Greenpeace India urges political parties to include green city and healthy food in election manifesto Karnataka Election 2023 ಚುನಾವಣಾ ಪ್ರಣಾಳಿಕೆಯಲ್ಲಿರಲಿ ಹಸಿರು ನಗರ-ಆರೋಗ್ಯಕರ ಆಹಾರ: ರಾಜಕೀಯ ಪಕ್ಷಗಳಿಗೆ ಗ್ರೀನ್‌ಪೀಸ್‌ ಇಂಡಿಯಾ ಆಗ್ರಹ - Vistara News

ಕರ್ನಾಟಕ

ಚುನಾವಣಾ ಪ್ರಣಾಳಿಕೆಯಲ್ಲಿರಲಿ ಹಸಿರು ನಗರ-ಆರೋಗ್ಯಕರ ಆಹಾರ: ರಾಜಕೀಯ ಪಕ್ಷಗಳಿಗೆ ಗ್ರೀನ್‌ಪೀಸ್‌ ಇಂಡಿಯಾ ಆಗ್ರಹ

Greenpeace India: ಸುಸ್ಥಿರ ನಗರಗಳು ಮತ್ತು ಪೌಷ್ಟಿಕಾಂಶದ ವೈವಿಧ್ಯತೆಗೆ ಸಂಬಂಧಿಸಿದ ಅಂಶಗಳನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಆದ್ಯತೆಯ ಮೇಲೆ ಉಲ್ಲೇಖ ಮಾಡುವಂತೆ ಗ್ರೀನ್‌ಪೀಸ್ ಇಂಡಿಯಾ ಸಂಸ್ಥೆಯು ವಿವಿಧ ರಾಜಕೀಯ ಪಕ್ಷಗಳಿಗೆ ಶಿಫಾರಸು ಪಟ್ಟಿಯನ್ನು ಸಲ್ಲಿಸಿದೆ.

VISTARANEWS.COM


on

Greenpeace India urges political parties to include green city and healthy food in election manifesto
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ (Karnataka Election 2023) ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಚುನಾವಣಾ ಪ್ರಣಾಳಿಕೆಯನ್ನು ಪ್ರಕಟಿಸುತ್ತವೆ. ಈ ಬಾರಿ ಪ್ರಕಟಿಸುವಾಗ ಸುಸ್ಥಿರ ನಗರಗಳು ಮತ್ತು ಪೌಷ್ಟಿಕಾಂಶದ ವೈವಿಧ್ಯತೆಗೆ ಸಂಬಂಧಿಸಿದ ಅಂಶಗಳಿಗೆ ಆದ್ಯತೆ ನೀಡುವಂತೆ ಗ್ರೀನ್‌ಪೀಸ್ ಇಂಡಿಯಾ ಸಂಸ್ಥೆಯು ವಿವಿಧ ರಾಜಕೀಯ ಪಕ್ಷಗಳಿಗೆ ಆಗ್ರಹಿಸಿ ಒಟ್ಟು 20 ಅಂಶಗಳ ಶಿಫಾರಸುಗಳನ್ನು ಸಲ್ಲಿಸಿದೆ.

ಈ ಶಿಫಾರಸುಗಳೊಂದಿಗೆ ಗ್ರೀನ್‌ಪೀಸ್ ಇಂಡಿಯಾ, ರಾಜಕೀಯ ಪಕ್ಷಗಳಿಗೆ ಸುಸ್ಥಿರ ನಗರಗಳು, ಸರ್ವರಿಗೂ ಸಮಾನ ಸಂಚಾರ ಸಾರಿಗೆ ವ್ಯವಸ್ಥೆಯ ಅವಕಾಶಗಳು ಮತ್ತು ಸುಸ್ಥಿರ ಕೃಷಿಯಂತಹ ಪ್ರಮುಖ ಪರಿಸರ ಸಮಸ್ಯೆಗಳನ್ನು ಪ್ರಸ್ತುತ ಮತ್ತು ಭವಿಷ್ಯದ ಶಾಸನ ಸಭೆಯ ನಿರ್ಣಯಗಳಲ್ಲಿ ಗಂಭೀರವಾಗಿ ಪರಿಗಣಿಸಲು ಹಕ್ಕೊತ್ತಾಯ ಮಂಡಿಸಿದೆ.

Greenpeace India urges political parties to include green city and healthy food in election manifesto
ಸುಸ್ಥಿರ ನಗರಗಳು ಮತ್ತು ಪೌಷ್ಟಿಕಾಂಶದ ವೈವಿಧ್ಯತೆಗೆ ಸಂಬಂಧಿಸಿದ ಅಂಶಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಗ್ರೀನ್‌ಪೀಸ್‌ ಇಂಡಿಯಾ

ಸುಸ್ಥಿರ ನಗರಗಳಿಗೆ ಸಂಬಂಧಿಸಿದಂತೆ ಮಂಡಿಸಲಾದ ಶಿಫಾರಸುಗಳು ಸೈಕಲ್‌ ಸವಾರಿ (ಸೈಕ್ಲಿಂಗ್) ರೀತಿಯ ಸಾರ್ವಜನಿಕ ಸಾರಿಗೆ ಮತ್ತು ವಾಕಿಂಗ್‌ನಂತಹ ಮೋಟಾರುರಹಿತ ಸಾರಿಗೆ (NMT) ಮೇಲೆ ಕೇಂದ್ರೀಕರಿಸುತ್ತವೆ. ಇದರೊಂದಿಗೆ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಹಾಯ ಮಾಡುವ ಹೈಬ್ರಿಡ್ ಮಾದರಿಯ ಕೆಲಸದ ವ್ಯವಸ್ಥೆಯನ್ನು ಬೆಂಬಲಿಸುತ್ತದೆ. ಈ ಶಿಫಾರಸುಗಳ ಮೂಲಕ, ಹೊರ ವರ್ತುಲ ರಸ್ತೆ (ಔಟರ್‌ ರಿಂಗ್‌ ರೋಡ್‌) ಉದ್ದಕ್ಕೂ ಬಸ್ ಆದ್ಯತಾ ಲೇನ್‌ನ ಪುನರುಜ್ಜೀವನ/ ಮರುನಿರ್ಮಾಣ ಮತ್ತು ಸಮಗ್ರ ಮಹಾನಗರ ಯೋಜನೆಯಲ್ಲಿ ಸೂಚಿಸಿದ 11 ಇತರ ಬಸ್ ಲೇನ್‌ಗಳ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ. ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ದಟ್ಟಣೆ ಮತ್ತು ಮಾಲಿನ್ಯದ ಮಟ್ಟಗಳನ್ನು ಗಮನದಲ್ಲಿರಿಸಿಕೊಂಡು ಈ ಬದಲಾವಣೆಗಳಿಗೆ ತುರ್ತಾಗಿ ಸ್ಪಂದಿಸುವಂತೆ ಪ್ರಸ್ತುತ ಹಕ್ಕೊತ್ತಾಯಗಳನ್ನು ಸಲ್ಲಿಸಲಾಗಿದೆ.

