H3N2 Influenza: ರಾಜ್ಯದಲ್ಲಿ 26 H3N2 ಕೇಸ್‌ ಪತ್ತೆ; ಬಿಸಿಲಿಗೆ ಬರಬೇಡಿ, ಬೇಕಾಬಿಟ್ಟಿ ಮಾತ್ರೆ ತಗೋಬೇಡಿ Vistara News

ಆರೋಗ್ಯ

H3N2 Influenza: ರಾಜ್ಯದಲ್ಲಿ 26 H3N2 ಕೇಸ್‌ ಪತ್ತೆ; ಬಿಸಿಲಿಗೆ ಬರಬೇಡಿ, ಬೇಕಾಬಿಟ್ಟಿ ಮಾತ್ರೆ ತಗೋಬೇಡಿ

H3N2 Influenza: ಕಳೆದ ಮೂರು ತಿಂಗಳಿನಿಂದ ದೇಶದಲ್ಲಿ ಹಲವಾರು H3N2 ಇನ್‌ಫ್ಲುಯೆಂಜಾ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ನೇತೃತ್ವದಲ್ಲಿ ಆರೋಗ್ಯ ತಜ್ಞರೊಂದಿಗೆ ಸಭೆ ನಡೆಸಲಾಗಿದೆ. ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

VISTARANEWS.COM


on

26 H3N2 cases detected in the state, Don't come to the stubble, don't take the pills too much
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಎಚ್‌3ಎನ್‌2 (H3N2 Influenza) ಎಂಬುದು ಶೀತಜ್ವರದ ಹೊಸ ರೂಪಾಂತರಿಯಾಗಿದ್ದು, ರಾಜ್ಯದಲ್ಲಿ ಈವರೆಗೆ 26 ಕೇಸ್‌ಗಳು ಪತ್ತೆ ಆಗಿದ್ದು, ಬೆಂಗಳೂರಿನ ಇಬ್ಬರು ವ್ಯಕ್ತಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಆರೋಗ್ಯ ಸಚಿವ ಸುಧಾಕರ್‌ ಬೆಂಗಳೂರಲ್ಲಿ ತಿಳಿಸಿದ್ದಾರೆ.

H3N2 ವೈರಸ್‌ ಭೀತಿ (H3N2 Influenza) ಕುರಿತು ಎಚ್ಚರದಿಂದ ಇರುವಂತೆ ICMR (Indian Council of Medical Research) ದೇಶಾದ್ಯಂತ ಹೈ ಅಲರ್ಟ್‌ ಘೋಷಣೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಸೋಮವಾರ ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸಿದ್ದರು.

ಸಭೆ ಬಳಿಕ ಮಾತನಾಡಿದ ಸಚಿವ ಸುಧಾಕರ್‌, ರಾಜ್ಯದಲ್ಲಿ H3N2 ಕೇಸ್‌ಗಳು ಪತ್ತೆ ಆಗಿವೆ. ಇದು ಸಾಂಕ್ರಾಮಿಕವಾಗಿ ಬಹುಬೇಗ ಹರಡಲಿದೆಯಾದರೂ ಹೆಚ್ಚಿನ ಅಪಾಯವನ್ನು ಹೊಂದಿಲ್ಲ. ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ಈಗಾಗಲೇ ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿ ಆರೋಗ್ಯ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕೆಂದು ಆದೇಶಿಸಲಾಗಿದೆ. ಸೋಮವಾರ ಸಂಜೆಯೊಳಗೆ ಹೊಸ ವೈರಸ್‌ ಸಂಬಂಧ ಮಾರ್ಗಸೂಚಿ ಹೊರಡಿಸುತ್ತೇವೆ ಎಂದಿದ್ದಾರೆ. ಜನವರಿಯಿಂದ ಮಾರ್ಚ್‌ವರೆಗೆ ಎಚ್‌1ಎನ್‌1 ನ 20 ಪ್ರಕರಣಗಳು ಪತ್ತೆಯಾಗಿದ್ದರೆ, ಎಚ್‌3ಎನ್‌2 ನ 26 ಪ್ರಕರಣ ಪತ್ತೆಯಾಗಿದೆ. ಇನ್‌ಫ್ಲುಯೆಂಜ ಬಿ 10, ಅಡಿನೋ 69 ಪ್ರಕರಣ ಕಂಡುಬಂದಿದೆ ಎಂದು ತಿಳಿಸಿದ್ದಾರೆ.

H3N2 ಸೋಂಕಿಗೆ ಆ್ಯಂಟಿ ಬಯೋಟಿಕ್‌ ಬೇಡ

ಆಸ್ಪತ್ರೆಗಳಲ್ಲಿ ಎಲ್ಲ ರೀತಿಯ ಸೌಲಭ್ಯ ಲಭ್ಯವಿದೆ. ವಾತಾವರಣದ ಬದಲಾವಣೆಯಿಂದ ಜನರ ಮೇಲೆ ಹಲವು ರೀತಿಯ ಪರಿಣಾಮ ಬೀರುತ್ತಿದೆ. ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಾಗ ವೈದ್ಯರ ಸಲಹೆ ಇಲ್ಲದೆ ಯಾವುದೇ ಕಾರಣಕ್ಕೂ ಆ್ಯಂಟಿ ಬಯೋಟಿಕ್ ತೆಗೆದುಕೊಳ್ಳಬೇಡಿ. ಬೇಸಿಗೆ ಕಾಲವಾಗಿರುವುದರಿಂದ ಇದು ಅಪಾಯಕಾರಿಯಾಗಿದೆ. ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕೆಂದು ಸಚಿವ ಸುಧಾಕರ್‌ ಸಲಹೆ ನೀಡಿದ್ದಾರೆ.

ಬಿಸಿಲಿನಲ್ಲಿ ಅನಗತ್ಯ ಓಡಾಟ ಬೇಡ

ವಾತಾವರಣದಲ್ಲಿ ಹಿಟ್ ವೇವ್ ಹೆಚ್ಚಿದ್ದು, ಜನರು ಬಿಸಿಲಿನಲ್ಲಿ ಅನಗತ್ಯವಾಗಿ ಓಡಾಟ ಮಾಡುವುದು ನಿಲ್ಲಿಸಬೇಕು. ಮುಖ್ಯವಾಗಿ 11 ರಿಂದ 3 ಗಂಟೆವರೆಗೆ ಬಿಸಿಲಿಗೆ ಹೋಗುವುದು ಕಮ್ಮಿ ಮಾಡಬೇಕು. ಕನಿಷ್ಠ 2-3 ಲೀಟರ್‌ ನೀರು, ಮಜ್ಜಿಗೆ, ಎಳನೀರು, ಶರಬತ್‌ ಕುಡಿಯುವುದೊಳಿತು. ದೇಹದಲ್ಲಿ ನೀರು ಕಡಿಮೆ ಆಗದಂತೆ ಎಚ್ಚರ ವಹಿಸಬೇಕು ಎಂದು ಸಚಿವ ಸುಧಾಕರ್‌ ತಿಳಿಸಿದ್ದಾರೆ.

ಹೊಸ ವೈರಸ್‌ಗೆ ಮಕ್ಕಳು, ಗರ್ಭಿಣಿಯರೇ ಟಾರ್ಗೆಟ್‌

ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರಲಿದ್ದು, ಜತೆಗೆ ಶಾಲೆಯಲ್ಲಿದ್ದಾಗ ಹಲವರ ಸಂಪರ್ಕಕ್ಕೆ ಬರುತ್ತಾರೆ. ಅದರಲ್ಲೂ 15 ವರ್ಷದೊಳಗಿನ ಮಕ್ಕಳು, ಗರ್ಭಿಣಿಯರಿಗೆ ಸುಲಭವಾಗಿ H3N3 ಸೋಂಕು ಹರಡುವ ಸಾಧ್ಯತೆ ಇದೆ. 60 ವರ್ಷ ಮೇಲ್ಪಟ್ಟವರು ರೋಗ ಲಕ್ಷಣದ ಕುರಿತು ಎಚ್ಚರ ವಹಿಸಬೇಕೆಂದು ಸಚಿವರು ಮಾಹಿತಿ ನೀಡಿದ್ದಾರೆ. ಈ ಸೋಂಕು ಬಂದರೆ 2-5 ದಿನದೊಳಗೆ ನಿವಾರಣೆಯಾಗುತ್ತದೆ. ಕೋವಿಡ್‌ಗೊಳಗಾದವರಿಗೆ ಸೋಂಕು ಬಂದರೆ ಹೆಚ್ಚು ಕೆಮ್ಮು ಇರುತ್ತದೆ. ಬೆಂಗಳೂರಿನಲ್ಲಿ ಈ ಸೋಂಕಿನ ಎರಡು ಪ್ರಕರಣಗಳು ಕಂಡುಬಂದಿವೆ ಎಂದರು.

