Gold Rate Today: ಬೆಂಗಳೂರಿನಲ್ಲಿ ಸತತ 2ನೇ ದಿನವೂ ಚಿನ್ನದ ಬೆಲೆ ಏರಿಕೆ; ಇಂದಿನ ದರ ಇಷ್ಟಿದೆ Vistara News

ಕರ್ನಾಟಕ

Gold Rate Today: ಬೆಂಗಳೂರಿನಲ್ಲಿ ಸತತ 2ನೇ ದಿನವೂ ಚಿನ್ನದ ಬೆಲೆ ಏರಿಕೆ; ಇಂದಿನ ದರ ಇಷ್ಟಿದೆ

Gold Rate Today: ಭಾನುವಾರವೂ ಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆ ಕಂಡಿದೆ. ಒಂದು ಗ್ರಾಂಗೆ 10 ರೂ. ಏರಿಕೆಯಾಗಿದ್ದು, ಕೊಳ್ಳುವವರ ಜೇಬಿಗೆ ತುಸು ಭಾರ ಎನಿಸಲಿದೆ.

VISTARANEWS.COM


on

Rachana Inder
ನಟಿ ರಚನಾ ಇಂದರ್‌ (ಸಾಂದರ್ಭಿಕ ಚಿತ್ರ)
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ಭಾನುವಾರವೂ (ಸೆಪ್ಟೆಂಬರ್‌ 24) ಬಂಗಾರದ ಬೆಲೆ (Gold Rate Today) ಜಾಸ್ತಿಯಾಗುತ್ತಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 5,495 ರೂ. ಆಗಿದ್ದು, ಒಂದು ಗ್ರಾಂಗೆ 10 ರೂ. ಜಾಸ್ತಿಯಾದಂತಾಗಿದೆ. ಹಾಗೆಯೇ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 5,995 ರೂ. ಆಗಿದ್ದು, ಒಂದೇ ದಿನದಲ್ಲಿ 11 ರೂ. ಏರಿಕೆಯಾಗಿದೆ.

ಶನಿವಾರವೂ (ಸೆಪ್ಟೆಂಬರ್‌ 23) ಬಂಗಾರದ ಬೆಲೆಯು ಇಷ್ಟೇ ಏರಿಕೆಯಾಗಿತ್ತು. ಶುಕ್ರವಾರ ಒಂದು ಗ್ರಾಂ ಚಿನ್ನದ ಬೆಲೆಯು 20 ರೂ. ಇಳಿಕೆಯಾಗಿದ್ದು ಗ್ರಾಹಕರಿಗೆ ತುಸು ನಿರಾಳ ಭಾವ ಮೂಡಿಸಿತ್ತು. ಆದರೆ, ಶನಿವಾರ ಹಾಗೂ ಭಾನುವಾರ ಸತತ ಏರಿಕೆ ಕಂಡಿದೆ. ಆದಾಗ್ಯೂ, ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ 22 ಕ್ಯಾರಟ್‌ ಚಿನ್ನದ ಬೆಲೆಯು ಗ್ರಾಂಗೆ 5,500 ದಾಟಿತ್ತು. ಹಾಗೆಯೇ, 24 ಕ್ಯಾರಟ್‌ ಚಿನ್ನದ ಬೆಲೆಯು 6 ಸಾವಿರ ರೂ. ದಾಟಿತ್ತು. ಹಬ್ಬದ ಬಳಿಕ ತುಸು ಇಳಿಕೆಯಾಗಿರುವುದು ಗ್ರಾಹಕರು ನಿಟ್ಟುಸಿರು ಬಿಡುವಂತಾಗಿದೆ.

Alia Bhat In Jewellery

ಭಾರತ ವಿಶ್ವದಲ್ಲಿಯೇ ಎರಡನೆಯ ಅತಿ ದೊಡ್ಡ ಬಂಗಾರದ ( Gold rate ) ಮಾರುಕಟ್ಟೆಯಾಗಿದೆ. ಚೀನಾ ಬಿಟ್ಟರೆ ಅತಿ ಹೆಚ್ಚು ಚಿನ್ನ ಕೊಳ್ಳುವ ದೇಶ ಜಗತ್ತಿನಲ್ಲಿ ಯಾವುದಾದರೂ ಇದ್ದರೆ ಅದು ಭಾರತ ಮಾತ್ರ. ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಜನ ಸಂಖ್ಯೆಯ ಹೆಚ್ಚಳ, ವಿವಾಹ ಸಮಾರಂಭಗಳ ಏರಿಕೆ, ಹಬ್ಬಗಳ ಸಂಭ್ರಮ, ಜನರ ಆದಾಯದಲ್ಲಿ ಏರಿಕೆ, ನಗರೀಕರಣ ಮೊದಲಾದ ಕಾರಣಗಳಿಂದ ಚಿನ್ನದ ಖರೀದಿ ಗಣನೀಯ ಏರಿಕೆಯಾಗುತ್ತಿದೆ. ಈ ಟ್ರೆಂಡ್‌ ಮತ್ತಷ್ಟು ಹೆಚ್ಚಳವಾಗಲಿದೆ ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ತನ್ನ ವರದಿಯಲ್ಲಿ ತಿಳಿಸಿದೆ. ಈ ವರದಿ ಹಲವು ಸ್ವಾರಸ್ಯಕರ ಅಂಶಗಳನ್ನು ಬಹಿರಂಗಪಡಿಸಿದೆ.

ಇದನ್ನೂ ಓದಿ: Gold Fruad : Hallmark ಚಿನ್ನಾಭರಣ ನೀಡಿ ಲೋನ್‌ ಪಡೆಯಲು ಯತ್ನ: SBI ಮ್ಯಾನೇಜರ್‌ ಜಾಣ್ಮೆ ಮುಂದೆ ನಡೆಯದ ಆಟ!

ಭಾರತದಿಂದ ಇತ್ತೀಚಿನ ವರ್ಷಗಳಲ್ಲಿ ಜ್ಯುವೆಲ್ಲರಿ ರಫ್ತು ಕೂಡ ಗಣನೀಯ ಏರಿಕೆಯಾಗುತ್ತಿದೆ. 2015ರಲ್ಲಿ 7.6 ಶತಕೋಟಿ ಡಾಲರ್‌ನಷ್ಟಿದ್ದ ಜ್ಯುವೆಲ್ಲರಿ ರಫ್ತು 2020ರಲ್ಲಿ ಕೋವಿಡ್-‌19 ಬರುವುದಕ್ಕೆ ಮುನ್ನ 12.4 ಶತಕೋಟಿ ಡಾಲರ್‌ಗೆ ಏರಿಕೆಯಾಗಿತ್ತು. ಭಾರತೀಯ ಜ್ಯುವೆಲ್ಲರಿಗಳನ್ನು ಹೊಸ ಮಾರುಕಟ್ಟೆಗೆ ರಫ್ತು ಮಾಡಬೇಕಾದ ಅಗತ್ಯವೂ ಇದೆ. ಈಗ ಜ್ಯುವೆಲ್ಲರಿ ರಫ್ತಿನ 90% ಪಾಲು ಕೂಡ ಕೇವಲ ಐದು ದೇಶಗಳಿಗೆ ಹೋಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

CM Siddaramaiah: ಹುಬ್ಬಳ್ಳಿಯಲ್ಲಿ ಸೋಮವಾರ ನಡೆದಿದ್ದ ಮುಸ್ಲಿಂ ಸಮುದಾಯದ ಕಾರ್ಯಕ್ರಮದಲ್ಲಿ ಸಿಎಂ ಪಕ್ಕ ಐಸಿಸ್‌ ಸಂಘಟನೆ ಜತೆ ಸಂಪರ್ಕ ಹೊಂದಿರುವ ವ್ಯಕ್ತಿ ಕುಳಿತಿದ್ದ. ಇನ್ನೊಂದು ವಾರದಲ್ಲಿ ಈ ಸಂಬಂಧ ದಾಖಲೆಯನ್ನು ಬಿಡುಗಡೆ ಮಾಡುತ್ತೇನೆ ಎಂದು ಬಸನಗೌಡ ಪಾಟೀಲ್‌ ಯತ್ನಾಳ್ ಹೇಳಿದ್ದಾರೆ.

