ಕರ್ನಾಟಕ
Free Electricity: ಗೃಹಜ್ಯೋತಿ ಅರ್ಜಿಗೆ ಬಾಲಗ್ರಹ ಪೀಡೆ; 2ನೇ ದಿನವೂ ಡೆಡ್ ಆರ್ ಸ್ಲೋ!
Free Electricity: ರಾಜ್ಯದಲ್ಲಿ ಉಚಿತ ವಿದ್ಯುತ್ ಯೋಜನೆಯ ನೋಂದಣಿ ಎರಡನೇ ದಿನದಲ್ಲಿ ಮುಂದುವರಿದಿದೆ. ಆದರೆ, ತಾಂತ್ರಿಕ ಸಮಸ್ಯೆಯೂ ಮುಂದುವರಿದಿದೆ.
ಬೆಂಗಳೂರು: ರಾಜ್ಯ ಸರ್ಕಾರ ತನ್ನ ಮಹತ್ವಾಕಾಂಕ್ಷಿ ಉಚಿತ ವಿದ್ಯುತ್ ಯೋಜನೆ (Free Electricity) ಯಾದ ಗೃಹಜ್ಯೋತಿ ಸ್ಕೀಮ್ (Gruhajyothi scheme) ಅನುಷ್ಠಾನಕ್ಕೆ ಅರ್ಜಿಯನ್ನೇನೋ ಕರೆದಿದೆ. ಆದರೆ, ಅರ್ಜಿ ಸ್ವೀಕಾರದ ಎರಡನೇ ದಿನವಾದ ಸೋಮವಾರವೂ ತಾಂತ್ರಿಕ ಸಮಸ್ಯೆ ಮುಂದುವರಿದಿದೆ. ಜೂನ್ 15ರಂದು ಆರಂಭವಾಗಬೇಕಾಗಿದ್ದ ಅರ್ಜಿ ಸ್ವೀಕಾರ ಮೂರು ದಿನ ತಡವಾಗಿ ಅಂದರೆ ಜೂನ್ 18ರಂದು ಆರಂಭಗೊಂಡಿತ್ತು. ಮೊದಲ ದಿನ ಆರಂಭದಲ್ಲಿ ಭಾರಿ ಸಮಸ್ಯೆಯಾಗಿ ಬಳಿಕ ಪರಿಸ್ಥಿತಿ ಸುಧಾರಿಸಿತ್ತು. ಅಂತಿಮವಾಗಿ ದಿನದ ಕೊನೆಗೆ 55,000 ಮಂದಿ ಅರ್ಜಿ ಸಲ್ಲಿಸಲು ಶಕ್ತರಾಗಿದ್ದಾರೆ. ಎರಡನೇ ದಿನವಾದ ಬೆಳಗ್ಗಿನಿಂದಲೇ ಜನರು ಅರ್ಜಿ ಸಲ್ಲಿಸಲು ಧಾವಂತ ತೋರುತ್ತಿದ್ದಾರೆ. ಆದರೆ, ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿರುವ ಸೇವಾ ಸಿಂಧು ಪೋರ್ಟಲ್ (Sewa sindhu portal) ಒಂದೋ ಸ್ಲೋ ಆಗಿದೆ, ಇಲ್ಲವೇ ಡೆಡ್ ಆಗಿದೆ ಎಂಬ ಆರೋಪ ಕೇಳಿಬರುತ್ತಿದೆ.
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ (Congress Guarantee) ಒಂದು ಕುಟುಂಬಕ್ಕೆ ಗರಿಷ್ಠ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿತ್ತು. ಸರ್ಕಾರ ರಚನೆಯಾದ ಬೆನ್ನಿಗೇ ಕೆಲವೊಂದು ಷರತ್ತುಗಳೊಂದಿಗೆ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ. ಇದೀಗ ಅದಕ್ಕಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜಾರಿಯಲ್ಲಿದೆ. ಬೆಂಗಳೂರು ಒನ್ ಕೇಂದ್ರಗಳು, ಕರ್ನಾಟಕ ಒನ್ ಮತ್ತು ಎಸ್ಕಾಂಗಳ ಸ್ಥಳೀಯ ಕಚೇರಿಗಳಲ್ಲಿ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಆದರೆ, ಕೆಲವು ಕಡೆ ಪೋರ್ಟಲ್ ತೆರೆದುಕೊಳ್ಳದೆ, ಇನ್ನು ಕೆಲವು ಕಡೆ ನಿಧಾನಗತಿಯ ಪ್ರಕ್ರಿಯೆ ನಡೆಯುತ್ತಿದೆ.
ಬೆಂಗಳೂರಿನಲ್ಲಿ ಪರಿಸ್ಥಿತಿ ಹೇಗಿದೆ?
ಬೆಂಗಳೂರಿನ ಕೆಲವು ಕಡೆ ಸೈಟ್ ಸಮಸ್ಯೆ ಎದುರಾಗಿದ್ದರೆ, ಕೆಲವು ಕಡೆ ಸರಾಗವಾಗಿ ನಡೆಯುತ್ತಿರುವುದು ಕಂಡುಬಂದಿದೆ. ಎಂ.ಜಿ ರಸ್ತೆಯ ಬೆಸ್ಕಾಂ ಪ್ರಾದೇಶಿಕ ಕಚೇರಿಯಲ್ಲಿ ಮತ್ತೆ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಎಇ, ಎಇಇ, ಸೂಪರಿಂಟೆಂಡೆಂಟ್ ಎಂಜಿನಿಯರ್ ಈಸ್ಟ್ ಸರ್ಕಲ್ (ಎಸ್ ಇಇ) ಅವರು ಪರಿಶೀಲನೆ ನಡೆಸಿದರು. ಸರಿ ಹೋಗಬಹುದು ಎಂಬ ಭರವಸೆಯನ್ನು ಅವರು ನೀಡಿದ್ದಾರೆ.
