Gold Rate Today: ಚಿನ್ನದ ಬೆಲೆಯಲ್ಲಿ ಇಳಿಕೆ, ಬೆಂಗಳೂರಿನಲ್ಲಿ ಖರೀದಿಸಿದರೆ ದರ ಹೀಗಿದೆ - Vistara News

ಕರ್ನಾಟಕ

Gold Rate Today: ಚಿನ್ನದ ಬೆಲೆಯಲ್ಲಿ ಇಳಿಕೆ, ಬೆಂಗಳೂರಿನಲ್ಲಿ ಖರೀದಿಸಿದರೆ ದರ ಹೀಗಿದೆ

22 ಕ್ಯಾರಟ್‌ ಮತ್ತು 24 ಕ್ಯಾರಟ್ ಚಿನ್ನದ ಬೆಲೆ (Gold Rate Today) ಶುಕ್ರವಾರ ಕ್ರಮವಾಗಿ ₹20 ಹಾಗೂ ₹21 ಇಳಿಕೆ ಕಂಡಿದೆ.

VISTARANEWS.COM


on

gold rate today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 22 ಕ್ಯಾರಟ್‌ ಮತ್ತು 24 ಕ್ಯಾರಟ್ ಚಿನ್ನದ ಬೆಲೆ (Gold Rate Today) ಶುಕ್ರವಾರ ಕ್ರಮವಾಗಿ ₹20 ಹಾಗೂ ₹21 ಇಳಿಕೆ ಕಂಡಿದೆ.

ಬೆಂಗಳೂರಿನಲ್ಲಿ ನೀವಿಂದು ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹5,485ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹43,880 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 54,850 ಮತ್ತು ₹ 5,48,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹5,984 ಆಗಿದ್ದರೆ, ಎಂಟು ಗ್ರಾಂ ಬೆಲೆ ₹47,872 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರೆಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 59,840 ಮತ್ತು ₹ 5,98,400 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ ₹ 74, ಎಂಟು ಗ್ರಾಂ ₹ 592 ಮತ್ತು 10 ಗ್ರಾಂ ₹ 740ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹ 7,400 ಮತ್ತು 1 ಕಿಲೋಗ್ರಾಂಗೆ ₹ 74,000 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ
22 ಕ್ಯಾರಟ್ 24 ಕ್ಯಾರಟ್
ದಿಲ್ಲಿ
55,00 59,940
ಬೆಂಗಳೂರು
54,850 59,840
ಮುಂಬಯಿ54,850 59,840
ಚೆನ್ನೈ 55,100 60,110

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಕೆಲವು ಅಂಶಗಳು ಇಲ್ಲಿವೆ:

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

High Beam Lights‌: ರಾತ್ರಿ ಹೈ ಬೀಮ್‌ ಲೈಟ್‌ ಹಾಕಿಕೊಂಡು ವಾಹನ ಚಲಾಯಿಸುತ್ತೀರಾ? ಕೇಸು ಬೀಳುತ್ತೆ ಎಚ್ಚರ!

High Beam Lights: ರಾತ್ರಿ ವೇಳೆ ಹೈ ಬೀಮ್ ಲೈಟ್ ಉಪಯೋಗದಿಂದ ಅಪಘಾತ ಪ್ರಕರಣಗಳು ಹೆಚ್ಚಿವೆ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಗೆ ಇಳಿದಿರುವ ಪೊಲೀಸರು, ಹೀಗೆ ಹಾಕಿಕೊಂಡು ಚಲಾಯಿಸಿದವರ ವಿರುದ್ಧ ಕೇಸು ಜಡಿದಿದ್ದಾರೆ. ನಂಬರ್ ಪ್ಲೇಟ್ ಅಳವಡಿಸದ ಹಾಗೂ ಮರೆ ಮಾಚಿಕೊಂಡು ಓಡಾಡುತ್ತಿದ್ದವರ ಮೇಲೂ ಕೇಸ್ ಬಿದ್ದಿದೆ.

VISTARANEWS.COM


on

high beam lights
Koo

ಬೆಂಗಳೂರು: ವಾಹನಕ್ಕೆ ಬೇಕಾಬಿಟ್ಟಿ ಎಕ್ಸ್‌ಟ್ರಾ ಲೈಟ್ ಅಳವಡಿಸಿಕೊಂಡು ಚಲಾಯಿಸುವ ವಾಹನ ಚಾಲಕರು ಇನ್ನು ಮುಂದೆ ಎಚ್ಚರ ವಹಿಸಬೇಕಿದೆ. ಹೈ ಬೀಮ್ ಲೈಟ್ (High Beam Lights‌) ಉಪಯೋಗಿಸುತ್ತಿದ್ದ ವಾಹನ ಸವಾರರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯಾದ್ಯಂತ 966 ಪ್ರಕರಣಗಳನ್ನು ಪೊಲೀಸರು (Traffic Police) ದಾಖಲಿಸಿದ್ದಾರೆ.

ರಾತ್ರಿ ವೇಳೆ ಹೈ ಬೀಮ್ ಲೈಟ್ ಉಪಯೋಗದಿಂದ ಅಪಘಾತ (Accidents) ಪ್ರಕರಣಗಳು ಹೆಚ್ಚಿವೆ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಗೆ ಇಳಿದಿರುವ ಪೊಲೀಸರು, ಹೀಗೆ ಹಾಕಿಕೊಂಡು ಚಲಾಯಿಸಿದವರ ವಿರುದ್ಧ ಕೇಸು ಜಡಿದಿದ್ದಾರೆ. ಪಶ್ಚಿಮ ವಿಭಾಗ ಸಂಚಾರ ಪೊಲೀಸರಿಂದ 239 ಪ್ರಕರಣ, ದಕ್ಷಿಣ ವಿಭಾಗ ಸಂಚಾರ ಪೊಲೀಸರಿಂದ 104 ಹಾಗೂ ಪೂರ್ವ ವಿಭಾಗ ಸಂಚಾರ ಪೊಲೀಸರಿಂದ 102 ಪ್ರಕರಣ ದಾಖಲಾಗಿವೆ.

