ಬೆಳಗಾವಿ ಅಧಿವೇಶನ: ವಿಧಾನಸಭೆಯಲ್ಲಿ 4 ವಿಧೇಯಕಗಳ ಮಂಡನೆ; ಆರಗ ಜ್ಞಾನೇಂದ್ರ ಮಂಡಿಸಿದ ವಿಧೇಯಕಕ್ಕೆ ತಡೆ - Vistara News

ಕರ್ನಾಟಕ

ಬೆಳಗಾವಿ ಅಧಿವೇಶನ: ವಿಧಾನಸಭೆಯಲ್ಲಿ 4 ವಿಧೇಯಕಗಳ ಮಂಡನೆ; ಆರಗ ಜ್ಞಾನೇಂದ್ರ ಮಂಡಿಸಿದ ವಿಧೇಯಕಕ್ಕೆ ತಡೆ

ಎಸ್‌ಸಿಎಸ್‌ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವ ನಿರ್ಧಾರದಿಂದ ರಾಜಕೀಯವಾಗಿಯೂ ಸಾಕಷ್ಟು ಲಾಭವಾಗುತ್ತದೆ ಎಂದು ಸರ್ಕಾರ ನಂಬಿದ್ದು, ಪ್ರತಿ ಪಕ್ಷ ಕಾಂಗ್ರೆಸ್‌ ಸಹ ಇದಕ್ಕೆ ಪ್ರತ್ಯುತ್ತರ ಕೊಡಲು ಸಿದ್ಧವಾಗಿದೆ.

VISTARANEWS.COM


on

cm basavaraj bommai chairing cabinet meeting during belagavi session
ಮಂಗಳವಾರ ಸದನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ವಿವಿಧ ಭಂಗಿಗಳು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಧಾನಸಭೆ: ನಿರೀಕ್ಷೆಯಂತೆ ವಿಧಾನಸಭೆಯಲ್ಲಿ ಮಂಗಳವಾರ ಐದು ಮಸೂದೆಗಳನ್ನು ಮಂಡಿಸಲಾಯಿತು. ಇದರಲ್ಲಿ ಒಂದು ವಿಧೇಯಕಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ.

ಈಗಾಗಲೆ ಸುಗ್ರೀವಾಜ್ಞೆ ಮೂಲಕ ಜಾರಿಯಲ್ಲಿರುವ, 2022ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು(ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ವಿಧೇಯಕ, 2022ನೇ ಸಾಲಿನ ಕರ್ನಾಟಕ ಭೂಕಂದಾಯ(ಎರಡನೇ ತಿದ್ದುಪಡಿ) ವಿಧೇಯಕ, 2022ನೇ ಸಾಲಿನ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ವಿಧೇಯಕ, 2022ನೇ ಸಾಲಿನ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ(ತಿದ್ದುಪಡಿ) ವಿಧೇಯಕಗಳನ್ನು ಮಂಡಿಸಲಾಯಿತು.

ವಿಧೇಯಕರಗಳನ್ನು ಕ್ರಮವಾಗಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್.ಅಶೋಕ, ಮುರುಗೇಶ ನಿರಾಣಿ, ವಿ. ಸುನಿಲ್‌ಕುಮಾರ್ ಮಂಡಿಸಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಡಿಸಿದ 2021ನೇ ಸಾಲಿನ ಬಂಧಿಗಳ ಗುರುತಿಸುವಿಕೆ(ಕರ್ನಾಟಕ ತಿದ್ದುಪಡಿ) ವಿಧೇಯಕ ಹಿಂಪಡೆಯುವುದನ್ನು ಮಂಡಿಸಿರುವುದಕ್ಕೆ ವಿಧಾನಸಭೆ ತಾತ್ಕಾಲಿಕ ತಡೆ ನೀಡಿತು. ಈ ವಿಧೇಯಕ ಹಿಂಪಡೆಯುವುದಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಮತ್ತು ಸ್ಪಷ್ಟತೆ ಬರಬೇಕಾದ ಕಾರಣ ತಡೆಹಿಡಿಯಲಾಗುತ್ತಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಇದನ್ನೂ ಓದಿ | ಬೆಳಗಾವಿ ಅಧಿವೇಶನ | ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸುರ್ಜೇವಾಲ ನೀಡಿದ 12 ಸೂತ್ರಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಎಚ್‌.ಡಿ. ರೇವಣ್ಣ ಜಾಮೀನು ಅರ್ಜಿಯ ರೋಚಕ ವಾದ – ಪ್ರತಿವಾದ; ಇಲ್ಲಿದೆ ಇಂಚಿಂಚು ಡಿಟೇಲ್ಸ್‌

Prajwal Revanna Case: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ಪ್ರಕರಣ ಸಂಬಂಧ ವಾದ ಮಂಡಿಸಿದ ಎಸ್‌ಐಟಿ ಪರ ಎಸ್‌ಪಿಪಿ ಜಯ್ನಾ ಕೊಠಾರಿ, 2 ವಿಚಾರಗಳಿಗೆ ಸಂಬಂಧಿಸಿ ಆರೋಪಿಗೆ ಜಾಮೀನು ಕೊಡಬೇಡಿ. ಒಂದು ಪ್ರಕರಣದ ಗಂಭೀರತೆಯನ್ನು ನೋಡಬೇಕಿದ್ದು, ಇದರಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಿದೆ. ಕಿಡ್ನ್ಯಾಪ್ ಕೇಸಲ್ಲೂ ಈಗಾಗಲೇ 2ನೇ ಆರೋಪಿ ಹೇಳಿಕೆಯನ್ನು ಪಡೆಯಲಾಗಿದೆ. ಈ ನಡುವೆ ಸಂತ್ರಸ್ತೆಯ ವಿಡಿಯೊವನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಸಂತ್ರಸ್ತೆ ಸ್ಪಷ್ಟನೆ ನೀಡಿದ್ದಾರೆ ಎಂಬುದಾಗಿ ವಿಡಿಯೋ ವೈರಲ್ ಬಗ್ಗೆ ಕೋರ್ಟ್‌ಗೆ ಮಾಹಿತಿಯನ್ನು ನೀಡಿದರು.

VISTARANEWS.COM


on

Prajwal Revanna Case HD Revanna bail plea arguments and counter arguments
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿ ಜೈಲಿನಲ್ಲಿರುವ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ (HD Revanna) ಅವರ ಜಾಮೀನು ಅರ್ಜಿ ವಿಚಾರಣೆ ಸೋಮವಾರ ನಡೆದಿದೆ. ಈ ವೇಳೆ ರೇವಣ್ಣ ಪರ ಹಾಗೂ ಸರ್ಕಾರಿ ವಕೀಲರ ನಡುವೆ ವಾದ – ಪ್ರತಿವಾದಗಳು ನಡೆದಿವೆ. ಇಂಥ ಕಾರಣಗಳಿಗೆ ಜಾಮೀನು ಕೊಡಲೇ ಬೇಕು ಎಂದು ರೇವಣ್ಣ ಪರ ವಕೀಲರಾದ ನಾಗೇಶ್‌ ವಾದ ಮಂಡಿಸಿದರೆ, ಜಾಮೀನನ್ನು ಏಕೆ ಕೊಡಬಾರದು? ಕೊಟ್ಟರೆ ಮುಂದೇನಾಗುತ್ತದೆ ಎಂದು ಎಸ್‌ಐಟಿ ಪರ ವಕೀಲರಾದ (ಎಸ್‌ಪಿಪಿ) ಜಯ್ನಾ ಕೊಠಾರಿ ಹಾಗೂ ಅಶೋಕ್‌ ನಾಯ್ಕ್‌ ವಾದಿಸಿದ್ದಾರೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ಪ್ರಕರಣ ಸಂಬಂಧ ವಾದ ಮಂಡಿಸಿದ ಎಸ್‌ಐಟಿ ಪರ ಎಸ್‌ಪಿಪಿ ಜಯ್ನಾ ಕೊಠಾರಿ, 2 ವಿಚಾರಗಳಿಗೆ ಸಂಬಂಧಿಸಿ ಆರೋಪಿಗೆ ಜಾಮೀನು ಕೊಡಬೇಡಿ. ಒಂದು ಪ್ರಕರಣದ ಗಂಭೀರತೆಯನ್ನು ನೋಡಬೇಕಿದ್ದು, ಇದರಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಿದೆ. ಕಿಡ್ನ್ಯಾಪ್ ಕೇಸಲ್ಲೂ ಈಗಾಗಲೇ 2ನೇ ಆರೋಪಿ ಹೇಳಿಕೆಯನ್ನು ಪಡೆಯಲಾಗಿದೆ. ಈ ನಡುವೆ ಸಂತ್ರಸ್ತೆಯ ವಿಡಿಯೊವನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಸಂತ್ರಸ್ತೆ ಸ್ಪಷ್ಟನೆ ನೀಡಿದ್ದಾರೆ ಎಂಬುದಾಗಿ ವಿಡಿಯೋ ವೈರಲ್ ಬಗ್ಗೆ ಕೋರ್ಟ್‌ಗೆ ಮಾಹಿತಿಯನ್ನು ನೀಡಿದರು.

ಮೊದಲು ತನಿಖಾ ವರದಿ ಕೊಡಿ ಎಂದ ನ್ಯಾಯಾಧೀಶರು

ಈ ವೇಳೆ ಮಧ್ಯಪ್ರವೇಶ ಮಾಡಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್, ತನಿಖಾಧಿಕಾರಿಯ ಇನ್‌ವೆಸ್ಟಿಗೇಷನ್‌ ರಿಪೋರ್ಟ್ ಅನ್ನು ಮೊದಲು ಸಲ್ಲಿಸಿ. ಕಿಡ್ನ್ಯಾಪ್ ಕೇಸ್‌ ಸಂಬಂಧ ಏನೇನು ವಿಚಾರಗಳು ನಡೆದಿವೆ ಎಂಬುದನ್ನು ತಿಳಿಯಬೇಕು ಎಂದು ಎಸ್‌ಪಿಪಿಗೆ ಸೂಚಿಸಿದರು. ಆಗ ರೇವಣ್ಣ ಪರ ವಕೀಲ ಸಿ.ವಿ. ನಾಗೇಶ್‌, ತನಿಖಾ ವರದಿಯನ್ನು ನಮಗೂ ಕೊಟ್ಟಿಲ್ಲ ಎಂದು ಕೋರ್ಟ್‌ ಗಮನಕ್ಕೆ ತಂದರು. ಈ ವೇಳೆ ಮುಚ್ಚಿದ ಲಕೋಟೆಯಲ್ಲಿ ಇನ್‌ವೆಸ್ಟಿಗೇಷನ್ ರಿಪೋರ್ಟ್‌ ಅನ್ನು ಸಲ್ಲಿಸಲಾಯಿತು. ಇದಕ್ಕೆ ಎಚ್.ಡಿ. ರೇವಣ್ಣ ಪರ ಹಿರಿಯ ವಕೀಲ ಸಿ.ವಿ. ನಾಗೇಶ್‌ರಿಂದ ಆಕ್ಷೇಪ ವ್ಯಕ್ತವಾಯಿತು. ಬಳಿಕ ತಮಗೂ ಒಂದು ಕಾಪಿ ನೀಡಲು ಕೇಳಿದ್ದು, ಅವರಿಗೂ ಒಂದು ಪ್ರತಿಯನ್ನು ನೀಡಲಾಯಿತು.

ಇದನ್ನೂ ಓದಿ: Karnataka Politics: ಆಪರೇಶನ್ ಕಮಲ ಆಗೋಕೆ ಸಾಧ್ಯಾನೇ ಇಲ್ಲ; ಇದು ಬಿಜೆಪಿಯ ಹಗಲುಗನಸು: ಸಿಎಂ ಸಿದ್ದರಾಮಯ್ಯ

ಸುಪ್ರೀಂ ಕೋರ್ಟ್‌ ತೀರ್ಪು ಉಲ್ಲೇಖಿಸಿದ ಎಸ್‌ಪಿಪಿ

ಈ ವೇಳೆ ವಾದ ಮುಂದುವರಿಸಿದ ಜಯ್ನಾ ಕೊಠಾರಿ ಅವರು ಸುಪ್ರೀಂಕೋರ್ಟ್‌ ಕೇಸ್‌ ಸ್ಟಡಿಗಳನ್ನು ಉಲ್ಲೇಖಿಸಿದರು. ಕೆಲವು ತೀರ್ಪುಗಳನ್ನು ಓದಿ ಹೇಳಿದರು. ಕಿಡ್ನ್ಯಾಪ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ಹಿಂದಿನ ತೀರ್ಪುಗಳನ್ನು ಕೋರ್ಟ್‌ ಗಮನಕ್ಕೆ ತಂದರು. ಕಿಡ್ನ್ಯಾಪ್‌ ಪ್ರಕರಣದಲ್ಲಿ ಸೆಕ್ಷನ್‌ 364ಎ ಅಂದ್ರೆ ಜೀವಾವಧಿ ಶಿಕ್ಷೆ ಇದೆ. ಐಪಿಸಿ ಸೆಕ್ಷನ್‌ 364ಎ ಅಡಿಯಲ್ಲಿ ಜೀವಾವಧಿ ಶಿಕ್ಷೆಯನ್ನು ವಿಧಿಸಬಹುದಾಗಿದೆ. ಹೀಗಾಗಿ ಎಚ್.ಡಿ. ರೇವಣ್ಣ ಅವರಿಗೆ ಜಾಮೀನು ಕೊಡಬಾರದು ಎಂದು ವಾದ ಮಂಡಿಸಿದರು. ಶಿಕ್ಷೆಯ ಪ್ರಮಾಣದ ಗಂಭೀರತೆಯನ್ನು ಪರಿಗಣಿಸಿ ಬೇಲ್ ಅನ್ನು ಕೊಡಲೇಬಾರದು ಎಂದು ಮನವಿ ಮಾಡಿದರು.

ದೆಹಲಿ ಕೋರ್ಟ್‌ನ ಗುರುಚರಣ್ ಸಿಂಗ್‌ ಪ್ರಕರಣದ ಬಗ್ಗೆ ಉಲ್ಲೇಖ

ಗುರುಚರಣ್ ಸಿಂಗ್‌ ಪ್ರಕರಣದಲ್ಲಿ ಕೋರ್ಟ್‌ ಬೇಲ್ ತಿರಸ್ಕರಿಸಿತ್ತು. ಈಗ ರೇವಣ್ಣ ಪರ ದಾಖಲಾಗಿರುವ ಕೆ.ಆರ್.ನಗರ ಅಪಹರಣ ಪ್ರಕರಣವು ಒಂದು ಸೀರಿಯಸ್ ಕ್ರಿಮಿನಲ್ ಕೇಸ್ ಆಗಿದೆ ಎಂದು ವಾದ ಮಂಡಿಸಿ ಕೆಲವು ಹೈಕೋರ್ಟ್‌ ಹಾಗೂ ಸುಪ್ರೀಂಕೋರ್ಟ್‌ ತೀರ್ಪುಗಳನ್ನು ಉಲ್ಲೇಖಿಸಿದರು.

