Gruhajyoti Scheme : ಇಂದು ಮಧ್ಯ ರಾತ್ರಿಯಿಂದಲೇ ಫ್ರೀ ವಿದ್ಯುತ್‌; ನೀವು ಅರ್ಜಿ ಸಲ್ಲಿಸಿದ್ರಾ? - Vistara News

ಕರ್ನಾಟಕ

Gruhajyoti Scheme : ಇಂದು ಮಧ್ಯ ರಾತ್ರಿಯಿಂದಲೇ ಫ್ರೀ ವಿದ್ಯುತ್‌; ನೀವು ಅರ್ಜಿ ಸಲ್ಲಿಸಿದ್ರಾ?

Gruhajyoti Scheme: ರಾಜ್ಯದ ಮಹತ್ವಾಕಾಂಕ್ಷೆಯ ಉಚಿತ ವಿದ್ಯುತ್‌ ಯೋಜನೆ ಜುಲೈ 1ರಿಂದ ಚಾಲನೆ ಪಡೆದುಕೊಳ್ಳಲಿದೆ. ಈ ಯೋಜನೆಗೆ ನೀವಿನ್ನೂ ಅರ್ಜಿ ಸಲ್ಲಿಸದಿದ್ದರೂ ಇನ್ನೂ ಅವಕಾಶವಿದೆ.

VISTARANEWS.COM


on

Gruhajyothi start
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದ ಕಾಂಗ್ರೆಸ್​​​ ಸರ್ಕಾರದ (Congress Government) ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ (Congress Guarantee) ಪೈಕಿ ಒಂದಾದ ಗೃಹ ಜ್ಯೋತಿ ಯೋಜನೆ (Gruhajyoti scheme) ಜುಲೈ ಒಂದರಿಂದಲೇ ಜಾರಿಗೆ ಬರಲಿದೆ. ಅಂದರೆ ಜೂನ್‌ 30ರ ಮಧ್ಯರಾತ್ರಿಯಿಂದಲೇ ಉಚಿತ ವಿದ್ಯುತ್‌ (Free Electricity) ಲೆಕ್ಕಾಚಾರ ಶುರುವಾಗಲಿದೆ.

200 ಯುನಿಟ್‌ಗಿಂತ ಕಡಿಮೆ ವಿದ್ಯುತ್‌ ಬಳಸುವ ಕುಟುಂಬಗಳಿಗೆ ಉಚಿತ ವಿದ್ಯುತ್‌ ನೀಡುವ ಮಹತ್ವದ ಯೋಜನೆ ಇದಾಗಿದೆ. ಕುಟುಂಬಗಳು ಈಗ ಬಳಸುತ್ತಿರುವ ಸರಾಸರಿ ವಿದ್ಯುತ್‌ನ ಶೇಕಡಾ ಹತ್ತರಷ್ಟು ಹೆಚ್ಚು ವಿದ್ಯುತ್‌ ಬಳಸಲು ಈ ಯೋಜನೆಯಲ್ಲಿ ಅವಕಾಶವಿದೆ. ಅದಕ್ಕಿಂತ ಹೆಚ್ಚು ಬಳಸಿದರೆ ಬಳಸಿದ ಯುನಿಟ್‌ಗಳ ಆಧಾರದಲ್ಲಿ ಹಣ ಪಾವತಿ ಮಾಡಬೇಕಾಗುತ್ತದೆ. 200ಕ್ಕಿಂತ ಹೆಚ್ಚು ಯುನಿಟ್‌ ಬಳಸುವ ಕುಟುಂಬಗಳಿಗೆ ಈ ಯೋಜನೆ ಅನ್ವಯವಾಗುವುದಿಲ್ಲ.

ಗೃಹ ಜ್ಯೋತಿ ಯೋಜನೆಗೆ ಕಳೆದ ಜೂನ್‌ 18ರಿಂದಲೇ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯದಲ್ಲಿ ಸುಮಾರು 2.14 ಕೋಟಿ ಕುಟುಂಬಗಳು ಉಚಿತ ವಿದ್ಯುತ್‌ ಬಳಕೆ ವ್ಯಾಪ್ತಿಗೆ ಬರುವ ಸಾಧ್ಯತೆಗಳನ್ನು ಕಂಡುಕೊಳ್ಳಲಾಗಿದೆ. ಅವರ ಪೈಕಿ ಕಳೆದ 11 ದಿನದ ಅವಧಿಯಲ್ಲಿ 85 ಲಕ್ಷಕ್ಕೂ ಅಧಿಕ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಮುಂದಿನ 20 ದಿನಗಳಲ್ಲಿ ಎಲ್ಲ ಅರ್ಹ ಗ್ರಾಹಕರು ಅರ್ಜಿ ಸಲ್ಲಿಸುವ ನಿರೀಕ್ಷೆ ಇದೆ.

ಆಗಸ್ಟ್‌ ತಿಂಗಳಲ್ಲಿ ಬರುವ ಬಿಲ್‌ ಉಚಿತ!

