸುತ್ತದೆ. ಕರ್ನಾಟಕದ ಇತಿಹಾಸದಲ್ಲಿ ಬೊಮ್ಮಾಯಿಯವರು 21ನೆ ಶತಮಾನದ ಹಮ್ಮುರಾಬಿ ಎಂದು ಕುಖ್ಯಾತವಾಗುತ್ತಾರೆ. ನಮ್ಮ ಮಹಾಕಾವ್ಯವಾದ ಮಹಾಭಾರತದಲ್ಲಿ ಕೊಲೆಯನ್ನು ಖಂಡಿಸುವ ಮಾತುಗಳು ಅನೇಕ ಕಡೆ ಬರುತ್ತವೆ. ಮಹಾ ಭಾರತದ ಮೂಲ ಆಶಯವು ಭಗವದ್ಗೀತೆ ಹೇಳುವುದಕ್ಕೆ ಸಂಪೂರ್ಣ ಭಿನ್ನವಾದ ಹಾಗೆ ಕಾಣುತ್ತದೆ.

ಈ ಮಹಾಕಾವ್ಯದಲ್ಲಿ ಪಾಂಡವರಿಗೆ ಅಧಿಕಾರ ತಪ್ಪಿಸಿದ ಕೌರವರ ಬಗ್ಗೆ ಅಲ್ಲಿನ ಜನರು ಶಾಪ ಹಾಕುತ್ತಾರೆ. ಆದರೆ ಯುದ್ಧ ಮುಗಿಯುತ್ತದೆ. ಎರಡೂ ಕಡೆಯ ಅಸಂಖ್ಯಾತ ಜನ ಮರಣ ಹೊಂದುತ್ತಾರೆ. ನಾಡಿನ ತುಂಬೆಲ್ಲ ವಿಧವೆಯರು, ತಬ್ಬಲಿಗಳಾದ ಮಕ್ಕಳು, ತಬ್ಬಲಿಗಳಾದ ತಂದೆ ತಾಯಿಗಳ ಕಣ್ಣೀರು ಒರೆಸುವುದಕ್ಕೂ ಜನ ಇರುವುದಿಲ್ಲ. ಇಂಥ ಸಂದರ್ಭದಲ್ಲಿ ಧರ್ಮರಾಯನ ನೇತೃತ್ವದಲ್ಲಿ ಪಾಂಡವರು ಊರೊಳಗೆ ಪ್ರವೇಶಿಸುತ್ತಾರೆ. ಆಗ ಊರ ಜನ ಪಾಂಡವರನ್ನು ಅತ್ಯಂತ ಕಠಿಣ ಭಾಷೆಯಲ್ಲಿ ನಿಂದಿಸುತ್ತಾರೆ. ಅಧಿಕಾರಕ್ಕಾಗಿ ತಂದೆ ಸಮಾನರನ್ನು, ಗುರುಗಳನ್ನು, ಸೋದರರನ್ನು, ಬಂಧುಗಳನ್ನು, ಅಮಾಯಕರನ್ನು ಕೊಂದ ಕ್ರೂರ ಪಾಂಡವರೆ, ನಿಮ್ಮ ಅಧಿಕಾರ ಜನರ ಸಮಾಧಿಗಳ ಮೇಲಷ್ಟೆ ಎಂದು ಶಾಪ ಹಾಕುತ್ತಾರೆ. ಮಹಾಕವಿ ವ್ಯಾಸಮುನಿಗಳು ಕೊಲೆಗೆ ಕೊಲೆ ಎಂಬ, ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂಬ ಅನಾಗರಿಕವಾದ, ಬರ್ಬರವಾದ ತತ್ವವನ್ನು ಹೇಸಿಗೆಯೆಂಬಂತೆ ವ್ಯಾಖ್ಯಾನಿಸುತ್ತಾರೆ. ಹಾಗಾಗಿ ಮಹಾಭಾರತ ಕಾವ್ಯ ಜನರ ಕಾವ್ಯವಾಗಿದೆ.

ಕರಾವಳಿಯಲ್ಲಿ ಅಮಾಯಕ ಯುವಕರು ವಿನಾಕಾರಣ ದುರಂತ ಸಾವನ್ನಪ್ಪುತ್ತಿದ್ದಾರೆ. ಕರಾವಳಿ ಜಿಲ್ಲೆಗಳ ದುಡಿಯುವ ಸಮುದಾಯಗಳು ಅತಿ ಜರೂರಾಗಿ ಜಾಗೃತಗೊಳ್ಳಬೇಕು. ಕರಾವಳಿಯ ಜೈಲುಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಶೇ.99 ರಷ್ಟು ಅತ್ಯಂತ ಬಡ ಹುಡುಗರು ಹಾಗೂ ಎರಡೆ ಸಮುದಾಯಗಳವರು. ಕೊಲೆಯಾಗುತ್ತಿರುವ ಎರಡೂ ಕಡೆಯ ಹುಡುಗರು ದುಡಿದು, ಕೂಲಿ ಮಾಡಿ ಬದುಕುತ್ತಿರುವವರು. ಈ ಎರಡೂ ಕಡೆಯ ಹುಡುಗರ ಮೆದುಳಿಗೆ ವಿಷ ಹಾಕುತ್ತಿರುವವರು ಮಕ್ಕಳು ಮಾತ್ರ ಬೆಂಗಳೂರು, ಮುಂಬೈ ನಗರಗಳಲ್ಲಿ ಹಾಗೂ ಕೊಲ್ಲಿ ಯುರೋಪ್, ಅಮೆರಿಕ ಮುಂತಾದ ದೇಶಗಳಲ್ಲಿ ಲಕ್ಷ, ಕೋಟಿಗಳ‌ ರೂ. ಸಂಬಳ ದುಡಿಯುತ್ತಾ ವಾರದ ಕೊನೆಯಲ್ಲಿ ಲಕ್ಷಾಂತರ ಖರ್ಚು ಮಾಡಿ ಪಾರ್ಟಿ ಮಾಡುತ್ತಾ ಮೋಜು ಮಾಡುತ್ತಿದ್ದಾರೆ.

ಜತೆಗೆ ಬಹುಪಾಲು ಜನ ಸೋಷಿಯಲ್ ಮೀಡಿಯಾಗಳಲ್ಲಿ ಉಚಿತವಾಗಿ ಧರ್ಮ ಉಳಿಸುವ ಕುರಿತು ಸಲಹೆಗಳನ್ನು ನೀಡುವ ಕ್ರೌರ್ಯವನ್ನು ಮೆರೆಯುತ್ತಿದ್ದಾರೆ. ಬಡವರ ಮಕ್ಕಳನ್ನು ಬೆಂಕಿಗೆ, ಜೈಲಿಗೆ ತಳ್ಳಿ ತಮ್ಮ ಮಕ್ಕಳ ಏಳಿಗೆಗೆ ಸ್ಪರ್ಧೆ ಬರದ ಹಾಗೆ ನೋಡಿಕೊಳ್ಳುತ್ತಿದ್ದಾರೆ. ಈ ಕುತಂತ್ರವನ್ನು ದುಡಿದು ಬದುಕುವ ಎಲ್ಲ ಸಮುದಾಯಗಳ ಯುವಕರು ಅರ್ಥ ಮಾಡಿಕೊಳ್ಳಬೇಕು. ಒಳ್ಳೆಯ ಶಿಕ್ಷಣ, ಒಳ್ಳೆಯ ಉದ್ಯೋಗ, ಉದಾತ್ತವಾದ ಆಲೋಚನೆ, ಶಾಂತಿ, ಸಹಬಾಳ್ವೆಗಳು ಮಾತ್ರ ಯುವಜನರನ್ನು ಏಳಿಗೆಯತ್ತ ಕೊಂಡೊಯ್ಯಲು ಸಾಧ್ಯ. ಕರಾವಳಿಯ ಯುವಜನತೆಗೆ ಇದೆಲ್ಲವನ್ನೂ ವ್ಯವಸ್ಥಿತವಾಗಿ ತಪ್ಪಿಸಲಾಗುತ್ತಿದೆ.

