ಮುಂಡರಗಿಯಲ್ಲಿ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ - Vistara News

ಕ್ರೈಂ

ಮುಂಡರಗಿಯಲ್ಲಿ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ

ಗದಗ ಜಿಲ್ಲೆಯ ಮುಂಡರಗಿ ಬಳಿ ಆರ್‌ಟಿಒ ಏಜೆಂಟ್‌ ಒಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

VISTARANEWS.COM


on

murder
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗದಗ: ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಜಂತ್ಲಿಶಿರೂರ ಎಂಬಲ್ಲಿನ ರಾಮೇನಹಳ್ಳಿ ರಸ್ತೆಯಲ್ಲಿ ತಡರಾತ್ರಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆಯಾಗಿದೆ.

ಮೃತ ವ್ಯಕ್ತಿಯನ್ನು ಮಾರುತಿ ಅಂಕಲಗಿ (35) ಎಂದು ಗುರುತಿಸಲಾಗಿದೆ. ಗದಗದಲ್ಲಿ ಆರ್‌ಟಿಒ ಏಜೆಂಟ್ ಆಗಿದ್ದ ಮಾರುತಿ, ಗದಗಿನ ಗಂಗಿಮಡಿ ಆಶ್ರಯ ಕಾಲೋನಿ ನಿವಾಸಿಯಾಗಿದ್ದರು. ತಲೆಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ.

ರಾತ್ರಿ ಊರಾಚೆ ಕರೆತಂದು ಹೊಡೆದು ಕೊಲೆ ಮಾಡಿರುವ ಶಂಕೆಯಿದ್ದು, ಕೊಲೆಗೆ ಸ್ನೇಹಿತರ ಜತೆಗಿನ ಹಣಕಾಸಿನ ವ್ಯವಹಾರವೇ ಕಾರಣವಾಗಿರಬಹುದು ಎನ್ನಲಾಗಿದೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Prajwal Revanna Case: ಎಸ್‌ಐಟಿಗೆ ಸವಾಲೆಸೆದ ನವೀನ್‌ ಗೌಡ; ದೇವರಾಜೇಗೌಡ, ಪ್ರೀತಂಗೌಡ ಆಪ್ತರು ಎಸ್‌ಐಟಿ ಕಸ್ಟಡಿಗೆ?

Prajwal Revanna Case: ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ನವೀನ್ ಗೌಡ ಎ೧ ಆರೋಪಿಯಾಗಿದ್ದು, ಎಸ್‌ಐಟಿ ಈತನ ಹುಡುಕಾಟದಲ್ಲಿದೆ. ಎಸ್ಐಟಿ ತಲಾಶ್ ಮಾಡುತ್ತಿರುವಾಗಲೇ ಫೇಸ್‌ಬುಕ್ ಪೋಸ್ಟ್ ಹಾಕಿ ಈತ ಒಂದು ರೀತಿಯಲ್ಲಿ ಚಾಲೆಂಜ್ ಮಾಡಿದಂತಾಗಿದೆ. ಈಗಾಗಲೆ ಪೆನ್ ಡ್ರೈವ್ ಹಂಚಿಕೆ ಕೇಸಲ್ಲಿ ಇಬ್ಬರನ್ನು ಎಸ್ಐಟಿ ಆರೆಸ್ಟ್ ಮಾಡಿದ್ದು, ನವೀನ್ ಗೌಡ ತಲಾಶೆಯಲ್ಲಿದೆ.

VISTARANEWS.COM


on

prajwal revanna case
ಲಿಖಿತ್‌ ಗೌಡ, ಚೇತನ್‌, ದೇವರಾಜೇಗೌಡ
Koo

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ದೌರ್ಜನ್ಯದ್ದು (Prajwal Revanna Case) ಎನ್ನಲಾದ ಅಶ್ಲೀಲ ದೃಶ್ಯವುಳ್ಳ ಪೆನ್‌ ಡ್ರೈವ್ ಹಂಚಿಕೆ (Pen drive case) ಮಾಡಿದ ಪ್ರಕರಣದಲ್ಲಿ, ಆರೋಪಿಯಾಗಿ ಇನ್ನೂ ಸೆರೆಸಿಗದ ನವೀನ್‌ಗೌಡ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದು, ಎಸ್‌ಐಟಿಗೆ (SIT) ಪರೋಕ್ಷವಾಗಿ ಸವಾಲು ಹಾಕಿದ್ದಾನೆ.

“ಪೆನ್ ಡ್ರೈವ್‌ನ ನಾನು ಅರಕಲಗೂಡು ಶಾಸಕ ಎ. ಮಂಜುಗೆ ಕೊಟ್ಟಿದ್ದೆ. ಎಚ್‌ಡಿ ಕುಮಾರಸ್ವಾಮಿ (HD Kumaraswamy) ಹೇಳಿದಂತೆ ಪೆನ್ ಡ್ರೈವ್ ಹಂಚಿಕೆ ಹಿಂದೆ ಮಹಾನಾಯಕನ ಕೈವಾಡ ಇದೆ. ಆ ಮಹಾನಾಯಕ ಅರಕಲಗೂಡು ಎಂಎಲ್ಎ ಮಂಜುನಾ?” ಎಂದು ನವೀನ್ ಗೌಡ ಪೋಸ್ಟ್ ಹಾಕಿದ್ದಾನೆ.

ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ನವೀನ್ ಗೌಡ ಎ೧ ಆರೋಪಿಯಾಗಿದ್ದು, ಎಸ್‌ಐಟಿ ಈತನ ಹುಡುಕಾಟದಲ್ಲಿದೆ. ಎಸ್ಐಟಿ ತಲಾಶ್ ಮಾಡುತ್ತಿರುವಾಗಲೇ ಫೇಸ್‌ಬುಕ್ ಪೋಸ್ಟ್ ಹಾಕಿ ಈತ ಒಂದು ರೀತಿಯಲ್ಲಿ ಚಾಲೆಂಜ್ ಮಾಡಿದಂತಾಗಿದೆ. ಈಗಾಗಲೆ ಪೆನ್ ಡ್ರೈವ್ ಹಂಚಿಕೆ ಕೇಸಲ್ಲಿ ಇಬ್ಬರನ್ನು ಎಸ್ಐಟಿ ಆರೆಸ್ಟ್ ಮಾಡಿದ್ದು, ನವೀನ್ ಗೌಡ ತಲಾಶೆಯಲ್ಲಿದೆ.

ದೇವರಾಜೇಗೌಡ ಮೇಲೆ ಫೋಕಸ್

ಹೊಳೆನರಸೀಪುರ ಪೊಲೀಸರಿಂದ ಬಂಧನ ಆಗಿರುವ ವಕೀಲ ದೇವರಾಜೇಗೌಡರನ್ನು ತಮ್ಮ ಕಸ್ಟಡಿಗೆ ನೀಡಬೇಕು ಎಂದು ಎಸ್ಐಟಿ ಕೇಳುವ ಸಾಧ್ಯತೆ ಇದೆ. ಆರೆಸ್ಟ್‌ಗೂ ಮುನ್ನ ದೇವರಾಜೇಗೌಡಗೆ ಮತ್ತೊಂದು ನೊಟೀಸ್ ಅನ್ನು ಎಸ್ಐಟಿ ನೀಡಿದ್ದು, ಕೇಸ್ ಸಂಬಂಧ ಹೆಚ್ಚಿನ ವಿಚಾರಣೆಗೆ ಹಾಜರಾಗುವಂತೆ ಹೇಳಿತ್ತು.

