Gruha Lakshmi Scheme : ಗೃಹಲಕ್ಷ್ಮಿ ಯೋಜನೆಗೆ ಸಿಕ್ತು ಚಾಲನೆ; ನಾಳೆಯಿಂದಲೇ ನೋಂದಣಿ, Get Ready Vistara News

ಕರ್ನಾಟಕ

Gruha Lakshmi Scheme : ಗೃಹಲಕ್ಷ್ಮಿ ಯೋಜನೆಗೆ ಸಿಕ್ತು ಚಾಲನೆ; ನಾಳೆಯಿಂದಲೇ ನೋಂದಣಿ, Get Ready

Gruha Lakshmi Scheme : ಗೃಹಲಕ್ಷ್ಮಿ ಯೋಜನೆಗೆ ಬುಧವಾರ ಸಂಜೆ ಚಾಲನೆ ನೀಡಲಾಗಿದೆ. ನೋಂದಣಿ ಜುಲೈ 20ರಿಂದ ಆರಂಭವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

VISTARANEWS.COM


on

Gruhalakshmi scheme
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಲಕ್ಷ್ಮಿ ಯೋಜನೆಗೆ (Gruha lakshmi scheme) ಬುಧವಾರ ಸಂಜೆ (ಜುಲೈ 19) ವಿಧಾನಸಭೆಯ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಚಾಲನೆ ನೀಡಲಾಗಿದೆ. ಕುಟುಂಬದ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2000 ರೂ. ಜಮಾ ಮಾಡುವ ಈ ಯೋಜನೆಗೆ ಅರ್ಜಿ ಸ್ವೀಕಾರ ಕಾರ್ಯ ಗುರುವಾರದಿಂದ ಆರಂಭವಾಗಲಿದೆ ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ (Lakshmi Hebbalkar) ಪ್ರಕಟಿಸಿದರು. ರಾಜ್ಯದಲ್ಲಿ 1.28 ಕೋಟಿ ಮಹಿಳೆಯರಿಗೆ ಗೃಹ ಲಕ್ಷ್ಮಿ ಯೋಜನೆಯ ಲಾಭ ಸಿಗಲಿದೆ.

ಕಾಂಗ್ರೆಸ್‌ ಚುನಾವಣೆ ಪೂರ್ವದಲ್ಲಿ ನೀಡಿದ ಪಂಚ ಗ್ಯಾರಂಟಿಗಳ ಪೈಕಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನಕ್ಕೆ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah). ಅವರ ಜತೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ (DCM DK Shivakumar) ಸೇರಿ ಹಲವು ಸಚಿವರು ಉಪಸ್ಥಿತರಿದ್ದರು.

CM Siddaramaiah lights the lamp
ಗೃಹ ಲಕ್ಷ್ಮಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು, ಒಬ್ಬ ಮಹಿಳೆಗೆ 2000 ರೂ. ನೀಡುವುದಿಂದ ಆಗಬಹುದಾದ ಪರಿವರ್ತನೆಗಳು, ಕುಟುಂಬಕ್ಕೆ ಆಗಬಹುದಾದ ಅನುಕೂಲದ ಬಗ್ಗೆ ಮಾತನಾಡಿದರು. ಇಂಥಹುದೊಂದು ಕಾರ್ಯಕ್ರಮವನ್ನು ಜಾರಿಗೊಳಿಸುತ್ತಿರುವ ಮುಖ್ಯಮಂತ್ರಿಗಳಿಗೆ, ಸರ್ಕಾರಕ್ಕೆ ಇಡೀ ಮಹಿಳಾ ಕುಲದ ಆಶೀರ್ವಾದವಿರಲಿದೆ. ಇದರಿಂದ ಸರ್ಕಾರದ ಪಾಲಿಗೆ ಪುಣ್ಯ ಸಂಚಯನವಾಗಲಿದೆ ಎಂದು ಹೇಳಿದರು.

Gruhla Lakshmi Scheme inauguration
ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಮಹಿಳೆಯರು

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಹಾಕುವ ಪ್ರಕ್ರಿಯೆ ಜುಲೈ 20ರಿಂದ ಆರಂಭವಾಗಲಿದೆ. ಗುರುವಾರ ಬೆಳಗ್ಗೆ ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ಎಲ್ಲ ಗ್ರಾಮ ಒನ್‌, ಬಾಪೂಜಿ ಕೇಂದ್ರ, ಕರ್ನಾಟಕ ಒನ್‌, ಬೆಂಗಳೂರು ಒನ್‌ ಕೇಂದ್ರಗಳಲ್ಲಿ ಆರಂಭವಾಗಲಿದೆ. ಹಾಗಿದ್ದರೆ ಅರ್ಜಿ ಸಲ್ಲಿಸುವುದು ಹೇಗೆ? (How to apply for Gruhalakshmi scheme) ಯಾರಿಗೆ ಅರ್ಹತೆ ಇದೆ (who are Eligible for Gruhalakshmi scheme) ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೋಡೋಣ.

ಅರ್ಜಿ ಸಲ್ಲಿಕೆ ಸಲ್ಲಿಕೆ ಎಲ್ಲಿ ಮತ್ತು ಹೇಗೆ?

ರಾಜ್ಯಾದ್ಯಂತ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸ್ವೀಕರಿಸಲು ಅನುಮತಿ ನೀಡಲಾಗಿದೆ. ಈ ಕೇಂದ್ರಗಳಿಗೆ ತೆರಳಿ ನೀವು ಅರ್ಜಿ ನೋಂದಣಿ ಮಾಡಿಕೊಳ್ಳಬಹುದು. ಆದರೆ, ನಮ್ಮ ಮನಸ್ಸಿಗೆ ಬಂದ ದಿನ, ನನಗೆ ಇವತ್ತು ರಜೆ ಇದೆ ಹೋಗುತ್ತೇನೆ ಎಂದು ಹೊರಟರೆ ಆಗುವುದಿಲ್ಲ.

-ಮೊದಲು ತಮ್ಮ ಮೊಬೈಲ್‌ನಿಂದ ಪಡಿತರ ಕಾರ್ಡ್‌ ನಂಬರ್‌ ಸಹಿತ ಸಹಾಯವಾಣಿಗೆ ಮೆಸೇಜ್‌ ಕಳುಹಿಸಬೇಕು. ಮೊಬೈಲ್ ಸಂಖ್ಯೆ: 8147500500ಗೆ ಎಸ್ಎಂಎಸ್‌ ಮಾಡಿದಾಗ ಯಾವ ದಿನ, ಯಾವ ಸಮಯ, ಯಾವ ಕೇಂದ್ರಕ್ಕೆ ಬರಬೇಕು ಎಂಬ ಸಂದೇಶ ಬರುತ್ತದೆ.

-ಯಾವ ಕೇಂದ್ರ, ಯಾವ ದಿನ, ಯಾವ ಸಮಯಕ್ಕೆ ನೋಂದಣಿಗೆ ಅವಕಾಶ ಎಂದು ತಿಳಿದ ಮೇಲೆ ಆ ಸಮಯಕ್ಕೆ ಸರಿಯಾಗಿ ಅಲ್ಲಿ ಹಾಜರಿರಬೇಕು. ಒಂದು ಕೇಂದ್ರದಲ್ಲಿ ಬೆಳಗ್ಗೆ 30 ಮಂದಿ, ಮಧ್ಯಾಹ್ನದ ನಂತರ 30 ಮಂದಿ ಅರ್ಜಿ ಸಲ್ಲಿಸಲು ಅವಕಾಶವಿದೆ.

-ಯಾವುದೇ ಕಾರಣಕ್ಕೂ ಸರ್ವರ್‌ ಮೇಲೆ ಒತ್ತಡ ಆಗಬಾರದು, ಕೇಂದ್ರಗಳ ಮೇಲೆ ಒತ್ತಡ ಆಗಬಾರದು ಎಂಬ ಕಾರಣಕ್ಕೆ ಈ ವ್ಯವಸ್ಥೆ ಮಾಡಲಾಗಿದೆ. ನೀವು ಬೆಳಗ್ಗೆ ಐದು ಗಂಟೆ, ಆರು ಗಂಟೆಗೆ ಎದ್ದು ಹೋಗಿ ಕ್ಯೂ ನಿಲ್ಲುವ ಪ್ರಮೇಯವೂ ಇರುವುದಿಲ್ಲ.

