free-electricity: Application submitting process delayed as portal is not working Free Electricity: ಗೃಹಜ್ಯೋತಿ ಅರ್ಜಿ ಸಲ್ಲಿಕೆ ಅವಾಂತರ; ಪೋರ್ಟಲ್‌ ಓಪನ್‌ ಆಗದೆ ಪರದಾಟ Vistara News
Connect with us

ಕರ್ನಾಟಕ

Free Electricity: ಗೃಹಜ್ಯೋತಿ ಅರ್ಜಿ ಸಲ್ಲಿಕೆ ಅವಾಂತರ; ಪೋರ್ಟಲ್‌ ಓಪನ್‌ ಆಗದೆ ಪರದಾಟ

Free Electricity : ಗೃಹ ಜ್ಯೋತಿ ಉಚಿತ ವಿದ್ಯುತ್‌ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ತೊಂದರೆ ಉಂಟಾಗಿದೆ. ರಾಜ್ಯದ ನಾನಾ ಭಾಗಗಳಲ್ಲಿ ವೆಬ್‌ಸೈಟ್‌ ಓಪನ್‌ ಆಗುತ್ತಿಲ್ಲ ಎಂಬ ದೂರು ಕೇಳಿಬಂದಿದೆ.

VISTARANEWS.COM


on

Sewasindhu portal not opening
Koo

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಗೃಹ ಜ್ಯೋತಿ (Gruhajyothi scheme) ಉಚಿತ ವಿದ್ಯುತ್‌ ಯೋಜನೆಯ (Free Electricity) ಅನುಕೂಲ ಪಡೆಯುವುದಕ್ಕಾಗಿ ಅರ್ಜಿ ಸಲ್ಲಿಕೆ ಭಾನುವಾರ ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದೆ ಎಂದು ಸರ್ಕಾರ ಪ್ರಕಟಿಸಿದೆಯಾದರೂ ತಾಂತ್ರಿಕ ಸಮಸ್ಯೆಯಿಂದಾಗಿ ಪ್ರಕ್ರಿಯೆ ಆರಂಭಕ್ಕೆ ಅಡ್ಡಿಯಾಗಿದೆ. ಬೆಂಗಳೂರು ಮತ್ತು ರಾಜ್ಯದ ನಾನಾ ಕಡೆಗಳಲ್ಲಿ ಈ ಸಮಸ್ಯೆಯಾಗಿದ್ದು, ಮೊದಲ ದಿನವೇ ಅರ್ಜಿ ಸಲ್ಲಿಕೆಯ ಸೇವಾ ಸಿಂಧು ಪೋರ್ಟಲ್‌ (Sewasindhu portal) ಕ್ರ್ಯಾಶ್‌ ಆಗಿದೆಯಾ ಎಂಬ ಪ್ರಶ್ನೆ ಉದ್ಭವಿಸಿದೆ.

ಪ್ರತಿ ಮನೆಗೆ 200 ಯುನಿಟ್‌ ಉಚಿತ ವಿದ್ಯುತ್‌ ನೀಡುವ ಈ ಮಹತ್ವಾಕಾಂಕ್ಷಿ ಯೋಜನೆಯ ಅರ್ಜಿ ಸ್ವೀಕಾರ ಜೂನ್‌ 15ರಿಂದಲೇ ಆರಂಭವಾಗಬೇಕಾಗಿತ್ತು. ಆದರೆ, ಕೆಲವು ತಾಂತ್ರಿಕ ಕಾರಣಗಳಿಂದ ಅದು ಮುಂದೆ ಹೋಗಿತ್ತು. ಇದೀಗ ಜೂನ್‌ 18ರಿಂದ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿತ್ತು. ಹೀಗಾಗಿ ಆರಂಭದಲ್ಲೇ ಅರ್ಜಿ ಸಲ್ಲಿಸಿಬಿಡೋಣ ಎಂಬ ತರಾತುರಿಯಲ್ಲಿ ಬೆಂಗಳೂರು ಒನ್‌, ಎಸ್ಕಾಂ ಕಚೇರಿಗಳಿಗೆ ಜನ ಬೆಳಗ್ಗೆಯೇ ಬಂದು ನಿಂತಿದ್ದರು. ಕೆಲವು ಕಡೆ 11 ಗಂಟೆಗೆ ಅರ್ಜಿ ಸಲ್ಲಿಕೆ ವ್ಯವಸ್ಥೆ ಆರಂಭ ಮಾಡಿದರೆ, ಇನ್ನು ಕೆಲವು ಕಡೆ ಮಧ್ಯಾಹ್ನ ಒಂದು ಗಂಟೆ, ಮೂರು ಗಂಟೆ ಎಂದು ಸಬೂಬು ಹೇಳಲಾಗುತ್ತಿದೆ. ಏಕಕಾಲದಲ್ಲಿ ಹಲವು ಕಡೆ ಅರ್ಜಿ ಸಲ್ಲಿಸಲು ಮುಂದಾದ ಕಾರಣಕ್ಕೋ ಏನೋ ಸೇವಾ ಸಿಂಧು ಪೋರ್ಟಲ್‌ ಕೆಲಸ ಮಾಡುತ್ತಿಲ್ಲ ಎಂಬ ಆಪಾದನೆ ಕೇಳಿಬಂದಿದೆ.

