Shri Thanedar: ಮೈಸೂರು ಪಾಕ್‌, ಧಾರವಾಡ ಪೇಡಾ ತಿಂದು ಬೆಳೆದೆ ಎಂದ ಅಮೆರಿಕ ಸಂಸದ; ಯಾರಿವರು? Vistara News

ಕರ್ನಾಟಕ

Shri Thanedar: ಮೈಸೂರು ಪಾಕ್‌, ಧಾರವಾಡ ಪೇಡಾ ತಿಂದು ಬೆಳೆದೆ ಎಂದ ಅಮೆರಿಕ ಸಂಸದ; ಯಾರಿವರು?

Shri Thanedar: ಕೆಲ ದಿನಗಳ ಹಿಂದೆ ಭಾರತಕ್ಕೆ ಆಗಮಿಸಿರುವ ಕರ್ನಾಟಕ ಮೂಲದ ಶ್ರೀ ಥಾಣೆದಾರ್‌ ಅವರು ಎಎನ್‌ಐ ಸುದ್ದಿಸಂಸ್ಥೆಯ ಸ್ಮಿತಾ ಪ್ರಕಾಶ್‌ ಜತೆ ಮಾತನಾಡಿದ್ದಾರೆ. ಇದೇ ವೇಳೆ ಕರ್ನಾಟಕ, ಮೈಸೂರು ಪಾಕ್‌, ಬೆಳಗಾವಿ ಕುಂದಾ ಹಾಗೂ ಧಾರವಾಡ ಪೇಡಾವನ್ನು ನೆನೆದಿದ್ದಾರೆ.

VISTARANEWS.COM


on

Shri Thanedar
ಶ್ರೀ ಥಾಣೆದಾರ್.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಬ್ರಿಟನ್‌, ಅಮೆರಿಕ, ಕೆನಡಾ ಸೇರಿ ಹಲವು ದೇಶಗಳಲ್ಲಿ ಭಾರತೀಯರು ಸಂಸದರು, ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಅವರು ಭಾರತ ಮೂಲದವರಾಗಿದ್ದಾರೆ. ಬೇರೆ ದೇಶಕ್ಕೆ ತೆರಳಿ, ಅಲ್ಲಿ ರಾಜಕೀಯವಾಗಿ ಏಳಿಗೆ ಹೊಂದಿದವರು ಭಾರತವನ್ನು ಮರೆತಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ, ಬೆಳಗಾವಿ ಮೂಲದ ಶ್ರೀ ಥಾಣೆದಾರ್‌ (Shri Thanedar) ಅವರು ಅಮೆರಿಕ ಸಂಸದರಾದರೂ ಅವರು ಕನ್ನಡದ ನೆಲವನ್ನು ಮರೆತಿಲ್ಲ.

ಇದಕ್ಕೆ ನಿದರ್ಶನ ಎಂಬಂತೆ, ಎಎನ್‌ಐ ಪಾಡ್‌ಕಾಸ್ಟ್‌ ವೇಳೆ ಅವರು ಕರ್ನಾಟಕವನ್ನು ನೆನೆದಿದ್ದಾರೆ. “ನಾನು ಮೈಸೂರು ಪಾಕ್‌, ಧಾರವಾಡ ಪೇಡಾ ತಿಂದು ಬೆಳೆದವನು. ಮೈಸೂರು ಪಾಕ್‌ ಕರ್ನಾಟಕದ್ದೇ ಆಗಿದೆ. ನನಗೆ ಕನ್ನಡವೂ ಬರುತ್ತದೆ. ನಾನು ಬೆಳಗಾವಿಯಲ್ಲಿ ಬೆಳೆದಿದ್ದೇನೆ. ನಾನು ಬಡತನವನ್ನೂ ಕಂಡಿದ್ದೇನೆ” ಎಂದು ಬೆಳಗಾವಿಯಲ್ಲಿ ಅವರು ಕಳೆದ ಕಷ್ಟದ ದಿನಗಳನ್ನು ನೆನೆದಿದ್ದಾರೆ. ಹಾಗೆಯೇ, ಸಂದರ್ಶನದ ವೇಳೆ ಅವರು ಮೈಸೂರು ಪಾಕ್‌ ಸವಿದಿದ್ದಾರೆ.

ಮೋದಿ ಜತೆ ಮಾತುಕತೆ

ಕೆಲ ದಿನಗಳ ಹಿಂದೆ ಭಾರತಕ್ಕೆ ಬಂದಿರುವ ಶ್ರೀ ಥಾಣೆದಾರ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಭೇಟಿಯಾಗಿದ್ದಾರೆ. ಸಂದರ್ಶನದ ವೇಳೆ ಅವರು ಮೋದಿ ಜತೆಗಿನ ಭೇಟಿಯ ಅನುಭವವನ್ನು ಹಂಚಿಕೊಂಡಿದ್ದಾರೆ. “ನರೇಂದ್ರ ಮೋದಿ ಜತೆಗಿನ ಭೇಟಿ ಅದ್ಭುತವಾಗಿತ್ತು. ಅವರು ನನಗೆ ಹಲವು ರಾಜಕೀಯ ಸಲಹೆಗಳನ್ನು ನೀಡಿದ್ದರು. ಹಾಗೆಯೇ, ಅವರು ಅಮೆರಿಕಕ್ಕೆ ಭೇಟಿ ನೀಡಿದ್ದಾಗಿನ ಅನುಭವವನ್ನು ನನಗೆ ಹಂಚಿಕೊಂಡರು. ಮೋದಿ ಅವರು ಸ್ನೇಹಕ್ಕೆ ಎಷ್ಟು ಬೆಲೆ ನೀಡುತ್ತಾರೆ ಎಂಬುದು ಭೇಟಿ ಬಳಿಕ ಗೊತ್ತಾಯಿತು” ಎಂದಿದ್ದಾರೆ. ಭಾರತದ ಆರ್ಥಿಕತೆ, ನರೇಂದ್ರ ಮೋದಿ, ಅಮೆರಿಕ-ಭಾರತ ಸಂಬಂಧ ಸೇರಿ ಹಲವು ವಿಚಾರಗಳ ಕುರಿತು ಶ್ರೀ ಥಾಣೆದಾರ್‌ ತಿಳಿಸಿದ್ದಾರೆ.

ಸಂದರ್ಶನದ ಪೂರ್ತಿ ವಿಡಿಯೊ

ಇದನ್ನೂ ಓದಿ: Rishi Sunak: ಬ್ರಿಟನ್​ ಪ್ರಧಾನಿ ರಿಷಿ ಸುನಕ್​ ಅವರ ಫೇವರಿಟ್​ ಕ್ರಿಕೆಟಿಗ ಭಾರತೀಯನಂತೆ!

