knife attack | ದುಷ್ಕರ್ಮಿಗಳಿಂದ ಮೂವರಿಗೆ ಚಾಕು ಇರಿತ - Vistara News

ಕ್ರೈಂ

knife attack | ದುಷ್ಕರ್ಮಿಗಳಿಂದ ಮೂವರಿಗೆ ಚಾಕು ಇರಿತ

ಗದಗ ನಗರದಲ್ಲಿ ಮನೆ ಮುಂದೆ ನಿಂತಿದ್ದ ಮೂವರನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ.

VISTARANEWS.COM


on

crime news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗದಗ: ಮನೆ ಮುಂದೆ ನಿಂತಿದ್ದ ಮೂವರು ವ್ಯಕ್ತಿಗಳಿಗೆ ಚಾಕುವಿನಿಂದ ಮನಸೋ ಇಚ್ಛೆ ಇರಿಯಲಾಗಿದೆ.

ಗದಗ ನಗರದ‌ ಕಿಲ್ಲಾ ಓಣಿಯಲ್ಲಿ ತಡರಾತ್ರಿ ನಡೆದ ಘಟನೆ ಬೆಳಕಿಗೆ ಬಂದಿದೆ. ಮನೆ ಮುಂದೆ ನಿಂತಿದ್ದ ಗೋಪಾಲ ಖೋಡೆ, ಮಾಧು ಬದಿ ಹಾಗೂ ವಸಂತ‌ ಬಾಕಳೆ ಎಂಬವರನ್ನು ಬೈಕ್ ಮೇಲೆ ಬಂದಿದ್ದ ನಾಲ್ವರು ದುಷ್ಕರ್ಮಿಗಳು ಚಾಕುವಿನಿಂದ ಮನಸೋ ಇಚ್ಛೆ ಇರಿದಿದ್ದಾರೆ. ಗಾಯಾಳುಗಳಿಗೆ ಜೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Crime News | ಮಗಳನ್ನು ಮದುವೆ ಮಾಡಿ ಕೊಡಲು ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಹಲ್ಲೆ, ಯುವತಿ ತಂದೆಗೆ ಚಾಕು ಇರಿತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಾಮರಾಜನಗರ

Murder Case : ಚಾಮರಾಜನಗರದಲ್ಲಿ ಅತ್ತಿಗೆ ಮೇಲಿನ ಮೋಹಕ್ಕೆ ಅಣ್ಣನನ್ನೇ ಕೊಂದ ಕಾಮುಕ ತಮ್ಮ

Murder Case : ಅತ್ತಿಗೆ ಮೇಲೆ ಕಣ್ಣು ಹಾಕಿದ ಕಾಮುಕನೊಬ್ಬ ತನ್ನ ಸ್ವಂತ ಅಣ್ಣನಿಗೆ ಚಾಕುವಿನಿಂದ ಇರಿದು ಕೊಂದಿದ್ದಾನೆ. ಅಣ್ಣನ ಹೆಂಡತಿಗೆ ಅನೈತಿಕ ಸಂಬಂಧ ಹೊಂದುವಂತೆ ನಿತ್ಯ ಪೀಡಿಸುತ್ತಿದ್ದ ಎನ್ನಲಾಗಿದೆ.

VISTARANEWS.COM


on

By

Murder Case
ಮೃತ ದುರ್ದೈವಿ
Koo

ಚಾಮರಾಜನಗರ: ಪಾಪಿ ತಮ್ಮನೊಬ್ಬ ಒಡಹುಟ್ಟಿದ ಅಣ್ಣನನ್ನೇ ಚಾಕುವಿನಿಂದ ಇರಿದು (Murder Case) ಕೊಂದಿದ್ದಾನೆ. ಚಾಮರಾಜನಗರದ (chamarajanagara News) ಗುಂಡ್ಲುಪೇಟೆ ತಾಲೂಕಿನ‌ ಚೌಡಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಚೌಡಹಳ್ಳಿ ಗ್ರಾಮದ ಪ್ರಸಾದ್ (45) ಕೊಲೆಯಾದ ದುರ್ದೈವಿ. ಪ್ರಸಾದ್‌ ಸಹೋದರ ಕುಮಾರ್ (39) ಎಂಬಾತನಿಂದ ಈ ಕೃತ್ಯ ನಡೆದಿದೆ.