ಬೆಳಗಾವಿಯಲ್ಲಿ ಕೇಂದ್ರದಲ್ಲಿ ಜನವೋ ಜನ
ಬೆಳಗಾವಿ ಅಶೋಕ್ ನಗರದಲ್ಲಿರುವ ಕರ್ನಾಟಕ ಒನ್ ಕೇಂದ್ರದಲ್ಲಿ ಭಾರಿ ಸಂಖ್ಯೆಯಲ್ಲಿ ಗ್ರಾಹಕರು ಆಗಮಿಸಿದ್ದಾರೆ. ಜನರನ್ನು ಮೂರು ಮೂರು ಲೈನ್ ಮಾಡಿ ನಿಲ್ಲಿಸಲಾಗಿದೆ. ಆಗಾಗ ಸರ್ವರ್ ಡೌನ್ ಆಗ್ತಿದೆ ಎನ್ನುವುದು ಬಿಟ್ಟು ಬೇರಾವ ಸಮಸ್ಯೆ ಇಲ್ಲ ಎಂದು ಸಿಬ್ಬಂದಿ ಹೇಳಿದ್ದಾರೆ.
ಮೈಸೂರು: ಗೃಹ ಜ್ಯೋತಿ ನೋಂದಣಿ ಆರಂಭ
ಮೈಸೂರಿನಲ್ಲಿ ಗೃಹಜ್ಯೋತಿ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎರಡನೇ ದಿನವೂ ಕರ್ನಾಟಕ ಒನ್ ಕೇಂದ್ರದತ್ತ ಗ್ರಾಹಕರು ಧಾವಿಸುತ್ತಿದ್ದಾರೆ.
ʻʻಹಿಂದೆಯೂ ಭಾಗ್ಯ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ನೀಡಲಾಗುತ್ತಿತ್ತು. ತಮಿಳುನಾಡು ಸೇರಿದಂತೆ ಹೊರ ರಾಜ್ಯಗಳಲ್ಲಿ ಈಗಾಗಲೇ ಉಚಿತ ವಿದ್ಯುತ್ ಸಿಗುತ್ತಿದೆ. ನಮ್ಮಲ್ಲಿ ಎಷ್ಟು ದಿನ ಫ್ರೀ ಕೊಡ್ತಾರೋ ಗೊತ್ತಿಲ್ಲ. ಯೋಜನೆಯಿಂದ ಜನರಿಗೆ ಅನುಕೂಲ ಆಗುತ್ತದೆʼʼ ಎಂದು ಜಯ ನಗರದ ಕರ್ನಾಟಕ ಒನ್ ಕೇಂದ್ರದ ಬಳಿ ವಿದ್ಯುತ್ ಗ್ರಾಹಕರೊಬ್ಬರು ಹೇಳಿದರು.
ಯಾದಗಿರಿಯಲ್ಲಿ ಗೃಹ ಜ್ಯೋತಿ ಅರ್ಜಿ ಸಲ್ಲಿಕೆ ಬೆಳಗ್ಗೆಯಿಂದಲೇ ಆರಂಭ
ಯಾದಗಿರಿಯ ತಹಶಿಲ್ದಾರ ಕಚೇರಿ ಆವರಣದಲ್ಲಿರುವ ಕರ್ನಾಟಕ ಒನ್ ಕೇಂದ್ರದಲ್ಲಿ ಬೆಳಗ್ಗಿನಿಂದಲೇ ಅರ್ಜಿ ಸಲ್ಲಿಕೆ ನಡೆಯುತ್ತಿದೆ. ಬೆಳಗ್ಗೆಯಿಂದಲೇ ವಿವಿಧ ಗ್ರಾಮಗಳಿಂದ ಆಧಾರ್ ಕಾರ್ಡ್, ವಿದ್ಯುತ್ ಖಾತೆ ಸಂಖ್ಯೆ ತೊರಿಸಿ ಅರ್ಜಿ ಸಲ್ಲಿಸಲಾಗುತ್ತಿದೆ.
ಭಾನುವಾರ ಮೊದಲ ದಿನ ಸರ್ವರ್ ಸಮಸ್ಯೆಯಿಂದ ಕೇವಲ 34 ಅರ್ಜಿ ಸಲ್ಲಿಕೆಯಾಗಿತ್ತು. ಇಲ್ಲಿ ಯಾವುದೇ ಗೊಂದಲವಾಗದಂತೆ ಟೋಕನ್ ವಿತರಣೆ ಮಾಡಿ ಅರ್ಜಿ ಸಲ್ಲಿಕೆ ನಡೆಯುತ್ತಿದೆ.
ಫಲಾನುಭವಿಗಳು ಏನು ಮಾಡಬೇಕು?
-ಫಲಾನುಭವಿಗಳು ಆಧಾರ್ ನಂಬರ್ ಜೊತೆ ಆರ್ ಆರ್ ನಂಬರ್ ಕಡ್ಡಾಯವಾಗಿ ಜೋಡಣೆ ಮಾಡಬೇಕು.
– ಬೆಂಗಳೂರು ಒನ್ ಕೇಂದ್ರಗಳಲ್ಲಿ ಸೇವಾ ಸಿಂಧು ಪೊರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
-ಕರ್ನಾಟಕ ಒನ್ ಕೇಂದ್ರಗಳಲ್ಲಿ ಸಹ ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಬಹುದು.
-ಬೆಸ್ಕಾಂನ ಸ್ಥಳೀಯ ಕಛೇರಿಯಲ್ಲಿ ಗೃಹ ಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆಗೆ ಅವಕಾಶವಿದೆ.
-ಸೇವಾ ಸಿಂಧು ವೆಬ್ಸೈಟ್ https://sevasindhugs.karnataka.gov.in/gruhajyothi
ಯಾವ ದಾಖಲೆ ಬೇಕು?