ಉಚಿತ ವಿದ್ಯುತ್‌ನ ಲೆಕ್ಕಾಚಾರ ಜುಲೈ 1ರಿಂದಲೇ ಆರಂಭವಾಗಲಿದೆ. ಹಾಗಂತ ಮೀಟರ್‌ಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಮೀಟರ್‌ಗಳು ಮನೆಯಲ್ಲಿ ಎಷ್ಟು ವಿದ್ಯುತ್‌ ಖರ್ಚಾಗಿದೆ ಎನ್ನುವುದನ್ನು ಲೆಕ್ಕ ಮಾಡುತ್ತಲೇ ಇರುತ್ತವೆ. ಅದು ಆಯಾ ಮೀಟರ್‌ಗೆ ವಿಧಿಸಿದ ಗರಿಷ್ಠ ಬಳಕೆಯ ಮಿತಿಯೊಳಗೇ ಇದ್ದರೆ ಆಗಸ್ಟ್‌ನಲ್ಲಿ ಉಚಿತ ಬಿಲ್‌ ಎಂದು ಬರುತ್ತದೆ. 12 ತಿಂಗಳ ಬಿಲ್ ಸರಾಸರಿ ಆಧಾರದಲ್ಲಿ ಗೃಹಜ್ಯೋತಿಯ ವಿದ್ಯುತ್​ ಉಚಿತ ನೀಡಲಾಗುತ್ತದೆ.

12 ತಿಂಗಳ ಸರಾಸರಿ ಬಳಕೆ 200 ಯುನಿಟ್ ಇದ್ದರೂ ಫ್ರಿ ವಿದ್ಯುತ್​ ಸಿಗಲಿದೆ. 12 ತಿಂಗಳ ಸರಾಸರಿಗಿಂತ ಹೆಚ್ಚು ಬಳಸಿದ್ರೆ ಮಾತ್ರ ಬಿಲ್ ಬರಲಿದೆ. 12 ತಿಂಗಳ ಸರಾಸರಿಯ ಬಿಲ್​ನಲ್ಲಿ 200 ಯುನಿಟ್ ಜೊತೆ 10 ಯುನಿಟ್ ಜಾಸ್ತಿಯಾದರೂ ಸಹ ಬಿಲ್ ಕಟ್ಟಬೇಕಿದೆ.

ಉಚಿತ ವಿದ್ಯುತ್‌ ಲೆಕ್ಕಾಚಾರ ಹೇಗೆ?

ಕಳೆದ 12 ತಿಂಗಳಿನಲ್ಲಿ ನೀವು 100 ಯುನಿಟ್ ವಿದ್ಯುತ್ ಬಳಸಿದ್ದರೆ, ನಿಮಗೆ ಈಗ 110 ಯುನಿಟ್‌ವರೆಗೆ ಮಾತ್ರ ಉಚಿತ ವಿದ್ಯುತ್ ಬಳಸಲು ಅವಕಾಶ ಇರುತ್ತದೆ. ಅಂದರೆ ಸರಾಸರಿ ಬಳಕೆಯ ಶೇಕಡಾ 10ರಷ್ಟು ಹೆಚ್ಚು ಉಚಿತ ಇದೆ ಎಂದು ಮಿತಿ ಮೀರಿ ಬಳಕೆ ಮಾಡಿದರೆ ನಿಮಗೆ ವಿದ್ಯುತ್ ಬಿಲ್ ಬರಲಿದೆ.

ಬಾಕಿ ವಿದ್ಯುತ್ ಬಿಲ್ ಕಟ್ಟಬೇಕು ಇನ್ನು ನೀವು ಉಚಿತ ವಿದ್ಯುತ್ ಪಡೆಯಬೇಕು ಎಂದರೆ ಬಾಕಿ ಇರುವ ವಿದ್ಯುತ್ ಬಿಲ್ ಕಟ್ಟಬೇಕಾಗುತ್ತದೆ. ಸರ್ಕಾರ ಸೆಪ್ಟೆಂಬರ್ ವರೆಗೆ ಇದಕ್ಕೆ ಸಮಯ ನೀಡಿದ್ದು, ಉಚಿತ್ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸಿದವರು ಬಾಕಿ ಇರುವ ವಿದ್ಯುತ್ ಶುಲ್ಕವನ್ನು ಪಾವತಿ ಮಾಡಬೇಕು.

ನೀವಿನ್ನೂ ನೋಂದಣಿ ಮಾಡಿಸಿಕೊಂಡಿಲ್ಲವೇ?