ಯಾರಿವರು ಶ್ರೀ ಥಾಣೆದಾರ್?‌

ಶ್ರೀ ಥಾಣೆದಾರ್‌ ಅವರು ಬೆಳಗಾವಿಯಲ್ಲಿ ಹುಟ್ಟಿ ಬೆಳೆದಿದ್ದಾರೆ. ಇವರು 1979ರಲ್ಲಿ ಅಮೆರಿಕಕ್ಕೆ ತೆರಳಿ ಪಿಎಚ್‌.ಡಿ ಅಧ್ಯಯನ ಮಾಡಿ, ಅಲ್ಲಿಯೇ ನೆಲೆಸಿದ್ದಾರೆ. ಇತ್ತೀಚೆಗೆ ಅಮೆರಿಕದಲ್ಲಿ ನಡೆದ ಮಧ್ಯಂತರ ಚುನಾವಣೆಯಲ್ಲಿ ಡೆಮಾಕ್ರಟಿಕ್‌ ಪಕ್ಷದಿಂದ ಸ್ಪರ್ಧಿಸಿದ ಶ್ರೀ ಥಾಣೆದಾರ್‌ ಅವರು ಸಂಸತ್‌ ಪ್ರವೇಶಿಸಿದ್ದಾರೆ. ಕಳೆದ ನಾಲ್ಕು ದಶಕದಿಂದ ಇವರು ಅಮೆರಿಕದಲ್ಲಿಯೇ ನೆಲೆಸಿದ್ದಾರೆ. ಥಾಣೆದಾರ್‌ ಅವರು ಭಾರತದಲ್ಲಿ ವಿಜ್ಞಾನಿಯೂ ಆಗಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Pooja Gandhi: ಮಳೆ ಹುಡುಗಿಗೆ ಮಂತ್ರ ಮಾಂಗಲ್ಯ; ಹೊಸ ಬಾಳಿಗೆ ಕಾಲಿಟ್ಟ ಪೂಜಾ ಗಾಂಧಿ

Pooja Gandhi: ಬೆಂಗಳೂರಿನ ಉದ್ಯಮಿ ವಿಜಯ್ ಘೋರ್ಪಡೆ ಅವರೊಂದಿಗೆ ನಟಿ ಪೂಜಾ ಗಾಂಧಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಚಿತ್ರ ರಂಗದ ಗಣ್ಯರು, ಅಭಿಮಾನಿಗಳು ನವದಂಪತಿಗೆ ಶುಭ ಹಾರೈಸಿದ್ದಾರೆ.

VISTARANEWS.COM


on

Pooja Gandhi and Vijay Ghorpade
Koo

ಬೆಂಗಳೂರು: ನಟಿ ಪೂಜಾ ಗಾಂಧಿ (Pooja Gandhi) ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉದ್ಯಮಿ ಹಾಗೂ ಬಹುಕಾಲದ ಗೆಳೆಯ ವಿಜಯ್ ಘೋರ್ಪಡೆ ಅವರನ್ನು ಮಳೆ ಹುಡುಗಿ ಮದುವೆಯಾಗಿದ್ದು, ಮಂತ್ರ ಮಾಂಗಲ್ಯ ಪದ್ಧತಿಯಲ್ಲಿ ಬಂಧು-ಮಿತ್ರರು, ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಬುಧವಾರ ಸರಳವಾಗಿ ವಿವಾಹವಾಗಿದ್ದಾರೆ.

ವಿವಾಹ ಸಮಾರಂಭದಲ್ಲಿ ನಿರ್ದೇಶಕ ಯೋಗರಾಜ್ ಭಟ್, ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಂ. ಸುರೇಶ್, ಸಾಹಿತಿ ಜಯಂತ್ ಕಾಯ್ಕಿಣಿ, ನಟಿ ಸುಧಾರಣಿ, ಶುಭಾ ಪೂಂಜಾ, ನಿರ್ದೇಶಕಿ ಸುಮನಾ ಕಿತ್ತೂರು ಮತ್ತಿತರರು ಭಾಗವಹಿಸಿ, ನವ ದಂಪತಿಗೆ ಶುಭ ಕೋರಿದರು.

ಮೂಲತಃ ಉತ್ತರ ಪ್ರದೇಶದವರಾದ ಪೂಜಾ ಗಾಂಧಿ ಕನ್ನಡ ಚಿತ್ರಗಳಲ್ಲಿ ಅಭಿನಯಿಸುತ್ತ ಬೆಂಗಳೂರಿನಲ್ಲೇ ಕೆಲವು ಸಮಯದಿಂದ ನೆಲೆಸಿದ್ದಾರೆ. ತಮ್ಮ ಕನ್ನಡ ಪ್ರೀತಿಯಿಂದಲೇ ಕನ್ನಡಿಗರ ಮನಸ್ಸು ಗೆದ್ದಿದ್ದಾರೆ. ಕನ್ನಡ ಮಾತನಾಡಲು ಅಷ್ಟೇ ಅಲ್ಲ ಓದಲು ಮತ್ತು ಬರೆಯಲು ಅವರು ಕಲಿತಿದ್ದು, ಮೆಚ್ಚುಗೆ ವ್ಯಕ್ತವಾಗಿದೆ.

ವಿಜಯ್ ಅವರೇ ಪೂಜಾ ಗಾಂಧಿಯವರಿಗೆ ಕನ್ನಡ ಕಲಿಸಿರುವುದಾಗಿ ಮಾಹಿತಿ ಇದೆ. ಪೂಜಾ ಗಾಂಧಿ ಹಾಗೂ ವಿಜಯ್ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಯಲ್ಲಿದ್ದರು. ಕನ್ನಡ ಕಲಿತು ಕನ್ನಡಿಗನನ್ನು ಮದುವೆಯಾಗುವ ಮೂಲಕ ಇದೀಗ ಕರ್ನಾಟಕದ ಸೊಸೆಯಾಗಿದ್ದಾರೆ. ಪೂಜಾ ಗಾಂಧಿ ಕನ್ನಡ ಕಲಿತಿರುವುದು ಮಾತ್ರವಲ್ಲ ಅವರ ತಾಯಿಗೂ ಕನ್ನಡ ಹೇಳಿ ಕೊಟ್ಟಿದ್ದಾರೆ ಎನ್ನುವುದು ವಿಶೇಷ. 2012ರಲ್ಲಿ ಪೂಜಾ ಗಾಂಧಿ ಅವರಿಗೆ ಉದ್ಯಮಿ ಆನಂದ್ ಗೌಡ ಜತೆ ನಿಶ್ಚಿತಾರ್ಥವಾಗಿತ್ತು. ನಂತರ ಅದು ಮುರಿದು ಬಿದ್ದಿತ್ತು. ಈಗ ವಿಜಯ್ ಘೋರ್ಪಡೆ ಜತೆ ವಿವಾಹವಾಗಿದೆ.