-ಅರ್ಜಿ ಸಲ್ಲಿಸುವಾಗ ಮನೆಯ ಕರಾರು ಪತ್ರ ಅಥವಾ ವೋಟರ್ ಐಡಿ ಅಥವಾ ಆಧಾರ್ ಕಾರ್ಡ್ ಕಡ್ಡಾಯ
-ಇಷ್ಟರಲ್ಲಿ ಯಾವುದಾದರೂ ಒಂದು ಇದ್ದರೆ ಗೃಹಜ್ಯೋತಿ ಯೋಜನೆ ಪಡೆಯಬಹುದು.
-ಹೆಚ್ಚಿನ ಮಾಹಿತಿಗಾಗಿ 1912 ಗೆ 24/7 ಕರೆ ಮಾಡಬಹುದು.
-ಗೃಹಜ್ಯೋತಿ ಯೋಜನೆ ಅಡಿ ಒಟ್ಟು 2.14 ಕೋಟಿ ಫಲಾನುಭವಿನಗಳಿಗೆ ಉಚಿತ ವಿದ್ಯುತ್ ಸಿಗಲಿದೆ.
ಇದನ್ನೂ ಓದಿ : Buffalo attack: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನನ್ನು ಅಟ್ಟಾಡಿಸಿ ಇರಿದು ಕೊಂದ ದೇವರ ಕೋಣ
ಕರ್ನಾಟಕ
MP Muniswamy : ಸಚಿವ ಬೈರತಿ, ಶಾಸಕ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟ ಸಂಸದ ಮುನಿಸ್ವಾಮಿ
MP Muniswamy : ಎರಡು ದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ತಮ್ಮ ಮೇಲೆ ಅಸಾಂವಿಧಾನಿಕವಾಗಿ ನಡೆದುಕೊಂಡಿದ್ದಲ್ಲದೆ, ಹಲ್ಲೆಗೆ ಮುಂದಾಗಲಾಗಿದೆ ಎಂದು ಕೋಲಾರ ಸಂಸದ ಮುನಿಸ್ವಾಮಿ ಅವರು ಕೋಲಾರ ಶಾಸಕ ನಾರಾಯಣಸ್ವಾಮಿ, ಉಸ್ತುವಾರಿ ಸಚಿವ ಬೈರತಿ ಸುರೇಶ್, ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಬೆಂಗಳೂರು: ಕೋಲಾರ ಶಾಸಕ ನಾರಾಯಣಸ್ವಾಮಿ (Kolar MLA Narayanaswamy) ಈಚೆಗೆ ಕಾರ್ಯಕ್ರಮವೊಂದರಲ್ಲಿ ತಮ್ಮ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಹಲ್ಲೆಗೆ ಮುಂದಾಗಿದ್ದಾರೆ. ಜತೆಗೆ ಕೋಲಾರ ಉಸ್ತುವಾರಿ ಸಚಿವ ಬೈರತಿ ಸುರೇಶ್ (Kolar Incharge Minister Byrathi Suresh), ಕೋಲಾರ ಎಸ್ಪಿ ಅಸಾಂವಿಧಾನಿಕವಾಗಿ ನಡೆದುಕೊಂಡಿದ್ದಾರೆ ಎಂದು ಕೋಲಾರ ಸಂಸದ ಮುನಿಸ್ವಾಮಿ (Kolar MP Muniswamy) ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಕೋಲಾರ ಸಂಸದ ಮುನಿಸ್ವಾಮಿ ಮೇಲೆ ಹಲ್ಲೆ ಆರೋಪ ಪ್ರಕರಣ ಈಗ ರಾಜ್ಯಪಾಲರ ಅಂಗಳ ತಲುಪಿದೆ. ಉಸ್ತುವಾರಿ ಸಚಿವ ಬೈರತಿ ಸುರೇಶ್, ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧವೂ ಸಂಸದ ಮುನಿಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ (MLC Chalavadi Narayanaswamy), ಕೇಶವ್ ಪ್ರಸಾದ್ ಸೇರಿದಂತೆ 30 ಮಂದಿ ನಿಯೋಗ ತೆರಳಿ ದೂರು ನೀಡಿದೆ.
ಜನಪ್ರತಿನಿಧಿ ಮೇಲೆ ಅಸಂವಿಧಾನಿಕವಾಗಿ ನಡೆದುಕೊಂಡಿದ್ದಾರೆ. ಹಾಗಾಗಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ.
ನನ್ನನ್ನೂ ಸೇರಿದಂತೆ, ಎಲ್ಲರ ವಿರುದ್ಧ ತನಿಖೆ ಆಗಲಿ: ಕೋಲಾರ ಸಂಸದ ಮುನಿಸ್ವಾಮಿ
ಸಂವಿಧಾನದಲ್ಲಿ ಆಡಳಿತ ಪಕ್ಷಕ್ಕೆ ಎಷ್ಟು ಅಧಿಕಾರ ಇದೆಯೋ, ವಿಪಕ್ಷಗಳಿಗೂ ಅಷ್ಟೇ ಹಕ್ಕು ಇದೆ. ಇಡೀ ಕೋಲಾರ ಜಿಲ್ಲೆಯಲ್ಲಿ ಇರುವ ಸಮಸ್ಯೆಯನ್ನು ಬಗೆಹರಿಸಿದ್ದೇವೆ ಅಂತ ಹೇಳಿದ್ದರು. ರೈತರ ಜಮೀನನ್ನು ಕಬಳಿಸುವ ಕೆಲಸ ಮಾಡಿದ್ದಾರೆ. ರೈತರ ವಿರುದ್ಧ ಒಕ್ಕಲೆಬ್ಬಿಸುವ ಕೆಲಸವನ್ನು ಮಾಡಿದ್ದೀರಿ. ರಾಜಕೀಯ ವೇದಿಕೆ ಮೇಲೂ ಭೂ ಕಳ್ಳರಿದ್ದಾರೆ ಎಂದು ನಾನು ಹೇಳಿದ್ದೇನೆ. ಇದರಲ್ಲಿ ತಪ್ಪೇನಿದೆ ಎಂದು ಕೋಲಾರ ಸಂಸದ ಮುನಿಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ನನ್ನನ್ನು ಹೊರಗೆ ದಬ್ಬಿಸುವ ಕೆಲಸ ಮಾಡಿದ್ದಾರೆ
ಎಸ್ಎನ್ ಸಿಟಿ ಅಂತ ಲೇಔಟ್ ಮಾಡಿದ್ದಾರೆ. ನನ್ನನ್ನೂ ಸೇರಿದಂತೆ, ಎಲ್ಲರ ವಿರುದ್ಧ ತನಿಖೆ ಆಗಲಿ ಅಂತ ಹೇಳಿದೆ. ಆಗ ಕೋಲಾರ ಶಾಸಕ ನಾರಾಯಣಸ್ವಾಮಿ ಹಾಗೂ ಉಸ್ತುವಾರಿ ಸಚಿವರು ನನ್ನನ್ನು ಹೊರಗೆ ದಬ್ಬಿಸುವ ಕೆಲಸ ಮಾಡಿದರು. ಹಾಗಾಗಿ ಉಸ್ತುವಾರಿ ಸಚಿವ ಬೈರತಿ ಸುರೇಶ್, ಶಾಸಕ ನಾರಾಯಣಸ್ವಾಮಿ ಹಾಗೂ ಕೋಲಾರ ಎಸ್ಪಿ ವಿರುದ್ಧ ದೂರು ನೀಡಿದ್ದೇನೆ ಎಂದು ಸಂಸದ ಮುನಿಸ್ವಾಮಿ ಹೇಳಿದರು.
