Fraud Case: ಬೆಳದಿಂಗಳ ಬಾಲೆಯ ಮೋಹಕ್ಕೆ ಬಿದ್ದರೇ ಸ್ವಾಮೀಜಿ? 35 ಲಕ್ಷ ರೂಪಾಯಿ ದೋಖಾ! - Vistara News

ಕರ್ನಾಟಕ

Fraud Case: ಬೆಳದಿಂಗಳ ಬಾಲೆಯ ಮೋಹಕ್ಕೆ ಬಿದ್ದರೇ ಸ್ವಾಮೀಜಿ? 35 ಲಕ್ಷ ರೂಪಾಯಿ ದೋಖಾ!

Facebook Fraud: ಕಬ್ಬಾಳ ಮಹಾಸಂಸ್ಥಾನದ ಶ್ರೀ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಫೇಸ್‌ಬುಕ್‌ನಲ್ಲಿ ಪರಿಚಯವಾದ ಯುವತಿಯೊಬ್ಬಳು 35 ಲಕ್ಷ ರೂಪಾಯಿ ವಂಚನೆ ಮಾಡಿರುವುದಾಗಿ ಪೊಲೀಸರಿಗೆ ದೂರು ನೀಡಲಾಗಿದೆ. ಅವರು ಮೋಸ ಹೋಗಿದ್ದು ಹೇಗೆ ಎಂಬ ವಿವರವನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

kabbala mahasamsthana mutt swamiji
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇತ್ತೀಚೆಗೆ ಸ್ವಾಮೀಜಿಗಳು ಹೆಣ್ಣಿನ ಪಾಶಕ್ಕೆ ಸಿಲುಕುತ್ತಿರುವ ಪ್ರಕರಣಗಳು ಆಗಾಗ ಕೇಳಿ ಬರುತ್ತಿವೆ. ಈಗ ಅದರ ಸಾಲಿಗೆ ಪ್ರಭಾವಿ ಮಠವಾದ ಕಬ್ಬಾಳ ಮಹಾಸಂಸ್ಥಾನದ ಶ್ರೀ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಸಿಲುಕಿದ್ದಾರೆ. ತಾವು ಯುವತಿಯೊಬ್ಬಳನ್ನು ನಂಬಿ 35 ಲಕ್ಷ ರೂಪಾಯಿಯನ್ನು ಕಳೆದುಕೊಂಡಿದ್ದಾಗಿ (Fraud Case) ಶ್ರೀಗಳು ದೂರು ನೀಡಿದ್ದಾರೆ. ಒಂದು ತಿಂಗಳು ರಹಸ್ಯವಾಗಿಯೇ ಇದ್ದ ಈ ಮಾಹಿತಿ ಈಗ ಬಹಿರಂಗವಾಗಿದೆ.

ವಿಡಿಯೊ ಕಾಲಿಂಗ್‌ನಲ್ಲೇ ನಂಬಿ ಮೋಸ ಹೋಗಿದ್ದಾಗಿ ಸ್ವಾಮೀಜಿ ದೂರಿನಲ್ಲಿ ತಿಳಿಸಿದ್ದು, ಮೂರ್ನಾಲ್ಕು ವರ್ಷದ ರಹಸ್ಯ ಈಗ ಬಯಲಾಗಿದೆ. ವಿಚಿತ್ರವೆಂದರೆ ಆಕೆಯ ಪರಿಚಯವೇ ತಮಗಿಲ್ಲ, ಕೇವಲ ವಿಡಿಯೊ ಕಾಲ್‌ ಸಂಪರ್ಕ ಮಾತ್ರ ಎಂದು ಸ್ವಾಮೀಜಿ ಹೇಳಿಕೊಂಡಿದ್ದಾರೆ. ಆದರೆ, ಆಕೆಯ ಮಾತನ್ನು ನಂಬಿ ಅನಾಮಿಕ ಯುವತಿಯ ಅಕೌಂಟ್‌ಗೆ ಲಕ್ಷ ಲಕ್ಷ ಹಣವನ್ನು ವರ್ಗಾವಣೆ ಮಾಡಿದ್ದಾರೆ.

Fraud case Woman dupes kabbala mahasamsthana mutt swamiji
ಸ್ವಾಮೀಜಿ ಅವರನ್ನು ಬ್ಲ್ಯಾಕ್‌ಮೇಲ್‌ ಮಾಡಲು ಬಂದ ಮಂಜುಳಾ ಮತ್ತವರ ತಂಡ

ಪೊಲೀಸರಿಂದ ರಹಸ್ಯ ತನಿಖೆ

ಕಬ್ಬಾಳ ಮಹಾಸಂಸ್ಥಾನದ ಶ್ರೀ ಚನ್ನವೀರ ಶಿವಾಚಾರ್ಯ ಸ್ವಾಮೀಜಿಯವರು ನೀಡಿದ ದೂರಿನ ಮೇರೆಗೆ ಬೆಂಗಳೂರು ಗ್ರಾಮಾಂತರ ಪೊಲೀಸರು ರಹಸ್ಯವಾಗಿಯೇ ತನಿಖೆ ನಡೆಸುತ್ತಿದ್ದರು. ಈ ವೇಳೆ ಸ್ವಾಮೀಜಿ ಆಡಿಯೊ, ವಿಡಿಯೊ, ಬ್ಯಾಂಕ್‌ ಖಾತೆ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದರು. ಇದರ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Fraud case Woman dupes kabbala mahasamsthana mutt swamiji
ವರ್ಷ ಎಂಬ ಯುವತಿಯನ್ನು ನಂಬಿ ಲಕ್ಷ ಲಕ್ಷ ಹಣವನ್ನು ವರ್ಗಾವಣೆ ಮಾಡಿರುವುದು

ಇದನ್ನೂ ಓದಿ: Bengaluru Suburban: ಮೈಸೂರು, ಗೌರೀಬಿದನೂರು, ಕೋಲಾರಕ್ಕೆ ಉಪನಗರ ರೈಲು ಯೋಜನೆ ವಿಸ್ತರಣೆ!

ಸ್ವಾಮೀಜಿಯ ದೂರಿನಲ್ಲೇನಿದೆ?

