Sahitya Sammelana | ಈ ಬಾರಿ ಅದ್ಧೂರಿ ಕನ್ನಡ ಸಾಹಿತ್ಯ ಸಮ್ಮೇಳನ; ಸಿಎಂ ಬೊಮ್ಮಾಯಿ ಘೋಷಣೆ - Vistara News

ಕರ್ನಾಟಕ

Sahitya Sammelana | ಈ ಬಾರಿ ಅದ್ಧೂರಿ ಕನ್ನಡ ಸಾಹಿತ್ಯ ಸಮ್ಮೇಳನ; ಸಿಎಂ ಬೊಮ್ಮಾಯಿ ಘೋಷಣೆ

Sahitya Sammelana | ನವೆಂಬರ್‌ 11ರಿಂದ ಮೂರು ದಿನಗಳ ಕಾಲ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆ ನಡೆಯುತ್ತಿದೆ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟೀಕರಣ ನೀಡಿದ್ದಾರೆ.

VISTARANEWS.COM


on

haveri cm ahavalu
ಹಾವೇರಿ ಪ್ರವಾಸದ ವೇಳೆ ಸಾರ್ವಜನಿಕರಿಂದ ಸಿಎಂ ಬೊಮ್ಮಾಯಿ ಅಹವಾಲು ಸ್ವೀಕರಿಸಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾವೇರಿ: ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (Sahitya Sammelana) ಸಂಬಂಧಪಟ್ಟಂತೆ ಎಲ್ಲ ರೀತಿಯ ಪೂರ್ವಭಾವಿ ತಯಾರಿ ನಡೆಯುತ್ತಿದೆ. ನವೆಂಬರ್‌ ತಿಂಗಳಿನಲ್ಲಿ ಅದ್ಧೂರಿಯಾಗಿ ಸಮ್ಮೇಳನವನ್ನು ಆಚರಣೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಮಯ ಸಾಲುತ್ತಿಲ್ಲ ಎಂದು ಪ್ರತಿ ಬಾರಿಯೂ ಹೇಳಲಾಗುತ್ತದೆ. ಆದರೆ, ಈ ಬಾರಿ ಎಲ್ಲ ಸಿದ್ಧತೆಗಳು ನಡೆಯುತ್ತಿವೆ. ನವೆಂಬರ್‌ನಲ್ಲಿ ನಾವು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ಧೂರಿಯಾಗಿ ಮಾಡಿಯೇ ಮಾಡುತ್ತೇವೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಖಾತೆಗೆ ಬರಲಿಲ್ಲ ೨೦ ಕೋಟಿ ರೂ.
ನವೆಂಬರ್‌ ೧೧ರಿಂದ ಮೂರು ದಿನಗಳ ಕಾಲ ೮೬ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಿಎಂ ಬಸವರಾಜ ಬೊಮ್ಮಾಯಿ ತವರು ಜಿಲ್ಲೆ ಹಾವೇರಿಯಲ್ಲಿ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸ್ವಾಗತ ಸಮಿತಿಯನ್ನು ರಚಿಸಲಾಗಿತ್ತು. ಅಲ್ಲದೆ, ಕನ್ನಡ ಸಂಸ್ಕೃತಿ ಇಲಾಖೆಯಿಂದ ೧೫ ಕೋಟಿ ರೂಪಾಯಿ, ಪರಿಷತ್‌ಗೆ ನೀಡಲಾಗಿರುವ ಅನುದಾನದಲ್ಲಿ ೫ ಕೋಟಿ ರೂಪಾಯಿ ಬಳಕೆಗೆ ಅನುಮತಿ ನೀಡಿ ಆದೇಶ ಹೊರಡಿಸಲಾಗಿತ್ತು. ಆದರೆ, ಸಮ್ಮೇಳನಕ್ಕೆ ಸರಿಸುಮಾರು ೪೨ ದಿನಗಳಷ್ಟೇ ಬಾಕಿ ಇದ್ದರೂ ಯಾವುದೇ ರೀತಿಯ ಕಾರ್ಯ ಆಗದೇ ಇರುವುದು, ಸ್ವಾಗತ ಸಮಿತಿ ಖಾತೆಗೆ ಹಣ ಹಾಕದೇ ಇರುವುದು ಸಾರಸ್ವತ ಲೋಕದ ಅಸಮಾಧಾನಕ್ಕೆ ಕಾರಣವಾಗಿತ್ತು. ಈಗ ಈ ಬಗ್ಗೆ ಸಿಎಂ ಬೊಮ್ಮಾಯಿ ಸ್ಪಷ್ಟೀಕರಣ ನೀಡಿದ್ದು, ಅದ್ಧೂರಿ ಆಚರಣೆ ಮಾಡುವುದಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ | ಅಂತಾರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ಕರ್ನಾಟಕ ಶೀಘ್ರ ಸೇರ್ಪಡೆ: ಸಿಎಂ ಬೊಮ್ಮಾಯಿ

ಬಜೆಟ್‌ನಲ್ಲಿ ಹೇಳಿರುವಂತೆ ಕಾರ್ಯಗತ
ಕೆಎಂಎಫ್ ಯೂನಿಯನ್ ಕಚೇರಿ ಉದ್ಘಾಟನೆಗಾಗಿ ನಾನು ಹಾವೇರಿಗೆ ಬಂದಿದ್ದೇನೆ. ಬಜೆಟ್‌ನಲ್ಲಿ ಈ ಬಗ್ಗೆ ಘೋಷಣೆ ಮಾಡಿದ್ದೆ. ಇದರಿಂದ ನಮ್ಮ ಹಾಲು ಉತ್ಪಾದಕರಿಗೆ ಅನುಕೂಲವಾಗುತ್ತದೆ. ಇಂಡಸ್ಟ್ರಿಯಲ್‌ ಪಾರ್ಕ್‌ ಇರಬಹುದು, ನೀರಾವರಿ ಯೋಜನೆಗಳಿರಬಹುದು ಎಲ್ಲವನ್ನೂ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬಜೆಟ್‌ನಲ್ಲಿ ಹೇಳಿದಂತೆ ಹಂತ ಹಂತವಾಗಿ ಕಾರ್ಯಗತ ಮಾಡುತ್ತಿದ್ದೇನೆ ಎಂದು ಸಿಎಂ ತಿಳಿಸಿದರು.

ಪಿಎಫ್‌ಐ ಈಗಾಗಲೇ ಬ್ಯಾನ್ ಆಗಿದೆ. ಇದು ಹಲವು ರೂಪಾಂತರ ಪಡೆದುಕೊಂಡಿರುವುದು ಎಲ್ಲರಿಗೂ ಗೊತ್ತಿದೆ. ಮೊದಲು ಸಿಮಿ ಇತ್ತು‌, ಸಿಮಿಯಿಂದ ಕೆಎಫ್‌ಡಿ ಆಯ್ತು. ನಂತರ ಪಿಎಫ್‌ಐ ಆಯ್ತು. ಎಸ್‌ಡಿಪಿಐ ಚುನಾವಣಾ ಆಯೋಗದಿಂದ ನೋಂದಣಿಯಾಗಿರುವ ರಾಜಕೀಯ ಪಕ್ಷವಾಗಿದೆ. ಅದರ ಬಗ್ಗೆ ಬೇರೆ ರೀತಿಯದ್ದೇ ಕಾನೂನುಗಳಿವೆ. ಆ ಕುರಿತು ಕೇಂದ್ರ ಸರ್ಕಾರ ಅದರದ್ದೇ ಆದ ಕ್ರಮ ಜರುಗಿಸಲಿದೆ ಎಂದು ಸಿಎಂ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಗುಂಡ್ಲುಪೇಟೆಯಲ್ಲಿ ಜೋಡೋ ಯಾತ್ರೆ ಫ್ಲೆಕ್ಸ್ ಹರಿದು ಹಾಕಿರುವ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಬಿಜೆಪಿಯವರು ಎಲ್ಲಿಯೂ ಫ್ಲೆಕ್ಸ್‌ ಹಾಕಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿರುವ ಬಗ್ಗೆ ಮಾಧ್ಯಮದವರು ಸಿಎಂ ಪ್ರಶ್ನಿಸಿದಾಗ, “ಡಿ.ಕೆ.ಶಿವಕುಮಾರ್‌ ಇರಲಿ, ಯಾರೇ ಇರಲಿ ಫ್ಲೆಕ್ಸ್ ಹಾಕಬೇಕಾದರೆ ಅದಕ್ಕೆ ಅನುಮತಿ ಪಡೆಯಬೇಕು. ಯಾವುದೇ ರಾಜಕೀಯ ಪಕ್ಷದ ಫ್ಲೆಕ್ಸ್ ಹರಿಯುವ ಅಗತ್ಯವಿಲ್ಲ. ಜನರಿಗೆ ಗೊತ್ತಿದೆ. ದೇಶವನ್ನು ಯಾರು ಜೋಡೋ ಮಾಡಿದ್ದಾರೆ? ಯಾರು ತೋಡೋ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.