ಇನ್‌ಫ್ಲುಯೆಂಜಗೆ ಪ್ರತಿ ವರ್ಷ ಲಸಿಕೆ

ಇನ್‌ಫ್ಲುಯೆಂಜಗೆ ಪ್ರತಿ ವರ್ಷ ಲಸಿಕೆ ನೀಡುತ್ತಿದ್ದು, ಇದನ್ನು ಎಲ್ಲಾ ಆರೋಗ್ಯ ಸಿಬ್ಬಂದಿ ಪಡೆಯಲು ಲಿಖಿತ ಸೂಚನೆ ನೀಡಲಾಗುವುದು. ಐಸಿಯುನಲ್ಲಿ ಕೆಲಸ ಮಾಡುವವರು ಸೇರಿದಂತೆ ಕೆಲ ನಿರ್ದಿಷ್ಟ ವೈದ್ಯರು, ಸಿಬ್ಬಂದಿಗೆ ಸರ್ಕಾರದಿಂದಲೇ ಲಸಿಕೆ ನೀಡಲಾಗುವುದು. 2019 ರವರೆಗೆ ಈ ಲಸಿಕೆ ನೀಡಲಾಗುತ್ತಿತ್ತು. ಕೋವಿಡ್‌ ಬಂದ ಬಳಿಕ ನೀಡಿಲ್ಲ. ಈಗ ಮತ್ತೆ ಅದನ್ನು 31 ಜಿಲ್ಲೆಗಳಲ್ಲಿ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಪ್ರತಿ ವಾರ ಪರೀಕ್ಷೆ

ಪ್ರತಿ ವಾರ 25 ಪರೀಕ್ಷೆ ಮಾಡಬೇಕೆಂದು ಕೇಂದ್ರ ಸರ್ಕಾರ ಗುರಿ ನೀಡಿದೆ. ಬೆಂಗಳೂರಿನ ವಿಕ್ಟೋರಿಯಾ ಹಾಗೂ ವಾಣಿ ವಿಲಾಸ ಆಸ್ಪತ್ರೆಗಳಲ್ಲಿ ಸಾರಿ ಹಾಗೂ ಐಎಲ್‌ಐ ಪ್ರಕರಣಗಳ ಪೈಕಿ 25 ಮಂದಿಗೆ ಈ ಪರೀಕ್ಷೆ ಮಾಡಿ ಯಾವ ಪ್ರಭೇದದ ವೈರಾಣು ಎಂದು ಪತ್ತೆ ಮಾಡಲಾಗುವುದು ಎಂದರು.

ದರ ನಿಯಂತ್ರಣಕ್ಕೆ ಸಮಿತಿ

ಹೊಸ ಸೋಂಕು ಪರೀಕ್ಷೆಯ ದರ ನಿಯಂತ್ರಣಕ್ಕೆ ಕಡಿವಾಣ ಹಾಕಲು ಸಮಿತಿ ರಚಿಸಲು ಸೂಚಿಸಲಾಗಿದೆ. ಕಡಿಮೆ ದರದಲ್ಲಿ ಪರೀಕ್ಷೆ ಮಾಡುವಂತೆ ಕ್ರಮ ವಹಿಸಲು ಸೂಚಿಸಲಾಗಿದೆ. ವರದಿ ಬಂದ ಬಳಿಕ ಪರೀಕ್ಷೆಗೆ ದರ ನಿಗದಿ ಮಾಡಲಾಗುವುದು ಎಂದು ಸಚಿವ ಸುಧಾಕರ್‌ ತಿಳಿಸಿದರು.

ಅಪಾಯಕಾರಿ ವೈರಸ್‌ ಅಲ್ಲ- ಡಾ ಸುದರ್ಶನ್‌

ಸಭೆ ಬಳಿಕ ಆರೋಗ್ಯ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಸುದರ್ಶನ್‌ ಪ್ರತಿಕ್ರಿಯೆ ನೀಡಿದ್ದು, ಕೊರೊನಾ ಸೋಂಕು ಕಡಿಮೆಯಾದ ಬಳಿಕ H3N2 ಸೋಂಕು ಕಂಡು ಬರುತ್ತಿದೆ. ಕೊರೊನಾದಂತೆ ಈ ರೂಪಾಂತರಿ ಅಪಾಯಕಾರಿಯಲ್ಲ. ಬೇಸಿಗೆ ಕಾಲ ಸಮೀಪಿಸುತ್ತಿರುವುದರಿಂದ ಜನರು ಮುಂಜಾಗ್ರತೆ ವಹಿಸಬೇಕು. ಸದ್ಯಕ್ಕೆ H3N2 ಸೋಂಕಿಗೆ ಸಾಮಾನ್ಯ ಚಿಕಿತ್ಸೆಯಿಂದಲೇ ಗುಣಮುಖರಾಗಬಹುದು. ಕೋವಿಡ್‌ನಂತೆ H3N2 ಕೆಲ ಲಕ್ಷಣ ಹೊಂದಿರುತ್ತದೆ. ಹೀಗಾಗಿ ಮಕ್ಕಳು, ಗರ್ಭಿಣಿಯರು, ಹಿರಿಯರು ಹೆಚ್ಚು ಕಾಳಜಿ ವಹಿಸಬೇಕು.

H3N2 ಲಕ್ಷಣಗಳು ಏನು?

ದೀರ್ಘಕಾಲದ ಕೆಮ್ಮು, ವಾಕರಿಕೆ, ವಾಂತಿ, ಗಂಟಲು ನೋವು ಹಾಗೂ ಸ್ನಾಯು ಸೆಳೆತ ಕಂಡು ಬರುತ್ತದೆ.

ಇದನ್ನೂ ಓದಿ: Suicide Case: ಪತಿಯಿಂದ ವರದಕ್ಷಿಣೆ ಕಿರುಕುಳ; ಡೆತ್‌ ನೋಟ್‌ ಬರೆದಿಟ್ಟು ಗೃಹಿಣಿ ಆತ್ಮಹತ್ಯೆ

ಸುರಕ್ಷತೆ ಹೇಗಿರಬೇಕು?

  • ಆಗಾಗ ಕೈಗಳನ್ನು ತೊಳೆಯಬೇಕು
  • ಮಾಸ್ಕ್ ಧರಿಸಿ, ಜನ ಸಂದಣಿ ಹೆಚ್ಚಿರುವ ಪ್ರದೇಶಗಳಲ್ಲಿ ಓಡಾಟ ಬೇಡ
  • ಪದೇ ಪದೇ ಮೂಗು, ಬಾಯಿ ಮುಟ್ಟಬೇಡಿ
  • ನೀರನ್ನು ಜಾಸ್ತಿ ಸೇವಿಸಿ
  • ಜ್ವರ, ಮೈ-ಕೈ ನೋವು ಇದ್ದರೆ ನಿರ್ಲಕ್ಷ್ಯ ಮಾಡದೇ ವೈದ್ಯರ ತಪಾಸಣೆ ಮಾಡಿಸಿ

ರಾಜ್ಯದ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Flax Seeds Benefits For Hair: ಚಳಿಗಾಲದಲ್ಲಿ ಕೂದಲ ಆರೋಗ್ಯಕ್ಕೆ ಅಗಸೆಬೀಜ ಸೂಪರ್‌!