ಆಧ್ಯಾತ್ಮಿಕವಾಗಿ ಆಸಕ್ತಿ ಇದೆ ಎಂದು ಹೇಳಿಕೊಂಡಿದ್ದ ವರ್ಷ ಎಂಬ ಹೆಸರಿನ ಯುವತಿಯು ನನಗೆ ಫೇಸ್‌ಬುಕ್‌ ಮೂಲಕ 2020ರಲ್ಲಿ ಪರಿಚಯವಾಗಿದ್ದಳು. ಬಳಿಕ ಆಕೆ ತನ್ನ ಮೊಬೈಲ್‌ ನಂಬರ್‌ ನೀಡಿ ಸ್ವಾಮೀಜಿಯ ನಂಬರ್‌ ಅನ್ನು ಸಹ ಪಡೆದುಕೊಂಡಿದ್ದಳು. ಅಲ್ಲಿಂದ ತಿಂಗಳುಗಳ ಕಾಲ ವಿಡಿಯೊ ಕಾಲಿಂಗ್ ಮೂಲಕ ಸಂಪರ್ಕದಲ್ಲಿದ್ದಳು. ಆದರೆ ಯಾವತ್ತೂ ಆಕೆ ತನ್ನ ಮುಖವನ್ನು ಸ್ವಾಮೀಜಿಗೆ ತೋರಿಸಿರಲಿಲ್ಲ. ಅಲ್ಲದೆ, ತನಗೆ ತಂದೆ, ತಾಯಿ ಯಾರೂ ಇಲ್ಲ ಎಂದು ಸ್ವಾಮೀಜಿಯನ್ನು ನಂಬಿಸಿದ್ದಳು.

Fraud case Woman dupes kabbala mahasamsthana mutt swamiji
ಅಕೌಂಟ್‌ ಸ್ಟೇಟ್‌ಮೆಂಟ್

ನಾನು ಹೋಟೆಲ್ ಮ್ಯಾನೇಜ್ಮೆಂಟ್ ಕೋರ್ಸ್ ಮಾಡುತ್ತಿದ್ದೇನೆ. ನನಗೆ ಹಣದ ಸಹಾಯ ಮಾಡಿ ಎಂದು ಒಮ್ಮೆ ಯುವತಿ ಕೇಳಿಕೊಂಡಿದ್ದಳು. ಮೊದಲು ತನ್ನ ಸ್ನೇಹಿತೆ ಮಂಜುಳಾ ಎಂಬಾಕೆಯ ಅಕೌಂಟಿಗೆ ದುಡ್ಡನ್ನು ಹಾಕಿಸಿಕೊಂಡಿದ್ದಾಳೆ. ಆಕೆಯ ಮಾತು ನಂಬಿ 2 ಲಕ್ಷ ರೂಪಾಯಿಯನ್ನು ಸ್ವಾಮೀಜಿ ವರ್ಗಾಯಿಸಿದ್ದಾರೆ. ನಂತರ ಆಕೆ ಕೇಳಿದಾಗಲೆಲ್ಲ ಲಕ್ಷ ಲಕ್ಷ ಹಣವನ್ನು ಸ್ವಾಮೀಜಿ ನೀಡಿದ್ದರು. ಅಲ್ಲದೆ, ಈ ಮಧ್ಯೆ ತನ್ನ ಹೆಸರಲ್ಲಿ ಎಕರೆಗಟ್ಟಲೆ ಜಮೀನಿದೆ ಎಂದು ಸಹ ಯುವತಿ ನಂಬಿಸಿದ್ದಳು. ಅದನ್ನು ಮಠದ ಹೆಸರಿಗೆ ಬರೆಯುವುದಾಗಿಯೂ ಹೇಳಿದ್ದಳು ಎಂದು ಸ್ವಾಮೀಜಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಯುವತಿಯ ಎಲ್ಲ ಮಾತಿಗೆ ಮರುಳಾಗಿ ಸುಮಾರು 35 ಲಕ್ಷಕ್ಕೂ ಹೆಚ್ಚು ಹಣವನ್ನು ಶ್ರೀ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಹಾಕಿದ್ದಾರೆ. ಇದಾದ ಮೇಲೆ ಒಂದು ದಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದೇನೆ. ಜಾಗದ ಡಾಕ್ಯುಮೆಂಟ್ ತರಲು ಹೋದ ನನ್ನ ಮೇಲೆ ಹಲ್ಲೆ ಮಾಡಲಾಗಿದೆ. ಆಸ್ಪತ್ರೆಗೆ ಕಟ್ಟಲು ಹಣ ಬೇಕು ಎಂದು ವರ್ಷ ಮತ್ತೆ ದುಡ್ಡು ಕೇಳಿದ್ದಾಳೆ. ಈ ವೇಳೆ ಸ್ವಾಮೀಜಿಗೆ ಅನುಮಾನ ಬಂದು ತಾರಾ ಎಂಬುವವರನ್ನು ಆಸ್ಪತ್ರೆಗೆ ಕಳುಹಿಸಿದ್ದರು. ಆದರೆ, ವರ್ಷ ಎಂಬ ಯುವತಿ ಆಸ್ಪತ್ರೆಗೆ ದಾಖಲಾಗಿರುವ ಯಾವುದೇ ಮಾಹಿತಿ ಸಿಕ್ಕಿಲ್ಲ. ಅನುಮಾನ ಮತ್ತಷ್ಟು ಹೆಚ್ಚಾಗಿ ಹಣ ಹಾಕಿಸಿಕೊಂಡಿದ್ದ ಆಕೆಯ ಸ್ನೇಹಿತೆ ಮಂಜುಳಾಗೆ ಸ್ವಾಮೀಜಿ ಕರೆ ಮಾಡಿದ್ದಾರೆ. ತಮ್ಮ ಹಣವನ್ನು ವಾಪಸ್‌ ಕೊಡುವಂತೆ ಕೇಳಿದ್ದಾರೆ. ಅದಕ್ಕೆ ಮಂಜುಳಾ, ತಾನು 55 ಲಕ್ಷ ರೂಪಾಯಿ ಸಾಲ‌ ಮಾಡಿ‌ ವರ್ಷಳನ್ನು ಡಿಶ್ಚಾರ್ಜ್ ಮಾಡಿಸಿದ್ದೇನೆ. ಆ ಹಣವನ್ನು ನೀವು ಕೊಡಬೇಕೆಂದು ಹೇಳಿ ಗಲಾಟೆ ಮಾಡಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಠಕ್ಕೆ ತೆರಳಿದ್ದ ಮಂಜುಳಾ