ಕರಾವಳಿಯ ಯುವಜನತೆಯಲ್ಲಿ ಕೈ ಮುಗಿದು ವಿನಂತಿಸುತ್ತೇನೆ. ದಯಮಾಡಿ ಸಾಕು ಮಾಡಿ. ಧರ್ಮ, ಕೋಮು ದ್ವೇಷವನ್ನು ದೂರ ಮಾಡಿ. 30 ವರ್ಷಗಳ ಹಿಂದಿದ್ದ ಕರಾವಳಿಯನ್ನು ಮತ್ತೆ ನಿರ್ಮಾಣ ಮಾಡಿ. ವೃದ್ಧಾಪ್ಯದಲ್ಲಿ ಮಕ್ಕಳನ್ನು ಕಳೆದುಕೊಂಡ ತಂದೆ ತಾಯಿಗಳನ್ನು, ಎಳೆ ವಯಸ್ಸಿನಲ್ಲಿ ಅಣ್ಣ ತಮ್ಮಂದಿರನ್ನು, ಗಂಡಂದಿರನ್ನು ಕಳೆದುಕೊಂಡವರ ಹೃದಯದ ಬೆಂಕಿಯನ್ನೊಮ್ಮೆ ಅರ್ಥ ಮಾಡಿಕೊಳ್ಳಿ. ಅನಾಥರಾದ ಎಳೆಯ ಮಕ್ಕಳಿಗೆ ಎಷ್ಟು ಹಣ ಕೊಟ್ಟರೆ ತಾನೆ ಅಪ್ಪಂದಿರನ್ನು ತಂದುಕೊಡಲು ಸಾಧ್ಯವೆ? ಬದುಕಿದ್ದು ಶಾಶ್ವತ ಜೈಲಿಗೆ ಹೋದವರ ಕುಟುಂಬಗಳ ಕಷ್ಟ ದುಃಖಗಳನ್ನು ಒಮ್ಮೆ ನೆನೆಯಿರಿ, ವಕೀಲರುಗಳಿಗೆ ಫೀಸು ಕೊಡಲು ಮನೆ ಮಠ ಮಾರಿ ಬೀದಿಗೆ ಬಿದ್ದವರ ಸಂಕಷ್ಟಗಳು ನಿಮ್ಮ ಕಣ್ಮುಂದೆ ಬರಲಿ. ನಿಮ್ಮದೆ ಸ್ಕೂಲಿನಲ್ಲಿ, ನಿಮ್ಮ ಜತೆ ಕಲಿತ ಗೆಳೆಯ ಗೆಳತಿಯರು ಉತ್ತಮ ಉದ್ಯೋಗ ಮಾಡಿ ನೆಮ್ಮದಿಯ ಬದುಕು ಕಟ್ಟಿಕೊಳ್ಳುತ್ತಿರುವಾಗ, ನಿಮ್ಮ ಬದುಕನ್ನು ಯಾರು ಕಿತ್ತುಕೊಂಡರು ಎಂದು ಯೋಚಿಸಿ. ದೇವರಂತೂ ಖಂಡಿತ ನಿಮ್ಮ ಬದುಕನ್ನು ಹಾಳು ಮಾಡುವುದಿಲ್ಲ. ನೀವೇ ಕೈಯಾರೆ ಬದುಕನ್ನು ಹಾಳು ಮಾಡಿಕೊಳ್ಳುತ್ತಿದ್ದೀರಿ.

ಕರಾವಳಿಯಲ್ಲಿ ಮಾದಕದ್ರವ್ಯಗಳ ಮಾಫಿಯಾ ಅಟ್ಟ ಹಾಸ ಮಾಡುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಮೋದಿ ಸರ್ಕಾರ ಅದಾನಿಗಳಿಗೆ ಎಲ್ಲ ಬಂದರುಗಳನ್ನು ಬಿಟ್ಟುಕೊಡುತ್ತಿದೆ. ಗುಜರಾತಿನ ಮುಂದ್ರಾ ಬಂದರಿನಲ್ಲಿ ಒಂದೇ ದಿನ 21,000 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಆಯಿತು. ಆದರೆ ದೇಶದ ಒಳಗೆ ಲಕ್ಷಾಂತರ ಕೋಟಿ ರೂ. ಮೌಲ್ಯದ ಮಾದಕ ಪದಾರ್ಥಗಳು ಬಂದಿವೆ ಎಂದು ಹೇಳಲಾಗುತ್ತಿದೆ. ಈ ಮಾದಕ ಪದಾರ್ಥಗಳು ನಮ್ಮ ಮಕ್ಕಳ ಭವಿಷ್ಯವನ್ನು ಹಾಳು ಮಾಡುತ್ತಿವೆ. ಈ ಕೆಟ್ಟ ಸರ್ಕಾರದಿಂದ ಯವ ನ್ಯಾಯವನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಸರ್ಕಾರದ ವರ್ತನೆ ಇನ್ನಷ್ಟು ಹಿಂಸೆ ಸೃಷ್ಟಿಸುವಂತೆ ಇದೆಯೆ ಹೊರತು, ಶಾಂತಿ ಸ್ಥಾಪಿಸುವ ಕಡೆಗೆ ಇಲ್ಲ. ಇನ್ನಷ್ಟು ಅಮಾಯಕರ ಹೆಣ ಬಿದ್ದರೆ ಮಾತ್ರ ತಮ್ಮ ರಾಜಕೀಯ ನಡೆಯುತ್ತದೆ ಎಂದು ಈ ದುಷ್ಟರು ಭಾವಿಸಿದ್ದಾರೆ. 2018 ರ ಬಿಜೆಪಿಯ ಪ್ರಣಾಳಿಕೆಯಲ್ಲಿ ಎನ್ ಐ ಎ ಸ್ಥಾಪಿಸುತ್ತೇವೆ ಎಂದು ಆಶ್ವಾಸನೆ ಕೊಟ್ಟಿದ್ದರು. ಈಗ ಅದನ್ನು ಮರೆತವರಂತೆ ವರ್ತಿಸುತ್ತಿದ್ದಾರೆ. ಇಷ್ಟೊಂದು ದುರ್ಬಲವಾದ ಹಾಗೂ ಕ್ರೂರ ಮನಸ್ಥಿತಿಯ ಮುಖ್ಯಮಂತ್ರಿ, ಬೇಜವಾಬ್ಧಾರಿ ನಡವಳಿಕೆಯ ಗೃಹಮಂತ್ರಿಯನ್ನು ರಾಜ್ಯ ಕಂಡಿರಲಿಲ್ಲ.

ಆದ್ದರಿಂದ ಮತ್ತೊಮ್ಮೆ ತಮ್ಮನ್ನು ವಿನಂತಿಸುತ್ತೇನೆ. ಕೆಟ್ಟ ಕಾರಣಕ್ಕಾಗಿ ಕರಾವಳಿಯು ರಾಜ್ಯಕ್ಕೆ ಮಾದರಿಯಾಗುವುದು ಬೇಡ. 30 ವರ್ಷಗಳ ಹಿಂದೆ ಕರಾವಳಿಯನ್ನು ರಾಜ್ಯ- ದೇಶಗಳ ಜನರು ಪ್ರೀತಿ, ಗೌರವ ಮತ್ತು ಹೆಮ್ಮೆಯ ಭಾವನೆಗಳಿಂದ ನೋಡುತ್ತಿದ್ದರಲ್ಲ, ಅಂತಹ ಕರಾವಳಿಯನ್ನು ದಯಮಾಡಿ ನಿರ್ಮಾಣ ಮಾಡಿ. ದ್ವೇಷ ಹುಟ್ಟಿಸುವ, ಕೊಲೆಗೆ, ಹಿಂಸೆಗೆ ಪ್ರೇರೇಪಿಸುವ ಎಲ್ಲ ರಾಕ್ಷಸರನ್ನು ದೂರ ಮಾಡಿ ಇದರ ವಿರುದ್ಧ ಧೈರ್ಯವಾಗಿ ನಿಲ್ಲಿ, ಸೌಹಾರ್ದ ಸಭೆಗಳನ್ನು ಪ್ರಾರಂಭಿಸಿ, ಮನೆಯ ಸದಸ್ಯರನ್ನು ಕಳೆದುಕೊಂಡ ಕುಟುಂಬದ ಸದಸ್ಯರುಗಳೆಲ್ಲರೂ ಧರ್ಮಾತೀತವಾಗಿ ಒಂದಾಗಿ ವೇದಿಕೆ ರಚಿಸಿಕೊಂಡು ಶಾಂತಿ ಸೌಹಾರ್ದದ ಕರಾವಳಿ ನಿರ್ಮಿಸಲು ಮುಂದಾಗಿ, ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ. ಮುಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಈ ಸಭೆಗಳನ್ನು ಅಧಿಕೃತಗೊಳಿಸುತ್ತೇವೆ ಎಂದು ತಿಳಿಸಬಯಸುತ್ತೇನೆ. ಈಗ ನಾಡಿನಲ್ಲಿ ಅತ್ಯಂತ ತುರ್ತಾಗಿ ಶಾಂತಿಯುತವಾದ ವಾತಾವರಣ ನಿರ್ಮಾಣವಾಗಬೇಕಾಗಿದೆ. ಅದನ್ನು ಸರ್ವರೂ ಸೇರಿ ಈಡೇರಿಸಬೇಕೆಂದು ತಮ್ಮನ್ನು ಕೈ ಮುಗಿದು ವಿನಂತಿಸುತ್ತೇನೆ ಎಂದು ಪತ್ರದಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ | ವೇದವಾಕ್ಯ ಅಲ್ಲ ಅವನು ಹೇಳಿದ್ದು: ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ಹರಿಹಾಯ್ದ ಸಿಎಂ ಬೊಮ್ಮಾಯಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bengaluru News: 10 ದಿನಗಳ ‘ಯೋಗೋತ್ಸವ’ಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

Bengaluru News: ಆಯುಷ್ ಇಲಾಖೆಯ ವತಿಯಿಂದ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಇಂದಿನಿಂದ ಹಮ್ಮಿಕೊಂಡಿರುವ 10 ದಿನಗಳ ಯೋಗೋತ್ಸವ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.