ಚಳಿಗಾಲ ಮುಗಿಯುವಷ್ಟರಲ್ಲಿ ತಲೆಯಲ್ಲಿ ಕೂದಲುಗಳೂ ಮುಗಿದಿರುತ್ತವೆ ಎಂದು ಗೊಣಗುತ್ತಿದ್ದೀರಾ? ಅಗಸೆ ಬೀಜದಿಂದ (Flax Seeds Benefits For Hair) ಕೂದಲು ಉದುರುವ ಸಮಸ್ಯೆಯನ್ನು ನಿಯಂತ್ರಿಸುವುದಕ್ಕೆ ಸಾಧ್ಯವಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Flax Seeds Benefits For Hair
Koo

ಚಳಿಗಾಲದ ಹಲವು ಸಮಸ್ಯೆಗಳಲ್ಲಿ ಕೂದಲಿನದ್ದೂ ಒಂದು. ಸಿಕ್ಕುಸಿಕ್ಕಾಗಿ, ಒಣಗಿ, ಹೊಟ್ಟಾಗಿ, ತುಂಡಾಗಿ, ಉದುರಿ, ಬೋಳಾಗುವುದನ್ನು ತಪ್ಪಿಸುವುದು ಚಳಿಗಾಲದಲ್ಲಿ ಹರಸಾಹಸ. ಸೂಕ್ತ ಪೋಷಣೆಯಿಂದ ಇಂಥ ಸಮಸ್ಯೆಗಳನ್ನು ದೂರಮಾಡುವುದಕ್ಕೆ ಸಾಧ್ಯವಿರುವುದು ಹೌದಾದರೂ, ಯಾವುದನ್ನು ಹೇಗೆ ಪೋಷಿಸಬೇಕು ಎಂಬ ಮಾಹಿತಿ ಬೇಕಲ್ಲ. ಕೂದಲಿಗಾಗಿ ಮಾರುಕಟ್ಟೆಯಲ್ಲಿ ಲ‍ಭ್ಯವಿರುವ ಎಣ್ಣೆ, ಶಾಂಪುಗಳು ಕೆಲಸ ಮಾಡದಿದ್ದಾಗ ಕೆಲವು ಸರಳ ಸೂತ್ರಗಳನ್ನು ಬಳಸಿ ನಾವೇ ಕೂದಲಿನ ಆರೈಕೆ ಮಾಡಿಕೊಳ್ಳಬಹುದು. ಅಂದಹಾಗೆ, ಅಗಸೆ ಬೀಜ ಗೊತ್ತಲ್ಲವೇ? ಇದನ್ನು ಬಳಸಿ ಕೂದಲನ್ನು (Flax Seeds Benefits For Hair) ಆರೋಗ್ಯಪೂರ್ಣವಾಗಿಸಲು ಸಾಧ್ಯವಿದೆ.

Flax Seeds with Pottery

ಒಮೇಗಾ 3 ಕೊಬ್ಬಿನಾಮ್ಲ, ಪ್ರೊಟೀನ್‌, ವಿಟಮಿನ್‌ ಇ ಮತ್ತು ಹಲವು ಬಿ ವಿಟಮಿನ್‌ಗಳು ಹಾಗೂ ಸೂಕ್ಷ್ಮ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಅಗಸೆಬೀಜವನ್ನು ನಿತ್ಯದ ಅಡುಗೆಯಲ್ಲಿ ಉಪಯೋಗಿಸಬಹುದು. ಇದರಿಂದ ಇಡೀ ದೇಹದ ಸ್ವಾಸ್ಥ್ಯ ಹೆಚ್ಚುತ್ತದೆ. ಆದರೆ ಇದನ್ನು ನೇರವಾಗಿ ಕೂದಲಿಗೇ ಉಪಯೋಗಿಸಬಹುದೇ? ಕೂದಲು ಉದುರದಂತೆ ತಡೆಯಲು ಅಗಸೆ ಬೀಜ ಹೇಗೆ ನೆರವಾಗುತ್ತದೆ? ಇದರಿಂದ ಎಣ್ಣೆ ಮಾಡಬಹುದೇ? ಮುಂತಾದ ಹಲವು ಪ್ರಶ್ನೆಗಳು ಮನದಲ್ಲಿ ಬಂದೀತು. ಅವುಗಳಿಗೆಲ್ಲ ಇಲ್ಲಿದೆ ಉತ್ತರ:
ಅಗಸೆ ಬೀಜವನ್ನು ಎಣ್ಣೆ ಮಾಡಿ ಕೂದಲಿಗೆ ಉಪಯೋಗಿಸಬಹುದು. ಇದನ್ನು ರುಬ್ಬಿ ಜೆಲ್‌ನಂತೆ ಮಾಡಿ ಹೇರ್‌ಪ್ಯಾಕ್‌ಗೆ ಬಳಸಬಹುದು. ಪುಡಿ ಮಾಡಿ, ಮೊಸರಿನಲ್ಲಿ ಕಲೆಸಿ ಕೂದಲಿಗೆ ಹಚ್ಚಬಹುದು. ಇದು ಎಣ್ಣೆ ಬೀಜವೇ ಆದ್ದರಿಂದ ಅಗಸೆ ಎಣ್ಣೆ ಮಾರುಕಟ್ಟೆಯಲ್ಲಿ ದೊರೆಯುತ್ತದೆ. ಇದರ ಜೆಲ್‌ಗಳೂ ಲಭ್ಯವಿವೆ. ಸ್ವಲ್ಪ ಸಮಯ ಹೊಂದಿಸಿಕೊಂಡರೆ, ನಾವೇ ಮಾಡಿಕೊಳ್ಳುವುದು ಸಹ ಕಷ್ಟವಲ್ಲ. ಕೂದಲಿಗೆ ಅಗಸೆ ಬೀಜವನ್ನು ಉಪಯೋಗಿಸುವುದರಿಂದ ಆಗುವ ಪ್ರಯೋಜನಗಳೇನು ಎಂಬ ಮಾಹಿತಿಯಿದು.

Woman Is Massaging the Scalp. Isolated on a White Background.

ತಲೆಯ ಚರ್ಮಕ್ಕೆ ಲಾಭ

ತಲೆಯ ಚರ್ಮದಲ್ಲಿನ ಕಿರಿಕಿರಿಯನ್ನು ಕಡಿಮೆ ಮಾಡುವ ಸಾಧ್ಯತೆ ಅಗಸೆಬೀಜಕ್ಕಿದೆ. ಕೂದಲ ಬುಡದಲ್ಲಿ ಉಂಟಾಗುವ ಉರಿಯೂತವನ್ನು ಕಡಿಮೆ ಮಾಡಿ, ಬುಡಕ್ಕೆ ಪೋಷಣೆ ಒದಗಿಸುತ್ತದೆ. ತಲೆಯ ಚರ್ಮದಲ್ಲಿರುವ ತೈಲ ಗ್ರಂಥಿಗಳು ಸಮರ್ಪಕವಾಗಿ ಕೆಲಸ ಮಾಡುವಂತೆ ಪ್ರಚೋದಿಸಿ, ಅತಿಯಾಗಿ ಎಣ್ಣೆ ಜಿಡ್ಡಾಗದಂತೆ ತಡೆಯುತ್ತವೆ.

ಯಾವ ರೀತಿಯ ಕೂದಲು?

ಎಲ್ಲಾ ರೀತಿಯ ಕೂದಲುಗಳಿಗೂ ಅಗಸೆ ಬೀಜ ಉಪಯುಕ್ತ. ಒಣಗಿದ ಶುಷ್ಕ ಕೂದಲು, ಎಣ್ಣೆಜಿಡ್ಡಿನ ಕೂದಲು, ನೇರ ವೇಣಿ, ಸುರುಳಿ ಕೇಶಗಳು- ಹೀಗೆ ಎಲ್ಲ ರೀತಿಯ ಕೂದಲುಗಳಿಗೂ ಇದು ಉಪಯುಕ್ತ. ಕೂದಲನ್ನು ನಯವಾಗಿಸಿ, ಹೊಳಪು ನೀಡುವ ಕೆಲಸವನ್ನು ಶ್ರದ್ಧೆಯಿಂದ ಮಾಡುತ್ತದೆ ಅಗಸೆ ಬೀಜ.

