h3n2 virus health department conducts clinical audit to ascertain source of virus H3N2 Virus: ಎಚ್‌3ಎನ್‌2 ವೈರಸ್‌ನ ಮೂಲ ಪತ್ತೆಗಾಗಿ ಕ್ಲಿನಿಕಲ್ ಆಡಿಟ್‌ಗೆ ಮುಂದಾದ ಆರೋಗ್ಯ ಇಲಾಖೆ - Vistara News

ಆರೋಗ್ಯ

H3N2 Virus: ಎಚ್‌3ಎನ್‌2 ವೈರಸ್‌ನ ಮೂಲ ಪತ್ತೆಗಾಗಿ ಕ್ಲಿನಿಕಲ್ ಆಡಿಟ್‌ಗೆ ಮುಂದಾದ ಆರೋಗ್ಯ ಇಲಾಖೆ

ರಾಜ್ಯದಲ್ಲಿ ಎಚ್‌3ಎನ್‌2 (H3N2) ವೈರಸ್‌ಗೆ ವ್ಯಕ್ತಿಯೊಬ್ಬ ಬಲಿಯಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ (Health Department) ಸಕ್ರಿಯವಾಗಿದೆ. ಎಚ್‌3ಎನ್‌2 ವೈರಸ್‌ ಕುರಿತು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಇಲಾಖೆಯು ವೈರಸ್‌ನ ಮೂಲ ಪತ್ತೆಗೆ ಕ್ಲಿನಿಕಲ್ ಆಡಿಟ್ (Clinical Audit) ಅನ್ನು ಆರಂಭಿಸಿದೆ.

VISTARANEWS.COM


on

H3N2
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೋವಿಡ್‌ ಸೋಂಕಿನ ಬಳಿಕ ಎಚ್‌3ಎನ್‌2 (H3N2 Virus) ವೈರಸ್‌ ಭೀತಿ ಹಿನ್ನೆಲೆಯಲ್ಲಿ ICMR ಹೈ ಅಲರ್ಟ್‌ ಘೋಷಣೆ ಮಾಡಿತ್ತು. ಇತ್ತೀಚೆಗೆ ಕರ್ನಾಟಕ‌ ಮತ್ತು ಹರಿಯಾಣದಲ್ಲಿ H3N2 ವೈರಸ್‌ನಿಂದ ತಲಾ ಒಂದೊಂದು ಸಾವಾಗಿದೆ. ರಾಜ್ಯದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಇಲಾಖೆ ವೈರಸ್‌ನ ಮೂಲ ಪತ್ತೆ ಹಚ್ಚಿ, ಸೋಂಕಿನ ತೀವ್ರತೆಯನ್ನು ನಿಯಂತ್ರಿಸಲು ಕ್ಲಿನಿಕಲ್ ಆಡಿಟ್ (Clinical Audit) ಆರಂಭಿಸಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು ನಿಗಾವಹಿಸಲು ನಿರ್ಧರಿಸಲಾಗಿದ್ದು, ಪ್ರಾಥಮಿಕ ಚಿಕಿತ್ಸಾ ಕೇಂದ್ರ, ಸರ್ಕಾರಿ ಜನರಲ್ ಆಸ್ಪತ್ರೆ, ಜಿಲ್ಲಾಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಆಡಿಟ್‌ಗೆ ಸೂಚಿಸಲಾಗಿದೆ. ವಯೋಮಾನ ಆಧಾರದಲ್ಲಿ ರೋಗಿಗಳ ರೋಗ ಲಕ್ಷಣ ಏನಿದೆ‌? ಯಾವಾಗಿನಿಂದ ರೋಗ ಲಕ್ಷಣವಿದೆ ಎಂಬುದನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತದೆ.

ಜತೆಗೆ 50 ವರ್ಷ ಮೇಲ್ಪಟ್ಟವರ ಪರಿಸ್ಥಿತಿ ಹೇಗಿದೆ ಎಂಬುದರ ಕುರಿತ ಆಡಿಟ್ ರಿಪೋರ್ಟ್ ಮಾಡಲು ತೀರ್ಮಾನಿಸಲಾಗಿದೆ. ಈ ಆಡಿಟ್ ಈಗಾಗಲೇ ಆರಂಭವಾಗಿದ್ದು, ರಿಪೋರ್ಟ್ ಆಧರಿಸಿ ಮುನ್ನೆಚ್ಚರಿಕಾ ಕ್ರಮ ಹೇಗಿರಬೇಕು ಎಂಬುದನ್ನು ತಿಳಿಸಲು ತಾಂತ್ರಿಕ ‌ಸಲಹಾ ಸಮಿತಿ ಮುಂದೆ ವರದಿಯನ್ನು ಸಲ್ಲಿಸಲಾಗುತ್ತದೆ ಎಂದು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ತಿಳಿಸಿದ್ದಾರೆ.

ಹಾಸನದ ವೃದ್ಧನಲ್ಲಿ ಪತ್ತೆ ಆಗಿತ್ತು ಎಚ್‌3ಎನ್‌2 ವೈರಸ್‌

ಹಾಸನ ಜಿಲ್ಲೆ ಆಲೂರು ತಾಲೂಕಿನ ಮೂಲದ 78 ವರ್ಷದ ಹಿರಿಯ ನಾಗರಿಕರೊಬ್ಬರು ಮಾರ್ಚ್ 1ರಂದು ಆಲೂರಿನಲ್ಲಿ ಮೃತಪಟ್ಟಿದ್ದರು. ಇವರಿಗೆ H3N2 ಪಾಸಿಟಿವ್‌ ಇದ್ದಿದ್ದು ದೃಢವಾಗಿತ್ತು. ಜ್ಚರ, ಗಂಟಲುನೋವು, ಕೆಮ್ಮಿನಿಂದ ಇವರು ಬಳಲುತ್ತಿದ್ದರು. ಮೃತರಿಗೆ H3N2 ಇರುವುದನ್ನು ಆರೋಗ್ಯ ಇಲಾಖೆ ದೃಢಪಡಿಸಿತ್ತು. H3N2 ವೈರಸ್‌ನಿಂದ ರಾಜ್ಯದಲ್ಲಿ ಆಗುತ್ತಿರುವ ಮೊದಲ ಸಾವು ಇದಾಗಿದೆಯಲ್ಲದೆ, ದೇಶದಲ್ಲಿಯೇ ಮೊದಲ ಸಾವು ಕೂಡ ಆಗಿದೆ. ಕೋವಿಡ್‌ ವೈರಸ್‌ನ ಮೊದಲ ಸಾವು ಕೂಡ ಕರ್ನಾಟಕದ ಕಲಬುರಗಿಯಲ್ಲಿ ಆಗಿತ್ತು.

ಭಯ ಬೇಡ ಇರಲಿ ಎಚ್ಚರ

ಎಚ್‌3ಎನ್‌2 (H3N2 Influenza) ಎಂಬುದು ಶೀತಜ್ವರದ ಹೊಸ ರೂಪಾಂತರಿಯಾಗಿದ್ದು, ರಾಜ್ಯದಲ್ಲಿ ಈವರೆಗೆ 26 ಕೇಸ್‌ಗಳು ಪತ್ತೆ ಆಗಿದೆ. ಸಾಂಕ್ರಾಮಿಕವಾಗಿ ಬಹುಬೇಗ ಹರಡಲಿದೆಯಾದರೂ ಹೆಚ್ಚಿನ ಅಪಾಯವನ್ನು ಹೊಂದಿಲ್ಲ. ಆದರೂ ಮುನ್ನೆಚ್ಚರಿಕಾ ಕ್ರಮವಹಿಸುವುದು ಅಗತ್ಯವಾಗಿದೆ.

ವಾತಾವರಣದಲ್ಲಿ ಹಿಟ್ ವೇವ್ ಹೆಚ್ಚಿದ್ದು, ಜನರು ಬಿಸಿಲಿನಲ್ಲಿ ಅನಗತ್ಯವಾಗಿ ಓಡಾಟ ಮಾಡುವುದನ್ನು ನಿಲ್ಲಿಸಬೇಕು. ಮುಖ್ಯವಾಗಿ 11ರಿಂದ 3 ಗಂಟೆವರೆಗೆ ಬಿಸಿಲಿಗೆ ಹೋಗುವುದು ಕಮ್ಮಿ ಮಾಡಬೇಕು. ಕನಿಷ್ಠ 2-3 ಲೀಟರ್‌ ನೀರು, ಮಜ್ಜಿಗೆ, ಎಳನೀರು, ಶರಬತ್‌ ಕುಡಿಯುವುದೊಳಿತು. ದೇಹದಲ್ಲಿ ನೀರು ಕಡಿಮೆ ಆಗದಂತೆ ಎಚ್ಚರ ವಹಿಸಬೇಕು.

ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಾಗ ವೈದ್ಯರ ಸಲಹೆ ಇಲ್ಲದೆ ಯಾವುದೇ ಕಾರಣಕ್ಕೂ ಆ್ಯಂಟಿ ಬಯೋಟಿಕ್ ತೆಗೆದುಕೊಳ್ಳಬಾರದು. ಬೇಸಿಗೆ ಕಾಲವಾಗಿರುವುದರಿಂದ ಇದು ಅಪಾಯಕಾರಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರಲಿದ್ದು, ಶಾಲೆಯಲ್ಲಿದ್ದಾಗ ಹಲವರ ಸಂಪರ್ಕಕ್ಕೆ ಬರುತ್ತಾರೆ. ಅದರಲ್ಲೂ 15 ವರ್ಷದೊಳಗಿನ ಮಕ್ಕಳು ಹಾಗೂ ಗರ್ಭಿಣಿಯರಿಗೆ ಸುಲಭವಾಗಿ H3N2 ಸೋಂಕು ಹರಡುವ ಸಾಧ್ಯತೆ ಇದೆ. 60 ವರ್ಷ ಮೇಲ್ಪಟ್ಟವರು ರೋಗ ಲಕ್ಷಣದ ಕುರಿತು ಎಚ್ಚರ ವಹಿಸಬೇಕು.

H3N2 ಲಕ್ಷಣಗಳು ಏನು?

ದೀರ್ಘಕಾಲದ ಕೆಮ್ಮು, ವಾಕರಿಕೆ, ವಾಂತಿ, ಗಂಟಲು ನೋವು ಹಾಗೂ ಸ್ನಾಯು ಸೆಳೆತ ಕಂಡು ಬರುತ್ತದೆ.

ಇದನ್ನೂ ಓದಿ: Family Dispute: ಕಾಟ ಕೊಡ್ತಾಳೆ ನನ್ನ ಹೆಂಡ್ತಿ, ಊಟ ಕೊಡಲ್ಲ ಮಾರಾಯ್ತಿ; ಅವಳು ಏಳೋದೂ ಲೇಟು: ಇದು ಗಂಡನ ಕಂಪ್ಲೇಂಟು

ಸುರಕ್ಷತೆ ಹೇಗಿರಬೇಕು?

ಆಗಾಗ ಕೈಗಳನ್ನು ತೊಳೆಯಬೇಕು, ಮಾಸ್ಕ್ ಧರಿಸಿ, ಜನಸಂದಣಿ ಹೆಚ್ಚಿರುವ ಪ್ರದೇಶಗಳಲ್ಲಿ ಓಡಾಟ ಬೇಡ, ಪದೇಪದೆ ಮೂಗು, ಬಾಯಿ ಮುಟ್ಟಬೇಡಿ, ನೀರನ್ನು ಜಾಸ್ತಿ ಸೇವಿಸಿ, ಜ್ವರ, ಮೈ-ಕೈ ನೋವು ಇದ್ದರೆ ನಿರ್ಲಕ್ಷ್ಯ ಮಾಡದೇ ವೈದ್ಯರ ಬಳಿ ತಪಾಸಣೆ ಮಾಡಿಸಿ.

ರಾಜ್ಯದ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Mango For Diabetes: ಮಧುಮೇಹಿಗಳೂ ಮಾವಿನಹಣ್ಣಿನ ರುಚಿ ಸವಿಯಬಹುದೇ? ಇಲ್ಲಿದೆ ಉತ್ತರ!

ಸಾಕಷ್ಟು ವಿಟಮಿನ್‌ ಸಿ, ವಿಟಮಿನ್‌ ಎ, ವಿಟಮಿನ್‌ ಬಿ6, ವಿಟಮಿನ್‌ ಕೆ ಸೇರಿದಂತೆ ಖನಿಜಾಂಶಗಳಾದ ತಾಮ್ರ, ಫೋಲೇಟ್‌, ಮೆಗ್ನೀಶಿಯಂ, ಪೊಟಾಶಿಯಂ ಇತ್ಯಾದಿಗಳನ್ನೂ ಹೊಂದಿರುವ ಹಣ್ಣು ಮಾವಿನಹಣ್ಣು. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ರಕ್ತದೊತ್ತಡದ ಸಮತೋಲನಕ್ಕೂ ಸಹಾಯ ಮಾಡುವ ಈ ಹಣ್ಣಿನಿಂದ ಸಾಕಷ್ಟು ಆರೋಗ್ಯಕರ ಲಾಭಗಳಿವೆ. ಆದರೆ, ಸಾಕಷ್ಟು ಸಕ್ಕರೆಯ ಅಂಶ ಇದರಲ್ಲಿ ಇರುವುದರಿಂದ ಮಧುಮೇಹಿಗಳು ಮಾವಿನಹಣ್ಣಿನಿಂದ (Mango For Diabetes) ದೂರವಿರಬೇಕೇ ಎಂಬುದು ಪ್ರಶ್ನೆ.

VISTARANEWS.COM


on

Mango For Diabetes
Koo

ಹೇಳಿ ಕೇಳಿ ಬೇಸಿಗೆ ಕಾಲ. ಬೇಸಿಗೆ ಬಂತೆಂದರೆ ಎಲ್ಲರೂ ಖುಷಿ ಪಡುವುದು ಹಣ್ಣುಗಳ ರಾಜ ಮಾವಿನ ಹಣ್ಣಿನ (Mango For Diabetes) ಆಗಮನಕ್ಕೆ. ಬೇಸಿಗೆಯ ಬರವಿಗಾಗಿ ಜಾತಕ ಪಕ್ಷಿಯಂತೆ ಕಾದು ಕೂರುವವರ ಹಿಂದಿನ ಆಸಕ್ತಿಯ ಕಾರಣಗಳಲ್ಲಿ ಪ್ರಮುಖವಾದದ್ದು ಇದೇ. ಮಾವಿನ ಹಣ್ಣಿನ ಸುಗ್ಗಿಯ ಕಾಲ. ನಾನಾ ಬಗೆಯ, ರುಚಿರುಚಿಯಾದ, ಅಮೃತದಂತಹ ಮಾವಿನ ಹಣ್ಣಿನ ರುಚಿಗೆ, ಅದರ ಘಮಕ್ಕೆ ಮನಸೋಲದವರು ಯಾರು ಹೇಳಿ! ಸಾಕಷ್ಟು ವಿಟಮಿನ್‌ ಸಿ, ವಿಟಮಿನ್‌ ಎ, ವಿಟಮಿನ್‌ ಬಿ6, ವಿಟಮಿನ್‌ ಕೆ ಸೇರಿದಂತೆ ಖನಿಜಾಂಶಗಳಾದ ತಾಮ್ರ, ಫೋಲೇಟ್‌, ಮೆಗ್ನೀಶಿಯಂ, ಪೊಟಾಶಿಯಂ ಇತ್ಯಾದಿಗಳನ್ನೂ ಹೊಂದಿರುವ ಹಣ್ಣು ಮಾವಿನಹಣ್ಣು. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ರಕ್ತದೊತ್ತಡದ ಸಮತೋಲನಕ್ಕೂ ಸಹಾಯ ಮಾಡುವ ಈ ಹಣ್ಣಿನಿಂದ ಸಾಕಷ್ಟು ಆರೋಗ್ಯಕರ ಲಾಭಗಳಿವೆ. ಆದರೆ, ಈ ಹಣ್ಣಿನ ಬಗ್ಗೆ ಇರುವ ಒಂದೇ ದೂರೆಂದರೆ, ಸಾಕಷ್ಟು ಸಕ್ಕರೆಯ ಅಂಶ ಇದರಲ್ಲಿ ಇರುವುದರಿಂದ ಮಧುಮೇಹಿಗಳು ಮಾವಿನಹಣ್ಣಿನಿಂದ ದೂರವಿರಬೇಕು ಎಂಬ ಸತ್ಯ.
ಹೌದು. ಮಧುಮೇಹಿಗಳಿಗೆ ಮಾವಿನಹಣ್ಣು ಎಷ್ಟೇ ಪ್ರಿಯವೇ ಆಗಿದ್ದರೂ, ವೈದ್ಯರು ಹೇಳುವ ಮಾತು ಎಂದರೆ, ಮಾವಿನಹಣ್ಣು ಸೇರಿದಂತೆ ಕೆಲವು ಹೆಚ್ಚು ಸಕ್ಕರೆ, ಕ್ಯಾಲರಿ ಇರುವ ಹಣ್ಣುಗಳಿಂದ ದೂರವಿರಿ ಎಂಬುದು. ಆದರೆ ಮಾರುಕಟ್ಟೆಯಲ್ಲಿ ಬಿದ್ದಿರುವ ಮಾವಿನ ಹಣ್ಣಿನ ರಾಶಿಯನ್ನು ನೋಡಿದರೆ ದೂರವಿರಲು ಯಾರಿಗೆ ತಾನೇ ಸಾಧ್ಯವಾಗುತ್ತದೆ ಹೇಳಿ. ಬೇಸಿಗೆಯಲ್ಲಿ ಮಾವಿನ ಹಣ್ಣಿನಿಂದ ದೂರವಿರಲು ತಪಸ್ಸನ್ನೇ ಮಾಡಬೇಕಾಗುತ್ತದೆ ಎಂದು ಮಧುಮೇಹಿಗಳು ನಿರಾಶರಾಗಬೇಕಿಲ್ಲ. ಮಾವಿನಹಣ್ಣನ್ನು ಅವರೂ ತಿನ್ನಬಹುದು. ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರದಂತೆ ಮಾವಿನಹಣ್ಣನ್ನು ಹೇಗೆ ತಿನ್ನಬಹುದು (Mango For Diabetes) ಎಂಬುದನ್ನು ನೋಡೋಣ ಬನ್ನಿ.