ಪಿಎಫ್‌ಐ ಬ್ಯಾನ್ ಎಲೆಕ್ಷನ್ ಗಿಮಿಕ್ ಎಂಬ ಬಿ.ಕೆ.ಹರಿಪ್ರಸಾದ್‌ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅವರು ಬೇರೆ ಏನನ್ನೂ ವ್ಯಾಖ್ಯಾನ ಮಾಡಲು ಸಾಧ್ಯವಿಲ್ಲ. ಇಷ್ಟು ವರ್ಷ ವಿದ್ವಂಸಕ ಕೃತ್ಯ ನಮ್ಮೆದುರಲ್ಲೇ ನಡೆದಿದೆ‌. ಕೊಲೆ, ಭಯೋತ್ಪಾದಕ ಚಟುವಟಿಕೆ ನಡೆದಿವೆ. ಇದೇ ಕಾಂಗ್ರೆಸ್ ವಿಧಾನಸಭೆ ಒಳಗಡೆ ಹೊರಗಡೆ ಪಿಎಫ್‌ಐ ಬ್ಯಾನ್ ಮಾಡಿ ಎಂದು ಕೂಗಿಕೊಂಡಿತ್ತು. ಈಗ ಬ್ಯಾನ್ ಮಾಡಿದಾಗ ಹೀಗೆ ಮಾತನಾಡಿದರೆ ಏನು? ಇದಕ್ಕೆ ಯಾವುದೇ ಅರ್ಥವಿಲ್ಲ ಎಂದು ಸಿಎಂ ಹೇಳಿದರು.

ಕಾಂಗ್ರೆಸ್‌ನ ಭಾರತ್ ಜೋಡೋ ಅಭಿಯಾನಕ್ಕೆ ಕರ್ನಾಟಕದಲ್ಲಿ ಸಾಹಿತಿಗಳು ಬೆಂಬಲ ಕೊಡುವುದಾಗಿ ನೀಡಿರುವ ಹೇಳಿಕೆ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ, ನಮ್ಮ ನಾಡಿನಲ್ಲಿ ಹಲವಾರು ಸಾಹಿತಿಗಳು ಇದ್ದಾರೆ. ಹೀಗೆ ಪರ-ವಿರೋಧ ಇರುವುದು ಸಾಮಾನ್ಯ. ಒಂದಷ್ಟು ಸಾಹಿತಿಗಳು ಕಾಂಗ್ರೆಸ್‌ಗೆ ಬೆಂಬಲ ನೀಡಿದರೆ, ಮತ್ತಷ್ಟು ಜನ ನಮ್ಮ ಬಿಜೆಪಿಗೆ ಸಾಥ್‌ ನೀಡುತ್ತಾರೆ ಎಂದು ಸಿಎಂ ಬೊಮ್ಮಾಯಿ ಉತ್ತರಿಸಿದರು. ಹಾವೇರಿ ಭೇಟಿ ವೇಳೆ ಮುಖ್ಯಮಂತ್ರಿ ಬೊಮ್ಮಾಯಿ ಸಾರ್ವಜನಿಕರಿಂದ‌ ಅಹವಾಲು ಸ್ವೀಕರಿಸಿದರು.

ಇದನ್ನೂ ಓದಿ | PFI banned | ಪಿಎಫ್‌ಐ ಆಯ್ತು, ಈಗ ಎಸ್‌ಡಿಪಿಐ ಮೇಲೆ ಚುನಾವಣಾ ಆಯೋಗ ಕಣ್ಣು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Sindhuri Vs Roopa: ಆರೋಪ-ಪ್ರತ್ಯಾರೋಪ ಬಿಟ್ಟು ಸಂಧಾನದತ್ತ ಗಮನ ಹರಿಸಿ; ರೂಪ-ರೋಹಿಣಿಗೆ ಸುಪ್ರೀಂ ಕೋರ್ಟ್‌ ಸಲಹೆ

Sindhuri Vs Roopa:ಐಪಿಎಸ್‌ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಮತ್ತು ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ವಿವಾದ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಒಬ್ಬರು ಮತ್ತೊಬ್ಬರ ವಿರುದ್ಧ ಆರೋಪಗಳ ಮಾಡುವುದನ್ನು ಮುಂದುವರಿಸುವುದರ ಬದಲಾಗಿ ಸಂಧಾನ ಸಾಧ್ಯತೆಯತ್ತ ಗಮನಹರಿಸುವಂತೆ ಸಲಹೆ ನೀಡಿದೆ. ಇಬ್ಬರು ಒಮ್ಮತದ ನಿರ್ಧಾರಕ್ಕೆ ಬಂದು ಆರೋಪಗಳನ್ನು ಹಿಂಪಡೆಯಲು ಒಪ್ಪಿದರೆ ಬಾಕಿ ಇರುವ ಪ್ರಕರಣಗಳು ಸೇರಿ ಇಬ್ಬರ ನಡುವೆ ಬಾಕಿ ಇರುವ ಎಲ್ಲಾ ದಾವೆಗಳು ರದ್ದಾಗಲಿವೆ ಎಂದು ನ್ಯಾಯಾಲಯ ಹೇಳಿದೆ.

VISTARANEWS.COM


on

Sindhuri Vs Roopa
Koo

ನವದೆಹಲಿ: ಐಪಿಎಸ್‌ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಮತ್ತು ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ (Sindhuri Vs Roopa) ನಡುವಿನ ವಿವಾದ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌(Supreme Court), ಒಬ್ಬರು ಮತ್ತೊಬ್ಬರ ವಿರುದ್ಧ ಆರೋಪಗಳ ಮಾಡುವುದನ್ನು ಮುಂದುವರಿಸುವುದರ ಬದಲಾಗಿ ಸಂಧಾನ ಸಾಧ್ಯತೆಯತ್ತ ಗಮನಹರಿಸುವಂತೆ ಸಲಹೆ ನೀಡಿದೆ. ಸಿಂಧೂರಿ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿರುವ ಕ್ರಿಮಿನಲ್‌ ಮಾನಹಾನಿ ಪ್ರಕರಣ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್‌(Karnataka High court) ನಿರಾಕರಿಸಿರುವುದನ್ನು ಪ್ರಶ್ನಿಸಿ ರೂಪಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿಗಳಾದ ಅಭಯ್‌ ಶ್ರೀನಿವಾಸ್‌ ಓಕ್‌ ಮತ್ತು ಪಂಕಜ್‌ ಮಿತ್ತಲ್‌ ಅವರ ನೇತೃತ್ವದ ವಿಭಾಗೀಯ ಪೀಠ, ಇಬ್ಬರೂ ಅಧಿಕಾರಿಗಳು ಸಾರ್ವಜನಿಕ ಸೇವೆಯಲ್ಲಿದ್ದು, ಈ ನಡತೆ ಮುಂದುವರಿಯಬಾರದು. ಇಬ್ಬರೂ ಯುವ ಅಧಿಕಾರಿಗಳಾಗಿದ್ದು, ಈ ಹಣಾಹಣಿ ಮುಂದುವರಿದರೆ ಅವರ ವೃತ್ತಿಗೆ ಹಾನಿಯಾಗುತ್ತದೆ” ಎಂದು ಹೇಳಿದೆ.

