SSLC Result 2023: ಗಜಾನನ ಸೆಕೆಂಡರಿ ಸ್ಕೂಲ್, ಹೆಗಡೆಕಟ್ಟಾ ಶಾಲೆಗೆ ಶೇ. 96.22 ಫಲಿತಾಂಶ; ರಾಜ್ಯಕ್ಕೆ ಧೃವಕುಮಾರ್‌ 9ನೇ ರ‍್ಯಾಂಕ್ - Vistara News

ಉತ್ತರ ಕನ್ನಡ

SSLC Result 2023: ಗಜಾನನ ಸೆಕೆಂಡರಿ ಸ್ಕೂಲ್, ಹೆಗಡೆಕಟ್ಟಾ ಶಾಲೆಗೆ ಶೇ. 96.22 ಫಲಿತಾಂಶ; ರಾಜ್ಯಕ್ಕೆ ಧೃವಕುಮಾರ್‌ 9ನೇ ರ‍್ಯಾಂಕ್

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶಿರಸಿ ತಾಲೂಕಿನ ಹೆಗಡೆಕಟ್ಟಾದ ಶ್ರೀ ಗಜಾನನ ಸೆಕೆಂಡರಿ ಸ್ಕೂಲ್‌ನ ವಿದ್ಯಾರ್ಥಿ ಧೃವಕುಮಾರ ಬಿ.ಕೆ ಸಾಧನೆ ಮಾಡಿದ್ದಾನೆ. 625ಕ್ಕೆ 617 (ಶೇ. 98.72 ) ಅಂಕ ಗಳಿಸಿ ರಾಜ್ಯ ಮಟ್ಟದಲ್ಲಿ 9ನೇ ರ‍್ಯಾಂಕ್ ಪಡೆದುಕೊಂಡಿದ್ದಾನೆ.

VISTARANEWS.COM


on

Gajanana Secondary School Hegdekatta School SSLC Result 2023
ಧೃವಕುಮಾರ್‌ ಬಿ.ಕೆ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿರಸಿ: 2023ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ (SSLC Result 2023) ಪ್ರಕಟಗೊಂಡಿದ್ದು, ಶಿರಸಿ ತಾಲೂಕಿನ ಹೆಗಡೆಕಟ್ಟಾದ ಶ್ರೀ ಗಜಾನನ ಸೆಕೆಂಡರಿ ಸ್ಕೂಲ್‌ನ ವಿದ್ಯಾರ್ಥಿ ಧೃವಕುಮಾರ ಬಿ.ಕೆ. ಸಾಧನೆ ಮಾಡಿದ್ದಾನೆ. 625ಕ್ಕೆ 617 (ಶೇ. 98.72 ) ಅಂಕ ಗಳಿಸಿ ರಾಜ್ಯ ಮಟ್ಟಕ್ಕೆ 9ನೇ ರ‍್ಯಾಂಕ್ ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾನೆ.

ಗ್ರಾಮೀಣ ಭಾಗದ ವಿದ್ಯಾರ್ಥಿಯ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಸೇರಿದಂತೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ. ತಂದೆ ಶ್ರೀ ಕೃಷ್ಣ ನಾರಾಯಣ ನಾಯ್ಕ, ತಾಯಿ ಶ್ರೀಮತಿ ನೇತ್ರಾವತಿ ನಾಯ್ಕ ಕೂಡ ತಮ್ಮ ಮಗನ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದು, ಸಿಹಿ ತಿನಿಸಿ ಸಂಭ್ರಮಿಸಿದ್ದಾರೆ.

ಇದನ್ನೂ ಓದಿ: Karnataka Election 2023 Live Updates: ವಿಸ್ತಾರ ನ್ಯೂಸ್‌ನ Exit Poll; ಕಾಂಗ್ರೆಸ್‌ ದೊಡ್ಡ ಪಕ್ಷ; ಬೇರೆ Exit Poll ಹೇಳಿರುವುದೇನು?

ಇನ್ನು ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಶ್ರೀ ಗಜಾನನ ಸೆಕೆಂಡರಿ ಸ್ಕೂಲ್ ಹೆಗಡೆಕಟ್ಟಾ ಶೇಕಡಾ 96.22ರಷ್ಟು ಫಲಿತಾಂಶವನ್ನು ಪಡೆದಿದೆ. ಪರೀಕ್ಷೆಗೆ ಹಾಜರಾದ 53 ವಿದ್ಯಾರ್ಥಿಗಳಲ್ಲಿ 51 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕೊಪ್ಪಳದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು; ಹೊತ್ತಿ ಉರಿದ ತೆಂಗಿನ ಮರ, ಧರೆಗುರುಳಿದ ಮರಗಳು, ವಿದ್ಯುತ್‌ ಕಂಬ

Karnataka Weather : ಹಲವೆಡೆ ಗುಡುಗು ಸಿಡಿಲು ಸಹಿತ (Rain News) ಭಾರಿ ಮಳೆಯಾಗಿದ್ದು, ಸಾವು-ನೋವಿಗೆ ಕಾರಣವಾಗಿದೆ. ಸಿಡಿಲು ಬಡಿದು ಕೂಲಿ ಕಾರ್ಮಿಕ ದಾರುಣವಾಗಿ ಮೃತಪಟ್ಟರೆ, ಹಲವೆಡೆ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿವೆ.

