Wild Animals Attack : ಮಕ್ಕಳು ಆಟವಾಡುವಾಗ ಓಡೋಡಿ ಬಂದ ಕರಡಿ! - Vistara News

ಗದಗ

Wild Animals Attack : ಮಕ್ಕಳು ಆಟವಾಡುವಾಗ ಓಡೋಡಿ ಬಂದ ಕರಡಿ!

bear attack : ಗದಗದಲ್ಲಿ ಕರಡಿಯೊಂದು ಪ್ರತ್ಯಕ್ಷಗೊಂಡು ಆತಂಕವನ್ನೇ ಮೂಡಿಸಿತ್ತು. ಮಕ್ಕಳು ಆಟವಾಡುವಾಗ ಓಡೋಡಿ ಬಂದ ಕರಡಿಯು ಹಾದುಹೋಗಿದೆ. ಇತ್ತ ಕಲಬುರಗಿಯಲ್ಲಿ ತೋಳಗಳು (Wolf Attack) ಜಾನುವಾರಗಳ ಮೇಲೆ ದಾಳಿ ಮಾಡಿದ್ದು, ಭಯದ ವಾತಾವರಣ (Wild Animals Attack) ನಿರ್ಮಾಣವಾಗಿದೆ.

VISTARANEWS.COM


on

Wild Animals Attack
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗದಗ: ಜನನಿಬೀಡ ಪ್ರದೇಶದಲ್ಲಿ ಕರಡಿಯೊಂದು (bear attack) ಪ್ರತ್ಯಕ್ಷವಾಗಿದೆ. ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ ಘಟನೆ ನಡೆದಿದೆ. ಪಟ್ಟಣದ ಕಡ್ಲಿಪೇಟೆ ಓಣಿ ಸೇರಿದಂತೆ, ಈದ್ಗಾ ಮೈದಾನದ ಬಳಿ ಕರಡಿ (Wild Animals Attack) ಕಾಣಿಸಿಕೊಂಡಿದೆ. ಕಳೆದ‌ ನಾಲ್ಕು ದಿನಗಳಿಂದ ಕರಡಿ ಕಾಣಿಸಿಕೊಳ್ಳುತ್ತಿರುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರಸ್ತೆಯಲ್ಲಿ ಚಿಕ್ಕ ಮಕ್ಕಳು ಆಟ ಆಡುತ್ತಿರುವಾಗ ಕರಡಿಯೊಂದು ಹಾದು ಹೋಗಿದೆ. ಕರಡಿ ಕಂಡೊಡನೆ ಮಕ್ಕಳು ಚೀರಾಡುತ್ತಾ ಓಡಲು ನೋಡಿದ್ದಾರೆ. ಈ ವೇಳೆ ಕರಡಿ ಬೇರೊಂದು ರಸ್ತೆಗೆ ಓಡಿ ಹೋಗಿದೆ. ಅದೃಷ್ಟವಶಾತ್‌ ಯಾರ ಮೇಲೂ ದಾಳಿ ಮಾಡಿಲ್ಲ. ಸ್ಥಳೀಯ ನಿವಾಸಿಗಳು ಆತಂಕದಲ್ಲಿ ದಿನಕಳೆಯುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಆದಷ್ಟು ಬೇಗ ಕರಡಿ‌ ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ.

ಜಾನುವಾರುಗಳನ್ನು ತಿಂದು ಹಾಕಿದ ತೋಳಗಳು

ಕಲಬುರಗಿ: ಕಲಬುರಗಿ ಆಳಂದ ತಾಲೂಕಿನ ಮದಗುಣಕಿ‌ ಗ್ರಾಮದಲ್ಲಿ ತೋಳಗಳು ಕಾಣಿಸಿಕೊಂಡಿವೆ. ಕೊಟ್ಟಿಗೆಯಲ್ಲಿ ಕಟ್ಟಿರುವ ಜಾನುವಾರುಗಳ ಮೇಲೆ ತೋಳಗಳು ದಾಳಿ‌ ನಡೆಸಿವೆ. ಕೆಲ ದಿನಗಳ ಹಿಂದೆ ಜಾನುವಾರುಗಳನ್ನು‌ ತಿಂದು ಹಾಕಿತ್ತು. ಹೀಗಾಗಿ ಅರಣ್ಯಾಧಿಕಾರಿಗಳು ಎರಡು ತೋಳಗಳ ಪತ್ತೆಗೆ ಬೋನು ಹಾಗೂ ಸಿಸಿ‌ ಕ್ಯಾಮೆರಾವನ್ನು ಅಳವಡಿಕೆ ಮಾಡಿದ್ದರು. ಇದೀಗ ತೋಳಗಳ ಸಂಚಾರದ ಚಲನವಲನ ಸಿಸಿ ಕ್ಯಾಮೆರಾದಲ್ಲಿ‌ ಸೆರೆಯಾಗಿದೆ.

ಪೊನ್ನಂಪೇಟೆ ಗ್ರಾಮದಲ್ಲಿ ಅವಿತಿದೆ ಹುಲಿ, ಗ್ರಾಮಸ್ಥರಿಗೆ ಆತಂಕ

ಪೊನ್ನಂಪೇಟೆ (ಮಡಿಕೇರಿ) : ಆಹಾರ ಅರಸಿಕೊಂಡು ಬಂದ ಹುಲಿಯೊಂದು ಇಲ್ಲಿನ ಹರಿಹರ ಗ್ರಾಮದಲ್ಲಿ ಬೀಡುಬಿಟ್ಟಿದ್ದು ಗ್ರಾಮಸ್ಥರು ಭಯದಿಂದ ಜೀವನ ಮಾಡುವಂತಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

ರಾತ್ರಿ ವೇಳೆ ಕಾಡು ಬಿಟ್ಟು ನಾಡಿಗೆ ಬರುತ್ತಿರುವ ಹುಲಿ ಹರಿಹರ ಗ್ರಾಮದ ಸುಬ್ರಹ್ಮಣ್ಯ ದೇಗುದಲ್ಲಿ ಬೀಡುಬಿಟ್ಟಿದೆ. ಮಾಹಿತಿ ತಿಳಿದಾಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಆನೆಗಳ ಮೂಲಕ ಹುಲಿಯ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಹುಲಿ ರಾತ್ರಿಯೆಲ್ಲಾ ದೇವಾಲಯದ ಕೆರೆ ಬಳಿ ಮಲಗಿತ್ತು ಎಂದು ಹೇಳಲಾಗಿದೆ. ಹುಲಿಯ ಪುರ ಪ್ರವೇಶದಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.

