Lakshmeshwara Town: ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್; ಅ.19ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಶ್ರೀರಾಮಸೇನೆ ಕರೆ - Vistara News

ಗದಗ

Lakshmeshwara Town: ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್; ಅ.19ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಶ್ರೀರಾಮಸೇನೆ ಕರೆ

Lakshmeshwara Town : ನ್ಯಾಯ ಕೇಳಲು ಹೋದ ಗೋಸಾವಿ ಸಮುದಾಯದ ಜನರಿಗೆ ಲಕ್ಷ್ಮೇಶ್ವರ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಲಕ್ಷ್ಮೇಶ್ವರ ಪಿಎಸ್ಐ ಈರಣ್ಣ ರಿತ್ತಿ ಅವರು ಏಕಪಕ್ಷಿಯಗಾಗಿ ನಡೆದುಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಲಾಠಿ ಚಾರ್ಜ್ ಪ್ರಕರಣ ಖಂಡಿಸಿ, ಶ್ರೀರಾಮಸೇನೆ ಲಕ್ಷ್ಮೇಶ್ವರ ಬಂದ್‌ಗೆ ಕರೆ ನೀಡಿದ್ದು, ಅಕ್ಟೋಬರ್ 19 ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್ ಮಾಡುವ ಮೂಲಕ ಪ್ರತಿಭಟನೆಗೆ ಮತ್ತಷ್ಟು ಬಿಸಿ‌ ಮುಟ್ಟಿಸಲು ಸಜ್ಜಾಗಿದೆ.

VISTARANEWS.COM


on

Gosavi samaj lathicharged Sri Ram Sene calls for bandh in Lakshmeshwara town on October 19
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗದಗ: ಲಕ್ಷ್ಮೇಶ್ವರ ಪಟ್ಟಣವನ್ನು (Lakshmeshwara Town) ಬಂದ್‌ ಮಾಡುವುದು ಖಚಿತ ಎಂದು ಶ್ರೀರಾಮ ಸೇನೆ ಪಣ ತೊಟ್ಟಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್ ಪ್ರಕರಣ ಖಂಡಿಸಿ, ಶ್ರೀರಾಮಸೇನೆ ಲಕ್ಷ್ಮೇಶ್ವರ ಬಂದ್‌ಗೆ ಕರೆ ನೀಡಿದ್ದು, ಅಕ್ಟೋಬರ್ 19 ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್ ಮಾಡುವ ಮೂಲಕ ಪ್ರತಿಭಟನೆಗೆ ಮತ್ತಷ್ಟು ಬಿಸಿ‌ ಮುಟ್ಟಿಸಲು ಸಜ್ಜಾಗಿದೆ.

ಗುರುವಾರ ಗದಗನ ಪತ್ರಿಕಾ ಭವನದಲ್ಲಿ ಈ ಕುರಿತು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಶ್ರೀರಾಮಸೇನೆ ರಾಜ್ಯ‌ ಕಾರ್ಯದರ್ಶಿ ರಾಜು ಖಾನಪ್ಪನವರ, ದಸರಾ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರಿಂದ ಗೋಸಾವಿ ಸಮಾಜದ ಯುವಕರ ಮೇಲೆ ಹಲ್ಲೆಯಾಗಿದೆ. ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್ ಆಗಿದೆ. ಇದೆಲ್ಲದಕ್ಕೂ‌ ಕಾರಣ, ಠಾಣೆಯ ಪಿಎಸ್ಐ ಈರಣ್ಣ ರಿತ್ತಿ ಆಗಿದ್ದು, ಅವರನ್ನು ಕೂಡಲೇ‌ ಅಮಾನತು ಮಾಡುವಂತೆ ಒತ್ತಾಯಿಸಿದರು.

ಇನ್ನು ಈ ಬಂದ್ ಕರೆ ವಿರೋಧಿಸಿ ಮುಸ್ಲಿಂ ಹಾಗೂ ಹಿಂದೂ ಸಮಾಜದ ಮುಖಂಡರು ಸುದ್ದಿಗೋಷ್ಠಿ ನಡೆಸಿ ವಿರೋಧ ಮಾಡಿದ್ದಾರೆ. ಆದರೆ ಅ.19 ರಂದು ಲಕ್ಷ್ಮೇಶ್ವರ ಬಂದ್ ಮಾಡೋದಕ್ಕೆ ಸ್ಥಳಿಯರೇ ನಮಗೆಲ್ಲ ಬೆಂಬಲ ನೀಡುತ್ತಿದ್ದಾರೆ. ಬಂದ್‌ಗೆ ವಿರೋಧಿಸುತ್ತಿರುವವರು ಯಾರೂ ಸಹ ಸ್ಥಳೀಯ ನಾಯಕರಲ್ಲ. ಅವರೆಲ್ಲ ಗ್ಯಾಂಬ್ಲರ್ ಗಳು. ಇವರು ಮಾಡುವ ದಂಧೆಗೆಲ್ಲ ಪಿಎಸ್ಐ ಈರಣ್ಣ ರಿತ್ತಿ ಬೆಂಬಲ ಇದೆ.‌ ಹೀಗಾಗಿ ಪಿಎಸ್‌ಐ ಪರವಾಗಿ ಇವರೆಲ್ಲ ನಿಂತಿದ್ದಾರೆ.‌ ಅದೇನೆ ಇರಲಿ,‌ ನಾವು ಮಾತ್ರ ಬಂದ್ ಮಾಡುವುದು ನೂರಕ್ಕೆ ನೂರರಷ್ಟು ಖಚಿತ ಎಂದು ಹೇಳಿದ್ದರು.

ಏನಿದು ಘಟನೆ?

ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ದಸರಾ ಅಂಗವಾಗಿ ದುರ್ಗಾದೇವಿ ಮೂರ್ತಿಯ ವಿಸರ್ಜನಾ ಮೆರವಣಿಗೆ ನಡೆಯುತ್ತಿತ್ತು. ಗೋಸಾವಿ ಸಮುದಾಯ ಸಂಭ್ರಮ ಸಡಗರದಿಂದ ಭಾಗಿಯಾಗಿದ್ದರು. ಈ ವೇಳೆ ಲಕ್ಷ್ಮೇಶ್ವರ ಪಟ್ಟಣದ ಮಾರ್ಕೆಟ್ ಪ್ರದೇಶದಲ್ಲಿ ಮೆರವಣಿಗೆ ಸಾಗುವ ವೇಳೆ,‌ ಅನ್ಯಕೋಮಿನ ಯುವಕರು ಬಂದು ಮೆರವಣಿಗೆಯಲ್ಲಿ ಭಾಗಿಯಾದ ಗೋಸಾವಿ ಯುವಕರ ನಡುವೆ ಗಲಾಟೆಯಾಗಿದೆ. ಆಗ ಗೋಸಾವಿ ಯುವಕರು ಕೇಸರಿ ಶಾಲನ್ನು ಹಿಡಿದು ಹಲ್ಲೆ ಮಾಡಿದ್ದಾರಂತೆ.

ಹೀಗಾಗಿ ಶನಿವಾರ ತಡವಾಗಿದ್ದಕ್ಕೆ ಮರುದಿನ ರವಿವಾರ, ಹಲ್ಲೆಗೊಳಗಾದ ಯುವಕರು ಹಾಗೂ ಗೋಸಾವಿ ಸಮುದಾಯದ ಜನರು ಲಕ್ಷ್ಮೇಶ್ವರ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದರು. ಆಗ ಲಕ್ಷ್ಮೇಶ್ವರ ಪೊಲೀಸರು ದೂರು ದಾಖಲು ಮಾಡಿಕೊಳ್ಳದೆ,‌ ಗೋಸಾವಿ ಸಮುದಾಯದ ಮೇಲೆ ಲಾಠಿ ಚಾರ್ಜ್ ಮಾಡಿದ್ದರಂತೆ. ಹೀಗಾಗಿ ಲಕ್ಷ್ಮೇಶ್ವರ ಪಟ್ಟಣದ ಶಿಗ್ಲಿ ಕ್ರಾಸ್ ಬಳಿ, ಗೋಸಾವಿ ಸಮುದಾಯದವರು ಲಕ್ಷ್ಮೇಶ್ವರ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದರು.

ಲಕ್ಷ್ಮೇಶ್ವರ ಪೊಲೀಸರಿಂದ ನಮಗೆ ಅನ್ಯಾಯವಾಗಿದೆ, ನ್ಯಾಯ ಕೊಡಿಸಿ ಎಂದು ಒತ್ತಾಯ ಮಾಡಿದ್ದರು. ಇನ್ನು ನ್ಯಾಯ ಕೇಳಲು ಹೋದ ಗೋಸಾವಿ ಸಮುದಾಯದ ಜನರಿಗೆ ಲಕ್ಷ್ಮೇಶ್ವರ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಲಕ್ಷ್ಮೇಶ್ವರ ಪಿಎಸ್ಐ ಈರಣ್ಣ ರಿತ್ತಿ ಅವರು ಏಕಪಕ್ಷಿಯಗಾಗಿ ನಡೆದುಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಲಕ್ಷ್ಮೇಶ್ವರ ಪೊಲೀಸರಿಂದ ನಮಗೆ ಅನ್ಯಾಯವಾಗಿದೆ ಎಂದು ಗದಗ ಎಸ್ಪಿ ಕಚೇರಿಗೆ ಗೋಸಾವಿ ಸಮುದಾಯದ, ಯುವಕರು, ಮಹಿಳೆಯರು, ಹಿರಿಯರು ಆಗಮಿಸಿದ್ದರು.

ನಾವು ಬಡ ಜನರು, ಉದ್ಯೋಗ ಮಾಡಿಕೊಂಡು ಜೀವನ ನಡೆಸುತ್ತೇವೆ. ನಾವು ಹಿಂದೂಗಳು ಹೀಗಾಗಿ ಎಲ್ಲ ಹಬ್ಬಗಳನ್ನು ಆಚರಣೆ ಮಾಡುತ್ತೇವೆ. ಆದರೆ, ಅನ್ಯಕೋಮಿನ ಯುವಕರು ನಮ್ಮ ಯುವಕರು ಹಾಕಿದ ಕೇಸರಿ ಶಾಲ್ ಹಿಡಿದು ಎಳೆದಾಡಿ ಹಲ್ಲೆ ಮಾಡಿದ್ದಾರೆ. ಆದರೆ ಹಲ್ಲೆ‌ಗೊಳಗಾದವರು ನ್ಯಾಯ ಕೇಳಲು ಹೋದರೆ ಅವರ ಮೇಲೆಯೇ ಲಾಠಿ ಚಾರ್ಜ್ ಮಾಡಿದ್ದಾರೆ. ಯುವಕರು, ಮಹಿಳೆಯರಿಗೆ ಏಟು ಬಿದ್ದಿವೆ. ನಮಗೆ ನ್ಯಾಯ ಕೊಡಿಸಿ ಎಂದು ಗದಗ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯ ಮಾಡಿದ್ದರು.

