Doctor Negligence: ರೋಗಿ ಸಾವು, ವೈದ್ಯರ ಮೇಲೆ ಆಕ್ರೋಶ, ಕಲ್ಲು ತೂರಾಟ - Vistara News

ಗದಗ

Doctor Negligence: ರೋಗಿ ಸಾವು, ವೈದ್ಯರ ಮೇಲೆ ಆಕ್ರೋಶ, ಕಲ್ಲು ತೂರಾಟ

ಮೊದಲೇ ಸಾವನ್ನಪ್ಪಿದ್ದ ರೋಗಿಯನ್ನು ಬದುಕಿದ್ದಾನೆ ಎಂದು ಸುಳ್ಳು ಹೇಳಿ ಐಸಿಯುನಲ್ಲಿ ಇಟ್ಟುಕೊಂಡಿದ್ದಾರೆ. ಹಣ ಪೀಕಲು ರೋಗಿಗೆ ಚಿಕಿತ್ಸೆ ನೀಡುವ ನಾಟಕವನ್ನು ವೈದ್ಯರು ಮಾಡಿದ್ದರು ಎಂದು ರೋಗಿಯ ಸಂಬಂಧಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Doctor Negligence in gadag
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗದಗ: ವೈದ್ಯರ ನಿರ್ಲಕ್ಷ್ಯದಿಂದ ರೋಗಿ ಸಾವಿಗೀಡಾಗಿದ್ದಾನೆ ಎಂದು ರೋಗಿಯ ಸಂಬಂಧಿಕರು ಆರೋಪಿಸಿ, ರೊಚ್ಚಿಗೆದ್ದು ಆಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಗದಗ ನಗರದ ಬೆಟಗೇರಿಯಲ್ಲಿ ನಡೆದಿದೆ.

ಗದಗ ನಗರದ ಬೆಟಗೇರಿ ಜರ್ಮನ್ ಆಸ್ಪತ್ರೆಯಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ಇಸ್ಮಾಯಿಲ್ ಡಂಬಳ ಎಂಬ ವ್ಯಕ್ತಿ‌ ನ್ಯುಮೋನಿಯಾದಿಂದ ಬಳಲುತ್ತಿದ್ದ. ನಾಲ್ಕು‌ ದಿನಗಳ ಹಿಂದೆ ಜರ್ಮನ್ ಆಸ್ಪತ್ರೆಗೆ ದಾಖಲಾಗಿದ್ದ. ರೋಗಿ ಗುಣವಾಗುತ್ತಾನೆ ಎಂದು ನಾಲ್ಕು ದಿನಗಳಿಂದ ಐಸಿಯುನಲ್ಲಿ‌ ಚಿಕಿತ್ಸೆ ನೀಡುತ್ತಿದ್ದರು. ಆದರೆ ನಾಲ್ಕು ದಿನಗಳಿಂದ ರೋಗಿಯನ್ನು ನೋಡಲು ಸಂಬಂಧಿಕರಿಗೆ ಬಿಟ್ಟಿರಲಿಲ್ಲ. ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ಹೋಗಲು ಅಂಬ್ಯುಲೆನ್ಸ್ ತಯಾರಿ ಮಾಡುತ್ತಿದ್ದಂತೆ ರೋಗಿ ಸಾವನ್ನಪ್ಪಿದ್ದಾನೆ ಎಂದು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ.

ಮೊದಲೇ ಸಾವನ್ನಪ್ಪಿದ್ದ ರೋಗಿಯನ್ನು ಬದುಕಿದ್ದಾನೆ ಎಂದು ಸುಳ್ಳು ಹೇಳಿ ಐಸಿಯುನಲ್ಲಿ ಇಟ್ಟುಕೊಂಡಿದ್ದಾರೆ. ಹಣ ಪೀಕಲು ರೋಗಿಗೆ ಚಿಕಿತ್ಸೆ ನೀಡುವ ನಾಟಕವನ್ನು ವೈದ್ಯರು ಮಾಡಿದ್ದರು ಎಂದು ರೋಗಿಯ ಸಂಬಂಧಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆ ಎದುರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಂಬಂಧಿಕರು, ಕಲ್ಲು ತೂರಾಟ ನಡೆಸಿ ಆಸ್ಪತ್ರೆಯಲ್ಲಿನ ಕಿಟಕಿ ಗಾಜು ಪುಡಿ ಮಾಡಿದ್ದಾರೆ. ನಂತರ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಮುಂದಾಗಿದ್ದಾರೆ. ರೋಗಿಯ ಸಂಬಂಧಿಕರ ಮೇಲೂ ಆಸ್ಪತ್ರೆಯ ಮಕ್ಕಳ ವಾರ್ಡ್ ಜಖಂಗೊಳಿಸಿದ ಆರೋಪ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ: Doctor Negligence: ಓವರ್‌ ಡೋಸ್‌ನಿಂದ 6 ತಿಂಗಳ ಮಗು ಸಾವು; ವೈದ್ಯರ ನಿರ್ಲಕ್ಷ್ಯಕ್ಕೆ ಪೋಷಕರು ಕಿಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮಳೆಗಾಗಿ ಕಪ್ಪೆಗಳಿಗೆ ಮದುವೆ; ಶಾಖದ ಹೊಡೆತಕ್ಕೆ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka weather Forecast : ಮಳೆಗಾಗಿ (Rain News) ಕಸರತ್ತು ಶುರುವಾಗಿದ್ದು ಮೈಸೂರಲ್ಲಿ ಕಪ್ಪೆಗಳಿಗೆ ಮದುವೆ ಮಾಡಲಾಗಿದೆ. ತೊಪ್ಪೆಯಾಗುವಂತೆ ಮಳೆ ಹೊಯ್ಯಲೆಂದು ಕಪ್ಪೆಗಳ ಕಟ್ಟಿಕೊಂಡು ಬಂದು ಗ್ರಾಮಸ್ಥರು ತಾಳಿ ಕಟ್ಟಿಸಿದ್ದಾರೆ. ಇತ್ತ 6 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಪ್ಪಳಿಸಲಿದ್ದು, ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ ಘೋಷಿಸಿದೆ.

