Site icon Vistara News

Republic Day: ಧ್ವಜಾರೋಹಣ ವೇಳೆ ಗಾಳಿಯಲ್ಲಿ ಗುಂಡು; ಗ್ರಾ.ಪಂ ಅಧ್ಯಕ್ಷೆ ಕಾಲಿಗೆ ಗಾಯ

Republic day

ವಿಜಯಪುರ: ಧ್ವಜಾರೋಹಣ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದರಿಂದ ಗ್ರಾ.ಪಂ ಅಧ್ಯಕ್ಷೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಹಿರೆರೂಗಿ ಗ್ರಾಮದಲ್ಲಿ ನಡೆದಿದೆ. ಗಣರಾಜ್ಯೋತ್ಸವ (Republic Day) ಹಿನ್ನೆಲೆಯಲ್ಲಿ ಧ್ವಜಾರೋಹಣ ಮಾಡುತ್ತಿದ್ದಾಗ ಗ್ರಾ.ಪಂ ಎದುರು ವ್ಯಕ್ತಿಯೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದಾಗ ಅವಘಡ ನಡೆದಿದೆ.

ಹಿರೆರೂಗಿ ಗ್ರಾ.ಪಂ ಅಧ್ಯಕ್ಷೆ ಸೋಮವ್ವ (50) ಗಾಯಾಳು. ಮಲ್ಲು ಗಿನ್ನಿ ಗುಂಡು ಹಾರಿಸಿದ ವ್ಯಕ್ತಿ. ಗ್ರಾ.ಪಂ ಎದುರು ಧ್ವಜಾರೋಹಣ ವೇಳೆ ಮಲ್ಲು ಗಿನ್ನಿ ಗುಂಡು ಹಾರಿಸಿದ್ದಾನೆ. ಈ ವೇಳೆ ಮಿಸ್ ಫೈರ್ ಆಗಿ ಒಂದು ಗುಂಡು ಗಾಳಿಯಲ್ಲಿ, ಮತ್ತೊಂದು ಅಧ್ಯಕ್ಷೆ ತೊಡೆಗೆ ಬಿದ್ದಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | Ram Mandir: ವಿಜಯಪುರ ಆಸ್ಪತ್ರೆಯಲ್ಲಿ ಉಚಿತ ಹೆರಿಗೆ; 5 ದಿನದಲ್ಲಿ 61 ಮಕ್ಕಳ ಜನನ, ಅಲ್ಲೇ ನಾಮಕರಣ

ಆರೋಪಿಯನ್ನು ವಶಕ್ಕೆ ಪಡೆಯಲು ಪೊಲೀಸರು ಯತ್ನ ನಡೆಸಿದ್ದು, ಆತ ಪರಾರಿಯಾಗಿದ್ದಾನೆ. ಗಣರಾಜ್ಯೋತ್ಸವ ವೇಳೆ ಗುಂಡು ಹಾರಿಸಲು ಅವಕಾಶವಿಲ್ಲ. ಈ ಕುರಿತು ವಿಚಾರಣೆ ನಡೆಸಿದ್ದು. ಆತ ಯಾವ ಉದ್ದೇಶಕ್ಕೆ ಹೀಗೆ ಮಾಡಿದ್ದಾನೆ ಎನ್ನುವ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ. ಆತನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Father Kills son : ಕುಡಿಯಲು ಹಣ ಕೊಡದ ಕೋಪ; ಮಗನನ್ನೇ ಗುಂಡಿಕ್ಕಿ ಕೊಂದ ಧೂರ್ತ ತಂದೆ

ಕೊಲೆಯಾದ ನರ್ತನ್‌ ಮತ್ತು ಕೊಲೆಗಾರ ತಂದೆ ಸುರೇಶ್

ನೋಡೋಣ ಸ್ವಲ್ಪ ಹೊತ್ತು ಕಳೆದರೆ ಸರಿಯಾದೀತು ಎಂದು ನರ್ತನ್‌ ನಿರೀಕ್ಷಿಸಿದ್ದರು. ಅದಕ್ಕೆ ಪೂರಕವಾಗಿ ಸುರೇಶ್‌ ಒಳಗಿನಿಂದ ಸ್ವಲ್ಪ ತಣ್ಣಗಿದ್ದಂತೆ ಕಂಡಿತು. ಇತ್ತ ಒಳಗಿನಿಂದ ಸುರೇಶ್‌ ದೊಡ್ಡದೊಂದು ಕೃತ್ಯಕ್ಕೆ ಸಜ್ಜಾಗುತ್ತಿದ್ದರು. ಮಗ ತನ್ನನ್ನು ಕೋಣೆಯೊಳಗೆ ಹಾಡಿ ಹಾಕಿದ್ದರಿಂದ ಸಿಟ್ಟಿಗೆದ್ದ ಅವರು ತಮ್ಮ ಬಳಿ ಇದ್ದ ಲೈಸೆನ್ಸ್‌ ಹೊಂದಿದ ಸಿಂಗಲ್ ಬ್ಯಾರಲ್ ಗನ್ ಅನ್ನು ಹೊರಗೆ ತೆಗೆದು ನೇರವಾಗಿ ಗುಂಡು ಹೊಡೆದರು.
ನಿಜವೆಂದರೆ ಆ ಕೋಣೆಯ ಬಾಗಿಲು ಹಾಕಿತ್ತು. ಅದನ್ನು ಒಡೆಯಲೆಂದು ಅವರು ಬಾಗಿಲಿಗೆ ಗುಂಡು ಹಾರಿಸಿದರು. ಹಾಗೆ ಹಾರಿಸಿದ ಗುಂಡು ಬಾಗಿಲನ್ನು ಒಡೆದುದಲ್ಲದೆ ನೇರವಾಗಿ ಹೊರಗೆ ಕುಳಿತಿದ್ದ ನರ್ತನ್ ಬೋಪಣ್ಣ ಅವರ ತೊಡೆಯ ಮೇಲ್ಭಾಗಕ್ಕೆ ಹೊಕ್ಕಿದೆ.

