former Deputy CM laxman savadi joining karnataka congress Karnataka Congress: ಲಕ್ಷ್ಮಣ ಸವದಿ ಕಾಂಗ್ರೆಸ್‌ ಸೇರ್ಪಡೆಗೆ ಸಮಯ ನಿಗದಿ: ಅಥಣಿಯಿಂದ ಸ್ಪರ್ಧೆ ಖಚಿತ - Vistara News

ಕರ್ನಾಟಕ

Karnataka Congress: ಲಕ್ಷ್ಮಣ ಸವದಿ ಕಾಂಗ್ರೆಸ್‌ ಸೇರ್ಪಡೆಗೆ ಸಮಯ ನಿಗದಿ: ಅಥಣಿಯಿಂದ ಸ್ಪರ್ಧೆ ಖಚಿತ

ಲಕ್ಷ್ಮಣ ಸವದಿ ಯಾವ ನಿಬಂಧನೆಯನ್ನೂ ವಿಧಿಸಿಲ್ಲ. ನಮ್ಮ ಪಕ್ಷ, ಸಿದ್ಧಾಂತ ಹಾಗೂ ನಾಯಕತ್ವ ಒಪ್ಪಿ ಬಂದಿದ್ದಾರೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

VISTARANEWS.COM


on

DK Shivakumar along with Siddaramaiah and Laxman savadi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್‌ ಸೇರ್ಪಡೆ ಖಚಿತವಾಗಿದ್ದು, ಅಥಣಿ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣಜಿತ್‌ ಸಿಂಗ್‌ ಸುರ್ಜೆವಾಲ ಅವರೊಂದಿಗೆ ಮಾತುಕತೆ ನಂತರ ಪಕ್ಷ ಸೇರುವ ತೀರ್ಮಾನ ಮಾಡಿದ್ದಾರೆ.

ಮೊದಲಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ನಮ್ಮ ಅವರ ಮಾತುಕತೆ ಬಹಳ ಸೌಹಾರ್ದಯುತವಾಗಿ ನಡೆದಿದೆ. ಅವರ ಗೌರವವನ್ನು ಕಾಪಾಡುತ್ತೇವೆ. ನಮ್ಮ ಕುಟುಂಬದ ಸದಸ್ಯರಾಗಲು ಸ್ವಯಿಚ್ಛೆಯಿಂದ ಒಪ್ಪಿದ್ದಾರೆ. 4 ಗಂಟೆಗೆ ವಿಧಾನ ಪರಿಷತ್‌ ಸಭಾಪತಿಯವರನ್ನು ಭೇಟಿ ಮಾಡಿ ರಾಜೀನಾಮೆ ನೀಡುತ್ತಾರೆ, 4.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಸೇರುತ್ತಾರೆ.

ಯಾವ ನಿಬಂಧನೆಗಳನ್ನು ವಿಧಿಸಿದ್ದಾರೆ ಎಂಬ ಪ್ರಶ್ನೆಗೆ, ಯಾವ ನಿಬಂಧನೆಯೂ ಇಲ್ಲ. ನಮ್ಮ ಪಕ್ಷ, ಸಿದ್ಧಾಂತ ಹಾಗೂ ನಾಯಕತ್ವ ಒಪ್ಪಿ ಬಂದಿದ್ದಾರೆ. ಅವರಿಗೆ ಗೌರವ ನೀಡನೇಕಾದ್ದು ನಮ್ಮ ಕರ್ತವ್ಯ. ಇನ್ನೂ ಬಹಳಷ್ಟು ಜನರು ಆಗಮಿಸುವವರಿದ್ದಾರೆ, ಅವರೆಲ್ಲರನ್ನೂ ಸ್ವಾಗತಿಸುತ್ತೇವೆ.

ಸತೀಶ್‌ ಜಾರಕಿಹೊಳಿ ಅವರು ಸಭೆಯಲ್ಲಿ ಇರಲಿಲ್ಲ ಎಂಬ ಪ್ರಶ್ನೆಗೆ, ಆ ರೀತಿ ಏನೂ ಇಲ್ಲ. ಅವರೊಂದಿಗೆ ಮಾತನಾಡಿದ್ದೇನೆ. ಬೇರೆ ಕಾರ್ಯಕ್ರಮದ ನಿಮಿತ್ತ ಆಗಮಿಸಿಲ್ಲ ಎಂದರು.

