ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಮಾ.24ರ ಸಚಿವ ಸಂಪುಟ ಸಭೆಯಲ್ಲಿ ಮತ್ತೆ ಪ್ರಸ್ತಾಪ - Vistara News

ಕರ್ನಾಟಕ

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಮಾ.24ರ ಸಚಿವ ಸಂಪುಟ ಸಭೆಯಲ್ಲಿ ಮತ್ತೆ ಪ್ರಸ್ತಾಪ

ಸೇವಾ ನಿರತ ಪದವೀಧರ ಶಿಕ್ಷಕರನ್ನು ಪರೀಕ್ಷೆ ನಡೆಸದೇ 6 ರಿಂದ 8 ನೇ ತರಗತಿ ಶಿಕ್ಷಕರನ್ನಾಗಿ ನಿಯುಕ್ತಿಗೊಳಿಸುವ ಪ್ರಸ್ತಾಪದ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮತ್ತೆ ಚರ್ಚೆಯಾಗುವ ನಿರೀಕ್ಷೆಗಳಿವೆ.

VISTARANEWS.COM


on

Teacher Recruitment 2023 karnataka education department to recruit 33 thousand honorary teachers
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸೇವಾ ನಿರತ ಪದವೀಧರ ಶಿಕ್ಷಕರನ್ನು ಪರೀಕ್ಷೆ ನಡೆಸದೇ 6 ರಿಂದ 8 ನೇ ತರಗತಿ ಶಿಕ್ಷಕರನ್ನಾಗಿ ನಿಯುಕ್ತಿಗೊಳಿಸುವ (graduate teacher promotion) ಪ್ರಸ್ತಾಪದ ಕುರಿತು ಶುಕ್ರವಾರ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮತ್ತೆ ಚರ್ಚೆಯಾಗುವ ನಿರೀಕ್ಷೆಗಳಿವೆ.

ಕಳೆದ ಸಚಿವ ಸಂಪುಟದ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದಿತ್ತಾದರೂ ಮಾಹಿತಿಯ ಕೊರತೆಯಿಂದಾಗಿ ಈ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿರಲಿಲ್ಲ. ಶುಕ್ರವಾರ ಸಂಜೆ ನಾಲ್ಕು ಗಂಟೆಗೆ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಮತ್ತೆ ಚರ್ಚೆಯಾಗುವ ಸಾಧ್ಯತೆಗಳಿವೆ. ಈಗಾಗಲೇ ಶಿಕ್ಷಣ ಇಲಾಖೆಯು ಅಗತ್ಯ ಮಾಹಿತಿಯನ್ನು ಕ್ಯಾಬಿನೆಟ್‌ ಶಾಖೆಗೆ ತಲುಪಿಸಿದೆ ಎಂದು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಯೊಬ್ಬರು ʻವಿಸ್ತಾರ ನ್ಯೂಸ್‌ʼಗೆ ತಿಳಿಸಿದ್ದಾರೆ.

graduate teacher promotion
ಸಚಿವ ಸಂಪುಟ ಸಭೆಯ ಕುರಿತು ನೀಡಿದ ಮಾಹಿತಿ

2017ರಲ್ಲಿ ತಿದ್ದುಪಡಿ ಮಾಡಿರುವ ಪ್ರಾಥಮಿಕ ಶಾಲಾ ಶೀಕ್ಷಕರ ವೃಂದ ಮತ್ತು ನೇಮಕಾತಿ ನಿಯಮದಿಂದ ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ (graduate teacher promotion) ಆಗಿರುವ ಅನ್ಯಾಯವನ್ನು ಸರಿಪಡಿಸಲು ಮತ್ತೊಂದು ತಿದ್ದುಪಡಿ ಮಾಡುವ ಪ್ರಸ್ತಾಪ ಇದಾಗಿದೆ. ಇದಕ್ಕೆ ಈಗಾಗಲೇ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿರುವುದರಿಂದ ಈ ತಿದ್ದುಪಡಿಗೆ ಸಚಿವ ಸಂಪುಟ ಒಪ್ಪಿಗೆ ನೀಡುವುದರಲ್ಲಿ ಅನುಮಾನವಿಲ್ಲ. ಕಳೆದ ಸಚಿವ ಸಂಪುಟದ ಸಭೆಯಲ್ಲಿಯೇ ಈ ಬಗ್ಗೆ ಚರ್ಚೆಯಾಗಿತ್ತಾದರೂ ಕೆಲವು ಅವಶ್ಯ ಮಾಹಿತಿಯನ್ನು ಶಿಕ್ಷಣ ಇಲಾಖೆ ಒದಗಿಸದೇ ಇರುವುದರಿಂದ ಈ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿರಲಿಲ್ಲ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.

ಇತ್ತೀಚೆಗೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಾಕ್ಷ ಶಂಭುಲಿಂಗನಗೌಡ ಪಾಟೀಲ, ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ನೇತೃತ್ವದ ನಿಯೋಗವು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್‌ ಕುಮಾರ ಸಿಂಗ್ ಅವರನ್ನು ಭೇಟಿಯಾಗಿದ್ದ ಸಂದರ್ಭದಲ್ಲಿ, ʻʻಸಚಿವ ಸಂಪುಟ ಸಭೆಯು ಬಯಸಿದ್ದ ಅಗತ್ಯ ಮಾಹಿತಿಯನ್ನು ಕ್ರೋಡೀಕರಿಸಿದ್ದು, ಕ್ಯಾಬಿನೆಟ್‌ ಶಾಖೆಗೆ ಸಲ್ಲಿಕೆಯಾಗಿದೆ. ಹೀಗಾಗಿ ಮುಂದಿನ ಸಚಿವ ಸಂಪುಟದ ಸಭೆಯಲ್ಲಿಯೇ ಈ ಪ್ರಾಸ್ತಾಪ ಮತ್ತೆ ಚರ್ಚೆಗೆ ಬರುವಂತೆ ನೋಡಿಕೊಳ್ಳಲಾಗುತ್ತದೆʼʼ ಎಂಬ ಭರವಸೆ ನೀಡಿದ್ದರು.

ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್‌ ಮಾಡಿ.

ಶಿಕ್ಷಣ ಸಚಿವ ಬಿ. ಸಿ. ನಾಗೇಶ್‌ ಈ ಪ್ರಸ್ತಾಪವನ್ನು ಸಂಪುಟದ ಮುಂದೆ ಮಂಡಿಸಲಿದ್ದಾರೆ. ಈ ಕುರಿತ ಸಭೆಯ ನಿರ್ಧಾರಕ್ಕಾಗಿ ಕಳೆದ ಇಪ್ಪತ್ತು, ಇಪ್ಪತ್ತೈದು ವರ್ಷಗಳಿಂದ ಶಾಲೆಗಳಲ್ಲಿ ಬೋಧಿಸುತ್ತಿರುವ ಸುಮಾರು 75 ಸಾವಿರಕ್ಕೂ ಹೆಚ್ಚು ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು ಕಾತುರದಿಂದ ಎದುರು ನೋಡುತ್ತಿದ್ದಾರೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಸೇವಾ ನಿರತ ಪದವೀಧರ ಶಿಕ್ಷಕರ ಪರವಾಗಿ ಈ ಬಡ್ತಿಗಾಗಿ ಹೋರಾಟ ನಡೆಸಿಕೊಂಡು ಬಂದಿದೆ.