ಆದರೆ ಪೊಲೀಸರ ಹೇಳಿಕೆ‌ ಪ್ರಕಾರ, ಠಾಣೆ ಎದುರು ಗುಂಪು ಚದುರಿಸುವ ಸಲುವಾಗಿ, ಲಾಠಿ ಚಾರ್ಜ್ ಮಾಡಲಾಗಿದೆ ಎಂದು ವಾದಿಸಿದ್ದಾರೆ. ಸದ್ಯ ಎರಡು ಕಡೆ ದೂರು- ಪ್ರತಿದೂರು ದಾಖಲಿಸಿಕೊಂಡು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದೀಗ ಮುಂದುವರೆದ ಭಾಗವಾಗಿ, ಅ.19 ರಂದು ಶ್ರೀರಾಮಸೇನೆ ಸಂಘಟನೆ, ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಕರೆ ನೀಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Rain : ನಿರಂತರ ಮಳೆಗೆ ಬೆಂಗಳೂರಿಗರು ಕಂಗಾಲು; ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Karnataka Rain : ನಿರಂತರ ಮಳೆಗೆ ಬೆಂಗಳೂರಿಗರು ಕಂಗಾಲಾಗಿದ್ದಾರೆ. ನಾಳೆ ಬುಧವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Rain
Koo

ಬೆಂಗಳೂರು: ಬೆಂಗಳೂರಿನಲ್ಲಿ ಬಿಟ್ಟು ಬಿಡದೆ ಸುರಿಯುತ್ತಿರುವ ನಿರಂತರ ಮಳೆಗೆ (Karnataka Rain) ಜನರು ಕಂಗಲಾಗಿದ್ದಾರೆ. ಹೀಗಾಗಿ ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ (School Holidays) ನಾಳೆ (ಬುಧವಾರ) ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ ಡಿಸಿ ಜಗದೀಶ್ ಮಾಹಿತಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನಾಳೆ ಒಂದು ದಿನ ರಜೆ ನೀಡಲು ನಿರ್ಧಾರ ಮಾಡಲಾಗಿದೆ. ಮಳೆಯ ಸ್ಥಿತಿಗತಿ ನೋಡಿಕೊಂಡು ಮುಂದಿನ ತೀರ್ಮಾನ ಮಾಡಲಾಗುವುದು. ಖಾಸಗಿ ಹಾಗೂ ಸರ್ಕಾರಿ ಎರಡೂ ಶಾಲಾ ಕಾಲೇಜಿಗೆ ರಜೆ ನೀಡಲು ನಿರ್ಧಾರ ಮಾಡಲಾಗಿದೆ.

ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳೆಲ್ಲವೂ ಜಲಾವೃತಗೊಂಡಿದೆ. ವೈಟ್ ಫೀಲ್ಡ್‌, ಮಾರತಹಳ್ಳಿ, ಸರ್ಜಾಪುರ ಸುತ್ತಮುತ್ತ ಭಾರಿ ಮಳೆಯಾಗುತ್ತಿದೆ. ಮಳೆಯಿಂದ ರಸ್ತೆಗಳೆಲ್ಲ ಜಲಾವೃತಗೊಂಡಿದೆ. ಡ್ರೈನೇಜ್ ಪೈಪ್ ಹೊಡೆದು ರಸ್ತೆ ಮಧ್ಯೆ ಮೋರಿ ನೀರು ಹಾರಿಯುತ್ತಿದೆ. ಪರಿಣಾಮ ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು. ಇತ್ತ ಹಲಸೂರು ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದ್ದು, ಗುಪ್ತ ಲೇಔಟ್‌ನಲ್ಲಿ ಮ್ಯಾನ್ ಹೋಲ್ ಉಕ್ಕಿ ಹರಿದಿದೆ. ಭಾರಿ ಮಳೆಗೆ ಬನಶಂಕರಿ ಸಿಂಡಿಕೇಟ್ ಕಾಲೋನಿ ಸಮೀಪ ಮರವೊಂದು ನೆಲಕ್ಕೆ ಉರುಳಿದೆ. ಅದೃಷ್ಟವಶಾತ್‌ ಮಳೆ ಕಾರಣಕ್ಕೆ ಜನರ ಓಡಾಟ ಇರಲಿಲ್ಲ ಹೀಗಾಗಿ ಅನಾಹುತ ಸಂಭವಿಸಿಲ್ಲ.

ಎಲ್ಲೆಲ್ಲಿ ಎಷ್ಟು ಪ್ರಮಾಣದಲ್ಲಿ ಮಳೆ

ಹಂಪಿ ನಗರ 26 ಮಿ.ಮೀ, ಕೆಂಗೇರಿ 25.5 ಮಿ.ಮೀ, ಮಾರುತಿ ಮಂದಿರ 25 ಮಿ.ಮೀ, ದೊರೆಸಾನಿಪಾಳ್ಯ 21.5 ಮಿ.ಮೀ, ರಾಜರಾಜೇಶ್ವರಿ ನಗರ 19.5 ಮಿ.ಮೀ, ನಾಯಂಡಹಳ್ಳಿ 17 ಮಿ.ಮೀ, ನಂದಿನಿ ಲೇಔಟ್​​ 16.5 ಮಿ.ಮೀ, ಬಿಟಿಎಂ ಲೇಔಟ್​​ 16.5 ಮಿ.ಮೀ ಮಳೆಯಾಗಿದೆ.

ಡಿಸಿ ಕಚೇರಿ ಆವರಣದಲ್ಲಿರುವ ಹೋಟೆಲ್‌ಗೆ ಮಳೆ ನೀರು ನುಗ್ಗಿದ್ದರೆ, ಗುಟ್ಟಹಳ್ಳಿ ಸರ್ಕಲ್ ಬಳಿ ಚರಂಡಿ ನೀರು ತುಂಬಿ ರಸ್ತೆ ಮೇಲೆ ಹರಿಯುತ್ತಿದೆ. ಮಾನ್ಯತಾ ಟೆಕ್ ಪಾರ್ಕ್‌ನ ರಸ್ತೆಗಳಲ್ಲಿ ಮಳೆ ನೀರು ಹೊಳೆಯಂತೆ ಹರಿಯುತ್ತಿದೆ. ಟೆಕ್ ಪಾರ್ಕ್‌ನ ರಸ್ತೆಗಳೆಲ್ಲ ಜಲಾವೃತಗೊಂಡಿದೆ. ಕೋಟಿ ಕೋಟಿ ಬೆಲೆ ಬಾಳುವ ಕಾರುಗಳು ನೀರಿನಲ್ಲಿ ಮುಳುಗಡೆಯಾಗಿದೆ.