ಸಿದ್ದರಾಮಯ್ಯ ಮಾತನಾಡಿ, ಲಕ್ಷ್ಮಣ ಸವದಿ ಹಿರಿಯ ರಾಜಕಾರಣಿ. ಬಿಜೆಪಿ ತೀರ್ಮಾನದಿಂದ ಅವರು ಅವಮಾನಕ್ಕೆ ಒಳಗಾಗಿದ್ದಾರೆ. ಒಬ್ಬ ಹಿರಿಯ ರಾಜಕಾರಣಿಯನ್ನು ಬಿಜೆಪಿ ಸರಿಯಾಗಿ ನಡೆಸಿಕೊಂಡಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ವಿಧಾನ ಪರಿಷತ್‌ ಸದಸ್ಯತ್ವ ಇನ್ನೂ ಐದು ವರ್ಷ ಇದ್ದರೂ ರಾಜೀನಾಮೆ ನೀಡುತ್ತಿದ್ದಾರೆ. ಕಾಂಗ್ರೆಸ್‌ ಸೇರುತ್ತೇನೆ, ನನಗೆ ಕಾಂಗ್ರೆಸ್‌ ಪಕ್ಷದಲ್ಲಿ ಗೌರವದಿಂದ ನಡೆಸಿಕೊಳ್ಳಬೇಕು ಎಂದಷ್ಟೇ ಹೇಳಿದ್ದಾರೆ. ಅಥಣಿ ಕ್ಷೇತ್ರದಿಂದ ನೂರಕ್ಕೆ ನೂರು ಸ್ಪರ್ಧೆ ಮಾಡುತ್ತಾರೆ ಎಂದರು.

ಲಕ್ಷ್ಮಣ ಸವದಿ ಮಾತನಾಡಿ, ಸುದೀರ್ಘ ಚರ್ಚೆ ಮಾಡಿದ್ದೇವೆ. ಕಂಡೀಷನ್‌ ಏನೂ ಇಲ್ಲ. ಅಥಣಿಯಿಂದ ಸ್ಪರ್ಧೆ ಮಾಡುತ್ತೇನೆ, ಮುಂದೆ ಸರ್ಕಾರ ಬಂದಾಗ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಬೇಕು, ನೀರಾವರಿ ಯೋಜನೆಗಳನ್ನು ಮುಗಿಸಿಕೊಡಬೇಕು ಎಂದು ಕೇಳಿದ್ದೇನೆ. ನನ್ನ ಮಗನಿಗೂ ಟಿಕೆಟ್‌ ಕೇಳಿಲ್ಲ, ಹೆಂಡತಿಗೂ ಕೇಳಿಲ್ಲ, ಅಣ್ಣನಿಗೂ ಕೇಳಿಲ್ಲ ಎಂದರು. ನಿಮ್ಮ ಸೇರ್ಪಡೆ ಕುರಿತು ಸತೀಶ್‌ ಜಾರಕಿಹೊಳಿ ಅವರಿಗೆ ಗೊತ್ತೆ ಎಂಬ ಪ್ರಶ್ನೆಗೆ, ಅವರಿಗೆ ಗೊತ್ತಿದೆ, ಅವರ ಜತೆ ಮಾತನಾಡಿದ್ದೇನೆ ಎಂದರು. ತಾವು ಪಕ್ಷ ಬಿಡುತ್ತಿರುವುದಕ್ಕೆ ಬೇಸರವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ಎಂಬ ಪ್ರಶ್ನೆಗೆ, ಅದಕ್ಕೆ ನಾನೇನು ಮಾಡೋಕೆ ಆಗುತ್ತದೆ? ನಾನೇನು ಅವರ ದುಃಖ ಒರೆಸೋಕೆ ಆಗುತ್ತ? ಎಂದರು.

ಇದನ್ನೂ ಓದಿ: Karnataka Elections : ಲಕ್ಷ್ಮಣ ಸವದಿಗೆ ಟಿಕೆಟ್‌ ಇಲ್ಲ; ಅನ್ಯಾಯ ಮಾಡಬೇಡಿ ಎಂದು ಕಣ್ಣೀರು ಹಾಕಿದ ನಾಯಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮೈಸೂರು

Mysuru News : ಪತ್ನಿ ಶೀಲ ಶಂಕಿಸಿ ಬೆಂಕಿ ಹಚ್ಚಿ ಸುಟ್ಟು ಹಾಕಿದವನಿಗೆ ಜೀವಾವಧಿ ಶಿಕ್ಷೆ

Mysuru News : ಪತ್ನಿಯ ಶೀಲ ಶಂಕಿಸಿದ ಪಾಪಿ ಪತಿಯೊಬ್ಬ ಸ್ಯಾನಿಟೈಜರ್ ಸುರಿದು ಬೆಂಕಿ ಹಚ್ಚಿದ್ದ. ಗಂಭೀರ ಗಾಯಗೊಂಡಿದ್ದ ಮಹಿಳೆ ನರಳಾಡಿ (Murder case) ಮೃತಪಟ್ಟಿದ್ದಳು. ಇದೀಗ ಕೃತ್ಯ ನಡೆಸಿದ ಆರೋಪಿಗೆ 4 ವರ್ಷದ ನಂತರ ಜೀವಾವಧಿ ಶಿಕ್ಷೆ (Life imprisonment) ವಿಧಿಸಿ ನ್ಯಾಯಾಲಯವು ಆದೇಶ ಹೊರಡಿಸಿದೆ.