ಇದನ್ನೂ ಓದಿ: Bengaluru Karaga 2023: ಕರಗ ಹೊತ್ತ ಪೂಜಾರಿ ಮೇಲೆ ಕೆಮಿಕಲ್‌ ದಾಳಿ ಮಾಡಿದವನ ಸೆರೆ

“ಹೆಚ್ಚು ಮೇಲ್ಸೇತುವೆಗಳು (ಫ್ಲೈ ಓವರ್‌ಗಳು), ರಸ್ತೆಗಳು ಮತ್ತು ಎಲಿವೇಟೆಡ್ ಕಾರಿಡಾರ್‌ಗಳನ್ನು (ಎತ್ತರಿಸಿದ ಮಾರ್ಗ) ನಿರ್ಮಿಸಲಾಗುತ್ತಿದೆ ಎಂದರೆ, ನಾವು ಹೆಚ್ಚು ಹೆಚ್ಚು ಖಾಸಗಿ ವಾಹನಗಳನ್ನು ಪ್ರೋತ್ಸಾಹಿಸುತ್ತಿದ್ದೇವೆ ಮತ್ತು ಜನಸಾಮಾನ್ಯರು ಬಸ್‌ಗಳು ಹಾಗು ಮೋಟಾರು ರಹಿತ ಸಾರಿಗೆಯಲ್ಲಿ ಪ್ರಯಾಣಿಸುವುದನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿದ್ದೇವೆ ಎಂದರ್ಥ. ನಾವು ಗುಂಪಿನಿಂದ ಪ್ರತ್ಯೇಕವಾಗಿ ಉಳಿದಷ್ಟು, ನಮ್ಮ ನಗರಗಳ ಸುಸ್ಥಿರತೆ ಮತ್ತು ವಾಸಯೋಗ್ಯ ಗುಣಗಳು ಕ್ಷೀಣಿಸುತ್ತವೆ. ನಾವು ಹೆಚ್ಚು ಹೆಚ್ಚು ಬಸ್ಸುಗಳು, ಬಸ್ ಲೇನ್‌ಗಳು, ಸೈಕಲ್ ಸವಾರಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಪಡೆಯುವತ್ತ ಗಮನಹರಿಸಬೇಕು ಮತ್ತು ಖಾಸಗಿ ಸಾರಿಗೆಯನ್ನು ವಿಳಂಬ ಮಾಡದೆ ತಕ್ಷಣವೇ ನಿರ್ಲಕ್ಷಿಸಬೇಕಾಗಿದೆ. ನಮ್ಮ ನಗರವು ಅಪಾಯದಲ್ಲಿದೆ” ಎಂದು ಗ್ರೀನ್‌ಪೀಸ್ ಇಂಡಿಯಾ ಕ್ಯಾಂಪೇನರ್ ಅಮೃತಾ ಎಸ್.ಎನ್. ಹೇಳುತ್ತಾರೆ