ಬೆಳ್ಳಂದೂರು ಲೇಕ್ ರಸ್ತೆಯಲ್ಲಿ ಕೆಸರು ಮಯವಾಗಿತ್ತು. ದೊಡ್ಡ ದೊಡ್ಡ ಗುಂಡಿಗಳು ಸೃಷ್ಟಿಯಾಗಿದ್ದು, ಕೆಸರಿನ ರಸ್ತೆಯಲ್ಲಿ ಸಂಚಾರಿಸಲು ವಾಹನ ಸವಾರರು ಪರದಾಡಿದರು. ಸುತ್ತ 2 ಕಿಲೋ ಮೀಟರ್ ಸಂಚಾರ ಸಾಧ್ಯ ಆಗದೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬೆಳಿಗ್ಗೆಯಿಂದ ಹಲವು ವಾಹನಗಳು ಕೆಟ್ಟು ನಿಂತು ಫಜೀತಿ ಉಂಟಾಗಿತ್ತು. ಆಳವಾದ ಗುಂಡಿ ಭಾಗಕ್ಕೆ ಬ್ಯಾರಿಕೇಡ್ ಅಳವಡಿಸಲಾಗಿತ್ತು. ರಸ್ತೆಯಲ್ಲಿ 4 ಅಡಿಯಷ್ಟು ನೀರು ನಿಂತಿತ್ತು. ಕೆ.ಆರ್ ವಿಧಾನಸಭಾ ಕ್ಷೇತ್ರದ ವಡ್ಡರಪಾಳ್ಯದ ಸಾಯಿ ಲೇಔಟ್‌ಗೆ ಮಳೆ ನೀರು ನುಗ್ಗಿದೆ. ಮಳೆ ನೀರಿನಿಂದ ಮನೆಗಳು ಜಲಾವೃತಗೊಂಡಿದ್ದವು.

karnataka Rain
karnataka Rain

ಬೆಂಗಳೂರಿನ ಶಿವಾಜಿನಗರದ, ಬ್ರಹ್ಮಕುಮಾರಿ ವೃತ್ತ , ಸೆಪ್ಪಿಂಗ್ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ರಸ್ತೆಯಲ್ಲಿ ಮೊಣಕಾಲುದ್ದ ನೀರು ತುಂಬಿದ್ದು, ಅಂಗಡಿ ಮುಂಗಟ್ಟುಗಳಿಗೆ ದೇವಸ್ಥಾನಗಳಿಗೆ ನೀರು ನುಗ್ಗಿದೆ. ವಾಹನಗಳ ಇಂಜಿನ್‌ಗೆ ನೀರು ನುಗ್ಗಿ ವಾಹನಗಳು ಕೆಟ್ಟೋ ರಸ್ತೆಯಲ್ಲೇ ನಿಂತು ಹೋಗುತ್ತಿವೆ. ಪಾಟರಿ ಟೌನ್ ಬಳಿಯ ಗಾಂಧಿ ಗ್ರಾಮದ ರಸ್ತೆಯಿಂದ ಟ್ಯಾನಿರೋಡ್‌ಗೆ ಸಂಪರ್ಕಿಸುವ ರಸ್ತೆ ಕರೆಯಂತಾಗಿದೆ. ಯಲಹಂಕದಲ್ಲಿರುವ ಕೇಂದ್ರಿಯ ವಿಹಾರ ಅಪಾರ್ಟ್ಮೆಂಟ್ ಮತ್ತೆ ಜಲಾವೃತಗೊಂಡಿದೆ.

Continue Reading

ಮಳೆ

Karnataka Rain : ಬೆಂಗಳೂರಿನಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆ; ಧರೆಗುರುಳಿದ ಬೃಹತ್‌ ಮರ, ಕಾರು ಜಖಂ

Karnataka Rain : ಬೆಂಗಳೂರಿನಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಬೃಹತ್‌ ಮರ ಧರೆಗುರುಳಿದ್ದು, ಕಾರು ಜಖಂಗೊಂಡಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಟ್ಟು ಬಿಡದೆ ಮಳೆ (Karnataka Rain) ಸುರಿಯುತ್ತಿರುವ ಕಾರಣ ದಿನ ನಿತ್ಯದ ಕೆಲಸ ಕಾರ್ಯಗಳಿಗೆ ವರುಣ ಅಡ್ಡಿಯಾಗಿದ್ದಾನೆ. ಶೇಷಾದ್ರಿಪುರಂ, ಆರ್ ಆರ್ ನಗರ, ರಾಜಾಜಿನಗರ, ಗಾಂಧಿನಗರ, ಶಾಂತಿ ನಗರ, ಮೆಜೆಸ್ಟಿಕ್‌, ಕೆ.ಆರ್‌ ಮಾರುಕಟ್ಟೆ ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದೆ.