ಆರೋಪಿ ಕುಮಾರ್‌ನ ಕಾಮುಕತ್ವ ಎಷ್ಟರ ಮಟ್ಟಿಗೆ ಇತ್ತೆಂದರೆ, ಅತ್ತಿಗೆಗೆ ತನ್ನ ಜತೆ ಅನೈತಿಕ ಸಂಬಂಧ ಹೊಂದುವಂತೆ ಕಾಮುಕ ಮೈದುನ ನಿತ್ಯ ಪೀಡಿಸುತ್ತಿದ್ದನಂತೆ. ಇದೇ ವಿಚಾರಕ್ಕೆ ಅಣ್ಣ-ತಮ್ಮನ ನಡುವೆ ಶನಿವಾರ ರಾತ್ರಿ ಗಲಾಟೆ ನಡೆದಿದೆ. ಮಾತಿಗೆ ಮಾತು ಬೆಳೆದು ನಿನ್ನ ಹೆಂಡತಿ ಬೇರೆಯವರ ಜತೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದಿದ್ದಾನೆ.

ಇದರಿಂದ ಸಿಟ್ಟಾದ ಪ್ರಸಾದ್‌ ತಮ್ಮ ಕುಮಾರ್‌ಗೆ ಹೊಡೆಯಲು ಹೋಗಿದ್ದಾರೆ. ಒಬ್ಬರಿಗೊಬ್ಬರು ಕೈ ಕೈ ಮಿಲಾಯಿಸಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗಿ ಕುಮಾರ್‌ ಸಿಟ್ಟಿನಲ್ಲಿ ಅಣ್ಣ ಪ್ರಸಾದ್‌ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಗುಂಡ್ಲುಪೇಟೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆರೋಪಿ ಕುಮಾರ್‌ನನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Electric Shock: ಪಲ್ಲಕ್ಕಿ ಹೊತ್ತಿದ್ದ ಟ್ರ್ಯಾಕ್ಟರ್‌ಗೆ ಪ್ರವಹಿಸಿದ ವಿದ್ಯುತ್‌; ಕ್ಷಣಾರ್ಧದಲ್ಲೇ ಇಬ್ಬರು ಸುಟ್ಟು ಕರಕಲು

ಜಮೀನಿನ ವಿಚಾರದಲ್ಲಿ ಕುಟುಂಬಗಳ ಫೈಟ್; ಕುಡುಗೋಲು, ದೊಣ್ಣೆ ಹಿಡಿದು ಮಾರಾಮಾರಿ

ಬೆಳಗಾವಿ: ವಿವಾದಾತ್ಮಕ ಜಮೀನಿನ ವಿಚಾರಕ್ಕೆ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ (Family Fighting) ನಡೆದಿದೆ. ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಜಮೀನಿನಲ್ಲೇ ಎರಡು ಗುಂಪುಗಳು ಕುಡುಗೋಲು, ದೊಣ್ಣೆ ಹಿಡಿದು ಹೊಡೆದಾಡಿಕೊಂಡಿದ್ದಾರೆ.

ಬಡಿದಾಟದ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಘಟನೆಯಲ್ಲಿ 7 ಜನರಿಗೆ ಗಂಭೀರ ‌ಗಾಯವಾಗಿದ್ದು, ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾಕತಿ ನಿವಾಸಿ ಅನಿಲ್ ಮುಂಗಾರಿ ಸೇರಿ 7 ಜನರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

ಕೃಷಿಯಲ್ಲಿ ತೊಡಗಿದ್ದ ಅನಿಲ್ ಮುಂಗಾರಿ ಕುಟುಂಬಸ್ಥರ ಮೇಲೆ ಕಾಕತಿ ನಿವಾಸಿ ಸಿದ್ದರಾಯಿ ತುಂಬರಿ ಎಂಬಾತ ಗುಂಡಾಗಳನ್ನು ಕರೆಯಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅನಿಲ್ ಮುಂಗಾರಿಗೆ ಸೇರಿದ ಜಮೀನು ಲಪಟಾಯಿಸಲು ಸಿದ್ದರಾಯಿ ತುಂಬರಿ ಪ್ಲ್ಯಾನ್‌ ಮಾಡಿದ್ದಾರೆ ಎನ್ನಲಾಗಿದೆ.

ಕೋರ್ಟ್‌ ವಿಚಾರಣೆಯಲ್ಲಿರುವ ಜಮೀನು ಬಿಟ್ಟುಕೊಡುವಂತೆ ಸಿದ್ದರಾಯಿ ತುಂಬರಿ ಬೇಡಿಕೆ ಇಟ್ಟಿದ್ದು, ಇದಕ್ಕೆ ಒಪ್ಪದಾಗ ಅನಿಲ್ ಮುಂಗಾರಿ ಕುಟುಂಬಸ್ಥರ ಮೇಲೆ ಗುಂಡಾಗಳನ್ನು ಕರೆಯಿಸಿ ಹಲ್ಲೆ ನಡೆಸಿದ್ದಾನೆ. ಸದ್ಯ ಬೆಳಗಾವಿಯ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

West Bengal: ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ; ಗುಂಡಿಕ್ಕಿ ಕೊಂದು, ರುಂಡ ಕಡಿದು ಒಯ್ದ ದುಷ್ಕರ್ಮಿಗಳು