ನಂಬರ್ ಪ್ಲೇಟ್ ಅಳವಡಿಸದ ಹಾಗೂ ಮರೆ ಮಾಚಿಕೊಂಡು ಓಡಾಡುತ್ತಿದ್ದವರ ಮೇಲೂ ಕೇಸ್ ಬಿದ್ದಿದೆ. ಬೆಂಗಳೂರು ದಕ್ಷಿಣ ವಿಭಾಗ ಸಂಚಾರ ಡಿಸಿಪಿ ಶಿವಪ್ರಕಾಶ್ ದೇವರಾಜ್ ನೇತೃತ್ವದಲ್ಲಿ ಸ್ಪೆಷಲ್ ಡ್ರೈವ್ ಮೂಲಕ ಇಂಥವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ನಂಬರ್ ಫ್ಲೇಟ್ ಅಳವಡಿಸಿಕೊಳ್ಳದೇ ಚಾಲನೆ ಮಾಡುತ್ತಿದ್ದ 100 ಪ್ರಕರಣ, ನಂಬರ್ ಫ್ಲೇಟ್ ಮರೆಮಾಚಿಕೊಂಡು ಸಂಚರಿಸುತ್ತಿದ್ದವರ ವಿರುದ್ಧ 104 ಪ್ರಕರಣ ದಾಖಲಾಗಿದೆ.

ದೋಷಪೂರಿತ ಸೈಲೆನ್ಸರ್ ಅಳವಡಿಸಿಕೊಂಡು ಸಂಚರಿಸುತ್ತಿದ್ದವರ ವಿರುದ್ಧ 62 ಪ್ರಕರಣ ದಾಖಲಾಗಿದೆ. ವಿಶೇಷ ಕಾರ್ಯಚರಣೆಯಲ್ಲಿ ಒಟ್ಟು 266 ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಾಗಿದೆ.

ಕರೆದ ಕಡೆ ಹೋಗದೆ ಉದ್ಧಟತನ ತೋರುತ್ತಿದ್ದ ಹಾಗೂ ನಿಗದಿತ ದರಕ್ಕಿಂತ ಹೆಚ್ಚಿನ ಬಾಡಿಗೆ ಪಡೆಯುತ್ತಿದ್ದ ಆಟೋ ಚಾಲಕರಿಗೂ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬಾಡಿಗೆಗೆ ಹೋಗಲು ನಿರಾಕರಿಸುತ್ತಿದ್ದ 11 ಆಟೋ ಚಾಲಕರು, ನಿಗದಿತ ದರಕ್ಕಿಂತ ಹೆಚ್ಚು ಬಾಡಿಗೆ ಪಡೆಯುತ್ತಿದ್ದ 6 ಜನ ಆಟೋ ಚಾಲಕರು, ಯೂನಿಫಾರ್ಮ್ ಧರಿಸದೇ ಆಟೋ ಚಾಲನೆ ಮಾಡುತ್ತಿದ್ದ 66 ಚಾಲಕರು, ಅನಧಿಕೃತವಾಗಿ ಆಟೋ ಪಾರ್ಕಿಂಗ್ ಮಾಡುತ್ತಿದ್ದ 11 ಜನ ಆಟೋ ಚಾಲಕರು ಹೀಗೆ ಒಟ್ಟು 94 ಆಟೋ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ

ಬೆಂಗಳೂರು: ವಾಹನ ಸಂಚಾರ ನಿಯಮ ಉಲ್ಲಂಘನೆ ಹಾಗೂ ರಸ್ತೆ ಅಪಘಾತಗಳ ತಡೆಗಾಗಿ ಸಂಚಾರ ಪೊಲೀಸ್‌ ವಿಭಾಗ, ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಳ್ಳುತ್ತಿದೆ. ಇದರ ಭಾಗವಾಗಿ ಇಂದಿನಿಂದ (ಜುಲೈ 1) ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ (Bangalore–Mysore Expressway) ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್‌ (ITMS) ಜಾರಿಯಾಗಲಿದೆ. ಈ ಹೈವೇಯಲ್ಲಿ ಇನ್ನುಮುಂದೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸರಿಗೆ ನೆರವಾಗಲಿದೆ.

ಜುಲೈ 1ರಿಂದ ಹೆದ್ದಾರಿಯಲ್ಲಿ ಈ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ ಜಾರಿ ಆಗಲಿದೆ. ಈ ಮಾರ್ಗದಲ್ಲಿ ಸಂಚಾರ ನಿಯಮ ಉಲ್ಲಂಘನೆ ದಂಡವನ್ನು ನೇರವಾಗಿ ಫಾಸ್ಟ್ಯಾಗ್‌ ಖಾತೆಯಿಂದಲೇ ಕಡಿತಗೊಳಿಸಲು ಪೊಲೀಸರು ಮುಂದಾಗಿದ್ದಾರೆ. ಕ್ಯಾಮೆರಾಗಳು, ಸ್ಪೀಡ್‌ ಗನ್‌ಗಳು ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಲು ನೆರವಾಗಲಿವೆ.

ಜುಲೈ 1ರಿಂದ ಮೈಸೂರು-ಬೆಂಗಳೂರು ಹೆದ್ದಾರಿಯು ಸಂಪೂರ್ಣವಾಗಿ ಕ್ರಿಯಾತ್ಮಕ ಐಟಿಎಂಎಸ್ ಕಾರಿಡಾರ್ (ITMS Corridor) ಆಗಲಿದೆ ಎಂದು ಕರ್ನಾಟಕ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಎಡಿಜಿಪಿ ಅಲೋಕ್ ಕುಮಾರ್ ಇತ್ತೀಚೆಗೆ ತಿಳಿಸಿದ್ದರು.

