free bus service Male anger against Shakti projectFree Bus service : ನಮ್‌ ಹೆಂಡ್ರಿಗೆ ನಾವಿಲ್ವಾ? ಸಿದ್ದರಾಮಯ್ಯ ಏನ್‌ ಫ್ರೀ ಕೊಡೋದು? ನೋಡಲೇಬೇಕಾದ ವಿಡಿಯೊಗಳಿವು! - Vistara News

ಕರ್ನಾಟಕ

Free Bus service : ನಮ್‌ ಹೆಂಡ್ರಿಗೆ ನಾವಿಲ್ವಾ? ಸಿದ್ದರಾಮಯ್ಯ ಏನ್‌ ಫ್ರೀ ಕೊಡೋದು? ನೋಡಲೇಬೇಕಾದ ವಿಡಿಯೊಗಳಿವು!

Free Bus service: ಶಕ್ತಿ ಯೋಜನೆಗೆ ಮಹಿಳೆಯರಿಂದ ಉತ್ತಮ ಸ್ಪಂದನೆ ಸಿಕ್ಕಿದ್ದು, ಹೆಚ್ಚಿನವರು ಇದರ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ. ಮಣ್ಣೆತ್ತಿನ ಅಮಾವಾಸ್ಯೆ ಜತೆಗೆ ವೀಕೆಂಡ್‌ ಹಿನ್ನೆಲೆ ಫ್ರೀ ಬಸ್‌ಗೆ ನಾರಿಯರು ಮುಗಿಬಿದ್ದಿದ್ದರು. ಮಹಿಳೆಯರ ಪಾರಪತ್ಯದಲ್ಲಿ ಪುರುಷ ಮಹಾಶಯರು ಕಂಗಾಲಾಗಿದ್ದರು.

VISTARANEWS.COM


on

Free bus Effect
ಜನಸಂದಣಿಯಲ್ಲಿ ಸಿಲುಕಿದ್ದ ಮಗಳನ್ನು ಕಿಟಕಿಯಿಂದಲೇ ಇಳಿಸಿಕೊಂಡ ತಾಯಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಕಾಂಗ್ರೆಸ್‌ ಗ್ಯಾರಂಟಿ ಯೋಜನೆಯ ಮೊದಲ ಭಾಗವಾದ “ಶಕ್ತಿ” ಯೋಜನೆಗೆ (Shakti scheme) ಮಹಿಳೆಯರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಭಾನುವಾರ ಮಣ್ಣೆತ್ತಿನ ಅಮಾವಾಸ್ಯೆ ಹಿನ್ನೆಲೆ ಮಹಿಳೆಯರು ಇದರ ಸಂಪೂರ್ಣ ಲಾಭ ಪಡೆಯಲು ಪುಣ್ಯಕ್ಷೇತ್ರಗಳು ಸೇರಿ ಪ್ರವಾಸಿತಾಣಗಳಿಗೆ ತಂಡೋಪ ತಂಡವಾಗಿ (Free Bus service) ಭೇಟಿ ನೀಡಿದರು. ಆದರೆ ಈ ಯೋಜನೆಗೆ ಕೆಲ ಪುರುಷ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ. ನಾವು ವೋಟ್‌ ಹಾಕಿಲ್ವಾ? ನಾವೇನು ಅನ್ಯಾಯ ಮಾಡಿದ್ದೀವಿ. ಮನೆಯಲ್ಲಿ ಹೆಂಗಸರು ಬಸ್ ಫ್ರೀ ಇದೆ ಎಂದು ಹೊರಗೆ ಹೋಗುತ್ತಿದ್ದಾರೆ. ಮಕ್ಕಳಿಗೆ, ನಮಗೆ ಸರಿಯಾಗಿ ಅಡುಗೆ ಮಾಡುತ್ತಿಲ್ಲ. ಬಟ್ಟೆನೂ ಒಗೆಯುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಮುಂದುವರಿದು, ಮಹಿಳೆಯರಿಗೆ ಉಚಿತ ಬಸ್‌ನಿಂದಾಗಿ ನಮಗೆ ಸೀಟು ಸಿಗುತ್ತಿಲ್ಲ. ಸರ್ಕಾರ 60 ವರ್ಷ ಮೇಲ್ಪಟ್ಟವರಿಗೆ ಈ ಯೋಜನೆ ನೀಡಬೇಕಿತ್ತು. ಸಿದ್ದರಾಮಯ್ಯಗೆ ಗಂಡಸರು ಏನು ಅನ್ಯಾಯ ಮಾಡಿದ್ದಾರೆ. ನಮ್ಮ ಹೆಂಡತಿ ಮಕ್ಕಳಿಗೆ ನಾವು ಇಲ್ವಾ? ಸಿದ್ದರಾಮಯ್ಯ ಏನು ಎಲ್ಲಾ ಫ್ರೀ ಕೊಡುವುದು ಎಂದು ಸರ್ಕಾರದ ಗ್ಯಾರಂಟಿಗಳ ವಿರುದ್ಧ ಕಿಡಿಕಾರಿದ್ದಾರೆ.