-ಒಂದು ವೇಳೆ ನಿಮಗೆ ನಿಗದಿ ಮಾಡಿದ ಸಮಯದಲ್ಲಿ ಅರ್ಜಿ ಸಲ್ಲಿಸಲು ವಿಫಲವಾದರೆ ಅಲ್ಲಿ ಹೋಗಿ ಸಿಬ್ಬಂದಿ ಮೇಲೆ ಒತ್ತಡ ಹಾಕುವಂತಿಲ್ಲ. ಟೈಮ್‌ ಮಿಸ್‌ ಮಾಡಿಕೊಂಡವರಿಗೆ ಅದೇ ದಿನ ಸಂಜೆ 5 ಗಂಟೆಯಿಂದ 7 ಗಂಟೆಯವರೆಗೆ ನೋಂದಣಿಗೆ ಅವಕಾಶ ಇರುತ್ತದೆ.

Gruhalakshmi scheme inauguratede
ಫಲಾನುಭವಿ ಮಹಿಳೆಗೆ ಮಂಜೂರಾತಿ ಪತ್ರ ನೀಡಿದ ಕ್ಷಣ

ಗೃಹ ಲಕ್ಷ್ಮಿ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು?

  1. ಬಿಪಿಎಲ್, ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್ ಹೊಂದಿರುವವರು ಹಣ ಪಡೆಯಲು ಅರ್ಜಿ ಸಲ್ಲಿಸಬಹುದು.
  2. ಆದರೆ ಅರ್ಜಿ ಸಲ್ಲಿಸುವವರು ಅಥವಾ ಅವರ ಪತಿ ಆದಾಯ ತೆರಿಗೆ ಪಾವತಿ ಮಾಡುತ್ತಿರಬಾರದು, ಜಿಎಸ್‌ಟಿ ಕಟ್ಟುವವರೂ ಆಗಿರಬಾರದು. ತಾವು ಆದಾಯ ತೆರಿಗೆ/ಜಿಎಸ್‌ಟಿ ಕಟ್ಟುತ್ತಿಲ್ಲ ಎಂದು ಘೋಷಣೆ ಮಾಡಬೇಕಾಗುತ್ತದೆ.
  3. ನೀವು ಅರ್ಜಿ ಸಲ್ಲಿಸಲು ಹೋಗುವಾಗ ಪಡಿತರ ಚೀಟಿ, ಆಧಾರ್‌ ಕಾರ್ಡ್‌ (ಬ್ಯಾಂಕ್‌ ಖಾತೆಗೆ ಲಿಂಕ್‌ ಆಗಿರಬೇಕು), ಆಧಾರ್‌ ನಂಬರ್‌ಗೆ ಲಿಂಕ್‌ ಆಗಿರುವ ಮೊಬೈಲ್‌ನ್ನು ಹಿಡಿದುಕೊಂಡು ಹೋಗಬಹುದು.
  4. ಒಂದು ವೇಳೆ ಆಧಾರ್‌ ಲಿಂಕ್‌ ಆಗಿರದ ಖಾತೆಗೆ ಹಣ ಬರಬೇಕು ಎಂದರೆ ಬೇರೆ ಪಾಸ್‌ಬುಕ್‌ ಕೂಡಾ ಕೊಡಬಹುದು. (ಆ ಪಾಸ್‌ಬುಕ್‌ ಅನ್ನು ಸಾಫ್ಟ್‌ವೇರ್ ನಲ್ಲಿ ಅಪ್ ಲೋಡ್‌ ಮಾಡಿದ ಬಳಿಕ ಅದು ಸಿಡಿಪಿಒ, ತಹಶೀಲ್ದಾರ್, ತಾಲೂಕ್ ಪಂಚಾಯತ್ ಇಒಗಳ ಲಾಗಿನ್‌ಗೆ ಮಾಹಿತಿ ಹೋಗಲಿದ್ದು, ಈ ಪಾಸ್‌ಬುಕ್ ಪಡಿತರ ಚೀಟಿಯಲ್ಲಿರುವ ಮನೆಯ ಮುಖ್ಯಸ್ಥೆಯ ಜೊತೆ ಹೊಂದಾಣಿಕೆಯಾದರೆ ಅಲ್ಲಿ ಆರ್ಡರ್ ಕಾಪಿ ಕೊಡಲಾಗುವುದು. ಸಿಡಿಪಿಒ ಅಥವಾ ಅಂಗನವಾಡಿ ಕಾರ್ಯಕರ್ತೆಯರ ಮುಖಾಂತರ ತಲುಪಿಸಲಾಗುವುದು).
Lakshmi hebbalkar

ಅರ್ಜಿ ಸಲ್ಲಿಕೆಯ ಎರಡನೇ ವಿಧಾನ ಜನಪ್ರತಿನಿಧಿ

ಗೃಹಲಕ್ಷ್ಮಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್, ಬಾಪೂಜಿ ಸೇವಾ ಕೇಂದ್ರಗಳಿಗೆ ಹೋಗುವುದು ಒಂದು ವಿಧಾನವಾದರೆ ಎರಡನೆಯರು ಪ್ರಜಾಪ್ರತಿನಿಧಿಗಳು ನೇರವಾಗಿ ನಿಮ್ಮ ಮನೆಗೆ ಬಂದು ನೋಂದಣಿ ಮಾಡಿಕೊಳ್ಳುವುದು.

ಫಲಾನುಭವಿಗಳ ಅರ್ಜಿ ನೋಂದಣಿ ಪ್ರಕ್ರಿಯೆ ಸುಲಭವಾಗಿಸಲು ಪ್ರಜಾಪ್ರತಿನಿಧಿ ಎಂದು ಸರ್ಕಾರದಿಂದ ಗುರುತಿಸಲ್ಪಟ್ಟ ಸ್ವಯಂಸೇವಕರನ್ನು ನೇಮಕ ಮಾಡಲಾಗುತ್ತದೆ. 1000 ಜನಸಂಖ್ಯೆ ಇದ್ದಾಗ ಇಬ್ಬರು (ಒಬ್ಬರು ಮಹಿಳೆ, ಒಬ್ಬರು ಪುರುಷ) ನೇಮಕ ಮಾಡಲಾಗುತ್ತದೆ. ಮನೆ ಬಾಗಿಲಿಗೆ ತೆರಳಿ ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಾಹಿತಿ ನೀಡಲಿದ್ದು, ನೋಂದಣಿ ಪ್ರಕ್ರಿಯೆಗೆ ಸಹಾಯ ಮಾಡಲಿದ್ದಾರೆ. ಇದು ಗ್ರಾಮ ಒನ್‌ ಕೇಂದ್ರಗಳಿಂದ ದೂರ ಇರುವ, ಕೇಂದ್ರಗಳಿಗೆ ಬರಲಾಗದವರಿಗೆ ಸಹಾಯ ಮಾಡಲು ಇರುವ ವ್ಯವಸ್ಥೆ.

ನೋಂದಾಯಿಸಿದ್ದರ ಅಧಿಕೃತ ದಾಖಲೆ ಸಿಗಲಿದೆ

  1. ನೀವು ಗ್ರಾಮ ಒನ್‌, ಬಾಪೂಜಿ ಕೇಂದ್ರ, ಕರ್ನಾಟಕ ಒನ್‌, ಬೆಂಗಳೂರು ಒನ್‌ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡರೆ ಕೂಡಲೇ ಮಂಜೂರಾತಿ ಪತ್ರವನ್ನು ನೀಡಲಾಗುತ್ತದೆ. ಜತೆಗೆ ತಕ್ಷಣವೇ ಮೊಬೈಲ್‌ಗೆ ಸಂದೇಶ ಬರುತ್ತದೆ.
  2. ಪ್ರಜಾಪ್ರತಿನಿಧಿ ಮೂಲಕ ನೋಂದಾಯಿಸಿಕೊಂಡರೆ ಮಂಜೂರಾತಿ ಪತ್ರವನ್ನು ನಂತರ ಮನೆಗೆ ಕಳುಹಿಸಲಾಗುತ್ತದೆ.
  3. ಒಂದೊಮ್ಮೆ ಕೇಂದ್ರಗಳಿಗೆ ಹೋಗಿ ಅರ್ಜಿ ನೀಡಿದ್ದರೂ, ಆಧಾರ್‌ಗೆ ಲಿಂಕ್‌ ಆಗದ ಬೇರೆ ಖಾತೆಗೆ ಹಣ ಹಾಕಬೇಕು ಎಂದಾದಲ್ಲಿ ಅದರ ಪರಿಶೀಲನೆ ಕಾರ್ಯ ತಾಲೂಕು ಮಟ್ಟದಲ್ಲಿ ನಡೆಯಬೇಕು. ಹೀಗಾಗಿ, ಮಂಜೂರಾತಿ ಸಿಡಿಪಿಒ ಅಥವಾ ಅಂಗನವಾಡಿ ಕಾರ್ಯಕರ್ತೆಯರ ಮುಖಾಂತರ ಮನೆಗೆ ತಲುಪಿಸಲಾಗುತ್ತದೆ.