ಕೌನ್ಸಿಲ್ ಫಾರ್ ಆ್ಯಕ್ಟಿವ್ ಮೊಬಿಲಿಟಿಯ ಅಜಯ್ ನಂದಕುಮಾರ್ ಮಾತನಾಡಿ, “ಖಾಸಗಿ ಮೋಟಾರು ವಾಹನಗಳ ಅನಿಯಂತ್ರಿತ ಹೆಚ್ಚಳ ಮತ್ತು ಬಳಕೆಯಿಂದಾಗಿ ನಗರದ ಮೂಲಸೌಕರ್ಯ ಮತ್ತು ಜನಜೀವನದ ಗುಣಮಟ್ಟವು ತೀವ್ರ ಒತ್ತಡದಲ್ಲಿದೆ. ಸಾರಿಗೆಯ ಅಗತ್ಯಗಳಿಗಾಗಿ, ಪರ್ಯಾಯ ಸಾರಿಗೆ ವ್ಯವಸ್ಥೆಗಳಿಗೆ ಮಾಡುತ್ತಿರುವ ಹೂಡಿಕೆ ಮತ್ತು ಮೋಟಾರು ವಾಹನಗಳ ಮೇಲಿನ ಹೂಡಿಕೆಯಲ್ಲಿ ಅಜಗಜಾಂತರ ವ್ಯತ್ಯಾಸವಿದೆ. ರಾಜಕೀಯ ಅಜೆಂಡಾ ಸೆಟ್ಟಿಂಗ್‌/ಕ್ರಿಯಾಸೂಚಿಯ ಮೂಲಕ ಈ ಅಸಮಾನತೆಯನ್ನು ಸರಿಪಡಿಸಿ ಬೆಂಗಳೂರು ನಗರಕ್ಕೆ ಸಮತೋಲಿತ ಸಾರಿಗೆಯ ರೂಪುರೇಷೆಗಳನ್ನು ನಿರ್ದೇಶಿಸಬೇಕಿದೆ. ಬಸ್ಸುಗಳು, ಸೈಕ್ಲಿಂಗ್ ಮತ್ತು ವಾಕಿಂಗ್‌ಗೆ ಹೆಚ್ಚಿನ ಆದ್ಯತೆಯ ಮೇರೆಗೆ ಹಣವನ್ನು ಮೀಸಲಿರಿಸುವುದು ಮತ್ತು ಈ ಸಂಬಂಧೀ ನೀತಿ ನಿರೂಪಣೆಗೆ ಪ್ರತಿ ಪಕ್ಷವು ಪ್ರಣಾಳಿಕೆಯಲ್ಲಿ ಪ್ರಾಮುಖ್ಯತೆ ನೀಡಬೇಕು ಎಂದು ನಾವು ಹಕ್ಕೊತ್ತಾಯ ಮಂಡಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ಗ್ರೀನ್‌ಪೀಸ್ ಇಂಡಿಯಾವು ಪ್ರಸ್ತುತ ಹವಾಮಾನ ವೈಪರೀತ್ಯಗಳನ್ನು ಎದುರಿಸುತ್ತಿರುವ ಭಾರತದಲ್ಲಿ, ಹವಾಮಾನ ಬಿಕ್ಕಟ್ಟಿನ ಪರಿಸ್ಥಿತಿಗೆ ಹೊಂದಿಕೊಳ್ಳಬಲ್ಲ ಆಹಾರ ವ್ಯವಸ್ಥೆಯನ್ನು ನಿರ್ಮಿಸಲು ಶಿಫಾರಸುಗಳನ್ನು ಮಂಡಿಸಿದೆ. ಇತರ ಶಿಫಾರಸುಗಳ ಪೈಕಿ, ಹವಾಮಾನ ಬದಲಾವಣೆಗೆ ಒಗ್ಗಿಕೊಳ್ಳಬಲ್ಲ ಸಿರಿಧಾನ್ಯವನ್ನು ಬೆಳೆಯುವುದನ್ನು ಉತ್ತೇಜಿಸುವ ಸಲುವಾಗಿ, ಕಡಿಮೆ ಫಲವತ್ತತೆ ಇರುವ ಭೂಮಿಯನ್ನು ಪೋಷಿಸುವ ರೈತರ ಕೊಡುಗೆಗಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವುದು ಹಾಗೂ ಸಿರಿಧಾನ್ಯ ಬೆಳೆಯುವ ರೈತರ ಪ್ರೋತ್ಸಾಹ ಧನವನ್ನು ಹೆಕ್ಟೇರ್‌ಗೆ 10,000 ರೂ.ನಿಂದ 25,000 ರೂ.ಗೆ ಹೆಚ್ಚಿಸುವುದು ಸೇರಿದೆ.

ಗ್ರೀನ್‌ಪೀಸ್ ಇಂಡಿಯಾದ ಹಿರಿಯ ಪ್ರಚಾರಕ ರೋಹಿನ್ ಕುಮಾರ್ ಮಾತನಾಡಿ, “ಹವಾಮಾನ ಬಿಕ್ಕಟ್ಟಿನಿಂದಾಗಿ ಸಾಮಾಜಿಕ ಭದ್ರತೆಯಲ್ಲಿ, ಅದರಲ್ಲೂ ಮುಖ್ಯವಾಗಿ ಆಹಾರ ಮತ್ತು ಪೌಷ್ಟಿಕಾಂಶದ ಭದ್ರತೆಯಲ್ಲಿ ಭಾರತವು ಗಂಭೀರ ಸವಾಲುಗಳನ್ನು ಎದುರಿಸುತ್ತಿದೆ. ಬದಲಾಗುತ್ತಿರುವ ಹವಾಮಾನ ಮಾದರಿಗಳು, ಕೃಷಿ ಮತ್ತು ಆಹಾರದ ಮೇಲೆ ಅದರ ಪರಿಣಾಮಗಳು, ಹವಾಮಾನ ಬಿಕ್ಕಟ್ಟನ್ನು ತಗ್ಗಿಸುವುದು ಮಾತ್ರವಲ್ಲದೆ ಅದನ್ನು ಉತ್ತಮವಾಗಿ ಸ್ವೀಕರಿಸಬಲ್ಲ, ಆ ಸ್ಥಿತಿಗೆ ಒಗ್ಗಿಕೊಳ್ಳಬಲ್ಲ ಸಮುದಾಯಗಳನ್ನು ರೂಪಿಸಬಲ್ಲ ಆಹಾರ ವ್ಯವಸ್ಥೆಯನ್ನು ನಾವು ನಿರ್ಮಿಸಬೇಕು ಎಂಬ ಸಂದೇಶ ನೀಡುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Elections : ನಾನು ಬದುಕಿರೋವರೆಗೆ ದತ್ತನ ಕೈಬಿಡಬಾರದು, ಕಷ್ಟ ಕಾಲದಲ್ಲಿ ನೆರವಿಗೆ ನಿಲ್ಬೇಕು ಎಂದು ಹೇಳಿದ್ರಂತೆ ಎಚ್‌ಡಿಡಿ

