ಯುವಕನನ್ನು ರಕ್ಷಿಸಿ ಮಾನವಿಯತೆ ಮೆರೆದ ಪೋಲಿಸ್‌ ಪೇದೆ - Vistara News

ಗದಗ

ಯುವಕನನ್ನು ರಕ್ಷಿಸಿ ಮಾನವಿಯತೆ ಮೆರೆದ ಪೋಲಿಸ್‌ ಪೇದೆ

ಜೀವನವೆ ಸಾಕೆಂದು ಕೆರೆಗೆ ಹಾರಿ ಜೀವವನ್ನೆ ಕಳೆದು ಕೊಳ್ಳಲು ಹೋದ ಯುವಕನನ್ನು ರಕ್ಷಿಸಿ ಪೋಲಿಸರು ಮಾನವಿಯತೆ ಮೆರೆದಿದ್ದಾರೆ.

VISTARANEWS.COM


on

ಮಾನವಿಯತೆ ಮೆರೆದ ಪೋಲಿಸ್‌ ಪೇದೆ
ಮುಬಾರಕ್ ಮುನ್ನಾಸಾಬ ಧಾರವಾಡ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಗದಗ: ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯವಕನನ್ನು ಗದಗ ನಗರದ ಟ್ರಾಫಿಕ್ ಕಾನ್ಸ್‌ಟೇಬಲ್‌ ಸಮಯ ಪ್ರಜ್ಞೆ ತೋರಿ ರಕ್ಷಣೆ ಮಾಡಿದ್ದಾರೆ. ಗದಗ ನಗರದ ರಂಗನವಾಡಿ ಓಣಿಯ ನಿವಾಸಿ ಮುಬಾರಕ್ ಮುನ್ನಾಸಾಬ ಧಾರವಾಡ ಎಂಬಾತನನ್ನು ರಕ್ಷಣೆ ಮಾಡಲಾಗಿದೆ.

ಮಾನವಿಯತೆ ಮೆರೆದ ಪೋಲಿಸ್‌ ಪೇದೆ

ನಗರದ ಐತಿಹಾಸಿಕ ಕೆರೆಯಾದ ಭೀಷ್ಮ‌ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯವಕ ಯತ್ನಿಸಿದ್ದ. ನೋಡ ನೋಡುತ್ತಿದ್ದಂತೆ ಕೆರೆಗೆ ಹಾರಿದ್ದ ಯುವಕನನ್ನ ನೋಡಿ ಪೇದೆ ಬೆಚ್ಚಿಬಿದ್ದರು. ತಕ್ಷಣ ಟ್ರಾಫಿಕ್ ಪೊಲೀಸ್ ಗಂಗಾಧರ ಪೂಜಾರ ಇದನ್ನು ಗಮನಿಸಿದ್ದಾರೆ. ತಕ್ಷಣವೇ ಸ್ಥಳೀಯ ಮಹೇಶ ವಡ್ಡರ ಸಹಾಯ ಪಡೆದು ಕಾರ್ಯಪ್ರವೃತ್ತರಾಗಿದ್ದಾರೆ. ಯುವನನ್ನ ರಕ್ಷಿಸಿದ್ದಾರೆ, ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನು ಓದಿ: ಮಾನವೀಯತೆ ಮೆರೆದ ಪೊಲೀಸರು, ಪ್ರಜ್ಞೆ ತಪ್ಪಿ ಬಿದ್ದ ವ್ಯಕ್ತಿ ಆಸ್ಪತ್ರೆಗೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಗದಗ

Gadag News : ಮೂವರು ಮಕ್ಕಳನ್ನು ನದಿಗೆ ಎಸೆದು, ಆತ್ಮಹತ್ಯೆ ಮಾಡಿಕೊಂಡ ತಂದೆ!