ಏಪ್ರಿಲ್ 23ಕ್ಕೆ ಮಠಕ್ಕೆ 6 ಜನರ ಜತೆ ತೆರಳಿದ್ದ ಮಂಜುಳಾ ಗಲಾಟೆ ಮಾಡಿದ್ದಾಳೆ. ಸಂಘಟನೆಯ ಅವನಿಕಾ, ಕಾವೇರಿ, ಪ್ರದೀಪ್ ನಾಯಕ್, ರಶ್ಮಿ, ಮೀನಾಕ್ಷಿ, ಪ್ರೇಮಾ ಜತೆ ತೆರಳಿದ್ದಳು. ಕೊನೆಗೆ ಅವರ ದುಡ್ಡನ್ನು ವಾಪಸ್‌ ಕೊಡಿ ಎಂದು ಕೂಗಾಡಿದ್ದರು. ಮಂಜುಳಾ ದಾಖಲೆ ಕೊಟ್ಟರೆ ಮಾತ್ರ ಕೊಡಿ ಎಂದು ಅವನಿಕಾ ಮತ್ತು ತಂಡದವರು ಹೇಳಿದ್ದರು. ಈ ವೇಳೆ ತನ್ನ ತಪ್ಪನ್ನು ಸ್ವಾಮೀಜಿ ಒಪ್ಪಿಕೊಂಡಿದ್ದರು. ನಾನು ದುಡುಕಿ ತಪ್ಪು ಮಾಡಿದ್ದೇನೆ ಎಂದು ನೀಡಿದ್ದ ಹೇಳಿಕೆಯನ್ನು ಅವರು ರೆಕಾರ್ಡ್‌ ಮಾಡಿಕೊಂಡು ತೆರಳಿದ್ದರು.

ಇದನ್ನೂ ಓದಿ: ರಾಜ್ಯಪಾಲರು ರಾಜಭವನದಲ್ಲಿ ಎಲ್ಲ ಆಟಗಳನ್ನೂ ಆಡಿದ್ದಾರೆ: ಹಳೆಯ ಕಥೆಗಳನ್ನು ಬಿಚ್ಚಿಟ್ಟ ಎಸ್‌.ಎಂ. ಕೃಷ್ಣ

ವಾರದ ಬಳಿಕ ಸ್ವಾಮೀಜಿ ದೂರು

ಈ ಘಟನೆ ನಡೆದು ಒಂದು ವಾರದ ಬಳಿಕ (ಏಪ್ರಿಲ್ 30) ಠಾಣೆಗೆ ಖುದ್ದು ಬಂದಿದ್ದ ಸ್ವಾಮೀಜಿ ದೂರು ನೀಡಿದ್ದಾರೆ. ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲು ಮಾಡಿಕೊಳ್ಳಲಾಗಿದ್ದು, ತನಿಖೆ ನಡೆಯುತ್ತಿದೆ. ಆಕೆ ಇದುವರೆಗೂ ಮಠಕ್ಕೆ ಬಂದಿಲ್ಲ. ತಾವೂ ಸಹ ಆಕೆಯ ಮುಖವನ್ನು ನೋಡಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Yadgir News: ಕೆರೆಯಲ್ಲಿ ಈಜಾಡಲು ಹೋಗಿ ಮೂವರು ಬಾಲಕರ ದುರ್ಮರಣ

Yadgir News: ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಬೇಸಿಗೆ ಹಿನ್ನೆಲೆಯಲ್ಲಿ ಬಿಸಿಲಿನ ತಾಪ ತಾಳಲಾರದೆ ಮೂವರು ಸ್ನೇಹಿತರು ಕೆರೆಗೆ ಈಜಾಡಲು ತೆರಳಿದ್ದರು. ಈ ವೇಳೆ ನೀರು ಪಾಲಾಗಿದ್ದಾರೆ.

VISTARANEWS.COM


on

Three boys drown
Koo

ಯಾದಗಿರಿ: ಕೆರೆಯಲ್ಲಿ ಈಜಾಡಲು ಹೋಗಿ ಮೂವರು ಬಾಲಕರು ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ (Yadgir News) ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ. ಬೇಸಿಗೆ ಹಿನ್ನೆಲೆಯಲ್ಲಿ ಬಿಸಿಲಿನ ತಾಪ ತಾಳಲಾರದೆ ಮೂವರು ಸ್ನೇಹಿತರು ಕೆರೆಗೆ ಈಜಾಡಲು ತೆರಳಿದ್ದರು. ಈ ವೇಳೆ ಮೂವರೂ ನೀರು ಪಾಲಾಗಿದ್ದಾರೆ. ಹೈಯಾಳಪ್ಪ (11), ಶರಣಬಸವ (10) ಹಾಗೂ ಅನಿಲ್ (10) ಮೃತ ದುರ್ದೈವಿಗಳು. ಬಾಲಕರ ಮೃತದೇಹಗಳನ್ನು ಸ್ಥಳೀಯರು ಹೊರೆ ತೆಗೆದಿದ್ದಾರೆ.

ಇದನ್ನೂ ಓದಿ | Smuggling Case: ಬ್ಯಾಂಕಾಕ್‌ನಿಂದ ಸ್ಮಗ್ಲಿಂಗ್‌ ಮಾಡುತ್ತಿದ್ದ 10 ಹಳದಿ ಅನಕೊಂಡ ವಶಕ್ಕೆ, ಆರೋಪಿ ಬಂಧನ

ಮಿಡ್‌ನೈಟ್‌ನಲ್ಲಿ ರಸ್ತೆ ಕಾಣದೆ ಡಿವೈಡರ್‌ಗೆ ಬೈಕ್‌ ಡಿಕ್ಕಿ; ಹಾರಿ ಬಿದ್ದ ಸವಾರ ಸ್ಥಳದಲ್ಲೇ ಸಾವು

Road Accident

ಉಡುಪಿ: ಬೈಕ್ ಪಲ್ಟಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಉಡುಪಿಯ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಸಮೀಪ (Road Accident) ನಡೆದಿದೆ. ವಿಕಾಸ್ ಆಚಾರ್ಯ (22) ಅಪಘಾತದಲ್ಲಿ ಮೃತಪಟ್ಟ ಯುವಕ.

