Site icon Vistara News

ಸ್ನಾನ ಮಾಡಲು, ಶೇವಿಂಗ್ ಮಾಡಲು ಮನಸ್ಸಾಗ್ತಿಲ್ಲ: ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಪೊಲೀಸ್‌

ಆತ್ಮಹತ್ಯೆ ಮಾಡಿಕೊಂಡ ಕಾನ್ಸಟೆಬಲ್‌

ಗದಗ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಹೆಡ್‌ ಕಾನ್‌ಸ್ಟೇಬಲ್‌ ಒಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗದಲ್ಲಿ ನಡೆದಿದೆ.

ಗದಗ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಖಜಾನೆ ಕಚೇರಿಯ ಭದ್ರತಾ ಕೊಠಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಎ.ಎಸ್‌. ಕೊಪ್ಪದ ಅವರು ಡಿಎಆರ್‌ನ ಹೆಡ್‌ ಕಾನ್‌ಸ್ಟೇಬಲ್‌ ಆಗಿದ್ದರು. ಅವರು ಕರ್ತವ್ಯದಲ್ಲಿರುವಾಗಲೇ ಭದ್ರತೆಗೆಂದು ನೀಡಲಾದ 303 ರೈಫಲ್ ನಿಂದ ಕುತ್ತಿಗೆಗೆ ಗುಂಡು ಹೊಡೆದುಕೊಂಡಿದ್ದಾರೆ.

ಕೊಪ್ಪದ್‌ ಅವರು ಗುರುವಾರ ಮಧ್ಯಾಹ್ನ ಕರ್ತವ್ಯದಲ್ಲಿದ್ದರು. ಇನ್ನೊಬ್ಬ ಕಾನ್‌ಸ್ಟೇಬಲ್‌ ರಿಲೀವ್ ಮಾಡಲೆಂದು ಬಂದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡಿತು.

ಡೆತ್‌ ನೋಟ್‌ನಲ್ಲಿ ಏನಿತ್ತು?
ಕೊಪ್ಪದ ಅವರು ಡೆತ್ ನೋಟ್‌ ಬರೆದಿಟ್ಟಿದ್ದು, ಅದರಲ್ಲಿ ʻʻನನಗೆ ಸ್ನಾನ ಮಾಡಲು ಶೇವಿಂಗ್ ಮಾಡಿಸಿಕೊಳ್ಳಲು ಮನಸ್ಸಾಗ್ತಿಲ್ಲ. ತಂದೆಗೆ ಆರಾಮಿಲ್ಲ,ʼʼ ಎಂದು ಬರೆದಿದ್ದಾರೆ. ʻʻಸಹೋದ್ಯೋಗಿಗಳು ಸಹ ಕೆಲಸದಲ್ಲಿ ಅಸಹಕಾರ ತೋರುತ್ತಿದ್ದಾರೆ.ʼʼ ಎಂದಿದ್ದಾರೆ. ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ ತಂದೆ, ಕೊಪ್ಪದ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದಿದ್ದಾರೆ.

ಇದನ್ನೂ ಓದಿ: ಕಾನ್ಸ್‌ಟೇಬಲ್‌ ಆತ್ಮಹತ್ಯೆಗೆ ಸಹೋದ್ಯೋಗಿಗಳ ಕಿರುಕುಳ ಕಾರಣ?

Exit mobile version