ಇದನ್ನೂ ಓದಿ | Actress Ramya: ಹುಟ್ಟುಹಬ್ಬದಂದು ನಾಯಿಮರಿಗಳೊಂದಿಗೆ ಕಾಲಕಳೆದ ಮೋಹಕ ತಾರೆ ರಮ್ಯಾ

ಹಿಂದಿ, ಬಂಗಾಳಿ ಚಿತ್ರಗಳಲ್ಲಿ ನಟಿಸುತ್ತಿದ್ದ ಪೂಜಾ ಗಾಂಧಿ 2006ರಲ್ಲಿ ತೆರೆಕಂಡ ʼಮುಂಗಾರು ಮಳೆʼ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟರು. ಯೋಗರಾಜ್‌ ಭಟ್‌ ನಿರ್ದೇಶನದ ಈ ಚಿತ್ರ ಕನ್ನಡದಲ್ಲಿ ದಾಖಲೆಯ ಕಲೆಕ್ಷನ್‌ ಮಾಡಿತ್ತು. ಗೋಲ್ಡನ್‌ ಸ್ಟಾರ್‌ ಗಣೇಶ್‌ ಮತ್ತು ಪೂಜಾ ಗಾಂಧಿ ಈ ಚಿತ್ರದ ಮೂಲಕ ಸ್ಟಾರ್‌ ಆಗಿ ಹೊರ ಹೊಮ್ಮಿದ್ದರು. ಬಳಿಕ ಪೂಜಾ ಗಾಂಧಿ ಪುನೀತ್‌ ರಾಜ್‌ ಕುಮಾರ್‌, ಯಶ್‌, ಉಪೇಂದ್ರ ಮುಂತಾದವರ ಸಿನಿಮಾಗಳಲ್ಲಿ ನಟಿಸಿ ಜನಪ್ರಿಯರಾಗಿದ್ದಾರೆ. ಜತೆಗೆ ತಮಿಳು, ತೆಲುಗು, ಮಲೆಯಾಳಂ ಚಿತ್ರಗಳಲ್ಲಿಯೂ ಅಭಿನಯಿಸಿದ್ದಾರೆ.

Continue Reading

ಕರ್ನಾಟಕ

Mohandas Pai : ಐಟಿ ಸಿಟಿ ಗರಿ ಉದುರೀತು ಎಂದ ಮೋಹನ್‌ ದಾಸ್‌ ಪೈ, ಪ್ರಿಯಾಂಕ್‌ ತಿರುಗೇಟು

Mohandas Pai : ಐಟಿ ಕಂಪನಿಗಳು ಹೈದರಾಬಾದ್‌ ನತ್ತ ಹೋಗುತ್ತಿವೆ, ಇದು ಐಟಿ ಹಬ್‌ ಖ್ಯಾತಿಯ ಬೆಂಗಳೂರಿಗೆ ಎಚ್ಚರಿಕೆ ಎಂದಿದ್ದಾರೆ ಉದ್ಯಮಿ ಟಿ.ವಿ ಮೋಹನದಾಸ್‌ ಪೈಕಿ. ಇದಕ್ಕೆ ಐಟಿ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ.

VISTARANEWS.COM


on

TV Mohandas Pai Priyank Kharge
Koo

ಬೆಂಗಳೂರು: ರಾಜ್ಯ ಸರ್ಕಾರ (State Government) ಹೀಗೇ ನಿರ್ಲಕ್ಷ್ಯ ಮಾಡುತ್ತಾ ಹೋದರೆ ಬೆಂಗಳೂರಿಗೆ ಇರುವ ಐಟಿ ನಗರಿ (IT City feather) ಎಂಬ ಗರಿಮೆಗೆ ಕುತ್ತು ಬಂದೀತು ಎಂದು ಹಿರಿಯ ಉದ್ಯಮಿ ಟಿ.ವಿ. ಮೋಹನ್‌ ದಾಸ್‌ ಪೈ (TV Mohandas Pai) ಅವರು ಚಾಟಿ ಏಟು ನೀಡಿದ್ದಾರೆ. ಆದರೆ, ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಐಟಿ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಅವರು ʻಗಾಳಿಯಲ್ಲಿ ಗುಂಡು ಹೊಡೆಯಬೇಡಿʼʼ ಎಂದಿದ್ದಾರೆ.