ಆರೋಪಿ ಎಡಿ. ರೇವಣ್ಣ ಅವರ ಮಗ ಪ್ರಜ್ವಲ್‌ ರೇವಣ್ಣ ಕೂಡ ಬೇರೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾರೆ. ಈ ಪ್ರಕರಣದಲ್ಲಿ ಸಂತ್ರಸ್ತೆ ಮಾಹಿತಿಯನ್ನು ಗೌಪ್ಯವಾಗಿಡಬೇಕು. ಕೆಲವು ಪ್ರಕರಣದಲ್ಲಿ ಮಾತ್ರ ಅಲ್ಲ, ಬೇರೆ ಪ್ರಕರಣಗಳಲ್ಲಿಯೂ ಈ ರೀತಿ ಸಂದರ್ಭದಲ್ಲಿ ಜಾಮೀನು ಕೊಟ್ಟರೆ ಸಾಕ್ಷ್ಯ ನಾಶವಾಗುವ ಸಾಧ್ಯತೆ ಇದೆ. ಗಂಭೀರತೆ ಹೆಚ್ಚಿರುವ ಪ್ರಕರಣಗಳಲ್ಲಿ ಜಾಮೀನು ಕೊಡಬಾರದು. ಜಾಮೀನು ಕೊಡಬಾರದೆಂದು ಹಲವು ಕೋರ್ಟ್‌ಗಳ ತೀರ್ಪಿದೆ. ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪುಗಳನ್ನು ಕೊಠಾರಿ ಉಲ್ಲೇಖಿಸಿದರು.

ಜಾಮೀನು ನೀಡಿದರೆ ಸಾಕ್ಷ್ಯಗಳನ್ನು ನಾಶ ಮಾಡುವ ಸಾಧ್ಯತೆ ಇರುತ್ತದೆ. ಸಂತ್ರಸ್ತೆಯ ಪುತ್ರ ಮತ್ತು ಆಕೆಯ ಪುತ್ರನಿಗೆ ಜೀವ ಬೆದರಿಕೆಯೂ ಇದೆ. ಕಿಡ್ನ್ಯಾಪ್ ಪ್ರಕರಣದಲ್ಲಿ ಸಂತ್ರಸ್ತೆಯ ಮಾಹಿತಿ ಗೌಪ್ಯವಾಗಿ ಇಡಬೇಕು. ಈ ಸಂದರ್ಭದಲ್ಲಿ ಸಂತ್ರಸ್ತೆ ಮಾಹಿತಿ ಗೌಪ್ಯವಾಗಿ ಇಡಲಿಲ್ಲ ಅಂದರೆ ಬೇರೆ ಯಾವ ಸಂತ್ರಸ್ತೆಯರು ಮುಂದೆ ಬಂದು ದೂರು ನೀಡುತ್ತಾರೆ? ರೇವಣ್ಣಗೆ ಜಾಮೀನು ನೀಡಲೇಬಾರದು. ಈ ಪರಿಸ್ಥಿತಿಯಲ್ಲಿ ರೇವಣ್ಣಗೆ ಜಾಮೀನು ನೀಡಿದರೆ ನ್ಯಾಯಾಂಗ ಹಾದಿಗೇ ಅಡಚಣೆಯಾಗುತ್ತದೆ ಎಂದು ಜಯ್ನಾ ಕೊಠಾರಿ ವಾದ ಮಂಡಿಸಿದರು.

ಈ ಕಾರಣಕ್ಕಾಗಿ ಜಾಮೀನು ನೀಡಬಾರದು

ರೇವಣ್ಣ ಪ್ರಭಾವಿಯಾಗಿದ್ದು, ಅವರ ಪುತ್ರ ಸಂಸದ ಪ್ರಜ್ವಲ್ ತಲೆಮರೆಸಿಕೊಂಡಿದ್ದಾರೆ. ಇದು ಕೇವಲ ಅಪಹರಣ ಪ್ರಕರಣ ಅಲ್ಲ, ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಕಿಡ್ನ್ಯಾಪ್ ಆಗಿದೆ. ಪ್ರಕರಣದಲ್ಲಿ ಯಾವುದೇ ಮಹಿಳೆಯರು ದೂರು ನೀಡದಂತೆ ತಡೆಯುವ ಯತ್ನ ಇದಾಗಿದೆ. ಎಚ್.ಡಿ. ರೇವಣ್ಣಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು. ಕಿಡ್ನ್ಯಾಪ್ ಪ್ರಕರಣದಲ್ಲಿ ಕೆಲವರ ಹೇಳಿಕೆ ಸಿಆರ್‌ಪಿಸಿ 164 ಅಡಿಯಲ್ಲಿ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವರ ಹೇಳಿಕೆ ದಾಖಲಿಸಬೇಕು ಎಂದು ಜಯ್ನಾ ಕೊಠಾರಿ ವಾದ ಮಂಡನೆ ಮಾಡಿ ಮುಗಿಸಿದರು.

ಜಯ್ನಾ ಕೊಠಾರಿ ಬಳಿಕ ಹೆಚ್ಚುವರಿ ಎಸ್‌ಪಿಪಿ ಅಶೋಕ್ ನಾಯ್ಕ್ ವಾದ ಮಂಡನೆಯನ್ನು ಪ್ರಾರಂಭಿಸಿದರು. ಒಬ್ಬರು ವಾದ ಮಂಡಿಸಿದ್ರೆ ಸಾಕು ಎಂದು ವಕೀಲ ಸಿ.ವಿ.ನಾಗೇಶ್ ಆಕ್ಷೇಪಣೆ ವ್ಯಕ್ತಪಡಿಸಿದರು. ಒಂದೇ ಕೇಸ್‌ಗೆ ಇಬ್ಬರು ಎಸ್‌ಪಿಪಿಗಳ ವಾದದ ಬಗ್ಗೆ ಜಡ್ಜ್ ನಿರ್ಧಾರ ಮಾಡಬೇಕು ಎಂದು ನ್ಯಾಯಾಧೀಶರನ್ನು ಇದೇ ವೇಳೆ ಸಿ.ವಿ. ನಾಗೇಶ್ ಕೇಳಿದರು. ಅದಕ್ಕೆ ಅಶೋಕ್‌ ನಾಯ್ಕ್‌, ಎಷ್ಟು ಜನ ಬೇಕಾದರೂ ವಾದ ಮಾಡಿ ಅಂತಾ ನೀವೇ ಹೇಳಿದ್ದಿರಲ್ಲವೇ ಎಂದು ಎಸ್‌ಪಿಪಿ ಅಶೋಕ್‌ ನಾಯ್ಕ್‌ ಪ್ರಶ್ನೆ ಮಾಡಿದರು.

ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಸಂತ್ರಸ್ತೆಯರು ಇದ್ದಾರೆ. ಆದ್ದರಿಂದಲೇ ಎಸ್‌ಐಟಿ ಪರವಾಗಿ ಇಬ್ಬರು ಎಸ್‌ಪಿಪಿಗಳನ್ನು ನೇಮಿಸಲಾಗಿದೆ. ನಾನು ವಾದ ಮಾಡಿದರೆ ನಿಮಗೇನು ತೊಂದರೆ? ಎಂದು ಕೇಳಿ ಅಶೋಕ್ ನಾಯ್ಕ್ ವಾದ ಮುಂದುವರಿಸಿದರು.

ಇದನ್ನೂ ಓದಿ: Prajwal Revanna Case: ಪೆನ್‌ ಡ್ರೈವ್‌ ಹಂಚಿಕೆ ಆರೋಪ ಮಾಡಿದ್ದ ನವೀನ್‌ ಗೌಡ ಮೇಲೆ ಶಾಸಕ ಮಂಜು ದೂರು

ರೇವಣ್ಣಗೆ ಜಾಮೀನು ಕೊಡಬಾರದು. ಕಿಡ್ನ್ಯಾಪ್ ಪ್ರಕರಣದ ಸಂತ್ರಸ್ತೆಯ ಮನೆಯಲ್ಲಿ ಚಿಕ್ಕ ಚಿಕ್ಕ ಮಕ್ಕಳಿದ್ದಾರೆ. ಆ ವೇಳೆ ಬರಲು ಆಗಲ್ಲ ಅಂದರೂ ಬಲವಂತವಾಗಿ ಕರೆದೊಯ್ದಿದ್ದಾರೆ. ಸಂತ್ರಸ್ತೆ ಅಪಹರಿಸಿ ರೇವಣ್ಣ ಆಪ್ತರ ತೋಟದ ಮನೆಯಲ್ಲಿ ಕೂಡಿ ಹಾಕಿದ್ದಾರೆ. ಚುನಾವಣೆಗೆ ನಾಲ್ಕೈದು ದಿನ ಮುಂಚೆಯೇ ಸಂತ್ರಸ್ತೆಯನ್ನು ಕರೆದೊಯ್ದಿದ್ದಾರೆ. ಆನಂತರ ಕರೆದುಕೊಂಡು ಬಂದಿದ್ದಾರೆ ಎಂದು ಅಶೋಕ್ ನಾಯ್ಕ್ ವಾದಿಸಿದರು.

ರೇವಣ್ಣ ಪುತ್ರ ಪ್ರಜ್ವಲ್ ಯಾವ ಕಾರಣಕ್ಕಾಗಿ ದೇಶ ಬಿಟ್ಟು ಹೋಗಿದ್ದಾನೆ? ಇಲ್ಲಿ ಪ್ರಜ್ವಲ್ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ ಹೊಂದಿದ್ದಾರೆ. ಅವರ ತಂದೆ – ತಾಯಿಗೆ ಯಾವ ಕಾರಣ ಹೇಳಿ ಹೋಗಿದ್ದಾರೆ? ದೇಶದ ಬಗ್ಗೆ ಚರ್ಚೆ ಮಾಡುವುದಕ್ಕೆ ಏನಾದರೂ ಹೋಗಿದ್ದಾರಾ? ಎಂದು ಅಶೋಕ್‌ ನಾಯ್ಕ್‌ ಪ್ರಶ್ನೆ ಮಾಡಿದರು.

ತಾಯಿಯ ಮೇಲೆ ನಡೆದ ಅತ್ಯಾಚಾರ ದೃಶ್ಯವನ್ನು ದೂರುದಾರ ನೋಡಿದ್ದಾರೆ. ತನ್ನ ಸ್ನೇಹಿತರ ಮೊಬೈಲ್‌ನಲ್ಲಿ ತಾಯಿ ಮೇಲಿನ ದೌರ್ಜನ್ಯದ ವಿಡಿಯೊವನ್ನು ನೋಡಿದ್ದಾರೆ. ಅದಕ್ಕಿಂತ ದುರ್ದೈವದ ಸಂಗತಿ ಇನ್ನೇನಿದೆ ಹೇಳಿ? ನಾಲ್ಕು ದಿನಗಳ ಕಾಲ ಅನುಭವಿಸಿದ್ದ ಯಾತನೆಯನ್ನು ಸಂತ್ರಸ್ತೆ ಹೇಳಿಕೊಂಡಿದ್ದಾರೆ ಎಂದು ಅಶೋಕ್‌ ನಾಯ್ಕ್‌ ಹೇಳಿದರು.

ಭಾನುವಾರ ವೈರಲ್ ಆಗಿರುವ ಸಂತ್ರಸ್ತೆಯ ಸ್ಪಷ್ಟನೆಯುಳ್ಳ ವಿಡಿಯೊ ಬಗ್ಗೆ ಪ್ರಸ್ತಾಪಿಸಿದ ಎಸ್‌ಪಿಪಿ ಅಶೋಕ್‌ ನಾಯ್ಕ್‌, ವೈರಲ್ ಆಗಿರುವ ವಿಡಿಯೊದಲ್ಲಿ ರೇವಣ್ಣ ಕಿಡ್ನ್ಯಾಪ್ ಮಾಡಿಲ್ಲ ಅಂದಿದ್ದಾರೆ. ಈ ಮೂಲಕ ನ್ಯಾಯಾಲಯದ ದಾರಿಯನ್ನೇ ತಪ್ಪಿಸುವ ಕೆಲಸ ಮಾಡಲಾಗುತ್ತಿದೆ. ಆ ವಿಡಿಯೊದಲ್ಲಿ ಸಂತ್ರಸ್ತೆಯೇ ಕೆಲವು ವಿಚಾರವನ್ನು ಹೇಳಿಕೊಂಡಿದ್ದಾರೆ. ಯಾವ ರೀತಿ ಕಿಡ್ನ್ಯಾಪ್ ಮಾಡಲಾಗಿದೆ ಅಂತಾ ಎಸ್‌ಐಟಿ ಅವರಿಂದ ಸಮಗ್ರ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ನ್ಯಾಯಾಲಯಕ್ಕೆ ಎಸ್‌ಐಟಿ ತನಿಖೆ ಬಗ್ಗೆ ಮಾಹಿತಿ ನೀಡಿದ ಅಶೋಕ್ ನಾಯ್ಕ್, ಎಷ್ಟು ಜನ ಕಿಡ್ನ್ಯಾಪ್ ಮಾಡಿದರು? ಎಷ್ಟು ವಾಹನಗಳಲ್ಲಿ ಅಪಹರಣ ಮಾಡಿದರು? ಮಾರ್ಗ ಮಧ್ಯೆ ವಾಹನಗಳ ಬದಲಾವಣೆ ಮಾಡಲಾಗಿದೆಯಾ ಅಂತಲೂ ತನಿಖೆ ನಡೆದಿದೆ. ಕಿಡ್ನ್ಯಾಪ್ ಹೇಗೆ ಮಾಡಲಾಗಿದೆ ಎಂಬ ಬಗ್ಗೆ ಸಮಗ್ರ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ ಎಂದು ವಿವರಿಸಿದರು.

ಕಸ್ಟಡಿ ಹಾಗೂ ಜಾಮೀನು ಸಂಬಂಧ ರೇವಣ್ಣ ಪರ ವಕೀಲರು ವಾದ ಮಾಡಿದ್ದಾರೆ. ಆದರೆ ಇಲ್ಲಿ ಜಾಮೀನು ಕೊಟ್ಟರೆ ಏನು ಆಗುತ್ತೆ ಅಂತಾ, ಮುಂದೆ ಏನು ಆಗುತ್ತದೆ..? ಎರಡು ರೀತಿಯಲ್ಲಿ ನಾನು ವಾದ ಮಂಡಿಸುತ್ತೇನೆ. ಜಾಮೀನು ಕೊಟ್ಟರೆ ಏನಾಗುತ್ತದೆ? ಜಾಮೀನು ಕೊಡದಿದ್ದರೆ ಏನಾಗುತ್ತೆ ಎಂಬುದನ್ನು ಹೇಳುತ್ತೇನೆ. ನಿಮ್ಮ ವಾದದ ಅಂಶಗಳ ಕಾಪಿಯನ್ನು ಕೊಟ್ಟು ವಾದವನ್ನು ಮುಂದುವರಿಸಿ ಎಂದು ಈ ವೇಳೆ ನ್ಯಾಯಾಧೀಶರು ಹೇಳಿದರು.