West Bengal: ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯ ಚಂದಾಪುರದಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ದುರ್ದೈವಿಯನನು ಹಫೀಜ್‌ ಶೇಖ್‌ ಎಂದು ಗುರುತಿಸಲಾಗಿದೆ. ಹಫೀಜ್‌ ಶೇಖ್‌ ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಗೊಂಡಿದ್ದ. ಇದೇ ಕಾರಣಕ್ಕೆ ಆತನನ್ನು ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ಅಂಗಡಿಯೊಂದ ಬಳಿ ಇದ್ದ ಹಫೀಜ್‌ ಮೇಲೆ ಬೈಕ್‌ನಲ್ಲಿ ಬಂದಿದ್ದ ಸುಮಾರು 10 ಜನ ದುಷ್ಕರ್ಮಿಗಳು ಏಕಾಏಕಿ ಗುಂಡು ಹಾರಿಸಿ ಕೊಂದಿದ್ದರು. ಬಳಿಕ ಆತನ ರುಂಡವನ್ನು ದೇಹದಿಂದ ಕತ್ತರಿಸಿ ಎಸೆದು ವಿಕೃತಿ ಮೆರೆದಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿದಾಗ ದೇಹ ಒಂದು ಕಡೆ ರುಂಡ ರಸ್ತೆ ಬದಿಯಲ್ಲಿ ಬಿದ್ದಿತ್ತು.

VISTARANEWS.COM


on

West Bengal
Koo

ಪಶ್ಚಿಮ ಬಂಗಾಳ: ಚುನಾವಣೆ ಮುಗಿದರೂ ಪಶ್ಚಿಮ ಬಂಗಾಳ(West Bengal)ದಲ್ಲಿ ಹಿಂಸಾಚಾರ(Violence) ಮಾತ್ರ ನಿಲ್ಲುತ್ತಲೇ ಇಲ್ಲ. ನಿನ್ನೆ ತಡೆ ರಾತ್ರಿಯೂ ಭೀಕರ ಘಟನೆಯೊಂದು ನಡೆದಿದ್ದು, ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ ನಡೆದಿದೆ. ತೃಣಮೂಲ ಕಾಂಗ್ರೆಸ್‌ (TMC) ಗೂಂಡಾಗಳು ಬಿಜೆಪಿ ಕಾರ್ಯಕರ್ತನನ್ನು ಬರ್ಬರವಾಗಿ ಕೊಲೆಗೈದು ಆತನ ರುಂಡವನ್ನು ದೇಹದಿಂದ ಬೇರ್ಪಡಿಸಿ ವಿಕೃತಿ ಮೆರೆದಿದ್ದಾರೆ.

ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯ ಚಂದಾಪುರದಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ದುರ್ದೈವಿಯನನು ಹಫೀಜ್‌ ಶೇಖ್‌ ಎಂದು ಗುರುತಿಸಲಾಗಿದೆ. ಹಫೀಜ್‌ ಶೇಖ್‌ ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಗೊಂಡಿದ್ದ. ಇದೇ ಕಾರಣಕ್ಕೆ ಆತನನ್ನು ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ಅಂಗಡಿಯೊಂದ ಬಳಿ ಇದ್ದ ಹಫೀಜ್‌ ಮೇಲೆ ಬೈಕ್‌ನಲ್ಲಿ ಬಂದಿದ್ದ ಸುಮಾರು 10 ಜನ ದುಷ್ಕರ್ಮಿಗಳು ಏಕಾಏಕಿ ಗುಂಡು ಹಾರಿಸಿ ಕೊಂದಿದ್ದರು. ಬಳಿಕ ಆತನ ರುಂಡವನ್ನು ದೇಹದಿಂದ ಕತ್ತರಿಸಿ ಎಸೆದು ವೀಕೃತಿ ಮೆರೆದಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿದಾಗ ದೇಹ ಒಂದು ಕಡೆ ರುಂಡ ರಸ್ತೆ ಬದಿಯಲ್ಲಿ ಬಿದ್ದಿತ್ತು.