ಕೋಟ ಮಣೂರು ಸುರೇಶ್ ಆಚಾರ್ಯ ಅವರ ಪುತ್ರ ವಿಕಾಸ್ ಸೋಮವಾರ ಮಧ್ಯರಾತ್ರಿ 1:30 ರ ಸುಮಾರಿಗೆ ಸಾಸ್ತಾನದಿಂದ ಕೋಟ ಕಡೆ ಬರುತ್ತಿದ್ದ. ಕೋಟ ಗುಜರಿ ಅಂಗಡಿ ಸಮೀಪ ಬರುವಾಗ ವಿಕಾಸ್‌ಗೆ ಬೈಕ್‌ನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿಯಾಗಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಪಲ್ಟಿಯಾಗಿ ಗಂಭೀರ ಗಾಯಗೊಂಡ ವಿಕಾಸ್‌ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗ ರವಾನಿಸಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ನೀರು ತರುತ್ತಿದ್ದ ಹನುಮ ಮಾಲಾಧಾರಿಗಳಿಗೆ ಬೊಲೆರೋ ಡಿಕ್ಕಿ, 3 ಸಾವು

ರಾಯಚೂರು: ಹನುಮ ಮಾಲಾಧಾರಿಗಳಿಗೆ (Hanuman Devotees) ಬೊಲೇರೋ ವಾಹನ (Bolero Hit) ಡಿಕ್ಕಿಯಾಗಿ ಸ್ಥಳದಲ್ಲಿಯೇ (Road Accident) ಮೂರು ಜನ ಸಾವಿಗೀಡಾಗಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ರಾಯಚೂರಿನ ಶಕ್ತಿನಗರದ ಯಾದವ ನಗರ ಕ್ರಾಸ್ ಬಳಿ ಘಟನೆ ನಡೆದಿದೆ. ಹನುಮಮಾಲಾಧಾರಿಗಳು ಹನುಮಜಯಂತಿ ಪ್ರಯುಕ್ತ ಕೃಷ್ಣಾ ನದಿಗೆ ನೀರು ತರಲು ಬಂದಾಗ ಘಟನೆ ನಡೆದಿದೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಯಮಸ್ವರೂಪಿ ಬೊಲೆರೋ ಮಾಲಾಧಾರಿಗಳಿಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: Kidnap Case : ಅಖಂಡೇಶ್ವರ ಜಾತ್ರೆಗೆ ಹೋದ ಅತಿಥಿ ಶಿಕ್ಷಕಿಯನ್ನು ಅಪಹರಿಸಿದ ಮುಸ್ಲಿಂ ಯುವಕ

ಅಯ್ಯನಗೌಡ (28) ಮಹೇಶ (22), ಉದಯಕುಮಾರ (28) ಮೃತ ದುರ್ದೈವಿಗಳು. ರಮೇಶ ಭೂಷಣ ಎಂಬ ಇಬ್ಬರಿಗೆ ಗಂಭೀರ ಗಾಯವಾಗಿದೆ. ಎಲ್ಲರೂ ರಾಯಚೂರಿನ ಹೆಗಸನಹಳ್ಳಿ ನಿವಾಸಿಗಳು. ಕೋಳಿ ತುಂಬಿಕೊಂಡು ಬರುತ್ತಿದ್ದ ಬುಲೇರೋ ವಾಹನ ಚಾಲಕ ನಿರ್ಲಕ್ಷ್ಯದಿಂದ ಹಾಗೂ ವೇಗವಾಗಿ ಚಲಾಯಿಸಿ ಅಪಘಾತಕ್ಕೆ ಕಾರಣನಾಗಿದ್ದಾನೆ. ಘಟನಾ ಸ್ಥಳಕ್ಕೆ ಶಕ್ತಿ ನಗರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Continue Reading

ಬೆಂಗಳೂರು

Fraud Case : ಗುಜರಿ ಅಂಗಡಿ ಮಾಲೀಕನಿಗೆ ಬೆದರಿಸಿ ಹಣ ಪೀಕಿದ ಪೊಲೀಸ್‌ ಹಾಗೂ ಇನ್ಫಾರ್ಮರ್

Fraud Case : ಇನ್ಫಾರ್ಮರ್ ಜತೆ ಸೇರಿ ಪೊಲೀಸರೇ ಹಣ ವಸೂಲಿಗಿಳಿದಿರುವ ಆರೋಪವೊಂದು ಕೇಳಿ ಬಂದಿದೆ. ವೈಟ್‌ ಫೀಲ್ಡ್‌ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಇನ್ಪಾರ್ಮರ್‌ನನ್ನು ಬಂಧಿಸಿದ್ದಾರೆ.

VISTARANEWS.COM


on

By

Fraud case
Koo

ಬೆಂಗಳೂರು: ಮಾರತ್ತಹಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ಸುಳ್ಳು ಆರೋಪಗಳನ್ನು ಮಾಡಿ ಗುಜರಿ ಅಂಗಡಿ ಮಾಲೀಕನಿಂದ ಹಣ ವಸೂಲಿ (Fraud Case) ಮಾಡಿರುವ ಆರೋಪವೊಂದು ಕೇಳಿ ಬಂದಿದೆ. ಗುಜರಿ ಅಂಗಡಿ ಮಾಲೀಕ ಅಖ್ತಿರ್ ಅಲಿ ಮಂಡಲ್‌ ಎಂಬುವವರು ಈ ಸಂಬಂಧ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ಅಖ್ತರ್ ಅವರು ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಲ್ಲೂರಳ್ಳಿಯಲ್ಲಿ ಗುಜರಿ ಅಂಗಡಿ ಇಟ್ಟುಕೊಂಡಿದ್ದರು. ಕಳೆದ ಏಪ್ರಿಲ್ 17ರ ಮಧ್ಯಾಹ್ನ 12ಗಂಟೆಗೆ ಗುಜುರಿ ಬಳಿ ಪೊಲೀಸ್ ಸಿಬ್ಬಂದಿ, ಇನ್ಫಾರ್ಮರ್ ಎಸ್.ನಿವಾಸ್ ಎಂಬಾತನ ಜತೆಗೆ ಆಗಮಿಸಿದ್ದರು. ಹೀಗೆ ಬಂದವರೇ ನಾವು ಪೊಲೀಸರು ನೀವು ದಂಧೆ ನಡೆಸುತ್ತಿದ್ದೀರಾ? ಗಾಂಜಾ ಮಾರಾಟ ಮಾಡುತ್ತೀದ್ದೀರಾ ಎಂದು ಬೆದರಿಕೆ ಹಾಕಿದ್ದಾರೆ.

