ವಿಸ್ತಾರ TOP 10 NEWS : 7ನೇ ವೇತನ ಆಯೋಗದ ಜಾರಿ ಭರವಸೆಯಿಂದ ಹಿಡಿದು ಸಿಂಧೂರಿಗೆ ಬಿಗ್​ ರಿಲೀಫ್​ ತನಕದ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS : 7ನೇ ವೇತನ ಆಯೋಗದ ಜಾರಿ ಭರವಸೆಯಿಂದ ಹಿಡಿದು ಸಿಂಧೂರಿಗೆ ಬಿಗ್​ ರಿಲೀಫ್​ ತನಕದ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1. ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ಮಧ್ಯಂತರ ವರದಿ ಶಿಫಾರಸು ಜಾರಿಗೆ ಕ್ರಮ ಎಂದು ಘೋಷಿಸಿದ ಸಿಎಂ
ವಿಧಾನಸಭೆ (ಬೆಂಗಳೂರು): ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಮತ್ತು ಸೌಲಭ್ಯಗಳ ಪರಿಷ್ಕರಣೆಗಾಗಿ ರಚಿಸಲ್ಪಟ್ಟಿರುವ 7ನೇ ವೇತನ ಆಯೋಗದ (7th Pay Commission) ಮಧ್ಯಂತರ ವರದಿ ಬಂದ ಕೂಡಲೇ ಅದರ ಶಿಫಾರಸುಗಳ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.

2. ಮಹಿಳಾ ಕಾರ್ಮಿಕರ ಸಹಾಯಧನ 500ರಿಂದ 1000 ರೂ.ಗೆ ಹೆಚ್ಚಳ, ಸ್ಕೂಲ್‌ ಬಸ್‌ 1000ದಿಂದ 2000: ಸಿಎಂ
ರಾಜ್ಯ ಭೂರಹಿತ ಮಹಿಳಾ ಕಾರ್ಮಿಕರಿಗೆ ಬಜೆಟ್‌ನಲ್ಲಿ ಘೋಷಣೆಯಾಗಿದ್ದ 500 ರೂ. ಮಾಸಿಕ ಸಹಾಯಧನವನ್ನು 1000 ರೂ.ಗಳಿಗೆ ಏರಿಸಲಾಗಿದೆ (Assembly session) ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಇದೇ ವೇಳೆ ಗ್ರಾಮೀಣ ಭಾಗದಲ್ಲಿ ಮಕ್ಕಳು ಶಾಲೆಗೆ ಹೋಗಲು ಅನುಕೂಲವಾಗುವಂತೆ 1000 ಬಸ್‌ ಆರಂಭಿಸಲು ಮಾಡಿದ್ದ ಪ್ಲ್ಯಾನ್‌ನ್ನು 2000 ಬಸ್‌ಗಳಿಗೆ ವಿಸ್ತರಿಸಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.

3. ಮೋದಿ, ಯಡಿಯೂರಪ್ಪ ಮೇಲೆ ಭರವಸೆ ಇಟ್ಟು ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ ಎಂದ ಅಮಿತ್‌ ಶಾ; ಬಿಎಸ್‌ವೈ ಅನಿವಾರ್ಯವಾದರಾ?
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಭರವಸೆ ಇಟ್ಟು ಬಿಜೆಪಿಗೆ ಮತ ಹಾಕಿ ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ. ಕರ್ನಾಟಕವನ್ನು ನಾವು ದಕ್ಷಿಣ ಭಾರತದಲ್ಲಿಯೇ ನಂ.1 ರಾಜ್ಯವನ್ನಾಗಿ ಮಾಡುವುದಲ್ಲದೆ, ಭ್ರಷ್ಟಾಚಾರ ಮುಕ್ತ ಕರ್ನಾಟಕವನ್ನು ನಾವು ನಿರ್ಮಾಣ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah)‌ ಕರೆ ನೀಡಿದರು. ಈ ಮೂಲಕ ಯಡಿಯೂರಪ್ಪ ಅವರ ಅನಿವಾರ್ಯತೆಯನ್ನು ಶಾ ಪ್ರಸ್ತಾಪಿಸಿದರು ಎಂದೇ ವಿಶ್ಲೇಷಿಸಲಾಗುತ್ತಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

4. ಭಾರತ ಜಗತ್ತಿಗೇ ಭರವಸೆ: ಬಿಲ್‌ ಗೇಟ್ಸ್ ಮುಕ್ತ ಶ್ಲಾಘನೆ
ಭಾರತ ಭವಿಷ್ಯದ ಭರವಸೆ ನೀಡುತ್ತಿರುವ ರಾಷ್ಟ್ರವಾಗಿದೆ ಎಂದು ಸಾಫ್ಟ್‌ವೇರ್‌ ದೈತ್ಯ ಮೈಕ್ರೋಸಾಫ್ಟ್‌ (Microsoft) ಸ್ಥಾಪಕ ಬಿಲ್‌ ಗೇಟ್ಸ್‌ (Bill gates) ಹೇಳಿದ್ದಾರೆ. ತಮ್ಮ ಬ್ಲಾಗ್‌ ʼಗೇಟ್ಸ್‌ ನೋಟ್ಸ್‌ʼನಲ್ಲಿ ಅವರು ಈ ಬಗ್ಗೆ ವಿಸ್ತೃತವಾಗಿ ಬರೆದಿದ್ದು, ಭವಿಷ್ಯದ ತಂತ್ರಜ್ಞಾನ ಹಾಗೂ ಉದ್ಯಮ ಕ್ಷೇತ್ರದಲ್ಲಿ ಭಾರತ ವಹಿಸಬಹುದಾದ ಮಹತ್ವದ ಪಾತ್ರದ ಕುರಿತು ಬೆಳಕು ಚೆಲ್ಲಿದ್ದಾರೆ. ಜಗತ್ತಿನ ಎಲ್ಲ ದೇಶಗಳಂತೆಯೇ ಭಾರತದಲ್ಲೂ ಸೀಮಿತ ಸಂಪನ್ಮೂಲಗಳಿವೆ. ಆದರೆ ಅಂಥ ಸೀಮಿತ ಅವಕಾಶದಲ್ಲೂ ಹೇಗೆ ಪ್ರಗತಿ ಸಾಧಿಸಬಹುದು ಎಂದು ಭಾರತ ತೋರಿಸಿಕೊಟ್ಟಿದೆ ಎಂದು ಅವರು ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲ ಕ್ಲಿಕ್​ ಮಾಡಿ.