ವಿಚಾರಣೆಗೆ ಹಾಜರಾಗದೆ ಕರ್ನಾಟಕ ಬಿಟ್ಟು ಹೊರಟಿದ್ದ ದೇವರಾಜೇಗೌಡರನ್ನು ಲೈಂಗಿಕ ದೌರ್ಜನ್ಯ ಕೇಸಿನಲ್ಲಿ ಹೊಳೆನರಸೀಪುರ ಪೊಲೀಸರು ಆರೆಸ್ಟ್ ಮಾಡಿದ್ದರು. ನಂತರ ಜಿಲ್ಲಾ ನ್ಯಾಯಾಲಯ ಇವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಈಗ ಪ್ರಜ್ವಲ್ ಕೇಸ್ ಸಂಬಂಧ ತನಿಖೆಗೆ ಬಾಡಿ ವಾರೆಂಟ್ ಮೇಲೆ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ.

ಈಗಾಗಲೇ ದೇವರಾಜೇಗೌಡ ಪ್ರಕರಣ ತನಿಖೆ ನಡೆಸುತ್ತಿರುವ ಹೊಳೆನರಸೀಪುರ ಪೊಲೀಸರು ಕೂಡ ಆರೋಪಿಯ ಕಸ್ಟಡಿಗೆ ಮನವಿ ಮಾಡಲಿದ್ದಾರೆ. ತನಿಖೆ ವೇಳೆ ಒಂದು ಮೊಬೈಲ್, ದಾಖಲೆಗಳು ಸಿಕ್ಕಿರುವ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಆರೋಪಿಯ ವಿಚಾರಣೆ ಅಗತ್ಯವಿದೆ. ಹೀಗಾಗಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ಕಸ್ಟಡಿಗೆ ಕೇಳಬಹುದು. ದೇವರಾಜೇಗೌಡ ಕೇಸ್ ಸಂಬಂಧ ಹೊಳೆನರಸೀಪುರ ಪೊಲೀಸರ ಸಂಪರ್ಕದಲ್ಲಿ ಎಸ್ಐಟಿ ಇದೆ.

ಪ್ರೀತಂಗೌಡ ಆಪ್ತರೂ ಕಸ್ಟಡಿಗೆ?

ಪ್ರಕರಣದಲ್ಲಿ ಬಿಜೆಪಿ ಮುಖಂಡ ಪ್ರೀತಂಗೌಡ ಗೌಡ ಆಪ್ತರ ಬಂಧನದ ಬಳಿಕ ಕುತೂಹಲ ಹೆಚ್ಚಿದ್ದು, ಇಂದು ತೆರೆದ ಕೋರ್ಟ್‌ನಲ್ಲಿ ಇಬ್ಬರು ಆರೋಪಿಗಳನ್ನು ಎಸ್ಐಟಿ ಕಸ್ಟಡಿಗೆ ಕೇಳಲು ತಯಾರಿ ನಡೆದಿದೆ. ಏಪ್ರಿಲ್ 21ರಂದೇ ಪ್ರೀತಂಗೌಡ ಆಪ್ತ ಶರತ್ ಆಲಿಯಾಸ್ ಕ್ವಾಲಿಟಿ ಬಾರ್ ಶರತ್ ವಿರುದ್ಧ ಜೆಡಿಎಸ್‌ ದೂರು ನೀಡಿತ್ತು. ಪ್ರಕರಣದ ಬೆನ್ನು ಹತ್ತಿದ್ದ ಎಸ್ಐಟಿಯಿಂದ ಆರಂಭಿಕವಾಗಿಯೇ ಪ್ರೀತಂಗೌಡ ಆಪ್ತರ ಆರೆಸ್ಟ್ ಆಗಿದೆ.

ನಿನ್ನೆ ಲಿಖಿತ್ ಗೌಡ ಹಾಗು ಚೇತನ್‌ರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಪೊಲೀಸ್ ವಿಚಾರಣೆ ಬಳಿಕ ಮತ್ತಷ್ಟು ಜನರ ಬಂಧನ ಸಾಧ್ಯತೆ ಇದೆ. ವೀಡಿಯೋ ಹಾಗು ಪೆನ್ ಡ್ರೈವ್ ಹಂಚಿದ ಬಗ್ಗೆ ಎಸ್‌ಐಟಿ ಇಂಚಿಂಚೂ ಮಾಹಿತಿ ಕಲೆ ಹಾಕಿದ್ದು, ವೀಡಿಯೋ ವೈರಲ್ ದಾರಿಯನ್ನು ಎಳೆ ಎಳೆಯಾಗಿ ಭೇದಿಸಲು ಪ್ಲಾನ್ ಮಾಡಿದೆ. ವೀಡಿಯೋ ವೈರಲ್ ಕೇಸ್ ಭೇದಿಸಲೆಂದೇ ಪ್ರತ್ಯೇಕ ಟೀಂ ರಚನೆ ಮಾಡಲಾಗಿದೆ. ಹಾಸನದಲ್ಲೇ ಒಂದು ತಂಡ ಬೀಡು ಬಿಟ್ಟಿದ್ದು, ಹಾಸನದ ಎಎಸ್ಪಿ ತಮ್ಮಯ್ಯ ನೇತೃತ್ವದ ತಂಡದಿಂದ ವಿಚಾರಣೆ ಮುಂದುವರಿದಿದೆ.

14 ದಿನ ನ್ಯಾಯಾಂಗ ಬಂಧನ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ (Prajwal Revanna Case) ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನಗರದ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಇಬ್ಬರು ಆರೋಪಿಗಳಿಗೆ ಮೇ 25 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ​ ವಿಡಿಯೊಗಳನ್ನು ವೈರಲ್ ಮಾಡಲಾಗುತ್ತಿದೆ ಎಂದು ಏಪ್ರಿಲ್ 23ರಂದು ಹಾಸನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಪ್ರಕರಣ ಎಸ್ಐಟಿಗೆ ವರ್ಗಾವಣೆಯಾಗಿತ್ತು. ಸದ್ಯ ಅಶ್ಲೀಲ ವಿಡಿಯೊ ಹರಿಬಿಟ್ಟವರನ್ನು ವಶಕ್ಕೆ ಪಡೆಯುತ್ತಿರುವ ಎಸ್‌ಐಟಿ ಅಧಿಕಾರಿಗಳ ತಂಡ, ಆರೋಪಿಗಳಾದ ಚೇತನ್​ ಹಾಗೂ ಲಿಖಿತ್​ನನ್ನು ಬಂಧಿಸಿದ್ದು, ನವೀನ್ ಗೌಡ ಮತ್ತು ಪುಟ್ಟರಾಜುಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಆರೋಪಿಗಳಾದ ಲಿಖಿತ್​ ಗೌಡ ಮತ್ತು ಚೇತನ್, ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಅವರ ಆಪ್ತರಾಗಿದ್ದಾರೆ. ಮೊದಲಿಗೆ ಪೆನ್‌ಡ್ರೈವ್ ವೈರಲ್ ಸಂಬಂಧ ದಾಖಲಾಗಿದ್ದ ಕೇಸ್‌ನಲ್ಲಿ ಈ ಇಬ್ಬರ ಹೆಸರು ಇರಲಿಲ್ಲ. ನಂತರ ಈ ಇಬ್ಬರ ಮೇಲೆ ವಿಡಿಯೊ ಹಂಚಿಕೆ ಆರೋಪದಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿತ್ತು. ಹೀಗಾಗಿ ಈ ಪ್ರಕರಣವು ದಿನಕ್ಕೊಂದು ತಿರುವನ್ನು ಪಡೆದುಕೊಳ್ಳುತ್ತಿದೆ.