analyticsindiamag.com ಎಂಬ ವೆಬ್‌ಸೈಟ್‌ ಪ್ರಕಟಿಸಿದ Will Hyderabad Dethrone Bangalore in the IT Hub Race? (ಐಟಿ ಹಬ್‌ ಪೈಪೋಟಿಯಲ್ಲಿ ಹೈದರಾಬಾದ್‌ ಬೆಂಗಳೂರನ್ನು ಅಗ್ರಪಟ್ಟದಿಂದ ಕಿತ್ತೆಸೆಯಬಹುದೇ?) ಎಂಬ ವರದಿಯನ್ನು ಮುಂದಿಟ್ಟುಕೊಂಡು ಟಿ.ವಿ. ಮೋಹನ್‌ದಾಸ್‌ ಪೈ ಅವರು ಟ್ವೀಟ್‌ ಒಂದನ್ನು ಮಾಡಿದ್ದಾರೆ. ವೆಬ್‌ಸೈಟ್‌ ವರದಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಟ್ಯಾಗ್‌ ಮಾಡಿದ ಟ್ವೀಟ್‌ನಲ್ಲಿ Will Hyderabad Dethrone Bangalore’s IT Status? continued neglect of Bengaluru by successive govts over last 10 years has led to this. Hope govt shows more energy to improve city ಎಂದು ಬರೆದಿದ್ದಾರೆ. ಅಂದರೆ, ಐಟಿ ಕ್ಷೇತ್ರದ ಅಗ್ರಗಣ್ಯ ಎಂಬ ಬೆಂಗಳೂರಿನ ಸ್ಥಾನಮಾನವನ್ನು ಹೈದರಾಬಾದ್‌ ಕಿತ್ತು ಹಾಕಬಹುದೇ? ಇದಕ್ಕೆ ಕಾರಣವಾಗಿರುವುದು ಕಳೆದ ಹತ್ತು ವರ್ಷಗಳಲ್ಲಿ ಅಧಿಕಾರ ನಡೆಸಿದ ಸರ್ಕಾರಗಳು ವಹಿಸಿದ ದಿವ್ಯ ನಿರ್ಲಕ್ಷ್ಯ. ಸರ್ಕಾರ ನಗರದ ಅಭಿವೃದ್ಧಿಗಾಗಿ ಹೆಚ್ಚು ಶಕ್ತಿಯನ್ನು ವಿನಿಯೋಗಿಸುತ್ತದೆ ಎಂದು ಭಾವಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಹಿರಿಯ ಉದ್ಯಮಿ ಆನಂದ ಮಹೇಂದ್ರ ಅವರು ಇತ್ತೀಚೆಗೆ ಒಂದು ಮಾತು ಹೇಳಿದ್ದರು: ಗೂಗಲ್‌ ಕಂಪನಿಯು ಹೈದರಾಬಾದ್‌ನಲ್ಲಿ ತನ್ನ ದೊಡ್ಡ ಕಚೇರಿಯನ್ನು ಸ್ಥಾಪಿಸಲಿದೆ. ಅಮೆರಿಕದ ಹೊರಗಡೆ ಅತಿ ದೊಡ್ಡ ಕಚೇರಿಯನ್ನು ನಿರ್ಮಿಸಲು ಮುಂದಾಗಿರುವುದು ಒಂದು ಗೂಗಲ್‌ ಭೌಗೋಳಿಕ ರಾಜಕೀಯ ಪ್ರಯತ್ನ. ಈ ಕ್ರಮವು ಭಾರತೀಯ ಟೆಕ್‌ ವಾತಾವರಣಕ್ಕೆ ಒಂದು ಗುಡ್‌ ನ್ಯೂಸ್‌. ಆದರೆ, ಗೂಗಲ್‌ ಸಿಲಿಕಾನ್‌ ವ್ಯಾಲಿ ಎಂದೇ ಹೆಸರಾಗಿರುವ ಭಾರತದ ನಿರ್ವಿವಾದಿತ ಐಟಿ ರಾಜಧಾನಿಯಾಗಿರುವ ಬೆಂಗಳೂರನ್ನು ಬಿಟ್ಟು ಹೈದರಾಬಾದ್‌ನ್ನು ಆಯ್ಕೆ ಮಾಡಿರುವುದು ಏನೋ ಅಸಂಬದ್ಧ ಅನಿಸುತ್ತದೆ.

ಈ ಅಂಶಗಳನ್ನು ಉಲ್ಲೇಖಿಸಿ ಮಾಡಿರುವ ವರದಿಗೆ ಹೈದರಾಬಾದ್‌ ಬೆಂಗಳೂರನ್ನು ಅಗ್ರ ಪಟ್ಟದಿಂದ ಕಿತ್ತು ಹಾಕಬಹುದೇ ಎಂಬ ಪ್ರಶ್ನಾರ್ಥಕ ಚಿಹ್ನೆಯೊಂದಿಗೆ ವರದಿ ಮಾಡಿದೆ.

ಟಿ.ವಿ. ಮೋಹನ್‌ ದಾಸ್‌ ಪೈ ಅವರು ಈ ಅಂಶವನ್ನು ಇಟ್ಟುಕೊಂಡು ಟ್ವೀಟ್‌ ಮಾಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಚಾಟಿ ಬೀಸುತ್ತಿರುವುದು ಇದು ಮೊದಲೇನಲ್ಲ. ಹಿಂದೆ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗಲೂ ಅವರು ಬೆಂಗಳೂರು ನಗರದ ರಸ್ತೆಗಳ ವಿಚಾರದಲ್ಲಿ ಆಕ್ಷೇಪ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಅವರ ಗಮನವನ್ನು ಸೆಳೆದಿದ್ದರು.

ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯ ಸಂದರ್ಭದಲ್ಲಿ ಕೆಲವು ಐಟಿ ಕಂಪನಿಗೆ ನೀರು ನುಗ್ಗಿದಾಗಲೂ ಮೋಹನ್‌ ದಾಸ್‌ ಪೈ ಅವರು ಹೀಗೇ ಆದರೆ ಇಲ್ಲಿನ ಕಂಪನಿಗಳು ವಲಸೆ ಹೋಗುವ ಸಾಧ್ಯತೆಗಳಿವೆ ಎಂದಿದ್ದರು. ಈ ನಡುವೆ ಅವರ ಮಾತಿಗೆ ಪೂರಕವಾಗಿ ಬೆಂಗಳೂರಿನಲ್ಲಿ ಪ್ರಾರಂಭವಾಗಬೇಕಿದ್ದ ಕೆಲ ಐಟಿ ಕಂಪನಿ ಹೈದರಾಬಾದ್ ಗೆ ಶಿಫ್ಟ್ ಆಗುತ್ತಿವೆ ಎಂಬ ಮಾಹಿತಿಯೂ ಇದೆ. ಈ ಬಗ್ಗೆ ಐಟಿ ಕಂಪನಿಗಳು ಹಲವು ಬಾರಿ ಸರ್ಕಾರಕ್ಕೆ ಮಾಹಿತಿ ನೀಡಿವೆ ಎನ್ನಲಾಗಿದೆ. ಇದನ್ನು ಬಳಸಿಕೊಂಡು ಮೋಹನ್‌ ದಾಸ್‌ ಪೈ ಅವರು ಸರ್ಕಾರಕ್ಕೆ ಮಾರ್ಮಿಕವಾಗಿ ಕುಟುಕಿದ್ದಾರೆ.

ರಾಜ್ಯ ವಿರೋಧಿ ಹೇಳಿಕೆ ಸಲ್ಲ: ಮೋಹನ್‌ದಾಸ್‌ ಪೈಗೆ ಪ್ರಿಯಾಂಕ್‌ ತಿರುಗೇಟು

ಮೋಹನ್ ದಾಸ್ ಪೈ ಅವರು ಮಾಡಿರುವ ಟ್ವೀಟ್‌ಗೆ ಮಾಹಿತಿ ಮತ್ತು ತಂತ್ರಜ್ಞಾನ ಖಾತೆ ಸಚಿವ ಪ್ರಿಯಾಂಕ್‌ ಖರ್ಗೆ ಅವರು ತಿರುಗೇಟು ನೀಡಿದ್ದಾರೆ.