ನೀವು ಯಾರಿಗೂ ಒಂದು ನಯಾಪೈಸೆ ಕೊಡಬೇಕಾಗಿಲ್ಲ

ಗಮನಿಸಿ, ಈ ಯೋಜನೆಯ ಫಲಾನುಭವಿಗಳು ಅರ್ಜಿ ಸಲ್ಲಿಕೆ ವೇಳೆ ಯಾವುದೇ ಶುಲ್ಕವನ್ನು ಪಾವತಿಸಬಾರದು. ಈ ನೋಂದಣಿ ಪ್ರಕ್ರಿಯೆ ಸಂಪೂರ್ಣ ಉಚಿತ. ಅರ್ಜಿ ಸಲ್ಲಿಸಲು ಯಾರಾದರೂ ಹಣ ಕೇಳಿದರೆ ಸಿಡಿಪಿಒಗಳ ಗಮನಕ್ಕೆ ತರುವಂತೆ ಕೋರಲಾಗಿದೆ.

ನನಗೆ ಸಂದೇಶ ಬಂದಿಲ್ಲ ಅಂದರೆ ಏನು ಮಾಡಬೇಕು?

ನೀವು ಯಾವಾಗ, ಎಲ್ಲಿ, ಯಾವ ಸಮಯಕ್ಕೆ ನೋಂದಣಿ ಮಾಡಿಕೊಳ್ಳಬೇಕು ಎಂಬ ಬಗ್ಗೆ ನಿಮ್ಮ ಮೊಬೈಲ್‌ಗೆ ಸಂದೇಶ ಕಳುಹಿಸಲಾಗುತ್ತದೆ. ಒಂದು ವೇಳೆ ನಿಮಗೆ ಸಂದೇಶ ಬಾರದೆ ಇದ್ದರೆ ನೀವು 1092ಕ್ಕೆ ಕಾಲ್‌ ಮಾಡಿ ಇಲ್ಲವೇ 8147500500 ನಂಬರ್‌ಗೆ SMS ಮಾಡಿ ಮಾಹಿತಿಯನ್ನು ಪಡೆಯಬಹುದು.

ನಿಮ್ಮ ಎಲ್ಲ ಗೊಂದಲ, ಸಮಸ್ಯೆಗಳಿಗೆ ಸಹಾಯವಾಣಿಗೆ ಕರೆ ಮಾಡಿ

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ಏನೇ ಗೊಂದಲವಿದ್ದರೂ ಸಹಾಯವಾಣಿ ಸಂಖ್ಯೆ 1902ಗೆ ಕರೆ ಮಾಡಿ ಗೊಂದಲ ಬಗೆಹರಿಸಿಕೊಳ್ಳಬಹುದು. ಅಥವಾ ಮೊಬೈಲ್ ಸಂಖ್ಯೆ: 8147500500ಗೆ ಎಸ್ಎಂಎಸ್‌ ಮಾಡಬಹುದು.

ಇದನ್ನೂ ಓದಿ: Gruha lakshmi Scheme : ಗೃಹಲಕ್ಷ್ಮಿಗೆ ಆರಂಭದಲ್ಲೇ ವಿಘ್ನ; ಅರ್ಜಿ ಸ್ವೀಕಾರಕ್ಕೆ ಗ್ರಾಮ ಒನ್‌ ನಕಾರ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Belagavi Winter Session : ನಾವೂ ಟೈಮಿಗೆ ಸರಿಯಾಗಿ ಬಂದಿದ್ದೀವಿ; ಸ್ಪೀಕರ್‌ ಜತೆ ಶಾಸಕರ ಜಗಳ!

Belagavi Winter Session : ವಿಧಾನಸಭೆ ಕಲಾಪಕ್ಕೆ ಸಮಯಕ್ಕೆ ಸರಿಯಾಗಿ ಹಾಜರಾಗುವ ಶಾಸಕರ ಹೆಸರು ಓದಿ ಹೇಳುವ ಸ್ಪೀಕರ್‌ ಯು.ಟಿ. ಖಾದರ್‌ ಅವರ ನಡೆ ಭಾರಿ ಕುತೂಹಲಹಕಾರಿಯಾಗಿ ಸಾಗಿದೆ.

VISTARANEWS.COM


on

Attendance Araga Jnanendra UT Khader Araga jnanendra
Koo

ಬೆಳಗಾವಿ: ಯು.ಟಿ. ಖಾದರ್‌ ಅವರು ವಿಧಾನಸಭೆಯ ಸ್ಪೀಕರ್‌ (Speaker UT Khader) ಆದ ಬಳಿಕ ಹೊಸ ಪದ್ಧತಿ ಶುರು ಮಾಡಿದ್ದು ಎಲ್ಲರಿಗೂ ಗೊತ್ತೇ ಇದೆ. ಅಧಿವೇಶನಕ್ಕೆ ಶಾಸಕರು ತಡವಾಗಿ (Attendance Issue) ಬರುವುದನ್ನು ತಡೆಯಲು ಮೊದಲು ಬಂದವರಿಗೆ ಟೀ ಕಪ್‌ ಕೊಡುವುದು, ಹೆಸರು ಹೇಳುವುದು ಮೊದಲಾದ ಕ್ರಮಗಳಿಂದ ಸದನಕ್ಕೆ ಬೇಗ ಬರುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಹೇಗಿದೆ ಎಂದರೆ ಶಾಸಕರು ನಾ ಮುಂದು ತಾ ಮುಂದು ಎಂಬಂತೆ ಬೇಗ ಬೇಗನೆ ಬರುತ್ತಿದ್ದಾರೆ, ಮಾತ್ರವಲ್ಲ, ನಾನು ಬೇಗ ಬಂದಿದ್ದೀನಿ, ನನ್ನ ಹೆಸರು ಹೇಳಿಲ್ಲ ಎಂದು ಮಕ್ಕಳಂತೆ ವರಾತ ತೆಗೆಯಲು ಶುರು ಮಾಡಿದ್ದಾರೆ!

ಗುರುವಾರ ಕಲಾಪ ಆರಂಭದಲ್ಲೂ ಹೀಗೇ ಆಯಿತು. ಸ್ಪೀಕರ್‌ ಯು.ಟಿ. ಖಾದರ್‌ ಅವರು ಸದನದ ಕಲಾಪ ಆರಂಭವಾಗುತ್ತಿದ್ದಂತೆಯೇ ಸದನಕ್ಕೆ ಸಮಯಕ್ಕೆ ಸರಿಯಾಗಿ ಬಂದ ಸದಸ್ಯರ ಹೆಸರನ್ನು ಅವರು ಓದಿ ಹೇಳಿದರು. ಆದರೆ, ಇದನ್ನು ಕೇಳಿದ ಶಾಸಕರು ನಾನೂ ಟೈಮಿಗೆ ಸರಿಯಾಗಿ ಬಂದಿದ್ದೇನೆ, ನನ್ನ ಹೆಸರು ಯಾಕೆ ಹೇಳ್ತಿಲ್ಲ ಎಂದು ಜಗಳ ಶುರು ಮಾಡಿದರು.

ಹೀಗೆ ವರಾತ ತೆಗೆದವರು ಸಣ್ಣ ಸಣ್ಣ ನಾಯಕರೇನೂ ಅಲ್ಲ. ಹಿಂದೆ ಗೃಹ ಸಚಿವರಾಗಿದ್ದ ಆರಗ ಜ್ಞಾನೇಂದ್ರ ಅವರು ಕೂಡಾ ಇದ್ದಾರೆ. ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ್ದನ್ನು ನೋಡಿದ ಅವರು, ನಾನು ಸಮಯಕ್ಕೆ ಸರಿಯಾಗಿ ಬಂದಿದ್ದೇನೆ, ನನ್ನನ್ನು ಯಾಕೆ ಗುರುತಿಸಿಲ್ಲ ಎಂದು ಸ್ಪೀಕರ್‌ ಅವರನ್ನು ಕೇಳಿದ್ದಾರೆ. ಅವರಲ್ಲದೆ ಇನ್ನೂ ಹಲವರು ಇದೇ ವಾದ ಮಾಡಿದರು.