ಇಬ್ಬರು ಒಮ್ಮತದ ನಿರ್ಧಾರಕ್ಕೆ ಬಂದು ಆರೋಪಗಳನ್ನು ಹಿಂಪಡೆಯಲು ಒಪ್ಪಿದರೆ ಬಾಕಿ ಇರುವ ಪ್ರಕರಣಗಳು ಸೇರಿ ಇಬ್ಬರ ನಡುವೆ ಬಾಕಿ ಇರುವ ಎಲ್ಲಾ ದಾವೆಗಳು ರದ್ದಾಗಲಿವೆ ಎಂದು ನ್ಯಾಯಾಲಯ ಹೇಳಿದೆ. ಕಳೆದ ಡಿಸೆಂಬರ್‌ 15ರಂದು ಪ್ರಕರಣಕ್ಕೆ ತಡೆ ನೀಡಿದ್ದ ಸುಪ್ರೀಂಕೋರ್ಟ್‌ ಮಾಧ್ಯಮಗಳಲ್ಲಿ ಮಾತನಾಡದಂತೆ ಇಬ್ಬರು ಅಧಿಕಾರಿಗಳಿಗೆ ಆದೇಶಿಸಿತ್ತು. ಅಲ್ಲದೇ, ವಿವಾದ ಬಗೆಹರಿಸಿಕೊಳ್ಳಲು ಸಂಧಾನಕ್ಕೆ ಮುಂದಾಗುವಂತೆಯೂ ಸಲಹೆ ನೀಡಿತ್ತು.

ರೂಪಾ ಮೌದ್ಗಿಲ್ ವಿರುದ್ಧ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ತಡೆ
ಅಧಿಕಾರಿಗಳಿಬ್ಬರ ಕಚ್ಚಾಟಕ್ಕೆ ಸಂಬಂಧಿಸಿದಂತೆ ಸರ್ಕಾರವು ಇಲಾಖಾ ತನಿಖೆ ನಡೆಸುತ್ತಿದ್ದರೆ, ಈ ವಿಚಾರದಲ್ಲಿ ಮುಂದುವರಿಯದಂತೆ ಸರ್ಕಾರಕ್ಕೂ ಸೂಚಿಸಲಾಗುವುದು ಎಂದು ಹೇಳಿತು. ಸಿಂಧೂರಿ ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿದ್ಧಾರ್ಥ್‌ ಲೂಥ್ರಾ ಅವರು ಸಿಂಧೂರಿ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಲು ಬಯಸಿಲ್ಲ. ಪರಿಹಾರ ಸಾಧ್ಯತೆಯ ಬಗ್ಗೆ ಸಿಂಧೂರಿ ಜೊತೆ ಚರ್ಚಿಸಲು ಹೆಚ್ಚಿನ ಕಾಲಾವಕಾಶ ಬೇಕು ಎಂದರು. ಇದನ್ನು ಆಲಿಸಿದ ಪೀಠವು ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ. ಡಿ ರೂಪಾ ಪರವಾಗಿ ಹಿರಿಯ ವಕೀಲ ಆದಿತ್ಯ ಸೋಂಧಿ ವಾದಿಸಿದರು.

ಏನಿದು ಪ್ರಕರಣ?

ಐಪಿಎಸ್‌ ಅಧಿಕಾರಿಯಾಗಿರುವ ರೂಪಾ ಅವರು 2023ರ ಫೆಬ್ರವರಿ 18 ಮತ್ತು 19ರಂದು ತಮ್ಮ ಫೇಸ್‌ಬುಕ್ ಅಕೌಂಟ್‌ನಲ್ಲಿ ರೋಹಿಣಿ ಸಿಂಧೂರಿ ಅವರ ಬಗ್ಗೆ ಸಾಲು ಸಾಲು ಆರೋಪಗಳನ್ನು ಮಾಡಿದ್ದರು. ರೋಹಿಣಿ ಸಿಂಧೂರಿ ಅವರು ಮನೆ ಹಾಳು ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಯಾಗಿದ್ದ ಡಿ.ಕೆ. ರವಿ ಅವರ ಸಾವನ್ನೂ ತಳುಕು ಹಾಕಿದ ರೂಪಾ ಅವರು ಇತರ ಐಎಎಸ್‌ ಅಧಿಕಾರಿಗಳಿಗೆ ಅಸಭ್ಯ ಚಿತ್ರಗಳನ್ನು ರಾತ್ತಿ ಹೊತ್ತು ಕಳುಹಿಸುತ್ತಿದ್ದಾರೆ. ಬೇರೆ ಐಎಎಸ್‌ ಅಧಿಕಾರಿಗಳ ಮನೆ ಒಡೆಯಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ:Human trafficking: ಕೆಲಸ ಕೊಡಿಸೋದಾಗಿ ನಂಬಿಸಿ ರಷ್ಯಾ-ಉಕ್ರೇನ್‌ ಯುದ್ಧ ಪೀಡಿತ ಪ್ರದೇಶಕ್ಕೆ ರವಾನೆ-ಇಬ್ಬರು ಅರೆಸ್ಟ್‌

ಇದು ಭಾರಿ ಸಂಚಲನವನ್ನು ಸೃಷ್ಟಿಸಿತ್ತು. ಇದರ ವಿರುದ್ಧ ರೋಹಿಣಿ ಸಿಂಧೂರಿ ಅವರು ಕೋರ್ಟ್‌ ಮೆಟ್ಟಿಲು ಹತ್ತಿದ್ದರು. ಈ ನಡುವೆ, ರಾಜ್ಯ ಸರ್ಕಾರ ಇಬ್ಬರೂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಲ್ಲದೆ, ಅವರನ್ನು ಸೇವೆಯಿಂದ ಮುಕ್ತಿಗೊಳಿಸಿ ರಜೆ ಮೇಲೆ ಕಳುಹಿಸಿತ್ತು. ಇದೀಗ ವಾದ-ವಿವಾದಗಳ ಹಂತ ಮುಗಿದು ಇನ್ನು ರೂಪಾ ಮೌದ್ಗಿಲ್‌ ವಿಚಾರಣೆ ಎದುರಿಸಬೇಕಾಗುವ ಹಂತ ಬಂದಿದೆ. ಕೆಲವು ದಿನಗಳ ಹಿಂದಷ್ಟೇ ಹೈಕೋರ್ಟ್‌ ಮಾನನಷ್ಟ ಮೊಕದ್ದಮೆ ರದ್ದು ಕೋರಿದ್ದ ರೂಪಾ ಅವರ ಮನವಿಯನ್ನು ತಿರಸ್ಕರಿಸಿತ್ತು.