National Mango Day

ಹೇಗೆ ಸವಿಯಬೇಕು ಅನ್ನೋದು ಮುಖ್ಯ

ನಿಮಗೆ ಮಾವಿನಹಣ್ಣು ತಿನ್ನಲಾಗುತ್ತಿಲ್ಲ ಎಂಬ ಬೇಸರ ಬೇಡ. ನೀವೂ ಎಲ್ಲರಂತೆ ಬೇಸಿಗೆಯಲ್ಲಿ ಮಾವನ್ನು ಸವಿಯಬಹುದು. ಆದರೆ, ಹೇಗೆ ಸವಿಯಬೇಕು ಎಂಬುದನ್ನು ಮಾತ್ರ ಕೊಂಚ ಎಚ್ಚರಿಕೆಯಿಂದ ತಿಳಿದುಕೊಳ್ಳಬೇಕು. ತಜ್ವರ ಪ್ರಕಾರ ಸಾಮಾನ್ಯ ಗಾತ್ರದ ಒಂದು ಮಾವಿನ ಹಣ್ಣನ್ನು ದಿನಕ್ಕೆ ಒಂದು ತಿನ್ನಬಹುದು. ಸಾಮಾನ್ಯ ಗಾತ್ರದ ಒಂದು ಮಾವಿನಹಣ್ಣಿನಲ್ಲಿ ೫೦ ಗ್ರಾಂ ಕಾರ್ಬೋಹೈಡ್ರೇಟ್‌ ಇರುತ್ತದೆ. ಹಾಗಾಗಿ ದಿನಕ್ಕೆ ಅರ್ಧ ಅಥವಾ ಒಂದು ಮಾವಿನ ಹಣ್ಣಿಗಿಂತ ಹೆಚ್ಚು ತಿನ್ನುವ ಹಠಕ್ಕೆ ಬೀಳಬೇಡಿ.

ಬೇರೆ ಆಹಾರದ ಜತೆ ತಿನ್ನಿ

ಮಾವಿನ ಹಣ್ಣನ್ನು ಬೇರೆ ಆಹಾರದ ಜೊತೆಗೆ ತಿನ್ನಿ. ಒಳ್ಳೆಯ ಕೊಬ್ಬಿರುವ, ನಾರಿನಂಶವಿರುವ ಆಹಾರವನ್ನು ಮಾವಿನ ಹಣ್ಣಿನ ಜೊತೆಜೊತೆಗೇ ತಿನ್ನುವುದು ಒಳ್ಳೆಯದು. ಬಾದಾಮಿ, ವಾಲ್ನಟ್‌, ನಿಂಬೆ ಹಣ್ಣು ಹಿಂಡಿದ ನೀರಿನಲ್ಲಿ ನೆನೆಸಿದ ಚಿಯಾ ಬೀಜಗಳು ಇತ್ಯಾದಿಗಳನ್ನು ಮಾವಿನ ಹಣ್ಣು ತಿನ್ನುವಾಗಲೇ ತಿಂದರೆ ಮಾವಿನ ಹಣ್ಣಿನಿಂದಾಗಿ ನಿಮ್ಮ ದೇಹದ ಗ್ಲುಕೋಸ್‌ ಒಡನೆಯೇ ಏರುವುದಿಲ್ಲ.

eating mango

ತಿನ್ನುವ ಸಮಯ ಮುಖ್ಯ

ಮಾವಿನ ಹಣ್ಣನ್ನು ತಿನ್ನುವ ಸಮಯ ಬಹಳ ಮುಖ್ಯ. ರಾತ್ರಿ ತಿನ್ನಬೇಡಿ. ನೀವು ಅತ್ಯಂತ ಚುರುಕಾಗಿರುವ, ಕ್ರಿಯಾಶೀಲರಾಗಿರುವ ಸಮಯದಲ್ಲಿ ಮಾವಿನಹಣ್ಣು ಸೇವಿಸಿ. ನೀವು ಹೆಚ್ಚು ಓಡಾಡಿಕೊಂಡಿರುವ, ವಾಕಿಂಗ್‌ ಮಾಡುವ ಮೊದಲು, ವರ್ಕೌಟ್‌ ಮಾಡುವ ಮೊದಲು, ಅಥವಾ ಯಾವುದಾದರೂ ದೈಹಿಕವಾದ ಕೆಲಸ ಮಾಡುವ, ಶ್ರಮ ವಹಿಸುವ ಮೊದಲು ಮಾವು ತಿನ್ನಿ.

ಇದನ್ನೂ ಓದಿ: Cooking In An Iron Pot: ಕಬ್ಬಿಣದ ಪಾತ್ರೆಯಲ್ಲಿ ಅಡುಗೆ ಮಾಡುವುದು ಒಳ್ಳೆಯದು! ಯಾಕೆ ಗೊತ್ತೇ?

ತಿನ್ನುವ ಪ್ರಮಾಣ ಮಹತ್ವದ್ದು

ನೀವು ಮಾವಿನಹಣ್ಣನ್ನು ಹೇಗೆ ತಿನ್ನುತ್ತೀರಿ ಎಂಬುದೂ ಮುಖ್ಯ. ಮಾವಿನಹಣ್ಣನ್ನು ಹಾಗೆಯೇ, ತಿಂದರೆ ಅತ್ಯಂತ ಒಳ್ಳೆಯದು. ಬದಲಾಗಿ ಮಾವಿನ ಹಣ್ಣಿನ ಶೇಕ್‌ ಅಥವಾ ಇನ್ನೂ ಏನೇನೋ ಸಿಹಿತಿನಿಸು, ಡೆಸರ್ಟ್‌ ಅಥವಾ ಖಾದ್ಯಗಳ ರೂಪದಲ್ಲಿ ತಿನ್ನುವುದರಿಂದ ಪರಿಣಾಮ ಹೆಚ್ಚೇ ಆಗಬಹುದು. ಮಾವಿನಹಣ್ಣನ್ನು ಹಾಗೆಯೇ ತಿನ್ನುವುದರಿಂದ ಪರಿಣಾಮ ಕಡಿಮೆ. ಮಧುಮೇಹಿಗಳು ಹಣ್ಣು ತಿನ್ನಲೇಬಾರದು ಎಂಬ ನಿಯಮವಿಲ್ಲ. ಹೇಗೆ, ಯಾವಾಗ ಮತ್ತು ಎಷ್ಟು ತಿನ್ನುತ್ತಾರೆ ಎಂಬುದು ಮುಖ್ಯ. ಸರಿಯಾದ ಸಮಯದಲ್ಲಿ ಸರಿಯಾದ ಪ್ರಮಾಣದಲ್ಲಿ ಹಣ್ಣು ತಿಂದರೆ ದೇಹಕ್ಕೆ ಒಳ್ಳೆಯದೇ ಆಗುತ್ತದೆ ಎಂಬುದು ನೆನಪಿರಲಿ.

Continue Reading

ಆರೋಗ್ಯ

Cooking In An Iron Pot: ಕಬ್ಬಿಣದ ಪಾತ್ರೆಯಲ್ಲಿ ಅಡುಗೆ ಮಾಡುವುದು ಒಳ್ಳೆಯದು! ಯಾಕೆ ಗೊತ್ತೇ?

