Gokak congress candidate mahantesh Kadadi has the support of local leaders, tries to convince Ashok Poojary Karnataka Election: ಗೋಕಾಕ್‌ ಕೈ ಅಭ್ಯರ್ಥಿ ಕಡಾಡಿಗೆ ಸ್ಥಳೀಯ ಮುಖಂಡರ ಬೆಂಬಲ; ಅಶೋಕ್‌ ಪೂಜಾರಿ ಮನವೊಲಿಕೆಗೆ ಯತ್ನ - Vistara News

ಕರ್ನಾಟಕ

Karnataka Election: ಗೋಕಾಕ್‌ ಕೈ ಅಭ್ಯರ್ಥಿ ಕಡಾಡಿಗೆ ಸ್ಥಳೀಯ ಮುಖಂಡರ ಬೆಂಬಲ; ಅಶೋಕ್‌ ಪೂಜಾರಿ ಮನವೊಲಿಕೆಗೆ ಯತ್ನ

Karnataka Election: ಗೋಕಾಕ್‌ ಕಾಂಗ್ರೆಸ್‌ ಟಿಕೆಟ್‌ ವಂಚಿತ ಅಶೋಕ್‌ ಪೂಜಾರಿ, ಬೆಂಬಲಿಗರೊಂದಿಗೆ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲು ಮುಂದಾಗಿದ್ದಾರೆ. ಆದರೆ, ಅಶೋಕ್‌ ಪೂಜಾರಿ ನೇತೃತ್ವದಲ್ಲೇ ಚುನಾಚಣೆ ಎದುರಿಸುವುದಾಗಿ ಅಭ್ಯರ್ಥಿ ಮಹಾಂತೇಶ್‌ ಕಡಾಡಿ ತಿಳಿಸಿದ್ದಾರೆ.

VISTARANEWS.COM


on

Gokak congress candidate mahantesh Kadadi has the support of local leaders, tries to convince Ashok Poojary
ಗೋಕಾಕ್‌ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಹಾಂತೇಶ್‌ ಕಡಾಡಿ ಮತ್ತು ಕೈ ನಾಯಕ ಅಶೋಕ್‌ ಪೂಜಾರಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಗೋಕಾಕ್‌ ಕ್ಷೇತ್ರದಲ್ಲಿ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಕಾಂಗ್ರೆಸ್‌ ನಾಯಕ ಅಶೋಕ್‌ ಪೂಜಾರಿ ಮುಂದಿನ ತೀರ್ಮಾನ ಕೈಗೊಳ್ಳಲು ಬೆಂಬಲಿಗರ ಜತೆ ಸಭೆ ನಡೆಸಲು ಮುಂದಾಗಿದ್ದಾರೆ. ಮತ್ತೊಂದೆಡೆ ಟಿಕೆಟ್‌ ಗಿಟ್ಟಿಸಿಕೊಂಡಿರುವ ಕಾಂಗ್ರೆಸ್‌ ಅಧಿಕೃತ ಅಭ್ಯರ್ಥಿ ಮಹಾಂತೇಶ್‌ ಕಡಾಡಿಗೆ ಕ್ಷೇತ್ರದ ಇನ್ನಿತರ ಆಕಾಂಕ್ಷಿಗಳು ಚುನಾವಣೆಯಲ್ಲಿ (Karnataka Election) ಬೆಂಬಲ ಘೋಷಿಸಿದ್ದು, ಅತೃಪ್ತ ಅಶೋಕ್‌ ಪೂಜಾರಿಯ ಮನವೊಲಿಸುವುದಾಗಿ ತಿಳಿಸಿದ್ದಾರೆ.

ಟಿಕೆಟ್‌ ವಂಚಿತ ಅಶೋಕ್‌ ಪೂಜಾರಿ, ಬೆಂಬಲಿಗರೊಂದಿಗೆ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲು ಗೋಕಾಕ್ ನಗರದ ಜ್ಞಾನ ಮಂದಿರದಲ್ಲಿ‌ ಸಭೆ ನಡೆಸಲು ಚುನಾವಣಾ ಅಧಿಕಾರಿಗಳ ಅನುಮತಿ ಕೇಳಿದ್ದಾರೆ. ಆದರೆ ಸಭೆಗೆ ಅಧಿಕಾರಿಗಳು ಅನುಮತಿ ನೀಡಿಲ್ಲ. ಹೀಗಾಗಿ ಸಮುದಾಯ ಭವನದಲ್ಲಿ ಸಭೆ ನಡೆಸಲು ಅನುಮತಿ ಕೇಳಿದ್ದು, ಈ ವಿಷಯ ತಿಳಿದು ಅವರ ನಿವಾಸದತ್ತ ಬೆಂಬಲಿಗರು, ಕಾರ್ಯಕರ್ತರು ತೆರಳುತ್ತಿದ್ದಾರೆ.

ಗೋಕಾಕ್‌ನಲ್ಲಿ ವಿಸ್ತಾರ ‌ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿರುವ ಕೈ ಟಿಕೆಟ್ ವಂಚಿತ ಅಭ್ಯರ್ಥಿ ಅಶೋಕ್ ಪೂಜಾರಿ, ಯಾವ ಕಾರಣಕ್ಕೆ ನನಗೆ ಟಿಕೆಟ್ ಕೈ ತಪ್ಪಿದೆಯೋ ಗೊತ್ತಿಲ್ಲ. ಒಂದೂವರೆ ವರ್ಷದ ಹಿಂದೆ ಕಾಂಗ್ರೆಸ್‌ ಸೇರಿದ್ದೆ, ನನಗೆ ಕಾಂಗ್ರೆಸ್‌ ಟಿಕೆಟ್ ನೀಡಬೇಕು ಎಂತಲೇ ಕೈ ನಾಯಕರು ಪಕ್ಷಕ್ಕೆ ಆಹ್ವಾನಿಸಿದ್ದರು ಎಂದು ಹೇಳಿದರು.