5. ದೆಹಲಿ ಮಹಾನಗರ ಪಾಲಿಕೆಯಲ್ಲಿ ಮತ್ತೆ ಆಪ್​-ಬಿಜೆಪಿ ಮಾರಾಮಾರಿ; ಗುದ್ದಾಡಿ, ತಳ್ಳಾಡಿಕೊಂಡ ಕೌನ್ಸಿಲರ್​​ಗಳು
ದೆಹಲಿ ಮಹಾನಗರ ಪಾಲಿಕೆ (Delhi MCD)ಮೇಯರ್​ ಆಯ್ಕೆ ಚುನಾವಣೆ ಫೆ.22ರಂದು ನಡೆದು, ಆಮ್​ ಆದ್ಮಿ ಪಕ್ಷದ ಶೆಲ್ಲಿ ಒಬೆರಾಯ್​ ಅವರು 150 ಮತಗಳಿಂದ ಭರ್ಜರಿ ಜಯಗಳಿಸಿದ್ದಾರೆ. ಡಿಸೆಂಬರ್​ನಲ್ಲಿಯೇ ಮಹಾನಗರ ಪಾಲಿಕೆ ಚುನಾವಣೆ ಮುಗಿದಿದ್ದರೂ, ಮೇಯರ್ ಆಯ್ಕೆ ಆಗಿರಲಿಲ್ಲ. ನಾಮನಿರ್ದೇಶನಗೊಂಡ ಸದಸ್ಯರಿಗೂ ಮತದಾನದ ಹಕ್ಕನ್ನು ದೆಹಲಿ ಲೆಫ್ಟಿನೆಂಟ್​ ಗವರ್ನರ್​ ಕೊಟ್ಟಿದ್ದೇ ಇದಕ್ಕೆ ಕಾರಣವಾಗಿತ್ತು. ಈ ಕೇಸ್​ ಸುಪ್ರೀಂಕೋರ್ಟ್​ ಮೆಟ್ಟಿಲೇರಿ, ನಾಮನಿರ್ದೇಶನಗೊಂಡ ಸದಸ್ಯರಿಗೆ ಮತದಾನದ ಹಕ್ಕು ಇಲ್ಲ ಎಂದು ಸುಪ್ರೀಂಕೋರ್ಟ್​ ತೀರ್ಪು ನೀಡಿದ ಬೆನ್ನಲ್ಲೇ ಮೇಯರ್ ಆಯ್ಕೆ ಚುನಾವಣೆ ನಡೆಯಿತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.

6. ದೆಹಲಿ ಏರ್​ಪೋರ್ಟ್​​ನಲ್ಲಿ ಇಂಡಿಗೋ ವಿಮಾನದ ಎದುರು ಕಾಂಗ್ರೆಸ್ ಪ್ರತಿಭಟನೆ; ಪವನ್​ ಖೇರಾರನ್ನು ಕೆಳಗೆ ಇಳಿಸಿದ್ದೇ ಕಾರಣ
ರಾಯ್ಪುರಕ್ಕೆ ಹೊರಟಿದ್ದ ಕಾಂಗ್ರೆಸ್​ ಮುಖಂಡರ ನಿಯೋಗ, ದೆಹಲಿ ಏರ್​ಪೋರ್ಟ್​​ನಲ್ಲಿ ಇಂಡಿಗೊ ವಿಮಾನದ ಎದುರಲ್ಲಿ ಕುಳಿತು ಪ್ರತಿಭಟನೆ (Congress Protest) ನಡೆಸಿದೆ. ಕಾಂಗ್ರೆಸ್​ ನಾಯಕರಾದ ಪವನ್​ ಖೇರಾ, ಕೆ.ಸಿ.ವೇಣುಗೋಪಾಲ್​, ರಣದೀಪ್​ ಸಿಂಗ್ ಸುರ್ಜೇವಾಲಾ, ಸುಪ್ರಿಯಾ ಶ್ರೀನೇತ್​ ಮತ್ತು ಇತರರು ಇಂದು ರಾಯ್ಪುರಕ್ಕೆ ಹೊರಟಿದ್ದರು. ಇಂಡಿಗೊ ವಿಮಾನವನ್ನೂ ಹತ್ತಿದ್ದರು. ಆದರೆ ದೆಹಲಿ ಪೊಲೀಸರ ಸೂಚನೆ ಇದೆ ಎಂಬ ಕಾರಣ ನೀಡಿ, ಕಾಂಗ್ರೆಸ್ ಮುಖಂಡ ಪವನ್​ ಖೇರಾ ಅವರನ್ನು ವಿಮಾನದಿಂದ ಕೆಳಗಿಳಿಸಲಾಯಿತು. ಪವನ್​ ಖೇರಾರನ್ನು ವಿಮಾನದಿಂದ ಕೆಳಗೆ ಇಳಿಸುತ್ತಿದ್ದಂತೆ ಕಾಂಗ್ರೆಸ್​ನ ಉಳಿದ ಮುಖಂಡರೂ ಕೆಳಗೆ ಇಳಿದು, ಅಲ್ಲೇ ಕುಳಿತು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಲು ಶುರು ಮಾಡಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.

7. ಮಾಂಸ ತಿಂದು ದೇಗುಲ ಪ್ರವೇಶ ವಿಚಾರದಲ್ಲಿ ನನ್ನನ್ನು ಟೀಕಿಸಿದವರು ಈಗ ಎಲ್ಲಿದ್ದಾರೆ; ಸಿದ್ದರಾಮಯ್ಯ ಪ್ರಶ್ನೆ
ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಬಿಜೆಪಿ ನಾಯಕರ ಸುಳ್ಳು ಸುದ್ದಿ ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲವು ಮಠಾಧೀಶರು, ಸಿ.ಟಿ.ರವಿ ಅವರು ಮಾಂಸತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದು ಯಾಕೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಸರಣಿ ಟ್ವೀಟ್​ ಮಾಡಿರುವ ಅವರು ಮಾಂಸ ತಿನ್ನುವುದು, ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು ಎಂಬುದಾಗಿಯೂ ಅವರು ಹೇಳಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.

8. ಸಿಂಧೂರಿಗೆ ಬಿಗ್‌ ರಿಲೀಫ್‌, ಮಾನಹಾನಿಕರ ಹೇಳಿಕೆ ನೀಡದಂತೆ ರೂಪಾಗೆ ಕೋರ್ಟ್‌ ಆದೇಶ
ಐಪಿಎಸ್‌ ಅಧಿಕಾರಿ ಡಿ. ರೂಪಾ ಅವರ ವಿರುದ್ಧದ ಕಾನೂನು ಹೋರಾಟದಲ್ಲಿ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ (Sindhuri Vs Roopa) ಅವರಿಗೆ ಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಡಿ.ರೂಪಾ ಅವರಿಗೆ ನಗರದ ಸಿವಿಲ್‌ ಕೋರ್ಟ್‌ ಗುರುವಾರ ನಿರ್ಬಂಧ ವಿಧಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.