ಹುಲಿ ‌ಸೆರೆ ಕಾರ್ಯಾಚರಣೆ ವೇಳೆ ಹೆಜ್ಜೇನು ದಾಳಿ; ಬೆದರಿ ಓಡಿ‌ದ ಸಾಕಾನೆ ಭೀಮ

ಕೊಡಗು: ಹುಲಿ‌ ಸೆರೆ (Tiger attack) ಕಾರ್ಯಾಚರಣೆ ಮಾಡುತ್ತಿದ್ದ ತಂಡದ‌ ಮೇಲೆ‌ ಹೆಜ್ಜೇನು ದಾಳಿ (Honeybee Attack) ಮಾಡಿದೆ. ಕೊಡಗಿನ ಪೊನ್ನಂಪೇಟೆ ತಾಲೂಕಿನ ಹರಿಹರ ಗ್ರಾಮದಲ್ಲಿ ಘಟನೆ ನಡೆದಿದೆ. ಅರಣ್ಯಾಧಿಕಾರಿ ಕನ್ನಂಡ‌ ರಂಜನ್, ಮಾವುತ ಕುಳ್ಳ ಹಾಗೂ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಭೀಮ ಹೆಸರಿನ ಆನೆ ಮೇಲೆ‌ ಜೇನು ಹುಳುಗಳು ಎರಗಿದೆ.

ಹರಿಹರ ಗ್ರಾಮದಲ್ಲಿ ನಿನ್ನೆ ಬುಧವಾರ ಹುಲಿಯೊಂದು ಕಾಣಿಸಿಕೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಅರಣ್ಯಾಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದರು. ಹುಲಿ‌ಸೆರೆಗೆ ಗುರುವಾರ ಕಾರ್ಯಾಚರಣೆ ಆರಂಭಿಸಲಾಗಿತ್ತು. ಎರಡು ಸಾಕು ಆನೆ ಜತೆಗೆ 30ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಏಕಾಏಕಿ ಹೆಜ್ಜೇನು ದಾಳಿ ಮಾಡಿದೆ. ಹೆಜ್ಜೇನು ದಾಳಿಗೆ ಬೆದರಿ ಆನೆ ಭೀಮ ಓಡಿ‌ದೆ.

Honeybee attack

ಸದ್ಯ ಅಸ್ವಸ್ಥ ಅರಣ್ಯಾಧಿಕಾರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸದ್ಯ ಇಂದಿನ ಕಾರ್ಯಾಚರಣೆಗೆ ತಾತ್ಕಾಲಿಕ ಬ್ರೇಕ್‌ ಹಾಕಲಾಗಿದೆ.

ಇದನ್ನೂ ಓದಿ: Searching For Tigers : ಪೊನ್ನಂಪೇಟೆಯಲ್ಲಿ ಗ್ರಾಮದಲ್ಲಿ ಅವಿತಿದೆ ಹುಲಿ, ಗ್ರಾಮಸ್ಥರಿಗೆ ಆತಂಕ; ಇಲ್ಲಿದೆ ವಿಡಿಯೊ

ಚಿಕ್ಕಮಗಳೂರಿನಲ್ಲಿ ಮುಂದುವರೆದ ಕಾಡಾನೆ ದಾಳಿ

ಚಿಕ್ಕಮಗಳೂರಿನಲ್ಲಿ ಕಾಡಾನೆ ಹಾವಳಿ ಮುಂದುವರಿದಿದೆ. ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಮೆಣಸು, ಕಾಫಿ, ಏಲಕ್ಕಿ, ಬಾಳೆ ಬೆಳೆ ನಷ್ಟವಾಗಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದೇವನ್ ಗುಲ್ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಮಂಜುನಾಥ್ ಎಂಬುವರ ತೋಟಕ್ಕೆ ಬಂದ ಕಾಡಾನೆ ಬೆಳೆಯನ್ನು ತುಳಿದು ನಷ್ಟ ಮಾಡಿದೆ.

Elephant attack

ಇದರಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಷ್ಟವಾಗಿದ್ದರಿಂದ ರೈತ ಕಂಗಾಲಾಗಿದ್ದಾರೆ. ನಿನ್ನೆ ಬುಧವಾರ ರಾತ್ರಿಯಿಡೀ ಗ್ರಾಮದ ಸುತ್ತಮುತ್ತ ಎರಡು ಕಾಡಾನೆಗಳು ದಾಳಿ ನಡೆಸಿವೆ. ಇತ್ತ ಸ್ಥಳಕ್ಕೆ ಬಾರದ ಅರಣ್ಯ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಚಿತ್ರದುರ್ಗದಲ್ಲಿ ಕಾಡುಹಂದಿ ಬೇಟೆಗಾರರು ಅರೆಸ್ಟ್‌

ಚಿತ್ರದುರ್ಗ ಅರಣ್ಯಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಕಾಡುಹಂದಿ ಬೇಟೆಗಾರರನ್ನು ಬಂಧಿಸಿದ್ದಾರೆ. ಜೀವಂತ ಕಾಡುಹಂದಿ, ಬಲೆ ಸೇರಿ ವಿವಿಧ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಚಿತ್ರದುರ್ಗ ಮೂಲದ ಸಿದ್ದೇಶ್ (32), ಎಣ್ಣೆಗೆರೆ ಮೂಲದ ಬಾಲಚಂದ್ರ (30) ಬಂಧಿತ ಆರೋಪಿಗಳಾಗಿದ್ದಾರೆ.

Wild boar hunters

ಚಿತ್ರದುರ್ಗ ತಾಲೂಕಿನ ಯರೇನಹಳ್ಳಿ ವಲಯ ಅರಣ್ಯ ಪ್ರದೇಶದಲ್ಲಿದ್ದಾಗ, ಖಚಿತ ಮಾಹಿತಿ ಆಧರಿಸಿ ಅರಣ್ಯಾಧಿಕಾರಿ ಉಷಾರಾಣಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಚಿತ್ರದುರ್ಗದ ಅರಣ್ಯಾಧಿಕಾರಿಗಳಿಂದ ಕೇಸ್ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಇಂದು ಮೂರು ಹೊತ್ತು ಒಂದೊಂದು ವಾತಾವರಣ

Karnataka Weather Forecast : ಹಗಲು ಹೊತ್ತು ಬಿಸಿ ಗಾಳಿ ಬೀಸಿದರೆ, ಮಧ್ಯಾಹ್ನದಂದು ಉರಿ ಬಿಸಿಲು ನೆತ್ತಿ ಸುಡುಲಿದೆ. ರಾತ್ರಿಯಾದರೆ ವಾತಾವರಣವು ಬೆಚ್ಚಗೆ ಇರಲಿದೆ. ಈ ಮಧ್ಯೆ ಕೆಲವೆಡೆ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Dry Weather) ನೀಡಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಶುಷ್ಕ ವಾತಾವರಣ (Dry Weather) ಇದ್ದರೂ, ಕೆಲವೆಡೆ ಮಳೆಯ (Rain News) ಸಿಂಚನವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಏ.2ರಂದು ಮಲೆನಾಡಿನ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ದಕ್ಷಿಣ ಒಳನಾಡಿನ ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ತುಮಕೂರಿನ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಮುಖ್ಯವಾಗಿ ಶುಭ್ರ ಆಕಾಶವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರೆಡ್ ಅಲರ್ಟ್

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ. ಮೇ 5ರವರೆಗೆ ಈ ಜಿಲ್ಲೆಗಳಲ್ಲಿ ತಾಪಮಾನ ವಿಪರೀತವಾಗಿ ಇರಲಿದೆ. ಉರಿ ಸೆಕೆಯ ವಾತಾವರಣ ಇರಲಿದೆ.