ಕಾಂಗ್ರೆಸ್‌ಗೆ ನಾವು ವೋಟ್‌ ಹಾಕಿದ್ದೀವಿ; ಬಸ್ ತಡೆದು ಮಂಗಳಮುಖಿಯರ ರಂಪಾಟ

ಬೆಳಗಾವಿಯ ರಾಯಭಾಗ ತಾಲೂಕಿನ‌ ಹಾರೂಗೇರಿಯಲ್ಲಿ ಮಂಗಳಮುಖಿಯರು ಕೆಎಸ್‌ಆರ್‌ಟಿಸಿ ಬಸ್ ತಡೆದು ಬೀದಿ ರಂಪಾಟ ಮಾಡಿದ್ದಾರೆ. ಕೈ ತೋರಿಸಿದರೂ ಬಸ್ ನಿಲ್ಲಿಸದ ಕೆಎಸ್ಆರ್‌ಟಿಸಿ ಡ್ರೈವರ್‌ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ನಾವೂ ಕಾಂಗ್ರೆಸ್‌ಗೆ ಮತ ಹಾಕಿದ್ದೇವೆ. ಮಹಿಳೆಯರಿಗೆ ಬಸ್‌ ನಿಲ್ಲಿಸುತ್ತೀರಿ, ನಮಗೆ ಯಾಕೆ ಬಸ್ ನಿಲ್ಲಿಸಲ್ಲ ಎಂದು ಮಂಗಳಮುಖಿಯರು ಕಿಡಿಕಾರಿದ್ದಾರೆ.

ರಶ್‌ ಎಫೆಕ್ಟ್‌- ಡ್ರೈವರ್‌ ಸೀಟ್‌ನಿಂದಲೇ ಬಸ್‌ ಹತ್ತಿದ ಮಹಿಳೆ

ಶಕ್ತಿ ಯೋಜನೆಯಿಂದಾಗಿ ಬಸ್‌ಗಳೆಲ್ಲವೂ ರಶ್‌ ಆಗಿದ್ದು, ಶೃಂಗೇರಿಯಲ್ಲಿ ಮಹಿಳೆಯೊಬ್ಬರು ಡ್ರೈವರ್‌ ಸೀಟ್‌ನಿಂದಲೇ ಬಸ್‌ ಹತ್ತಿ ಒಳಗೆ ಹೋಗಿದ್ದಾರೆ. ಬಸ್ ಬಂದ ಕೂಡಲೇ ಮಹಿಳಾಮಣಿಗಳು ಜೇನುಹುಳಗಳಂತೆ ಮುತ್ತಿಕೊಳ್ಳುತ್ತಿದ್ದರು. ಇದನ್ನು ಕಂಡು ದಂಗಾದ ಮಹಿಳೆ, ಚಾಲಕನನ್ನು ಸೀಟ್‌ನಿಂದ ಎಬ್ಬಿಸಿದ್ದಾರೆ. ಬಳಿಕ ಇಬ್ಬರು ಮಕ್ಕಳನ್ನು ಹತ್ತಿಸಿ, ತಾನು ಡ್ರೈವರ್ ಸೀಟಿನಿಂದಲೇ ಹತ್ತಿದ್ದಾರೆ.

ಕೂರಲು ಸೀಟಿಲ್ಲ, ನಿಲ್ಲಲು ಜಾಗವಿಲ್ಲ; ಡೋರ್‌ನಲ್ಲೇ ನಿಂತರು

ಫ್ರೀ ಬಸ್‌ ಎಫೆಕ್ಟ್‌ ಯಾದಗಿರಿಯ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಮಹಿಳೆಯರು ದಂಡು ದಂಡಾಗಿ ಆಗಮಿಸುತ್ತಿದ್ದಾರೆ. ಯಾದಗಿರಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್‌ನಲ್ಲಿ ಸೀಟ್ ಪಡೆಯಲು ಮಹಿಳೆಯರು ಮುಗಿಬಿದ್ದರು. ಸಣ್ಣ ಮಕ್ಕಳನ್ನು ಕಂಕುಳಲ್ಲಿ ಇಟ್ಟಕೊಂಡು ಬಸ್ ಏರಲು ಮುಂದಾದರು.

