Site icon Vistara News

ಪೊಲೀಸ್‌ ಸಿಬ್ಬಂದಿಯಿಂದ ಅನಾಥ ಶವದ ಅಂತ್ಯಸಂಸ್ಕಾರ, ಮಾನವೀಯ ಕಾರ್ಯಕ್ಕೆ ಸಾರ್ವಜನಿಕರ ಶ್ಲಾಘನೆ

ಬೆಂಗಳೂರು: ಅನಾಥನ ಶವಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದ ಘಟನೆ ಅಮೃತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

55 ವರ್ಷದ ಅನಾಥ ವ್ಯಕ್ತಿಯೊಬ್ಬ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಆತನನ್ನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದಾಗ ಸಾವನ್ನಪ್ಪಿರೋ ವಿಚಾರ ಖಚಿತವಾಯಿತು. ಆತನ ಬಗ್ಗೆ ವಿಚಾರಿಸಿದಾಗ ಮೃತ ವ್ಯಕ್ತಿ ಅನಾಥ ಎನ್ನುವುದು ತಿಳಿದು ಬಂತು.

ನಂತರ ಮರಣೋತ್ತರ ಪರೀಕ್ಷೆ ಮಾಡಿಸಿ ಕಲ್ಲಪಲ್ಲಿ ಸ್ಮಶಾನದಲ್ಲಿ ಧಾರ್ಮಿಕ ವಿಧಿ ವಿಧಾನದ ಮೂಲಕ ಅಮೃತಹಳ್ಳಿ ಠಾಣೆ ಸಿಬ್ಬಂದಿ ಅಂತ್ಯಸಂಸ್ಕಾರ ಮಾಡಿದರು.

Exit mobile version