ʻʻಮೋಹನ್ ದಾಸ್ ಪೈ ಅವರಿಗೆ ಮಾಹಿತಿ ಕೊರತೆ ಇದೆ. ಒಂದೇ ಒಂದು ಸಿಂಗಲ್ ಕಂಪನಿ ಕರ್ನಾಟಕ ಬಿಟ್ಟು ಹೋಗಿಲ್ಲ. ಕೆಲವರಿಗೆ ಕರ್ನಾಟಕ ವಿರೋಧಿ ಹೇಳಿಕೆ ಕೊಡೋದು ಹ್ಯಾಬಿಟ್ ಆಗಿದೆ. ಇದನ್ನು ಪದೇಪದೆ ಮಾಡುವುದು ಸರಿಯಲ್ಲ. ಅವರು ಒಂದೇ ಒಂದು ಕಂಪನಿಯ ಉದಾಹರಣೆ ನೀಡಲಿ ನೋಡೋಣ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾಕುವುದು ಬೇಡʼʼ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ʻʻಇದೇ ಮೋಹನ್ ದಾಸ್ ಪೈ ಬೇರೆ ಬೇರೆ ರಾಜ್ಯಗಳ ಕಂಪನಿಗಳಿಗೆ ಬಂಡವಾಳ ಹಾಕುವುದಿಲ್ವಾ? ಅವರು ಡೈವರ್ಸಿಫಿಕೇಷನ್ ಮಾಡಿದ್ರೆ ಸರಿ, ಬೇರೆಯವರು ಮಾಡಿದ್ರೆ ತಪ್ಪಾ? ಅವರು ಕನ್ನಡಿಗರ ಪರವಾಗಿ ಮಾತನಾಡಬೇಕೇ ಹೊರತು ಈ ರೀತಿ ಮಾತನಾಡಬಾರದುʼʼ ಎಂದು ಹೇಳಿದ್ದಾರೆ ಪ್ರಿಯಾಂಕ್‌ ಖರ್ಗೆ.

ಇವರೇ ಅಲ್ವಾ ಎಲ್ಲ ವಿಷನ್ ಗ್ರೂಪ್‌ಗಳಲ್ಲಿ ಇದ್ದವರು? ಎಂದು ಕೇಳಿರುವ ಪ್ರಿಯಾಂಕ್‌ ಖರ್ಗೆ, ಫಿಲಿಪ್ಸ್ ಇನೊವೇಶನ್ ರಾಜ್ಯಕ್ಕೆ ಬಂದಾಗ ಇವರು ಬೆನ್ನು ತಟ್ಟಿದ್ರಾ ಎಂದು ಪ್ರಶ್ನೆ ಮಾಡಿದ್ದಾರೆ.

ʻʻಸಕಾರಾತ್ಮಕವಾಗಿ ಎಲ್ಲರ ಅಭಿಪ್ರಾಯ ಸಂಗ್ರಹ ಮಾಡ್ತೇವೆ. ಅವರ ಮಾತುಗಳಿಂದ ನಮಗೆ ರಾಜ್ಯಕ್ಕೆ ಬಂಡವಾಳ ಬರುತ್ತದೆ ಎಂದು ಭಾವಿಸುತ್ತೇವೆ. ಆದರೆ, ಪದೇಪದೆ ಯಾಕೆ ಹೀಗೆ ನೆಗೆಟಿವ್ ಆಗಿ ಮಾತನಾಡ್ತಾರೆ ಗೊತ್ತಿಲ್ಲʼʼ ಎಂದು ಹೇಳಿರುವ ಪ್ರಿಯಾಂಕ್‌ ಖರ್ಗೆ, ಯಾವ ಬಂಡವಾಳ ಕೂಡ ರಾಜ್ಯದಿಂದ ವಾಪಸ್ ಹೊರಗಡೆ ಹೋಗಿಲ್ಲ ಎಂದಿದ್ದಾರೆ.

ʻʻಸರ್ಕಾರಕ್ಕೆ ಬ್ಲ್ಯಾಕ್ ಮೇಲ್ ಮಾಡುವಂತ ವ್ಯಕ್ತಿ ಅವರಲ್ಲ. ಆದರೆ ಪದೇ ಪದೇ ಕರ್ನಾಟಕ ವಿರೋಧಿ ನಿಲುವು ತಾಳಬಾರದುʼʼ ಎಂದು ಎಚ್ಚರಿಕೆಯ ಧ್ವನಿಯಲ್ಲಿ ಹೇಳಿದ್ದಾರೆ.

ಮೂಲಸೌಕರ್ಯ ಕೊಡಲು ಸರ್ಕಾರ ವಿಫಲ ಎಂದ ಅಶ್ವತ್ಥನಾರಾಯಣ

ಈ ನಡುವೆ, ಮೋಹನ್ ದಾಸ್ ಪೈ ಟ್ವೀಟ್‌ ಅನ್ನು ಸಮರ್ಥಿಸಿ ಮಾತನಾಡಿರುವ ಮಾಜಿ ಐಟಿಬಿಟಿ ಸಚಿವ ಅಶ್ವಥ್ ನಾರಾಯಣ್ ಅವರು, ಎಲ್ಲಾ ಆವಿಷ್ಕಾರವಂತರು, ತಂತ್ರಜ್ಞಾನದವರು ಮತ್ತು ಉದ್ಯಮಶೀಲ ಇವರೆಲ್ಲರಿಗೂ ಬೆಂಗಳೂರು ಬೇಕು. ಆದರೆ, ಮೂಲಭೂತ ಸೌಕರ್ಯಗಳ ಕೊಡುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದರು.

ʻʻಭ್ರಷ್ಟಾಚಾರ ಹೆಚ್ಚುತ್ತಿದೆ. ಬಿಲ್ಡರ್ ಗಳು ಬಿಲ್ಡಿಂಗ್ ಕಟ್ಟಲು ತಯಾರಿಲ್ಲ. ಅವರಿಗೆ ಸಿಗುವ ಮಾರ್ಜಿನ್‌ ಹಣವನ್ನೂ ಸೇರಿಸಿ ಲಂಚ ಕೊಡುವ ಪರಿಸ್ಥಿತಿ ಇದೆ. ಹಾಗಾಗಿ ಎಲ್ಲರಿಗೂ ಹೈದರಾಬಾದ್ ಆಟ್ರಾಕ್ಷನ್ ಆಗುತ್ತದೆ. ಹೈದರಾಬಾದ್ ನಮ್ಮ ವ್ಯಾಪಾರಕ್ಕೆ ಉತ್ತಮವಾಗಿರುವ ಸ್ಥಳ ಎಂದು ಅವರಿಗೆ ಅನಿಸುತ್ತದೆʼʼ ಎಂದಿದ್ದಾರೆ ಅಶ್ವತ್ಥ್‌ ನಾರಾಯಣ್‌.