Family Dispute : ಕೌಟುಂಬಿಕ ಕಲಹಕ್ಕೆ ತಂದೆಯೊಬ್ಬ ತನ್ನ ಮೂವರು ಮಕ್ಕಳುನ್ನು ನದಿಗೆ ಎಸೆದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗದಗದಲ್ಲಿ (Gadag News) ನಡೆದಿದೆ

VISTARANEWS.COM


on

Gadag News Father commits suicide by throwing three children into river
ಸಾಂದರ್ಭಿಕ ಚಿತ್ರ

ಗದಗ: ಕೌಟುಂಬಿಕ ಕಲಹಕ್ಕೆ ಬೇಸತ್ತು ತನ್ನ ಮೂವರು ಮಕ್ಕಳನ್ನು ನದಿಗೆ ಎಸೆದು, ತಂದೆಯೂ ಆತ್ಮಹತ್ಯೆ ಮಾಡಿಕೊಂಡ ಹೃದಯ‌ ವಿದ್ರಾವಕ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿಯ ತುಂಗಭದ್ರಾ ನದಿಯಲ್ಲಿ (Gadag News) ನಡೆದಿದೆ.‌

ಮುಂಡರಗಿ ತಾಲೂಕಿನ ಮುಕ್ತುಂಪುರ‌ ಗ್ರಾಮದ ನಿವಾಸಿ, ಮಂಜುನಾಥ ಅರಕೇರಿ ಹಾಗೂ ಮೂವರು ‌ಮಕ್ಕಳು‌ ನದಿ ಪಾಲಾಗಿದ್ದಾರೆ. ಪುಟ್ಟ ಮಕ್ಕಳಾದ ವೇದಾಂತ (3), ಪವನ (4), ಹಾಗೂ ಧನ್ಯಾ (6) ಮೃತ ದುರ್ದೈವಿಗಳು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಕ್ಕಳನ್ನು ಸೇತುವೆ ಮೇಲಿಂದ‌ ನದಿಗೆ ಎಸೆದು ಬಳಿಕ ಮಂಜುನಾಥ್ ತಾನೂ ಸಹ ನದಿಗೆ ಹಾರಿದ್ದಾನೆ. ಸ್ಥಳಕ್ಕೆ ಮುಂಡರಗಿ ಪೊಲೀಸರ ದೌಡಾಯಿಸಿದ್ದು, ಶೋಧ‌ ಕಾರ್ಯ ನಡೆಸಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Continue Reading

ಗದಗ

HK Patil : ಮುಖ್ಯಮಂತ್ರಿ ಸಿದ್ದರಾಮಯ್ಯ ಎನ್ನುವ ಬದಲಿಗೆ `ಡಿಕೆಶಿ’ ಎಂದು ಸಚಿವ ಎಚ್‌ಕೆ ಪಾಟೀಲ್‌ ಯಡವಟ್ಟು

HK Patil: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಏರ್ಪಡಿಸಿದ್ದ ಕಾರ್ಯಕ್ರಮವೊಂದರಲ್ಲಿ ಹಿರಿಯ ರಾಜಕಾರಣಿ ಹಾಗೂ ಸಚಿವ ಎಚ್.ಕೆ.ಪಾಟೀಲ್‌ ತಮ್ಮ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎನ್ನುವ ಬದಲಿಗೆ ಡಿ.ಕೆ ಎಂದು ಹೇಳಿ ಕ್ಷಣಮಾತ್ರದಲ್ಲೆ ಸರಿಪಡಿಸಿಕೊಂಡ ಘಟನೆ ನಡೆದಿದೆ.