ಕೂದಲನ್ನು ಬಲಗೊಳಿಸುತ್ತದೆ

ಕೂದಲು ಬಲಹೀನವಾಗಿ ತುಂಡಾಗುವುದನ್ನು ತಪ್ಪಿಸುವಂಥ ಉತ್ತಮ ಕೊಬ್ಬು ಮತ್ತು ವಿಟಮಿನ್‌ ಇ ಜೀವಸತ್ವ ಅಗಸೆಯಲ್ಲಿದೆ. ಕೂದಲ ಬುಡದಲ್ಲಿರುವ ಉರಿಯೂತ ಕಡಿಮೆಯಾಗುತ್ತಿದ್ದಂತೆ, ಸತ್ವಗಳನ್ನು ಹೀರಿಕೊಳ್ಳಲು ಕೂದಲಿಗೆ ಸಾಧ್ಯವಾಗುತ್ತದೆ. ಇದರಿಂದ ಸಹಜವಾಗಿ ಕೂದಲು ಶಕ್ತಿಯುತವಾಗುತ್ತದೆ. ಇದರಿಂದ ಒರಟಾದ ಕೂದಲುಗಳನ್ನೂ ನಯವಾಗಿಸಿ, ಮೃದುವಾಗಿಸಬಹುದು.

ರಿಪೇರಿ ಕೆಲಸ

ಇದರಲ್ಲಿರುವ ಜೀವಸತ್ವಗಳಲ್ಲಿ ಮುಖ್ಯವಾದವು ವಿಟಮಿನ್‌ ಇ ಮತ್ತು ಬಿ ಜೀವಸತ್ವಗಳು. ಹಲವು ರೀತಿಯ ಬಿ ವಿಟಮಿನ್‌ಗಳು ಅಗಸೆ ಬೀಜದಲ್ಲಿ ಇರುವುದರಿಂದ, ಕೂದಲಿಗೆ ಆಗಿರುವ ಹಾನಿಯನ್ನು ಸರಿ ಪಡಿಸುವ ಸಾಧ್ಯತೆಯನ್ನಿದು ಹೊಂದಿದೆ. ಕೂದಲ ಬೆಳವಣಿಗೆಗೂ ಈ ಜೀವಸತ್ವಗಳು ನೆರವಾಗುತ್ತವೆ. ಇನ್ನು ವಿಟಮಿನ್‌ ಇ ಎಂಬುದು ಪ್ರಬಲ ಉತ್ಕರ್ಷಣ ನಿರೋಧಕವೂ ಹೌದು. ಇವೆಲ್ಲವುಗಳ ಫಲವಾಗಿ, ಕೂದಲ ಹಾನಿ ಕಡಿಮೆಯಾಗಿ, ಕೇಶ ಸಶಕ್ತವಾಗುತ್ತದೆ.

Flax Seeds in a Wooden Spoon

ಹೇಗೆಲ್ಲಾ ಉಪಯೋಗಿಸಬಹುದು?

ಇದೊಂದು ಎಣ್ಣೆ ಬೀಜವಾದ್ದರಿಂದ, ಅಗಸೆಯ ಎಣ್ಣೆ ಲಭ್ಯವಿದೆ. ಇದನ್ನು ಆಹಾರವಾಗಿ ಉಪಯೋಗಿಸಬಹುದು. ಬೀಜಗಳನ್ನಂತೂ ನಾನಾ ರೀತಿಯಲ್ಲಿ ತಿನ್ನುವುದಕ್ಕೆ ಬಳಸಲಾಗುತ್ತದೆ. ಹಾಗಿಲ್ಲದಿದ್ದರೆ, ಕೊಬ್ಬರಿ ಎಣ್ಣೆಯಂಥ ಬೇರೆ ತೈಲದ ಜೊತೆ ಸೇರಿಸಿಕೊಂಡು, ಈ ಎಣ್ಣೆಯನ್ನು ತಲೆಗೆ ಮಸಾಜ್‌ ಮಾಡಬಹುದು. ಇದರ ಜೆಲ್‌ ಲಭ್ಯವಿದ್ದು, ಇದನ್ನು ತಲೆಗೆ ಹಚ್ಚಿದ ಮೇಲೆ ಒಂದೆರಡು ದಿನಗಳ ಕಾಲ ಹಾಗೆಯೇ ಬಿಡಬಹುದು, ಥೇಟ್‌ ಎಣ್ಣೆಯಂತೆ. ಬೇಕಾದಾಗ ತಲೆಸ್ನಾನ ಮಾಡಿದರಾಯಿತು.

ಇದನ್ನೂ ಓದಿ: Healthy Food For Women: 40 ದಾಟಿದ ಮಹಿಳೆ ಮರೆಯದೆ ತಿನ್ನಬೇಕಾದ ಆಹಾರಗಳ್ಯಾವುವು ಗೊತ್ತೇ?

Continue Reading

ಆರೋಗ್ಯ

ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ; ಉ.ಕ ಜಿಲ್ಲಾ ಶಾಸಕರಲ್ಲೇ ಒಡಕು! ತಮ್ಮ ತಾಲೂಕಿಗೇ ಬೇಕೆಂದು ಸದನದಲ್ಲಿ ಕಿತ್ತಾಟ

Super Speciality Hospital : ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಸಂಬಂಧ ಉತ್ತರ ಕನ್ನಡ ಜಿಲ್ಲೆಯ ಶಾಸಕರಲ್ಲೇ ಒಡಕು ಮೂಡಿದೆ. ನನ್ನ ತಾಲೂಕಿಗೆ ಕೊಡಿ, ನನ್ನ ತಾಲೂಕಿಗೆ ಕೊಡಿ ಎಂದು ವಿಧಾನ ಮಂಡಲ ಅಧಿವೇಶನದಲ್ಲಿ ಬೇಡಿಕೆ ಇಟ್ಟಿದ್ದಾರೆ. ಕಾರವಾರ ಶಾಸಕ ಸತೀಶ್ ಸೈಲ್‌, ಕುಮಟಾ ಶಾಸಕ ದಿನಕರ್ ಶೆಟ್ಟಿ, ಶಿರಸಿ ಶಾಸಕ ಭೀಮಣ್ಣ ನಾಯ್ಕ್, ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ತಮ್ಮ ತಮ್ಮ ತಾಲೂಕಿಗೆ ಬೇಕು ಎಂದು ಕೇಳಿದ್ದಾರೆ.

VISTARANEWS.COM


on

super speciality hospital in Uttara Kannada District
Koo

ಬೆಳಗಾವಿ: ಉತ್ತರ ಕನ್ನಡ ಜಿಲ್ಲೆಯ (Uttara Kannada District) ದಶಕಗಳ ಬೇಡಿಕೆಯಾಗಿದ್ದ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ (Super Speciality Hospital) ಕನಸು ಸದ್ಯಕ್ಕೆ ಈಡೇರುವ ಯಾವ ಲಕ್ಷಣವೂ ಕಾಣುತ್ತಿಲ್ಲ. ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ಕೊನೇ ಬಜೆಟ್‌ನಲ್ಲಿ ಕುಮಟಾದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದರು. ಇದಕ್ಕಾಗಿ ಕುಮಟಾದಲ್ಲಿ ಜಾಗವನ್ನೂ ಗುರುತಿಸಿ ಓಕೆ ಮಾಡಲಾಗಿತ್ತು. ಆದರೆ, ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಕಳೆದ ಬಜೆಟ್‌ನಲ್ಲಿ (Karnataka budget 2023) ಅನುದಾನ ನೀಡಿರಲಿಲ್ಲ. ಈಗ ಜಿಲ್ಲೆಯ ಶಾಸಕರಲ್ಲೇ ಒಡಕು ಮೂಡಿದೆ. ನನ್ನ ತಾಲೂಕಿಗೆ ಕೊಡಿ, ನನ್ನ ತಾಲೂಕಿಗೆ ಕೊಡಿ ಎಂದು ವಿಧಾನ ಮಂಡಲ ಅಧಿವೇಶನದಲ್ಲಿ (Belagavi Winter Session) ಬೇಡಿಕೆ ಇಟ್ಟಿದ್ದಾರೆ. ಕಾರವಾರ ಶಾಸಕ ಸತೀಶ್ ಸೈಲ್‌, ಕುಮಟಾ ಶಾಸಕ ದಿನಕರ್ ಶೆಟ್ಟಿ, ಶಿರಸಿ ಶಾಸಕ ಭೀಮಣ್ಣ ನಾಯ್ಕ್, ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ತಮ್ಮ ತಮ್ಮ ತಾಲೂಕಿಗೆ ಬೇಕು ಎಂದು ಕೇಳಿದ್ದಾರೆ.