VISTARANEWS.COM


on

Minister Dinesh Gundurao drives 10 days Yogotsava programme in Bengaluru
Koo

ಬೆಂಗಳೂರು: ಯೋಗ ದಿನಾಚರಣೆ (Yoga Day) ಕೇವಲ ಒಂದು ದಿನಕ್ಕೆ ಸೀಮಿತವಾಗದೇ ಜನರು ಪ್ರತಿನಿತ್ಯ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಆಗಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Bengaluru News) ತಿಳಿಸಿದರು.

ಆಯುಷ್ ಇಲಾಖೆಯು 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಇಂದಿನಿಂದ ಹಮ್ಮಿಕೊಂಡಿರುವ 10 ದಿನಗಳ ಯೋಗೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ಅಂಗನವಾಡಿ ಹಾಗೂ ಶಾಲಾ ಮಕ್ಕಳಿಗೆ 10 ದಿನಗಳಲ್ಲಿ ಯೋಗವನ್ನು ಹೇಳಿಕೊಡಲಾಗುತ್ತದೆ. ಅಲ್ಲದೇ ಆಯುರ್ವೇದ ಚಿಕಿತ್ಸಾ ಪದ್ದತಿಗಳ ಮಾಹಿತಿಯನ್ನು ಸಾರ್ವಜನಿಕರಿಗೆ ತಲುಪಿಸುವ ಕೆಲಸ ಆಗಲಿದೆ ಎಂದ ಅವರು, ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಯೋಗ ಹಾಗೂ ಆಯುರ್ವೇದದ ಮಹತ್ವ ನಮ್ಮ ಸಾಮಾನ್ಯ ಜನರಿಗೆ ತಲುಪಿಸುವುದು ಮುಖ್ಯವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Fortis Hospital: ನೈಜೀರಿಯನ್ ಯುವತಿಗೆ ಯಶಸ್ವಿ ‘ಡ್ಯುಯಲ್ ಕಾಕ್ಲಿಯರ್ ಇಂಪ್ಲಾಂಟ್ ಸರ್ಜರಿ’

ಯೋಗೋತ್ಸವದ ಅಂಗವಾಗಿ ವಿವಿಧ ಸಂಘ-ಸಂಸ್ಥೆಗಳು/ಇಲಾಖೆಗಳು ಆಯುಷ್ಇಲಾಖೆ ಸಹಕಾರದೊಂದಿಗೆ ಜೂನ್ 11 ರಿಂದ 20 ರವರೆಗೆ ಹತ್ತು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಿವೆ. ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು /ಸಂಘ ಸಂಸ್ಥೆ ಯೋಗೋತ್ಸವದಲ್ಲಿ ಭಾಗವಹಿಸುತ್ತಿದ್ದು, ಈ 04 ಸಂಸ್ಥೆಗಳಲ್ಲಿ ಸುಮಾರು 4 ಲಕ್ಷ ಮಂದಿ ರಾಜ್ಯಾದ್ಯಂತ ಯೋಗ ಪ್ರದರ್ಶನವನ್ನು ಮಾಡುವುದರ ಮೂಲಕ ಯೋಗೋತ್ಸವನ್ನು ಆಚರಿಸಲಿದ್ದಾರೆ. ಅಲ್ಲದೆ ಈ ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆಯಿಂದ ಆರೋಗ್ಯಕರ ಜೀವನ ಶೈಲಿಯ ಕುರಿತು ಮಾಹಿತಿ ಹಾಗೂ ಆಯುಷ್ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಬೆಂಗಳೂರಿನಲ್ಲಿನ ಬೆಂಗಳೂರು ಅಪಾರ್ಟ್‌ಮೆಂಟ್ ಅಸೋಸಿಯೇಷನ್, ಪ್ರಜಾಪಿತ ಬ್ರಹ್ಮಕುಮಾರಿ ಸಂಸ್ಥೆ, ಜೈನ್ ಯುನಿರ್ವಸಿಟಿ, ಲೂಲು ಮಾಲ್ ಹಾಗೂ ಮಾಲ್ ಆಫ್ ಏಷ್ಯಾ, ಸ್ಥಳಗಳಲ್ಲಿ ಯೋಗ ತರಬೇತಿ, ಆಯುಷ್ ವೈದ್ಯ ಪದ್ಧತಿಗಳ ಕುರಿತು ಅರಿವು ಹಾಗೂ ಆಯುಷ್ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯುಷ್ ಇಲಾಖಾ ವತಿಯಿಂದ ನಡೆಸಲಾಗುತ್ತಿದೆ.

ಈ ಕಾರ್ಯಕ್ರಮಗಳಿಗೆ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಯೋಗ ಗಂಗೋತ್ರಿ ಟ್ರಸ್ಟ್, ಶ್ರೀ ಪತಂಜಲಿ ಯೋಗಾಶ್ರಮ ಟ್ರಸ್ಟ್, ಸಂಯಮ ಟ್ರಸ್ಟ್ ಹಾಗೂ ಇನ್ನಿತರ ಖಾಸಗಿ ಯೋಗ ಸಂಸ್ಥೆಗಳು ಅಗತ್ಯ ಸಹಕಾರವನ್ನು ನೀಡಲಿದ್ದು, ಮಾನಸಿಕ ಆರೋಗ್ಯ ಹಾಗೂ ದೈಹಿಕ ಆರೋಗ್ಯದ ಕುರಿತು ಸಾರ್ವಜನಿಕರಿಗೆ ಮಾಹಿತಿ ದೊರೆಯಲಿದೆ.‌

ಇದೇ ಸಂದರ್ಭದಲ್ಲಿ ಆಯುರ್ವೇದ ಶಬ್ದಕೋಶ, ಯೋಗೋತ್ಸವ ಪೋಸ್ಟರ್, ಯೋಗೋತ್ಸವ ವೆಬ್‌ಸೈಟ್‌ಗೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಜೂ. 29ರಂದು ನಿವೃತ್ತ ನ್ಯಾ. ಚಂದ್ರಶೇಖರಯ್ಯಗೆ ಅಭಿನಂದನೆ

ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆಯ ಆಯುಕ್ತ ಶ್ರೀನಿವಾಸುಲು, ಟ್ರಾನ್ಸ್‌ ಡಿಸಿಪ್ಲಿನರಿ ವಿಶ್ವವಿದ್ಯಾಲಯದ ಉಪಕುಲಪತಿ ದರ್ಶನ್ ಶಂಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ಪ್ರಮುಖ ಸುದ್ದಿ

Rajeev Taranath : ಮಹೋನ್ನತ ಪ್ರತಿಭೆಯ ರಾಜೀವ್ ತಾರಾನಾಥ್ ಸರೋದ್ ಲೋಕದ ಅದ್ಭುತ!