VISTARANEWS.COM


on

By

Mysuru News
ಸಾಂದರ್ಭಿಕ ಚಿತ್ರ
Koo

ಮೈಸೂರು: ಪತ್ನಿ ಶೀಲ ಶಂಕಿಸಿ ಕೊಲೆ (Murder Case) ಮಾಡಿದ (Mysuru News) ಆರೋಪಿಗೆ ಜೀವಾವಧಿ ಶಿಕ್ಷೆ (Life imprisonment) ವಿಧಿಸಿ ಮೈಸೂರಿನ 5ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ರವಿ ಜೀವಾವಧಿ ಶಿಕ್ಷೆಗೆ ಒಳಗಾದವನು. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೇಬೂರು ಗ್ರಾಮದ ನಿವಾಸಿಯಾದ ರವಿ ಎಂಬಾತ ಪತ್ನಿ ಅಮುದಾಳ ಶೀಲ ಶಂಕಿಸಿ ಕೊಲೆ ಮಾಡಿದ್ದ.

ಇದೀಗ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿ ರವಿಗೆ ಐಪಿಸಿ ಸೆಕ್ಷನ್ 498(ಎ ) ಪ್ರಕಾರ 2 ವರ್ಷ ಕಠಿಣ ಶಿಕ್ಷೆ ಒಂದು ಸಾವಿರ ದಂಡ ಹಾಗೂ ಐಪಿಸಿ ಸೆಕ್ಷನ್ 302 ಪ್ರಕಾರ ಜೀವಾವಧಿ ಶಿಕ್ಷೆ ಹಾಗೂ ಐದು ಸಾವಿರ ದಂಡ ಹಾಕಿ ಆದೇಶಿಸಿದೆ. ಮೈಸೂರು 5ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಗುರುರಾಜ್ ಸೋಮಕ್ಕಳವರ್ ತೀರ್ಪು ನೀಡಿದ್ದಾರೆ.

ಮಕ್ಕಳಿಬ್ಬರು ಅನಾಥ

ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದೇಬೂರು ಗ್ರಾಮದ ಸುಬ್ಬ ಅಲಿಯಾಸ್‌ ರವಿ 10 ವರ್ಷದ ಹಿಂದೆ ನಂಜನಗೂಡು ಪಟ್ಟಣದ ರಾಜಾಜಿ ಕಾಲೋನಿಯ ನಂಜುಂಡ ಅವರ ಮಗಳು ಅಮುದಾರವರನ್ನು ಮದುವೆ ಆಗಿದ್ದ. ಈ ದಂಪತಿಗೆ 9 ಹಾಗೂ 6 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದರು.

ಮದುವೆಯಾದ 2-3 ವರ್ಷಕ್ಕೆ ಆರೋಪಿ ರವಿ ತನ್ನ ವಾರೆಸೆ ಶುರು ಮಾಡಿದ್ದ. ಅಮುದಾಳಿಗೆ ನೀನು ಬೇರೆಯವರ ಜತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದೀಯಾ ಎಂದು ಶೀಲ ಶಂಕಿಸಿ ಪ್ರತಿದಿನ ಕುಡಿದು ಬಂದು ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದ.

ಹೀಗೆ ಕಳೆದ 2020ರ ಡಿಸೆಂಬರ್‌ 6ರಂದು ಸಂಜೆ 4-30ರ ಸುಮಾರಿಗೆ ಕುಡಿದು ಬಂದ ರವಿ, ಅಮುದಾಳೊಂದಿಗೆ ಜಗಳ ತೆಗೆದಿದ್ದ. ಈ ವೇಳೆ ರವಿಗೆ ಊಟ ಬಡಿಸುತ್ತಿದ್ದಾಗ ಅಮುದಾ ಮೇಲೆ ಸ್ಯಾನಿಟೈಜರ್ ಸುರಿದು ಬೆಂಕಿ ಹಚ್ಚಿದ್ದ. ಸುಟ್ಟ ಗಾಯಗಳಿಂದ ನರಳುತ್ತಿದ್ದ ಆಮುದಾಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಮುದಾ ಮೃತಪಟ್ಟಿದ್ದಳು.

ಇದನ್ನೂ ಓದಿ: Hassan Shoot Out : ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ; ಇಬ್ಬರ ಹತ್ಯೆಗೈದ ಪಾತಕಿಗಳು!