ಇದನ್ನೂ ಓದಿ: Missing Mystery : ಬೆಂಗಳೂರಿನಿಂದ ಕಾಣೆಯಾದ ಬಾಲಕನ ಪತ್ತೆ ಹಚ್ಚಿದ್ದು ಒಬ್ಬ ಪತ್ರಕರ್ತೆ! ಇಲ್ಲಿದೆ ರೋಚಕ ಕಥೆ!

ಬೆಂಗಳೂರು: ವ್ಯಕ್ತಿಯೊಬ್ಬರು ತನ್ನ ಬೆಳೆದು ನಿಂತ ಮಗನನ್ನೇ ಗುಂಡು ಹಾರಿಸಿ ಕೊಲೆ (father Kills son) ಮಾಡಿ ಘಟನೆ ಗುರುವಾರ ರಾತ್ರಿ ಬೆಂಗಳೂರಿನಲ್ಲಿ (Bangalore News) ನಡೆದಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕರೆಕಲ್​ನ ಮನೆಯಲ್ಲಿ ವಾಸವಾಗಿರುವ ಸುರೇಶ್ ಎಂಬವರೇ ತಮ್ಮ ಮಗ ನರ್ತನ್ ಬೋಪಣ್ಣ (32) ಅವರನ್ನು ಕೊಲೆ ಮಾಡಿದವರು (Man shoots down his own son). ಕುಡಿಯಲು ಹಣ ಕೊಟ್ಟಿಲ್ಲ ಎಂಬ ಕಾರಣಕ್ಕಾಗಿ ಈ ಕೊಲೆ (Murder Case) ನಡೆದಿದೆ.

ಕೊಡಗಿನ ಮೂಲದವರಾದ ನರ್ತನ್‌ ಬೋಪಣ್ಣ ಕರೇಕಲ್‌ನ ಮನೆಯಲ್ಲಿ ತಂದೆ ‌ ಸುರೇಶ್‌ ಮತ್ತು ತಾಯಿ ಜತೆ ವಾಸವಾಗಿದ್ದರು. ನರ್ತನ್‌ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾರೆ. ಮನೆಯಲ್ಲಿ ತಾಯಿ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಸುರೇಶ್‌ಗೆ ಕುಡಿತದ ಹುಚ್ಚು ವಿಪರೀತವಾಗಿದ್ದು, ಇದೇ ಕಾರಣದಿಂದ ಅವರು ತಮ್ಮ ಮಗನನ್ನೇ ಕೊಲೆ ಮಾಡಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಸಿಕ್ಕಿದೆ.

ಮನೆಯಲ್ಲೇ ಇರುತ್ತಿದ್ದ ಸುರೇಶ್‌ ಹೆಂಡತಿಯನ್ನೂ ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ. ಸದಾ ಕಾಲ ಕುಡಿತದ ಗುಂಗಿನಲ್ಲೇ ಇರುತ್ತಿದ್ದ ಸುರೇಶ್‌ ಕುಡಿಯಲು ಹಣ ಬೇಕು ಎಂದು ಮಗನನ್ನು ಪೀಡಿಸುತ್ತಿದ್ದರು. ಗುರುವಾರ ಸಂಜೆಯೂ ಕುಡಿತಕ್ಕೆ ಹಣ ಕೇಳಿ ವಿಪರೀತ ಹಿಂಸೆ ನೀಡಿದ್ದರು. ಹೊಡೆಯಲು ಬಂದಿದ್ದರು. ಇದನ್ನೆಲ್ಲ ನೋಡಿದ ನರ್ತನ್‌ ತನ್ನ ತಂದೆಯನ್ನು ಒಂದು ಕೋಣೆಯೊಳಗೆ ತಳ್ಳಿ ಬಾಗಿಲು ಹಾಕಿದ್ದರು. ಕೋಣೆಯ ಒಳಗಿನಿಂದಲೇ ಬೆದರಿಕೆ ಹಾಕುತ್ತಿದ್ದರು ಸುರೇಶ್‌.

Exit mobile version