ಪೋರ್ಟಲ್‌ ಓಪನ್ ಆಗದೆ ಪರದಾಟ

ವಿಲ್ಸನ್ ಗಾರ್ಡನ್‌ನಲ್ಲಿರುವ ಬೆಂಗಳೂರು ಒನ್ ಕಚೇರಿಯಲ್ಲಿ ಸೇವಾ ಸಿಂಧು ಪೋರ್ಟಲ್ ಓಪನ್‌ ಆಗದೆ ಜನರು ತೊಂದರೆ ಅನುಭವಿಸಿದ್ದಾರೆ. ಇನ್ನು ಸಾಕಷ್ಟು ಜನ ಅರ್ಜಿ ಸಲ್ಲಿಸಲು ಆಗಮಿಸಿದ್ದಾಋೆ. ಆದರೆ, ವೆಬ್‌ ಸೈಟ್‌ ಮಾತ್ರ ʻನೋ ಸರ್ವೀಸ್ ಅವೈಲೇಬಲ್‌ʼ ಎಂದ ತೋರಿಸಲಾಗುತ್ತಿದೆ.

ಹೀಗೆಂದರೆ ಏನು ಗೃಹ ಜ್ಯೋತಿ ಅರ್ಜಿ ಸಲ್ಲಿಕೆ ಸಾಫ್ಟ್‌ವೇರನ್ನು ಸೇವಾ ಸಿಂಧು ಪೋರ್ಟಲ್‌ಗೆ ಲಿಂಕ್‌ ಮಾಡಲಾಗಿಲ್ಲವೇ ಅಥವಾ ಲಿಂಕ್‌ ಮಾಡಿದ್ದರೂ ಕ್ರ್ಯಾಶ್‌ ಆಗಿ ಸೇವೆ ಇಲ್ಲ ಎಂದು ಹೇಳುತ್ತಿದೆಯೇ ಎಂಬ ಪ್ರಶ್ನೆಗಳು ಎದುರಾಗಿವೆ.

ಪೋರ್ಟಲ್ ಓಪನ್ ಆಗದ ಹಿನ್ನೆಲೆಯಲ್ಲಿ ಜನರು ಕಾದು ಕಾದು ಸುಸ್ತಾಗಿ ಮನೆಗೆ ಮರಳುತ್ತಿರುವುದು ಕಂಡುಬಂದಿದೆ. ʻʻಸರ್ವರ್‌ ಫುಲ್ ಬ್ಯೂಸಿ ಇದೆ. ಫೋನ್ ನಂಬರ್ ಕೊಟ್ಟಿರಿ, ವೆಬ್ ಸೈಟ್ ಓಪನ್ ಆದ್ಮೇಲೆ ಫೋನ್ ಮಾಡ್ತೀವಿʼ ಎಂದು ಸಿಬ್ಬಂದಿ ಹೇಳಿ ಕಳುಹಿಸುತ್ತಿದ್ದಾರೆ.

ರಾಜ್ಯದ ಕೆಲವು ಕಡೆಗಳಲ್ಲಿ ಅರ್ಜಿ ಸಲ್ಲಿಸಲು ಜನರು ಸರತಿ ಸಾಲಿನಲ್ಲಿ ನಿಂತಿದ್ದರೂ ಇನ್ನೂ ಸೇವಾ ಕೇಂದ್ರದವರು ಸೇವೆಯನ್ನೇ ಶುರು ಮಾಡಿಲ್ಲ. ಕೆಲವು ಕಡೆ ಸಿಬ್ಬಂದಿ ಸೇವೆಗೆ ರೆಡಿ ಇದ್ದಾರೆ, ಆದರೆ, ಜನರೇ ಇಲ್ಲ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ.

ಎಲ್ಲೆಲ್ಲಿ ಅರ್ಜಿ ಸಲ್ಲಿಕೆ? ಹೇಗೆ ಅರ್ಜಿ ಸಲ್ಲಿಕೆ?

ಗೃಹ ಜ್ಯೋತಿ ಅರ್ಜಿ ಸಲ್ಲಿಸಲು ಕಾಂಗ್ರೆಸ್ ಸರ್ಕಾರ ಸೇವಾ ಸಿಂಧು ಪೋರ್ಟಲ್​ನಲ್ಲಿ ಅವಕಾಶ ಮಾಡಿಕೊಟ್ಟಿದೆ. ಇನ್ನುಳಿದಂತೆ ಜನರು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ನಾಡ ಕಚೇರಿ, ಗ್ರಾ.ಪಂ. ಕಚೇರಿ, ವಿದ್ಯುತ್​ ಕಚೇರಿಗಳಲ್ಲಿ ನೋಂದಾಯಿಸಬಹುದು. ಹೀಗೆ ಅರ್ಜಿ ಸಲ್ಲಿಕೆ ಮಾಡುವವರು ಆಧಾರ್ ಕಾರ್ಡ್, ಆರ್​ಆರ್ ನಂಬರ್, ಮೊಬೈಲ್ ಸಂಖ್ಯೆ, ಮನೆ ಬಾಡಿಗೆ ಕರಾರು ಪತ್ರ ನೀಡುವುದು ಕಡ್ಡಾಯವಾಗಿದೆ. ವೋಟರ್​ ಐಡಿ ಕೂಡ ಯಾವುದಕ್ಕೂ ಇಟ್ಟುಕೊಂಡಿರಿ. ಮನೆ ಬಾಡಿಗೆ ಕರಾರು ಪತ್ರ ಇಲ್ಲದವರಿಗೆ ವೋಟರ್​ ಐಡಿ ಬೇಕಾಗುತ್ತದೆ.