VISTARANEWS.COM


on

By

karnataka weather Forecast
Koo

ಮೈಸೂರು/ಬೆಂಗಳೂರು: ಮಳೆ ಆಗದೆ ನೀರಿಗಾಗಿ ಎಲ್ಲಿಲ್ಲದ ಸಂಕಷ್ಟ ಎದುರಾಗುತ್ತಿದ್ದು, ಜನರು ಮಳೆಗಾಗಿ ದೇವರಲ್ಲಿ ಮೊರೆ ಹೋಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಒಂದೊಂದು ಕಡೆ ಒಂದೊಂದು ಸಂಪ್ರದಾಯಗಳೂ ಚಾಲ್ತಿಯಲ್ಲಿವೆ. ಈಗ ಮೈಸೂರಿನ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮಳೆಗಾಗಿ ಕಪ್ಪೆಗಳಿಗೆ ಮದುವೆ ಮಾಡಿದ್ದಾರೆ. ಮಳೆ ಬಾರದಿರುವ ಸಂಕಟದ (Karnataka Weather Forecast) ಮಧ್ಯೆ ಮಳೆ ಬರಲಿ (Rain News), ವರುಣ ದೇವ ಸಂತುಷ್ಟಗೊಳ್ಳಲಿ, ದಿನವೂ ಮೈ ತೊಪ್ಪೆಯಾಗುವಷ್ಟು ಮಳೆ ಸುರಿಯಲಿ, ಕೃಷಿ ಚಟುವಟಿಕೆಗೆ ತೊಂದರೆಯಾಗದಿರಲಿ, ಭೂತಾಯಿಗೆ ಬೇಕಾಗುವಷ್ಟು ಮಳೆ ಸುರಿಯಲಿ, ಅಂತರ್ಜಲ ಪೂರ್ಣಗೊಳ್ಳಲಿ, ನದಿ, ಹಳ್ಳಕೊಳ್ಳಗಳು ತುಂಬಿಕೊಳ್ಳಲಿ ಎಂದು ಪ್ರಾರ್ಥನೆ ಮಾಡಿದ್ದಾರೆ. ಬಿಸಿಲಿನ ಬೇಗೆಗೆ ತತ್ತರಿಸಿದ ಜನರು ಮಳೆ ಸುರಿಯುವಂತೆ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದರು. ಗ್ರಾಮದ ಬೀದಿ ಬೀದಿಗಳಲ್ಲಿ ಕಪ್ಪೆಗಳ ಮೆರವಣಿಗೆ ಮಾಡಿ ತಮಟೆ ಬಾರಿಸಿದ್ದಾರೆ. ಹುಯ್ಯೋ ಹುಯ್ಯೋ ಮಳೆರಾಯ ಬಾಳೆ ತೋಟಕ್ಕೆ ನೀರಿಲ್ಲ ಎಂದು ಘೋಷಣೆ ಕೂಗಿದರು.

ಇದನ್ನೂ ಓದಿ: Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

ಮುಂದುವರಿಯಲಿದೆ ಒಣಹವೆ

ರಾಜ್ಯಾದ್ಯಂತ ಇನ್ನೆರಡು ದಿನಗಳು ಒಣಹವೆ ಇರುವ ಸಾಧ್ಯತೆ ಇದೆ. ಏ.2-3ರಂದು ಶುಷ್ಕ ವಾತಾವರಣ ಇದ್ದರೆ, ಏಪ್ರಿಲ್‌ 4ರಂದು ಚಾಮರಾಜನಗರದಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಶಾಖದ ಅಲೆಯ ಎಚ್ಚರಿಕೆ

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ.