ಆಗ ಯು.ಟಿ. ಖಾದರ್‌ ಅವರು, ಸದನ ಆರಂಭಕ್ಕೆ ಕೋರಂ ಬೇಕು ಅಲ್ವಾ? ಕೋರಂ ಭರ್ತಿಗೆ ಮೊದಲ 25 ಸದಸ್ಯರನ್ನು ಅಧಿಕಾರಿಗಳು ನೋಟ್‌ ಮಾಡಿ ಪಟ್ಟಿ ಕೊಡ್ತಾರೆ. ಸಿಸಿ ಕ್ಯಾಮೆರಾದಲ್ಲಿ ಎಲ್ಲವೂ ನೋಟ್‌ ಆಗಿರುತ್ತದೆ. ಏನಾದರೂ ಸಂಶಯ ಇದ್ದರೆ ನಿಮ್ಮನ್ನು ಕರೆಸಿ ಚೆಕ್ ಮಾಡ್ತೇವೆ, ಅನ್ಯಾಯ ಆದರೆ ನ್ಯಾಯ ಕೊಡ್ತೇವೆ ಎಂದು ಹೇಳಿದರು.

ಸಮಯಕ್ಕೆ ಮೊದಲು ಬರುವ ಎಲ್ಲರನ್ನೂ ಪರಿಗಣಿಸಿ

ಈ ವೇಳೆ ಮಧ್ಯ ಪ್ರವೇಶ ಮಾಡಿದ ವಿರೋಧ ಪಕ್ಷದ ನಾಯಕ ಆರ್.‌ಅಶೋಕ್ ಮಧ್ಯಪ್ರವೇಶ ಮಾಡಿದರು. ಈಗ ಕೋರಂ ಆಗುವವರೆಗೆ ಬರುವ ಸದಸ್ಯರನ್ನು ಮಾತ್ರ ಲೆಕ್ಕ ಹಾಕಲಾಗುತ್ತದೆ. ನಂತರ ಬರುವವರನ್ನೂ ಪರಿಗಣಿಸುತ್ತಿಲ್ಲ. ಆದರೆ ಕೋರಂ ಬಿಟ್ಟು ತಾವು ಸದನ ಆರಂಭಕ್ಕೆ ಮೊದಲು ಯಾರೇ ಬಂದರು ಪರಿಗಣಿಸಿ ಎಂದು ಮನವಿ ಮಾಡಿದರು.

ಆಗ ತಮಾಷೆಯಾಗಿ ಕಾಳೆದ ಯು.ಟಿ. ಖಾದರ್‌ ಅವರು, ಅಶೋಕ್‌ ಅವರೇ ಇದನ್ನು ನೀವು ಸ್ಪೀಕರ್ ಆದಾಗ ಅದನ್ನೂ ಮಾಡಿ ಎಂದು ಹೇಳಿದರು. ಇಷ್ಟು ಹೊತ್ತಿಗೆ ಮಧ್ಯ ಪ್ರವೇಶ ಮಾಡಿದ ಸುನಿಲ್‌ ಕುಮಾರ್‌ ಅವರು, ನಿಮ್ಮ ಹಾಗೂ ಅಶೋಕ್ ಗೆಳೆತನ ಚೆನ್ನಾಗಿದೆ ಎಂದು ಬಹಿರಂಗವಾಯಿತು. ಅಶೋಕ್ ಸ್ಪೀಕರ್ ಆಗಬೇಕು ಎಂದು ನೀವು ಹೇಳಿದ್ದನ್ನು ಅನುಮೋದಿಸುತ್ತೇನೆ ಎಂದರು.

ಯು.ಟಿ. ಖಾದರ್‌ ಅವರು ಯಾರೆಲ್ಲ ಸಮಯಕ್ಕೆ ಸರಿಯಾಗಿ ಹಾಜರಾಗಿದ್ದಾರೆ ಎಂದು ಪಟ್ಟಿ ಓದಿ ಹೇಳುವುದರಿಂದ ಉಳಿದವರು ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ ಎಂಬ ಸಂದೇಶ ಕ್ಷೇತ್ರಕ್ಕೆ ರವಾನೆಯಾದರೆ ತಮ್ಮ ಕಥೆ ಏನು ಎನ್ನುವುದು ಎಲ್ಲ ಶಾಸಕರಿಗೂ ಆತಂಕ ಮೂಡಿಸಿದೆ. ಹೀಗಾಗಿ ಎಲ್ಲರೂ ತಾಮುಂದು, ನಾ ಮುಂದು ಎಂಬಂತೆ ಬರುತ್ತಿದ್ದಾರೆ!

ಇದನ್ನೂ ಓದಿ: UT Khader: ಉಡುಪಿ ಶ್ರೀಕೃಷ್ಣನಲ್ಲಿಗೆ ಸ್ಪೀಕರ್‌ ಖಾದರ್‌ ಭೇಟಿ; ಪ್ರಾರ್ಥಿಸಿದ್ದೇನು?

ವಿಧಾನಸಭೆಗೆ ಶಾಸಕರ ಹಾಜರಾತಿ ಕೊರತೆ

ಅಂದ ಹಾಗೆ ಕಲಾಪ ಆರಂಭದ ಹೊತ್ತಿನಲ್ಲಿ ಕಾಂಗ್ರೆಸ್ ನಿಂದ 55, ಬಿಜೆಪಿಯಿಂದ 40 ಮತ್ತು ಜೆಡಿಎಸ್‌ನಿಂದ 10 ಶಾಸಕರು ಹಾಜರಾಗಿದ್ದರು. ಉಳಿದವರು ಗೈರು ಹಾಜರಾಗಿದ್ದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್‌ ಜನಪ್ರತಿನಿಧಿಗಳು ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಹೋಗಿದ್ದರು.

Continue Reading

ಕರ್ನಾಟಕ

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Belagavi Winter Session : ಮುಂದಿನ ಬಜೆಟ್‌ನಲ್ಲಿ ಸೈಕಲ್ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಆರ್ಥಿಕ ಇಲಾಖೆ ಜತೆ ಚರ್ಚಿಸಿ ಕ್ರಮ ವಹಿಸುವುದಾಗಿ ಮಧು ಬಂಗಾರಪ್ಪ ಹೇಳಿದ್ದಾರೆ.

VISTARANEWS.COM


on

Madhu Bangarappa in Belagavi Winter Session
Koo

ಬೆಳಗಾವಿ: ಪ್ರೌಢಶಾಲೆಗೆ ಹೋಗುವ ಹೆಣ್ಣು ಮಕ್ಕಳಿಗೆ ಬಿ.ಎಸ್.‌ ಯಡಿಯೂರಪ್ಪ (BS Yediyurappa) ಅವರು ಸಿಎಂ ಆಗಿದ್ದಾಗ ನೀಡಿದ್ದ ಉಚಿತ ಸೈಕಲ್‌ ಯೋಜನೆಗೆ ಮರು ಚಾಲನೆ ಸಿಗಲಿದೆ. ಇಂಥದ್ದೊಂದು ಭರವಸೆಯನ್ನು ಬೆಳಗಾವಿ ಅಧಿವೇಶನದಲ್ಲಿ (Belagavi Winter Session) ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ನೀಡಿದ್ದಾರೆ.

ಸರ್ಕಾರಿ ಶಾಲೆಗಳ ಎಂಟನೇ ತರಗತಿ ಮಕ್ಕಳಿಗೆ ಮತ್ತೆ ಸೈಕಲ್ ವಿತರಣೆ ಮಾಡಬೇಕು ಎಂದು ಶಾಸಕ ಪ್ರದೀಪ್‌ ಈಶ್ವರ್‌ (MLA Pradeep Easwar) ಅವರು ಪ್ರಶ್ನೋತ್ತರ ವೇಳೆ ಒತ್ತಾಯ ಮಾಡಿದಾಗ, ಪ್ರತಿಕ್ರಿಯೆ ನೀಡಿದ ಸಚಿವ ಮಧು ಬಂಗಾರಪ್ಪ, ಮುಂದಿನ ಬಜೆಟ್‌ನಲ್ಲಿ ಸೈಕಲ್ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಆರ್ಥಿಕ ಇಲಾಖೆ (Finance Department) ಜತೆ ಚರ್ಚಿಸಿ ಕ್ರಮ ವಹಿಸುವುದಾಗಿ ಹೇಳಿದ್ದಾರೆ.