ಮಣ್ಣಿನ ಮಡಕೆಯಿಂದ ಹಿಡಿದು ಗಾಜಿನ ಪಾತ್ರೆಗಳವರೆಗೆ ತರಹೇವಾರಿ ಪಾತ್ರೆಗಳು ಆಕರ್ಷಕ ವಿನ್ಯಾಸಗಳಲ್ಲಿ ಇಂದು ಲಭ್ಯವಿವೆ. ಅಡುಗೆ ಮನೆಯ ಸೌಂದರ್ಯವನ್ನು ಹೆಚ್ಚಿಸುವಲ್ಲಿ ನಾವು ಆಯ್ಕೆ ಮಾಡುವ ಪಾತ್ರೆಗಳ ಪಾಲೂ ಇದೆ ಎಂಬುದು ನಿಜ. ಆದರೂ, ಪ್ರತಿ ಪಾತ್ರೆಗಳ ಆಯ್ಕೆಯ ಹಿಂದೆ ನಮ್ಮ ಆರೋಗ್ಯದ ರಹಸ್ಯವೂ ಅಡಗಿದೆ. ನಮ್ಮ ಹಳೆಯ ತಲೆಮಾರಿನ ಹಿರಿಯರಿಂದ ಪಾತ್ರೆಗಳ ಬಳಕೆಯ ಬಗ್ಗೆ ನಮಗೆ ದಕ್ಕಿದ ವಿಚಾರದ ಹಿಂದೆ (Cooking in an iron pot) ವಿಜ್ಞಾನವೂ ಇದೆ.

VISTARANEWS.COM


on

Cooking In An Iron Pot
Koo

ಭಾರತೀಯ ಅಡುಗೆ ಮನೆಗಳ ಪಾತ್ರೆಗಳಲ್ಲೇ ಒಂದು ಸೊಗಸಿದೆ. ನಾವು ನಿತ್ಯವೂ ಅಡುಗೆಗೆ ಬಳಸುವ ಪಾತ್ರೆಗಳಲ್ಲಿ ಪ್ರತಿಯೊಬ್ಬರ ಆಸಕ್ತಿ, ಅಭಿರುಚಿಗಳನ್ನೂ ಗುರುತಿಸಬಹುದು. ಮಣ್ಣಿನ ಮಡಕೆಯಿಂದ ಹಿಡಿದು ಗಾಜಿನ ಪಾತ್ರೆಗಳವರೆಗೆ ತರಹೇವಾರಿ ಪಾತ್ರೆಗಳು ಆಕರ್ಷಕ ವಿನ್ಯಾಸಗಳಲ್ಲಿ ಇಂದು ಲಭ್ಯವಿವೆ. ಅಡುಗೆ ಮನೆಯ ಸೌಂದರ್ಯವನ್ನು ಹೆಚ್ಚಿಸುವಲ್ಲಿ ನಾವು ಆಯ್ಕೆ ಮಾಡುವ ಪಾತ್ರೆಗಳ ಪಾಲೂ ಇದೆ ಎಂಬುದು ನಿಜ. ಆದರೂ, ಪ್ರತಿ ಪಾತ್ರೆಗಳ ಆಯ್ಕೆಯ ಹಿಂದೆ ನಮ್ಮ ಆರೋಗ್ಯದ ರಹಸ್ಯವೂ ಅಡಗಿದೆ. ನಮ್ಮ ಹಳೆಯ ತಲೆಮಾರಿನ ಹಿರಿಯರಿಂದ ಪಾತ್ರೆಗಳ ಬಳಕೆಯ ಬಗ್ಗೆ ನಮಗೆ ದಕ್ಕಿದ ವಿಚಾರದ ಹಿಂದೆ ವಿಜ್ಞಾನವೂ ಇದೆ. ವೈದ್ಯರೂ, ಸಂಶೋಧನೆಗಳೂ ಕೂಡಾ ಇವನ್ನು ಪುಷ್ಟೀಕರಿಸಿವೆ. ಮಣ್ಣಿನ ಪಾತ್ರೆಗಳು, ಕಬ್ಬಿಣದ ಪಾತ್ರೆಗಳ ಬಳಕೆ, ಎಲ್ಲೆಲ್ಲಿ ತಾಮ್ರದ ಪಾತ್ರೆಗಳನ್ನು ಬಳಸಬಹುದು ಇತ್ಯಾದಿ ಮಾಹಿತಿಗಳನ್ನು ನಾವು ಗ್ರಹಿಸಿಕೊಂಡು ಅಳವಡಿಸುವುದರಿಂದ ಸಾಕಷ್ಟು ಆರೋಗ್ಯದ (Cooking in an iron pot) ಲಾಭಗಳನ್ನೂ ಪಡೆಯಬಹುದು. ಹೊಸ ನಮೂನೆಯ ಆಧುನಿಕ ಪಾತ್ರೆಗಳ ಹಾವಳಿಯಿಂದ ತಲೆತಲಾಂತರಗಳಿಂದ ಬಂದ ಕಬ್ಬಿಣದ ಪಾತ್ರೆಗಳ ಬಳಕೆ ಇತ್ತೀಚಿನ ವರ್ಷಗಳಲ್ಲಿ ಕಡಿಮೆಯಾಗಿತ್ತು. ಆದರೆ, ಈಗ ಮತ್ತೆ ಕಬ್ಬಿಣದ ಪಾತ್ರೆಯ ಪ್ರಯೋಜನಗಳ ಬಗ್ಗೆ ಜನರಲ್ಲಿ ನಿಧಾನವಾಗಿ ಅರಿವು ಮೂಡುತ್ತಿರುವುದರಿಂದ ಕಬ್ಬಿಣ ಮತ್ತೆ ಚಾಲ್ತಿಯಲ್ಲಿ ಬರುತ್ತಿದೆ. ಬನ್ನಿ, ಕಬ್ಬಿಣದ ಪಾತ್ರೆಯನ್ನು ಬಳಸುವುದರಿಂದ ಯಾವೆಲ್ಲ ಪ್ರಯೋಜನಗಳಿವೆ ಎಂಬುದನ್ನು ನೋಡೋಣ.

Closed Caldron Pot

ಹೆಚ್ಚು ಬೇಯಿಸಲು ಉತ್ತಮ

ಕಬ್ಬಿಣದ ಪಾತ್ರೆಯಲ್ಲಿ ಹೆಚ್ಚು ಉಷ್ಣತೆಯ ಹೀಟಿಂಗ್‌ ಪಾಯಿಂಟ್‌ ತಲುಪಬಹುದು. ಆಹಾರವನ್ನು ರೋಸ್ಟ್‌ ಮಾಡಲು, ಗ್ರಿಲ್‌ ಮಾಡಲು ಹಾಗೂ ಬೇಯಿಸಲು ಕಬ್ಬಿಣದ ಪಾತ್ರೆ ಅತ್ಯುತ್ತಮ. ಆದರೆ, ಕಬ್ಬಿಣದ ಪಾತ್ರೆಯಲ್ಲಿ ಎಲ್ಲ ಭಾಗದಲ್ಲೂ ಒಂದೇ ಸಮನಾದ ಉಷ್ಣತೆ ಹಂಚಿ ಹೋಗುವುದಿಲ್ಲ. ಹಾಗಾಗಿ ಈ ಕಬ್ಬಿಣದ ಪಾತ್ರೆಯಲ್ಲಿ ಅಡುಗೆ ಮಾಡುವ ಮೊದಲೇ ಕೊಂಚ ಹೊತ್ತು ಬಿಸಿಗೆ ಇಡಬೇಕಾಗುತ್ತದೆ. ಆದರೆ ಎಷ್ಟು ಬಿಸಿಯಾದರೂ ನಾನ್‌ಸ್ಟಿಕ್‌ನಂತೆ ಇದರಲ್ಲಿ ರಾಸಾಯನಿಕ ಬಿಡುಗಡೆಯಾಗುವ ಭಯವಿಲ್ಲ.

ತುಕ್ಕು ಹಿಡಿಯಲು ಬಿಡಬಾರದು

ಕಬ್ಬಿಣದ ಪಾತ್ರೆಯ ಬಳಕೆ ಕಷ್ಟ ಎಂಬ ಭಾವನೆ ಹಲವರಲ್ಲಿದೆ. ಆದರೆ ಅದು ಅಷ್ಟು ಕಷ್ಟದ ವಿಚಾರವೇನಲ್ಲ. ಕಬ್ಬಿಣದ ಪಾತ್ರೆ ಕೊಂಚ ಒರಟು ಮೇಲ್ಮೈಯನ್ನು ಹೊಂದಿರುವುದರಿಂದ ಅದನ್ನು ಸದಾ ತೊಳೆದು ಆರಲು ಬಿಟ್ಟು ಎಣ್ಣೆ ಹಚ್ಚಿಟ್ಟರೆ ಸಾಕಾಗುತ್ತದೆ. ತುಕ್ಕು ಹಿಡಿಯಲು ಬಿಡಬಾರದು. ಹಿಡಿದರೆ ಅದನ್ನು ತೊಳೆದು ಮತ್ತೆ ಉಪಯೋಗಿಸಲು ನೆನಪಿಡಿ. ತುಕ್ಕಿನ ಮೇಲೆಯೇ ಹಾಗೆಯೇ ಅಡುಗೆ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲ.