ʻʻಏನೂ ಮಾಡಲಿಲ್ಲ ಅಂದ್ರೂ ಬೆಂಗಳೂರಿಗೆ ಬರ್ತಾರೆ ಎಂಬ ಧೋರಣೆ ಬೆಂಗಳೂರಿಗೆ ಕಂಟಕವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ , ಅವರು ಸರ್ಕಾರ ಸಚಿವರು ಎಚ್ಚೆತ್ತುಕೊಳ್ಳಬೇಕಾಗಿದೆʼʼ ಎಂದು ಅವರು ಹೇಳಿದರು.

Continue Reading

ಕರ್ನಾಟಕ

Actress Ramya: ಹುಟ್ಟುಹಬ್ಬದಂದು ನಾಯಿಮರಿಗಳೊಂದಿಗೆ ಕಾಲಕಳೆದ ಮೋಹಕ ತಾರೆ ರಮ್ಯಾ

Actress Ramya: ಸ್ಯಾಂಡಲ್‌ವುಡ್‌ ಕ್ವೀನ್ ನಟಿ ರಮ್ಯಾ ಅವರು 41ನೇ ವಸಂತಕ್ಕೆ ಕಾಲಿಟ್ಟಿದ್ದು, ಅಭಿಮಾನಿಗಳು ತಮ್ಮ ನೆಚ್ಚಿನ ನಟಿಗೆ ಸಾಮಾಜಿಕ ಜಾಲತಾಣಗಳಲ್ಲಿ ಜನ್ಮದಿನದ ಶುಭಾಶಯಗಳನ್ನು ಕೋರುತ್ತಿದ್ದಾರೆ.

VISTARANEWS.COM


on

Actress Ramya
Koo

ಬೆಂಗಳೂರು: ಮೋಹಕ ತಾರೆ, ಸ್ಯಾಂಡಲ್‌ವುಡ್‌ ಕ್ವೀನ್ ನಟಿ ರಮ್ಯಾ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 41ನೇ ವಸಂತಕ್ಕೆ ಕಾಲಿಟ್ಟಿರುವ ತಮ್ಮ ನೆಚ್ಚಿನ ನಟಿಗೆ (Actress Ramya) ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯ ಕೋರುತ್ತಿದ್ದಾರೆ. ಮತ್ತೊಂದೆಡೆ ರಮ್ಯಾ ಜನುಮದಿನವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದು, ತಮಗೆ ಇಷ್ಟವಾದವರ ಜತೆ ಕಾಲ ಕಳೆದ ವಿಡಿಯೊವೊಂದನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನಟಿ ರಮ್ಯಾ ಅವರಿಗೆ ಶ್ವಾನಗಳೆಂದರೆ ಬಹಳ ಪ್ರೀತಿ. ಮನೆಯಲ್ಲಿ ಹಲವು ನಾಯಿಗಳನ್ನು ಅವರು ಸಾಕಿದ್ದಾರೆ. ಹೀಗಾಗಿ ಬರ್ತ್‌ಡೇ ದಿನ ಮುದ್ದಾದ ನಾಯಿ ಮರಿಗಳ ಜತೆ ಅವರು ಕಾಲಕಳೆದಿದ್ದು, ಆ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. “ನಿಮ್ಮ ಶುಭಾಶಯಗಳು ನನ್ನ ಮನಸ್ಸಿಗೆ ಸಂತೋಷ ನೀಡಿದಂತೆ ಈ ವಿಡಿಯೊ ನಿಮ್ಮ ಮನಸ್ಸಿಗೆ ಮುದ ನೀಡುವ ಭರವಸೆ ಇದೆ” ಎಂದು ಕ್ಯಾಪ್ಷನ್ ಬರೆದುಕೊಂಡಿದ್ದಾರೆ.

ಶ್ವಾನ ಪ್ರೇಮಿಯಾಗಿರುವ ರಮ್ಯಾ ಅವರು ಬೀದಿ ನಾಯಿಗಳ ಸಂರಕ್ಷಣೆಗಾಗಿ ಕೆಲಸ ಮಾಡುವ ಸಂಘ-ಸಂಸ್ಥೆಗಳ ಜತೆಗೂ ಗುರುತಿಸಿಕೊಂಡಿದ್ದಾರೆ. ಇವರ ಶ್ವಾನಗಳೆಂದರೆ ಅದೆಷ್ಟು ಇಷ್ಟವೆಂದರೆ, ಒಮ್ಮೆ ತಮ್ಮ ಮುದ್ದಿನ ನಾಯಿ ನಾಪತ್ತೆಯಾಗಿದ್ದರಿಂದ ಉತ್ತರ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣಾ ಪ್ರಚಾರ ಕಾರ್ಯ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್‌ ಆಗಿದ್ದರು. ನಂತರ ನಾಯಿ ಹುಡುಕಿಕೊಟ್ಟವರಿಗೆ ಸೂಕ್ತ ಬಹುಮಾನ ನೀಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದರೆ. ಆದರೆ, ಕಾಣೆಯಾಗಿದ್ದ ನಾಯಿ ʼಚಾಂಪ್‌ʼ ಮೃತಪಟ್ಟಿತ್ತು. ಇದರಿಂದ ಅವರು ಬಹಳ ಬೇಸರಗೊಂಡಿದ್ದರು.