ಈ ಹಿನ್ನೆಲೆಯಲ್ಲಿ ಸಿರಿಧಾನ್ಯಗಳು ಕರ್ನಾಟಕದ ಪಾಲಿಗೆ ದೊಡ್ಡ ಮಟ್ಟದ ಬದಲಾವಣೆಗೆ ಕಾರಣವೂ ಆಗಬಹುದು. ಬದಲಾಗುವ ಹವಾಮಾನ ಪರಿಸ್ಥಿತಿಗೆ ಒಗ್ಗಿಕೊಳ್ಳಬಲ್ಲ ಮತ್ತು ಪೌಷ್ಟಿಕಾಂಶ ಭರಿತ ಸಿರಿಧಾನ್ಯಗಳು ಸಾಂಸ್ಕೃತಿಕವಾಗಿ ರಾಜ್ಯದಲ್ಲಿ ಆಹಾರ ಪದ್ಧತಿಯ ಭಾಗವಾಗಿದೆ. ಉತ್ತಮ ನೀತಿ-ನಿರೂಪಣೆ ಮತ್ತು ಅಗತ್ಯ ಮೂಲಭೂತ ಸೌಕರ್ಯಗಳ ಲಭ್ಯತೆ, ಮಧ್ಯಾಹ್ನದ ಬಿಸಿಯೂಟ ಮತ್ತು ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಸಿರಿಧಾನ್ಯಗಳ ಸೇರ್ಪಡೆ, ಸಿರಿಧಾನ್ಯ ಸಂಸ್ಕರಣಾ ಘಟಕಗಳೊಂದಿಗೆ ಸ್ವಸಹಾಯ ಗುಂಪುಗಳನ್ನು ಬೆಂಬಲಿಸುವುದು, ಕನಿಷ್ಠ ಬೆಂಬಲದಲ್ಲಿ ಖರೀದಿಸಿದ ಸಿರಿಧಾನ್ಯಗಳಿಗೆ ಬೆಲೆ ಮತ್ತು ಮಾರುಕಟ್ಟೆಯನ್ನು ಖಾತರಿಪಡಿಸುವುದು, ಆಹಾರದಲ್ಲಿ ವೈವಿಧ್ಯತೆಗೆ ಕಾರಣವಾಗುತ್ತದೆ. ಆದ್ದರಿಂದ, ಈ ಶಿಫಾರಸುಗಳನ್ನು ಅಳವಡಿಸಿಕೊಳ್ಳುವಂತೆ ನಾವು ರಾಜಕೀಯ ಪಕ್ಷಗಳನ್ನು ಆಗ್ರಹಿಸುತ್ತೇವೆ. ಜತೆಗೆ ಹೊಸ ಸರ್ಕಾರವು ಅದನ್ನು ಸಮರೋಪಾದಿಯಲ್ಲಿ ಜಾರಿಗೊಳಿಸಬೇಕುʼʼ ಎಂದು ಅವರು ಒತ್ತಾಯಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Air Wing NCC: ಏರ್ ವಿಂಗ್ ಎನ್‌ಸಿಸಿ ಸೇರಲು ಅರ್ಜಿ ಆಹ್ವಾನ; ಜುಲೈ 9 ಕೊನೆಯ ದಿನ

Air Wing NCC: ನಂ. 2 ಕರ್ನಾಟಕ ಟೆಕ್ನಿಕಲ್ ಏರ್ ಸ್ಕ್ವಾಡ್ರನ್ ಎನ್.ಸಿ.ಸಿ. ವತಿಯಿಂದ ಏರ್ ವಿಂಗ್ ಎನ್‌ಸಿಸಿ 2024-27 ನೇ ಬ್ಯಾಚ್‌ಗೆ ಜೂ. 22ರಿಂದ ನೋಂದಣಿ ಪ್ರಾರಂಭಗೊಂಡಿದ್ದು ಜುಲೈ 09 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ ಎಂದು ಕಮಾಂಡಿಂಗ್ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ರಾಜೇಶ್ ಚಂದ್ರ ತಿಳಿಸಿದ್ದಾರೆ.

VISTARANEWS.COM


on

Application Invitation to Join Air Wing NCC July 09 is the last day for submission of application
Koo

ಬೆಂಗಳೂರು: ನಂ. 2 ಕರ್ನಾಟಕ ಟೆಕ್ನಿಕಲ್ ಏರ್ ಸ್ಕ್ವಾಡ್ರನ್ ಎನ್.ಸಿ.ಸಿ ವತಿಯಿಂದ ಏರ್ ವಿಂಗ್ ಎನ್‌ಸಿಸಿ (Air Wing NCC) 2024-27 ನೇ ಬ್ಯಾಚ್‌ಗೆ ಜೂ. 22ರಿಂದ ನೋಂದಣಿ ಪ್ರಾರಂಭಗೊಂಡಿದ್ದು, ಜುಲೈ 9 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ ಎಂದು ಕಮಾಂಡಿಂಗ್ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ರಾಜೇಶ್ ಚಂದ್ರ ತಿಳಿಸಿದ್ದಾರೆ.

ಇದನ್ನೂ ಓದಿ: Bengaluru Power Cut: ಬೆಂಗಳೂರು ನಿವಾಸಿಗಳೇ ಗಮನಿಸಿ; ಜೂ.29ರಂದು ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಅಭ್ಯರ್ಥಿಗಳು ಪಿಯುಸಿ ಪ್ರಥಮ ಅಥವಾ ಪ್ರಥಮ ವರ್ಷದ ಪದವಿಯಲ್ಲಿ ಬೆಂಗಳೂರಿನ ಯಾವುದಾದರೂ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಎನ್.ಸಿ.ಸಿ ಸೇರಬಯಸುವ ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಚಿತ್ರದಲ್ಲಿ ನೀಡಿರುವ ಕ್ಯೂ.ಆರ್. ಕೋಡ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Run4Research: ಬೆಂಗಳೂರಿನಲ್ಲಿ ಜೂ.30ರಂದು ʼರನ್4ರೀಸರ್ಚ್ʼ ಓಟ

ವಿಳಾಸ: ನಂ. 2 ಕರ್ನಾಟಕ ಟೆಕ್ನಿಕಲ್ ಏರ್ ಸ್ಕ್ವಾಡ್ರನ್ ಎನ್.ಸಿ.ಸಿ., ಯುವಿಸಿಇ ಕ್ಯಾಂಪಸ್, ಕೆ.ಆರ್. ಸರ್ಕಲ್ ಹತ್ತಿರ, ಬೆಂಗಳೂರು, ದೂರವಾಣಿ ಸಂಖ್ಯೆ 8788506566/9108939392 ಗೆ ಸಂಪರ್ಕಿಸಬಹುದಾಗಿದೆ.