ಈಗಾಗಲೇ ಈ ತಿದ್ದುಪಡಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಸಂಸದೀಯ ವ್ಯವಹಾರಗಳ ಇಲಾಖೆ ಮತ್ತು ಆರ್ಥಿಕ ಇಲಾಖೆಯೂ ಸಮ್ಮತಿ ಸೂಚಿಸಿವೆ.

ಇದನ್ನೂ ಓದಿ : ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ; ಆದರೆ ಸಿಗದ ಸಮ್ಮತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಹಾಸನ

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024: ನಕಲಿ ಮತದಾನ ಮಾಡಲಾಗಿದೆ ಎಂದು ಮತದಾನ ಕೇಂದ್ರದೊಳಗೆ ಕಾಂಗ್ರೆಸ್ ಬೂತ್ ಏಜೆಂಟ್ ಆರೋಪ ಮಾಡಿದ್ದಾರೆ. ಮತಗಟ್ಟೆ ಸಂಖ್ಯೆ 251ರಲ್ಲಿ ನಕಲಿ ಮತದಾನ ನಡೆದಿರುವ ಆರೋಪ ಕೇಳಿಬಂದಿದೆ. ಮಾಜಿ ಸಚಿವ ಎಚ್.ಡಿ. ರೇವಣ್ಣ ಆಗಮಿಸುವ ವೇಳೆ ಮತಗಟ್ಟೆ ಅಧಿಕಾರಿಯೊಂದಿಗೆ ಕಾಂಗ್ರೆಸ್ ಏಜೆಂಟ್ ರಾಘವೇಂದ್ರ ವಾಗ್ವಾದ ನಡೆಸಿದ್ದಾರೆ. ಅಧಿಕಾರಿಗಳು ಎಷ್ಟೇ ಮನವಿ ಮಾಡಿದರೂ ಸಮಾಧಾನಗೊಳ್ಳದ ಅವರು, ಮತಗಟ್ಟೆ ಕೇಂದ್ರದಿಂದ ಹೊರ ನಡೆದಿದ್ದಾರೆ.

VISTARANEWS.COM


on

Lok Sabha Election 2024 congress booth agent allegation for Fake voting in Hassan Lok Sabha constituency
Koo

ಹಾಸನ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ ಆರಂಭವಾಗಿದೆ. ಈ ನಡುವೆ ಹಾಸನ ಲೋಕಸಭಾ ಕ್ಷೇತ್ರದ (Hasana Lok Sabha constituency) ಹೊಳೆನರಸೀಪುರ ತಾಲೂಕಿನ ಹಿಡುವಲಹಿಪ್ಪೆ ಗ್ರಾಮದ ಮತಗಟ್ಟೆಯಲ್ಲಿ ನಕಲಿ ಮತದಾನ (Fake voting) ನಡೆಯುತ್ತಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಕಾಂಗ್ರೆಸ್ ಬೂತ್ ಏಜೆಂಟ್ (Congress booth agent) ಆರೋಪ ಮಾಡಿದ್ದು, ತೀವ್ರ ಮಾತಿನ ಚಕಮಕಿ ನಡೆದಿದೆ.

ನಕಲಿ ಮತದಾನ ಮಾಡಲಾಗಿದೆ ಎಂದು ಮತದಾನ ಕೇಂದ್ರದೊಳಗೆ ಕಾಂಗ್ರೆಸ್ ಬೂತ್ ಏಜೆಂಟ್ ಆರೋಪ ಮಾಡಿದ್ದಾರೆ. ಮತಗಟ್ಟೆ ಸಂಖ್ಯೆ 251ರಲ್ಲಿ ನಕಲಿ ಮತದಾನ ನಡೆದಿರುವ ಆರೋಪ ಕೇಳಿಬಂದಿದೆ.

ಮಾಜಿ ಸಚಿವ ಎಚ್.ಡಿ. ರೇವಣ್ಣ ಆಗಮಿಸುವ ವೇಳೆ ಮತಗಟ್ಟೆ ಅಧಿಕಾರಿಯೊಂದಿಗೆ ಕಾಂಗ್ರೆಸ್ ಏಜೆಂಟ್ ರಾಘವೇಂದ್ರ ವಾಗ್ವಾದ ನಡೆಸಿದ್ದಾರೆ. ಅಧಿಕಾರಿಗಳು ಎಷ್ಟೇ ಮನವಿ ಮಾಡಿದರೂ ಸಮಾಧಾನಗೊಳ್ಳದ ಅವರು, ಮತಗಟ್ಟೆ ಕೇಂದ್ರದಿಂದ ಹೊರ ನಡೆದರು.

ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ (First phase of polling) ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮತ ಚಲಾಯಿಸಲು ಬಂದ ಮಹಿಳೆಯೊಬ್ಬರಿಗೆ ಹೃದಯ ಸ್ತಂಭನ (cardiac arrest) ಆಗಿದೆ. ಬಳಿಕ ಅಲ್ಲಿಯೇ ಮತ ಚಲಾಯಿಸಲು ಬಂದಿದ್ದರಿಂದ ಅವರ ಜೀವ ಉಳಿದಿದೆ.

ಜೆ.ಪಿ. ನಗರದ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮಹಿಳೆಯೊಬ್ಬರು ಮತದಾನ ಮಾಡಲು ಬಂದಿದ್ದಾರೆ. ಅವರು ಆಯಾಸವಾಗಿದೆ ಎಂದು ಮತಗಟ್ಟೆಯಲ್ಲಿ ಇಟ್ಟಿದ್ದ ನೀರು ಕುಡಿಯಲು ಹೋಗಿದ್ದಾರೆ. ಅದೇ ವೇಳೆಗೆ ಅವರು ಕುಸಿದು ಬಿದ್ದಿದ್ದಾರೆ. ಅದೇ ಸಮಯದಲ್ಲಿ ಅಲ್ಲಿಗೆ ಬಂದಿದ್ದ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್ ಅವರು ರಕ್ಷಣೆಗೆ ದಾವಿಸಿದ್ದಾರೆ.