ಕಿಟಿಕಿಯಿಂದಲೇ ಮಕ್ಕಳನ್ನು ಹತ್ತಿಸಿ ಸೀಟು ಗಿಟ್ಟಿಸಿಕೊಂಡ ಪ್ರಯಾಣಿಕರು

ನಿಲ್ಲಲು ಬಸ್ ಒಳಗಡೆ ಜಾಗ ಇಲ್ಲದ ಕಾರಣ ಬಾಗಿಲಿನ ತುದಿಯಲ್ಲಿ ನಿಂತು ಪ್ರಯಾಣಿಸಿದರು. ಮೈಲಾಪುರಕ್ಕೆ ಹೋಗುವ ಬಸ್ ಬರುತ್ತಿದ್ದಂತೆ ಪೈಪೋಟಿಗಿಳಿದಂತೆ ಮಹಿಳೆಯರು ಓಡಿ ಹೋಗುತ್ತಿದ್ದರು. ಮಕ್ಕಳನ್ನು ತಲೆ ಮೇಲೆ ಹೊತ್ತು, ವಯಸ್ಸಾದ ಮಹಿಳೆಯರೂ ಸೀಟ್ ಪಡೆಯಲು ಹರಸಾಹಸ ಪಟ್ಟರು.

ಮೈಲಾರಲಿಂಗೇಶ್ವರ ದರ್ಶನಕ್ಕಾಗಿ ಓಡಿ ಹೋಗಿ ಬಸ್‌ ಹತ್ತಿದ ಕ್ಷಣ

ಬಸ್‌ ಕಿಟಕಿಯಿಂದಲೇ ಹಾರಿ ಸೀಟು ಹಿಡಿದ ಮಹಿಳೆಯರು

ಮಣ್ಣೆತ್ತಿನ ಅಮವಾಸ್ಯೆ ಹಿನ್ನೆಲೆ ದಾವಣಗೆರೆಯ ಹರಿಹರದ ಉಕ್ಕಡಗಾತ್ರಿ ಶ್ರೀ ಕ್ಷೇತ್ರಕ್ಕೆ ಮಹಿಳೆಯರ ದಂಡು ಹರಿದುಬರುತ್ತಿದೆ. ಅಜ್ಜಯ್ಯನ ದರ್ಶನ ಮಾಡಲು ಉಚಿತ ಬಸ್‌ನ ಮೊರೆ ಹೋಗುತ್ತಿರುವ ಮಹಿಳೆಯರು ಕಿಟಿಕಿಯಿಂದಲೇ ಹಾರಿ ಸೀಟು ಹಿಡಿದುಕೊಳ್ಳುತ್ತಿದ್ದಾರೆ. ಸ್ತ್ರೀ ಶಕ್ರಿಯನ್ನು ನಿಯಂತ್ರಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಪುರುಷರೆಲ್ಲ ಸೇರಿ ಪ್ರತಿಭಟನೆ ಮಾಡ್ತಿವಿ ಸಿಎಂಗೆ ಹೇಳ್ಬಿಡಿ!

ಬಾಗಲಕೋಟೆಯ ಇಳಕಲ್ಲ ನಗರದಲ್ಲೂ ಬಸ್‌ನಲ್ಲಿ ಸೀಟ್ ಇಲ್ಲದೇ ನೂಕುನುಗ್ಗಲು ಉಂಟಾಯಿತು. ಬಸ್‌ನಲ್ಲಿ ಮಹಿಳೆಯರಿಗೆ 50%, ಉಳಿದಂತೆ ಪುರುಷರಿಗೆ ಆಸನಗಳನ್ನು ಮೀಸಲಿಡಬೇಕು. ಆದರೆ ಎಲ್ಲ ಬಸ್‌ನಲ್ಲೂ ಮಹಿಳೆಯರೇ ತುಂಬಿ ತುಳುಕುತ್ತಿದ್ದಾರೆ. ಈ ರೀತಿ ಆದರೆ ಪುರುಷರೆಲ್ಲಾ ಸೇರಿ ಪ್ರತಿಭಟನೆ ಮಾಡುತ್ತೇವೆ. ಸಿದ್ದರಾಮಯ್ಯಗೆ ಹೇಳಿ ಎಂದು ಹೊಸಪೇಟೆಯ ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದ ಅಮರೇಶ್‌ ಎಂಬ ಪ್ರಯಾಣಿಕ ಕಿಡಿಕಾರಿದ್ದಾರೆ. ಕಂಡಕ್ಟರ್‌ಗೆ ಟಿಕೆಟ್ ಕೊಡಬೇಕು ಎಂದರೂ ಜಾಗವಿಲ್ಲದಷ್ಡು ಗದ್ದಲ ಇದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಮಾದಪ್ಪನ ನೋಡಲು ಊಘೆ ಎಂದ ಮಹಿಳೆಯರು