ನೀವು ಉಚಿತ ವಿದ್ಯುತ್‌ ಯೋಜನೆಯ ಫಲಾನುಭವಿಯಾಗಲು ಈಗಾಗಲೇ ಅರ್ಜಿ ಸಲ್ಲಿಸಿದ್ದರೆ ವೆರಿಗುಡ್‌. ಹಾಗಂತ ಇನ್ನೂ ಅರ್ಜಿ ಸಲ್ಲಿಸಿಲ್ಲವಾದರೂ ಯಾವುದೇ ರೀತಿಯಲ್ಲಿ ಚಿಂತಿಸುವ ಅಗತ್ಯವಿಲ್ಲ. ಸೇವಾ ಸಿಂಧು ಪೋರ್ಟಲ್‌ನಲ್ಲಿ, ಎಲ್ಲ ವಿದ್ಯುತ್‌ ಕಚೇರಿಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಮೊಬೈಲ್‌ನಲ್ಲೇ ಅತ್ಯಂತ ಸರಳವಾಗಿ ಮಾಡಬಹುದು.

ಇದನ್ನೂ ಓದಿ: Gruhajyothi Scheme: ಕೇವಲ10 ದಿನದಲ್ಲಿ 77 ಲಕ್ಷ ದಾಟಿದ ಗೃಹ ಜ್ಯೋತಿ ನೋಂದಣಿ, 33% ಪೂರ್ಣ

ನೀವು ನಿಮ್ಮ ವಿದ್ಯುತ್‌ ಸಂಪರ್ಕದ ಖಾತೆ ಸಂಖ್ಯೆ, ಆರ್‌ಆರ್‌ ನಂಬರ್‌, ನಿಮ್ಮ ಮೊಬೈಲ್‌ ಸಂಖ್ಯೆ, ಆಧಾರ್‌ ಕಾರ್ಡ್‌ ಇವಿಷ್ಟನ್ನು ಇಟ್ಟುಕೊಂಡು ಸೇವಾ ಸಿಂಧು app ಮೂಲಕ ಸರಳವಾಗಿ ಅರ್ಜಿ ಹಾಕಬಹುದು.

ಅರ್ಜಿ ಸಲ್ಲಿಸಲು ಸಾಕಷ್ಟು ಸಮಯಾವಕಾಶ ಇದೆ. ಆರಂಭದಲ್ಲಿ ಪೋರ್ಟಲ್‌ ಸಮಸ್ಯೆ ಮತ್ತಿತರ ಕಾರಣಗಳಿಂದಾಗಿ ನೋಂದಣಿ ಸ್ವಲ್ಪ ವಿಳಂಬ ಗತಿಯಲ್ಲಿ ನಡೆದಿದ್ದರೂ ಈಗ ದಿನಕ್ಕೆ ಸರಾಸರಿ 10 ಲಕ್ಷ ಗ್ರಾಹಕರು ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ಅಂದರೆ ಇನ್ನು 12 ದಿನಗಳ ಒಳಗೆ ಬಹುತೇಕ ಎಲ್ಲ ಗ್ರಾಹಕರು ನೋಂದಣಿ ಮಾಡಿಕೊಳ್ಳಲಿದ್ದಾರೆ. ಹೀಗಾಗಿ ಒತ್ತಡವಿಲ್ಲದೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Free Electricity: ಉಚಿತ ವಿದ್ಯುತ್‌ ಅರ್ಜಿ ಪೋರ್ಟಲ್‌ ಓಪನ್‌ ಆಗ್ತಿಲ್ವಾ? ಈ ಲಿಂಕ್‌ ಬಳಸಿ, ನೇರ ಕನೆಕ್ಟ್‌ ಆಗುತ್ತೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Compound Wall Collapse: ಹಾಜಬ್ಬರ ಶಾಲೆ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು

Compound Wall Collapse: ದಕ್ಷಿಣ ಕನ್ನಡ ಜಿಲ್ಲೆಯ ‌ಉಳ್ಳಾಲ ತಾಲೂಕಿನ ನ್ಯೂಪಡ್ಪುನಲ್ಲಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರು ಕಟ್ಟಿದ ಶಾಲೆಯ ಕಾಂಪೌಂಡ್ ಗೋಡೆ ಕುಸಿದು ದುರ್ಘಟನೆ ನಡೆದಿದೆ.

VISTARANEWS.COM


on

Compound Wall Collapse
Koo

ಮಂಗಳೂರು: ಶಾಲೆಯ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟಿರುವ ಘಟನೆ (Compound Wall Collapse) ದಕ್ಷಿಣ ಕನ್ನಡ ಜಿಲ್ಲೆಯ ‌ಉಳ್ಳಾಲ ತಾಲೂಕಿನ ನ್ಯೂಪಡ್ಪುನಲ್ಲಿ ನಡೆದಿದೆ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ (Harekala Hajabba) ಅವರು ಕಟ್ಟಿದ ನ್ಯೂಪಡ್ಪು ಶಾಲೆಯ ಕಾಂಪೌಂಡ್ ಗೋಡೆ ಕುಸಿದು ದುರ್ಘಟನೆ ಸಂಭವಿಸಿದೆ.