ಈ ವೇಳೆ ಪ್ರದೀಪ್ ಈಶ್ವರ್ ಮಾತನಾಡಿ, ಇದರೊಟ್ಟಿಗೆ ಎರಡು ಜತೆ ಶೂ, ಸಾಕ್ಸ್ ಬದಲು ನಾಲ್ಕು ಜತೆ ವಿತರಣೆ ಮಾಡಿದೆ ಮಕ್ಕಳಿಗೆ ಅನುಕೂಲವಾಗುತ್ತದೆ ಎಂದು ಒತ್ತಾಯಿಸಿದರು. ಇದರ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಉತ್ತರ ನೀಡಿದ್ದಾರೆ.

ಧ್ವನಿಗೂಡಿಸಿದ‌ ಆರ್. ಅಶೋಕ್

ಈ ವೇಳೆ ಪತಿ ಪಕ್ಷ ನಾಯಕ ಆರ್.‌ ಅಶೋಕ್ ಮಧ್ಯಪ್ರವೇಶಿಸಿ, ಇಡೀ ರಾಜ್ಯದಲ್ಲಿ ಸೈಕಲ್ ವಿತರಣೆಯನ್ನು ಪುನಾರಂಭಿಸಿ. ಬಿ.ಎಸ್.‌ ಯಡಿಯೂರಪ್ಪ ತಂದಿರುವ ಯೋಜನೆ ಅದಾಗಿದೆ. ದೂರದಿಂದ ಬರುವ ಮಕ್ಕಳಿಗೆ ಸಹಾಯ ಆಗುತ್ತದೆ ಎಂದು ಒತ್ತಾಯ ಮಾಡಿದರು.

ಇದನ್ನೂ ಓದಿ: Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

ಬಿಜೆಪಿ ಅವಧಿಯಲ್ಲೇ ಸ್ಥಗಿತವಾಗಿತ್ತು

ಇದಕ್ಕೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, ಸೈಕಲ್ ವಿತರಣೆ ಬಿಜೆಪಿ ಕಾಲದಲ್ಲೇ ಸ್ಥಗಿತ ಆಗಿದೆ. ನಿಮ್ಮವರೇ ಆರಂಭಿಸಿ ನಿಮ್ಮ ಕಾಲದಲ್ಲೇ ಸ್ಥಗಿತ ಆಯಿತು, ಹೀಗಾಗಬಾರದಿತ್ತು. ಈಗ ನಮ್ಮ ಸರ್ಕಾರ ಸೈಕಲ್ ವಿತರಣೆಗೆ ಪರಿಶೀಲಿಸಿ ಕ್ರಮ ವಹಿಸಲಿದೆ ಎಂದು ಟಾಂಗ್‌ ಕೊಟ್ಟರು.

ಹಳೇ ಪಿಂಚಣಿ ಶೀಘ್ರ ಜಾರಿ? 10 ದಿನದಲ್ಲಿ ಸಮಿತಿ ಪುನಾರಚನೆ: ಕೃಷ್ಣ ಬೈರೇಗೌಡ

ಬೆಳಗಾವಿ: ರಾಜ್ಯದಲ್ಲಿ ಹಳೇ ಪಿಂಚಣಿ ಪದ್ಧತಿಯನ್ನೇ (Old Pension Scheme) ಮರು ಜಾರಿ ಮಾಡಬೇಕು. ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದು ಮಾಡಬೇಕು (NPS Cancellation) ಎಂದು ಆಗ್ರಹಿಸುತ್ತಿರುವ ಸರ್ಕಾರಿ ನೌಕರರಿಗೆ (Government employees) ಈ ಬಾರಿ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್‌ ಸಿಗಲಿದೆಯೇ? ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಈ ಸಂಬಂಧ ಇರುವ ಸಮಿತಿಯನ್ನು 10 ದಿನದೊಳಗೆ ಪುನಾರಚನೆ ಮಾಡುತ್ತೇವೆ. ಆದಷ್ಟು ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಬೆಳಗಾವಿ ಅಧಿವೇಶನದಲ್ಲಿ (Belagavi Winter Session) ಸಚಿವ ಕೃಷ್ಣ ಬೈರೇಗೌಡ (Minister Krishna Byre Gowda) ಹೇಳಿದ್ದಾರೆ.

ಹಳೇ ಪಿಂಚಣಿ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ಸರ್ಕಾರ ತೆಗೆದುಕೊಂಡ ಕ್ರಮ ಏನು? ಎಂಬ ಜೆಡಿಎಸ್‌ನ ಮರಿತಿಬ್ಬೇಗೌಡ, ಬಿಜೆಪಿಯ ಎಸ್.ವಿ. ಸಂಕನೂರ್ ಅವರು ವಿಧಾನ ಪರಿಷತ್‌ನಲ್ಲಿ ಪ್ರಶ್ನೆ ಕೇಳಿದ್ದರು. ಇದಕ್ಕೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ, ಹಿಂದೆ ಏಕ ವ್ಯಕ್ತಿಯ ಸಮಿತಿಯನ್ನು ಮಾಡಿದ್ದರು. ಈಗ ಆ ಸಮಿತಿಯನ್ನು ಪರಿಷ್ಕರಣೆ ಮಾಡಿ ನಾಲ್ಕೈದು ಸದಸ್ಯರ ನೇಮಕ ಮಾಡಲಾಗುವುದು. ಬಳಿಕ ಆ ಸಮಿತಿ ಕಾರ್ಯವ್ಯಾಪ್ತಿ ಅಳವಡಿಸುವ ಕೆಲಸವನ್ನು ನಾವು ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

ವಾಜಪೇಯಿ ಬಗ್ಗೆ ನಮಗೆ ನಂಬಿಕೆ ಇದೆ

ಕಾಲಮಿತಿಯ ಬಗ್ಗೆಯೂ ಪರಿಶೀಲನೆ ಮಾಡುತ್ತೇವೆ. ರಾಜಸ್ಥಾನ್, ಛತ್ತೀಸಗಢ, ಪಂಜಾಬ್‌ನಿಂದ ಇದರ ಬಗೆಗ ಆದೇಶ ಆಗಿದೆ. ಆದರೆ, ಅಲ್ಲಿ ಇನ್ನು ಜಾರಿಗೊಳಿಸಿಲ್ಲ. ಯಾರನ್ನು ಪಿಂಚಣಿಯಿಂದ ಹೊರಗಿಡುವ ಪ್ರಶ್ನೆ ಇಲ್ಲ. ನಾನು ಅಟಲ್‌ ಬಿಹಾರಿ ವಾಜಪೇಯಿಯವರ ಮೇಲೆ ನಂಬಿಕೆ ಇಟ್ಟಿದ್ದೇನೆ. ಅವರ ಆಡಳಿತದ ಬಗ್ಗೆಯೂ ನಂಬಿಕೆ ಇಟ್ಟಿದ್ದೇನೆ. ವಾಜಪೇಯಿ ಅವರು ಎನ್‌ಪಿಎಸ್ ತರುವಾಗ ಎಲ್ಲ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಜಾರಿಗೆ ತಂದಿರುತ್ತಾರೆ. ಆದರೆ, ನಿಮಗೆ ಅವರ ನಿರ್ಧಾರದ ಬಗ್ಗೆ ಗೌರವ ಇಲ್ಲದಿರಬಹುದು, ನಮಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.

10 ದಿನದೊಳಗೆ ಸಮಿತಿ ಪುನರ್ ರಚನೆ

ಅನುದಾನಿತ ಸಂಸ್ಥೆಯಲ್ಲಿ ಸಿಬ್ಬಂದಿಗೆ ತೊಂದರೆ ಆಗಿದೆ ಎಂಬುದನ್ನು ನಾವು ಒಪ್ಪುತ್ತೇವೆ. ಶಿಕ್ಷಣ ಸಂಸ್ಥೆಯವರು ಕೊಡುಗೆ ನೀಡಬೇಕು. ನಮಗೆ ಅದನ್ನು ಪರಿಹರಿಸುವ ಮನಸ್ಸಿದೆ. ಅದನ್ನ ಮಾಡೇ ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಸೂಚನೆ ಕೊಟ್ಟಿದ್ದಾರೆ. 10 ದಿನದೊಳಗೆ ಸಮಿತಿ ಪುನರ್ ರಚನೆ ಮಾಡುತ್ತೇವೆ ಎಂದು ಇದೇ ವೇಳೆ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು.