VISTARANEWS.COM


on

By

Karnataka Weather
Koo

ಕೊಪ್ಪಳ: ಉತ್ತರ ಕರ್ನಾಟಕದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಸಿಡಿಲಿಗೆ ವ್ಯಕ್ತಿಯೊಬ್ಬರು (Rain News) ಬಲಿಯಾಗಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜೂಲಕಟ್ಟಿ ಬಳಿ ಘಟನೆ (Karnataka Weather Forecast) ನಡೆದಿದೆ. ಕೊರಡಕೇರಿಯ ಅಮೋಘಸಿದ್ದಯ್ಯ ಗುರುವಿನ (32) ಮೃತ ದುರ್ದೈವಿ.

ಅಮೋಘಸಿದ್ದಯ್ಯ ಕೊರಡಕೇರಿಯಿಂದ ಜೂಲಕಟ್ಟಿಯಲ್ಲಿ ಕಟ್ಟಿಗೆ ಕಡಿಯಲು ಕೂಲಿ ಕೆಲಸಕ್ಕೆ ಹೋಗಿದ್ದರು. ಗುರುವಾರ ಮಧ್ಯಾಹ್ನ ದಿಢೀರ್‌ ಶುರುವಾದ ಮಳೆ- ಗಾಳಿ ಜತೆಗೆ ಸಿಡಿಲಿ ಬಡಿದು ಮೃತಪಟ್ಟಿದ್ದಾರೆ. ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗದಗನಲ್ಲೂ ಬಿರುಗಾಳಿ ಸಹಿತ ಮಳೆ

ಮುಂಗಾರಿಗೂ ಮುನ್ನ ಗದಗ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆ ಅಬ್ಬರ ಜೋರಾಗಿದೆ. ಬಿರುಗಾಳಿ ಮಳೆಗೆ ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿ‌‌ನ ಪರಸಾಪೂರ ಬಳಿ ಘಟನೆ ನಡೆದಿದೆ. ರಸ್ತೆ ಮೇಲೆ ಮರ ಹಾಗೂ ವಿದ್ಯುತ್‌ ಕಂಬ ಧರೆಗುರುಳಿದ ಕಾರಣದಿಂದ ಕೆಲಕಾಲ ವಾಹನ ಸಂಚಾರದಲ್ಲಿ ಅಸ್ತವ್ಯಸ್ತವಾಗಿತ್ತು. ಸ್ಥಳೀಯರ ಸಹಾಯದಿಂದ ಕೊಂಬೆಗಳನ್ನು ತೆರವುಗೊಳಿಸಿ ಸಂಚಾರಕ್ಕೆ‌ ಅನುಕೂಲ ಮಾಡಿಕೊಡಲಾಯಿತು.

ಇದನ್ನೂ ಓದಿ: Fraud Case : ಚಿಟ್‌ ಫಂಡ್‌ ಹೆಸರಿನಲ್ಲಿ ದಂಪತಿ ಕೋಟ್ಯಂತರ ರೂ. ವಂಚನೆ; ಬೀದಿಗೆ ಬಿದ್ದರು ಚೀಟಿದಾರರು

ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಧಾರವಾಡದ ಕಲಘಟಗಿಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದಿದೆ. ಕಲಘಟಗಿಯ ದೇವರಕೊಂಡ ಗ್ರಾಮದಲ್ಲಿ ಘಟನೆ ನಡೆದಿದೆ. ಫಕ್ಕಿರಗೌಡ ಶಿವನಗೌಡರ ಎಂಬುವರ ಮನೆಯ ಮುಂದಿದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದು ಧಗಧಗನೆ ಹೊತ್ತಿ ಉರಿದಿದೆ. ಅದೃಷ್ಟವಶಾತ್‌ ಸಮಯದಲ್ಲಿ ಮನೆ ಮುಂದೆ ಅಕ್ಕ-ಪಕ್ಕ ಯಾರು ಇರಲಿಲ್ಲ. ಹೀಗಾಗಿ ಯಾವುದೇ ಅಪಾಯ ಸಂಭವಿಸಿಲ್ಲ.

ಮತ್ತೊಂದೆಡೆ ಧಾರವಾಡದ ಅಣ್ಣಿಗೇರಿಯ ರಾಜರಾಜೇಶ್ವರಿ ನಗರದಲ್ಲೂ ಮನೆಯ ಪಕ್ಕದಲ್ಲಿಯೇ ಇದ್ದ ಮರಕ್ಕೆ ಸಿಡಿಲು ಬಡಿದ ಪರಿಣಾಮ ಹೊತ್ತಿ ಉರಿದಿತ್ತು. ಮರಕ್ಕೆ ಬೆಂಕಿ ಆವರಿಸುತ್ತಿದಂತೆಯೇ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವ ಕೆಲಸ ಮಾಡಿದರು.