ಆರೆಂಜ್ ಅಲರ್ಟ್

ಇನ್ನೂ ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ಬಳ್ಳಾರಿ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಮುಂದಿನ 5 ದಿನಗಳ ಕಾಲ ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೇ 5 ರವರೆಗೆ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ‌Prajwal Revanna Case: ಪ್ರಜ್ವಲ್ ಕಾಂಗ್ರೆಸ್‌ ಬೆಂಬಲಿತ ಸಂಸದ; ನಿಮಗಾಗದಿದ್ದರೆ ನಮಗೆ ಅಧಿಕಾರ ಕೊಡಿ, 24 ಗಂಟೆಯಲ್ಲಿ ಹಿಡಿಯುತ್ತೇವೆ: ಅಶೋಕ್

Summer Tips: ಬಿಸಿಲಿನ ಆಘಾತದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ…

ಬಿಸಿಲು ಈಗಲೇ ಸಹಿಸುವುದಕ್ಕೆ ಅಸಾಧ್ಯವಾಗಿದೆ. ಇದಲ್ಲ, ಇನ್ನೂ ಹೆಚ್ಚಾಗಲಿದೆ ಎಂಬ ಮುನ್ಸೂಚನೆ ಹವಾಮಾನ ತಜ್ಞರಿಂದ ದೊರೆತಿದೆ. ಈ ಘೋರ ಬಿಸಿಲಿನಲ್ಲಿ ಸ್ಮೃತಿ ತಪ್ಪಿದವರ ಸುದ್ದಿಗಳು ಅಲ್ಲಲ್ಲಿ ಕೇಳುತ್ತಿವೆ. ಬಿಸಿಲಾಘಾತಕ್ಕೆ ಜೀವ ತೆತ್ತವರ ವಿಷಯಗಳೂ ಕೇಳಿಬರುತ್ತಿವೆ. ಛತ್ರಿ ಹಿಡಿದೇ ಹೋಗುತ್ತೇವೆ ಹೊರಗೆ, ಚೆನ್ನಾಗಿ ನೀರು ಕುಡಿಯುತ್ತೇವೆ ನಾವು. ನಮಗೇನು ಬಿಸಿಲಿನ ಭಯವಿಲ್ಲ ಎನ್ನುವವರಿದ್ದಾರೆ. ವಿಷಯ ಹಾಗಲ್ಲ, ಬಿಸಿಲ ದಿನಗಳಲ್ಲಿ ಆರೋಗ್ಯದ ಕಾಳಜಿಯನ್ನು ಎಷ್ಟು ಮಾಡಿದರೂ ಸಾಲದು. ಒಮ್ಮೆ ಶಾಖದ ಆಘಾತಕ್ಕೆ ಅಥವಾ ನಿರ್ಜಲೀಕರಣಕ್ಕೆ ತುತ್ತಾದರೆ, ಚೇತರಿಸಿಕೊಳ್ಳಲು ನಾಲ್ಕಾರು ದಿನಗಳಾದರೂ ಬೇಕಾಗುತ್ತದೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯದಿದ್ದರೆ, ಜೀವಕ್ಕೆ ಅಪಾಯ ತಪ್ಪಿದ್ದಲ್ಲ. ಹಾಗಾದರೆ ಇವುಗಳಿಂದ (Summer Tips) ತಪ್ಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲವೇ?

Dry weather Summer Heat

ಏಕೆ ಹೀಗಾಗುತ್ತದೆ?

ಮೊದಲಿಗೆ, ಬಿಸಿಲಿಗೆ ಎಚ್ಚರ ತಪ್ಪುವುದೇಕೆ ಎಂಬುದನ್ನು ಅರ್ಥ ಮಾಡಿಕೊಳ್ಳೋಣ. ಹೊರಗಿನ ವಾತಾವರಣದ ಉಷ್ಣತೆಯನ್ನು ಆಧರಿಸಿ, ನಮ್ಮ ದೇಹ ತನ್ನ ಉಷ್ಣತೆಯನ್ನು ಮಾರ್ಪಾಡು ಮಾಡಿಕೊಳ್ಳುತ್ತದೆ. ಹೊರಗಿನ ತಾಪಮಾನ ತೀವ್ರವಾಗಿ ಏರಿಕೆಯಾದಾಗ, ದೇಹದೊಳಗಿನ ಉಷ್ಣತೆಯನ್ನು ತಗ್ಗಿಸುವುದಕ್ಕೆ ಶರೀರ ಬೆವರಲು ಪ್ರಾರಂಭಿಸುತ್ತದೆ. ಇದರಿಂದಲೇ ದೇಹ ತಣ್ಣಗಾಗಬೇಕು, ಆಂತರಿಕ ಉಷ್ಣತೆ ನಿಯಂತ್ರಣದಲ್ಲಿ ಇರಬೇಕು. ಆದರೆ ಈ ಎಲ್ಲ ತಂತ್ರಗಳು ಕೈಕೊಟ್ಟಾಗ, ಸಾಕಾಗದೆ ಇದ್ದಾಗ ಅಥವಾ ಅತಿಯಾಗಿ ಬೆವರಿ ದೇಹದಲ್ಲಿ ನೀರಿನಂಶ ಕಡಿಮೆ ಆದಾಗ, ಎಚ್ಚರ ತಪ್ಪುತ್ತದೆ. ಇದರಿಂದ ಮೆದುಳಿಗೆ ಅಗತ್ಯವಾದಷ್ಟು ರಕ್ತಸಂಚಾರ ಆಗದಿದ್ದರೆ, ಪಾರ್ಶ್ವವಾಯು ಸಂಭವಿಸಿ ಜೀವಹಾನಿಯೂ ಆಗಬಹುದು.

ಮಾನವ ಶರೀರ ತನ್ನಷ್ಟಕ್ಕೆ ತಡೆದುಕೊಳ್ಳಲು ಸಾಧ್ಯವಾಗುವ ಗರಿಷ್ಟ ಉಷ್ಣತೆಯೆಂದರೆ ೪೨.೩ ಡಿಗ್ರಿ ಸೆ. ಇದಿಷ್ಟು ತಡೆಯುವುದೂ ಸುಲಭವಿಲ್ಲ. ಇನ್ನು ಇದಕ್ಕಿಂತಲೂ ಹೆಚ್ಚಿನ ತಾಪಮಾನವನ್ನು ಸಹಿಸಿಕೊಳ್ಳಲು ಏನೆಲ್ಲ ಉಪಚಾರ ಸಾಧ್ಯವೋ ಅದನ್ನು ನಮಗೆ ನಾವೇ ಮಾಡಿಕೊಳ್ಳಬೇಕು. ಸಿಕ್ಕಾಪಟ್ಟೆ ನೀರು ಕುಡಿಯುವುದು, ಎಲೆಕ್ಟ್ರೋಲೈಟ್‌ ಮರುಪೂರಣ ಮಾಡುವುದು, ಚೆನ್ನಾಗಿ ಗಾಳಿಯಾಡುವ ವಾತಾವರಣದಲ್ಲಿರುವುದು- ಇಂಥವೆಲ್ಲ ನಾವು ಅಗತ್ಯವಾಗಿ ಮಾಡಬೇಕಾದ ಕೆಲಸಗಳು.