9. ಕರ್ನಾಟಕದಲ್ಲಿ ನಿತ್ಯ 1 ಕೋಟಿ ರೂ. ಸೈಬರ್ ವಂಚಕರ ಪಾಲು! ಕಳೆದ ವರ್ಷ 363 ಕೋಟಿ ರೂ. ಗುಳಂ
ಸೈಬರ್ ಅಪರಾಧಗಳಿಗಾಗಿ (Cyber Crimes) 2022ರಲ್ಲಿ ಕರ್ನಾಟಕವು ಸುಮಾರು 363 ಕೋಟಿ ರೂಪಾಯಿ ಕಳೆದುಕೊಂಡಿದೆ. ಸರಾಸರಿ ಲೆಕ್ಕ ಹಾಕಿದರೆ, ದಿನಕ್ಕೆ ಒಂದು ಕೋಟಿ ರೂಪಾಯಿ ಸೈಬರ್ ಕಳ್ಳರ ಪಾಲಾಗಿದೆ! 2023 ಜನವರಿ ತಿಂಗಳವೊಂದರಲ್ಲಿ ಗರಿಷ್ಠ 36 ಕೋಟಿ ರೂ. ಸೈಬರ್ ಕಳ್ಳರ ಜೇಬುಪಾಲಾಗಿದೆ! ಈ ಮಾಹಿತಿಯನ್ನು ಸ್ವತ ರಾಜ್ಯ ಸರ್ಕಾರವೇ ಬಹಿರಂಗಪಡಿಸಿದೆ. ವಿಧಾನ ಪರಿಷತ್‌ನಲ್ಲಿ ಕೇಳಲಾದ ಪ್ರಶ್ನೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಉತ್ತರ ನೀಡಿದ್ದಾರೆ(Karnataka Cyber Crime). ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.

10. ಹೇ ಅಲ್ಲಾ, ನಮಗೆ ಮೋದಿಯನ್ನು ಕೊಡು, ಅವರೇ ಈ ದೇಶವನ್ನು ಸರಿ ಮಾಡಲಿ ಎಂದು ಬೇಡಿಕೊಂಡ ಪಾಕಿಸ್ತಾನಿ ಯುವಕ
ಪಾಕಿಸ್ತಾನದಲ್ಲಿ ಆರ್ಥಿಕತೆ ತೀವ್ರ ಹದಗೆಟ್ಟಿದೆ. ಬಹುತೇಕ ದಿವಾಳಿ ಸ್ಥಿತಿ (Economic Crisis in Pakistan) ತಲುಪಿದ್ದು, ಅಲ್ಲಿನ ಜನರಿಗೆ ಎರಡು ಹೊತ್ತಿನ ಊಟವೂ ಸರಿಯಾಗಿ ಸಿಗುತ್ತಿಲ್ಲ. ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಗಗನದಾಚೆ ತಲುಪಿ, ಕೈಗೆಟುಕದಂತಾಗಿವೆ. ಐಎಂಎಫ್​, ವಿಶ್ವ ಬ್ಯಾಂಕ್​​ಗಳೂ ಕೂಡ ಪಾಕಿಸ್ತಾನಕ್ಕೆ ಸಾಲ ಕೊಡಲು ನಿರಾಕರಿಸಿವೆ. ಹೀಗಿರುವಾಗ ಪಾಕಿಸ್ತಾನದ ಯುವಕನೊಬ್ಬ, ಅಲ್ಲಿನ ಮಾಧ್ಯಮವೊಂದರ ಜತೆ ಮಾತನಾಡುತ್ತ ‘ನಮಗೆ ಪ್ರಧಾನಿ ನರೇಂದ್ರ ಮೋದಿಯವರು ಬೇಕು, ಅವರೊಬ್ಬರೇ ಪಾಕಿಸ್ತಾನವನ್ನು ಉಳಿಸಬಲ್ಲರು’ ಎಂದು ಹೇಳಿದ್ದಾನೆ. ಹಾಗೇ, ಭಾರತದ ಪ್ರಧಾನಿಯನ್ನು ಯುವಕ ಹೊಗಳಿದ ವಿಡಿಯೊ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.

ಇನ್ನಷ್ಟು ಪ್ರಮುಖ ಸುದ್ದಿಗಳಿವು

  1. 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್‌ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ; ಮಾ.13 ರಿಂದ ಎಕ್ಸಾಮ್‌ ಶುರು
  2. ಹಿರಿಯ ಸಾಹಿತಿ ವೈದೇಹಿ ಅವರಿಗೆ ಪ್ರತಿಷ್ಠಿತ ನೃಪತುಂಗ ಪ್ರಶಸ್ತಿ, ಐವರು ಸಾಧಕರಿಗೆ ಮಯೂರವರ್ಮ ಪ್ರಶಸ್ತಿ
  3. 2024ರ ಚುನಾವಣೆಯಲ್ಲಿ ಮೋದಿ ವಿಜಯಕ್ಕೆ ಶಿವಸೇನೆ, ಜೆಡಿಯು ಅಡ್ಡಗಾಲು? ಹೀಗಿದೆ ಲೆಕ್ಕಾಚಾರ
  4. ಚಳಿಗಾಲದಲ್ಲಿ ಇನ್ನೊಬ್ಬರನ್ನು ಮುಟ್ಟಿದಾಗ ನಾವೇಕೆ ʻಶಾಕ್‌ʼ ಹೊಡೆಯುತ್ತೇವೆ?
  5. ಯುದ್ಧದ ಭೀಕರತೆ ಹೇಗಿರುತ್ತವೆ ಎಂಬುದಕ್ಕೆ ರಷ್ಯಾ- ಉಕ್ರೇನ್​ ಕದನದ ಈ ಚಿತ್ರಗಳೇ ಸಾಕ್ಷಿ
  6. ಎಐಎಡಿಎಂಕೆಗೆ ಪಳನಿಸ್ವಾಮಿಯೇ ನಾಯಕ ಎಂದು ತೀರ್ಪುಕೊಟ್ಟ ಸುಪ್ರೀಂಕೋರ್ಟ್​; ಪನ್ನೀರಸೆಲ್ವಂ ಮುಂದಿನ ದಾರಿ ಯಾವುದು?
  7. ಮಣಿಪಾಲದಲ್ಲಿ ಡ್ರಗ್ಸ್ ವಿರುದ್ಧ ಸಮರ; ಮಾಹೆ ವಿವಿಯ 42 ವಿದ್ಯಾರ್ಥಿಗಳು ಸಸ್ಪೆಂಡ್‌
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಸಿಬಿಐನಿಂದ ಬಂಧನ ಆತಂಕದಲ್ಲಿ ಮಾಜಿ ಸಚಿವ ನಾಗೇಂದ್ರ

Valmiki Corporation Scam: ಮಾಜಿ ಸಚಿವ ನಾಗೇಂದ್ರ ಮತ್ತು ಟೀಮ್, ಪ್ರಕರಣದಲ್ಲಿ ತಮ್ಮ ಹೆಸರು ಹೇಳದಂತೆ ಆರೋಪಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಬಗ್ಗೆ ನ್ಯಾಯಾಧೀಶರ ಮುಂದೆಯೇ ಆರೋಪಿಯೊಬ್ಬ ಹೇಳಿಕೆ ಕೊಟ್ಟಿದ್ದಾನೆ. ಹೀಗಾಗಿ ಸಾಕ್ಷಿ ನಾಶ ಹಾಗೂ ಆರೋಪಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಾಗೇಂದ್ರಗೆ ಸಂಕಷ್ಟ ಎದುರಾಗಿದೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ಕರ್ನಾಟಕ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮದ (Valmiki Corporation Scam) ಪ್ರಕರಣದಲ್ಲಿ ರಾಜೀನಾಮೆ (Resignation) ನೀಡಿರುವ ಮಾಜಿ ಸಚಿವ ನಾಗೇಂದ್ರ (Ex Minister Nagendra) ಸಿಬಿಐ (CBI) ತನಿಖಾ ಸಂಸ್ಥೆಯಿಂದ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಇದೇ ಕಾರಣವಾಗಿ ನಾಗೇಂದ್ರ ಬಹುದಿನಗಳಿಂದ ಎಲ್ಲೂ ಕಾಣಿಸಿಕೊಂಡಿಲ್ಲ.

