Free Bus Pass: ಕೇವಲ 6 ತಿಂಗಳಲ್ಲಿ ಶ್ರಮಿಕ ವರ್ಗದ ಉಚಿತ ಬಸ್‌ ಪಾಸ್‌ ಯೋಜನೆಗೆ ತಿಲಾಂಜಲಿ Vistara News

ಉತ್ತರ ಕನ್ನಡ

Free Bus Pass: ಕೇವಲ 6 ತಿಂಗಳಲ್ಲಿ ಶ್ರಮಿಕ ವರ್ಗದ ಉಚಿತ ಬಸ್‌ ಪಾಸ್‌ ಯೋಜನೆಗೆ ತಿಲಾಂಜಲಿ

Free Bus Pass: ಶ್ರಮಿಕ ವರ್ಗಕ್ಕೆ ಉಚಿತ ಬಸ್‌ ಪಾಸ್‌ ಯೋಜನೆಯು ಈ ಹಿಂದಿನ ಸರ್ಕಾರದ ಚುನಾವಣಾ ಗಿಮಿಕ್‌ ಎಂಬ ಆರೋಪ ಕೇಳಿಬಂದಿದೆ. ಕಾಂಗ್ರೆಸ್‌ ಸರ್ಕಾರ ಯೋಜನೆಯನ್ನು ಮುಂದುವರಿಸಬೇಕು ಎಂದು ಶ್ರಮಿಕ ವರ್ಗ ಒತ್ತಾಯಿಸಿದೆ.

VISTARANEWS.COM


on

KSRTC bus
Follow us on
Koo

| ಸುಧೀರ್ ನಾಯರ್, ಬನವಾಸಿ
ಶ್ರಮಿಕ ವರ್ಗದ ಸುರಕ್ಷಿತ ಓಡಾಟಕ್ಕೆ ಘೋಷಿಸಿದ್ದ ಉಚಿತ ಬಸ್‌ ಪಾಸ್‌ ಯೋಜನೆಯನ್ನು (Free Bus Pass) ಕಳೆದ 4 ತಿಂಗಳಿನಿಂದ ಸ್ಥಗಿತಗೊಳಿಸಲಾಗಿದೆ. ಕೇವಲ ಆರು ತಿಂಗಳಲ್ಲಿ ಈ ಯೋಜನೆಗೆ ತಿಲಾಂಜಲಿ ಇರಿಸಿದ್ದು, ಇದು ಈ ಹಿಂದಿನ ಸರ್ಕಾರದ ಚುನಾವಣಾ ಗಿಮಿಕ್‌ ಎಂಬ ಆರೋಪ ಕೇಳಿಬಂದಿದೆ. ಹೊಸ ಸರ್ಕಾರ ಗ್ಯಾರಂಟಿಗಳ ಜತೆಗೆ ಈ ಯೋಜನೆಯನ್ನೂ ಮುನ್ನಡೆಸಬೇಕು ಎನ್ನುವ ಬೇಡಿಕೆ ಕಾರ್ಮಿಕರ ವಲಯದಲ್ಲಿ ಕೇಳಿಬರುತ್ತಿದೆ.

ಸುರಕ್ಷಿತವಲ್ಲದ ವಾಹನಗಳಲ್ಲಿ ಕಟ್ಟಡ ಕಾರ್ಮಿಕರ ಸಂಚಾರದಿಂದ ಹಲವು ಅವಘಡಗಳು ಸಂಭವಿಸಿದ್ದವು. ಹೀಗಾಗಿ ಹಿಂದಿನ ಬಿಜೆಪಿ ಸರ್ಕಾರ ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ನಗರ ಹಾಗೂ ಗ್ರಾಮೀಣ ಭಾಗದಿಂದ 45 ಕಿಮೀ ದೂರದವರೆಗೆ ಓಡಾಡಲು ಉಚಿತ ಬಸ್‌ ಪಾಸ್‌ ಯೋಜನೆಗೆ ಚಾಲನೆ ನೀಡಿತ್ತು. ಆರಂಭದಲ್ಲಿ ಬಿಎಂಟಿಸಿಯಲ್ಲಿ ಆರಂಭಿಸಿ ನಂತರ ರಾಜ್ಯಾದ್ಯಂತ ವಿಸ್ತರಿಸಿತ್ತು. ಆದರೆ, ಇದೀಗ ಯೋಜನೆಗೆ ಅಂತಿಮ ಮೊಳೆ ಹೊಡೆದಿದ್ದು, ನಾಲ್ಕು ತಿಂಗಳಿನಿಂದ ಯಾವುದೇ ಪಾಸ್‌ಗಳನ್ನು ನೀಡುತ್ತಿಲ್ಲ. ಕಳೆದ ಮಾ.31ಕ್ಕೆ ಪಾಸ್‌ ಅವಧಿ ಮುಕ್ತಾಯಗೊಂಡಿದ್ದು, ನವೀಕರಣ ಮಾಡದಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ | How to apply Gruha Jyothi : ಉಚಿತ ವಿದ್ಯುತ್‌ ಪಡೆಯಲು 5 ನಿಮಿಷದಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