ಇದನ್ನೂ ಓದಿ | Inside Story: ಬರಗಾಲದಲ್ಲಿ ಎರಡು ಬೆಳೆ ತೆಗೆಯೋ ಎಂಟಿಬಿ ಐಡಿಯಾಕ್ಕೆ ಹೌಹಾರಿದ ಯಡಿಯೂರಪ್ಪ!: ರೋಲ್ಸ್ ರಾಯ್ಸ್ ಏರಿ ಹೊರಟ ನಾಗರಾಜು

ಅಶೋಕ್ ಪೂಜಾರಿಗೆ ಯಾಕೆ ಟಿಕೆಟ್ ಕೈ ತಪ್ಪಿತೋ ಗೊತ್ತಾಗಿಲ್ಲ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಟಿಕೆಟ್‌ ಸಿಗುತ್ತೆ ಎಂಬ ಭಾವನೆ ನಮಗೂ ಇತ್ತು, ಟಿಕೆಟ್ ಕೊಡಬೇಕು ಎಂಬ ಭಾವನೆ ಅವರಲ್ಲೂ ಇತ್ತು. ಇದೊಂದು ಗೂಢಾರ್ಥದ ಪ್ರಶ್ನೆ. ನಾನು ಕೂಡ ಟಿಕೆಟ್ ಯಾಕೆ ತಪ್ಪಿತು ಎಂದು ಯೋಚನೆ ಮಾಡುತ್ತಿದ್ದೇನೆ. ನನ್ನಲ್ಲಿ ಏನಾದರೂ ದೌರ್ಬಲ್ಯ ಕಂಡರೋ ಅಥವಾ ಬೇರೆ ಯಾರೋ ವ್ಯವಸ್ಥಿತ ತಂತ್ರಗಾರಿಕೆ ಮಾಡಿ ಟಿಕೆಟ್ ತಪ್ಪಿಸಿದರೋ ಗೊತ್ತಿಲ್ಲ.

ಕಾರ್ಯಕರ್ತರು ಸ್ಪರ್ಧೆ ಬೇಡ ಎಂದರೆ ನಿಮ್ಮ‌ ನಿರ್ಧಾರವವೇನು ಎಂಬ ಪ್ರಶ್ನೆಗೆ ಉತ್ತರಿಸಿ, ನಾನೊಬ್ಬನೇ ನಿರ್ಧಾರ ತೆಗೆದುಕೊಳ್ಳಬಹುದು. ಆದರೆ ನನಗೆ ಕಾರ್ಯಕರ್ತರು, ಅಭಿಮಾನಿಗಳು ಮುಖ್ಯ. ಅವರ ಮಾರ್ಗದರ್ಶನದಂತೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ನಾಳೆಯಿಂದಲೇ 7 ದಿನಗಳ ಕಾಲ ಕ್ಷೇತ್ರ ಪರ್ಯಟನೆ ಮಾಡುತ್ತೇನೆ. ಜನರ ಅಭಿಪ್ರಾಯ ಪಡೆದು ಏ.18 ಅಥವಾ 19ರಂದು ಅಂತಿಮ ನಿರ್ಧಾರ ತಿಳಿಸುತ್ತೇನೆ ಎಂದು ಮಾಹಿತಿ ನೀಡಿದ್ದಾರೆ.

ಟಿಕೆಟ್ ತಪ್ಪಿದ ಆಕಾಂಕ್ಷಿಗಳಿಂದ ಮಹಾಂತೇಶ ಕಡಾಡಿಗೆ ಬೆಂಬಲ

ಗೋಕಾಕ್‌ ಕ್ಷೇತ್ರದಲ್ಲಿ ಕೈ ಟಿಕೆಟ್‌ ವಂಚಿತ ಇತರ ಆಕಾಂಕ್ಷಿಗಳು, ಕಾಂಗ್ರೆಸ್‌ ಅಧಿಕೃತ ಅಭ್ಯರ್ಥಿ ಡಾ.ಮಹಾಂತೇಶ್‌ ಕಡಾಡಿಗೆ ಬೆಂಬಲ ಘೋಷಣೆ ಮಾಡಿದ್ದಾರೆ. ಗೋಕಾಕ್‌ನಲ್ಲಿ ಜಂಟಿ ಸುದ್ದಿಗೋಷ್ಠಿ‌ ನಡೆಸಿರುವ ಟಿಕೆಟ್ ವಂಚಿತರಾದ ಪ್ರಕಾಶ್ ಭಾಗೋಜಿ, ಚಂದ್ರಶೇಖರ ಕೊಣ್ಣೂರ, ಬಸನಗೌಡ ಹೊಳೆಯಾಚಿ ಅವರು ಚುನಾವಣೆಯಲ್ಲಿ ಡಾ.ಮಹಾಂತೇಶ ಕಡಾಡಿಗೆ ಬೆಂಬಲ ನೀಡುತ್ತೇವೆ. ಜತೆಗೆ ಅಶೋಕ್‌ ಪೂಜಾರಿ ಅವರನ್ನು ಮನವೊಲಿಸುತ್ತೇವೆ ಎಂದು ಹೇಳಿದ್ದಾರೆ.

ಅಶೋಕ್‌ ಪೂಜಾರಿ ನೇತೃತ್ವದಲ್ಲೇ ಚುನಾವಣೆ ಎಂದ ಕಡಾಡಿ

ಕೈ ನಾಯಕ ಅಶೋಕ್ ಪೂಜಾರಿ ಅಸಮಾಧಾನದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿರುವ ಗೋಕಾಕ್ ಕಾಂಗ್ರೆಸ್ ಅಭ್ಯರ್ಥಿ ಡಾ.ಮಹಾಂತೇಶ ಕಡಾಡಿ‌‌, ಅಶೋಕ್‌ ಪೂಜಾರಿ ನೂರಕ್ಕೆ ನೂರರಷ್ಟು ನನ್ನನ್ನು ಬೆಂಬಲಿಸುವ ವಿಶ್ವಾಸವಿದೆ. ಅವರ ನೇತೃತ್ವದಲ್ಲೇ ನಾನು ಪ್ರಚಾರ ಕೈಗೊಳ್ಳುವೆ. ಅವರ ಮನವೊಲಿಸಲು ಸಾಕಷ್ಟು ಪ್ರಯತ್ನಿಸಿದ್ದೇನೆ ಎಂದು ತಿಳಿಸಿದ್ದಾರೆ.