ಶಿವಮೊಗ್ಗದಲ್ಲಿ ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಆತ್ಮಹತ್ಯೆಯ ಬಳಿಕ ನಿಗಮದ ಹಗರಣ ಬೆಳಕಿಗೆ ಬಂದಿತ್ತು. ನಿಗಮದ 186 ಕೋಟಿ ರೂ. ಹಣವನ್ನು ಅಕ್ರಮವಾಗಿ ಅನ್ಯ ರಾಜ್ಯದ ಖಾತೆಗಳಿಗೆ ವರ್ಗಾವಣೆ ಮಾಡಿಸಿದ್ದನ್ನು ಚಂದ್ರಶೇಖರ್‌ ಡೆತ್‌ನೋಟ್‌ ಬೆಳಕಿಗೆ ಬಂದಿತ್ತು. ನಂತರ ಈ ವಿಚಾರದಲ್ಲಿ ಬಿಜೆಪಿ ರಾಜ್ಯವ್ಯಾಪಿ ತೀವ್ರ ಪ್ರತಿಭಟನೆಗೆ ಇಳಿದಿತ್ತು. ಇದರಿಂದ ವಾಲ್ಮೀಕಿ ನಿಗಮದಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದ ಅಧಿಕಾರಿಗಳ ಮೇಲೆ ಸರಕಾರ ಕ್ರಮ ಕೈಗೊಂಡು ತನಿಖೆಗೆ ಎಸ್‌ಐಟಿ ರಚಿಸಿತ್ತು. ಒತ್ತಡ ಹೆಚ್ಚಿದ ಪರಿಣಾಮ ಸಚಿವ ನಾಗೇಂದ್ರ ತಲೆದಂಡವೂ ಆಗಿತ್ತು.

ಈ ನಡುವೆ, ಮಾಜಿ ಸಚಿವ ನಾಗೇಂದ್ರ ಮತ್ತು ಟೀಮ್, ಪ್ರಕರಣದಲ್ಲಿ ತಮ್ಮ ಹೆಸರು ಹೇಳದಂತೆ ಆರೋಪಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಬಗ್ಗೆ ನ್ಯಾಯಾಧೀಶರ ಮುಂದೆಯೇ ಆರೋಪಿಯೊಬ್ಬ ಹೇಳಿಕೆ ಕೊಟ್ಟಿದ್ದಾನೆ. ಹೀಗಾಗಿ ಸಾಕ್ಷಿ ನಾಶ ಹಾಗೂ ಆರೋಪಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಾಗೇಂದ್ರಗೆ ಸಂಕಷ್ಟ ಎದುರಾಗಿದೆ.

ಈ ಪ್ರಕರಣದಲ್ಲಿ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದೆ. ಆದರೆ ಹಗರಣದಲ್ಲಿ ಸಿಬಿಐ ಸಹ ಎಂಟ್ರಿ ಆಗಿದೆ. ನೂರು ಕೋಟಿಗೂ ಮಿಕ್ಕಿದ ಹಣದ ಅವ್ಯವಹಾರ ಆಗಿರುವುದರಿಂದ ಸಿಬಿಐ ತನ್ನದೇ ರೀತಿಯಲ್ಲಿ ತನಿಖೆ ಆರಂಭಿಸಿದೆ. ಹೀಗಾಗಿ ನಾಗೇಂದ್ರಗೆ ಬಂಧನದ ಭೀತಿ ಶುರುವಾಗಿದೆ. ರಾಜೀನಾಮೆ ಕೊಟ್ಟ ಬಳಿಕ ನಾಗೇಂದ್ರ ಎಲ್ಲೂ ಕಾಣಿಸಿಕೊಂಡಿಲ್ಲ. ಅತ್ತ ಪಕ್ಷದ ಕೆಲಸದಲ್ಲೂ ಕಾಣಿಸಿಕೊಳ್ಳುತ್ತಿಲ್ಲ; ಇತ್ತ ಕ್ಷೇತ್ರದಲ್ಲೂ ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ. ಹೀಗಾಗಿ, ಬಂಧನದ ಭೀತಿಯಿಂದ ಹಿನ್ನೆಲೆಯಲ್ಲಿ ಉಳಿದಿರಬಹುದು ಎಂದು ಭಾವಿಸಲಾಗಿದೆ.

ತನಿಖೆಗೆ ಇಡಿ ಎಂಟ್ರಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದ ತನಿಖೆಗೆ ಜಾರಿ ನಿರ್ದೇಶನಾಲಯ ಕೂಡ ಎಂಟ್ರಿ ನೀಡಿದೆ. ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿ ತನಿಖೆ ಪ್ರಾರಂಭಿಸಿದ ಇಡಿ, ಜೈಲಿನಲ್ಲಿ ಇರುವ ಆರೋಪಿಗಳ ವಿಚಾರಣೆ ನಡೆಸಿದೆ. ಪದ್ಮನಾಭ್ ಮತ್ತು ಪರುಶರಾಮ್ ಹೇಳಿಕೆ ದಾಖಲಿಸಿದೆ. ಈಗಾಗಲೇ ಸಿಬಿಐ ಕೂಡ ಇವರ ಹೇಳಿಕೆ ದಾಖಲಿಸಿದೆ.

ಮತ್ತೊಬ್ಬನ ಬಂಧನ

ಪ್ರಕರಣಕ್ಕೆ ಸಂಬಂಧಿಸಿ ಮತ್ತೊಬ್ಬನನ್ನು ಎಸ್‌ಐಟಿ ಈ ವಾರ ವಶಕ್ಕೆ ಪಡೆದಿದೆ. ಅಧೀಕ್ಷಕ ಚಂದ್ರಶೇಖರ ಡೆತ್ ನೋಟ್‌ನಲ್ಲಿ ಹೆಸರು ಬರೆದಿದ್ದ ಸಾಯಿತೇಜ ಎಂಬ ಆರೋಪಿಯನ್ನು ಎಸ್ಐಟಿ ಅಧಿಕಾರಿಗಳು ಚೆನ್ನಗಿರಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಸಾಯಿತೇಜ ಸೇರಿ ಇಬ್ಬರ ಬಂಧನ ಮಾಡಲಾಗಿದ್ದು, ಸದ್ಯ ಸಿಐಡಿ ಕಚೇರಿಯಲ್ಲಿ ವಶಕ್ಕೆ ಪಡೆದಿರುವ ಆರೋಪಿ ಪಾತ್ರದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: R Ashok: ವಾಲ್ಮೀಕಿ ನಿಗಮ ಹಗರಣದಲ್ಲಿ ಸಿದ್ದರಾಮಯ್ಯ ಮೊದಲ ಆರೋಪಿ ಎಂದ ಆರ್‌.ಅಶೋಕ್‌

Continue Reading

ಮಳೆ

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast : ಉಡುಪಿಯಲ್ಲಿ ಭಾರಿ ಮಳೆಗೆ (Heavy Rain) ಮನೆ ಮುಂದಿದ್ದ ಬಾವಿಯೊಂದು ಕುಸಿದರೆ ಇತ್ತ ಮಂಗಳೂರಿನಲ್ಲಿ ಕಡಲ ಅಬ್ಬರಕ್ಕೆ ಮನೆಯೊಂದು (Karnataka rain) ಸಮುದ್ರಪಾಲಾಗಿದೆ. ಕೊಡಗಿನಲ್ಲಿ ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ (Rain Effected) ಹಾನಿಯಾಗಿದೆ.