ಇದನ್ನೂ ಓದಿ: Gruhajyothi scheme: ಗೃಹ ಜ್ಯೋತಿ ಸ್ಕೀಂ; ಎಲ್ಲ ಗೊಂದಲಗಳಿಗೆ ಇಲ್ಲಿದೆ ನಿಖರ ಉತ್ತರ

ಸೇವಾ ಸಿಂಧು ಪೋರ್ಟಲ್​​ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?

1. ಸೇವಾಸಿಂಧು ಪೋರ್ಟಲ್​ https://sevasindhu.karnataka.gov.in/Sevasindhu/English ಗೆ ಭೇಟಿಕೊಡಿ. ಅಲ್ಲಿ ಗೃಹ ಜ್ಯೋತಿ ಯೋಜನೆಗೆ ಮೀಸಲಿಟ್ಟ ಲಿಂಕ್​ ಮೇಲೆ ಕ್ಲಿಕ್ ಮಾಡಿ.
2.ನೀವು ಈ ವೆಬ್​​ಸೈಟ್​ನ್ನು ನಿಮ್ಮ ಮೊಬೈಲ್​/ಕಂಪ್ಯೂಟರ್ ಅಥವಾ ಲ್ಯಾಪ್​ಟಾಪ್​ ಮೂಲಕ ತೆರೆಯಬಹುದು
3. ಹೀಗೆ ಅರ್ಜಿ ಸಲ್ಲಿಸುವ ಹೊತ್ತಲ್ಲಿ, ನಿಮ್ಮೊಂದಿಗೆ ಆಧಾರ್​ ಕಾರ್ಡ್​, ಆರ್​ಆರ್​ಕಾರ್ಡ್​, ನಿಮ್ಮ ಮನೆಗೆ ಬರುವ ಕರೆಂಟ್​ ಬಿಲ್​​ನಲ್ಲಿ ಇರುವ, ಗ್ರಾಹಕರ ಅಕೌಂಟ್ ಐಡಿ, ವೋಟರ್​ ಐಡಿ ಕಾರ್ಡ್​ಗಳನ್ನೆಲ್ಲ ಸಿದ್ಧವಾಗಿಟ್ಟುಕೊಳ್ಳಿ. ಗೃಹಜ್ಯೋತಿ ಫಾರ್ಮ್​​ನಲ್ಲಿ ಕೇಳಲಾಗುವ ಎಲ್ಲ ಮಾಹಿತಿಗಳನ್ನೂ ತುಂಬಿ ಸಬ್​ಮಿಟ್ ಕೊಡಿ.
4. ಹೆಚ್ಚಿನ ಮಾಹಿತಿ ಬೇಕಿದ್ದರೆ ನಿಮ್ಮ ಫೋನ್​​ನಲ್ಲಿ, ಸಹಾಯವಾಣಿ ಸಂಖ್ಯೆ 1912 ಸಂಪರ್ಕಿಸಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bangalore Bandh : ಯಾವ ಬಂದ್‌ಗೂ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ಇಲ್ಲ; ನಾರಾಯಣ ಗೌಡ ಘೋಷಣೆ

Bangalore Bandh : ಬಂದ್‌ ಯಾವತ್ತೂ ಕೊನೆಯ ಅಸ್ತ್ರವಾಗಬೇಕು ಎಂದಿರುವ ಕರ್ನಾಟಕ ರಕ್ಷಣಾ ವೇದಿಕೆ ಸೆ. 26 ಅಥವಾ 29ರ ಯಾವ ಬಂದ್‌ಗೂ ಬೆಂಬಲ ಕೊಡುವುದಿಲ್ಲ ಎಂದು ಪ್ರಕಟಿಸಿದೆ.

VISTARANEWS.COM


on

Edited by

TA Narayana Gowda
Koo

ಬೆಂಗಳೂರು: ಅತ್ಯಂತ ಮಹತ್ವದ ಬೆಳವಣಿಗೆಯೊಂದರಲ್ಲಿ ಸೆ. 26ರಂದು ನಡೆಯಲಿರುವ ಬೆಂಗಳೂರು ಬಂದ್‌ (Bangalore Bandh) ಮತ್ತು ಸೆ. 29ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್‌ಗಳಲ್ಲಿ (Karnataka Bandh) ಯಾವುದಕ್ಕೂ ತಾನು ಬೆಂಬಲ ನೀಡುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ (Karnataka Rakshana Vedike) ಘೋಷಿಸಿದೆ.

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ (TA Narayana Gowda) ಅವರು ಈ ಬಗ್ಗೆ ಆಧಿಕೃತ ಪ್ರಕಟಣೆಯನ್ನು ಹೊರಡಿಸಿದ್ದಾರೆ. ಕಾವೇರಿ ನೀರು ವಿಚಾರದಲ್ಲಿ ನಮ್ಮ ಹೋರಾಟ ಮುಂದುವರೆಯುತ್ತದೆ, ಆದರೆ ಯಾವುದೇ ಬಂದ್‌ಗೆ ನಾವು ಬೆಂಬಲ ನೀಡುವುದಿಲ್ಲ ಎಂದು ಹೇಳಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದು ಎಂದು ಆಗ್ರಹಿಸಿ ಸೆಪ್ಟೆಂಬರ್ 26ರಂದು ಕುರುಬೂರು ಶಾಂತಕುಮಾರ್‌ ನೇತೃತ್ವದ ಜಲ ಸಂರಕ್ಷಣಾ ಸಮಿತಿ ಬೆಂಗಳೂರು ಬಂದ್‌ಗೆ ಕರೆ ನೀಡಿದರೆ ಮತ್ತು ಸೆಪ್ಟೆಂಬರ್ 29ರಂದು ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಹಲವು ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಪ್ರತ್ಯೇಕವಾಗಿ ನಡೆಯಲಿರುವ ಈ ಯಾವ ಬಂದ್‌ಗೂ ನಮ್ಮ ಬೆಂಬಲವಿಲ್ಲ ಎಂದು ರಕ್ಷಣಾ ವೇದಿಕೆ ಸ್ಪಷ್ಟಪಡಿಸಿದೆ. ಇದೇ ವೇಳೆ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಹೋರಾಟ ರಾಜ್ಯಾದ್ಯಂತ ಮುಂದುವರೆಯುತ್ತದೆ ಎಂದು ಹೇಳಿದೆ.