ಎಚ್.ಡಿ.ರೇವಣ್ಣ ಸಲ್ಲಿಸಿರುವ ಜಾಮೀನಿಗೆ ಮಾನ್ಯತೆಯೇ ಕೊಡಬಾರದು ಎಂದು ಎಸ್‌ಐಟಿ ಪರ ಹೆಚ್ಚುವರಿ ಎಸ್‌ಪಿಪಿ ಅಶೋಕ್ ನಾಯ್ಕ್ ವಾದ ಮಂಡಿಸಿದಾಗ ಮಧ್ಯಪ್ರವೇಶ ಮಾಡಿದ ನ್ಯಾಯಾಧೀಶರು, ಬೇಲ್ ಅರ್ಜಿ ಮಾನ್ಯತೆ ವಿಚಾರ ಏಕೆ? ಎಂದು ಪ್ರಶ್ನೆ ಮಾಡಿದರು. ಅದಕ್ಕೆ ಉತ್ತರಿಸಿದ ಅಶೋಕ್‌ ನಾಯ್ಕ್, ಬೇಲ್ ಅರ್ಜಿ ಮಾನ್ಯತೆ ಕುರಿತು ಸುಪ್ರೀಂಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿದರು. ಆಗ ಅಸಮಾಧಾನಗೊಂಡ ನ್ಯಾಯಾಧೀಶರು, ಈಗ ನಡೆಯುತ್ತಿರುವುದು ಬೇಲ್ ಅರ್ಜಿ ವಿಚಾರಣೆಯಾಗಿದೆ. ಅದರ ಸಂಬಂಧ ವಾದ ಮಾಡಿ ಎಂದು ಅಶೋಕ್‌ ನಾಯ್ಕ್‌ಗೆ ನ್ಯಾಯಾಧೀಶರು ಸೂಚನೆ ನೀಡಿದರು. ಅದು ಬಿಟ್ಟು ಪೊಲೀಸ್ ಕಸ್ಟಡಿ, ಜ್ಯುಡಿಷಿಯಲ್ ಕಸ್ಟಡಿ ಬಗ್ಗೆ ವಾದ ಏಕೆ? ಎಂದು ಕೇಳಿದರು.

ಆದರೆ, ಆಗ ವಾದ ಮಂಡಿಸಿದ ಅಶೋಕ್‌ ನಾಯ್ಕ್‌, ಹೀಗೆಯೇ ಆದರೆ ಈ ಕಿಡ್ನ್ಯಾಪ್ ಪ್ರಕರಣವು ಸುಪ್ರೀಂ ಕೋರ್ಟ್‌ಗೆ ಹೋಗಬೇಕು ಎಂದು ಹೇಳಿದರು. ಇದಕ್ಕೆ ಸಿ.ವಿ.ನಾಗೇಶ್ ಆಕ್ಷೇಪ ವ್ಯಕ್ತಪಡಿಸಿ, ನ್ಯಾಯಾಲಯಕ್ಕೇ ನೀವು ಬೆದರಿಕೆ ಹಾಕುತ್ತಿದ್ದೀರಾ? ಎಂದು ಪ್ರಶ್ನೆ ಮಾಡಿದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ಅಶೋಕ್‌ ನಾಯ್ಕ್‌, ಈ ವಿಚಾರಗಳನ್ನು ಮಾತ್ರ ನಾನು ಹೇಳುತ್ತಿದ್ದೇನೆಯೇ ಹೊರತು, ಬೆದರಿಕೆಯ ಪ್ರಶ್ನೆಯೇ ಇಲ್ಲ. ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಬೇಡಿ ಎಂದು ಸಿ.ವಿ. ನಾಗೇಶ್‌ಗೆ ಹೇಳಿದರು.

ಯಾವ ಕಾರಣಕ್ಕೆ ರೇವಣ್ಣಗೆ ಜಾಮೀನು ನೀಡಬಾರದು?

ಯಾವ ಕಾರಣಕ್ಕೆ ರೇವಣ್ಣಗೆ ಜಾಮೀನು ನೀಡಬಾರದು ಅಂತಾ ಹೇಳುತ್ತೇನೆ ಎಂದು ವಾದವನ್ನು ಮುಂದುವರಿಸಿದ ಎಸ್‌ಪಿಪಿ ಅಶೋಕ್ ನಾಯ್ಕ್, ವೋಟ್ ಹಾಕಿ.. ವೋಟ್‌ ಹಾಕಿ.. ಅಂತಾ ಜನರನ್ನೇ ಬೆದರಿಸುತ್ತಾರೆ. ಈ ರೇವಣ್ಣ ಅವರಿಗೆ ಜಾಮೀನು ಕೊಟ್ಟರೆ ಕಥೆ ಏನು ಸ್ವಾಮಿ? ವೋಟ್ ಹಾಕಲು ಸರತಿ ಸಾಲಲ್ಲಿ ನಿಂತಿದ್ದಾಗ ಮತದಾರರಿಗೆ ಬೆದರಿಕೆ ಹಾಕುತ್ತಾರೆ. 2019ರ ಚುನಾವಣೆ ವೇಳೆ ಮತ ಹಾಕುವ ವೇಳೆ ರೇವಣ್ಣ ಅವರೇ ಬೆದರಿಕೆ ಹಾಕಿದ್ದಾರೆ. ಅಲ್ಲಿ ಯಾರೂ ರೇವಣ್ಣ ಅವರನ್ನು ಕೇಳುವಂತಿಲ್ಲ. ಈಗ ಜಾಮೀನು ಕೊಟ್ಟರೆ ಕಥೆ ಏನ್‌ ಸ್ವಾಮಿ? ಅಧಿಕಾರಿಗಳು ಹಾಗೂ ಸರ್ಕಾರಿ ವಾಹನಗಳನ್ನೇ ದುರ್ಬಳಕೆ ಮಾಡಿಕೊಂಡಿದ್ದಾರೆ. ಎಲೆಕ್ಷನ್‌ ಟೈಮ್‌ನಲ್ಲಿ ಇವರು ಸರ್ಕಾರಿ ವಾಹನಗಳಲ್ಲಿಯೇ ಹಣ ಸಾಗಿಸುತ್ತಿದ್ದರು. ಈ ಎಲ್ಲ ಆರೋಪಗಳಿಗೆ ಸಂಬಂಧಿಸಿದಂತೆ ಬೇಕಾದ ಎಲ್ಲ ದಾಖಲೆಗಳು ಇವೆ. ಆದ್ದರಿಂದ ರೇವಣ್ಣ ಅವರಿಗೆ ಜಾಮೀನು ನೀಡಿದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತಾರೆ ಎಂದು ಅಶೋಕ್‌ ನಾಯ್ಕ್‌ ವಾದ ಮಂಡಿಸಿದರು.

ಎಲೆಕ್ಷನ್‌ ಮುಗಿಯುವ ವಾರಕ್ಕೆ ಮುಂಚೆಯೇ ಫ್ಲೈಟ್‌ ಟಿಕೆಟ್‌ ಬುಕ್‌

ಒಂದು ಕಡೆ ಸಂತ್ರಸ್ತೆಯನ್ನು ಚುನಾವಣೆಗೆ ಮುಂಚೆಯೇ ಕರೆದೊಯ್ದಿರುತ್ತಾರೆ. ಇನ್ನೊಂದೆಡೆ ಎಲೆಕ್ಷನ್ ಮುಗಿಯೋದಕ್ಕೆ ಮುಂಚೆಯೇ ಫ್ಲೈಟ್ ಟಿಕೆಟ್‌ ಬುಕ್ ಆಗಿರುತ್ತದೆ. ಎಲೆಕ್ಷನ್ ಮುಗಿಯುವ ಒಂದು ವಾರ ಮೊದಲೇ ಟಿಕೆಟ್ ಬುಕಿಂಗ್ ಮಾಡಿದ್ದಾರೆ. ದೆಹಲಿಯ ಕಂಪನಿ ಮೂಲಕ ಫ್ಲೈಟ್ ಟಿಕೆಟ್ ಬುಕಿಂಗ್ ಆಗಿದೆ ಎಂದು ಶೋಕ್‌ ನಾಯ್ಕ್‌ ಹೇಳಿದರು.

ಕಿಡ್ನ್ಯಾಪ್ ಮಾಡಿದ ಬಳಿಕ ಸಂತ್ರಸ್ತೆಯನ್ನು ಅನೇಕ ಕಡೆಗೆ ಕರೆದೊಯ್ದಿದ್ದಾರೆ. ಈಗ ಆಕೆಯಿಂದ ಬಲವಂತವಾಗಿ ವಿಡಿಯೊ ಮೂಲಕ ಸ್ಪಷ್ಟನೆ ನೀಡಲಾಗಿದೆ. ಯಾರೂ ಕಿಡ್ನ್ಯಾಪ್ ಮಾಡಿಲ್ಲ ಅಂತ ಹೇಳಿಕೆಯ ಕೊಡಿಸಲು ಯತ್ನಿಸಿದ್ದಾರೆ. ಸಂತ್ರಸ್ತೆ ಮಹಿಳೆಯ ವಿಡಿಯೊ ಸ್ಪಷ್ಟನೆಯ ಸತ್ಯಾಸತ್ಯತೆ ಕುರಿತು ಪತ್ತೆ ಆಗಬೇಕು. ಕಿಡ್ನ್ಯಾಪ್ ಪ್ರಕರಣ ಸೇರಿದಂತೆ ಈ ಹಗರಣದಲ್ಲಿ ಹಲವು ಜನರು ಇದ್ದಾರೆ. ಎರಡು ದಿನಗಳಿಂದ ಕೆಲವರ ಬಂಧನ ಆಗಿದೆ. ಎಲ್ಲರೂ ಪ್ರಜ್ವಲ್‌ ರೇವಣ್ಣಗೆ ಗೊತ್ತಿರಬೇಕು ಅಂತ ಏನಿಲ್ಲ. ಬಂಧಿತ ಆರೋಪಿಗಳಿಂದ ಸಮಗ್ರ ಮಾಹಿತಿಯನ್ನು ಎಸ್‌ಐಟಿ ಕಲೆ ಹಾಕುತ್ತಿದೆ ಎಂದು ಅಶೋಕ್‌ ನಾಯ್ಕ್‌ ಹೇಳಿದರು.

ಸಮನ್ಸ್‌ ನೀಡಿದವರಿಗೆ ರೇವಣ್ಣರಿಂದ ಬೆದರಿಕೆ

ಮಾಜಿ ಸಚಿವ ಎಚ್.ಡಿ. ರೇವಣ್ಣ ಕುಟುಂಬಸ್ಥರು ಪ್ರಭಾವಸ್ಥರು, ಸಮನ್ಸ್ ನೀಡಿರುವ ತನಿಖಾಧಿಕಾರಿಗಳಿಗೇ ಎಚ್‌.ಡಿ. ರೇವಣ್ಣ ಬೆದರಿಕೆ ಹಾಕಿದ್ದಾರೆ. ಆದ್ದರಿಂದ ಈ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಬೇಲ್ ಕೊಡಬಾರದು ಎಂದು ಎಸ್‌ಪಿಪಿ ಅಶೋಕ್ ನಾಯ್ಕ್‌ ವಾದ ಮಂಡಿಸಿದರು.

ಸಂತ್ರಸ್ತೆ ಹೇಳಿಕೆಯ ವಿಡಿಯೊ ವೈರಲ್‌ ಪ್ರಸ್ತಾಪ

ಸಂತ್ರಸ್ತೆ ವಿಡಿಯೊ ಹೇಳಿಕೆ ಭಾನುವಾರದಿಂದ ವೈರಲ್‌ ಆಗಿದೆ. ಈ ವಿಡಿಯೊವನ್ನು ಸಂತ್ರಸ್ತೆಗೆ ಹೆದರಿಸಿ ಮಾಡಲಾಗಿದೆ. ಈ ಬಗ್ಗೆ ಎಸ್ಐಟಿ ವಿಚಾರಣೆ ವೇಳೆ ಸಂತ್ರಸ್ತೆ ಹೇಳಿದ್ದಾರೆ. ತೋಟದ ಮನೆಯಲ್ಲಿ ಕೂಡಿ ಹಾಕಿದ್ದಾಗ ಸಂತ್ರಸ್ತೆಯ ವಿಡಿಯೊ ರೆಕಾರ್ಡ್ ಮಾಡಲಾಗಿದೆ. ನನ್ನನ್ನು ಯಾರೂ ಕಿಡ್ನ್ಯಾಪ್ ಮಾಡಿಲ್ಲವೆಂದು ಅವರಿಂದ ಹೇಳಿಸಿದ್ದಾರೆ ಎಂದು ಅಶೋಕ್‌ ನಾಯ್ಕ್‌ ಹೇಳಿದರು.

ಸಿ.ವಿ.ನಾಗೇಶ್ ವಾದ

ಇಬ್ಬರೂ ಎಸ್‌ಪಿಪಿಗಳ ವಾದ ಮಂಡನೆ ನಂತರ ಮತ್ತೆ ಸಿ.ವಿ. ನಾಗೇಶ್ ವಾದವನ್ನು ಆರಂಭಿಸಿದರು. ಏಪ್ರಿಲ್ 29ಕ್ಕೆ ಕಿಡ್ನ್ಯಾಪ್ ಮಾಡಿದರೆ, ದೂರು ಕೊಡಲು ತಡ ಯಾಕೆ ಮಾಡಿದರು? ಸಂತ್ರಸ್ತ ಮಹಿಳೆ ಎಚ್.ಡಿ.ರೇವಣ್ಣ ಅವರ ಸಂಬಂಧಿಯಾಗಿದ್ದಾರೆ. ಸುಮಾರು ವರ್ಷ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ಕೆಲಸ ಮಾಡಿದ್ದವರನ್ನು ಯಾಕೆ ಕಿಡ್ನ್ಯಾಪ್ ಮಾಡಬೇಕು? ಮನೆ ಕೆಲಸ ಮಾಡುತ್ತಿದ್ದರಲ್ಲ, ಕರೆದುಕೊಂಡು ಬನ್ನಿ ಅಂದಿರಬಹುದು. ಇಲ್ಲಿ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್ ಮಾಡಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ರೇವಣ್ಣ ಅರೆಸ್ಟ್ ಆದ ದಿನವೇ ಸಂತ್ರಸ್ತೆ ಮಹಿಳೆ ಹುಣಸೂರಿನಲ್ಲಿ ಪತ್ತೆಯಾಗಿದ್ದಾರೆ. ಮೈಸೂರಿನ ಹುಣಸೂರು ಠಾಣಾ ವ್ಯಾಪ್ತಿಯಲ್ಲಿ ಮಹಿಳೆ ಪತ್ತೆ ಆಗಿದ್ದರು. ಸಂತ್ರಸ್ತ ಮಹಿಳೆ ಪ್ರಜ್ವಲ್ ರೇವಣ್ಣ ವಿರುದ್ಧ ಮಾತ್ರ ಆರೋಪಿಸಿದ್ದಾರೆ. ರೇವಣ್ಣ ವಿರುದ್ಧ ಸಂತ್ರಸ್ತೆ ಮಹಿಳೆ ಯಾವುದೇ ಆರೋಪವನ್ನು ಮಾಡಿಲ್ಲ ಎಂದು ಎಚ್.ಡಿ. ರೇವಣ್ಣ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದರು.