VISTARANEWS.COM


on

By

karnataka Rain
Koo

ಉಡುಪಿ: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು (Rain News), ನೋಡ ನೋಡುತ್ತಿದ್ದಂತೆ ಮನೆ ಮುಂದಿದ್ದ ಬಾವಿಯೊಂದು ಪಾತಾಳ (well collapsed) ಸೇರಿದೆ. ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಭೂಕುಸಿತಕ್ಕೆ ಮನೆಯ ಬಾವಿ ಧಾರಾಶಾಹಿಯಾಗಿದೆ.

ಬಾವಿಯೊಂದು ಕುಸಿಯುತ್ತಿರುವ ವಿಡಿಯೋ ವೈರಲ್ ಆಗಿದೆ. ಉಡುಪಿಯ ಕಾರ್ಕಳ ತಾಲೂಕಿನ ನೆಲ್ಲಿಕಟ್ಟೆಯ ಸರ್ವಿಸ್ ಸ್ಟೇಶನ್ ಸಮೀಪ ಘಟನೆ ನಡೆದಿದೆ. ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಭೂಮಿ ಒಳಗೆ ಬಾವಿ ಜಾರಿದೆ. ಬಾವಿ ಪಕ್ಕದಲ್ಲೆ ಮನೆ ಇದ್ದು, ಭೂಕುಸಿತದಿಂದಾಗಿ ಆತಂಕ ಹೆಚ್ಚಾಗಿದೆ.

ಮಂಗಳೂರಿನಲ್ಲಿ ಹೆಚ್ಚಾದ ಕಡಲ ಅಬ್ಬರ

ಮಂಗಳೂರಿನಲ್ಲಿ ಕಡಲ ಅಬ್ಬರ ಹೆಚ್ಚಾಗುತ್ತಿದ್ದು, ನೋಡ ನೋಡುತ್ತಿದ್ದಂತೆ ಮನೆಯೊಂದು ಸಮುದ್ರಕ್ಕುರುಳಿದೆ. ಉಳ್ಳಾಲದ ಬಟ್ಟಪಾಡಿ ಕಡಲ ತೀರದಲ್ಲಿದ್ದ ಮನೆಯು ಅಲೆಗಳ ಹೊಡೆತಕ್ಕೆ ಸಿಲುಕಿ ಬಿದ್ದು ಹೋಗಿದೆ. ಮನೆಯಲ್ಲಿ ಯಾರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ಕಡಲ ಅಬ್ಬರ ಹೆಚ್ಚಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮನೆಯವರನ್ನು ಸ್ಥಳಾಂತರ ಮಾಡಿತ್ತು. ಮನೆ ಬೀಳುವ ದೃಶ್ಯ ಮೊಬೈಲ್‌ನಲ್ಲಿ‌ ಸೆರೆಯಾಗಿದೆ.

karnataka rain

ಇದನ್ನೂ ಓದಿ: Rain News: ಅಬ್ಬರಿಸುತ್ತಿರುವ ಮುಂಗಾರು: 3 ಜಿಲ್ಲೆಗೆ ರೆಡ್‌ ಅಲರ್ಟ್‌, ಇನ್ನೂ ನಾಲ್ಕು ದಿನ ಜೋರು ಮಳೆ

ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ ಹಾನಿ

ಕೊಡಗು ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು ಅನಾಹುತವನ್ನೇ ಸೃಷ್ಟಿಸಿದೆ. ಭಾರೀ ಮಳೆಗೆ ಶಾಲಾ ಕಟ್ಟಡದ ಮೇಲೆ ಗುಡ್ಡ ಕುಸಿದಿದೆ. ಕೊಡಗಿನ ಮಡಿಕೇರಿ ತಾಲೂಕಿನ ಕೊಯನಾಡಿನಲ್ಲಿ ಘಟನೆ ನಡೆದಿದೆ. ಕೊಯನಾಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾತ್ರಿ ವೇಳೆ ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ ಹಾನಿ ಯಾಗಿದೆ.

ಗುಡ್ಡದ ಮಣ್ಣು ಬಿದ್ದ ರಭಸಕ್ಕೆ ಶಾಲೆಯ ಗೋಡೆ ಧ್ವಂಸವಾಗಿದೆ. ಸುಮಾರು 80ಕ್ಕೂ ಅಧಿಕ ಮಕ್ಕಳು ಓದುತ್ತಿರುವ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ನಡೆಯುತ್ತಿದ್ದ ತರಗತಿಗೂ ಹಾನಿಯಾಗಿದೆ. ಮಳೆ ಹೆಚ್ಚಾದರೆ ಮಣ್ಣು ಮತ್ತಷ್ಟು ಕುಸಿಯುವ ಸಾಧ್ಯತೆ ಇದ್ದು, ಶಾಲೆ ಬಳಿಯ ಗುಡ್ಡದ ಮಣ್ಣು ತೆರವಿಗೆ ಪೋಷಕರು ಆಗ್ರಹಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಭಾರಿ ಗಾಳಿ-ಮಳೆಗೆ ರಸ್ತೆಗೆ ಬಿದ್ದ ಬೃಹತ್ ಮರ

ಮಲೆನಾಡು ಭಾಗದಲ್ಲಿ ಗಾಳಿ ಮಳೆ ಅಬ್ಬರ ಮುಂದುವರಿದಿದೆ. ಮೂಡಿಗೆರೆ ತಾಲೂಕಿನ ಸಂಪಿಗೆಖಾನ್ ಬಳಿ ಬೃಹತ್‌ ಮರವೊಂದು ಬುಡ ಸಮೇತ ಕಿತ್ತುಬಂದಿದೆ. ರಾಜ್ಯ ಹೆದ್ದಾರಿಗೆ ಬೃಹತ್ ಮರ ಉರುಳಿದೆ. ಮೂಡಿಗೆರೆಯಿಂದ ಹೊರನಾಡಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಇದಾಗಿದ್ದು, ಮರ ತೆರವು ಮಾಡಿ ಸುಗಮ ಸಂಚಾರಕ್ಕೆ ಸ್ಥಳೀಯರು ಅವಕಾಶ ಮಾಡಿಕೊಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕಲಬುರಗಿ

Murder case : ಗಾಣಗಾಪುರ ದತ್ತನ ದರ್ಶನಕ್ಕೆ ಆಗಮಿಸಿದ ಭಕ್ತನ ಬರ್ಬರ ಹತ್ಯೆ

Murder case : ಗಾಣಗಾಪುರ ದತ್ತನ ದರ್ಶನಕ್ಕೆ ಬಂದಿದ್ದ ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

murder Case in Kalaburagi
Koo

ಕಲಬುರಗಿ: ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಹತ್ಯೆ (Murder case ) ನಡೆದಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರದಲ್ಲಿ ಘಟನೆ ನಡೆದಿದೆ. ಮಹೇಶ್ ಕೊಲಾಟೆ (28) ಬರ್ಬರವಾಗಿ ಕೊಲೆಯಾದವನು.