Continue Reading

ಕ್ರೈಂ

Hanuman Flag: ಕೆರಗೋಡು ಹನುಮಧ್ವಜ ಪ್ರಕರಣದ 3 ಹೋರಾಟಗಾರರ ಮೇಲೆ ರೌಡಿಶೀಟ್

Hanuman Flag: ಕೆರಗೋಡು ಹನುಮಧ್ವಜ ಹೋರಾಟ ದೇಶಾದ್ಯಂತ ಬಾರೀ ಸುದ್ದಿ ಮಾಡಿತ್ತು. ಹನುಮಧ್ವಜ ಹೋರಾಟದ ಸಂದರ್ಭ ಐಪಿಸಿ ಸೆಕ್ಷನ್ 143, 341, 353, 149ರ ಅಡಿಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿತ್ತು. ಅನ್ಯಕೋಮಿನವರನ್ನು ಹೆದರಿಸುವುದು, ಬೆದರಿಸುವುದು ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾರಣ ಕೊಟ್ಟು ನೋಟಿಸ್ ಜಾರಿ ಮಾಡಲಾಗಿದೆ.

VISTARANEWS.COM


on

hanuman flag keragodu mandya
Koo

ಮಂಡ್ಯ: ಕೆರಗೋಡು ಧ್ವಜಸ್ತಂಭ (Keragodu) ಹೋರಾಟ ಪ್ರಕರಣದಲ್ಲಿ, ಹನುಮಧ್ವಜ (Hanuman Flag) ಹಾರಾಡಿಸುವ ಕುರಿತು ಹೋರಾಟ ಮಾಡಿದವರ ಮೇಲೆ ರೌಡಿ ಶೀಟರ್ (Rowdy Sheet) ಅಸ್ತ್ರ ಬಳಸಲು ಗೃಹ ಇಲಾಖೆ (Home ministry) ಮುಂದಾಗಿದೆ.

ಧ್ವಜಸ್ತಂಭದಲ್ಲಿ ಹನುಮ ನೆಡಲು ಹೋರಾಟ ನಡೆಸಿದ್ದ ಮೂವರಿಗೆ ಮಂಡ್ಯದ ಕೆರಗೋಡು ಪೊಲೀಸರಿಂದ ರೌಡಿ ಶೀಟರ್ ತೆರೆಯುವ ನೋಟಿಸ್ ಜಾರಿ ಮಾಡಲಾಗಿದೆ. ಬಾಲಕೃಷ್ಣ @ ಚಿಕ್ಕಬಳ್ಳಿ ಬಾಲು, ಕಾರ್ತಿಕ್ ಮತ್ತು ಹರೀಶ್‌ಗೆ ಈ ಕುರಿತು ನೋಟೀಸ್ ನೀಡಲಾಗಿದೆ.

ಕೆರಗೋಡಿನಲ್ಲಿ ಹನುಮಧ್ವಜಕ್ಕಾಗಿ ಈ ಮೂವರು ಹೋರಾಟ ನಡೆಸಿದ್ದರು. ಕೆರಗೋಡು ಹನುಮಧ್ವಜ ಹೋರಾಟ ದೇಶಾದ್ಯಂತ ಬಾರೀ ಸುದ್ದಿ ಮಾಡಿತ್ತು. ಹನುಮಧ್ವಜ ಹೋರಾಟದ ಸಂದರ್ಭ ಐಪಿಸಿ ಸೆಕ್ಷನ್ 143, 341, 353, 149ರ ಅಡಿಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿತ್ತು. ಅನ್ಯಕೋಮಿನವರನ್ನು ಹೆದರಿಸುವುದು, ಬೆದರಿಸುವುದು ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾರಣ ಕೊಟ್ಟು ನೋಟಿಸ್ ಜಾರಿ ಮಾಡಲಾಗಿದೆ.

7 ದಿನಗಳ ಒಳಗೆ ಕೆರಗೋಡು ಪೊಲೀಸ್ ಠಾಣೆಗೆ ಹಾಜರಾಗಿ ನೋಟಿಸ್‌ಗೆ ಉತ್ತರಿಸುವಂತೆ ಸೂಚನೆ ನೀಡಲಾಗಿದೆ. ನೋಟಿಸ್ ಬಳಿಕ ಹನುಮಧ್ವಜ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದೂಪರ ಕಾರ್ಯಕರ್ತರನ್ನು ಹೀಗೆ ಹತ್ತಿಕ್ಕಲಾಗುತ್ತಿದೆ ಎಂದು ರಾಜ್ಯ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ.

ಏನಿದು ಮಂಡ್ಯದ ಹನುಮಧ್ವಜ ಕೇಸ್?‌

ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಗ್ರಾಮಸ್ಥರು ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಗ್ರಾಮದ 108 ಅಡಿ ಧ್ವಜಸ್ತಂಭದಲ್ಲಿ ಹನುಮ ಧ್ವಜವನ್ನು ಹಾರಿಸಿದ್ದರು. ಜನವರಿ 22ರಂದು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿತು. ಇದರ ನೆನಪಾಗಿ ಕೆರಗೋಡು ಗ್ರಾಮದಲ್ಲಿ 108 ಅಡಿ ಎತ್ತರ ಧ್ವಜಸ್ತಂಭದ ಮೇಲೆ ಹನುಮ ಧ್ವಜ ಹಾರಿಸಲು ಗ್ರಾಮಸ್ಥರು ನಿರ್ಧರಿಸಿದ್ದರು. ಧ್ವಜ ಹಾರಿಸಲು ನಿಶ್ಚಯಿಸಿದ ಜಾಗ ಗ್ರಾಮ ಪಂಚಾಯಿತಿಗೆ ಸೇರಿದ್ದರಿಂದ ಅನುಮತಿ ಕೋರಿ ಗ್ರಾಮ ಪಂಚಾಯಿತಿಗೆ ಮನವಿ ಮಾಡಿದ್ದರು. ಆದರೆ, ಗ್ರಾಮ ಪಂಚಾಯಿತಿ “ರಾಷ್ಟ್ರ ಧ್ವಜ ಮತ್ತು ನಾಡಧ್ವಜ” ಹೊರತುಪಡಿಸಿ ಯಾವುದೇ ಧಾರ್ಮಿಕ/ ರಾಜಕೀಯ ಧ್ವಜವನ್ನು ಹಾರಿಸುವಂತಿಲ್ಲವೆಂದು ಅನುಮತಿಯನ್ನು ನಿರಾಕರಣೆ ಮಾಡಿತ್ತು.

ಆದರೂ ಗ್ರಾಮಸ್ಥರು ಮತ್ತು ಹಿಂದು ಕಾರ್ಯಕರ್ತರು ಹನುಮ ಧ್ವಜ ಹಾರಿಸಿದ್ದರು. ಇದ್ದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಕೊನೆಗೆ ಈ ವಿಚಾರ ಮತ್ತೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಚರ್ಚೆಗೆ ಬಂದಿದೆ. ಅಲ್ಲಿ 22 ಸದಸ್ಯ ಬಲದ ಗ್ರಾಮ ಪಂಚಾಯಿತಿಯಲ್ಲಿ ಹನುಮ ಧ್ವಜ ಹಾರಾಟಕ್ಕೆ 20 ಸದಸ್ಯರು ಬೆಂಬಲ ವ್ಯಕ್ತಪಡಿಸಿದರು. ಬಳಿಕ ಗ್ರಾಮ ಪಂಚಾಯತ್​ ಸದಸ್ಯರು ನಡಾವಳಿ ರಚಿಸಿ, ವಿವಾದವನ್ನು ಇತ್ಯರ್ಥ ಪಡಿಸಿದ್ದರು.