ಮೃತಳ ಸಹೋದರ ನೀಡಿದ ದೂರಿನ ಆಧಾರದ ಮೇರೆಗೆ ಆರೋಪಿ ರವಿ ವಿರುದ್ಧ ಕಲಂ 498(ಎ), 302 ಐಪಿಸಿ ರೀತ್ಯಾ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ತನಿಖೆ ಮಾಡಿ ಅಂದಿನ ಪೊಲೀಸ್ ವೃತ್ತ ನಿರೀಕ್ಷಕರಾದ ಲಕ್ಷ್ಮೀಕಾಂತ ತಳವಾರ್‌ರವರು ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಈ ಪ್ರಕರಣದಲ್ಲಿ ವಿಚಾರಣೆ ನಡೆಸಿದ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಗುರುರಾಜ್ ಸೋಮಕ್ಕಳವರ್, ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಆರೋಪಿಯು ಅಪರಾಧ ಎಸಗಿರುವುದು ಸಾಬೀತಾಗಿದೆ. ಹೀಗಾಗಿ ಆರೋಪಿಗೆ ಕಲಂ 498(ಎ) ಐಪಿಸಿ ಅಡಿಯ ಅಪರಾಧಕ್ಕೆ 2 ವರ್ಷ ಕಠಿಣ ಶಿಕ್ಷೆ ಮತ್ತು ರೂ.1.000/- ದಂಡವನ್ನು ವಿಧಿಸಿದ್ದು ಮತ್ತು ಕಲಂ 302 ಐಪಿಸಿ ಅಡಿಯ ಅಪರಾಧಕ್ಕೆ ಜೀವಾವಧಿ ಶಿಕ್ಷೆ ಮತ್ತು ರೂ.5,000/- ದಂಡವನ್ನು ವಿಧಿಸಿ ತೀರ್ಪು ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Shivamogga News: ಶಿವಮೊಗ್ಗದಲ್ಲಿ ಜೂ.22ರಂದು ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ

Shivamogga News: ಚಿಕ್ಕಮಗಳೂರಿನ ಯುವ ಸ್ಫೂರ್ತಿ ಅಕಾಡೆಮಿ, ವಿಸ್ತಾರ ನ್ಯೂಸ್‌ ಹಾಗೂ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜು, ಗಾಜನೂರು ಇವರ ಸಹಯೋಗದಲ್ಲಿ ಜೂ.22ರಂದು ಶನಿವಾರ ಬೆಳಗ್ಗೆ 10 ಗಂಟೆಗೆ ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.

VISTARANEWS.COM


on

Yuva spoorthi samvaada programme on June 22 in Shivamogga
Koo

ಶಿವಮೊಗ್ಗ: ಚಿಕ್ಕಮಗಳೂರಿನ ಯುವ ಸ್ಫೂರ್ತಿ ಅಕಾಡೆಮಿ, ವಿಸ್ತಾರ ನ್ಯೂಸ್‌ ಹಾಗೂ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜು ಗಾಜನೂರು ಇವರ ಸಹಯೋಗದಲ್ಲಿ ಜೂ.22ರಂದು ಶನಿವಾರ ಬೆಳಗ್ಗೆ 10 ಗಂಟೆಗೆ ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ (Shivamogga News) ಏರ್ಪಡಿಸಲಾಗಿದೆ.

ಇದನ್ನೂ ಓದಿ: Working Hours: ಅತಿ ಹೆಚ್ಚು ಕೆಲಸದ ಸಮಯ ಹೊಂದಿರುವ ದೇಶಗಳಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ?

ಜಿಲ್ಲೆಯ ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಉದ್ಘಾಟಿಸುವರು. ಶಿವಮೊಗ್ಗದ ಶ್ರೀ ದೊಡ್ಡಮ್ಮ ದೇವಿ ಉಪಾಸಕರಾದ ಶ್ರೀ ಸಿದ್ದಪ್ಪಾಜಿ ದಿವ್ಯ ಸಾನ್ನಿಧ್ಯ ವಹಿಸುವರು. ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಲೋಕಪ್ಪ ವಿ. ದಳವಾಯಿ ಅಧ್ಯಕ್ಷತೆ ವಹಿಸುವರು. ಚಿಕ್ಕಮಗಳೂರಿನ ಯುವ ಸ್ಫೂರ್ತಿ ಅಕಾಡೆಮಿಯ ಮುಖ್ಯಸ್ಥ ಸುಂದರೇಶ್‌ ಸಿ.ಬಿ. ಪ್ರಾಸ್ತಾವಿಕವಾಗಿ ಮಾತನಾಡುವರು.

ಇದನ್ನೂ ಓದಿ: CM Siddaramaiah: ಸರ್ಕಾರಿ ನೌಕರರಿಗೆ ಬಂಪರ್‌ ಸುದ್ದಿ: 27% ವೇತನ ಹೆಚ್ಚಳಕ್ಕೆ ಮುಂದಾದ ಸಿಎಂ

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗೋಪಾಲಕೃಷ್ಣ ಬಿ., ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸ್ನೇಹಲ್‌ ಸುಧಾಕರ್‌ ಲೋಖಂಡೆ, ಶಿವಮೊಗ್ಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್‌ ಜಿ.ಕೆ., ಹೈಕೋರ್ಟ್‌ ಹಾಗೂ ಸುಪ್ರೀ ಕೋರ್ಟ್‌ನ ನ್ಯಾಯವಾದಿ ವಿಕ್ರಂ ಪಡ್ಕೆ ಪಾಲ್ಗೊಳ್ಳುವರು.