ಧಾರವಾಡದಲ್ಲಿ ಆಲಿಕಲ್ಲು ಮಳೆ

ಧಾರವಾಡ ಜಿಲ್ಲೆಯಾದ್ಯಂತ ಆಲಿಕಲ್ಲು ಮಳೆಯಾಗಿದೆ. ನಗರದಲ್ಲಿ ಮಧ್ಯಾಹ್ನದವರೆಗೆ ಉರಿ ಬಿಸಿಲು ಇತ್ತು, ನಂತರ ಸಂಪೂರ್ಣ ಮೋಡ ಕವಿದ ವಾತಾವರಣದೊಂದಿಗೆ ಮಳೆಯು ಅಬ್ಬರಿಸಿತ್ತು. ವಿಜಯನಗರದ ನಾನಾ ಕಡೆ ಮಳೆರಾಯ ಕೃಪೆ ತೋರಿದ್ದಾನೆ. ಹರಪನಹಳ್ಳಿ ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ. ಹೊಸಪೇಟೆಯ ಮರಿಯಮ್ಮನಹಳ್ಳಿ, ದೇವಲಾಪುರ ಸೇರಿದಂತೆ ನಾನಾ ಕಡೆ ಉತ್ತಮ ಮಳೆಯಾಗಿದೆ. ಹರಪನಹಳ್ಳಿ ತಾಲೂಕಿನಲ್ಲಿ ಸಿಡಿಲು ಗುಡುಗು ಗಾಳಿ ಸಹಿತ ಭಾರೀ ಮಳೆಗೆ ಮರಗಳು ಉರುಳಿದವು. ಬಿರುಗಾಳಿಗೆ ಹಾಲಸ್ವಾಮಿ ಮಠದ ಬಳಿ, ಯಲ್ಲಾಪುರ ರಸ್ತೆ ಮೇಲೆ ಮರ ನೆಲಕ್ಕೆ ಉರುಳಿ ಕೆಲ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ತಾಲೂಕು ಪಂ. ಆವರಣದಲ್ಲಿ ಎರಡು ಮರಗಳು ಕಳಚಿ ಬಿದ್ದಿತ್ತು. ಮಂಡ್ಯದ ಮಳವಳ್ಳಿಯ ಕೆಆರ್ ಪೇಟೆಯಲ್ಲಿ ಮೊದಲ ಮಳೆಯಾಗಿದೆ. ಸಿಡಿಲು ಬಡಿದ ಪರಿಣಾಮ ಬೃಹತ್ ಕಲ್ಲೊಂದು ಕಾರಿನ ಮೇಲೆ ಬಿದ್ದು, ಜಖಂಗೊಂಡಿರುವ ಘಟನೆ ವಿಜಯಪುರ ನಗರದ ಜೆಎಂ ರಸ್ತೆಯಲ್ಲಿ ನಡೆದಿದೆ.‌ ಮಹತ್ತರ ಮಹಲ್‌ನ ಗೋಡೆಯ ಬೃಹತ್ ಕಲ್ಲು ಕಾರಿನ ಮೇಲೆ ಬಿದ್ದಿದೆ. ಇದರಿಂದ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಯಾವುದೇ ಪ್ರಾಣ ಹಾನಿಯಾಗಿಲ್ಲ. ಭಾರಿ ಮಳೆ, ಗಾಳಿಯ ವೇಳೆ ಸಿಡಿಲು ಬಡಿದು ಈ ಅವಘಡ ಆಗಿದೆ. ಗೋಳಗುಮ್ಮಟ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ಭಾರಿ ಮಳೆ ಮುನ್ಸೂಚನೆ

ಮುಂದಿನ 3 ಗಂಟೆಗಳಲ್ಲಿ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಬಿಜಾಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಗುಲ್ಬರ್ಗ, ಹಾವೇರಿ, ಕೊಪ್ಪಳ, ರಾಯಚೂರು, ಶಿವಮೊಗ್ಗ, ಉತ್ತರ ಕನ್ನಡದಲ್ಲಿ ಒಂದು ಅಥವಾ ಎರಡು ಕಡೆಗಳಲ್ಲಿ ಭಾರಿ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Lok Sabha Election 2024: ಮೋದಿಯವರನ್ನು ಮತ್ತೆ ಪ್ರಧಾನಿಯಾಗಿಸಲು ಬಿಜೆಪಿಗೆ ಮತ ನೀಡಿ: ಕಾಗೇರಿ ಮನವಿ

Lok Sabha Election 2024: ಹೊನ್ನಾವರ ತಾಲೂಕಿನ ವಿವಿಧ ಕಡೆಗಳಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಚುನಾವಣಾ ಪ್ರಚಾರ ನಡೆಸಿದರು.

VISTARANEWS.COM


on

Uttara Kannada Lok Sabha Constituency BJP candidate Vishweshwara Hegade Kageri election campaign in Honnavara
Koo

ಹೊನ್ನಾವರ: ರಾಮ ಮಂದಿರ (Ram Mandir) ನಿರ್ಮಾಣ ಮಾಡಿ ನೂರಾರು ವರ್ಷದ ಕನಸನ್ನು ನನಸು ಮಾಡಿದ ಮೋದಿಜಿಯವರನ್ನು ಮೂರನೇ ಬಾರಿಗೆ ಪ್ರಧಾನಿ ಮಾಡಲು ಪ್ರಭು ಶ್ರೀರಾಮನನ್ನು ನೆನೆದು ಕಮಲದ ಹೂವಿಗೆ ಮತ ಹಾಕಬೇಕು ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ (Lok Sabha Election 2024) ಮಾಡಿದರು.