Cast Iron Pot Of Chili

ಸ್ವಚ್ಛಗೊಳಿಸುವುದು ಸುಲಭ

ಹಾಗೆ ನೋಡಿದರೆ ಕಬ್ಬಿಣದ ತವಾ ಅಥವಾ ಪಾತ್ರೆಯನ್ನು ಸ್ವಚ್ಛಗೊಳಿಸುವುದು ಸುಲಭ. ಇದಕ್ಕೆ ಅತ್ಯಂತ ಜಾಗರೂಕತೆಯ ಕಾಳಜಿ ಅಗತ್ಯವಿಲ್ಲ. ನಾನ್‌ಸ್ಟಿಕ್‌ ಪಾತ್ರೆಯಂತೆ ಜಾಗರೂಕತೆಯ ಅಗತ್ಯವಿಲ್ಲ. ಯಾವುದೇ ಡಿಶ್‌ವಾಶ್‌ ಜೆಲ್ ಮೂಲಕ ಸ್ವಚ್ಛಗೊಳಿಸಬಹುದು. ತಿಕ್ಕಿ ತೊಳೆಯಬಹುದು. ಆದರೆ ತಿಕ್ಕಿ ತೊಳೆದ ಮೇಲೆ ಒಣಗಿಸುವಾಗ ಸ್ವಲ್ಪ ಕಾಳಜಿ ಬೇಕು. ಎಣ್ಣೆಯನ್ನು ಹಚ್ಚಿ ಇಡುವ ಕೆಲಸ ಮಾತ್ರ ಈ ಪಾತ್ರೆಯ ಕಾವಲಿಯಲ್ಲಿ ಮಾಡಬೇಕಾದ ಹೆಚ್ಚುವರಿ ಕೆಲಸವಾಗಿದೆ.

ಲೋಹದ ಯಾವುದೇ ಸೌಟು ಬಳಸಬಹುದು

ನಾನ್‌ಸ್ಟಿಕ್‌ ಪಾತ್ರೆಯಂತೆ ಕಬ್ಬಿಣದ ಪಾತ್ರೆಗೆ ಮರದ ಸೌಟನ್ನು ಬಳಸಬೇಕಾಗಿಲ್ಲ. ಲೋಹದ ಯಾವುದೇ ಬಗೆಯ ಸೌಟನ್ನೂ ಬಳಸಬಹುದು. ಅದರ ಮೂಲಕ ಪಾತ್ರೆಗೆ ಯಾವುದೇ ಹಾನಿಯಾಗದು.

Iron Pot

ಆರೋಗ್ಯ ದೃಷ್ಟಿಯಿಂದ ಒಳ್ಳೆಯದು

ಕಬ್ಬಿಣದ ಪಾತ್ರೆಯ ಬಳಕೆ ಆರೋಗ್ಯದ ದೃಷ್ಟಿಯಿಂದಲೂ ಒಳ್ಳೆಯದೇ. ನಮ್ಮ ದೇಹಕ್ಕೆ ಕಬ್ಬಿಣಾಂಶವೂ ಇದರಿಂದ ದೊರೆಯುತ್ತದೆ. ರಕ್ತಹೀನತೆಯಂತಹ ಸಮಸ್ಯೆ ಇದರಿಂದ ಬರದು. ಕಬ್ಬಿಣದ ಪಾತ್ರೆಯಲ್ಲಿ ಅಡುಗೆ ಮಾಡುವಾಗ ಕಬ್ಬಿಣದ ಸ್ವಲ್ಪ ಅಂಶ ಆಹಾರಕ್ಕೆ ಸೇರುವುದರಿಂದ ದೇಹಕ್ಕೆ ಕಬ್ಬಿಣಾಂಶವೂ ದೊರೆಯುತ್ತದೆ. ನಮ್ಮ ದೇಹದ ರಕ್ತದಲ್ಲಿನ ಹಿಮೋಗ್ಲೋಬಿನ್‌ನ ಹೆಚ್ಚಳಕ್ಕೆ ಕಬ್ಬಿಣಾಂಶ ಬೇಕೇಬೇಕು. ಹಾಗಾಗಿ ಇದು ಆರೋಗ್ಯಕ್ಕೆ ಪೂರಕ.

ಇದನ್ನೂ ಓದಿ: Clay Pot Cooking: ಮಣ್ಣಿನ ಪಾತ್ರೆಗಳಲ್ಲಿ ಅಡುಗೆ ಮಾಡಲು ಬಯಸಿದ್ದೀರಾ? ಹಾಗಿದ್ದರೆ ಇವಿಷ್ಟು ಸಂಗತಿ ನೆನಪಿರಲಿ!

ಯಾವ ನಿರ್ಬಂಧವೂ ಇಲ್ಲ

ಕಬ್ಬಿಣದ ಪಾತ್ರೆಯಲ್ಲಿ ಅಸಿಡಿಕ್‌ ಅಥವಾ ಆಮ್ಲೀಯ ಗುಣಗಳ ಆಹಾರವನ್ನು ಇಡುವಂತಿಲ್ಲ ಎಂಬ ಯಾವ ನಿರ್ಬಂಧವೂ ಇಲ್ಲ. ಆದರೆ, ಇಂಥ ಅಡುಗೆಯನ್ನು ಬಹಳ ಹೊತ್ತು ಇಟ್ಟುಕೊಂಡು ಕುದಿಸುವಂಥ ಪ್ರಕ್ರಿಯೆ ಮಾಡದೆ ಇರುವುದು ಒಳ್ಳೆಯದು.

Continue Reading

ಆಹಾರ/ಅಡುಗೆ

Which Type Of Roti Is Best: ಯಾರಿಗೆ ಯಾವ ರೊಟ್ಟಿ ಸೂಕ್ತ? ತಿನ್ನುವ ಮೊದಲು ತಿಳಿದುಕೊಂಡಿರಿ!

ಹಲವಾರು ರೀತಿಯ ರೊಟ್ಟಿಗಳು ಆಹಾರವಾಗಿ ಜನಪ್ರಿಯತೆ ಗಳಿಸಿವೆ. ಒಂದೊಂದು ಪ್ರಾಂತ್ಯದಲ್ಲಿ ಒಂದೊಂದು ಧಾನ್ಯ ಪರಂಪರಾಗತ ಆಹಾರವಾಗಿಯೂ ಬಳಕೆಯಲ್ಲಿದೆ. ಆದರೆ ಯಾರಿಗೆ ಯಾವ ರೊಟ್ಟಿ ಒಳ್ಳೆಯದು? ಯಾವ ರೊಟ್ಟಿಯಲ್ಲಿ ಏನೇನು ಸತ್ವಗಳು ದೊರೆಯುತ್ತವೆ? ಇಲ್ಲಿವೆ (Which Type Of Roti Is Best) ವಿವರ.