Continue Reading

ಕರ್ನಾಟಕ

Darshan Arrested: ರೇಣುಕಾಸ್ವಾಮಿ ಕೊಲೆ ಕೇಸ್;‌ ಪವಿತ್ರಾ ಗೌಡಗೆ ಜೈಲು, ದರ್ಶನ್‌ ಪೊಲೀಸ್‌ ಕಸ್ಟಡಿಗೆ

Darshan Arrested: ಪೊಲೀಸರ ಪರವಾಗಿ ಎಸ್‌ಪಿಪಿ ಪ್ರಸನ್ನಕುಮಾರ್‌ ವಾದ ಮಂಡಿಸಿದರು. “ಕೊಲೆ ಪ್ರಕರಣದ ತನಿಖೆ ವೇಳೆ ಹಲವು ಮಾಹಿತಿ ಲಭ್ಯವಾಗಿದೆ. ಪ್ರಕರಣದ ಕುರಿತು ಆರೋಪಿಗಳ ವಿಚಾರಣೆಯ ಅಗತ್ಯವಿದೆ. ಹಾಗಾಗಿ, ನ್ಯಾಯಾಲಯವು ಇನ್ನೂ ನಾಲ್ಕು ದಿನ ಪೊಲೀಸ್‌ ಕಸ್ಟಡಿಗೆ ನೀಡಬೇಕು” ಎಂಬುದಾಗಿ ಮನವಿ ಮಾಡಿದರು. ಅದರಂತೆ ನ್ಯಾಯಾಲಯವು ದರ್ಶನ್‌ ಸೇರಿ ಆರು ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ, ಏಳು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿದರು.

VISTARANEWS.COM


on

Darshan Arrested
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಹತ್ಯೆ (Renukaswamy Murder) ಪ್ರಕರಣದಲ್ಲಿ ದರ್ಶನ್‌ ಆ್ಯಂಡ್‌ಗೆ ಗ್ಯಾಂಗ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಗುರುವಾರ ಪೊಲೀಸ್‌ ಕಸ್ಟಡಿ ಅವಧಿ ಮುಗಿದ ಕಾರಣ ಎ1 ಆರೋಪಿ ಪವಿತ್ರಾ ಗೌಡ, ಎ2 ದರ್ಶನ್‌ ಸೇರಿ 13 ಆರೋಪಿಗಳನ್ನು ಗುರುವಾರ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಎ 1 ಪವಿತ್ರಾ ಗೌಡ ಸೇರಿ ಏಳು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ (Darshan Arrested) ವಹಿಸಿದ ಕಾರಣ ಅವರನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗುತ್ತದೆ. ಇನ್ನು ದರ್ಶನ್‌ ಸೇರಿ ಆರು ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.

ಪೊಲೀಸರ ಪರವಾಗಿ ಎಸ್‌ಪಿಪಿ ಪ್ರಸನ್ನಕುಮಾರ್‌ ವಾದ ಮಂಡಿಸಿದರು. “ಕೊಲೆ ಪ್ರಕರಣದ ತನಿಖೆ ವೇಳೆ ಹಲವು ಮಾಹಿತಿ ಲಭ್ಯವಾಗಿದೆ. ಪ್ರಕರಣದ ಕುರಿತು ಆರೋಪಿಗಳ ವಿಚಾರಣೆಯ ಅಗತ್ಯವಿದೆ. ಹಾಗಾಗಿ, ನ್ಯಾಯಾಲಯವು ಇನ್ನೂ ನಾಲ್ಕು ದಿನ ಪೊಲೀಸ್‌ ಕಸ್ಟಡಿಗೆ ನೀಡಬೇಕು” ಎಂಬುದಾಗಿ ಮನವಿ ಮಾಡಿದರು. ಇದಕ್ಕೆ ದರ್ಶನ್‌ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. “ಬಹುತೇಕ ವಿಚಾರಣೆ ಮುಗಿದಿದೆ. ಹಾಗಾಗಿ, ಪೊಲೀಸ್‌ ಕಸ್ಟಡಿಗೆ ನೀಡುವ ಅಗತ್ಯವಿಲ್ಲ” ಎಂದರು. ಆದರೆ, “ರೇಣುಕಾಸ್ವಾಮಿ ಮೊಬೈಲ್‌ ರಿಕವರಿ ಆಗಿಲ್ಲ. ಅದನ್ನು ಪತ್ತೆ ಹಚ್ಚಬೇಕಿದೆ. ಪವಿತ್ರಾ ಗೌಡ ಅವರನ್ನು ನ್ಯಾಯಾಂಗ ಬಂಧನಕ್ಕೆ ಹಾಗೂ ದರ್ಶನ್‌ ಸೇರಿ ಆರು ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಬೇಕು” ಎಂದು ಮನವಿ ಮಾಡಿದರು. ಇದಕ್ಕೆ ನ್ಯಾಯಾಧೀಶರು ಸಮ್ಮತಿ ಸೂಚಿಸಿದರು. ದರ್ಶನ್, ವಿನಯ್, ಪ್ರದೋಷ್, ನಾಗರಾಜ್, ಲಕ್ಷ್ಮಣ್ ಹಾಗೂ ಧನರಾಜ್‌ ಅವರನ್ನು ಪೊಲೀಸ್‌ ಕಸ್ಟಡಿಗೆ ನೀಡಿದರು.