ವಿಧಾನ ಪರಿಷತ್‌ ಕಲಾಪ ವೇಳೆ ಕಾರವಾರ ಶಾಸಕ ಸತೀಶ್‌ ಸೈಲ್‌ ಮಾತನಾಡಿ, ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕೇ ಬೇಕು. ಹೀಗಾಗಿ ಸದ್ಯಕ್ಕೆ ಕಾರವಾರದಲ್ಲಿ ಮಾಡಿಕೊಡಿ. ನಂತರ ಉತ್ತರ ಕನ್ನಡದ ಬೇರೆ ಪ್ರದೇಶದಲ್ಲಿ ನಿರ್ಮಾಣ ಮಾಡಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Road Accident : ಆಯತಪ್ಪಿ ಬಿದ್ದ ಸವಾರನ ಮೇಲೆ ಹರಿದ ಲಾರಿ! ತುಂಡಾದ ದೇಹ

ಇದರಿಂದ ಅಸಮಾಧಾನಗೊಂಡ ಕುಮಟಾ ಶಾಸಕ ದಿನಕರ್ ಶೆಟ್ಟಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡಬೇಕು. ಈಗಾಗಲೇ ಈ ಬಗ್ಗೆ ಒಮ್ಮೆ ನಿರ್ಣಯ ಕೂಡಾ ಆಗಿದೆ. ಅಲ್ಲದೆ, ಸ್ಥಳವನ್ನೂ ಗುರುತಿಸಲಾಗಿದ್ದು, ಎಲ್ಲರೂ ಆಗ ಒಪ್ಪಿಗೆ ನೀಡಿದ್ದರು. ಹೀಗಾಗಿ ಕುಮಟಾದಲ್ಲಿಯೇ ಆಗಬೇಕು. ಇದು ಜಿಲ್ಲೆಯ ಹೃದಯ ಸ್ಥಳ ಆಗಿರುವುದರಿಂದ ಜಿಲ್ಲೆಯ ಎಲ್ಲರಿಗೂ ಇಲ್ಲಿಗೆ ಬರಲು ಅನುಕೂಲ ಆಗಲಿದೆ ಎಂದು ಆಗ್ರಹಿಸಿದರು.

ಆಗ ಶಿರಸಿ ಶಾಸಕ ಭೀಮಣ್ಣ ನಾಯ್ಕ್ ಮಾತನಾಡಿ, ಶಿರಸಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡಿ ಎಂದು ಆಗ್ರಹಿಸಿದ್ದಾರೆ. ಅದಕ್ಕೆ ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ಅವರು, ಘಟ್ಟದ ಮೇಲೊಂದು, ಘಟ್ಟದ ಕೆಳಗೊಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂದು ಒತ್ತಾಯ ಮಾಡಿದರು. ಹೀಗಾಗಿ ತಮ್ಮ ತಮ್ಮ ಕ್ಷೇತ್ರಗಳಲ್ಲೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂಬ ಡಿಮ್ಯಾಂಡ್‌ ಉತ್ತರ ಕನ್ನಡ ಜಿಲ್ಲೆಯ ಎಲ್ಲ ಶಾಸಕರಿಂದಲೂ ಕೇಳಿಬಂತು.

ಇದಕ್ಕೆ ಸಚಿವ ಶರಣ ಪ್ರಕಾಶ್ ಪಾಟೀಲ್ ಉತ್ತರ ನೀಡಿ, ಬಹಳ ದಿನಗಳಿಂದ ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬೇಡಿಕೆ ಇದೆ. ಕಾರವಾರದ ಮೆಡಿಕಲ್ ಕಾಲೇಜಿನಲ್ಲಿ ಮಾಡಬೇಕು ಎಂಬ ಪ್ರಯತ್ನ ನಡೆದಿದೆ. ಆದರೆ, ಕಾರವಾರದಲ್ಲಿ ಅಗತ್ಯ ವೈದ್ಯ ಹುದ್ದೆಗಳಿಗೆ ಎರಡು ಸಲ ಕಾಲ್ ಫಾರ್ ಮಾಡಿದರೂ ಯಾರೂ ಅರ್ಜಿ ಹಾಕಿಲ್ಲ. ಮತ್ತೊಮ್ಮೆ ವೈದ್ಯ ಹುದ್ದೆಗಳಿಗೆ ಆಹ್ವಾನ ನೀಡಲಾಗುತ್ತದೆ. ಈ ಕೆಲಸವಾದರೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸುಲಭವಾಗಲಿದೆ ಎಂದು ಹೇಳಿದರು.

ಉ.ಕ. ಜನರಿಂದ ನಡೆದಿದ್ದ ಆಂದೋಲನ

ಉತ್ತರ ಕನ್ನಡ ಜಿಲ್ಲೆಯು ಭೌಗೋಳಿಕವಾಗಿ ಬಹಳ ದೊಡ್ಡದಿರುವ ಕಾರಣ, ಅಪಘಾತವಾದರೆ ಇಲ್ಲವೇ ತುರ್ತು ಚಿಕಿತ್ಸೆ ಬೇಕಿದ್ದರೆ ಪಕ್ಕದ ಮಂಗಳೂರು, ಗೋವಾ ಇಲ್ಲವೇ ಹುಬ್ಬಳ್ಳಿಯಂತಹ ಕಡೆಗಳಿಗೆ ಹೋಗಬೇಕು. ಇದರಿಂದ ಸಾಕಷ್ಟು ಜೀವ ಹಾನಿಯಾಗುತ್ತಲಿದೆ. ರಾಜ್ಯಕ್ಕೆ ವಿದ್ಯುತ್‌ ಕೊಟ್ಟ ಜಿಲ್ಲೆಯ ಜನರಿಗೆ ಕನಿಷ್ಠ ಮೂಲ ಸೌಕರ್ಯವೂ ಇಲ್ಲದಂತೆ ಆಗಿದ್ದು, ಕೊನೇ ಪಕ್ಷ ಒಂದು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನಾದರೂ ನೀಡಬೇಕು ಎಂದು ಈಚೆಗೆ ಭಾರಿ ಹೋರಾಟ ನಡೆದಿತ್ತು.

ಈ ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರ ಮೇಲೆ ಸಾಕಷ್ಟು ಒತ್ತಡವನ್ನು ಹೇರಲಾಗಿತ್ತು. ಹೀಗಾಗಿ ಆಗಿನ ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಅವರು ಉತ್ತರ ಕನ್ನಡ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ಸಭೆ ನಡೆಸಿದ್ದಲ್ಲದೆ, ಜಿಲ್ಲೆಗೆ ಭೇಟಿ ನೀಡಿ ಸ್ಥಳಪರಿಶೀಲನೆಯನ್ನೂ ನಡೆಸಿದ್ದರು. ಕೊನೆಗೆ ಸರ್ಕಾರ ಸಹ ಬಜೆಟ್‌ನಲ್ಲಿ ಘೋಷಣೆ ಮಾಡಿತ್ತು. ಆದರೆ, ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ ಮಂಡಿಸುವಾಗ ಇದರ ಪ್ರಸ್ತಾಪವೇ ಇರಲಿಲ್ಲ. ಇದು ಉತ್ತರ ಕನ್ನಡ ಜಿಲ್ಲೆಯ ಜನರ ಕೆಂಗಣ್ಣಿಗೆ ಗುರಿಯಾಗಿತ್ತು.