ಇನ್ನು ಘಟನೆ ಬಗ್ಗೆ ಹಫೀಜ್‌ನ ಸಹೋದರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಹಫೀಜ್‌ ಕ್ಯಾರಮ್‌ ಆಡುತ್ತಿದ್ದಾಗ ಅಲ್ಲಿಗೆ ಬಂದಿದ್ದ ತೃಣಮೂಲಕ ಕಾಂಗ್ರೆಸ್‌ನ ಕಾರ್ಯಕರ್ತರು ಆತನ ಮೇಲೆ ಗುಂಡು ಹಾರಿಸಿದ್ದಾರೆ. ಇದಾದ ಬಳಿಕ ಆತನ ರುಂಡವನ್ನು ಕತ್ತರಿಸಿ ಕೊಂಡೊಯ್ಯುವ ಮೂಲಕ ಕ್ರೌರ್ಯ ಮೆರೆದಿದ್ದಾರೆ. ಈ ಕೃತ್ಯವನ್ನು ಎಸಗಿದವರು ಸಮಾಜ ಘಾತುಕರು. ಅವರು ಇಷ್ಟು ಮಾತ್ರವಲ್ಲದೇ ಮತ್ತೊರ್ವ ಬಿಜೆಪಿ ಕಾರ್ಯಕರ್ತರ ಮನೆಗೆ ಬಾಂಬ್‌ ಎಸೆದಿದ್ದಾರೆ. ನನ್ನ ಸಹೋದರ ಬಹಳ ಒಳ್ಳೆಯವನು. ಖಾಸಿಂ, ಸೊಹೋಜ್‌, ನಸೀಂ, ಸೊಬುಜ್‌, ಅಲಿ, ಬಂದು ಸೇರಿದಂತೆ ಹಲವರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ನನ್ನ ಸಹೋಹರನ ಹತ್ಯೆ ಬಗ್ಗೆ ಸಿಬಿಐ ತನಿಖೆ ನಡೆಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಬಾಂಬ್‌ ಸ್ಫೋಟ

ಚುನಾವಣೆ ಮುಗಿಯುತ್ತಿದ್ದಂತೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಘರ್ಷ ಹೆಚ್ಚಾಗಿದ್ದು, ಭಾತ್ಪರಾ ಮತ್ತು ನೈಹಾತಿ ಪ್ರದೇಶಗಳಲ್ಲಿ ನಿನ್ನೆ ಬಾಂಬ್‌ ಸ್ಫೋಟಗೊಂಡಿದೆ. ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿ ಬಾಂಬ್‌ ಸ್ಫೋಟ ನಡೆಸಿದ್ದು, ಈ ಭೀಕರ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಮತ್ತೊಂದೆಡೆ ತೃಣಮೂಲ ಕಾಂಗ್ರೆಸ್‌ ಕಚೇರಿ ಎದುರೇ ಬಾಂಬ್‌ ಸ್ಫೋಟಗೊಂಡಿದೆ.

ಕಳೆದ ವಾರ ಇಂತಹದ್ದೇ ಒಂದು ಘಟನೆ ನಂದಿಗ್ರಾಮದಲ್ಲಿ ನಡೆದಿತ್ತು. ನಂದಿಗ್ರಾಮ ಜಿಲ್ಲೆಯಲ್ಲಿ ನಿನ್ನೆ ಸಂಜೆ ಬಿಜೆಪಿ ಕಾರ್ಯಕರ್ತೆಯೊಬ್ಬರ ಹತ್ಯೆ ನಡೆದಿದ್ದು, ಇದರಲ್ಲಿ ಟಿಎಂಸಿ(TMC) ಮುಖಂಡರದ್ದೇ ಕೈವಾಡ ಇದೆ ಎಂದು ಆರೋಪಿಸಿ ಬಿಜೆಪಿ(BJP) ಪ್ರತಿಭಟನೆ ನಡೆಸಿತ್ತು. ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಪರಿಸ್ಥಿತಿ ನಿಯಂತ್ರಣ ತರಲು ಪೊಲೀಸರು ಲಾಠಿಚಾರ್ಜ್‌ ಮಾಡಿದ್ದರು.

ಬಿಜೆಪಿ ಕಾರ್ಯಕರ್ತರ ಮೇಲೆ ಟಿಎಂಸಿ ಗೂಂಡಾಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ರೋತಿಬಾಲಾ ಅರಿ ಎಂಬ ಮಹಿಳೆಯ ಮೃತಪಟ್ಟಿದ್ದಾಳೆ. ಉಳಿದ ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಘಟನೆ ಖಂಡಿಸಿ ಬಿಜೆಪಿ ನಂದಿಗ್ರಾಮದಲ್ಲಿ 12ಗಂಟೆಗಳ ಕಾಲ ಬಂದ್‌ಗೆ ಕರೆಕೊಟ್ಟು ಪ್ರತಿಭಟನೆ ನಡೆಸಿದೆ. ಈ ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಉದ್ರಿಕ್ತರ ಗುಂಪು ರಸ್ತೆ ತಡೆದು ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದರು.. ಇನ್ನು ಜಿಲ್ಲೆಯ ಸೋನಾಚೂರ ಪ್ರದೇಶದಲ್ಲಿ ಹಿಂಸಾಚಾರದ ತೀವ್ರತೆ ಹೆಚ್ಚಾಗುತ್ತಿದ್ದಂತೆ ಪೊಲೀಸರು ಲಾಠಿಚಾರ್ಜ್‌ ಮಾಡಿದ್ದಾರೆ.