Actor Darshan case reaction by umapathy d boss Fans violent

ದರ್ಶನ್‌ ಸೇರಿ ಆರು ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಬೇಕು ಎಂದು, ಪವಿತ್ರಾ ಗೌಡ ಸೇರಿ 7 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಬೇಕು ಎಂಬುದಾಗಿ ಪೊಲೀಸರು ಎರಡು ಪ್ರತ್ಯೇಕ ರಿಮ್ಯಾಂಡ್‌ ಅಪ್ಲಿಕೇಷನ್‌ ಸಲ್ಲಿಸಿದ್ದರು. ಅದರಂತೆ ಎಸ್‌ಪಿಪಿ ಪ್ರಸನ್ನಕುಮಾರ್‌ ಅವರು ವಾದ ಮಂಡಿಸಿದರು. ಕೊನೆಗೆ ನ್ಯಾಯಾಲಯವು ಎಸ್‌ಪಿಪಿ ಅವರ ವಾದವನ್ನು ಪುರಸ್ಕರಿಸಿ ದರ್ಶನ್, ವಿನಯ್‌, ಪ್ರದೋಶ್, ನಾಗರಾಜ್, ಲಕ್ಷ್ಮಣ್‌, ಧನರಾಜ್‌ ಅವರ ಪೊಲೀಸ್‌ ಕಸ್ಟಡಿಯನ್ನು ಮುಂದುವರಿಸಿದರು. ಪವಿತ್ರಾ ಗೌಡ ಸೇರಿ 7 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ಇವರನ್ನು ಇಂದೇ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಮಾಡಲಾಗುತ್ತದೆ.

ಪೊಲೀಸ್ ಕಸ್ಟಡಿ ವೇಳೆ ಆರೋಪಿಗಳ ಸ್ವ ಇಚ್ಛಾ ಹೇಳಿಕೆ, ಜೃತ್ಯ ನಡೆಸಿದಾಗ ಧರಿಸಿದ್ದ ಬಟ್ಟೆಗಳು, ಮೊಬೈಲುಗಳು, ಸ್ಥಳ ಮಹಜರು ಸೇರಿ ಹಲವು ಮಹತ್ವದ ಸಾಕ್ಷ್ಯಗಳನ್ನು ಪೊಲೀಸರು ಕಲೆಹಾಕಿದ್ದಾರೆ. ಈಗಾಗಲೇ ಪ್ರಕರಣ ಸಂಬಂಧ ಒಂಬತ್ತು ದಿನಗಳ ಕಾಲ ದರ್ಶನ್‌ ಅಲಿಯಾಸ್‌ ಡಿ ಬಾಸ್‌ ಪೊಲೀಸ್ ಕಸ್ಟಡಿಯಲ್ಲಿ ಕಳೆದಿದ್ದಾನೆ.

ಜೂನ್‌ 8ರಂದು ರೇಣುಕಾಸ್ವಾಮಿ ಕೊಲೆ ನಡೆದಿತ್ತು. ಜೂನ್ 11ರಂದು ಹತ್ಯೆ ಸಂಬಂಧ ದರ್ಶನ್‌ನನ್ನು ಮೈಸೂರಿನಲ್ಲಿ ವಶಕ್ಕೆ ಪಡೆದು ಬಂಧಿಸಲಾಗಿತ್ತು. ಜೈಲಿಗೆ ಕಳಿಸಿದರೆ ಎರಡನೇ ಬಾರಿಗೆ ಪರಪ್ಪನ ಅಗ್ರಹಾರ ಜೈಲಿಗೆ ನಟ ದರ್ಶನ್ ಹೋದಂತಾಗುತ್ತದೆ. 2011ರಲ್ಲಿ ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿ ನಟ ದರ್ಶನ್‌ ಜೈಲು ಸೇರಿದ್ದ.

ಇದನ್ನೂ ಓದಿ: Actor Darshan: ಘಟಾನುಘಟಿಗಳ ಕಲಾವಿದರ ಜತೆ ʻದರ್ಶನ್‌ʼ ಕಿರಿಕ್‌ ಒಂದೆರಡಲ್ಲ; ದೂರಾದವರೆಷ್ಟು ಮಂದಿ?

Continue Reading

ಕರ್ನಾಟಕ

Road Construction: ವಿಶ್ವಬ್ಯಾಂಕ್‌ನಿಂದ ಸಾಲ ತಂದು ಗ್ರಾಮೀಣ ರಸ್ತೆಗಳ ಅಭಿವೃದ್ಧಿ; ಸಿದ್ದರಾಮಯ್ಯ ಸರ್ಕಾರ ನಿರ್ಧಾರ

Road Construction: ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆ ಅಡಿಯಲ್ಲಿ ರಾಜ್ಯದ 7,110 ರಸ್ತೆಗಳ ಅಭಿವೃದ್ಧಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸುಮಾರು 5,190 ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳನ್ನು ಅಭಿವೃದ್ಧಿಗೊಳಿಸಲಾಗುತ್ತದೆ ಎಂಬುದಾಗಿ ಸಚಿವ ಸಂಪುಟ ಸಭೆಯ ಬಳಿಕ ಸಚಿವ ಎಚ್‌.ಕೆ.ಪಾಟೀಲ್‌ ಅವರು ಮಾಹಿತಿ ನೀಡಿದರು.