ನಾಡಿಮಿಡಿತವನ್ನು ಪರಿಶೀಲಿಸಿದ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್, ಪಲ್ಸ್‌ ರೇಟ್‌ ಕಡಿಮೆಯಾಗುತ್ತಿರುವುದನ್ನು ಗಮನಿಸಿದ್ದಾರೆ. ಆ ಸಮಯದಲ್ಲಿ ದೇಹ ಕೂಡ ಯಾವುದೇ ಸ್ಪಂದನೆಯನ್ನು ಮಾಡುತ್ತಿರಲಿಲ್ಲ. ಹೀಗಾಗಿ ಕೂಡಲೇ ಸಿಪಿಆರ್‌ ಮಾಡಿದ್ದು, ಪರಿಸ್ಥಿತಿಯು ಕೊಂಚ ಮಟ್ಟಿಗೆ ಸುಧಾರಿಸುವಂತೆ ಮಾಡಿದ್ದಾರೆ. ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿದ್ದಾರೆ. ಕೂಡಲೇ ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಗಿದೆ. ಐದು ನಿಮಿಷದೊಳಗೆ ಮತಗಟ್ಟೆ ಬಳಿ ಆಂಬ್ಯುಲೆನ್ಸ್ ಬಂದಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೊದಲೆರಡು ಗಂಟೆಗಳ ಮತದಾನ ಚುರುಕು, ಶೇ.9.21 ಚಲಾವಣೆ, ಕೆಲವೆಡೆ ಚಕಮಕಿ

ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಲ್ಲಿ (lok sabha constituency) ನಡೆಯುತ್ತಿರುವ ಲೋಕಸಭೆ ಚುನಾವಣೆ (lok sabha election 2024) ಮತದಾನ (voting) ಬೆಳಗ್ಗಿನ ಹೊತ್ತಿನಲ್ಲಿ ಚುರುಕಾಗಿ ನೆರವೇರಿತು. 7 ಗಂಟೆಗೆ ಮತದಾನ ಆರಂಭವಾಗಿದ್ದು, ಮೊದಲ ಎರಡು ಗಂಟೆಗಳಲ್ಲಿ ಸರಾಸರಿ 10% ಮತದಾನ ಕಂಡುಬಂತು.

ಯಾವ ಕ್ಷೇತ್ರದಲ್ಲಿ ಎಷ್ಟೆಷ್ಟು ಮತ ಚಲಾವಣೆ?

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 9 ಗಂಟೆಯವರೆಗೆ 14.33% ಹಾಗೂ ಉಡುಪಿ ಜಿಲ್ಲೆಯಲ್ಲಿ 12.82% ಮತದಾನ ದಾಖಲಾಗಿದೆ. ತುಮಕೂರು 9.6%, ಚಾಮರಾಜನಗರ 7.7%, ಮಂಡ್ಯ 7.70%, ಚಿಕ್ಕಬಳ್ಳಾಪುರ 8.70%, ಹಾಸನ 8.2%, ಚಿಕ್ಕಮಗಳೂರು 11.02%, ಮೈಸೂರು 11.04% ಮತದಾನ ನಡೆದಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಈವರೆಗೆ 9.8%, ಬೆಂಗಳೂರು ಕೇಂದ್ರ 8.14%, ಬೆಂಗಳೂರು ಉತ್ತರ 8.64%, ಬೆಂಗಳೂರು ಗ್ರಾಮಾಂತರ 8.34% ಮತದಾನ ದಾಖಲಿಸಿವೆ.

ಹತ್ತು ಗಂಟೆಯ ಬಳಿಕ ಬಿಸಿಲು ಏರುವುದರಿಂದ, ಬಿಸಿಲಿನ ಹೊಡೆತ ತಪ್ಪಿಸಿಕೊಳ್ಳಲು ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಚಲಾಯಿಸಿದರು. ಮಧ್ಯಾಹ್ನದ ಹೊತ್ತಿನಲ್ಲಿ ಮತದಾನ ಇಳಿಕೆಯಾಗಿ, ಸಂಜೆ ಮತ್ತೆ ಏರುವ ನಿರೀಕ್ಷೆ ಇದೆ. ರಾಜಧಾನಿಯಲ್ಲಿ ಹಲವಾರು ಗಣ್ಯರು ಮುಂಜಾನೆಯೇ ಮತ ಚಲಾಯಿಸಿದರು.

ಇನ್‌ಫೋಸಿಸ್‌ ಸ್ಥಾಪಕ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ಮುಂಜಾನೆ ಸರತಿ ಸಾಲಿನಲ್ಲಿ ನಿಂತು ಮತ ಹಾಕಿದರು. ನಾರಾಯಣ ಮೂರ್ತಿಯವರು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಮಾಡಿಸಿಕೊಂಡು ನೇರವಾಗಿ ಮತಗಟ್ಟೆಗೇ ಬಂದು ಮತ ಹಾಕಿ ತೆರಳಿದರು. ಕ್ರಿಕೆಟಿಗ ರಾಹುಲ್‌ ದ್ರಾವಿಡ್‌, ನಟ ನಟಿಯರಾದ ಸಪ್ತಮಿ ಗೌಡ, ಪ್ರಕಾಶ್‌ ರೈ, ಗೋಲ್ಡನ್‌ ಸ್ಟಾರ್‌ ಗಣೇಶ್, ಶರಣ್‌, ಧ್ರುವ ಸರ್ಜಾ, ಅಮೂಲ್ಯ ಮುಂತಾದವರು ಮತ ಹಾಕಿದರು. ಧಾರ್ಮಿಕ ಗಣ್ಯರಾದ ಉಡುಪಿಯ ಅಷ್ಟ ಮಠಾಧೀಶರು, ಸಿದ್ದಲಿಂಗ ಸ್ವಾಮಿ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮತ ಹಾಕಿದರು.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌, ರಾಜಕೀಯ ನಾಯಕರು ಹಾಗೂ ಅಭ್ಯರ್ಥಿಗಳಾದ ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ, ಸದಾನಂದ ಗೌಡ, ಕೆಜೆ ಜಾರ್ಜ್‌, ಜಮೀರ್‌ ಅಹಮದ್‌ ಖಾನ್‌, ರಾಮಲಿಂಗಾರೆಡ್ಡಿ, ಸೌಮ್ಯ ರೆಡ್ಡಿ, ಸೋಮಣ್ಣ, ಪಿಸಿ ಮೋಹನ್‌ ಮೊದಲಾದವರು ಹಕ್ಕು ಚಲಾಯಿಸಿದರು. ಮತದಾನಕ್ಕೆ ಆಗಮಿಸುವ ಮುನ್ನ ಎಚ್‌ಡಿ ದೇವೇಗೌಡ, ಡಿ.ಕೆ. ಸುರೇಶ್‌, ಡಿ.ಕೆ. ಶಿವಕುಮಾರ್‌ ಮೊದಲಾದ ನಾಯಕರು ಟೆಂಪಲ್‌ ರನ್‌ ಮಾಡಿದರು.