ಇದನ್ನೂ ಓದಿ: Prajwal Revanna Case: ಅಶ್ಲೀಲ ವಿಡಿಯೊ ಕೇಸ್; ಚೇತನ್, ಲಿಖಿತ್‌ಗೆ 14 ದಿನ ನ್ಯಾಯಾಂಗ ಬಂಧನ‌

Continue Reading

ಪ್ರಮುಖ ಸುದ್ದಿ

HD Revanna Jailed: ಇಂದು ಏನಾಗುತ್ತೆ ಎಚ್‌ಡಿ ರೇವಣ್ಣ ಭವಿಷ್ಯ? ಜಾಮೀನು ಅರ್ಜಿ ಮತ್ತೆ ವಿಚಾರಣೆ

HD Revanna Jailed: ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಮೇ 09ರಂದು ವಾದ ಪ್ರತಿವಾದ ಆಲಿಸಿ ನ್ಯಾಯಾಲಯ ಇಂದಿಗೆ ವಿಚಾರಣೆ ಮುಂದೂಡಿತ್ತು. ವಕೀಲ ಸಿ.ವಿ.ನಾಗೇಶ್ ರೇವಣ್ಣ ಪರ ವಾದ ಮಂಡಿಸಿದ್ದರು. ರೇವಣ್ಣ ಅವರನ್ನು ಈಗಾಗಲೇ ಎಸ್.ಐ.ಟಿ ವಿಚಾರಣೆ ನಡೆಸಿದೆ. ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯ ಬಂಧನವಾಗಿದೆ. ಪ್ರಕರಣದಲ್ಲಿ ಎಲ್ಲೂ ನೇರವಾಗಿ ರೇವಣ್ಣರ ಪಾತ್ರವಿಲ್ಲ ಎಂದು ನಾಗೇಶ್‌ ವಾದ ಮಂಡಿಸಿದ್ದರು.

VISTARANEWS.COM


on

Prajwal Revanna Case HD Revanna jailed
Koo

ಬೆಂಗಳೂರು: ಕಿಡ್ನಾಪ್‌ ಪ್ರಕರಣದಲ್ಲಿ (Kidnap Case) ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Jailed) ಅವರು ಇಂದು ಮತ್ತೆ ಜಾಮೀನು ಅರ್ಜಿ (Bail plea) ವಿಚಾರಣೆ ಎದುರಿಸಬೇಕಿದೆ. ಬೇಲ್ ಆಗುತ್ತಾ ಅಥವಾ ಮತ್ತೆ ಜೈಲಾ ಎಂಬ ಆತಂಕದಲ್ಲಿ ರೇವಣ್ಣ ಇದ್ದಾರೆ.

ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಮೇ 09ರಂದು ವಾದ ಪ್ರತಿವಾದ ಆಲಿಸಿ ನ್ಯಾಯಾಲಯ ಇಂದಿಗೆ ವಿಚಾರಣೆ ಮುಂದೂಡಿತ್ತು. ವಕೀಲ ಸಿ.ವಿ.ನಾಗೇಶ್ ರೇವಣ್ಣ ಪರ ವಾದ ಮಂಡಿಸಿದ್ದರು. ರೇವಣ್ಣ ಅವರನ್ನು ಈಗಾಗಲೇ ಎಸ್.ಐ.ಟಿ ವಿಚಾರಣೆ ನಡೆಸಿದೆ. ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯ ಬಂಧನವಾಗಿದೆ. ಪ್ರಕರಣದಲ್ಲಿ ಎಲ್ಲೂ ನೇರವಾಗಿ ರೇವಣ್ಣರ ಪಾತ್ರವಿಲ್ಲ ಎಂದು ನಾಗೇಶ್‌ ವಾದ ಮಂಡಿಸಿದ್ದರು.

ಸಿ.ವಿ.ನಾಗೇಶ್, ನನ್ನ 56 ವರ್ಷಗಳ ವಕೀಲ ವೃತ್ತಿಯಲ್ಲಿ ತಪ್ಪು ಮಾಹಿತಿ ನೀಡಿಲ್ಲ. ಬೇಲ್ ಅರ್ಜಿ ಊರ್ಜಿತವಲ್ಲವೆಂದು ಎಸ್‌ಪಿಪಿ ವಾದ ಮಂಡಿಸಿದ್ದಾರೆ. ಇದು ಹೇಗೆ ಸಾಧ್ಯ? ಎಂದು ‘ಸುಪ್ರೀಂ’ ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದರು. 2023ರ ತೀಸ್ತಾ ಸೆಟಲ್ ವಾಡ್‌ ಪ್ರಕರಣದ ಬಗ್ಗೆ ಪ್ರಸ್ತಾಪ ಮಾಡಿದ ನಾಗೇಶ್‌, ಸೆಟಲ್ ವಾಡ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪು ಇದೆ. ನಿರಂಜನ್ ಸಿಂಗ್ ಕೇಸ್‌ನಲ್ಲಿಯೂ ಜಾಮೀನು ಉಲ್ಲೇಖವಿದೆ. 22 ತೀರ್ಪುಗಳಲ್ಲಿ ನಿರಂಜನ್ ಕೇಸ್‌ ಅನ್ನು ಅನುಸರಿಸಲಾಗಿದೆ. ಕಸ್ಟಡಿಯಲ್ಲಿದ್ದಾಗಲೂ ಜಾಮೀನು ನೀಡಿರುವ ಉಲ್ಲೇಖವಿದೆ. ಒಂದೊಂದು ದಿನ ಒಬ್ಬೊಬ್ಬರನ್ನು ಎಸ್‌ಪಿಪಿಯಾಗಿ ನೇಮಕ ಮಾಡಲಾಗುತ್ತಿದೆ. ಮೊದಲು ಜಗದೀಶ್ ಇದ್ದರು, ಈಗ ಜಯ್ನಾ ಕೊಠಾರಿ ಇದ್ದಾರೆ. ಎಸ್‌ಪಿಪಿ ನೇಮಕಕ್ಕೂ ಕಾನೂನಿನಲ್ಲಿ ಕೆಲ ಕ್ರಮಗಳಿವೆ ಎಂದು ವಾದಿಸಿದರು.