ರಾತ್ರಿ ಬೆಚ್ಚನೆಯ ವಾತಾವರಣ

ಮುಂದಿನ 5 ದಿನಗಳವರೆಗೆ ಕರ್ನಾಟಕದ ಉತ್ತರ ಒಳಭಾಗದಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮೇ 5ರಂದು ಉತ್ತರ ಕನ್ನಡ ಬಿಸಿ ಮತ್ತು ಆರ್ದ್ರತೆಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

6 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Lok Sabha Election 2024: ಮೋದಿಯವರ ವಿಕಸಿತ ಭಾರತ ಸಾಕಾರಗೊಳಿಸಲು ಬೊಮ್ಮಾಯಿಯವರನ್ನು ಗೆಲ್ಲಿಸಿ: ಜೆಪಿ ನಡ್ಡಾ

Lok Sabha Election 2024: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರ ಪರ ಬ್ಯಾಡಗಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬೃಹತ್ ರೋಡ್ ಶೋ‌ ನಡೆಸಿ, ಮತಯಾಚನೆ ನಡೆಸಿದರು.

VISTARANEWS.COM


on

BJP National President JP Nadda Election Campaign for Haveri Gadag Lok Sabha Constituency BJP Candidate Basavaraj Bommai
Koo

ಹಾವೇರಿ (ಬ್ಯಾಡಗಿ): ಪ್ರಧಾನಿ ನರೇಂದ್ರ‌ ಮೋದಿಯವರ (PM Narendra Modi) ವಿಕಸಿತ ಭಾರತದ ಕನಸು ಸಾಕಾರಗೊಳಿಸಲು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರನ್ನು ಗೆಲ್ಲಿಸಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಕರೆ (Lok Sabha Election 2024) ನೀಡಿದ್ದಾರೆ.

ಬ್ಯಾಡಗಿಯಲ್ಲಿ ಬಸವರಾಜ ಬೊಮ್ಮಾಯಿಯವರ ಪರ ಬೃಹತ್ ರೋಡ್ ಶೋ‌ ನಡೆಸಿ, ಮತಯಾಚಿಸಿ ಮಾತನಾಡಿದ ಅವರು, ನಿಮ್ಮ ಉತ್ಸಾಹ ನೋಡಿದರೆ ಬೊಮ್ಮಾಯಿಯವರನ್ನು ಸಂಸತ್ ಸದಸ್ಯರನ್ನಾಗಿ ಮಾಡುವ ತೀರ್ಮಾನ ಮಾಡಿದ್ದೀರಿ. ಇದು ಬೊಮ್ಮಾಯಿಯವರ ಚುನಾವಣೆಯಲ್ಲ. ಮೋದಿಯವರು ವಿಕಸಿತ ಭಾರತ ಮಾಡಲು ಚುನಾವಣೆ ನಡೆಯುತ್ತಿದೆ. ಅವರನ್ನು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿ ಕಳುಹಿಸುವಂತೆ ಮನವಿ ಮಾಡಿದರು.

ಇದನ್ನೂ ಓದಿ: RBI Guideline: ಬ್ಯಾಂಕುಗಳಿಗೆ ಬಿಸಿ ಮುಟ್ಟಿಸಿದ ಆರ್‌ಬಿಐ; ಸಂಗ್ರಹಿಸಿದ ಹೆಚ್ಚುವರಿ ಶುಲ್ಕ ಮರುಪಾವತಿಗೆ ಸೂಚನೆ

ಮೋದಿಯವರು ನಿಮಗೆ ಕಿಸಾನ್ ಸಮ್ಮಾನ್ ನೀಡಿದ್ದಾರಲ್ವಾ, ಉಜ್ವಲ ಗ್ಯಾಸ್ ನೀಡಿದ್ದಾರಲ್ವಾ, ನೀರು ನೀಡಿದ್ದಾರಲ್ವಾ, ಮೋದಿ ಭಾರತವನ್ನು ಆರ್ಥಿಕತೆಯಲ್ಲಿ ವಿಶ್ವದ ಐದನೇ ಸ್ಥಾನಕ್ಕೆ ತಂದು ನಿಲ್ಲಿಸಿದ್ದಾರೆ. ಅವರನ್ನು ಮೂರನೇ ಬಾರಿ ಪ್ರಧಾನಿ ಮಾಡಿದರೆ ಭಾರತವನ್ನು ವಿಶ್ವದ ಮೂರನೇ ಆರ್ಥಿಕ ಶಕ್ತಿಯಾಗಿ ಮಾಡುತ್ತಾರೆ ಎಂದರು.

ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ, ಇಂಡಿ ಒಕ್ಕೂಟ ಭ್ರಷ್ಟಾಚಾರಿಗಳ ಕೂಟವಾಗಿದೆ. ಕಾಂಗ್ರೆಸ್ ಯಾವಾಗಲೂ ಭ್ರಷ್ಟಾಚಾರಿಗಳನ್ನು ರಕ್ಷಣೆ ಮಾಡುತ್ತ ಬಂದಿದ್ದಾರೆ. ಅಗಸ್ಟಾ ವೆಂಸ್ಟ್ ಲ್ಯಾಂಡ್ ಹಗರಣ, ಅಕ್ಕಿ ಹಗರಣ, ಟುಜಿ ಹಗರಣ, ಮಮತಾ, ಅಕಿಲೇಶ್ ಯಾದವ್, ಡಿಎಂಕೆ ನಾಯಕರು ಎಲ್ಲರೂ ಭ್ರಷ್ಟಾಚಾರ ಮಾಡಿದ್ದಾರೆ. ಡಿ.ಕೆ. ಶಿವಕುಮಾರ್ ಕೂಡ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಆರೋಪಿಸಿದರು.

ಬೇಲ್‌ ಮೇಲೆ ನಾಯಕರು

ಇಂಡಿ ಒಕ್ಕೂಟದ ಬಹುತೇಕ ನಾಯಕರು ಬೇಲ್ ಮೇಲೆ‌ ಇದ್ದಾರೆ. ಕಾಂಗ್ರೆಸ್ ನಾಯಕಿ ಸೊನಿಯಾ ಗಾಂಧಿ, ರಾಹುಲ್ ಗಾಂಧಿ, ಕಾರ್ತಿ ಚಿದಂಬರ್, ಲಾಲು ಪ್ರಸಾದ್, ಡಿ.ಕೆ. ಶಿವಕುಮಾರ್ ಎಲ್ಲರೂ ಬೇಲ್ ಮೇಲೆ ಇದ್ದಾರೆ. ಅರವಿಂದ ಕೇಜ್ರಿವಾಲ್ ಜೈಲಿನಲ್ಲಿದ್ದಾರೆ. ಇಂತಹ ನಾಯಕರು ನಮಗೆ ಬೇಕಾ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Fortis Hospital: ಪಾರ್ಕಿನ್ಸನ್‌ ಕಾಯಿಲೆ ಚಿಕಿತ್ಸೆಗೆ ಪ್ರತ್ಯೇಕ ಕ್ಲಿನಿಕ್‌ ಆರಂಭಿಸಿದ ಫೋರ್ಟಿಸ್‌ ಆಸ್ಪತ್ರೆ

ಈ ಬಾರಿ ಕೇಂದ್ರದಲ್ಲಿ 400 ಕ್ಕೂ ಹೆಚ್ಚು ಸ್ಥಾನ ಗೆಲ್ಲಲು, ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಲು ಎಲ್ಲರೂ ಬಿಜೆಪಿಗೆ ಮತ ಹಾಕಿ ಬಸವರಾಜ ಬೊಮ್ಮಾಯಿಯವರನ್ನು ಸಂಸದರನ್ನಾಗಿ ಮಾಡಿ ದೆಹಲಿಗೆ ಕಳುಹಿಸಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವ ಬಿ.ಸಿ. ಪಾಟೀಲ್ ಪಾಲ್ಗೊಂಡಿದ್ದರು.

ಇದನ್ನೂ ಓದಿ: Campa cola: ಕ್ಯಾಂಪಾ ಕೋಲಾ ಪ್ರಚಾರದ ಹೊಸ ವಿಡಿಯೊ ಬಿಡುಗಡೆ ಮಾಡಿದ ರಿಲಯನ್ಸ್

ಕಾಗಿನೆಲೆ ಗುರು ಪೀಠಕ್ಕೆ ಭೇಟಿ

ಇದಕ್ಕೂ ಮೊದಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, ಕಾಗಿನೆಲೆ ಗುರು ಪೀಠಕ್ಕೆ ಭೇಟಿ ನೀಡಿ, ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

Continue Reading

ಕರ್ನಾಟಕ

Lok Sabha Election 2024: ಬಸವರಾಜ ಬೊಮ್ಮಾಯಿಗೆ ಪತ್ರ ಬರೆದ ಪ್ರಧಾನಿ ಮೋದಿ; ಕೊಟ್ಟ ಟಾಸ್ಕ್‌ ಏನು?