ಉಷ್ಣತೆಗೆ ಮಾತ್ರವಲ್ಲ

ತೀವ್ರ ತಾಪಮಾನಗಳಿಗೆ ಎಚ್ಚರ ತಪ್ಪುವುದು ಬಿಸಿ ಹೆಚ್ಚಾದಾಗ ಮಾತ್ರವಲ್ಲ, ತೀವ್ರ ಚಳಿಯಲ್ಲೂ ಆಗುತ್ತದೆ. ಈ ಎರಡೂ ಅತಿರೇಕದ ತಾಪಮಾನಗಳಲ್ಲಿ ದೇಹದ ಉಷ್ಣತಾ-ನಿಯಂತ್ರಕ ವ್ಯವಸ್ಥೆ ಕೈಕೊಡಬಹುದು. ಬಿಸಿ ಹೆಚ್ಚಾದಾಗ ಮೆದುಳಿಗೆ ರಕ್ತಸಂಚಾರ ಸರಾಗ ಆಗದಿರುವ ಸಂಭವ ಇರುವದಂತೆಯೇ, ಚಳಿ ಹೆಚ್ಚಾದಾಗಲೂ ಆಗುತ್ತದೆ. ಹೊರಗಿನ ಚಳಿ ತೀವ್ರವಾಗಿ ಹೆಚ್ಚಾದರೆ, ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳುವುದಕ್ಕೆ ರಕ್ತ ನಾಳಗಳು ಸಂಕೋಚಗೊಳ್ಳುತ್ತವೆ. ಹೀಗೆ ಸಂಕೋಚಗೊಳ್ಳುವುದು ಅತಿಯಾದರೆ ಆಗಲೂ ಮೆದುಳಿಗೆ ಬೇಕಾದಷ್ಟು ರಕ್ತಸಂಚಾರ ಆಗದೆ ಜ್ಞಾನ ತಪ್ಪಬಹುದು.

Summer Fashion

ತಪ್ಪಿಸಿಕೊಳ್ಳಲಾಗದೆ?

ಖಂಡಿತ ಸಾಧ್ಯವಿದೆ. ಮೊದಲಿಗೆ, 40 ಡಿ.ಸೆ. ಉಷ್ಣತೆಯನ್ನು ತಲುಪಿದಾಗ ಮನೆಯಿಂದ ಹೊರಗೆ ಹೋಗಬೇಡಿ. ಹೋಗುವುದು ಅನಿವಾರ್ಯವಾದರೆ, ಸಡಿಲವಾದ ಬಿಳಿ ಅಥವಾ ತಿಳಿ ಬಣ್ಣದ ಹತ್ತಿಯ ಬಟ್ಟೆಗಳನ್ನೇ ಧರಿಸಿ. ತಲೆಗೆ ಟೋಪಿ, ಛತ್ರಿಗಳಂಥವು ಇದ್ದರೆ ಒಳ್ಳೆಯದು. ನಿಲ್ಲಿಸಿದ ಕಾರಿನೊಳಗೆ ಯಾರನ್ನೂ ಬಿಡಬೇಡಿ. ಈ ಸೆಕೆಯಲ್ಲಿ ದಿನಕ್ಕೆ ಐದು ಲೀಟರ್‌ ನೀರು ಅಥವಾ ಪೇಯಗಳನ್ನು ಕುಡಿಯುವ ಗುರಿ ಇರಿಸಿಕೊಳ್ಳಿ. ಆಲ್ಕೋಹಾಲ್‌ ಮತ್ತು ಕೆಫೇನ್‌ ಸೇವನೆಯ ಮೇಲೆ ಕಡಿವಾಣ ಅಗತ್ಯ. ಇಲ್ಲದಿದ್ದರೆ ದೇಹ ಬೇಗನೇ ನಿರ್ಜಲೀಕರಣಕ್ಕೆ ತುತ್ತಾಗುತ್ತದೆ. ಜೊತೆಗೆ, ಸೆಕೆಯಲ್ಲಿ ದೇಹವನ್ನು ತಂಪಾಗಿಸುವ ಶಾರೀರಿಕ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತದೆ. ತಲೆನೋವು, ಅತಿಯಾಗಿ ಬೆವರುವುದು, ಬಾಯಿ ಒಣಗುವುದು, ತೀರದ ದಾಹ, ಮೈಯೆಲ್ಲ ಬಿಸಿಯಾದ ಅನುಭವಗಳು ಆದರೆ ಜಾಗ್ರತೆ ಮಾಡಿ. ತಕ್ಷಣವೇ ದೇಹವನ್ನು ತಂಪಾಗಿಸುವ ಬಗ್ಗೆ ಕ್ರಮ ಕೈಗೊಳ್ಳಿ. ತಂಪಾದ ಬಟ್ಟೆಯಿಂದ ಇಡೀ ದೇಹವನ್ನು ಒರೆಸಬಹುದು. ಒಆರೆಸ್‌, ಎಳನೀರು ಮುಂತಾದ ಎಲೆಕ್ಟ್ರೋಲೈಟಿಕ್‌ ಪೇಯಗಳು ಬೇಕಾಗುತ್ತವೆ. ಕೂಲರ್‌, ಎಸಿಯಂಥ ಉಪಕರಣಗಳ ಮೂಲಕ ಮನೆಯ ವಾತಾವರಣವನ್ನು ತಂಪಾಗಿಸಲು ಪ್ರಯತ್ನಿಸಿ. ಈ ಹೊತ್ತಿನಲ್ಲಿ ಮನೆಯಿಂದ ಹೊರಗಿದ್ದರೆ, ತಂಪಾದ ನೆರಳಿನಂಥ ಜಾಗಕ್ಕೆ ಹೋಗಿ. ಬಿಸಿಲಿನ ಆಘಾತ ತಾಗಿದಾಗ ತ್ವರಿತವಾಗಿ ಕ್ರಮ ಕೈಗೊಳ್ಳದಿದ್ದರೆ ಜೀವಕ್ಕೇ ಎರವಾಗುತ್ತದೆ, ನೆನಪಿರಲಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮಳೆಗಾಗಿ ಕಪ್ಪೆಗಳಿಗೆ ಮದುವೆ; ಶಾಖದ ಹೊಡೆತಕ್ಕೆ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka weather Forecast : ಮಳೆಗಾಗಿ (Rain News) ಕಸರತ್ತು ಶುರುವಾಗಿದ್ದು ಮೈಸೂರಲ್ಲಿ ಕಪ್ಪೆಗಳಿಗೆ ಮದುವೆ ಮಾಡಲಾಗಿದೆ. ತೊಪ್ಪೆಯಾಗುವಂತೆ ಮಳೆ ಹೊಯ್ಯಲೆಂದು ಕಪ್ಪೆಗಳ ಕಟ್ಟಿಕೊಂಡು ಬಂದು ಗ್ರಾಮಸ್ಥರು ತಾಳಿ ಕಟ್ಟಿಸಿದ್ದಾರೆ. ಇತ್ತ 6 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಪ್ಪಳಿಸಲಿದ್ದು, ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ ಘೋಷಿಸಿದೆ.