ಆರಂಭದಲ್ಲಿ ಒಂದು ಲಕ್ಷ ಕಾರ್ಮಿಕರಿಗೆ ಉಚಿತ ಬಸ್‌ ಪಾಸ್‌ ವಿತರಿಸಿ, ನಂತರ ಹಂತ ಹಂತವಾಗಿ ಇದನ್ನು ವಿಸ್ತರಿಸುವ ಭರವಸೆ ವ್ಯಕ್ತವಾಗಿತ್ತು. ಕಟ್ಟಡ ಕಾಮಗಾರಿಗಾಗಿ ಕಾರ್ಮಿಕರು ವಲಸೆ ಹೋಗುವುದು ಹೆಚ್ಚು ಎನ್ನುವ ಕಾರಣ ನೀಡಿ ಪ್ರತಿ 3 ತಿಂಗಳಿಗೊಮ್ಮೆ ನವೀಕರಣದ ನಿಯಮ ರೂಪಿಸಲಾಗಿತ್ತು. ಹೀಗಾಗಿ ಮೊದಲ ಬಾರಿಗೆ 2022 ಸೆಪ್ಟೆಂಬರ್‌ ಹಾಗೂ ಡಿಸೆಂಬರ್‌ ಹೀಗೆ ಎರಡು ಹಂತದಲ್ಲಿ ಪಾಸ್‌ ನೀಡಲಾಯಿತು. ಈ ಯೋಜನೆ ಮುಂದುವರಿಯಲಿದೆ ಎಂಬ ಕಾರ್ಮಿಕರ ನಿರೀಕ್ಷೆ ಸುಳ್ಳಾಗಿದೆ. ಮಾ.31ರ ನಂತರ ಪಾಸ್‌ ವಿತರಿಸದಂತೆ ಹಾಗೂ ಅಂತಹ ಪಾಸ್‌ಗಳಿಗೆ ಪ್ರಯಾಣಕ್ಕೆ ಅವಕಾಶ ನೀಡದಂತೆ ಸಾರಿಗೆ ಸಂಸ್ಥೆ ಸೂಚನೆ ನೀಡಿದೆ.

ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಸಾಕಷ್ಟು ಹಣವಿದ್ದು, ಇದನ್ನು ಕಾರ್ಮಿಕರ ಕಲ್ಯಾಣಕ್ಕಾಗಿ ಬಳಸುವುದಾಗಿ ಹಿಂದಿನ ಬಿಜೆಪಿ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿತ್ತು. ಮೂರು ತಿಂಗಳಿಗೆ 42 ಕೋಟಿ ರೂ.ನಂತೆ ವರ್ಷಕ್ಕೆ 168 ಕೋಟಿ ರೂ. ತಗುಲುತ್ತದೆ. ಯೋಜನೆಗೆ ಚಾಲನೆ ನೀಡಿದ ಸಂದರ್ಭದಲ್ಲಿ ಹಂತ ಹಂತವಾಗಿ ವಿಸ್ತರಿಸಲಾಗುವುದು ಎಂಬ ಭರವಸೆ ನೀಡಲಾಗಿತ್ತು. ಆದರೆ, ಕೇವಲ 6 ತಿಂಗಳಲ್ಲಿ ಇದಕ್ಕೆ ತೀಲಾಂಜಲಿಯಿಡಲಾಗಿದೆ. ಇದೀಗ ರಾಜ್ಯದಲ್ಲಿ ಕಾಂಗ್ರೆಸ್‌ ಬಹುಮತದೊಂದಿಗೆ ಸರ್ಕಾರ ರಚನೆಗೆ ಮುಂದಾಗಿದೆ. ಇಂತಹ ಸಂದರ್ಭದಲ್ಲಿ ತಾನು ಹೊರಡಿಸಿರುವ ಐದು ಗ್ಯಾರಂಟಿ ಮೂಲಕ ಕಟ್ಟಡ ಕಾರ್ಮಿಕರಿಗೂ ಉಚಿತ ಬಸ್‌ ಪಾಸ್‌ ಮುಂದುವರಿಸಲಿ ಎಂಬುದು ಕಾರ್ಮಿಕರ ಒತ್ತಾಸೆಯಾಗಿದೆ.

ಇದನ್ನೂ ಓದಿ | Free Bus Service: ಹೆಚ್ಚಿದ ನಾರಿ ಶಕ್ತಿ! 166 ಕೋಟಿ ರೂಪಾಯಿ ಮೀರಿ ಮುನ್ನುಗ್ಗುತ್ತಿರುವ ಶಕ್ತಿ ಸ್ಕೀಂ!