Lok Sabha Election 2024: ಮಾಜಿ ಸಿಎಂ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಪತ್ರ ಬರೆದು, ಚುನಾವಣೆಯಲ್ಲಿ ಗೆದ್ದು ಬರುವಂತೆ ಶುಭ ಕೋರಿದ್ದಾರೆ. ನೀವು ಸಂಸದರಾಗಿ ನನ್ನ ತಂಡ ಸೇರುತ್ತಿರುವುದು ದೊಡ್ಡ ಆಸ್ತಿ ಎಂದು ತಿಳಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್‌ ಹಾಗೂ ಇಂಡಿ ಒಕ್ಕೂಟದ ಸಮಾಜ ಒಡೆಯುವ ಮನಸ್ಥಿತಿ, ಎಸ್ಸಿ ಎಸ್ಟಿ ಹಾಗೂ ಒಬಿಸಿ ಸಮುದಾಯಗಳ ಮೀಸಲಾತಿಯನ್ನು ತಮ್ಮ ವೋಟ್ ಬ್ಯಾಂಕ್ ಸಮುದಾಯಕ್ಕೆ ಧರ್ಮಾಧಾರಿತ ಮೀಸಲಾತಿ ಸಂವಿಧಾನ ವಿರೋಧಿಯಾದರೂ ಅವರಿಗೆ ಕೊಡಲು ತೀರ್ಮಾನಿಸಿದ್ದಾರೆ. ಅಲ್ಲದೇ ಅವರು ನಿಮ್ಮ ಪಿತ್ರಾರ್ಜಿತ ಆಸ್ತಿಯನ್ನು ತಮ್ಮ ವೋಟ್ ಬ್ಯಾಂಕ್ ಸಮುದಾಯಕ್ಕೆ ಹಂಚಿಕೆ ಮಾಡುವ ಅಪಾಯಕಾರಿ ತೀರ್ಮಾನ ಮಾಡಿದ್ದಾರೆ. ಇದನ್ನು ನಾವೆಲ್ಲರೂ ಒಟ್ಟಾಗಿ ತಡೆಯಬೇಕಿದೆ ಎಂದು ಕರೆ ಕೊಟ್ಟಿದ್ದಾರೆ.

VISTARANEWS.COM


on

Prime Minister Narendra Modi wrote a letter to former CM Basavaraj Bommai
Koo

ನವ ದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಪತ್ರ ಬರೆದು, ಚುನಾವಣೆಯಲ್ಲಿ (Lok Sabha Election 2024) ಗೆದ್ದು ಬರುವಂತೆ ಶುಭ ಕೋರಿದ್ದಾರೆ. ನೀವು ಸಂಸದರಾಗಿ ನನ್ನ ತಂಡ ಸೇರುತ್ತಿರುವುದು ದೊಡ್ಡ ಆಸ್ತಿ ಎಂದು ತಿಳಿಸಿದ್ದಾರೆ.

ಸುದೀರ್ಘ ಪತ್ರ ಬರೆದಿರುವ ಅವರು, ನೀವು ಮುಖ್ಯಮಂತ್ರಿಯಾಗಿ, ನೀರಾವರಿ ಸಚಿವರಾಗಿ, ಗೃಹ ಸಚಿವರಾಗಿ, ಕಾನೂನು ಸಚಿವರಾಗಿ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ್ದೀರಿ, ನೀವು ಶಿಗ್ಗಾವಿಯಲ್ಲಿ ಸುಮಾರು 30 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಮಾಡಿದ್ದೀರಿ, ಕ್ಷೇತ್ರದಲ್ಲಿ ಸಿಮೆಂಟ್ ರಸ್ತೆಗಳು, ಶಿಕ್ಷಣ ಸಂಸ್ಥೆಗಳನ್ನು ನಿರ್ಮಾಣ ಮಾಡಿದ್ದೀರಿ, ಕೋವಿಡ್ ಸಂದರ್ಭದಲ್ಲಿ ನಿಮ್ಮ ಸ್ವಂತ ಮನೆಯನ್ನು ಕೋವಿಡ್ ಕೇಂದ್ರವನ್ನಾಗಿ ಮಾಡಿ ಆಸ್ಪತ್ರೆಗಳ ಮೇಲಿನ ಭಾರ ಕಡಿಮೆ ಮಾಡಿದ್ದೀರಿ. ನೇಕಾರರಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಿ, ಆಧುನಿಕ ತಂತ್ರಜ್ಞಾನ ಬಳಸಿ ಅವರ ಜೀವನ ಮಟ್ಟ ಸುಧಾರಣೆ ಮಾಡಿದ್ದೀರಿ, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಮಾಡಿದ್ದೀರಿ, ನೀವು ಒಬ್ಬ ಕಾರ್ಯಕರ್ತರಾಗಿ ಪಡೆದ ಅನುಭವ ಜನ ಸೇವಕರಾಗಿ ಮಾಡಿದ ಸೇವೆ ಹಾವೇರಿ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: RBI Guideline: ಬ್ಯಾಂಕುಗಳಿಗೆ ಬಿಸಿ ಮುಟ್ಟಿಸಿದ ಆರ್‌ಬಿಐ; ಸಂಗ್ರಹಿಸಿದ ಹೆಚ್ಚುವರಿ ಶುಲ್ಕ ಮರುಪಾವತಿಗೆ ಸೂಚನೆ