ಇದನ್ನೂ ಓದಿ:Assembly Election Results 2024: ಇಂದು ಅರುಣಾಚಲ ಪ್ರದೇಶ & ಸಿಕ್ಕಿಂ ರಿಸಲ್ಟ್‌; 10 ಅಭ್ಯರ್ಥಿಗಳು ಅವಿರೋಧ ಆಯ್ಕೆ

Continue Reading

ಬೆಂಗಳೂರು ಗ್ರಾಮಾಂತರ

Electric Shock: ಪಲ್ಲಕ್ಕಿ ಹೊತ್ತಿದ್ದ ಟ್ರ್ಯಾಕ್ಟರ್‌ಗೆ ಪ್ರವಹಿಸಿದ ವಿದ್ಯುತ್‌; ಕ್ಷಣಾರ್ಧದಲ್ಲೇ ಇಬ್ಬರು ಸುಟ್ಟು ಕರಕಲು

Electric Shock: ಎಲೆಕ್ಟ್ರಾನಿಕ್ ಸಿಟಿಯಲ್ಲಿ (Electronic City) ಪಲ್ಲಕ್ಕಿ ಹೊತ್ತಿದ್ದ ಟ್ರ್ಯಾಕ್ಟರ್‌ಗೆ ವಿದ್ಯುತ್‌ ತಂತಿ ಸ್ಪರ್ಶಿಸಿದ ಪರಿಣಾಮ ಇಬ್ಬರು ವ್ಯಕ್ತಿಗಳು ಸುಟ್ಟು ಕರಕಲಾಗಿದ್ದಾರೆ.

VISTARANEWS.COM


on

By

Electric shock Electronic City
Koo

ಬೆಂಗಳೂರು: ಪಲ್ಲಕ್ಕಿ ಟ್ರಾಕ್ಟರ್‌ಗೆ ವಿದ್ಯುತ್ ತಂತಿ ಸ್ಪರ್ಶಿಸಿ (Electric Shock) ಇಬ್ಬರು ದುರ್ಮರಣ ಹೊಂದಿದ್ದಾರೆ . ಈ ದಾರುಣ ಘಟನೆ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ (Electronic City) ಸಮೀಪದ ಗೊಲ್ಲಹಳ್ಳಿಯಲ್ಲಿ (Gollahalli) ನಡೆದಿದೆ. ವೀರಸಂದ್ರ ವಾಸಿ ರಂಗನಾಥ(33), ಯಾರಂಡಹಳ್ಳಿ ವಾಸಿ ಹರಿಬಾಬು(25) ಮೃತ ದುರ್ದೈವಿಗಳು.

ಗೊಲ್ಲಹಳ್ಳಿ ಗ್ರಾಮದ ಜಾತ್ರೆಯಲ್ಲಿ ಪಲ್ಲಕಿ ಉತ್ಸವದ ವೇಳೆ ಅವಘಡ ಸಂಭವಿಸಿದೆ. ಪಲ್ಲಕ್ಕಿ ಉತ್ಸವ ಮುಗಿಸಿ ವಾಪಸ್ ಬರುವಾಗ ಪಲ್ಲಕ್ಕಿಗೆ ವಿದ್ಯುತ್ ತಂತಿ ತಗುಲಿದೆ. ಈ ವೇಳೆ ಟ್ರ್ಯಾಕ್ಟರ್ ಚಲಾಯಿಸುವಾಗ ಚಾಲಕನಿಗೆ ಕರೆಂಟ್‌ ಶಾಕ್‌ ಹೊಡೆದಿದೆ. ಚಾಲಕನನ್ನು ರಕ್ಷಣೆ ಮಾಡಲು ಹೋಗಿ ಮತ್ತೊಬ್ಬನಿಗೂ ವಿದ್ಯುತ್‌ ಶಾಕ್‌ ಆಗಿದೆ.

ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಠಾಣೆ ಸಿಬ್ಬಂದಿಯಿಂದ ರಕ್ಷಣೆಗೆ ಧಾವಿಸಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಇಬ್ಬರು ಮೃತಪಟ್ಟಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ: Traffic Advisory : ಲೋಕಸಭೆ ಎಲೆಕ್ಷನ್‌ ಕೌಂಟಿಂಗ್‌; ಬೆಂಗಳೂರಲ್ಲಿ ಎಲ್ಲೆಲ್ಲಿ ವಾಹನ ನಿರ್ಬಂಧ, ಮಾರ್ಗ ಬದಲು?