VISTARANEWS.COM


on

Road Construction
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದು, ರಾಜ್ಯ ಸರ್ಕಾರಿ ನೌಕರರ ವೇತನ ಸೇರಿ ಹಲವು ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಅದರಲ್ಲೂ, ವಿಶ್ವಬ್ಯಾಂಕ್‌ನಿಂದ ಸಾಲ ಪಡೆದು ಕರ್ನಾಟಕದ 7,110 ಗ್ರಾಮೀಣ ರಸ್ತೆಗಳನ್ನು ನಿರ್ಮಿಸಲು (Road Construction) ತೀರ್ಮಾನಿಸಿರುವುದು ಪ್ರಮುಖ ಸಂಗತಿಯಾಗಿದೆ. ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ 52 ಸಾವಿರ ಕೋಟಿ ರೂ. ವ್ಯಯಿಸುತ್ತಿರುವ ಮಧ್ಯೆಯೇ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಿರುವುದು ಉತ್ತಮ ತೀರ್ಮಾನವಾಗಿದೆ.

ಸಚಿವ ಸಂಪುಟ ಸಭೆಯ ಬಳಿಕ ಸಚಿವ ಎಚ್‌.ಕೆ.ಪಾಟೀಲ್‌ ಅವರು ತೀರ್ಮಾನಗಳ ಕುರಿತು ಮಾಹಿತಿ ನೀಡಿದರು. “ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆ ಅಡಿಯಲ್ಲಿ ರಾಜ್ಯದ 7,110 ರಸ್ತೆಗಳ ಅಭಿವೃದ್ಧಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸುಮಾರು 5,190 ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳನ್ನು ಅಭಿವೃದ್ಧಿಗೊಳಿಸಲಾಗುತ್ತದೆ. ಇದಕ್ಕಾಗಿ ವಿಶ್ವಬ್ಯಾಂಕ್‌ನಿಂದ ಸಾಲ ಪಡೆಯಲಾಗುತ್ತದೆ. ಎರಡು ವರ್ಷಗಳಲ್ಲಿ ಗ್ರಾಮೀಣ ರಸ್ತೆಗಳನ್ನು ನಿರ್ಮಿಸಲಾಗುವುದು” ಎಂಬುದಾಗಿ ತಿಳಿಸಿದರು.

HK Patil

ಕಲಬುರಗಿಯಲ್ಲಿ ವಸತಿ ಯೋಜನೆ

“ಕಲಬುರಗಿಯ ಕುಸನೂರು ಗ್ರಾಮದಲ್ಲಿ ವಸತಿ ಬಡಾವಣೆ ನಿರ್ಮಿಸಲು ಕೂಡ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸುಮಾರು 132 ಕೋಟಿ ರೂ. ವೆಚ್ಚದಲ್ಲಿ ವಸತಿ ಬಡಾವಣೆ ನಿರ್ಮಿಸಲಾಗುತ್ತದೆ. ಇದರ ಜತೆಗೆ, ಆಸ್ತಿ ತೆರಿಗೆ, ನೀರಿನ ವಸೂಲಿಗೂ ರಾಜ್ಯ ಸರ್ಕಾರ ತೀರ್ಮಾನಿಸಿದೆ. ವಿವಿಧ ನಗರ ಪ್ರದೇಶಗಳಲ್ಲಿ ಆಸ್ತಿ, ನೀರಿನ ತೆರಿಗೆ ವಸೂಲಿ ಮಾಡಲಾಗುವುದು. ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳು ಬರಲಿವೆ. ಸ್ವಸಹಾಯ ಗುಂಪುಗಳಿಗೆ ಇದರ ಜವಾಬ್ದಾರಿ ನೀಡಲಾಗಿದೆ” ಎಂದು ಎಚ್‌.ಕೆ.ಪಾಟೀಲ್‌ ಮಾಹಿತಿ ನೀಡಿದರು.