VISTARANEWS.COM


on

MLA Basanagouda Patil Yatnal and CM Siddaramaiah
ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದ ಮುಸ್ಲಿಂ ಸಮುದಾಯದ ಕಾರ್ಯಕ್ರಮ.
Koo

ಬೆಳಗಾವಿ: ಹುಬ್ಬಳ್ಳಿ‌ಯಲ್ಲಿ ಸೋಮವಾರ ನಡೆದಿದ್ದ‌ ಮುಸ್ಲಿಂ ಸಮಾವೇಶದಲ್ಲಿ (Muslim conference) ಸಿಎಂ‌ ಸಿದ್ದರಾಮಯ್ಯ ‌(CM Siddaramaiah) ಆಡಿರುವ ಕೆಲವು ಮಾತುಗಳು ವಿವಾದಕ್ಕೆ ಕಾರಣವಾಗಿದ್ದ ಬೆನ್ನಲ್ಲೇ ಈಗ ಮಾಜಿ ಸಚಿವ, ‌ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ (MLA Basanagouda Patil Yatnal) ಬಾಂಬ್‌ ಒಂದನ್ನು ಸಿಡಿಸಿದ್ದಾರೆ. ಆ ಕಾರ್ಯಕ್ರಮದಲ್ಲಿ ಸಿಎಂ ಪಕ್ಕ ಐಸಿಸ್‌ ಸಂಘಟನೆ (ISIS Terror) ಜತೆ ಸಂಪರ್ಕ ಹೊಂದಿರುವ ವ್ಯಕ್ತಿ ಕುಳಿತಿದ್ದ. ಇನ್ನೊಂದು ವಾರದಲ್ಲಿ ಈ ಸಂಬಂಧ ದಾಖಲೆಯನ್ನು ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್‌ ಯತ್ನಾಳ್‌, ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಸಮಾವೇಶದಲ್ಲಿ ಐಸಿಸ್‌ ಸಂಘಟನೆ ಸಂಪರ್ಕ ಇರುವವನು ಇದ್ದ. ಅವನು ಸಿಎಂ ಪಕ್ಕದಲ್ಲಿ ಕುಳಿತಿದ್ದ. ವೇದಿಕೆಯನ್ನು ಸಿಎಂ ಜತೆಗೆ ಹಂಚಿಕೊಂಡಿದ್ದ. ಆ ಬಗ್ಗೆ ಅವರಿಗೆ ಮಾಹಿತಿ ಇರಲಿಲ್ವಾ? ಎಲ್ಲ‌ ಮಾಹಿತಿ ಪಡೆದೇ
ನಾನು ಗಂಭೀರವಾಗಿಯೇ ಹೇಳುತ್ತಿದ್ದೇನೆ. ಹುಡುಗಾಟಿಕೆಗೆ ನಾನು ಈ ಬಗ್ಗೆ ಹೇಳಿಕೆ ನೀಡುತ್ತಿಲ್ಲ. ಬೇಕಾದರೆ ಮಾಹಿತಿ ತರಿಸಿಕೊಳ್ಳಲಿ ಎಂದು ಕಿಡಿಕಾರಿದರು.

MLA Basanagouda Patil Yatnal and CM Siddaramaiah

ಇದನ್ನೂ ಓದಿ: Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

ಪ್ರಧಾನ ಮಂತ್ರಿ ಕಾರ್ಯಕ್ರಮ ಇದ್ದರೆ ಯಾರು ಯಾರು ವೇದಿಕೆ ಮೇಲೆ ಇರಬೇಕು ಎಂದು ಮಾಹಿತಿ ಇರುತ್ತದೆ. ಈ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಯಾರು ಇರುತ್ತಾರೆ ಎಂದು ಮಾಹಿತಿ ಇರಲಿಲ್ವಾ? ನಾನೇ ಇನ್ನೊಂದು ವಾರದಲ್ಲೇ ಎಲ್ಲ ಮಾಹಿತಿ ಹೇಳುತ್ತೇನೆ ಎಂದು ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು.

ಏನಿದು ವಿವಾದ?

ಹುಬ್ಬಳ್ಳಿ‌ಯಲ್ಲಿ ಸೋಮವಾರ (ಡಿ.4) ನಡೆದಿದ್ದ‌ ಮುಸ್ಲಿಂ ಸಮಾವೇಶದಲ್ಲಿ ಸಿಎಂ‌ ಸಿದ್ದರಾಮಯ್ಯ ಭಾಗವಹಿಸಿದ್ದರು. ಇಲ್ಲಿ ಅವರು ಮುಸ್ಲಿಂ ಸಮುದಾಯದ ಪರವಾಗಿ ಆಡಿದ ಮಾತುಗಳು ಸಾಕಷ್ಟು ವಿವಾದವನ್ನು ಹುಟ್ಟುಹಾಕಿತ್ತು. ಮುಸ್ಲಿಂ ಸಮುದಾಯದ ರಕ್ಷಣೆ ಮಾಡುವುದಾಗಿ ಘೋಷಿಸಿದ್ದಲ್ದದೆ, 10 ಸಾವಿರ ಕೋಟಿ ರೂಪಾಯಿಯನ್ನು ಅಲ್ಪಸಂಖ್ಯಾತರಿಗೆ ನೀಡಲು ಉದ್ದೇಶಸಲಾಗಿದೆ ಎಂಬ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಒಂದು ಸಮುದಾಯದ ಓಲೈಕೆಗೆ ಸಿಎಂ ಮುಂದಾಗಿದ್ದಾರೆ ಎಂದು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ ಕಿಡಿಕಾರಿತ್ತು. ಅಲ್ಲದೆ, ಸದನದಲ್ಲಿ ಸಹ ಈ ವಿಚಾರ ಪ್ರಸ್ತಾಪವಾಗಿದ್ದು, ಸಿಎಂ ಉತ್ತರಕ್ಕಾಗಿ ಬಿಜೆಪಿ ಪಟ್ಟು ಹಿಡಿದು ಕುಳಿತಿದೆ.

ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ರಾಜಕೀಯ ‌ಲಾಭಕ್ಕೆ ಕೆಲವರು ಧರ್ಮಗಳ ನಡುವೆ ಸಂಘರ್ಷ ಉಂಟು ಮಾಡುತ್ತಾರೆ. ಇದರಿಂದ ತಾತ್ಕಾಲಿಕ ಲಾಭ ಸಿಗಬಹುದು. ಪರಸ್ಪರ ಪ್ರೀತಿ ಇರಬೇಕಾದರೆ ನಾವು ಮನುಷ್ಯತ್ವದಿಂದ ಇರಬೇಕು. ಈ ವರ್ಷ ನಾಲ್ಕು ಸಾವಿರ ಕೋಟಿ ಅನುದಾನ ಅಲ್ಪಸಂಖ್ಯಾತರ ಇಲಾಖೆಗೆ ಕೊಟ್ಟಿದ್ದೇವೆ. 10 ಸಾವಿರ ಕೋಟಿ ಹಣ ಅಲ್ಪಸಂಖ್ಯಾತ ಇಲಾಖೆಗೆ ಖರ್ಚು ಮಾಡಬೇಕು ಅನ್ನೋದು ನಮ್ಮ ಉದ್ದೇಶ. ನಾನು ಕೊಟ್ಟಿದ್ದ ಹಣ ಬಿಜೆಪಿ ಸರ್ಕಾರ ಕಡಿಮೆ ಮಾಡಿತ್ತು. ನಿಮ್ಮ ಧಾರ್ಮಿಕ ಕೇಂದ್ರಗಳಿಗೆ ಅನುದಾನ ಬೇಕು. ದೇಶದ ಸಂಪತ್ತಲ್ಲಿ ನಿಮಗೆ ಪಾಲು ಸಿಗಬೇಕು. ದೇಶದ ಸಂಪತ್ತು ನಿಮಗೂ ಹಂಚುತ್ತೇನೆ. ನಿಮಗೆ ಅನ್ಯಾಯ ಮಾಡೋಕೆ ನಾನು ಬಿಡಲ್ಲ. ನಿಮ್ಮನ್ನು ನಾನು ರಕ್ಷಣೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.