ಬಗೆಹರಿದಿದ್ದ ಜಾಗದ ಗೊಂದಲ

ಉತ್ತರ ಕನ್ನಡ ಜಿಲ್ಲೆಯ ಹೃದಯಭಾಗ ಕುಮಟಾದಲ್ಲಿ ಆಸ್ಪತ್ರೆ ನಿರ್ಮಾಣಕ್ಕಾಗಿ ಸರ್ವೆ ನಂಬರ್ 440ರಲ್ಲಿ 15.35 ಎಕರೆ ಜಾಗವನ್ನು ಮೀಸಲಿಡಲಾಗಿದೆ. ಹಿಂದೆ ಈ ಜಾಗವನ್ನು ಏಕಲವ್ಯ ಮಾದರಿ ವಸತಿ ಶಾಲೆ ನಿರ್ಮಾಣಕ್ಕಾಗಿ ಮೀಸಲಿಡಲಾಗಿತ್ತು. ಆಸ್ಪತ್ರೆ ನಿರ್ಮಾಣಕ್ಕೆ ಸೂಕ್ತ ಜಾಗವಾಗಿರುವ ಹಿನ್ನೆಲೆಯಲ್ಲಿ ಸದ್ಯ ಈ ಜಾಗವನ್ನು ಆಸ್ಪತ್ರೆಗಾಗಿ ನೀಡುವಂತೆ ಸೂಚನೆ ನೀಡಲಾಗಿತ್ತು. ವಸತಿ ಶಾಲೆ ನಿರ್ಮಾಣಕ್ಕೆ ಮುಂದಿನ ದಿನಗಳಲ್ಲಿ ಪರ್ಯಾಯ ಜಾಗವನ್ನು ಒದಗಿಸುವ ಭರವಸೆಯನ್ನು ನೀಡಲಾಗಿತ್ತು.

ಇದನ್ನೂ ಓದಿ: NPS Cancellation: ರಾಜ್ಯದಲ್ಲಿ ಹಳೇ ಪಿಂಚಣಿ ಶೀಘ್ರ ಜಾರಿ? 10 ದಿನದಲ್ಲಿ ಸಮಿತಿ ಪುನಾರಚನೆ: ಕೃಷ್ಣ ಬೈರೇಗೌಡ

ವಸತಿ ಶಾಲೆಯ ಜಾಗ ಆಸ್ಪತ್ರೆಗೆ

ಉತ್ತರ ಕನ್ನಡ ಜಿಲ್ಲಾಡಳಿತವು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಏಕಲವ್ಯ ವಸತಿ ಶಾಲೆಗೆ ಮೀಸಲಿರಿಸಲಾಗಿದ್ದ ಜಾಗವನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ನೀಡುವಂತೆ ಇಲಾಖೆಗೆ ಕಳೆದ ವರ್ಷ ಪತ್ರ ಬರೆಯಲಾಗಿತ್ತು. ಆಗಿನ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಉತ್ತರ ಕನ್ನಡದ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದರು. ಅವರು ಆ ಜಾಗವನ್ನು ಸರ್ಕಾರಕ್ಕೆ ಹಿಂದಿರುಗಿಸಲು ಅನುಮತಿ ನೀಡಿದ್ದರು. ಅದರಂತೆ ಏಕಲವ್ಯ ವಸತಿ ಶಾಲೆಗಾಗಿ ನಿಗದಿಪಡಿಸಿ ಇರಿಸಲಾಗಿದ್ದ 17 ಎಕರೆ 14 ಗುಂಟೆ ಜಮೀನಿನಲ್ಲಿ, 15 ಎಕರೆ 35 ಗುಂಟೆಯಷ್ಟು ಪ್ರದೇಶವನ್ನು ಸರ್ಕಾರಕ್ಕೆ ಹಿಂದಿರುಗಿಸಿತ್ತು. ಜತೆಗೆ ಏಕಲವ್ಯ ವಸತಿ ಶಾಲೆಗೆ ಪರ್ಯಾಯ ಜಾಗ ಒದಗಿಸುವಂತೆ ಜಿಲ್ಲಾಡಳಿತಕ್ಕೆ ಷರತ್ತು ವಿಧಿಸಿ, ಆ ಪ್ರದೇಶವನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ಕಾಯ್ದಿರಿಸಲು ಸರ್ಕಾರದ ಆಪ್ತ ಕಾರ್ಯದರ್ಶಿಗಳು ಆದೇಶದಲ್ಲಿ ತಿಳಿಸಿದ್ದರು.

Continue Reading

ಆರೋಗ್ಯ

Heart Attack : ಚಿಕಿತ್ಸೆ ನೀಡುತ್ತಿದ್ದ ವೇಳೆ ವೈದ್ಯೆಯೇ ಹೃದಯಾಘಾತದಿಂದ ಮೃತ್ಯು

Heart Attack : ಉಡುಪಿಯ ವೈದ್ಯರೊಬ್ಬರು ರೋಗಿಯ ಪರೀಕ್ಷೆ ನಡೆಸುತ್ತಿದ್ದಾಗಲೇ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಮಹಿಳಾ ವೈದ್ಯೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

VISTARANEWS.COM


on

Heart attack doctor death in Udupi
Koo

ಉಡುಪಿ : ದೇಶಾದ್ಯಂತ ಹೃದಯಾಘಾತ (Heart Attack) ಒಂದೇ ಸಮನೆ ಹೆಚ್ಚುತ್ತಿದ್ದು, ಇದೀಗ ವೈದ್ಯೆಯೊಬ್ಬರು ಚಿಕಿತ್ಸೆ ನೀಡುತ್ತಿರುವ ವೇಳೆಯೇ ಹೃದಯದ ನೋವಿನಿಂದ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ (Udupi District Hospital) ಈ ದುರಂತ ಘಟನೆ ನಡೆದಿದೆ. ಡಾ. ಶಶಿಕಲಾ (Dr Shashikala) ಚಿಕಿತ್ಸೆ ನೀಡುತ್ತಿದ್ದ ವೇಳೆ ಮೃತಪಟ್ಟವರು.

ಉಡುಪಿ ಅಜ್ಜರಕಾಡಿನಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ವೈದ್ಯರಾಗಿರುವ ಡಾ. ಶಶಿಕಲಾ ಅವರು ರೋಗಿಗೆ ಚಿಕಿತ್ಸೆ ನೀಡುವಾಗಲೇ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾರೆ. ಅವರಿಗೆ 60 ವರ್ಷ ಆಗಿತ್ತು.

ಶಶಿಕಲಾ ಅವರು 2022ರ ಫೆಬ್ರವರಿಯಲ್ಲಿ ವಯೋ ನಿವೃತ್ತಿ ಹೊಂದಿದ್ದರು. ಆದರೆ, ವೈದ್ಯರಿಲ್ಲದ ಹಿನ್ನೆಲೆಯಲ್ಲಿ ಅವರನ್ನು ಹೊರಗುತ್ತಿಗೆಯಲ್ಲಿ ಮುಂದುವರಿಸಲಾಗಿತ್ತು. ಅವರು ಹೊರರೋಗಿಗಳ ವಿಭಾಗದಲ್ಲಿ ಪ್ರಮುಖವಾಗಿ ರೋಗಿಗಳನ್ನು ನೋಡುತ್ತಿದ್ದರು.

ಗುರುವಾರ ಅವರು ಜಿಲ್ಲಾಸ್ಪತ್ರೆಯ ಹೊರ ರೋಗಿ ವಿಭಾಗದಲ್ಲಿ ಸೇವೆ ನೀಡುತ್ತಿದ್ದ ವೇಳೆ ಒಮ್ಮೆಗೇ ಕುಸಿದು ಬಿದ್ದರು. ರೋಗಿಗೆ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲೇ ಕುಸಿದು ಬಿದ್ದಿದ್ದ ಶಶಿಕಲಾ ಅವರನ್ನು ಕೂಡಲೇ ಜಿಲ್ಲಾಸ್ಪತ್ರೆ ಸಿಬ್ಬಂದಿಗಳು ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿದರು. ಆದರೆ, ಶಶಿಕಲಾ ಅವರು ಯಾವುದೇ ಚಿಕಿತ್ಸೆಗೆ ಸ್ಪಂದಿಸದೆ ಪ್ರಾಣ ಕಳೆದುಕೊಂಡರು. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಡಾಕ್ಟರ್‌ಗೇ ಈ ರೀತಿಯಾ ಹೃದಯಾಘಾತ ಸಂಭವಿಸಿದ್ದು, ವೈದ್ಯಕೀಯ ವಲಯದಲ್ಲಿ ಆತಂಕ ಮೂಡಿಸಿದೆ.