VISTARANEWS.COM


on

Which Type Of Roti Is Best
Koo

ಭಾರತದಲ್ಲಿ ಎಲ್ಲವೂ ವೈವಿಧ್ಯಮಯ, ಊಟವೂ ಸೇರಿ. ಅನ್ನ ಎಂದರೆ ಎಲ್ಲವೂ ಒಂದೇ ಅಲ್ಲ. ಬಿಳಿಯಕ್ಕಿ, ಕೆಂಪಕ್ಕಿ, ಕುಚ್ಚಲಕ್ಕಿ ಮುಂತಾದ ಹಲವು ರೀತಿಯ ಅಕ್ಕಿಗಳಲ್ಲಿ ಅನ್ನ ಮಾಡಲಾಗುತ್ತದೆ. ರೊಟ್ಟಿ ಎಂದರೆ ಅದರಲ್ಲೂ ಭಿನ್ನತೆಯಿದೆ. ಅಕ್ಕಿರೊಟ್ಟಿ ದಕ್ಷಿಣ ಭಾರತದಲ್ಲಿ ಹೆಚ್ಚು ಪ್ರಚಲಿತ; ಗೋಧಿ ರೊಟ್ಟಿ ಭಾರತದೆಲ್ಲೆಡೆ ಚಾಲ್ತಿಯಲ್ಲಿದೆ; ಜೋಳದ್ದು ಕರ್ನಾಟಕವೂ ಸೇರಿದಂತೆ ಹಲವೆಡೆ ಬಳಕೆಯಲ್ಲಿದೆ; ರಾಗಿ ರೊಟ್ಟಿ ಕರ್ನಾಟಕದಲ್ಲಿ ಹೆಚ್ಚು ಪ್ರಿಯ; ಸಜ್ಜೆ ರೊಟ್ಟಿ ಗುಜರಾತ್‌, ರಾಜಸ್ಥಾನಗಳಲ್ಲಿ ಮುಖ್ಯ ಆಹಾರ; ಪಂಜಾಬ್‌ ಪ್ರಾಂತ್ಯದಲ್ಲಿ ಮೈದಾ ನಾನ್‌ಗಳು ಜನಪ್ರಿಯ. ಆದರೆ ಈ ಎಲ್ಲಾ ರೊಟ್ಟಿಗಳಲ್ಲಿ ತೂಕ ಇಳಿಸುವವರಿಗೆ ಸೂಕ್ತವಾಗಿದ್ದು (Which Type Of Roti Is Best) ಯಾವುದು? ಇತ್ತೀಚಿನ ವರ್ಷಗಳಲ್ಲಿ ಸಿರಿಧಾನ್ಯದ ಬಳಕೆ ಹೆಚ್ಚಿದೆ. ಆರೋಗ್ಯದ ಬಗ್ಗೆ ಕಾಳಜಿಯೂ ಹೆಚ್ಚಿರುವುದರಿಂದ, ಯಾವುದು ಹೆಚ್ಚು ಆರೋಗ್ಯಕರ ಎಂಬ ಚರ್ಚೆಗೆ ಕಾವೇರಿದೆ. ಆಹಾರ ತಜ್ಞರು ಈ ಬಗ್ಗೆ ನಾನಾ ರೀತಿಯ ವಿವರಣೆಗಳನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಲವು ರೀತಿಯ ರೊಟ್ಟಿಗಳ ಸತ್ವ ಮತ್ತು ಕ್ಯಾಲೊರಿಗಳ ವಿವರಗಳನ್ನು ಇಲ್ಲಿ ನೀಡಲಾಗಿದೆ. ಇವೆಲ್ಲವೂ ಆರೋಗ್ಯಕ್ಕೆ ಒಳ್ಳೆಯದೇ ಆದರೂ ಒಂದೊಂದು ಧಾನ್ಯಗಳಿಗೂ ಅದರದ್ದೇ ಆದ ಅನನ್ಯತೆಯಿದೆ. ಹಾಗಾಗಿ ಅವುಗಳ ಸತ್ವಗಳು ಭಿನ್ನವಾಗುತ್ತವೆ.

Wheat Roti

ಗೋಧಿ ರೊಟ್ಟಿ

ಒಂದು ಮಧ್ಯಮ ಗಾತ್ರದ ಗೋಧಿ ರೊಟ್ಟಿಯಲ್ಲಿ 70-80 ಕ್ಯಾಲರಿ ಶಕ್ತಿ ದೊರೆಯುತ್ತದೆ. ಇದರಲ್ಲಿ ನಾರು, ಪಿಷ್ಟ, ಅಲ್ಪ ಪ್ರಮಾಣದ ಪ್ರೊಟೀನ್‌ ಮತ್ತು ಕೊಬ್ಬು, ಮ್ಯಾಂಗನೀಸ್‌, ಫಾಸ್ಫರಸ್‌ನಂಥ ಖನಿಜಗಳು, ಹಲವು ರೀತಿಯ ಬಿ ವಿಟಮಿನ್‌ಗಳು ಇದರಲ್ಲಿ ವಿಫುಲವಾಗಿವೆ. ಈ ಧಾನ್ಯ ದೊರೆಯುವುದು, ಇದರಲ್ಲಿ ಆಹಾರ ತಯಾರಿಸುವುದು ಕಷ್ವವಲ್ಲ ಮತ್ತು ಇದರ ರುಚಿಯೂ ಇಷ್ಟವಾಗುವಂಥದ್ದು.

Millet Roti

ರಾಗಿ ರೊಟ್ಟಿ

ಒಂದು ರಾಗಿ ರೊಟ್ಟಿಯಲ್ಲಿ 80-90 ಕ್ಯಾಲರಿ ಶಕ್ತಿ ದೊರೆಯುತ್ತದೆ. ಜೊತೆಗೆ, ಕ್ಯಾಲ್ಶಿಯಂ, ಕಬ್ಬಿಣ, ನಾರು, ಪ್ರೊಟೀನ್‌, ಪಿಷ್ಟ, ಉತ್ಕರ್ಷಣ ನಿರೋಧಕಗಳಿಂದ ಭರಿತವಾಗಿದೆ. ಹಲವು ರೀತಿಯ ಖನಿಜಾಂಶಗಳು ಇದರಲ್ಲಿವೆ. ಮೂಳೆಗಳ ಆರೋಗ್ಯಕ್ಕೆ ಇದು ಸೂಕ್ತವಾದದ್ದು ಮಾತ್ರವಲ್ಲ, ಮಧುಮೇಹಿಗಳಿಗೆ ಇದು ಒಳ್ಳೆಯ ಆಹಾರವಾಗಿದ್ದು, ರಕ್ತದಲ್ಲಿ ಸಕ್ಕರೆಯಂಶ ಏರದಂತೆ ಕಾಪಾಡಲು ನೆರವಾಗುತ್ತದೆ. ರಾಗಿ ತಿಂದವ ನಿರೋಗಿ ಎಂಬ ಮಾತು ವ್ಯಾಪಕ ಮನ್ನಣೆ ಪಡೆದಿದೆ.

jolada Roti

ಜೋಳದ ರೊಟ್ಟಿ

ಒಂದು ದೊಡ್ಡ ಜೋಳದ ರೊಟ್ಟಿಯಲ್ಲಿ 50-60 ಕ್ಯಾಲರಿ ಶಕ್ತಿ ದೊರೆಯುತ್ತದೆ. ಜೋಳ ತಿಂದವ ತೋಳದಂತಿರಬಹುದು ಎಂಬುದು ಜನಪ್ರಿಯ ಗಾದೆ. ಗ್ಲೂಟೆನ್‌ ರಹಿತವಾದ ಆಹಾರ ಇದಾಗಿದ್ದು, ಮಧುಮೇಹಿಗಳಿಗೆ ಸೂಕ್ತವಾದ ಆಹಾರವಿದು. ಇದರಲ್ಲಿ ಪ್ರೊಟೀನ್‌, ಕೊಬ್ಬು, ನಾರು, ಪಿಷ್ಟ, ಕ್ಯಾಲ್ಶಿಯಂ, ರಂಜಕ, ಕಬ್ಬಿಣ ಮುಂತಾದ ಸೂಕ್ಷ್ಮ ಪೋಷಕಾಂಶಗಳು ಬಹಳಷ್ಟಿವೆ.

Multigrain Roti

ಬಹುಧಾನ್ಯಗಳ ರೊಟ್ಟಿ

ಇದರಲ್ಲಿ ಹಲವಾರು ರೀತಿಯ ಧಾನ್ಯಗಳನ್ನು ಮಿಶ್ರ ಮಾಡಲಾಗುತ್ತದೆ. ಅಂದಾಜಿಗೆ ಹೇಳುವುದಾದರೆ, ಒಂದು ರೊಟ್ಟಿಯಲ್ಲಿ 80-100 ಕ್ಯಾಲರಿ ಶಕ್ತಿ ದೊರೆಯಬಹುದು. ಆದರೆ ಯಾವ್ಯಾವ ಧಾನ್ಯಗಳನ್ನು ಎಷ್ಟು ಪ್ರಮಾಣದಲ್ಲಿ ಮಿಶ್ರ ಮಾಡಲಾಗುತ್ತದೆ ಎನ್ನುವುದರ ಮೇಲೆ, ಇದರ ಕ್ಯಾಲರಿಗಳು ನಿರ್ಧಾರವಾಗುತ್ತದೆ. ಇದರಿಂದ ಹಲವು ರೀತಿಯ ಧಾನ್ಯಗಳು ಮತ್ತು ಸಿರಿಧಾನ್ಯಗಳು ಒಟ್ಟಿಗೇ ದೇಹಕ್ಕೆ ದೊರೆಯುವುದಕ್ಕೆ ಸಾಧ್ಯ. ಇದರಲ್ಲಿ ಹಲವು ರೀತಿಯ ವಿಟಮಿನ್‌ ಮತ್ತು ಖನಿಜಗಳು, ನಾರು ಹೇರಳವಾಗಿ ದೊರೆಯುತ್ತದೆ.