ಸಂತ್ರಸ್ತ ಮಹಿಳೆಯಿಂದ ಪ್ರಜ್ವಲ್ ರೇವಣ್ಣ ವಿರುದ್ಧ ರೇಪ್ ಆರೋಪದ ಬಗ್ಗೆ ವಾದ ಮಂಡಿಸಿದ ಸಿ.ವಿ. ನಾಗೇಶ್‌, ಸಂತ್ರಸ್ತೆಯು ಸಿಆರ್‌ಪಿಸಿ 161 ಅಡಿಯಲ್ಲಿ ಹೇಳಿಕೆ ನೀಡುವಾಗ, ಕೇವಲ ಪ್ರಜ್ವಲ್‌ ವಿರುದ್ಧ ಅತ್ಯಾಚಾರ ಅಂತಾ ಆರೋಪ ಮಾಡಿದ್ದಾಳೆ. ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿ ಎರಡು ರಿಮ್ಯಾಂಡ್‌ ಅರ್ಜಿ ಸಲ್ಲಿಕೆಯಾಗಿದೆ. ಕಿಡ್ನ್ಯಾಪ್ ಮಾಡಿದ್ದಾರೆ ಅಂತಾ ಮಹಿಳೆಯ ಮಗನಿಗೆ ಹೇಗೆ ಗೊತ್ತಾಯ್ತು? ಅದು ಊಹೆಯಷ್ಟೇ. ಸಂತ್ರಸ್ತೆಯ ಮಗನಿಗೆ ಯಾರೂ ಕಾಲ್ ಮಾಡಿ ಡಿಮ್ಯಾಂಡ್ ಮಾಡಿಲ್ಲ. ಇನ್ನು ಸಂತ್ರಸ್ತ ಮಹಿಳೆಯನ್ನು ಅಂದು ಹುಣಸೂರಿನ ಬಳಿ ರಕ್ಷಣೆ ಮಾಡಲಾಗಿದೆ. ಆಪ್ತ ಸಮಾಲೋಚನೆ ಮಾಡಿ, ಆಕೆಯನ್ನು ಸುರಕ್ಷಿತ ಕೊಠಡಿಯಲ್ಲಿಡಲಾಗಿದೆ. ಈ ಪ್ರಕರಣ ಸಂಬಂಧ ಹೇಳಿಕೆ ದಾಖಲಿಸಿಲ್ಲ ಏಕೆ? ಇಲ್ಲಿಯ ತನಕ ರೇವಣ್ಣ ವಿರುದ್ಧ ಯಾವುದೇ ಸಾಕ್ಷಿಯನ್ನೂ ಸಂಗ್ರಹಿಸಿಲ್ಲ, ಸಂತ್ರಸ್ತೆಯನ್ನು ಕರೆದೊಯ್ದು ಸ್ಥಳ ಮಹಜರು ಮಾಡಿಸಿಲ್ಲ. ಸಂತ್ರಸ್ತ ಮಹಿಳೆಯನ್ನು ಕೇವಲ ಆಪ್ತ ಸಮಾಲೋಚನೆಯಲ್ಲಿ ಇರಿಸಿದ್ದಾರೆ ಎಂದು ರೇವಣ್ಣ ಪರ ವಕೀಲ ಸಿ.ವಿ.ನಾಗೇಶ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಸಂತ್ರಸ್ತ ಮಹಿಳೆಯನ್ನು ಹುಣಸೂರಿನ ತೋಟದಿಂದ ರಕ್ಷಣೆ ಮಾಡಿದರಾ? ಎಸ್‌ಐಟಿ ಎಲ್ಲಿಂದ ಮಹಿಳೆಯನ್ನು ಕರೆತಂದರು? ಅವರ ಸಂಬಂಧಿಕರ ಮನೆಯಿಂದ ಸಂತ್ರಸ್ತೆಯನ್ನು ಕರೆ ತಂದಿದ್ದಾರೆ. ಅದಕ್ಕೆ ಸಾಕ್ಷಿಯಾಗಿ ಎರಡು ಕಡೆ ರೆಕಾರ್ಡ್ ಆಗಿದೆ. ಒಂದು ಕಡೆ ಫೋಟೋ ಶಾಪ್‌ವೊಂದರ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನೊಂದು ಕಡೆ ತರಕಾರಿ ಅಂಗಡಿ ಸಿಸಿ ಕ್ಯಾಮರಾದಲ್ಲಿ ಇದು ಸೆರೆಯಾಗಿದೆ. ಅನುಮತಿ ನೀಡಿದರೆ ಸೆರೆಯಾಗಿರುವ ದೃಶ್ಯವನ್ನು ತೋರಿಸಲು ನಾವು ಸಿದ್ಧ. ಈಗ ನ್ಯಾಯಾಲಯದಲ್ಲಿಯೇ ಪ್ಲೇ ಮಾಡುತ್ತೇವೆ. ಸ್ಪೆಷಲ್ ಇನ್‌ವೆಸ್ಟಿಗೇಷನ್ ಟೀಮ್ ವಿರುದ್ಧವೇ ಸಿ.ವಿ. ನಾಗೇಶ್ ಆರೋಪಿಸಿದರು.

ಕಿಡ್ನ್ಯಾಪ್ ಪ್ರಕರಣದಲ್ಲಿ ಎಸ್‌ಐಟಿಯವರೇ ಟ್ಯಾಂಪರಿಂಗ್ ಮಾಡುತ್ತಿದ್ದಾರೆ. ಆದರೆ, ಎಸ್‌ಪಿಪಿಯವರು ಸಂತ್ರಸ್ತೆ ಹೇಳಿಕೆಯನ್ನು ಟ್ಯಾಂಪರಿಂಗ್ ಆಗಿದೆ ಎಂದು ಹೇಳಿದ್ದಾರೆ. ವೈರಲ್ ಆದ ಸ್ಪಷ್ಟನೆ ವಿಡಿಯೊದಲ್ಲಿ ಸಂತ್ರಸ್ತೆಯೇ ಹೇಳಿಕೊಂಡಿದ್ದಾರೆ. ನನ್ನನ್ನು ಯಾರೂ ಕಿಡ್ನ್ಯಾಪ್ ಮಾಡಿಲ್ಲವೆಂದಿದ್ದಾರೆ. ನಮ್ಮ ಕುಟುಂಬಕ್ಕೆ ತೊಂದರೆಯಾದರೆ ಅವರೇ ಹೊಣೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಸಂಬಂಧಿಕರ ಮನೆಯಲ್ಲಿದ್ದೇನೆ. ಬೇಗ ಬರುತ್ತೇನೆ ಎಂದೂ ಹೇಳಿದ್ದಾರೆ. ಯಾರೂ ಬೆದರಿಕೆ ಹಾಕಿಲ್ಲ, ಬಲವಂತವಾಗಿಯೂ ಕರೆದೊಯ್ದಿಲ್ಲ ಎಂದು ಹೇಳಿಕೊಂಡಿದ್ದಾರೆ. ಹೀಗೆಲ್ಲಾ ಸಂತ್ರಸ್ತೆಯೇ ವಿಡಿಯೊ ಮೂಲಕ ಹೇಳಿದ್ದಾರೆ. ಹಾಗಾಗಿ ಕಿಡ್ನ್ಯಾಪ್ ಹೇಗೆ ಆಗುತ್ತದೆ. ಈ ಕಾರಣಕ್ಕಾಗಿ ರೇವಣ್ಣ ಅವರಿಗೆ ಜಾಮೀನು ನೀಡಬೇಕು ಎಂದು ಸಿ.ವಿ. ನಾಗೇಶ್‌ ಕೋರಿದರು.

ಕಿಡ್ನ್ಯಾಪ್ ಪ್ರಕರಣದಲ್ಲಿ ಚುನಾವಣಾ ತಕರಾರು ಅರ್ಜಿ ತರುವುದು ಬೇಡ. ಎಸ್‌ಪಿಪಿ ವಾದದ ಅಂಶಗಳನ್ನು ಆಕ್ಷೇಪಿಸಿ ರೇವಣ್ಣ ಪರ ವಕೀಲರು ವಾದ ಮಂಡಿಸಿದರು. ಎಚ್.ಡಿ.ರೇವಣ್ಣ ವಿರುದ್ಧ ಕೇಳಿಬಂದಿರುವ ಆರೋಪಗಳು ಸಾಬೀತಾಗಿಲ್ಲ. ಹಿಂದಿನ ಕೇಸ್‌ಗಳು ಸಾಬೀತಾಗಿದ್ದರೆ ಯಾಕೆ ಎಲ್ಲವೂ ಬಿ ರಿಪೋರ್ಟ್ ಆಗುತ್ತಿತ್ತು? ಎಂದು ಪ್ರಶ್ನೆ ಮಾಡಿದರು.

ರಿಮ್ಯಾಂಡ್‌ ಅಪ್ಲಿಕೇಷನ್‌ನಲ್ಲಿ ಎಸ್‌ಐಟಿ ಲೋಪವೆಸಗಿದೆ. ಅದರಲ್ಲಿ ಸಂತ್ರಸ್ತೆಯ ಹೇಳಿಕೆ ಒಂದು ಪ್ಯಾರಾ ಇದೆ. ಅದು ಬಿಟ್ಟು ರಿಮ್ಯಾಂಡ್‌ ಅಪ್ಲಿಕೇಷನ್‌ನಲ್ಲಿ ಆರೋಪಿ ಹೇಳಿಕೆಯೇ ಇದೆ. ಸಂತ್ರಸ್ತ ಮಹಿಳೆಯ ಹೇಳಿಕೆ ಒಂದು ಪ್ಯಾರಾ ಬಿಟ್ಟರೆ ಬೇರೆ ಇಲ್ಲವೇ ಇಲ್ಲ. ಯಾವಾಗಲೂ ಹೇಳಿಕೆ ದಾಖಲು ಮಾಡಿಕೊಳ್ಳುವುದೇ ಎಸ್‌ಐಟಿ ಕೆಲಸನಾ? ಸಂತ್ರಸ್ತೆ ಏನು ಹೇಳ್ತಾರೆ? ಏನು ಹೇಳಲ್ಲ ಅಂತಾ ಹೇಳಿಕೆ ದಾಖಲಾಗಬೇಕು. ಆಕೆ ಎಸ್‌ಐಟಿ ಸುಪರ್ದಿಯಲ್ಲಿರುವಾಗ ಏನನ್ನೂ ಮಾಡಿಲ್ಲ. ರಿಮ್ಯಾಂಡ್ ಅಪ್ಲಿಕೇಷನ್‌ನಲ್ಲಿರುವಂತೆ ಯಾವುದೇ ಸಾಕ್ಷಿ ಸಂಗ್ರಹಿಸಿಲ್ಲ. ಆದರೆ, ನ್ಯಾಯಾಲಯಕ್ಕೆ ಎಸ್ಐಟಿ ರಿಮ್ಯಾಂಡ್ ಅಪ್ಲಿಕೇಷನ್ ಸಲ್ಲಿಸಿದ್ದಾರೆ ಎಂದು ನಾಗೇಶ್ ಹೇಳಿದರು.

ಕಾಯ್ದೆ ಬಗ್ಗೆ ವಕೀಲರ ಆಕ್ಷೇಪ

ಸಂತ್ರಸ್ತೆ ಮೇಲೆ ಯಾವುದಾದರೂ ರೀತಿ ಹಲ್ಲೆ, ಬೆದರಿಕೆ ಇರಬೇಕು. ಆಗ ಮಾತ್ರ ಐಪಿಸಿ ಸೆಕ್ಷನ್‌ 364ಎ ಕಾಯ್ದೆ ಅನ್ವಯ ಆಗುತ್ತದಲ್ಲವೇ? ಕಿಡ್ನ್ಯಾಪ್ ಪ್ರಕರಣದಲ್ಲಿ ಸಂತ್ರಸ್ತೆ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ. ಹಾಗಾದರೆ ರೇವಣ್ಣ ವಿರುದ್ಧ ಸೆಕ್ಷನ್‌ 364ಎ ಹೇಗೆ ಅನ್ವಯ ಆಗುತ್ತದೆ? ಎಂದು ಸರ್ಕಾರದ ವಿಶೇಷ ಅಭಿಯೋಜಕರ (SPP) ವಾದಕ್ಕೆ ವಕೀಲ ಸಿ.ವಿ. ನಾಗೇಶ್ ಪ್ರತಿವಾದವನ್ನು ಮಂಡಿಸಿದರು.

ಕೊನೇ ಪಕ್ಷ ಸಂತ್ರಸ್ತೆಯ ಕುಟುಂಬದವರ ಮೇಲೂ ಹಲ್ಲೆ ನಡೆದಿಲ್ಲ. ಆರೋಪಿ ಸ್ಥಾನದಲ್ಲಿರುವ ರೇವಣ್ಣ ಯಾರ ಮೇಲೆಯೂ ಹಲ್ಲೆ ಮಾಡಿಲ್ಲ. ಆದರೂ ಕಿಡ್ನ್ಯಾಪ್ ಪ್ರಕರಣದಲ್ಲಿ ಸೆಕ್ಷನ್‌ 364ಎ ಹಾಕಿದ್ದು ಯಾಕೆ? ಈ ಸೆಕ್ಷನ್ ಹಾಕುವ ಪ್ರಮೇಯವೇ ಕಾಣುತ್ತಿಲ್ಲ. ಘಟನೆ ನಡೆದ ದಿನಕ್ಕೂ ಕೇಸ್ ದಾಖಲಾದ ದಿನಕ್ಕೂ ಅಂತರ ಇದೆ. ನಿಜವಾಗಿಯೂ ಕಿಡ್ನ್ಯಾಪ್ ಆಗಿದ್ದರೆ ಅಲ್ಲಿ ಡಿಮ್ಯಾಂಡ್ ಇರಬೇಕು. ಆದರೆ, ಬಲವಂತದ ಕಿಡ್ನ್ಯಾಪ್ ಆಗಿಲ್ಲ, ಯಾವುದೇ ಬೇಡಿಕೆ ಇಲ್ಲ ಎಂದು ವಾದಿಸಿದ ನಾಗೇಶ್‌, 364 ಎ ಸಂಬಂಧ ಹಲವು ಕೇಸ್‌ ಸ್ಟಡಿಗಳನ್ನು ಉಲ್ಲೇಖಿಸಿದರು. ಜಾರ್ಖಂಡ್ ಹೈಕೋರ್ಟ್‌ನ ರೋಹಿಣಿ ದೇವಿ ಪ್ರಕರಣವನ್ನು ಉಲ್ಲೇಖಿಸಿದರು.