ಇದನ್ನೂ ಓದಿ: Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

ಗಂಭೀರ ಸ್ವರೂಪ ಪಡೆದ ಯತ್ನಾಳ್‌ ಆರೋಪ

ಈ ಕಾರ್ಯಕ್ರಮದಲ್ಲಿ ಮೌಲ್ವಿಗಳು ಸೇರಿದಂತೆ ಹಲವರು ಭಾಗವಹಿಸಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ಅವರ ಪಕ್ಕದಲ್ಲಿ ಐಸಿಸ್‌ ಉಗ್ರ ಸಂಘಟನೆಗೆ ಸೇರಿದ ವ್ಯಕ್ತಿಯೊಬ್ಬ ಇದ್ದಾನೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ನೇರ ಆರೋಪವನ್ನು ಮಾಡಿದ್ದಾರೆ. ಹೀಗಾಗಿ ಈ ವಿವಾದ ಈಗ ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ.

Continue Reading

ಕರ್ನಾಟಕ

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Elephant Arjuna : ಸಾಕಾನೆ ಅರ್ಜುನ ಮೃತಪಟ್ಟ ಹಿನ್ನೆಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಮಾವುತರು ತಮ್ಮ ಸಾಕಾನೆಯೊಂದಿಗೆ ವಾಪಸ್‌ ಮರಳುತ್ತಿದ್ದು, ಇದೇ ವೇಳೆ ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವುದಾಗಿ ಶಪಥ ಮಾಡಿದ್ದಾರೆ.

VISTARANEWS.COM


on

By

We will catch the wild elephant that killed Arjuna
Koo

ಹಾಸನ: ಸಾಕಾನೆ ಅರ್ಜುನನನ್ನು (Elephant Arjuna) ಕೊಂದ ಕಾಡಾನೆಯನ್ನು ಹಿಡಿದೇ ಹಿಡಿಯುತ್ತೇವೆ ಎಂದು ಮಾವುತ ಗುಂಡಣ್ಣ ಶಪಥ ಮಾಡಿದ್ದಾರೆ. ಹಾಸನದ ಯಳಸೂರು ಕಾಡಿನಲ್ಲಿ ನಡೆದ ಕಾರ್ಯಾಚರಣೆಯ ವೇಳೆ ಮೃತಪಟ್ಟ ಅರ್ಜುನನ ನೆನೆದು ಬೇಲೂರು ತಾಲ್ಲೂಕಿನ ಬಿಕ್ಕೋಡು ಸಮೀಪದ ಆನೆ ಕ್ಯಾಂಪ್‌ನಲ್ಲಿ ನೀರವ ಮೌನ ಆವರಿಸಿದೆ. ಕುಟುಂಬದ ಸದಸ್ಯನಂತಿದ್ದ ಅರ್ಜುನನ ಕಳೆದುಕೊಂಡ ದುಃಖದಲ್ಲಿ ಮಾವುತರು ಇದ್ದಾರೆ.

ಕಾಡಾನೆ ಸೆರೆ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ ಮಾಡಿ, ಸಾಕಾನೆಗಳೊಂದಿಗೆ ಮಾವುತರು ಹಾಗೂ ಕಾವಡಿಗಳು ವಾಪಸ್‌ ಆಗುತ್ತಿದ್ದಾರೆ. ಅರ್ಜುನನನ್ನು ಕಳೆದುಕೊಂಡ ದುಃಖದಲ್ಲಿರುವ ಮಾವುತರಿಗೆ ಅಧಿಕಾರಿಗಳು ಸಾಂತ್ವಾನ ಹೇಳುತ್ತಿದ್ದರು. ಅರ್ಜುನನನ್ನು ಕೊಂದ ಕಾಡಾನೆಯನ್ನು ಜನರ ಮುಂದೆಯೇ ಸೆರೆಹಿಡಿದು ತರುತ್ತೇವೆ ಎಂದು ಮಾವುತ ಗುಂಡಣ್ಣ ಅಧಿಕಾರಿಗಳೊಂದಿಗೆ ಶಪಥ ಮಾಡಿದರು.

ಅರ್ಜುನನ್ನು ಕಳೆದುಕೊಂಡು ಚಿಂತೆ ಇದೆ. ಬಹಳ ನೋವಾಗಿದೆ, ಆದರೆ ಮನಸ್ಸು ಗಟ್ಟಿಮಾಡಿಕೊಂಡಿದ್ದೇವೆ. ಆ ಕಾಡಾನೆಯನ್ನು ಹಿಡಿಯುವ ಆಸೆಯಿದೆ. ಮತ್ತೆ ಇದೇ ಕ್ಯಾಂಪ್‌ಗೆ ಬರುತ್ತೇವೆ, ಕಾಡಾನೆಯನ್ನು ಹಿಡಿಯುತ್ತೇವೆ, ಜನರು ಅದನ್ನು ನೋಡಬೇಕು ಹಾಗೆ ಮಾಡುತ್ತೇವೆ ಎಂದರು. ಈ ವೇಳೆ ಸಿಸಿಎಫ್ ರವಿಶಂಕರ್ ಹಾಗೂ ಡಿಎಫ್‌ಓ ಮೋಹನ್ ಮತ್ತೊಮ್ಮೆ ಕಾಡಾನೆ ಸೆರೆಗೆ ಕಾರ್ಯಾಚರಣೆ ಸಿದ್ಧ ಮಾಡುತ್ತೇವೆ ಎಂದರು.

ಇದನ್ನೂ ಓದಿ: Elephant Attack : ರಸ್ತೆ ದಾಟುವಾಗ ಅಡ್ಡ ಬಂದ ಸವಾರ; ಬೈಕ್‌ ಪುಡಿ ಮಾಡಿ ಪ್ರಾಣ ತೆಗೆದ ಕಾಡಾನೆಗಳು!

ಅರ್ಜುನನಿಗೆ ಅರ್ಜುನನೇ ಸರಿಸಾಟಿ- ಕಣ್ಣೀರಿಟ್ಟ ಮಾವುತ

ಅರ್ಜುನ ಹೆಸರಿನ ಆನೆಯನ್ನು ಕಳೆದುಕೊಂಡು ಮಾವುತ ವಿನೋದ್ ದುಃಖಿತನಾಗಿದ್ದಾರೆ. ಅರ್ಜುನನಿಗೆ ಅರ್ಜುನನೇ ಸಾಟಿ ಎಂದು ಕಣ್ಣೀರಿಟ್ಟರು. ನನ್ನ ಕುಟುಂಬವೇ ಅರ್ಜುನನೊಂದಿಗೆ ಅವಿನಾಭಾವ ಸಂಬಂಧ ಹೊಂದಿತ್ತು. ನಾನು ಒಂಟಿಯಾಗಿ ಹೋಗಿ ಮುಖ ತೋರಿಸುವುದು ಹೇಗೆ ಎಂಬಂತಾಗಿದೆ. ಮನೆಗೆ ಬಂದ ಕೂಡಲೇ ನನ್ನ ಮಕ್ಕಳು ಎಲ್ಲರೂ ಅರ್ಜುನನಿಗೆ ಆಹಾರ ನೀಡುತ್ತಿದ್ದರು. ನನ್ನ ತಂದೆಗೆ ಸ್ಟ್ರೋಕ್ ಆಗಿ ಮನೆಯಲ್ಲಿದ್ದಾರೆ. ಅರ್ಜುನನಿಗೂ ನನ್ನ ತಂದೆಗೂ ಅವಿನಾಭಾವ ಸಂಬಂಧ ಇತ್ತು. ನಾನು ಒಂಟಿಯಾಗಿ ಮತ್ತೆ ಕ್ಯಾಂಪ್‌ಗೆ ಹೋಗಲು ಮನಸ್ಸಾಗುತ್ತಿಲ್ಲ. ಅರ್ಜುನ ಇಲ್ಲ ಎಂಬ ನೋವನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ ಎಂದು ದುಃಖ ತೊಡಿಕೊಂಡರು.

ವಾಚರ್‌ ಮಿಸ್‌ ಫೈರ್‌

ಕಾಡಾನೆ ಕಾರ್ಯಾಚರಣೆ ವೇಳೆ ಆದ ಕೆಲ ಯಡವಟ್ಟನ್ನು ವಿನೋದ್‌ ಬಿಚ್ಚಿಟ್ಟಿದ್ದಾರೆ. ಅರವಳಿಕೆಯನ್ನು ಕಾಡಾನೆ ಬದಲು ಬೇರೆ ಆನೆಗೆ ಬಿದ್ದಿತು. ಅದನ್ನು ಸಂಬಾಳಿಸುವತ್ತ ಎಲ್ಲರೂ ಗಮನ ಕೊಟ್ಟಿದ್ದರು. ನಾನು ಅರ್ಜುನನಿಂದ ಕೆಳಗೆ ಇಳಿದು ಪ್ರಶಾಂತನ ಜತೆ ಇದ್ದೆ.