ಕೆಲಸಗಾರರ ಮೇಲೆ ಹಲ್ಲೆ ಮಾಡಿ ಅಖ್ತರ್ ಬಳಿ ಸುಮಾರು 2 ಲಕ್ಷ ರೂ. ಹಣವನ್ನು ಇನ್ಫಾರ್ಮರ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಮೊದಲು 20 ಸಾವಿರ ನಗದು ಪಡೆದುಕೊಂಡು ಬಳಿಕ ಬ್ಯಾಂಕ್ ಖಾತೆಯಿಂದ 80 ಸಾವಿರ ರೂ. ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ ಹೋಗುವಾಗ ಬೆದರಿಕೆ ಹಾಕಿ ಎಟಿಎಂ ಕಾರ್ಡ್ ಹಾಗೂ ಪಿನ್ ನಂಬರ್‌ ಪಡೆದುಕೊಂಡಿದ್ದಾರೆ. ಬಳಿಕ ಎಟಿಎಂನಿಂದ 50 ಸಾವಿರ ಹಣ ಡ್ರಾ ಮಾಡಿಕೊಂಡಿದ್ದಾರೆ.

ಮರುದಿನ ವಾಪಸ್‌ ಗುಜುರಿ ಅಂಗಡಿಗೆ ಬಂದಿದ್ದ ಆರೋಪಿಗಳು, ಎಟಿಎಂ ಕಾರ್ಡ್ ಕೊಟ್ಟು ಮತ್ತೆ 50 ಸಾವಿರ ಹಣ ಪಡೆದುಕೊಂಡು ಹೋಗಿದ್ದಾರೆ. ಮತ್ತೊಮ್ಮೆ 50 ಸಾವಿರ ರೂ. ಕೊಡಬೇಕು ಇಲ್ಲದಿದ್ದರೆ ಬೈಕ್ ತೆಗೆದುಕೊಂಡು ಹೋಗುವುದಾಗಿ ಬೆದರಿಕೆ ಹಾಕಿದ್ದಾರೆ. ಇವರ ಕಾಟ ತಾಳಲಾರದೆ ಅಖ್ತಿರ್‌ ವೈಟ್ ಫೀಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Road Accident : ಮಿಡ್‌ನೈಟ್‌ನಲ್ಲಿ ರಸ್ತೆ ಕಾಣದೆ ಡಿವೈಡರ್‌ಗೆ ಬೈಕ್‌ ಡಿಕ್ಕಿ; ಹಾರಿ ಬಿದ್ದ ಸವಾರ ಸ್ಥಳದಲ್ಲೇ ಸಾವು

ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ನಿವಾಸ್ ಎಂಬಾತನನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಮೂವರು ಆರೋಪಿಗಳಿಗೆ ಹುಡುಕಾಟ ನಡೆಸಿದ್ದಾಗಿ ವೈಟ್ ಫೀಲ್ಡ್ ಡಿಸಿಪಿ ಶಿವಕುಮಾರ್ ಗುಣಾರೆ ಮಾಹಿತಿ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ನಕಲಿ ಸಿಐಡಿ ಅಧಿಕಾರಿಗಳ ಬಂಧನ

ಹುಬ್ಬಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ನಕಲಿ ಸಿಐಡಿ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಸಿಐಡಿ ಅಧಿಕಾರಿಗಳೆಂದು ಹೆದರಿಸಿ ಮಹಿಳೆಯೊಬ್ಬರಿಗೆ ವಂಚನೆ ಮಾಡಿದ್ದರು. ಚೈತನ್ಯ ನಗರದ ನಿವಾಸಿ ಯಶೋಧಾ ಮದುಗಲ್‌ಗೆ ಹೆದರಿಸಿ ಹಣ ವಸೂಲಿ ಮಾಡಿದ್ದರು. ಹಳೇ ಹುಬ್ಬಳ್ಳಿ ಪೋಲಿಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಹಳೇ ಹುಬ್ಬಳ್ಳಿ ಪೊಲೀಸರು ಕೃಷ್ಣಾಪೂರ ಓಣಿಯ ನಿವಾಸಿ ಚೇತನ ಹಡಪದ (39), ಲಿಂಗಸೂರನ ಪರಶುರಾಮಗೌಡ ಪಾಟೀಲ್ (45), ಗಂಗಾವತಿಯ ಕಾರಟಗಿಯ ಮಧು ಎಮ್ (35) ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಎರಡು ಮೊಬೈಲ್, ಒಂದು ಬುಲೆಟ್ ಬೈಕ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

LoK Sabha Election 2024: ಚೊಂಬು ಆರೋಪಕ್ಕೆ ಚಿಪ್ಪು ಕೊಟ್ಟ ಬಿಜೆಪಿ! ಪಿಕ್‌ ಪಾಕೆಟ್‌ ಕಾಂಗ್ರೆಸ್‌ ಪೋಸ್ಟರ್‌ ಬಿಡುಗಡೆ!

LoK Sabha Election 2024: ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ಚುನಾವಣಾ ಆಯೋಗದ ಅನುಮತಿ ಕೇಳಿತ್ತು, ಅದನ್ನೇ ಜಯವೆಂದು ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳಿದ್ದಾರೆ. ವಿಧಾನಸೌಧ ದುರ್ಬಳಕೆ ಮಾಡಿಕೊಳ್ಳಲಾಗಿದ್ದು, ಈ ಬಗ್ಗೆ ಮುಖ್ಯ ಕಾರ್ಯದರ್ಶಿ ವಿರುದ್ಧ ದೂರು ನೀಡಲಾಗಿದೆ. ಇನ್ನು ನೇಹಾ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ವಿಧಾನಸಭಾ ಪ್ರತಿಪಕ್ಷ ನಾಯಕ ಆರ್. ಅಶೋಕ್‌ ಆಗ್ರಹಿಸಿದ್ದಾರೆ.