VISTARANEWS.COM


on

HK patil

ಗದಗ: ಕರ್ನಾಟಕದ ಕಾಂಗ್ರೆಸ್ ಆಡಳಿತದಲ್ಲಿ ಮುಖ್ಯಮಂತ್ರಿ ಸ್ಥಾನದ‌‌ ಮೇಲೆ ಎಲ್ಲರ ಕಣ್ಣಿದೆ. ಕಾರಣ ಮುಡಾ ಹಗರಣ‌‌ ಎದುರಿಸುತ್ತಿರುವ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರ ಸಿಎಂ ಕುರ್ಚಿ ಮುಡಾ ಹಗರಣದಿಂದ‌ ಖಾಲಿಯಾಗುತ್ತೆ ಅನ್ನೋ ಬಿಸಿ‌ಬಿಸಿ ಚರ್ಚೆ ಪ್ರಚಲಿತದಲ್ಲಿದೆ. ಇದಕ್ಕೆ ಪುಷ್ಟಿಕರೀಸುವಂತೆ ಗದಗದಲ್ಲಿ ಸಚಿವ ಎಚ್‌ಕೆ ಪಾಟೀಲ್‌ (HK Patil) ಮುಖ್ಯಮಂತ್ರಿ ಹೆಸರನ್ನು ಹೇಳುವ ಸಂದರ್ಭದಲ್ಲಿ ಸಿದ್ದರಾಮಯ್ಯ ಬದಲಿಗೆ ಡಿ.ಕೆ ಶಿವಕುಮಾರ್‌ ಹೆಸರು ಪ್ರಸ್ತಾಪಿಸಿ, ಕ್ಷಣಮಾತ್ರದಲ್ಲೆ ಸರಿಪಡಿಸಿಕೊಂಡಿದ್ದಾರೆ.

ಮುದ್ರಣ‌ ಕಾಶಿ ಗದಗ ಜಿಲ್ಲೆಯಲ್ಲಿ‌ ಶುಕ್ರವಾರ ಅದ್ಧೂರಿ 66ನೇ ಕನ್ನಡ ರಾಜ್ಯೋತ್ಸವ ಜರುಗಿತು. ‌ಈ ವೇಳೆ ಜಿಲ್ಲಾ ಉಸ್ತುವಾರಿ‌ ಸಚಿವ ಹಾಗೂ ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ವೇದಿಕೆ ಮೇಲೆ ಭಾಷಣದ‌ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳುವ ಬದಲಾಗಿ, ಡಿಕೆ ಎಂದು ಪ್ರಸ್ತಾಪಿಸಿ, ತಕ್ಷಣ ಎಚ್ಚೆತ್ತು,‌ ಸಿದ್ಧರಾಮಯ್ಯ‌ ಎಂದು ಮುಂದುವರೆದು,‌ ಉಪಮುಖ್ಯಮಂತ್ರಿ‌ ಡಿ.ಕೆ. ಶಿವಕುಮಾರ್‌ ಅವರು ಎಂದೇಳಿ, ತಮ್ಮ ಭಾಷಣ ಮುಂದುವರೆಸಿದರು.

ಮೈಸೂರು ರಾಜ್ಯಕ್ಕೆ ಕರ್ನಾಟಕ‌ ನಾಮಕರಣದ ಐವತ್ತರ‌ ಸಂಭ್ರಮಾಚರಣೆಯನ್ನು ಕಳೆದ ವರ್ಷ 2023ರ ನವಂಬರ್, 1,2,3 ರಂದು ಮೂರು‌ ದಿನಗಳ‌ ಕಾಲ ಗದಗ ನಗರದ ಸೊಸೈಟಿಯ ಆವರಣದಲ್ಲಿ ನಡೆದಿತ್ತು.‌ ಗತವೈಭವ ಮರುಕಳಿಸುವ ಹಾಗೆ, ಐತಿಹಾಸಿಕ ಕಾರ್ಯಕ್ರಮಕ್ಕೆ ನಗರದ ಎಲ್ಲ ಜನತೆ‌ ಸಾಕ್ಷಿಯಾಗಿದ್ದೀರಿ. ನಾಡಿನ ಮುಖ್ಯಮಂತ್ರಿಗಳಾದ ಡಿ.ಕೆ (ತಕ್ಷಣ ಎಚ್ಚೆತ್ತು ಭಾಷಣದ ಪ್ರತಿ ತೀಕ್ಷ್ಣವಾಗಿ ವೀಕ್ಷಿಸಿ) ಮಾನ್ಯ‌ ಸಿದ್ಧರಾಮಯ್ಯನವರು,‌ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಸೇರಿದಂತೆ, ಸಚಿವ ಸಂಪುಟದ ಎಲ್ಲ‌ ಸಹೋದ್ಯೋಗಿಗಳು ಈ‌ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಿದ್ದರು ಎಂದು ಪ್ರಸ್ತಾಪಿಸಿ, ಮುಂದೆ ತಮ್ಮ ಭಾಷಣದ ಸಂದೇಶವನ್ನು ಮುಂದುವರಿಸಿದ್ದಾರೆ.