ಕಾರ್ಮಿಕರ ಬಸ್ ಪಾಸ್ ಯೋಜನೆಯನ್ನು ಆರು ತಿಂಗಳಿಗೆ ನಿಲ್ಲಿಸಿದ್ದು ವಿಪರ್ಯಾಸ. ಇದೀಗ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರ ಐದು ಗ್ಯಾರಂಟಿಗಳ ಜತೆಗೆ ಈ ಯೋಜನೆಯನ್ನೂ ಅರ್ಹ ಫಲಾನುಭವಿಗಳಿಗೆ ವಿಸ್ತರಿಸಬೇಕು.
| ಮನೋಜ ಚನ್ನಯ್ಯ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ, ಬನವಾಸಿ

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕಾರ್ಮಿಕ ಸಚಿವನಾಗಿ ಶ್ರಮಿಕ ವರ್ಗದವರಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದೇನೆ. ಕಾರ್ಮಿಕ ವರ್ಗಕ್ಕೆ ನೀಡಿದ್ದ ಉಚಿತ ಬಸ್ ಪಾಸ್ ಯೋಜನೆಯನ್ನು ಈಗಿನ ಕಾಂಗ್ರೆಸ್ ಸರ್ಕಾರ ಮುಂದುವರಿಸಬೇಕು.
| ಶಿವರಾಮ್ ಹೆಬ್ಬಾರ್, ಮಾಜಿ ಕಾರ್ಮಿಕ ಸಚಿವರು

ಹಿಂದಿನ ಸರ್ಕಾರ ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಬಸ್ ಪಾಸ್ ಸೌಲಭ್ಯವನ್ನು ನೀಡಿತ್ತು. ಯೋಜನೆಯು ಮೂರು ತಿಂಗಳು ಚಾಲನೆಯಿತ್ತು. ಈಗಿನ ಸರ್ಕಾರ ಈ ಕುರಿತು ಯಾವುದೇ ನಿರ್ದೇಶನ ನೀಡಿಲ್ಲ. ಈ ಯೋಜನೆಯ ಆದೇಶ ನೇರವಾಗಿ ಕೇಂದ್ರ ಕಚೇರಿಗೆ ಬರುವುದರಿಂದ ಜಿಲ್ಲಾ ಕಚೇರಿಗೆ ಈ ಬಗ್ಗೆ ಮಾಹಿತಿಯಿರುವುದಿಲ್ಲ.
| ಅಕ್ಬರ್ ಮುಲ್ಲಾ, ಉತ್ತರ ಕನ್ನಡ ಜಿಲ್ಲಾ ಕಾರ್ಮಿಕ ಅಧಿಕಾರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಉಡುಪಿ

karnataka weather forecast : ಮುಕ್ಕಾಲು ರಾಜ್ಯಕ್ಕೆ ಕೈಕೊಟ್ಟ ಮಳೆರಾಯ; ಮತ್ತೆ ಮುಂಗಾರು ದುರ್ಬಲ

Rain News : ರಾಜ್ಯಾದ್ಯಂತ ಮುಂಗಾರು ದುರ್ಬಲಗೊಂಡಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ (karnataka weather forecast) ನಿರೀಕ್ಷೆ ಇದೆ. ಉಳಿದಂತೆ ಒಣ ಹವೆ ಇರಲಿದೆ.

VISTARANEWS.COM


on

By

No Rain Girl waiting For rain and holding Umbrella
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಸಕ್ರಿಯವಾಗಿದ್ದ ಮುಂಗಾರು ರಾಜ್ಯದಲ್ಲಿ (karnataka weather forecast) ಮತ್ತೆ ದುರ್ಬಲಗೊಂಡಿದೆ. ಅಕ್ಟೋಬರ್‌ ಮೊದಲ ವಾರದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇತ್ತು. ಆದರೆ ಇದೀಗ ವರುಣ ಕೈಕೊಟ್ಟಿದ್ದಾನೆ. ಮುಂದಿನ 24 ಗಂಟೆಯಲ್ಲಿ ಒಣ ಹವೆ ಇರಲಿದ್ದು, ಉತ್ತರ ಒಳನಾಡಿನಲ್ಲಿ ಚದುರಿದಂತೆ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಜಿಲ್ಲೆಯಾದ ತುಮಕೂರು, ಮಂಡ್ಯ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಒಣಹವೆ ಮೇಲುಗೈ ಸಾಧಿಸುತ್ತದೆ. ಬೆಂಗಳೂರು ನಗರ ಪ್ರದೇಶದಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಬದಲಿಗೆ ಒಣಹವೆ ಇರಲಿದೆ.

ಇದನ್ನೂ ಓದಿ: Mangaluru News : ವಿಷಕಾರಿ ಹಣ್ಣಿನ ಜ್ಯೂಸ್ ಕುಡಿದು ಮಹಿಳೆ ಸಾವು

ಉತ್ತರ ಒಳನಾಡಲ್ಲಿ ಲಘು ಮಳೆ

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಹಾವೇರಿ, ಗದಗ, ವಿಜಯನಗರ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿಯಲ್ಲಿ ಗುಡುಗು ಮಳೆ

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಚದುರಿದ ಮಳೆ ಸುರಿಯಬಹುದು.