Rajeev Taranath: ಹಾಗೆ ನೋಡಿದರೆ ರಾಜೀವ್ ತಾರಾನಾಥ್ ಅವರು ಬಹಳ ಅದ್ಭುತ ಲೇಖಕರು. ಅಂದಿನ ನಮ್ಮ ಹಾಟ್ ಫೇವರಿಟ್ ಲೇಖಕ ಯು.ಆರ್.ಅನಂತಮೂರ್ತಿಯವರ ಕಥಾ ಸಂಕಲನ ‘ಮೌನಿ’ ಕೃತಿಗೆ ಅತ್ಯುತ್ತಮ ಮುನ್ನುಡಿ ಬರೆದಿದ್ದರು. ಅದೆಷ್ಟು ಒಳ್ಳೆಯ ಮುನ್ನುಡಿ ಬರೆದಿದ್ದರೆಂದರೆ, ಸಂಕಲನಕ್ಕಿಂತ ಮುನ್ನುಡಿಯನ್ನೇ ನಾವೆಲ್ಲ ನಾಲ್ಕಾರು ಬಾರಿ ಓದಿದ್ದೆವು. ತೊಂಬತ್ತೆರಡು ವರ್ಷ ಇದ್ದ ರಾಜೀವ್ ಇನ್ನಿಲ್ಲ. ಹಾಗೆನ್ನುವಾಗ, ನಮ್ಮ “ಯಾದೊಂಕೀ ಬಾರಾತ್”ನಲ್ಲಿ ಅವರ ಬರವಣಿಗೆ, ಅವರ ಮಾತು, ಅವರ ತುಂಬು ಕಂಠ, ಅವರ ಅಸದೃಶ ಸರೋದ್ ವಾದನ ಎಲ್ಲವೂ ಒಟ್ಟೊಟ್ಟಿಗೇ ನುಗ್ಗಿನುಗ್ಗಿ ಬರುತ್ತಿವೆ.

VISTARANEWS.COM


on

Rajiv Taranath
Koo

ಮಂಜುನಾಥ ಅಜ್ಜಂಪುರ

ಸಂಗೀತವೇ ಅದ್ಭುತ. ಅದರಲ್ಲೂ ಹಿಂದೂಸ್ತಾನಿ ಸಂಗೀತವೆಂಬುದು ಅನೂಹ್ಯ, ಅಸಾಮಾನ್ಯ. ಅದರ ಭಾವಲೋಕದ ಸಾಧ್ಯತೆಗಳೇ ಅಪಾರ. ಕ್ಷಣಕಾಲ ಕಣ್ಣುಮುಚ್ಚಿ ಕೇಳಿದರೂ ಅನುಭವ ಅನುಭಾವವಾಗಿಬಿಡುತ್ತದೆ.
ಬಾಲ್ಯದಲ್ಲಿ ಕರ್ನಾಟಕ ಸಂಗೀತದ ಕೆಲವು ವಾದ್ಯಗಳನ್ನು ನೋಡಿ ಪರಿಚಯ ಮಾಡಿಕೊಂಡಿದ್ದರೂ ಸಿತಾರ್, ಸರೋದ್, ಸಂತೂರ್, ಬಾನ್ಸುರಿ, ಸಾರಂಗಿಗಳಂತಹ ವಾದ್ಯಗಳನ್ನು ನೋಡುವ ಅವಕಾಶವೇ ಇರಲಿಲ್ಲ. ನಮ್ಮ ತಂದೆಯವರು (ಅಜ್ಜಂಪುರದ ಎ.ಪಿ. ನಾಗರಾಜ ಶ್ರೇಷ್ಠಿಯವರು) ರೇಡಿಯೋದಲ್ಲಿ ಮುಂಜಾನೆ ಬರುತ್ತಿದ್ದ ರಾಮರಾವ್ ನಾಯಕ್, ಮಲ್ಲಿಕಾರ್ಜುನ ಮನ್ಸೂರ್ ಮೊದಲಾದವರ ಗಾಯನ ಕೇಳುತ್ತಿದ್ದರು. ಕೇಳಿ ಕೇಳಿ ನಾನೂ ಹಿಂದೂಸ್ತಾನಿ ಸಂಗೀತ ಕೇಳುವ – ಆನಂದಿಸುವ ಸಂಸ್ಕಾರ ಬೆಳೆಸಿಕೊಂಡೆ. 1970ರ ದಶಕದ ಆರಂಭದ ಆ ಕಾಲದಲ್ಲಿ, ಪ್ರತಿ ವರ್ಷ ಆಕಾಶವಾಣಿಯಲ್ಲಿ ಬರುತ್ತಿದ್ದ ರೇಡಿಯೋ ಸಂಗೀತ ಸಮ್ಮೇಳನಗಳು, ಗಾಯನ ಮತ್ತು ವಾದ್ಯ ಸಂಗೀತಗಳ ಪರಮಾದ್ಭುತ ಲೋಕಕ್ಕೆ ಕರೆದೊಯ್ಯುತ್ತಿದ್ದವು. ಹಾಗೆ ವಿಜಯರಾಘವ ರಾವ್, ಬಿಸ್ಮಿಲ್ಲಾ ಖಾನ್, ಪರ್ವೀನ್ ಸುಲ್ತಾನಾ, ಶಿವಕುಮಾರ್ ಶರ್ಮ ಮೊದಲಾದವರ ದಿವ್ಯ ಸಂಗೀತದ ಪರಿಚಯವಾಯಿತು. ವಿಶೇಷವಾಗಿ ಸರೋದ್, ಸಂತೂರ್ ಮತ್ತು ಬಾನ್ಸುರಿಗಳು ಅಂದಿಗೂ – ಇಂದಿಗೂ ನನಗೆ ಬಹಳ ಬಹಳ ಆಪ್ಯಾಯಮಾನ.

ಇಂದಿಗೂ ಪ್ರತಿನಿತ್ಯ ಕೇಳುತ್ತೇನೆ

ಹಾಗೆ ತಮ್ಮ ಸರೋದ್ ನಿಂದ ಪರಿಚಯವಾದವರು ರಾಜೀವ್ ತಾರಾನಾಥ್ (Rajeev Taranath). ಹಾಗೆ ನೋಡಿದರೆ, ಅವರು ಬಹಳ ಅದ್ಭುತ ಲೇಖಕರು. ಅಂದಿನ ನಮ್ಮ ಹಾಟ್ ಫೇವರಿಟ್ ಲೇಖಕ ಯು.ಆರ್.ಅನಂತಮೂರ್ತಿಯವರ ಕಥಾ ಸಂಕಲನ “ಮೌನಿ” ಕೃತಿಗೆ ಅತ್ಯುತ್ತಮ ಮುನ್ನುಡಿ ಬರೆದಿದ್ದರು. ಅದೆಷ್ಟು ಒಳ್ಳೆಯ ಮುನ್ನುಡಿ ಬರೆದಿದ್ದರೆಂದರೆ, ಸಂಕಲನಕ್ಕಿಂತ ಮುನ್ನುಡಿಯನ್ನೇ ನಾವೆಲ್ಲ ನಾಲ್ಕಾರು ಬಾರಿ ಓದಿದ್ದೆವು. ಇದೆಲ್ಲ ಅರ್ಧ ಶತಮಾನಕ್ಕೂ ಹಿಂದಿನ ವಿಷಯ.

ಬಹುಮುಖ ಪ್ರತಿಭೆಯ ಮತ್ತು ಕ್ರಾಂತಿಕಾರಿ ವ್ಯಕ್ತಿತ್ವದ ತಾರಾನಾಥರು ಇವರ ತಂದೆ. ಸಾಹಿತ್ಯವಂತೂ ಸಹಜವಾಗಿಯೇ ರಾಜೀವರಿಗೆ ಒಲಿದಿತ್ತು. ಆದರೂ ಅನಂತರದ ವರ್ಷಗಳಲ್ಲಿ ಅವರು ಸಂಗೀತಕ್ಕೆ ಆದ್ಯತೆ, ಪ್ರಾಧಾನ್ಯ ನೀಡಿದರು. ಬೆಂಗಳೂರಿನಲ್ಲಿ ಒಮ್ಮೆ ಅವರ ಸರೋದ್ ವಾದನದ ಕಛೇರಿ ಇತ್ತು. ಪ್ರಾಯಶಃ 1979 ಇಲ್ಲವೇ 1980 ಇರಬಹುದು. ಬಸವನಗುಡಿಯ ದೊಡ್ಡ ಗಣೇಶನ ಬಳಿಯ ಕಹಳೆ ಬಂಡೆಯ ಬಳಿ ಮುಂಜಾನೆಯೇ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ರಾಜೀವರನ್ನು ಮತ್ತು ಸರೋದ್ ವಾದ್ಯವನ್ನು ಮೊದಲ ಬಾರಿಗೆ ನೋಡುವ ಅವಕಾಶ. ಲೇಖಕ ರಾಜೀವರ ಅಭಿಮಾನಿಗಳಾದ ಮತ್ತು ಸರೋದ್ ವಾದನದ ಅಭಿಮಾನಿಗಳೂ ಆದ ನಮ್ಮಂತಹವರಿಗೆ ಅದೊಂದು ಸುವರ್ಣಾವಕಾಶವಾಗಿತ್ತು. “ಕ್ಯಾಲಿಫೋರ್ನಿಯಾದಿಂದ ಬಂದೆ” ಎಂದಿದ್ದರು. ನಾನೂ, ಮಾಲಾ ಸರೋದ್ ಕಚೇರಿ ಕೇಳಿದ್ದೇ ಅದೇ ಮೊದಲು. ರೇಡಿಯೋದಲ್ಲಿ ಕೇಳುವುದಕ್ಕೂ, ಮಹಾನ್ ಕಲಾವಿದರನ್ನು ನೇರಾನೇರ ನೋಡುತ್ತ ಕೇಳುವುದಕ್ಕೂ ತುಂಬ ವ್ಯತ್ಯಾಸವಿದೆ.