ಇದನ್ನೂ ಓದಿ: Lok Sabha Election 2024: ಸರತಿ ಸಾಲಿನಲ್ಲಿ ನಿಂತು ವೋಟ್‌ ಮಾಡಿದ ಗಣೇಶ್ ದಂಪತಿ: ಪ್ರಕಾಶ್‌ ರಾಜ್‌ ಮನವಿ ಏನು?

ಕೆಲವೆಡೆ ಸಣ್ಣ ಪ್ರಮಾಣದ ಚಕಮಕಿ ಕಂಡುಬಂತು. ಉಡುಪಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಮೋದ್‌ ಮತ ಹಾಕಲು ಸಂದರ್ಭ ಪ್ರಚಾರ ನಡೆಸಿದರು ಎಂದು ಬಿಜೆಪಿ ಕಾರ್ಯಕರ್ತರು ತಗಾದೆ ತೆಗೆದು ರಂಪಾಟ ನಡೆಸಿದರು. ಆನೇಕಲ್‌ನಲ್ಲಿ ಬಿಜೆಪಿ ಪೆಂಡಾಲ್‌ಗಳನ್ನು ತೆಗೆಸಿ ಕಾಂಗ್ರೆಸ್‌ ಪೆಂಡಾಲ್‌ ಹಾಕಿಸಿದ ಕುರಿತು ವಾಗ್ಯುದ್ಧ ನಡೆಯಿತು. ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.

ಕೆಲವೆಡೆ ಮತಯಂತ್ರ ಕೈಕೊಟ್ಟು ಮತದಾರರು ಗಂಟೆಗಟ್ಟಲೆ ಕಾಯುವಂತಾಯಿತು. ತಂತ್ರಜ್ಞರು ಆಗಮಿಸಿ ಸರಿಪಡಿಸಿದ ಬಳಿಕ ಮತ ಹಾಕಲಾಯಿತು. ಮಹಿಳೆಯರಿಗಾಗಿ ವ್ಯವಸ್ಥೆ ಮಾಡಲಾಗಿದ್ದ ಪಿಂಕ್‌ ಬೂತ್‌ಗಳಲ್ಲಿಯೂ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಕೆಲವೆಡೆ ಬಿಸಿಲಿನ ಝಳಕ್ಕೆ ಸರತಿಯಲ್ಲಿ ನಿಂತ ಮತದಾರರು ಅಸ್ವಸ್ಥಗೊಂಡರು. ಇವರಿಗೆ ಪ್ರಥಮ ಚಿಕಿತ್ಸೆ ಒದಗಿಸಲಾಯಿತು.

Continue Reading

ಚಿನ್ನದ ದರ

Gold Rate Today: ಮತದಾನದ ದಿನ ಬಂಗಾರದ ದರ ತೇಜಿ, ಬೆಂಗಳೂರಿನಲ್ಲಿ 24K ಚಿನ್ನಕ್ಕೆ ₹440 ಏರಿಕೆ

22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಇಂದು ಕ್ರಮವಾಗಿ ₹40 ಹಾಗೂ ₹44 ಏರಿಕೆಯಾಗಿವೆ. ಇದು ಬೆಂಗಳೂರಿನ ದರ. ಚೆನ್ನೈಯಲ್ಲಿ ದರ ಇನ್ನೂ ಹೆಚ್ಚಿದೆ.

VISTARANEWS.COM


on

gold rate today tapasi pannu
Koo

ಬೆಂಗಳೂರು: ಇಂದು (ಶುಕ್ರವಾರ) ಮತದಾನದ ಹಿನ್ನೆಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದ್ದರೂ ಚಿನ್ನದ ಮಾರುಕಟ್ಟೆಯಲ್ಲಿ ವಹಿವಾಟು ನಡೆದಿದೆ. ಬೆಲೆಯಲ್ಲಿ ತುಸು ಏರಿಕೆ ಕಂಡುಬಂದಿದೆ. ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹40 ಹಾಗೂ ₹44 ಏರಿಕೆಯಾಗಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,665ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,320 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,650 ಮತ್ತು ₹6,66,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,271 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,168 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,710 ಮತ್ತು ₹7,27,100 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹82.50, ಎಂಟು ಗ್ರಾಂ ₹660 ಮತ್ತು 10 ಗ್ರಾಂ ₹825ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,250 ಮತ್ತು 1 ಕಿಲೋಗ್ರಾಂಗೆ ₹82,500 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ66,80072,860
ಮುಂಬಯಿ66,650 72,710
ಬೆಂಗಳೂರು66,650 72,710
ಚೆನ್ನೈ67,55073,690

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಚಿನ್ನ ಕೊಳ್ಳೋಕೆ ಇಂದು ಸುಸಮಯ! 24 ಕ್ಯಾರಟ್‌ ಬಂಗಾರಕ್ಕೆ ₹1530 ಇಳಿಕೆ!

Continue Reading

Lok Sabha Election 2024

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024: ಜೆ.ಪಿ. ನಗರದ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮಹಿಳೆಯೊಬ್ಬರು ಮತದಾನ ಮಾಡಲು ಬಂದಿದ್ದಾರೆ. ಅವರು ಆಯಾಸವಾಗಿದೆ ಎಂದು ಮತಗಟ್ಟೆಯಲ್ಲಿ ಇಟ್ಟಿದ್ದ ನೀರು ಕುಡಿಯಲು ಹೋಗಿದ್ದಾರೆ. ಅದೇ ವೇಳೆಗೆ ಅವರು ಕುಸಿದು ಬಿದ್ದಿದ್ದಾರೆ. ಅದೇ ಸಮಯದಲ್ಲಿ ಅಲ್ಲಿಗೆ ಬಂದಿದ್ದ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್ ಅವರು ರಕ್ಷಣೆಗೆ ದಾವಿಸಿದ್ದಾರೆ. ತುರ್ತು ಚಿಕಿತ್ಸೆ ನೀಡಿ ಜೀವ ಉಳಿಸಿದ್ದಾರೆ.

VISTARANEWS.COM


on

Lok Sabha Election 2024 Woman suffers cardiac arrest at polling booth Doctor who came to cast his vote saved life
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ (First phase of polling) ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮತ ಚಲಾಯಿಸಲು ಬಂದ ಮಹಿಳೆಯೊಬ್ಬರಿಗೆ ಹೃದಯ ಸ್ತಂಭನ (cardiac arrest) ಆಗಿದೆ. ಬಳಿಕ ಅಲ್ಲಿಯೇ ಮತ ಚಲಾಯಿಸಲು ಬಂದಿದ್ದರಿಂದ ಅವರ ಜೀವ ಉಳಿದಿದೆ.