ಸೋಮವಾರ ಬೆಳಗ್ಗೆ ಸಭೆ ಸೇರಿದ್ದ ಕರ್ನಾಟಕ ರಕ್ಷಣಾ ವೇದಿಕೆ ಉನ್ನತಾಧಿಕಾರ ಸಮಿತಿ ಹಲವು ನಿರ್ಣಯಗಳನ್ನು ಕೈಗೊಂಡಿದ್ದು, ಅದರ ಪ್ರಮುಖಾಂಶಗಳನ್ನು ಮಾಧ್ಯಮಗಳಿಗೆ ನೀಡಲಾಗಿದೆ.

ಬಂದ್‌ಗೆ ರಕ್ಷಣಾ ವೇದಿಕೆ ಬೆಂಬಲ ಯಾಕಿಲ್ಲ?

  1. ಸೆಪ್ಟೆಂಬರ್ 26 ಮತ್ತು 29ರಂದು ಕರೆ ನೀಡಲಾಗಿರುವ ಬೆಂಗಳೂರು ಬಂದ್, ಕರ್ನಾಟಕ ಬಂದ್‌ಗಳನ್ನು ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲಿಸುವುದಿಲ್ಲ.
  2. ಆದರೆ ಈಗಾಗಲೇ ಕರ್ನಾಟಕ ರಕ್ಷಣಾ ವೇದಿಕೆ ನಡೆಸುತ್ತಿರುವ ಹೋರಾಟ ಪ್ರತಿದಿನವೂ ನಡೆಯಲಿದೆ.
  3. ಸೆಪ್ಟೆಂಬರ್ 26ರಂದು ಮಂಗಳವಾರ ವೇದಿಕೆಯ ಗಾಂಧಿನಗರ ಕಚೇರಿ ಆವರಣದಿಂದ ವೇದಿಕೆ ಕಾರ್ಯಕರ್ತರು ಮೆರವಣಿಗೆ ಹೊರಟು ಮುಖ್ಯಮಂತ್ರಿಗಳ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದಾರೆ.
  4. ಕರ್ನಾಟಕ ರಕ್ಷಣಾ ವೇದಿಕೆ ಮೊದಲಿನಿಂದಲೂ ಯಾವುದೇ ಚಳವಳಿ ಕೈಗೆತ್ತಿಕೊಂಡರೂ ಜನಜಾಗೃತಿ ಮೂಡಿಸುವುದನ್ನು ಮೊದಲನೇ ಆದ್ಯತೆಯಾಗಿ ತೆಗೆದುಕೊಳ್ಳುತ್ತದೆ.
  5. ದಿಢೀರನೆ ಬಂದ್ ಕರೆ ನೀಡಿ ಜನಸಾಮಾನ್ಯರಿಗೆ ತೊಂದರೆ ನೀಡುವುದನ್ನು ರಕ್ಷಣಾ ವೇದಿಕೆ ಒಪ್ಪುವುದಿಲ್ಲ. ಬಂದ್ ಹೋರಾಟದ ಕೊನೆಯ ಅಸ್ತ್ರವಾಗಿರಬೇಕು.

ಇದನ್ನೂ ಓದಿ: Bangalore Bandh : ನಾಯಕರ ಪ್ರತಿಷ್ಠೆಯಿಂದ ಬೆಂಗಳೂರಿಗೆ ಡಬಲ್‌ ಬಂದ್‌ ಬಿಸಿ, ಬೇಕಿತ್ತಾ ಎರಡೆರಡು ಬಂದ್‌?

ನಾವು ಯಾವುದೇ ಅಂಗಡಿ ಮುಂಗಟ್ಟು ಬಂದ್‌ ಮಾಡಿಸುವುದಿಲ್ಲ

ಎರಡೂ ದಿನಗಳ ಬಂದ್ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಯಾವುದೇ ಪದಾಧಿಕಾರಿ, ಕಾರ್ಯಕರ್ತರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುವುದಿಲ್ಲ. ಬಂದ್‌ಗೆ ಸಂಬಂಧಪಟ್ಟಂತೆ ಯಾವುದೇ ಚಟುವಟಿಕೆಗಳಲ್ಲಿ ತೊಡಗುವುದಿಲ್ಲ. ಕಾವೇರಿಗಾಗಿ ನಮ್ಮ ಪ್ರಜಾಸತ್ತಾತ್ಮಕ ಮಾದರಿಯ ಹೋರಾಟಗಳು ಮುಂದುವರೆಯುತ್ತವೆ ಎಂದು ಕರವೇ ಹೇಳಿದೆ.

ಇದೇ ವೇಳೆ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದೆ.