ಅಮಾವಾಸ್ಯೆ ಹಿನ್ನೆಲೆ ಮಲೆ ಮಾದೇಶ್ವರ ಬೆಟ್ಟಕ್ಕೆ ಭಕ್ತರ ಸಂಖ್ಯೆ ಹೆಚ್ಚಿದೆ. ಹೀಗಾಗಿ ಚಾಮರಾಜನಗರ ಕೆಎಸ್ಆರ್ಟಿಸಿ ವಿಭಾಗದಿಂದ 150 ಹೆಚ್ಚಿನ ಬಸ್‌ಗಳ ನಿಯೋಜನೆ ಮಾಡಲಾಗಿದೆ. ಶನಿವಾರ ಒಂದು ದಿನಕ್ಕೆ ಕೊಳ್ಳೇಗಾಲ ಬಸ್ ನಿಲ್ದಾಣದಿಂದ 250 ಟ್ರಿಪ್ ಬಸ್ ಸಂಚಾರವಾಗಿದ್ದು, ಭಾನುವಾರ ಸಹ ಎಲ್ಲಾ ತಾಲೂಕು ಕೇಂದ್ರದಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದೆ. ಗುಂಡ್ಲುಪೇಟೆ , ಚಾಮರಾಜನಗರ ,ನಂಜನಗೂಡು , ತಿ.ನರಸೀಪುರ, ಕೊಳ್ಳೇಗಾಲ ಘಟಕದಿಂದ ಹೆಚ್ಚುವರಿ ಬಸ್ ನಿಯೋಜನೆ ಮಾಡಲಾಗಿದೆ. ಸಾಮಾನ್ಯವಾಗಿ ಪ್ರತಿದಿನ 70-80 ಟ್ರಿಪ್ ಬಸ್ ಹೋಗುತ್ತಿದ್ದವು ,ಆದರೆ ಈಗ ಅದರ ನಾಲ್ಕು ಪಟ್ಟು ಜಾಸ್ತಿ ಆಗಿದೆ ಎಂದು ಚಾಮರಾಜನಗರ ಕೆ.ಎಸ್.ಆರ್. ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.

ಚಲಿಸುತ್ತಿದ್ದ ಬಸ್‌ನಿಂದ ಆಯತಪ್ಪಿ ಬಿದ್ದ ಬಾಲಕಿ!

ವೀಕೆಂಡ್‌ ಜತೆಗೆ ಆಷಾಡ ಅಮಾವಾಸ್ಯೆ ಹಿನ್ನೆಲೆ ಶಕ್ತಿ ಯೋಜನೆಯಡಿ ಮಹಿಳೆಯರು ಟೆಂಪಲ್‌ ರನ್‌ ಮುಂದುವರಿಸಿದ್ದಾರೆ. ಇದರ ಎಫೆಕ್ಟ್‌ ಬಸ್‌ ರಶ್‌ ಆಗಿದ್ದು, ಫುಟ್ ಬೋರ್ಡ್ ಮೇಲೆ ನಿಂತು ಪ್ರಯಾಣ ಮಾಡುತ್ತಿದ್ದ ಬಾಲಕಿಯೊಬ್ಬಳು ಆಯತಪ್ಪಿ ಕೆಳಗೆ ಬಿದ್ದಿದ್ದಾಳೆ. ಬೆಳಗಾವಿಯ ರಾಮದುರ್ಗ ಬಸ್ ನಿಲ್ದಾಣದಲ್ಲಿ ಬಸ್‌ ಫುಲ್‌ ಆಗಿದ್ದರೂ ಜನರು ಹತ್ತಲು ಮುಂದಾಗಿದ್ದರೆ ಈ ವೇಳೆ ಚಾಲಕ ಬಸ್‌ ಚಲಾಯಿಸಿದ್ದು, ಫುಟ್‌ ಬೋರ್ಡ್‌ ತುದಿಯಲ್ಲಿ ನಿಂತಿದ್ದ ಬಾಲಕಿ ಕೆಳಗೆ ಬಿದ್ದಿದ್ದಾಳೆ. ಕೂಡಲೆ ಬಸ್‌ ನಿಲ್ಲಿಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಇತ್ತ ಪೋಷಕರು ಚಾಲಕನ ತರಾಟೆಗೆ ತೆಗೆದುಕೊಂಡಿದ್ದಾರೆ.

