Site icon Vistara News

Murder Case : ರಾಡ್‌ನಿಂದ ಹೊಡೆದು ತಂದೆಯನ್ನೇ ಕೊಂದರು ಕ್ರೂರಿ ಮಕ್ಕಳು

Childrens who killed their father For money

ಗದಗ: ತಂದೆಯನ್ನು ಮನೆಯಲ್ಲಿ ಕೂಡಿಹಾಕಿ ರಾಡಿನಿಂದ ಹೊಡೆದು ಮಕ್ಕಳೇ ಕೊಂದು (Murder case) ಹಾಕಿದ್ದಾರೆ. ಹಣ ಹಂಚಿಕೆ ವಿಚಾರಕ್ಕೆ ತಂದೆ ಹಾಗೂ ಮಕ್ಕಳ ನಡುವೆ ತಗಾದೆ ಶುರುವಾಗಿ, ಸಿಟ್ಟಾದ ಮೊದಲೇ ಹೆಂಡ್ತಿ ಮಕ್ಕಳು ತಂದೆಗೆ ರಾಡ್‌ನಿಂದ ಹಲ್ಲೆ ಮಾಡಿದ್ದಾರೆ. ತೀವ್ರ ಗಾಯಗೊಂಡ ವಿವೇಕಾನಂದ ಕರಿಯಲ್ಲಪ್ಪನವರ (52) ಗದಗ ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಲಕ್ಕುಂಡಿ ಗ್ರಾಮದ ವಿವೇಕಾನಂದ ಕರಿಯಲ್ಲಪ್ಪನವರ ಅವರಿಗೆ ಇಬ್ಬರು ಹೆಂಡತಿಯರು. ಮೊದಲನೇ ಹೆಂಡತಿ ಕಸ್ತೂರೆಮ್ಮಳಿಗೆ ಪ್ರಕಾಶ, ಮಲ್ಲೇಶ ಎಂಬ ಇಬ್ಬರು ಪುತ್ರರಿದ್ದಾರೆ. ಇತ್ತೀಚೆಗೆ ವಿವೇಕಾನಂದ ತಮ್ಮ 6 ಎಕರೆ ಜಮೀನಿನಲ್ಲಿ ಮೂರು ಎಕರೆ ಭೂಮಿಯನ್ನು ಮಾರಾಟ ಮಾಡಿದ್ದರು. ಜಮೀನು ಮಾರಾಟ ಮಾಡಿ ಬಂದ 1.30 ಲಕ್ಷ ರೂಪಾಯಿ ಹಣ ಹಂಚಿಕೆ ಮಾಡಿದ್ದರು. ಈ ವಿಷಯಕ್ಕೆ ಮೊದಲ ಹೆಂಡತಿ ಮಕ್ಕಳೊಟ್ಟಿಗೆ ಗಲಾಟೆ ನಡೆದಿತ್ತು.

ಎರಡನೇ ಪತ್ನಿ ರೇಖಾ ಜಮೀನಿಗೆ ತೆರಳಿದ್ದಾಗ ಬೆಳಗಿನ ಜಾವ ಮನೆಗೆ ಬಂದ ಪ್ರಕಾಶ ಹಾಗೂ ಮಲ್ಲೇಶ ತಂದೆ ವಿವೇಕಾನಂದನನ್ನು ಕೂಡಿಹಾಕಿ ರಾಡ್‌ನಿಂದ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡಿದ್ದ ವಿವೇಕಾನಂದ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ರವಾನಿಸಲು ಮುಂದಾಗಿದ್ದಾರೆ. ಆದರೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯದಲ್ಲಿ ವಿವೇಕಾನಂದ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಗದಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ತಂದೆ ಪಾಲಿಗೆ ಮಕ್ಕಳೇ ಹಂತಕರಾಗಿದ್ದಕ್ಕೆ ಗ್ರಾಮಸ್ಥರು ಕಿಡಿಕಾರಿದ್ದಾರೆ.