ಇದನ್ನೂ ಓದಿ: BJP JDS alliance : ಸೆಕ್ಯುಲರಿಸಂ ಅನ್ನು ನಾಶ ಮಾಡಿದ್ದೇ ಕಾಂಗ್ರೆಸ್: ಎಚ್.ಡಿ. ಕುಮಾರಸ್ವಾಮಿ ಕಿಡಿ
ರೈತರ ಪರವಾಗಿ ಹೋರಾಟ ಮುಂದುವರಿಯಲಿದೆ
ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಹಕ್ಕು ಚ್ಯುತಿ ಮಂಡನೆ ಮಾಡುವಂತೆ ಮನವಿ ಮಾಡಲಿದ್ದೇವೆ. ದೆಹಲಿಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರಿಗೂ ದೂರು ನೀಡುತ್ತೇನೆ. ಎಷ್ಟೇ ಗದಾ ಪ್ರಹಾರ ಮಾಡಿದರೂ ನಮ್ಮ ರೈತರ ಪರವಾಗಿ ನನ್ನ ಹೋರಾಟ ನಡೆಯಲಿದೆ ಎಂದು ಸಂಸದ ಮುನಿಸ್ವಾಮಿ ಇದೇ ವೇಳೆ ಹೇಳಿದರು.
ಕರ್ನಾಟಕ
BJP JDS alliance : ಸೆಕ್ಯುಲರಿಸಂ ಅನ್ನು ನಾಶ ಮಾಡಿದ್ದೇ ಕಾಂಗ್ರೆಸ್: ಎಚ್.ಡಿ. ಕುಮಾರಸ್ವಾಮಿ ಕಿಡಿ
BJP JDS alliance : ಕೋಮುವಾದಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿದೆ ಎಂದು ಆರೋಪ ಮಾಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮುಗಿಬಿದ್ದಿದ್ದಾರೆ. ಅಲ್ಲದೆ, ಜಾತ್ಯತೀತತೆಯನ್ನು ನಾಶ ಮಾಡಿದ್ದೇ ಕಾಂಗ್ರೆಸ್ ಎಂದು ಕಿಡಿಕಾರಿದ್ದಾರೆ.
ಬೆಂಗಳೂರು: ಎಲ್ಲೆಲ್ಲಿ ಸೆಕ್ಯುಲರಿಸಂ ಇತ್ತೋ ಅದನ್ನು ಕಾಂಗ್ರೆಸ್ನವರೇ ನಾಶ ಮಾಡಿದರು. ಅಧಿಕಾರಕ್ಕಾಗಿ ಏನನ್ನೆಲ್ಲ ಮಾಡಿದರು? ಫಾರೂಕ್ ಅಬ್ದುಲ್ಲ (Farooq Abdullah) ಅವರನ್ನು ಯಾವ ಸಿದ್ಧಾಂತ ಉಳಿಸುವುದಕ್ಕೆ ಅವರು ಸೋಲಿಸಿದರು? ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು (Former Prime Minister HD DeveGowda) ಇದನ್ನೆಲ್ಲ ನೋಡಿ, ನೋವು ಅನುಭವಿಸಿದ್ದಾರೆ. ಒಂದು ಸಮಾಜಕ್ಕೆ ಸಹಾಯ ಮಾಡಬೇಕು ಅಂತ ದೇವೇಗೌಡರು ಮಾಡಿದ ಹಾಗೆ ಯಾರೂ ಮಾಡಿಲ್ಲ. ಈಗಾಗಲೇ ಇಬ್ರಾಹಿಂ ಅವರಿಗೆ ಎಲ್ಲ ಮಾಹಿತಿ ಕೊಟ್ಟಿದ್ದೇವೆ. ಮುಸ್ಲಿಮರಿಗೆ ನಾನು ಗೌರವ ಕೊಟ್ಟಿದ್ದೇನೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದರು. ಈ ಮೂಲಕ ಬಿಜೆಪಿ – ಜೆಡಿಎಸ್ ಮೈತ್ರಿ (BJP JDS alliance) ಬಗ್ಗೆ ಪ್ರಸ್ತಾಪ ಮಾಡಿರುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ನನ್ನ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಾಢ್ಯವಾಗಿದ್ದರೆ, ನನಗೆ ವೋಟ್ ಹಾಕುತ್ತಿರಲಿಲ್ಲ. ನಾನು ಯಾರಿಗೂ ಅಗೌರವಯುತವಾಗಿ ನಡೆದುಕೊಂಡಿಲ್ಲ. ಇಬ್ರಾಹಿಂ ಜೊತೆ ಹಲವು ವಿಷಯ ಚರ್ಚೆ ಮಾಡಿದ್ದೇನೆ. ಇವತ್ತು ದೇಶಕ್ಕೆ ಅವಶ್ಯಕತೆ ಇರುವ ಬಗ್ಗೆ ಲೆಕ್ಕ ಹಾಕಿದ್ದೇವೆ. ಹಾಗಾಗಿ ಈ ಮೈತ್ರಿಯನ್ನು ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಿದರು.