ಐಟಿಎಂಎಸ್ ಅಥವಾ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ಅನ್ನು ಡಿಸೆಂಬರ್ 2022ರಲ್ಲಿ ಬೆಂಗಳೂರಿನಲ್ಲಿ ಚಾಲನೆಗೆ ತರಲಾಯಿತು. ಅದಕ್ಕಾಗಿ 250 ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ (ಎಎನ್‌ಪಿಆರ್) ಕ್ಯಾಮೆರಾಗಳು ಮತ್ತು 80 ರೆಡ್ ಲೈಟ್ ಉಲ್ಲಂಘನೆ ಪತ್ತೆ (ಆರ್‌ಎರ್‌ವಿಡಿ) ಕ್ಯಾಮೆರಾಗಳನ್ನು ನಗರದ 50 ಜಂಕ್ಷನ್ ಗಳಲ್ಲಿ ಅಳವಡಿಸಲಾಗಿದೆ. ಈಗ ಐಟಿಎಂಎಸ್ ಅಡಿಯಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ ಕ್ಯಾಮೆರಾಗಳನ್ನು ಮೈಸೂರಿನ ಪ್ರಮುಖ ರಸ್ತೆಗಳಲ್ಲಿ 8.5 ಕೋಟಿ ರೂ. ಅಂದರೆ ಮೈಸೂರು ನಗರಕ್ಕೆ ರೂಪಾಯಿ 4 ಕೋಟಿ ಮತ್ತು ಮೈಸೂರು ಜಿಲ್ಲೆಗೆ ರೂ.4.5 ಕೋಟಿ ಅಂದಾಜು ವೆಚ್ಚದಲ್ಲಿ ಅಳವಡಿಸಲಾಗಿದೆ. ಅಲ್ಲದೇ ಜುಲೈ 1ರಿಂದ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ವಾಹನ ಚಾಲಕರಿಗೆ ಚಲನ್ ನೀಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದ್ದರು.

ಅಲ್ಲದೇ ಕ್ಯಾಮೆರಾಗಳನ್ನು ಮೈಸೂರು ಜಿಲ್ಲೆಯ ಹುಣಸೂರು, ಎಚ್ ಡಿ ಕೋಟೆ, ನಂಜನಗೂಡು ಮತ್ತು ಟಿ ನರಸೀಪುರದಂತಹ ಹಲವಾರು ಪ್ರದೇಶಗಳಲ್ಲಿ ಅಳವಡಿಸಲಾಗುವುದು. ಹಾಗಾಗಿ ರೂಲ್ಸ್ ಬ್ರೇಕ್ ಮಾಡಿದ ವಾಹನ ಚಾಲಕರಿಗೆ ಸರಿಯಾದ ಸಮಯಕ್ಕೆ ಎಸ್ ಎಂಎಸ್ ಕಳುಹಿಸಲಾಗುವುದು ಎಂದು ಅವರು ಹೇಳಿದ್ದರು.
ಹೆಚ್ಚುವರಿಯಾಗಿ ಈ ವರ್ಷ ಬೆಂಗಳೂರಿನಿಂದ ಹತ್ತಿರದ ತಾಲೂಕುಗಳು ಮತ್ತು ಜಿಲ್ಲೆಗಳಿಗೆ ಸಂಪರ್ಕಿಸುವ ನಾಲ್ಕು ಪ್ರಮುಖ ಹೆದ್ದಾರಿಗಳಲ್ಲಿ (ತುಮಕೂರು ರಸ್ತೆ, ಕನಕಪುರ ರಸ್ತೆ, ಹೊಸೂರು ರಸ್ತೆ ಮತ್ತು ಹೊಸಕೋಟೆ) ಐಟಿಎಂಎಸ್ ಕ್ಯಾಮೆರಾಗಳನ್ನು ಅಳವಡಿಸಲು ಎಡಿಜಿಪಿ ಪ್ರಸ್ತಾಪಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: Viral Video: ಕಾರು ತಡೆದ ಟ್ರಾಫಿಕ್‌ ಪೊಲೀಸ್‌ ಕ್ಯಾಬ್‌ ಡ್ರೈವರ್‌ ಮಾಡಿದ್ದೇನು ಗೊತ್ತಾ?

Continue Reading

ಪರಿಸರ

Cheetah Safari: ಬನ್ನೇರುಘಟ್ಟದಲ್ಲಿ ʻಚಿರತೆ ಸಫಾರಿʼ ಶುರು; ಚಿರತೆಗಳನ್ನು ಕಾಡೊಳಗೇ ನೋಡಿ ಆನಂದಿಸಿ!

Cheetah Safari: ಬೆಂಗಳೂರಿನಲ್ಲೇ ಇರುವ, ಆದರೆ ವನ್ಯಮೃಗಗಳನ್ನು ಅವುಗಳ ಆವಾಸಸ್ಥಾನದಲ್ಲೇ ನೋಡಿ ಬರಬಹುದಾದ ಸಫಾರಿಯೂ ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವುದು ವಿಶೇಷ. ಈಗ ವನ್ಯಜೀವಿ ಪ್ರಿಯರಿಗೆ ಇನ್ನೂ ಒಂದು ಹೊಸ ಖುಷಿಯ ಸುದ್ದಿಯನ್ನು ಬನ್ನೇರುಘಟ್ಟ ನೀಡಿದೆ. ಇದೇ ಮೊದಲ ಬಾರಿಗೆ ʻಚಿರತೆ ಸಫಾರಿʼಯನ್ನೂ ಆರಂಭಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Cheetah Safari
Koo