VISTARANEWS.COM


on

By

karnataka weather Forecast
Koo

ಮೈಸೂರು/ಬೆಂಗಳೂರು: ಮಳೆ ಆಗದೆ ನೀರಿಗಾಗಿ ಎಲ್ಲಿಲ್ಲದ ಸಂಕಷ್ಟ ಎದುರಾಗುತ್ತಿದ್ದು, ಜನರು ಮಳೆಗಾಗಿ ದೇವರಲ್ಲಿ ಮೊರೆ ಹೋಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಒಂದೊಂದು ಕಡೆ ಒಂದೊಂದು ಸಂಪ್ರದಾಯಗಳೂ ಚಾಲ್ತಿಯಲ್ಲಿವೆ. ಈಗ ಮೈಸೂರಿನ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮಳೆಗಾಗಿ ಕಪ್ಪೆಗಳಿಗೆ ಮದುವೆ ಮಾಡಿದ್ದಾರೆ. ಮಳೆ ಬಾರದಿರುವ ಸಂಕಟದ (Karnataka Weather Forecast) ಮಧ್ಯೆ ಮಳೆ ಬರಲಿ (Rain News), ವರುಣ ದೇವ ಸಂತುಷ್ಟಗೊಳ್ಳಲಿ, ದಿನವೂ ಮೈ ತೊಪ್ಪೆಯಾಗುವಷ್ಟು ಮಳೆ ಸುರಿಯಲಿ, ಕೃಷಿ ಚಟುವಟಿಕೆಗೆ ತೊಂದರೆಯಾಗದಿರಲಿ, ಭೂತಾಯಿಗೆ ಬೇಕಾಗುವಷ್ಟು ಮಳೆ ಸುರಿಯಲಿ, ಅಂತರ್ಜಲ ಪೂರ್ಣಗೊಳ್ಳಲಿ, ನದಿ, ಹಳ್ಳಕೊಳ್ಳಗಳು ತುಂಬಿಕೊಳ್ಳಲಿ ಎಂದು ಪ್ರಾರ್ಥನೆ ಮಾಡಿದ್ದಾರೆ. ಬಿಸಿಲಿನ ಬೇಗೆಗೆ ತತ್ತರಿಸಿದ ಜನರು ಮಳೆ ಸುರಿಯುವಂತೆ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದರು. ಗ್ರಾಮದ ಬೀದಿ ಬೀದಿಗಳಲ್ಲಿ ಕಪ್ಪೆಗಳ ಮೆರವಣಿಗೆ ಮಾಡಿ ತಮಟೆ ಬಾರಿಸಿದ್ದಾರೆ. ಹುಯ್ಯೋ ಹುಯ್ಯೋ ಮಳೆರಾಯ ಬಾಳೆ ತೋಟಕ್ಕೆ ನೀರಿಲ್ಲ ಎಂದು ಘೋಷಣೆ ಕೂಗಿದರು.

ಇದನ್ನೂ ಓದಿ: Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

ಮುಂದುವರಿಯಲಿದೆ ಒಣಹವೆ

ರಾಜ್ಯಾದ್ಯಂತ ಇನ್ನೆರಡು ದಿನಗಳು ಒಣಹವೆ ಇರುವ ಸಾಧ್ಯತೆ ಇದೆ. ಏ.2-3ರಂದು ಶುಷ್ಕ ವಾತಾವರಣ ಇದ್ದರೆ, ಏಪ್ರಿಲ್‌ 4ರಂದು ಚಾಮರಾಜನಗರದಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಶಾಖದ ಅಲೆಯ ಎಚ್ಚರಿಕೆ

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ.

ರಾತ್ರಿ ಬೆಚ್ಚನೆಯ ವಾತಾವರಣ

ಮುಂದಿನ 5 ದಿನಗಳವರೆಗೆ ಕರ್ನಾಟಕದ ಉತ್ತರ ಒಳಭಾಗದಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮೇ 5ರಂದು ಉತ್ತರ ಕನ್ನಡ ಬಿಸಿ ಮತ್ತು ಆರ್ದ್ರತೆಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

6 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Lok Sabha Election 2024: ಮೋದಿಯವರ ವಿಕಸಿತ ಭಾರತ ಸಾಕಾರಗೊಳಿಸಲು ಬೊಮ್ಮಾಯಿಯವರನ್ನು ಗೆಲ್ಲಿಸಿ: ಜೆಪಿ ನಡ್ಡಾ

Lok Sabha Election 2024: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರ ಪರ ಬ್ಯಾಡಗಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬೃಹತ್ ರೋಡ್ ಶೋ‌ ನಡೆಸಿ, ಮತಯಾಚನೆ ನಡೆಸಿದರು.

VISTARANEWS.COM


on

BJP National President JP Nadda Election Campaign for Haveri Gadag Lok Sabha Constituency BJP Candidate Basavaraj Bommai
Koo

ಹಾವೇರಿ (ಬ್ಯಾಡಗಿ): ಪ್ರಧಾನಿ ನರೇಂದ್ರ‌ ಮೋದಿಯವರ (PM Narendra Modi) ವಿಕಸಿತ ಭಾರತದ ಕನಸು ಸಾಕಾರಗೊಳಿಸಲು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರನ್ನು ಗೆಲ್ಲಿಸಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಕರೆ (Lok Sabha Election 2024) ನೀಡಿದ್ದಾರೆ.

ಬ್ಯಾಡಗಿಯಲ್ಲಿ ಬಸವರಾಜ ಬೊಮ್ಮಾಯಿಯವರ ಪರ ಬೃಹತ್ ರೋಡ್ ಶೋ‌ ನಡೆಸಿ, ಮತಯಾಚಿಸಿ ಮಾತನಾಡಿದ ಅವರು, ನಿಮ್ಮ ಉತ್ಸಾಹ ನೋಡಿದರೆ ಬೊಮ್ಮಾಯಿಯವರನ್ನು ಸಂಸತ್ ಸದಸ್ಯರನ್ನಾಗಿ ಮಾಡುವ ತೀರ್ಮಾನ ಮಾಡಿದ್ದೀರಿ. ಇದು ಬೊಮ್ಮಾಯಿಯವರ ಚುನಾವಣೆಯಲ್ಲ. ಮೋದಿಯವರು ವಿಕಸಿತ ಭಾರತ ಮಾಡಲು ಚುನಾವಣೆ ನಡೆಯುತ್ತಿದೆ. ಅವರನ್ನು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿ ಕಳುಹಿಸುವಂತೆ ಮನವಿ ಮಾಡಿದರು.