ಅಶೋಕ್ ಪೂಜಾರಿ ಕಳೆದ 30 ವರ್ಷಗಳಿಂದ ರಾಜಕೀಯದಲ್ಲಿ ಇದ್ದು, ಅವರದ್ದೇ ಆದ ಅಭಿಮಾನಿಗಳು ಇದ್ದಾರೆ. ಕ್ಷೇತ್ರದಲ್ಲಿ ಐವರು ಕಾಂಗ್ರೆಸ್ ಟಿಕೆಟ್‌ಗಾಗಿ ಅರ್ಜಿ ಹಾಕಿದ್ದೆವು. ಯಾರಿಗೆ ಟಿಕೆಟ್ ಕೊಟ್ಟರೂ ಬೆಂಬಲಿಸಿ, ಗೆಲ್ಲಿಸಬೇಕು ಎಂದು ನಾವು ಮೊದಲೇ ತೀರ್ಮಾನಿಸಿದ್ದೆವು. ಅಶೋಕ್ ಪೂಜಾರಿ ಪಕ್ಷದ ನಿರ್ಧಾರ ಸ್ವಾಗತಿಸಿದ್ದಾರೆ. ಆದರೆ ಅಭಿಮಾನಿಗಳ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಅವರು ಕೂಡ ನನಗೆ ಬೆಂಬಲ ನೀಡುವ ವಿಶ್ವಾಸವಿದೆ ಎಂದು ತಿಳಿಸಿದರು.

ಮಹಾಂತೇಶ ಕಡಾಡಿ ಜನರಿಗೆ ಚಿರಪರಿಚಿತ ಇಲ್ಲವೆಂಬ ಆರೋಪಕ್ಕೆ ಕೈ ಅಭ್ಯರ್ಥಿ ಡಾ.ಮಹಾಂತೇಶ ಕಡಾಡಿ ಪ್ರತಿಕ್ರಿಯಿಸಿ, ಗೋಕಾಕ್, ಘಟಪ್ರಭಾದಲ್ಲಿ 200 ಬೆಡ್ ಆಸ್ಪತ್ರೆ ನಡೆಸುತ್ತಿದ್ದೇನೆ. ಎರಡು ನರ್ಸಿಂಗ್ ಕಾಲೇಜುಗಳನ್ನು ನಡೆಸುತ್ತಿದ್ದೇನೆ. ಕೋವಿಡ್ ವೇಳೆ 60 ಬೆಡ್ ಆಸ್ಪತ್ರೆ ಸ್ಥಾಪಿಸಿ ಸೇವೆ ಸಲ್ಲಿಸಿದ್ದೇನೆ. ಗೋಕಾಕ್, ಮೂಡಲಗಿ ತಾಲೂಕಿನ ಜನರಿಗೆ ಚಿರಪರಿಚಿತನಿದ್ದೇನೆ ಎಂದು ಹೇಳಿದ್ದಾರೆ.

ಗೋಕಾಕ್‌ನಲ್ಲಿ ಅಭಿವೃದ್ಧಿ ವಿರೋಧಿ ಆಡಳಿತ, ಭಯದ ವಾತಾವರಣ ಇದೆ. ಕಳೆದ 20 ವರ್ಷಗಳಿಂದ ಜನರು ಬದಲಾವಣೆ ಬಯಸಿದ್ದಾರೆ. ಬದಲಾವಣೆ ತರಬೇಕು ಎಂಬುದು ಗೋಕಾಕ್ ಜನರ ಬಯಕೆ ಆಗಿತ್ತು. ಜನರ ಒತ್ತಾಯದ ಮೇರೆಗೆ ನಾನು ರಾಜಕೀಯಕ್ಕೆ ಕಾಲಿಟ್ಟಿದ್ದೇನೆ. ಅಭ್ಯರ್ಥಿಗಳ ಆಯ್ಕೆಗೆ ಸರ್ವೆ ಒಂದೇ ಮಾನದಂಡ. ಸರ್ವೆಯಲ್ಲಿ ನನ್ನ ಹೆಸರು ಮುಂಚೂಣಿಯಲ್ಲಿದ್ದಿದ್ದರಿಂದ ಟಿಕೆಟ್ ನೀಡಿದ್ದಾರೆ. ಮೆರಿಟ್ ಬೇಸ್, ಸರ್ವೆ ಬೇಸ್ ಮೇಲೆ ಅಭ್ಯರ್ಥಿಯಾಗಿ ಘೋಷಿಸಿದ್ದಾರೆ ಎಂದರು.

ಇದನ್ನೂ ಓದಿ | Karnataka Election 2023 : ಕಾಂಗ್ರೆಸ್‌ಗೆ ರಘು ಆಚಾರ್‌ ರಾಜೀನಾಮೆ; ಚಿತ್ರದುರ್ಗದಲ್ಲಿ ಜೆಡಿಎಸ್‌ ಬಲಪಡಿಸಲು ಪ್ರಯತ್ನ

ಜಾರಕಿಹೊಳಿ ಸಹೋದರರನ್ನು ಸೋಲಿಸಲು ಕಡಾಡಿ ಬ್ರದರ್ಸ್ ಒಂದಾದರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಈರಣ್ಣಾ ಕಡಾಡಿ ಕುಟುಂಬ ಹಾಗೂ ನಮಗೆ ನಾಲ್ಕು ತಲೆಮಾರಿನ ಸಂಬಂಧ ಇದೆ. ನಮ್ಮೂರು ಕಲ್ಲೊಳ್ಳಿಯಲ್ಲಿ ಶೇಕಡ 30ರಷ್ಟು ಜನರು ಕಡಾಡಿ ಮನೆತನದವರೇ ಇದ್ದಾರೆ. ಅದನ್ನು ಫ್ಯಾಮಿಲಿ ಪಾಲಿಟಿಕ್ಸ್ ಅಂತ ಹೇಳಲು ಸಾಧ್ಯವಿಲ್ಲ. ಈರಣ್ಣ ಕಡಾಡಿಯವರ ಜತೆ ರಾಜಕೀಯ ಸಂಬಂಧವಿಲ್ಲ. ಅಭಿವೃದ್ಧಿ ವಿಚಾರ ಇಟ್ಟುಕೊಂಡು ಜನರ ಬಳಿ ಹೋಗುತ್ತೇವೆ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಇಂದೇ ಸಚಿವ ನಾಗೇಂದ್ರ ರಾಜೀನಾಮೆ?