Continue Reading

ಉತ್ತರ ಕನ್ನಡ

Uttara Kannada News: ಜನತಾ ದರ್ಶನದ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ: ಸಚಿವ ಮಂಕಾಳ ವೈದ್ಯ

Uttara Kannada News: ಕಾರವಾರ ನಗರದ ಕೋಡಿಭಾಗದ ಸಾಗರ ದರ್ಶನ ಸಭಾಂಗಣದಲ್ಲಿ ಸೋಮವಾರ ‘ಜನತಾ ದರ್ಶನ’ ಕಾರ್ಯಕ್ರಮ ಜರುಗಿತು.

VISTARANEWS.COM


on

Edited by

Uttara Kannada District Incharge Minister Mankalu S Vaidya speech in Janata Darshan programme in Karwar
ಕಾರವಾರದ ಕೋಡಿಭಾಗದ ಸಾಗರ ದರ್ಶನ ಸಭಾಂಗಣದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ಎಸ್ ವೈದ್ಯ ಮಾತನಾಡಿದರು.
Koo

ಕಾರವಾರ: ಜನತಾ ದರ್ಶನ ಕಾರ್ಯಕ್ರಮದ (Janata Darshan) ಮೂಲಕ ಒಂದೇ ಸೂರಿನಡಿ ಜಿಲ್ಲೆಯ ಬಡವರು, ಅಸಹಾಯಕರು ಸೇರಿದಂತೆ ಎಲ್ಲಾ ವರ್ಗಗಳ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೂಡಾ ಸರ್ಕಾರದ ಸೌಲಭ್ಯಗಳನ್ನು (Government Facilities) ತಲುಪಿಸುವ ಮೂಲಕ ನ್ಯಾಯ (Justice) ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ಎಸ್ ವೈದ್ಯ ತಿಳಿಸಿದರು.

ನಗರದ ಕೋಡಿಭಾಗದ ಸಾಗರ ದರ್ಶನ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ‘ಜನತಾ ದರ್ಶನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಆದಷ್ಟು ಶೀಘ್ರದಲ್ಲಿ ಅವರ ಅರ್ಜಿಗಳನ್ನು ಪರಿಶೀಲಿಸಿ ಅಗತ್ಯ ಸೌಲಭ್ಯ ಮಂಜೂರು ಮಾಡಬೇಕು. ಸರ್ಕಾರಿ ಕಚೇರಿಗಳಿಗೆ ವಿನಾ ಕಾರಣ ಅಲೆದಾಡಿಸುವುದು ಕಂಡುಬಂದಲ್ಲಿ ಅಂತಹ ಅಧಿಕಾರಿಗಳು ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: Indian Coast Guard: 290 ನಾವಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಅಪ್ಲೈ ದಿನಾಂಕ ವಿಸ್ತರಣೆ

ಸಾರ್ವಜನಿಕರು ನೀಡುವ ಅರ್ಜಿಗಳನ್ನು ಅಧಿಕಾರಿಗಳು ಮಾನವೀಯತೆ ನೆಲೆಯಲ್ಲಿ ಪರಿಶೀಲಿಸಿ ಸರ್ಕಾರಿ ಸೌಲಭ್ಯಗಳನ್ನು ಮಂಜೂರು ಮಾಡುವಂತೆ ತಿಳಿಸಿದರು.

ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿಯೂ ಸಹ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸುವ ಮೂಲಕ ಜಿಲ್ಲೆಯ ಸಾರ್ವಜನಿಕರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಶಾಸಕ ಸತೀಶ್ ಸೈಲ್ ಮಾತನಾಡಿ, ಜಿಲ್ಲೆಯ ಜನರಿಗೆ ನ್ಯಾಯ ಒದಗಿಸಲು ನಿರಂತರ ಸೇವೆ ಸಲ್ಲಿಸಲಾಗುವುದು ಹಾಗೂ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಜನತಾ ದರ್ಶನದಲ್ಲಿ ಕಂದಾಯ ಇಲಾಖೆಯ ಭೂಮಿಗೆ ಸಂಬಂಧಿಸಿದ ಸಮಸ್ಯೆಗಳು, ಪಡಿತರ ಚೀಟಿ ವರ್ಗಾವಣೆ ಸಮಸ್ಯೆ, ವಸತಿ ಮಂಜೂರು ಸಮಸ್ಯೆ, ಪಂಚಾಯತ್ ಮಟ್ಟದ ಸಮಸ್ಯೆಗಳು, ಮಾಜಿ ಸೈನಿಕರಿಗೆ ಭೂ ಮಂಜೂರಾತಿ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಅರ್ಜಿಗಳನ್ನು ಸಲ್ಲಿಸಿದರು. ಈ ಎಲ್ಲಾ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಬಗೆಹರಿಸಿ ವರದಿ ನೀಡುವಂತೆ ಮತ್ತು ಎಲ್ಲಾ ಅರ್ಜಿಗಳಿಗೆ ಹಿಂಬರಹ ನೀಡಿ, ಪೂರಕ ದಾಖಲೆಗಳ ಅಗತ್ಯವಿದ್ದಲ್ಲಿ ಅರ್ಜಿದಾರರಿಂದ ಸಂಗ್ರಹಿಸಿ ಅಗತ್ಯ ಸೌಲಭ್ಯಗಳನ್ನು ಮಂಜೂರು ಮಾಡುವಂತೆ ಸಚಿವರು ನಿರ್ದೇಶನ ನೀಡಿದರು.