ಬೆಂಗಳೂರು ಆಧುನಿಕ ಪ್ರವಾಸಿಗರ ಸ್ವರ್ಗ. ಇಲ್ಲೇ ಸುತ್ತಾಡಿದರೂ ಮುಗಿಯದಷ್ಟು ಸ್ಥಳಗಳಿವೆ. ಎಲ್ಲ ಬಗೆಯ ಪ್ರವಾಸಿಗರಿಗೂ ಖುಷಿಯಿಂದ ಕಾಲ ಕಳೆಯಬಹುದಾದಂತಹ ಜಾಗಗಳಿವೆ. ಇಂತಹ ಜಾಗಗಳ ಪೈಕಿ ಮಕ್ಕಳಾದಿಯಾಗಿ ಮುದುಕರವರೆಗೂ ನೋಡಬಹುದಾದ ತಾಣ ಎಂದರೆ ಅದು ಬನ್ನೇರುಘಟ್ಟ. ಬೆಂಗಳೂರಿನಲ್ಲೇ ಇರುವ ಆದರೆ ವನ್ಯಮೃಗಗಳನ್ನು ಅವುಗಳ ಆವಾಸಸ್ಥಾನದಲ್ಲೇ ನೋಡಿ ಬರಬಹುದಾದ ಸಫಾರಿಯೂ ಬನ್ನೇರುಘಟ್ಟದಲ್ಲಿರುವುದು ವಿಶೇಷ. ಈಗ ವನ್ಯಜೀವಿ ಪ್ರಿಯರಿಗೆ ಇನ್ನೂ ಒಂದು ಹೊಸ ಖುಷಿಯ ಸುದ್ದಿಯನ್ನು ಬನ್ನೇರುಘಟ್ಟ ನೀಡಿದೆ. ಇದೇ ಮೊದಲ ಬಾರಿಗೆ ʻಚಿರತೆ ಸಫಾರಿʼಯನ್ನೂ (Cheetah Safari) ಆರಂಭಿಸಿದೆ.

Cheetah

ದಕ್ಷಿಣ ಭಾರತದಲ್ಲೇ ಮೊದಲು

ದಕ್ಷಿಣ ಭಾರತದಲ್ಲೇ ಇದು ಮೊದಲನೆಯದಾಗಿದ್ದು, ನಮ್ಮ ಬಾರತದ ಅತ್ಯಂತ ದೊಡ್ಡ ಚಿರತೆ ಸಫಾರಿ ಇದಾಗಿದೆ. 20 ಹೆಕ್ಟೇರ್‌ ಕಾಡಿನಲ್ಲಿ ಈ ಸಫಾರಿಗೆ ಅವಕಾಶ ಮಾಡಿಕೊಡಲಾಗಿದ್ದು, ಇದರಲ್ಲಿ ಚಿರತೆ ವೀಕ್ಷಣೆಯ ಸಾಧ್ಯತೆ ಅತ್ಯಂತ ಹೆಚ್ಚಿದೆ. ರಕ್ಷಣೆಗಾಗಿ, ಎಲ್ಲ ಸುರಕ್ಷತಾ ಕ್ರಮಗಳನ್ನು ಬನ್ನೇರುಘಟ್ಟ ವನ್ಯಜೀವಿಧಾಮ ಕೈಗೊಂಡಿದ್ದು, ಸುರಕ್ಷತಾ ಬೇಲಿಗಳನ್ನು ಎಲ್ಲಡೆ ಹಾಕಲಾಗಿದೆ. ಹಾಗೂ ಯಾವುದೇ ತೊಂದರೆಯಾಗದಂತೆ ಸಫಾರಿಯನ್ನು ಮಾಡಿ ಬರಲು ಅನುಕೂಲಕರ ಸೌಲಭ್ಯಗಳನ್ನು ಇಲ್ಲಿ ಒದಗಿಸಲಾಗುತ್ತದೆ.
ಬೆಂಗಳೂರಿನ ಹೊರವಲಯಗಳಲ್ಲಿ ಅನೇಕ ಕಡೆ, ಚಿರತೆಗಳ ಸಂಚಾರ ಸಾಮಾನ್ಯವಾಗಿದ್ದರೂ, ಚಿರತೆಗಳನ್ನು ಅವುಗಳ ಆವಾಸ ಸ್ಥಾನದಲ್ಲೇ ನೋಡುವ ರೋಮಾಂಚನ ವನ್ಯಜೀವಿ ಪ್ರಿಯರಿಗಷ್ಟೇ ಗೊತ್ತು. ಇದನ್ನು ಗಮನದಲ್ಲಿಟ್ಟುಕೊಂಡು ಚಿರತೆಗಳ ದರ್ಶನಕ್ಕಾಗಿಯೇ ವಿಶೇಷವಾಗಿ ಈ ಸಫಾರಿ ಆಯೋಜಿಸಲಾಗಿದೆ. ತುಂಬ ಹತ್ತಿರದಿಂದ ಚಿರತೆಗಳನ್ನು ಕಾಣುವ ಸೌಭಾಗ್ಯ ಈ ಸಫಾರಿಯಲ್ಲಿ ಎಲ್ಲರಿಗೂ ಲಭ್ಯವಾಗಲಿದೆ.

ಇದನ್ನು ಓದಿ: Wildlife Sanctuaries: ಮಳೆ ಬರುವ ಮುನ್ನ ಈ ವನ್ಯಜೀವಿಧಾಮಗಳನ್ನು ನೋಡಲು ಪ್ರಯತ್ನಿಸಿ