ಆ ಸಂದರ್ಭ ಕಾಡಾನೆ ಏಕಾಏಕಿ ಅರ್ಜುನನ ಮೇಲೆ ದಾಳಿ ಮಾಡಿತು. ಅರಣ್ಯ ಇಲಾಖೆಯ ವಾಚರ್ ಮಿಸ್ ಫೈರ್ ಮಾಡಿದಾಗ ,ಅದು ಅರ್ಜುನನ ಕಾಲಿಗೆ ಬಿತ್ತು. ಕಾಲು ನೋವಿನಿಂದ ಒಂಟಿ ಸಲಗದೊಂದಿಗೆ ಸೆಣಸಾಡಲು ಅರ್ಜುನನಿಗೆ ಆಗಲಿಲ್ಲ. ಇಲ್ಲದಿದ್ದರೆ ಇಂತಹ ಮೂರು ಆನೆ ಬಂದಿದ್ದರೂ ಅರ್ಜುನ ಹೊಡೆದು ಹಾಕುತ್ತಿದ್ದ ಎಂದು ವಿನೋದ್‌ ಮಾಹಿತಿ ನೀಡಿದರು.

ಮರಣೋತ್ತರ ಪರೀಕ್ಷೆಗೆ ಒತ್ತಾಯ!

ಮತ್ತೊಂದು ಕಡೆ ಸಾಕಾನೆ ಅರ್ಜುನನ ಮರಣೋತ್ತರ ಪರೀಕ್ಷೆಗೆ ಒತ್ತಾಯ ಕೇಳಿ ಬಂದಿದೆ. ಅಭಿಯಾನದ ಮೂಲಕ ಸಾವಿಗೆ ನ್ಯಾಯ ಒದಗಿಸಲು ಕರೆ ನೀಡಲಾಗಿದೆ. ಅರ್ಜುನ ಸಾವಿಗೆ ಕಾರಣರಾದವರಿಗೆ ಶಿಕ್ಷೆ ಆಗಬೇಕೆಂದು ಪ್ರತಿಭಟನೆ ಮಾಡಿದರೆ, ಪ್ರತಿಭಟನಾಕಾರರ ಮೇಲೆ ಹಲ್ಲೆ ‌ಮಾಡಿ ದೌರ್ಜನ್ಯ ಮಾಡಿದ್ದಾರೆ ಎಂದು ಹೋರಾಟಗಾರ ಯಡೇಹಳ್ಳಿ ಮಂಜುನಾಥ್ ಆರೋಪಿಸಿದ್ದಾರೆ.

ಅರ್ಜುನನ ಮಾವುತರೇ ಗುಂಡೇಟು ಬಿದ್ದಿದೆ ಎಂದು ಹೇಳಿದರೂ, ಹಾಸನ ಜಿಲ್ಲಾಡಳಿತ ಹಾಗೂ ಅರಣ್ಯ‌ ಇಲಾಖೆ, ಮರಣೋತ್ತರ ಪರೀಕ್ಷೆ ನಡೆಸದೇ ಅರ್ಜುನನ ಅಂತ್ಯಸಂಸ್ಕಾರ ಮಾಡಿದ್ದಾರೆ. ಗುಂಡೇಟು ಬಿದ್ದಿರುವ ಕಾಲು ಕಾಣಬಾರದು ಎಂದು ಅದನ್ನು ಮಾರೆ ಮಾಚಿ ಅಂತ್ಯಸಂಸ್ಕಾರವನ್ನು ಮಾಡಿದ್ದಾರೆ. ನ್ಯಾಯಾಲಯ ಮಧ್ಯಪ್ರವೇಶ ಮಾಡಿ, ಅರ್ಜುನನ ಮೃತದೇಹವನ್ನು ಹೊರ ತೆಗೆದು, ಮರಣೋತ್ತರ ಪರೀಕ್ಷೆಯನ್ನು ಮಾಡಬೇಕು ಎಂದು ಹೋರಾಟಗಾರ ಯಡೇಹಳ್ಳಿ ಮಂಜುನಾಥ್ ಆಗ್ರಹಿಸಿದ್ದಾರೆ.

ಕಾಡಾನೆ ಸೆರೆ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಅರಣ್ಯಾಧಿಕಾರಿಗಳು 6 ಸಾಕಾನೆಗಳ ಬಳಸಿ ಕಾಡಾನೆ ಸೆರೆಗೆ ಮುಂದಾಗಿದ್ದರು. ಕಾರ್ಯಾಚರಣೆಯ ತಂಡದ ನಾಯಕ ಅರ್ಜುನ ಮೃತಪಟ್ಟ ಹಿನ್ನೆಲೆಯಲ್ಲಿ ಚಿಕ್ಕಮಗಳೂರಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆಯನ್ನು ಸ್ಥಗಿತ ಮಾಡಲಾಗಿದೆ. ಅರ್ಜುನ ಸಾವಿನಿಂದ ಮಾವುತರು, ಕಾವಡಿಗರು ದುಃಖದಲ್ಲಿ ಇದ್ದಾರೆ.

ನವೆಂಬರ್ 24 ರಿಂದ ಬಿಕ್ಕೋಡು ಕ್ಯಾಂಪ್‌ನಲ್ಲಿ ಸಾಕಾನೆಗಳು ಹಾಗೂ ಮಾವುತರು ತಂಗಿದ್ದರು. ದುಬಾರೆಯಿಂದ , ಮತ್ತಿಗೋಡು ಕ್ಯಾಂಪ್‌ನಿಂದ ತಲಾ ಮೂರು ಸಾಕಾನೆಗಳು ಕಾರ್ಯಾಚರಣೆಗೆ ಬಂದಿದ್ದವು. ಈಗ ಅರ್ಜುನನ್ನು ಕಳೆದುಕೊಂಡು ಮರಳಿ ಕ್ಯಾಂಪ್‌ಗೆ ಧನಂಜಯ, ಪ್ರಶಾಂತ, ಕರ್ನಾಟಕ ಭೀಮ, ಅಶ್ವತ್ಥಾಮ, ಸುಗ್ರೀವಾ ತೆರಳಲಿದ್ದಾರೆ. ಬೇಲೂರು ತಾಲ್ಲೂಕಿನ ಬಿಕ್ಕೋಡು ಬಳಿಕ ತಾತ್ಕಾಲಿಕ ಆನೆ ಶಿಬಿರದಲ್ಲಿ ಸಾಕಾನೆಗಳಿಗೆ ಪೂಜೆ ಸಲ್ಲಿಸಲಾಗುತ್ತದೆ. ಬಳಿಕ ಲಾರಿ ಮೂಲಕ ತಮ್ಮ ಕ್ಯಾಂಪ್‌ಗಳಿಗೆ ತೆರಳಲಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉದ್ಯೋಗ

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job: ಸರ್ಕಾರಿ ಇಲಾಖೆಯಲ್ಲಿ 7 ಲಕ್ಷ ಜನ ಮಾಡಬೇಕಾದ ಕೆಲಸವನ್ನು ಈಗ 4 ಲಕ್ಷ ಜನರು ಮಾಡುತ್ತಲಿದ್ದಾರೆ. ಇದರ ಬಗ್ಗೆ ವಿಸ್ತಾರ ನ್ಯೂಸ್‌ನಲ್ಲಿ (Vistara News) ಪ್ರಸಾರ ಮಾಡಲಾಗಿದೆ. ಸರ್ಕಾರ ಹುದ್ದೆಗಳ ಬಗ್ಗೆ ಕೊಟ್ಟ ಉತ್ತರ ಅಸಮರ್ಪಕವಾಗಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರೇ ಉತ್ತರ ಕೊಡಬೇಕು ಎಂದು ಪಟ್ಟು ಹಿಡಿದಿದ್ದು, ಗದ್ದಲಕ್ಕೆ ಕಾರಣವಾಗಿದೆ.