Continue Reading

ಕರ್ನಾಟಕ

Pralhad Joshi: ಹಿಂದೂಗಳು ಅಲ್ಪಸಂಖ್ಯಾತರಾದ ದಿನ ಭಾರತ ಜಾತ್ಯತೀತವಾಗಿ ಉಳಿಯದು; ಪ್ರಲ್ಹಾದ್‌ ಜೋಶಿ ಆತಂಕ

Pralhad Joshi: ಭಾರತ ಹಿಂದೂ ರಾಷ್ಟ್ರವಲ್ಲ ಎಂಬ ನೋಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಹೇಳಿಕೆ ಸರಿಯಿದೆ. ನಾನೂ ಅದನ್ನು ಮೊದಲಿನಿಂದಲೂ ಪ್ರತಿಪಾದಿಸುತ್ತಾ ಬಂದಿದ್ದೇವೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಹಿಂದೂಗಳು ಅಲ್ಪಸಂಖ್ಯಾತರಾದ ದಿನ ಭಾರತ ಜಾತ್ಯತೀತ ರಾಷ್ಟ್ರವಾಗಿ ಉಳಿಯಲು ಸಾಧ್ಯವಿಲ್ಲ ಎಂದು ಎಚ್ಚರಿಸಿದ್ದಾರೆ.

VISTARANEWS.COM


on

India is a secular nation because Hindus are the majority says Union Minister Pralhad Joshi
Koo

ನವದೆಹಲಿ: ಹಿಂದೂಗಳು ಬಹುಸಂಖ್ಯಾತರಾಗಿ ಇರುವುದರಿಂದಲೇ ಭಾರತ ಜಾತ್ಯತೀತ ರಾಷ್ಟ್ರವಾಗಿದೆ ಎಂಬ ಕಟು ಸತ್ಯವನ್ನು ಸಿಎಂ ಸಿದ್ದರಾಮಯ್ಯ ಮೊದಲು ಅರ್ಥ ಮಾಡಿಕೊಳ್ಳಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ.

“ಭಾರತ ಹಿಂದೂ ರಾಷ್ಟ್ರವಲ್ಲ” ಎಂಬ ಅಮರ್ತ್ಯ ಸೇನ್ ಹೇಳಿಕೆ ಸಮರ್ಥಿಸಿದ ಸಿಎಂ ಸಿದ್ದರಾಮಯ್ಯ ಅವರ ನಡೆಗೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಕ್ಷೇಪಿಸಿದ್ದು, ನವದೆಹಲಿಯಲ್ಲಿ ಶುಕ್ರವಾರ ಈ ಕುರಿತು ಪ್ರತಿಕ್ರಿಯಿಸಿದರು.

ಇದನ್ನೂ ಓದಿ: R Ashok: ವಾಲ್ಮೀಕಿ ನಿಗಮ ಹಗರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ; ಆರ್‌. ಅಶೋಕ್‌

ಹಿಂದೂಗಳು ಅಲ್ಪಸಂಖ್ಯಾತರಾದ ದಿನ ಭಾರತ ಜಾತ್ಯಾತೀತ ರಾಷ್ಟ್ರವಾಗಿ ಉಳಿಯಲು ಸಾಧ್ಯವಿಲ್ಲ ಎಂದು ಸಚಿವ ಪ್ರಲ್ಹಾದ್‌ ಜೋಶಿ ಎಚ್ಚರಿಸಿದ್ದಾರೆ.

ಇದನ್ನೂ ಓದಿ: Team India : ಟೆಸ್ಟ್​​ ಕ್ರಿಕೆಟ್​ನ ಒಂದೇ ದಿನದಲ್ಲಿ ಗರಿಷ್ಠ ರನ್​; ದಾಖಲೆ ಬರೆದ ಭಾರತ ತಂಡ

ಭಾರತ ಹಿಂದೂ ರಾಷ್ಟ್ರವಲ್ಲ ಎಂಬ ನೋಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಹೇಳಿಕೆ ಸರಿಯಿದೆ. ತಾವೂ ಅದನ್ನು ಮೊದಲಿನಿಂದಲೂ ಪ್ರತಿಪಾದಿಸುತ್ತಾ ಬಂದಿದ್ದೇವೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಸಚಿವ ಪ್ರಲ್ಹಾದ್‌ ಜೋಶಿ ತೀವ್ರವಾಗಿ ಖಂಡಿಸಿದ್ದಾರೆ.

Continue Reading

ಕರ್ನಾಟಕ

Rain News: ಕಾರವಾರದಲ್ಲಿ ಭಾರಿ ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಸಾವು

Rain News: ಕಾರವಾರದ ಅಸ್ನೋಟಿಯ ಆರವ ಗ್ರಾಮದ ತೋರ್ಲೆಭಾಗದಲ್ಲಿ ಶುಕ್ರವಾರ ದುರ್ಘಟನೆ ನಡೆದಿದೆ. ಮನೆಯ ಪಕ್ಕದ ಹಳೆಯ ಕಟ್ಟಡದ ಬಳಿ ತೆರಳಿದ್ದಾಗ ಮೈಮೇಲೆ ಗೋಡೆ ಕುಸಿದಿದ್ದರಿಂದ ವೃದ್ಧೆ ಮೃತಪಟ್ಟಿದ್ದಾರೆ.

VISTARANEWS.COM


on

Rain News
Koo

ಕಾರವಾರ: ಭಾರಿ ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಮೃತಪಟ್ಟಿರುವ ಘಟನೆ ಕಾರವಾರದ ಅಸ್ನೋಟಿಯ ಆರವ ಗ್ರಾಮದ ತೋರ್ಲೆಭಾಗದಲ್ಲಿ ಶುಕ್ರವಾರ ನಡೆದಿದೆ. ಗುಲಾಬಿ ರಾಮಚಂದ್ರ ಮಾಂಜ್ರೇಕರ್ (70) ಮೃತ ದುರ್ದೈವಿ.

ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದ ವೃದ್ಧೆ, ಚಿತ್ತಾಕುಲದಲ್ಲಿ ಹಣ್ಣಿನ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದರು. ನೆನ್ನೆ ಮಧ್ಯಾಹ್ನ ಮನೆಯ ಪಕ್ಕದ ಹಳೆಯ ಕಟ್ಟಡದ ಬಳಿ ತೆರಳಿದ್ದಾಗ ಮೈಮೇಲೆ ಗೋಡೆ ಕುಸಿದಿದೆ. ಗೋಡೆಯ ಅವಶೇಷಗಳಡಿ ವೃದ್ಧೆ ಮುಚ್ಚಿಹೋಗಿದ್ದರಂದ ಇಂದು ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ತಹಸೀಲ್ದಾರ್ ನಿಶ್ಚಲ ನೊರೋನ್ಹಾ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಡೆಂಗ್ಯೂಗೆ ಮೊದಲ ಬಲಿ

ಬೆಂಗಳೂರು ನಗರದಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದೆ. 80 ವರ್ಷದ ಮಹಿಳೆ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಖಾಸಗಿ ಅಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬೆಂಗಳೂರು ಪೂರ್ವ ವಲಯದ ವಾರ್ಡ್‌ನಲ್ಲಿ ಪ್ರಕರಣ ನಡೆದಿದೆ.

ಬೈಕ್-ಟ್ರ್ಯಾಕ್ಟರ್ ಡಿಕ್ಕಿಯಾಗಿ ಆಹಾರ ಇಲಾಖೆ ನಿರೀಕ್ಷಕ ಸಾವು

ಚಾಮರಾಜನಗರ: ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿ ಆಹಾರ ಇಲಾಖೆ ನಿರೀಕ್ಷಕ ಮೃತಪಟ್ಟು, ಶಿರಸ್ತೇದಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಸಪುರ ಗ್ರಾಮದ ಬಳಿ ನಡೆದಿದೆ.

ಆಹಾರ ಇಲಾಖೆ ನಿರೀಕ್ಷಕ ನಾಗೇಂದ್ರ (46) ಮೃತರು. ಆಹಾರ‌ ಇಲಾಖೆ ಶಿರಸ್ತೇದಾರ ರಮೇಶ್‌ಗೆ ಗಂಭೀರ ಗಾಯಗಳಾಗಿವೆ. ಗುಂಡ್ಲುಪೇಟೆ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಅಧಿಕಾರಿಗಳು, ಇಂದು ಹಂಗಲ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ಮುಗಿಸಿ ಬರುವ ವೇಳೆ ಅವಘಡ ನಡೆದಿದೆ. ಅಪಘಾತದಲ್ಲಿ
ಸ್ಥಳದಲ್ಲೇ ಆಹಾರ ಇಲಾಖೆ ನಿರೀಕ್ಷಕ ನಾಗೇಂದ್ರ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಭೇಟಿ ನೀಡಿ ಪರಿಶೀಲಿಸಿದ್ದು, ಗಾಯಾಳು ರಮೇಶ್‌ರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Road Accident : ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದ ದಂಪತಿ ಮೇಲೆ ಮುರಿದು ಬಿದ್ದ ಬೃಹತ್‌ ಮರ!

ಕಲಬುರಗಿಯಲ್ಲಿ 13 ವರ್ಷದ ಬಾಲಕಿ ಲೈಂಗಿಕ ದೌರ್ಜನ್ಯ, ತೀವ್ರ ರಕ್ತಸ್ರಾವವಾಗಿ ಸಾವು!

ಕಲಬುರಗಿ: ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ 13 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಮೃತಪಟ್ಟಿರುವ ಘಟನೆ (Physical Abuse) ಕಲಬುರಗಿ ನಗರದ ಸಬ್ ಅರ್ಬನ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲೈಂಗಿಕ ದೌರ್ಜನ್ಯದಿಂದ ತೀವ್ರ ರಕ್ತಸ್ರಾವವಾಗಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಜ್ಜಿ ಅಂಗಡಿ ವ್ಯಾಪಾರಿ ಸರ್ಫರಾಜ್ (30) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕಿಯ ಮನೆಗೆ ಹೋಗಿ ಹೆದರಿಸಿ ಕಾರಿನಲ್ಲಿ ಕರೆದುಕೊಂಡು ಹೋಗಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ ತೀವ್ರ ರಕ್ತ ಸ್ರಾವವಾಗಿ ಬಾಲಕಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಅತ್ಯಾಚಾರಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ದಲಿತ ಸೇನೆ ಕಾರ್ಯಕರ್ತರು ರಸ್ತೆ ತಡೆ ನಡೆಸಿ, ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದಾರೆ.

Continue Reading

ಕರ್ನಾಟಕ

Run4Research: ಬೆಂಗಳೂರಿನಲ್ಲಿ ಜೂ.30ರಂದು ʼರನ್4ರೀಸರ್ಚ್ʼ ಓಟ

Run4Research: ಇಂಡಿಯನ್ ಸೊಸೈಟಿ ಫಾರ್ ಕ್ಲಿನಿಕಲ್ ರೀಸರ್ಚ್ (ಐ.ಎಸ್.ಸಿ.ಆರ್.) ವತಿಯಿಂದ ಜೂ.30ರಂದು ಭಾನುವಾರ ಬೆಳಿಗ್ಗೆ 5 ರಿಂದ 9 ರವರೆಗೆ ಬೆಂಗಳೂರಿನ ಎಚ್.ಎಸ್.ಆರ್. ಬಡಾವಣೆಯ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂನಲ್ಲಿ ʼರನ್4ರೀಸರ್ಚ್ʼ ಕ್ಲಿನಿಕಲ್ ರೀಸರ್ಚ್ ಕುರಿತು ಅರಿವನ್ನು ಮೂಡಿಸಲು ಸವಾಲಿನ ಓಟ ಕಾರ್ಯಕ್ರಮ ಏರ್ಪಡಿಸಲಾಗಿದೆ.

