Site icon Vistara News

Voter data | ಯಾವುದೇ ಸಂಸ್ಥೆ, ಅಧಿಕಾರಿಗಳು ತಪ್ಪು ಮಾಡಿದ್ದರೆ ಶಿಕ್ಷೆ ಅನುಭವಿಸಲೇಬೇಕು ಎಂದ ಬೊಮ್ಮಾಯಿ

CM Basavaraja bommai ambedkar

ಬೆಂಗಳೂರು: ಮತದಾರರ ಮಾಹಿತಿ ಕಳವು ಪ್ರಕರಣದಲ್ಲಿ (Voter data) ಸರ್ಕಾರ ಮುಕ್ತ ರೀತಿಯ ತನಿಖೆ ಮಾಡಿಸುತ್ತಿದೆ. ಯಾವುದೇ ಸಂಸ್ಥೆಯಾಗಲಿ, ಅಧಿಕಾರಿಗಳು ತಪ್ಪು ಮಾಡಿದ್ದರೆ ಅವುಗಳನ್ನು ಶಿಕ್ಷೆಗೆ ಒಳಪಡಿಸಲೆಂದೇ ಅವುಗಳನ್ನು ತನಿಖೆಗೆ ಆದೇಶ ಮಾಡಿರುವುದು. ಈಗಾಗಲೇ ಹಲವಾರು ಜನರ ವಿರುದ್ಧ ಕ್ರಮಕೈಗೊಂಡು ಬಂಧಿಸಲಾಗಿದೆ. ಅಧಿಕಾರಿಗಳ ವಿಚಾರಣೆಯೂ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ʻʻಚುನಾವಣಾ ಆಯೋಗ ಡಿಲೀಟ್ ಆಗಿರುವ ಪ್ರಕರಣಗಳನ್ನು ಹಾಗೂ ಮತಪಟ್ಟಿಯನ್ನು ಮತ್ತೊಮ್ಮೆ ಪರಿಷ್ಕರಣೆ ಮಾಡಲು ತೀರ್ಮಾನಿಸಿದೆ. ಇದನ್ನು ನಾವು ಸ್ವಾಗತಿಸುತ್ತೇವೆ. ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳಾಗಬೇಕು. ಯಾವುದಾದರೂ ಅನ್ಯಾಯವಾಗಿ ಡಿಲೀಟ್ ಮಾಡಿದ್ದಾರೆ ಸರಿಪಡಿಸುವುದು ಹಾಗೂ ಎರಡು ಮತ್ತು ಮೂರು ಕಡೆಗಳಲ್ಲಿ ಗುರುತಿಸಿ ಚೀಟಿ ಹೊಂದಿದ್ದರೆ ಅದನ್ನು ತೆಗೆಯುವುದು. ಪ್ರಾಥಮಿಕವಾಗಿ ಕೆಲವು ಕ್ರಮಗಳನ್ನು ಕೈಗೊಳ್ಳಲಾಗಿರುವುದನ್ನು ಸ್ವಾಗತಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಂವಿಧಾನ ದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಡಾ:ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಾಮರಸ್ಯ ಹದಗೆಡಬಾರದು
ʻʻಮಹಾರಾಷ್ಟ್ರದ ಗೃಹ ಇಲಾಖೆ ಕಾರ್ಯದರ್ಶಿಗಳೊಂದಿಗೆ ಮಾತುಕತೆ ನಡೆಸಲು ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳಲು ಬಿಡಕೂಡದು. ಎರಡೂ ರಾಜ್ಯಗಳ ಸಾಮರಸ್ಯ ಹದಗೆಡುವುದು ಬೇಡ. ಕರ್ನಾಟಕ ಬಸ್ಸುಗಳಿಗೆ, ಜನರಿಗೆ ಹಾಗೂ ಆಸ್ತಿಗೆ ಸಂಪೂರ್ಣವಾದ ರಕ್ಷಣೆ ನೀಡಬೇಕೆಂದು ಸೂಚಿಸಲಾಗಿದೆʼʼ ಎಂದರು.

ಅಧಿವೇಶನ ಸಂದರ್ಭದಲ್ಲಿ ಅಡಿಗಲ್ಲು
ಸುವರ್ಣ ಸೌಧದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಆದೇಶ ನೀಡಿದ್ದು, ಅಧಿವೇಶನ ಸಂದರ್ಭದಲ್ಲಿ ಅಡಿಗಲ್ಲು ಹಾಕಲಾಗುವುದು ಎಂದರು ಬೊಮ್ಮಾಯಿ.

ಇದನ್ನೂ ಓದಿ | Voter data | 3 ಕ್ಷೇತ್ರಗಳಲ್ಲಿ ಡಿಲೀಟ್‌ ಆದ ಎಲ್ಲ ಹೆಸರುಗಳ ಮರುಪರಿಶೀಲನೆಗೆ ಚು.ಆಯೋಗ ಆದೇಶ, ಇಬ್ಬರು ಅಧಿಕಾರಿಗಳ ಸಸ್ಪೆಂಡ್‌

Exit mobile version