Valmiki Corporation Scam: ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಆತ್ಮಹತ್ಯೆ ಹಾಗೂ ಅವರ ಡೆತ್‌ನೋಟ್‌ ಬಯಲಾದ ಬಳಿಕ ಬೆಳಕಿಗೆ ಬಂದ ಹಗರಣದ ಬಳಿಕ ಇಷ್ಟು ದಿನ ನಾಗೇಂದ್ರ ಯಾರ ಕೈಗೂ ಸಿಕ್ಕಿರಲಿಲ್ಲ, ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ.

VISTARANEWS.COM


on

valmiki corporation scam nagendra siddaramaiah
Koo

ಬೆಂಗಳೂರು: ವಾಲ್ಮೀಕಿ ನಿಗಮದ (Valmiki Corporation Scam) ಹಗರಣಕ್ಕೆ ಸಂಬಂಧಿಸಿ ನಿನ್ನೆ ಸಚಿವ ನಾಗೇಂದ್ರ (Minister B Nagendra) ಜೊತೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಮಾತುಕತೆ ನಡೆಸಿದ್ದು, ಇಂದು ರಾಜೀನಾಮೆ (Resignation) ಕೊಡಲು ಸಜ್ಜಾಗಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆ ರಾತ್ರಿ ಭೇಟಿ ವೇಳೆ, ನಾಳೆ ಈ ಕುರಿತು ಇನ್ನಷ್ಟು ಮಾತನಾಡಲು ಬರುವಂತೆ ಸಿಎಂ ತಿಳಿಸಿದ್ದು, ಇಂದು ಬಹುತೇಕ ರಾಜೀನಾಮೆಗೆ ಸೂಚನೆ ನೀಡಲಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ ನಿನ್ನೆಯೇ ಸಿಎಂ ರಾಜೀನಾಮೆಗೆ ಸಿಎಂ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ ನಾಗೇಂದ್ರ, ಸಿಎಂ ಇಂದು ಬರೋದಕ್ಕೆ ತಿಳಿಸಿದ್ದಾರೆ ಅನ್ನುತ್ತಿದ್ದಾರೆ. ಬಹುತೇಕ ಇಂದು ಸ್ಪಷ್ಟ ಚಿತ್ರಣ ಸಿಗಲಿದೆ. ಒಂದು ವೇಳೆ ಸಿಎಂ ಸೂಚನೆ ಮೇರೆಗೆ ಇಂದು ರಾಜೀನಾಮೆ ಕೊಟ್ಟರೆ ಸರ್ಕಾರದ ಮೊದಲ ವಿಕೆಟ್ ಪತನವಾಗಲಿದೆ.

ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಆತ್ಮಹತ್ಯೆ ಹಾಗೂ ಅವರ ಡೆತ್‌ನೋಟ್‌ ಬಯಲಾದ ಬಳಿಕ ಬೆಳಕಿಗೆ ಬಂದ ಹಗರಣದ ಬಳಿಕ ಇಷ್ಟು ದಿನ ನಾಗೇಂದ್ರ ಯಾರ ಕೈಗೂ ಸಿಕ್ಕಿರಲಿಲ್ಲ, ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ನಿನ್ನೆ ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ನಾಗೇಂದ್ರ ಭೇಟಿ ಮಾಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ ವಾಲ್ಮೀಕಿ ನಿಗಮ ಆಕ್ರಮ ಹಣ ವರ್ಗಾವಣೆ ವಿಚಾರ ಕುರಿತು ಸಿಎಂ ಚರ್ಚಿಸಿದ್ದಾರೆ.

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಅನ್ನು ಸಚಿವ ನಾಗೇಂದ್ರ ಭೇಟಿಯಾಗಿದ್ದು, ಈ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಸಚಿವ ಜಮೀರ್ ಸಹ ಉಪಸ್ಥಿತರಿದ್ದರು. ವಾಲ್ಮೀಕಿ ನಿಗಮದ 185 ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪ್ರತಿಪಕ್ಷಗಳು ಬಿಗಿ ಪಟ್ಟು ಹಿಡಿದಿವೆ. ಬಿಜೆಪಿ ನಾಗೇಂದ್ರ ವಿರುದ್ಧ ರಣಕಹಳೆ ಮೊಳಗಿಸಿದೆ. ಈಗಾಗಲೇ ಈ ಪ್ರಕರಣಕ್ಕೆ ಸಿಬಿಐ ಎಂಟ್ರಿಯಾಗಿದೆ. ಹೀಗಾಗಿ ಏನಾದರೂ ಒಂದು ಕ್ರಮ ತೆಗೆದುಕೊಳ್ಳುವುದು ಸಿಎಂಗೆ ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ನಾಗೇಂದ್ರರನ್ನು ಕರೆಸಿ ಚರ್ಚೆ ಮಾಡಿರುವುದು ಸಾಕಷ್ಟು ಮಹತ್ವ ಪಡೆದುಕೊಂಡಿದೆ.

ಈಗಾಗಲೇ ನೈತಿಕ ಹೊಣೆ ಹೊತ್ತು ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಬೇಕಾಗಿತ್ತು ಎಂದು ಕಾಂಗ್ರೆಸ್‌ನ ಹಲವು ಹಿರಿಯ ನಾಯಕರು ಸೂಚಿಸಿದ್ದಾರೆ. ಸಂಪುಟದ ಸಹೋದ್ಯೋಗಿಗಳೇ ಮುಗುಂ ಆಗಿದ್ದಾರೆ. ಹೀಗಾಗಿ, ಸಿಬಿಐಯಲ್ಲಿ ಎಫ್ಐಆರ್ ದಾಖಲು ಆಗುತ್ತಿದ್ದಂತೆ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.