ಎಸ್.ಐ.ಟಿ ಪರ ವಾದ ಮಂಡಿಸಿದ್ದ ಎಸ್.ಪಿ.ಪಿ ಜಯ್ನಾ ಕೊಠಾರಿ, ಈ ವೇಳೆ ವಾದ ಮಂಡನೆಗೆ ಕಾಲಾವಕಾಶ ಕೋರಿದರು. ಅದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜಡ್ಜ್‌, ಈಗಾಗಲೇ ಆಕ್ಷೇಪಣೆಗೆ 3 ಬಾರಿ ಸಮಯ ನೀಡಲಾಗಿದೆ. ಇನ್ನೂ ಹೆಚ್ಚು ಸಮಯ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು. ನಾವು ಆಕ್ಷೇಪಣೆ ಸಲ್ಲಿಸಿದ್ದೇವೆ, ವಿಳಂಬದ ಉದ್ದೇಶವಿಲ್ಲ. ನಾವು ವಾದ ಮಂಡಿಸಲು ಸ್ವಲ್ಪ ಸಮಯಾವಕಾಶ ಬೇಕಾಗಿದೆ ಎಂದು ಕೋರ್ಟ್‌ ಮುಂದೆ ಕೋರಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶರು, ನೀವು ಹಿರಿಯ ವಕೀಲರು ಇದ್ದೀರಿ, ವಿಳಂಬ ಮಾಡಬೇಡಿ ಎಂದು ಎಸ್‌ಐಟಿ ಪರ ವಕೀಲರಿಗೆ ಸೂಚಿಸಿದರು. ಅದಕ್ಕೆ ಒಪ್ಪಿದ ಜಯ್ನಾ ಕೊಠಾರಿ, ಕೋರ್ಟ್‌ಗೆ ಮತ್ತಷ್ಟು ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಯಾವುದೇ ಕಾರಣಕ್ಕೂ ಸೋಮವಾರ ‌ಸಮಯ ವ್ಯರ್ಥ ಮಾಡಲ್ಲ ಎಂದು ಮನವಿ ಮಾಡಿದರು.

ಕಿಡ್ನಾಪ್ ಪ್ರಕರಣ ಮಾತ್ರವಲ್ಲ ಪ್ರಜ್ವಲ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೂ ಇದಕ್ಕೂ ಸಂಬಂಧವಿದೆ ಎಂದು ಕೊಠಾರಿ ವಾದಿಸಿದ್ದರು. ಪ್ರಜ್ವಲ್ ವಿರುದ್ಧದ ಲೈಂಗಿಕ ಪ್ರಕರಣ ಸಂಬಂಧ ಸಂತ್ರಸ್ತೆಯ ಅಪಹರಣವಾಗಿದೆ. ಆರೋಪಿ ಪ್ರಭಾವಿ ಆಗಿದ್ದು, ಜಾಮೀನು ನೀಡಿದರೆ ಸಾಕ್ಷಿ ನಾಶ ಮಾಡುವ ಸಂಭವವಿದೆ ಎಂದು ವಾದಿಸಿ, ಮತ್ತೆ ವಾದ ಮಾಡಲು ಇಂದಿಗೆ ಕಾಲಾವಕಾಶ ಕೇಳಿದ್ದರು.

ಎಸ್.ಐ.ಟಿ ಪರವಾಗಿ ಎಸ್.ಪಿ.ಪಿ ಅಶೋಕ್‌ ನಾಯ್ಕ್ ವಾದ ಮಂಡನೆಗೆ ಅವಕಾಶ ಕೇಳಿದ್ದರು. ಇಂದು ಎಸ್.ಐ.ಟಿ ಪರ ವಕೀಲ ಅಶೋಕ್ ನಾಯ್ಕ್‌ರ ವಾದ ಮಂಡನೆಗೆ ಅವಕಾಶ ನೀಡಿ ಕೋರ್ಟ್‌ ವಿಚಾರಣೆ ಮುಂದೂಡಿತ್ತು. ಇಂದು ಎಸ್.ಪಿ.ಪಿ ಅಶೋಕ್ ನಾಯ್ಕ್ ಅವರ ಎಸ್.ಐ.ಟಿ ಪರ ವಾದದ ಬಳಿಕ ರೇವಣ್ಣ ಪರ ವಾದ ಮಂಡಿಸಲಿದ್ದಾರೆ ಸಿ.ವಿ.ನಾಗೇಶ್. ವಾದ ಪ್ರತಿವಾದ ಆಲಿಸಿ ನ್ಯಾಯಾಲಯ ಮಧ್ಯಾಹ್ನ ಅಥವಾ ನಾಳೆಗೆ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: Prajwal Revanna Case: ದಿಕ್ಕು ತಪ್ಪಿದೆ ಪ್ರಜ್ವಲ್ ರೇವಣ್ಣ ಕೇಸ್‌; ಡಿಕೆಶಿ ವಿಚಾರಣೆಯೂ ಆಗಲಿ ಎಂದ ಬಸವರಾಜ ಬೊಮ್ಮಾಯಿ

Continue Reading

ಕರ್ನಾಟಕ

Prajwal Revanna Case: ಅಶ್ಲೀಲ ವಿಡಿಯೊ ಕೇಸ್; ಚೇತನ್, ಲಿಖಿತ್‌ಗೆ 14 ದಿನ ನ್ಯಾಯಾಂಗ ಬಂಧನ‌

Prajwal Revanna Case: ಪ್ರಜ್ವಲ್ ರೇವಣ್ಣ ಅಶ್ಲೀಲ​ ವಿಡಿಯೊಗಳನ್ನು ವೈರಲ್ ಮಾಡಿದ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

VISTARANEWS.COM


on

Prajwal Revanna Case
Koo

ಹಾಸನ: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ (Prajwal Revanna Case) ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನಗರದ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಇಬ್ಬರು ಆರೋಪಿಗಳಿಗೆ ಮೇ 25 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ​ ವಿಡಿಯೊಗಳನ್ನು ವೈರಲ್ ಮಾಡಲಾಗುತ್ತಿದೆ ಎಂದು ಏಪ್ರಿಲ್ 23ರಂದು ಹಾಸನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಪ್ರಕರಣ ಎಸ್ಐಟಿಗೆ ವರ್ಗಾವಣೆಯಾಗಿತ್ತು. ಸದ್ಯ ಅಶ್ಲೀಲ ವಿಡಿಯೊ ಹರಿಬಿಟ್ಟವರನ್ನು ವಶಕ್ಕೆ ಪಡೆಯುತ್ತಿರುವ ಎಸ್‌ಐಟಿ ಅಧಿಕಾರಿಗಳ ತಂಡ, ಆರೋಪಿಗಳಾದ ಚೇತನ್​ ಹಾಗೂ ಲಿಖಿತ್​ನನ್ನು ಬಂಧಿಸಿದ್ದು, ನವೀನ್ ಗೌಡ ಮತ್ತು ಪುಟ್ಟರಾಜುಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಆರೋಪಿಗಳಾದ ಲಿಖಿತ್​ ಗೌಡ ಮತ್ತು ಚೇತನ್, ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಅವರ ಆಪ್ತರಾಗಿದ್ದಾರೆ. ಮೊದಲಿಗೆ ಪೆನ್‌ಡ್ರೈವ್ ವೈರಲ್ ಸಂಬಂಧ ದಾಖಲಾಗಿದ್ದ ಕೇಸ್‌ನಲ್ಲಿ ಈ ಇಬ್ಬರ ಹೆಸರು ಇರಲಿಲ್ಲ. ನಂತರ ಈ ಇಬ್ಬರ ಮೇಲೆ ವಿಡಿಯೊ ಹಂಚಿಕೆ ಆರೋಪದಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿತ್ತು. ಹೀಗಾಗಿ ಈ ಪ್ರಕರಣವು ದಿನಕ್ಕೊಂದು ತಿರುವನ್ನು ಪಡೆದುಕೊಳ್ಳುತ್ತಿದೆ.