ನ್ಯೂಪಡ್ಪು ನಿವಾಸಿ ಸಿದ್ದೀಖ್ ಜಮೀಲಾ ಪುತ್ರಿ ಶಾಜಿಯಾ (7) ಮೃತ ಬಾಲಕಿ. ಹಾಜಬ್ಬರ ಶಾಲೆಯಲ್ಲಿ ವಿದ್ಯಾರ್ಥಿನಿ ಶಾಜಿಯಾ 3ನೇ ತರಗತಿ ಓದುತ್ತಿದ್ದಳು. ಶಾಲೆಯಲ್ಲಿ ನಡೆಯುತ್ತಿದ್ದ ಎನ್‌ಎಸ್‌ಎಸ್ ಶಿಬಿರದಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿನಿ ಗೇಟಿನ ಬಳಿ ಆಟವಾಡುತ್ತಿದ್ದಾಗ ಕಾಂಪೌಡ್ ಗೋಡೆ ಕುಸಿದಿದ್ದರಿಂದ ದುರ್ಘಟನೆ ಸಂಭವಿಸಿದೆ. ಉಳ್ಳಾಲ ತಾಲೂಕಿನಲ್ಲಿ ಮೊದಲ ಮಳೆಗೆ ಅನಾಹುತ ಸಂಭವಿಸಿದೆ.

ಇದನ್ನೂ ಓದಿ | Physical Abuse & Murder: ಬಾಲಕಿ ಮೇಲೆ ಅತ್ಯಾಚಾರ, ಸಜೀವ ದಹನ ಕೇಸ್‌; ಹಂತಕರಿಗೆ ಮರಣದಂಡನೆ

ಕೂಡ್ಲಿಗಿಯಲ್ಲಿ ಹಿಟ್ ಆ್ಯಂಡ್ ರನ್; ಬೈಕ್‌ಗೆ ಲಾರಿ ಡಿಕ್ಕಿಯಾಗಿ ಯುವತಿ ಸಾವು

Hit And Run Case

ವಿಜಯನಗರ: ಬೈಕ್‌ಗೆ ಲಾರಿ ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ಮೃತಪಟ್ಟು, ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಅಪಘಾತದ (Hit And Run Case) ಬಳಿಕ ಲಾರಿ ಸಮೇತ ಚಾಲಕ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಮೇಘನಾ (18) ಮೃತ ಯುವತಿ. ಹೊಸಪೇಟೆಯಿಂದ ಕೂಡ್ಲಿಗಿ ಕಡೆ ಹೊರಟಿದ್ದ ಬೈಕ್ ಮೇಲೆ ಯುವಕ, ಯುವತಿ ಹೋಗುತ್ತಿದ್ದಾಗ ಲಾರಿ ಡಿಕ್ಕಿಯಾಗಿದೆ. ಈ ವೇಳೆ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದು, ಯುವಕ ಕೈಲಾಶ್‌ ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಆತನನ್ನು ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಯ ವಿಮ್ಸ್‌ಗೆ ರವಾನೆ ಮಾಡಲಾಗಿದೆ. ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶಪ್ಪ, ಸಿಪಿಐ ವಿನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಹಿಟ್ ಆ್ಯಂಡ್ ರನ್ ಮಾಡಿದ ಲಾರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ | Baby Death : ಮಲತಾಯಿಯ ಕ್ರೌರ್ಯಕ್ಕೆ ಬಲಿಯಾಯ್ತಾ 3 ವರ್ಷದ ಕಂದಮ್ಮ?

Continue Reading

ಕರ್ನಾಟಕ

Hit And Run Case: ಕೂಡ್ಲಿಗಿಯಲ್ಲಿ ಹಿಟ್ ಆ್ಯಂಡ್ ರನ್; ಬೈಕ್‌ಗೆ ಲಾರಿ ಡಿಕ್ಕಿಯಾಗಿ ಯುವತಿ ಸಾವು

Hit And Run Case: ಹೊಸಪೇಟೆಯಿಂದ ಕೂಡ್ಲಿಗಿ ಕಡೆ ಬೈಕ್‌ ಮೇಲೆ ಯುವಕ, ಯುವತಿ ಹೋಗುತ್ತಿದ್ದಾಗ ಲಾರಿ ಡಿಕ್ಕಿಯಾಗಿ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಯುವತಿ ಸ್ಥಳದಲ್ಲೇ ಮೃತಪಟ್ಟು, ಯುವಕನಿಗೆ ಗಂಭೀರ ಗಾಯಗಳಾಗಿವೆ.