ಇದನ್ನೂ ಓದಿ: RBI Guideline: ಬ್ಯಾಂಕುಗಳಿಗೆ ಬಿಸಿ ಮುಟ್ಟಿಸಿದ ಆರ್‌ಬಿಐ; ಸಂಗ್ರಹಿಸಿದ ಹೆಚ್ಚುವರಿ ಶುಲ್ಕ ಮರುಪಾವತಿಗೆ ಸೂಚನೆ

ಮೋದಿಯವರು ನಿಮಗೆ ಕಿಸಾನ್ ಸಮ್ಮಾನ್ ನೀಡಿದ್ದಾರಲ್ವಾ, ಉಜ್ವಲ ಗ್ಯಾಸ್ ನೀಡಿದ್ದಾರಲ್ವಾ, ನೀರು ನೀಡಿದ್ದಾರಲ್ವಾ, ಮೋದಿ ಭಾರತವನ್ನು ಆರ್ಥಿಕತೆಯಲ್ಲಿ ವಿಶ್ವದ ಐದನೇ ಸ್ಥಾನಕ್ಕೆ ತಂದು ನಿಲ್ಲಿಸಿದ್ದಾರೆ. ಅವರನ್ನು ಮೂರನೇ ಬಾರಿ ಪ್ರಧಾನಿ ಮಾಡಿದರೆ ಭಾರತವನ್ನು ವಿಶ್ವದ ಮೂರನೇ ಆರ್ಥಿಕ ಶಕ್ತಿಯಾಗಿ ಮಾಡುತ್ತಾರೆ ಎಂದರು.

ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ, ಇಂಡಿ ಒಕ್ಕೂಟ ಭ್ರಷ್ಟಾಚಾರಿಗಳ ಕೂಟವಾಗಿದೆ. ಕಾಂಗ್ರೆಸ್ ಯಾವಾಗಲೂ ಭ್ರಷ್ಟಾಚಾರಿಗಳನ್ನು ರಕ್ಷಣೆ ಮಾಡುತ್ತ ಬಂದಿದ್ದಾರೆ. ಅಗಸ್ಟಾ ವೆಂಸ್ಟ್ ಲ್ಯಾಂಡ್ ಹಗರಣ, ಅಕ್ಕಿ ಹಗರಣ, ಟುಜಿ ಹಗರಣ, ಮಮತಾ, ಅಕಿಲೇಶ್ ಯಾದವ್, ಡಿಎಂಕೆ ನಾಯಕರು ಎಲ್ಲರೂ ಭ್ರಷ್ಟಾಚಾರ ಮಾಡಿದ್ದಾರೆ. ಡಿ.ಕೆ. ಶಿವಕುಮಾರ್ ಕೂಡ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಆರೋಪಿಸಿದರು.

ಬೇಲ್‌ ಮೇಲೆ ನಾಯಕರು

ಇಂಡಿ ಒಕ್ಕೂಟದ ಬಹುತೇಕ ನಾಯಕರು ಬೇಲ್ ಮೇಲೆ‌ ಇದ್ದಾರೆ. ಕಾಂಗ್ರೆಸ್ ನಾಯಕಿ ಸೊನಿಯಾ ಗಾಂಧಿ, ರಾಹುಲ್ ಗಾಂಧಿ, ಕಾರ್ತಿ ಚಿದಂಬರ್, ಲಾಲು ಪ್ರಸಾದ್, ಡಿ.ಕೆ. ಶಿವಕುಮಾರ್ ಎಲ್ಲರೂ ಬೇಲ್ ಮೇಲೆ ಇದ್ದಾರೆ. ಅರವಿಂದ ಕೇಜ್ರಿವಾಲ್ ಜೈಲಿನಲ್ಲಿದ್ದಾರೆ. ಇಂತಹ ನಾಯಕರು ನಮಗೆ ಬೇಕಾ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Fortis Hospital: ಪಾರ್ಕಿನ್ಸನ್‌ ಕಾಯಿಲೆ ಚಿಕಿತ್ಸೆಗೆ ಪ್ರತ್ಯೇಕ ಕ್ಲಿನಿಕ್‌ ಆರಂಭಿಸಿದ ಫೋರ್ಟಿಸ್‌ ಆಸ್ಪತ್ರೆ

ಈ ಬಾರಿ ಕೇಂದ್ರದಲ್ಲಿ 400 ಕ್ಕೂ ಹೆಚ್ಚು ಸ್ಥಾನ ಗೆಲ್ಲಲು, ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಲು ಎಲ್ಲರೂ ಬಿಜೆಪಿಗೆ ಮತ ಹಾಕಿ ಬಸವರಾಜ ಬೊಮ್ಮಾಯಿಯವರನ್ನು ಸಂಸದರನ್ನಾಗಿ ಮಾಡಿ ದೆಹಲಿಗೆ ಕಳುಹಿಸಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವ ಬಿ.ಸಿ. ಪಾಟೀಲ್ ಪಾಲ್ಗೊಂಡಿದ್ದರು.

ಇದನ್ನೂ ಓದಿ: Campa cola: ಕ್ಯಾಂಪಾ ಕೋಲಾ ಪ್ರಚಾರದ ಹೊಸ ವಿಡಿಯೊ ಬಿಡುಗಡೆ ಮಾಡಿದ ರಿಲಯನ್ಸ್

ಕಾಗಿನೆಲೆ ಗುರು ಪೀಠಕ್ಕೆ ಭೇಟಿ

ಇದಕ್ಕೂ ಮೊದಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, ಕಾಗಿನೆಲೆ ಗುರು ಪೀಠಕ್ಕೆ ಭೇಟಿ ನೀಡಿ, ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

Continue Reading

ಕರ್ನಾಟಕ

Lok Sabha Election 2024: ಬಸವರಾಜ ಬೊಮ್ಮಾಯಿಗೆ ಪತ್ರ ಬರೆದ ಪ್ರಧಾನಿ ಮೋದಿ; ಕೊಟ್ಟ ಟಾಸ್ಕ್‌ ಏನು?

Lok Sabha Election 2024: ಮಾಜಿ ಸಿಎಂ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಪತ್ರ ಬರೆದು, ಚುನಾವಣೆಯಲ್ಲಿ ಗೆದ್ದು ಬರುವಂತೆ ಶುಭ ಕೋರಿದ್ದಾರೆ. ನೀವು ಸಂಸದರಾಗಿ ನನ್ನ ತಂಡ ಸೇರುತ್ತಿರುವುದು ದೊಡ್ಡ ಆಸ್ತಿ ಎಂದು ತಿಳಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್‌ ಹಾಗೂ ಇಂಡಿ ಒಕ್ಕೂಟದ ಸಮಾಜ ಒಡೆಯುವ ಮನಸ್ಥಿತಿ, ಎಸ್ಸಿ ಎಸ್ಟಿ ಹಾಗೂ ಒಬಿಸಿ ಸಮುದಾಯಗಳ ಮೀಸಲಾತಿಯನ್ನು ತಮ್ಮ ವೋಟ್ ಬ್ಯಾಂಕ್ ಸಮುದಾಯಕ್ಕೆ ಧರ್ಮಾಧಾರಿತ ಮೀಸಲಾತಿ ಸಂವಿಧಾನ ವಿರೋಧಿಯಾದರೂ ಅವರಿಗೆ ಕೊಡಲು ತೀರ್ಮಾನಿಸಿದ್ದಾರೆ. ಅಲ್ಲದೇ ಅವರು ನಿಮ್ಮ ಪಿತ್ರಾರ್ಜಿತ ಆಸ್ತಿಯನ್ನು ತಮ್ಮ ವೋಟ್ ಬ್ಯಾಂಕ್ ಸಮುದಾಯಕ್ಕೆ ಹಂಚಿಕೆ ಮಾಡುವ ಅಪಾಯಕಾರಿ ತೀರ್ಮಾನ ಮಾಡಿದ್ದಾರೆ. ಇದನ್ನು ನಾವೆಲ್ಲರೂ ಒಟ್ಟಾಗಿ ತಡೆಯಬೇಕಿದೆ ಎಂದು ಕರೆ ಕೊಟ್ಟಿದ್ದಾರೆ.