ಇದನ್ನೂ ಓದಿ | Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌; ವಕೀಲ ದೇವರಾಜೇಗೌಡ ಪ್ಲ್ಯಾನ್‌ ಏನಿತ್ತು? ದೆಹಲಿಗೆ ಹೊರಟಿದ್ದು ಏಕೆ?

ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Prajwal Revanna Case I was never kidnapped and son has made a false complaint Video of victim goes viral

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ ಎನ್ನಲಾದ ಮೈಸೂರಿನ ಕೆ.ಆರ್.‌ ನಗರದ ಮಹಿಳೆಯೊಬ್ಬರನ್ನು ಕಿಡ್ನ್ಯಾಪ್‌ ಮಾಡಿದ್ದಾರೆಂಬ ದೂರಿನ ಮೇಲೆ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ ಬಂಧಿತರಾಗಿದ್ದಾರೆ. ಅವರು ಜಾಮೀನು ಸಿಗದೆ ಪರದಾಟ ನಡೆಸುತ್ತಿರುವ ಈ ಹೊತ್ತಿನಲ್ಲಿ ಅಪಹರಣ ನಡೆದಿದೆ ಎನ್ನಲಾದ ಸಂತ್ರಸ್ತ ಮಹಿಳೆಯ ವಿಡಿಯೊ ವೈರಲ್‌ ಆಗಿದೆ. ಆಕೆ, ನನ್ನನ್ನು ಯಾರು ಅಪಹರಣ ಮಾಡಿಲ್ಲ. ನನ್ನ ಮಗ ತಪ್ಪು ತಿಳಿದು ದೂರು ಕೊಟ್ಟಿದ್ದಾನೆ ಎಂಬ ಹೇಳಿಕೆಯು ವಿಡಿಯೊದಲ್ಲಿದೆ.

ಈಗಾಗಲೇ ಕಿಡ್ನ್ಯಾಪ್‌ ಪ್ರಕರಣದಲ್ಲಿ ಬಂಧಿತರಾಗಿರುವ ಎಚ್‌.ಡಿ. ರೇವಣ್ಣ ಅವರು ತಾವು ಕಿಡ್ನ್ಯಾಪ್‌ ಮಾಡಿಲ್ಲ ಎಂದೇ ಹೇಳಿಕೊಂಡು ಬಂದಿದ್ದಾರೆ. ಈಗ ಸಂತ್ರಸ್ತೆಯ ವಿಡಿಯೊ ವೈರಲ್‌ ಆಗಿದ್ದು, ಈ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ರೇವಣ್ಣ ಪರ ವಕೀಲರು ತಮ್ಮ ಕಕ್ಷಿದಾರರನ್ನು ವಿನಾಕಾರಣ ಟಾರ್ಗೆಟ್‌ ಮಾಡಿದ್ದು, ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಅಲ್ಲದೆ, ಎಸ್‌ಐಟಿ ತನಿಖಾ ಪ್ರಕ್ರಿಯೆಯೇ ಅನುಮಾನ ಮೂಡಿಸುವಂತಿದೆ ಎಂದು ವಾದ ಮಂಡಿಸಿದ್ದರು. ಈಗ ಈ ವಿಡಿಯೊವನ್ನೇ ಆಧಾರವಾಗಿಟ್ಟುಕೊಂಡು ಕೋರ್ಟ್‌ ಮುಂದೆ ಎಸ್‌ಐಟಿ ಹಾಗೂ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆ ಹೆಚ್ಚಿದೆ.

ಏನಿದು ಕೇಸ್‌?

ಪ್ರಜ್ವಲ್‌ ರೇವಣ್ಣ ಅವರು ಅತ್ಯಾಚಾರ ನಡೆಸಿದ್ದಾರೆನ್ನಲಾದ ಮಹಿಳೆ ಮೈಸೂರಿನ ಕೆ.ಆರ್.‌ ನಗರ ನಿವಾಸಿಯಾಗಿದ್ದಾರೆ. ಆದರೆ, ಇವರನ್ನು ಸಾಕ್ಷಿ ನಾಶಕ್ಕಾಗಿ ಎಚ್‌.ಡಿ. ರೇವಣ್ಣ ಹಾಗೂ ಅವರ ಆಪ್ತ ಸತೀಶ್ ಬಾಬಣ್ಣ ಅಪಹರಣ ಮಾಡಿದ್ದಾರೆ ಎಂದು ಕೆ.ಆರ್. ನಗರದಲ್ಲಿ ಸಂತ್ರಸ್ತೆಯ ಪುತ್ರ ನೀಡಿದ ದೂರಿನ ಅನ್ವಯ ಪ್ರಕರಣವನ್ನು ದಾಖಲು ಮಾಡಲಾಗಿತ್ತು. ಇದರ ಬೆನ್ನಲ್ಲೇ ಸಂತ್ರಸ್ತೆಯ ವಿಡಿಯೊ ರಿಲೀಸ್‌ ಆಗಿದೆ. ಇದರಲ್ಲಿ ಮಹಿಳೆಯು ಅಪಹರಣ ಪ್ರಕರಣಕ್ಕೆ ವಿರುದ್ಧವಾಗಿ ಹೇಳಿಕೆ ನೀಡಿದ್ದಾರೆ.

ನನ್ನನ್ನು ಯಾರೂ ಕಿಡ್ನ್ಯಾಪ್‌ ಮಾಡಿಲ್ಲ ಎಂದ ಮಹಿಳೆ!