VISTARANEWS.COM


on

Government Job Vistara Exclusive and CM Siddaramaiah
Koo

ಬೆಳಗಾವಿ: ರಾಜ್ಯದಲ್ಲಿ ಎರಡೂವರೆ ಲಕ್ಷ ಸರ್ಕಾರಿ ಹುದ್ದೆಗಳು (Government Job) ಖಾಲಿ ಇರುವ ಬಗ್ಗೆ ವಿಸ್ತಾರ ನ್ಯೂಸ್‌ ಬಿತ್ತರಿಸಿದ ಎಕ್ಸ್‌ಕ್ಲೂಸಿವ್‌ ವರದಿಯು ಬೆಳಗಾವಿ ಚಳಿಗಾಳದ ಅಧಿವೇಶನದಲ್ಲಿ (Belagavi Winter Session) ಚರ್ಚೆಗೆ ಬಂದಿದ್ದು, ಆಡಳಿತ ಮತ್ತು ವಿಪಕ್ಷಗಳ ವಾಗ್ವಾದಕ್ಕೆ ಕಾರಣವಾಗಿದೆ. ಪರಿಷತ್‌ ಕಲಾಪದಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಬಿಜೆಪಿ ಸದಸ್ಯೆ ತೇಜಸ್ವಿನಿ ರಮೇಶ್‌, ಸರ್ಕಾರಿ ಇಲಾಖೆಯಲ್ಲಿ (Government Department) 7 ಲಕ್ಷ ಜನ ಮಾಡಬೇಕಾದ ಕೆಲಸವನ್ನು ಈಗ 4 ಲಕ್ಷ ಜನರು ಮಾಡುತ್ತಲಿದ್ದಾರೆ. ಇದರ ಬಗ್ಗೆ ವಿಸ್ತಾರ ನ್ಯೂಸ್‌ನಲ್ಲಿ (Vistara News) ಪ್ರಸಾರ ಮಾಡಲಾಗಿದೆ. ಸರ್ಕಾರ ಹುದ್ದೆಗಳ ಬಗ್ಗೆ ಕೊಟ್ಟ ಉತ್ತರ ಅಸಮರ್ಪಕವಾಗಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರೇ ಉತ್ತರ ಕೊಡಬೇಕು ಎಂದು ಪಟ್ಟು ಹಿಡಿದಿದ್ದು, ಗದ್ದಲಕ್ಕೆ ಕಾರಣವಾಗಿದೆ.

ಖಾಲಿ ಹುದ್ದೆ ಬಗ್ಗೆ ಸರ್ಕಾರ ಕೊಟ್ಟ ಉತ್ತರ ಅಸಮರ್ಪಕವಾಗಿದೆ ಎಂದು ತೇಜಸ್ವಿನಿ ರಮೇಶ್‌ ಹೇಳಿಕೆ ನೀಡುತ್ತಿದ್ದಂತೆ ಮಧ್ಯ ಪ್ರವೇಶ ಮಾಡಿದ ಸಲೀಂ ಅಹಮದ್‌, ಸರ್ಕಾರ ಈಗಾಗಲೇ ಉತ್ತರ ಕೊಟ್ಟಿದೆ ಎಂದು ಹೇಳಿದರು. ಆಗ ಕಾಂಗ್ರೆಸ್ ಸದಸ್ಯ ಯು.ಬಿ. ವೆಂಕಟೇಶ್ ಮಾತನಾಡಿ, ಈ ಹಿಂದೆ ನಿಮ್ಮ ಸರ್ಕಾರದ ಇತ್ತಲ್ಲವೇ? ಆಗ ಏನು ಕತ್ತೆ ಕಾಯ್ತಾ ಇದ್ರಾ? ಕೇಂದ್ರ ಸರ್ಕಾರದಲ್ಲಿ ಒಂದು ಕೋಟಿ ಹುದ್ದೆ ಖಾಲಿ ಇದೆ ಎಂದು ಹೇಳಿದರು. ಇದು ಬಿಜೆಪಿ ಸದಸ್ಯರನ್ನು ಮತ್ತಷ್ಟು ಕೆರಳಿಸಿತು.

ಸಿಎಂ ಕಲಾಪಕ್ಕೆ ಬಂದು ಉತ್ತರಿಸಲಿ

ಈ ಹೇಳಿಕೆಯಿಂದ ಆಕ್ರೋಶಗೊಂಡ ಪ್ರತಿಪಕ್ಷ ಬಿಜೆಪಿ ಸದಸ್ಯರು, ಕತ್ತೆ ಅನ್ನೋ ಪದವನ್ನು ಕಡಿತದಿಂದ ತೆಗೆಯಲು ಒತ್ತಾಯ ಮಾಡಿದರು. ಬಳಿಕ ಮಾತನಾಡಿದ ತೇಜಸ್ವಿನಿ ರಮೇಶ್‌, ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ನಮಗೆ ಆರೋಪಿಸುತ್ತಾರೆ. ಆದರೆ, ನಾವು ಬ್ಲಾಕ್‌ಮೇಲ್ ಮಾಡುತ್ತಿಲ್ಲ. ಜ್ವಲಂತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದೇವೆ. ಖಾಲಿ ಹುದ್ದೆ ಬಗ್ಗೆ ವಿಸ್ತಾರ ನ್ಯೂಸ್‌ನಲ್ಲಿ ಪ್ರಸಾರ ಆಗುತ್ತಾ ಇದೆ. ಯಾವ ಯಾವ ಇಲಾಖೆಗಳಲ್ಲಿ ಎಷ್ಟೆಷ್ಟು ಸರ್ಕಾರಿ ಹುದ್ದೆಗಳು ಖಾಲಿ ಇವೆ ಅಂತ ತೋರಿಸುತ್ತಿದ್ದಾರೆ. ಮುಖ್ಯಮಂತ್ರಿಗಳು ಕಲಾಪಕ್ಕೆ ಆಗಮಿಸಿ ಉತ್ತರಿಸಬೇಕು ಎಂದು ಆಗ್ರಹಿಸಿದರು.

ಸಿಎಂ ಉತ್ತರಕ್ಕಾಗಿ ಪಟ್ಟು

ಆಗ ಮಾತನಾಡಿದ ಯು.ಬಿ. ವೆಂಕಟೇಶ್, ಈಗಾಗಲೇ ಮುಖ್ಯಮಂತ್ರಿಗಳಿಂದಲೇ ಉತ್ತರ ಕೊಡಿಸಿಯಾಗಿದೆ. ಇವರು ಕಳೆದ ಐದು ವರ್ಷದಿಂದ ಏನ್ ಕತ್ತೆ ಕಾಯುತ್ತಿದ್ದರಾ? ಯಾಕೆ ಏಳನೇ ವೇತನ ಆಯೋಗ ಜಾರಿ ಮಾಡಲಿಲ್ಲ? ಎಂದು ಪ್ರಶ್ನೆ ಮಾಡಿದರು. ಇದರಿಂದ ಅಸಮಾಧಾನಗೊಂಡ ತೇಜಸ್ವಿನಿ ರಮೇಶ್, ಕತ್ತೆ ಕಾಯುವ ಕೆಲಸ ಸದನದಲ್ಲಿ ಮಾಡಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನಕ್ಕೆ ಬಂದು ಉತ್ತರ ಕೊಡಬೇಕು. ಅಲ್ಲಿಯವರೆಗೂ ಧರಣಿ ವಾಪಸ್ ಪಡೆಯಲ್ಲ ಎಂದು ಪಟ್ಟುಹಿಡಿದು ಕುಳಿತರು.

ಕತ್ತೆಯ ಗುಣವನ್ನು ಬೆಳೆಸಿಕೊಳ್ಳಬೇಕು

ಆಗ ಬೋಜೇಗೌಡ ಮಾತನಾಡಿ, ಕತ್ತೆಗಿರುವ ಗೌರವವನ್ನು ಸಹ ಕಾಂಗ್ರೆಸ್‌ನವರು ಹಾಳು ಮಾಡಿದ್ದಾರೆ. ಕತ್ತೆಯ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಹೇಳಿದರು. ಆಗ ಸಚಿವ ಕೃಷ್ಣ ಬೈರೆಗೌಡ ಮಾತನಾಡಿ, ಸುಗಮ ಕಲಾಪಕ್ಕೆ ಅನುವು ಮಾಡಿಕೊಡಿ. ಸಿಎಂ ಬೆಂಗಳೂರಿನ ಕಾರ್ಯಕ್ರಮದಲ್ಲಿದ್ದಾರೆ. ಅವರು ಬಂದ ಕೂಡಲೇ ಗಮನಕ್ಕೆ ತರುತ್ತೇವೆ ಎಂದು ಹೇಳಿದರು.