VISTARANEWS.COM


on

Hit And Run Case
Koo

ವಿಜಯನಗರ: ಬೈಕ್‌ಗೆ ಲಾರಿ ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ಮೃತಪಟ್ಟು, ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಅಪಘಾತದ (Hit And Run Case) ಬಳಿಕ ಲಾರಿ ಸಮೇತ ಚಾಲಕ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಮೇಘನಾ (18) ಮೃತ ಯುವತಿ. ಹೊಸಪೇಟೆಯಿಂದ ಕೂಡ್ಲಿಗಿ ಕಡೆ ಹೊರಟಿದ್ದ ಬೈಕ್ ಮೇಲೆ ಯುವಕ, ಯುವತಿ ಹೋಗುತ್ತಿದ್ದಾಗ ಲಾರಿ ಡಿಕ್ಕಿಯಾಗಿದೆ. ಈ ವೇಳೆ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದು, ಯುವಕ ಕೈಲಾಶ್‌ ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಆತನನ್ನು ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಯ ವಿಮ್ಸ್‌ಗೆ ರವಾನೆ ಮಾಡಲಾಗಿದೆ. ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶಪ್ಪ, ಸಿಪಿಐ ವಿನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಹಿಟ್ ಆ್ಯಂಡ್ ರನ್ ಮಾಡಿದ ಲಾರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ | Baby Death : ಮಲತಾಯಿಯ ಕ್ರೌರ್ಯಕ್ಕೆ ಬಲಿಯಾಯ್ತಾ 3 ವರ್ಷದ ಕಂದಮ್ಮ?

ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

Drowned in water.. road Accident

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಕಾರಿನ ನಡುವೆ ಭೀಕರ ಅಪಘಾತ (Road Accident ) ಸಂಭವಿಸಿದ್ದು, ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ರಸ್ತೆಯ ಬೋರಾಪುರದಲ್ಲಿ ಅಪಘಾತ ನಡೆದಿದೆ.

ಮದ್ದೂರಿನಿಂದ ಮಳವಳ್ಳಿ ಕಡೆಗೆ ಸ್ವಿಫ್ಟ್ ಕಾರು ತೆರಳುತ್ತಿತ್ತು. ಕೆಎಸ್‌ಆರ್‌ಟಿಸಿ ಬಸ್‌ ಮಳವಳ್ಳಿಯಿಂದ ಮದ್ದೂರು ಕಡೆಗೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಛಿದ್ರಗೊಂಡಿದೆ. ಬಸ್‌ನ ಮುಂಭಾಗ ಜಖಂಗೊಂಡಿದೆ.

ಕಾರಿನಲ್ಲಿ ಐವರು ಪ್ರಯಾಣ ಮಾಡುತ್ತಿದ್ದರು. ಅಪಘಾತದಲ್ಲಿ ಸ್ಥಳದಲ್ಲೇ ಕಾರು ಚಾಲಕ ಮೃತಪಟ್ಟರೆ, ನಾಲ್ವರು ಗಾಯಗೊಂಡಿದ್ದಾರೆ. ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಸ್ಥಳೀಯರು ರಕ್ಷಿಸಿದ್ದು, ಮದ್ದೂರು ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇನ್ನೂ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಹಾಗೂ ಚಾಲಕ, ನಿರ್ವಾಹಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಅಪಘಾತದಿಂದಾಗಿ ಬೋರಾಪುರ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ಇದನ್ನೂ ಓದಿ: Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಮದ್ದೂರು ಪಟ್ಟಣ ಠಾಣೆ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದರು. ಛಿದ್ರಗೊಂಡಿದ್ದ ಕಾರನ್ನು ತೆರವು ಮಾಡಿದ್ದರು. ಮದ್ದೂರು ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Continue Reading

ಪ್ರಮುಖ ಸುದ್ದಿ

Reservation in Outsourcing: ಇನ್ನು ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ; ಸಿದ್ದರಾಮಯ್ಯ ಸರ್ಕಾರದ ಮಹತ್ವದ ಆದೇಶ

Reservation in Outsourcing: ಈ ಹಿಂದೆ ಡಿಸೆಂಬರ್‌ನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ ನೀಡಲು ಒಪ್ಪಿಗೆ ನೀಡಲಾಗಿತ್ತು. ಇದೀಗ ರಾಜ್ಯ ಸರ್ಕಾರದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಅಳವಡಿಸುವ ಬಗ್ಗೆ ಸಂಬಂಧಿಸಿ ಆದೇಶ ಹೊರಡಿಸಲಾಗಿದೆ.

VISTARANEWS.COM


on

Reservation in outsourcing
Koo

ಬೆಂಗಳೂರು: ಸರ್ಕಾರದ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವಾಗ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಹಿಂದೆ ಡಿಸೆಂಬರ್‌ನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ (Reservation in Outsourcing) ಅಳವಡಿಸಲು ಒಪ್ಪಿಗೆ ನೀಡಲಾಗಿತ್ತು. ಇದೀಗ ಅಧಿಕೃತವಾಗಿ ರಾಜ್ಯ ಸರ್ಕಾರವು ಮೀಸಲಾತಿಗೆ ಸಂಬಂಧಿಸಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಅಳವಡಿಸುವ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್‌. ಡಿ ಅವರು ಸುತ್ತೋಲೆ ಹೊರಡಿಸಿದ್ದಾರೆ.