ಇನ್ನು ರಾಜ್ಯದಲ್ಲಿ ಸೋಮವಾರ ಕಲಬುರಗಿಯ ಅಡಕಿಯಲ್ಲಿ 3 ಸೆಂ.ಮೀ, ಮುಧೋಳದಲ್ಲಿ 2 ಸೆಂ.ಮೀ ಹಾಗೂ ಉತ್ತರ ಕನ್ನಡದ ಕದ್ರಾ, ಮಂಕಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಉತ್ತರ ಕನ್ನಡ

Uttara Kannada News: ರಾಜ್ಯಮಟ್ಟದ ವೇಷದೊಡನೆ ಭಾಷಣ ಸ್ಪರ್ಧೆ; ಯಲ್ಲಾಪುರದ ಶ್ರೀರಕ್ಷಾಗೆ ಪ್ರಥಮ ಸ್ಥಾನ

Uttara Kannada News: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್‌ ಮೈಸೂರು, ಮಕ್ಕಳ ಸಮಗ್ರ ವಿಕಾಸ ವೇದಿಕೆ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ್ದ ರಾಜ್ಯ ವೇಷದೊಡನೆ ಭಾಷಣ ಸ್ಪರ್ಧೆಯಲ್ಲಿ ಯಲ್ಲಾಪುರ ತಾಲೂಕಿನ ಶ್ರೀರಕ್ಷಾ ಶಿವಾನಂದ ವೆರ್ಣೇಕರ ಪ್ರಥಮ ಸ್ಥಾನ ಪಡೆದಿದ್ದಾಳೆ.

VISTARANEWS.COM


on

Sriraksha of Yallapur won the first place in the state-level costumed speech competition
ಯಲ್ಲಾಪುರದ ಶ್ರೀರಕ್ಷಾ ಶಿವಾನಂದ ವೆರ್ಣೇಕರ.
Koo

ಯಲ್ಲಾಪುರ: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್‌ ಮೈಸೂರು, ಮಕ್ಕಳ ಸಮಗ್ರ ವಿಕಾಸ ವೇದಿಕೆ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆಯ (77th Independence Day Celebration) ಪ್ರಯುಕ್ತ ಆಯೋಜಿಸಿದ್ದ ರಾಜ್ಯಮಟ್ಟದ (State Level) ವೇಷದೊಡನೆ ಭಾಷಣ ಸ್ಪರ್ಧೆಯಲ್ಲಿ ತಾಲೂಕಿನ ಶ್ರೀರಕ್ಷಾ ಶಿವಾನಂದ ವೆರ್ಣೇಕರ ಪ್ರಥಮ ಸ್ಥಾನ (First Place) ಪಡೆದಿದ್ದಾಳೆ.

1 ರಿಂದ 5 ನೇ ಹಾಗೂ 6 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ವೇಷದೊಡನೆ ಭಾಷಣ ಸ್ಪರ್ಧೆಯನ್ನು ಆನ್‌ಲೈನ್‌ನಲ್ಲಿ ಆಯೋಜನೆ ಮಾಡಲಾಗಿತ್ತು. ಆನ್‌ಲೈನ್‌ ಮೂಲಕ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್‌ ನ ತಾಂತ್ರಿಕ ಮುಖ್ಯಸ್ಥ ಚಂದ್ರಶೇಖರ ನಾಯಕ, ಇಂದಿನ ಮಕ್ಕಳಲ್ಲಿ ಸ್ವಾತಂತ್ರ್ಯ ನಾಯಕರ ಮೌಲ್ಯಗಳನ್ನು ಬೆಳೆಸಲು ಈ ವೇಷದೊಡನೆ ಭಾಷಣ ಸ್ಪರ್ಧೆ ಸ್ಫೂರ್ತಿ ನೀಡುತ್ತದೆ ಎಂದರು.

ಇದನ್ನೂ ಓದಿ: Yashasvi Jaiswal: ಚೊಚ್ಚಲ ಟಿ20 ಶತಕ ಬಾರಿಸಿ ಗಿಲ್​ ದಾಖಲೆ ಮುರಿದ ಜೈಸ್ವಾಲ್

ಮಕ್ಕಳ ಸಮಗ್ರ ವಿಕಾಸ ವೇದಿಕೆಯ ಹೊ.ರಾ. ಪರಮೇಶ್ವರ ಉಪನ್ಯಾಸ ನೀಡಿ, ಮಾತನಾಡಿ, ಮಕ್ಕಳಲ್ಲಿ ಭಾಷಣ ಕಲೆ ಮೂಡಿಸಲು ಬೇಕಾಗುವ ತಂತ್ರಗಳನ್ನು ತಿಳಿಸಿದರು.

6 ರಿಂದ 10 ನೇ ತರಗತಿಯ ಹಿರಿಯ ವಿಭಾಗದಲ್ಲಿ ಶ್ರೀರಕ್ಷಾ ಶಿವಾನಂದ ವೆರ್ಣೇಕರ ಪ್ರಥಮ, ನಂದಿತಾ ಜಿ.ಎನ್. ದ್ವಿತೀಯ ಹಾಗೂ ಪಂಚಮಿ ಮಹೇಶ ಭಟ್ಟ ತೃತೀಯ ಬಹುಮಾನವನ್ನು ಪಡೆದಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್‌ನ ರಾಜ್ಯಾಧ್ಯಕ್ಷ ಪಿ. ಮಹೇಶ್‌, ರಾಜ್ಯ ಪ್ರಧಾನ ಕಾರ್ಯದರ್ಶಿ ಸಂತೋಷ ಬಂಡೆ ಹಾಗೂ ಸತೀಶ ಶೆಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ: Gold Rate Today: ಹಬ್ಬದ ಸೀಸನ್‌ ಮುನ್ಸೂಚನೆ, ಇಳಿಯಿತು ಚಿನ್ನದ ಬೆಲೆ

ವೇದಿಕೆ ಮುಖ್ಯಸ್ಥೆ ಆಶಾ ಶೆಟ್ಟಿ ಪ್ರಸ್ತಾವಿಕವಾಗಿ ಮಾತನಾಡಿದರು. ಆರ್.ಎಸ್. ಪಾಟೀಲ ಸ್ವಾಗತಿಸಿದರು. ಆರ್. ಆಶಾ ನಿರೂಪಿಸಿದರು.