ಇದನ್ನೂ ಓದಿ: Health Benefits Of Tofu: ಪನೀರ್‌ನಂತೆ ಕಾಣುವ ಈ ಆಹಾರದ ಬಗ್ಗೆ ನಿಮಗೆ ಗೊತ್ತೆ?

ಯಾವುದು ಸೂಕ್ತ?

ಗ್ಲೂಟೆನ್‌ ಮುಕ್ತ ಆಹಾರ ಬೇಕೆಂದರೆ ರಾಗಿ ಮತ್ತು ಜೋಳದ ರೊಟ್ಟಿಗಳು ಸೂಕ್ತ. ಬಹುಧಾನ್ಯಗಳಲ್ಲಿ ಗೋಧಿ ಮಿಶ್ರವಾಗಿರುವ ಸಾಧ್ಯತೆ ಹೆಚ್ಚಾಗಿರುವುದರಿಂದ ಇದನ್ನು ಬಿಡುವುದು ಒಳಿತು. ಮಧುಮೇಹ ನಿಯಂತ್ರಣಕ್ಕೆ ಪ್ರಯತ್ನಿಸುತ್ತಿದ್ದರೆ ರಾಗಿ ಮತ್ತು ಜೋಳದ ರೊಟ್ಟಿಗಳು ಒಳ್ಳೆಯದು. ಹೆಚ್ಚು ಸಮತೋಲಿತ ಆಹಾರದ ಬಗ್ಗೆ ಗಮನ ಹೊಂದಿದ್ದರೆ ಬಹುಧಾನ್ಯಗಳ ರೊಟ್ಟಿ ಒಳ್ಳೆಯ ಆಯ್ಕೆ. ತೂಕ ಇಳಿಸುವುದು ಮುಖ್ಯ ಉದ್ದೇಶವಾಗಿದ್ದರೆ ಜೋಳದ ರೊಟ್ಟಿ ಸೂಕ್ತವಾದದ್ದು.

Continue Reading

ಕರ್ನಾಟಕ

Fortis Hospital: ವಿಶ್ವದಲ್ಲೇ ಮೊದಲ ಬಾರಿಗೆ 3 ವಿಭಿನ್ನ ಕಾಯಿಲೆಗೆ ಏಕಕಾಲದಲ್ಲೇ ಯಶಸ್ವಿ ಶಸ್ತ್ರಚಿಕಿತ್ಸೆ

Fortis Hospital: ಹೃದ್ರೋಗ ಸಮಸ್ಯೆ, ಕರುಳಿನ ಕ್ಯಾನ್ಸರ್‌ ಹಾಗೂ ಪಿತ್ತಕೋಶದಲ್ಲಿ ಕಲ್ಲು ಹೊಂದಿದ್ದ 44 ವರ್ಷದ ವ್ಯಕ್ತಿಗೆ ಏಕಕಾಲದಲ್ಲೇ ಮೂರು ಶಸ್ತ್ರಚಿಕಿತ್ಸೆಯನ್ನು ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನಡೆಸಿದೆ. ಫೋರ್ಟಿಸ್ ಆಸ್ಪತ್ರೆಯ ಹೃದಯ ತಜ್ಞ ಡಾ. ವಿವೇಕ್ ಜವಳಿ ಮತ್ತು ಮಿನಿಮಲ್ ಆಕ್ಸೆಸ್ ಮತ್ತು ಬಾರಿಯಾಟ್ರಿಕ್ ಸರ್ಜರಿ ನಿರ್ದೇಶಕ ಡಾ. ಜಿ. ಐ. ಗಣೇಶ್ ಶೆಣೈ ಅವರ ವೈದ್ಯರ ತಂಡ ಈ ಚಿಕಿತ್ಸೆಯನ್ನು ನೆರವೇರಿಸಿದೆ

VISTARANEWS.COM


on

Fortis Hospital doctors team performed complex surgery for three different diseases simultaneously
Koo

ಬೆಂಗಳೂರು: ವಿಶ್ವದಲ್ಲೇ ಮೊದಲ ಬಾರಿಗೆ ಏಕಕಾಲದಲ್ಲೇ ಒಬ್ಬ ವ್ಯಕ್ತಿಗೆ ಮೂರು ವಿಭಿನ್ನ ಕಾಯಿಲೆಗಳಿಗೆ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ಫೋರ್ಟಿಸ್‌ ಆಸ್ಪತ್ರೆ (Fortis Hospital) ವೈದ್ಯಕೀಯ ತಂಡ ಯಶಸ್ವಿಯಾಗಿ ನಡೆಸಿದೆ.

ನಗರದ ಕನ್ನಿಂಗ್‌ಹ್ಯಾಮ್‌ ರಸ್ತೆಯ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಹೃದ್ರೋಗ ಸಮಸ್ಯೆ, ಕರುಳಿನ ಕ್ಯಾನ್ಸರ್‌ ಹಾಗೂ ಪಿತ್ತಕೋಶದಲ್ಲಿ ಕಲ್ಲು ಹೊಂದಿದ್ದ 44 ವರ್ಷದ ವ್ಯಕ್ತಿಗೆ ಏಕಕಾಲದಲ್ಲೇ ಮೂರು ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದು, ಇದು ವಿಶ್ವದಲ್ಲೇ ಮೊದಲ ಪ್ರಕರಣವಾಗಿದೆ.

ಫೋರ್ಟಿಸ್ ಆಸ್ಪತ್ರೆಯ ಹೃದಯ ತಜ್ಞ ಡಾ. ವಿವೇಕ್ ಜವಳಿ ಮತ್ತು ಮಿನಿಮಲ್ ಆಕ್ಸೆಸ್ ಮತ್ತು ಬಾರಿಯಾಟ್ರಿಕ್ ಸರ್ಜರಿ ನಿರ್ದೇಶಕ ಡಾ. ಜಿ. ಐ. ಗಣೇಶ್ ಶೆಣೈ ಅವರ ವೈದ್ಯರ ತಂಡ ಈ ಚಿಕಿತ್ಸೆಯನ್ನು ನೆರವೇರಿಸಿದೆ.

ಇದನ್ನೂ ಓದಿ: Karnataka Congress: ಬೂತ್ ಮಟ್ಟದಲ್ಲಿ ‘ಕಾಂಗ್ರೆಸ್ ಕುಟುಂಬ’ ಕಾರ್ಯಕ್ರಮ; ಪಕ್ಷ ಬಲವರ್ಧನೆಗೆ ಡಿ.ಕೆ.ಶಿ ಪ್ಲ್ಯಾನ್‌

ಈ ಕುರಿತು ಮಾತನಾಡಿದ ಡಾ. ವಿವೇಕ್‌ ಜವಳಿ, 44 ವರ್ಷದ ಕೊಪ್ಪರಂ ಎಂಬ ವ್ಯಕ್ತಿಯು ಹೃದ್ರೋಗ ಸಮಸ್ಯೆಯನ್ನು ಹೊಂದಿದ್ದರು. ಇದಕ್ಕೆ ಚಿಕಿತ್ಸೆ ಪಡೆಯಲು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಇವರಿಗೆ ಕೊರೊನರಿ ಆರ್ಟರಿ ಬೈಪಾಸ್ ಸರ್ಜರಿ ಮಾಡುವ ಅವಶ್ಯಕತೆ ಇತ್ತು.

ರೋಗಿಯು ತಾವು ಮೊದಲಿನಿಂದಲೂ ಹೊಟ್ಟೆ ನೋವು ಅನುಭವಿಸುತ್ತಿರುವ ಬಗ್ಗೆಯೂ ನಮಗೆ ತಿಳಿಸಿದರು, ಇದಕ್ಕೆ ಅಲ್ಟ್ರಾಸೌಂಡ್ ಪರೀಕ್ಷೆ ನಡೆಸಿದೆವು. ಈ ವೇಳೆ ಅವರಿಗೆ ಪಿತ್ತಕೋಶದಲ್ಲಿ ಕಲ್ಲು ಇರುವುದು ಕಂಡು ಬಂತು. ಹೀಗಾಗಿ ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಿದಾಗ ಅವರಿಗೆ ಕರುಳಿನ ಕ್ಯಾನ್ಸರ್‌ ಇರುವುದು ಸಹ ಪತ್ತೆಯಾಯಿತು. ಕರುಳಿನ ಕ್ಯಾನ್ಸರ್‌ ಬಹುಪಾಲು ದೊಡ್ಡಮಟ್ಟದಲ್ಲಿಯೇ ಅವರಿಗೆ ಹಾನಿ ಮಾಡುತ್ತಿತ್ತು. ಹೀಗಾಗಿ ಅವರಿಗೆ ಹೃದಯ ಬೈಪಾಸ್‌ ಸರ್ಜರಿಯ ಜತೆಗೆ ಕರುಳಿನ ಕ್ಯಾನ್ಸರ್‌ ಶಸ್ತ್ರಚಿಕಿತ್ಸೆಯೂ ಹೆಚ್ಚು ಅನಿವಾರ್ಯವಾಗಿತ್ತು.