ಸುತ್ತೋಲೆಯಲ್ಲಿ ಏನಿದೆ?

ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡೇಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯನೀತಿಯಾಗಿದೆ. 2023ರ ಡಿಸೆಂಬರ್ 21ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀತಿಯನ್ನು ಜಾರಿಗೊಳಿಸಲು ನಿರ್ಣಯಿಸಲಾಗಿತ್ತು. ಆದ್ದರಿಂದ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲಾ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮವನ್ನು ಈ ಕೆಳಕಂಡ ಸೂಚನೆಗಳೊಂದಿಗೆ ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ:

  1. ಹೊರಗುತ್ತಿಗೆ ಮೀಸಲಾತಿಯು ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ.
  2. ಪ್ರತಿ ವರ್ಷವು ಹೊರ ಸಂಪನ್ಮೂಲ ಏಜೆನ್ಸಿಗಳಿಂದ ಕೆ.ಟಿ.ಪಿ.ಪಿ ಅಧಿನಿಯಮ 1999 ರಂತೆ ಟೆಂಡರ್ ಕರೆಯುವಾಗ ಕಡ್ಡಾಯವಾಗಿ ಮೀಸಲಾತಿಯಂತೆ ಸಿಬ್ಬಂದಿಗಳನ್ನು ಪಡೆಯಲು ಷರತ್ತುಗಳನ್ನು ನಮೂದಿಸುವುದು.
  3. ಹೊರಗುತ್ತಿಗೆ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣದಲ್ಲಿ ಕನಿಷ್ಠ ಶೇಕಡ 33 ರಷ್ಟು ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳತಕ್ಕದ್ದು.
  4. ಟೆಂಡ‌ರ್ ಅಂಗೀಕರಿಸುವ ಪ್ರಾಧಿಕಾರವು ಕಡ್ಡಾಯವಾಗಿ ಹೊರ ಸಂಪನ್ಮೂಲ ಏಜೆನ್ಸಿಯು ಅಂತಿಮಗೊಳಿಸಿದ ಸಿಬ್ಬಂದಿಗಳ ಪಟ್ಟಿ ಮೀಸಲಾತಿಯಂತೆ ಇರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು. ಜಾತಿ ಪ್ರಮಾಣ ಪತ್ರ ಮತ್ತು ಇತರೆ ದಾಖಲೆಗಳನ್ನು ಹೊರ ಸಂಪನ್ಮೂಲ ಏಜೆನ್ಸಿಯು ಪಡೆದು ನಿರ್ವಹಿಸತಕ್ಕದ್ದು. ಟೆಂಡರ್ ಅಂಗೀಕರಿಸುವ ಪ್ರಾಧಿಕಾರವು ಈ ಬಗ್ಗೆ ಪರಿಶೀಲಿಸಿ ಕಾರ್ಯಾದೇಶವನ್ನು ನೀಡಲು ಕ್ರಮವಹಿಸುವುದು. (ಸಿಂಧುತ್ವ ಪ್ರಮಾಣ ಪತ್ರದ ಅಗತ್ಯವಿರುವುದಿಲ್ಲ)
  5. ಒಂದು ವೇಳೆ ನೇಮಕಾತಿಗೊಂಡ ಅಭ್ಯರ್ಥಿಗಳು ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ / ಅರ್ಧದಲ್ಲಿ ಬಿಟ್ಟಿದಲ್ಲಿ ಅಂತಹ ಖಾಲಿ ಉಳಿಯುವ ಸ್ಥಾನವನ್ನು ಭರ್ತಿ ಮಾಡಲು ಅದೇ ಪ್ರವರ್ಗದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಅಭ್ಯರ್ಥಿಗಳನ್ನು ಒದಗಿಸುವ ಏಜೆನ್ಸಿಯು ಕ್ರಮ ಕೈಗೊಳ್ಳತಕ್ಕದ್ದು.
  6. ಯಾವುದೇ ಇಲಾಖೆಯಲ್ಲಿ ಕನಿಷ್ಠ 20 ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಮಾತ್ರ ಮೀಸಲಾತಿ ನೀತಿಯನ್ನು ಜಾರಿಗೊಳಿಸತಕ್ಕದ್ದು.
  7. ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಅಭ್ಯರ್ಥಿಯ ಕನಿಷ್ಠ ವಯೋಮಿತಿ 18 ವರ್ಷ ಮತ್ತು ಗರಿಷ್ಠ ವಯೋಮಿತಿ 60 ವರ್ಷಗಳಾಗಿರತಕ್ಕದ್ದು.
  8. ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶಗಳನ್ನು ಒದಗಿಸುವ ದೃಷ್ಟಿಯಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸುತ್ತಿರುವುದರಿಂದ ಯಾವುದೇ ಕಾರಣಕ್ಕಾಗಿ ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಲು ಪರಿಗಣಿಸತಕ್ಕದ್ದಲ್ಲ.
  9. ಈ ಮೇಲಿನ ಸೂಚನೆಗಳು ಸರ್ಕಾರದ ಎಲ್ಲಾ ಇಲಾಖೆಗಳು / ಸ್ನಾಯತ್ತ ಸಂಸ್ಥೆಗಳು | ನಿಗಮಗಳು / ಮಂಡಳಿಗಳು / ವಿಶ್ವವಿದ್ಯಾನಿಲಯಗಳಿಗೂ ಅನ್ವಯಿಸುತ್ತದೆ.