VISTARANEWS.COM


on

Run4Research programme on June 30 in Bengaluru
Koo

ಬೆಂಗಳೂರು: ಇಂಡಿಯನ್ ಸೊಸೈಟಿ ಫಾರ್ ಕ್ಲಿನಿಕಲ್ ರೀಸರ್ಚ್ (ಐ.ಎಸ್.ಸಿ.ಆರ್.) ವತಿಯಿಂದ ಜೂ.30 ರಂದು ಭಾನುವಾರ ಬೆಳಿಗ್ಗೆ 5 ಗಂಟೆಯಿಂದ 9 ರವರೆಗೆ ಬೆಂಗಳೂರಿನ ಎಚ್.ಎಸ್.ಆರ್. ಬಡಾವಣೆಯ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂನಲ್ಲಿ ʼರನ್4ರೀಸರ್ಚ್ʼ (Run4Research) ಕ್ಲಿನಿಕಲ್ ರೀಸರ್ಚ್ ಕುರಿತು ಅರಿವನ್ನು ಮೂಡಿಸಲು ಸವಾಲಿನ ಓಟ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಈ ಸವಾಲಿನ ಓಟವು ಭಾರತದ ಉಜ್ವಲ ಕ್ಲಿನಿಕಲ್ ರೀಸರ್ಚ್ ಸಮುದಾಯಕ್ಕೆ ಅರಿವನ್ನು ಉತ್ತೇಜಿಸುವ ಗುರಿ ಹೊಂದಿದೆ. ಅನುಷ್ಠಾನದ ಪಾಲುದಾರ ಸೆಲ್ಲುಲಾದೊಂದಿಗೆ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ 3ಕೆ, 5ಕೆ ಮತ್ತು 10ಕೆ ವಿಭಾಗಗಳಿದ್ದು, ಎಲ್ಲ ಫಿಟ್ನೆಸ್ ಹಂತಗಳ ಭಾಗವಹಿಸುವವರಿಗೆ ಅವಕಾಶ ನೀಡುತ್ತದೆ. ಐ.ಸಿ.ಎಸ್.ಆರ್. ಕ್ಲಿನಿಕಲ್ ರೀಸರ್ಚ್ ಕ್ಷೇತ್ರದಲ್ಲಿ ತೊಡಗಿಕೊಂಡ ಮತ್ತು ಆರೋಗ್ಯದ ಉತ್ಸಾಹಿಗಳನ್ನು ಈ ಉತ್ಸಾಹಕರ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನಿಸುತ್ತಿದೆ.

ಇದನ್ನೂ ಓದಿ: Post Office: ಪೋಸ್ಟ್‌ ಆಫೀಸ್‌ ಉಳಿತಾಯ ಯೋಜನೆಗಳ ಬಡ್ಡಿದರ ಬದಲಾವಣೆ ಇಲ್ಲ; ಬಡ್ಡಿಯ ಪಟ್ಟಿ ಇಲ್ಲಿದೆ

ಇಂಡಿಯನ್ ಸೊಸೈಟಿ ಫಾರ್ ಕ್ಲಿನಿಕಲ್ ರೀಸರ್ಚ್ (ಐ.ಎಸ್.ಸಿ.ಆರ್.) ಭಾರತದಲ್ಲಿ ನೈತಿಕ ಮತ್ತು ಉನ್ನತ ಗುಣಮಟ್ಟದ ಕ್ಲಿನಿಕಲ್ ರೀಸರ್ಚ್ ಉತ್ತೇಜಿಸಲು ಬದ್ಧವಾದ ವೃತ್ತಿಪರ ಸಂಸ್ಥೆಯಾಗಿದೆ. ಐ.ಸಿ.ಎಸ್.ಆರ್.ನ ಉದ್ದೇಶ ಪಾಲುದಾರರೊಂದಿಗೆ ಸಹಯೋಗ ರೂಪಿಸುವುದು ಮತ್ತು ಆರೋಗ್ಯಸೇವಾ ಫಲಿತಾಂಶಗಳನ್ನು ಸುಧಾರಿಸಲು ಕ್ಲಿನಿಕಲ್ ರೀಸರ್ಚ್ ಸುಧಾರಣೆಯನ್ನು ಪ್ರತಿಪಾದಿಸುವುದು. ಹಲವಾರು ಉಪಕ್ರಮಗಳ ಮೂಲಕ ಐ.ಸಿ.ಎಸ್.ಆರ್. ದೇಶದಲ್ಲಿ ಕ್ಲಿನಿಕಲ್ ಟ್ರಯಲ್‌ಗಳ ವೈಜ್ಞಾನಿಕ, ನೈತಿಕ ಮತ್ತು ಕಾರ್ಯಾಚರಣೆಯ ಆಯಾಮಗಳನ್ನು ಹೆಚ್ಚಿಸಲು ಶ್ರಮಿಸುತ್ತದೆ.