Karnataka Rain
karnataka Rain

ಕೆಲಸ- ಕಾಲೇಜುಗಳಿಗೆ ಹೋಗುವವರಿಗೆ ಮಳೆರಾಯ ಶಾಕ್‌ ಕೊಟ್ಟಿದ್ದ. ಆಗ್ನೇಯ ಬಂಗಾಳ ಉಪಮಹಾಸಾಗರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನು ಮೂರು ದಿನ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Karnataka Rain
karnataka Rain

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು ಹಾಗೂ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ ಸೇರಿದಂತೆ ಚಾಮರಾಜನಗರ, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಉತ್ತರಕನ್ನಡಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಮೇಲಿನ ಜಿಲ್ಲೆಗಳಿಗೆ ಮಂಗಳವಾರ ಹಾಗೂ ಬುಧವಾರ ಯೆಲ್ಲೋ ಅಲರ್ಟ್ ಹಾಗೂ ಅಕ್ಟೋಬರ್ 17ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

karnataka Rain
karnataka Rain

ಮಳೆಗೆ ಧರೆಗುರುಳಿದ ಮರ, ಅಂಡರ್‌ಪಾಸ್‌ ಜಲಾವೃತ

ರಾತ್ರಿ ಶುರುವಾದ ಮಳೆಯು ಬೆಳಗಾದರೂ ಬಿಟ್ಟಿಲ್ಲ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಮೆಜೆಸ್ಟಿಕ್ ರೈಲ್ವೆ ಅಂಡರ್ ಪಾಸ್‌ ಜಲಾವೃತಗೊಂಡಿತ್ತು. ಇದರಿಂದಾಗಿ ವಾಹನ ಸವಾರರು ಪರದಾಡಿದರು. ಬೆಂಗಳೂರಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಎಚ್‌ಎಂಟಿ (HMT)ಲೇಔಟ್ ನಲ್ಲಿ ಬೃಹದಾಕಾರದ ಮರ ಧರೆಗುರುಳಿದೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಮರ ಬಿದ್ದಿದ್ದು, ಮನೆ ಮುಂದೆ ನಿಲ್ಲಿಸಿದ್ದ ಕಾರು ಜಖಂಗೊಂಡಿದೆ. 3 ತಿಂಗಳ ಹಿಂದೆ ಮರ ತೆರವು ಮಾಡುವಂತೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ.

ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ, ಹೊಸಕೋಟೆ ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ಆನೇಕಲ್, ಬನ್ನೇರುಘಟ್ಟ, ಅತ್ತಿಬೆಲೆ, ಹೊಸೂರು ಸೇರಿದಂತೆ ಹಲವೆಡೆ ಮಳೆಯಾಗಿದ್ದು, ರಸ್ತೆಯಲ್ಲಿ ಜನರು ಛತ್ರಿ ಹಿಡಿದು ಓಡಾಡುತ್ತಿರುವ ದೃಶ್ಯ ಕಂಡು ಬಂತು. ತಗ್ಗು ಪ್ರದೇಶ ಮತ್ತು ರಸ್ತೆಗಳಲ್ಲಿ ಮಳೆ ನೀರು ನಿಂತು ಅವಾಂತರವೇ ಸೃಷ್ಟಿಯಾಗಿತ್ತು.

ಮನೆಗಳಿಗೆ ನುಗ್ಗಿದ ಕೊಳಚೆ ನೀರು

ಬೆಳಗ್ಗೆಯಿಂದ ಸುರಿದ ಮಹಾ ಮಳೆಗೆ ಫ್ರೇಜರ್ ಟೌನ್ ಬಳಿ ಇರುವ ಎನ್ ಸಿ ಕಾಲೋನಿಯಲ್ಲಿ ಅವಾಂತರವೇ ಸೃಷ್ಟಿಯಾಗಿದೆ. ಬೆಂಗಳೂರಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಎನ್ ಸಿ ಕಾಲೋನಿ ಸಂಪೂರ್ಣ ಜಲಾವೃತಗೊಂಡಿದೆ. ರಾಜಕಾಲುವೆ ಉಕ್ಕಿ ಹರಿದು ಎನ್ ಸಿ ಕಾಲೋನಿಗೆ ಕೊಚ್ಚೆ ನೀರು ನುಗ್ಗಿದೆ. ನೀರು ತೆರವು ಮಾಡಲು ಸ್ಥಳೀಯ ನಿವಾಸಿಗಳ ಪರದಾಟ ಅನುಭವಿಸುತ್ತಿದ್ದಾರೆ. ರಾಜಕಾಲುವೆಗೆ ಅಂಟಿಕೊಂಡೇ ಇರುವ ಎನ್ ಸಿ ಕಾಲೋನಿ ಬಡಾವಣೆ ಇದಾಗಿದೆ. ಇನ್ನೂ ಪಣತ್ತೂರು ಅಂಡರ್ ಪಾಸ್ ನೀರು ನಿಂತಿದ್ದರಿಂದ ಸವಾರರು, ಚಾಲಕರು ಸರ್ಕಸ್‌ ಮಾಡಬೇಕಾಯಿತು

ತುಮಕೂರು, ಶಿವಮೊಗ್ಗದಲ್ಲೂ ಮಳೆ ಅಬ್ಬರ

ಕಲ್ಪತರು ನಾಡು ತುಮಕೂರಿನಲ್ಲೂ ವರುಣನ ಅಬ್ಬರ ಜೋರಾಗಿದೆ. ರಾತ್ರಿಯಿಂದಲೂ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ದೈನಂದಿನ ಕೆಲಸಕ್ಕೆ ಹೋಗುವವರ ಪರದಾಡಿದರು. ಈಗಾಗಲೇ ಜಿಲ್ಲಾಡಳಿತ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮಲೆನಾಡು ಶಿವಮೊಗ್ಗದಲ್ಲೂ ಬೆಳಗ್ಗೆಯಿಂದಲೇ ಧಾರಾಕಾರ ಮಳೆ ಸುರಿಯುತ್ತಿದೆ. ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಮಳೆಯ ಅಬ್ಬರದಿಂದ ಮತ್ತೆ ನದಿ, ಹಳ್ಳಕೊಳ್ಳಗಳು ಜೀವಕಳೆ ಪಡೆದುಕೊಂಡಿವೆ.