ಮಹಾರಾಷ್ಟ್ರದ ಪುಣೆಯಿಂದ ಗಾಣಗಾಪುರ ದತ್ತನ ದರ್ಶನಕ್ಕೆ ಮಹೇಶ್‌ ಆಗಮಿಸಿದ್ದ. ಗಾಣಗಾಪುರದ ಸಂಗಮದ ಪಕ್ಕದಲ್ಲಿರುವ ಜಮೀನಿನಲ್ಲಿ ಮಹೇಶ್‌ನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ.

ಮಹೇಶ್ ಕಳೆದ ಎರಡು ತಿಂಗಳಿಂದ ಊರು ಬಿಟ್ಟು ಬಂದಿದ್ದ ಎನ್ನಲಾಗಿದೆ. ಮನೆಯವರಿಗೂ ಹೇಳದೆ ಮನೆ ಬಿಟ್ಟಿದ್ದ ಮಹೇಶ್‌ ದೇವಸ್ಥಾನಗಳಿಗೆ ಅಲೆದಾಡುತ್ತಿದ್ದ. ಮೊನ್ನೆ ಗಾಣಾಗಪುರಕ್ಕೆ ಬಂದಿರುವುದಾಗಿ ಹೇಳಿದ್ದ ಮಹೇಶ್ ಬಳಿಕ ಕೊಲೆಯಾಗಿ ಹೋಗಿದ್ದ.

ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕೊಲೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಹಂತಕರು ಯಾರು? ಯಾಕಾಗಿ ಹತ್ಯೆ ಮಾಡಿದ್ದಾರೆ ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ. ದೇವಲ್ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ: Self Harming : ಸಾಲಗಾರರ ಕಾಟ; ಇಲಿ ಪಾಷಣ ಸೇವಿಸಿ ಜೀವ ಬಿಟ್ಟ ಮೆಕ್ಯಾನಿಕ್

ಜೈ ಪ್ಯಾಲೆಸ್ತೀನ್ ಘೋಷಣೆ ಕೂಗಿದ್ದ ಓವೈಸಿ ಮನೆ ಮೇಲೆ ದುಷ್ಕರ್ಮಿಗಳಿಂದ ದಾಳಿ

ನವದೆಹಲಿ: 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ “ಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಕೂಗಿದ್ದ ಎಐಎಂಐಎಂ(AIMIM) ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ (Asaduddin Owaisi) ಅವರ ದಿಲ್ಲಿಯಲ್ಲಿರುವ ನಿವಾಸದ ಮೇಲೆ ತಡರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಈ ಕುರಿತು(AIMIM) ಎಕ್ಸ್‌ನಲ್ಲಿ ಈ ವಿಡಿಯೋವನ್ನು ಶೇರ್‌ ಮಾಡಿದೆ.

ಇನ್ನು ಘಟನೆ ಬಗ್ಗೆ ಸ್ವತಃ ಓವೈಸಿ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದು, ಕೆಲವು ದುಷ್ಕರ್ಮಿಗಳು ನನ್ನ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಅದೂ ಅಲ್ಲದೇ ಮನೆಯ ಗೋಡೆಗಳಿಗೆ ಕಪ್ಪು ಮಸಿ ಬಳಿದಿದ್ದಾರೆ. ಒಬ್ಬ ಸಂಸದನಿಗೇ ರಕ್ಷಣೆ ಇಲ್ಲದಿದ್ದರೆ ಸಾಮಾನ್ಯ ಜನರ ಪರಿಸ್ಥಿತಿ ಹೇಗೆ? ಘಟನೆ ಬಗ್ಗೆ ದಿಲ್ಲಿ ಪೊಲೀಸರನ್ನು ಕೇಳಿದರೆ ಅವರು ಅಸಾಯಕರಂತೆ ನಿಲ್ಲುತ್ತಿದ್ದಾರೆ. ಅಮಿತ್‌ ಶಾ ಅವರೇ ನಿಮ್ಮ ಮೂಗಿನ ಕೆಳಗೇ ಹೀಗೆಲ್ಲಾ ನಡೆಯುತ್ತಿದೆ ಸ್ಪೀಕರ್‌ ಓಂ ಬಿರ್ಲಾ ಅವರೇ ಸಂಸದನಿಗೆ ರಕ್ಷಣೆ ಇದೆಯೋ ಇಲ್ಲವೋ ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

ಸಾವರ್ಕರ್‌ ಮಾದರಿಯ ಹೇಡಿತನ ನಿಲ್ಲಿಸಿ

ಈ ‘ಸಾವರ್ಕರ್ ಮಾದರಿಯ ಹೇಡಿತನದ ವರ್ತನೆ’ ನಾನು ಹೆದರುವುದಿಲ್ಲ ಎಂದೂ ಓವೈಸಿ ಹೇಳಿದ್ದಾರೆ. “ನನ್ನ ಮನೆಯನ್ನು ಗುರಿಯಾಗಿಸುವ ಗೂಂಡಾಗಳ ಬಗ್ಗೆ ಹೆದರಿಕೆಯಿಲ್ಲ. ಈ ಸಾವರ್ಕರ್ ಮಾದರಿಯ ಹೇಡಿತನದ ನಡವಳಿಕೆಯನ್ನು ನಿಲ್ಲಿಸಿ. ಸ್ವಲ್ಪ ಮಸಿ ಎಸೆದ ನಂತರ ಅಥವಾ ಕೆಲವು ಕಲ್ಲುಗಳನ್ನು ಹೊಡೆದು ನಂತರ ಓಡಿ ಹೋಗುವಂತಹ ಹೇಡಿತನ ಬೇಡ ಎಂದು ಅವರು ಹೇಳಿದರು. ಸೇರಿಸಲಾಗಿದೆ.