ಚಿರತೆ ಸಂತತಿ ಹೇರಳ

ಬನ್ನೇರುಘಟ್ಟದ ಈ ಭಾಗದಲ್ಲಿ ಚಿರತೆಗಳ ಸಂತತಿ ಹೇರಳಾಗಿದ್ದು, ಹಲವು ವರ್ಷಗಳಿಂದ ಇದು ಸಮತೋಲನವನ್ನು ಕಾಯ್ದುಕೊಂಡಿದೆ. ಬೆಂಗಳೂರು ಸುತ್ತಮುತ್ತಲ ಹಳ್ಳಿಗಳಿಗೆ ದಾಳಿ ಮಾಡುತ್ತಿದ್ದ ಚಿರತೆಗಳನ್ನು ರಕ್ಷಿಸಿ ಇಲ್ಲಿಗೆ ತರಲಾಗಿದ್ದು ಈ ಸಂಖ್ಯೆ ಇದೀಗ ವೃದ್ಧಿಸಿದೆ. ಹಾಗೂ ಬನ್ನೇರುಘಟ್ಟದ ಈ ವ್ಯಾಪ್ತಿಯ ನೈಸರ್ಗಿಕ ಪರಿಸರದಲ್ಲಿ ಓಡಾಡಿಕೊಂಡಿದ್ದು, ತಮ್ಮ ಎಂದಿನ ಶೈಲಿಯ ಬದುಕನ್ನು ಕಾಣುತ್ತಿವೆ. ಹೀಗಾಗಿ, ಅವುಗಳ ನೈಸರ್ಗಿಕವಾದ ಸಹಜ ಬದುಕನ್ನು ಹತ್ತಿರದಿಂದ ಕಾಣಲು ಈ ಸಫಾರಿ ಅತ್ಯಂತ ಸೂಕ್ತವಾದ ಮಾಧ್ಯಮವಾಗಿದೆ.
ಬನ್ನೇರುಘಟ್ಟದಲ್ಲಿ ಮೃಗಾಲಯವೂ ಇದ್ದು, ಅಲ್ಲಿ ಬಗೆಬಗೆಯ ಪ್ರಾಣಿ ಪಕ್ಷಿಗಳನ್ನು ನೋಡಬಹುದಾದರೂ, ಈ ಸಫಾರಿಯಲ್ಲಿ, ಅವುಗಳ ನೈಸರ್ಗಿಕ ಪರಿಸರದಲ್ಲೇ ವೀಕ್ಷಿಸಲು ಸಾಧ್ಯವಾಗುವುದು ವಿಶೇಷ.
ಬನ್ನೇರುಘಟ್ಟ ರಾಷ್ಟೀಯ ಉದ್ಯಾನದ ಇನ್ನೊಂದು ಬಹುಮುಖ್ಯ ವಿಶೇಷತೆ ಎಂದರೆ ಇಲ್ಲಿನ ಚಿಟ್ಟೆ ಪಾರ್ಕ್‌. ಸುಮಾರು 7.5 ಎಕರೆ ಪ್ರದೇಶದವನ್ನು ಚಿಟ್ಟೆ ಪಾರ್ಕ್‌ ಆಗಿ ಅಭಿವೃದ್ಧಿಗೊಳಿಸಲಾಗಿದ್ದು, ಇಲ್ಲಿ ನಾನಾ ಬಗೆಯ ಚಿಟ್ಟೆಗಳನ್ನು ವೀಕ್ಷಿಸಬಹುದು. ಬನ್ನೇರುಘಟ್ಟದಲ್ಲಿಯೇ ರಾತ್ರಿ ಕಳೆಯಬೇಕೆಂದರೆ, ಇಲ್ಲಿ ಟೆಂಟೆಡ್‌ ಕಾಟೇಜ್‌, ಹಟ್‌ಗಳ ಸೌಲಭ್ಯಗಳೂ ಇವೆ. ಸದ್ಯದಲ್ಲೇ ಬನ್ನೇರುಘಟ್ಟದ ಜೀವವೈವಿಧ್ಯದ ವಿಶೇಷ ವೀಕ್ಷಣೆಗಾಗಿ ಸ್ಕೈವಾಕ್‌ ಅನ್ನೂ ಅಭಿವೃದ್ಧಿ ಪಡಿಸಲಾಗುತ್ತಿದೆ.
ಪ್ರತಿ ಮಂಗಳವಾರ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ಮುಚ್ಚಿರುತ್ತದೆ. ಇದನ್ನು ಹೊರತುಪಡಿಸಿ ಪ್ರತಿದಿನ 9.30ರಿಂದ ಸಂಜೆ 5ರವರೆಗೆ ಪ್ರವಾಸಿಗರಿಗಾಗಿ ಇದು ತೆರೆದಿರುತ್ತದೆ.

Continue Reading

ಕ್ರೈಂ

Drowned: ಪೊಲೀಸರಿಂದ ತಪ್ಪಿಸಿಕೊಳ್ಳಹೋಗಿ ನೀರುಪಾಲು; ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 1 ಸಾವು, ಇಬ್ಬರ ರಕ್ಷಣೆ, ಇನ್ನೂ ಐವರು ನಾಪತ್ತೆ

Drowned: ಪೊಲೀಸರು ದಾಳಿ ನಡೆಸಿದ್ದು ನೋಡಿ ಆರೋಪಿಗಳು ತರಾತುರಿಯಿಂದ ತೆಪ್ಪದ ಮೂಲಕ ಎಸ್ಕೇಪ್ ಆಗಲು ಯತ್ನಿಸಿದ್ದರು. ಗಾಳಿ ವ್ಯತಿರಿಕ್ತವಾಗಿದ್ದುದರಿಂದ ಹಾಗೂ ತೆಪ್ಪದಲ್ಲಿ ಮಿತಿ ಮೀರಿದ ಜನ ತುಂಬಿದ್ದರಿಂದ ತೆಪ್ಪ ನದಿಯೊಳಗೆ ಮುಗುಚಿಕೊಂಡಿದೆ.

VISTARANEWS.COM


on

krishna river drowned death
Koo

ವಿಜಯಪುರ: ಜುಗಾರಿ ಆಡುತ್ತಿರುವಾಗ ಪೊಲೀಸರು (Police Attack) ದಾಳಿ ಮಾಡಿದ್ದರಿಂದ ಭಯಭೀತರಾಗಿ ಎಸ್ಕೇಪ್ ಆಗಲು ತೆಪ್ಪ ಏರಿ ಪಲಾಯನ ಮಾಡಿದ ಎಂಟು ಮಂದಿ ಕೃಷ್ಣಾ ನದಿಯಲ್ಲಿ (Krishna River) ತೆಪ್ಪ ಮಗುಚಿಕೊಂಡು (Drowned) ನೀರುಪಾಲಾಗಿದ್ದಾರೆ. ಇವರಲ್ಲಿ ಒಬ್ಬನ ಶವ ದೊರೆತಿದೆ. ಇಬ್ಬರನ್ನು ರಕ್ಷಿಸಲಾಗಿದ್ದು, ಇನ್ನೂ ಐದು ಮಂದಿಗಾಗಿ ಶೋಧ ನಡೆದಿದೆ.

ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪುಂಡಲೀಕ ಯಂಕಂಚಿ (35) ಸಾವಿಗೀಡಾದ ವ್ಯಕ್ತಿ.

ನಿನ್ನೆ ಸಂಜೆ ಇವರು ಜೂಜಾಟ ಆಡುತ್ತಿವಾಗ ಕೊಲ್ಹಾರ ಪೊಲೀಸರಿಗೆ ಮಾಹಿತಿ ಬಂದಿತ್ತು. ಪೊಲೀಸರು ದಾಳಿ ನಡೆಸಿದ್ದು ನೋಡಿ ಆರೋಪಿಗಳು ತರಾತುರಿಯಿಂದ ತೆಪ್ಪದ ಮೂಲಕ ಎಸ್ಕೇಪ್ ಆಗಲು ಯತ್ನಿಸಿದ್ದರು. ಗಾಳಿ ವ್ಯತಿರಿಕ್ತವಾಗಿದ್ದುದರಿಂದ ಹಾಗೂ ತೆಪ್ಪದಲ್ಲಿ ಮಿತಿ ಮೀರಿದ ಜನ ತುಂಬಿದ್ದರಿಂದ ತೆಪ್ಪ ನದಿಯೊಳಗೆ ಮುಗುಚಿಕೊಂಡಿದೆ. ಕಾಪಾಡಿ ಕಾಪಾಡಿ ಎಂದು ಕೂಗಿದಾಗ ಸುತ್ತಲಿನ ಜಮೀನಿನಲ್ಲಿದ್ದವರು ಹಾಗೂ ಮೀನುಗಾರರು ಧಾವಿಸಿ ಬಂದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಇಬ್ಬರನ್ನು ಕಾಪಾಡಲಾಯಿತು. ಒಬ್ಬನ ಶವ ಸಿಕ್ಕಿದೆ. ರಕ್ಷಣೆಯಾದ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿನ್ನೆ ರಾತ್ರಿಯಾದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 6 ಗಂಟೆಯಿಂದ ರಕ್ಷಣಾ ಕಾರ್ಯಾಚರಣೆ ಮರು ಆರಂಭಿಸಲಾಯಿತು. ಕಲಬುರ್ಗಿಯಿಂದ ಎಸ್‌ಡಿಆರ್‌ಎಫ್ ತಂಡ, ಅಗ್ನಿಶಾಮಕ ದಳ ಸಿಬ್ಬಂದಿ ಬಂದು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಸ್ಥಳಕ್ಕೆ ವಿಜಯಪುರ ಎಸ್ಪಿ ಋಷಿಕೇಶ್ ಸೋನಾವಣೆ, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸದ್ಯ ನದಿಯಲ್ಲಿ ಮುಳುಗಿರಬಹುದಾದ ಐವರಿಗಾಗಿ ಶೋಧ ನಡೆಯುತ್ತಿದೆ. ಇವರಲ್ಲಿ ಕೆಲವರು ಈಜಿ ಆಚೆ ದಡ ಸೇರಿರಲೂಬಹುದು ಎಂದು ತರ್ಕಿಸಲಾಗಿದೆ.

ಅಗ್ನಿಶಾಮಕ ಸಿಬ್ಬಂದಿ ನಾಲ್ಕು ಬೋಟ್ ಮೂಲಕ ಕಾರ್ಯಾಚರಣೆ ನಡೆಸುತ್ತಿದ್ದು, ಸ್ಥಳೀಯ ಮೀನುಗಾರರು ಸಹ ಪಾಲ್ಗೊಂಡಿದ್ದಾರೆ. ಎಸ್ಪಿ ಋಷಿಕೇಶ ಸೋನಾವಣೆ ಸ್ಥಳದಲ್ಲಿಯೇ ಬೀಡುಬಿಟ್ಟಿದ್ದಾರೆ.

ಮಗನ ಕುಡಿತದ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಅಪ್ಪ, ಅಮ್ಮ

ಬೆಂಗಳೂರು: ಮಗನ ಕುಡಿತದಿಂದ ಉಂಟಾಗಿರುವ ಕೌಟುಂಬಿಕ ಸಮಸ್ಯೆಗಳಿಂದ ಬೇಸತ್ತು ಹಿರಿಯ ವಯಸ್ಸಿನ ಪೋಷಕರು ಆತ್ಮಹತ್ಯೆ (Suicide News ) ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಘಟನೆ ನಡೆದಿದೆ. ಚಂದ್ರಶೇಖರ್ (54) ಹಾಗೂ ಶಾರದಮ್ಮ ಆತ್ಮಹತ್ಯೆ ಮಾಡಿಕೊಂಡ ದಂಪತಿ.

ಮಗ ಪ್ರಶಾಂತನಿಗೆ ವರ್ಷಗಳ ಹಿಂದೆ ಮದುವೆ ಮಾಡಿದ್ದರು. ಆದರೆ ಮಗ ಕುಡಿತದಿಂದ ಮನೆ ಬರೋದು ಕಡಿಮೆ ಮಾಡಿದ್ದ, ಇದರಿಂದ ನೊಂದು ಕಳೆದ ಮೂರು ತಿಂಗಳ ಹಿಂದೆ ಪ್ರಶಾಂತನ ಹೆಂಡತಿ ಮನೆ ಬಿಟ್ಟು ತವರು ಮನೆ ಸೇರಿದ್ದರು. ಇದರಿಂದ‌ ಮಗನ‌ ಬಾಳು ಹೀಗಾಯಿತು ಎಂದು ನೊಂದು ಕೊಂಡಿದ್ದರು.