ಮಂಜುನಾಥ್‌ ದರ್ಶನಕ್ಕೆ ಹರಿದು ಬಂದ ಜನಸಾಗರ

ಮಂಗಳೂರಿನ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜನಸಾಗರವೇ ಹರಿದು ಬಂದಿದೆ. ಸರ್ಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿರುವ ಹಿನ್ನೆಲೆ ಮಹಿಳೆಯರು ಬಸ್ಸಿಗೆ ಮುಗಿಬಿದ್ದಿದ್ದಾರೆ. ಇತ್ತ ಮಹಿಳೆಯರಿಂದ ಬಸ್‌ ತುಂಬಿ ಹೋದ ಹಿನ್ನೆಲೆ ಪುರುಷರು ಕಿಟಕಿಯಲ್ಲಿ ಸೀಟು ಹಿಡಿದು ನಿಂತಿದ್ದ ದೃಶ್ಯವೂ ಕಂಡು ಬಂತು.

ಅರ್ಧ ಚಾರ್ಜ್ ಕೊಟ್ಟಿದ್ದರೆ ಸಾಕಾಗಿತ್ತು, ಫುಲ್ ಫ್ರೀ ಬೇಕಿರಲಿಲ್ಲ

ಚನ್ನಪಟ್ಟಣ ಸರ್ಕಾರಿ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾದು ಕುಳಿತ ಮಹಿಳಾ ಪ್ರಯಾಣಿಕರು ಸಿಎಂ ಸಿದ್ದರಾಮಯ್ಯ ವಿರುದ್ಧ ಏಕ ವಚನದಲ್ಲೇ ವಾಗ್ದಾಳಿ ನಡೆಸಿದರು. ಎರಡು ಸಾವಿರ ಹಣ ಬೇರೆ ಕೊಡುವುದಾಗಿ ಹೇಳಿದ್ದಾರೆ, ಆ ಹಣಕ್ಕೆ ಕೂಲಿ ಮಾಡಲು ಜನ ಬರಲ್ಲ.

ಈಗ ಫ್ರೀ ಬಸ್ ಕೊಟ್ಟಿರುವುದೇ ನೋಡುತ್ತಿದ್ದೇವೆ. ಅರ್ಧ ಚಾರ್ಜ್ ಕೊಟ್ಟಿದ್ದರೆ ಸಾಕಾಗುತ್ತಿತ್ತು, ಫುಲ್ ಫ್ರೀ ಬೇಡವಾಗಿತ್ತು. ಬಸ್‌ಗಾಗಿ ಕಾದು ಕಾದು ಸಾಕಾಗಿದೆ ಎಂದು ಮಹಿಳಾ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.

ರಾಯಚೂರಿನಲ್ಲಿ ಲೇಡಿಸ್‌ ದರ್ಬಾರ್

ರಾಯಚೂರಿನ ಲಿಂಗಸುಗೂರು ಪಟ್ಟಣದ ಬಸ್ ನಿಲ್ದಾಣದಲ್ಲಿ ಮಹಿಳೆಯರು ಡ್ರೈವರ್ ಇಳಿಯುವ ಡೋರ್‌ ಅನ್ನೇ ಆಕ್ರಮಣ ಮಾಡಿಕೊಂಡಿದ್ದರು. ಬಸ್‌ನಿಂದ ಇಳಿಯಲು ಆಗದಷ್ಟು ಪ್ರಯಾಣಿಕರು ಏಕಾಏಕ ಕಾಲಕ್ಕೆ ಮುಗಿಬಿದ್ದಿದ್ದು, ವಿಧಿಯಿಲ್ಲದೇ ಡ್ರೈವರ್ ಡೋರ್ ಮೂಲಕ ಹೊರಬಂದರು.