ಸಿಎಂರಿಂದ ಉತ್ತರ ಕೊಡಿಸುವ ಭರವಸೆ

ಇಷ್ಟಾದರೂ ಗದ್ದಲ ನಿಲ್ಲದೇ ಇದ್ದಾಗ ಸಭಾಪತಿ ಬಸವರಾಜ ಹೊರಟ್ಟಿ ಮಧ್ಯಪ್ರವೇಶಿಸಿ, ಸದನದ ಕಲಾಪವನ್ನು ನಡೆಸಲು ಬಿಡಿ. ಇದೇ ರೀತಿಯಾದರೆ ಸದನವನ್ನು ಮುಂದೂಡುತ್ತೇನೆ. ಏನ್ ಹುಡುಗಾಟಿಕೆ ಮಾಡಿಕೊಂಡಿದ್ದೀರಿ? ಎಂದು ಗರಂ ಆದರು. ಸಿಎಂ ಸಿದ್ದರಾಮಯ್ಯ ಅವರಿಂದ ಉತ್ತರ ಕೊಡಿಸುವ ಭರವಸೆ ಸಿಕ್ಕ ಮೇಲೆ ಪ್ರತಿಪಕ್ಷಗಳು ಧರಣಿಯನ್ನು ವಾಪಸ್‌ ಪಡೆದವು.

‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

VISTARA-EXCLUSIVE

ವಿಸ್ತಾರ ನ್ಯೂಸ್‌ನಲ್ಲಿ ಮೆಗಾ EXCLUSIVE ಸ್ಟೋರಿ ಇದಾಗಿದ್ದು, ರಾಜ್ಯ ಸರ್ಕಾರಿ ಇಲಾಖೆಯಲ್ಲಿ ಲಕ್ಷ, ಲಕ್ಷ ಖಾಲಿ ಹುದ್ದೆ (Government Job) ಇರುವುದು ಗೊತ್ತಾಗಿದೆ. ಗ್ಯಾರಂಟಿ ಯೋಜನೆಯನ್ನು ಕೊಟ್ಟಿರುವ ಕಾಂಗ್ರೆಸ್‌ ಸರ್ಕಾರದಲ್ಲಿ (Congress Government) ಉದ್ಯೋಗ ಸೃಷ್ಟಿಗೆ ‘ಗ್ಯಾರಂಟಿ’ಯೇ ಇಲ್ಲ ಎನ್ನುವಂತೆ ಆಗಿದೆ. ಸರ್ಕಾರ ಬಂದು 6 ತಿಂಗಳು ಕಳೆದರೂ ಉದ್ಯೋಗ ಭರ್ತಿಗೆ ಹೊಸ ನೋಟಿಫಿಕೇಷನ್ ಮಾಡಲಾಗಿಲ್ಲ. ಖಾಲಿ ಹುದ್ದೆ ಭರ್ತಿ ಹೇಳಿಕೆಯು ಕೇವಲ ಬಜೆಟ್‌ಗೆ ಸೀಮಿತವಾಗಿದೆ. ಯಾವ್ಯಾವ ಸರ್ಕಾರಿ ಇಲಾಖೆಯಲ್ಲಿ ಎಷ್ಟೆಷ್ಟು ಹುದ್ದೆಗಳು ಖಾಲಿ ಇವೆ? ಎಂಬ ಬಗ್ಗೆ ಇಲ್ಲಿ ಸಂಪೂರ್ಣ ಮಾಹಿತಿ ನೀಡಲಾಗಿದೆ.

ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ, ಆರೋಗ್ಯ – ವೈದ್ಯಕೀಯ ಇಲಾಖೆ, ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರ್ಥಿಕ ಇಲಾಖೆ, ಕೃಷಿ ಇಲಾಖೆ, ಪಶು ಸಂಗೋಪನಾ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ನೀರಾವರಿ ಇಲಾಖೆಗಳಲ್ಲಿ ಒಟ್ಟು 2,47,558 ಹುದ್ದೆಗಳು ಖಾಲಿ ಇವೆ.

ಇಲ್ಲಿ ದಾಖಲೆಗಳ ಸಮೇತ ಖಾಲಿ ಹುದ್ದೆಗಳ ವಿವರ; ಇಲ್ಲಿದೆ ವಿಡಿಯೊ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ

  • ಮಂಜೂರಾದ ಹುದ್ದೆಗಳು – 2,82,862
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 2,16,803
  • ಖಾಲಿ ಹುದ್ದೆಗಳು- 66,059

ಒಳಾಡಳಿತ ಇಲಾಖೆ

  • ಮಂಜೂರಾದ ಹುದ್ದೆಗಳು – 1,26,913
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -1,03,356
  • ಖಾಲಿ ಹುದ್ದೆಗಳು – 23,557

ಉನ್ನತ ಶಿಕ್ಷಣ ಇಲಾಖೆ

  • ಮಂಜೂರಾದ ಹುದ್ದೆಗಳು – 24,785
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -12,111
  • ಖಾಲಿ ಹುದ್ದೆಗಳು- 12,674

ಆರೋಗ್ಯ ಮತ್ತು ವೈದ್ಯಕೀಯ

  • ಮಂಜೂರಾದ ಹುದ್ದೆಗಳು – 74,857
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -40,213
  • ಖಾಲಿ ಹುದ್ದೆಗಳು- 34,644

ಕಂದಾಯ ಇಲಾಖೆ

  • ಮಂಜೂರಾದ ಹುದ್ದೆಗಳು – 32,309
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -21,688
  • ಖಾಲಿ ಹುದ್ದೆಗಳು – 10,621

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

  • ಮಂಜೂರಾದ ಹುದ್ದೆಗಳು – 6,940
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -3,710
  • ಖಾಲಿ ಹುದ್ದೆಗಳು – 3,230

ಆರ್ಥಿಕ ಇಲಾಖೆ

  • ಮಂಜೂರಾದ ಹುದ್ದೆಗಳು – 18,892
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 10,113
  • ಖಾಲಿ ಹುದ್ದೆಗಳು – 8,779

ಕೃಷಿ ಇಲಾಖೆ

  • ಮಂಜೂರಾದ ಹುದ್ದೆಗಳು – 10,324
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 4,008
  • ಖಾಲಿ ಹುದ್ದೆಗಳು – 6,316

ಪಶುಸಂಗೋಪನೆ ಇಲಾಖೆ

  • ಮಂಜೂರಾದ ಹುದ್ದೆಗಳು – 19,610
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 8,581
  • ಖಾಲಿ ಹುದ್ದೆಗಳು – 11,029

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ

  • ಮಂಜೂರಾದ ಹುದ್ದೆಗಳು – 10,986
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 5,248
  • ಖಾಲಿ ಹುದ್ದೆಗಳು – 5,738

ಗ್ರಾಮೀಣಾಭಿವೃದ್ಧಿ ಇಲಾಖೆ

  • ಮಂಜೂರಾದ ಹುದ್ದೆಗಳು – 28,223
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 17,814
  • ಖಾಲಿ ಹುದ್ದೆಗಳು – 10,409

ಸಮಾಜ ಕಲ್ಯಾಣ ಇಲಾಖೆ

  • ಮಂಜೂರಾದ ಹುದ್ದೆಗಳು – 15,177
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 5,585
  • ಖಾಲಿ ಹುದ್ದೆಗಳು – 9,592

ಲೋಕೋಪಯೋಗಿ ಇಲಾಖೆ

  • ಮಂಜೂರಾದ ಹುದ್ದೆಗಳು – 16,635
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 10,602
  • ಖಾಲಿ ಹುದ್ದೆಗಳು – 6,033

ನೀರಾವರಿ ಇಲಾಖೆ

  • ಮಂಜೂರಾದ ಹುದ್ದೆಗಳು – 10,623
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 6,401
  • ಖಾಲಿ ಹುದ್ದೆಗಳು – 4,222

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಅಡಿಕೆ ಬೆಳೆಯ ಸಂಕಷ್ಟಗಳನ್ನು ನಿವಾರಿಸಿ

ಒಟ್ಟು 2,47,558 ಹುದ್ದೆಗಳು ಖಾಲಿ ಇದ್ದು, ಇದರ ಭರ್ತಿಗೆ ರಾಜ್ಯ ಸರ್ಕಾರ ಚಿಂತನೆಯನ್ನೇ ನಡೆಸಿಲ್ಲ. ಸರ್ಕಾರ ಅಸ್ತಿತ್ವಕ್ಕೆ ಬಂದು ಆರು ತಿಂಗಳು ಕಳೆದರೂ ಸಹ ಯಾವುದೇ ನೋಟಿಫಿಕೇಶನ್‌ ಆಗಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕೊಡಬೇಕು ಎಂಬ ಆಗ್ರಹಗಳು ಕೇಳಿ ಬಂದಿವೆ.