ಈ ವೇಳೆ ತಮ್ಮ ಹಿಂದಿನ ವಾದಕ್ಕೆ ಕರೆಕ್ಷನ್ ಮಾಡಿಕೊಂಡ ವಕೀಲ ನಾಗೇಶ್, ಕಿಡ್ನ್ಯಾಪ್ ಸಂತ್ರಸ್ತೆ ರೇವಣ್ಣ ಅವರ ಸಂಬಂಧಿ ಅಲ್ಲ. ಮೊದಲು ಕೇಸ್ ದಾಖಲಿಸಿದ್ದ ಮಹಿಳೆ ಮಾತ್ರ ರೇವಣ್ಣರ ಸಂಬಂಧಿ. ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಕೇಸ್‌ನಲ್ಲಿನ ಸಂತ್ರಸ್ತೆ ಅಲ್ಲ. ಯಾರನ್ನಾದರೂ ಅಪಹರಿಸಿ, ಒತ್ತೆಯಾಳಾಗಿಟ್ಟುಕೊಂಡಲ್ಲಿ ಮಾತ್ರ ಸೆಕ್ಷನ್‌ 364ಎ ಆಗಬೇಕು. ಇಲ್ಲವಾದಲ್ಲಿ ಈ ರೀತಿ ಪ್ರಕರಣದಲ್ಲಿ ಸೆಕ್ಷನ್ 364ಎ ಸೆಕ್ಷನ್‌ ಹಾಕುವ ಅಗತ್ಯ ಇರಲ್ಲ. ಒತ್ತೆಯಾಳಾಗಿ ಇರಿಸಿಕೊಂಡು ದೌರ್ಜನ್ಯ ನಡೆಸಿ, ಕಿರುಕುಳ ನೀಡಿದರೆ ಅಪರಾಧ. ಪ್ರಾಣ ಹಾನಿ ಆಗುವಂತೆ ಹಲ್ಲೆ ಮಾಡುವುದು ಮಾತ್ರ ಅಪರಾಧ. ಇನ್ನು ವಿದೇಶದಲ್ಲಿರುವ ವ್ಯಕ್ತಿ ಕಿಡ್ನ್ಯಾಪ್ ಮಾಡಿಸಿದರೆ ಆಗ ಸೆಕ್ಷನ್‌ 365ಎ ಅನ್ವಯ ಆಗುತ್ತದೆ.
ಆದರೆ, ಈ ಕೆ.ಆರ್.ನಗರ ಠಾಣಾ ವ್ಯಾಪ್ತಿಯ ಪ್ರಕರಣದಲ್ಲಿ 365ಎ ಅನ್ವಯ ಆಗಲ್ಲ. ಸಂತ್ರಸ್ತ ಮಹಿಳೆ ಎಚ್.ಡಿ. ರೇವಣ್ಣ ಅವರ ಮನೆಯಲ್ಲಿ 10 ವರ್ಷ ಕೆಲಸ ಮಾಡಿದ್ದಾರೆ. ಸಂತ್ರಸ್ತ ಮಹಿಳೆಯನ್ನು ಈ ಪ್ರಕರಣದಲ್ಲಿ ಕಿಡ್ನ್ಯಾಪ್ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.

ರೇವಣ್ಣ ವಿರುದ್ಧ ಬಲವಾದ ಸಾಕ್ಷಿಗಳೇ ಇಲ್ಲ

ಕಿಡ್ನ್ಯಾಪ್ ಪ್ರಕರಣದಲ್ಲಿ ಎಚ್.ಡಿ.ರೇವಣ್ಣ ವಿರುದ್ಧ ಬಲವಾದ ಸಾಕ್ಷಿಗಳೇ ಇಲ್ಲ. ಆದರೂ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆ ಶಿಕ್ಷೆಯಾಗುವ ಸೆಕ್ಷನ್‌ಗಳನ್ನು ಹಾಕಲಾಗಿದೆ. ಏನೇ ಆದರೂ ಈ ರೀತಿ ಪ್ರಕರಣದಲ್ಲಿ ಬೇಲ್ ಯಾಕೆ ನೀಡಬಾರದು? ಎಂದು ಕೆಲವು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಕೇಸ್ ಸ್ಟಡಿಗಳನ್ನು ಉಲ್ಲೇಖಿಸಿದರು. ಇನ್ನು ರೇವಣ್ಣ ವಿರುದ್ಧ ಪ್ರೈಮಾಫೇಸಿ ಸಾಬೀತಾಗುವ ಯಾವುದೇ ಆರೋಪವೂ ಇಲ್ಲ. ತಮಗೆ ಗೊತ್ತಿರುವವರನ್ನು ತಮ್ಮ ಸುಪರ್ದಿಯಲ್ಲಿ ಇಟ್ಟುಕೊಂಡರೆ ತಪ್ಪೇನು? ಸಂತ್ರಸ್ತೆಯನ್ನು ಭವಾನಿ ರೇವಣ್ಣ ಮನೆಗೆ ಕರೆಸಿಕೊಂಡ ಕ್ರಮಕ್ಕೆ ಸಮರ್ಥನೆ ಮಾಡಿದರು.

ಸಂತ್ರಸ್ತ ಮಹಿಳೆಯನ್ನು ರಕ್ಷಿಸಿ 6 ದಿನವಾದರೂ ಸೂಕ್ತ ರೀತಿ ಹೇಳಿಕೆ ಪಡೆದಿಲ್ಲ. ಟ್ಯೂಷನ್‌ಗೆ ಹೋಗಿದ್ದ ಬಾಲಕನ ಕಿಡ್ನ್ಯಾಪ್ ಪ್ರಕರಣವನ್ನು ಇದೇ ವೇಳೆ ಉಲ್ಲೇಖಿಸಿದರು. ನಿಮ್ಮ ತಂದೆಗೆ ಅಪಘಾತವಾಗಿದೆ, ಆಸ್ಪತ್ರೆಯಲ್ಲಿದ್ದಾರೆಂದು ಹೇಳಿ ಅಪಹರಿಸಿದ್ದಾರೆ. ಬಾಲಕನನ್ನು ಅಪಹರಿಸಿದ ಬಳಿಕ ತಂದೆಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಪೊಲೀಸರಿಗೆ ಎಲ್ಲಿಯೂ ಹೇಳದಂತೆ ಬೆದರಿಕೆಯನ್ನು ಹಾಕಿದ್ದರು. ಆದರೆ, ಎಚ್.ಡಿ.ರೇವಣ್ಣ ಪ್ರಕರಣದಲ್ಲಿ ಯಾವುದೇ ರೀತಿ ಬೆದರಿಕೆ, ಬೇಡಿಕೆ ಇಲ್ಲ. ಹಾಗಾಗಿ ಎಚ್.ಡಿ.ರೇವಣ್ಣ ಅವರಿಗೆ ಇದು ಜಾಮೀನು ನೀಡಬಹುದಾದ ಪ್ರಕರಣವಾಗಿದೆ ಎಂದು ವಕೀಲ ಸಿ.ವಿ.ನಾಗೇಶ್ ವಾದ ಮಂಡನೆ ಮಾಡಿದರು.

ತುಮಕೂರು ಕಿಡ್ನ್ಯಾಪ್‌ ಕೇಸ್‌ ಉಲ್ಲೇಖ

ಇದೇ ವೇಳೆ ತುಮಕೂರಿನ ಕಿಡ್ನ್ಯಾಪ್ ಪ್ರಕರಣವೊಂದನ್ನು ಉಲ್ಲೇಖಿಸಿ ನಾಗೇಶ್ ವಾದ ಮಾಡಿದ್ದಾರೆ. ಎಸ್‌. ರಮೇಶ್ ವರ್ಸಸ್‌ ಸ್ಟೇಟ್ ಆಫ್ ಕರ್ನಾಟಕ ಪ್ರಕರಣದ ತೀರ್ಪು ಉಲ್ಲೇಖ ಮಾಡಿದ ನಾಗೇಶ್‌, ಕಾನೂನುಬಾಹಿರವಾಗಿ ಒತ್ತೆಯಾಳಾಗಿ ಇರಿಸಿಕೊಂಡರೇ ಮಾತ್ರ ಅಪರಾಧ. ಆದರೆ, ಕೆ.ಆರ್.ನಗರ ಕಿಡ್ನ್ಯಾಪ್ ಪ್ರಕರಣದಲ್ಲಿ ಈ ರೀತಿ ಬೆದರಿಕೆ ಪ್ರಶ್ನೆ ಇಲ್ಲ. ಆರೋಪಿ ವಿರುದ್ಧ ಜೀವಾವಧಿ ಶಿಕ್ಷೆ ವಿಧಿಸುವ ಅಪರಾಧ ಇದ್ದರೆ ಬೇಲ್‌ ಬೇಡ. ಆಗ ಮಾತ್ರ ನ್ಯಾಯಾಲಯ ರೇವಣ್ಣರಿಗೆ ಜಾಮೀನು ತಿರಸ್ಕರಿಸುವ ಅವಕಾಶ ಇದೆ. ಆದರೆ, ಇಲ್ಲಿ ರೇವಣ್ಣ ವಿರುದ್ಧ ಯಾವುದೇ ರೀತಿಯ ಸಾಕ್ಷಿಗಳೇ ಕಾಣುತ್ತಿಲ್ಲ. ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸುವ ಅಪರಾಧ ಕಾಣುತ್ತಿಲ್ಲ. ಎಸ್‌ಐಟಿ ಸಲ್ಲಿಸಿದ ರಿಮ್ಯಾಂಡ್ ಅಪ್ಲಿಕೇಷನ್‌ನಲ್ಲಿ ಸಿಆರ್‌ಪಿಸಿ 164 ಹೇಳಿಕೆ ದಾಖಲಿಸಿಲ್ಲ. ಆದರೂ ಜೀವಾವಧಿ ಶಿಕ್ಷೆ ನೀಡುವ ಅವಕಾಶ ಇರುವ ಸೆಕ್ಷನ್‌ 364ಎ ಹಾಕಿದ್ದರೆ. ಆರೋಪಿತ ರೇವಣ್ಣ ವಿರುದ್ಧ ಸಾಕ್ಷಿಗಳೂ ಇಲ್ಲ, ಸಾಂದರ್ಭಿಕ ಸಾಕ್ಷ್ಯವೂ ಇಲ್ಲ ಎಂದು ನಾಗೇಶ್‌ ಮಾಹಿತಿ ನೀಡಿದರು.

ತೀರ್ಪಿನ ಪ್ರತಿಗಾಗಿ ವಾದ – ಪ್ರತಿವಾದ

ಎಸ್‌ಐಟಿ ಉಲ್ಲೇಖಿಸಿದ ತೀರ್ಪುಗಳಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟು ಬೆದರಿಕೆ ಹಾಕಲಾಗಿತ್ತು ಆದರೆ ರೇವಣ್ಣ ಪ್ರಕರಣದಲ್ಲಿ ಬೆದರಿಕೆ ಎಲ್ಲಿ ಹಾಕಿದ್ದಾರೆ? ಯಾವ ಬೇಡಿಕೆ ಇದೆ..? ಎಸ್‌ಐಟಿ ಕೇಸ್‌ ಸ್ಟಡಿಗೆ ಕೌಂಟರ್ ಕೊಟ್ಟು ರೇವಣ್ಣ ಪರ ವಕೀಲ ನಾಗೇಶ್ ವಾದ ಮಂಡಿಸುತ್ತಾ, ಕೆ.ಆರ್.ನಗರ ಕಿಡ್ನ್ಯಾಪ್ ಕೇಸಲ್ಲಿ 364ಎ ಹಾಕಲು ಬೇಕಾದ ಬೇಸಿಕ್ ಅಂಶಗಳಿಲ್ಲ ಎಂದು ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪುಗಳನ್ನು ಉಲ್ಲೇಖಿಸಿದರು. ಆದರೆ ಆ ಎಲ್ಲಾ ಪ್ರಕರಣಗಳಲ್ಲಿ ಬೆದರಿಕೆವೊಡ್ಡಿ ಹಣಕ್ಕಾಗಿ ಬೇಡಿಕೆ ಇರಿಸಲಾಗಿತ್ತು. ಇಲ್ಲಿ ದಾಖಲಾದ ಕಿಡ್ನ್ಯಾಪ್ ಪ್ರಕರಣದಲ್ಲಿ ರೇವಣ್ಣ ವಿರುದ್ಧ ಆ ಆರೋಪಗಳಿಲ್ಲ ಎಂದು ವಾದಿಸಿದರು.

ಆಗ ಮಧ್ಯ ಪ್ರವೇಶ ಮಾಡಿದ ಜಯ್ನಾ ಕೊಠಾರಿ, ನೀವು ಉಲ್ಲೇಖಿಸುತ್ತಿರುವ ಪ್ರಕರಣಗಳ ತೀರ್ಪಿನ ಪ್ರತಿ ಕೊಡಿ ಎಂದು ಕೋರಿದರು. ಈ ನಡುವೆ ಎಸ್‌ಪಿಪಿ ಜಯ್ನಾ ಕೊಠಾರಿ ಹಾಗೂ ರೇವಣ್ಣ ವಕೀಲರ ಮಧ್ಯೆ ವಾದ ಪ್ರತಿವಾದ ನಡೆಯಿತು. ನೀವು ಕೇಳಿದ ಕೂಡಲೇ ಕೊಡಬೇಕು ಅಂತೇನಿಲ್ಲ ಎಂದು ಸಿ.ವಿ.ನಾಗೇಶ್ ಹೇಳಿದರು. ವರದಿಯಾಗಿರುವ ಪ್ರಕರಣಗಳನ್ನು ನೀವು ಓದಿಕೊಂಡಿರಬೇಕು ಎಂದು ನಾಗೇಶ್ ಕುಟುಕಿದರು. ಆದರೆ, ಯಾವ ಕೇಸ್ ಸ್ಟಡಿ ಉಲ್ಲೇಖಿಸುತ್ತೀರೋ ಅದರ ಪ್ರತಿಯನ್ನು ಕೊಡಿ ಎಂದು ಒತ್ತಾಯಿಸಿದರು.

ರೇವಣ್ಣ ವಿರುದ್ಧ ಆರೋಪಗಳೆಲ್ಲಾ ಊಹಾಪೋಹ, ರಾಜಕೀಯ ಪ್ರೇರಿತ. ಈ ರೀತಿಯಲ್ಲಿ ಆಧಾರರಹಿತ ಆರೋಪಗಳನ್ನು ಪರಿಗಣಿಸಬಾರದು. ರೇವಣ್ಣ 6 ಸಲ ಎಂಎಲ್‌ಎ ಆಗಿದ್ದವರು, ಕಾನೂನಿಗೆ ಸದಾ ತಲೆಬಾಗುತ್ತಾರೆ. ಹೀಗಾಗಿ ಅವರಿಗೆ ಜಾಮೀನು ಮಂಜೂರು ಮಾಡಿ ಎಂದು ವಾದವನ್ನು ನಾಗೇಶ್‌ ಮುಕ್ತಾಯಗೊಳಿಸಿದರು.

ಇದನ್ನೂ ಓದಿ: Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

ಮತ್ತೆ ಎಸ್‌ಪಿಪಿ ವಾದಕ್ಕೆ ಜಡ್ಜ್‌ ಅವಕಾಶ

ಸಿ.ವಿ.ನಾಗೇಶ್ ಪ್ರತಿವಾದಕ್ಕೆ ಮತ್ತೆ ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡನೆಗೆ ಪ್ರಾರಂಭ ಮಾಡಿದರು. ಆಗ ಮಧ್ಯ ಪ್ರವೇಶ ಮಾಡಿದ ನ್ಯಾಯಾಧೀಶರು, ಮತ್ತೆ ಪ್ರತಿವಾದಕ್ಕೆ ಅವಕಾಶ ಇದೆಯೇ ಎಂದು ಪ್ರಶ್ನೆ ಮಾಡಿದರು. ಅವಕಾಶ ಇಲ್ಲ. ಆದರೆ, 5 ನಿಮಿಷ ಕಾಲಾವಕಾಶ ಕೊಡಿ. ಎಸ್‌ಐಟಿ ಪರ ಜಯ್ನಾ ಕೊಠಾರಿ ಮತ್ತೆ ವಾದ ಮಾಡಲು ನಾಗೇಶ್ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ, ಮತ್ತೆ ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡನೆಗೆ ಜಡ್ಜ್‌ ಅವಕಾಶ ನೀಡಿದರು. ಅಲ್ಲದೆ, ಎರಡೂ ರಿಮ್ಯಾಂಡ್ ಅಪ್ಲಿಕೇಷನ್ ಓದಲು ಹೇಳಿದರು.