Continue Reading

ಉತ್ತರ ಕನ್ನಡ

Karwar Tunnel Route : ಕಾರವಾರ ರಾಷ್ಟ್ರೀಯ ಹೆದ್ದಾರಿ 66ರ ಸುರಂಗ ಮಾರ್ಗ ಕೊನೆಗೂ ಸಂಚಾರ ಮುಕ್ತ!

Karwar Tunnel Route : ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ ಸುರಂಗ ಮಾರ್ಗದಲ್ಲಿ ಸಂಚಾರಕ್ಕೆ ಕೊನೆಗೂ ಅನುಮತಿ ಸಿಕ್ಕಿದೆ. ಈ ಮಾರ್ಗದಲ್ಲಿ ಯಾವುದೇ ಅವಘಡಗಳು ಸಂಭವಿಸಿದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರೇ ಹೊಣೆ ಎಂಬ ಷರತ್ತಿನ ಮೇರೆಗೆ ಅನುಮತಿ ನೀಡಲಾಗಿದೆ.

VISTARANEWS.COM


on

Karwar TUNNEL ROUTE
Koo

ಕಾರವಾರ: ಜಿಲ್ಲಾಡಳಿತ ಹಾಗೂ ಸಾರ್ವಜನಿಕರ ನಡುವೆ ತಿಕ್ಕಾಟಕ್ಕೆ ಕಾರಣವಾಗಿದ್ದ ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ (National Highway 66 in Karwar) ಸುರಂಗ ಮಾರ್ಗದಲ್ಲಿ (Karwar Tunnel Route) ಸಂಚಾರಕ್ಕೆ ಕೊನೆಗೂ ಜಿಲ್ಲಾಡಳಿತ ಅನುಮತಿ ನೀಡಿದೆ. ಅಕ್ಟೋಬರ್ 2ಕ್ಕೆ ನಿಗದಿಯಾಗಿದ್ದ ಸುರಂಗ ಮಾರ್ಗದ (Subway of Karwar) ತಾಂತ್ರಿಕ ತಪಾಸಣೆ (Technical Inspection) ಅ.8ಕ್ಕೆ ನಡೆಯಲಿದ್ದು ಟನಲ್ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ನೀಡುವಂತೆ ಜನಸಾಮಾನ್ಯರಿಂದ ಸಾಕಷ್ಟು ಒತ್ತಡ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ತಪಾಸಣೆ ನಡೆಯುವವರೆಗೆ ಈ ಮಾರ್ಗದಲ್ಲಿ ಯಾವುದೇ ಅವಘಡಗಳು ಸಂಭವಿಸಿದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (National Highways Authority of India) ಯೋಜನಾ ನಿರ್ದೇಶಕರೇ ಹೊಣೆಯಾಗಲಿದ್ದಾರೆ ಎನ್ನುವ ಷರತ್ತಿನ ಮೇರೆಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅ.2ರ ಸಂಜೆಯಿಂದಲೇ ಸುರಂಗ ಮಾರ್ಗದಲ್ಲಿ ಸಂಚಾರಕ್ಕೆ ಅನುಮತಿ ನೀಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರವಾರದಿಂದ ಬಿಣಗಾದವರೆಗೆ ನಿರ್ಮಿಸಲಾಗಿರುವ ಸುರಂಗ ಮಾರ್ಗದಲ್ಲಿ (Tunnel from Karwar to Binaga) ಮಳೆಗಾಲದಲ್ಲಿ ನೀರು ಸೋರಿಕೆಯಾಗುತ್ತಿದುದರಿಂದ, ಸುರಕ್ಷತೆಯ ಕಾರಣಕ್ಕೆ ಸಂಚಾರವನ್ನು ನಿಷೇಧಿಸಲಾಗಿತ್ತು. ರಿಪೇರಿ ಕಾರ್ಯ ಕೈಗೊಂಡ ಬಳಿಕ ಖಾಸಗಿ ಸಂಸ್ಥೆಯಿಂದ ಟನಲ್ ತಪಾಸಣೆ ಕೈಗೊಂಡು ದೃಢತೆ ಪ್ರಮಾಣಪತ್ರ ಸಲ್ಲಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಸೂಚಿಸಲಾಗಿತ್ತು.