ಇದನ್ನೂ ಓದಿ | Job alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

ಈ ಹಿಂದೆ ಹೊರಗುತ್ತಿಗೆ ಹುದ್ದೆಗಳಲ್ಲಿ ಮೀಸಲಾತಿ ಇರಲಿಲ್ಲ. ಆದರೆ, ಮೀಸಲಾತಿ ನೀಡಬೇಕು ಎಂದು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಂಘಟನೆಗಳು ಆಗ್ರಹಿಸಿದ್ದವು. ಇದೀಗ ರಾಜ್ಯ ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸಿದೆ.

Continue Reading

ಮಳೆ

Karnataka Weather : ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸಾವು ; ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು

Karnataka Weather Forecast : ಮಲೆನಾಡು ಹಾಗೂ ಒಳನಾಡಿನಲ್ಲಿ ಮಳೆಯು (rain News) ಅಬ್ಬರಿಸುತ್ತಿದೆ. ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟರೆ, ಗೋಪಾಲಸ್ವಾಮಿ ಬೆಟ್ಟದಲ್ಲಿ ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು ಪರದಾಡಿದರು.

VISTARANEWS.COM


on

By

Karnataka weather Forecast
Koo

ಯಾದಗಿರಿ/ಚಿಕ್ಕಮಗಳೂರು: ಮಳೆಯ ಆರ್ಭಟ (Karnataka Weather Forecast) ಮುಂದುವರಿದಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಯಾದಗಿರಿಯ ಗುರುಮಠಕಲ್ ತಾಲೂಕಿನ ಭಾಗದಲ್ಲಿ ಸೋಮವಾರ ಗುಡುಗು, ಸಿಡಿಲಿನ ಜತೆಗೆ ಬಿರುಗಾಳಿ ಸಹಿತ ಮಳೆಯಾಗಿದೆ. ಪರಿಣಾಮ ಸಿಡಿಲು ಬಡಿದು ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುಮಠಕಲ್ ತಾಲೂಕಿನ ರಾಂಪುರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ.

ರಾಂಪುರು ಗ್ರಾಮದ ಕುರಿಗಾಹಿ ಚಂದಪ್ಪ (55) ಮೃತ ದುರ್ದೈವಿ. ಕುರಿಗಾಹಿ ಚಂದಪ್ಪ ಜೇಬಿನಲ್ಲಿ ಮೊಬೈಲ್ ಇಟ್ಟುಕೊಂಡು ಕುರಿ ಮೇಯಿಸಲು ತೆರಳಿದ್ದರು. ಈ ವೇಳೆ ಮೊಬೈಲ್ ಇಟ್ಟುಕೊಂಡ ಭಾಗಕ್ಕೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗೋಪಾಲಸ್ವಾಮಿ ಬೆಟ್ಟದಲ್ಲಿ ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ

ಗೋಪಾಲಸ್ವಾಮಿ ಬೆಟ್ಟದಲ್ಲಿ ಜೋರು ಮಳೆಯಾಗುತ್ತಿದ್ದು ಪ್ರವಾಸಿಗರು ಪರದಾಡಿದರು. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ಚೆಕ್ ಪೋಸ್ಟ್ ಸಮೀಪ ನೀರು ನದಿಯಂತೆ ಹರಿಯುತ್ತಿದೆ. ಚೆಕ್ ಪೋಸ್ಟ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ನೂರಾರು ಮಂದಿ ಮಳೆಗೆ ಸಿಲುಕಿದರು. 1 ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದರಿಂದ ಬೆಟ್ಟದ ಮೇಲಿಂದ ನದಿಯಂತೆ ನೀರು ಹರಿದು ಬಂದಿತ್ತು. ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ ಒಂದು ಕಡೆಯಾದರೆ, ಮಳಿಗೆಗಳಿಗೂ ನೀರು ನುಗ್ಗಿತ್ತು.