ಮೇ 4ರಂದು ಸಂತ್ರಸ್ತೆ ರಕ್ಷಣೆ ಹಾಗೂ ಮೇ 5ರಂದೇ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ. ಮೇ 5ರಂದೇ ಸಿಆರ್‌ಪಿಸಿ 161 ಅಡಿಯಲ್ಲಿ ಎಸ್‌ಐಟಿ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಜಯ್ನಾ ಕೊಠಾರಿ ಹೇಳಿದರು. ಆಗ ಮಧ್ಯಪ್ರವೇಶ ಮಾಡಿದ ನ್ಯಾಯಾಧೀಶರು, ಹೇಳಿಕೆ ದಾಖಲಿಸಿಕೊಂಡ ಬಗ್ಗೆ ರಿಮ್ಯಾಂಡ್ ಅಪ್ಲಿಕೇಷನ್‌ನಲ್ಲಿ ಇದೆಯಾ? ರಿಮ್ಯಾಂಡ್ ಅಪ್ಲಿಕೇಷನ್‌ನಲ್ಲಿ ಎಲ್ಲಿ ಇದೆ ಓದಿ ಹೇಳಿ ಎಂದು ಕೇಳಿದರು. ಈ ವೇಳೆ ಎಸ್‌ಪಿಪಿಗೆ ಮಾಹಿತಿ ನೀಡುತ್ತಿದ್ದ ಎಸ್‌ಐಟಿ ಪೊಲೀಸರ ವಿರುದ್ಧ ಜಡ್ಜ್ ಗರಂ ಆದರು. ನಿಮಗೆ ಎಲ್ಲಿ ಬಂದು ಇನ್ಸ್‌ಟ್ರಕ್ಷನ್‌ ಕೊಡಬೇಕು ಅಂತಾ ಗೊತ್ತಾಗಲ್ವಾ? ಕೋರ್ಟ್‌ನಲ್ಲಾ ಬಂದು ಇನ್ಸ್‌ಟ್ರಕ್ಷನ್‌ ಕೊಡೋದು? ಎಂದು ಕೇಳಿದರು.

ಮತ್ತೆ ಲಿಖಿತ ವಾದ ಮಂಡಿಸಲು ಎಸ್‌ಪಿಪಿ ಜಯ್ನಾ ಕೊಠಾರಿ ಮನವಿ ಮಾಡಿದರು. ಆದಕ್ಕೆ ಪ್ರತಿಕ್ರಿಯಿಸಿದ ಜಡ್ಜ್ ಲಿಖಿತ ವಾದ ಇನ್ಯಾವಾಗ ಮಾಡ್ತೀರಾ? ನಾನು ಆದೇಶ ಪ್ರಕಟಿಸಲಿದ್ದೇನೆ ಎಂದು ನ್ಯಾಯಾಧೀಶರಾದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಹೇಳಿದರು.

Continue Reading

ಶಿಕ್ಷಣ

SSLC Result : ರಾಜ್ಯ ಶಿಕ್ಷಣ ಗುಣಮಟ್ಟ ಕುಸಿತ, ICSE-CBSE ಕಡೆ ವಲಸೆ; ಇಲಾಖೆ ವಿರುದ್ಧ ಕ್ಯಾಮ್ಸ್‌ ಕಟು ಟೀಕೆ

Education News : ಶಿಕ್ಷಣ ಇಲಾಖೆ ವಿರುದ್ಧ ಕ್ಯಾಮ್ಸ್‌ ಸಂಘಟನೆ ಆಕ್ರೋಶ ಹೊರಹಾಕಿದೆ. ಗುಣಮಟ್ಟ ಶಿಕ್ಷಣ ಕಾಪಾಡದೇ ಇರುವುದರಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ (SSLC Result)ಕುಸಿತ ಉಂಟಾಗಿದೆ. ಗುಣಮಟ್ಟದ ಪಠ್ಯ ಪುಸ್ತಕ ರಚನೆ ಆಗದೇ ಇದ್ದರೆ ಪೋಷಕರು ಅನಿವಾರ್ಯವಾಗಿ CBSE-ICSE ಕಡೆ ಹೋಗುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದೆ.

VISTARANEWS.COM


on

By

sslc result
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಯಿಂದ ಪ್ರಸ್ತುತ ಪ್ರಾಥಮಿಕ ಹಾಗೂ ಪ್ರೌಢ ಹಂತದಲ್ಲಿ ಕಲಿಕೆಯ ಗುಣ ಮಟ್ಟ ಕುಸಿದಿದೆ (SSLC Result) ಎಂದು ಖಾಸಗಿ ಶಾಲಾ ಒಕ್ಕೂಟ (ಕ್ಯಾಮ್ಸ್) ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಅಸಮಾಧಾನ ಹೊರಹಾಕಿದ್ದಾರೆ.

ಗುಣಮಟ್ಟ ಹೆಚ್ಚಿಸುವಲ್ಲಿ ಯಾವುದೇ ಹೆಚ್ಚು ಪರಿಣಾಮಕಾರಿಯಾಗಿ ರೂಪುರೇಷಗಳನ್ನು ಮಾಡುತ್ತಿಲ್ಲ. ಬದಲಿಗೆ ಶಿಕ್ಷಣ ಇಲಾಖೆ ದಿನಕ್ಕೊಂದು ನಿಯಮಗಳನ್ನು ಮಾಡುತ್ತಿದೆ. ಆದರೆ ತಾವೇ ನಡೆಸುವ ಸರ್ಕಾರಿ ಶಾಲೆಗಳಲ್ಲಿ ಅನುಷ್ಠಾನ ಮಾಡದೇ, ಕೇವಲ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ನಿಯಮ ಎಂಬಂತೆ ವರ್ತಿಸುತ್ತಿದೆ ಎಂದು ಶಶಿಕುಮಾರ್‌ ಆಕ್ರೋಶ ಹೊರಹಾಕಿದರು.

SSLC result Kams shashikumar
ಪ್ರಧಾನ ಕಾರ್ಯದರ್ಶಿ ಶಶಿಕುಮಾರ್‌

ಸುಖಾಸುಮ್ಮನೆ ಕಿರುಕುಳ, ದಬ್ಬಾಳಿಕೆ ಹಾಗೂ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಂಡು ಕೆಳ ಹಂತದ ಅಧಿಕಾರಿಗಳು ಲಾಭ ಪಡೆಯುತ್ತಿದ್ದಾರೆ. ಬಿಇಒ (BEO) ಹಾಗೂ ಡಿಡಿಪಿಐ (DDPI) ಹಂತದ ಎಲ್ಲ ಅಧಿಕಾರಿಗಳು ಕೇವಲ ಆಡಳಿತಾತ್ಮಕ ವ್ಯವಹಾರಗಳನ್ನು ಮಾಡುತ್ತಾ, ಸರ್ಕಾರಿ ಶಾಲೆಗಳಲ್ಲಿ ಯಾವುದೇ ಗುಣಮಟ್ಟದ ಬಗ್ಗೆ ಕ್ರಮ ವಹಿಸದೇ ಇರುವುದೇ ಫಲಿತಾಂಶ ಕುಸಿಯಲು ಕಾರಣ ಎಂದು ಕಿಡಿಕಾರಿದರು.

ಸೋಮವಾರ ಸುದ್ಧಿಗೋಷ್ಠಿ ನಡೆಸಿದ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್, ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಪ್ರಾಥಮಿಕ ಹಂತದಲ್ಲೆ ಶಿಕ್ಷಣ ಗುಣಮಟ್ಟ ಕಾಪಾಡದೇ ಇರುವುದರಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಕುಸಿತ ಉಂಟಾಗಿದೆ. 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಿರಾಶದಾಯವಾಗಿದೆ.

ಸಿಸಿಟಿವಿ ಹಾಕಿದ್ದಕ್ಕೆ ಫಲಿತಾಂಶ ಕಡಿಮೆ ಬಂದಿದೆ ಎಂದು ಶಾಲಾ ಶಿಕ್ಷಣ ಇಲಾಖೆಯೇ ಒಪ್ಪಿಕೊಂಡಿದೆ. ಅಧಿಕಾರಿಗಳ ಬಳಿ ಚರ್ಚೆ ಮಾಡಿದಾಗ, ಮಕ್ಕಳು ತುಂಬಾ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ ಅವರನ್ನು ಪಾಸ್ ಮಾಡಬೇಕು ಎಂದಿದ್ದರು. ಹತ್ತಾರು ವರ್ಷಗಳಿಂದ ಶಾಲೆಯಲ್ಲಿ ಕಲಿತರೂ 10ನೇ ತರಗತಿಗೆ ಬಂದಾಗ ಕನಿಷ್ಠ 25 ಅಂಕ ಗಳಿಸಲು ಆಗದ ಮಕ್ಕಳ ಸಂಖ್ಯೆ ಹೆಚ್ಚುತ್ತಿರುವುದಕ್ಕೆ ಸರ್ಕಾರವೇ ಕಾರಣ. ಇದಕ್ಕೆ ಪರಿಹಾರ ಹುಡುಕುವ ಬದಲು ಮಕ್ಕಳ ಹಿತದೃಷ್ಟಿಯ ಹೆಸರಲ್ಲಿ ಗ್ರೇಸ್‌ ಅಂಕದ ಪ್ರಮಾಣ ಹೆಚ್ಚಿಸುತ್ತಿರುವುದು ಸರಿಯಲ್ಲ ಎಂದರು.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್, ವಿಡಿಯೊ ಇದ್ದವರನ್ನೆಲ್ಲ ಬಂಧಿಸ್ತಾರಾ?; ಆಪ್ತರ ಬಂಧನದ ಬಗ್ಗೆ ಪ್ರೀತಂ ಗೌಡ ಫಸ್ಟ್‌ ರಿಯಾಕ್ಷನ್

ಗುಣಮಟ್ಟದ ಪಠ್ಯ ಪುಸ್ತಕ ಇಲ್ಲದೆ CBSE-ICSE ಕಡೆ ವಲಸೆ

ಅಹಿಂದ ಸೇರಿ ಎಲ್ಲಾ ವರ್ಗದ ಜನರ ಪರ ಇರುವ ಸಿಎಂ ಸಿದ್ದರಾಮಯ್ಯರಿಗೆ ಕ್ಯಾಮ್ಸ್‌ನಿಂದ ಮನವಿ ಮಾಡುತ್ತೇವೆ. ಪ್ರತಿ ಮಗುವಿಗೂ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಬಲಪಡಿಸಬೇಕು. ಪ್ರತಿ ಬಾರಿ ಪಠ್ಯಕ್ರಮವು ರಾಜಕೀಯವಾಗಿ ಪರಿಷ್ಕರಣೆ ಮಾಡುತ್ತಿದೆ. ಕಳೆದ 10 ವರ್ಷಗಳಿಂದ ಇದೇ ರೀತಿ ನಡೆದುಕೊಂಡು ಬರುತ್ತಿದೆ. ಶಿಕ್ಷಣ ಇಲಾಖೆಯಿಂದ ಗುಣಮಟ್ಟದ ಪಠ್ಯ ಪುಸ್ತಕ ರಚನೆ ಆಗದೇ ಇದ್ದಲ್ಲಿ ಇದರ ಅಡ್ಡಪರಿಣಾಮ ಮುಂದೆ ಅನುಭವಿಸಬೇಕಾಗುತ್ತೆ.

ಮಕ್ಕಳಿಗೆ ಬೇಕಾದಂತಹ ಸಂಯೋಜಿತ ಪಠ್ಯ ರಚನೆಯಾಗದೆ ಇದ್ದರೆ, ಪೋಷಕರು ಅನಿವಾರ್ಯವಾಗಿ CBSE-ICSE ಕಡೆ ಹೋಗಬೇಕಾಗುತ್ತದೆ. ಶಿಕ್ಷಣ ಇಲಾಖೆಯು ಗುಣಮಟ್ಟ ಶಿಕ್ಷಣ ಕಾಪಾಡದಿರುವ ಪರಿಣಾಮ, ಇದನ್ನು ತಕ್ಷಣ ಸರಿ ಪಡಿಸಬೇಕು.ಈ ಮೂಲಕ ರಾಜ್ಯದ ವಿದ್ಯಾರ್ಥಿಗಳು ನೆರೆಹೊರೆ ರಾಜ್ಯದ ಪಠ್ಯಕ್ಕೆ ಪೂರಕವಾಗಿ ರಾಷ್ಟ್ರಮಟ್ಟದ ಶಿಕ್ಷಣದ ಪೈಪೋಟಿಗೆ ಸಿದ್ದ ಮಾಡುವುದು ಸರ್ಕಾರದ ಆದ್ಯ ಜವಾಬ್ದಾರಿಯಾಗಿದೆ ಎಂದರು.

ಶಿಕ್ಷಣ ಸಚಿವರು ಯಾರು ಎಂಬುದೇ ಗೊಂದಲ

ಪ್ರಸ್ತುತ ಶಿಕ್ಷಣ ವ್ಯವಸ್ಥೆ ಅತಂತ್ರ ಸ್ಥಿತಿಯಲ್ಲಿ ಇದೆ. ಇದಕ್ಕೆ ಇಲಾಖೆಯ ಮೇಲಾಧಿಕಾರಿಗಳು, ರಾಜಕೀಯ ಮುಖಂಡರು, ಸರ್ಕಾರ ಎಲ್ಲರೂ ಹೊಣೆಯಾಗಿದ್ದಾರೆ. ಶಿಕ್ಷಣ ಮಂತ್ರಿಗಳು ನಮಗೆ ಲಭ್ಯವೇ ಇರುವುದಿಲ್ಲ. ಸಚಿವರ ಪಿಎ ಅವರೇ ಮಂತ್ರಿಗಳ ರೀತಿ ವರ್ತನೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಶಿಕ್ಷಣ ಸಚಿವರು ಯಾರು ಎಂಬ ಅನುಮಾನ ಮೂಡುತ್ತೆ. ಕಾರಣ ಶಿಕ್ಷಣ ಸಚಿವರ ಆಪ್ತ ಕಾರ್ಯದರ್ಶಿ ಕಿಶೋರ್ ಅವರೇ ಸಚಿವರಾಗಿದ್ದಾರೆ. ಎಲ್ಲ ಪ್ರಶ್ನೆಗಳಿಗೆ ಸಚಿವರ ಆಪ್ತ ಕಾರ್ಯದರ್ಶಿ ಕಿಶೋರ್ ಉತ್ತರ ನೀಡುತ್ತಾರೆ ಇದು ನಿಜಕ್ಕೂ ಅತ್ಯಂತ ದುರಾದೃಷ್ಟಕರ ಎಂದು ಖಾಸಗಿ ಶಾಲೆಗಳ ಒಕ್ಕೂಟ ಸಿಡಿದೆದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Prajwal Revanna Case: ಪೆನ್‌ಡ್ರೈವ್, ವಿಡಿಯೊ ಇದ್ದವರನ್ನೆಲ್ಲ ಬಂಧಿಸ್ತಾರಾ?; ಆಪ್ತರ ಬಂಧನದ ಬಗ್ಗೆ ಪ್ರೀತಂ ಗೌಡ ಫಸ್ಟ್‌ ರಿಯಾಕ್ಷನ್