ಸಿದ್ದರಾಮಯ್ಯನವರ ಸಂಪುಟದಲ್ಲಿ ‌ಅತ್ಯಂತ‌ ಹಿರಿಯ ಮತ್ತು ಅನುಭವಿ ರಾಜಕಾರಣಿಯಾಗಿರುವ ಎಚ್.ಕೆ.ಪಾಟೀಲ ಸಿದ್ದರಾಮಯ್ಯನವರ ಆಪ್ತ ಬಳಗದಲ್ಲಿಯೂ ಒಬ್ಬರಾಗಿದ್ದಾರೆ.‌ ದೀಪಾವಳಿ‌ ಶುಭ‌ ಸಂದರ್ಭದಲ್ಲಿ ಸಚಿವರ ಬಾಯಲ್ಲಿ, ಡಿಕೆಶಿ ಮುಖ್ಯಮಂತ್ರಿಯಾಗಿದ್ದು ಅಚಾನಕ್ ಆಗಿ ಆದ ಅಚಾತುರ್ಯವೋ,‌ ಅಥವಾ ಸಚಿವರ ಆಂತರ್ಯದ ನುಡಿಯೋ ಎಲ್ಲವೂ ಕಾಕತಾಳಿಯ‌ ಎಂಬಂತಿದೆ.

Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

karnataka Weather Forecast

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

Karnataka Rain

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading
Advertisement
Rakshit Shetty Richard Anthony Produce By Hombale
ದೇಶ15 hours ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ15 hours ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ15 hours ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

ದೇಶ2 days ago

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

ರಾಜಕೀಯ2 days ago

ವಿಜಯ್‌ ಪ್ರಮಾಣವಚನಕ್ಕೆ ಬ್ರೇಕ್‌, ರಾಷ್ಟ್ರಪತಿಗೆ ಟಿವಿಕೆ ಪತ್ರಚೆನ್ನೈ

ರಾಜಕೀಯ2 days ago

ತಮಿಳುನಾಡು ರಾಜಕೀಯಕ್ಕೆ ರೋಚಕ ಟ್ವಿಸ್ಟ್‌, ದಳಪತಿ ಪ್ರಮಾಣವಚನಕ್ಕೆ ಬ್ರೇಕ್‌, ಡಿಎಂಕೆ-ಎಐಎಡಿಎಂಕೆ ಮೈತ್ರಿ ಸಾಧ್ಯತೆ

ಕ್ರೈಂ2 days ago

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

ಕ್ರೈಂ2 days ago

ಪಶ್ಚಿಮ ಬಂಗಾಳದಲ್ಲಿ ರಕ್ತದೋಕುಳಿ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಶೂಟೌಟ್‌‌..!

Latest3 days ago

ಪಶ್ಚಿಮ ಬಂಗಾಳದಲ್ಲಿ ಕೇಸರಿ ಪರ್ವ: ಯಾರಾಗಲಿದ್ದಾರೆ ʼಸಿಎಂʼ?

Latest3 days ago

ದಳಪತಿʼ ಪಟ್ಟಾಭಿಷೇಕಕ್ಕೆ ಕ್ಷಣಗಣನೆ : ತಮಿಳುನಾಡು ರಾಜಕಾರಣದಲ್ಲಿ ಬಿರುಗಾಳಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