ಆದರೆ, ಸರ್ಕಾರಿ ಜಾಗದಲ್ಲಿ ಹನುಮ ಧ್ವಜ ಹಾರಿಸಲಾಗಿದೆ, ಇದನ್ನು ತೆರವುಗೊಳಿಸುವಂತೆ ಜಿಲ್ಲಾಡಳಿತ ಮೌಖಿಕ ಆದೇಶವನ್ನು ಹೊರಡಿಸಿತ್ತು. ಹೀಗಾಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೀಣಾ ಅವರು ತೆರವುಗೊಳಿಸಲು ಮುಂದಾದರು. ಇದಕ್ಕೆ ಗ್ರಾಮಸ್ಥರು ಅಡ್ಡಿಪಡಿಸಿ ಪ್ರತಿಭಟಿಸಿದ್ದರು. ಹೀಗಾಗಿ ಅಲ್ಲಿಂದ ನಿರ್ಗಮಿಸಿದ್ದ ಅಧಿಕಾರಿಗಳು ಶನಿವಾರ (ಜ.27) ರಾತ್ರಿ ಪುನಃ ಬಂದು ಹನುಮಧ್ವಜ ತೆರವಿಗೆ ಮುಂದಾದರು. ಮುಂಜಾನೆ 3 ಗಂಟೆ ಹೊತ್ತಿಗೆ ಮಂಡ್ಯ ಎಸಿ ಶಿವಮೂರ್ತಿ, ತಹಸೀಲ್ದಾರ್ ಶಿವಕುಮಾರ್ ಬಿರಾದರ್ ನೇತೃತ್ವದಲ್ಲಿ ತೆರವಿಗೆ ಮುಂದಾಗುತ್ತಿದ್ದಂತೆ ಗ್ರಾಮಸ್ಥರಿಗೆ ವಿಷಯ ತಿಳಿದು ಬಂದು ಪ್ರತಿಭಟನೆ ನಡೆಸಿದ್ದರು. ಆದರೂ ಹನುಮಧ್ವಜ ತೆರವು ಮಾಡಲಾಗಿತ್ತು.

ನಂತರ ಈ ಪ್ರಕರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಕೈಜೋಡಿಸಿದ್ದವು. ಕೆರಗೋಡು ಹಾಗೂ ಮಂಡ್ಯದಲ್ಲಿ ಹನುಮಧ್ವಜ ಮರು ಸ್ಥಾಪನೆಗೆ ಆಗ್ರಹಿಸಿ ಪಾದಯಾತ್ರೆ ನಡೆದಿತ್ತು. ಫೆ.7ರಂದು ಮಂಡ್ಯ ಬಂದ್‌ಗೆ ಕರೆ ನೀಡಲಾಗಿತ್ತು. ಕೆರಗೋಡು ಗ್ರಾಮದಲ್ಲಿ ಮನೆಮನೆ ಮೇಲೆ ಹನುಮಧ್ವಜ ಹಾರಿಸಿ ಪ್ರತಿಭಟಿಸಲಾಗಿತ್ತು.

ಇದನ್ನೂ ಓದಿ: Hanuman Flag: ಹನುಮಧ್ವಜ ವಿವಾದ; ಇಂದು ಮಂಡ್ಯ ಬಂದ್‌ಗೆ ಹಿಂದೂ ಸಂಘಟನೆಗಳ ಕರೆ; ಬೈಕ್‌ ರ್‍ಯಾಲಿ

Continue Reading

ಕ್ರೈಂ

Prajwal Revanna Case: ಗಡುವು ಮುಗೀತು, ಬೆಂಗಳೂರಿಗೆ ಹೊರಟರಾ ಪ್ರಜ್ವಲ್‌ ರೇವಣ್ಣ?

Prajwal Revanna Case: ಈಗಾಗಲೇ ಇಂಟರ್‌ಪೋಲ್ ಮೂಲಕ 196 ದೇಶಗಳಿಗೆ ಆರೋಪಿ ಬಗ್ಗೆ ವಿವರವಾದ ಮಾಹಿತಿಯನ್ನು ಗೃಹ ಸಚಿವಾಲಯ ನೀಡಿದೆ. ವಿಚಾರಣೆಗೆ ಹಾಜರಾಗದಿದ್ದರೆ ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ ಒದಗಲಿದೆ. ಹೀಗಾಗಿ, ಮೇ 15ರ ಮಧ್ಯರಾತ್ರಿ ಪ್ರಜ್ವಲ್ ಬೆಂಗಳೂರಿಗೆ ಬರಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಏರ್‌ಪೋರ್ಟ್ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ರವಾನಿಸಲಾಗಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ವಿರುದ್ಧ ದಾಖಲಾಗಿರುವ ಅತ್ಯಾಚಾರ (pen drive case) ಪ್ರಕರಣದಲ್ಲಿ, ಎಸ್‌ಐಟಿ (SIT) ಮುಂದೆ ಹಾಜರಾಗಲು ಪ್ರಜ್ವಲ್‌ ಕೇಳಿರುವ ಕಾಲಾವಕಾಶ ನಿನ್ನೆಗೆ ಮುಕ್ತಾಯವಾಗಿದೆ. ಆದರೆ ಎಸ್‌ಐಟಿ ಎದುರು ಅವರು ಹಾಜರಾಗುವ ಯಾವುದೇ ಸುಳಿವು ತೋರಿಸಿಲ್ಲ. ಹೀಗಾಗಿ ಪ್ರಜ್ವಲ್‌ ಮುಂದಿನ ನಡೆ ಏನು ಎಂಬ ಕುತೂಹಲ ಮೂಡಿದೆ.

ಒಂದೆಡೆ ತಂದೆ ಎಚ್‌.ಡಿ ರೇವಣ್ಣ ಅವರು ಬಂಧನಕ್ಕೊಳಗಾಗಿ ಈಗಾಗಲೇ ಎಸ್‌ಐಟಿ ಕಸ್ಟಡಿಯಲ್ಲಿದ್ದಾರೆ. ನ್ಯಾಯಾಲಯ ಅವರಿಗೆ ನಾಲ್ಕು ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಅದು ಇಂದಿಗೆ ಮುಕ್ತಾಯವಾಗುತ್ತಿದ್ದು, ಜಾಮೀನು ಅರ್ಜಿ ಇಂದು ವಿಚಾರಣೆಯಾಗಲಿದೆ. ಅವರಿಗೆ ಜೈಲಾ, ಬೇಲಾ ಎಂಬುದು ಇಂದು ಫಿಕ್ಸ್‌ ಆಗಲಿದೆ.

ಪ್ರಜ್ವಲ್‌ಗೂ, ವಿಚಾರಣೆಗೆ ಹಾಜರಾಗಲು ಏಪ್ರಿಲ್ 30ರಂದೇ ಎಸ್‌ಐಟಿ ನೋಟಿಸ್ ಕೊಟ್ಟಿದೆ. ಆದರೆ ಮೇ 1ರಂದು ತಮ್ಮ ವಕೀಲ ಅರುಣ್ ಜಿ. ಮೂಲಕ ಪ್ರಜ್ವಲ್‌ 7 ದಿನ ಕಾಲಾವಕಾಶ ಕೇಳಿದ್ದರು. “ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನನ್ನ ವಕೀಲರ ಮೂಲಕ CID ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ” ಎಂದು ಫೇಸ್‌ಬುಕ್ ಪೋಸ್ಟ್ ಮಾಡಿದ್ದರು.

ಅದರಂತೆ ಪ್ರಜ್ವಲ್ ಪರ ವಕೀಲ ಅರುಣ್, ಎಸ್ಐಟಿ ಬಳಿ ಏಳು ದಿನ ಕಾಲಾವಕಾಶ ಕೇಳಿದ್ದರು. ಏಳು ದಿನ ಕಾಲಾವಕಾಶ ನೀಡಲು ನಿರಾಕರಿಸಿದ್ದ ಎಸ್ಐಟಿ ಅಧಿಕಾರಿಗಳು, ಕೂಡಲೇ ಹಾಜರಾಗುವಂತೆ ಹೇಳಿದ್ದರು. ಆದರೆ ಪ್ರಜ್ವಲ್‌ ಬಂದಿರಲಿಲ್ಲ. ಇದೀಗ ಪ್ರಜ್ವಲ್ ತಾವೇ ಕೇಳಿಕೊಂಡಿದ್ದ ಹಾಗೆ ವಿಚಾರಣೆಗೆ ಹಾಜರಾಗಲು ಕೇಳಿದ್ದ ಕಾಲಾವಕಾಶ ಮೇ 07ಕ್ಕೆ ಮುಕ್ತಾಯವಾಗಿದೆ.