ಜೆ.ಪಿ. ನಗರದ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮಹಿಳೆಯೊಬ್ಬರು ಮತದಾನ ಮಾಡಲು ಬಂದಿದ್ದಾರೆ. ಅವರು ಆಯಾಸವಾಗಿದೆ ಎಂದು ಮತಗಟ್ಟೆಯಲ್ಲಿ ಇಟ್ಟಿದ್ದ ನೀರು ಕುಡಿಯಲು ಹೋಗಿದ್ದಾರೆ. ಅದೇ ವೇಳೆಗೆ ಅವರು ಕುಸಿದು ಬಿದ್ದಿದ್ದಾರೆ. ಅದೇ ಸಮಯದಲ್ಲಿ ಅಲ್ಲಿಗೆ ಬಂದಿದ್ದ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್ ಅವರು ರಕ್ಷಣೆಗೆ ದಾವಿಸಿದ್ದಾರೆ.

ನಾಡಿಮಿಡಿತವನ್ನು ಪರಿಶೀಲಿಸಿದ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್, ಪಲ್ಸ್‌ ರೇಟ್‌ ಕಡಿಮೆಯಾಗುತ್ತಿರುವುದನ್ನು ಗಮನಿಸಿದ್ದಾರೆ. ಆ ಸಮಯದಲ್ಲಿ ದೇಹ ಕೂಡ ಯಾವುದೇ ಸ್ಪಂದನೆಯನ್ನು ಮಾಡುತ್ತಿರಲಿಲ್ಲ. ಹೀಗಾಗಿ ಕೂಡಲೇ ಸಿಪಿಆರ್‌ ಮಾಡಿದ್ದು, ಪರಿಸ್ಥಿತಿಯು ಕೊಂಚ ಮಟ್ಟಿಗೆ ಸುಧಾರಿಸುವಂತೆ ಮಾಡಿದ್ದಾರೆ. ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿದ್ದಾರೆ. ಕೂಡಲೇ ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಗಿದೆ. ಐದು ನಿಮಿಷದೊಳಗೆ ಮತಗಟ್ಟೆ ಬಳಿ ಆಂಬ್ಯುಲೆನ್ಸ್ ಬಂದಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೊದಲೆರಡು ಗಂಟೆಗಳ ಮತದಾನ ಚುರುಕು, ಶೇ.9.21 ಚಲಾವಣೆ, ಕೆಲವೆಡೆ ಚಕಮಕಿ

ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಲ್ಲಿ (lok sabha constituency) ನಡೆಯುತ್ತಿರುವ ಲೋಕಸಭೆ ಚುನಾವಣೆ (lok sabha election 2024) ಮತದಾನ (voting) ಬೆಳಗ್ಗಿನ ಹೊತ್ತಿನಲ್ಲಿ ಚುರುಕಾಗಿ ನೆರವೇರಿತು. 7 ಗಂಟೆಗೆ ಮತದಾನ ಆರಂಭವಾಗಿದ್ದು, ಮೊದಲ ಎರಡು ಗಂಟೆಗಳಲ್ಲಿ ಸರಾಸರಿ 10% ಮತದಾನ ಕಂಡುಬಂತು.

ಯಾವ ಕ್ಷೇತ್ರದಲ್ಲಿ ಎಷ್ಟೆಷ್ಟು ಮತ ಚಲಾವಣೆ?

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 9 ಗಂಟೆಯವರೆಗೆ 14.33% ಹಾಗೂ ಉಡುಪಿ ಜಿಲ್ಲೆಯಲ್ಲಿ 12.82% ಮತದಾನ ದಾಖಲಾಗಿದೆ. ತುಮಕೂರು 9.6%, ಚಾಮರಾಜನಗರ 7.7%, ಮಂಡ್ಯ 7.70%, ಚಿಕ್ಕಬಳ್ಳಾಪುರ 8.70%, ಹಾಸನ 8.2%, ಚಿಕ್ಕಮಗಳೂರು 11.02%, ಮೈಸೂರು 11.04% ಮತದಾನ ನಡೆದಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಈವರೆಗೆ 9.8%, ಬೆಂಗಳೂರು ಕೇಂದ್ರ 8.14%, ಬೆಂಗಳೂರು ಉತ್ತರ 8.64%, ಬೆಂಗಳೂರು ಗ್ರಾಮಾಂತರ 8.34% ಮತದಾನ ದಾಖಲಿಸಿವೆ.

ಹತ್ತು ಗಂಟೆಯ ಬಳಿಕ ಬಿಸಿಲು ಏರುವುದರಿಂದ, ಬಿಸಿಲಿನ ಹೊಡೆತ ತಪ್ಪಿಸಿಕೊಳ್ಳಲು ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಚಲಾಯಿಸಿದರು. ಮಧ್ಯಾಹ್ನದ ಹೊತ್ತಿನಲ್ಲಿ ಮತದಾನ ಇಳಿಕೆಯಾಗಿ, ಸಂಜೆ ಮತ್ತೆ ಏರುವ ನಿರೀಕ್ಷೆ ಇದೆ. ರಾಜಧಾನಿಯಲ್ಲಿ ಹಲವಾರು ಗಣ್ಯರು ಮುಂಜಾನೆಯೇ ಮತ ಚಲಾಯಿಸಿದರು.

ಇನ್‌ಫೋಸಿಸ್‌ ಸ್ಥಾಪಕ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ಮುಂಜಾನೆ ಸರತಿ ಸಾಲಿನಲ್ಲಿ ನಿಂತು ಮತ ಹಾಕಿದರು. ನಾರಾಯಣ ಮೂರ್ತಿಯವರು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಮಾಡಿಸಿಕೊಂಡು ನೇರವಾಗಿ ಮತಗಟ್ಟೆಗೇ ಬಂದು ಮತ ಹಾಕಿ ತೆರಳಿದರು. ಕ್ರಿಕೆಟಿಗ ರಾಹುಲ್‌ ದ್ರಾವಿಡ್‌, ನಟ ನಟಿಯರಾದ ಸಪ್ತಮಿ ಗೌಡ, ಪ್ರಕಾಶ್‌ ರೈ, ಗೋಲ್ಡನ್‌ ಸ್ಟಾರ್‌ ಗಣೇಶ್, ಶರಣ್‌, ಧ್ರುವ ಸರ್ಜಾ, ಅಮೂಲ್ಯ ಮುಂತಾದವರು ಮತ ಹಾಕಿದರು. ಧಾರ್ಮಿಕ ಗಣ್ಯರಾದ ಉಡುಪಿಯ ಅಷ್ಟ ಮಠಾಧೀಶರು, ಸಿದ್ದಲಿಂಗ ಸ್ವಾಮಿ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮತ ಹಾಕಿದರು.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌, ರಾಜಕೀಯ ನಾಯಕರು ಹಾಗೂ ಅಭ್ಯರ್ಥಿಗಳಾದ ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ, ಸದಾನಂದ ಗೌಡ, ಕೆಜೆ ಜಾರ್ಜ್‌, ಜಮೀರ್‌ ಅಹಮದ್‌ ಖಾನ್‌, ರಾಮಲಿಂಗಾರೆಡ್ಡಿ, ಸೌಮ್ಯ ರೆಡ್ಡಿ, ಸೋಮಣ್ಣ, ಪಿಸಿ ಮೋಹನ್‌ ಮೊದಲಾದವರು ಹಕ್ಕು ಚಲಾಯಿಸಿದರು. ಮತದಾನಕ್ಕೆ ಆಗಮಿಸುವ ಮುನ್ನ ಎಚ್‌ಡಿ ದೇವೇಗೌಡ, ಡಿ.ಕೆ. ಸುರೇಶ್‌, ಡಿ.ಕೆ. ಶಿವಕುಮಾರ್‌ ಮೊದಲಾದ ನಾಯಕರು ಟೆಂಪಲ್‌ ರನ್‌ ಮಾಡಿದರು.