ಮೈಸೂರಿನಲ್ಲಿ ಕಣ್ಣಿದ್ದು ಕುರುಡಾದ ಸೆಸ್ಕ್ ಸಿಬ್ಬಂದಿ

ಮೈಸೂರಿನಲ್ಲಿ ಸೆಸ್ಕ್ ಸಿಬ್ಬಂದಿ ಕಣ್ಣಿದ್ದು ಕುರುಡಾಗಿದ್ದಾರೆ. ವಿದ್ಯುತ್ ವೈಯರ್ ಮೇಲೆ ಒಣ ಮರ ಬಿದ್ದಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ಕಳೆದ 15 ದಿನಗಳ ಹಿಂದೆ ಬಿರುಗಾಳಿ ಸಹಿತ ಸುರಿದ ಮಳೆಗೆ ಮರ ಬಿದ್ದಿದ್ದು, ತೆರವು ಮಾಡುವಲ್ಲಿ ಸೆಸ್ಕ್ ಸಿಬ್ಬಂದಿ ಮೀನಾಮೇಷ ಎಣಿಸುತ್ತಿದ್ದಾರೆ.

ವಾಹನ ಸವಾರರ ಮೇಲೆ ಬಿದ್ದು ಅನಾಹುತ ಸಂಭವಿಸವುದಕ್ಕೂ ಮುನ್ನ ತೆರವು ಮಾಡುತ್ತಾರಾ? ಅಥವಾ ಅನಾಹುತ ಆದಮೇಲೆ ತೆರವು ಮಾಡುತ್ತಾರಾ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಮೈಸೂರಿನ ಮಾನಸ ಗಂಗೋತ್ರಿ ಟೋಲ್ ಗೇಟ್‌ನಿಂದ ಪಡುವಾರಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಘಟನೆ ನಡೆದಿದೆ. ಬಿರುಗಾಳಿಗೆ ಒಣ ಮರ ಸಂಪೂರ್ಣ ವಿದ್ಯುತ್ ತಂತಿ ಮೇಲೆ ಬಿದ್ದಿದ್ದರೂ ಯಾರೊಬ್ಬರು ತಲೆ ಕೆಡಿಸಿಕೊಂಡಿಲ್ಲ.

ಇದನ್ನೂ ಓದಿ: Drowned in Water : ನೀರಿನಲ್ಲಿ ಮುಳುಗಿ ಮುಂಬೈ ಮೂಲದ ಇಬ್ಬರು ಬಾಲಕಿಯರು ಸಾವು

Continue Reading

ಪ್ರಮುಖ ಸುದ್ದಿ

Udupi Pocso case: ಉಡುಪಿಯಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಕೇಸ್‌; 8-9 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ!

Udupi Pocso case: ವಿದ್ಯಾರ್ಥಿನಿಯರ ಮೇಲೆ ಯುವ ಉದ್ಯಮಿ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೊ ಮಾಡಿಕೊಳ್ಳುತ್ತಿದ್ದ. ಈ ಬಗ್ಗೆ ಪೋಕ್ಸೊ ಪ್ರಕರಣ ದಾಖಲಾಗುತ್ತಲೇ ಆರೋಪಿ ಪರಾರಿಯಾಗಿದ್ದಾನೆ.

VISTARANEWS.COM


on

Udupi Pocso case
Koo

ಉಡುಪಿ: ಜಿಲ್ಲೆಯಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಪ್ರಕರಣವೊಂದು (Physical Abuse) ಬೆಳಕಿಗೆ ಬಂದಿದೆ. ಯುವ ಉದ್ಯಮಿಯೊಬ್ಬ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಲೈಂಗಿಕ ದೌರ್ಜನ್ಯದ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ. ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಬಗ್ಗೆ ಪೋಕ್ಸೊ ಪ್ರಕರಣ (Udupi Pocso case) ದಾಖಲಾಗುತ್ತಲೇ ಆರೋಪಿ ಪರಾರಿಯಾಗಿದ್ದಾನೆ.

ಉದ್ಯಮಿ ಶ್ರೇಯಸ್ ನಾಯ್ಕ (25) ಆರೋಪಿ. ಬಾಲಕಿಯೊಬ್ಬಳ ಮೇಲೆ ಒಂದು ವರ್ಷದಿಂದ ಆರೋಪಿ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದ. ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಆ ದೃಶ್ಯಗಳನ್ನು ಸೆರೆಹಿಡಿದುಕೊಂಡಿದ್ದಾನೆ. ಬಾಲಕಿ ಗರ್ಭಿಣಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಮೇ 18 ರಂದು ಪೋಕ್ಸೊ ಪ್ರಕರಣ ದಾಖಲಾಗಿದ್ದು, ಸದ್ಯ ತಲೆಮರೆಸಿಕೊಂಡಿರುವ ಶ್ರೇಯಸ್‌ಗಾಗಿ ಬಂಧನಕ್ಕಾಗಿ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ.