ಬಿರುಗಾಳಿ ಸಹಿತ ಭಾರಿ ಮಳೆಗೆ ನೆಲಕ್ಕುರುಳಿದ ಟೆಂಟ್‌

ಬಿರುಗಾಳಿ ಸಹಿತ ಭಾರೀ ಮಳೆಗೆ ಡ್ರಾಮಾ ಟೆಂಟ್ ನೆಲಕ್ಕುರುಳಿದೆ. ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಘಟನೆ ನಡೆದಿದೆ. ಚಿತ್ತರಗಿಯ ಶ್ರೀಕುಮಾರ ವಿಜಯ ನಾಟಕ ಸಂಘದ ಬೃಹತ್ ಗಾತ್ರದ ಟೆಂಟ್‌ಗೆ ಹಾನಿಯಾಗಿದೆ. ಪಟ್ಟಣದ‌ ಅನ್ನದಾನೀಶ್ವರ ಮಠದ ಜಾಗೆಯಲ್ಲಿ ಹಾಕಲಾಗಿದ್ದ ನಾಟಕದ ಬೃಹತ್ ರಂಗಮಂದಿರ‌‌ ಸಜ್ಜಿಕೆ, ಬಿರುಗಾಳಿ ಸಹಿತ ಮಳೆ ಬಂದ ಹಿನ್ನೆಲೆಯಲ್ಲಿ ರಂಗಮಂದಿರ ಧರೆಗುರುಳಿದೆ. ಅದೃಷ್ಟವಶಾತ್ ಯಾವುದೇ‌ ಪ್ರಾಣಹಾನಿ ಇಲ್ಲ. ಕಲೆಯನ್ನೇ ನಂಬಿ ಜೀವನ ಸಾಗಿಸುತ್ತಿದ್ದ ಕಲಾವಿದರ ಬದುಕು ಬೀದಿಗೆ ಬಿದ್ದಿದೆ. ನಾಟಕದ ಬ್ಯಾಗ್ರೌಂಡ್‌ ಸೀನ್ರಿ, ಸೌಂಡ್ ಸಿಸ್ಟಮ್, ಲೈಟಿಂಗ್, ಕುರ್ಚಿ ಸೇರಿದಂತೆ 12 ಲಕ್ಷಕ್ಕೂ ಹೆಚ್ಚು ಹಾನಿಯಾಗಿದೆ. ಒಂದು ಕಾರು, ಎರಡು ಬೈಕ್‌ಗಳು ಜಖಂಗೊಂಡಿದೆ. ಸಹಾಯಹಸ್ತದ ನೀರಿಕ್ಷೆಯಲ್ಲಿ ರಂಗ ಕಲಾವಿದರು ಇದ್ದಾರೆ.

ದಾವಣಗೆರೆಯಲ್ಲಿ ಮಲೆನಾಡು ವಾತಾವರಣ

ದಾವಣಗೆರೆ ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆಯಿಂದಾಗಿ ಕಳೆದ ಒಂದು ವಾರದಿಂದ ಜಿಲ್ಲೆಯ ಬಹುತೇಕ ಕಡೆ ಮಲೆನಾಡ ವಾತಾವರಣ ನಿರ್ಮಾಣವಾಗಿದೆ. ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜನರು ಮನೆ ಬಿಟ್ಟು ಹೊರಗೆ ಬಾರದಂತಾಗಿದೆ.ದಾವಣಗೆರೆ ತಾಲೂಕಿನ ಅಣ್ಣಾಪುರ, ನರಗನಹಳ್ಳಿ, ಹೊನ್ನಾಯಕನಹಳ್ಳಿ , ಸುಲ್ತಾನಿಪುರ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ನಿರಂತರ ಮಳೆಯಾಗಿದೆ. ಮಳೆಯಿಂದ ಅಡಿಕೆ ತೆಂಗಿನ ತೋಟಗಳ ರೈತರಲ್ಲಿ ಸಂತಸ ಮೂಡಿದೆ. ಜಿಲ್ಲೆಯ ಬಹುತೇಕ ನಡೆ ಕೆರೆ ಕಟ್ಟೆಗಳು ಭರ್ತಿಯಾಗಿದೆ. ಜಿಟಿ ಜಿಟಿ ಮಳೆಗೆ ದಿನ ನಿತ್ಯ ಕೆಲಸ ಕಾರ್ಯಗಳಿಗೆ ಅಡ್ಡಿಯಾಗಿದೆ. ಕಲಬುರಗಿಯಲ್ಲಿ ಮತ್ತೆ ವರುಣನ ಆಗಮನವಾಗಿದ್ದು, ಒಂದು ಗಂಟೆಯಿಂದ ಸುರಿಯುತ್ತಿದೆ. ಭಾರಿ ಗುಡುಗು ಸಮೇತ ಧಾರಾಕಾರ ಮಳೆಯಾಗುತ್ತಿದೆ. ಎರಡು ದಿನದಿಂದ ಬಿಸಿಲಿಗೆ ಬೆಂದಿದ್ದ ಕಲಬುರಗಿ ಜನತೆಗೆ ವರುಣ ತಂಪೆರದಿದ್ದಾನೆ.