ಜನರ ಆಶೀರ್ವಾದದಿಂದ ನೀವು ಸಂಸದರಾಗಿ ನಮ್ಮ ತಂಡದ ಸದಸ್ಯರಾಗಿ ಬರುವುದು ನನಗೆ ದೊಡ್ಡ ಆಸ್ತಿ ಸಿಕ್ಕಂತೆ. ನಮ್ಮ ತಂಡ ಹಾವೇರಿ ಕ್ಷೇತ್ರ ಹಾಗೂ ದೇಶದ ಅಭಿವೃದ್ಧಿಗೆ ಶ್ರಮವಹಿಸಲಿದೆ. ನಾನು ಈ ಪತ್ರದ ಮೂಲಕ ಕ್ಷೇತ್ರದ ಜನತೆಗೆ ಹೇಳುವುದೇನೆಂದರೆ, ಇದು ಸಾಮಾನ್ಯ ಚುನಾವಣೆಯಲ್ಲ ಇದು ದೇಶದ ಪ್ರತಿಯೊಂದು ಕುಟುಂಬದ ವಿಶೇಷವಾಗಿ ಹಿರಿಯ ನಾಗರಿಕರು ಕಳೆದು ಐದಾರು ದಶಕದಲ್ಲಿ ಅನುಭವಿಸಿದ ತೊಂದರೆಗಳು ಕಳೆದ ಒಂದು ದಶಕದಲ್ಲಿ ಸಾಕಷ್ಟು ಬೆಳವಣಿಗೆಗಳನ್ನು ಕಂಡಿದ್ದಾರೆ. ಅನೇಕ ಜನರ ಜೀವನ ಮಟ್ಟ ಸುಧಾರಣೆಯಾಗಿದೆ. ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ. ಇನ್ನೂ ಸಾಕಷ್ಟು ಸಮಸ್ಯೆಗಳಿವೆ. ಈ ಚುನಾವಣೆ ಜನರ ಜೀವನಮಟ್ಟವನ್ನು ಇನ್ನಷ್ಟು ಸುಧಾರಣೆಗೊಳಿಸಲು ಪ್ರೇರಣೆಯಾಗಲಿದೆ.

ಈ ಚುನಾವಣೆಯಲ್ಲಿ ಬಿಜೆಪಿ ಪಡೆಯುವ ಪ್ರತಿಯೊಂದು ಮತವೂ 2047ಕ್ಕೆ ಅಭಿವೃದ್ಧಿ ಹೊಂದಿದ ಭಾರತ ಮಾಡಲು ಮಹತ್ವದ್ದಾಗಿವೆ. ಮೊದಲ ಎರಡು ಹಂತದ ಮತದಾನದಲ್ಲಿ ಮತದಾರರು ತಮ್ಮ ಮತಗಳ ಮೂಲಕ ದೇಶದ ಅಭಿವೃದ್ಧಿ ಪರ ಇರುವ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ: Fortis Hospital: ಪಾರ್ಕಿನ್ಸನ್‌ ಕಾಯಿಲೆ ಚಿಕಿತ್ಸೆಗೆ ಪ್ರತ್ಯೇಕ ಕ್ಲಿನಿಕ್‌ ಆರಂಭಿಸಿದ ಫೋರ್ಟಿಸ್‌ ಆಸ್ಪತ್ರೆ

ಮತದಾರರಿಗೆ ಕಾಂಗ್ರೆಸ್‌ ಹಾಗೂ ಇಂಡಿ ಒಕ್ಕೂಟದ ಸಮಾಜ ಒಡೆಯುವ ಮನಸ್ಥಿತಿ, ಎಸ್ಸಿ ಎಸ್ಟಿ ಹಾಗೂ ಒಬಿಸಿ ಸಮುದಾಯಗಳ ಮೀಸಲಾತಿಯನ್ನು ತಮ್ಮ ವೋಟ್ ಬ್ಯಾಂಕ್ ಸಮುದಾಯಕ್ಕೆ ಧರ್ಮಾಧಾರಿತ ಮೀಸಲಾತಿ ಸಂವಿಧಾನ ವಿರೋಧಿಯಾದರೂ ಅವರಿಗೆ ಕೊಡಲು ತೀರ್ಮಾನಿಸಿದ್ದಾರೆ. ಅಲ್ಲದೇ ಅವರು ನಿಮ್ಮ ಪಿತ್ರಾರ್ಜಿತ ಆಸ್ತಿಯನ್ನು ತಮ್ಮ ವೋಟ್ ಬ್ಯಾಂಕ್ ಸಮುದಾಯಕ್ಕೆ ಹಂಚಿಕೆ ಮಾಡುವ ಅಪಾಯಕಾರಿ ತೀರ್ಮಾನ ಮಾಡಿದ್ದಾರೆ. ಇದನ್ನು ನಾವೆಲ್ಲರೂ ಒಟ್ಟಾಗಿ ತಡೆಯಬೇಕಿದೆ ಎಂದು ತಿಳಿಸಿದ್ದಾರೆ.