ಇನ್ನೊಮ್ಮೆ ಆರ್.ವಿ.ಕಾಲೇಜಿನಲ್ಲೂ ಅದೇ ಕಾಲಘಟ್ಟದಲ್ಲಿ ರಾಜೀವ್ ತಾರಾನಾಥರ ಸರೋದ್ ವಾದನ ಕೇಳುವ ದಿವ್ಯ ಅವಕಾಶ ನಮಗೆ ದೊರೆತಿತ್ತು. ಆ ಕಾಲವೇ ಹಾಗಿತ್ತು. ರೇಡಿಯೋ ಬಿಟ್ಟರೆ, ಬೆಂಗಳೂರಿನಂತಹ ಮಹಾನಗರಗಳಲ್ಲಿ ಮಾತ್ರವೇ ಕೇಳುವ – ನೋಡುವ ಅವಕಾಶ ಲಭ್ಯ.

ಇದನ್ನೂ ಓದಿ: Rajeev Taranath: ಖ್ಯಾತ ಸರೋದ್‌ ವಾದಕ ರಾಜೀವ್ ತಾರಾನಾಥ್ ಇನ್ನಿಲ್ಲ

ದಿಗ್ಗಜರ ಒಡನಾಟ

ರಾಜೀವ್ ತಾರಾನಾಥರ ಬಹು ಆಯಾಮಗಳ ಪ್ರತಿಭೆಯ ಆಸ್ವಾದನಕ್ಕೆ ದೊರೆತ ಮತ್ತೊಂದು ಅವಕಾಶ ಎಂದರೆ, 1983ರಲ್ಲಿ ಗಿರೀಶ್ ಕಾಸರವಳ್ಳಿಯವರು ನಡೆಸಿಕೊಟ್ಟ 8 ದಿನಗಳ ಚಲನಚಿತ್ರ ರಸಗ್ರಹಣ ಶಿಬಿರ. ಗೆಳೆಯ ಅಪೂರ್ವ ಅಜ್ಜಂಪುರ ಅವರೊಂದಿಗೆ, ನಾನೂ – ಮಾಲಾ ಶಿಬಿರದಲ್ಲಿ ಭಾಗವಹಿಸಿದ್ದೆವು. ಇಂದಿಗೂ ನೆನಸಿಕೊಳ್ಳುವಂತಹ ಅಪೂರ್ವ ಶಿಬಿರವದು. ಚಲನಚಿತ್ರಗಳ ಸಂಗೀತದ ಆಯಾಮದ ಬಗೆಗೆ ರಾಜೀವ್ ವಿವರಣೆ ನೀಡುತ್ತಿದ್ದರು. ನೆನಪು ಮಾಡಿಕೊಂಡರೆ, ಇಂದಿಗೂ ರೋಮಾಂಚನವಾಗುತ್ತದೆ. ಅದು ಅಕ್ಷರಶಃ ದಿಗ್ಗಜರ ಒಡನಾಟ.
ಒಮ್ಮೆ ಜರ್ಮನಿಯ ಯಾತನಾ ಶಿಬಿರಗಳ ಸಾಕ್ಷ್ಯಚಿತ್ರ “ನೈಟ್ ಅಂಡ್ ಫಾಗ್” ತೋರಿಸಿದರು. Rarest ಎನ್ನಬಹುದಾದ ದೃಶ್ಯಗಳ ತುಣುಕುಗಳು ಅವು. ಮನಸ್ಸು, ಹೃದಯಗಳನ್ನು ಬಹುಕಾಲ ಕಲಕಿಬಿಡುವಂತಹ ಅನುಭವವಾಯಿತು. ಆ ಸಾಕ್ಷ್ಯಚಿತ್ರ ನೋಡಿ ಮುಗಿದ ಮೇಲೆ ನಮಗೆ, ಅಂದರೆ ಶಿಬಿರಾರ್ಥಿಗಳಿಗೆ, ರಾಜೀವ್ ” ಹಿಟ್ಲರನ ಸೈನ್ಯದ ಮೆರೆವಣಿಗೆಯ ದೃಶ್ಯದ ಅವಧಿಯಲ್ಲಿ ಹಿನ್ನೆಲೆ ಸಂಗೀತಕ್ಕೆ ಸಂಬಂಧಿಸಿದಂತೆ ಏನು ಗಮನಿಸಿದಿರಿ?” ಎಂದರು. ಆ ಇಡೀ ಸಾಕ್ಷ್ಯಚಿತ್ರ ಅತ್ಯಂತ ವೇದನಾದಾಯಕವಾದುದರಿಂದ, ಶಿಬಿರಾರ್ಥಿಗಳಿಗೆ ಹಿನ್ನೆಲೆ ಸಂಗೀತದ ಆ different ಆಯಾಮವನ್ನು ಗಮನಿಸಲು ಆಗಿರಲೇ ಇಲ್ಲ. ಕೊನೆಗೆ ರಾಜೀವ್ ಆ ದೃಶ್ಯವನ್ನು ಇನ್ನೊಮ್ಮೆ play ಮಾಡಿಸಿದರು. ಸೈನಿಕರ ಆ ಪಥಸಂಚಲನಕ್ಕೆ ಅಳುವ ಹಿನ್ನೆಲೆ ಸಂಗೀತವನ್ನು (Mourning Music) ನೀಡಲಾಗಿತ್ತು. ಅದು ಸೈನಿಕರ ಅಬ್ಬರದ ಪಥಸಂಚಲನವಾದರೂ, ಹಿಟ್ಲರನ ಪಡೆಗಳು ಎಸಗಿದ ಅಪಾರ ಕ್ರೌರ್ಯವನ್ನು ಆ ಸಂಗೀತ ಅದ್ಭುತವಾಗಿ ಪರಿಣಾಮಕಾರಿಯಾಗಿ ತೆರೆಯಮೇಲೆ ಹೊಮ್ಮಿಸಿತ್ತು.

ಡಾ|| ಯು.ಆರ್.ಅನಂತಮೂರ್ತಿ ಅವರ “ಸಮಕ್ಷಮ” ಅಪರೂಪದ ಸಂದರ್ಶನಗಳ ಸಂಕಲನವೂ ಹೌದು. ಅಲ್ಲಿ ರಾಜೀವ್ ತಾರಾನಾಥರ ಸಂದರ್ಶನವೂ ಇತ್ತು. ಶಿಬಿರದ ಬಿಡುವಿನಲ್ಲಿ ರಾಜೀವ್ ಅವರೊಂದಿಗೆ ಮಾತನಾಡುವಾಗ ಸಹಜವಾಗಿಯೇ ಅವರ ಆ ಸಂದರ್ಶನದ ವಿಷಯವು ಪ್ರಸ್ತಾಪವಾಗಿ ರೋಮಾಂಚನವಾಗುತ್ತಿತ್ತು.
ತೊಂಬತ್ತೆರಡು ವರ್ಷ ಇದ್ದ ರಾಜೀವ್ ಇನ್ನಿಲ್ಲ. ಹಾಗೆನ್ನುವಾಗ, ನಮ್ಮ “ಯಾದೊಂಕೀ ಬಾರಾತ್”ನಲ್ಲಿ ಅವರ ಬರವಣಿಗೆ, ಅವರ ಮಾತು, ಅವರ ತುಂಬು ಕಂಠ, ಅವರ ಅಸದೃಶ ಸರೋದ್ ವಾದನ ಎಲ್ಲವೂ ಒಟ್ಟೊಟ್ಟಿಗೇ ನುಗ್ಗಿನುಗ್ಗಿ ಬರುತ್ತಿವೆ.

ಅವರ ಅಪಾರ ಪ್ರತಿಭೆಗೆ ನಮೋ ನಮಃ.