ಈಗಾಗಲೇ ಇಂಟರ್‌ಪೋಲ್ ಮೂಲಕ 196 ದೇಶಗಳಿಗೆ ಆರೋಪಿ ಬಗ್ಗೆ ವಿವರವಾದ ಮಾಹಿತಿಯನ್ನು ಗೃಹ ಸಚಿವಾಲಯ ನೀಡಿದೆ. ವಿಚಾರಣೆಗೆ ಹಾಜರಾಗದಿದ್ದರೆ ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ ಒದಗಲಿದೆ. ಹೀಗಾಗಿ, ಮೇ 15ರ ಮಧ್ಯರಾತ್ರಿ ಪ್ರಜ್ವಲ್ ಬೆಂಗಳೂರಿಗೆ ಬರಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಏರ್‌ಪೋರ್ಟ್ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ರವಾನಿಸಲಾಗಿದೆ.

15ನೇ ತಾರೀಖು LH764 ವಿಮಾನದಲ್ಲಿ ಪ್ರಜ್ವಲ್ ಬರುವ ಮಾಹಿತಿಯಿದೆ. ಜರ್ಮನಿಯ ಮ್ಯುನಿಚ್ ವಿಮಾನ ನಿಲ್ದಾಣದಿಂದ ಟಿಕೆಟ್ ಬುಕ್ ಆಗಿದೆ ಎಂದು ಇಮಿಗ್ರೇಶನ್ ಇಲಾಖೆಯಿಂದ ಪೊಲೀಸರಿಗೆ ಮಾಹಿತಿ ದೊರೆತಿದೆ. ಪ್ರಜ್ವಲ್ ರೇವಣ್ಣ ಎರಡು ಬಾರಿ ಟಿಕೆಟ್ ಬುಕ್ ಮಾಡಿ ರದ್ದು ಮಾಡಿದ್ದರು. ಮೇ 15ರಂದು LH764 Munich to Bangalore ವಿಮಾನದಲ್ಲಿ ಪ್ರಯಾಣಿಸಲಿದ್ದು, ಟರ್ಮಿನಲ್ 2ಗೆ ರಾತ್ರಿ 12:30ಕ್ಕೆ ವಿಮಾನ ತಲುಪಲಿದೆ. ಈ ವಿಮಾನದಲ್ಲಿ ಪ್ರಜ್ವಲ್‌ ಬರುತ್ತಾರಾ ಅಥವಾ ಇನ್ನಷ್ಟು ಕಾಲ ಎಸ್‌ಐಟಿ ಅಧಿಕಾರಿಗಳನ್ನು ಆಟವಾಡಿಸಲಿದ್ದಾರಾ ಎಂದು ನೋಡಬೇಕಿದೆ.

ಇಂದು ರೇವಣ್ಣ ಜಾಮೀನು ಅರ್ಜಿ ವಿಚಾರಣೆ

ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revanna) ಅವರ ಜಾಮೀನು (bail) ಅರ್ಜಿ ಇಂದು (ಮೇ 8) ವಿಚಾರಣೆಗೆ ಬರಲಿದೆ. ಬುಧವಾರ ಎಚ್‌.ಡಿ. ರೇವಣ್ಣ ಅವರ ಕಸ್ಟಡಿ ಅಂತ್ಯ ಆಗುವ ಹಿನ್ನೆಲೆ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ. ಆದರೆ, ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಇನ್ನಷ್ಟು ದಿನ ಕಸ್ಟಡಿಗೆ ಕೊಡುವಂತೆ ಕೋರ್ಟ್‌ನಲ್ಲಿ ಮನವಿ ಮಾಡಲಿದ್ದಾರೆ. ಈಗಷ್ಟೇ ವಿಚಾರಣೆಯನ್ನು ಪ್ರಾರಂಭ ಮಾಡಲಾಗಿದೆ. ಅಲ್ಲದೆ, ರೇವಣ್ಣ ಸಹ ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ವಾದಿಸುವ ಸಾಧ್ಯತೆ ಹೆಚ್ಚಿದೆ.

ಇನ್ನು ಜಾಮೀನು ಅರ್ಜಿ ವಿಚಾರಣೆ ಸಂಬಂಧ ನ್ಯಾಯಾಲಯ ಸಹ ಒಂದು ಪ್ರಶ್ನೆ ಎತ್ತಿದೆ. ಆರೋಪಿ ಕಸ್ಟಡಿಯಲ್ಲಿದ್ದಾಗ ಜಾಮೀನು ಅರ್ಜಿ ವಿಚಾರಣೆ ನಡೆಸಲು ಯೋಗ್ಯವೇ ಎಂಬ ಬಗ್ಗೆ ಮಂಗಳವಾರ ನಡೆದ ವಿಚಾರಣೆ ವೇಳೆ ಪ್ರಶ್ನೆ ಮಾಡಿದೆ. ಆಗ ಈ ಬಗ್ಗೆ ರೇವಣ್ಣ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ.‌ ನಾಗೇಶ್ ಅವರು ಕೆಲವು ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದರು.

ವಾದ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ಸೂಚಿಸಿದ್ದು, ಬುಧವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ. ಈ ವೇಳೆ ರೇವಣ್ಣ ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಒಂದು ವೇಳೆ ಜಾಮೀನು ಸಿಕ್ಕಿಲ್ಲವಾದರೆ, ಪುನಃ ಕಸ್ಟಡಿಗೆ ನೀಡಲಾಗುತ್ತದೆಯೋ? ಅಥವಾ ನ್ಯಾಯಾಂಗ ಬಂಧನಕ್ಕೊಳಪಟ್ಟು ಪರಪ್ಪನ ಅಗ್ರಹಾರ ಸೇರಲಿದ್ದಾರೋ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ: Prajwal Revanna case: ಪ್ರಜ್ವಲ್‌ ರೇವಣ್ಣ ವಿರುದ್ಧ 196 ದೇಶಗಳಿಗೆ ಇಂಟರ್‌ಪೋಲ್‌ ಮೆಸೇಜ್‌; ಎಲ್ಲೇ ಕಂಡರೂ ಸಿಗುತ್ತೆ ಮಾಹಿತಿ!

Continue Reading

ಕ್ರೈಂ

Murder Case: ಪ್ರಿಯತಮೆ ಎದುರೇ ಮಹಿಳೆಯ ಅತ್ಯಾಚಾರ ಮಾಡಿ ಕೊಂದ ಪಾಪಿ!

Murder Case: ಕೃತ್ಯ ಎಸಗುವ ಮುನ್ನ ಮಹಿಳೆಗೆ ಚೆನ್ನಾಗಿ ಮದ್ಯ ಕುಡಿಸಿ ಅತ್ಯಾಚಾರ ಎಸಗಿ ಕೊಲೆ (woman murder case) ಮಾಡಲಾಗಿದೆ. ಸಂಜೀವಪ್ಪ ಹಾಗೂ ಆತನ ಪ್ರಿಯತಮೆ ರಾಮಾಂಜಿನಮ್ಮ ಜೊತೆಗೂಡಿ ಈ ಕೊಲೆ ಕೃತ್ಯ ಎಸಗಿದ್ದಾರೆ.