ಇದನ್ನೂ ಓದಿ | Darshan: ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌; ‘ಕಾಟೇರ’ ಬಿಡುಗಡೆ ದಿನಾಂಕ ಘೋಷಣೆ

ರಾಜಕೀಯಕ್ಕೆ ಎಂಟ್ರಿ ನೀಡಿದ್ದರಿಂದ ಚಿತ್ರರಂಗದಿಂದ ದೂರವಾಗಿದ್ದ ನಟಿ ರಮ್ಯಾ ಅವರು ಈಗ ಮತ್ತೆ ಚಿತ್ರರಂಗಕ್ಕೆ ಮರಳಿ ಎರಡನೇ ಇನಿಂಗ್ಸ್‌ ಆರಂಭಿಸಿದ್ದಾರೆ. ‘ಆ್ಯಪಲ್ ಬಾಕ್ಸ್’ ಹೆಸರಿನ ಸ್ವಂತ ನಿರ್ಮಾಣ ಸಂಸ್ಥೆ ಪ್ರಾರಂಭಿಸಿ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ನಿರ್ಮಿಸಿದ್ದಾರೆ. ಈ ಚಿತ್ರಕ್ಕೆ ಅವರೇ ನಾಯಕಿ ಎಂದು ಮೊದಲು ಹೇಳಲಾಗಿತ್ತು. ಆದರೆ, ನಂತರ ಅವರ ಸ್ಥಾನಕ್ಕೆ ನಟಿ ಸಿರಿ ರವಿಕುಮಾರ್‌ ಆಯ್ಕೆಯಾಗಿದ್ದರು. ಇದಕ್ಕೂ ಮೊದಲು ‘ಹಾಸ್ಟೆಲ್ ಹುಡುಗರು’ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿಯೂ ನಟಿಸಿದ್ದರು. ಇದೀಗ ಡಾಲಿ ಧನಂಜಯ್ ನಟನೆಯ ‘ಉತ್ತರಕಾಂಡ’ ಸಿನಿಮಾದಲ್ಲಿಯೂ ರಮ್ಯಾ ನಟಿಸಿದ್ದಾರೆ. ಈ ಚಿತ್ರದಲ್ಲಿ ಶಿವರಾಜ್ ಕುಮಾರ್ ಅವರು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉದ್ಯೋಗ

ಜೀವನ ಪ್ರಮಾಣ ಪತ್ರ ಇನ್ನೂ ಸಲ್ಲಿಸಿಲ್ಲವೇ? ನಾಳೆಯೇ ಕೊನೇ ದಿನ! ಇಲ್ದಿದ್ರೆ ಸಿಗಲ್ಲ ಪೆನ್ಶನ್

ನಿವೃತ್ತ ಸರ್ಕಾರಿ ನೌಕರರು ಪಿಂಚಣಿ ಪಡೆಯಲು ಕಡ್ಡಾಯವಾಗಿ ಜೀವನ ಪ್ರಮಾಣ ಪತ್ರ ಸಲ್ಲಿಸಬೇಕು. ಇದಕ್ಕೆ ನವೆಂಬರ್‌ 30 ಕೊನೆಯ ದಿನವಾಗಿದ್ದು, ಗಡುವಿನೊಳಗೆ ಸಲ್ಲಿಸದಿದ್ದರೆ ಪಿಂಚಣಿ ಸ್ಥಗಿತವಾಗಲಿದೆ.

VISTARANEWS.COM


on

life certificate
Koo

ಬೆಂಗಳೂರು: ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಿ ಉದ್ಯೋಗದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಪಿಂಚಣಿ ಪಡೆಯುತ್ತಿರುವ ಪಿಂಚಣಿದಾರರು ಜೀವನ ಪ್ರಮಾಣಪತ್ರ (Jeevan Pramaan Patra) ಸಲ್ಲಿಸಲು ನವೆಂಬರ್‌ 30 ಕೊನೆಯ ದಿನವಾಗಿದೆ. ಒಂದು ವೇಳೆ ಗಡುವಿನೊಳಗೆ ಲೈಫ್‌ ಸರ್ಟಿಫಿಕೇಟ್ ( Life Certificate) ಸಲ್ಲಿಸದಿದ್ದರೆ ಪಿಂಚಣಿ ಸ್ಥಗಿತವಾಗಲಿದೆ.

ಪಿಂಚಣಿ ಪಡೆಯುತ್ತಿರುವ ಪ್ರತಿಯೊಬ್ಬರೂ ಪ್ರತಿ ವರ್ಷ ತಾವು ಜೀವಂತ ಇರುವ ಬಗ್ಗೆ ‘ಲೈಫ್‌ ಸರ್ಟಿಫೀಕೇಟ್’ ಅನ್ನು ಬ್ಯಾಂಕ್‌ ಅಥವಾ ಅಂಚೆ ಕಚೇರಿಗೆ ಸಲ್ಲಿಸಬೇಕು. ನವೆಂಬರ್ 30ರೊಳಗೆ ಪಿಂಚಣಿದಾರರು ಜೀವನ ಪ್ರಮಾಣ ಪತ್ರ ಸಲ್ಲಿಕೆ ಮಾಡದಿದ್ದರೆ ಪಿಂಚಣಿ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ. ಜತೆಗೆ ಮುಂಬರುವ ತಿಂಗಳ ಪಿಂಚಣಿ ಬರುವುದಿಲ್ಲ. ಬಳಿಕ, ಪ್ರಮಾಣ ಪತ್ರ ನೀಡಿ ಖಾತೆಯನ್ನು ಮತ್ತೆ ಸಕ್ರಿಯಗೊಳಿಸಿಸಬೇಕು. ನಂತರ ಮುಂಬರುವ ಪಿಂಚಣಿಯಲ್ಲಿ ಹಳೆಯ ಬಾಕಿ ಸೇರಿಸಿ ಪಿಂಚಣಿ ಹಣ ಖಾತೆಗೆ ಜಮೆ ಆಗುತ್ತದೆ.

ಇದನ್ನೂ ಓದಿ | SSC Recruitment 2023 : ಅರೆಸೇನಾಪಡೆಗಳ 75 ಸಾವಿರವಲ್ಲ 26 ಸಾವಿರ ಹುದ್ದೆಗಳಿಗೆ ನೇಮಕ; ಕನ್ನಡದಲ್ಲಿಯೂ ನಡೆಯುತ್ತೆ ಪರೀಕ್ಷೆ!

ಏನಿದು ಜೀವನ ಪ್ರಮಾಣಪತ್ರ?