VISTARANEWS.COM


on

Lok Sabha Election 2024 BJP released Pick pocket Congress poster
Koo

ಬೆಂಗಳೂರು: ಲೋಕಸಭಾ ಚುನಾವಣೆ (LoK Sabha Election 2024) ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ಆರೋಪ – ಪ್ರತ್ಯಾರೋಪಗಳು ಜೋರಾಗಿಯೇ ಇವೆ. ಕೇಂದ್ರ ಸರ್ಕಾರ ಬರ ಪರಿಹಾರ (Drought Relief) ನೀಡಲು ಚುನಾವಣಾ ಆಯೋಗದ (Election Commission) ಅನುಮತಿ ಕೇಳಿದ್ದು, ಇದನ್ನೇ ನ್ಯಾಯಾಲಯದಲ್ಲಿ ತಿಳಿಸಲಾಗಿದೆ. ಈ ವಿಷಯವನ್ನು ತಮಗೆ ಸಿಕ್ಕಿದ ಜಯ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಸುಳ್ಳನ್ನು ಬಿಂಬಿಸುತ್ತಿದ್ದಾರೆ. ಇನ್ನು ರಾಜ್ಯದಲ್ಲಿ ಜನರ ಕೈಗೆ ಚಿಪ್ಪು ಕೊಟ್ಟಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್‌ (R Ashok) ಕಿಡಿಕಾರಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್‌. ಅಶೋಕ್, ಕೇಂದ್ರ ಸರ್ಕಾರ (Central Government) ಬರ ಪರಿಹಾರ ಬಿಡುಗಡೆಗೆ ಅನುಮತಿಗಾಗಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿತ್ತು. ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್‌ ಈ ಕುರಿತು ತಿಳಿಸಿದ್ದರು. ಸುಪ್ರೀಂ ಕೋರ್ಟ್‌ನಲ್ಲಿ (Supreme Court) ನಡೆಯುತ್ತಿರುವ ಪ್ರಕರಣದ ವಿಚಾರಣೆ ವೇಳೆಯೂ ಇದನ್ನು ತಿಳಿಸಲಾಗಿದೆ. ಆದರೆ, ಕಾಂಗ್ರೆಸ್‌ ನಾಯಕರು (Congress Leaders) ಜಯ ಸಿಕ್ಕಿದೆ ಎಂದು ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರ ಹಣ ಬಿಡುಗಡೆಗಾಗಿಯೇ ಅನುಮತಿ ಕೇಳಿರುವಾಗ, ಕಾಂಗ್ರೆಸ್‌ ಪಾತ್ರ ಇದರಲ್ಲಿ ಏನೂ ಇಲ್ಲ. ಜಯ ಸಿಗಲು ಕಾಂಗ್ರೆಸ್‌ನ ವಕೀಲರು ಏನೂ ವಾದ ಮಾಡಿಲ್ಲ ಎಂದರು.

ಮಲ್ಲಿಕಾರ್ಜುನ ಖರ್ಗೆ ಹಾಗೂ ಸುರ್ಜೇವಾಲಾ ಅವರು ಯಾವ ಮುಖ ಇಟ್ಟುಕೊಂಡು ಬೆಂಗಳೂರಿಗೆ ಬರುತ್ತಾರೆ? ಇಲ್ಲಿ ಬಾಂಬ್‌ ಸ್ಫೋಟ ಆಗಿರುವಾಗ ನಿಮಗೆ ಮತ ಕೇಳಲು ಯಾವ ಅಧಿಕಾರ ಇದೆ? ಕೇಂದ್ರ ಸರ್ಕಾರ ಕ್ರಮ ವಹಿಸಿದ್ದರಿಂದಲೇ ಬರ ಪರಿಹಾರ ಹಲವಾರು ರಾಜ್ಯಗಳಿಗೆ ದೊರೆಯುತ್ತಿದೆ. ಈಗಾಗಲೇ ಬರ ಪರಿಹಾರವನ್ನು ರಾಜ್ಯ ಸರ್ಕಾರದ ವತಿಯಿಂದ ನೀಡಬೇಕಿತ್ತು. ಎಸ್‌ಡಿಆರ್‌ಎಫ್‌ನಿಂದ 700 ಕೋಟಿ ರೂ. ಹಣವನ್ನು ಕೇಂದ್ರ ಸರ್ಕಾರ ನೀಡಿದೆ. ಆದರೆ ರಾಜ್ಯ ಸರ್ಕಾರವೇ ನೀಡಿದಂತೆ ಸಿಎಂ ಸಿದ್ದರಾಮಯ್ಯ ಹೇಳಿಕೊಳ್ಳುತ್ತಿದ್ದಾರೆ ಎಂದು ಆರ್.‌ ಅಶೋಕ್‌ ಕಿಡಿಕಾರಿದರು.

Lok Sabha Election 2024 BJP released Pick pocket Congress poster

2013-14 ರಲ್ಲಿ ಬರ ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ 9 ತಿಂಗಳು ತೆಗೆದುಕೊಂಡಿದ್ದರು. ಕೇಂದ್ರದಲ್ಲೀಗ ಬಿಜೆಪಿ ಇದೆ ಎಂಬ ಕಾರಣಕ್ಕೆ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ. ಮೋದಿ ಸರ್ಕಾರ 7,940 ಕೋಟಿ ರೂ. ಪರಿಹಾರ ನೀಡಿದ್ದರೆ, ಮನಮೋಹನ್‌ ಸಿಂಗ್‌ ಸರ್ಕಾರ 3,000 ಕೋಟಿ ರೂ. ನೀಡಿದೆ. ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರದ ಬಳಿ ಹಣವಿಲ್ಲ. ಈ ಕಾರಣಕ್ಕಾಗಿಯೇ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲಾಗುತ್ತಿದೆ ಎಂದು ಆರ್.‌ ಅಶೋಕ್‌ ಹೇಳಿದರು.