45 ಕೋಟಿ ರೂ. ಸೀಜ್

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ವರ್ಗಾವಣೆ ಕೇಸ್ ಸಂಬಂಧಿಸಿ SITಯಿಂದ ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್‌ನಲ್ಲಿದ್ದ 45 ಕೋಟಿ ರೂ. ಸೀಜ್ ಮಾಡಲಾಗಿದೆ. ಬಂಧಿತ ಆರೋಪಿ ಸತ್ಯನಾರಾಯಣ್‌ ಒಡೆತನದ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್ ಖಾತೆಗೆ ನಿಗಮದಿಂದ 94.73 ಕೋಟಿ ರೂ. ವರ್ಗಾವಣೆಯಾಗಿತ್ತು. ಬ್ಯಾಂಕ್‌ನ 18 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ 94.73 ಕೋಟಿ ರೂ.ನಲ್ಲಿ ಬಹುಪಾಲು ಹಣ ಡ್ರಾ ಆಗಿದೆ. ಇನ್ನುಳಿದ ಹಣ ಎಲ್ಲಿಗೆ ಹೋಗಿದೆ ಎಂಬುದರ ಕುರಿತು ಎಸ್‌ಐಟಿ ತನಿಖೆ ಮುಂದುವರಿಸಿದೆ.

ಸದ್ಯ ಈ ಪ್ರಕರಣದಲ್ಲಿ ಇದುವರೆಗೆ ಐವರನ್ನು ಎಸ್‌ಐಟಿ ಬಂಧಿಸಿದೆ. ಪದ್ಮನಾಭ, ಪರಶುರಾಮ್, ನೆಕ್ಕುಂಟಿ ನಾಗರಾಜ್, ನಾಗೇಶ್ವರ ರಾವ್, ಸತ್ಯನಾರಾಯಣ ಬಂಧನವಾಗಿದೆ. ಐವರನ್ನು ಕಸ್ಟಡಿಗೆ ಪಡೆದು SIT ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ: Valmiki Corporation Scam : ವಾಲ್ಮಿಕಿ ನಿಗಮ ಹಗರಣ; ಆಂಧ್ರದ ಫಸ್ಟ್​​ ಬ್ಯಾಂಕ್ ಅಧ್ಯಕ್ಷ . ಸಚಿವ ನಾಗೇಂದ್ರ ಆಪ್ತರ ಬಂಧನ

Continue Reading

ಪ್ರಮುಖ ಸುದ್ದಿ

HD Kumaraswamy: ಕೃಷಿ ಖಾತೆ ಬಯಸಿದ್ದ ಎಚ್‌ಡಿಕೆ ಎನ್‌ಡಿಎ ಮೈತ್ರಿಕೂಟದ ಸಭೆಯಲ್ಲಿ ತುಟಿ ಬಿಚ್ಚಲೇ ಇಲ್ಲ!

HD Kumaraswamy: ಮಾಧ್ಯಮದ ಮುಂದೆ ನೀಡಿದ್ದ ಹೇಳಿಕೆಗೂ, NDA ಸಭೆಯಲ್ಲಿ ಆದ ಬೆಳವಣಿಗೆಗೂ ಬಹಳಷ್ಟು ಅಂತರ ಕಂಡುಬಂದಿದೆ. NDA ಸಭೆಯಲ್ಲಿ ಮಂತ್ರಿ ಸ್ಥಾನದ ಬಗ್ಗೆ ಕುಮಾರಸ್ವಾಮಿ ತುಟಿ ಬಿಚ್ಚಲಿಲ್ಲ ಎನ್ನಲಾಗಿದೆ. ಮೊದಲು ಎನ್‌ಡಿಎ ಸರ್ಕಾರ ರಚನೆ ಆಗಲಿ, ಅದೇ ಸಂತೋಷ. ಬಳಿಕ ಮಂತ್ರಿ ಸ್ಥಾನದ ಬಗ್ಗೆ ನೋಡೋಣ ಎಂದಿದ್ದಾರೆ.

VISTARANEWS.COM


on

HD Kumaraswamy NDA government
Koo

ಬೆಂಗಳೂರು: ನೂತನ ಸರ್ಕಾರ ರಚನೆಯ (Central Government) ಕುರಿತು ನಿನ್ನೆ ನಡೆದ ಎನ್‌ಡಿಎ (NDA) ಮೈತ್ರಿ ಕೂಟದ ಸಭೆಯಲ್ಲಿ ಮಾಜಿ ಸಿಎಂ, ಜೆಡಿಎಸ್‌ (JDS) ನಾಯಕ ಎಚ್. ಡಿ ಕುಮಾರಸ್ವಾಮಿ (HD Kumaraswamy) ಭಾಗಿಯಾದರು. ಆದರೆ, ಸಭೆಗೆ ತೆರಳುವ ಮುನ್ನ ಕೇಂದ್ರ ಸಂಪುಟದಲ್ಲಿ ಕೃಷಿ ಖಾತೆ (Agriculture) ಪಡೆಯುವ ಬಗ್ಗೆ ಮನದ ಇಂಗಿತ ವ್ಯಕ್ತಪಡಿಸಿದ್ದ ಎಚ್‌ಡಿಕೆ, ಅಲ್ಲಿ ಈ ಕುರಿತು ಯಾವುದೇ ಮಾತನಾಡಲಿಲ್ಲ ಎಂದು ತಿಳಿದುಬಂದಿದೆ.

ದೆಹಲಿಗೆ ಬರುತ್ತಿದ್ದಂತೆ, ಮಾಧ್ಯಮದ ಮುಂದೆ ಕೃಷಿ ಖಾತೆ ಸಿಕ್ಕರೆ ತಾನು ನಿಭಾಯಿಸಬಲ್ಲೆ ಎಂದು ಮಾಜಿ ಸಿಎಂ ಹೇಳಿದ್ದರು. ಎಲ್ಲರ ಆಶಯವೂ ಅದೇ ಆಗಿದೆ, ನನಗೆ ಕೃಷಿ ಖಾತೆ ನೀಡಬೇಕು ಎಂಬುದಾಗಿದೆ. ನಾನು ಕೂಡ ಕೃಷಿ ಸಚಿವನಾಗಿ ಕರ್ತವ್ಯ ನಿಭಾಯಿಸಬಲ್ಲೆ ಎಂದಿದ್ದರು.