ಇದನ್ನೂ ಓದಿ: Gitam University : ಗೀತಂ ಯೂನಿರ್ವಸಿಟಿಯಲ್ಲಿ ಸ್ಟೂಡೆಂಟ್ಸ್‌ ಸೂಸೈಡ್‌! 7 ಮಂದಿ ವಿರುದ್ಧ ಎಫ್‌ಐಆರ್‌

Murder Case : ಬೆಂಗಳೂರಲ್ಲಿ ವಿದೇಶಿ ಮಹಿಳೆ ಅನುಮಾನಾಸ್ಪದ ಸಾವು; ಉಸಿರುಗಟ್ಟಿಸಿ ಕೊಂದನೇ ಹಂತಕ!

ಬೆಂಗಳೂರು: ವಿದೇಶಿ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಮೇಲ್ನೋಟಕ್ಕೆ ಹಂತಕರು ಉಸಿರುಗಟ್ಟಿಸಿ ಕೊಲೆ ಮಾಡಿರುವ (Murder Case) ಶಂಕೆ ವ್ಯಕ್ತವಾಗಿದೆ. ಉಜ್ಬೇಕಿಸ್ತಾನ ಮೂಲದ ಜರೀನಾ ಮೃತ ದುರ್ದೈವಿ.

ಬೆಂಗಳೂರಿನ ಬಿಡಿಎ ಮೇಲ್ಸೇತುವೆ ಸಮೀಪದ ಖಾಸಗಿ ಹೋಟೆಲ್‌ನ ಎರಡನೇ ಮಹಡಿಯ ಕೊಠಡಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಟೂರಿಸ್ಟ್ ವೀಸಾದಡಿ ಜರೀನಾ ನಾಲ್ಕು ದಿನಗಳ ಹಿಂದಷ್ಟೇ ರಾಜಧಾನಿ ಬೆಂಗಳೂರಿಗೆ ಬಂದಿದ್ದರು. ನಿನ್ನೆ ರೂಮಿನೊಳಗೆ ಹೋದ ಜರೀನಾಯಿಂದ ಯಾವುದೇ ಪ್ರತಿಕ್ರಿಯೆ ಇರಲಿಲ್ಲ.

ಹೀಗಾಗಿ ಅನುಮಾನಗೊಂಡು ಹೋಟೆಲ್‌ ಸಿಬ್ಬಂದಿ ಬುಧವಾರ ಸಂಜೆ 4.30ರ ಸುಮಾರಿಗೆ ಪರಿಶೀಲನೆಗೆ ಮುಂದಾಗಿದ್ದಾರೆ. ಮಾಸ್ಟರ್ ಕೀ ಮೂಲಕ ರಾತ್ರಿ ರೂಂನ ಬಾಗಿಲು ತೆರೆದು ನೋಡಿದಾಗ ಶವವಾಗಿ ಪತ್ತೆಯಾಗಿದ್ದಾಳೆ. ಜರೀನಾ ದೇಹದ ಮೇಲೆ ಗಾಯದ ಕಲೆಗಳು ಇರುವುದು ಬೆಳಕಿಗೆ ಬಂದಿದೆ. ಕೂಡಲೇ ಹೋಟೆಲ್‌ ಸಿಬ್ಬಂದಿ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಎಫ್ಎಸ್ಎಲ್, ಬೆರಳಚ್ಚು ಹಾಗೂ ಶ್ವಾನದಳ ದೌಡಾಯಿಸಿದೆ. ಶೇಷಾದ್ರಿಪುರಂ ಪೊಲೀಸರು ಮಹಿಳೆ ತಂಗಿದ್ದ ಕೊಠಡಿಯಲ್ಲಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳಕ್ಕೆ ಕೇಂದ್ರ ವಿಭಾಗ ಡಿಸಿಪಿ ಶೇಖರ್, ಸಿಎಆರ್‌ಡಿಸಿಪಿ ಅರುಣಾಂಶು ಗಿರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೋಟೆಲ್‌ನ ದಾಖಲಾತಿ ಪುಸ್ತಕ, ಸಿಸಿಟಿವಿ ಹಾಗೂ ಯಾರೆಲ್ಲ ಹೋಟೆಲ್‌ಗೆ ಬಂದು ಹೋಗಿದ್ದಾರೆ ಎಂಬುದರ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ.

ಖಾಸಗಿ ಹೋಟೆಲ್ ಮ್ಯಾನೇಜರ್ ಕೊಟ್ಟ ದೂರಿನ ಆಧಾರದ ಮೇಲೆ ಶೇಷಾದ್ರಿಪುರಂ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಉಸಿರುಗಟ್ಟಿಸಿ ಕೊಲೆ ಮಾಡಿರುವ ಶಂಕೆ ಇರುವುದರಿಂದ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ.