Continue Reading

ಪ್ರಮುಖ ಸುದ್ದಿ

Murder News : ಖಾಸಗಿ ಕ್ಷಣದ ಫೋಟೋಗಳನ್ನಿಟ್ಟು ಬೆದರಿಕೆ ಹಾಕುತ್ತಿದ್ದವನನ್ನು ಕೊಲೆ ಮಾಡಿದ ವಿವಾಹಿತ ಮಹಿಳೆ

Murder News : ಪದೇ ಪದೆ ಬೆದರಿಕೆ ಹಾಕುತ್ತಿದ್ದ ರಾಜೇಶ್​ಗೆ ಸೌಮ್ಯವಾಗಿ ಮಾತನಾಡಿದ್ದ ಪ್ರೇಮಾ ತನ್ನ ಮನೆಗೆ ಕರೆಸಿಕೊಂಡಿದ್ದಳು. ಬಳಿಕ ಸಹೋದರ ಶಿವುನ ನೆರವಿನಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಹೊತ್ತು ಹಾಕಿ ಕೊಲೆ ಮಾಡಿದ್ದಾಳೆ.
ನಂಜನಗೂಡು ಪಟ್ಟಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು.

VISTARANEWS.COM


on

Murder News
Koo

ಮೈಸೂರು: ಖಾಸಗಿ ಕ್ಷಣಗಳ ಫೋಟೋಗಳನ್ನು ಸೋಶಿಯಲ್ ಮೀಡಿಯಾಗಳಲ್ಲಿ ಹಾಕಿ ಮರ್ಯಾದೆ ಕಳೆಯುವುದಾಗಿ ಬೆದರಿಕೆ ಹಾಕಿದ್ದ ಪ್ರಿಯಕರನ್ನು ವಿವಾಹಿತ ಮಹಿಳೆಯೊಬ್ಬಳು ಸಹೋದರನ ಜತೆ ಸೇರಿಕೊಂಡು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪ್ರಕರಣ (Murder News) ಎಚ್​​​ಡಿ ಕೋಟೆ ತಾಲೂಕಿನ ಸಿದ್ದಯ್ಯನ ಹುಂಡಿ ಬಳಿ ನಡೆದಿದೆ. ಪ್ರೇಮಾ ಹಾಗೂ ಆಕೆಯ ಸಹೋದರ ಶಿವು ಕೊಲೆ ಆರೋಪಿಗಳು. 32 ವರ್ಷದ ರಾಜೇಶ್​ ಕೊಲೆಯಾದ ವ್ಯಕ್ತಿ.

ಆರೋಪಿ ಪ್ರೇಮಾ ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿಯಾಗಿದ್ದಾರೆ. ಅವರು 15 ವರ್ಷದ ಹಿಂದೆ ನಂಜನಗೂಡಿನ ಶ್ರೀರಾಂಪುರಕ್ಕೆ ಮದುವೆ ಆಗಿ ಬಂದಿದ್ದರು. ಒಂದು ತಿಂಗಳ ಹಿಂದೆ ಪ್ರೇಮಾಳ ಪತಿ ಆತ್ಮಹತ್ಯೆ. ಮಾಡಿಕೊಂಡಿದ್ದರು. ಆ ಬಳಿಕ ಪ್ರೇಮಾ ಪತಿಯ ಸ್ನೇಹಿತ ರಾಜೇಶ್​ ಜತೆ ಪ್ರೀತಿಯಲ್ಲಿ ಬಿದ್ದಿದ್ದಳು. ಅವರಿಬ್ಬರು ಖಾಸಗಿ ಕ್ಷಣಗಳನ್ನೂ ಕಳೆದಿದ್ದರು. ಇದನ್ನೇ ದುರ್ಬಳಕೆ ಮಾಡಿಕೊಂಡಿದ್ದ ರಾಜೇಶ್​​, ಆ ಕ್ಷಣದ ಫೋಟೋಗಳನ್ನು ತೆಗೆದಿಟ್ಟುಕೊಂಡು ಬೆದರಿಕೆ ಹಾಕಲು ಆರಂಭಿಸಿದ್ದ. ಬೆದರಿದ ಪ್ರೇಮಾ ಆತನ ಜೀವನ ಕೊನೆಗೊಳಿಸಲು ನಿರ್ಧರಿಸಿದ್ದಾಳೆ. ಅಂತೆಯೇ ಆತನನ್ನು ತನ್ನ ಬಳಿಗೆ ಕರೆಸಿಕೊಂಡು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾಳೆ.

ಇದನ್ನೂ ಓದಿ: Actor Darshan Arrested : ಲಾಕಪ್​ನಲ್ಲಿ ಸೊಳ್ಳೆ ಕಡಿತಕ್ಕೆ ಬೆಚ್ಚಿ ರಾತ್ರಿಯೆಲ್ಲ ಎದ್ದು ಕುಳಿತಿದ್ದ ನಟ ದರ್ಶನ್​!

ಪದೇ ಪದೆ ಬೆದರಿಕೆ ಹಾಕುತ್ತಿದ್ದ ರಾಜೇಶ್​ಗೆ ಸೌಮ್ಯವಾಗಿ ಮಾತನಾಡಿದ್ದ ಪ್ರೇಮಾ ತನ್ನ ಮನೆಗೆ ಕರೆಸಿಕೊಂಡಿದ್ದಳು. ಬಳಿಕ ಸಹೋದರ ಶಿವುನ ನೆರವಿನಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಹೊತ್ತು ಹಾಕಿ ಕೊಲೆ ಮಾಡಿದ್ದಾಳೆ.
ನಂಜನಗೂಡು ಪಟ್ಟಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು.

ಹಿರಿಯ ಸ್ವಾಮೀಜಿ ಕೊಂದ‌ ಆರೋಪಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ


ಮೈಸೂರು: ಮೈಸೂರಿನ ಸಿದ್ದಾರ್ಥನಗರದಲ್ಲಿ ಅನ್ನದಾನೇಶ್ವರ ಮಠದ ಶ್ರೀ ಶಿವಾನಂದ ಸ್ವಾಮೀಜಿ ಅವರ ಆಪ್ತ ಸಹಾಯಕನಿಂದಲೇ ಬರ್ಬರವಾಗಿ ಕೊಂದು (Murder case ) ಹಾಕಿದ್ದ. ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ಆರೋಪಿ ರವಿ ಸೋಮವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅಸ್ವಸ್ಥಗೊಂಡಿದ್ದ ಆರೋಪಿ ರವಿಯನ್ನು ಪೊಲೀಸರು ಕೆಆರ್‌ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕುಡಿತದ ಚಟಕ್ಕೆ ಒಳಗಾಗಿದ್ದ ರವಿಗೆ ಶಿವಾನಂದ ಸ್ವಾಮೀಜಿ ಬುದ್ಧಿವಾದ ಹೇಳಿದ್ದರು. ಸ್ವಾಮೀಜಿ ಕುಡಿಯಲು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ರವಿ ಕೊಲೆ ಮಾಡಿದ್ದ ಎನ್ನಲಾಗಿದೆ. ಸದ್ಯ ಆರೋಪಿ‌ ರವಿ ಗುಣಮುಖನಾದ ಬಳಿಕ ಪೊಲೀಸರು ತನಿಖೆಯನ್ನು ಮುಂದುವರಿಸಲಿದ್ದಾರೆ.

ಏನಿದು ಪ್ರಕರಣ?
ನಿನ್ನೆ ಸೋಮವಾರ (ಜೂ.10) ಮೈಸೂರಿನಲ್ಲಿ ಹಿರಿಯ ಸ್ವಾಮೀಜಿಯೊಬ್ಬರ ಬರ್ಬರ (Murder case) ಕೊಲೆಯಾಗಿತ್ತು. ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ (90) ಸ್ವಾಮೀಜಿ ಕೊಲೆಯಾದವರು. ಶಿವಾನಂದ ಸ್ವಾಮೀಜಿ ಅವರ ಸಹಾಯಕನಾಗಿದ್ದ ಭದ್ರತಾ ಸಿಬ್ಬಂದಿಯಿಂದಲೇ ಕೊಲೆ ನಡೆದಿತ್ತು.

ರವಿ (60) ಎಂಬಾತನಿಂದ ಈ ಕೃತ್ಯ ನಡೆದಿತ್ತು. ಶಿವಾನಂದ ಸ್ವಾಮೀಜಿಯನ್ನು ಮಾರಕಾಸ್ತ್ರದಿಂದ ಚುಚ್ಚಿ ಕೊಲೆ ಮಾಡಲಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಜರ್‌ಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮಂಚದ ಮೇಲೆ ಮಲಗಿದ್ದಲ್ಲೇ ಶಿವಾನಂದ ಸ್ವಾಮೀಜಿಗೆ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.