ಆದರೆ ಮಾಧ್ಯಮದ ಮುಂದೆ ನೀಡಿದ್ದ ಹೇಳಿಕೆಗೂ, NDA ಸಭೆಯಲ್ಲಿ ಆದ ಬೆಳವಣಿಗೆಗೂ ಬಹಳಷ್ಟು ಅಂತರ ಕಂಡುಬಂದಿದೆ. NDA ಸಭೆಯಲ್ಲಿ ಮಂತ್ರಿ ಸ್ಥಾನದ ಬಗ್ಗೆ ಕುಮಾರಸ್ವಾಮಿ ತುಟಿ ಬಿಚ್ಚಲಿಲ್ಲ ಎನ್ನಲಾಗಿದೆ. ಮೊದಲು ಎನ್‌ಡಿಎ ಸರ್ಕಾರ ರಚನೆ ಆಗಲಿ, ಅದೇ ಸಂತೋಷ. ಬಳಿಕ ಮಂತ್ರಿ ಸ್ಥಾನದ ಬಗ್ಗೆ ನೋಡೋಣ ಎಂದಿದ್ದಾರೆ.

ಸಭೆ ಕ್ಲುಪ್ತವಾಗಿ ಮುಗಿಯುತು. ಜೆಡಿಯು ನಾಯಕ ನಿತೀಶ್ ಕುಮಾರ್ ಹಾಗೂ ಟಿಡಿಪಿ ಮುಖಂಡ ಚಂದ್ರಬಾಬು ನಾಯ್ಡು ಮಾತಿಗೆ ಎಚ್‌ಡಿಕೆ ಸಹಮತ ವ್ಯಕ್ತಪಡಿಸಿದರು. ಎಲ್ಲರೂ ಎನ್‌ಡಿಎಗೆ ತಮ್ಮ ಸಹಕಾರ ವ್ಯಕ್ತಪಡಿಸಿದರು. ಮಿತ್ರಪಕ್ಷಗಳಿಂದ ಔಪಚಾರಿಕವಾಗಿ ಸಮ್ಮತಿ ಪತ್ರ ಪಡೆಯುವ ಪ್ರಕ್ರಿಯೆ ನಡೆದಿದ್ದು, ಇಂದು ರಾಷ್ಟ್ರಪತಿಯನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

ಎನ್‌ಡಿಎ ಸಭೆಯ ಬಳಿಕ ಬೆಂಗಳೂರಿಗೆ ತೆರಳುವ ಮೊದಲು ಎಚ್‌.ಡಿ.ಕುಮಾರಸ್ವಾಮಿ ಅವರು ಮಾತನಾಡಿದರು. “ಎನ್‌ಡಿಎ ಮಿತ್ರಪಕ್ಷಗಳ ಸಭೆ ನಡೆಯಿತು. ನರೇಂದ್ರ ಮೋದಿ ಅವರ ಬಳಿ ಯಾವುದೇ ಬೇಡಿಕೆ ಇಟ್ಟಿಲ್ಲ. ಹಾಗೊಂದು ವೇಳೆ, ನರೇಂದ್ರ ಮೋದಿ ಅವರು ಬಯಸಿದರೆ ನಾನು ಸಚಿವನಾಗಿ ಕಾರ್ಯನಿರ್ವಹಿಸಲು ಸಿದ್ಧನಿದ್ದೇನೆ” ಎಂಬುದಾಗಿ ಅವರು ಹೇಳಿದರು. ಕರ್ನಾಟಕದಲ್ಲಿ ಜೆಡಿಎಸ್‌ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಮೈತ್ರಿ ಮಾಡಿಕೊಂಡಿರುವುದರಿಂದ ಕೆಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲು ಕೂಡ ಸಹಕಾರಿಯಾಗಿದೆ. ಹಾಗಾಗಿ, ಕುಮಾರಸ್ವಾಮಿ ಅವರಿಗೆ ಮೋದಿ ಕ್ಯಾಬಿನೆಟ್‌ನಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ.

ದೆಹಲಿಯಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಎಲ್ಲ ಪಕ್ಷಗಳ ನಾಯಕರು ನರೇಂದ್ರ ಮೋದಿ (PM Narendra Modi) ಅವರಿಗೆ ಬೆಂಬಲ ಸೂಚಿಸಿದರು. ಮೈತ್ರಿಕೂಟದ ಸರ್ಕಾರ ರಚನೆಗೆ ಕುರಿತು ತೆಗೆದುಕೊಂಡ ಒಂದು ಸಾಲಿನ ನಿರ್ಣಯಕ್ಕೆ ಎಲ್ಲರೂ ಸಹಿ ಹಾಕಿದರು. ಖಾತೆ ಹಂಚಿಕೆ, ಯಾವ ಖಾತೆ ಯಾರಿಗೆ ನೀಡಬೇಕು ಎಂಬುದರ ಕುರಿತು ಆಮೇಲೆ ನೋಡಿಕೊಳ್ಳೋಣ. ಮೊದಲು ಸರ್ಕಾರ ರಚನೆಯಾಗಲಿ ಎಂಬುದಾಗಿ ಎಲ್ಲ ನಾಯಕರು ಮೋದಿ ಅವರಿಗೆ ಅಭಯ ನೀಡಿದ್ದಾರೆ ಎಂದು ತಿಳಿದುಬಂದಿದೆ.

‌ನವದೆಹಲಿಯ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ನರೇಂದ್ರ ಮೋದಿ ಅವರ ನಿವಾಸದಲ್ಲಿ ಸಭೆ ನಡೆಯಿತು. ತೆಲುಗುದೇಶಂ ಪಕ್ಷದ (TDP), ಸಂಯುಕ್ತ ಜನತಾದಳದ ನಿತೀಶ್‌ ಕುಮಾರ್‌, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಎಲ್‌ಜೆಪಿ ಮುಖ್ಯಸ್ಥ ಚಿರಾಗ್‌ ಪಾಸ್ವಾನ್‌, ಆರ್‌ಎಲ್‌ಡಿಯ ಜಯಂತ್‌ ಚೌಧರಿ, ಜನಸೇನಾ ಪಕ್ಷದ ಪವನ್‌ ಕಲ್ಯಾಣ್ ಸೇರಿ ಹಲವು ನಾಯಕರು ಭಾಗಿಯಾಗಿದ್ದರು. ಎಲ್ಲರೂ ಒಗ್ಗೂಡಿ ಸರ್ಕಾರ ರಚಿಸುವುದು, ಒಗ್ಗಟ್ಟಿನಿಂದ ಇರುವುದು ಸೇರಿ ಹಲವು ವಿಷಯಗಳ ಕುರಿತು ಚರ್ಚೆಯಾಯಿತು ಎಂದು ಉನ್ನತ ಮೂಲಗಳು ತಿಳಿಸಿವೆ.