ಸಿಎಂ ಮಾಡಿ ಎಂದು ನಾವು ಕೇಳಿದ್ದೆವಾ?
ಈಗ ಬಿಜೆಪಿ ಬಿ ಟೀಂ ಅನ್ನೋದನ್ನು ದೇವೇಗೌಡರು ಪ್ರೂವ್ ಮಾಡಿದ್ದರು ಅಂತಿದ್ದಾರಲ್ಲ ಅವತ್ತು ದೇವೇಗೌಡರು ನಮ್ಮ ಪಕ್ಷಕ್ಕೆ ಮುಖ್ಯಮಂತ್ರಿ ಸ್ಥಾನ ಬೇಡ ಅಂದಿದ್ದರು. ಆಗ ನಾವು ಅಧಿಕಾರಕ್ಕಾಗಿ ಕಾಂಗ್ರೆಸ್ ಜತೆ ಸೇರಿರಲಿಲ್ಲ. ಆದರೆ, ನನ್ನನ್ನೇ ಮುಖ್ಯಮಂತ್ರಿ ಮಾಡಬೇಕು ಎಂದು ಮುಂದೆ ಬಂದಿದ್ದು ಯಾರು? ಅಂದು ನನಗೆ ಬಿಜೆಪಿಯಿಂದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ, ನಡ್ಡಾ ಅವರಿಂದ ಫೋನ್ ಬಂದಿತ್ತು. ಆಗ ನಾನು ಬಿಜೆಪಿ ಜತೆ ಸೇರಿದ್ದರೆ 5 ವರ್ಷದ ಆಡಳಿತ ನಮ್ಮದಾಗಿರುತ್ತಿತ್ತು ಎಂದು ಎಚ್.ಡಿ. ಕುಮಾರಸ್ವಾಮಿ ಗುಡುಗಿದರು.
ಹಾಸನದಲ್ಲಿ ರಾಹುಲ್ ಗಾಂಧಿ ಕರೆದುಕೊಂಡು ಬಂದು ಭಾಷಣ ಮಾಡಿಸಿದ್ದರು. ಸಿದ್ದರಾಮಯ್ಯ ಅವರು ಜಾತ್ಯತೀತತೆಯನ್ನು ಉಳಿಸುತ್ತೇನೆ ಎಂದು ಹೇಳುತ್ತಾರೆ. ಆದರೆ, ಅಂದು ನನ್ನ ಸರ್ಕಾರವನ್ನು ಬೀಳಿಸುವಾಗ 5 ಶಾಸಕರನ್ನು ಕರೆತಂದರೆ, ಅತ್ತ ಕಡೆಯಿಂದ ಮತ್ತೆ ಐವರನ್ನು ಕಳುಹಿಸಿಕೊಡುತ್ತೇನೆ ಎಂದು ಹೇಳಿದ್ದವರು ಯಾರು? ಜಾತ್ಯತೀತತೆ ಉಳಿಸುವ ಕಾಂಗ್ರೆಸ್ ಸರ್ಕಾರವನ್ನು ಇದೀಗ ನೋಡುತ್ತಿದ್ದೀರಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.
ಕಾವೇರಿ ತಟದಲ್ಲಿ ರೈತರ ಉಳಿವಿಗೆ ದೇವೇಗೌಡರೇ ಕಾರಣ
ನೀರಾವರಿ ಸಮಸ್ಯೆ ಬಗೆಹರಿಸಲು ದೇವೇಗೌಡರು ಹಳ್ಳಿ ಹಳ್ಳಿ ಸುತ್ತಿದ್ದಾರೆ. ನೀರಾವರಿಗೆ ದೇವೇಗೌಡರು ಮಾಡಿರುವುದನ್ನು ಯಾರೊಬ್ಬರೂ ಮಾಡಿಲ್ಲ. ಚರ್ಚೆ ಮಾಡುವ ಸಂಘಟನೆಗಳಿಗೆ ಒಂದು ಮಾತು ಹೇಳುತ್ತೇನೆ. ಕಾವೇರಿ ತಟದಲ್ಲಿ ರೈತರು ಉಳಿದಿರುವುದಕ್ಕೆ ದೇವೇಗೌಡರೇ ಕಾರಣ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಪ್ರಿಯಾಂಕ್ ಖರ್ಗೆ ಮಾತಿಗೆ ತಿರುಗೇಟು
ನಮ್ಮ ಪಕ್ಷ ಉಳಿಸಿಕೊಳ್ಳಲು ಕಾಲು ಹಿಡಿದುಕೊಂಡರು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಜನತಾದಳಕ್ಕೆ ಇನ್ನು ಆ ದುರ್ಗತಿ ಬಂದಿಲ್ಲ. ಮಲ್ಲಿಕಾರ್ಜುನ ಖರ್ಗೆಯವರು ಯಾಕೆ ಕಾವೇರಿ ಬಗ್ಗೆ ಧ್ವನಿ ಎತ್ತಲಿಲ್ಲ? ಕಾವೇರಿ ವಿಚಾರವಾಗಿ ಯಾಕೆ ಕಾಂಗ್ರೆಸ್ ಧ್ವನಿ ಎತ್ತುತ್ತಿಲ್ಲ? ಕೆಆರ್ಎಸ್ ನೀರಿನ ಬಗ್ಗೆ ನಾನು ಮಾಹಿತಿ ಪಡೆದಿದ್ದೇನೆ. ಈ ಸರ್ಕಾರ ಇಷ್ಟು ಕೇವಲವಾಗಿ ನಡೆದುಕೊಳ್ಳುತ್ತಿದೆ. ವಿಷಯವನ್ನು ಡೈವರ್ಟ್ ಮಾಡುತ್ತಿದೆ. ಪಕ್ಷದ ಬಗ್ಗೆ ಹೆಸರು ಕೆಡಿಸಲು ಹೊರಟಿದ್ದಾರೆ. ನನಗೇನೂ ಶಾಕ್ ಕೊಡುವ ವಿಷಯವಲ್ಲ ಇದು. ಈಗಾಗಲೇ ನನಗೆ ಸಾಕಷ್ಟು ಶಾಕ್ ಕೊಟ್ಟಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಗುಡುಗಿದರು.
ಮೈನಾರಿಟಿಗೆ ತೊಂದರೆ ಮಾಡಲ್ಲ: ಎಚ್.ಡಿ. ದೇವೇಗೌಡ
ನಾನು ಇವತ್ತು ನೀರಾವರಿ ಮಂತ್ರಿಗಳ ಯಾವ ಮಾತಿಗೂ ಗಮನ ಕೊಡಲ್ಲ. ಬಾಂಗ್ಲಾದೇಶದ ನೀರಿನ ಸಮಸ್ಯೆ ಬಗೆಹರಿಸಿದ್ದೆ. ನಮ್ಮ ಮುಂದೆ ಇರೋದು ಮೈನಾರಿಟಿ ಮಾತು ಅಷ್ಟೇ. ನಾವು ಮೈನಾರಿಟಿ ಎಲ್ಲೇ ಇದ್ದರೂ ತೊಂದರೆ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದು ಎಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದರು. ಆಗ ಮಧ್ಯ ಪ್ರವೇಶಿಸಿದ ಎಚ್.ಡಿ. ಕುಮಾರಸ್ವಾಮಿ, ಮೈನಾರಿಟಿ ಮಾತ್ರ ಅಲ್ಲ ಇಡೀ ಕರ್ನಾಟಕದ ರಕ್ಷಣೆ ನಮ್ಮ ಗುರಿಯಾಗಿದೆ. ನಾಟ್ ಓನ್ಲಿ ಮೈನಾರಿಟಿ ಬ್ರದರ್, ಎಂಟೈರ್ ಕರ್ನಾಟಕ ರಕ್ಷಣೆ ಮಾಡುತ್ತೇವೆ ಎಂದು ಗುಡುಗಿದರು.
ಇದನ್ನೂ ಓದಿ: BJP JDS alliance : ವಿಜಯದಶಮಿ ನಂತರ ಜೆಡಿಎಸ್ ಸೀಟು ಹಂಚಿಕೆ ಅಂತಿಮ ಮಾತುಕತೆ!
ಕಾವೇರಿ ನೀರಿನ ವಿಷಯದಲ್ಲಿ ಈಗ ಬಂದಿರುವ ಆದೇಶವು ನನ್ನ ರಾಜ್ಯದ ಜನತೆಯ ಮರಣ ಶಾಸನವಾಗಿದೆ ಎಂದು ಎಚ್.ಡಿ. ದೇವೇಗೌಡ ಬೇಸರವನ್ನು ಹೊರಹಾಕಿದರು.
ಕರ್ನಾಟಕ
CM Siddaramaiah: CWRC ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ನಿರ್ಧಾರ ಎಂದ ಸಿದ್ದರಾಮಯ್ಯ
CM Siddaramaiah: ಮತ್ತೆ 18 ದಿನ 3000 ಕ್ಯುಸೆಕ್ ನೀರು ಬಿಡಬೇಕು ಎಂಬ ಆದೇಶವನ್ನು ಪ್ರಶ್ನೆ ಮಾಡಲಾಗುವುದು ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ.
ಚಾಮರಾಜನಗರ (ಹನೂರು): ಕಾವೇರಿ ನೀರು ನಿಯಂತ್ರಣ ಸಮಿತಿಯು (Cauvery water regulation Committee) ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರನ್ನು (3000 Cusec water) ಹರಿಸಲು ಆದೇಶಿಸಿದೆ. ಈ ಬಗ್ಗೆ ಕಾನೂನು ತಂಡದೊಂದಿಗೆ ಚರ್ಚಿಸಿದ್ದು ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಕಾನೂನು ತಂಡ ಸಲಹೆ ನೀಡಿದೆ. ನೀರು ಬಿಡಲು ನಮ್ಮ ಬಳಿ ನೀರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಅವರು ಶ್ರೀ ಮಲೈ ಮಹದೇಶ್ವರ ಬೆಟ್ಟದ (Male mahadeshwara betta) ಬಳಿ ಮಾಧ್ಯಮದವರಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.
ಕಾವೇರಿ ನೀರು ನಿಯಂತ್ರಣ ಸಮಿತಿಯು ಮಂಗಳವಾರ ನೀಡಿದ ಆದೇಶದಲ್ಲಿ ಸೆ. 28ರಿಂದ ಅಕ್ಟೋಬರ್ 15ರವರೆಗೆ ಪ್ರತಿದಿನವೂ 3000 ಕ್ಯೂಸೆಕ್ ನೀರು ಬಿಡಲು ಆದೇಶ ನೀಡಿತ್ತು. ಇದನ್ನು ಪ್ರಾಧಿಕಾರದ ಮುಂದೆ ಪ್ರಶ್ನಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸಿವೆ.