Karwar TUNNEL ROUTE

ಫಿಟ್ನೆಸ್‌ ಪ್ರಮಾಣ ಪತ್ರ ಸಲ್ಲಿಕೆ ಆಗಿಲ್ಲ

ಎರಡು ತಿಂಗಳು ಕಳೆದರೂ ಸಹ ಎನ್‌ಎಚ್ಎಐ ಅಥವಾ ಐಆರ್‌ಬಿ ಕಂಪೆನಿ ಫಿಟ್ನೆಸ್ ಪ್ರಮಾಣಪತ್ರವನ್ನು (Fitness Certificate_ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ಟನಲ್‌ ಅನ್ನು ಸಂಚಾರಕ್ಕೆ ಮುಕ್ತಗೊಳಿಸಿರಲಿಲ್ಲ. ಟನಲ್ ಸಂಚಾರಕ್ಕೆ ಆಗ್ರಹಿಸಿ ಸೆಪ್ಟೆಂಬರ್ 29ರಂದು ಎಂಎಲ್‌ಸಿ ಗಣಪತಿ ಉಳ್ವೇಕರ್ ನೇತೃತ್ವದಲ್ಲಿ ಸಾರ್ವಜನಿಕರು ಬೃಹತ್ ಪ್ರತಿಭಟನೆ ನಡೆಸಿದ್ದು, ಇದಾದ ಬಳಿಕ ಅ.2 ರಂದು ತಾಂತ್ರಿಕ ತಪಾಸಣೆಯನ್ನು (Technical Inspection) ತಜ್ಞರಿಂದ ಮಾಡಿಸಿ ಸಂಚಾರಕ್ಕೆ ಅವಕಾಶ ನೀಡುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದರು. ಕಾರಣಾಂತರಗಳಿಂದ ತಪಾಸಣೆಯನ್ನು ಅ.8ರಂದು ನಿಗದಿಪಡಿಸಲಾಗಿದೆ.

Karwar TUNNEL ROUTE

ಸವಾರರ ಅನುಕೂಲಕ್ಕಾಗಿ ಷರತ್ತುಬದ್ಧ ಅನುಮತಿ

ತಪಾಸಣೆ ಕಾರ್ಯದ ವಿಳಂಬದಿಂದಾಗಿ ಸಾರ್ವಜನಿಕರಿಗೆ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ಹಾಗೂ ವಾಹನ ಸವಾರರ ಅನುಕೂಲಕ್ಕಾಗಿ, ಕಾರವಾರದಿಂದ ಬಿಣಗಾಕ್ಕೆ ಸಂಪರ್ಕ ಕಲ್ಪಿಸುವ ಸುರಂಗ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ಮನವಿ ಮಾಡಿದ್ದರು. ಈ ಹಿನ್ನೆಲೆ ಟನಲ್ ಸಂಚಾರದ ನಿರ್ಬಂಧ ಅಧಿಸೂಚನೆಯನ್ನು ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Karwar TUNNEL ROUTE

ಅ.8ರ ವರೆಗೆ ಸುರಂಗ 1 ಮತ್ತು 2ರಲ್ಲಿ ಉಂಟಾಗುವ ಯಾವುದೇ ಅನಾಹುತಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರೇ ಜವಾಬ್ದಾರರಾಗಿದ್ದಾರೆ. ಅ.8 ರಂದು ತಪಾಸಣೆ ಕೈಗೊಳ್ಳುವ ಜವಾಬ್ದಾರಿ ಯೋಜನಾ ನಿರ್ದೇಶಕರದ್ದಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತದಿಂದ ಯಾವುದೇ ಪತ್ರ ವ್ಯವಹಾರ ನಡೆಸಲಾಗುವುದಿಲ್ಲ ಎನ್ನುವ ನಿಬಂಧನೆಯನ್ನು ಹಾಕಿ ಜಿಲ್ಲಾಡಳಿತ ಆದೇಶ ಹೊರಡಿಸಿ, ಟನಲ್ ಸಂಚಾರ ಆರಂಭಕ್ಕೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: BK Hariprasad : ಹೈಕಮಾಂಡ್‌ಗೆ ನನ್ನ ಮೇಲೆ ಲವ್ ಜಾಸ್ತಿ; ನಾನೇನು ಮಾತನಾಡಲ್ಲ, ಮಾತನಾಡಿದ್ರೆ ನೋಟಿಸ್‌ ಕೊಡ್ತಾರೆ!

ಎರಡೂ ಬದಿ ಟನಲ್‌ ಮಾರ್ಗ ಸಂಚಾರ ಮುಕ್ತ

ಟನಲ್ ಸಂಚಾರ ಆರಂಭಕ್ಕೆ ಸೂಚನೆ ನೀಡಿದ ಬೆನ್ನಲ್ಲೇ ಕಾರವಾರ ಸಂಚಾರಿ ಠಾಣಾ ಪೊಲೀಸರು ಟನಲ್‌ಗೆ ಅಡ್ಡಲಾಗಿ ಹಾಕಲಾಗಿದ್ದ ಕಲ್ಲುಗಳನ್ನು ಐಆರ್‌ಬಿಯ ಜೆಸಿಬಿ ಮೂಲಕ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಬೆಳಗಿನ ವೇಳೆ ಒಂದು ಬದಿ ಟನಲ್‌ನಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಎರಡೂ ಟನಲ್‌ಗಳೂ ಸಹ ಸಂಚಾರಕ್ಕೆ ಮುಕ್ತವಾಗುವ ಮೂಲಕ ಸಾಕಷ್ಟು ದಿನಗಳಿಂದ ಹೋರಾಟ, ರಾಜಕೀಯ ಆರೋಪ, ಪ್ರತ್ಯಾರೋಪಗಳಿಗೂ ಕಾರಣವಾಗಿದ್ದ ಟನಲ್ ಸಂಚಾರ ನಿರ್ಬಂಧ ಪ್ರಕರಣ ಸುಖಾಂತ್ಯ ಕಂಡಂತಾಗಿದೆ.