ಇದನ್ನೂ ಓದಿ: Ganesh Chaturthi: 100 ಫ್ಯಾನ್‌ಗಳಲ್ಲಿ ಅರಳಿದ ಗಣಪ; ಹ್ಯಾವಲ್ಸ್‌ ಕಂಪೆನಿಯ ಕ್ರಿಯೆಟಿವಿಟಿಗೆ ನೆಟ್ಟಿಗರ ಮೆಚ್ಚುಗೆ

ಜನತಾ ದರ್ಶನದಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಲು 6 ಪ್ರತ್ಯೇಕ ವಿಭಾಗಗಳನ್ನು ತೆರೆಯಲಾಗಿದ್ದು, ಕಂದಾಯ ಇಲಾಖೆಗೆ ಸಂಬಂಧಿಸಿದ 41, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ 17 ಅರ್ಜಿಗಳು ಸೇರಿದಂತೆ ಸುಮಾರು 115ಕ್ಕೂ ಅಧಿಕ ಅರ್ಜಿಗಳನ್ನು ಸ್ವೀಕರಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೀಶ್ ಕುಮಾರ್ ಸಿಂಗ್, ಜಿ.ಪಂ. ಸಿಇಒ ಈಶ್ವರ ಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠ್ಠಾಧಿಕಾರಿ ವಿಷ್ಣ್ಣುವರ್ಧನ್, ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಡಾ.ಪ್ರಶಾಂತ ಕುಮಾರ ಕೆ.ಸಿ., ರವಿಶಂಕರ್, ದಾಂಡೇಲಿ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ನಿಲೇಶ ಶಿಂಧೆ ದೇವೋಬ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: Weather Report : ಮಾಸಾಂತ್ಯದವರೆಗೂ ಮಳೆ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪ ವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ ಸ್ವಾಗತಿಸಿದರು.

Continue Reading

ವಿಜಯನಗರ

Vijayanagara News: ವಿಜಯನಗರದಲ್ಲಿ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ಚಾಲನೆ

Vijayanagara News: ಹೊಸಪೇಟೆಯ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತದ ವತಿಯಿಂದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜನತಾ ದರ್ಶನ ಕಾರ್ಯಕ್ರಮ ಜರುಗಿತು.

VISTARANEWS.COM


on

Edited by

Minister Zameer Ahmed Khan received the applications from the public at the Janata Darshan program in Hospete
Koo

ಹೊಸಪೇಟೆ: ಜನತಾ ದರ್ಶನ (Janata Darshan) ಮೂಲಕ ಕೇವಲ ಸಾರ್ವಜನಿಕರ (Publics) ಅಹವಾಲು ಕೇಳುವುದು ಮಾತ್ರವಲ್ಲದೇ ಆದಷ್ಟು ಶೀಘ್ರವಾಗಿ ಪರಿಹಾರ ಒದಗಿಸುವ ಕ್ರಮವನ್ನು ಕೈಗೊಂಡು ನಾಗರಿಕರಲ್ಲಿ ಭರವಸೆ ಮೂಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ತಿಳಿಸಿದರು.

ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜನತಾ ದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಖ್ಯಮಂತ್ರಿಗಳ ಬಳಿ ಸಲ್ಲಿಸಲು ತೆರಳುತ್ತಿದ್ದರು. ಅದರ ಬದಲಾಗಿ ಜಿಲ್ಲೆಯಲ್ಲೆ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಕೆಲವೊಂದನ್ನು ಸ್ಥಳದಲ್ಲಿಯೇ ಪರಿಹರಿಸಿ, ಸಾರ್ವಜನಿಕರಿಂದ ಸಲ್ಲಿಕೆಯಾದ ಅರ್ಜಿಗಳನ್ನು ಐಪಿಜಿಆರ್‌ಎಸ್ ತಂತ್ರಾಂಶದಲ್ಲಿ ನಮೂದಿಸಿ ಮೊಬೈಲ್ ಮೂಲಕ ಅರ್ಜಿದಾರರನ್ನು ಸಂಪರ್ಕಿಸಿ ಪರಿಹಾರ ಒದಗಿಸಲಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: Weather Report : ಮಾಸಾಂತ್ಯದವರೆಗೂ ಮಳೆ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಆಯಾ ಇಲಾಖೆಯ ಕೌಂಟರ್ ಬಳಿ ಅರ್ಜಿ ಸಲ್ಲಿಸಿದರೆ ಇನ್ನೂ ಕೆಲವರು ನೇರವಾಗಿ ಉಸ್ತುವಾರಿ ಸಚಿವರನ್ನು, ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಿದರು. 1 ಗಂಟೆಗಳ ಕಾಲ ಸ್ವತಃ ಸಚಿವರೇ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಜಿಲ್ಲಾಧಿಕಾರಿಗಳು ಸಹ ಸ್ಥಳದಲ್ಲೇ ಇದ್ದು ಇದರ ಬಗ್ಗೆ ಮಾಹಿತಿ ಪಡೆದುಕೊಂಡರು.