ಶೀಘ್ರದಲ್ಲೇ ಆರ್ಥಿಕ ಇಲಾಖೆ ಜತೆ ಸಿಎಂ ಸಭೆ

ಎನ್‌ಪಿಎಸ್‌ ತೆಗೆದು ಒಪಿಎಸ್‌ ಅನ್ನು ರಾಜ್ಯದಲ್ಲಿ ಅನುಷ್ಠಾನಕ್ಕೆ ತಂದರೆ ಮುಂದಾಗುವ ಸಾಧಕ – ಬಾಧಕಗಳು ಏನು? ರಾಜ್ಯದ ಮೇಲೆ ಆಗುವ ಆರ್ಥಿಕ ಹೊರೆ ಏನು? ಈಗಿರುವ ಎಲ್ಲ ಲೆಕ್ಕಾಚಾರಗಳ ನಡುವೆ ಅದನ್ನು ಹೊಂದಾಣಿಕೆ ಮಾಡಿಕೊಂಡು ಹೋಗಬಹುದಾ ಎಂದು ಸಿಎಂ ಸಿದ್ದರಾಮಯ್ಯ ಅವರು ಆರ್ಥಿಕ ಇಲಾಖೆ ಜತೆ ಶೀಘ್ರದಲ್ಲಿಯೇ ಸಭೆ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Nandini Milk: ಮತ್ತೆ ನಂದಿನಿ ಹಾಲಿನ ದರ ಏರಿಕೆ? ಯಾವಾಗ? ಎಷ್ಟು ಹೆಚ್ಚಳ ಮಾಡಬಹುದು?

ಡಿಸೆಂಬರ್‌ನಲ್ಲಿ ಎನ್‌ಪಿಎಸ್‌ ನೌಕರರ ಸಮಾವೇಶ

ಡಿಸೆಂಬರ್‌ನಲ್ಲಿ ಎನ್‌ಪಿಎಸ್‌ ನೌಕರರ ಸಮಾವೇಶ ನಡೆಯುತ್ತಲಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರನ್ನು ಆಹ್ವಾನ ಮಾಡಲು ತಯಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಹಜವಾಗಿ ಎನ್‌ಪಿಎಸ್‌ ನೌಕರರು ಈ ಸಮಾವೇಶದಲ್ಲಿ ಒಪಿಎಸ್‌ ಜಾರಿಗಾಗಿ ಸಿಎಂ ಎದುರು ಹಕ್ಕೊತ್ತಾಯವನ್ನು ಮಂಡನೆ ಮಾಡುತ್ತಾರೆ. ಹಾಗಾಗಿ ಈ ಬಗ್ಗೆ ಮೊದಲೇ ಸಾಧಕ – ಬಾಧಕಗಳ ಬಗ್ಗೆ ಆರ್ಥಿಕ ಇಲಾಖೆ ಜತೆ ಸಭೆ ನಡೆಸಿ ಒಂದು ತೀರ್ಮಾನಕ್ಕೆ ಬಂದರೆ ಸಮಾವೇಶದಲ್ಲಿ ಘೋಷಣೆ ಮಾಡಲು ಅನುಕೂಲ ಆಗುತ್ತದೆ ಎಂಬುದು ಸಿಎಂ ಸಿದ್ದರಾಮಯ್ಯ ಅವರ ಲೆಕ್ಕಾಚಾರ ಆಗಿದೆ ಎಂದು ಹೇಳಲಾಗಿದೆ. ಆದರೆ, ಇನ್ನು 10 ದಿನದಲ್ಲಿ ಸಮಿತಿಯನ್ನು ಪುನಾರಚನೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಹೀಗಾಗಿ ಸದ್ಯಕ್ಕೆ ಹಳೇ ಪಿಂಚಣಿ ಬಗ್ಗೆ ಸರ್ಕಾರ ಘೋಷಣೆ ಮಾಡುವ ಸಾಧ್ಯತೆ ಕಡಿಮೆಯೇ ಎಂದು ಹೇಳಲಾಗಿದೆ.

Continue Reading

ಉತ್ತರ ಕನ್ನಡ

Uttara Kannada News: ಯಲ್ಲಾಪುರ ಪಟ್ಟಣದಲ್ಲಿ ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ಒತ್ತಾಯ

Uttara Kannada News: ಯಲ್ಲಾಪುರ ಪಟ್ಟಣದಲ್ಲಿ ಬೈಪಾಸ್‌ ರಸ್ತೆ ನಿರ್ಮಿಸುವ ಕುರಿತು ಒತ್ತಾಯಿಸಿ, ಯಲ್ಲಾಪುರ ನಗರ ಬೈಪಾಸ್‌ ರಸ್ತೆ ಹೋರಾಟ ಸಮಿತಿ ವತಿಯಿಂದ ಡಿ.11 ರಂದು ಮೆರವಣಿಗೆ ಮೂಲಕ ತಹಸೀಲ್ದಾರ್‌ ಕಛೇರಿಗೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ನಾಗರಿಕ ವೇದಿಕೆ ಅಧ್ಯಕ್ಷ ಹಾಗೂ ಹೋರಾಟ ಸಮಿತಿ ಸಂಚಾಲಕ ರಾಮು ನಾಯ್ಕ ತಿಳಿಸಿದ್ದಾರೆ.

VISTARANEWS.COM


on

Pressmeet for Demand for construction of bypass road in Yallapur
ಯಲ್ಲಾಪುರ ಪಟ್ಟಣದಲ್ಲಿ ನಾಗರಿಕ ವೇದಿಕೆ ಅಧ್ಯಕ್ಷ ಹಾಗೂ ಯಲ್ಲಾಪುರ ನಗರ ಬೈಪಾಸ್‌ ರಸ್ತೆ ಹೋರಾಟ ಸಮಿತಿ ಸಂಚಾಲಕ ರಾಮು ನಾಯ್ಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
Koo

ಯಲ್ಲಾಪುರ: ಯಲ್ಲಾಪುರ ಪಟ್ಟಣದಲ್ಲಿ ಬೈಪಾಸ್‌ ರಸ್ತೆ (Bypass Road) ನಿರ್ಮಿಸುವ ಕುರಿತು ಒತ್ತಾಯಿಸಿ, ಡಿ.11 ರಂದು ಮೆರವಣಿಗೆ ಮೂಲಕ ತಹಸೀಲ್ದಾರ್‌ ಕಚೇರಿಗೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಲು ಯಲ್ಲಾಪುರ ನಗರ ಬೈಪಾಸ್‌ ರಸ್ತೆ ಹೋರಾಟ ಸಮಿತಿ ವತಿಯಿಂದ ತೀರ್ಮಾನಿಸಲಾಗಿದೆ ಎಂದು ನಾಗರಿಕ ವೇದಿಕೆ ಅಧ್ಯಕ್ಷ ಹಾಗೂ ಹೋರಾಟ ಸಮಿತಿ ಸಂಚಾಲಕ ರಾಮು ನಾಯ್ಕ ತಿಳಿಸಿದರು.

ಪಟ್ಟಣದ ಫಾರೆಸ್ಟ್‌ ಐ.ಬಿ.ಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿಯು ಪಟ್ಟಣದ ಮಧ್ಯಭಾಗದಲ್ಲಿ ಹಾದು ಹೋಗಿದ್ದು, ಪ್ರತಿನಿತ್ಯ ಸಂಚರಿಸುವ ಸಾವಿರಾರು ವಾಹನಗಳಿಂದಾಗಿ ಸಾರ್ವಜನಿಕರ, ವಿದ್ಯಾರ್ಥಿಗಳ ಹಾಗೂ ಸ್ಥಳೀಯ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದು, ಪಟ್ಟಣದಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ಈಗಾಗಲೇ ಅಂಕೋಲಾ ತಾಲೂಕಿನ ಬಾಳೆಗುಳಿವರೆಗೆ ಚತುಷ್ಪಥ ರಸ್ತೆ ಆಗಿದ್ದು, ಮುಂದುವರೆದು ಯಲ್ಲಾಪುರದ ಮೂಲಕ ಈ ರಸ್ತೆ ಹಾದು ಹೋದಲ್ಲಿ, ಯಲ್ಲಾಪುರ ನಗರದಲ್ಲಿ ನಡೆದಾಡುವುದು ಸಹ ಕಷ್ಟ ಸಾಧ್ಯವಾಗಲಿದೆ.