ಇನ್ನು ಘಟನೆಗೆ ಸಂಬಂಧಿಸಿದಂತೆ ದಿಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಿಡಿಗೇಡಿಗಳು ಓವೈಸಿ ನಿವಾಸದ ಎದುರು ಅಳವಡಿಸಿದ್ದ ನೇಮ್‌ಪ್ಲೇಟ್‌ ಮೇಲೆ ಕಪ್ಪು ಮಸಿ ಬಳಿದು ಓದಿ ಹೋಗಿದ್ದಾರೆ. ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗುತ್ತಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಸಾದುದ್ದೀನ್ ಓವೈಸಿ ಪ್ರಮಾಣ ವಚನ ಸ್ವೀಕರಿಸಲು ತೆರಳುತ್ತಿದ್ದಂತೆ ಬಿಜೆಪಿ ಸಂಸದರು ಜೈ ಶ್ರೀರಾಮ್ ಘೋಷಣೆ ಕೂಗಲು ಆರಂಭಿಸಿದ್ದರು. ಉರ್ದುವಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಓವೈಸಿ, ‘ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಕೂಗುವ ಮೂಲಕ ಮುಕ್ತಾಯಗೊಳಿಸಿದರು. 2019 ರಲ್ಲಿ, ಓವೈಸಿ ತಮ್ಮ ಪ್ರಮಾಣವಚನವನ್ನು “ಜೈ ಭೀಮ್, ಅಲ್ಲಾ-ಒ-ಅಕ್ಬರ್ ಮತ್ತು ಜೈ ಹಿಂದ್” ಎಂಬ ಪದಗಳೊಂದಿಗೆ ಮುಕ್ತಾಯಗೊಳಿಸಿದ್ದರು. 2024 ರ ಲೋಕಸಭಾ ಚುನಾವಣೆಯಲ್ಲಿ ಓವೈಸಿ ಹೈದರಾಬಾದ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಹಿಂದೂ ಫೈರ್ ಬ್ರಾಂಡ್​ ಮಾಧವಿ ಲತಾ ವಿರುದ್ಧ ಗೆಲುವು ಸಾಧಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೀಡೆ

D. K. Shivakumar: ಫೈನಲ್​ ಪ್ರವೇಶಿಸಿದ ಭಾರತ ತಂಡಕ್ಕೆ ಶುಭ ಹಾರೈಸಿದ ಡಿಸಿಎಂ ಶಿವಕುಮಾರ್‌

D. K. Shivakumar: ಸೆಮಿಫೈನಲ್​ ಪಂದ್ಯದಲ್ಲಿ ಇಂಗ್ಲೆಂಡ್(India vs England Semi Final 2)​ ತಂಡವನ್ನು 68 ರನ್​ಗಳಿಂದ ಮಣಿಸಿ ಫೈನಲ್​ ಪ್ರವೇಶಿಸಿದ ಭಾರತ ತಂಡಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌(D. K. Shivakumar) ಶುಭ ಹಾರೈಸಿದ್ದಾರೆ.

VISTARANEWS.COM


on

D. K. Shivakumar
Koo

ಬೆಂಗಳೂರು: ಹಾಲಿ ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ಸೆಮಿಫೈನಲ್​ ಪಂದ್ಯದಲ್ಲಿ ಇಂಗ್ಲೆಂಡ್(India vs England Semi Final 2)​ ತಂಡವನ್ನು 68 ರನ್​ಗಳಿಂದ ಮಣಿಸಿ ಫೈನಲ್​ ಪ್ರವೇಶಿಸಿದ ಭಾರತ ತಂಡಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌(D. K. Shivakumar) ಶುಭ ಹಾರೈಸಿದ್ದಾರೆ. ಜತೆಗೆ ಟೀಮ್​ ಇಂಡಿಯಾದ(team india) ಸಾಧನೆಯನ್ನು ಕೊಂಡಾಡಿದ್ದಾರೆ.

“ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಟೀಂ ಇಂಡಿಯಾ ಆಟಗಾರರ ಗಮನಾರ್ಹ ಪ್ರದರ್ಶನಕ್ಕೆ ಅಭಿನಂದನೆಗಳು!. ಟೂರ್ನಿಯುದ್ದಕ್ಕೂ ನೀವು ತೋರಿದ ಸಂಘಟಿತ ಪ್ರದರ್ಶನೇ ಈ ಯಶಸ್ಸಿಗೆ ಕಾರಣ. ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿಯೂ ಇದೇ ಸ್ಫೂರ್ತಿಯಿಂದ ಆಡುವ ಮೂಲಕ ಚಾಂಪಿಯನ್​ ಪಟ್ಟ ಅಲಂಕರಿಸುವಂತಾಗಲಿ. ಫೈನಲ್‌ ಪಂದ್ಯಕ್ಕೆ ಶುಭ ಹಾರೈಸುತ್ತೇನೆ” ಎಂದು ಭಾರತ ತಂಡ ಫೋಟೊ ಹಂಚಿಕೊಂಡು ಟ್ವೀಟ್​ ಮಾಡಿದ್ದಾರೆ.

ಗುರುವಾರ ತಡರಾತ್ರಿ ಗಯಾನದ ಪ್ರೊವಿಡೆನ್ಸ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಭಾರತ, ರೋಹಿತ್​ ಶರ್ಮ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 171 ರನ್​ ಬಾರಿಸಿ ಸವಾಲೊಡ್ಡಿತು. ಜವಾಬಿತ್ತ ಇಂಗ್ಲೆಂಡ್​ ನಾಟಕೀಯ ಕುಸಿತ ಕಂಡು 16.4 ಓವರ್​ಗಳಲ್ಲಿ 103 ರನ್​ಗೆ ಸರ್ವಪತನ ಕಂಡಿತು.

ಈ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ 2022ರ ಟಿ20 ವಿಶ್ವಕಪ್‌ ಸೆಮಿಫೈನಲ್‌ ಸೋಲಿನ ಸೇಡನ್ನು ತೀರಿಸಿಕೊಂಡಿತು. ಅಂದು ಅಡಿಲೇಡ್‌ ಓವಲ್‌ನಲ್ಲಿ ನಡೆದಿದ್ದ ಸೆಮಿ ಪಂದ್ಯದಲ್ಲಿ ಇಂಗ್ಲೆಂಡ್‌ 10 ವಿಕೆಟ್‌ಗಳಿಂದ ಭರ್ಜರಿಯಾಗಿ ರೋಹಿತ್‌ ಪಡೆಯನ್ನು ಮಗುಚಿ ಫೈನಲ್​ ಪ್ರವೇಶಿಸಿತ್ತು. ಈ ಬಾರಿ ಭಾರತ ತಂಡ ಇಂಗ್ಲೆಂಡ್​ ಮಣಿಸಿ ಫೈನಲ್​ ಪ್ರವೇಶಿಸಿತು. ಅಲ್ಲಿಗೆ ಲೆಕ್ಕ ಚುಕ್ತಾ ಗೊಂಡಿತು. ಶನಿವಾರ ಬಾರ್ಬಡೋಸ್​ನಲ್ಲಿ ನಡೆಯುವ ಫೈನಲ್​ ಪಂದ್ಯದಲ್ಲಿ ರೋಹಿತ್​ ಪಡೆ ದಕ್ಷಿಣ ಆಫ್ರಿಕಾದ ಸವಾಲು ಎದುರಿಸಲಿದೆ. ಕೂಟದ ಅಜೇಯ ತಂಡಗಳ ನಡುವಣ ಈ ಪ್ರಶಸ್ತಿ ಸಮರ ತೀವ್ರ ಕುತೂಹಲ, ರೋಮಾಂಚನ ಸೃಷ್ಟಿಸುವುದರಲ್ಲಿ ಅನುಮಾನವಿಲ್ಲ.