ಹೊನ್ನಾವರ ತಾಲೂಕಿನ ಮಂಕಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಯೋಧ್ಯೆಯ ರಾಮ ಮಂದಿರವನ್ನು ನಿರ್ಮಿಸಿ 500 ವರ್ಷಗಳ ಕನಸು ನನಸಾಗಿದೆ. ಮೋದಿಜಿ, ಯೋಗಿಜಿಯಿಂದ ಇದು ಸಾಧ್ಯವಾಗಿದೆ. ಅಂತಹ ಪ್ರಧಾನಿಯನ್ನು ಮತ್ತೊಮ್ಮೆ ಗೆಲ್ಲಿಸಬೇಕು. ಅದಕ್ಕೆ ಪೂರಕವೆಂಬಂತೆ ಇಲ್ಲಿಯೂ ಅತಿ ಹೆಚ್ಚಿನ ಮತಗಳಿಂದ ನನ್ನನ್ನು ಗೆಲ್ಲಿಸುತ್ತೀರಿ ಎಂಬ ನಂಬಿಕೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಯ ಬೂತ್ ಮಟ್ಟದ, ಶಕ್ತಿ ಕೇಂದ್ರ, ಮಹಾ ಶಕ್ತಿ ಎಲ್ಲಾ ಪ್ರಮುಖರು ರಾಮನಿಗಾಗಿ, ಮೋದಿಗಾಗಿ ಪೂರ್ಣ ಶ್ರಮ ವಹಿಸಿ, ಕಮಲದ ಹೂವಿನ ಗೆಲುವಿಗಾಗಿ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: Gold Rate Today: ಬಂಗಾರ ಕೊಳ್ಳುವವರಿಗೆ ತುಸು ರಿಲೀಫ್‌, ಬಹುದಿನಗಳ ನಂತರ ಬೆಲೆ ಇಳಿಕೆ; ಇಂದಿನ ದರ ಹೀಗಿದೆ

ಈ ಹಿಂದೆ ಮನಮೋಹನ್ ಸಿಂಗ್ ಇದ್ದಾಗ ಕೇವಲ ಹಗರಣಗಳೇ ನಡೆದಿದ್ದವು. ಆದರೆ ಈಗ 10 ವರ್ಷದ ಆಡಳಿತ ಅವಧಿಯಲ್ಲಿ ಯಾವ ಹಗರಣವೂ ಇಲ್ಲ. ಪಾರದರ್ಶಕ ಆಡಳಿತ ನೀಡಿ ಭ್ರಷ್ಟಾಚಾರ ಮುಕ್ತ ಮಾಡಲಾಗಿದೆ. ಮೋದಿಯವರ ಆಡಳಿತದಲ್ಲಿ ಅಭಿವೃದ್ಧಿಗೆ ಮಾತ್ರ ಪ್ರಾಶಸ್ತ್ಯ ನೀಡಲಾಗುತ್ತಿದೆ ಎಂದ ಕಾಗೇರಿ, ರಾಜ್ಯದ ಗ್ಯಾರಂಟಿ ಯೋಜನೆ ಸಮರ್ಪಕ ವಿತರಣೆ ಆಗುತ್ತಿಲ್ಲ. ಮೋದಿಯವರ ಗ್ಯಾರಂಟಿ ಎದುರು ರಾಜ್ಯದ ಗ್ಯಾರಂಟಿ ಠುಸ್ ಆಗಲಿದೆ ಎಂದರು.

ಜೆಡಿಎಸ್, ಬಿಜೆಪಿ ಮೈತ್ರಿ ಶಕ್ತಿಯಿಂದ ರಾಜ್ಯದಲ್ಲಿ 28 ಕ್ಕೆ 28 ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದು ಇದೇ ವೇಳೆ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಹೊನ್ನಾವರದ ಪ್ರಚಾರದ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪೇ ಗೌಡ ಅವರನ್ನು ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿ ಸಹಕಾರ ಕೇಳಿದರು. ಮೈತ್ರಿ ಮಾತುಕತೆಯಂತೆ ಬಿಜೆಪಿಯ ಗೆಲುವಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪೇ ಗೌಡ ತಿಳಿಸಿದರು.

ಇದನ್ನೂ ಓದಿ: Summer Special Trains: ಹಾಲಿಡೇ ಟ್ರಿಪ್‌ಗೆ ರೆಡಿನಾ? ಬೆಂಗಳೂರು-ಮೈಸೂರಿನಿಂದ ಈ ರಾಜ್ಯಗಳಿಗೆ ಸ್ಪೆಷಲ್‌ ಟ್ರೈನ್‌

ಚುನಾವಣಾ ಪ್ರಚಾರದ ಭರಾಟೆಯ ನಡುವೆಯೇ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಡಗುಂಜಿ ಮಹಾಗಣಪತಿ ದೇವಸ್ಥಾನ, ಗುಣವಂತೆಯ ಶಂಭುಲಿಂಗೇಶ್ವರ ದೇವಸ್ಥಾನ, ವೀರ ವೆಂಕಟರಮಣ ಜಾತ್ರಾ ಮಹೋತ್ಸವಕ್ಕೆ ಭೇಟಿ ನೀಡಿ ದೇವರ ಆಶೀರ್ವಾದವನ್ನು ಪಡೆದುಕೊಂಡರು. ರಾಮ ನವಮಿಯ ನಿಮಿತ್ತ ರಾಮತೀರ್ಥಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿದರು.