ಶಾಲೆ, ಕಾಲೇಜು ವಿದ್ಯಾರ್ಥಿನಿಯರೇ ಈತನ ಟಾರ್ಗೆಟ್

ಶಾಲೆ, ಕಾಲೇಜು ವಿದ್ಯಾರ್ಥಿನಿಯರೇ ಆರೋಪಿ ಶ್ರೇಯಸ್‌ ಟಾರ್ಗೆಟ್ ಆಗಿದ್ದು, 8-9 ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಮಾಡಿರಬಹುದು ಎಂಬ ಶಂಕೆ ವ್ಯಕ್ಯವಾಗಿದೆ. ಸುಮಾರು 50ಕ್ಕೂ ಅಧಿಕ ಅಶ್ಲೀಲ ವಿಡಿಯೊಗಳನ್ನು ಆರೋಪಿ ಸೆರೆಹಿಡಿದ್ದಾನೆ ಎನ್ನಲಾಗಿದೆ. ವಿದ್ಯಾರ್ಥಿನಿಯರು, ಯುವತಿಯರ ಜತೆಗಿನ ವಿಡಿಯೊಗಳನ್ನು ಸೆರೆಹಿಡಿದು ತನ್ನ ಲ್ಯಾಪ್‌ಟಾಪ್‌ನಲ್ಲಿ ಆಸಾಮಿ ಇರಿಸಿಕೊಳ್ಳುತ್ತಿದ್ದ.

ಶಾಲೆ, ಕಾಲೇಜು ವಿದ್ಯಾರ್ಥಿನಿಯನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಥೇಟ್ ಪ್ರಜ್ವಲ್ ರೇವಣ್ಣ ಮಾದರಿಯಲ್ಲೇ ಈ ವಿಕೃತ ಕಾಮಿ ವಿಡಿಯೊ ಮಾಡಿಕೊಳ್ಳುತ್ತಿದ್ದ. ನಂತರ ಯುವತಿಯರನ್ನು ಬ್ಲ್ಯಾಕ್‌ಮೇಲ್‌ ಮಾಡಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದ.

ಇದನ್ನೂ ಓದಿ | Drowned in Water : ನೀರಿನಲ್ಲಿ ಮುಳುಗಿ ಮುಂಬೈ ಮೂಲದ ಇಬ್ಬರು ಬಾಲಕಿಯರು ಸಾವು

ಆರೋಪಿಯ ಲ್ಯಾಪ್‌ಟಾಪ್‌ ವಶಕ್ಕೆ ಪಡೆದ ಸೈಬರ್ ಪೊಲೀಸ್

ಆರೋಪಿ ಶ್ರೇಯಸ್‌ ಲ್ಯಾಪ್‌ಟಾಪ್‌ ಅನ್ನು ಸೈಬರ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲ್ಯಾಪ್‌ಟಾಪ್‌ಗೆ ಆರೋಪಿ ಪಾಸ್ ವರ್ಡ್ ಇಟ್ಟಿದ್ದು, ಸುಮಾರು 50ಕ್ಕೂ ಅಧಿಕ ವಿಡಿಯೊಗಳು ಇರುವ ಶಂಕೆ ವ್ಯಕ್ತವಾಗಿದೆ. ಸಂತ್ರಸ್ತೆ ಹೇಳಿಕೆ ಆಧರಿಸಿ ಆರೋಪಿ ಮನೆಯಿಂದ ಲ್ಯಾಪ್‌ಟಾಪ್‌ ವಶಕ್ಕೆ ಪಡೆಯಲಾಗಿದೆ. ಸ್ಥಳೀಯ ಶಾಲಾ, ಕಾಲೇಜಿನ 8-9 ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಶಂಕೆ ವ್ಯಕ್ತವಾಗಿದ್ದು, ಯಾರಾದರೂ ಸಂತ್ರಸ್ತೆಯರಿದ್ದಲ್ಲಿ ದೂರು ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಶ್ರೇಯಸ್ ನಾಯ್ಕ ಬಂಧನಕ್ಕೆ ದಲಿತ ಸಂಘಟನೆಗಳ ಒತ್ತಾಯ

ಉಡುಪಿಯಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಪ್ರಕರಣ ಬೆಳಿಕಿಗೆ ಬಂದ ಹಿನ್ನೆಲೆಯಲ್ಲಿ ಆರೋಪಿ ಶ್ರೇಯಸ್ ನಾಯ್ಕ (25) ಬಂಧನಕ್ಕೆ ದಲಿತ ಸಂಘಟನೆಗಳು ಒತ್ತಾಯ ಮಾಡಿವೆ. ಆರೋಪಿ ಪ್ರಭಾವಿ ಕುಟುಂಬದಿಂದ ಬಂದಿದ್ದು, ಪೊಲೀಸರ ತನಿಖೆ ಬಗ್ಗೆ ದಲಿತ ಸಂಘಟನೆಗಳು ಅಸಮಾಧಾನ ಹೊರಹಾಕಿವೆ.