Prajwal Revanna Case: ಹಾಸನದಲ್ಲಿ ಬಹಳ ಜನರ ಬಳಿ ವಿಡಿಯೊ ಹರಿದಾಡುತ್ತಿದೆ. ವಿಡಿಯೊ ಇದ್ದವರನ್ನೆಲ್ಲ ಬಂಧನ ಮಾಡಕ್ಕಾಗುತ್ತಾ? ಚೇತನ್ ಗೌಡ ಬೇರೆ, ಚೇತನ್ ಬೇರೆ, ನಮ್ಮ ಕಚೇರಿಯಲ್ಲಿ 24 ವರ್ಷದ ಆ ಯುವಕ ಇದ್ದ, ಆತ ಅಮಾಯಕ ಎಂದು ಪ್ರೀತಂ ಗೌಡ ತಿಳಿಸಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣಕ್ಕೆ (Prajwal Revanna Case) ಸಂಬಂಧಿಸಿ ಇಬ್ಬರು ಆಪ್ತರನ್ನು ಬಂಧಿಸಿರುವ ಬಗ್ಗೆ ಮಾಜಿ ಶಾಸಕ ಪ್ರೀತಂ ಗೌಡ ಅವರು ಮೊದಲ ಬಾರಿ ಮಾಧ್ಯಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ನಮಗೂ ವಿಡಿಯೊಗೂ ಸಂಬಂಧ‌ ಇಲ್ಲ, ನೆನ್ನೆ ಅಮಾಯಕರ ಬಂಧ‌ನ ಆಗಿದೆ. ಹಾಸನದಲ್ಲಿ ಯುವಕರಿಂದ ಮುದುಕರವರೆಗೆ ಎಲ್ಲರ ಬಳಿಯೂ ವಿಡಿಯೊಗಳಿವೆ. ಪೆನ್‌ಡ್ರೈವ್ ಇದೆ, ವಿಡಿಯೊ ಇದೆ ಅಂತ ವಶಕ್ಕೆ ತೆಗೆದುಕೊಳ್ಳುತ್ತಾ ಹೋದರೆ ಹಾಸನದಲ್ಲಿ ಅಂತಹ 1.5 ಲಕ್ಷ ಜನರನ್ನು ವಶಕ್ಕೆ ತೆಗೆದುಕೊಳ್ಳಬೇಕಾಗುತ್ತದೆ ಎಂದು ಮಾಜಿ ಶಾಸಕ ಪ್ರೀತಂ ಗೌಡ ತಿಳಿಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನದಲ್ಲಿ ಹೀಗಾಗಬಾರದಿತ್ತು ಎಂದು ಹಲವರು‌ ಹೇಳುತ್ತಾರೆ. ನಾನು ಕೂಡ ವಿಡಿಯೊ ಸಿಕ್ಕಿದರೆ ಸರ್ಕ್ಯುಲೇಟ್ ಮಾಡಬೇಡಿ, ಇಟ್ಟುಕೊಳ್ಳಬೇಡಿ, ಅದು ನೀಚ ಕೆಲಸ ಎಂದು ಹೇಳುತ್ತಿರುತ್ತೇನೆ. ನಮಗೆ ಜವಾಬ್ದಾರಿ ಇದೆ, ವಿಡಿಯೊ ಹಂಚಬೇಡಿ, ಡಿಲೀಟ್ ಮಾಡಿ ಎಂತಲೇ ನಮ್ಮ ಕಾರ್ಯಕರ್ತರಿಗೂ ಹೇಳಿದ್ದೀನಿ ಎಂದು ಹೇಳಿದರು.

ಇದನ್ನೂ ಓದಿ | Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್;‌ ಸಿಬಿಐಗೆ ಏಕೆ ಕೊಡಲ್ಲ ಎಂದು ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ಹಾಸನದಲ್ಲಿ ಬಹಳ ಜನರ ಬಳಿ ವಿಡಿಯೊ ಹರಿದಾಡುತ್ತಿದೆ. ವಿಡಿಯೊ ಇದ್ದವರನ್ನೆಲ್ಲ ಬಂಧನ ಮಾಡಕ್ಕಾಗುತ್ತಾ? ಚೇತನ್ ಗೌಡ ಬೇರೆ, ಚೇತನ್ ಬೇರೆ. ನಮ್ಮ ಕಚೇರಿಯಲ್ಲಿ 24 ವರ್ಷದ ಆ ಯುವಕ ಇದ್ದ, ಆತ ಅಮಾಯಕ. ಅವನ ಬಳಿ ಹೇಗೋ ವಿಡಿಯೋ ಬಂದಿರುತ್ತೆ, ಅದೇ ಅಪರಾಧ ಅಂದರೆ, ಹಾಸನದಲ್ಲಿ ಯುವಕರಿಂದ ಮುದುಕರವರೆಗೆ ಎಲ್ಲರ ಬಳಿಯೂ ಇದೆ. ವಿಡಿಯೊ, ಪೆನ್‌ಡ್ರೈವ್ ಇದೆ ಅನ್ನೋದೇ ಮಾನದಂಡವಾದರೆ ವಿಡಿಯೊ ಇರೋರೆಲ್ಲ ತಪ್ಪಿತಸ್ಥರಾ ಎಂದು ಪ್ರಶ್ನಿಸಿದ್ದಾರೆ.

ಏ.23 ರಂದು ಲಾಯರ್ ಪೆನ್‌ಡ್ರೈವ್ ತಂದು ಕೊಟ್ಟರು. ಹಾಗಂತ ಆ ಲಾಯರ್ ಮೇಲೆ ಕೇಸ್ ಹಾಕಲು ಆಗುತ್ತಾ? ಎಲೆಕ್ಷನ್ ಏಜೆಂಟ್ ಪೆನ್‌ಡ್ರೈವ್ ಸಿಕ್ಕಿತು ಎಂದು ತಂದುಕೊಟ್ಟರು, ಹಾಗಂತ ಅವರ ಮೇಲೂ ಕೇಸ್ ಮಾಡಕ್ಕಾಗುತ್ತಾ? ಆ ರೀತಿಯಾದರೆ ಹದಿನೈದು ಲಕ್ಷ ಜನರ ಮೇಲೆ ಕೇಸ್ ಹಾಕಬೇಕಾಗುತ್ತದೆ. ಈ ವಿಚಾರದಲ್ಲಿ ಅಮಾಯಕರು ಬಂಧನ ಆಗಬಾರದು ಎಂದು ತಿಳಿಸಿದ್ದಾರೆ.

ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಹೇಳಲ್ಲ, ಆದರೆ ತನಿಖೆ ದಿಕ್ಕು ಸರಿಯಾಗಿ ನಡೆಯಲಿ. ಪ್ರಜ್ವಲ್ ಪ್ರಕರಣದಲ್ಲಿ ನನ್ನದು ಯಾವಾಗಲೂ ನೋ ಕಾಮೆಂಟ್. ವಿಡಿಯೊ ಬಗ್ಗೆ ಮೊದಲು ಯಾರು ಮಾಹಿತಿ ಕೊಟ್ಟರೋ ಅವರನ್ನೇ ಕೇಳಲಿ. ಯಾರು ಮಾಹಿತಿ ಕೊಟ್ಟು? ವಿಡಿಯೊ ಮಾಡಿಕೊಂಡವರು ಯಾರು? ಎಂಬುವುದು ತಿಳಿಯಬೇಕು. ಒಂದು ವರ್ಷದಿಂದಲೇ ವಿಡಿಯೊ ಹರಿದಾಡುತ್ತಿದೆ ಎಂದು ಹೇಳಲಾಗುತ್ತಿದೆ. ಒಂದು ವರ್ಷದ ಹಿಂದೆಯೇ ಕ್ರಮ ಕೈಗೊಳ್ಳಬೇಕಿತ್ತು. ಈಗ ಚರ್ಚೆ ಮಾಡಿದರೆ ಏನು ಪ್ರಯೋಜನ? ಸಂತ್ರಸ್ತರ ಬಗ್ಗೆಯೂ ಯೋಚಿಸಬೇಕು. ಯಾವ ದಿಕ್ಕಿನಲ್ಲಿ ತನಿಖೆ ಆಗಬೇಕೋ ಆ ದಿಕ್ಕಿನಲ್ಲಿ ಆಗಲಿ ಎಂದು ಹೇಳಿದರು.

ಇದನ್ನೂ ಓದಿ | Prajwal Revanna Case: ಪೆನ್‌ ಡ್ರೈವ್‌ ಹಂಚಿಕೆ ಆರೋಪ ಮಾಡಿದ್ದ ನವೀನ್‌ ಗೌಡ ಮೇಲೆ ಶಾಸಕ ಮಂಜು ದೂರು

ಹಾಸನದಲ್ಲಿ ಇಂಥ ಪ್ರಕರಣ ಆಗಬಾರದಿತ್ತು, ಆಗಿ ಹೋಗಿದೆ. ಎಲ್ಲರೂ ಸಾಮಜಿಕ ಬದ್ಧತೆ ತೋರಿಸಬೇಕು. ಯಾರೂ ಅಶ್ಲೀಲ ವಿಡಿಯೊ ಹಂಚಬಾರದು ಎಂದು ಪ್ರೀತಂ ಗೌಡ ತಿಳಿಸಿದ್ದಾರೆ.

Continue Reading

ರಾಜಕೀಯ

Karnataka Politics: ಆಪರೇಶನ್ ಕಮಲ ಆಗೋಕೆ ಸಾಧ್ಯಾನೇ ಇಲ್ಲ; ಇದು ಬಿಜೆಪಿಯ ಹಗಲುಗನಸು: ಸಿಎಂ ಸಿದ್ದರಾಮಯ್ಯ

Karnataka Politics: ಈಗಾಗಲೇ ಕಳೆದ ಒಂದು ವರ್ಷದಿಂದ ಇಂಥ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ. ಇನ್ನೊಂದು ಬಾರಿ ಏಕೆ ಪ್ರಯತ್ನಿಸುತ್ತಾರೆ? ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ. ಮಹಾರಾಷ್ಟ್ರದಲ್ಲಿ ಆದಂತೆ ಕರ್ನಾಟಕದಲ್ಲಿ ಆಗಲು ಸಾಧ್ಯವಿಲ್ಲ ಎಂದ ಸಿಎಂ ಸಿದ್ದರಾಮಯ್ಯ, ರಾಜಕೀಯ ದ್ರವೀಕರಣ ಕಾರಣವಾಗಬಹುದೇ ಎಂಬ ಸುದ್ದಿಗಾರರ ಪ್ರಶ್ನೆಗೆ, ಕಾಂಗ್ರೆಸ್ ನೇತೃತ್ವದ ಇಂಡಿಯಾ ಗೆಲ್ಲಲಿದ್ದು ನಮ್ಮವರೇ ಪ್ರಧಾನ ಮಂತ್ರಿಯಾಗಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದರು.

VISTARANEWS.COM


on

Karnataka Politics Operation Kamala is not possible says CM Siddaramaiah
Koo

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ (Karnataka Politics) ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ (Operation Kamala) ಮಾಡಲು ಸಾಧ್ಯವಿಲ್ಲ. ಏಕೆಂದರೆ ಈ ಬಾರಿ ಎನ್‌ಡಿಎ ಸೋಲಲಿದೆ. ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು.

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ ಎಂದು ಸ್ಪಷ್ಟನೆ ನೀಡಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ. ಮಹಾರಾಷ್ಟ್ರದಲ್ಲಿ ಆದಂತೆ ಆಪರೇಶನ್ ಕಮಲ ನಡೆಯಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ (Maharashtra CM Eknath Shinde) ಹೇಳಿಕೆ ಬಗ್ಗೆ ಸಿಎಂ ಈ ಪ್ರತಿಕ್ರಿಯೆ ನೀಡಿದರು.

ಈಗಾಗಲೇ ಕಳೆದ ಒಂದು ವರ್ಷದಿಂದ ಇಂಥ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ. ಇನ್ನೊಂದು ಬಾರಿ ಏಕೆ ಪ್ರಯತ್ನಿಸುತ್ತಾರೆ? ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ. ಮಹಾರಾಷ್ಟ್ರದಲ್ಲಿ ಆದಂತೆ ಕರ್ನಾಟಕದಲ್ಲಿ ಆಗಲು ಸಾಧ್ಯವಿಲ್ಲ ಎಂದ ಸಿಎಂ ಸಿದ್ದರಾಮಯ್ಯ, ರಾಜಕೀಯ ದ್ರವೀಕರಣ ಕಾರಣವಾಗಬಹುದೇ ಎಂಬ ಸುದ್ದಿಗಾರರ ಪ್ರಶ್ನೆಗೆ, ಕಾಂಗ್ರೆಸ್ ನೇತೃತ್ವದ ಇಂಡಿಯಾ ಗೆಲ್ಲಲಿದ್ದು ನಮ್ಮವರೇ ಪ್ರಧಾನ ಮಂತ್ರಿಯಾಗಲಿದ್ದಾರೆ ಎಂದು ಉತ್ತರಿಸಿದರು.

ನಮ್ಮ ಅಭ್ಯರ್ಥಿಗಳು ಗೆಲ್ಲಲಿದ್ದಾರೆ

ಪದವೀಧರರ ಕ್ಷೇತ್ರದಿಂದ ರಾಮೋಜಿ ಗೌಡ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಬಿ. ಟಿ.ಶ್ರೀನಿವಾಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾನು, ಕೆ.ಎಚ್. ಮುನಿಯಪ್ಪ, ರಾಮಲಿಂಗಾರೆಡ್ಡಿ, ಮಧು ಬಂಗಾರಪ್ಪ, ನಜೀರ್ ಅಹ್ಮದ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಜತೆಯಲ್ಲಿದ್ದೇವೆ. ನಮ್ಮ ಮಾಹಿತಿ ಪ್ರಕಾರ ಎರಡೂ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ. ಈ ಬಾರಿ ಕಾಂಗ್ರೆಸ್ ಪಕ್ಷ ಆರು ತಿಂಗಳು ಮುಂಚಿತವಾಗಿಯೇ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದೆವು. ಈಗಾಗಲೇ ಎಲ್ಲ ಮತದಾರರನ್ನು ಭೇಟಿಯಾಗಿ ಮನವಿ ಮಾಡಿಕೊಂಡಿದ್ದಾರೆ. ಇಬ್ಬರೂ ಸಮರ್ಥ ಅಭ್ಯರ್ಥಿಗಳು. ಶ್ರೀನಿವಾಸ್ ಅವರು ಶಿಕ್ಷಕರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರ ಧ್ವನಿಯಾಗಿ ಕೆಲಸ ಮಾಡುವ ಸಾಮರ್ಥ್ಯ ಉಳ್ಳವರು. ರಾಮೋಜಿ ಗೌಡ ಅವರೂ ಶಿಕ್ಷಕರಾಗಿ ಕೆಲಸ ಮಾಡಿದ್ದವರು. ಅವರಿಗೂ ಪದವೀಧರರ ಸಮಸ್ಯೆಗಳ ಬಗ್ಗೆ ಅರಿವಿದೆ. ಅವುಗಳನ್ನು ಬಗೆಹರಿಸುವ ಶಕ್ತಿ ಅವರಿಗಿದೆ. ಹಾಗಾಗಿ ಇಬ್ಬರೂ ಅಭ್ಯರ್ಥಿಗಳೂ ಗೆಲ್ಲಲಿದ್ದಾರೆ ಎಂದರು.

ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನ? ಏಕನಾಥ್‌ ಶಿಂಧೆ ಮಹತ್ವದ ಸುಳಿವು!