ಈಗ ಬೇಸಿಗೆ ಇರುವುದರಿಂದ ಜನರಿಗೆ ಸಮಸ್ಯೆಯಾಗುತ್ತಿದೆ. ಆದರೆ, ದೇಶದ ಭವಿಷ್ಯದ ದೃಷ್ಟಿಯಿಂದ ಈ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ಆದಷ್ಟು ಬೆಳಗಿನ ಸಮಯ ಮತಗಟ್ಟೆಗೆ ತೆರಳಿ ಮತದಾನ ಮಾಡುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ.

ಈ ಚುನಾವಣೆ ಸಂದರ್ಭದಲ್ಲಿ ನಮ್ಮ‌ ಕಾರ್ಯಕರ್ತರು ಮತದಾರರನ್ನು ಪ್ರೇರೇಪಿಸಿ ಹೆಚ್ಚಿನ ಮತದಾನವಾಗುವಂತೆ ನೋಡಿಕೊಳ್ಳಬೇಕು. ಈ ಮೂಲಕ ಬೂತ್ ಗೆಲ್ಲುವ‌ ಮೂಲಕ ಲೋಕಸಭಾ ಕ್ಷೇತ್ರ ಗೆಲ್ಲುವಂತೆ ನೋಡಿಕೊಳ್ಳಬೇಕು. ಇದೇ ವೇಳೆ ಕಾರ್ಯಕರ್ತರು ನಿಮ್ಮ ಆರೋಗ್ಯದ ಕಡೆಗೆ ಗಮನ ಕೊಡಿ ಎಂದು ಪತ್ರದ ಮೂಲಕ ಪ್ರಧಾನಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Malpe Beach: ಮಲ್ಪೆ ಬೀಚ್‌ನಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ; ಸಿಂದಗಿಯಲ್ಲಿ ಸ್ನಾನಕ್ಕೆಂದು ಬಾವಿಗಿಳಿದಿದ್ದ ಬಾಲಕರಿಬ್ಬರ ಸಾವು

ನನ್ನ ಪ್ರತಿ ಕ್ಷಣವೂ ದೇಶದ ಜನರ ಶ್ರೇಯೋಭಿವೃದ್ಧಿಗೆ ಮೀಸಲಿದೆ ಎಂದು ಹಾವೇರಿ ಕ್ಷೇತ್ರದ ಅಭ್ಯರ್ಥಿಯಾಗಿ ಈ ಸಂದೇಶವನ್ನು ಎಲ್ಲ ಮತದಾರರಿಗೆ ತಲುಪಿಸಿ ಎಂದು ಪತ್ರದ ಮೂಲಕ ತಿಳಿಸಿದ್ದಾರೆ.

Continue Reading

ಹಾವೇರಿ

Lok Sabha Election 2024: ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಶಾಸಕ ಶ್ರೀನಿವಾಸ ಮಾನೆ ಪ್ರಚಾರ

Lok Sabha Election 2024: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಹಾನಗಲ್‌ ಶಾಸಕ ಶ್ರೀನಿವಾಸ ಮಾನೆ ಬಿರುಸಿನ ಪ್ರಚಾರ ನಡೆಸಿದರು.

VISTARANEWS.COM


on

MLA Srinivasa Mane Election campaign for Haveri Gadag Lok Sabha constituency Congress candidate Anandaswamy Gaddadevaramath
Koo

ಹಾವೇರಿ: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಹಾನಗಲ್‌ ಶಾಸಕ ಶ್ರೀನಿವಾಸ ಮಾನೆ ಬಿರುಸಿನ ಪ್ರಚಾರ (Lok Sabha Election 2024) ನಡೆಸಿದರು.

ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಜತೆ ಶಾಸಕ ಶ್ರೀನಿವಾಸ ಮಾನೆ, ಬಿರುಸಿನ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದರು.

ಗದಗನಲ್ಲಿ ಯುವ ಚೈತನ್ಯ ಸಮಾವೇಶದಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ, ಈ ಬಾರಿಯ ಚುನಾವಣೆಯಲ್ಲಿ ತಮಗೆ ಮತ ನೀಡಿ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: IPL 2024: ಆರ್​ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ; ಸದ್ಯದ​ ಲೆಕ್ಕಾಚಾರ ಹೇಗಿದೆ?

ಹಾನಗಲ್‌ ಶಾಸಕ ಶ್ರೀನಿವಾಸ್‌ ಮಾನೆ ಮಾತನಾಡಿ, ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಭಾರೀ‌ ಅನ್ಯಾಯವಾಗುತ್ತಿದೆ, ರೈತರಿಗೆ ಅಗೌರವ ತರುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಬರ ಪರಿಹಾರ ವಿಚಾರದಲ್ಲಿ‌ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ನಾವಿದ್ದರೆ ಬಿಡುಗಡೆ ಮಾಡುತ್ತಿದ್ದೆವು ಎಂದು ಮಾಧ್ಯಮ ಮೂಲಕ ಬೆಂಗಳೂರು, ಹಾವೇರಿಯಲ್ಲಿ ಹೇಳಿದರೇ ವಿನಃ ಒಂದು ಬಾರಿಯು ಅಮಿತ್ ಶಾ ಹಾಗೂ‌ ಮೋದಿ ಅವರನ್ನು ಭೇಟಿಯಾಗಲಿಲ್ಲ ಎಂದು ಆರೋಪಿಸಿದ ಅವರು, ಆದರೆ ಕರ್ನಾಟಕಕ್ಕೆ ನ್ಯಾಯ ಸಿಗಲು ಅನಿವಾರ್ಯವಾಗಿ ನಾವು ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗಿ ನ್ಯಾಯ ಪಡೆಯಬೇಕಾಯಿತು ಎಂದು ತಿಳಿಸಿದರು.