ವಿವಿಧ ಇಲಾಖೆಯ 20 ಕೌಂಟರ್ ಸ್ಥಾಪನೆ

ಸಾರ್ವಜನಿಕರಿಂದ ಅಹವಾಲು ಸಲ್ಲಿಕೆಗೆ ಜಿಲ್ಲಾಡಳಿತದಿಂದ 20 ಕೌಂಟರ್ ಸ್ಥಾಪಿಸಲಾಗಿತ್ತು, ಇಲಾಖಾವಾರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ತಲಾ ಇಬ್ಬರು ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಕಂದಾಯ ಇಲಾಖೆ ಸೇರಿದಂತೆ ಭೂ ದಾಖಲೆ, ಆಹಾರ ಮತ್ತು ನಾಗರಿಕ ಸರಬರಾಜು , ಮಜೂರಿ, ಜಿಲ್ಲಾ ನೋಂದಣಿ, ಗ್ರಾಮೀಣಾಭಿವೃದ್ಧಿ , ಗ್ರಾಮೀಣ ಕುಡಿಯುವ ನೀರು ಸರಬರಾಜು, ಕೃಷಿ, ತೋಟಗಾರಿಕೆ, ಮೀನುಗಾರಿಕೆ ಮತ್ತು ಪಶುಸಂಗೋಪನೆ, ಅರಣ್ಯ, ಅಬಕಾರಿ, ಗಣಿ ಮತ್ತು ಭೂವಿಜ್ಞಾನ, ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಎಲ್ಲಾ ನಿಗಮ ಮಂಡಳಿಗಳು, ಶಿಕ್ಷಣ, ಜೆಸ್ಕಾಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಗೃಹ, ನಗರಸಭೆ ಮತ್ತು ಸ್ಥಳೀಯ ಸಂಸ್ಥೆಗಳು, ನೀರಾವರಿ, ನಗರಾಭಿವೃದ್ಧಿ, ಹಂಪಿ ವಿಶ್ವಪಾರಪಂರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರ(ಹವಾಮಾ), ಕಾರ್ಮಿಕ, ಪ್ರಾದೇಶಿಕ ಸಾರಿಗೆ ಇಲಾಖೆ(ಆರ್‌ಟಿಒ), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಆಯುಷ್ ಸೇರಿದಂತೆ ಒಟ್ಟು 20ಕ್ಕೂ ಹೆಚ್ಚು ಇಲಾಖೆಗಳ ಕೌಂಟರ್ ತೆರೆದು ಸಾರ್ವಜನಿಕರಿಂದ ಅರ್ಜಿ ಮತ್ತು ಅಹವಾಲುಗಳನ್ನು ಸ್ವೀಕರಿಸಿ ಕಂಪ್ಯೂಟರ್‌ನಲ್ಲಿ ನಮೂದಿಸಿ ಸ್ವೀಕೃತಿಯನ್ನು ಅರ್ಜಿದಾರರಿಗೆ ನೀಡಲಾಯಿತು.

ಇದನ್ನೂ ಓದಿ: Ganesh Chaturthi: 100 ಫ್ಯಾನ್‌ಗಳಲ್ಲಿ ಅರಳಿದ ಗಣಪ; ಹ್ಯಾವಲ್ಸ್‌ ಕಂಪೆನಿಯ ಕ್ರಿಯೆಟಿವಿಟಿಗೆ ನೆಟ್ಟಿಗರ ಮೆಚ್ಚುಗೆ

ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಸೇರಿದಂತೆ ಕೆಲ ಪಿಂಚಣಿ ಸೌಲಭ್ಯವನ್ನು ಸ್ಥಳದಲ್ಲಿಯೇ ಇತ್ಯಾರ್ಥ ಮಾಡಿಕೊಡಲಾಯಿತು.

ಸಂಜೆಯವರೆಗೂ ನಡೆದ ಜನತಾ ದರ್ಶನದಲ್ಲಿ ವಿವಿಧ ತಾಲೂಕಿನಿಂದ ಆಗಮಿಸಿದ್ದ ಸಾರ್ವಜನಿಕರು ಆಯಾ ಇಲಾಖೆಯ ಕೌಂಟರ್‌ಗಳ ಬಳಿ ತೆರಳಿ ತಮ್ಮ ಅಹವಾಲುಗಳನ್ನು ಸಲ್ಲಿಸಿದರು.

ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 154 ಹಾಗೂ ನಗರಸಭೆಗೆ 520 ಅರ್ಜಿಗಳು ಸೇರಿದಂತೆ ಒಟ್ಟು 992 ಅರ್ಜಿಗಳನ್ನು ಸ್ವೀಕರಿಸಲಾಗಿದೆ.

ಇದನ್ನೂ ಓದಿ: Akshardham : ವಿದೇಶದಲ್ಲಿನ ಅತೀ ದೊಡ್ಡ ದೇವಾಲಯ ಉದ್ಘಾಟನೆಗೆ ಸಜ್ಜು; ಏನಿದರ ವಿಶೇಷ?

ಈ ಸಂದರ್ಭದಲ್ಲಿ ಶಾಸಕರಾದ ಎಚ್.ಆರ್.ಗವಿಯಪ್ಪ, ಡಾ.ಎನ್.ಟಿ.ಶ್ರೀನಿವಾಸ್, ಲತಾ ಮಲ್ಲಿಕಾರ್ಜುನ, ಜಿಲ್ಲಾಧಿಕಾರಿ ದಿವಾಕರ್‌ ಎಂ.ಎಸ್., ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಬಿ.ಎಲ್., ಆರ್‌ಎಫ್‌ಒ ಅರ್ಸಲನ್, ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಉಪವಿಭಾಗಾಧಿಕಾರಿ ನೋಂಗ್ಡಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ, ತಹಶೀಲ್ದಾರ್ ವಿಶ್ವಜೀತ್ ಮೆಹ್ತಾ ಸೇರಿದಂತೆ ಅಧಿಕಾರಿಗಳು ಇದ್ದರು.