ಇದನ್ನೂ ಓದಿ: HD Kumaraswamy: ಮೋದಿ ಬಯಸಿದ್ರೆ ಮಂತ್ರಿಯಾಗಲು ರೆಡಿ; ಮನದಾಸೆ ತೆರೆದಿಟ್ಟ ಕುಮಾರಸ್ವಾಮಿ!

Continue Reading

ಮೈಸೂರು

Death News: ಬಿಎಸ್‌ವೈ ಆಪ್ತ ಕಾ.ಪು ಸಿದ್ದಲಿಂಗಸ್ವಾಮಿ ನಿಧನ

Death News: ಕಾ.ಪು ಸಿದ್ದಲಿಂಗಸ್ವಾಮಿ ಅವರು ವರುಣ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಅವರು 2008ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದಾಗ ಅವರ ವೈಯಕ್ತಿಕ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದರು.

VISTARANEWS.COM


on

death news kapu siddalingaswamy
Koo

ಮೈಸೂರು: ಬಿಜೆಪಿ ಮುಖಂಡ, ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಅವರ ಆಪ್ತ ಕಾ.ಪು ಸಿದ್ದಲಿಂಗಸ್ವಾಮಿ (Kapu Siddalingaswamy) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದಲಿಂಗಸ್ವಾಮಿ ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ಮೃತಪಟ್ಟರು.

ಇತ್ತೀಚೆಗೆ ಯಡಿಯೂರಪ್ಪ ಹಾಗೂ ನೂತನ ಸಂಸದ ವಿ.ಸೋಮಣ್ಣ ಮೈಸೂರಿಗೆ ಬಂದು ಅವರ ಆರೋಗ್ಯ ವಿಚಾರಿಸಿದ್ದರು. ವರುಣ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಅವರು 2008ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದಾಗ ಅವರ ವೈಯಕ್ತಿಕ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದರು. ರಾಜ್ಯ ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾಗಿಯೂ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ. ಇಂದು ಸಂಜೆ 4 ಗಂಟೆಗೆ ಸ್ವಗ್ರಾಮ ಕಾರ್ಯದಲ್ಲಿ ಅಂತಿಮ ವಿಧಿ ವಿಧಾನ ನಡೆಯಲಿವೆ.‌

ಇಂದು ಬಾಗಲಕೋಟೆ, ಬೀದರ್, ಕರಾವಳಿ ಸೇರಿ ವಿವಿಧೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಜೂನ್ 6ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ (Karnataka Weather) ಇದೆ. ಇನ್ನು ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ (Rain Fall) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಜೂನ್‌ 7ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು ಸೇರಿದಂತೆ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ತಾಪಮಾನದ ಮುನ್ಸೂಚನೆ

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ನಿಂದ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಸುತ್ತಮುತ್ತೆಲಿನ ಭಾಗದಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 °C ಮತ್ತು 23 ° C ಆಗಿರಬಹುದು.

ಇದನ್ನೂ ಓದಿ | Rain News: ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು; ಜೂನ್‌ 13ರವರೆಗೆ ಕಾವೇರಿ, ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ!

ಜೂನ್ 13 ರವರೆಗೆ ಭಾರಿ ಮಳೆ ಮುನ್ಸೂಚನೆ

ಜೂನ್ 5 ರಿಂದ ಜೂನ್ 13 ರವರೆಗೆ ಕಾವೇರಿ ಜಲಾನಯನ ಪ್ರದೇಶ ಹಾಗೂ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಸುರಿಯಲಿದೆ. ಜೂನ್ 6 ರಿಂದ 11 ರವರೆಗೆ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 8 ರಿಂದ 11 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದ ಮೇಲ್ಭಾಗದಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ, ಕೃಷ್ಣಾ ಜಲಾನಯನ ಪ್ರದೇಶದ ಒಳಹರಿವು ಹೆಚ್ಚಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Muslim Women: ಟಕಾ ಟಕ್‌ ಅಂದ್ರಲ್ಲ, 1 ಲಕ್ಷ ರೂ. ಕೊಡಿ; ಕಾಂಗ್ರೆಸ್‌ ಕಚೇರಿಗೆ ಲಗ್ಗೆ ಇಟ್ಟ ಮುಸ್ಲಿಂ ಮಹಿಳೆಯರು!

Continue Reading

ಪ್ರಮುಖ ಸುದ್ದಿ

Karnataka Weather: ಇಂದು ಬಾಗಲಕೋಟೆ, ಬೀದರ್, ಕರಾವಳಿ ಜಿಲ್ಲೆಗಳು ಸೇರಿ ವಿವಿಧೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather: ಜೂನ್ 13 ರವರೆಗೆ ಕಾವೇರಿ ಜಲಾನಯನ ಪ್ರದೇಶ ಹಾಗೂ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಸುರಿಯಲಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದಲ್ಲಿ ಜೂನ್ 6ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ (Karnataka Weather) ಇದೆ. ಇನ್ನು ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ (Rain Fall) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಜೂನ್‌ 7ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು ಸೇರಿದಂತೆ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ತಾಪಮಾನದ ಮುನ್ಸೂಚನೆ

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ನಿಂದ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ.

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಸುತ್ತಮುತ್ತೆಲಿನ ಭಾಗದಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 °C ಮತ್ತು 23 ° C ಆಗಿರಬಹುದು.

ಇದನ್ನೂ ಓದಿ | Rain News: ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು; ಜೂನ್‌ 13ರವರೆಗೆ ಕಾವೇರಿ, ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ!