“ನನ್ನನ್ನು ಯಾರೂ ಕಿಡ್ನ್ಯಾಪ್‌ ಮಾಡಿಲ್ಲ, ನಾನು ಎಲ್ಲಿಯೂ ಹೋಗಿಲ್ಲ. ನನ್ನ ಸಂಬಂಧಿಕರ ಮನೆಯಲ್ಲಿದ್ದೇನೆ. ರೇವಣ್ಣ ಆಗಲಿ, ಪ್ರಜ್ವಲ್ ರೇವಣ್ಣ ಆಗಲಿ, ಭವಾನಿ ಅಕ್ಕಾ ಆಗಲಿ, ಸತೀಶ್ ಬಾಬಾಣ್ಣ ಆಗಲಿ ಯಾರಿಂದಲೂ ತೊಂದರೆ ಆಗಿಲ್ಲ. ನನ್ನನ್ನು ಚೆನ್ನಾಗಿ ನೋಡಿಕೊಂಡು ಕಳಿಸಿಕೊಟ್ಟಿದ್ದಾರೆ. ನಾನು ಆರಾಮಾಗಿದ್ದೇನೆ. ಸಂಬಂಧಿಕರ ಮನೆಯಲ್ಲಿ ಟಿವಿ ನೋಡುವಾಗ ವಿಚಾರ ಗೊತ್ತಾಯಿತು. ಮೊಬೈಲ್‌ನಲ್ಲಿ ಬಂದ ವಿಡಿಯೊಗೂ ನನಗೂ ಯಾವುದೇ ಸಂಬಂಧ ಇಲ್ಲ. ಮನೆಯ ಬಳಿ ಯಾರು ಗಾಬರಿ ಆಗೋದು ಬೇಡ. ನಾನು ಸುರಕ್ಷಿವಾಗಿದ್ದೇನೆ. ಎಲ್ಲರೂ ಆರಾಮಾಗಿರಿ. ನಾಲ್ಕು ದಿನ ಸಂಬಂಧಿಕರ ಮನೆಗೆ ಹೋಗಿದ್ದೆ. ವಾಪಸ್‌ ಬರುತ್ತೇನೆ. ಎಲ್ಲಿ ಯಾರಿಗೆ ಮಾಹಿತಿ ಕೊಡಬೇಕೋ ಕೊಡುತ್ತೇನೆ. ಯಾರು ಮನೆ ಹತ್ತಿರ ಹೋಗಬೇಡಿ, ಪೊಲೀಸ್‌ನವರು ಟಾರ್ಚರ್ ಕೊಡಬೇಡಿ. ಎಲ್ಲರೂ ಗಾಬರಿಯಾಗುತ್ತಾರೆ. ನಾವು ಕೂಲಿ ಮಾಡಿಕೊಂಡು ಇರುವವರು ಹೊಟ್ಟೆ ಮೇಲೆ‌ ಹೊಡಿಯಬೇಡಿ. ಪೊಲೀಸಿನವರು ಮನೆ ಬಳಿ ಬಂದರೆ ಅಕ್ಕಪಕ್ಕದವರು ಏನೆಂದು ಕೊಳ್ಳುವುದಿಲ್ಲ. ಏನಾದರೂ ತೊಂದರೆಯಾದರೆ ನಾನೇ ಬಂದು ಹೇಳಿಕೆ ಕೊಡ್ತೇನೆ. ನನಗಾಗಲಿ, ಕುಟುಂಬದವರಿಗೆ ಆಗಲಿ, ಗಂಡನಿಗಾಗಲೀ ಏನಾದರೂ ತೊಂದರೆಯಾದರೆ ನೀವೇ ಜವಾಬ್ದಾರರು. ನನ್ನ ಮಗ ಗೊತ್ತಿಲ್ಲದೆ ಹೀಗೆ ಮಾಡಿಬಿಟ್ಟಿದ್ದಾನೆ. ನನ್ನನ್ನು ಯಾರೂ ಅಪಹರಣ ಮಾಡಿಲ್ಲ. ನಾನಾಗಿಯೇ ಸಂಬಂಧಿಕರ ಮನೆಗೆ ಬಂದಿದ್ದೇನೆ” ಎಂದು ಸಂತ್ರಸ್ತೆ ವಿಡಿಯೊ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

ಈ ವಿಡಿಯೊ ಮಾಡಿದ್ದು ಯಾರು?

ಸದ್ಯ ಎಸ್‌ಐಟಿ ವಶದಲ್ಲಿರುವ ಸಂತ್ರಸ್ತ ಮಹಿಳೆಯ ಈ ವಿಡಿಯೊವನ್ನು ಮಾಡಿದ್ದು ಯಾರು? ರಿಲೀಸ್ ಮಾಡಿದ್ದು ಯಾರು? ಎಂಬ ಪ್ರಶ್ನೆ ಈಗ ಎಸ್‌ಐಟಿಗೆ ತಲೆನೋವಾಗಿ ಕಾಡುತ್ತಿದೆ. ಹಾಗಾದರೆ, ತಾವು ವಶಕ್ಕೆ ಪಡೆಯುವ ಮೊದಲೇ ಈ ವಿಡಿಯೊವನ್ನು ಮಾಡಲಾಗಿತ್ತಾ? ಆದರೆ, ಮಹಿಳೆಯನ್ನ ಎಲ್ಲಿ ಇರಿಸಿ ಈ ವಿಡಿಯೊ ಮಾಡಲಾಗಿದೆ? ಈ ವಿಡಿಯೊವನ್ನು ಯಾವ? ಯಾರ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಲಾಗಿದೆ. ಈಕೆಯೇ ಆ್ಯಂಡ್ರಾಯ್ಡ್ ಮೊಬೈಲ್ ಅನ್ನು ಬಳಕೆ ಮಾಡುತ್ತಿದ್ದರೇ ಎಂಬಿತ್ಯಾದಿ ಪ್ರಶ್ನೆಗಳೊಂದಿಗೆ ತನಿಖೆ ನಡೆಸಬೇಕಿದೆ.

Continue Reading

ಕರ್ನಾಟಕ

Chetan Chandra: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಮೇಲೆ ಹಲ್ಲೆ; ರಕ್ತ ಬರುವಂತೆ ಥಳಿತ

Chetan Chandra: ಬೆಂಗಳೂರಿನ ಕಗ್ಗಲಿಪುರದಲ್ಲಿ ಕಾರಿನಲ್ಲಿ ಹೋಗುತ್ತಿದ್ದ ನಟ ಚೇತನ್ ಚಂದ್ರ ಅವರನ್ನು ಅಡ್ಡಗಟ್ಟಿ ಕೆಲ ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ.

VISTARANEWS.COM


on

Chetan Chandra
Koo

ಬೆಂಗಳೂರು: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಅವರ ಮೇಲೆ ಹಲ್ಲೆ ಮಾಡಿರುವ ಘಟನೆ (Chetan Chandra) ನಗರದ ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ ನಡೆದಿದೆ. ಪಿಯುಸಿ, ರಾಜಧಾನಿ, ಜರಾಸಂಧ, ಪ್ರಭುತ್ವ ಚಿತ್ರಗಳ ಮೂಲಕ ಖ್ಯಾತವಾಗಿರುವ ನಟನ ಮೇಲೆ ಭಾನುವಾರ ಹಲ್ಲೆ ನಡೆದಿದೆ.

ಕಾರಿನಲ್ಲಿದ್ದ ನಟ ಚೇತನ್ ಚಂದ್ರ ಅವರನ್ನು ರಕ್ತ ಬರುವಂತೆ ಥಳಿಸಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಟ ಚೇತನ್ ಚಂದ್ರ ಮಾಹಿತಿ ಹಂಚಿಕೊಂಡಿದ್ದಾರೆ. ನಟನ ಮೇಲೆ 20ಕ್ಕೂ ಹೆಚ್ಚು ಮಂದಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಈ ಪೈಕಿ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಟ ಚೇತನ್‌ ಚಂದ್ರ ಅವರಿಗೆ ಕಗ್ಗಲಿಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಇದನ್ನೂ ಓದಿ | Ram Charan: ಚುನಾವಣಾ ಪ್ರಚಾರದ ವೇಳೆ ರಾಮ್ ಚರಣ್ ಶರ್ಟ್‌ ಹರಿದ ಫ್ಯಾನ್ಸ್‌: ಅಲ್ಲು ಸುತ್ತ ಜನವೋ ಜನ!