ಹೊರಟಿದ್ದ ಬಸ್‌ನ ಬೆನ್ನತ್ತಿ ಮಗಳನ್ನು ಇಳಿಸಿಕೊಂಡ ತಾಯಿ

ವಿಜಯಪುರದ ಮುದ್ದೇಬಿಹಾಳ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಬಸ್‌ವೊಂದರ ಬೆನ್ನತ್ತಿದ್ದರು. ಮುದ್ದೇಬಿಹಾಳದಿಂದ ಬಾಗಲಕೋಟೆಗೆ ಹೊರಟಿದ್ದ ಬಸ್‌ನಲ್ಲಿ ಮಗಳು ಹೇಗೊ ನುಗ್ಗಿ ಸೀಟು ಹಿಡಿದು ಕುಳಿತಿದ್ದಳು. ಆದರೆ ಬಸ್ ಭರ್ತಿ ಹಿನ್ನೆಲೆ ತಾಯಿಗೆ ಸೀಟು ಸಿಗುವುದು ಇರಲಿ, ಬಸ್‌ ಹತ್ತಲು ಸಾಧ್ಯವಾಗಿರಲಿಲ್ಲ. ಇತ್ತ ಚಾಲಕ ಬಸ್ ಚಲಾಯಿಸಿಕೊಂಡು ಹೊರಟಿದ್ದ. ಮಹಿಳೆ ಹೊರಗೆ ಉಳಿದಿದ್ದರೂ, ಅಕ್ಕಪಕ್ಕ ನೋಡಿದಾಗ ಮಗಳು ಬಸ್ಸಿಲ್ಲಿ ಉಳಿದುಕೊಂಡಿದ್ದು ಗೊತ್ತಾಗಿದೆ. ಬಳಿಕ ಮಗಳನ್ನು ಕಿಟಕಿಯಿಂದ ಇಳಿಸಿಕೊಂಡು ಸಿಟ್ಟಿನಿಂದ ಬಸ್‌ಗೆ ಗುದ್ದಿ ಆಕ್ರೋಶ ಹೊರಹಾಕಿದ್ದಾರೆ.

ಮತ್ತೊಂದು ಕಡೆ ಮುದ್ದೇಬಿಹಾಳದಿಂದ ನಾರಾಯಣಪುರ ಬಸ್‌ಗಳಲ್ಲಿಯೂ ಮಹಿಳೆಯರಿಂದ ಫುಲ್ ರಶ್ ಆಗಿತ್ತು. ಹೀಗಾಗಿ ಯುವಕನೊಬ್ಬ ಬಸ್ ಕಿಟಕಿಯೊಳಗಿಂದ ನುಸುಳಿ ಸೀಟು ಹಿಡಿದುಕೊಂಡ. ಇನ್ನೊಂದೆಡೆ ಮಹಿಳೆಯರ ಗುಂಪಿನಲ್ಲಿ ಸಿಕ್ಕು ವೃದ್ಧ ಒದ್ದಾಡಿಬಿಟ್ಟರು.

ಸಂಘ ಕಟ್ಟಿಕೊಂಡು ಬಂದ ಮಹಿಳಾಮಣಿಯರು

ಕರ್ನಾಟಕದ ನಾನಾ ಭಾಗಗಳಿಂದ ದತ್ತಾತ್ರೆಯ ಸನ್ನಿಧಿಗೆ ಭಕ್ತ ಸಾಗರವೇ ಹರಿದು ಬಂದಿದೆ. ಭಾನುವಾರ ಮಣ್ಣೆತ್ತಿನ ಅಮವಾಸ್ಯೆ ಹಿನ್ನೆಲೆ ಭಕ್ತರ ಸಂಖ್ಯೆ ದುಪ್ಪಟ್ಟಾಗಿತ್ತು. ಮಹಿಳೆಯರಿಗೆ ಉಚಿತ ಬಸ್‌ ಹಿನ್ನೆಲೆ ಸಂಘ ಕಟ್ಟಿಕೊಂಡು ದೇವಸ್ಥಾನಕ್ಕೆ ಬರುತ್ತಿರುವುದು ಕಂಡು ಬಂತು. ಕಲಬುರಗಿ ಕೇಂದ್ರ ಬಸ್ ನಿಲ್ದಾಣದಲ್ಲಿ ಎಲ್ಲಿ ಕಣ್ಣು ಹಾಯಿಸಿದರೂ ಮಹಿಳೆಯರೇ ಕಾಣಿಸುತ್ತಿದ್ದರು. ಸರ್ಕಾರಿ ಬಸ್ ಹತ್ತಲು ನೂಕು ನುಗ್ಗಲು ಉಂಟಾಗಿತ್ತು. ಸೀಟು ಭರ್ತಿಯಾಗುತ್ತಿದ್ದಂತೆ ಇನ್ನೊಂದು ಬಸ್‌ಗೆ ಹುಡುಕಾಟ ನಡೆಸುತ್ತಿದ್ದ ದೃಶ್ಯ ಕಂಡು ಬಂತು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading

Latest

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

VISTARANEWS.COM


on

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್‌ 27 ರಂದು ದರ್ಶನ್ ಪರ ವಕೀಲ ರಂಜಿತ್ ರೋಹಟಗಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 4ಕ್ಕೆ ನಿಗದಿಪಡಿಸಿದೆ.