Continue Reading

ಕರ್ನಾಟಕ

Murder Case : ಸ್ನೇಹಿತನ ಹಣ ಕೊಡಿಸಿ ಕಿರಿಕ್ ಮಾಡಿಕೊಂಡು ಹೆಣವಾದ ವ್ಯಕ್ತಿ!

Murder Case : ಎಣ್ಣೆಮತ್ತಿನಲ್ಲಿ ನಡೆದ ಅದೊಂದು ಗಲಾಟೆಯು ಕೊಲೆಯಲ್ಲಿ ಅಂತ್ಯವಾಗಿದೆ. ಸ್ನೇಹಿತನ ಹಣ ಕೊಡಿಸಿ ಕಿರಿಕ್‌ ಮಾಡಿಕೊಂಡು ವ್ಯಕ್ತಿಯೊಬ್ಬ ಉಸಿರು ಚೆಲ್ಲಿದ್ದಾನೆ.

VISTARANEWS.COM


on

By

murder case in Bengaluru
ಬಾರ್‌ನಲ್ಲಿ ಶುರುವಾದ ಗಲಾಟೆಯಲ್ಲಿ ಕೊಲೆಯಾದ ಗೋಪಾಲ್‌
Koo

ಬೆಂಗಳೂರು: ಇಲ್ಲಿನ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯ ಸಿಂಗಸಂದ್ರದಲ್ಲಿ ವ್ಯಕ್ತಿಯೊಬ್ಬನ ಎದೆಗೆ ಚಾಕುವಿನಿಂದ ಇರಿದು ಹತ್ಯೆ (Murder case) ಮಾಡಲಾಗಿದೆ. ಎಣ್ಣೆಮತ್ತಿನಲ್ಲಿ 1500 ರೂ ವಿಚಾರಕ್ಕೆ ನಡೆದ ಕಿರಿಕ್ ಕೊಲೆಯಲ್ಲಿ ಅಂತ್ಯವಾಗಿದೆ. ಸ್ನೇಹಿತನ ಹಣ ಕೊಡಿಸಿ ಕಿರಿಕ್ ಮಾಡಿಕೊಂಡು ಗೋಪಾಲ್‌ ಎಂಬಾತ ಹೆಣವಾಗಿದ್ದಾನೆ.

ಗೋಪಾಲ್, ಕರೆಗೌಡ ಮತ್ತು ಶಶಿಧರ್‌ ಈ ಮೂವರು ಸ್ನೇಹಿತರು ಬಾರ್‌ವೊಂದರಲ್ಲಿ ಕುಡಿಯಲು ಹೋಗಿದ್ದರು. ಅದೇ ಬಾರ್‌ಗೆ ಪ್ರದೀಪ್ ಮತ್ತು ಗಿರೀಶ್ ಎಂಬುವವರು ಬಂದಿದ್ದರು. ಹಿಂದೊಮ್ಮೆ ಎಲೆಕ್ಟ್ರಿಷಿಯನ್ ಕೆಲಸದಲ್ಲಿ ಕರೆಗೌಡಗೆ 1,500 ರೂ. ಹಣವನ್ನು ಗಿರೀಶ್ ಕೊಡಬೇಕಿತ್ತು. ಬಾರ್‌ನಲ್ಲಿ ಗಿರೀಶ್‌ ಸಿಕ್ಕಾಗ ಹಣ ಕೊಡುವಂತೆ ಕರೆಗೌಡ ಕೇಳಿದ್ದಾನೆ.

ಈ ವೇಳೆ ಗಿರೀಶ್‌ ಹಣ ಕೊಡುವುದಿಲ್ಲ ಏನ್‌ ಬೇಕಾದರೂ ಮಾಡಿಕೋ ಎಂದು ಕರೆಗೌಡಗೆ ಅವಾಜ್‌ ಹಾಕಿದ್ದಾನೆ. ಆಗ ಅಲ್ಲೇ ಇದ್ದ ಕರೆಗೌಡನ ಸ್ನೇಹಿತ ಗೋಪಾಲ್‌ ಮಧ್ಯ ಪ್ರವೇಶಿಸಿ, ಗಿರೀಶ್‌ಗೆ ಹೊಡೆದು ಹಣವನ್ನು ವಾಪಸ್‌ ಕೊಡಿಸಿದ್ದ. ಇದು ಇಷ್ಟೆಕ್ಕೆ ನಿಲ್ಲದೆ ನಂತರ ಈ ಗಿರೀಶ್‌ ಶಶಿಧರ್‌ಗೆ ಫೋನ್ ಮಾಡಿ ಅವಾಚ್ಯ ಶಬ್ಧಗಳಲ್ಲಿ ನಿಂದಿಸಿದ್ದಾನೆ.

ಇದರಿಂದ ಸಿಟ್ಟಾದ ಗೋಪಾಲ್, ಕರೆಗೌಡ, ಶಶಿಧರ್‌ನನ್ನು ಕರೆದುಕೊಂಡು ಗಿರೀಶ್ ಮನೆಗೆ ಹೋಗಿದ್ದಾರೆ. ಗಿರೀಶ್‌ಗೆ ಸರಿಯಾಗಿ ಮಾತನಾಡುವಂತೆ ಹೇಳಿ ಇಲ್ಲದಿದ್ದರೆ ಪರಿಸ್ಥಿತಿ ಸರಿಯಾಗಿ ಇರುವುದಿಲ್ಲ ಎಂದು ಆತನ ಪತ್ನಿ ಬಳಿ ಹೇಳಿದ್ದಾರೆ. ಈ ವೇಳೆ ಅಡುಗೆ ಮನೆಯಿಂದ ಚಾಕುವನ್ನು ಬೆನ್ನ ಹಿಂದೆ ಇಟ್ಟುಕೊಂಡು ಬಂದ ಗಿರೀಶ್‌, ಏಕಾಏಕಿ ಗೋಪಾಲ್ ಎದೆಗೆ ಚಾಕುವಿನಿಂದ ಚುಚ್ಚಿ, ಮನೆಯಿಂದ ಪರಾಗಿದ್ದಾನೆ.

ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಗೋಪಾಲ್‌ನನ್ನು ಸ್ನೇಹಿತರೆಲ್ಲರೂ ಸೇರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡಿದ್ದ ಗೋಪಾಲ್‌ ಚಿಕಿತ್ಸೆ ಫಲಕಾರಿಯಾಗದೆ ಎರಡು ದಿನಗಳ ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಸದ್ಯ ಆರೋಪಿ ಗಿರೀಶ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ನಿದ್ರೆಗೆ ಜಾರಿದಾಗ ವ್ಯಕ್ತಿಯ ಕತ್ತು ಕೊಯ್ದ ಹಂತಕರು!

ಕೊಪ್ಪಳ: ಜಗಲಿ ಕಟ್ಟೆಯಲ್ಲಿ ಮಲಗಿದ್ದಲೇ ವ್ಯಕ್ತಿಯ ಕತ್ತು ಕೊಯ್ದು ಹತ್ಯೆ (Murder Case ) ಮಾಡಿರುವ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ವಟಪರ್ವಿಯಲ್ಲಿ ನಡೆದಿದೆ. ವಟಪರ್ವಿ ಗ್ರಾಮದ ಪ್ರಭುರಾಜ ಎಂಬಾತ ಹತ್ಯೆಯಾದವನು.