Continue Reading

ಕ್ರೈಂ

Road Accident : ಸೈಕಲ್‌ಗೆ ಗುದ್ದಿದ ಕಾರು, ನರಳಾಡಿ ವ್ಯಕ್ತಿ ಸಾವು; ಹಿಟ್‌ ಆ್ಯಂಡ್‌ ರನ್‌ಗೆ ಬೈಕ್‌ ಸವಾರ ಬಲಿ

Road Accident : ಪ್ರತ್ಯೇಕ ಕಡೆಗಳಲ್ಲಿ ಸಂಭವಿಸಿದ ಅಪಘಾತದಲ್ಲಿ ಸವಾರರಿಬ್ಬರು ಮೃತಪಟ್ಟಿದ್ದಾರೆ. ಹಾಸನದಲ್ಲಿ ಕಾರೊಂದು ಸೈಕಲ್‌ಗೆ ಡಿಕ್ಕಿ ಹೊಡೆದಿದ್ದು, ನೆಲಕ್ಕೆ ಬಿದ್ದ ಸವಾರ ಮೃತಪಟ್ಟರೆ, ಆನೇಕಲ್‌ನಲ್ಲಿ ಹಿಟ್‌ ಆ್ಯಂಡ್‌ ರನ್‌ಗೆ ಬೈಕ್‌ ಸವಾರ ಮೃತಪಟ್ಟಿದ್ದಾರೆ. ಕಾರವಾರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಕಂದಕಕ್ಕೆ ಉರುಳಿದೆ.

VISTARANEWS.COM


on

By

Road Accident
Koo

ಹಾಸನ: ಸೈಕಲ್‌ನಲ್ಲಿ ತೆರಳುತ್ತಿದ್ದ ವೃದ್ಧನಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ಸೈಕಲ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನ ನಗರದ ಡೈರಿ ಸರ್ಕಲ್ ಬಳಿ ಅಪಘಾತ (Road Accident) ನಡೆದಿದೆ. ಶ್ರೀರಾಮನಗರದ ನಿವಾಸಿ ಆನಂದ್ (60) ಮೃತ ದುರ್ದೈವಿ.

ಕಾಟೀಹಳ್ಳಿ ಕಡೆಯಿಂದ ಬಂದ ಕಾರು ತಿರುವಿನಲ್ಲಿ ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಹಾರಿ ಬಿದ್ದ ಆನಂದ್‌ ಅವರ ಮುಖವೇ ಅಪ್ಪಚ್ಚಿ ಆಗಿತ್ತು. ತಲೆಗೆ ಗಂಭೀರವಾಗಿ ಗಾಯವಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Self Harming : ಮಕ್ಕಳಾಗಿಲ್ಲವೆಂದು ಕಿರುಕುಳ; ಶೌಚಾಲಯದಲ್ಲಿ ನೇಣು ಬಿಗಿದುಕೊಂಡ ಗೃಹಿಣಿ

ಆನೇಕಲ್‌ನಲ್ಲಿ ಹಿಟ್‌ ಆ್ಯಂಡ್‌ ರನ್‌ಗೆ ಬೈಕ್‌ ಸವಾರ

ಬೆಂಗಳೂರು ಹೊರವಲಯದ ಆನೇಕಲ್-ಅತ್ತಿಬೆಲೆ ಮುಖ್ಯರಸ್ತೆಯ ಮಾಯಸಂದ್ರ ಬಳಿ ಹಿಟ್‌ ಆ್ಯಂಡ್‌ ರನ್‌ಗೆ ಬೈಕ್ ಸವಾರ ಬಲಿಯಾಗಿದ್ದಾರೆ. ಮಧುಸೂಧನ್ ಮೃತ ದುರ್ದೈವಿ. ಬುಧವಾರ ರಾತ್ರಿ ಎಂಟು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮಧುಸೂಧನ್‌ ಕೆಲಸ ಮುಗಿಸಿಕೊಂಡು ಅತ್ತಿಬೆಲೆಯಿಂದ ಆನೇಕಲ್ ಕಡೆಗೆ ಬರುವಾಗ ಬೈಕ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ.

ಈ ವೇಳೆ ತಲೆಯ ಭಾಗಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಮಧುಸೂದನ್‌ರನ್ನು ಕೂಡಲೇ ಸ್ಥಳೀಯರು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತ ಮಾಡಿ ಪರಾರಿ ಆಗಿರುವ ವಾಹನಕ್ಕೆ ಹುಡುಕಾಟ ನಡೆಸಿದ್ದಾರೆ.

ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಲಾರಿ

ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಕಂದಕಕ್ಕೆ ಬಿದ್ದಿದ್ದೆ. ಉತ್ತರಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ಮಾನೀರು ಕ್ರಾಸ್ ಬಳಿ ಘಟನೆ ನಡೆದಿದೆ. ಕುಮಟಾದಿಂದ ಅಂಕೋಲಾದತ್ತ ಉಸುಕು ತುಂಬಿಕೊಂಡು ಲಾರಿ ಹೊರಟಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಪಕ್ಕದ ತಡೆಗೋಡೆಗೆ ಗುದ್ದಿ ಕಂದಕಕ್ಕೆ ಬಿದ್ದಿದೆ.

ಲಾರಿ ಗುದ್ದಿದ ರಭಸಕ್ಕೆ ರಸ್ತೆಯ ತಡೆಗೋಡೆ ಕಿತ್ತುಹೋಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಕಂದಕ್ಕೆ ಬಿದ್ದ ಗಾಡಿಯನ್ನು ಮೇಲಕ್ಕೆತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಭಸವಾದ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆ; ಇನ್ನೊಂದು ವಾರ ಈ ಜಿಲ್ಲೆಗಳಿಗೆ ಅಲರ್ಟ್‌

Rain News : ಈ ವಾರ ಪೂರ್ತಿ ರಾಜ್ಯಾದ್ಯಂತ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಆದರೆ ಕರಾವಳಿಯಲ್ಲಿ ಬಿಸಿ ಹಾಗೂ ಆರ್ದ್ರತೆ ವಾತಾವರಣ ಮೇಲುಗೈ ಸಾಧಿಸಲಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ (Rain News) ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಈ ಪ್ರದೇಶದ ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಉಳಿದೆಡೆ ಶುಷ್ಕ ವಾತಾವರಣ ಇರಲಿದೆ. ಇತ್ತ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದ ಅಲ್ಲಲ್ಲಿ ಸಣ್ಣ ಮಳೆಯಾಗಬಹುದು.

