Site icon Vistara News

ಗುಂಪು ಘರ್ಷಣೆ; ಹುಲಿಹೈದರ್‌ ಗ್ರಾಮದಲ್ಲಿ ಆ.25ರವರೆಗೆ 144 ಸೆಕ್ಷನ್‌ ವಿಸ್ತರಣೆ

144 ಸೆಕ್ಷನ್‌

ಕೊಪ್ಪಳ: ಜಿಲ್ಲೆಯ ಕನಕಗಿರಿ ತಾಲೂಕಿನ‌ ಹುಲಿಹೈದರ್ ಗ್ರಾಮದಲ್ಲಿ ಗುಂಪು ಘರ್ಷಣೆ ನಡೆದ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಆಗಸ್ಟ್‌ 25ರವರೆಗೆ ವಿಸ್ತರಿಸಿ ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ ಆದೇಶ ಹೊರಡಿಸಿದ್ದಾರೆ.

ಆಗಸ್ಟ್ 11ರಂದು ಹುಲಿಹೈದರ್ ಗ್ರಾಮದಲ್ಲಿ ಗುಂಪು ಘರ್ಷಣೆ ನಡೆದಿತ್ತು. ಘಟನೆಯಲ್ಲಿ ಇಬ್ಬರು ಮೃತಪಟ್ಟು, ಒಬ್ಬ ಗಂಭೀರವಾಗಿ ಗಾಯಗೊಂಡಿದ್ದ. ಹೀಗಾಗಿ ಆಗಸ್ಟ್‌ 11ರಿಂದ ಆಗಸ್ಟ್‌ 20 ರವರೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿತ್ತು. ಆದರೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಮತ್ತೆ ಐದು ದಿನಗಳ ಕಾಲ ಹುಲಿ ಹೈದರ್‌ ಗ್ರಾಮ ಹಾಗೂ ಸುತ್ತಮುತ್ತಲಿನ 2 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮುಂದುವರಿಸಲಾಗಿದೆ.

ಇದನ್ನೂ ಓದಿ | Suicide | ಪ್ರೇಯಸಿಗೆ ಬೆದರಿಸಲು ಹೋಗಿ ನೇಣು ಕುಣಿಕಿಗೆ ಸಿಲುಕಿ ಪ್ರಾಣಬಿಟ್ಟ ಗಾಯಕ!

Exit mobile version