VISTARANEWS.COM


on

Prime Minister Narendra Modi wrote a letter to former CM Basavaraj Bommai
Koo

ನವ ದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಪತ್ರ ಬರೆದು, ಚುನಾವಣೆಯಲ್ಲಿ (Lok Sabha Election 2024) ಗೆದ್ದು ಬರುವಂತೆ ಶುಭ ಕೋರಿದ್ದಾರೆ. ನೀವು ಸಂಸದರಾಗಿ ನನ್ನ ತಂಡ ಸೇರುತ್ತಿರುವುದು ದೊಡ್ಡ ಆಸ್ತಿ ಎಂದು ತಿಳಿಸಿದ್ದಾರೆ.

ಸುದೀರ್ಘ ಪತ್ರ ಬರೆದಿರುವ ಅವರು, ನೀವು ಮುಖ್ಯಮಂತ್ರಿಯಾಗಿ, ನೀರಾವರಿ ಸಚಿವರಾಗಿ, ಗೃಹ ಸಚಿವರಾಗಿ, ಕಾನೂನು ಸಚಿವರಾಗಿ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ್ದೀರಿ, ನೀವು ಶಿಗ್ಗಾವಿಯಲ್ಲಿ ಸುಮಾರು 30 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಮಾಡಿದ್ದೀರಿ, ಕ್ಷೇತ್ರದಲ್ಲಿ ಸಿಮೆಂಟ್ ರಸ್ತೆಗಳು, ಶಿಕ್ಷಣ ಸಂಸ್ಥೆಗಳನ್ನು ನಿರ್ಮಾಣ ಮಾಡಿದ್ದೀರಿ, ಕೋವಿಡ್ ಸಂದರ್ಭದಲ್ಲಿ ನಿಮ್ಮ ಸ್ವಂತ ಮನೆಯನ್ನು ಕೋವಿಡ್ ಕೇಂದ್ರವನ್ನಾಗಿ ಮಾಡಿ ಆಸ್ಪತ್ರೆಗಳ ಮೇಲಿನ ಭಾರ ಕಡಿಮೆ ಮಾಡಿದ್ದೀರಿ. ನೇಕಾರರಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಿ, ಆಧುನಿಕ ತಂತ್ರಜ್ಞಾನ ಬಳಸಿ ಅವರ ಜೀವನ ಮಟ್ಟ ಸುಧಾರಣೆ ಮಾಡಿದ್ದೀರಿ, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಮಾಡಿದ್ದೀರಿ, ನೀವು ಒಬ್ಬ ಕಾರ್ಯಕರ್ತರಾಗಿ ಪಡೆದ ಅನುಭವ ಜನ ಸೇವಕರಾಗಿ ಮಾಡಿದ ಸೇವೆ ಹಾವೇರಿ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: RBI Guideline: ಬ್ಯಾಂಕುಗಳಿಗೆ ಬಿಸಿ ಮುಟ್ಟಿಸಿದ ಆರ್‌ಬಿಐ; ಸಂಗ್ರಹಿಸಿದ ಹೆಚ್ಚುವರಿ ಶುಲ್ಕ ಮರುಪಾವತಿಗೆ ಸೂಚನೆ

ಜನರ ಆಶೀರ್ವಾದದಿಂದ ನೀವು ಸಂಸದರಾಗಿ ನಮ್ಮ ತಂಡದ ಸದಸ್ಯರಾಗಿ ಬರುವುದು ನನಗೆ ದೊಡ್ಡ ಆಸ್ತಿ ಸಿಕ್ಕಂತೆ. ನಮ್ಮ ತಂಡ ಹಾವೇರಿ ಕ್ಷೇತ್ರ ಹಾಗೂ ದೇಶದ ಅಭಿವೃದ್ಧಿಗೆ ಶ್ರಮವಹಿಸಲಿದೆ. ನಾನು ಈ ಪತ್ರದ ಮೂಲಕ ಕ್ಷೇತ್ರದ ಜನತೆಗೆ ಹೇಳುವುದೇನೆಂದರೆ, ಇದು ಸಾಮಾನ್ಯ ಚುನಾವಣೆಯಲ್ಲ ಇದು ದೇಶದ ಪ್ರತಿಯೊಂದು ಕುಟುಂಬದ ವಿಶೇಷವಾಗಿ ಹಿರಿಯ ನಾಗರಿಕರು ಕಳೆದು ಐದಾರು ದಶಕದಲ್ಲಿ ಅನುಭವಿಸಿದ ತೊಂದರೆಗಳು ಕಳೆದ ಒಂದು ದಶಕದಲ್ಲಿ ಸಾಕಷ್ಟು ಬೆಳವಣಿಗೆಗಳನ್ನು ಕಂಡಿದ್ದಾರೆ. ಅನೇಕ ಜನರ ಜೀವನ ಮಟ್ಟ ಸುಧಾರಣೆಯಾಗಿದೆ. ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ. ಇನ್ನೂ ಸಾಕಷ್ಟು ಸಮಸ್ಯೆಗಳಿವೆ. ಈ ಚುನಾವಣೆ ಜನರ ಜೀವನಮಟ್ಟವನ್ನು ಇನ್ನಷ್ಟು ಸುಧಾರಣೆಗೊಳಿಸಲು ಪ್ರೇರಣೆಯಾಗಲಿದೆ.

ಈ ಚುನಾವಣೆಯಲ್ಲಿ ಬಿಜೆಪಿ ಪಡೆಯುವ ಪ್ರತಿಯೊಂದು ಮತವೂ 2047ಕ್ಕೆ ಅಭಿವೃದ್ಧಿ ಹೊಂದಿದ ಭಾರತ ಮಾಡಲು ಮಹತ್ವದ್ದಾಗಿವೆ. ಮೊದಲ ಎರಡು ಹಂತದ ಮತದಾನದಲ್ಲಿ ಮತದಾರರು ತಮ್ಮ ಮತಗಳ ಮೂಲಕ ದೇಶದ ಅಭಿವೃದ್ಧಿ ಪರ ಇರುವ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ: Fortis Hospital: ಪಾರ್ಕಿನ್ಸನ್‌ ಕಾಯಿಲೆ ಚಿಕಿತ್ಸೆಗೆ ಪ್ರತ್ಯೇಕ ಕ್ಲಿನಿಕ್‌ ಆರಂಭಿಸಿದ ಫೋರ್ಟಿಸ್‌ ಆಸ್ಪತ್ರೆ