ಸಿಎಂ ಮತ್ತು ಡಿಸಿಎಂ ಇಬ್ಬರೂ ನಮ್ಮಲ್ಲಿ ನೀರು ಇಲ್ಲ ಎಂದು ಹೇಳುತ್ತಲೇ ಪ್ರಾಧಿಕಾರ ಹೇಳಿದಷ್ಟು ನೀರು ಬಿಡುಗಡೆ ಮಾಡಿದ್ದೇ ಸಮಿತಿಗೆ ಸರಾಗ ಆದೇಶ ನೀಡಲು ಕಾರಣವಾಗಿದೆ ಎಂದು ಆರೋಪಿಸಲಾಗಿದೆ. ಇದೀಗ ಸೆ. 29ರಂದು ಇದರ ವಿರುದ್ಧ ರಾಜ್ಯವ್ಯಾಪಿ ಬಂದ್ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಮಳೆಗಾಗಿ ಮಹದೇಶ್ವರನಲ್ಲಿ ಪ್ರಾರ್ಥನೆ
ಮಳೆ ಕೈಕೊಟ್ಟು 195 ತಾಲ್ಲೂಕು ಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ಮಹದೇಶ್ವರನಲ್ಲಿ ಮಳೆಗಾಗಿ, ರಾಜ್ಯದ ಜನರಿಗೆ, ರೈತರಿಗೆ ಸೌಖ್ಯವಾಗಲಿ ಎಂದು ಪ್ರಾರ್ಥಿಸಿರುವುದಾಗಿ ಸಿದ್ದರಾಮಯ್ಯ ತಿಳಿಸಿದರು.
ಮೂಢನಂಬಿಕೆ, ಮೌಢ್ಯ, ಕಂದಾಚಾರದಲ್ಲಿ ನಂಬಿಕೆ ಇಲ್ಲ
ಮೂಢನಂಬಿಕೆ, ಮೌಢ್ಯ, ಕಂದಾಚಾರದಲ್ಲಿ ನಂಬಿಕೆ ಇಲ್ಲ. ಅದಕ್ಕಾಗಿಯೇ ಹಿಂದೆ ಮುಖ್ಯಮಂತ್ರಿ ಯಾದ ಕೂಡಲೇ ಚಾಮರಾಜನಗರಕ್ಕೆ ಭೇಟಿ ನೀಡಿದೆ. ಸುಮಾರು 12 ಬಾರಿ ಭೇಟಿ ನೀಡಿದ್ದು, 5 ವರ್ಷ ಗಟ್ಟಿಯಾಗಿ ಇದ್ದೆ. ಚಾಮರಾಜನಗರ ಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯ ಈಗ ಹೋಗಿದೆ ಎಂದರು.
ಬಂದ್ನಿಂದ ಯಾರಿಗೂ ತೊಂದರೆಯಾಗಬಾರದು
ಸೆಪ್ಟೆಂಬರ್ 29 ರಂದು ಕರ್ನಾಟಕ ಬಂದ್ ಗೆ ಕರೆನೀಡಿರುವ ಬಗ್ಗೆ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಗೆ ಅವಕಾಶವಿದೆ. ಆದರೆ ಇತರರಿಗೆ ತೊಂದರೆಯಾಗಬಾರದು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ನಾವು ಈ ಆದೇಶ ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುತ್ತೇವೆ ಎಂದರು.
ಇದನ್ನೂ ಓದಿ: CM Siddaramaiah: ಕೃಷಿಗೆ ಸಾಲ ಮಾಡಿ ಮದುವೆ ಛಮಾಡುವುದನ್ನು ನಿಲ್ಲಿಸಿ: ಸಿಎಂ ಸಿದ್ದರಾಮಯ್ಯ ಮನವಿ
ಕರ್ನಾಟಕ
BJP JDS alliance : ವಿಜಯದಶಮಿ ನಂತರ ಜೆಡಿಎಸ್ ಸೀಟು ಹಂಚಿಕೆ ಅಂತಿಮ ಮಾತುಕತೆ!
BJP JDS alliance : ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆಗೆ ಸೀಟು ಹಂಚಿಕೆ ಯಾವಾಗ ಎಂಬ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ವಿಜಯದಶಮಿ ನಂತರ ಈ ಬಗ್ಗೆ ಬಿಜೆಪಿ ವರಿಷ್ಠರೊಂದಿಗೆ ಚರ್ಚೆ ನಡೆಸುವುದಾಗಿ ಹೇಳಿಕೆ ನೀಡಿದ್ದಾರೆ.
ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆ (Lok Sabha Election 2024) ಸಂಬಂಧ ಬಿಜೆಪಿ ಜತೆ ಕೈಜೋಡಿಸಿರುವ ಜೆಡಿಎಸ್ ರಾಜ್ಯದಲ್ಲಿ ಹಲವಾರು ರಾಜಕೀಯ ತಂತ್ರಗಳನ್ನು (Political Strategy) ಹೆಣೆಯುತ್ತಿದೆ. ಈ ಸಂಬಂಧ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ (Former Prime Minister and JDS supremo HD DeveGowda) ಅವರು ಬುಧವಾರ (ಸೆಪ್ಟೆಂಬರ್ 27) ಸುದ್ದಿಗೋಷ್ಠಿ ನಡೆಸಿ ತಾವು ಗೃಹ ಸಚಿವ ಅಮಿತ್ ಶಾ (Home Minister Amit Shah) ಅವರ ಜತೆ ಮೈತ್ರಿ (BJP JDS alliance) ಕುರಿತಾಗಿ ಮೊದಲು ಚರ್ಚೆ ನಡೆಸಿದ್ದಾಗಿ ಹೇಳಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಬಳಿ ಈ ಬಗ್ಗೆ ಮಾತನಾಡಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಸೀಟು ಹಂಚಿಕೆ ಬಗ್ಗೆ ಪ್ರಶ್ನೆ ಕೇಳಿದಾಗ ವಿಜಯದಶಮಿ ಹಬ್ಬದ (Vijayadashami Festival) ಬಳಿಕ ಬಿಜೆಪಿಯೊಂದಿಗೆ ಈ ಬಗ್ಗೆ ಮಾತುಕತೆ ನಡೆಸಲಾಗುವುದು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಸ್ಪಷ್ಟಪಡಿಸಿದ್ದಾರೆ. ಇದರ ಜತೆಗೆ ಆ ಸನ್ನಿವೇಶ ಬಂದಾಗ ಚರ್ಚೆ ಮಾಡುತ್ತೇವೆ ಎಂದು ದೇವೇಗೌಡರು ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ ಅವರು, ಮೈತ್ರಿ ಸೀಟು ಹಂಚಿಕೆ ಸಂಬಂಧ ವಿಜಯದಶಮಿ ಮುಗಿದ ಬಳಿಕ ಬಿಜೆಪಿ ವರಿಷ್ಠರ ಜತೆ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ. ಅದಕ್ಕೆ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಸಹ ಧನಿಗೂಡಿಸಿದ್ದು, ಆ ಸನ್ನಿವೇಶ ಬರಲಿ, ಆಗ ಚರ್ಚೆ ಮಾಡುತ್ತೇವೆ ಎಂದು ಸೂಚ್ಯವಾಗಿ ಉತ್ತರಿಸಿದ್ದಾರೆ.