ಭಾನುವಾರ ಅಮ್ಮಂದಿರ ದಿನವಾಗಿದ್ದರಿಂದ ನಟ ಚೇತನ್ ಚಂದ್ರ ಅವರು ದೇವಸ್ಥಾನಕ್ಕೆ ಹೋಗಿ ಬರುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೈಕ್‌ನಲ್ಲಿ ಬಂದ ಕೆಲ ಕಿಡಿಗೇಡಿಗಳು ಕಾರಿಗೆ ಅಡ್ಡ ಹಾಕಿ, ದುಡ್ಡು ಕೀಳಲು ಮುಂದಾಗಿದ್ದಾರೆ. ಹಣ ಕೊಡೋದಿಲ್ಲ ಎಂದಿದ್ದಕ್ಕೆ ಗಲಾಟೆ ಮಾಡಿ, ನಟ ಚೇತನ್ ಚಂದ್ರ ಅವರ ಮುಖಕ್ಕೆ ರಕ್ತ ಬರುವ ಹಾಗೆ ಕಿಡಿಗೇಡಿಗಳು ಹೊಡೆದಿದ್ದಾರೆ.

ಅಮ್ಮನ ನೆನೆದಾಗ ಮಗುವಾಗುವೆ ಎಂದ ಜಗ್ಗೇಶ್‌: ದುನಿಯಾ ವಿಜಯ್‌ ಭಾವುಕ ಪೋಸ್ಟ್‌!

Mother's Day 2024 Duniya Vijay jaggesh Post Viral

ಬೆಂಗಳೂರು: ಅಮ್ಮ ಅಮ್ಮ ಅನ್ನೋ ಮಾತು ಬಂತು ಎಲ್ಲಿಂದ..? ಭೂಮಿಗೆ ಬಂದ (Mother’s Day 2024) ಮೊದಲನೆ ಕಂದನ ಅಳುವ ದನಿಯಿಂದ ʼಈ ಸಾಲುಗಳು ಯಾವಾಗಲೂ ನಮ್ಮನ್ನ ಬಿಡದೇ ಕಾಡುತ್ತವೆ. ʼಅಮ್ಮʼ ಅನ್ನೋ ಶಬ್ದಕ್ಕೆ ಅರ್ಥ ನಿಡುವುದು ಕೂಸೇ ಆದ್ರೂ ಆ ಕೂಸಿಗೆ ರೆಕ್ಕೆ ಕಟ್ಟಿ ಹಾರೋ ಹಾಗೇ ಮಾಡೋಳು ತಾಯಿ. ಪ್ರತಿವರ್ಷ ಮೇ ತಿಂಗಳ 2ನೇ ಭಾನುವಾರ ಮದರ್ಸ್ ಡೇ. ತಾಯಂದಿರ ದಿನದ ಹಿನ್ನೆಲೆಯಲ್ಲಿ ಜಗ್ಗೇಶ್, ದುನಿಯಾ ವಿಜಯ್ ಸೇರಿದಂತೆ ಹಲವರು ತಮ್ಮ ತಾಯಿಯನ್ನು ಸ್ಮರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ.

ನವರಸ ನಾಯಕ ಜಗ್ಗೇಶ್‌ ಅವರು ಇನ್‌ಸ್ಟಾದಲ್ಲಿ ಅಮ್ಮನ ತೊಡೆ ಮೇಲೆ ಮಲಗಿರುವ ಫೋಟೊ ಜತೆಗೆ ಹೀಗೆ ಬರೆದಿದ್ದಾರೆ. ಧನ್ಯವಾದ ಜೀ ಕನ್ನಡ. ನನ್ನ ಪ್ರೀತಿಯ ಅಮ್ಮನ ಈ ರೀತಿ ನೆನೆಯುವಂತ ಕಾಣಿಕೆಗಾಗಿ.
ನಾನು ಇಂದು 61 ವರ್ಷವಾದರು ಅಮ್ಮನ ನೆನೆದಾಗ ಮಗುವಾಗುವೆ. ಅಂತಹ ಶಕ್ತಿಯಿದೆ ಅಮ್ಮನ ಎರಡಕ್ಷರಕ್ಕೆ.
ಕಾರುಣ್ಯ ಸೆಲೆಯ ಓ ಅಮ್ಮಂದಿರೆ…ನೀವುಗಳು ಇರಬೇಕು ಶಾಶ್ವತ. ದೃವನಕ್ಷತ್ರದಂತೆ..! ಮರೆಯಾಗದೆ ಮಕ್ಕಳ ಮುಂದೆ..ʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Viral News: ಇಂತಹ ಅಮ್ಮಂದಿರೂ ಇರ್ತಾರಾ? ಈ ಶಾಕಿಂಗ್‌ ವಿಡಿಯೊ ನೋಡಿದರೆ ನಿಮ್ಮ ರಕ್ತ ಕುದಿಯುವುದು ಖಚಿತ

ದುನಿಯಾ ವಿಜಯ್‌ ಅವರು ಅಮ್ಮನ ಜತೆ ಇರುವ ಫೋಟೊ ಶೇರ್‌ ಮಾಡಿ ʻʻಈ ಉಸಿರು ಕೊಟ್ಟ ನಿನಗೆ
ನನ್ನ ಉಸಿರಿರೊವರೆಗೂ. ಪ್ರತಿ ದಿನ ಆಚರಣೆಯೇ ಅಮ್ಮʼʼ ಎಂದು ಬರೆದುಕೊಂಡಿದ್ದಾರೆ.

ಮಹಾಮಾರಿ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದ ದುನಿಯಾ ವಿಜಯ್‌ ಅಮ್ಮ ನಾರಾಯಣಮ್ಮ ಅವರಿಗೆ ಬ್ರೇನ್ ಸ್ಟ್ರೋಕ್ ಆಗಿತ್ತು. ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ ಹಾಗೂ ತಾಯಿ ನಾರಾಯಣಮ್ಮ ಅವರಿಗೆ ಕೋವಿಡ್ 19 ಪಾಸಿಟಿವ್ ಕಂಡುಬಂದಿತ್ತು. ಮನೆಯಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಿಸಿ, ತಂದೆ-ತಾಯಿಯನ್ನು ದುನಿಯಾ ವಿಜಯ್ ಆರೈಕೆ ಮಾಡಿದ್ದರು. ಮಾರಣಾಂತಿಕ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದ ನಾರಾಯಣಮ್ಮ ಅವರಿಗೆ ಬ್ರೇನ್ ಸ್ಟ್ರೋಕ್ ಆಗಿತ್ತು. 3 ವರ್ಷಗಳ ಹಿಂದೆ ನಟ ದುನಿಯಾ ವಿಜಯ್ ನಾರಾಯಣಮ್ಮ ನಿಧನರಾದರು.