ಶ್ರೇಯಸ್ ಕುಟುಂಬಸ್ಥರು ಇಲಾಖೆಯಲ್ಲಿದ್ದಾರೆ, ಈ ಕಾರಣದಿಂದ ಆತನ ರಕ್ಷಣೆ ನಡೆಯುತ್ತಿದೆ ಎಂದು ಆರೋಪಿಸಿರುವ ದಲಿತ ಸಂಘಟನೆಗಳು, ಶ್ರೇಯಸ್ ನಾಯ್ಕ ಬಗ್ಗೆ‌ ಸ್ಥಳೀಯವಾಗಿ ಹಲವು ಆರೋಪಗಳು ಇತ್ತು. ಹೀಗಾಗಿ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿವೆ.

Continue Reading
Advertisement
Assembly election 2024
ದೇಶ29 mins ago

Assembly Election Results 2024: ಅಸ್ಸಾಂ ಬಿಜೆಪಿಗೆ, ಸಿಕ್ಕಿಂನಲ್ಲಿ SKMಗೆ ಪ್ರಚಂಡ ಗೆಲುವು

MLC Election
ಕರ್ನಾಟಕ53 mins ago

MLC Election: ವಿಧಾನ ಪರಿಷತ್‌ ಚುನಾವಣೆ; ಸಿ.ಟಿ.ರವಿ, ಎನ್.ರವಿಕುಮಾರ್‌ ಸೇರಿ ಮೂವರಿಗೆ ಬಿಜೆಪಿ ಟಿಕೆಟ್‌

Actor Dhanush unveils new poster from Ilaiyaraaja biopic
ಕಾಲಿವುಡ್1 hour ago

Actor Dhanush: ಇಳಯರಾಜ ಬಯೋಪಿಕ್‌ ಹೊಸ ಪೋಸ್ಟರ್‌ ಔಟ್‌; ಸಹೋದರರು ಎಂದು ಕಮಲ್‌ ಹಾಸನ್‌ ಹೇಳಿದ್ಯಾರಿಗೆ?

Murder Case
ಚಾಮರಾಜನಗರ1 hour ago

Murder Case : ಚಾಮರಾಜನಗರದಲ್ಲಿ ಅತ್ತಿಗೆ ಮೇಲಿನ ಮೋಹಕ್ಕೆ ಅಣ್ಣನನ್ನೇ ಕೊಂದ ಕಾಮುಕ ತಮ್ಮ

Venkatesh Iyer Marriage
ಕ್ರೀಡೆ1 hour ago

Venkatesh Iyer Marriage: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ವೆಂಕಟೇಶ್​ ಅಯ್ಯರ್​

West Bengal
ದೇಶ1 hour ago

West Bengal: ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ; ಗುಂಡಿಕ್ಕಿ ಕೊಂದು, ರುಂಡ ಕಡಿದು ಒಯ್ದ ದುಷ್ಕರ್ಮಿಗಳು

Electric shock Electronic City
ಬೆಂಗಳೂರು ಗ್ರಾಮಾಂತರ2 hours ago

Electric Shock: ಪಲ್ಲಕ್ಕಿ ಹೊತ್ತಿದ್ದ ಟ್ರ್ಯಾಕ್ಟರ್‌ಗೆ ಪ್ರವಹಿಸಿದ ವಿದ್ಯುತ್‌; ಕ್ಷಣಾರ್ಧದಲ್ಲೇ ಇಬ್ಬರು ಸುಟ್ಟು ಕರಕಲು

Udupi Pocso case
ಪ್ರಮುಖ ಸುದ್ದಿ2 hours ago

Udupi Pocso case: ಉಡುಪಿಯಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಕೇಸ್‌; 8-9 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ!

Aaron Jones
ಕ್ರಿಕೆಟ್2 hours ago

Aaron Jones: 17 ವರ್ಷಗಳ ಹಿಂದಿನ ಟಿ20 ವಿಶ್ವಕಪ್​ ದಾಖಲೆ ಸರಿಗಟ್ಟಿದ ಯುಎಸ್​ಎ ಬ್ಯಾಟರ್​ ಆರೋನ್ ಜೋನ್ಸ್

Indian 2 Audio Launch Kamal Haasan Simbu Kajal Aggarwal
ಕಾಲಿವುಡ್2 hours ago

Indian 2 Audio Launch: ಅದ್ಧೂರಿಯಾಗಿ ನೆರವೇರಿತು ʼಇಂಡಿಯನ್‌ 2ʼ ಸಿನಿಮಾದ ಆಡಿಯೊ ಲಾಂಚ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ4 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು22 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