ಮೈತ್ರಿಕೂಟ ಸೇರಿದ್ದಷ್ಟೇ
ಈಚೆಗೆ ನವದೆಹಲಿಗೆ ಎಚ್.ಡಿ. ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾಗ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಜತೆ ಪ್ರಾಥಮಿಕ ಹಂತದ ಮಾತುಕತೆಯನ್ನು ನಡೆಸಿದ್ದರು. ಇದರ ಭಾಗವಾಗಿ ಅಂದೇ ಬಿಜೆಪಿ – ಜೆಡಿಎಸ್ ಮೈತ್ರಿ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಾಗಿತ್ತು. ಎನ್ಡಿಎ ಮೈತ್ರಿಕೂಟವನ್ನು ಜೆಡಿಎಸ್ ಸೇರಿದೆ ಎಂದು ಅಧಿಕೃತವಾಗಿ ಪ್ರಕಟಿಸಲಾಗಿತ್ತು. ಆದರೆ, ಇದರ ನಂತರ ಸೀಟು ಹಂಚಿಕೆ ಸಂಬಂಧ ಯಾವುದೇ ರೀತಿಯ ಅಂತಿಮ ಹಂತದ ಚರ್ಚೆ ಆಗಿಲ್ಲ ಎಂದು ಹೇಳಲಾಗಿದೆ.
ಐದು ಕ್ಷೇತ್ರ ಕೇಳಿರುವ ಜೆಡಿಎಸ್
ಮೂಲಗಳ ಪ್ರಕಾರ ಜೆಡಿಎಸ್ ಒಟ್ಟು ಐದು ಲೋಕಸಭಾ ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ರಾಯಚೂರು ಸೇರಿದಂತೆ ಇತ್ತ ಮಂಡ್ಯ, ಹಾಸನ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಕೇಳಿತ್ತು. ಆದರೆ, ಈ ಸಂಬಂಧ ಬಿಜೆಪಿ ನಾಯಕರಲ್ಲಿ ಒಮ್ಮತ ಮೂಡಿಲ್ಲ.
ಇದನ್ನೂ ಓದಿ: BJP JDS alliance : ಜೆಡಿಎಸ್ಗೆ ಕಾಂಗ್ರೆಸ್ ಮಾಡಿದ ಮೋಸದ ಬಗ್ಗೆ 100 ಕಾರಣ ಹೇಳುವೆ: ಗುಡುಗಿದ ದೇವೇಗೌಡ
ಬಿಜೆಪಿ ನಾಯಕರ ವಿರೋಧ
ಜೆಡಿಎಸ್ಗೆ ಯಾವುದೇ ಕಾರಣಕ್ಕೂ ಐದು ಸೀಟನ್ನು ಬಿಟ್ಟುಕೊಡುವುದು ಬೇಡ. ಮೂರು ಕ್ಷೇತ್ರವನ್ನು ಬಿಟ್ಟುಕೊಟ್ಟರೆ ಸಾಕು. ಉಳಿದ ಕಡೆ ಅವರಿಗೆ ಕೊಟ್ಟರೆ ಸೋಲು ನಿಶ್ಚಿತ. ಇದು ಬಿಜೆಪಿಗೆ ನಷ್ಟವನ್ನುಂಟು ಮಾಡುತ್ತದೆ ಎಂದು ರಾಜ್ಯದ ಕೆಲವು ನಾಯಕರು ಈಗಾಗಲೇ ವರದಿ ಒಪ್ಪಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ವಿಜಯ ದಶಮಿ ನಂತರ ನಡೆಯುವ ಮಾತುಕತೆ ಕುತೂಹಲ ಮೂಡಿಸಿದೆ.
-
ದೇಶ14 hours ago
UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
-
ವಿದೇಶ22 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
ಸುವಚನ9 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ15 hours ago
Manipur Horror: ಅಪಹರಿಸಿ ಕೊಂದ್ರಲ್ಲಾ… ನಮ್ಮ ಮಕ್ಕಳು ಮಾಡಿದ ತಪ್ಪಾದ್ರೂ ಏನು? ಹತ್ಯೆಗೀಡಾದ ವಿದ್ಯಾರ್ಥಿಗಳ ಪೋಷಕರ ಪ್ರಶ್ನೆ
-
ದೇಶ15 hours ago
GST Evasion: ಜಿಎಸ್ಟಿ ವಂಚಿಸಿದ ಬಿಜೆಪಿ ನಾಯಕಿಯ ಸಕ್ಕರೆ ಕಾರ್ಖಾನೆಯ 19 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ!
-
ಆಟೋಮೊಬೈಲ್21 hours ago
Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು
-
ಕರ್ನಾಟಕ22 hours ago
Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!
-
ಕ್ರಿಕೆಟ್18 hours ago
Ruturaj Gaikwad : ಚೀನಾಗೆ ಹೊರಡುವ ಮೊದಲು ಪುಣೆಯ ಗಣೇಶ ಮಂದಿರಕ್ಕೆ ಭೇಟಿ ನೀಡಿದ ಋತುರಾಜ್