ಇದನ್ನೂ ಓದಿ: T20 World Cup 2024:​ ನೂತನ ಲೋಗೋ ವಿನ್ಯಾಸಕ್ಕೆ ಫಿದಾ ಆದ ಕ್ರಿಕೆಟ್​ ಅಭಿಮಾನಿಗಳು

ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಮುಂಚಿತವಾಗಿಯೇ ಬೈಪಾಸ್ ನಿರ್ಮಾಣಕ್ಕೆ ಸರ್ಕಾರ ಆದೇಶಿಸಬೇಕು. ಈ ಪ್ರಯುಕ್ತ ಡಿ. 11 ರಂದು ಬೆಳಗ್ಗೆ 10 ಗಂಟೆಗೆ ವೈಟಿಎಸ್‌ಎಸ್‌ ಮೈದಾನದಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಪಾಲಕರು, ಅಂಗಡಿಕಾರರೆಲ್ಲ ಸೇರಿ ಬೃಹತ್ ಮೆರವಣಿಗೆಯಲ್ಲಿ ಸಾಗಿ ತಹಶೀಲ್ದಾರರ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಸಾರ್ವಜನಿಕರು ಸಹ ತಮ್ಮ ಮಕ್ಕಳ ಸುರಕ್ಷತೆಗಾಗಿ, ಸ್ವಯಂ ಪ್ರೇರಣೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸರ್ಕಾರಕ್ಕೆ ಅಗತ್ಯತೆಯ ಕುರಿತು ಮನದಟ್ಟು ಮಾಡಲು ಪಾಲ್ಗೊಳ್ಳುವಂತೆ ಕೋರಿದರು.

ಸಮಿತಿಯ ಪ್ರಮುಖರಾದ ರವಿ ಶ್ಯಾನಭಾಗ್ ಮಾತನಾಡಿ, ಹೆದ್ದಾರಿಯ ಅಕ್ಕ ಪಕ್ಕದ ಅಂಗಡಿಕಾರರು ಹೆಚ್ಚಿನದಾಗಿ ಈ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಅವಶ್ಯಕತೆ ಇದೆ. ಬೈಪಾಸ್ ನಿರ್ಮಾಣವಾಗದೆ ಹೆದ್ದಾರಿ ಅಗಲೀಕರಣವಾದಲ್ಲಿ, ಯಲ್ಲಾಪುರದ ಬಹುತೇಕ ಅಂಗಡಿಗಳು ನೆಲೆ ಕಳೆದುಕೊಳ್ಳಲಿದೆ. ಹೀಗಾಗಿ ಮುಂದಿನ ಭವಿಷ್ಯಕ್ಕಾಗಿ ಪಾಲ್ಗೊಳ್ಳಬೇಕು. ಬೈಪಾಸ್ ನಿರ್ಮಾಣಕ್ಕೆ ಸಮಯ ಆಗಲಿದ್ದು, ಅಲ್ಲಿಯವರೆಗೆ ಟ್ರಾಫಿಕ್ ಪೊಲೀಸರ ತಂಡ ಪ್ರಾರಂಭಿಸಿ, ಟ್ರಾಫಿಕ್ ನಿರ್ವಹಣೆಯ ಕಾರ್ಯ ಮಾಡಬೇಕಿದೆ ಎಂದರು.

ಇದನ್ನೂ ಓದಿ: The Nandi Awards: ನಂದಿ ಫಿಲ್ಮ್‌ ಅವಾರ್ಡ್; ಅತ್ಯುತ್ತಮ ನಟ, ನಿರ್ದೇಶಕ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ

ಈ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲ ಬೀರಣ್ಣ ನಾಯಕ ಮೊಗಟಾ,‌ ಎ.ಎ. ಶೇಖ್‌, ಮಹ್ಮದ್‌ ಗೌಸ್‌, ವಕೀಲೆ ಬೇಬಿ ಅಮಿನಾ, ಸುರೇಶ್ ಬೊರಕರ, ಪ್ರಭಾಕರ ನಾಯ್ಕ, ಮಾಧವ ನಾಯಕ, ದಾಸಿಂತ್ ಫರ್ನಾಂಡಿಸ್, ಉಲ್ಲಾಸ್ ಮಹಾಲೆ, ವೇಣುಗೋಪಾಲ ಮದ್ಗುಣಿ, ಜಗನ್ನಾಥ ರೇವಣಕರ ಇದ್ದರು.

Continue Reading

ಕರ್ನಾಟಕ

Self Harming : ಅದಾನಿ ಗ್ರೂಪ್‌ ಕಾರ್ಖಾನೆಯ ಡೆಪ್ಯೂಟಿ ಮ್ಯಾನೇಜರ್ ಸೂಸೈಡ್‌!

Self Harming : ಮಾನಸಿಕ ಖಿನ್ನತೆಯಿಂದಾಗಿ ನೊಂದ ವಿದ್ಯಾರ್ಥಿಯೊಬ್ಬ ಮುಖಕ್ಕೆ ಪ್ಲಾಸ್ಟಿಕ್‌ ಕವರ್‌ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಮತ್ತೊಂದು ಕಡೆ ಎಸಿಸಿ ಸಿಮೆಂಟ್‌ ಕಾರ್ಖಾನೆಯ ಡೆಪ್ಯೂಟಿ ಮ್ಯಾನೇಜರ್‌ ನೇಣು ಬಿಗಿದುಕೊಂಡಿದ್ದಾಳೆ.

VISTARANEWS.COM


on

By

self harming by wadi Acc cement Depute Director
Koo

ಕಲಬುರಗಿ/ಮೈಸೂರು: ವಾಡಿ ಎಸಿಸಿ ಸಿಮೆಂಟ್ ಕಾರ್ಖಾನೆಯ ಡೆಪ್ಯೂಟಿ ಮ್ಯಾನೇಜರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರಗಿ ಜಿಲ್ಲೆ ಚಿತ್ತಾಪೂರ ತಾಲೂಕಿನ ವಾಡಿ ಪಟ್ಟಣದಲ್ಲಿರುವ ಅದಾನಿ ಗ್ರೂಪ್ ಮಾಲೀಕತ್ವದ ಎಸಿಸಿ ಕಾರ್ಖಾನೆಯ ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಡೆಪ್ಯೂಟಿ ಮ್ಯಾನೇಜರ್ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ.

ರಮೇಶ ಪವಾರ (47) ಆತ್ಮಹತ್ಯೆ ಮಾಡಿಕೊಂಡ ಎಸಿಸಿ ಕಾರ್ಖಾನೆ ಡೆಪ್ಯೂಟಿ ಮ್ಯಾನೇಜರ್ ಆಗಿದ್ದಾರೆ. ಎಸಿಸಿ ಕಾಲೋನಿಯ ಮನೆಯ ಬಾಲ್ಕನಿಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಕಾರ್ಖಾನೆ ಹಿರಿಯ ಅಧಿಕಾರಿಗಳ ಮೇಲೆ ಆರೋಪ ಮಾಡಿರುವ ವಿಡಿಯೊ ಮಾಡಿ ಹರಿಬಿಟ್ಟಿದ್ದಾರೆ. ಈ ರಮೇಶ ಪವಾರ್ ಚಿತ್ತಾಪೂರದ ಮಾಜಿ ಶಾಸಕ ದಿ.ವಾಲ್ಮಿಕಿ ನಾಯಕ್ ಅವರ ಅಳಿಯರಾಗಿದ್ದಾರೆ.

ವಾಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: BMTC Accident : ಕಿಲ್ಲರ್‌ ಬಿಎಂಟಿಸಿ ಬಸ್‌ಗೆ 120 ಮಂದಿ ಬಲಿ!

ಮುಖಕ್ಕೆ ಪ್ಲಾಸ್ಟಿಕ್‌ ಕವರ್‌ ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಮೈಸೂರು: ಮೈಸೂರಿನ ರೀಜನಲ್ ಇನ್‌ಸ್ಟಿಟ್ಯೂಟ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಮುಖಕ್ಕೆ ಪ್ಲಾಸ್ಟಿಕ್ ಕವರ್ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಕ್ಷಜ್ (18) ಮೃತ ದುರ್ದೈವಿ.