ಸತತ ಮಳೆಗೆ ಬತ್ತಿದ ಕೊಳವೆಗಳಲ್ಲಿ ಚಿಮ್ಮುತ್ತಿರುವ ನೀರಿನ ಸೆಲೆ

ಕಳೆದ ಒಂದು ವಾರದಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಾವೇರಿ ಜಿಲ್ಲೆಯ ಹಲವೆಡೆ ಬತ್ತಿದ ಕೊಳವೆಗಳಲ್ಲಿ ನೀರಿನ ಸೆಲೆ ಚಿಮ್ಮುತ್ತಿದೆ. ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಚೌಡಯ್ಯಧಾನಪುರ ಗ್ರಾಮದಲ್ಲಿ ಬೊರ್ ವೆಲ್ನಿಂದ ನೀರು ಚಿಮ್ಮುತ್ತಿದೆ. ಚೌಡಯ್ಯಧಾನಪುರ ಗ್ರಾಮದ ಸಿದ್ದಪ್ಪ ದೀಪಾವಳಿ ಎಂಬುವ ರೈತರಿಗೆ ಸೇರಿದ ಬೋರ ವೆಲ್ ಇದಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಗದಗ

Darshan Fans : ದರ್ಶನ ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಸಾಹಿತಿ ನಾಡೋಜ ಡಾ. ಗೊ.ರು. ಚನ್ನಬಸಪ್ಪ

Darshan Fans : ದರ್ಶನ ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ ಎಂದು ಸಾಹಿತಿ ನಾಡೋಜ ಡಾ. ಗೊ.ರು. ಚನ್ನಬಸಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

VISTARANEWS.COM


on

By

darshan fans Writer Nadoja G.R. Channabasappa
ಸಾಹಿತಿ ನಾಡೋಜ ಡಾ. ಗೊ.ರು. ಚನ್ನಬಸಪ್ಪ
Koo

ಗದಗ: ಚಿತ್ರನಟ ದರ್ಶನ ಅಭಿಮಾನಿಗಳಿಂದಾಗಿ (Darshan Fans) ಶ್ರವಣ ಶಕ್ತಿ ಕಳೆದುಕೊಂಡೆ ಎಂದು ಹಿರಿಯ ಸಾಹಿತಿ ನಾಡೋಜ ಡಾ. ಗೊ.ರು. ಚನ್ನಬಸಪ್ಪ ಬೇಸರ ವ್ಯಕ್ತಪಡಿಸಿದರು. ನಗರದ ತೋಂಟದಾರ್ಯ ಮಠದ ಶಿವಾನುಭವ ಮಂಟಪದಲ್ಲಿ ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ ಅವರ 6ನೇ ಪುಣ್ಯಸ್ಮರಣೆ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಮರಣವೇ ಮಹಾನವಮಿ ಆಚರಣೆ ಕಾರ್ಯಕ್ರಮದಲ್ಲಿ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

Darshan Fans Writer Nadoja G.R. Channabasappa
Darshan Fans Writer Nadoja G.R. Channabasappa

ಇಂದು ಮಾಧ್ಯಮಗಳಲ್ಲಿ ಪ್ರತಿನಿತ್ಯ ಪ್ರಚಲಿತದಲ್ಲಿರುವ ಚಿತ್ರನಟ ದರ್ಶನರ ಜನ್ಮದಿನದ ಸಂದರ್ಭದಲ್ಲಿ ಬೆಂಗಳೂರಿನ ನಿವಾಸದ ಪಕ್ಕದಲ್ಲಿ ಸೇರಿದ್ದ ದರ್ಶನ ಅಭಿಮಾನಿಗಳು ಸಿಡಿಸಿದ ಭಾರಿ ಸಿಡಿಮದ್ದಿನ ಸದ್ದಿನಿಂದ ನಾನು ನನ್ನ ಶ್ರವಣ ಶಕ್ತಿಯನ್ನು ಕಳೆದುಕೊಳ್ಳಬೇಕಾಯಿತು ಎಂದು ಅಸಮಾಧಾನ ಹೊರಹಾಕಿದರು. 97ರ ವಯಸ್ಸಿನಲ್ಲೂ ಸ್ಪಷ್ಟವಾಗಿ ಮಾತನಾಡಬಲ್ಲೆ, ನಡೆದಾಡಬಲ್ಲೆನು. ಆದರೆ, ಇಂದಿನ ಕಾರ್ಯಕ್ರಮದಲ್ಲಿ ತಾವೆಲ್ಲರೂ ಮಾತನಾಡುವ ಪದಗಳನ್ನು ಕೇಳಿಸಿಕೊಳ್ಳಲಾಗದಷ್ಟು ಶ್ರವಣದೋಷವನ್ನು ಅನುಭವಿಸುತ್ತಿದ್ದೇನೆ ಎಂದರು.

Continue Reading

ಮಳೆ

Karnataka Rain : ಜಿಟಿ ಜಿಟಿ ಮಳೆಗೆ ಬೆಂಗಳೂರು ಕೂಲ್‌ ಕೂಲ್‌; ಮುಂದಿನ 4 ದಿನಗಳು ವರ್ಷಧಾರೆ

Karnataka Rain : ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯ ಸಿಂಚನವಾಗಲಿದೆ. ಸೋಮವಾರ ಬೆಳಗಿನಂದಲೇ ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದ್ದು, ವಾತಾವರಣ ಕೂಲ್‌ ಆಗಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವೆಡೆ ಜಿಟಿ ಜಿಟಿ ಮಳೆಯಾಗುತ್ತಿದ್ದು, ವಾತಾವರಣ ಕೂಲ್‌ ಆಗಿದೆ. ಮಲ್ಲೇಶ್ವರಂ, ಶಾಂತಿನಗರ, ಶಿವಾಜಿನಗರ, ಹೆಬ್ಬಾಳ, ಜಯನಗರ ಸೇರಿದಂತೆ ನಸುಕಿನ ಜಾವದಿಂದ ಮಳೆ ಶುರುವಾಗಿದೆ. ಹಲವೆಡೆ ಮಂಜಿ ಹೊದಿಕೆ ಇದ್ದು, ದಿನವಿಡಿ ಇದೇ ರೀತಿಯ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ. ಮುಂದಿನ ನಾಲ್ಕು ದಿನ ಬೆಂಗಳೂರಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 17ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಕುರಿತು ಹವಾಮಾನ ಇಲಾಖೆಯು ಮಾಹಿತಿ ನೀಡಿದೆ.