Continue Reading

ಉಡುಪಿ

Karnataka Weather Forecast : ಕರಾವಳಿಯಲ್ಲಿ ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಫುಲ್‌ ಸ್ಟಾಪ್‌

Karnataka Weather Forecast : ದಕ್ಷಿಣ ಒಳನಾಡಲ್ಲಿ ಮಳೆ ದುರ್ಬಲವಾಗಿದ್ದು, ಉತ್ತರ ಒಳನಾಡು ಹಾಗೂ ಕರಾವಳಿ, ಮಲೆನಾಡಲ್ಲಿ (Rain News) ಸಾಮಾನ್ಯವಾಗಿರಲಿದೆ.

VISTARANEWS.COM


on

By

Girl Enjoying Rain
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ (Rain News) ತಗ್ಗಿದೆ. ಆದರೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಸಾಧಾರಣವಾಗಿದೆ. ದಕ್ಷಿಣ ಒಳನಾಡಲ್ಲಿ ನೈರುತ್ಯ ಮುಂಗಾರು ದುರ್ಬಲಗೊಂಡಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ (Karnataka Weather Forecast) ಸಾಧ್ಯತೆ ಇದೆ.

ಬ್ರೇಕ್‌ ಹಾಕಿದ ಮಳೆರಾಯ, ಶುಷ್ಕ ವಾತಾವರಣ

ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅತಿ ಕಡಿಮೆ ಪ್ರಮಾಣದಲ್ಲಿ ಮಳೆಯಾಗಬಹುದು. ಉಳಿದ ಪ್ರದೇಶಗಳಲ್ಲಿ ಶುಷ್ಕ ವಾತಾವರಣದಿಂದ ಕೂಡಿರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ ಮತ್ತು ಗದಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ, ಮಲೆನಾಡಲ್ಲಿ ಚದುರಿದ ಮಳೆ

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆ ಸುರಿಯಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ – 20 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 21 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಹೊನ್ನಾವರ: 30 ಡಿ.ಸೆ- 24 ಡಿ.ಸೆ
ಕಲಬುರಗಿ: 31 ಡಿ.ಸೆ – 23 ಡಿ.ಸೆ
ಬೆಳಗಾವಿ: 28 ಡಿ.ಸೆ – 19 ಡಿ.ಸೆ
ಕಾರವಾರ: 33 ಡಿ.ಸೆ – 23 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
Sphoorti Salu
ಸುವಚನ7 mins ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Vivek Ramaswamy offering rs 80 lakh to nanny Says media report
ಪ್ರಮುಖ ಸುದ್ದಿ5 hours ago

ಮಕ್ಕಳನ್ನು ನೋಡಿಕೊಳ್ಳುವ ಆಯಾ ಕೆಲಸಕ್ಕೆ 80 ಲಕ್ಷ ರೂ. ಸ್ಯಾಲರಿ ಆಫರ್!

MLC TA Sharavana
ಬೆಂಗಳೂರು5 hours ago

TA Sharavana: ಅನಾಮಿಕರಾಗಿದ್ದ ಜಮೀರ್‌ಗೆ ರಾಜಕೀಯ ಬದುಕು ಕೊಟ್ಟಿದ್ದೇ ಜೆಡಿಎಸ್: ಟಿ.ಎ.ಶರವಣ

Justin Trudeau
ದೇಶ6 hours ago

India Canada Row: ಥಂಡಾ ಹೊಡೆದ ಕೆನಡಾ ಪಿಎಂ! ಭಾರತದೊಂದಿಗೆ ಇನ್ನು ಜಗಳ ಮಾಡಲ್ಲ ಎಂದ ಟ್ರೂಡೋ

Netherlands cricket team
ಕ್ರಿಕೆಟ್6 hours ago

ICC World Cup 2023 : ವಿಶ್ವ ಕಪ್​ನಲ್ಲಿ ಆಡಲಿರುವ ನೆದರ್ಲ್ಯಾಂಡ್ಸ್​​ ತಂಡದ ಬಲವೇನು? ದೌರ್ಬಲ್ಯವೇನು?