ರಾಜ್ಯ ಕಾಂಗ್ರೆಸ್ (Karnataka Congress) ಸರ್ಕಾರದ ಪತನಕ್ಕೆ (Karnataka politics) ಸಮಯ ಸನ್ನಿಹಿತವಾಗಿದೆ. ಈ ಸಂದರ್ಭದಲ್ಲಿ ತನ್ನ ನೆರವನ್ನು ರಾಜ್ಯದ ಬಿಜೆಪಿ (BJP) ನಾಯಕರು ಕೋರಿದ್ದಾರೆ ಎಂಬ ಸುಳಿವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ (Maharashtra CM Eknath Shinde) ಬಿಟ್ಟುಕೊಟ್ಟಿದ್ದಾರೆ. ರಾಜ್ಯದಲ್ಲಿ ನಡೆದ ಒಂದು ಸಭೆಯಲ್ಲಿ ನಡೆದ ಚರ್ಚೆಯ ಬಗ್ಗೆ ಮಾತನಾಡಿ ಅವರು ಈ ಸೂಚನೆ ನೀಡಿದ್ದಾರೆ.

ಅತ್ತ ಬಿಜೆಪಿ ನಾಯಕರಿಂದಲೂ ಪದೇ ಪದೆ ಸರ್ಕಾರ ಬೀಳಿಸುವ ಕುರಿತ ಹೇಳಿಕೆ ಬರುತ್ತಿರುವ ಹಿನ್ನೆಲೆಯಲ್ಲಿ, ಮಹಾರಾಷ್ಟ್ರ ಸಿಎಂ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಮಹಾರಾಷ್ಟ್ರದ ಸತಾರಾದಲ್ಲಿ ನಡೆದ ಒಂದು ಸಭೆಯಲ್ಲಿ ಕರ್ನಾಟಕ ಸರ್ಕಾರದ ಬಗ್ಗೆ ಅವರು ಮಾತನಾಡುತ್ತಿದ್ದರು. “ಕರ್ನಾಟಕ ಸರ್ಕಾರ ಬೀಳುವುದು ಖಚಿತ” ಎಂದು ಏಕನಾಥ ಶಿಂಧೆ ಹೇಳಿದ್ದಾರೆ. “ಈ ಕುರಿತು ನನ್ನ‌ ಅನುಭವ ಬೇಕು ಅಂತ ಹೇಳಿದ್ದಾರೆ” ಎಂದು ಶಿಂಧೆ ತಿಳಿಸಿದ್ದಾರೆ.

ರಾಜ್ಯದಲ್ಲಿ ನಡೆದ ಒಂದು ಸಭೆಯಲ್ಲಿ ಚರ್ಚೆಯಾದ ಗುಟ್ಟನ್ನು ಅವರು ಈ ಮೂಲಕ ಬಿಟ್ಟುಕೊಟ್ಟಿದ್ದಾರೆ ಎನ್ನಲಾಗಿದೆ. “ನಾನು ಇತ್ತೀಚೆಗೆ ಕರ್ನಾಟಕದ ಒಂದು ಸಭೆಗೆ ಹೋಗಿದ್ದೆ. ಕರ್ನಾಟಕದಲ್ಲಿಯೂ ʼಆಪರೇಶನ್‌ ನಾಥʼ ನಡೆಸುವುದಿದೆ ಎಂದು ಅಲ್ಲಿನ ನಾಯಕರು ಹೇಳಿದರು. ಹಾಗೆಂದರೇನು ಎಂದು ವಿಚಾರಿಸಿದಾಗ, ಮಹಾರಾಷ್ಟ್ರದಲ್ಲಿ ಹಿಂದಿನ ಸರ್ಕಾರ ಪತನ ಮಾಡಿದಂತೆ ಇಲ್ಲಿಯೂ ಮಾಡುವುದಿದೆ ಎಂದಿದ್ದರು. ಅದಕ್ಕೆ ನಿಮ್ಮ ಅನುಭವ ಅಗತ್ಯ ಎಂದಿದ್ದರುʼʼ ಎಂದು ಶಿಂಧೆ ಹೇಳಿದ್ದಾರೆ. ಇದಕ್ಕಾಗಿ ಚುನಾವಣೆ ಮುಗಿದ ಮೇಲೆ ಮತ್ತೆ ನಾನು ಕರ್ನಾಟಕಕ್ಕೆ ಬರುತ್ತೇನೆ ಎಂದಿದ್ದೇನೆ ಎಂದವರು ಹೇಳಿದ್ದಾರೆ.

ಶುಕ್ರವಾರ ಬೆಂಗಳೂರಿನಲ್ಲಿ ಮಾತನಾಡುತ್ತ ರಾಜ್ಯ ವಿಪಕ್ಷ ನಾಯಕ ಆರ್. ಅಶೋಕ್ ಅವರು, “ಈ ಸರ್ಕಾರಕ್ಕೆ ಆಯುಷ್ಯವಿಲ್ಲ” ಎಂದಿದ್ದರು. ಅದಕ್ಕೂ ಮೊದಲು ಬೆಳಗಾವಿಯಲ್ಲಿ “ಈ ಸರ್ಕಾರ ಲೋಕಸಭಾ ಚುನಾವಣೆ ಬಳಿಕ ಬೀಳುವುದು ಖಚಿತ” ಎಂದು ರಮೇಶ್ ಜಾರಕಿಹೊಳಿ ಹೇಳಿದ್ದರು. ಇದೀಗ ಶಿಂಧೆ ಹೇಳಿಕೆ ಇನ್ನಷ್ಟು ಕುತೂಹಲ ಮೂಡಿಸಿದೆ.

ಆದರೆ, ಈ ಹೇಳಿಕೆಗಳ ಅಸಲಿಯತ್ತಿನ ಬಗ್ಗೆ ಅನುಮಾನ ಮೂಡುವಂತಿದೆ. ಸದ್ಯ ಕಾಂಗ್ರೆಸ್‌ ವಿಧಾನಸಭೆಯಲ್ಲಿ 136 ಸ್ಥಾನ ಹೊಂದಿದ್ದು, ಬಹುಮತ ಹೊಂದಿದೆ. ಒಟ್ಟು 224 ಶಾಸಕ ಸ್ಥಾನಗಳಲ್ಲಿ ಬಿಜೆಪಿ ಕೇವಲ 66 ಸ್ಥಾನ ಹೊಂದಿದ್ದು, ಜೆಡಿಎಸ್‌ 19 ಶಾಸಕ ಬಲ ಹೊಂದಿದೆ. ಎರಡೂ ಪಕ್ಷಗಳು ಒಟ್ಟಾದರೂ 85 ಸ್ಥಾನಗಳು ಆಗುತ್ತವೆ. ಇದು ಬಹುಮತದ ಹತ್ತಿರಕ್ಕೂ ಬರುವುದಿಲ್ಲ. ಹೀಗಿರುವಾಗ ಕಾಂಗ್ರೆಸ್ ಸರ್ಕಾರ ಬೀಳಿಸುವುದು ಅಷ್ಟೊಂದು ಸುಲಭವಲ್ಲ.

ಹಾಗಾದರೆ ಇದು ಕೇವಲ ರಾಜಕೀಯ ಹೇಳಿಕೆಯಾ? ಇಲ್ಲದಿದ್ದರೆ 45 ಶಾಸಕರನ್ನು ಸೆಳೆದು ಸರ್ಕಾರ ಪತನ ಮಾಡುವುದು ಅಷ್ಟೊಂದು ಸುಲಭವಾ? ಅತೃಪ್ತ ಶಾಸಕರನ್ನು ಸೆಳೆದು ಸರ್ಕಾರ ಬೀಳಿಸುವ ಸರ್ಕಸ್ ಶುರು ಮಾಡುತ್ತಾರಾ? ಸಿಎಂ ಆಗುವ ಕನಸು ಕಾಣುತ್ತಿರುವ ನಾಯಕನಿಗೆ ಬಿಜೆಪಿ ಗಾಳ ಹಾಕಲಿದೆಯಾ? ರಾಜ್ಯದಲ್ಲೂ ಒಬ್ಬ ಶಿಂಧೆಯನ್ನು ಕಾಂಗ್ರೆಸ್‌ನಲ್ಲಿ ಬಿಜೆಪಿ ಹುಟ್ಟು ಹಾಕಲಿದೆಯಾ? ಹಾಗಿದ್ದರೆ ಅಂಥವರು ಯಾರು? ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆದ್ದು ದೆಹಲಿಯಲ್ಲಿ ಅಧಿಕಾರ ಹಿಡಿದರೆ ರಾಜ್ಯದಲ್ಲೂ ಕಾಂಗ್ರೆಸ್‌ನೊಳಗೆ ಬಂಡಾಯ ಖಚಿತವಾ? ರಾಜ್ಯ ಕಾಂಗ್ರೆಸ್‌ನಲ್ಲಿ ಶಿಂಧೆಗಾಗಿ ಹುಡುಕಾಟ ನಡೆದಿದೆಯಾ? ಮುಂತಾದ ಪ್ರಶ್ನೆಗಳು ಈಗ ಎದ್ದಿವೆ.

ಇದನ್ನೂ ಓದಿ: Lok Sabha election 2024: 4ನೇ ಹಂತದ ಮತದಾನ..ಮೈತ್ರಿಕೂಟದಲ್ಲಿ ಬಿಕ್ಕಟ್ಟು ನೂರು.. ಗೆಲುವಿನ ಲೆಕ್ಕಾಚಾರದಲ್ಲಿ ಎನ್‌ಡಿಎ ಮತ್ತು ಇಂಡಿಯಾ

ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಶಿವಸೇನೆ 2019ರ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದವು. ಬಿಜೆಪಿ 105 ಸ್ಥಾನಗಳನ್ನು ಹಾಗೂ ಶಿವಸೇನೆ 56 ಸ್ಥಾನಗಳನ್ನು ಗೆದ್ದಿದ್ದವು. ಸರ್ಕಾರ ರಚನೆಯ ಸಂದರ್ಭದಲ್ಲಿ ಬಿರುಕು ಉಂಟಾಗಿತ್ತು. ಬಳಿಕ ಶಿವಸೇನೆ, ಎನ್‌ಸಿಪಿ ಹಾಗೂ ಕಾಂಗ್ರೆಸ್‌ ಸೇರಿ ಸರ್ಕಾರ ರಚಿಸಿದ್ದವು. ನಂತರ ಶಿವಸೇನೆ ನಾಯಕ ಏಕನಾಥ ಶಿಂಧೆ ಮೂರನೇ ಎರಡರಷ್ಟು ಶಾಸಕರ ಜೊತೆಗೆ ಹೊರಬಿದ್ದು ಬಿಜೆಪಿ ಜತೆ ಮೈತ್ರಿ ಮಾಡಿಕೊಂಡರು. ಇದರಿಂದ ಮಹಾ ವಿಕಾಸ್‌ ಅಘಾಡಿ ಸರ್ಕಾರ ಪತನವಾಗಿ ಬಿಜೆಪಿ- ಶಿವಸೇನೆ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಎನ್‌ಸಿಪಿಯ ಅಜಿತ್‌ ಪವಾರ್‌ ಕೂಡ ಇದಕ್ಕೆ ಕೈ ಜೋಡಿಸಿದ್ದರು.

Continue Reading
Advertisement
Overweight man suffering from chest pain, high blood pressure, cholesterol level
ಆರೋಗ್ಯ3 mins ago

Health Tips Kannada: ಅನಾರೋಗ್ಯದ ಮೂಲ ಕೊಲೆಸ್ಟ್ರಾಲ್‌ ತಗ್ಗಿಸಬೇಕೆ? ಬೆಳಗ್ಗೆ ಈ ಪೇಯ ಕುಡಿಯಿರಿ

Prajwal Revanna Case HD Revanna bail plea arguments and counter arguments
ಕ್ರೈಂ11 mins ago

Prajwal Revanna Case: ಎಚ್‌.ಡಿ. ರೇವಣ್ಣ ಜಾಮೀನು ಅರ್ಜಿಯ ರೋಚಕ ವಾದ – ಪ್ರತಿವಾದ; ಇಲ್ಲಿದೆ ಇಂಚಿಂಚು ಡಿಟೇಲ್ಸ್‌

IPL 2024
ಪ್ರಮುಖ ಸುದ್ದಿ13 mins ago

IPL 2024 : ಡೆಲ್ಲಿ ವಿರುದ್ದ ಗೆದ್ದ ಆರ್​ಸಿಬಿ ತಂಡದ ಸಂಭ್ರಮ ಹೀಗಿತ್ತು, ಇಲ್ಲಿದೆ ವಿಡಿಯೊ

Modi Roadshow Live
ದೇಶ18 mins ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Viral Video
ದೇಶ23 mins ago

Viral Video: ಜೊತೆಗಿದ್ದ ಬೆಂಬಲಿಗನನ್ನೇ ವೇದಿಕೆಯಿಂದ ತಳ್ಳಿದ ಲಾಲೂ ಪುತ್ರ; ಎಲ್ಲೆಡೆ ಭಾರೀ ಖಂಡನೆ

Naxals
ದೇಶ41 mins ago

Naxals: ಮತ್ತೆ ಮೂವರು ನಕ್ಸಲರ ಹತ್ಯೆ, ಎನ್‌ಕೌಂಟರ್‌ನಲ್ಲಿ ಈ ವರ್ಷ ಶತಕ ಬಾರಿಸಿದ ಭದ್ರತಾ ಸಿಬ್ಬಂದಿ!

sslc result
ಶಿಕ್ಷಣ45 mins ago

SSLC Result : ರಾಜ್ಯ ಶಿಕ್ಷಣ ಗುಣಮಟ್ಟ ಕುಸಿತ, ICSE-CBSE ಕಡೆ ವಲಸೆ; ಇಲಾಖೆ ವಿರುದ್ಧ ಕ್ಯಾಮ್ಸ್‌ ಕಟು ಟೀಕೆ

Pavithra Jayaram died in the accident may alive if the ambulance arrived
ಸಿನಿಮಾ49 mins ago

Pavithra Jayaram: ಪವಿತ್ರ ಜಯರಾಂಗೆ ಅಂತಿಮ ವಿದಾಯ; ಭಯದಲ್ಲೇ ಪ್ರಾಣ ಬಿಟ್ರಾ ನಟಿ?

Sequins partywear fashion
ಫ್ಯಾಷನ್49 mins ago

Sequins Partywear Fashion: ಪಾರ್ಟಿಪ್ರಿಯರಿಗೆ ಬಂತು ಮಿರಮಿರ ಮಿನುಗುವ ಸಿಕ್ವೀನ್ಸ್‌ ಔಟ್‌ಫಿಟ್ಸ್‌

Prajwal Revanna Case
ಕರ್ನಾಟಕ1 hour ago

Prajwal Revanna Case: ಪೆನ್‌ಡ್ರೈವ್, ವಿಡಿಯೊ ಇದ್ದವರನ್ನೆಲ್ಲ ಬಂಧಿಸ್ತಾರಾ?; ಆಪ್ತರ ಬಂಧನದ ಬಗ್ಗೆ ಪ್ರೀತಂ ಗೌಡ ಫಸ್ಟ್‌ ರಿಯಾಕ್ಷನ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi Roadshow Live
ದೇಶ18 mins ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ11 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ13 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ23 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ24 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ1 day ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ2 days ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

ಟ್ರೆಂಡಿಂಗ್‌