Road Accident in chikkmagaluru
Road Accident in chikkmagaluru

ಮಳೆಗೆ ರಸ್ತೆ ತಿರುವಿನಲ್ಲಿ ಟಿಟಿ ವಾಹನ ಪಲ್ಟಿ

ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾಗಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಸಂಪಿಗೆಖಾನ್ ಬಳಿ ಘಟನೆ ನಡೆದಿದೆ. ಟಿಟಿ ವಾಹನದಲ್ಲಿ ಬೆಂಗಳೂರಿನಿಂದ ಹೊರನಾಡಿಗೆ ಬಂದಿದ್ದರು. ಅನ್ನಪೂರ್ಣೇಶ್ವರಿ ದರ್ಶನ ಮುಗಿಸಿ ಹೊರಟಾಗ ಅವಘಡ ಸಂಭವಿಸಿದೆ. 15 ಜನ ಪ್ರಯಾಣಿಕರಲ್ಲಿ 9 ಜನರಿಗೆ ಗಾಯವಾಗಿದ್ದು ಕಳಸ, ಮೂಡಿಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಳೆ ಹಾಗೂ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಲಾರದಲ್ಲೂ ಮಳೆಯಾಟ

ಬಂಗಾಳ ಕೊಲ್ಲಿ ಸೈಕ್ಲೋನ್ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯಿಂದ ಕೃಷಿ ಚಟುವಟಿಕೆಗೆ ಅಡ್ಡಿಯಾಗಿದೆ. ಇನ್ನೂ ಮೂರು ದಿನಗಳ‌ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡಿನ, ಆಂಧ್ರಪ್ರದೇಶದ ಗಡಿಗೆ ಹೊಂದಿರುವ ಕೋಲಾರದಲ್ಲಿ ಮಳೆಯಾಗುವ ಮುನ್ಸೂಚನೆ ಇದ್ದು, ಮಳೆ ಹೆಚ್ಚಾದರೆ ತೋಟಗಾರಿಕ ಬೆಳೆಗಳಾದ ಹೂ , ಬಿನ್ಸ್ ,ಟೊಮ್ಯಾಟೊ, ಜೋಳಕ್ಕೆ ಹಾನಿಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Gosavi samaj lathicharged Sri Ram Sene calls for bandh in Lakshmeshwara town on October 19
ಗದಗ5 ಗಂಟೆಗಳು ago

Lakshmeshwara Town: ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್; ಅ.19ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಶ್ರೀರಾಮಸೇನೆ ಕರೆ

A man killed his wife and her lover then committed suicide
ಬೆಂಗಳೂರು7 ಗಂಟೆಗಳು ago

Murder Case: ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತ್ನಿ ಲಾಕ್‌; ಇಬ್ಬರನ್ನು ಕೊಂದು ಪತಿ ಸೂಸೈಡ್‌

Parvati Nair to play dual role in suspense thriller un Paravail Tamil film
ಸಿನಿಮಾ8 ಗಂಟೆಗಳು ago

Parvati Nair : ಸಸ್ಪೆನ್ಸ್ ಥ್ರಿಲ್ಲರ್‌ ʻಊಣ್‌ ಪರವೈಲ್‌ʼ ತಮಿಳು ಚಿತ್ರದಲ್ಲಿ ಪಾರ್ವತಿ ನಾಯರ್‌ ದ್ವಿಪಾತ್ರದಲ್ಲಿ ಮಿಂಚಿಂಗ್‌

ಬೆಂಗಳೂರು10 ಗಂಟೆಗಳು ago

Bengaluru Airport : ಬೆಂಗಳೂರು ಏರ್‌ಪೋರ್ಟ್‌ನ 17.7 ಎಕರೆಗಳಲ್ಲಿ ತಲೆ ಎತ್ತಲಿದೆ ಬಿಸಿನೆಸ್‌ ಪಾರ್ಕ್‌

Jio Cloud PC to turn home TV into computer
ಹೊಸ ಸುದ್ದಿ10 ಗಂಟೆಗಳು ago

Jio Cloud PC : ಮನೆಯ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸಲಿದೆ ‘ಜಿಯೋ ಕ್ಲೌಡ್ ಪಿಸಿ’

Dina Bhavishya
ಭವಿಷ್ಯ10 ಗಂಟೆಗಳು ago

Dina Bhavishya : ಕುಟುಂಬದ ಸದಸ್ಯರಿಂದ ರಹಸ್ಯ ಸುದ್ದಿಯೊಂದು ಈ ರಾಶಿಯವರಿಗೆ ಅಚ್ಚರಿ ತರಲಿದೆ

dina bhavishya
ಭವಿಷ್ಯ2 ದಿನಗಳು ago

Dina Bhavishya : ಬಹುದಿನಗಳ ಕನಸು ನನಸಾಗುವ ಸಮಯವಿದು; ಹೊಸ ಅವಕಾಶಗಳು ಗರಿಗೆದರಲಿವೆ

karnataka Rain
ಮಳೆ2 ದಿನಗಳು ago

Karnataka Rain : ನಿರಂತರ ಮಳೆಗೆ ಬೆಂಗಳೂರಿಗರು ಕಂಗಾಲು; ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Actor Darshan
ಬೆಂಗಳೂರು2 ದಿನಗಳು ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೇಲ್‌ ಕನಸು ನಚ್ಚು ನೂರು; ನಟ ದರ್ಶನ್‌ ಜಾಮೀನು ನಿರಾಕರಣೆಗೆ ಕೋರ್ಟ್‌ ಕೊಟ್ಟ 9 ಕಾರಣಗಳು

Karnataka Rain
ಮಳೆ2 ದಿನಗಳು ago

Karnataka Rain : ಬೆಂಗಳೂರಿನಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆ; ಧರೆಗುರುಳಿದ ಬೃಹತ್‌ ಮರ, ಕಾರು ಜಖಂ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