VISTARANEWS.COM


on

chikkaballapur woman murder case
Koo

ಚಿಕ್ಕಬಳ್ಳಾಪುರ: ತನ್ನ ಪ್ರಿಯತಮೆಯ (lover) ಎದುರೇ ಇನ್ನೊಬ್ಬ ಮಹಿಳೆಯ ಮೇಲೆ ಅತ್ಯಾಚಾರ ಮಾಡಿ (Physical abuse) ಬರ್ಬರವಾಗಿ ಕೊಲೆ ಮಾಡಿದ (woman Murder case) ಪಾಪಿ ಪ್ರಿಯತಮನನ್ನು ಪೊಲೀಸರು (Chikkaballapur crime news) ಬಂಧಿಸಿದ್ದಾರೆ. ಕೃತ್ಯಕ್ಕೆ ಸಹಕಾರ ನೀಡಿದ ಪ್ರಿಯತಮೆಯನ್ನೂ ಹೆಡೆಮುರಿ ಕಟ್ಟಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಕೊನಗಾನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಅಲುಮೇಲಮ್ಮ (40) ವರ್ಷ ಕೊಲೆಯಾದ‌ ಮಹಿಳೆ‌. ಸಂಜೀವಪ್ಪ ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪಿ. ಕೃತ್ಯ ಎಸಗುವ ಮುನ್ನ ಮಹಿಳೆಗೆ ಚೆನ್ನಾಗಿ ಮದ್ಯ ಕುಡಿಸಿ ಅತ್ಯಾಚಾರ ಎಸಗಿ ಕೊಲೆ (woman murder case) ಮಾಡಲಾಗಿದೆ. ಸಂಜೀವಪ್ಪ ಹಾಗೂ ಆತನ ಪ್ರಿಯತಮೆ ರಾಮಾಂಜಿನಮ್ಮ ಜೊತೆಗೂಡಿ ಈ ಕೊಲೆ ಕೃತ್ಯ ಎಸಗಿದ್ದಾರೆ.

ಸಂಜೀವಪ್ಪ ಹಾಗೂ ರಾಮಾಂಜಿನಮ್ಮ ನಡುವೆ ಅನೈತಿಕ‌ ಸಂಬಂಧವಿತ್ತು. ಇಬ್ಬರ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಅಲುಮೇಲಮ್ಮ ಅಡ್ಡಿಯಾಗಿದ್ದಳು. ಇದರಿಂದ ಆಕ್ರೋಶಗೊಂಡ ಇಬ್ಬರೂ ಸೇರಿ ಕೊಲೆ ಮಾಡಿರುವ ಅನುಮಾನವಿದೆ. ನಾಲ್ಕು ದಿನಗಳಿಂದ ಅಲುಮೇಲಮ್ಮ ಗ್ರಾಮದಲ್ಲಿ ಕಾಣಿಸಿರಲಿಲ್ಲ. ರಾಮಾಂಜಿನಮ್ಮ ವರ್ತನೆ‌ಯಿಂದ ಅನುಮಾನಗೊಂಡ ಗ್ರಾಮಸ್ಥರು ಆಕೆಯನ್ನು ವಿಚಾರಿಸಿಕೊಂಡಾಗ ಸತ್ಯ ಬಾಯಿಬಿಟ್ಟಿದ್ದಾಳೆ.

ಊರಿನ ಹೊರಗಿನ ಕಾಡುಪ್ರದೇಶದಲ್ಲಿ ಅಲುಮೇಲಮ್ಮ ಶವ ಪತ್ತೆಯಾಗಿದೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ದೂರು ದಾಖಲಿಸಿಕೊಂಡ‌ ಕೂಡಲೆ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಾಜಿ ಪ್ರಿಯಕರನಿಂದ ಮಹಿಳೆಯ ಕೊಲೆ, ಕಾರಣ ನಿಗೂಢ

ಬೆಂಗಳೂರು: ರಾಜಧಾನಿಯ ಸುಂಕದಕಟ್ಟೆಯ ಬಳಿ ಮಹಿಳೆಯೊಬ್ಬರು ಮಾಜಿ ಪ್ರಿಯಕರನಿಂದ (woman Murder Case) ಕೊಲೆಯಾಗಿದ್ದಾರೆ. ನಿನ್ನೆ ರಾತ್ರಿ 9:40ರ ಸುಮಾರಿಗೆ ಈ ಹತ್ಯೆ ನಡೆದಿದೆ. ದಿವ್ಯಾ (30) ಕೊಲೆಯಾದ ಮಹಿಳೆ.

ತನ್ನ ಜೊತೆಗಿದ್ದ ಪ್ರಿಯಕರ ಶಾಂತಕುಮಾರ್ ಎಂಬಾತನಿಂದ ದಿವ್ಯಾ ಕೊಲೆಯಾಗಿದ್ದಾರೆ. ನಾಲ್ಕು ವರ್ಷದ ಹಿಂದೆ ಶಾಂತಕುಮಾರ್ ಜೊತೆ ಬಂದಿದ್ದ ದಿವ್ಯಾ ಈ ಮೊದಲು ಕಾಮಾಕ್ಷಿಪಾಳ್ಯದಲ್ಲಿ ಮನೆ ಮಾಡಿದ್ದರು. ಅನಂತರ ಇಬ್ಬರ ಮಧ್ಯೆ ಜಗಳವಾಗಿದ್ದು, ಇದರಿಂದ ಶಾಂತಕುಮಾರ್‌ನನ್ನು ದಿವ್ಯಾ ಬಿಟ್ಟುಬಿಟ್ಟಿದ್ದರು. ಇಬ್ಬರೂ ಮದುವೆಯಾಗಿದ್ದರೇ ಇಲ್ಲವೇ ಎಂಬ ಬಗ್ಗೆ ಅನುಮಾನವಿದೆ.

5 ದಿನದ ಹಿಂದೆ ಸುಂಕದಕಟ್ಟೆಯ ಸೊಲ್ಲಾಪುರಂ ಲೇ ಔಟ್‌ನಲ್ಲಿ ದಿವ್ಯಾ ಬಾಡಿಗೆ ಮನೆ ಮಾಡಿದ್ದರು. ಈಕೆ ಮನೆ ಮಾಡಿದ್ದ ಬಗ್ಗೆ ತಿಳಿದುಕೊಂಡಿದ್ದ ಶಾಂತಕುಮಾರ್ ರಾತ್ರಿ 9:30ರ ಸುಮಾರಿಗೆ ಬಾಡಿಗೆ ಮನೆ ಸಮೀಪ ಬಂದಿದ್ದ. ಅನಂತರ ಚಾಕುವಿನ ಮೂಲಕ ದಿವ್ಯಳ ಎದೆ ಭಾಗಕ್ಕೆ ಚುಚ್ಚಿ ಕೊಲೆ ಮಾಡಿದ್ದಾನೆ. ಇಬ್ಬರೂ ಮೂಲತಃ ಬಿಡದಿಯವರು.

“ರಾತ್ರಿ 9:30 ಸುಮಾರಿಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ನಡೆದಿದೆ. ಕೊಲೆಯಾದ ಮಹಿಳೆ ದಿವ್ಯ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದಳು. 35 ವರ್ಷದ ಶಾಂತಕುಮಾರ್ ಎಂಬಾತನಿಂದ ಕೊಲೆಯಾಗಿದೆ. ಆರೋಪಿ ತಲೆಮರೆಸಿಕೊಂಡಿದ್ದು ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ” ಎಂದು ಪಶ್ಚಿಮ ವಿಭಾಗ ಡಿಸಿಪಿ ಗಿರೀಶ್ ಹೇಳಿದ್ದಾರೆ.