Continue Reading

ಸ್ಯಾಂಡಲ್ ವುಡ್

Actor Darshan Arrested : ಲಾಕಪ್​ನಲ್ಲಿ ಸೊಳ್ಳೆ ಕಡಿತಕ್ಕೆ ಬೆಚ್ಚಿ ರಾತ್ರಿಯೆಲ್ಲ ಎದ್ದು ಕುಳಿತಿದ್ದ ನಟ ದರ್ಶನ್​!

Actor Darshan Arrested : ಸೊಳ್ಳೆ ಕಡಿತದ ಜತೆಗೆ ದರ್ಶನ್​ ಸಿಕ್ಕಾಪಟ್ಟೆ ಚಿಂತೆಯಲ್ಲಿ ಇದ್ದಂತೆ ಕಂಡು ಬಂತು. ಲಾಕ್​ಅಪ್​ನೊಳಗೆ ಆಗಾಗ ಎಚ್ಚರಗೊಂಡು ಕುಳಿತಿರುತ್ತಿದ್ದರು. ಆರಾಮವಾಗಿ ಎಸ್ಟೇಟ್​, ಬಂಗಲೆಯಲ್ಲಿ ಮಲಗುತ್ತಿದ್ದ ದರ್ಶನ್​ಗೆ ಜೈಲು ವಾಸ ಚಿಂತೆಯನ್ನು ಉಂಟು ಮಾಡಿತ್ತು.

VISTARANEWS.COM


on

Actor Darshan Arrested
Koo

ಬೆಂಗಳೂರು: ತನ್ನದೇ ಅಭಿಮಾನಿ ರೇಣುಕಾ ಸ್ವಾಮಿ ಎಂಬುವರನ್ನು ಕ್ರೂರವಾಗಿ ಕೊಲೆ ಮಾಡಿರುವ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ (Actor Darshan Arrested)​, ಸೊಳ್ಳೆ ಕಡಿತಕ್ಕೆ ಬೆಚ್ಚಿ ರಾತ್ರಿಯೆಲ್ಲ ಎಚ್ಚರವಿದ್ದರು. ಕೊಲೆಯಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ದರ್ಶನ್ ಮತ್ತು ಆತನ ಸಹಚರಿಗೆ ಕಾಮಾಕ್ಷಿಪಾಳ್ಯ ಪೊಲೀಸರು ಬೇರೆ ಬೇರೆ ಲಾಕಪ್​ನಲ್ಲಿ ಮಲಗಲು ವ್ಯವಸ್ಥೆ ಮಾಡಿದ್ದರು. ಆದರೆ, ಇದುವರೆಗೆ ಜೇಬುಗಳ್ಳರ, ಮನೆಗಳ್ಳರ ಮತ್ತು ಸಣ್ಣಪುಟ್ಟ ಹೊಡೆದಾಟಗಳಲ್ಲಿ ಜೈಲು ಸೇರುತ್ತಿದ್ದವರ ರಕ್ತ ಹೀರಿ ಅಭ್ಯಾಸವಿದ್ದ ಸೊಳ್ಳೆಗಳು ದರ್ಶನ್​ಗೂ ಕಾಟ ಕೊಟ್ಟವು. ಪೊಲೀಸರು ‘ಸೆಲೆಬ್ರಿಟಿ ದರ್ಶನ್​ಗೆ’ ಕಾರ್ಪೆಟ್​, ದಿಂಬು ಎಲ್ಲ ಕೊಟ್ಟು ಮಲಗಲು ವ್ಯವಸ್ಥೆ ಮಾಡಿದ್ದರೂ ಸೊಳ್ಳೆಗಳು ಅವೆಲ್ಲವನ್ನೂ ಲೆಕ್ಕಕ್ಕೆ ತೆಗೆದುಕೊಳ್ಳದೇ ಬೆಡ್​ಶೀಟ್​ ಒಳಗಿನಿಂದ ತೂರಿಕೊಂಡು ಹೋಗಿ ಕಚ್ಚಿದವು.

ಕೊಲೆ ಆರೋಪ ಎದುರಿಸುತ್ತಿರುವ ದರ್ಶನ್ ಹಾಗೂ ಉಳಿದ 11 ಜನ ಆರೋಪಿಗಳು ಲಾಕ್ ಅಪ್ ನಲ್ಲೇ ಉಳಿಯಬೇಕಾಯಿತು. ದರ್ಶನ್‌, ರಾಘವೇಂದ್ರ ಮತ್ತು ವಿನಯ್ ಗೆ ಒಂದು ಲಾಕ್ ಅಪ್ ನಲ್ಲಿ ಮಲಗಲು ವ್ಯವಸ್ಥೆ ಮಾಡಿದ್ದರೆ, ಇತರ ಆರೋಪಿಗಳಿಗೆ ಮತ್ತೊಂದು ಲಾಕ್ ಅಪ್​ನಲ್ಲಿ ಮಲಗಲು ಹೇಳಿದ್ದರು. ರಾತ್ರಿ ಆರೋಪಿಗಳಿಗೆ ಖಾಸಗಿ ಹೋಟೆಲ್ ನಿಂದ ದೊನ್ನೆ ಬಿರಿಯಾನಿ‌ ವ್ಯವಸ್ಥೆ ಮಾಡಲಾಗಿತ್ತು. ಚೆನ್ನಾಗಿ ತಿಂದಿದ್ದ ಅವರು ಪೊಲೀಸರೇ ಒದಗಿಸಿದ್ದ ಹಾಸಿಗೆ ಪರಿಕರಗಳು, ಬೆಡ್ ಶೀಟ್, ತಲೆ ದಿಂಬು ಬಳಸಿ ಮಲಗಿದ್ದರು. ಆದರೆ, ಸೊಳ್ಳೆಗಳು ಅವರ ರಕ್ಷಣಾ ಕೋಟೆಯನ್ನು ಭೇದಿಸಿ ಬಂದು ಕಚ್ಚಿದ್ದವು.

ಚಿಂತೆಗೆ ಬಿದ್ದಿರುವ ದರ್ಶನ್​

ಸೊಳ್ಳೆ ಕಡಿತದ ಜತೆಗೆ ದರ್ಶನ್​ ಸಿಕ್ಕಾಪಟ್ಟೆ ಚಿಂತೆಯಲ್ಲಿ ಇದ್ದಂತೆ ಕಂಡು ಬಂತು. ಲಾಕ್​ಅಪ್​ನೊಳಗೆ ಆಗಾಗ ಎಚ್ಚರಗೊಂಡು ಕುಳಿತಿರುತ್ತಿದ್ದರು. ಆರಾಮವಾಗಿ ಎಸ್ಟೇಟ್​, ಬಂಗಲೆಯಲ್ಲಿ ಮಲಗುತ್ತಿದ್ದ ದರ್ಶನ್​ಗೆ ಜೈಲು ವಾಸ ಚಿಂತೆಯನ್ನು ಉಂಟು ಮಾಡಿತ್ತು.

ಭಾರೀ ಭದ್ರತೆ

ದರ್ಶನ್​ ಹಾಗೂ ಆತನ ಗ್ಯಾಂಗ್​ನ ಸದಸ್ಯರು ಇದ್ದ ಪೊಲೀಸ್ ಠಾಣೆಗೆ ಭದ್ರತೆಯನ್ನು ಹೆಚ್ಚಿಸಲಾಗಿತ್ತು . ವಿಐಪಿ ಆರೋಪಿಗಳ ಮೇಲೆ ದಾಳಿಯಾಗುವ ಅಥವಾ ಇನ್ಯಾವುದೇ ಅನಾಹುತಗಳನ್ನು ತಪ್ಪಿಸುವ ಉದ್ದೇಶದಿಂದ ಠಾಣೆಯ ಹೊರಗಡೆ ಕೆಎಸ್​ಆರ್​​ಪಿ ಪೊಲೀಸ್​ ತಂಡವೊಂದನ್ನು ನಿಯೋಜಿಸಲಾಗಿತ್ತು. ದರ್ಶನ್​ಗೆ ದೊಡ್ಡ ಪ್ರಮಾಣದ ಅಭಿಮಾನಿ ಬಳಗವಿದೆ. ಹುಚ್ಚು ಅಭಿಮಾನ ದರ್ಶನ್ ಆರೋಪಿಯೇ ಅಲ್ಲ ಎಂದು ವಾದಿಸುವ ಮಟ್ಟಕ್ಕೆ ಬಂದಿದೆ. ಹೀಗಾಗಿ ಡಿ ಬಾಸ್ ನೋಡಲು ಪೊಲೀಸ್​ ಠಾಣೆಗೆ ಬರಬಹುದು ಎಂಬ ಊಹೆ ಮೇಲೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಇಂದಿನಿಂದ ಆರು ದಿನಗಳ ಕಾಲ ತನಿಖೆ