ನಡೆದ ಸಚಿವ ಸಂಪುಟ ಸಭೆಯಲ್ಲಿ (cabinet meeting) ಸಚಿವರ ಸಲಹೆಯನ್ನೂ ಮೀರಿ ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡಲು ಸಿಎಂ ಒಲವು ತೋರಿದ್ದಾರೆ. ವೇತನ ಆಯೋಗದ ಶಿಫಾರಸುಗಳನ್ನು ಪೂರ್ಣಗೊಳಿಸುವ ಮಾತನ್ನಾಡಿರುವ ಸಿಎಂ ಸಿದ್ದರಾಮಯ್ಯ, 27%ರಷ್ಟು ವೇತನ ಹೆಚ್ಚಳ ಮಾಡಲು ಸೈ ಎಂದಿದ್ದಾರೆ. ನೌಕರರು ನಿರೀಕ್ಷೆ ಮಾಡಿದ ಹೆಚ್ಚಳ ಜಾರಿಯಾಗುವ ಸಾಧ್ಯತೆಯಿದ್ದು, ಅಂತಿಮ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಸಂಪುಟ ಸಭೆ ಸಿಎಂಗೆ ಬಿಟ್ಟಿದೆ.

ಇದನ್ನೂ ಓದಿ: CM Siddaramaiah: ಸರ್ಕಾರಿ ನೌಕರರಿಗೆ ಬಂಪರ್‌ ಸುದ್ದಿ: 27% ವೇತನ ಹೆಚ್ಚಳಕ್ಕೆ ಮುಂದಾದ ಸಿಎಂ

Continue Reading
Advertisement
Citroen C3 Aircross
ಪ್ರಮುಖ ಸುದ್ದಿ3 mins ago

Citroen C3 Aircross : ಧೋನಿ ಹೆಸರಿನಲ್ಲಿ ಬಿಡುಗಡೆಯಾಗಿದೆ ಈ ಕಾರು, ಕೇವಲ 100 ಕಾರಷ್ಟೇ ಉತ್ಪಾದನೆ

Mysuru News
ಮೈಸೂರು5 mins ago

Mysuru News : ಪತ್ನಿ ಶೀಲ ಶಂಕಿಸಿ ಬೆಂಕಿ ಹಚ್ಚಿ ಸುಟ್ಟು ಹಾಕಿದವನಿಗೆ ಜೀವಾವಧಿ ಶಿಕ್ಷೆ

Yuva spoorthi samvaada programme on June 22 in Shivamogga
ಕರ್ನಾಟಕ10 mins ago

Shivamogga News: ಶಿವಮೊಗ್ಗದಲ್ಲಿ ಜೂ.22ರಂದು ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ

IIT Bombay
Latest23 mins ago

IIT Bombay: ಹಿಂದೂ ದೇವರ ಅವಹೇಳನಕಾರಿ ನಾಟಕ; ಐಐಟಿ ವಿದ್ಯಾರ್ಥಿಗಳಿಗೆ ದಂಡ

Manish Pandey
ಕ್ರೀಡೆ30 mins ago

Manish Pandey: ಕ್ರಿಕೆಟಿಗ ಮನೀಷ್​ ಪಾಂಡೆ ದಾಂಪತ್ಯದಲ್ಲಿ ಬಿರುಕು!

Genitals Removed Case
Latest34 mins ago

Genitals Removed Case: ಮಲಗುವಾಗ ಗಂಡಾಗಿದ್ದ, ಎದ್ದಾಗ ಹೆಣ್ಣಾಗಿದ್ದ! ಬಲವಂತದಿಂದ ಲಿಂಗ ಪರಿವರ್ತನೆ

UGC-NET
ದೇಶ35 mins ago

UGC-NET: ಯುದ್ಧವನ್ನೇ ನಿಲ್ಲಿಸುವ ಸಾಮರ್ಥ್ಯವಿರುವ ಮೋದಿ ಪ್ರಶ್ನೆ ಪತ್ರಿಕೆ ಸೋರಿಕೆ ಯಾಕೆ ತಡೆಯುತ್ತಿಲ್ಲ? ರಾಹುಲ್‌ ಗಾಂಧಿ ವ್ಯಂಗ್ಯ

Niveditha Gowda new reels after divorce
ಸಿನಿಮಾ43 mins ago

Niveditha Gowda: ಡಿವೋರ್ಸ್‌ ಬಳಿಕ ಹೊಸ ರೀಲ್ಸ್‌ ಹಂಚಿಕೊಂಡ ನಿವೇದಿತಾ: ಲೈಕ್ಸ್‌ ಸುರಿಮಳೆ!

Darshan Arrested
ಕರ್ನಾಟಕ44 mins ago

Darshan Arrested: ರೇಣುಕಾಸ್ವಾಮಿ ಕೊಲೆ ಕೇಸ್;‌ ಪವಿತ್ರಾ ಗೌಡಗೆ ಜೈಲು, ದರ್ಶನ್‌ ಪೊಲೀಸ್‌ ಕಸ್ಟಡಿಗೆ

Road Construction
ಕರ್ನಾಟಕ1 hour ago

Road Construction: ವಿಶ್ವಬ್ಯಾಂಕ್‌ನಿಂದ ಸಾಲ ತಂದು ಗ್ರಾಮೀಣ ರಸ್ತೆಗಳ ಅಭಿವೃದ್ಧಿ; ಸಿದ್ದರಾಮಯ್ಯ ಸರ್ಕಾರ ನಿರ್ಧಾರ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು3 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು3 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ4 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ4 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ4 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ5 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ6 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ6 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