ಮೆಡಿಕಲ್‌ ಕಾಲೇಜಿನ ಲೇಡಿಸ್‌ ಟಾಯ್ಲೆಟ್‌ನಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣ!

ಮಂಗಳೂರು: ಖಾಸಗಿ ಮೆಡಿಕಲ್ ಕಾಲೇಜೊಂದರ ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ ಇಟ್ಟು ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ (toilet video) ಮಾಡಿಕೊಂಡಿರುವ ಘಟನೆಯೊಂದು ವರದಿಯಾಗಿದ್ದು, ಅಪ್ರಾಪ್ತ ವಯಸ್ಸಿನ ವ್ಯಕ್ತಿಯನ್ನು ಈ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

toilet video shooting in mangalore

ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಮೇ‌ 6ರಂದು ನಡೆದಿರುವ ಘಟನೆ ಇದಾಗಿದೆ. ಮೆಡಿಕಲ್ ಕಾಲೇಜಿಗೆ ರೋಗಿಯಂತೆ ಬಂದಿದ್ದ ಅಪ್ರಾಪ್ತ ಯುವಕ, ಬಳಿಕ ಲೇಡಿಸ್ ಟಾಯ್ಲೆಟ್‌ಗೆ ಹೋಗಿ ಮೊಬೈಲ್ ಇಟ್ಟಿದ್ದ. ಲೇಡಿಸ್ ಟಾಯ್ಲೆಟ್ ಒಳಗಿನಿಂದ ಮೊಬೈಲ್ ರಿಂಗ್ ಆಗುತ್ತಿರುವುದು ಕೇಳಿಸಿ ವಾಚ್‌ಮನ್ ಪರಿಶೀಲನೆ ಮಾಡಿದಾಗ ಮೊಬೈಲ್ ಪತ್ತೆಯಾಗಿದೆ.

ಈ ಹಿನ್ನೆಲೆಯಲ್ಲಿ ಬಂದರು ಪೊಲೀಸ್ ಠಾಣೆಗೆ ಕಾಲೇಜಿನ ವಾಚ್‌ಮನ್ ದೂರು ನೀಡಿದ್ದರು. ಕಾಲೇಜಿನ ಸಿಸಿಟಿವಿ ಪರಿಶೀಲನೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸುಮಾರು ಹದಿನೇಳು ವರ್ಷದ ಅಪ್ರಾಪ್ತ ಯುವಕನಿಂದ ಕೃತ್ಯ ನಡೆದಿದೆ. ಕಾಲೇಜಿನ ಸುತ್ತಮುತ್ತವೇ ಈತ ಸುಳಿದಾಡುತ್ತಿದ್ದುದು ಪತ್ತೆಯಾಗಿದೆ. ಯುವಕನನ್ನು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

ಇತ್ತೀಚೆಗೆ ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ (Nethrajyothi College udupi) ಮೂವರು ಮುಸ್ಲಿಂ ವಿದ್ಯಾರ್ಥಿನಿಯರು (Three Muslim students) ಟಾಯ್ಲೆಟ್‌ನಲ್ಲಿ ಮೊಬೈಲ್‌ (Udupi Toilet Video) ಇಟ್ಟು ಇತರ ಹೆಣ್ಣುಮಕ್ಕಳು ಶೌಚಾಲಯ ಬಳಸುವುದನ್ನು ಚಿತ್ರೀಕರಿಸಿಕೊಂಡ (mobile shooting at Ladies toilet) ಪ್ರಕರಣವನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಈ ಪ್ರಕರಣದಲ್ಲಿ ಮೂವರು ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದಲ್ಲದೆ, ರಾಷ್ಟ್ರೀಯ ಸುದ್ದಿಯಾಗಿಯೂ ಬಿತ್ತರಗೊಂಡಿತ್ತು.

ಇದನ್ನೂ ಓದಿ: Murder Case: ಬೆಂಗಳೂರಿನಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ; ನಡು ರಸ್ತೆಯಲ್ಲೇ ಅಟ್ಟಾಡಿಸಿ ಕೊಲೆ

Continue Reading
Advertisement
Sindhuri Vs Roopa
ಕರ್ನಾಟಕ2 mins ago

Sindhuri Vs Roopa: ಆರೋಪ-ಪ್ರತ್ಯಾರೋಪ ಬಿಟ್ಟು ಸಂಧಾನದತ್ತ ಗಮನ ಹರಿಸಿ; ರೂಪ-ರೋಹಿಣಿಗೆ ಸುಪ್ರೀಂ ಕೋರ್ಟ್‌ ಸಲಹೆ

Puttakkana Makkalu umashree acting praised
ಕಿರುತೆರೆ3 mins ago

Puttakkana Makkalu: ʻಪುಟ್ಟಕ್ಕʼನ ನಟನೆಗೆ ಕೋಟಿ ಕೋಟಿ ನಮನ ಅಂತಿದ್ದಾರೆ ಫ್ಯಾನ್ಸ್‌!

hanuman flag keragodu mandya
ಕ್ರೈಂ42 mins ago

Hanuman Flag: ಕೆರಗೋಡು ಹನುಮಧ್ವಜ ಪ್ರಕರಣದ 3 ಹೋರಾಟಗಾರರ ಮೇಲೆ ರೌಡಿಶೀಟ್

Human trafficking
ದೇಶ53 mins ago

Human trafficking: ಕೆಲಸ ಕೊಡಿಸೋದಾಗಿ ನಂಬಿಸಿ ರಷ್ಯಾ-ಉಕ್ರೇನ್‌ ಯುದ್ಧ ಪೀಡಿತ ಪ್ರದೇಶಕ್ಕೆ ರವಾನೆ-ಇಬ್ಬರು ಅರೆಸ್ಟ್‌

Kanakalatha Passes Away Film serial actor Mollywood
ಮಾಲಿವುಡ್60 mins ago

Kanakalatha Passes Away: 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ನಟಿ ಇನ್ನಿಲ್ಲ

Prajwal Revanna Case
ಕ್ರೈಂ1 hour ago

Prajwal Revanna Case: ಗಡುವು ಮುಗೀತು, ಬೆಂಗಳೂರಿಗೆ ಹೊರಟರಾ ಪ್ರಜ್ವಲ್‌ ರೇವಣ್ಣ?

Laapataa Ladies Phool At Met Gala At Photoshop
ಬಾಲಿವುಡ್2 hours ago

Laapataa Ladies: ಮೆಟ್ ಗಾಲಾ ರೆಡ್ ಕಾರ್ಪೆಟ್​ನಲ್ಲಿ ‘ಲಾಪತಾ ಲೇಡೀಸ್’ನಟಿ! ಅಸಲಿ ಸಂಗತಿ ಏನು?

chikkaballapur woman murder case
ಕ್ರೈಂ2 hours ago

Murder Case: ಪ್ರಿಯತಮೆ ಎದುರೇ ಮಹಿಳೆಯ ಅತ್ಯಾಚಾರ ಮಾಡಿ ಕೊಂದ ಪಾಪಿ!

Covishield Vaccine
ದೇಶ2 hours ago

Covishield Vaccine: ಕೋವಿಶೀಲ್ಡ್‌ ಲಸಿಕೆ ಹಿಂಪಡೆಯುವುದಾಗಿ ಅಸ್ಟ್ರಾಜೆನೆಕಾ ಘೋಷಣೆ

Aishwarya Arjun Umapathy Ramaiah Wedding Date Venue Revealed
ಸ್ಯಾಂಡಲ್ ವುಡ್2 hours ago

Aishwarya Arjun: ಅರ್ಜುನ್ ಸರ್ಜಾ ಪುತ್ರಿ ಮದುವೆ ಮುಹೂರ್ತ ಫಿಕ್ಸ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ15 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ18 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ19 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