ಆದರೆ, ಹೃದಯದ ಬೈಪಾಸ್‌ ಸರ್ಜರಿ ಬಳಿಕ 3 ತಿಂಗಳು ಯಾವುದೇ ಚಿಕಿತ್ಸೆಗೆ ಒಳಪಡುವುದು ಹೆಚ್ಚು ಅಪಾಯಕಾರಿ. ಆದರೆ, ಮೂರು ತಿಂಗಳವರೆಗೂ ಕರುಳಿನ ಕ್ಯಾನ್ಸರ್‌ನನ್ನು ಹಾಗೇ ಬಿಡಲು ಸಹ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಈ ವ್ಯಕ್ತಿಗೆ ಏಕಕಾಲದಲ್ಲೇ ಹೃದಯದ ಬೈಪಾಸ್‌ ಸರ್ಜರಿ, ಕರುಳಿನ ಕ್ಯಾನ್ಸರ್‌ ಶಸ್ತ್ರಚಿಕಿತ್ಸೆ ಹಾಗೂ ಪಿತ್ತಕೋಶದಲ್ಲಿ ಕಲ್ಲು ತೆಗೆಯುವ ಶಸ್ತ್ರಚಿಕಿತ್ಸೆಯನ್ನು ನಡೆಸಲು ಅವರ ಕುಟುಂಬದವರ ಒಪ್ಪಿಗೆ ಪಡೆದುಕೊಂಡೆವು.

ಇದನ್ನೂ ಓದಿ: IPL 2024 : ಇದು ಕಾಕತಾಳಿಯವೇ? ಐಪಿಎಲ್ ಮತ್ತು ಡಬ್ಲ್ಯುಪಿಎಲ್​ ಫೈನಲ್ ರಿಸಲ್ಟ್​​ನಲ್ಲಿದೆ ಸಾಮ್ಯತೆ

ಮೊದಲಿಗೆ ಆಫ್-ಪಂಪ್ ಕರೋನರಿ ಆರ್ಟರಿ ಬೈಪಾಸ್ (OPCAB)ನ ವಿಶೇಷ ಶಸ್ತ್ರಚಿಕಿತ್ಸಾ ತಂತ್ರದ ಮೂಲಕ ಕೊರೊನರಿ ಆರ್ಟರಿ ಬೈಪಾಸ್ ಸರ್ಜರಿಗೆ ನಡೆಸಿದೆವು. ಈ ಅವಧಿಯಲ್ಲೇ ಬಾರಿಯಾಟ್ರಿಕ್ ಸರ್ಜನ್‌ ಡಾ. ಜಿ. ಐ. ಗಣೇಶ್ ಶೆಣೈ ಅವರು, ಲ್ಯಾಪರೊಸ್ಕೋಪಿಕ್ ತಂತ್ರಜ್ಞಾನ ಬಳಸಿಕೊಂಡು, ಲ್ಯಾಪರೊಸ್ಕೋಪಿಕ್ ಎಕ್ಸ್ಟೆಂಡೆಡ್ ರೈಟ್ ಹೆಮಿಕೊಲೆಕ್ಟಮಿ (LERHC) ಅನ್ನು ಕ್ಯಾನ್ಸರ್‌ನ ಕರುಳಿನ ಭಾಗವನ್ನು ತೆಗೆದುಹಾಕಿದರು, ಜತೆಗೆ ಪಿತ್ತಕೋಶದ ಕಲ್ಲುಗಳನ್ನು ಸಹ ಲ್ಯಾಪರೊಸ್ಕೋಪಿಕ್ ಕೊಲೆಸಿಸ್ಟೆಕ್ಟಮಿ (LC) ಮೂಲಕ ತೆಗೆದು ಹಾಕುವಲ್ಲಿ ಯಶಸ್ವಿಯಾದರು. ಈ ಎಲ್ಲಾ ಶಸ್ತ್ರಚಿಕಿತ್ಸೆಯನ್ನು 7 ಗಂಟೆಗಳಲ್ಲಿ ನಡೆಸಲಾಯಿತು. ರೋಗಿಯು ಶಸ್ತ್ರಚಿಕಿತ್ಸೆಯಾದ 15 ದಿನಗಳ ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಸಂಪೂರ್ಣ ಆರೋಗ್ಯವಾಗಿದ್ದಾರೆ ಎಂದು ಅವರು ವಿವರಿಸಿದರು.

Continue Reading
Advertisement
Mysore Vasudevacharya Memorial Music utsav Vidwat Sabha and award ceremony
ಮೈಸೂರು20 mins ago

Mysore News: ಮೈಸೂರಿನಲ್ಲಿ ಗಾಯಕ ಎಚ್ ಎಸ್ ನಾಗರಾಜ್ ಗೆ ಶ್ರೀ ವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿ ಪ್ರದಾನ

swati Maliwal assault case:
ದೇಶ20 mins ago

Swati Maliwal assault case : ಕೇಜ್ರಿವಾಲ್ ಆಪ್ತ ಬಿಭವ್​ ಕುಮಾರ್ ಮೂರು ದಿನ ಪೊಲೀಸ್​ ಕಸ್ಟಡಿಗೆ

Gautam Gambhir
ಪ್ರಮುಖ ಸುದ್ದಿ35 mins ago

Gautam Gambhir : ಗೌತಮ್ ಗಂಭೀರ್ ಭಾರತ ತಂಡದ ಮುಂದಿನ ಕೋಚ್​; ಐಪಿಎಲ್​ ಫ್ರಾಂಚೈಸಿ ಮಾಲೀಕರಿಂದ ಬಹಿರಂಗ?

Namaz on Road
ದಕ್ಷಿಣ ಕನ್ನಡ39 mins ago

Namaz On Road: ಮಂಗಳೂರಿನ ರಸ್ತೆಯಲ್ಲಿ ನಮಾಜ್ ಮಾಡಿದವರ ವಿರುದ್ಧ ಎಫ್‌ಐಆರ್‌

Credit Card Safety Tips
ಮನಿ ಗೈಡ್47 mins ago

Credit Card Safety Tips: ಕ್ರೆಡಿಟ್‌ ಕಾರ್ಡ್ ವಂಚನೆಯಿಂದ ಪಾರಾಗಲು ಇಲ್ಲಿದೆ 9 ಸಲಹೆ

Karnataka weather Forecast
ಮಳೆ51 mins ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

Child Trafficking Racket
ಪ್ರಮುಖ ಸುದ್ದಿ1 hour ago

Child Trafficking Racket: ಅಂತಾರಾಜ್ಯ ಮಕ್ಕಳ ಕಳ್ಳಸಾಗಣೆ ದಂಧೆ ಪತ್ತೆ; 11 ಮಕ್ಕಳ ರಕ್ಷಣೆ

Prajwal Revanna Case
ಕರ್ನಾಟಕ1 hour ago

Prajwal Revanna Case: ಎರಡು ಎಫ್ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಎಚ್.ಡಿ.ರೇವಣ್ಣ ಅರ್ಜಿ

Summer Dress Fashion
ಫ್ಯಾಷನ್2 hours ago

Summer Dress Fashion: ಸೀಸನ್‌ ಎಂಡ್‌ ಫ್ಯಾಷನ್‌ಗೆ ಕಾಲಿಟ್ಟ ಸಮುದ್ರದ ಅಲೆ ಬಿಂಬಿಸುವ ವೆವಿ ಡ್ರೆಸ್‌!

Lok Sabha Election
ಪ್ರಮುಖ ಸುದ್ದಿ2 hours ago

Lok Sabha Election : ಲವ್​ ಜಿಹಾದ್ ಶುರುವಾಗಿದ್ದೇ ಜಾರ್ಖಂಡ್​ನಿಂದ; ಜೆಎಮ್​ಎಮ್​ ವಿರುದ್ಧ ಮೋದಿ ಗಂಭೀರ ಆರೋಪ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ51 mins ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು9 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 day ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ7 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