ಇದನ್ನೂ ಓದಿ: Bomb Threat: ಗಂಡನ ಮೇಲಿನ ಸಿಟ್ಟಿಗೆ ಫೇಕ್‌ ಬಾಂಬ್‌ ಇಟ್ಟಳು! ಇದರ ಹಿಂದಿತ್ತು Love ಕಹಾನಿ

ಸಿಂಧನೂರಿನಲ್ಲಿ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

ರಾಯಚೂರು: ಟಾಟಾ ಎಸಿ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ಸ್ಥಳದಲ್ಲೇ ಮೃತಪಟ್ಟು ಒಬ್ಬರು ಗಾಯಗೊಂಡ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾ.ಪಗಡದಿನ್ನಿ ಕ್ಯಾಂಪ್ ಬಳಿ ನಡೆದಿದೆ.

ಇಸ್ಮಾಯಿಲ್(25),ಚನ್ನಬಸವ (26),ಅಂಬರೀಶ್ (20), ರವಿ( 21) ಮೃತರು. ಗಂಭೀರವಾಗಿ ಗಾಯಗೊಂಡವನ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಮೃತದೇಹಗಳನ್ನ ಸಿಂಧನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಆರೋಗ್ಯ

Meftal: ನೋವು ನಿವಾರಕ ಮೆಫ್ಟಾಲ್ ಮಾತ್ರೆ ಸೇವನೆಯಿಂದ ಗಂಭೀರ ಪರಿಣಾಮ!

Health news: ಸಾಮಾನ್ಯವಾಗಿ ಬಳಸುವ ನೋವು ನಿವಾರಕ ಮಾತ್ರೆ ಮೆಫ್ಟಾಲ್ ಬಗ್ಗೆ ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಇದು ಗಂಭೀರ ಆರೋಗ್ಯ ಸಮಸ್ಯೆಗೆ ಕಾರಣವಾಗಲಿದೆ ಎಂದು ಎಚ್ಚರಿಸಿದ್ದಾರೆ.

VISTARANEWS.COM


on

tablet
Koo

ಬೆಂಗಳೂರು: ಮೆಫ್ಟಾಲ್ (Meftal) ಬ್ರ್ಯಾಂಡ್‌ ಹೆಸರಿನಲ್ಲಿ ಜನಪ್ರಿಯವಾಗಿ ಮಾರಾಟವಾಗುವ, ಸಾಮಾನ್ಯವಾಗಿ ಬಳಸುವ ನೋವು ನಿವಾರಕ (Painkiller) ಔಷಧ, ಮಾತ್ರೆಯ ಬಳಕೆಯ ಬಗ್ಗೆ ಇಂಡಿಯನ್ ಫಾರ್ಮಾಕೊಪೊಯಿಯಾ ಕಮಿಷನ್ (Indian Pharmacopoeia Commission-IPC) ಎಚ್ಚರಿಕೆ ನೀಡಿದೆ. ಇದರಲ್ಲಿ ಬಳಸಾಗುವ ಮೆಫೆನಾಮಿಕ್ ಆಮ್ಲದಿಂದ ಅಡ್ಡ ಪರಿಣಾಮ (Side effect) ಬೀರುವ ಸಾಧ್ಯತೆ ಇದೆ ಎಂದು ವೈದ್ಯರು ಮತ್ತು ರೋಗಿಗಳಿಗೆ ಅದು ಮುನ್ನೆಚ್ಚರಿಕೆಯ ಸಂದೇಶ ರವಾನಿಸಿದೆ (Health news).

ಔಷಧೀಯ ಉತ್ಪನ್ನಗಳ ಬಳಕೆಯಿಂದ ಉಂಟಾಗುವ ಅಡ್ಡ ಪರಿಣಾಮಗಳ ಬಗ್ಗೆ ಮೇಲ್ವಿಚಾರಣೆ ನಡೆಸುವ ಮತ್ತು ಮಾಹಿತಿಯನ್ನು ಸಂಗ್ರಹಿಸುವ ಫಾರ್ಮಾಕೊವಿಜಿಲೆನ್ಸ್ ಪ್ರೋಗ್ರಾಂ ಆಫ್ ಇಂಡಿಯಾ (PvPI) ತನ್ನ ಪ್ರಾಥಮಿಕ ತನಿಖೆಯಲ್ಲಿ ಮೆಫೆನಾಮಿಕ್ ಆಮ್ಲವು ಇಸಿನೊಫಿಲಿಯಾ ಮತ್ತು ಡ್ರೆಸ್ ಸಿಂಡ್ರೋಮ್ ಎಂದು ಕರೆಯಲ್ಪಡುವ ರೋಗಲಕ್ಷಣಗಳಿಗೆ ಕಾರಣವಾಗುತ್ತದೆ ಎನ್ನುವುದನ್ನು ಕಂಡುಕೊಂಡಿದೆ.

ಈ ಔಷಧವು ಪ್ರಿಸ್ಕ್ರಿಪ್ಷನ್ ಇಲ್ಲದೆ ಮಾರಾಟ ಮಾಡಬಹುದಾದ ಒಟಿಸಿ ಉತ್ಪನ್ನವಲ್ಲವಾದರೂ, ಮುಟ್ಟಿನ ನೋವು, ತಲೆನೋವು ಮತ್ತು ಸ್ನಾಯು ಮತ್ತು ಕೀಲು ನೋವನ್ನು ನಿವಾರಿಸುವಂತಹ ವಿವಿಧ ಕಾರಣಗಳಿಗಾಗಿ ಭಾರತೀಯರು ಇದನ್ನು ವ್ಯಾಪಕವಾಗಿ ಬಳಸುತ್ತಾರೆ. ಅಲ್ಲದೆ ಜ್ವರ ಬಾಧಿತ ಮಕ್ಕಳಿಗೂ ನೀಡಲಾಗುತ್ತದೆ.

ಬ್ಲೂ ಕ್ರಾಸ್ ಲ್ಯಾಬೊರೇಟರೀಸ್‌ನ ಮೆಫ್ಟಾಲ್, ಮ್ಯಾನ್‌ಕೈಂಡ್‌ ಫಾರ್ಮಾದ ಮೆಫ್ಕಿಂಡ್ ಪಿ, ಫಿಜರ್ಸ್‌ನ ಪೊನ್‌ಸ್ಟಾನ್‌, ಸೀರಮ್ ಇನ್‌ಸ್ಟಿಟ್ಯೂಟ್‌ನ ಮೆಫಾನಾರ್ಮ್ ಮತ್ತು ಡಾ. ರೆಡ್ಡೀಸ್‌ನ ಇಬುಕ್ಲಿನ್ ಪಿ ಮೆಫೆನಾಮಿಕ್ ಆಮ್ಲವನ್ನು ಒಳಗೊಂಡಿದೆ.

ಏನಿದು ಡ್ರೆಸ್ ಸಿಂಡ್ರೋಮ್?