ಬೆಂಗಳೂರು ಸೇರಿ ಹಲವೆಡೆ ಒಣ ಹವೆ

ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರಿನಲ್ಲೂ ಆಕಾಶವು ನಿರ್ಮಲವಾಗಿರಲಿದೆ. ಯಾವುದೇ ಮಳೆಯಾಗುವ ಮುನ್ಸೂಚನೆ ಇಲ್ಲ.

ಹೀಟ್‌ ವೇವ್‌ ಅಲರ್ಟ್‌

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಹವಾಮಾನದ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಖ್ಯವಾಗಿ ಏಪ್ರಿಲ್ 18 ರಿಂದ 20 ರವರೆಗೆ ಇದೇ ಹವಾಮಾನ ಇರಲಿದೆ.

ಬಿರುಗಾಳಿ ಎಚ್ಚರಿಕೆ

ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಇನ್ನು ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ.

ಇದನ್ನೂ ಓದಿ: Oil Pulling: ಆಯಿಲ್‌ ಪುಲ್ಲಿಂಗ್‌; ನಿಮ್ಮ ಬಾಯಿಯೊಳಗಿನ ಎಲ್ಲ ಸಮಸ್ಯೆಗಳಿಗೂ ಉತ್ತರ ಇಲ್ಲಿದೆ!

Summer Fashion: ಸಮ್ಮರ್‌ ಫ್ಯಾಷನ್‌ನಲ್ಲಿ ಬಂತು ತಂಪೆರೆಯುವ ವಾಟರ್‌ಫಾಲ್‌ ಇಯರಿಂಗ್ಸ್‌


ಈ ಸೀಸನ್‌ನ ಸಮ್ಮರ್‌ ಫ್ಯಾಷನ್‌ನಲ್ಲಿ (Summer Fashion) ಇದೀಗ ತಂಪೆರೆಯುವ ವಾಟರ್‌ ಫಾಲ್‌ ಇಯರಿಂಗ್‌ಗಳು ಟ್ರೆಂಡಿಯಾಗಿವೆ. ಮೇಲಿನಿಂದ ಕೆಳಗೆ ಇಳಿಯುವ ಜಲಧಾರೆಯಂತೆ ಕಾಣಿಸುವ ಕ್ರಿಸ್ಟಲ್‌ ಅಥವಾ ಅಮೆರಿಕನ್‌ ಡೈಮಂಡ್‌ ಹೊಂದಿರುವ ಈ ಇಯರಿಂಗ್ಸ್‌ ಸದ್ಯ ಹುಡುಗಿಯರ ಫೇವರೇಟ್‌ ಆಕ್ಸೆಸರೀಸ್‌ ಲಿಸ್ಟ್‌ಗೆ ಸೇರಿವೆ.

Summer Fashion

ಏನಿದು ವಾಟರ್ಫಾಲ್‌ ಇಯರಿಂಗ್ಸ್‌ ?

ನೋಡಲು ಥೇಟ್‌ ಜಲಪಾತದಂತೆ ಕಾಣಿಸುವ ಈ ಹ್ಯಾಂಗಿಂಗ್ಸ್‌ನಂತಹ ಕಿವಿಯೊಲೆಗಳು ನೋಡಲು ವಾಟರ್‌ಫಾಲ್‌ನಂತೆ ಕಾಣುತ್ತವೆ. ಹಾಗಾಗಿ ಇವನ್ನು ವಾಟರ್‌ಫಾಲ್‌ ಇಯರಿಂಗ್ಸ್‌ ಎನ್ನಲಾಗುತ್ತದೆ. ಕಿವಿಗೆ ಧರಿಸಿದಾಗ ಇಳೆ ಬೀಳುವ ಲೇಯರ್‌ನಂತಹ ಕ್ರಿಸ್ಟಲ್‌ ಸರಪಳಿಗಳು ವಾಟರ್‌ಫಾಲ್‌ನಂತೆ ಕಾಣಿಸುತ್ತವೆ. ಈ ವಿನ್ಯಾಸದಲ್ಲೆ ಇದೀಗ ಸಾಕಷ್ಟು ಡಿಸೈನ್‌ನವು ಆಕ್ಸೆಸರೀಸ್‌ ಲೋಕಕ್ಕೆ ಬಂದಿವೆ. ಮೈಕ್ರೋ ಕ್ರಿಸ್ಟಲ್ಸ್‌ ಅಂದರೇ, ಅಮೆರಿಕನ್‌ ಡೈಮಂಡ್‌ ಅಥವಾ ಆರ್ಟಿಫಿಷಿಯಲ್‌ ಅಮೆರಿಕನ್‌ ಡೈಮಂಡ್‌ ಹೊಂದಿರುವ ನಾಲ್ಕೈದು ಲೇಯರ್‌ ಹೊಂದಿರುವಂತಹ ಇಳೆ ಬೀಳುವಂತಹ ಇಯರಿಂಗ್‌ಗಳು ವೈಟ್‌ ಶೇಡ್‌ನಲ್ಲಿ ಲಭ್ಯ. ಇದೀಗ ಪಾಸ್ಟೆಲ್‌ ಶೇಡ್‌ಗಳಲ್ಲೂ ದೊರಕುತ್ತಿವೆ. ಲೈಟ್‌ ಪಿಂಕ್‌, ಪೀಚ್‌, ಬೀಚ್‌ ಬ್ಲ್ಯೂ, ಸ್ಕೈ ಬ್ಲ್ಯೂ, ಪಿಸ್ತಾ ಗ್ರೀನ್‌ ಶೇಡ್‌ನವು ಹೆಚ್ಚು ಪಾಪುಲರ್‌ ಆಗಿವೆ. ಹುಡುಗಿಯರನ್ನು ಸೆಳೆದಿವೆ.