ಹೈದರಾಬಾದ್ ಮೂಲದ ಅಕ್ಷಜ್‌ ರೀಜನಲ್ ಇನ್‌ಸ್ಟಿಟ್ಯೂಟ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ. ಇತ್ತೀಚೆಗೆ ಮಾನಸಿಕ ಖಿನ್ನೆತೆಗೆ ಒಳಗಾಗಿದ್ದ ಎನ್ನಲಾಗಿದೆ. ಹಾಸ್ಟೆಲ್‌ನಲ್ಲಿ ಯಾರು ಇಲ್ಲದ ವೇಳೆ ಪ್ಲಾಸ್ಟಿಕ್‌ ಕವರ್‌ನಿಂದ ಮುಖವನ್ನು ಪೂರ್ತಿ ಮುಚ್ಚಿಕೊಂಡು ಉಸಿರುಗಟ್ಟಿಸಿಕೊಂಡು ಮೃತಪಟ್ಟಿದ್ದಾನೆ.

ಸಹಪಾಠಿಗಳು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಜಯಲಕ್ಷ್ಮಿಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: lawyer Murder: ಕಲಬುರಗಿಯಲ್ಲಿ ವಕೀಲನನ್ನು ಅಟ್ಟಾಡಿಸಿ ಕೊಂದರು! ಹತ್ಯೆಗೆ ಇದುವೇ ಕಾರಣ!

ಪ್ರೀತಿಸಿ ಕೈಬಿಟ್ಟಳು; ನೊಂದು ಬೆಂಕಿ ಹಚ್ಚಿಕೊಂಡ ಪ್ರೇಮಿ!

ಬೆಂಗಳೂರು: ಪ್ರೀತಿಸಿದ ಹುಡುಗಿ ಏಕಾಏಕಿ ಪ್ರೀತಿಯನ್ನು ನಿರಾಕರಿಸಿ (Love failure) ಬಿಟ್ಟು ಹೋಗಿದ್ದಕ್ಕೆ ಮನನೊಂದ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಿನ ಕೆಂಗೇರಿಯ ಕೊಡಿಗೆ ಪಾಳ್ಯದಲ್ಲಿ ಈ ಘಟನೆ ನಡೆದಿದೆ.

ಆನೇಕಲ್ ತಾಲೂಕಿನ ಜಿಗಣಿಯ ಕಲ್ಲುಬಾಳು ಗ್ರಾಮದ ರಾಕೇಶ್ ಮೃತ ದುರ್ದೈವಿ. ರಾಕೇಶ್‌ ಐದಾರು ವರ್ಷದಿಂದ‌ ಯುವತಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದ. ಇಬ್ಬರು ಪಾರ್ಕ್‌, ಸಿನಿಮಾ ಎಂದು ಊರು ಊರು ತಿರುಗಿದ್ದರು. ಆದರೆ ಇತ್ತೀಚೆಗೆ ರಾಕೇಶ್‌ನನ್ನು ಯುವತಿ ಅವಾಯ್ಡ್‌ ಮಾಡಲು ಶುರು ಮಾಡಿದ್ದಳು.

ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದವಳು ಏಕಾಏಕಿ ದೂರಾಗಿದ್ದಳು. ಮಸೇಜ್‌, ಫೋನ್‌ ಕಾಲ್‌ಗೂ ರೆಸ್ಪಾನ್ಸ್‌ ಮಾಡುತ್ತಿರಲಿಲ್ಲ. ಈ ನಡುವೆ ಬೇರೆ ಯುವಕನ ಜತೆ ಮದುವೆಗೆ ಸಿದ್ಧತೆಯನ್ನು ನಡೆಸಿದ್ದಳು. ಈ ವಿಷಯ ತಿಳಿದು ನಿನ್ನೆ ಬುಧವಾರ ರಾಕೇಶ್ ನೇರ ಯುವತಿ ಮನೆಯ ಬಳಿ ಹೋಗಿ ಪ್ರಶ್ನೆ ಮಾಡಿದ್ದ. ಈ ವೇಳೆ ರಾಕೇಶ್ ಹಾಗೂ ಯುವತಿ ನಡುವೆ ಗಲಾಟೆ ಆಗಿತ್ತು.

ಪ್ರೀತಿಸಿದವಳು ಮೋಸ ಮಾಡಿಬಿಟ್ಟಳೆಂದು ಮನನೊಂದಿದ್ದ ರಾಕೇಶ್‌, ಮನೆಗೆ ಬಂದವನೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ. ಕೂಡಲೇ ಗಾಯಾಳು ರಾಕೇಶ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಬೆಂಕಿ ತೀವ್ರತೆಗೆ ದೇಹದ ಬಹುತೇಕ ಭಾಗ ಸುಟ್ಟು ಕರಕಲಾಗಿತ್ತು. ತೀವ್ರ ನೋವಿನಿಂದ ಬಳಲುತ್ತಿದ್ದ ರಾಕೇಶ್ ಬುಧವಾರ ರಾತ್ರಿಯೇ ಮೃತಪಟ್ಟಿದ್ದಾನೆ. ರಾಕೇಶ್ ಕುಟುಂಬಸ್ಥರು ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
Attendance Araga Jnanendra UT Khader Araga jnanendra
ಕರ್ನಾಟಕ15 mins ago

Belagavi Winter Session : ನಾವೂ ಟೈಮಿಗೆ ಸರಿಯಾಗಿ ಬಂದಿದ್ದೀವಿ; ಸ್ಪೀಕರ್‌ ಜತೆ ಶಾಸಕರ ಜಗಳ!

Madhu Bangarappa in Belagavi Winter Session
ಕರ್ನಾಟಕ31 mins ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Pressmeet for Demand for construction of bypass road in Yallapur
ಉತ್ತರ ಕನ್ನಡ36 mins ago

Uttara Kannada News: ಯಲ್ಲಾಪುರ ಪಟ್ಟಣದಲ್ಲಿ ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ಒತ್ತಾಯ

Israel
ಪ್ರಮುಖ ಸುದ್ದಿ38 mins ago

Israel Palestine War: ಅರ್ಧದಷ್ಟು ಹಮಾಸ್ ಕಮಾಂಡರ್‌ಗಳು ಫಿನಿಷ್! ಇಸ್ರೇಲ್ ಹೇಳಿಕೆ

bengaluru bulls kiccha sudeep
ಕ್ರೀಡೆ38 mins ago

ಬೆಂಗಳೂರು ಬುಲ್ಸ್​ಗೆ ಫುಲ್ ಚಾರ್ಜ್​ ಮಾಡಲು ಬರಲಿದ್ದಾರೆ ಕಿಚ್ಚ ಸುದೀಪ್

self harming by wadi Acc cement Depute Director
ಕರ್ನಾಟಕ55 mins ago

Self Harming : ಅದಾನಿ ಗ್ರೂಪ್‌ ಕಾರ್ಖಾನೆಯ ಡೆಪ್ಯೂಟಿ ಮ್ಯಾನೇಜರ್ ಸೂಸೈಡ್‌!

A girl shoots her classmate and herself with shotgun
ವಿದೇಶ56 mins ago

viral video: ಸಹಪಾಠಿಗೆ ಗುಂಡು ಹೊಡೆದು ತಾನೂ ಸತ್ತ 14 ವರ್ಷದ ವಿದ್ಯಾರ್ಥಿನಿ!

Flax Seeds Benefits For Hair
ಆರೋಗ್ಯ1 hour ago

Flax Seeds Benefits For Hair: ಚಳಿಗಾಲದಲ್ಲಿ ಕೂದಲ ಆರೋಗ್ಯಕ್ಕೆ ಅಗಸೆಬೀಜ ಸೂಪರ್‌!

Wedding Fashion
ಫ್ಯಾಷನ್1 hour ago

Wedding Fashion: ಮದುಮಗನ ಆರತಕ್ಷತೆಯ ಗ್ರ್ಯಾಂಡ್‌ ಔಟ್‌ಫಿಟ್‌ ಆಯ್ಕೆಗೆ ಇಲ್ಲಿದೆ 5 ಸಿಂಪಲ್‌ ಸೂತ್ರ

U-19 Asia Cup IND vs PAK
ಕ್ರಿಕೆಟ್1 hour ago

ನಾಳೆಯಿಂದ ಅಂಡರ್​-19 ಏಷ್ಯಾಕಪ್; ಭಾರತ-ಪಾಕ್​ ಮುಖಾಮುಖಿ ಯಾವಾಗ?

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Madhu Bangarappa in Belagavi Winter Session
ಕರ್ನಾಟಕ31 mins ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ1 hour ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ7 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ14 hours ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ22 hours ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ1 day ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ1 day ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ1 day ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ1 day ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job Vistara Exclusive
ಉದ್ಯೋಗ1 day ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

ಟ್ರೆಂಡಿಂಗ್‌