ಮತದಾರರಿಗೆ ಕಾಂಗ್ರೆಸ್‌ ಹಾಗೂ ಇಂಡಿ ಒಕ್ಕೂಟದ ಸಮಾಜ ಒಡೆಯುವ ಮನಸ್ಥಿತಿ, ಎಸ್ಸಿ ಎಸ್ಟಿ ಹಾಗೂ ಒಬಿಸಿ ಸಮುದಾಯಗಳ ಮೀಸಲಾತಿಯನ್ನು ತಮ್ಮ ವೋಟ್ ಬ್ಯಾಂಕ್ ಸಮುದಾಯಕ್ಕೆ ಧರ್ಮಾಧಾರಿತ ಮೀಸಲಾತಿ ಸಂವಿಧಾನ ವಿರೋಧಿಯಾದರೂ ಅವರಿಗೆ ಕೊಡಲು ತೀರ್ಮಾನಿಸಿದ್ದಾರೆ. ಅಲ್ಲದೇ ಅವರು ನಿಮ್ಮ ಪಿತ್ರಾರ್ಜಿತ ಆಸ್ತಿಯನ್ನು ತಮ್ಮ ವೋಟ್ ಬ್ಯಾಂಕ್ ಸಮುದಾಯಕ್ಕೆ ಹಂಚಿಕೆ ಮಾಡುವ ಅಪಾಯಕಾರಿ ತೀರ್ಮಾನ ಮಾಡಿದ್ದಾರೆ. ಇದನ್ನು ನಾವೆಲ್ಲರೂ ಒಟ್ಟಾಗಿ ತಡೆಯಬೇಕಿದೆ ಎಂದು ತಿಳಿಸಿದ್ದಾರೆ.

ಈಗ ಬೇಸಿಗೆ ಇರುವುದರಿಂದ ಜನರಿಗೆ ಸಮಸ್ಯೆಯಾಗುತ್ತಿದೆ. ಆದರೆ, ದೇಶದ ಭವಿಷ್ಯದ ದೃಷ್ಟಿಯಿಂದ ಈ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ಆದಷ್ಟು ಬೆಳಗಿನ ಸಮಯ ಮತಗಟ್ಟೆಗೆ ತೆರಳಿ ಮತದಾನ ಮಾಡುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ.

ಈ ಚುನಾವಣೆ ಸಂದರ್ಭದಲ್ಲಿ ನಮ್ಮ‌ ಕಾರ್ಯಕರ್ತರು ಮತದಾರರನ್ನು ಪ್ರೇರೇಪಿಸಿ ಹೆಚ್ಚಿನ ಮತದಾನವಾಗುವಂತೆ ನೋಡಿಕೊಳ್ಳಬೇಕು. ಈ ಮೂಲಕ ಬೂತ್ ಗೆಲ್ಲುವ‌ ಮೂಲಕ ಲೋಕಸಭಾ ಕ್ಷೇತ್ರ ಗೆಲ್ಲುವಂತೆ ನೋಡಿಕೊಳ್ಳಬೇಕು. ಇದೇ ವೇಳೆ ಕಾರ್ಯಕರ್ತರು ನಿಮ್ಮ ಆರೋಗ್ಯದ ಕಡೆಗೆ ಗಮನ ಕೊಡಿ ಎಂದು ಪತ್ರದ ಮೂಲಕ ಪ್ರಧಾನಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Malpe Beach: ಮಲ್ಪೆ ಬೀಚ್‌ನಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ; ಸಿಂದಗಿಯಲ್ಲಿ ಸ್ನಾನಕ್ಕೆಂದು ಬಾವಿಗಿಳಿದಿದ್ದ ಬಾಲಕರಿಬ್ಬರ ಸಾವು

ನನ್ನ ಪ್ರತಿ ಕ್ಷಣವೂ ದೇಶದ ಜನರ ಶ್ರೇಯೋಭಿವೃದ್ಧಿಗೆ ಮೀಸಲಿದೆ ಎಂದು ಹಾವೇರಿ ಕ್ಷೇತ್ರದ ಅಭ್ಯರ್ಥಿಯಾಗಿ ಈ ಸಂದೇಶವನ್ನು ಎಲ್ಲ ಮತದಾರರಿಗೆ ತಲುಪಿಸಿ ಎಂದು ಪತ್ರದ ಮೂಲಕ ತಿಳಿಸಿದ್ದಾರೆ.

Continue Reading
Advertisement
karnataka Weather Forecast
ಮಳೆ30 mins ago

Karnataka Weather : ಇಂದು ಮೂರು ಹೊತ್ತು ಒಂದೊಂದು ವಾತಾವರಣ

Vastu Tips
ಲೈಫ್‌ಸ್ಟೈಲ್39 mins ago

Vastu Tips: ಮನೆ ಹೊರಗಿನ ಉದ್ಯಾನದಲ್ಲಿ ವಾಸ್ತು ಪಾಲಿಸಿ; ಮನೆಯೊಳಗಿನ ನೆಮ್ಮದಿ ವೃದ್ಧಿಸಿ

SMART Missile
ಸಂಪಾದಕೀಯ59 mins ago

ವಿಸ್ತಾರ ಸಂಪಾದಕೀಯ: ಕ್ಷಿಪಣಿ ಬಲದಿಂದ ನಮ್ಮ ನೌಕಾಪಡೆ ‘ಸ್ಮಾರ್ಟ್‌’ ಜತೆಗೆ ಇನ್ನಷ್ಟು ಬಲಿಷ್ಠ

Aloe Vera face mask
ಆರೋಗ್ಯ1 hour ago

Aloe Vera Benefits: ಬೇಸಿಗೆಯಲ್ಲಿ ಚರ್ಮವನ್ನು ತಂಪಾಗಿಸಲು ಲೋಳೆಸರದ ಮಾಸ್ಕ್‌ ಬಳಸಿ

Dina Bhavishya
ಭವಿಷ್ಯ2 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

Benefits of Tender Coconut
ಆರೋಗ್ಯ2 hours ago

Benefits of Tender Coconut: ಎಳನೀರು ಹೀರುವುದರಿಂದ ದೇಹಕ್ಕೆ ಏನೇನು ಲಾಭ ಗೊತ್ತೇ?

Bhajanotsava
ಬೆಂಗಳೂರು5 hours ago

Bhajanotsava: ಓಂಕಾರ ಆಶ್ರಮದಲ್ಲಿ ನಿರಂತರ ಭಜನೋತ್ಸವ ಸಂಪನ್ನ

Shata Chandika Yaga
ಚಿಕ್ಕಬಳ್ಳಾಪುರ6 hours ago

ಚಿಕ್ಕಬಳ್ಳಾಪುರದ ವಾಯುದೇವ, ರಾಮಕೃಷ್ಣ ದೇವರ ಸನ್ನಿಧಾನದಲ್ಲಿ ಶತ ಚಂಡಿಕಾ ಯಾಗ ಸಂಪನ್ನ

Prajwal Revanna Case
ಕರ್ನಾಟಕ7 hours ago

Prajwal Revanna Case: ಸಂಸದ ಪ್ರಜ್ವಲ್ ರೇವಣ್ಣ ಗೆಸ್ಟ್ ಹೌಸ್‌ನಲ್ಲಿಲ್ಲ ಸಿಸಿ ಕ್ಯಾಮೆರಾ?; ಹಲವು ಅನುಮಾನ

Danesh Palyani
ವಿದೇಶ7 hours ago

Danesh Palyani: ಪಾಕಿಸ್ತಾನದಲ್ಲಿ ಹಿಂದು ಯುವತಿಯರ ಮತಾಂತರ; ಕರಾಳ ಮುಖ ಬಿಚ್ಚಿಟ್ಟ ಸಂಸದ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