ಸೋಮವಾ ಎರಡನೇ‌ ಮಗನನ್ನ ಅಂಗಡಿ ಕಳಿಸಿ ದಂಪತಿ ನೇಣಿಗೆ ಶರಣಾಗಿದ್ದರು. ಮಗ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರು ಹೊಸಕೋಟೆ ಮೂಲದವರು. ಅವರು ಹಲವು ವರ್ಷಗಳಿಂದ‌ ಹಳೆ ಬೈಯಪ್ಪನಹಳ್ಳಿ ಯಲ್ಲಿ ವಾಸ ಮಾಡಿಕೊಂಡಿದ್ದರು. ಬೆಂಗಳೂರಿನಲ್ಲೊ ಕೂಲಿ ಕೆಲಸ ಮಾಡಿಕೊಂಡಿದ್ದರು. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Hemant Nimbalkar: ವಾರ್ತಾ ಇಲಾಖೆ ಆಯುಕ್ತರಾಗಿ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮರು ನೇಮಕ

Continue Reading

ಪ್ರಮುಖ ಸುದ್ದಿ

IPS Transfer: ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ

IPS Transfer: ಕಾನೂನು ಸುವ್ಯವಸ್ಥೆ, ಪೊಲೀಸ್‌ ಇಲಾಖೆ ಆಂತರಿಕ ಹಾಗೂ ಬಾಹ್ಯ ಆಡಳಿತ ನಿರ್ವಹಣೆಗಳಿಗೆ ಸಂಬಂಧಿಸಿ ಈ ವರ್ಗಾವಣೆಗಳನ್ನು ಮಾಡಲಾಗಿದ್ದು, ವರ್ಗವಾದ ಅಧಿಕಾರಿಗಳು ಈ ವಾರದಲ್ಲಿಯೇ ನೂತನ ಸ್ಥಳದಲ್ಲಿ ಕೆಲಸದ ಆದೇಶ ವಹಿಸಿಕೊಳ್ಳಲಿದ್ದಾರೆ.

VISTARANEWS.COM


on

IPS transfer
Koo

ಬೆಂಗಳೂರು: ರಾಜ್ಯದ 25 ಐಪಿಎಸ್‌ ಅಧಿಕಾರಿಗಳನ್ನು (IPS Officers) ನಾನಾ ಕಡೆಗಳಿಗೆ ವರ್ಗಾವಣೆ (IPS Transfer) ಮಾಡಿ ಸರ್ಕಾರ (Karnataka Govt) ಆದೇಶ ಹೊರಡಿಸಿದೆ. ಕಾನೂನು ಸುವ್ಯವಸ್ಥೆ, ಪೊಲೀಸ್‌ ಇಲಾಖೆ ಆಂತರಿಕ ಹಾಗೂ ಬಾಹ್ಯ ಆಡಳಿತ ನಿರ್ವಹಣೆಗಳಿಗೆ ಸಂಬಂಧಿಸಿ ಈ ವರ್ಗಾವಣೆಗಳನ್ನು ಮಾಡಲಾಗಿದ್ದು, ವರ್ಗವಾದ ಅಧಿಕಾರಿಗಳು ಈ ವಾರದಲ್ಲಿಯೇ ನೂತನ ಸ್ಥಳದಲ್ಲಿ ಕೆಲಸದ ಆದೇಶ ವಹಿಸಿಕೊಳ್ಳಲಿದ್ದಾರೆ.

ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಇಲ್ಲಿದೆ:

ಲಾಭೂರಾಮ್ : ಐಜಿಪಿ ಕೇಂದ್ರ ವಲಯ
ಬಿ.ಆರ್ ರವಿಕಾಂತೇಗೌಡ : ಐಜಿಪಿ ಹೆಡ್ ಕಾರ್ಟರ್ -1 ಬೆಂಗಳೂರು (ಡಿಜಿ ಕಛೇರಿ)
ಡಾ.ಕೆ ತ್ಯಾಗರಾಜನ್ : ಐಜಿಪಿ ,ಐಎಸ್ ಡಿ.
ಎನ್ ಶಶಿಕುಮಾರ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್.
ಬಿ ರಮೇಶ್ : ಡಿಐಜಿಪಿ ಈಸ್ಟರ್ನ್ ರೇಂಜ್ ದಾವಣಗೆರೆ .
ಸೀಮಾ ಲಾಟ್ಕರ್: ಪೊಲೀಸ್ ಆಯುಕ್ತರು ಮೈಸೂರು ನಗರ
ರೇಣುಕಾ ಸುಕುಮಾರ್ : ಎಐಜಿಪಿ ( ಡಿಜಿ ಕಛೇರಿ)
ಸಿಕೆ ಬಾಬಾ: ಎಸ್‌ಪಿ ಬೆಂಗಳೂರು ಗ್ರಾಮಾಂತರ.
ಎನ್ ವಿಷ್ಣುವರ್ಧನ್ : ಎಸ್‌ಪಿ ಮೈಸೂರು ಜಿಲ್ಲೆ.
ಸುಮನ್ ಡಿ ಪೆನ್ನೆಕರ್ : ಎಸ್ ಪಿ , ಬಿಎಂಟಿಎಫ್.
ಸಿ.ಬಿ ರಿಷ್ಯಂತ್: ಎಸ್ ಪಿ ವೇರ್ ಲೆಸ್ .
ಚನ್ನಬಸವಣ್ಣ : ಎಐಜಿಪಿ, (ಆಡಳಿತ ) ಡಿಜಿ ಕಛೇರಿ.
ನಾರಾಯಣ್ ಎಂ, : ಎಸ್ ಪಿ ಉತ್ತರ ಕನ್ನಡ.
ಸಾರ ಫಾತಿಮಾ: ಡಿಸಿಪಿ ಆಗ್ನೇಯ ವಿಭಾಗ , ಬೆಂಗಳೂರು ನಗರ
ಅರುಣಾಂಗ್ಷು ಗಿರಿ : ( Arunngshu giri ) SP ,CID
ನಾಗೇಶ್ ಡಿ ಎಲ್ : ಡಿಸಿಪಿ , ಸಿ ಎ ಆರ್ ಹೆಡ್ ಕ್ವಾರ್ಟರ್ಸ್. ಬೆಂಗಳೂರು ನಗರ .
ಪದ್ಮಿನಿ ಸಾಹೋ :ಡಿಸಿಪಿ ಆಡಳಿತ , ಬೆಂಗಳೂರು ನಗರ.
ಪ್ರದೀಪ್ ಗುಂಟಿ: ಎಸ್ ಪಿ ಬೀದರ್ ಜಿಲ್ಲೆ.
ಯತೀಶ್ ಎನ್ : ಎಸ್ ಪಿ ದಕ್ಷಿಣ ಕನ್ನಡ ಜಿಲ್ಲೆ.
ಮಲ್ಲಿಕಾರ್ಜುನ ಬಾಲದಂಡಿ, ಎಸ್ ಪಿ ಮಂಡ್ಯ ಜಿಲ್ಲೆ.
ಡಾ ಶೋಭಾ ರಾಣಿ ವಿ.ಜೆ. ಎಸ್ ಪಿ .ಬಳ್ಳಾರಿ ಜಿಲ್ಲೆ.
ಡಾ ಕವಿತಾ ಟಿ: ಎಸ್ ಪಿ ಚಾಮರಾಜನಗರ ಜಿಲ್ಲೆ.
ನಿಖಿಲ್ ಬಿ : ಎಸ್ ಪಿ ಕೋಲಾರ ಜಿಲ್ಲೆ.
ಕುಶಾಲ್ ಚೌಕ್ಸಿ : ಎಸ್ ಪಿ ಚಿಕ್ಕಬಳ್ಳಾಪುರ ಜಿಲ್ಲೆ.
ಮಹಾನಿಂಗ್ ನಂದಗಾವಿ ಡಿಸಿಪಿ ( ಕಾನೂನು ಸುವ್ಯವಸ್ಥೆ) ಹುಬ್ಬಳ್ಳಿ ಧಾರವಾಡ