ಇದನ್ನೂ ಓದಿ: Lok Sabha Election 2024: ಸರತಿ ಸಾಲಿನಲ್ಲಿ ನಿಂತು ವೋಟ್‌ ಮಾಡಿದ ಗಣೇಶ್ ದಂಪತಿ: ಪ್ರಕಾಶ್‌ ರಾಜ್‌ ಮನವಿ ಏನು?

ಕೆಲವೆಡೆ ಸಣ್ಣ ಪ್ರಮಾಣದ ಚಕಮಕಿ ಕಂಡುಬಂತು. ಉಡುಪಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಮೋದ್‌ ಮತ ಹಾಕಲು ಸಂದರ್ಭ ಪ್ರಚಾರ ನಡೆಸಿದರು ಎಂದು ಬಿಜೆಪಿ ಕಾರ್ಯಕರ್ತರು ತಗಾದೆ ತೆಗೆದು ರಂಪಾಟ ನಡೆಸಿದರು. ಆನೇಕಲ್‌ನಲ್ಲಿ ಬಿಜೆಪಿ ಪೆಂಡಾಲ್‌ಗಳನ್ನು ತೆಗೆಸಿ ಕಾಂಗ್ರೆಸ್‌ ಪೆಂಡಾಲ್‌ ಹಾಕಿಸಿದ ಕುರಿತು ವಾಗ್ಯುದ್ಧ ನಡೆಯಿತು. ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.

ಕೆಲವೆಡೆ ಮತಯಂತ್ರ ಕೈಕೊಟ್ಟು ಮತದಾರರು ಗಂಟೆಗಟ್ಟಲೆ ಕಾಯುವಂತಾಯಿತು. ತಂತ್ರಜ್ಞರು ಆಗಮಿಸಿ ಸರಿಪಡಿಸಿದ ಬಳಿಕ ಮತ ಹಾಕಲಾಯಿತು. ಮಹಿಳೆಯರಿಗಾಗಿ ವ್ಯವಸ್ಥೆ ಮಾಡಲಾಗಿದ್ದ ಪಿಂಕ್‌ ಬೂತ್‌ಗಳಲ್ಲಿಯೂ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಕೆಲವೆಡೆ ಬಿಸಿಲಿನ ಝಳಕ್ಕೆ ಸರತಿಯಲ್ಲಿ ನಿಂತ ಮತದಾರರು ಅಸ್ವಸ್ಥಗೊಂಡರು. ಇವರಿಗೆ ಪ್ರಥಮ ಚಿಕಿತ್ಸೆ ಒದಗಿಸಲಾಯಿತು.

Continue Reading

Lok Sabha Election 2024

Lok Sabha Election 2024: ಮತದಾರರು ಜಸ್ಟ್‌ ಮಿಸ್‌; ಮತಗಟ್ಟೆ ಸಮೀಪವೇ ನೆಲಕ್ಕುರುಳಿದ ಬೃಹತ್ ಮರ, ಕಾರು ಜಖಂ

Lok Sabha Election 2024: ಮತಗಟ್ಟೆ ಸಮೀಪವೇ ಬೃಹತ್‌ ಮರವೊಂದು ನೆಲಕ್ಕುರುಳಿದ್ದು, ಮತದಾರರು ಕೂದಳೆಲೆ ಅಂತರದಲ್ಲಿ ಪಾರಾಗಿದ್ದಾರೆ. ಇನ್ನೂ ಮರದಡಿ ನಿಲ್ಲಿಸಿದ್ದ ಕಾರಿನ ಮುಂಭಾಗ ಜಖಂಗೊಂಡಿದೆ.

VISTARANEWS.COM


on

By

lok sabha election 2024
Koo

ಬೆಂಗಳೂರು: ನೋಡ ನೋಡುತ್ತಲೇ ಬೃಹತ್ ಮರವೊಂದು ನೆಲಕ್ಕುರುಳಿದೆ. ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದ 38ನೇ ಮತಗಟ್ಟೆ ಸಮೀಪದಲ್ಲೆ ಈ ಅವಘಡ ಸಂಭವಿಸಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿರುಸಿನ ಮತದಾನ (Lok Sabha Election 2024) ನಡೆಯುತ್ತಿದೆ. ಇದೇ ವೇಳೆ ಮತಗಟ್ಟೆ ಸಮೀಪ ಬೃಹತ್ ಮರವೊಂದು ಬುಡ ಸಮೇತ ಕಿತ್ತು ಬಂದಿದ್ದು, ಭಾರೀ ಅನಾಹುತವೊಂದು ತಪ್ಪಿದೆ.

ಆಗಷ್ಟೇ ಮತದಾನ ಮಾಡಲು ಮತದಾರರು ಆ ರಸ್ತೆ ಮೂಲಕ ಹಾದುಹೋಗಿದ್ದರು. ಅದೃಷ್ಟವಶಾತ್‌ ಮರ ಬೀಳುವಾಗ ಆ ಸಂದರ್ಭದಲ್ಲಿ ಜನರ ಓಡಾಟ ಇರಲಿಲ್ಲ. ಹೀಗಾಗಿ ದೊಡ್ಡ ದುರಂತವೊಂದು ತಪ್ಪಿದೆ. ಮರದ ಪಕ್ಕದಲ್ಲೇ ಇದ್ದ ಮಾರುತಿ ಕಾರ್ ಬೋನೆಟ್‌ ಮೇಲೆ ಮರ ಬಿದ್ದಿದೆ. ಹೀಗಾಗಿ ಕಾರಿನ ಮುಂಭಾಗದ ಲೈಟ್‌ ಜಖಂ ಗೊಂಡಿದೆ. ರಸ್ತೆಗೆ ಅಡ್ಡಲಾಗಿ ಬೃಹತ್‌ ಮರ ಬಿದ್ದಿದ್ದು, ವಾಹನ ಸವಾರರ ಸಂಚಾರಕ್ಕೆ ಅಡ್ಡಿಯಾಗಿದೆ.