Summer Fashion

ಪಾರ್ಟಿವೇರ್‌ ಆಕ್ಸೆಸರೀಸ್‌

ಪಾರ್ಟಿವೇರ್‌ ಆಕ್ಸೆಸರೀಸ್‌ ಕೆಟಗರಿಗೆ ಸೇರುವ ಈ ವಾಟರ್‌ ಫಾಲ್‌ ಇಯರಿಂಗ್‌ಗಳು ಕೆಲವು ಮೇಲ್ಭಾಗದಲ್ಲಿ ಬಿಗ್‌ ಸ್ಟೋನ್‌ ಅಥವಾ ಕಲರ್‌ಫುಲ್‌ ಇಮಿಟೇಡ್‌ ಸ್ಟೋನ್ಸ್‌ ಹೊಂದಿರುತ್ತವೆ. ಇಲ್ಲವೇ ಬೀಡ್ಸ್‌ ಅಥವಾ ಪರ್ಲ್‌ ಹೊಂದಿರುತ್ತವೆ. ಅದರ ಕೆಳಗೆ ಸುಮಾರು ನಾಲ್ಕೈದು ಇಂಚಿನಷ್ಟು ಉದ್ದದ ಹ್ಯಾಂಗಿಂಗ್‌ ಡಿಸೈನ್‌ ಹೊಂದಿರುತ್ತವೆ. ಕೆಲವು ಒಂದೇ ಸಮನಾಗಿ ಇದ್ದರೇ, ಇನ್ನು ಕೆಲವು ಆಸೆಮ್ಮಿಟ್ರಿಕಲ್‌ ಲೆಂಥ್‌ ಹೊಂದಿರುತ್ತವೆ. ಇವು ಇದೀಗ ಪಾರ್ಟಿವೇರ್‌ ಆಕ್ಸೆಸರೀಸ್‌ ಕೆಟಗರಿಯಲ್ಲಿ ಟಾಪ್‌ ಲಿಸ್ಟ್‌ನಲ್ಲಿವೆ. ಇವುಗಳ ವಿಶೇಷತೆಯೇಂದರೇ, ಯಾವುದೇ ಬಗೆಯ ಶಿಮ್ಮರ್‌ ಅಥವಾ ಶೈನಿಂಗ್‌ ಫ್ಯಾಬ್ರಿಕ್‌ನ ಪಾರ್ಟಿವೇರ್‌ ಔಟ್‌ಫಿಟ್‌ನೊಂದಿಗೆ ಇವನ್ನು ಧರಿಸಬಹುದು. ಎಲ್ಲವಕ್ಕೂ ಇವು ಮ್ಯಾಚ್‌ ಆಗುತ್ತವೆ. ಎಲ್ಲದಕ್ಕಿಂತ ಹೆಚ್ಚಾಗಿ ಇಡೀ ಮುಖವನ್ನು ಹೈ ಲೈಟ್‌ ಮಾಡುತ್ತವೆ. ಮಿರುಗುತ್ತವೆ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು.

Summer Fashion

ವಾಟರ್‌ ಫಾಲ್‌ ಕ್ಲಾಸಿ ಲುಕ್‌

“ಶಿಮ್ಮರ್‌ ಔಟ್‌ಫಿಟ್‌ಗಳಿಗೆ ಈ ವಾಟರ್‌ಫಾಲ್‌ ಇಯರಿಂಗ್‌ಗಳು ಹೇಳಿ ಮಾಡಿಸಿದಂತಿರುತ್ತವೆ. ಕಿವಿ ಮಾತ್ರವಲ್ಲ, ಇಡೀ ಲುಕ್‌ಗೆ ಇವು ಸಾಥ್‌ ನೀಡುತ್ತವೆ. ಆಕರ್ಷಕವಾಗಿ ಕಾಣಿಸುತ್ತವೆ. ಕ್ಲಾಸಿ ಲುಕ್‌ ನೀಡುವುದರೊಂದಿಗೆ ಸೆಲೆಬ್ರೆಟಿ ಇಮೇಜ್‌ ನೀಡುತ್ತವೆ” ಎನ್ನುತ್ತಾರೆ ಜ್ಯುವೆಲ್‌ ಡಿಸೈನರ್‌ ರೀಟಾ. ಅವರ ಪ್ರಕಾರ, ಯುವತಿಯರು ಮಾತ್ರವಲ್ಲ, ಎಲ್ಲಾ ವಯಸ್ಸಿನ ಮಹಿಳೆಯರು ಧರಿಸುವುದು ಹೆಚ್ಚಾಗಿದೆ.