Continue Reading

ಕರ್ನಾಟಕ

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

VISTARANEWS.COM


on

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ಶಾಲೆಗಳಲ್ಲಿ ಇನ್ನು ಮುಂದೆ ಅಶ್ಲೀಲ ಹಾಡು ಮತ್ತು ಅಸಭ್ಯ ನೃತ್ಯಗಳಿಗೆ ಅವಕಾಶ ನೀಡದಂತೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಹೆಸರಿನಲ್ಲಿ ದ್ವಂದ್ವಾರ್ಥದ ಸಿನಿಮಾ ಹಾಡು ಹಾಗೂ ನೃತ್ಯಗಳನ್ನು ಪ್ರದರ್ಶಿಸುವುದರಿಂದ ಮಕ್ಕಳ ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಧಿಕೃತ ಆದೇಶ ಹೊರಡಿಸಲಾಗಿದೆ.
ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯ ಪ್ರಕಾರ, ಶಾಲಾ ಕಾರ್ಯಕ್ರಮಗಳಲ್ಲಿ ಕೇವಲ ಜಾನಪದ, ದೇಶಭಕ್ತಿ ಗೀತೆಗಳು, ಪರಿಸರ ಕಾಳಜಿಯ ಹಾಡುಗಳು ಮತ್ತು ಸಮಾಜಮುಖಿ ಚಿಂತನೆಯುಳ್ಳ ಸಂಗೀತಕ್ಕೆ ಮಾತ್ರ ಆದ್ಯತೆ ನೀಡಬೇಕು. ನೃತ್ಯದ ಸಮಯದಲ್ಲಿ ವಿದ್ಯಾರ್ಥಿಗಳು ಧರಿಸುವ ಉಡುಪುಗಳು ಕೂಡ ಸಭ್ಯವಾಗಿರಬೇಕು ಹಾಗೂ ಅರೆಬರೆ ವಸ್ತ್ರಗಳನ್ನು ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮನರಂಜನೆಯ ಹೆಸರಿನಲ್ಲಿ ಸಮಾಜಕ್ಕೆ ತಪ್ಪು ಸಂದೇಶ ನೀಡುವ ಅಥವಾ ಮಕ್ಕಳ ನೈತಿಕ ಹಾಗೂ ಮಾನಸಿಕ ಆರೋಗ್ಯ ಕೆಡಿಸುವ ಯಾವುದೇ ಹಾಡುಗಳನ್ನು ಬಳಸದಂತೆ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ನಿಯಮಗಳನ್ನು ಜಾರಿಗೆ ತರುವ ಸಂಪೂರ್ಣ ಜವಾಬ್ದಾರಿಯನ್ನು ಶಾಲಾ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿಗೆ ವಹಿಸಲಾಗಿದೆ.

Continue Reading

bigbreaking

20 ಸಾವಿರ ಕೋಟಿ ಹಗರಣದ ಮೂಲ ದಾಖಲೆಗಳೇ ನಾಪತ್ತೆ. ಎನ್‌.ಆರ್‌.ರಮೇಶ್‌ ಗಂಭೀರ ಆರೋಪ.