ದೇಶಾದ್ಯಂತ ಬಿಜೆಪಿ ವಿರೋಧಿ ಅಲೆಯಿದ್ದು, ಕಾಂಗ್ರೆಸ್‌ ಪಕ್ಷಕ್ಕೆ ದೊಡ್ಡ ಜಯವಾಗಲಿದೆ ಎಂದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರವು ನುಡಿದಂತೆ ನಡೆದಿದೆ. ಐದು ಗ್ಯಾರೆಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ ಎಂದು ತಿಳಿಸಿದರು.

ಇದನ್ನೂ ಓದಿ: Tears Of Joy: ಕಣ್ಣೀರು ಸುರಿಸುವುದರಿಂದಲೂ ಲಾಭವಿದೆ!

ಈ ವೇಳೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading
Advertisement
Bhajanotsava
ಬೆಂಗಳೂರು1 hour ago

Bhajanotsava: ಓಂಕಾರ ಆಶ್ರಮದಲ್ಲಿ ನಿರಂತರ ಭಜನೋತ್ಸವ ಸಂಪನ್ನ

Shata Chandika Yaga
ಚಿಕ್ಕಬಳ್ಳಾಪುರ3 hours ago

ಚಿಕ್ಕಬಳ್ಳಾಪುರದ ವಾಯುದೇವ, ರಾಮಕೃಷ್ಣ ದೇವರ ಸನ್ನಿಧಾನದಲ್ಲಿ ಶತ ಚಂಡಿಕಾ ಯಾಗ ಸಂಪನ್ನ

Prajwal Revanna Case
ಕರ್ನಾಟಕ3 hours ago

Prajwal Revanna Case: ಸಂಸದ ಪ್ರಜ್ವಲ್ ರೇವಣ್ಣ ಗೆಸ್ಟ್ ಹೌಸ್‌ನಲ್ಲಿಲ್ಲ ಸಿಸಿ ಕ್ಯಾಮೆರಾ?; ಹಲವು ಅನುಮಾನ

Danesh Palyani
ವಿದೇಶ4 hours ago

Danesh Palyani: ಪಾಕಿಸ್ತಾನದಲ್ಲಿ ಹಿಂದು ಯುವತಿಯರ ಮತಾಂತರ; ಕರಾಳ ಮುಖ ಬಿಚ್ಚಿಟ್ಟ ಸಂಸದ!

Bangalore University
ಕರ್ನಾಟಕ4 hours ago

Bangalore University: ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ಪಿಎಚ್‌ಡಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

Prajwal Revanna
ಕರ್ನಾಟಕ4 hours ago

Prajwal Revanna: ಜರ್ಮನಿಯಲ್ಲಿ ಪ್ರಜ್ವಲ್‌ ಅಜ್ಞಾತವಾಸ, ಮಲೇಷ್ಯಾದಲ್ಲಿ ಕಾರ್ತಿಕ್‌ ಹಾಲಿಡೇಸ್?

CSK vs PBKS
ಕ್ರೀಡೆ4 hours ago

CSK vs PBKS: ಚೆನ್ನೈಗೆ ತವರಿನಲ್ಲೇ ಆಘಾತವಿಕ್ಕಿ ಪ್ಲೇ ಆಫ್​ ಆಸೆ ಜೀವಂತವಿರಿಸಿದ ಪಂಜಾಬ್​

Neha Murder Case
ಕರ್ನಾಟಕ4 hours ago

Neha Murder Case: ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಿ: ಅಮಿತ್‌ ಶಾಗೆ ನೇಹಾ ತಂದೆ ಮನವಿ

Love Jihad
ದೇಶ5 hours ago

Love Jihad: ಹಿಂದು ಎಂಬಂತೆ ಬಿಂಬಿಸಿ, ಯುವತಿಯನ್ನು ನಂಬಿಸಿ, ಕೊನೆಗೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

Union Minister Pralhad Joshi election campaign in kalaghatagi
ಧಾರವಾಡ5 hours ago

Lok Sabha Election 2024: ಕಾಂಗ್ರೆಸ್ಸಿನ 1 ಲಕ್ಷ ರು. ಬೋಗಸ್ ಗ್ಯಾರಂಟಿ: ಪ್ರಲ್ಹಾದ್‌ ಜೋಶಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