ಇಂದಿರಾನಗರದ ಅಪ್ಪಾರೆಡ್ಡಿ ಪಾಳ್ಯದಲ್ಲಿರುವ ಮತಗಟ್ಟೆಯ ಕೂದಲಳತೆ ದೂರದಲ್ಲಿ ಘಟನೆ ನಡೆದಿದೆ. ಸ್ಥಳೀಯರ ಮಾಹಿತಿ ಮೇರೆಗೆ ಬಿಬಿಎಂಪಿ ಸಿಬ್ಬಂದಿಯಿಂದ ಮರ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಇದನ್ನೂ ಓದಿ: Lok Sabha Election 2024: ಸ್ಯಾಂಡಲ್‌ವುಡ್‌ ತಾರೆಯರು ಎಲ್ಲೆಲ್ಲಿ ವೋಟ್‌ ಹಾಕ್ತಾರೆ?

ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

ಬೆಂಗಳೂರು: ಕರ್ನಾಟಕಕ್ಕೆ ಮೋದಿ ಸರ್ಕಾರ ಕೊಟ್ಟ ಕೊಡುಗೆ ಚೆಂಬು ಎಂಬ ಕಾಂಗ್ರೆಸ್‌ನ ಜಾಹೀರಾತಿಗೆ ಬಿಜೆಪಿ ನಾಯಕರು ಆಕ್ರೋಶ (Lok Sabha Election 2024) ಹೊರಹಾಕಿದ್ದರು. ಈ ನಡುವೆ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ದಿನವೂ ಯೂತ್‌ ಕಾಂಗ್ರೆಸ್‌ನ ಕಾರ್ಯಕರ್ತರು ಚೆಂಬು ಹಾಗೂ ಗ್ಯಾಸ್‌ ಸಿಲಿಂಡರ್‌ ಪ್ರದರ್ಶನ ಮಾಡಿದರು.

ಬೆಂಗಳೂರಿನ ರಾಜಾಜಿನಗರದ ಮತಗಟ್ಟೆ ಬಳಿ ಚೆಂಬು ಮತ್ತು ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದರು. ರಾಜಾಜಿನಗರದ ಮಂಜುನಾಥ್ ನಗರದಲ್ಲಿರುವ ಗೌತಮ್ ಕಾಲೇಜಿನ ಮತಗಟ್ಟೆ ಬಳಿ ಬಂದ ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಹಾಗೂ ಕಾರ್ಯಧ್ಯಕ್ಷ ಮಂಜುನಾಥ್‌ ತಂಡ ಚೆಂಬು ಪ್ರದರ್ಶನ ಮಾಡಿದರು. ಜತೆಗೆ ಯುವಕನೊಬ್ಬ ಗ್ರ್ಯಾಜುಯೇಟ್‌ ಡ್ರೆಸ್‌ನಲ್ಲಿ ಬಂದು ಕೈಯಲ್ಲಿ ಚೆಂಬು ಹಿಡಿದು ಬಿಜೆಪಿಗೆ ಪರೋಕ್ಷವಾಗಿ ತಿರುಗೇಟು ನೀಡಲಾಯಿತು.

ಇದನ್ನೂ ಓದಿ: Lok Sabha Election 2024: ಮೊದಲೆರಡು ಗಂಟೆಗಳ ಮತದಾನ ಚುರುಕು, ಶೇ.9.21 ಚಲಾವಣೆ, ಕೆಲವೆಡೆ ಚಕಮಕಿ

ಸರತಿ ಸಾಲಿನಲ್ಲಿ ನಿಂತು ವೋಟ್‌ ಮಾಡಿದ ಗಣೇಶ್ ದಂಪತಿ: ಪ್ರಕಾಶ್‌ ರಾಜ್‌ ಮನವಿ ಏನು?

ಬೆಂಗಳೂರು: ಲೋಕಸಭಾ ಚುನಾವಣೆಯ (Lok Sabha Election 2024) ಎರಡನೇ ಹಂತದ ಮತದಾನ ಇಂದು (ಏಪ್ರಿಲ್ 26) ನಡೆಯುತ್ತಿದೆ. ಕರ್ನಾಟಕದ 14 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯುತ್ತಿದೆ. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ವೋಟ್ ಮಾಡುವಂತೆ ಪ್ರಕಾಶ್ ರಾಜ್ ಮನವಿ ಮಾಡಿದರು. ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಕೂಡ ʻನಿಮಗೆ ಯಾರು ಒಳ್ಳೆಯವರು ಅನಿಸುತ್ತದೆಯೋ ಅವರಿಗೆ ವೋಟ್ ಮಾಡಿʼ ಎಂದು ಮಾಧ್ಯಮದ ಜತೆ ಮಾತನಾಡಿದರು.

ಗೋಲ್ಡನ್ ಸ್ಟಾರ್ ಗಣೇಶ್‌ ಮಾತನಾಡಿ ʻʻನನ್ನ ಹಕ್ಕು ಇದು. ಎಷ್ಟೇ ಹೊತ್ತಾದರೂ ನನ್ನ ಹಕ್ಕನ್ನು ಚಲಾಯಿಸಬೇಕು. ಯಾರೆಲ್ಲ ಮನೆಯಲ್ಲಿ ಇದ್ದೀರಾ ಬಂದು ವೋಟ್‌ ಮಾಡಿ. ಯಾರು ನಿಮಗೆ ಇಷ್ಟ, ಯಾರು ಸಮಾಜಕ್ಕೆ ಒಳ್ಳೆಯದನ್ನು ಮಾಡುತ್ತಾರೆ, ಅವರಿಗೆ ವೋಟ್‌ ಹಾಕಿ. ಯಾವುದಾದರೂ ಕೆಲಸ ಆಗಿಲ್ಲ ಎಂದು ಕೇಳಬೇಕು ಎಂದರೆ ವೋಟ್ ಹಾಕಬೇಕು, ವೋಟ್ ಹಾಕಿ ಕೇಳಿದರೆ ಅದರ ಬೆಲೆ ಜಾಸ್ತಿ ಇರುತ್ತದೆ. ಹಿರಿಯ ನಾಗರಿಕರೇ ಕ್ಯೂ ನಿಂತು ವೋಟ್‌ ಹಾಕ್ತಾ ಇದ್ದರು. ಯುವಕರು ಮೊದಲು ಬಂದು ವೋಟ್‌ ಮಾಡಬೇಕುʼʼಎಂದರು.

ಇದನ್ನೂ ಓದಿ: Lok Sabha Election 2024: ಸ್ಯಾಂಡಲ್‌ವುಡ್‌ ತಾರೆಯರು ಎಲ್ಲೆಲ್ಲಿ ವೋಟ್‌ ಹಾಕ್ತಾರೆ?