ಇದನ್ನೂ ಓದಿ: Viral Video: ಥೂ ಅಸಹ್ಯ! ಹಣಕ್ಕಾಗಿ ವಿದ್ಯಾರ್ಥಿಗಳಿಂದ ದಾನಿಗಳ ಕಾಲು ನೆಕ್ಕಿಸಿದ ಶಾಲಾ ನಿರ್ವಾಹಕರು

ರಕ್ತಮಯವಾಗಿ ಅಂಗಾತ ಬಿದ್ದಿದ್ದ ಜರೀನಾ

ಹೋಟೆಲ್‌ ಜನರಲ್ ಮ್ಯಾನೇಜರ್ ಗೌರವ್ ಕುಮಾರ್ ಸಿಂಗ್‌ ನೀಡಿದ ದೂರಿನ ಮೇರೆಗೆ ಶೇಷಾದ್ರಿಪುರಂ ಠಾಣೆಯಲ್ಲಿ ಐಪಿಸಿ ಸೆಕ್ಷನ್ 302 ರಡಿಯಲ್ಲಿ ಎಫ್.ಐ.ಆರ್ ದಾಖಲಾಗಿದೆ. ಕಳೆದ‌ ಮಾ. 5 ರಂದು ಬ್ರೋಕರ್ ರಾಹುಲ್ ಕುಮಾರ್‌ ಎಂಬಾತ ಮುಖಾಂತರ ಜರೀನಾ ಹೋಟೆಲ್‌ ರೂಂ‌ಮ್‌ ನಂಬರ್ 216ರಲ್ಲಿ‌ ತಂಗಿದ್ದಳು. ದಿನಕ್ಕೆ 5,500 ರಂತೆ ರಾಹುಲ್‌ ಮಾ.16 ರವರಗೆ ಹೊಟೇಲ್ ರೂಂ ಬಾಡಿಗೆಗೆ ಬುಕ್ ಮಾಡಿದ್ದ.

ನಿನ್ನೆ ಬುಧವಾರ ಮಧ್ಯಾಹ್ನ ಹೊಟೇಲ್ ಸಿಬ್ಬಂದಿಗೆ ಜರೀನಾ ಬಾಡಿಗೆ ಹಣವನ್ನು ನೀಡಿ ರೂಂಗೆ ಹೋಗಿದ್ದಳು. ರಾತ್ರಿ 10.30ರ ಹೊತ್ತಿಗೆ ಕರೆ ಮಾಡಿದ್ದ ವ್ಯಕ್ತಿಯೊಬ್ಬ ಜರೀನಾ ಕರೆ ಸ್ವೀಕರಿಸುತ್ತಿಲ್ಲ ಎಂದು ಸಿಬ್ಬಂದಿಗೆ ತಿಳಿಸಿದ್ದರು. ಹೌಸ್ ಕಿಪಿಂಗ್ ಸಿಬ್ಬಂದಿ ತೆರಳಿ ಗಮನಿಸಿದಾಗ ಮಹಿಳೆ ಬಾಗಿಲು ತೆರೆಯುತ್ತಿಲ್ಲಾ ಎಂದು ಮಾಹಿತಿ ನೀಡಿದ್ದ. ಈ ಬಗ್ಗೆ ರಾಹುಲ್‌ಗೆ ತಿಳಿಸಿದ್ದ ಹೊಟೇಲ್ ಸಿಬ್ಬಂದಿ ನಂತರ ಮಾಸ್ಟರ್ ಕೀ ಬಳಸಿ ರೂಂ ಬಾಗಿಲು ತೆರೆದಿದ್ದಾರೆ. ರೂಂ ತೆರೆದಾಗ ನೆಲದ ಮೇಲೆ ಅಂಗಾತವಾಗಿ ಬಿದ್ದಿದ್ದ ಜರೀನಾ ಮುಖದಲ್ಲಿ ಸಣ್ಣಪುಟ್ಟ ಗಾಯಗಳಿಂದ ರಕ್ತಮಯವಾಗಿದ್ದು ಕಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version