ಇದನ್ನೂ ಓದಿ: BBMP Scam: ನಕಲಿ ಸೊಸೈಟಿಗಳಿಗೆ ಬಿಬಿಎಂಪಿ 102 ಕೋಟಿ ರೂ. ವರ್ಗಾವಣೆ; ಬಯಲಾಯ್ತು ಮತ್ತೊಂದು ಹಗರಣ!

Continue Reading
Advertisement
Parliament Sessions
ದೇಶ12 mins ago

Parliament Sessions: ತಮ್ಮ ವಿರುದ್ಧ ಧರಣಿ ನಡೆಸುತ್ತಿದ್ದ ಪ್ರತಿಪಕ್ಷ ಸಂಸದರಿಗೆ‌ ಕುಡಿಯಲು ನೀರು ಕೊಟ್ಟ ಪ್ರಧಾನಿ ಮೋದಿ- ವಿಡಿಯೋ ಇದೆ

Nanna Devaru Serial Mayuri And NarasimhaRaju Grand Son Acting
ಕಿರುತೆರೆ19 mins ago

Nanna Devaru Serial: ಕಿರುತೆರೆಗೆ ಕಮ್‌ಬ್ಯಾಕ್‌ ಮಾಡಿದ ಮಯೂರಿ;  ‘ನನ್ನ ದೇವ್ರು’ ಧಾರಾವಾಹಿಗೆ ನರಸಿಂಹರಾಜು ಮೊಮ್ಮಗ ಹೀರೊ!

Safe Drive Tips
ಆಟೋಮೊಬೈಲ್22 mins ago

Safe Drive Tips: ಮಳೆಯಲ್ಲಿ ಬೈಕ್ ಓಡಿಸುವಾಗ ಈ ಸಂಗತಿಗಳು ಗಮನದಲ್ಲಿರಲಿ

India T20I schedule
ಕ್ರೀಡೆ30 mins ago

India T20I schedule: 2026ರ ಟಿ20 ವಿಶ್ವಕಪ್​ಗೂ ಮುನ್ನ ಭಾರತ ಆಡಲಿದೆ 34 ಟಿ20 ಪಂದ್ಯ

high beam lights
ಕರ್ನಾಟಕ33 mins ago

High Beam Lights‌: ರಾತ್ರಿ ಹೈ ಬೀಮ್‌ ಲೈಟ್‌ ಹಾಕಿಕೊಂಡು ವಾಹನ ಚಲಾಯಿಸುತ್ತೀರಾ? ಕೇಸು ಬೀಳುತ್ತೆ ಎಚ್ಚರ!

Cheetah Safari
ಪರಿಸರ52 mins ago

Cheetah Safari: ಬನ್ನೇರುಘಟ್ಟದಲ್ಲಿ ʻಚಿರತೆ ಸಫಾರಿʼ ಶುರು; ಚಿರತೆಗಳನ್ನು ಕಾಡೊಳಗೇ ನೋಡಿ ಆನಂದಿಸಿ!

Viral News
Latest52 mins ago

Viral News: ನೀವೂ ಕೂಡ ನಿಮ್ಮ ಹೆಂಡತಿಯನ್ನು ಇವರಂತೆ ಪ್ರೀತಿಸಬಲ್ಲಿರಾ? ಈ ಫೋಟೊ, ವಿಡಿಯೊ ನೋಡಿ ಹೇಳಿ!

Hathras Stampede
ಪ್ರಮುಖ ಸುದ್ದಿ1 hour ago

Hathras Stampede: ಹತ್ರಾಸ್‌ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 116ಕ್ಕೆ ಏರಿಕೆ; ಸತ್ಸಂಗ ನಡೆಸಿದ ಭೋಲೆ ಬಾಬಾ ನಾಪತ್ತೆ

krishna river drowned death
ಕ್ರೈಂ1 hour ago

Drowned: ಪೊಲೀಸರಿಂದ ತಪ್ಪಿಸಿಕೊಳ್ಳಹೋಗಿ ನೀರುಪಾಲು; ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 1 ಸಾವು, ಇಬ್ಬರ ರಕ್ಷಣೆ, ಇನ್ನೂ ಐವರು ನಾಪತ್ತೆ

IPS transfer
ಪ್ರಮುಖ ಸುದ್ದಿ2 hours ago

IPS Transfer: ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ14 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