ಬುಧವಾರದಿಂದ ಆರಂಭಗೊಂಡಂತೆ ದರ್ಶನ್ ಗ್ಯಾಂಗ್​​ಗೆ ಆರು ದಿನಗಳ ಕಾಲ ಪೊಲೀಸ್ ವಿಚಾರಣೆ ನಡೆಯಲಿದೆ. ಕೊಲೆ ಕೇಸ್ ಸಂಬಂಧ ಪೊಲೀಸರು ಸಾಕ್ಷ್ಯಗಳನ್ನು ಒಟ್ಟು ಮಾಡಲಿದ್ದಾರೆ. ಆರಂಭದಲ್ಲಿ ಆರೋಪಿಗಳ ಎಲೆಕ್ಟ್ರಾನಿಕ್ ಡಿವೈಸ್​​ಗಳ ತಲಾಷೆ ನಡೆಯಲಿದೆ. ಜತೆಗೆ ಅಪಹರಿಸಿಕೊಂಡು ಬಂದು ಕೂಡಿ ಹಾಕಿದ ಜಾಗ, ಕೊಲೆ ಮಾಡಿ ಎಸೆದ ಜಾಗವನ್ನು ಮಹಜರು ಮಾಡಲಿದ್ದಾರೆ.

ಇದನ್ನೂ ಓದಿ: Actor Darshan Arrested : ದರ್ಶನ್​ಗೆ ಪೊಲೀಸ್ ಠಾಣೆಯಲ್ಲಿ ರಾಜಾತಿಥ್ಯ; ಚಿಕ್ಕಪೇಟೆ ಬಿರಿಯಾನಿ, ಡೋಲೊ 650 ಮಾತ್ರೆ!

ರೇಣುಕಾಸ್ವಾಮಿಯನ್ನು ಹತ್ಯೆ ಮಾಡಿದ್ದು ಯಾರು, ಯಾರು ಅವರಿಗೆ ಹೊಡೆದಿದ್ದಾರೆ, ಅವರನ್ನು ಎತ್ತಿ ಹಾಕಿಕೊಂಡು ಬಂದು ಎಸೆದು ಹೋಗಿದ್ದು ಯಾರು ಎಂಬೆಲ್ಲ ಕೋನದಿಂದ ತನಿಖೆ ನಡೆಸಲಿದ್ದಾರೆ. ಅಮಾನುಷವಾಗಿ ಕೊಲೆ ಮಾಡಲು ಬಳಸಿರುವ ಪರಿಕರಗಳನ್ನು ಪೊಲೀಸರು ವಶಕ್ಕೆ ಪಡೆಯಲಿದ್ದಾರೆ. ಬಿಸಾಡಿರುವ ಆಯುಧಗಳನ್ನು ಹುಡುಕಿ ಪತ್ತೆ ಹಚ್ಚಲಿದ್ದಾರೆ.

ಪ್ರಮುಖವಾಗಿ ಹತ್ಯೆ ನಡೆದ ದಿನ ಆರೋಪಿಗಳ ಮೊಬೈಲ್​ ನೆಟ್​ವರ್ಕ್ ಇದ್ದ ಜಾಗವನ್ನು ಪತ್ತೆ ಹಚ್ಚಲಿದ್ದಾರೆ. ಈ ಮಾಹಿತಿಯು ಆರೋಪಿಗಳ ವಿರುದ್ಧ ಚಾರ್ಜ್​ ಶೀಟ್​ ಸಲ್ಲಿಕೆ ಮಾಡುವುದಕ್ಕೆ ಪ್ರಮುಖ ಸಾಕ್ಷಿಗಳಾಗಲಿವೆ. ಅದೇ ರೀತಿ ಆರೋಪಿಗಳನ್ನು ಚಿತ್ರದುರ್ಗಕ್ಕೆ ಕರೆದೊಯ್ದು ತನಿಖೆ ನಡೆಸಲು ಪೊಲೀಸರು ಮುಂದಾಗಲಿದ್ದಾರೆ.

Continue Reading
Advertisement
Minister Dinesh Gundurao drives 10 days Yogotsava programme in Bengaluru
ಕರ್ನಾಟಕ23 seconds ago

Bengaluru News: 10 ದಿನಗಳ ‘ಯೋಗೋತ್ಸವ’ಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

Rajiv Taranath
ಪ್ರಮುಖ ಸುದ್ದಿ4 mins ago

Rajeev Taranath : ಮಹೋನ್ನತ ಪ್ರತಿಭೆಯ ರಾಜೀವ್ ತಾರಾನಾಥ್ ಸರೋದ್ ಲೋಕದ ಅದ್ಭುತ!

Actor Darshan Arrested Vijayalakshmi Darshan Unfollow Darshan On Instagram
ಸ್ಯಾಂಡಲ್ ವುಡ್11 mins ago

Actor Darshan Arrested : ದರ್ಶನ್​ನ ಅನ್​ಫಾಲೋ ಮಾಡಿ ಡಿಪಿ ಡಿಲೀಟ್‌ ಮಾಡಿದ ದರ್ಶನ್‌ ಪತ್ನಿ ವಿಜಯಲಕ್ಷ್ಮಿ!

Murder News
ಪ್ರಮುಖ ಸುದ್ದಿ27 mins ago

Murder News : ಖಾಸಗಿ ಕ್ಷಣದ ಫೋಟೋಗಳನ್ನಿಟ್ಟು ಬೆದರಿಕೆ ಹಾಕುತ್ತಿದ್ದವನನ್ನು ಕೊಲೆ ಮಾಡಿದ ವಿವಾಹಿತ ಮಹಿಳೆ

Reasi Terror Attack
ದೇಶ1 hour ago

Reasi Terror Attack: ರಿಯಾಸಿ ಭಯೋತ್ಪಾದಕ ದಾಳಿಯ ಶಂಕಿತನ ರೇಖಾಚಿತ್ರ ಬಿಡುಗಡೆ; ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಘೋಷಣೆ

Actor Darshan Arrested
ಸ್ಯಾಂಡಲ್ ವುಡ್1 hour ago

Actor Darshan Arrested : ಲಾಕಪ್​ನಲ್ಲಿ ಸೊಳ್ಳೆ ಕಡಿತಕ್ಕೆ ಬೆಚ್ಚಿ ರಾತ್ರಿಯೆಲ್ಲ ಎದ್ದು ಕುಳಿತಿದ್ದ ನಟ ದರ್ಶನ್​!

Terrorists Attack
ಪ್ರಮುಖ ಸುದ್ದಿ2 hours ago

Terrorists Attack : ಜಮ್ಮು ಕಾಶ್ಮೀರದಲ್ಲಿ ಸೇನಾ ನೆಲೆ ಮೇಲೆ ಪಾಕಿಸ್ತಾನದ ಉಗ್ರರ ದಾಳಿ

Rock Salt Or Powder Salt
ಆರೋಗ್ಯ3 hours ago

Rock Salt Or Powder Salt: ಬೆಳ್ಳನೆಯ ಪುಡಿ ಉಪ್ಪು ಆರೋಗ್ಯಕರವೇ ಅಥವಾ ಕಲ್ಲುಪ್ಪೇ?

Actor Darshan Arrested
ಪ್ರಮುಖ ಸುದ್ದಿ4 hours ago

Actor Darshan Arrested : ದರ್ಶನ್​ಗೆ ಪೊಲೀಸ್ ಠಾಣೆಯಲ್ಲಿ ರಾಜಾತಿಥ್ಯ; ಚಿಕ್ಕಪೇಟೆ ಬಿರಿಯಾನಿ, ಡೋಲೊ 650 ಮಾತ್ರೆ!

Dina Bhavishya
ಭವಿಷ್ಯ4 hours ago

Dina Bhavishya : ಜೀವನದಲ್ಲಿ ಹೊಸ ತಿರುವು ಪಡೆದುಕೊಳ್ಳುವ ಸಾಧ್ಯತೆ; ಪ್ರಭಾವಿ ವ್ಯಕ್ತಿಗಳ ಬೆಂಬಲ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ15 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ16 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ18 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ19 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ21 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