ಸಿಬಿಐಗೆ ತನಿಖೆ ವಹಿಸಿ

ಕಾಂಗ್ರೆಸ್‌ ಸರ್ಕಾರ ಪಾಪರ್‌ ಆಗಿ ಬೀದಿಗೆ ಬಂದಿದ್ದು, ಮುಂದೆ ಸಂಬಳ ಕೊಡಲು ಹಣ ಇರುವುದಿಲ್ಲ. ಕಾಂಗ್ರೆಸ್‌ ವಿರುದ್ಧ ಹಿಂದೂಗಳು ಕೆರಳುತ್ತಿದ್ದಾರೆ. ಹಿಂದೂಗಳ ರಕ್ತವನ್ನು ಮತಾಂಧರು ಹರಿಸುತ್ತಿದ್ದು, ಇದನ್ನು ಮರೆಮಾಚಿಸಲು ಈ ರೀತಿ ಪ್ರತಿಭಟನೆ ಮಾಡುತ್ತಿದ್ದಾರೆ. ನೇಹಾ ಹತ್ಯೆಯ ತನಿಖೆಯನ್ನು ಸಿಬಿಐಗೆ ಕೊಡದೆ ಸಿಐಡಿಗೆ ನೀಡಿ ಮುಚ್ಚಿಹಾಕುವ ಕೆಲಸ ಮಾಡುತ್ತಿದ್ದಾರೆ. ಅವರ ತಂದೆಯೇ ಲವ್‌ ಜಿಹಾದ್‌ ಹೇಳಿದ್ದಾರೆ. ಈ ಪ್ರಕರಣವನ್ನು ಸೂಕ್ತವಾಗಿ ತನಿಖೆ ಮಾಡಲು ಸಿಬಿಐಗೆ ವಹಿಸಬೇಕು ಎಂದು ಆರ್.‌ ಅಶೋಕ್‌ ಆಗ್ರಹಿಸಿದರು.

“ಪಿಕ್ ಪಾಕೆಟ್ ಕಾಂಗ್ರೆಸ್” ಮತ್ತು “ಕನ್ನಡಿಗರ ಕೈಗೆ ಚಿಪ್ಪು” ಪೋಸ್ಟರ್ ಬಿಡುಗಡೆ

ಕೇಂದ್ರ ಸರ್ಕಾರದಿಂದ ಅನುದಾನ ತಾರತಮ್ಯ ನೀತಿಯನ್ನು ಅನುಸರಿಸಲಾಗುತ್ತಿದೆ ಎಂದು ಆರೋಪಿಸುತ್ತಾ ಬಂದಿದ್ದ ಕಾಂಗ್ರೆಸ್‌ “ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಚೊಂಬು” ಎಂಬ ಜಾಹೀರಾತನ್ನು ಕೊಟ್ಟಿತ್ತು. ಈಗ ಇದಕ್ಕೆ ಪ್ರತಿಯಾಗಿ ಬಿಜೆಪಿ ಎರಡು ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದ್ದು, ಸತ್ಯ ಸಂಗತಿ ಮರೆಮಾಚಿ ಜನರನ್ನು ವಂಚಿಸುತ್ತಿರುವ ಕಾಂಗ್ರೆಸ್ ಮುಖವಾಡ ಬಯಲು ಮಾಡಲಾಗುತ್ತಿದೆ ಎಂದು ಹೇಳಿದೆ. ಈ ಸಂಬಂಧ “ಪಿಕ್ ಪಾಕೆಟ್ ಕಾಂಗ್ರೆಸ್” ಮತ್ತು “ಕನ್ನಡಿಗರ ಕೈಗೆ ಚಿಪ್ಪು” ಪೋಸ್ಟರ್‌ಗಳನ್ನು ಆರ್.‌ ಅಶೋಕ್ ಬಿಡುಗಡೆ ಮಾಡಿದರು.

ಕಾಂಗ್ರೆಸ್‌ ಸರ್ಕಾರ ಚಿಪ್ಪು ಕೊಟ್ಟಿದೆ ಎಂಬ ಹಾಡು ಬಿಡುಗಡೆ ಮಾಡಿರುವ ಬಿಜೆಪಿ; ಇಲ್ಲಿದೆ ವಿಡಿಯೊ

ಇದನನೂ ಓದಿ: CM Siddaramaiah: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ; ಮೋದಿ, ಅಮಿತ್ ಶಾಗೆ ಗೋ ಬ್ಯಾಕ್‌ ಘೋಷಣೆ

ಚುನಾವಣಾ ಆಯೋಗಕ್ಕೆ ದೂರು

ವಿಧಾನಸೌಧದಲ್ಲಿ ಕಾಂಗ್ರೆಸ್‌ ಪ್ರತಿಭಟನೆಗೆ ಅವಕಾಶ ನೀಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪ್ರತಿಭಟಿಸಿದ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ವಿಧಾನಸೌಧದ ಒಳಗೆ ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ವಿರೋಧಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಈಗ ವಿಧಾನಸೌಧದ ಮುಂಭಾಗ ಕಾಂಗ್ರೆಸ್‌ ನಾಯಕರು ಪ್ರತಿಭಟಿಸಲು ಅವಕಾಶ ಕೊಟ್ಟ ಮುಖ್ಯ ಕಾರ್ಯದರ್ಶಿಯ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ದೂರ ನೀಡಲಾಗಿದೆ. ವಿಧಾನಸೌಧವನ್ನು ಈಗಾಗಲೇ ಮೂರು ನಾಲ್ಕು ಬಾರಿ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರ್‌.ಅಶೋಕ ದೂರಿದರು.

Continue Reading

ಬಳ್ಳಾರಿ

Lok Sabha Election 2024: ಪಂಚ ಗ್ಯಾರಂಟಿ ಜಾರಿ ಮಾಡಿ ನುಡಿದಂತೆ ನಡೆದಿದ್ದು ಕಾಂಗ್ರೆಸ್ ಸರ್ಕಾರ: ಈ.ತುಕಾರಾಂ

Lok Sabha Election 2024: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ.ತುಕಾರಾಂ, ಮಂಗಳವಾರ ನಗರದ ವಿವಿಧೆಡೆ ಜಿಲ್ಲಾ ಉಸ್ತುವಾರಿ ಸಚಿವ ಬಿ ನಾಗೇಂದ್ರ, ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಪಕ್ಷದ ಮುಖಂಡರೊಂದಿಗೆ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದರು.

VISTARANEWS.COM


on

Ballari lok sabha constituency congress candidate e Tukaram election campaign in Ballari city
Koo

ಬಳ್ಳಾರಿ: ರಾಜ್ಯದಲ್ಲಿ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿ ನುಡಿದಂತೆ ನಡೆದದ್ದು ಕಾಂಗ್ರೆಸ್‌ ಸರ್ಕಾರ. ಆದ್ದರಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ (Congress Party) ಬೆಂಬಲಿಸಿ, ತಮ್ಮನ್ನು ಗೆಲ್ಲಿಸುವಂತೆ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಮನವಿ (Lok Sabha Election 2024) ಮಾಡಿದರು.