Modi and KTR
ದೇಶ6 hours ago

ಎನ್‌ಡಿಎಗೆ ಸೇರಿಸಿಕೊಳ್ಳಿ ಎಂದಿದ್ದ ಕೆಸಿಆರ್; ಮೋದಿ! ಬಿಜೆಪಿ ಜತೆ ಹೋಗಲು ನಮಗೇನು ಹುಚ್ಚು ನಾಯಿ ಕಚ್ಚಿದೆಯಾ; ಕೆಟಿಆರ್

Child dies
ಕರ್ನಾಟಕ6 hours ago

Anekal News: ಮಹಡಿ ಮೇಲಿಂದ ಬಿದ್ದು 2 ವರ್ಷದ ಮಗು ಸಾವು

MB Patil visits america
ಕರ್ನಾಟಕ7 hours ago

MB Patil : ಬೆಂಗಳೂರಿನಲ್ಲಿ 800 ಕೋಟಿ ರೂ. ಹೂಡಲು ಕ್ರಿಪ್ಟನ್ ಸೊಲ್ಯೂಷನ್ಸ್ ಒಲವು: ಎಂ.ಬಿ. ಪಾಟೀಲ್

Top 10 news
ಟಾಪ್ 10 ನ್ಯೂಸ್7 hours ago

VISTARA TOP 10 NEWS : ಜಾತಿ ಗಣತಿಗೆ ಮೋದಿ ವಿರೋಧ, ಶಿವಮೊಗ್ಗದಲ್ಲಿ ಪೊಲೀಸರಿಗೇ ಬೆದರಿಕೆ ಹಾಕಿದ್ದ ಕಿಡಿಗೇಡಿಗಳು ಮತ್ತಿತರ ದಿನದ ಪ್ರಮುಖ ಸುದ್ದಿಗಳು

Agriculture Minister N Cheluvarayaswamy latest pressmeet at Kalaburagi
ಕರ್ನಾಟಕ7 hours ago

Kalaburagi News: ಮುಂದಿನ ವಾರ ರಾಜ್ಯಕ್ಕೆ ಬರ ಅಧ್ಯಯನ ತಂಡ : ಕೃಷಿ ಸಚಿವ ಚೆಲುವರಾಯಸ್ವಾಮಿ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Karnataka bandh Majestic
ಕರ್ನಾಟಕ1 week ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

kpsc recruitment 2023 pdo recruitment 2023
ಉದ್ಯೋಗ3 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ10 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

The maintenance train finally lifted Metro services as usual
ಕರ್ನಾಟಕ13 hours ago

Namma Metro : ಕೊನೆಗೂ ಲಿಫ್ಟ್ ಆಯ್ತು ಮೆಂಟೈನ್ಸ್‌ ವೆಹಿಕಲ್‌; ಎಂದಿನಂತೆ ಮೆಟ್ರೋ ಓಡಾಟ

BBK Season 10 KicchaSudeep
ಕಿರುತೆರೆ14 hours ago

BBK Season 10 : ಅಕ್ಟೋಬರ್‌ 8 ರಿಂದ ಬಿಗ್‌ ಬಾಸ್‌ ಆಟ; ಚಾರ್ಲಿ ಎಂಟ್ರಿ ಕನ್ಫರ್ಮ್, ಉಳಿದವರು ಯಾರು ?

dina bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರಿಗೆ ಮಾತೇ ಮುತ್ತು, ಮಾತೇ ಮೃತ್ಯು!

Actor Nagabhushana
ಕರ್ನಾಟಕ2 days ago

Actor Nagabhushana : ಡ್ರಂಕ್‌ ಆ್ಯಂಡ್‌ ಡ್ರೈವ್‌ನಲ್ಲಿ ನಟ ನಾಗಭೂಷಣ್‌ ನೆಗಟಿವ್‌; ವಿಚಾರಣೆಗೆ ಕರೆದ ಪೊಲೀಸರು

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಆಪ್ತರೊಂದಿಗೆ ಮಾಡುವ ವ್ಯಾಪಾರ ನಷ್ಟ ತಂದೀತು ಹುಷಾರ್‌!

Terrorist Attack in Turkey Suicide bomber blows himself near parliament
ಪ್ರಮುಖ ಸುದ್ದಿ2 days ago

Terrorist Attack: ಟರ್ಕಿ ಸಂಸತ್ ಬಳಿ ಆತ್ಮಹತ್ಯಾ ಬಾಂಬ್ ದಾಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ಸ್ಫೋಟದ ಕ್ಷಣಗಳು!

prajwal and yashswini
ಕರ್ನಾಟಕ3 days ago

Actor Nagabhushana : ಆ್ಯಕ್ಟಿಂಗ್‌ ನೋಡಿ ಮೆಚ್ಚಿದವರ ಪಾಲಿಗೆ ಯಮನಾಗಿಬಿಟ್ಟ; ಮೃತ ಕುಟುಂಬಸ್ಥರ ಆಕ್ರೋಶ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಆಪ್ತರೊಂದಿಗೆ ಅತಿಯಾದ ಸಲುಗೆ ಈ ರಾಶಿಯವರಿಗೆ ಒಳ್ಳೆಯದಲ್ಲ!

dina bhavishya
ಪ್ರಮುಖ ಸುದ್ದಿ4 days ago

Dina Bhavishya : ದಿನ ಪೂರ್ತಿ ಈ ರಾಶಿಯವರಿಗೆ ಟೆನ್ಷನ್‌ ಜತೆಗೆ ಪ್ರೆಶರ್‌

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯವರಿಗೆ ಮನೆಯಲ್ಲೂ ಕಿರಿಕಿರಿ, ಆಫೀಸ್‌ನಲ್ಲೂ ಕಿರಿಕ್‌!

ಟ್ರೆಂಡಿಂಗ್‌