ಪಿಂಚಣಿ ಪಡೆಯುವವರು ಮೃತಪಟ್ಟ ಬಳಿಕವೂ ಅವರ ಖಾತೆಗೆ ಪಿಂಚಣಿ ಹಣ ಜಮೆಯಾಗುತ್ತಿತ್ತು. ಹಾಗಾಗಿ, ಇದನ್ನು ತಪ್ಪಿಸಲು ಫಲಾನುಭವಿಗಳು ಪ್ರತಿ ವರ್ಷ ತಾವು ಬದುಕಿರುವ ಬಗ್ಗೆ ಒಂದು ಪ್ರಮಾಣಪತ್ರ ಸಲ್ಲಿಕೆ ಮಾಡುವುದು ಕಡ್ಡಾಯ ಮಾಡಲಾಗಿದೆ. ಈ ಪ್ರಮಾಣ ಪತ್ರವನ್ನು ಪಿಂಚಣಿದಾರರು ಪೆನ್ಷನ್ ಡಿಸ್ಬರ್ಸಿಂಗ್ ಏಜೆನ್ಸಿ (ಪಿಡಿಎ) ಅಥವಾ ಪಿಂಚಣಿ ವಿತರಿಸುವ ಸಂಸ್ಥೆಗಳಲ್ಲಿ (ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್‌) ತೆರಳಿ ಲೈಫ್ ಸರ್ಟಿಫಿಕೇಟ್ ಸಲ್ಲಿಸಬೇಕು. ಡಿಜಿಟಲ್ ಜೀವನ ಪ್ರಮಾಣಪತ್ರ ಯೋಜನೆಯನ್ನು ಕೇಂದ್ರ ಸರ್ಕಾರ 2014ರಲ್ಲಿ ಜಾರಿ ಮಾಡಿತ್ತು.

Continue Reading
Advertisement
Pooja Gandhi and Vijay Ghorpade
ಕರ್ನಾಟಕ1 min ago

Pooja Gandhi: ಮಳೆ ಹುಡುಗಿಗೆ ಮಂತ್ರ ಮಾಂಗಲ್ಯ; ಹೊಸ ಬಾಳಿಗೆ ಕಾಲಿಟ್ಟ ಪೂಜಾ ಗಾಂಧಿ

Bombay High court orders to son to vacate his mother flat
ಕೋರ್ಟ್13 mins ago

ಆರೈಕೆ ಮಾಡದ ಮಗನಿಗೆ ತಾಯಿಯ ಫ್ಲ್ಯಾಟ್ ಖಾಲಿ ಮಾಡಲು ಬಾಂಬೆ ಹೈಕೋರ್ಟ್ ಆದೇಶ

TV Mohandas Pai Priyank Kharge
ಕರ್ನಾಟಕ23 mins ago

Mohandas Pai : ಐಟಿ ಸಿಟಿ ಗರಿ ಉದುರೀತು ಎಂದ ಮೋಹನ್‌ ದಾಸ್‌ ಪೈ, ಪ್ರಿಯಾಂಕ್‌ ತಿರುಗೇಟು

physical abuse
ದೇಶ40 mins ago

Physical Abuse : ನೀಚ ಕೃತ್ಯ; ನರ್ಸರಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸ್ಕೂಲ್ ವ್ಯಾನ್ ಡ್ರೈವರ್​

peace accord between Manipur oldest armed group UNLF and Government
ದೇಶ50 mins ago

ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಮಣಿಪುರದ ಹಳೆ ಬಂಡುಕೋರ ಗುಂಪು ಯುಎನ್ಎಲ್ಎಫ್!

Gauvarav Yatra
ದೇಶ1 hour ago

Indian Railways : ಭಾರತ ಗೌರವ ಯಾತ್ರಾ ರೈಲಿನಲ್ಲಿ ಕಲುಷಿತ ಆಹಾರ ಸೇವಿಸಿ 90 ಮಂದಿ ಅಸ್ವಸ್ಥ

Actress Ramya
ಕರ್ನಾಟಕ1 hour ago

Actress Ramya: ಹುಟ್ಟುಹಬ್ಬದಂದು ನಾಯಿಮರಿಗಳೊಂದಿಗೆ ಕಾಲಕಳೆದ ಮೋಹಕ ತಾರೆ ರಮ್ಯಾ

fight between Couple in air and Lufthansa flight was diverted to Delhi and Viral News
ದೇಶ1 hour ago

ಗಂಡ-ಹೆಂಡತಿ ಜಗಳ ವಿಮಾನ ಹತ್ತಿದ್ರೂ ಮುಗಿಲಿಲ್ಲ! ಆ ಮೇಲೆ ಏನಾಯ್ತು?

life certificate
ಉದ್ಯೋಗ2 hours ago

ಜೀವನ ಪ್ರಮಾಣ ಪತ್ರ ಇನ್ನೂ ಸಲ್ಲಿಸಿಲ್ಲವೇ? ನಾಳೆಯೇ ಕೊನೇ ದಿನ! ಇಲ್ದಿದ್ರೆ ಸಿಗಲ್ಲ ಪೆನ್ಶನ್

pain
ಆರೋಗ್ಯ2 hours ago

Home Remedies: ಚಳಿಗಾಲದಲ್ಲಿ ಪಾದ ನೋವೇ? ಇಲ್ಲಿದೆ ಮನೆಮದ್ದು

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ4 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ6 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Dina Bhavishya
ಪ್ರಮುಖ ಸುದ್ದಿ16 hours ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜಿಲ್ಲಾ ಮಟ್ಟದ ಸಮಸ್ಯೆ ಬೆಂಗಳೂರಿಗೆ ಬಂದರೆ ಸಹಿಸಲ್ಲ; ಸಿಎಂ ಖಡಕ್‌ ಎಚ್ಚರಿಕೆ

CM Janatha Darshana solved mysore citizens problem
ಕರ್ನಾಟಕ2 days ago

Janatha Darshan : ಮಾಲೀಕನ ಮನೆ ಹರಾಜು; ಲೀಸ್‌ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!

Shivajingar School building collapses The children escaped unhurt
ಕರ್ನಾಟಕ2 days ago

Building collapse : ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡ; ಪ್ರಾಣಾಪಾಯದಿಂದ ಚಿಣ್ಣರು ಪಾರು

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಿಎಂಗೆ ದೂರು ನೀಡಬೇಕೇ? ಜನತಾ ದರ್ಶನಕ್ಕೆ ಹೋಗಬೇಕಿಲ್ಲ; ಈ ನಂಬರ್‌ಗೆ ಕರೆ ಮಾಡಿ!

read your daily horoscope predictions for november 27 2023
ಪ್ರಮುಖ ಸುದ್ದಿ3 days ago

Dina Bhavishya: ನಿಮ್ಮನ್ನು ಉರುಳಿಸಲು ಪಿತೂರಿ ಮಾಡ್ತಾರೆ ಹುಷಾರ್‌!

Danger Influenza People are suffering from the flu
ಆರೋಗ್ಯ3 days ago

Viral fever: ಡೆಡ್ಲಿ ಚೀನಾ ವೈರಸ್‌; ಮಕ್ಕಳಿಗೆ ಇದರಿಂದ ಅಪಾಯ ಇದೆಯಾ?

ಟ್ರೆಂಡಿಂಗ್‌