ಇದನ್ನೂ ಓದಿ: Bengaluru Power Cut: ಬೆಂಗಳೂರು ನಿವಾಸಿಗಳೇ ಗಮನಿಸಿ; ಜೂ.29ರಂದು ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಇಂಡಿಯನ್ ಸೊಸೈಟಿ ಫಾರ್ ಕ್ಲಿನಿಕಲ್ ರೀಸರ್ಚ್ ಅಧ್ಯಕ್ಷ ಡಾ. ಸನಿಶ್ ಡೇವಿಸ್ ಈ ಕಾರ್ಯಕ್ರಮದ ಕುರಿತು ಮಾತನಾಡಿ, ಕ್ಲಿನಿಕಲ್ ರೀಸರ್ಚ್ ರೋಗಿಗಳಿಗೆ ಹೊಸ ಚಿಕಿತ್ಸೆಗಳನ್ನು ತರುವಲ್ಲಿ ಅತ್ಯಂತ ಮುಖ್ಯವಾಗಿದೆ. ಕ್ಲಿನಿಕಲ್ ಟ್ರಯಲ್‌ಗಳಲ್ಲಿ ಕಠಿಣ ಪರೀಕ್ಷೆಗಳಿಲ್ಲದೆ ಹೊಸ ಔಷಧಗಳು, ಲಸಿಕೆಗಳು ಮತ್ತು ವೈದ್ಯಕೀಯ ಸಾಧನಗಳನ್ನು ಬಳಕೆಗೆ ಅನುಮೋದಿಸಲು ಸಾಧ್ಯವಿಲ್ಲ. ಈ ಕಾರ್ಯಕ್ರಮವು ರೋಗಿಗಳಿಗೆ ಕ್ಲಿನಿಕಲ್ ಟ್ರಯಲ್‌ಗಳ ಪ್ರಾಮುಖ್ಯತೆ ಕುರಿತು ಮತ್ತು ಹೇಗೆ ಅವರ ಭಾಗವಹಿಸುವಿಕೆಯು ಅವರಿಗೆ ಮತ್ತು ಭವಿಷ್ಯದ ತಲೆಮಾರುಗಳಿಗೆ ಪ್ರಯೋಜನವಾಗಬಲ್ಲದು ಎಂದು ಅರಿವನ್ನು ಮೂಡಿಸುವ ಗುರಿ ಹೊಂದಿದೆ ಎಂದು ತಿಳಿಸಿದ್ದಾರೆ.

Continue Reading
Advertisement
Application Invitation to Join Air Wing NCC July 09 is the last day for submission of application
ಕರ್ನಾಟಕ11 mins ago

Air Wing NCC: ಏರ್ ವಿಂಗ್ ಎನ್‌ಸಿಸಿ ಸೇರಲು ಅರ್ಜಿ ಆಹ್ವಾನ; ಜುಲೈ 9 ಕೊನೆಯ ದಿನ

Tulu language
ತಂತ್ರಜ್ಞಾನ24 mins ago

Tulu Translate Google: ಗೂಗಲ್ ಟ್ರಾನ್ಸ್‌ಲೇಟ್‌ನಲ್ಲಿ ತುಳು ಭಾಷೆ ಸೇರ್ಪಡೆ

India is a secular nation because Hindus are the majority says Union Minister Pralhad Joshi
ಕರ್ನಾಟಕ30 mins ago

Pralhad Joshi: ಹಿಂದೂಗಳು ಅಲ್ಪಸಂಖ್ಯಾತರಾದ ದಿನ ಭಾರತ ಜಾತ್ಯತೀತವಾಗಿ ಉಳಿಯದು; ಪ್ರಲ್ಹಾದ್‌ ಜೋಶಿ ಆತಂಕ

IND vs SA
ಪ್ರಮುಖ ಸುದ್ದಿ37 mins ago

IND vs SA: ದಕ್ಷಿಣ ಆಫ್ರಿಕಾದ ಬೌಲಿಂಗ್​ ಶಕ್ತಿ ಭಾರತದ ಬ್ಯಾಟಿಂಗ್​ಗೆ ಲೆಕ್ಕಕ್ಕೇ ಇಲ್ಲ; ಮಾಜಿ ಆಟಗಾರನ ಭವಿಷ್ಯ

Rain News
ಕರ್ನಾಟಕ43 mins ago

Rain News: ಕಾರವಾರದಲ್ಲಿ ಭಾರಿ ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಸಾವು

Maharashtra Budget
ದೇಶ43 mins ago

ಮಹಿಳೆಯರಿಗೆ ಬಂಪರ್‌; ಮಾಸಿಕ 1,500 ರೂ. ಜಮೆ, 3 ಅಡುಗೆ ಅನಿಲ ಸಿಲಿಂಡರ್‌ ಫ್ರೀ ಘೋಷಣೆ

Rahyl Dravid
ಪ್ರಮುಖ ಸುದ್ದಿ1 hour ago

Rahul Dravid : ವಿಶ್ವ ಕಪ್​ ಗೆದ್ದು ಬನ್ನಿ ಅಭಿಯಾನದ ವಿರುದ್ಧ ಸಿಟ್ಟಿಗೆದ್ದ ರಾಹುಲ್ ದ್ರಾವಿಡ್​

Run4Research programme on June 30 in Bengaluru
ಕರ್ನಾಟಕ1 hour ago

Run4Research: ಬೆಂಗಳೂರಿನಲ್ಲಿ ಜೂ.30ರಂದು ʼರನ್4ರೀಸರ್ಚ್ʼ ಓಟ

MLA Dr N T Srinivas drives for crop insurance Awareness jatha in Kudligi
ವಿಜಯನಗರ1 hour ago

Vijayanagara News: ಕೂಡ್ಲಿಗಿಯಲ್ಲಿ ಬೆಳೆ ವಿಮೆ ಜಾಗೃತಿ ಜಾಥಾಕ್ಕೆ ಶಾಸಕ ಶ್ರೀನಿವಾಸ್ ಚಾಲನೆ

physical Abuse
ಕ್ರೈಂ1 hour ago

Physical Abuse: ಕಲಬುರಗಿಯಲ್ಲಿ 13 ವರ್ಷದ ಬಾಲಕಿ ಲೈಂಗಿಕ ದೌರ್ಜನ್ಯ, ತೀವ್ರ ರಕ್ತಸ್ರಾವವಾಗಿ ಸಾವು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ3 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ10 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು1 day ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