Continue Reading

ಶಿವಮೊಗ್ಗ

Shivamogga News: ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳು

Shivamogga News: ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದ್ದು, ಒಟ್ಟು 11 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

VISTARANEWS.COM


on

Edited by

Ripponpet Govt PU College students selected for state level in sports
ಶಿವಮೊಗ್ಗದಲ್ಲಿ ನಡೆದ ಜಿಲ್ಲಾಮಟ್ಟದ ಪಿಯು ಕಾಲೇಜುಗಳ ಕ್ರೀಡಾಕೂಟದಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Koo

ರಿಪ್ಪನ್‌ಪೇಟೆ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು (Government PU College) ವಿದ್ಯಾರ್ಥಿಗಳು ಮತ್ತೊಮ್ಮೆ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ (Sports) ಮೇಲುಗೈ ಸಾಧಿಸುವುದರೊಂದಿಗೆ 12 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ (State Level) ಆಯ್ಕೆಯಾಗಿದ್ದಾರೆ.

ಸೆಪ್ಟೆಂಬರ್ 23 ಮತ್ತು 24ರಂದು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಶಿವಮೊಗ್ಗ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗೆಲುವು ಸಾಧಿಸಿದ್ದಾರೆ.

ಬಾಲಕರ ವಿಭಾಗದಲ್ಲಿ ವಾಲಿಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಬಾಲಕಿಯರ ವಿಭಾಗದಲ್ಲಿ ವಾಲಿಬಾಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ,ಹಾಗೂ ಖೋ -ಖೋ ದಲ್ಲಿ ಒಬ್ಬ ವಿದ್ಯಾರ್ಥಿ ಸೇರಿದಂತೆ ಒಟ್ಟು 11 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: Weather Report : ಮಾಸಾಂತ್ಯದವರೆಗೂ ಮಳೆ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹಾಗೂ ಶಾಸಕ ಗೋಪಾಲಕೃಷ್ಣ ಬೇಳೂರು, ಪ್ರಾಚಾರ್ಯ ಎ. ಮಂಜುನಾಥ್, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಜಿ. ಆರ್ ಕೃಷ್ಣಮೂರ್ತಿ, ಕಾಲೇಜು ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಉಪನ್ಯಾಸಕರು, ಗ್ರಾಮಸ್ಥರು, ಪೋಷಕರುಗಳು ಅಭಿನಂದಿಸಿದ್ದಾರೆ.

Continue Reading
Advertisement
Swara Bhasker and Fahad Ahmad With Baby Girl
ದೇಶ3 mins ago

Swara Bhasker: ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಸ್ವರಾ ಭಾಸ್ಕರ್, ಮಗಳು ಹೆಸರು ‘ರಾಬಿಯಾ’

TA Narayana Gowda
ಕರ್ನಾಟಕ23 mins ago

Bangalore Bandh : ಯಾವ ಬಂದ್‌ಗೂ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ಇಲ್ಲ; ನಾರಾಯಣ ಗೌಡ ಘೋಷಣೆ

Uttara Kannada District Incharge Minister Mankalu S Vaidya speech in Janata Darshan programme in Karwar
ಉತ್ತರ ಕನ್ನಡ27 mins ago

Uttara Kannada News: ಜನತಾ ದರ್ಶನದ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ: ಸಚಿವ ಮಂಕಾಳ ವೈದ್ಯ

Minister Zameer Ahmed Khan received the applications from the public at the Janata Darshan program in Hospete
ವಿಜಯನಗರ28 mins ago

Vijayanagara News: ವಿಜಯನಗರದಲ್ಲಿ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ಚಾಲನೆ

Ripponpet Govt PU College students selected for state level in sports
ಶಿವಮೊಗ್ಗ29 mins ago

Shivamogga News: ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳು

Protest in Honnali demanding not to release Cauvery water to TamilNadu
ದಾವಣಗೆರೆ30 mins ago

Davanagere News: ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಒತ್ತಾಯಿಸಿ ಹೊನ್ನಾಳಿಯಲ್ಲಿ ಬೃಹತ್ ಪ್ರತಿಭಟನೆ

Sri Veerabhadreswara Swami Jayantyotsava programme Inauguration at Soraba
ಶಿವಮೊಗ್ಗ31 mins ago

Shivamogga News: ಶ್ರೀ ವೀರಭದ್ರೇಶ್ವರ ಸ್ವಾಮಿ ಜಯಂತ್ಯುತ್ಸವ

Minister Sharanbasappa Gowda drives for Janata Darshan program in Yadagiri
ಯಾದಗಿರಿ33 mins ago

Yadgiri News: ಯಾದಗಿರಿಯಲ್ಲಿ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಚಿವ ಶರಣಬಸಪ್ಪಗೌಡ ಚಾಲನೆ

Minister Priyank Kharge drives for Janata Darshan programme in Chincholi
ಕರ್ನಾಟಕ34 mins ago

Kalaburagi News: ಕಲಬುರಗಿಯ ಚಿಂಚೋಳಿಯಲ್ಲಿ ಜನತಾ ದರ್ಶನ; ಸಚಿವ ಪ್ರಿಯಾಂಕ್‌ ಖರ್ಗೆ ಚಾಲನೆ

Anche Jan Sampark abhiyan programme inauguration at Kottur
ವಿಜಯನಗರ35 mins ago

Vijayanagara News: ಕೊಟ್ಟೂರಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ4 hours ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ6 hours ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ8 hours ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ9 hours ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ16 hours ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ1 day ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

ಟ್ರೆಂಡಿಂಗ್‌