ಈ ವೇಳೆ ಪ್ರಕಾಶ್‌ ರಾಜ್‌ ಮಾತನಾಡಿ ʻʻವೋಟ್‌ ಮಾಡುವುದು ಬಹಳ ಮುಖ್ಯ. ದಯವಿಟ್ಟು ಹೆಚ್ಚಿನ ಸಂಖ್ಯೆಯಲ್ಲಿ ಬಂದು ವೋಟ್‌ ಮಾಡಿ ಬದಲಾವಣೆ ತನ್ನಿ ಎಂದು ಮನವಿ ಮಾಡಿದರು.

ಈಗಾಗಲೇ ವೋಟ್‌ ಮಾಡಲು ಅಶ್ವಿನಿ ಪುನೀತ್‌ ರಾಜ್‌ಕುಮಾರ್‌, ರಾಘವೇಂದ್ರ ರಾಜ್‌ಕುಮಾರ್‌ ದಂಪತಿ ಬಂದಿದ್ದಾರೆ.

ಪತ್ನಿ ಸಮೇತ ಹಕ್ಕು ಚಲಾಯಿಸಲು ರವಿಶಂಕರ್ ಕೂಡ ಆಗಮಿಸಿದ್ದರು. ಹೊಸಕೆರೆ ಹಳ್ಳಿ ಮತದಾನ‌ ಕೇಂದ್ರಕ್ಕೆ ರಾಕಿಂಗ್‌ ಸ್ಟಾರ್‌ ಯಶ್‌ ಮತದಾನ ಮಾಡಲು ತಡವಾಗಿ ಬರುತ್ತಿದ್ದಾರೆ. ಪ್ಲಾನ್ ಪ್ರಕಾರ ಇಂದು ಬೆಳಗ್ಗೆ 8:30ಕ್ಕೆ ಯಶ್‌ ಮತಚಲಾಯಿಸಬೇಕಿತ್ತು. ಕಾರಣಾಂತರಗಳಿಂದ 11 ಗಂಟೆ ನಂತರ ವೋಟ್ ಮಾಡಲು ಹೊಸಕೆರೆಹಳ್ಳಿಗೆ ಆಗಮಿಸಲಿದ್ದಾರೆ. ಈಗಾಗಲೇ ಹೊಸಕೆರೆ ಹಳ್ಳಿ ಮತಗಟ್ಟೆಯಲ್ಲಿ ಖಾಕಿ ಕಣ್ಗಾವಲು ಇಟ್ಟಿದೆ. ಯಾವುದೇ ರೀತಿಯ ಗೊಂದಲ, ಜನಜಂಗುಳಿ ಆಗದಂತೆ ಪೊಲೀಸ್ ಕಟ್ಟೆಚ್ಚರ ವಹಿಸಿದ್ದಾರೆ.

ಹೊಸಕೆರೆಹಳ್ಳಿಯಲ್ಲಿ ನಟ ರವಿಶಂಕರ್ ದಂಪತಿ ವೋಟ್‌ ,ಮಾಡಿದರು. ರವಿಶಂಕರ್ ಮಾತನಾಡಿ ʻಇದು ಖುಷಿಗಿಂತ ಹೆಚ್ಚಾಗಿ ಇದು ನಮ್ಮ ಕರ್ತವ್ಯ. 140 ಕೋಟಿ ಜನರನ್ನ ಕಾಯೋ ನಾಯಕನ ಆಯ್ಕೆ ಮಾಡೋ ದಿನ. ಯಾರಿಗೆ ವೋಟ್ ಮಾಡಬೇಕು, ಯಾಕೆ ಮಾಡಬೇಕು ಎನ್ನುವುದನ್ನು ನಿರ್ಧಾರ ಮಾಡಿಕೊಂಡು ಬನ್ನಿ. ಮತ ಗಟ್ಟಗೆ ಬಂದು ಕನ್ ಪ್ಯೂಸ್ ಆಗಬೇಡಿʼʼಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ6 mins ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Shruti Haasan and boyfriend santanu hazarika break up
ಕಾಲಿವುಡ್9 mins ago

Shruti Haasan: ಎರಡನೇ ಬಾಯ್‌ಫ್ರೆಂಡ್‌ ನಿಂದಲೂ ಕಮಲ್‌ ಹಾಸನ್‌ ಪುತ್ರಿ ಬ್ರೇಕಪ್?

Kiran Rao Laapataa Ladies to release on OTT
ಬಾಲಿವುಡ್11 mins ago

Kiran Rao: ಆಮೀರ್ ಖಾನ್ ಮಾಜಿ ಪತ್ನಿ ಸಿನಿಮಾ ಒಟಿಟಿಗೆ ಬಂದೇ ಬಿಡ್ತು! ಎಲ್ಲಿ ಸ್ಟ್ರೀಮಿಂಗ್?

gold rate today tapasi pannu
ಚಿನ್ನದ ದರ32 mins ago

Gold Rate Today: ಮತದಾನದ ದಿನ ಬಂಗಾರದ ದರ ತೇಜಿ, ಬೆಂಗಳೂರಿನಲ್ಲಿ 24K ಚಿನ್ನಕ್ಕೆ ₹440 ಏರಿಕೆ

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 202446 mins ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

lok sabha election 2024
Lok Sabha Election 202451 mins ago

Lok Sabha Election 2024: ಮತದಾರರು ಜಸ್ಟ್‌ ಮಿಸ್‌; ಮತಗಟ್ಟೆ ಸಮೀಪವೇ ನೆಲಕ್ಕುರುಳಿದ ಬೃಹತ್ ಮರ, ಕಾರು ಜಖಂ

ವಿದೇಶ58 mins ago

Indian origin man: ಅಮೆರಿಕದಲ್ಲಿ ಮತ್ತೋರ್ವ ಭಾರತೀಯನ ಹತ್ಯೆ; ಪೊಲೀಸರ ಗುಂಡೇಟಿಗೆ ವ್ಯಕ್ತಿ ಬಲಿ

VVPAT Verification
EXPLAINER1 hour ago

ಚುನಾವಣೆ ಫಲಿತಾಂಶದ ಬಳಿಕ ಅಭ್ಯರ್ಥಿಗೆ ಇವಿಎಂ ಪರಿಶೀಲನೆ ಅವಕಾಶ; ಏನಿದು ಸುಪ್ರೀಂ ಆದೇಶ?

Lok Sabha Election 2024 Youth Congress protest
Lok Sabha Election 20241 hour ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Samantha Ruth Prabhu repurposes her wedding gown
ಟಾಲಿವುಡ್2 hours ago

Samantha Ruth Prabhu: ಮದುವೆ ಗೌನ್‌ ಕತ್ತರಿಸಿ ಹೊಸ ಉಡುಪು ತಯಾರಿಸಿದ ಸಮಂತಾ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ6 mins ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 202446 mins ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 hour ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ7 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ20 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ20 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ23 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