ನಗರದ ವಿವಿಧೆಡೆ ಜಿಲ್ಲಾ ಉಸ್ತುವಾರಿ ಸಚಿವ ಬಿ ನಾಗೇಂದ್ರ, ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಪಕ್ಷದ ಮುಖಂಡರೊಂದಿಗೆ ಮನೆಮನೆಗೆ ತೆರಳಿ ಮತಯಾಚನೆ ನಡೆಸಿದ ಕಾಂಗ್ರೆಸ್‌ ಅಭ್ಯರ್ಥಿ ಈ.ತುಕಾರಾಂ, ಹಸ್ತದ ಗುರುತಿಗೆ ಮತ ನೀಡಿ, ಗೆಲ್ಲಿಸುವಂತೆ ಮತದಾರರದಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: Lok Sabha Election 2024: ಏಪ್ರಿಲ್‌ 26ರಂದು ಮೈಸೂರು ಅರಮನೆ ವೀಕ್ಷಣೆಗೆ ಪ್ಲ್ಯಾನ್‌ ಮಾಡಿದ್ದೀರಾ? ಮತ ಹಾಕದೇ ಬಂದರೆ ನೋ ಎಂಟ್ರಿ!

ನಗರದ ವಿವಿಧೆಡೆ ಗ್ಯಾರೆಂಟಿ ಕಾರ್ಡ್‌ಗಳನ್ನು ವಿತರಿಸಿ, ಭರ್ಜರಿ ಮತಬೇಟೆ ನಡೆಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading
Advertisement
Yuzvendra Chahal
ಪ್ರಮುಖ ಸುದ್ದಿ8 mins ago

Yuzvendra Chahal : ​ ಚಾಹಲ್ ಕೈಬಿಟ್ಟಿರುವುದರ ಹಿಂದಿನ ಕಾರಣ ಬಹಿಂಗ ಮಾಡಿದ ಆರ್​ಸಿಬಿ ಮಾಜಿ ಡೈರೆಕ್ಟರ್​

Three boys drown
ಕರ್ನಾಟಕ14 mins ago

Yadgir News: ಕೆರೆಯಲ್ಲಿ ಈಜಾಡಲು ಹೋಗಿ ಮೂವರು ಬಾಲಕರ ದುರ್ಮರಣ

Fraud case
ಬೆಂಗಳೂರು19 mins ago

Fraud Case : ಗುಜರಿ ಅಂಗಡಿ ಮಾಲೀಕನಿಗೆ ಬೆದರಿಸಿ ಹಣ ಪೀಕಿದ ಪೊಲೀಸ್‌ ಹಾಗೂ ಇನ್ಫಾರ್ಮರ್

Uttarakaanda Movie
ಸಿನಿಮಾ19 mins ago

Uttarakaanda Movie: ʼಉತ್ತರಕಾಂಡʼ ಚಿತ್ರಕ್ಕೆ ನಾಯಕಿ ಎಂಟ್ರಿ; ಮೋಹಕ ತಾರೆ ರಮ್ಯಾ ಜಾಗಕ್ಕೆ ಕಾಲಿವುಡ್‌ ನಟಿ

Lok Sabha Election 2024 BJP released Pick pocket Congress poster
Lok Sabha Election 202430 mins ago

LoK Sabha Election 2024: ಚೊಂಬು ಆರೋಪಕ್ಕೆ ಚಿಪ್ಪು ಕೊಟ್ಟ ಬಿಜೆಪಿ! ಪಿಕ್‌ ಪಾಕೆಟ್‌ ಕಾಂಗ್ರೆಸ್‌ ಪೋಸ್ಟರ್‌ ಬಿಡುಗಡೆ!

Match Fixing
ಕ್ರೀಡೆ33 mins ago

Match Fixing : ಇರ್ಫಾನ್​ ಪಠಾಣ್​, ಸುರೇಶ್ ರೈನಾ ಪಾಲ್ಗೊಂಡಿದ್ದ ​ ಕ್ರಿಕೆಟ್ ಲೀಗ್​ನಲ್ಲಿ ಮ್ಯಾಚ್​ ಫಿಕ್ಸಿಂಗ್?

Ballari lok sabha constituency congress candidate e Tukaram election campaign in Ballari city
ಬಳ್ಳಾರಿ35 mins ago

Lok Sabha Election 2024: ಪಂಚ ಗ್ಯಾರಂಟಿ ಜಾರಿ ಮಾಡಿ ನುಡಿದಂತೆ ನಡೆದಿದ್ದು ಕಾಂಗ್ರೆಸ್ ಸರ್ಕಾರ: ಈ.ತುಕಾರಾಂ

Murugha Seer
ಕರ್ನಾಟಕ38 mins ago

Murugha Seer: ಪೋಕ್ಸೊ ಕೇಸ್‌ನಲ್ಲಿ ಮುರುಘಾ ಶ್ರೀಗೆ ಮತ್ತೆ ಸಂಕಷ್ಟ; 4 ತಿಂಗಳು ಜೈಲಿಗೆ

T20 World Cup 2024
ಕ್ರಿಕೆಟ್47 mins ago

T20 World Cup 2024: ಟಿ20 ವಿಶ್ವಕಪ್​ಗೆ ಭಾರತ ತಂಡ ಪ್ರಕಟಿಸಲು ಮುಹೂರ್ತ ಫಿಕ್ಸ್‌​; ಈ ದಿನ ಘೋಷಣೆ

BrahMos Missiles
ಪ್ರಮುಖ ಸುದ್ದಿ55 mins ago

BrahMos Missiles: ಫಿಲಿಪ್ಪೀನ್ಸ್‌ಗೆ ನಾಲ್ಕನೇ ಬ್ರಹ್ಮೋಸ್‌ ಕ್ಷಿಪಣಿ ಬ್ಯಾಟರಿ ಕಳುಹಿಸಲು ಭಾರತ ಸಜ್ಜು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ12 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು23 hours ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ1 day ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು1 day ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ1 day ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ2 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