ಚಾಮರಾಜನಗರದಲ್ಲಿ ಮಳೆಯ ಅಬ್ಬರ

ಚಾಮರಾಜನಗರದಲ್ಲಿ ಎರಡು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿದೆ. ಜಿಲ್ಲೆಯ ಕೆಲ ಕಡೆ ತುಂತುರು ಮಳೆಯಾದರೆ ಕೆಲವು ಕಡೆ ಭರ್ಜರಿ ಮಳೆಯಾಗಿದೆ. ರಸ್ತೆ ಬದಿಗಳಲ್ಲಿ ನದಿಯಂತೆ ಮಳೆ ನೀರು ಹರಿಯುತ್ತಿದೆ. ಇತ್ತ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ, ಹಂಗಳ ಗ್ರಾಮದ ಸುತ್ತ ಮುತ್ತ ಭರ್ಜರಿ ಮಳೆಯಾಗಿದೆ.

ಶಿವಮೊಗ್ಗದಲ್ಲಿ ಧಾರಾಕಾರ ಮಳೆ

ಮಲೆನಾಡು ಶಿವಮೊಗ್ಗದಲ್ಲೂ ಧಾರಾಕಾರವಾಗಿ ಮಳೆ ಸುರಿದಿದೆ. ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರ, ಶಿಕಾರಿಪುರ, ಸೊರಬ, ಭದ್ರಾವತಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಒಂದು ಗಂಟೆಯಿಂದ ಬಿಡುವು ನೀಡದೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ.

ಇದನ್ನೂ ಓದಿ: Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಗುಡುಗು ಸಹಿತ ಮಳೆ

ದಕ್ಷಿಣ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿ (40-50 kmph) ಸಹಿತ ಭಾರಿ ಮಳೆಯಾಗಲಿದೆ.

ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿ.ಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಭಾಗದಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿ.ಮೀ.) ಮಳೆ ಸಂಭವವಿದೆ.

ಮುಂದಿನ 5 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಬಲವಾಗಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Compound Wall Collapse
ಕರ್ನಾಟಕ10 mins ago

Compound Wall Collapse: ಹಾಜಬ್ಬರ ಶಾಲೆ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು

T20 World Cup 2024
ಕ್ರೀಡೆ14 mins ago

T20 World Cup 2024: ಇಂಡೋ-ಪಾಕ್​ ಮಿನಿ ವಿಶ್ವಕಪ್​ ಸಮರ ನಡೆಯುವ ಸ್ಟೇಡಿಯಂನ ವಿಡಿಯೊ ವೈರಲ್​

Ebrahim Raisi
ದೇಶ41 mins ago

Ebrahim Raisi: ಇಬ್ರಾಹಿಂ ರೈಸಿ ನಿಧನದಿಂದ ಭಾರತದಲ್ಲಿ ಚಿನ್ನ, ಪೆಟ್ರೋಲ್‌ ಬೆಲೆ ಏರಿಕೆ? ಹೀಗಿದೆ ವಿಶ್ವ ಮಾರುಕಟ್ಟೆ ಸ್ಥಿತಿ-ಗತಿ

Hit And Run Case
ಕರ್ನಾಟಕ44 mins ago

Hit And Run Case: ಕೂಡ್ಲಿಗಿಯಲ್ಲಿ ಹಿಟ್ ಆ್ಯಂಡ್ ರನ್; ಬೈಕ್‌ಗೆ ಲಾರಿ ಡಿಕ್ಕಿಯಾಗಿ ಯುವತಿ ಸಾವು

IPL 2024
ಕ್ರೀಡೆ2 hours ago

IPL 2024: ಮೋದಿ ಸ್ಟೇಡಿಯಂನಲ್ಲಿ ಫುಟ್ಬಾಲ್​ ಆಡಿದ ಆರ್​ಸಿಬಿ ಆಟಗಾರರು

Cannes Star Fashion
ಫ್ಯಾಷನ್2 hours ago

Cannes Star Fashion: ಕ್ರಾಪ್‌ ಟುಕ್ಸೆಡೊ ಧರಿಸಿ ತಾಯಿಗೆ ಶ್ರದ್ಧಾಂಜಲಿ ಅರ್ಪಿಸಿದ ನಟ ಪ್ರತೀಕ್‌ ಬಬ್ಬರ್

Reservation in outsourcing
ಪ್ರಮುಖ ಸುದ್ದಿ2 hours ago

Reservation in Outsourcing: ಇನ್ನು ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ; ಸಿದ್ದರಾಮಯ್ಯ ಸರ್ಕಾರದ ಮಹತ್ವದ ಆದೇಶ

Karnataka weather Forecast
ಮಳೆ2 hours ago

Karnataka Weather : ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸಾವು ; ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು

MLC N Ravikumar Spoke in North East Graduate Constituency Election Preliminary meeting in hosapete
ವಿಜಯನಗರ2 hours ago

MLC Election: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಎನ್. ರವಿಕುಮಾರ್

Lok Sabha Election
ದೇಶ2 hours ago

Lok Sabha Election: 5ನೇ ಹಂತದಲ್ಲಿ ಕೇವಲ ಶೇ.56ರಷ್ಟು ಮತದಾನ; ಯಾವ ರಾಜ್ಯದಲ್ಲಿ ಹೆಚ್ಚು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ7 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