ಡ್ರೆಸ್ ಸಿಂಡ್ರೋಮ್ ಎನ್ನುವುದು ಗಂಭೀರ ಅಲರ್ಜಿ. ಇದು ಮಾರಣಾಂತಿಕವಾಗುವ ಸಾಧ್ಯತೆಯೂ ಇದೆ ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ದೇಶದಲ್ಲಿ ಸುಮಾರು ಶೇ. 10ರಷ್ಟು ಜನರು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ದೇಹವು ಕೆಲವು ಔಷಧಗಳಿಗೆ ಪ್ರತಿಕ್ರಿಯಿಸಿದಾಗ ಈ ಕಾಯಿಲೆ ಕಂಡುಬರುತ್ತದೆ. ಇದು ಮೊದಲು ಚರ್ಮದ ದದ್ದುಗಳಾಗಿ ಕಾಣಿಸಿಕೊಳ್ಳುತ್ತದೆ ಮತ್ತು ಕ್ರಮೇಣ ಆಂತರಿಕ ಅಂಗಗಳ ಮೇಲೆ ಪರಿಣಾಮ ಬೀರಬಹುದು. ಹೀಗಾಗಿ ಔಷಧಗಳ ಬಳಕೆ ಬಗ್ಗೆ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ. “ಅಂತಹ ಲಕ್ಷಣ ಕಂಡುಬಂದರೆ, ಇಂಡಿಯನ್ ಫಾರ್ಮಾಕೊಪೊಯಿಯಾ ಕಮಿಷನ್‌ಗೆ ವರದಿ ಮಾಡಿʼʼ ಎಂದು ಎಚ್ಚರಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Made in India: ನಾಲ್ಕು ಅಪರೂಪದ ಕಾಯಿಲೆಗಳಿಗೆ ಸ್ವದೇಶಿ ಔಷಧ ಆವಿಷ್ಕಾರ; 100 ಪಟ್ಟು ಇಳಿಯಲಿದೆ ಚಿಕಿತ್ಸೆ ವೆಚ್ಚ!

ವೈದ್ಯರು ಏನು ಹೇಳುತ್ತಾರೆ?

“ನಾನ್‌ಸ್ಟಿರಾಯಿಡಲ್ ಆ್ಯಂಟಿ-ಇನ್ಫಮೇಟರಿ ಡ್ರಗ್ಸ್ (Nonsteroidal anti-inflammatory drugs-ಎನ್ಎಸ್ಎಐಡಿ) ಸೇವನೆಯಿಂದ ಪ್ರತಿಯೊಬ್ಬರಿಗೂ ಈ ತೀವ್ರ ಅಲರ್ಜಿ ಕಂಡು ಬರುವ ಸಾಧ್ಯತೆ ಇಲ್ಲ. ದೇಹದ ಸ್ಥಿತಿಗೆ ಹೊಂದಿಕೊಂಡು ಇದು ಕೆಲವರಲ್ಲಿ ಮಾತ್ರ ಪರಿಣಾಮ ಬೀರುತ್ತದೆ‌ʼʼ ಎಂದು ಸುಮಾರು 20 ವರ್ಷಗಳಿಂದ ವೃತ್ತಿ ನಿರ್ವಹಿಸುತ್ತಿರುವ ವೈದ್ಯರೊಬ್ಬರು ತಿಳಿಸಿದ್ದಾರೆ. ಗುರುಗ್ರಾಮ್ ಮೂಲದ ಆಸ್ಪತ್ರೆಯ ಇನ್ನೊಬ್ಬರು ವೈದ್ಯರು ಮಾತನಾಡಿ, ʼʼಮೆಫ್ಟಾಲ್‌ ಸೇವನೆಯಿಂದ ಡ್ರೆಸ್‌ ಸಿಂಡ್ರೋಮ್‌ ಕಾಣಿಸಿಕೊಳ್ಳುವುದು ಅಪರೂಪ. ಆದರೂ ಎನ್ಎಸ್ಎಐಡಿಗಳನ್ನು ತೆಗೆದುಕೊಳ್ಳುವ ವ್ಯಕ್ತಿಗಳು ಡ್ರೆಸ್ ಸಿಂಡ್ರೋಮ್‌ನಂತಹ ಅಪರೂಪದ, ಆದರೆ ತೀವ್ರ ಅಡ್ಡ ಪರಿಣಾಮ ಬೀರುವ ಬಗ್ಗೆ ತಿಳಿದಿರುವುದು ಬಹಳ ಮುಖ್ಯ” ಎಂದು ತಿಳಿಸಿದ್ದಾರೆ. ಒಟ್ಟಿನಲ್ಲಿ ಯಾವುದೇ ಔಷಧಗಳನ್ನು ಸೇವಿಸುವ ಮುನ್ನ ತಜ್ಞರೊಂದಿಗೆ ಸಮಾಲೋಚನೆ ನಡೆಸುವುದು ಮುಖ್ಯ ಎಂದು ಎಚ್ಚರಿಸಲಾಗಿದೆ.

Continue Reading
Advertisement
IPL 2024 Auction
ಐಪಿಎಲ್ 202311 mins ago

IPL 2024: ಹರಾಜಿನಲ್ಲಿ ಯಾವ ತಂಡಕ್ಕೆ ಎಷ್ಟು ಆಟಗಾರರನ್ನು ಖರೀದಿಸಬಹುದು? ಇಲ್ಲಿದೆ ಮಾಹಿತಿ

Assembly session Drought HD Kumaraswamy
ಕರ್ನಾಟಕ16 mins ago

Assembly Session : ಬರ ಸಂತ್ರಸ್ತ ರೈತರ 2 ಲಕ್ಷ ರೂ.ವರೆಗಿನ ಕೃಷಿ ಸಾಲ ಮನ್ನಾ; HDK ಆಗ್ರಹ

waiter beaten to death, tray of used plates touched guests in marriage
ಕ್ರೈಂ18 mins ago

ಬಳಸಿದ ಪ್ಲೇಟ್‌ಗಳಿದ್ದ ಟ್ರೆ ತಾಗಿದ್ದಕ್ಕೆ ವೇಟರ್‌ನನ್ನು ಹೊಡೆದು ಕೊಂದೇ ಬಿಟ್ರು!

Krishna Byregowda Central assistance
ಕರ್ನಾಟಕ46 mins ago

Assembly Session : ಕೇಂದ್ರ ಅನುದಾನ ವರ್ಷದಿಂದ ವರ್ಷಕ್ಕೆ ಇಳಿಕೆ; ಪೈಸೆ ಪೈಸೆ ಲೆಕ್ಕ ಕೊಟ್ಟ ಕೃಷ್ಣ ಬೈರೇಗೌಡ

Karnataka Drought
ಕರ್ನಾಟಕ56 mins ago

Karnataka Drought: ಮುಂದಿನ ವಾರ ಡಿಬಿಟಿ ಮೂಲಕ ರೈತರಿಗೆ ಬರ ಪರಿಹಾರ; 2 ಸಾವಿರ ರೂ.ವರೆಗೆ ಜಮೆ

IT raids on liquor traders across Odisha and Jharkhand
ದೇಶ58 mins ago

ತೆರಿಗೆಗಳ್ಳರ ಮೇಲೆ ಐಟಿ ದಾಳಿ; ನೋಟು ಎಣಿಸಿ ಎಣಿಸಿ ಕೌಂಟಿಂಗ್ ಮೆಷಿನ್‌ಗೆ ಸುಸ್ತು!

Attendance Araga Jnanendra UT Khader Araga jnanendra
ಕರ್ನಾಟಕ1 hour ago

Belagavi Winter Session : ನಾವೂ ಟೈಮಿಗೆ ಸರಿಯಾಗಿ ಬಂದಿದ್ದೀವಿ; ಸ್ಪೀಕರ್‌ ಜತೆ ಶಾಸಕರ ಜಗಳ!

Madhu Bangarappa in Belagavi Winter Session
ಕರ್ನಾಟಕ2 hours ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Pressmeet for Demand for construction of bypass road in Yallapur
ಉತ್ತರ ಕನ್ನಡ2 hours ago

Uttara Kannada News: ಯಲ್ಲಾಪುರ ಪಟ್ಟಣದಲ್ಲಿ ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ಒತ್ತಾಯ

Israel
ಪ್ರಮುಖ ಸುದ್ದಿ2 hours ago

Israel Palestine War: ಅರ್ಧದಷ್ಟು ಹಮಾಸ್ ಕಮಾಂಡರ್‌ಗಳು ಫಿನಿಷ್! ಇಸ್ರೇಲ್ ಹೇಳಿಕೆ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Madhu Bangarappa in Belagavi Winter Session
ಕರ್ನಾಟಕ2 hours ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ2 hours ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ8 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ15 hours ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ23 hours ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ1 day ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ1 day ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ1 day ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ1 day ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job Vistara Exclusive
ಉದ್ಯೋಗ1 day ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

ಟ್ರೆಂಡಿಂಗ್‌