ಇದನ್ನೂ ಓದಿ IND vs ENG Semi Final: ಇಂಗ್ಲೆಂಡ್​ ಮಣಿಸಿ 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಭಾರತ

ಡಿಕೆಶಿ ಮುಖ್ಯಮಂತ್ರಿ ಮಾಡಿ ಎಂದು ಸಿಎಂಗೆ ಒತ್ತಾಯಿಸಿದ ಚಂದ್ರಶೇಖರ ಸ್ವಾಮೀಜಿ


ಡಿಕೆ ಶಿವಕುಮಾರ್ (DK Shivakumar) ಅವರನ್ನು ಸಿಎಂ ಮಾಡಿ ಎಂದು ಸ್ವಾಮೀಜಿಯೊಬ್ಬರು ಸಿಎಂ ಸಿದ್ದರಾಮಯ್ಯ (CM Siddaramaiah) ಮುಂದೆ ವೇದಿಕೆಯ ಮೇಲೆಯೇ ಬೇಡಿಕೆ ಇಟ್ಟ ಪ್ರಸಂಗ ನಿನ್ನೆ(ಗುರುವಾರ) ನಡೆದ ಕೆಂಪೇಗೌಡ ಜಯಂತಿ (Kempegowda Jayanthi) ಕಾರ್ಯಕ್ರಮದಲ್ಲಿ ನಡೆದಿದೆ. ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ (Chandrashekhara swamiji) ಅವರು ಸಿದ್ದರಾಮಯ್ಯ ಅವರಿಗೆ ವೇದಿಕೆಯಲ್ಲೇ ಬಹಿರಂಗವಾಗಿ ಈ ಬೇಡಿಕೆಯನ್ನು ಇಟ್ಟಿದ್ದಾರೆ.

ಎಲ್ಲರೂ ಮುಖ್ಯಮಂತ್ರಿಗಳಾಗಿ ತಮ್ಮ ತಮ್ಮ ಅಧಿಕಾರ ಅನುಭವಿಸಿದ್ದಾರೆ. ಆದರೆ ಡಿಕೆ ಶಿವಕುಮಾರ್ ಒಬ್ಬರು ಮುಖ್ಯಮಂತ್ರಿ ಆಗಿಲ್ಲ. ಸಿದ್ದರಾಮಯ್ಯ ಅವರು ಈಗಾಗಲೇ ಸಿಎಂ ಸ್ಥಾನ ಅನುಭವಿಸಿದ್ದಾರೆ. ಆ ಕಾರಣಕ್ಕಾಗಿ ಇನ್ನು ಮುಂದೆ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಡಿಕೆಶಿ ಸಿಎಂ ಆಗುವ ಕುರಿತು ಮತ್ತು ಹೊಸ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಕುರಿತು ಕಾಂಗ್ರೆಸ್‌ ನಾಯಕರೊಳಗೇ ಬಣ ರಾಜಕೀಯ ನಡೆಯುತ್ತಿದೆ. ಹಲವಾರು ಕಾಂಗ್ರೆಸ್‌ ನಾಯಕರು, ಇನ್ನಷ್ಟು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಬೇಕು ಎಂಬ ವಾದ ಮುಂದಿಟ್ಟಿದ್ದಾರೆ. ಇದೀಗ, ಒಕ್ಕಲಿಗರೊಬ್ಬರು ಸಿಎಂ ಆಗಬೇಕು ಎಂದು ಒಕ್ಕಲಿಗ ಸ್ವಾಮೀಜಿಗಳೇ ಹೇಳುವ ಮೂಲಕ ಈ ಬಣ ರಾಜಕೀಯಕ್ಕೆ ಇನ್ನಷ್ಟು ತುಪ್ಪ ಸುರಿದಂತಾಗಿದೆ.

Continue Reading
Advertisement
Valmiki Corporation Scam
ಕ್ರೈಂ45 seconds ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಸಿಬಿಐನಿಂದ ಬಂಧನ ಆತಂಕದಲ್ಲಿ ಮಾಜಿ ಸಚಿವ ನಾಗೇಂದ್ರ

Virat Kohli
ಕ್ರಿಕೆಟ್8 mins ago

Virat Kohli: ಕೊಹ್ಲಿ ಕ್ಲಾಸ್ ಪ್ಲೇಯರ್, ಫೈನಲ್​ನಲ್ಲಿ ಆಡುತ್ತಾರೆ ಎಂದು ಬೆಂಬಲ ಸೂಚಿಸಿದ ನಾಯಕ ರೋಹಿತ್​

karnataka Rain
ಮಳೆ9 mins ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Viral Video
Latest10 mins ago

Viral Video: ನಡುರಸ್ತೆಯಲ್ಲಿ ಶಿಕ್ಷಕಿಯ ಹಣೆಗೆ ಸಿಂಧೂರ ಹಚ್ಚಿ ಬಲವಂತವಾಗಿ ಮದುವೆಯಾದ ಯುವಕ!

Viral Video
Latest13 mins ago

Viral Video: ನೋಡುಗರ ಕಣ್ಮನ ಸೆಳೆಯುತ್ತಿದೆ ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಆಮಂತ್ರಣ ಪತ್ರಿಕೆ

Actor Darshan support by singer dr shamitha malnad
ಸ್ಯಾಂಡಲ್ ವುಡ್34 mins ago

Actor Darshan: ಆರಡಿ ದೇಹವ ಮೂರಡಿ ಬಗ್ಗಿಸಿ ನಮ್ಮೊಂದಿಗೆ ವಿನಯದಿ ಮಾತನಾಡಿದ ದರ್ಶನ್‌ ಅಣ್ಣ ಎಂದ ಖ್ಯಾತ ಗಾಯಕಿ!

airtel price hike
ಪ್ರಮುಖ ಸುದ್ದಿ38 mins ago

Airtel Price Hike: ಜಿಯೋ ನಂತರ ಏರ್‌ಟೆಲ್‌ ಡೇಟಾ ಬಳಕೆದಾರರ ಜೇಬಿಗೂ ಕತ್ತರಿ; 21% ದರ ಏರಿಕೆ

murder Case in Kalaburagi
ಕಲಬುರಗಿ40 mins ago

Murder case : ಗಾಣಗಾಪುರ ದತ್ತನ ದರ್ಶನಕ್ಕೆ ಆಗಮಿಸಿದ ಭಕ್ತನ ಬರ್ಬರ ಹತ್ಯೆ

Actor Darshan special appeal to the fans
ಸ್ಯಾಂಡಲ್ ವುಡ್55 mins ago

Actor Darshan: ಪರಪ್ಪನ ಅಗ್ರಹಾರದಿಂದಲೇ ಅಭಿಮಾನಿಗಳ ಬಳಿ ದರ್ಶನ್‌ ವಿಶೇಷ ಮನವಿ; ಏನದು?

D. K. Shivakumar
ಕ್ರೀಡೆ59 mins ago

D. K. Shivakumar: ಫೈನಲ್​ ಪ್ರವೇಶಿಸಿದ ಭಾರತ ತಂಡಕ್ಕೆ ಶುಭ ಹಾರೈಸಿದ ಡಿಸಿಎಂ ಶಿವಕುಮಾರ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ9 mins ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ17 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ18 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು20 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ24 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ7 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಟ್ರೆಂಡಿಂಗ್‌