ಸ್ಯಾಂಡಲ್‌ವುಡ್‌ ನಟಿ ಮಾನ್ವಿತಾ ಕಾಮತ್‌ (Manvita Kamath) ಅವರ ತಾಯಿ ಸುಜಾತಾ ಕಾಮತ್‌ ಕಿಡ್ನಿ ವೈಫಲ್ಯದಿಂದಾಗಿ ಕೊನೆಯುಸಿರೆಳೆದಿದ್ದರು. ಈ ದಿನ ನಟಿ ತಮ್ಮ ತಾಯಿಯನ್ನು ನೆನಪಿಸಿಕೊಂಡು, ಮಿಸ್‌ ಯೂ ಅಮ್ಮ ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

ಸ್ಯಾಂಡಲ್‌ವುಡ್‌ ನಟ ದುನಿಯಾ ವಿಜಯ್‌ (Duniya Vijay) ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ವಿಶೇಷ ಅಂದರೆ ಈ ಸಿನಿಮಾ ಮೂಲಕ ದುನಿಯಾ ವಿಜಯ್‌ ಅವರ ಮಗಳು ಮೋನಿಕಾ ಸಿನಿರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ‘ಕಾಟೇರ’ ಚಿತ್ರಕ್ಕೆ ಕಥೆ ಬರೆದಿದ್ದ ಜಡೇಶ್ ಹಂಪಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಮೋನಿಕಾ ಈಗ ಹೆಸರು ಬದಲಾಯಿಸಿಕೊಂಡಿದ್ದಾರೆ. ಸಿನಿಮಾಗಾಗಿ ರಿತಾನ್ಯಾ ಎಂದು ಹೆಸರು ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ | Kannada New Movie: ಮನರಂಜನೆಯ ರಸದೌತಣ ಬಡಿಸಲು ಬಂದ ʻಮೂರನೇ ಕೃಷ್ಣಪ್ಪʼ: ಟ್ರೈಲರ್‌ ಔಟ್‌!

ಸದ್ಯಕ್ಕೆ ಪ್ರೊಡಕ್ಷನ್ ನಂ 2. ಟೈಟಲ್ ಮೂಲಕ ಸಿನಿಮಾ ಚಿತ್ರೀಕರಣ ಚಾಲನೆ ದೊರೆತಿದೆ. ಸತ್ಯ ಪ್ರಕಾಶ್ ನಿರ್ಮಾಪಕರಾಗಿ, ಸಹ ನಿರ್ಮಾಪಕರಾಗಿ ಸೂರಜ್ ಗೌಡ ಇದ್ದಾರೆ. ಕೋಲಾರ ಸುತ್ತಮುತ್ತ ಸಿನಿಮಾದ ಕಥೆ ನಡೆಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ನೈಜ್ಯ ಕಥೆಯನ್ನು ಆಧರಿಸಿದ ಸಿನಿಮಾ ಎಂದು ಹೇಳಿಕೊಂಡಿದೆ. ಕೋಲಾರ ಭಾಷೆಯಲ್ಲಿ ಚಿತ್ರದ ಡೈಲಾಗ್ ಇರಲಿದೆ.

Continue Reading
Advertisement
prajwal revanna case
ಪ್ರಮುಖ ಸುದ್ದಿ20 mins ago

Prajwal Revanna Case: ಎಸ್‌ಐಟಿಗೆ ಸವಾಲೆಸೆದ ನವೀನ್‌ ಗೌಡ; ದೇವರಾಜೇಗೌಡ, ಪ್ರೀತಂಗೌಡ ಆಪ್ತರು ಎಸ್‌ಐಟಿ ಕಸ್ಟಡಿಗೆ?

Health Tips Kannada Stay away from these foods to get rid of acne
ಆಹಾರ/ಅಡುಗೆ21 mins ago

Health Tips Kannada: ಈ ಆಹಾರಗಳಿಂದ ದೂರವಿದ್ದರೆ ಮೊಡವೆ ಸಮಸ್ಯೆಯಿಂದ ಪಾರಾಗಬಹುದು!

Kannada New Movie meghashri starrer kuntebille goes on floor
ಸ್ಯಾಂಡಲ್ ವುಡ್36 mins ago

Kannada New Movie: `ಕುಂಟೆಬಿಲ್ಲೆ’ ಸಿನಿಮಾದ ಮುಹೂರ್ತ: ಶುಭಕೋರಿದ ಗಣ್ಯರು

Brinda Acharya Saavira Gungali Video Song Out
ಸ್ಯಾಂಡಲ್ ವುಡ್50 mins ago

Brinda Acharya: ‘ಸಾವಿರ ಗುಂಗಲಿ’ ಒಲವಿನ ಸವಾರಿ ಹೊರಟ ಬೃಂದಾ ಆಚಾರ್ಯ-ಭರತ್ ಬೋಪಣ್ಣ!

pm narendra Modi Varanasi road show
Lok Sabha Election 20241 hour ago

PM Nanrendra Modi: ನಾಳೆ ವಾರಾಣಸಿಯಲ್ಲಿ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ, ಇಂದು ವೈಭವದ ರೋಡ್‌ ಶೋ

Food Tips Kannada adulterated food effect health
ಲೈಫ್‌ಸ್ಟೈಲ್1 hour ago

Food Tips Kannada: ಕಲಬೆರಕೆ ಆಹಾರಗಳಿಂದ ನಮ್ಮ ಆರೋಗ್ಯದ ಮೇಲಾಗುವ ಪರಿಣಾಮಗಳೇನು?

Jyoti Rai seeks divine blessings at tirupathi
ಕಿರುತೆರೆ1 hour ago

Jyoti Rai: ವೈರಲ್ ವಿಡಿಯೊ ಬೆನ್ನಲ್ಲೇ ಜ್ಯೋತಿ ರೈ ಟೆಂಪಲ್‌ ರನ್‌!

Kochi Tour
ಪ್ರವಾಸ2 hours ago

Kochi Tour: ವಾರಾಂತ್ಯದ ಪ್ರವಾಸಕ್ಕೆ ಕೊಚ್ಚಿ ಸೂಕ್ತ ತಾಣ; ಏನೇನಿವೆ ಆಕರ್ಷಣೆ?

Prajwal Revanna Case HD Revanna jailed
ಪ್ರಮುಖ ಸುದ್ದಿ2 hours ago

HD Revanna Jailed: ಇಂದು ಏನಾಗುತ್ತೆ ಎಚ್‌ಡಿ ರೇವಣ್ಣ ಭವಿಷ್ಯ? ಜಾಮೀನು ಅರ್ಜಿ ಮತ್ತೆ ವಿಚಾರಣೆ

ICMR  Good Health Guidelines
ಆರೋಗ್ಯ2 hours ago

ICMR Good Health Guidelines: ಆರೋಗ್ಯವಾಗಿರಲು ಎಷ್ಟು ಗಂಟೆ ನಿದ್ದೆ ಮಾಡಬೇಕು, ಎಷ್ಟು ಗಂಟೆ ಕೆಲಸ ಮಾಡಬೇಕು? ಆಹಾರ ಏನಿರಬೇಕು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather forecast karnataka rains
ಮಳೆ3 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ5 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ15 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ16 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ16 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ20 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ21 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ1 day ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

ಟ್ರೆಂಡಿಂಗ್‌