ಕಳೆದ ಸೋಮವಾರದಿಂದ ಪ್ರಭುರಾಜ ನಾಪತ್ತೆಯಾಗಿದ್ದರು ಎನ್ನಲಾಗಿದೆ. ಪ್ರಭುರಾಜ ತೋಟದ ಮನೆಯ ಹೊರಗಿದ್ದ ಜಗಲಿ ಕಟ್ಟೆ ಮೇಲೆ ಮಲಗಿದ್ದ ಅವರ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಕೊಚ್ಚಿ ಕೊಲೆ ಮಾಡಲಾಗಿದೆ. ಮಂಗಳವಾರ ಸಂಜೆ ಕೊಲೆಯಾಗಿರುವ ಶಂಕೆ ಇದ್ದು, ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಬೇವೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.

6 ತಿಂಗಳ ಹಿಂದೆ ಪ್ರೀತಿಸಿ ಮದುವೆಯಾದ ಯುವತಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಪತಿ ಹಾಗೂ ಪತ್ನಿ ನಡುವೆ ವೈಮನಸ್ಸು ಬಂದ ಕಾರಣ ಮನನೊಂದ ಪತ್ನಿ ಆತ್ಮಹತ್ಯೆ (Self Harm) ಮಾಡಿಕೊಂಡ ಘಟನೆ ನಡೆದಿದೆ. ಮುಸ್ಕಾತ್ ತಾಜ್ (21) ಆತ್ಮಹತ್ಯೆ ಮಾಡಿಕೊಂಡ ಪತ್ನಿ.

ಇವರು ಚಿಕ್ಕಬಳ್ಳಾಪುರ (Chikkaballapura news) ಜಿಲ್ಲೆಯ ಚಿಂತಾಮಣಿ ನಗರದ ವೆಂಕಟಗಿರಿಕೋಟೆಯಲ್ಲಿರುವ ಪತಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರು ತಿಂಗಳ ಹಿಂದೆ ಆಜಾಮ್‌ ಎಂಬಾತನನ್ನು ಪ್ರೀತಿಸಿದ್ದ ಈಕೆ ನಂತರ ವಿವಾಹ ಮಾಡಿಕೊಂಡಿದ್ದರು. ಪತಿ ಆಜಾಮ್ ವಿರುದ್ಧ ಪತ್ನಿಯ ಪೋಷಕರು ಕೊಲೆ ಆರೋಪ (murder complaint) ಹೊರಿಸಿದ್ದಾರೆ. ಚಿಂತಾಮಣಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬೆಂಗಳೂರಿನಲ್ಲಿ ಆಟೋ ಚಾಲಕನ ಬರ್ಬರ ಹತ್ಯೆ

ಬೆಂಗಳೂರು: ರಾಜಧಾನಿಯಲ್ಲಿ ಯುವಕನೊಬ್ಬನನ್ನು ಹತ್ತಕ್ಕೂ ಅಧಿಕ ದುಷ್ಕರ್ಮಿಗಳು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಅರುಣ್ (24) ಕೊಲೆಯಾದ ಆಟೋ ಚಾಲಕ. ರಾತ್ರಿ 9.30ರ ಸುಮಾರಿಗೆ ಈ ಘಟನೆ ನಡೆದಿದೆ. ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಟಿಂಬರ್ ಲೇಔಟ್‌ನಲ್ಲಿ ಘಟನೆ ನಡೆದಿದೆ.

ಅರುಣ್‌ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಅರುಣ್‌ನ ಮದುವೆ ಸಹ ಮುಂದಿನ ತಿಂಗಳು ಫಿಕ್ಸ್ ಆಗಿತ್ತು. 10ಕ್ಕೂ ಅಧಿಕ ಮಂದಿ ದುಷ್ಕರ್ಮಿಗಳಿಂದ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿರುವ ರೀತಿ ನೋಡಿದರೆ ಹಳೆಯ ದ್ವೇಷ ತೀರಿಸಿಕೊಳ್ಳಲು ನಡೆದ ಕೃತ್ಯದಂತೆ ಕಾಣಿಸುತ್ತಿದೆ. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading
Advertisement
cleaning
ದೇಶ16 mins ago

ಒಳ ಚರಂಡಿ ಸ್ವಚ್ಛಗೊಳಿಸುವಾಗ 5 ವರ್ಷಗಳಲ್ಲಿ 443 ಕಾರ್ಮಿಕರ ಸಾವು!

Ajitabh Bachchan, Younger Brother Of Amitabh At The Archies Film Screening
ಬಾಲಿವುಡ್18 mins ago

The Archies Film: ನಿಮಗೆ ಅಮಿತಾಭ್‌ ತಮ್ಮ ಅಜಿತಾಭ್‌ ಗೊತ್ತಾ? ಅವರೇ ಇವರು!

MLA Basanagouda Patil Yatnal and CM Siddaramaiah
ಕರ್ನಾಟಕ20 mins ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ33 mins ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Khalistani Terrorist Pannun
ದೇಶ51 mins ago

ಸಂಸತ್ತಿನ ಮೇಲೆ ಡಿ.13ರಂದು ಉಗ್ರ ದಾಳಿ: ಬೆದರಿಕೆ ವಿಡಿಯೋ ಹರಿಬಿಟ್ಟ ಖಲಿಸ್ತಾನಿ ಉಗ್ರ ಪನ್ನುನ್‌

lidkar ambassador dolly dhananjay Officially
South Cinema1 hour ago

Dolly Dhananjay: ಸಂಭಾವನೆ ಪಡೆಯದೆ ಲಿಡ್ಕರ್‌ ರಾಯಭಾರಿಯಾದ ಡಾಲಿ ಧನಂಜಯ್‌!

Government Job Vistara Exclusive and CM Siddaramaiah
ಉದ್ಯೋಗ1 hour ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

kim
ವಿದೇಶ1 hour ago

Viral Video: ತುಂಬಿದ ಸಭೆಯಲ್ಲಿ ಕಣ್ಣೀರಿಟ್ಟ ಉತ್ತರ ಕೊರಿಯಾ ಸರ್ವಾಧಿಕಾರಿ!

narendra modi amit shah jp nadda
ದೇಶ2 hours ago

Assembly Election 2023: 3 ರಾಜ್ಯಗಳಲ್ಲೂ ಮುಖ್ಯಮಂತ್ರಿಯಾಗಿ ಬಿಜೆಪಿಯಿಂದ ಹೊಸ ಮುಖ

Vinay Gowda and sangeetha Bigg boss
ಬಿಗ್ ಬಾಸ್2 hours ago

BBK SEASON 10: ಪಾತ್ರದಿಂದ ಹೊರಗೆ ಬಂದ್ರೆ ಸಂಗೀತಾ ಟೀಮ್‌ಗೆ ʻಹುಚ್ಚೇಟುʼ ಕೊಡ್ತೀನಿ ಎಂದ ವಿನಯ್‌!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

MLA Basanagouda Patil Yatnal and CM Siddaramaiah
ಕರ್ನಾಟಕ20 mins ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ33 mins ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ1 hour ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job Vistara Exclusive
ಉದ್ಯೋಗ2 hours ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

read your daily horoscope predictions for december 6 2023
ಪ್ರಮುಖ ಸುದ್ದಿ9 hours ago

Dina Bhavishya : ಈ ರಾಶಿಯವರು ಸುಮ್ಮನಿದ್ದರೂ ನಡೆಯುತ್ತೆ ಕಲಹ!

CM Siddaramaiah and Black magic
ಕರ್ನಾಟಕ17 hours ago

Belagavi Winter Session: ಸಿದ್ದರಾಮಯ್ಯಗೆ ಮಾಟ – ಮಂತ್ರ; ಗಾಳಿ ಬಿಡಿಸಲು ರೇವಣ್ಣಗೆ ಅಶೋಕ್‌ ಮನವಿ!

R Ashok in assembly session
ಕರ್ನಾಟಕ18 hours ago

Belagavi Winter Session: ಟಿಸಿ ಬದಲಾಯಿಸಲು ಹಣ ಕೇಳ್ತಾರೆ, ರೈತರು ಬದುಕೋದು ಬೇಡವಾ? ಅಶೋಕ್‌ ಕ್ಲಾಸ್‌

R Ashok
ಕರ್ನಾಟಕ18 hours ago

Belagavi Winter Session: ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ2 days ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

ಟ್ರೆಂಡಿಂಗ್‌