ಜೂನ್ 13 ರವರೆಗೆ ಭಾರಿ ಮಳೆ ಮುನ್ಸೂಚನೆ

ಜೂನ್ 5 ರಿಂದ ಜೂನ್ 13 ರವರೆಗೆ ಕಾವೇರಿ ಜಲಾನಯನ ಪ್ರದೇಶ ಹಾಗೂ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಸುರಿಯಲಿದೆ. ಜೂನ್ 6 ರಿಂದ 11 ರವರೆಗೆ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 8 ರಿಂದ 11 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದ ಮೇಲ್ಭಾಗದಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ, ಕೃಷ್ಣಾ ಜಲಾನಯನ ಪ್ರದೇಶದ ಒಳಹರಿವು ಹೆಚ್ಚಾಗುವ ಸಾಧ್ಯತೆಯಿದೆ.

ಸಿಡಿಲು ಬಡಿದು ಕುರಿಗಾಹಿ, 15ಕ್ಕೂ ಅಧಿಕ ಕುರಿಗಳ ಸಾವು

ವಿಜಯಪುರ: ಸಿಡಿಲು ಬಡಿದು 15ಕ್ಕೂ ಅಧಿಕ ಕುರಿಗಳು ಹಾಗೂ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದ ಹೊರಭಾಗದಲ್ಲಿ ಬುಧವಾರ ನಡೆದಿದೆ.

ಅಮೋಘಿ ಸೋಮನಿಂಗ ಕಣಮುಚನಾಳ (35) ಮೃತ ದುರ್ದೈವಿ. ಮಳೆ ಬರುತ್ತಿದ್ದ ಕಾರಣ ಕುರಿಗಳೊಂದಿಗೆ ಮರದ ಕೆಳಗೆ ಕುರಿಗಾಹಿ ಅಮೋಘಿ ನಿಂತಿದ್ದ. ಈ ವೇಳೆ ಮರಕ್ಕೆ ಸಿಡಿಲು ಬಡಿದ ಪರಿಣಾಮ ಸ್ಥಳದಲ್ಲೇ ವ್ಯಕ್ತಿ ಜತೆಗೆ 15ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿವೆ.

ಕೊಟ್ಟೂರಿನಲ್ಲಿ ಸಿಡಿಲಿಗೆ ಯುವಕ ಬಲಿ

ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ದೂಪದಹಳ್ಳಿ ಗ್ರಾಮದಲ್ಲಿ ನಡೆದಿದೆ. ಬುಧವಾರ ಸಂಜೆ ಸುರಿದ ಮಳೆಗೆ ಸಿಡಿಲು ಬಡಿದು ಅವಘಡ ನಡೆದಿದೆ. ಮದ್ದಾನಿ (20) ಸಿಡಿಲಿಗೆ ಬಲಿಯಾದ ಯುವಕ.

Continue Reading
Advertisement
T20 World Cup 2024
ಕ್ರೀಡೆ7 mins ago

T20 World Cup 2024: ಒಮಾನ್​ ವಿರುದ್ಧ ಪ್ರಯಾಸದ ಗೆಲುವು ಸಾಧಿಸಿದ ಆಸ್ಟ್ರೇಲಿಯಾ

Postal Ballets
ದೇಶ31 mins ago

Postal Ballots: ಕೈ ಹಿಡಿದ ಅಂಚೆ ಮತಗಳು..ಕೊನೆಯ ಕ್ಷಣದಲ್ಲಿ ಸೋತು ಗೆದ್ದ ಅಭ್ಯರ್ಥಿಗಳಿವರು

Megha Shetty Pose With R Madhavan
ಕಿರುತೆರೆ39 mins ago

Megha Shetty: ನಟ ಮಾಧವನ್​ ಭೇಟಿ ಮಾಡಿ ಖುಷಿ ಹಂಚಿಕೊಂಡ ಮೇಘಾ ಶೆಟ್ಟಿ!

valmiki corporation scam nagendra siddaramaiah
ಕರ್ನಾಟಕ58 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಇಂದೇ ಸಚಿವ ನಾಗೇಂದ್ರ ರಾಜೀನಾಮೆ?

Sunil Chhetri
ಕ್ರೀಡೆ1 hour ago

Sunil Chhetri: ಭಾರತದ ಫುಟ್ಬಾಲ್ ಐಕಾನ್​​ ಸುನೀಲ್‌ ಚೆಟ್ರಿಗೆ ಇಂದು ವಿದಾಯ ಪಂದ್ಯ

Lok Sabha Election 2024
ದೇಶ1 hour ago

Election results 2024: 280 ಸಂಸದರು ಮೊದಲ ಬಾರಿಗೆ ಲೋಕಸಭೆಗೆ ಎಂಟ್ರಿ! ಲಿಸ್ಟ್‌ನಲ್ಲಿದ್ದಾರೆ ಮಾಜಿ ಸಿಎಂಗಳು, ಸಿನಿ ತಾರೆಯರು, ಹೈಕೋರ್ಟ್‌ ಜಡ್ಜ್‌

Dolly Dhananjay Will He Get Married says During Kotee Trailer Launch
ಸ್ಯಾಂಡಲ್ ವುಡ್1 hour ago

Dolly Dhananjay: ರೋಡಲ್ಲಿ ಹೋಗೋರೆಲ್ಲ ನನ್ನ ಮದ್ವೆ ಬಗ್ಗೆನೇ ಕೇಳ್ತಾರೆ ಎಂದ  ಡಾಲಿ ಧನಂಜಯ್!

Hinduism Beliefs
ಧಾರ್ಮಿಕ1 hour ago

Hinduism Beliefs: ಸತ್ತ ವ್ಯಕ್ತಿಯ ದೇಹವನ್ನು ಏಕಾಂಗಿಯಾಗಿ ಬಿಡಬಾರದು ಅನ್ನೋದು ಯಾಕೆ ಗೊತ್ತೇ?

Job Alert
ಉದ್ಯೋಗ1 hour ago

Job Alert: ರೈಲ್ವೆ ಇಲಾಖೆಯಲ್ಲಿನ 1,202 ಹುದ್ದೆಗಳಿಗೆ ಐಟಿಐ ಪಾಸಾದವರು ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

Norway Tour
ಪ್ರವಾಸ1 hour ago

Norway Tour: ಜಗತ್ತಿನ ಕೊನೆಯ ದೇಶ ಇದು! ಇಲ್ಲಿ 6 ತಿಂಗಳು ಹಗಲು, 6 ತಿಂಗಳು ರಾತ್ರಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ7 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 weeks ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