VISTARANEWS.COM


on

ಬೆಂಗಳೂರು: ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯವನ್ನು ಬೆಚ್ಚಿಬೀಳಿಸುವಂತಹ ಗಂಭೀರ ಆರೋಪವೊಂದು ಹೊರಬಂದಿದೆ. 2007-08ರಿಂದ ಇದುವರೆಗೆ ನಡೆದಿರುವ 20 ಸಾವಿರ ಕೋಟಿಗೂ ಹೆಚ್ಚು ಮೊತ್ತದ TDR ಹಗರಣಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳು ಈಗಿನ ಜಿಬಿಎ ಯ ಭೂಸ್ವಾಧೀನ ಮತ್ತು ಟಿಡಿಆರ್‌ ವಿಭಾಗದ ಕಚೇರಿಯಿಂದ ನಾಪತ್ತೆಯಾಗಿವೆ ಎನ್ನುವ ಆಘಾತಕಾರಿ ವಿಷಯವನ್ನು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್ ಬಹಿರಂಗಪಡಿಸಿದ್ದಾರೆ.
ಇಂದು ಜಿಬಿಎ ಕೇಂದ್ರ ಕಚೇರಿ ಮುಂಭಾಗ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹಿರಿಯ ನಾಯಕ ಹಾಗೂ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್‌ ಟಿಡಿಆರ್‌ ಹಗರಣದ ದಾಖಲೆಗಳ ನಾಪತ್ತೆ ಬಗ್ಗೆ ಮಹತ್ವದ ಮಾಹಿತಿಗಳನ್ನು ತಿಳಿಸಿದರು. ರಸ್ತೆ ಅಭಿವೃದ್ಧಿ ಮತ್ತು ವಿವಿಧ ಅಭಿವೃದ್ಧಿ ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಭೂ ಮಾಲೀಕರಿಂದ ನಿಯಮಾನುಸಾರ ಸ್ವಾಧೀನಪಡಿಸಿಕೊಂಡು, ಅದಕ್ಕೆ ಬದಲಾಗಿ ನಿಗದಿತ ಮೊತ್ತದ ಪರಿಹಾರ ಧನ ಅಥವಾ TDR /DRC ನೀಡುವ ಕಾರ್ಯ 2007-08 ರಲ್ಲಿ ಚಾಲನೆಗೆ ಬಂದಿತ್ತು. ಇದಾದ ನಂತರ TDR ನಿಯಮಗಳಲ್ಲಿನ ಸಣ್ಣಪುಟ್ಟ ಲೋಪದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಕರಾಳ ದಂಧೆ ಬೃಹತ್ ಪ್ರಮಾಣದಲ್ಲಿ ಬೆಳೆದು, ಬಿಬಿಎಂಪಿ ಮತ್ತು ಬಿಡಿಎ ನ ಭ್ರಷ್ಟ ಅಧಿಕಾರಿಗಳ ಸಹಕಾರದಿಂದ ಸುಮಾರು 50 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಗರಣ ನಡೆದಿದೆ ಎಂದು ಎನ್‌.ಆರ್‌.ರಮೇಶ್‌ ಆರೋಪಿಸಿದ್ದಾರೆ.
ಟಿಡಿಆರ್‌ ಹಗರಣ ಪ್ರಕರಣದ ವಿಚಾರ ಈಗಾಗಲೇ ಜಾರಿ ನಿರ್ದೇಶನಾಲಯ (ED) ಮತ್ತು ಲೋಕಾಯುಕ್ತದಲ್ಲಿ ತನಿಖೆ ಹಾಗೂ ವಿಚಾರಣಾ ಹಂತದಲ್ಲಿದೆ. ಆದರೆ ಇದೀಗ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು ಕಾಣೆಯಾಗಿರುವುದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಇದರಲ್ಲಿ ಜಿಬಿಎ ಅಧಿಕಾರಿಗಳು ಮತ್ತು ವಂಚಕರ ಪಾತ್ರ ಇದೆ ಎಂದು ಎನ್‌.ಆರ್‌.ರಮೇಶ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಎಲ್ಲಾ ಆರೋಪಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ದಾಖಲೆಗಳೊಂದಿಗೆ ಜಾರಿ ನಿರ್ದೇಶನಾಲಯ ಮತ್ತು ಲೋಕಾಯುಕ್ತದಲ್ಲಿ ದೂರುಗಳನ್ನು ದಾಖಲಿಸಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

Continue Reading
Advertisement
Latest11 minutes ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest18 minutes ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest1 hour ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest18 hours ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest19 hours ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

Latest19 hours ago

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್’

bigbreaking19 hours ago

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಾ ಮೇ ಕ್ಲೈಮ್ಯಾಕ್ಸ್‌?

Latest21 hours ago

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

Latest22 hours ago

ಶಿಸ್ತು ಮರೆತರಾ ರಿಯಾನ್ ಪರಾಗ್? ಕಾನೂನು ಸಂಕಷ್ಟಕ್ಕೆ ಸಿಲುಕುತ್ತಾರಾ ರಾಜಸ್ಥಾನ ರಾಯಲ್ಸ್ ಆಟಗಾರ?

Latest23 hours ago

ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌? ಚುನಾವಣಾ ಅಕ್ರಮ ಆರೋಪಿಸಿ ಕೇಸರಿ ಪಡೆ ಆಕ್ರೋಶ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