Summer Fashion

ವಾಟರ್‌ ಫಾಲ್‌ ಇಯರಿಂಗ್‌ ಆಯ್ಕೆ ಹೀಗಿರಲಿ

  • ಶಿಮ್ಮರ್‌ ಡಿಸೈನರ್‌ವೇರ್‌ ಶೇಡ್ಸ್‌ಗೆ ತಕ್ಕಂತೆ ವಾಟರ್‌ ಫಾಲ್‌ ಇಯರಿಂಗ್‌ ಆಯ್ಕೆ ಮಾಡಿ.
  • ಪಾಸ್ಟೆಲ್‌ ಶೇಡ್‌ ಡಿಸೈನ್‌ನವು ಟ್ರೆಂಡ್‌ನಲ್ಲಿವೆ.
  • ಆದಷ್ಟೂ ಮಿನುಗುವಂತವನ್ನು ಸೆಲೆಕ್ಟ್‌ ಮಾಡಿ.
  • ಶೋಲ್ಡರ್‌ ತನಕ ನೇತಾಡುವಂತವು ಇದೀಗ ಜೆನ್‌ ಜಿ ಹುಡುಗಿಯರನ್ನು ಸೆಳೆದಿವೆ.
  • ನಾಲ್ಕೈದು ಎಳೆ ಎಳೆಯಾಗಿರುವಂತವನ್ನು ಧರಿಸಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Steet Food
ಆಹಾರ/ಅಡುಗೆ3 hours ago

ವಿಸ್ತಾರ ಸಂಪಾದಕೀಯ: ಸಾರ್ವಜನಿಕ ಆಹಾರದಲ್ಲಿ ಆರೋಗ್ಯ ಕಾಳಜಿ ಪ್ರಮುಖವಾಗಿರಲಿ

IPL 2024
ಪ್ರಮುಖ ಸುದ್ದಿ3 hours ago

IPL 2024 : ಪಂಜಾಬ್​ ತಂಡಕ್ಕೆ ವಿರೋಚಿತ 9 ರನ್ ಸೋಲು, ಜಯದ ಹಳಿಗೆ ಮರಳಿದ ಮುಂಬೈ

Physical Abuse
ದೇಶ4 hours ago

Physical Abuse : ಸ್ಪೇನ್​ನ ಮಹಿಳೆ ಮೇಲೆ ಜಾರ್ಖಂಡ್​ನಲ್ಲಿ ಗ್ಯಾಂಗ್​ ರೇಪ್​; ತಿಂಗಳ ಬಳಿಕ ಪ್ರಕರಣ ಬಯಲು

Amanatullah Khan
ದೇಶ4 hours ago

Amanatullah Khan: ಆಪ್‌ಗೆ ಮತ್ತಷ್ಟು ಸಂಕಷ್ಟ; ಶಾಸಕ ಅಮಾನತುಲ್ಲಾ ಖಾನ್ ಅರೆಸ್ಟ್‌

Moral policing
ಪ್ರಮುಖ ಸುದ್ದಿ4 hours ago

Moral policing : ನೈತಿಕ ಪೊಲೀಸ್​ಗಿರಿ; ಮುಸ್ಲಿಮರ ಗುಂಪಿನಿಂದ ಹಿಂದೂ ಯುವಕನ ಮೇಲೆ ಹಲ್ಲೆ

Rishab Shetty
ಸಿನಿಮಾ5 hours ago

Rishab Shetty: ರಿಷಬ್‌ ಮೀಟ್ಸ್‌ ಮೋಹನ್‌ಲಾಲ್‌; ʼಕಾಂತಾರʼ ಪ್ರೀಕ್ವೆಲ್​ನಲ್ಲಿ ಅಭಿನಯಿಸುತ್ತಾರಾ ಮಾಲಿವುಡ್‌ ಸೂಪರ್‌ ಸ್ಟಾರ್‌?

lok Sabha Election
ಪ್ರಮುಖ ಸುದ್ದಿ5 hours ago

Lok Sabha Election : ಕಾಂಗ್ರೆಸ್​​ಗೆ ಹಿನ್ನಡೆಯಾದರೆ ಸಿದ್ದರಾಮಯ್ಯ ಸ್ಥಾನಕ್ಕೆಕಂಟಕ​​​; ಚರ್ಚೆ ಹುಟ್ಟು ಹಾಕಿದ ಬೈರತಿ ಸುರೇಶ್​ ಹೇಳಿಕೆ

Hubli Murder Case
ಪ್ರಮುಖ ಸುದ್ದಿ5 hours ago

Hubli murder case : ನೇಹಾಳನ್ನು ಕೊಲ್ಲಲೆಂದೇ ಕಾಲೇಜಿಗೆ ಸಜ್ಜಾಗಿ ಬಂದಿದ್ದ ಶಿಕ್ಷಕರ ಪುತ್ರ ಫಯಾಜ್!

congress workers meeting in kudligi
ವಿಜಯನಗರ5 hours ago

Lok Sabha Election 2024: ಬಳ್ಳಾರಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಗೆಲ್ಲಿಸಲು ಸಂತೋಷ್‌ ಲಾಡ್‌ ಮನವಿ

Indian Railways
ದೇಶ6 hours ago

Indian Railways: ಹಿರಿಯ ನಾಗರಿಕ ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ಲೋವರ್ ಬರ್ತ್ ಕಾಯ್ದಿರಿಸುವಿಕೆಗೆ ಹೊಸ ನಿಯಮ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ7 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ7 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ1 week ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